Viral News: ಇವರು ಅತಿ ಉದ್ದದ ಗಡ್ಡಧಾರಿ ಮಹಿಳೆ… ದಾಖಲಾಯಿತು ಗಿನ್ನೆಸ್ ರೆಕಾರ್ಡ್! Vistara News

ಪ್ರಮುಖ ಸುದ್ದಿ

Viral News: ಇವರು ಅತಿ ಉದ್ದದ ಗಡ್ಡಧಾರಿ ಮಹಿಳೆ… ದಾಖಲಾಯಿತು ಗಿನ್ನೆಸ್ ರೆಕಾರ್ಡ್!

Guinness World Record: ಅಮೆರಿಕದ ಮಹಿಳೆಯೊಬ್ಬರು ವಿಶಿಷ್ಟ ಕಾರಣಕ್ಕೆ ಜನಪ್ರಿಯರಾಗುತ್ತಿದ್ದಾರೆ. ಈ ಮಹಿಳೆಯು ಗಂಡಸರಂತೆ ಉದ್ದ ಗಡ್ಡ ಬಿಟ್ಟು, ದಾಖಲೆ ಬರೆದಿದ್ದಾರೆ.

VISTARANEWS.COM


on

Beard Woman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗಡ್ಡ ಗಂಡಸರಿಗೆ ಸೌಂದರ್ಯದ ದ್ಯೂತಕ. ನಾನಾ ವಿನ್ಯಾಸದ ಗಡ್ಡಧಾರಿಗಳನ್ನು ನೋಡಬಹುದು. ಆದರೆ, ಅದೇ ಗಡ್ಡ ಹೆಂಗಸರಿಗೆ ಬಂದರೆ…! ಛೇ… ಯಾರೂ ಒಪ್ಪುವುದಿಲ್ಲ. ಅವರು ಕುರೂಪಿಯಾಗಿ ಕಾಣುತ್ತಾರೆ. ಆದರೆ, ಅಮೆರಿಕದ ಮಹಿಳೆಯೊಬ್ಬಳು ಗಡ್ಡ (longest beard) ಬೆಳೆಸಿಕೊಂಡೇ ಪ್ರಸಿದ್ದಿಯಾಗಿದ್ದಾಳೆ. ಅಷ್ಟೇ ಅಲ್ಲಿ ಗಿನ್ನೆಸ್ (Guinness World Record) ದಾಖಲೆ ಕೂಡ ಬರೆದಿದ್ದಾಳೆ. ಅಮೆರಿಕದ ಮಿಚಿಗನ್‌ (America woman) 38 ವರ್ಷದ ಎರಿನ್ ಹನಿಕಟ್ (Erin Honeycut) ಅವರು ಈ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ಹನಿಕಟ್‌ರ ದಾಖಲೆಯ 11.8 ಇಂಚಿನ ಗಡ್ಡವು ಆಕೆಯ ಪಾಲಿಸಿಸ್ಟಿಕ್ ಓವೆರಿಯನ್ ಸಿಂಡ್ರೋಮ್‌ನ ಪರಿಣಾಮವಾಗಿ ಬೆಳೆದಿದೆ. ಈ ಸ್ಥಿತಿಯು ಹಾರ್ಮೋನುಗಳ ಅಸಮತೋಲನವನ್ನು ಉಂಟುಮಾಡುತ್ತದೆ ಮತ್ತು ಹೆಚ್ಚುವರಿ ಕೂದಲು ಬೆಳವಣಿಗೆಗೆ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು(Vrial News).

ಹನಿಕಟ್‌ ಅವರು 13 ವರ್ಷ ಇದ್ದಾಗ ಆಕೆಗೆ ಕಡ್ಡ ಮೂಡಲಾರಂಭಿಸಿತು. ಆರಂಭದಲ್ಲಿ ಗಡ್ಡವನ್ನು ಆಕೆಯು ಶೇವಿಂಗ್ ಮಾಡಲು ಪ್ರಯತ್ನಿಸಿದಳು. ದಿನಕ್ಕೆ ಮೂರು ಬಾರಿ ಶೇವಿಂಗ್ ಮಾಡುತ್ತಿದ್ದಳು. ವ್ಯಾಕ್ಸಿಂಗ್ ಮಾಡುತ್ತಿದ್ದಳು. ಅಲ್ಲದೇ, ಕೂದಲು ರಿಮೂವಲ್ ಪ್ರಾಡಕ್ಟ್‌ಗಳನ್ನು ಬಳಸಿಕೊಂಡು ಬೆಳೆಯುತ್ತಿರುವ ಕೂದಲುಗಳನ್ನು ತಡೆಯುವ ಪ್ರಯತ್ನ ಮಾಡಿದರು. ರಕ್ತದೊತ್ತಡದ ಪರಿಣಾಮ ಆಕೆಯು ತನ್ನ ದೃಷ್ಟಿಯನ್ನು ಭಾಗಶಃ ಕಳೆದುಕೊಂಡ ಬಳಿಕ, ಗಡ್ಡ ಶೇವಿಂಗ್ ಮಾಡುವುದನ್ನು ನಿಲ್ಲಿಸಿದಳು. ಗಡ್ಡ ಬೆಳೆಯಲು ಬಿಟ್ಟಳು.

ಈವರೆಗೆ 75 ವರ್ಷದ ವಿವಿಯನ್ ವ್ಹೀಲರ್ ಅವರ ಅತಿ ಉದ್ದನೆಯ ಗಡ್ಡ ಬೆಳೆಸಿದ ದಾಖಲೆಯನ್ನು ಹೊಂದಿದ್ದರು. ಈ ದಾಖಲೆಯನ್ನು 2023ರ ಫೆಬ್ರವರಿ 8ರಂದು ಅಧಿಕೃತವಾಗಿ ಹನಿಕಟ್ ಮುರಿದರು. ವಿವಿಯನ್ ವ್ಹೀಲರ್ ಅವರು 10.04 ಇಂಚ್ ಗಡ್ಡ ಬೆಳೆಸಿದ್ದರು. ಬ್ಯಾಕ್ಟೀರಿಯಾ ಸೋಂಕಿನಿಂದ ಆಕೆಯ ಕಾಲು ಸ್ವಾಧೀನ ಕಳೆದುಕೊಳ್ಳುವುದು ಸೇರಿದಂತೆ ಅನಾರೋಗ್ಯದ ಸಂಘರ್ಷದ ಹೊರತಾಗಿಯೂ ಹನಿಕಟ್ ಈ ಸಾಧನೆ ಮಾಡಿದ್ದಾರೆ.

ಈ ಎಲ್ಲ ಸವಾಲುಗಳ ಹೊರತಾಗಿಯೂ ಹನಿಕಟ್ ತಮ್ಮ ಜೀವನದೆಡೆಗೆ ಸಕಾರಾತ್ಮಕ ಧೋರಣೆಯನ್ನು ಬೆಳೆಸಿಕೊಂಡರು. ಈ ಧೋರಣೆಯೇ ತಮ್ಮ ನೋವುಗಳನ್ನು ಮರೆಸಲು ಸಾಧ್ಯಾಯಿತು ಎಂದು ನಂಬಿಕೊಂಡಿದ್ದಾರೆ. ಆಕೆಯ ಆಶಾವಾದಿ ವರ್ತನೆ ಮತ್ತು ತನ್ನ ಪ್ರೀತಿಪಾತ್ರರ ಬೆಂಬಲಕ್ಕೆ ಅರ್ಹಳು. ಇಂದು, ಅವಳು ಹೆಮ್ಮೆಯಿಂದ ತನ್ನ ದಾಖಲೆ ಮುರಿಯುವ ಗಡ್ಡವನ್ನು ಧರಿಸುತ್ತಾಳೆ, ಅದನ್ನು ತನ್ನ ಶಕ್ತಿ ಮತ್ತು ಪರಿಶ್ರಮದ ಸಂಕೇತವೆಂದು ನೋಡುತ್ತಾಳೆ. ಒಟ್ಟಾರೆಯಾಗಿ ಹನಿಕಟ್‌ ಅವರಿಗೆ ಗಡ್ಡ ಎನ್ನುವುದು ಸಾಮಾಜಿಕ ಆತಂಕಕ್ಕೆ ಕಾರಣವಾಗದೇ ಸಾಧನೆಗೆ ಪ್ರೇರಣೆಯಾಗಿರುವುದು ಅನುಕರಣನೀಯ ನಡೆಯಾಗಿದೆ.

Viral News : ಕಳ್ಳನಿಂದ ತಪ್ಪಿಸಿಕೊಂಡು ಮರಳಿ ಮಾಲೀಕನ ಮನೆ ಸೇರಿದ `ಜಾಣ ಎತ್ತುಗಳು’

ಯಾದಗಿರಿ: ಆ ರೈತನಿಗೆ ತಾನು ಸಾಕಿದ ಎತ್ತುಗಳೆಂದರೆ ಅಚ್ಚು ಮೆಚ್ಚು. ಕೃಷಿಗೆ ಬೆನ್ನೆಲುಬಾಗಿದ್ದ ಎತ್ತುಗಳು ಕಾಣದೆ ಇದ್ದಾಗ ಆ ರೈತನಿಗೆ ಬರ ಸಿಡಿಲು ಬಡಿದಂಗೆ ಆಗಿತ್ತು. ಎತ್ತುಗಳು ಕಳುವು (Theft Case) ಆಗಿವೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಕುಸಿದು ಬಿದ್ದಿದ್ದ. ಪ್ರೀತಿಗೆ ಪಾತ್ರವಾದ ಎತ್ತುಗಳ ಇರಲಾರದೆ ಬದುಕಿಲ್ಲವೆಂದು ಕಣ್ಣೀರು ಹಾಕುವ ದೃಶ್ಯ ಎಂತಹವರಿಗೂ ಕರುಳು ಚುರುಕ್‌ ಎನ್ನುವಂತಿತ್ತು. ಆದರೆ ಆ ಜಾಣ ಎತ್ತುಗಳು ಕಳ್ಳರಿಂದ ತಪ್ಪಿಸಿಕೊಂಡು ಮರಳಿ ಮಾಲೀಕನ ಮನೆ ಸೇರಿದ ಅಪರೂಪದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ ಈ ಘಟನೆ ಜರುಗಿದೆ. ಗ್ರಾಮದ ರೈತ ತಿರುಪತಿ ಎಂಬಾತ 10 ಎಕರೆ ಭೂಮಿಯಲ್ಲಿ ಕೃಷಿ ಮಾಡಿಕೊಂಡು ನೆಮ್ಮದಿ ಜೀವನ ನಡೆಸುತ್ತಿದ್ದರು. ಜತೆಗೆ ಎರಡು ಎತ್ತುಗಳು ಆತನ ಬದುಕಿಗೆ ಆಶ್ರಯವಾಗಿತ್ತು. ತಡರಾತ್ರಿ ತಿರುಪತಿ ಅವರ ಎರಡು ಎತ್ತುಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದರು.

ತಿರುಪತಿ ಇಂದು ನಸುಕಿನ ಜಾವ ಎತ್ತುಗಳಿಗೆ ಮೇವು, ನೀರು ಹಾಕಲು ತೆರಳಿದ್ದರು. ಆದರೆ ಎಲ್ಲಿ ಹುಡುಕಾಡಿದರೂ 1.5 ಲಕ್ಷ ರೂಪಾಯಿ ಬೆಲೆ ಬಾಳುವ ಎತ್ತುಗಳು ಕಾಣಲಿಲ್ಲ. ಎತ್ತುಗಳು ಕಳ್ಳತನವಾಗಿರುವುದು ತಿಳಿಯುತ್ತಿದ್ದಂತೆ ಕಣ್ಣೀರು ಹಾಕಿದ್ದರು. ಎತ್ತುಗಳಿಗೆ ರೋಧಿಸುತ್ತಾ, ಅಳುತ್ತಾ ಊಟ ನೀರು ಬಿಟ್ಟು ಕುಳಿತಿದ್ದರು.

ಈ ವೈರಲ್ ಸುದ್ದಿಯನ್ನೂ ಓದಿ: Viral News : ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಎಮ್ಮೆಗಳು; ಕಾಲುವೆಗೆ ಹಾರಿ ರಕ್ಷಣೆ

10 ಕಿ.ಮೀ ದೂರದಿಂದ ಓಡೋಡಿ ಬಂದ ಎತ್ತುಗಳು

ಕಳ್ಳರಿಂದ ತಪ್ಪಿಸಿಕೊಂಡ ಎತ್ತುಗಳು ಸುಮಾರು 10 ಕಿಮೀ ದೂರದಿಂದ ಓಡಿ ಬಂದಿವೆ. ಮಾಲೀಕ ತಿರುಪತಿಯನ್ನು ಹುಡುಕುತ್ತಾ ಎತ್ತುಗಳು ಬಂದಿವೆ. ಗ್ರಾಮಕ್ಕೆ ಎತ್ತುಗಳು ಬಂದಿರುವ ವಿಷಯ ತಿಳಿಯುತ್ತಿದ್ದಂತೆ ತಿರುಪತಿ ಕುಟುಂಬಸ್ಥರು ಮನೆಗೆ ಕರೆದುಕೊಂಡು ಬಂದಿದ್ದಾರೆ.

ವಾಪಸ್‌ ಬಂದ ಎತ್ತುಗಳನ್ನು ಕಂಡೊಡನೆ ತಿರುಪತಿ ಅವುಗಳ ಮೈ ಸವರಿ, ತಬ್ಬಿಕೊಂಡು ಮುತ್ತಿಟ್ಟು ಪ್ರೀತಿ ತೋರಿದ್ದಾರೆ. ಗ್ರಾಮೀಣ ಭಾಗದಲ್ಲಿ ಎತ್ತುಗಳು ಕಳ್ಳತನ ಘಟನೆ ನಡೆಯುತ್ತಿದ್ದು ಪೊಲೀಸರು ಇಂತಹ ಘಟನೆ ನಡೆಯದಂತೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರದವರೆಗೂ ವೃಶ್ಚಿಕ ರಾಶಿಯಲ್ಲೇ ನೆಲಸಲ್ಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕನ್ಯಾ ರಾಶಿಯವರು ಶುಭ ಕಾರ್ಯಗಳಿಗಾಗಿ ಹೆಚ್ಚು ಖರ್ಚು ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗುವುದರ ಜತಗೆ ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಒಳ್ಳೆಯದಲ್ಲ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 07:12 ವಾರ: ಭಾನುವಾರ
ನಕ್ಷತ್ರ: ಸ್ವಾತಿ 11:49 ಯೋಗ: ಅತಿಗಂಡ 11:49
ಕರಣ: ತೈತುಲ 07:12 ಅಮೃತಕಾಲ: ಬೆಳಗ್ಗೆ 3:17 ರಿಂದ 04:54ರವರೆಗೆ
ದಿನದ ವಿಶೇಷ: ಶೃಂಗೇರಿ ಮಹಾಪ್ರದೋಷ, ಮಾನವ ಹಕ್ಕುಗಳ ದಿನ

ಸೂರ್ಯೋದಯ : 06:31  ಸೂರ್ಯಾಸ್ತ : 05:54

ರಾಹುಕಾಲ : ಸಂಜೆ 4:28ರಿಂದ 5:54
ಗುಳಿಕಕಾಲ: ಮಧ್ಯಾಹ್ನ 3:03 ರಿಂದ 4:28
ಯಮಗಂಡಕಾಲ: ಮಧ್ಯಾಹ್ನ 12:12 ರಿಂದ 1:38

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:6

Horoscope Today

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯವು ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗುವುದರ ಜತಗೆ ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಒಳ್ಳೆಯದಲ್ಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಹೆಚ್ಚಾಗಲಿದೆ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ .
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವಿರಿ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಹೆಚ್ಚಾಗಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಹೆಚ್ಚಾಗಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಕರ್ನಾಟಕ

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Car Accident: ಚಿಕ್ಕಬಳ್ಳಾಪುರ ಬಳಿಯ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಂಡರ್ ಪಾಸ್‌ನಲ್ಲಿ ವೇಗವಾಗಿ ಬಂದಾಗ ಕಾರು ಅಪಘಾತ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ.

VISTARANEWS.COM


on

Car accident
Koo

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಂಡಿಗೆ ಬಿದ್ದು ನಾಲ್ವರು ದುರ್ಮರಣ ಹೊಂದಿದ ಘಟನೆ (Car Accident) ನಗರದ ಬೈಪಾಸ್ ಬಳಿಯ ಅಂಜನೇಯ ಸ್ವಾಮಿ ದೇವಾಲಯದ ಬಳಿ ನಡೆದಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಂಡರ್ ಪಾಸ್‌ನಲ್ಲಿ ವೇಗವಾಗಿ ಬಂದು ಗುಂಡಿಯೊಳಗೆ ಬಿದ್ದಿದ್ದರಿಂದ ಕಾರಿನೊಳಗಿದ್ದ ನಾಲ್ವರು ಜಲಸಮಾಧಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಕಾರನ್ನು ಗುಂಡಿಯಿಂದ ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ. ಮೃತರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕಾರು ಹರಿದು ಅಯ್ಯಪ್ಪ ಮಾಲಾಧಾರಿ ಸಾವು, ಇಬ್ಬರಿಗೆ ಗಂಭೀರ ಗಾಯ

ಚಿಕ್ಕಬಳಾಪುರ: ಕಾರು ಹರಿದ ಪರಿಣಾಮ ಅಯ್ಯಪ್ಪಸ್ವಾಮಿ ಮಾಲಾಧಾರಿಯೊಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಬಳಿ ನಡೆದಿದೆ.

ಹಿಂದೂಪುರ ಮೂಲದ ಪ್ರಹ್ಲಾದ (36) ಮೃತರು. ಗಾಯಗೊಂಡ ಮಣಿಕಂಠ ಹಾಗು ವೆಂಕಟೇಶ್ ಎಂಬುವರ ಸ್ಥಿತಿ ಚಿಂತಾಜನಕವಾಗಿದೆ. ಹಿಂದೂಪುರದಿಂದ ಶಬರಿಮಲೆಗೆ ಪಾದಯಾತ್ರೆ ಮಾಡುತಿದ್ದ ವೇಳೆ ಕಾರು ಹರಿದಿದ್ದರಿಂದ ದುರಂತ ಸಂಭವಿಸಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Bus Accident: ಬಸ್‌ ಪಲ್ಟಿಯಾಗಿ ನಾಲ್ವರ ಸಾವು; ಮದುವೆಗೆ ಹೊರಟಿದ್ದವರು ಮಸಣ ಸೇರಿದರು

ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರ ಸವಾರರ ಸಾವು

Bike accident

ಆನೇಕಲ್: ಬೈಕ್‌ನಿಂದ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಜಿಗಣಿ ಸಮೀಪದ ಮಾದ ಪಟ್ಟಣದ ಬಳಿ ಶನಿವಾರ ನಡೆದಿದೆ. ರಸ್ತೆ ಹಂಪ್ ಗೊತ್ತಾಗದೇ ಸಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ಅಪಘಾತ (Bike Accident) ಸಂಭವಿಸಿದೆ.

ಒಡಿಶಾ ಮೂಲದ ಕಾರ್ಮಿಕರಾದ ಫೋಕೀರ್ ಚರಣ್ ಪ್ರಧಾನ್ (29), ಬೀರ್ ಸಿಂಗ್ ನಾಯಕ್(24) ಮೃತರು. ಕೆಲಸ ಮುಗಿಸಿಕೊಂಡು ಜಿಗಣಿಯಿಂದ ಇಂಡ್ಲವಾಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮಾದಪಟ್ಟಣ ಬಳಿ ರಸ್ತೆ ಹಂಪ್ ಗೊತ್ತಾಗದೆ ಸವಾರ ಬ್ರೇಕ್ ಹಾಕಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಮುಂಭಾಗದಲ್ಲಿ ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿಯಾಗಿದೆ. ಇದರಿಂದ ಸವಾರರು ಹಾರಿ ಬಿದ್ದಾಗ ಬಸ್‌ಗೆ ತಲೆ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Someshwara Beach: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸೋಮೇಶ್ವರದಲ್ಲಿ ಸಮುದ್ರಪಾಲು

L&t ಕಂಪನಿಯಲ್ಲಿ ಹೆಲ್ಪರ್‌ ಆಗಿ ಫೋಕೀರ್ ಚರಣ್ ಪ್ರಧಾನ್, ಶಕ್ತಿ ಪ್ರೊಸೆಸಿಂಗ್ ಕಂಪನಿಯಲ್ಲಿ ಸಹಾಯಕನಾಗಿ ಬೀರ್ ಸಿಂಗ್ ನಾಯಕ್ ಕೆಲಸಮಾಡುತ್ತಿದ್ದ. ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

PMAY Houses: ವಸತಿ ಮತ್ತು ನಗರ ವ್ಯವಹಾರಗಳ ಸ್ಥಾಯಿ ಸಮಿತಿಯು ಲೋಕಸಭೆಯಲ್ಲಿ ತನ್ನ ವರದಿಯನ್ನು ಮಂಡಿಸಿದ್ದು, ಹಲವು ಸುಧಾರಣೆಗಳಿಗೆ ಸೂಚಿಸಿದೆ.

VISTARANEWS.COM


on

Houses without infrastructure are not completed PMAY houses
Koo

ನವದೆಹಲಿ: ರಸ್ತೆಗಳು (Roads), ಒಳಚರಂಡಿ(sewerage), ನೀರು (Water) ಮತ್ತು ವಿದ್ಯುತ್ ಸಂಪರ್ಕಗಳಂಥ (electricity connections) ಮೂಲಭೂತ ಸೌಕರ್ಯಗಳನ್ನು (Basic Infrastructure) ಒದಗಿಸದೇ ಹೊರತು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ (PMAY Houses) ನಿರ್ಮಿಸಲಾದ ವಸತಿ ಮನೆಗಳನ್ನು ಪೂರ್ಣಗೊಂಡ ಮನೆಗಳೆಂದು ಕೇಂದ್ರ ಸರ್ಕಾರವು ಪರಿಗಣಿಸಬಾರದು ಎಂದು ವಸತಿ ಮತ್ತು ನಗರ ವ್ಯವಹಾರಗಳ ಸ್ಥಾಯಿ ಸಮಿತಿ ಹೇಳಿದೆ. ಈ ಸಮಿತಿಯು ಲೋಕಸಭೆಯಲ್ಲಿ ಮಂಡಿಸಿದ ವರದಿಯಲ್ಲಿ ಈ ಕುರಿತು ಸವಿಸ್ತಾರವಾಗಿ ತಿಳಿಸಲಾಗಿದೆ.

2015ರಲ್ಲಿ ಪ್ರಾರಂಭವಾದ ಪಿಎಂಎವೈ(ಯು) ಬಡತನವನ್ನು ನಿವಾರಿಸುವ ಗುರಿಯನ್ನು ಹೊಂದಿರುವ ಕೇಂದ್ರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ ಮತ್ತು 2022 ರ ವೇಳೆಗೆ ಎಲ್ಲರಿಗೂ ವಸತಿ ಒದಗಿಸುವ ಉದ್ದೇಶವನ್ನು ಹೊಂದಿತ್ತು. ಬಾಕಿ ಉಳಿದಿರುವ ಯೋಜನೆಗಳ ನಡುವೆ, ಯೋಜನೆಯ ಗಡುವನ್ನು ನಂತರ ಡಿಸೆಂಬರ್ 2024 ಕ್ಕೆ ವಿಸ್ತರಿಸಲಾಗಿದೆ.

ಮನೆಯ ಅಗತ್ಯವಿರುವ “ಯಾರೂ” ಅವಕಾಶವಂಚಿತರಾಗಬಾರದು ಎಂದು ಖಚಿತಪಡಿಸಿಕೊಳ್ಳಲು, ಮುಂಗೇರ್‌ನ ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ನೇತೃತ್ವದ ಸದನ ಸಮಿತಿಯು ಪಿಎಂಎವೈ (ಯು)ದ ಸಾಮಾಜಿಕ ಪರಿಣಾಮದ ಕುರಿತು ಅಧ್ಯಯನ ನಡೆಸುವಂತೆ ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದೆ.

ಪಿಎಂಎವೈ ಮೂಲ ಉದ್ದೇಶವು ಎಲ್ಲರಿಗೂ ವಸತಿ ಒದಗಿಸುವುದು, ನಗರ ಪ್ರದೇಶಗಳಲ್ಲಿನ ವಸತಿ ಅಗತ್ಯಗಳಲ್ಲಿನ ಅಂತರವನ್ನು ಅಳೆಯಲು ಪ್ರಭಾವದ ಮೌಲ್ಯಮಾಪನ ಅಧ್ಯಯನವನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.

ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನವನ್ನು ಗಣನೆಗೆ ತೆಗೆದುಕೊಂಡ ನಂತರವೂ ಫಲಾನುಭವಿಗಳು ಇನ್ನೂ ಒಟ್ಟು ವೆಚ್ಚದ ಸುಮಾರು 60% ಅನ್ನು ಪಾವತಿಸಬೇಕಾಗುತ್ತದೆ ಎಂದು ಸಮಿತಿ ಹೇಳಿದೆ. ಈ ಫಲಾನುಭವಿಗಳಲ್ಲಿ ಹೆಚ್ಚಿನವರು ಸ್ಥಿರ ಆದಾಯವನ್ನು ಹೊಂದಿಲ್ಲದ ಕಾರಣ, ಅವರು ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ, 2024ರ ಡಿಸೆಂಬರ್ ವರೆಗೆ ಇದಕ್ಕಾಗಿ 1.5 ಲಕ್ಷ ರೂ. ಮೀರಿ ನಿಧಿಯನ್ನು ಹೆಚ್ಚಿಸುವುದಿಲ್ಲ ಹೇಳಿದೆ. ಕೇಂದ್ರದ ನೆರವು ನಿರ್ಮಾಣದ ವೆಚ್ಚವನ್ನು ಅವಲಂಬಿಸಿ ಬದಲಾಗಬೇಕು, ಇದು ಸ್ಥಳಾಕೃತಿ ಮತ್ತು ಇತರ ಅಂಶಗಳನ್ನು ಅವಲಂಬಿಸಿರುತ್ತದೆ ಎಂದು ಸಮಿತಿ ಹೇಳಿದೆ.

ಈ ಸುದ್ದಿಯನ್ನೂ ಓದಿ: ಪ್ರಧಾನಮಂತ್ರಿ ಆವಾಸ್ ಯೋಜನೆ ಮನೆ ನಿರ್ಮಾಣದಲ್ಲಿ ಗೋಲ್ಮಾಲ್​; ಇಡಿ ಅಧಿಕಾರಿಗಳಿಂದ ದಾಳಿ, ತೀವ್ರ ಶೋಧ

Continue Reading

ದೇಶ

ಈರುಳ್ಳಿ ರಫ್ತು ನಿಷೇಧ! ಎಥೆನಾಲ್‌ ಉತ್ಪಾದನೆಗೆ ಕಬ್ಬು ಬಳಸುವಂತಿಲ್ಲ

bars onion export: ಬರದ ಕಾರಣದಿಂದಾಗಿ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಕುಂಠಿತವಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆಯನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

VISTARANEWS.COM


on

Central government bars onion export to curb inflation
Koo

ನವದೆಹಲಿ: ಬೆಲೆ ಏರಿಕೆಯನ್ನು (Price Rise) ತಡೆಯುವುದಕ್ಕಾಗಿ ಕೇಂದ್ರ ಸರ್ಕಾರವು (Central Government) ಶುಕ್ರವಾರ ಹಲವು ಕ್ರಮಗಳನ್ನು ಘೋಷಣೆ ಮಾಡಿದ್ದು, ಈ ಪೈಕಿ ಈರುಳ್ಳಿ ರಫ್ತು ಮೇಲೆ ನಿಷೇಧ ಹೇರಿದೆ(bars onion export). ಜತೆಗೆ, ಎಥೆನಾಲ್‌ ತಯಾರಿಕೆಗಾಗಿ ಕಬ್ಬು ಬಳಕೆಯನ್ನು ತಡೆಯಲಾಗುತ್ತಿದೆ. ಅನಗತ್ಯವಾಗಿ ಗೋಧಿ ದಾಸ್ತಾನು ಮಾಡಿಕೊಳ್ಳುವ ವ್ಯಾಪಾರಿಗಳ ವಿರುದ್ಧ ಬಿಗಿಯಾದ ನಿಯಂತ್ರಣಗಳನ್ನು ವಿಧಿಸಲಾಗುತ್ತಿದೆ.

ಕೆಲವು ರಾಜ್ಯಗಳಲ್ಲಿ ಬರ ಹಾಗೂ ಬೇಸಿಗೆ ಮಳೆಯಿಂದಾಗಿ ಸಕ್ಕರೆ, ಬೇಳೆ ಕಾಳುಗಳು ಸೇರಿದಂತೆ ಹಲವು ಆಹಾರ ಧಾನ್ಯಗಳ ಉತ್ಪಾದನೆ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲೇ ಕೇಂದ್ರ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕಬ್ಬಿನ ಉತ್ಪಾದನೆಯಲ್ಲಿ ತೀವ್ರ ಕುಸಿತದ ನಿರೀಕ್ಷೆ ಇರುವುದರಿಂದ ಸರ್ಕಾರವು ಕಬ್ಬಿನ ರಸವನ್ನು ಪೆಟ್ರೋಲ್‌ನೊಂದಿಗೆ ಬೆರೆಸಿದ ಎಥೆನಾಲ್ ಉತ್ಪಾದನೆ ಮಾಡುವುದನ್ನು ನಿರ್ಬಂಧಿಸಿದೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹೇಳಿದ್ದಾರೆ.

ಎಥೆನಾಲ್ ತಯಾರಿಕೆಗಾಗಿ ಕಬ್ಬಿನ ರಸದ ಮಾರಾಟವನ್ನು ನಿಲ್ಲಿಸುವ ನಿರ್ಧಾರವು 2025-26ರ ವೇಳೆಗೆ ಪೆಟ್ರೋಲ್‌ನೊಂದಿಗೆ 20% ಎಥೆನಾಲ್ ಮಿಶ್ರಣವನ್ನು ಸಾಧಿಸುವ ಭಾರತದ ಮಹತ್ವಾಕಾಂಕ್ಷೆಯ ಒತ್ತಡದ ಮೇಲೆ ಪರಿಣಾಮ ಬೀರುವುದಿಲ್ಲ, ಇದನ್ನು ಇ20 ಎಂದು ಕರೆಯಲಾಗುತ್ತದೆ ಎಂದು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್ ಜೈನ್ ಹೇಳಿದ್ದಾರೆ.

ಈ ನಿಷೇಧವು ತಾತ್ಕಾಲಿಕವಾಗಿದೆ ಮತ್ತು ಪರಿಸ್ಥಿತಿಯು ಸುಧಾರಿಸಿದ ಬಳಿಕ ನೀತಿಯನ್ನು ಮರುಮಾಪನ ಮಾಡಲಾಗುವುದು. ಎಥೆನಾಲ್-ಬ್ಲೆಂಡಿಂಗ್ ಪ್ರೋಗ್ರಾಂ ಮತ್ತು ಗ್ಲೋಬಲ್ ಜೈವಿಕ ಇಂಧನ ಒಕ್ಕೂಟ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಬೇಡಿಕೆಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಂಪೂರ್ಣ ಯೋಜನೆಯನ್ನು ಹೊಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ದೇಶದ ಸುಮಾರು 25% ಎಥೆನಾಲ್ ಅನ್ನು ಕಬ್ಬಿನ ರಸದಿಂದ ತಯಾರಿಸಲಾಗುತ್ತದೆ, ಆದರೆ ಇನ್ನೊಂದು 50% ಮೊಲಾಸಸ್‌ನಿಂದ ಉತ್ಪಾದಿಸಲಾಗುತ್ತದೆ. ಆದರೆ ಉಳಿದವು ಅಕ್ಕಿ ಮತ್ತು ಜೋಳದಂತಹ ಧಾನ್ಯಗಳಿಂದ ತಯಾರಿಸಲಾಗುತ್ತದೆ.

ಚಿಲ್ಲರೆ ಹಣದುಬ್ಬರವು ಹೆಚ್ಚಾಗುವ ನಿರೀಕ್ಷೆಯಿದೆ, ಮೂರು ತಿಂಗಳ ಕಾಲ ಇಳಿಮುಖವಾದ ನಂತರ ಹೆಚ್ಚಿನ ಆಹಾರ ಬೆಲೆಗಳಿಂದ ಅದು ಮತ್ತೆ ಹೆಚ್ಚಾಗಬಹುದು. ಈರುಳ್ಳಿ, ಟೊಮ್ಯಾಟೊ ಮತ್ತು ಬೇಳೆಕಾಳುಗಳಂತಹ ತರಕಾರಿಗಳು ಬೆಲೆ ಏರಿಕೆಗೆ ಕಾರಣವಾಗಿವೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ 4.87% ಆಗಿತ್ತು, ಇದು ನಾಲ್ಕು ತಿಂಗಳ ಕನಿಷ್ಠವಾಗಿದೆ.

ಈ ಸುದ್ದಿಯನ್ನೂ ಓದಿ: Retail Inflation: ಶೇ.4.87ಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ!

Continue Reading
Advertisement
Dina Bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

HD Kumaraswamy
ಕರ್ನಾಟಕ6 hours ago

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

Car accident
ಕರ್ನಾಟಕ7 hours ago

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Houses without infrastructure are not completed PMAY houses
ದೇಶ7 hours ago

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

UP Yoddhas vs Telugu Titans
ಕ್ರೀಡೆ7 hours ago

Pro Kabaddi: ಯೋಧಾಸ್​ ಆರ್ಭಟಕ್ಕೆ ಮುಳುಗಿದ ತೆಲುಗು ಟೈಟಾನ್ಸ್‌

Central government bars onion export to curb inflation
ದೇಶ7 hours ago

ಈರುಳ್ಳಿ ರಫ್ತು ನಿಷೇಧ! ಎಥೆನಾಲ್‌ ಉತ್ಪಾದನೆಗೆ ಕಬ್ಬು ಬಳಸುವಂತಿಲ್ಲ

Nat Sciver-Brunt celebrates dismissing Harmanpreet Kaur
ಕ್ರಿಕೆಟ್7 hours ago

INDW vs ENGW: ಹೀನಾಯವಾಗಿ ಸೋತು ಸರಣಿ ಕಳೆದುಕೊಂಡ ಭಾರತ ಮಹಿಳಾ ತಂಡ

Farmers Protest
ಕರ್ನಾಟಕ8 hours ago

Farmers Protest: ಸ್ವಾಮೀಜಿಗಳ ಸಂಧಾನ ಯಶಸ್ವಿ; ಕಿತ್ತೂರಲ್ಲಿ ಪ್ರತಿಭಟನೆ ಹಿಂಪಡೆದ 9 ಹಳ್ಳಿ ರೈತರು

Muslim woman beaten up for voting bjp
ದೇಶ8 hours ago

ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಂ ಮಹಿಳೆಗೆ ಮನೆಯವರಿಂದಲೇ ಹಲ್ಲೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema1 day ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ2 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌