Viral Video: ನೆಲವ ಬಿಟ್ಟು ನೀರ ಮೇಲೆ ನಡೆದ ಜೇಡ; ಮೂಗಿನ ಮೇಲೆ ಬೆರಳಿಟ್ಟ ನೆಟ್ಟಿಗರು - Vistara News

ವೈರಲ್ ನ್ಯೂಸ್

Viral Video: ನೆಲವ ಬಿಟ್ಟು ನೀರ ಮೇಲೆ ನಡೆದ ಜೇಡ; ಮೂಗಿನ ಮೇಲೆ ಬೆರಳಿಟ್ಟ ನೆಟ್ಟಿಗರು

Virl Video: ನೆಲದ ಮೇಲೆ ನಡೆಯುವಂತೆ ಇಲ್ಲೊಂದು ಜೇಡ ನೀರ ಮೇಲೆಯೂ ಸರಾಗವಾಗಿ ಹೆಜ್ಜೆ ಹಾಕುತ್ತದೆ. ಈ ಕುರಿತಾದ ವಿಡಿಯೊ ಸದ್ಯ ವೈರಲ್‌ ಆಗಿದೆ.

VISTARANEWS.COM


on

spider
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಈ ಜಗತ್ತು ಅನೇಕ ವಿಸ್ಮಯಗಳನ್ನು ತನ್ನೊಡಲಲ್ಲಿ ಇಟ್ಟುಕೊಂಡಿದೆ. ಕೆಲವೊಂದು ವಿಚಾರಗಳು ನಮ್ಮ ಊಹೆಗೂ ಮೀರಿ ಘಟಿಸುತ್ತವೆ. ಆಗ ಇವು ನಮ್ಮಲ್ಲಿ ಕುತೂಹಲ ಹುಟ್ಟಿಸುತ್ತವೆ. ಅಂತಹದ್ದೇ ಒಂದು ಆಸಕ್ತಿದಾಯಕ ವಿಡಿಯೊವೊಂದು ಇದೀಗ ವೈರಲ್‌ (Viral Video) ಆಗಿದೆ. ಗೋಡೆ ಮೇಲೆ ಓಡಾಡುವ ಜೇಡ (Spider) ನೀರ ಮೇಲೆಯೂ ನಡೆಯುತ್ತದೆ ಎಂದರೆ ನೀವು ನಂಬುತ್ತೀರಾ? ಈ ವಿಡಿಯೊ ನೋಡಿದ ಮೇಲೆ ಅಚ್ಚರಿಯಿಂದ ನಿಮ್ಮ ಹುಬ್ಬೇರುವುದು ಖಂಡಿತ. ನೀರ ಮೇಲೆ ಜೇಡ ಸರಾಗವಾಗಿ ನಡೆಯುವ ಈ ವಿಡಿಯೊವನ್ನು ಈಗಾಗಲೇ 3 ಲಕ್ಷಕ್ಕಿತಂತ ಅಧಿಕ ಮಂದಿ ವೀಕ್ಷಿಸಿದ್ದಾರೆ.

‘ಫಿಸಿಕ್ಸ್‌ ಲವರ್ಸ್‌’ ಎನ್ನುವ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಈ ‘ನಂಬಲಾಸಾಧ್ಯ ‘ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ನೆಲದ ಮೇಲೆ ನಡೆಯುವಂತೆ ಸರಾಗವಾಗಿ ನೀರ ಮೇಲೆಯೂ ಜೇಡ ನಡೆಯುತ್ತಿದೆ. ಅದರ ಮೊದಲ 3 ಕಾಲುಗಳು ಪೆಡಲ್‌ನಂತೆ ಕೆಲಸ ಮಾಡುತ್ತವೆ ಮತ್ತು ನೀರನ್ನು ಹಿಂದಕ್ಕೆ ತಳ್ಳಿ ಮುಂದಕ್ಕೆ ನಡೆಯಲು ನೆರವಾಗುತ್ತವೆ.

ʼಟರಂಟುಲಾ ಜೇಡಗಳು ತಮ್ಮ ಕಾಲುಗಳ ಮೇಲೆ ಹೈಡ್ರೋಫೋಬಿಕ್ ಕೂದಲಿನ ದಪ್ಪ ಪದರವನ್ನು ಹೊಂದಿದೆ. ಅದು ನೀರನ್ನು ಹಿಮ್ಮೆಟ್ಟಿಸುತ್ತದೆ. ಅಲ್ಲದೆ ಇದು ಮುಳುಗದೆ ನೀರಿನ ಮೇಲೆ ನಡೆಯಲು ಅವಕಾಶ ಮಾಡಿ ಕೊಡುತ್ತದೆʼ ಎಂದು ವಿಡಿಯೊದೊಂದಿಗೆ ವಿವರಣೆ ನೀಡಲಾಗಿದೆ.

ನೆಟ್ಟಗರ ಪ್ರತಿಕ್ರಿಯೆ ಏನು?

ಈ ವಿಡಿಯೊವನ್ನು ಕುತೂಹಲದಿಂದ ವೀಕ್ಷಿಸಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹಲವರು ಕಮೆಂಟ್‌ ಮೂಲಕ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ʼʼಹಾಗಾದರೆ ಇನ್ನು ಸ್ಪೈಡರ್‌ ಮ್ಯಾನ್‌ ನೀರ ಮೇಲೆ ನಡೆಯಬಹುದೇ?ʼʼ ಎಂದು ಒಬ್ಬರು ತಮಾಷೆ ಮಾಡಿದ್ದಾರೆ. ʼʼಹೊಸದೊಂದು ಭಯ ಆರಂಭವಾಗಿದೆ ಎಂದಿದ್ದಾರೆʼʼ ಮತ್ತೊಬ್ಬರು. ʼʼಇದೊಂದು ಅ‍ದ್ಭುತʼʼ ಎನ್ನುವ ಉದ್ಗಾರ ಮಗದೊಬ್ಬರದ್ದು. ʼʼಈ ಕಾರಣಕ್ಕಾಗಿ ನಾನು ಜೇಡವಾಗಿ ಬದಲಾಗಬೇಕಿದೆʼʼ ಎನ್ನುವ ಬಯಕೆ ಮತ್ತೊಬ್ಬರದ್ದು. ʼʼಜೇಡನ ಅಪ್‌ಡೇಟ್‌ ವರ್ಷನ್‌ ಬಂದಿದೆʼʼ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಇನ್ನೆಂದೂ ಈಜಲು ಹೋಗಲಾರೆʼʼ ಎನ್ನುವ ಪ್ರತಿಜ್ಞೆ ಮಾಡಿದ್ದಾರೆ ವಿಡಿಯೊ ವೀಕ್ಷಿಸಿದವರೊಬ್ಬರು. ʼʼಇವು ಬೆಂಕಿಯಲ್ಲೂ ನಡೆಯಬಹುದೇ?ʼʼ ಎನ್ನುವ ಕುತೂಹಲ ಇನ್ನೊಬ್ಬರದ್ದು. ʼʼಮುಂದಿನ ಸ್ಪೈಡರ್‌ ಮ್ಯಾನ್‌ ಚಿತ್ರದಲ್ಲಿ ಈ ಸಾಮರ್ಥ್ಯವನ್ನು ಬಳಸಿಕೊಳ್ಳಬಹುದುʼʼ ಎಂಬ ಯೋಚನೆ ಸಿನಿಮಾ ಪ್ರೇಮಿಯದ್ದು. ʼʼಇದು ಫೇಕ್‌ ವಿಡಿಯೊ ಎಂದು ಮೊದಲು ಭಾವಿಸಿದ್ದೆ. ಬಳಿಕ ನಿಜ ತಿಳಿಯಿತುʼʼ ಎಂದಿದ್ದಾರೆ ಮತ್ತೊಬ್ಬರು. ʼʼಕೆಲವು ಹೊತ್ತಲ್ಲಿ ಇವು ಏಡಿಯಾಗಿ ಬದಲಾಗುತ್ತವೆʼʼ ಎನ್ನುವ ವಿವರಣೆ ಮತ್ತೊಬ್ಬ ನೋಡುಗರದ್ದು. ಹಲವರು ಇದನ್ನು ದೇವರ ಅದ್ಭುತ ಸೃಷ್ಟಿ ಎಂದೇ ಬಣ್ಣಿಸಿದ್ದಾರೆ. ಒಟ್ಟಿನಲ್ಲಿ ಈ ಪುಟ್ಟ ವಿಡಿಯೊ ಬಹು ದೊಡ್ಡ ಸಂಚಲನವನ್ನೇ ಉಂಟು ಮಾಡಿದೆ.

ಇದನ್ನೂ ಓದಿ: Viral Video: ಮೈದಾನದಲ್ಲೇ ರವೂಫ್ ಕೆನ್ನೆಗೆ ಬಾರಿಸಿದ ನಾಯಕ ಬಾಬರ್​ ಅಜಂ

ಟರಂಟುಲಾ ಜೇಡಗಳು ಅಪಾಯಕಾರಿಯೇ?

ಮೊದಲ ನೋಟದಲ್ಲೇ ಭಯ ಹುಟ್ಟಿಸುವ ಟರಂಟುಲಾ ಜೇಡಗಳು ಅಪಾಯಕಾರಿ ಏನಲ್ಲ. ಆದರೆ ಇವು ಕಡಿದರೆ ಕಿರಿಕಿರಿಯ ಅನುಭವವಾಗುತ್ತದೆ. ಜೇನು ನೊಣ ಕಡಿದಾಗ ಅನುಭವಕ್ಕೆ ಬರುವ ನೋವಿನಿಂದ ಕಡಿಮೆ ನೋವು ಈ ಜೇಡದ ಕಡಿತದಿಂದ ಆಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

MS Dhoni Bike Riding: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು

VISTARANEWS.COM


on

MS Dhoni Bike Riding
Koo

ರಾಂಚಿ: ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ಇದೀಗ ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದಾರೆ. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿದೆ. ಸದ್ಯ ಧೋನಿ ಅವರು ಬೈಕ್​ ಓಡಿಸಿದ(MS Dhoni Bike Riding) ವಿಡಿಯೊ ವೈರಲ್(Viral Video)​ ಆಗಿದ್ದು, ಅವರ ಅಭಿಮಾನಿಗಳು ಹಲವು ಕಮೆಂಟ್​ಗಳನ್ನು ಮಾಡಿದ್ದಾರೆ.

ಧೋನಿ ಬಳಿ ಇದೆ ದೊಡ್ಡ ಬೈಕ್​ ಗ್ಯಾರೇಜ್​


ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಈ ಫಾರ್ಮ್​ಹೌಸ್​ನ ವಿಡಿಯೊ ವೈರಲ್​ ಆಗುತ್ತು.

ಇದನ್ನೂ ಓದಿ MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

ಎಂಎಸ್ ಧೋನಿ ಬೈಕ್ ಕಲೆಕ್ಷನ್

ಯಮಹಾ, ಡುಕಾಟಿ, ಕವಾಸಕಿ ಮುಂತಾದ ಪ್ರಸಿದ್ಧ ಬ್ರಾಂಡ್ ಗಳು ಧೋನಿ ಅವರ ಆಕರ್ಷಕ ಬೈಕ್ ಗಳ ಸಂಗ್ರಹದಲ್ಲಿವೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಹೆಚ್ಚುವರಿಯಾಗಿ, ಕಾನ್ಫೆಡರೇಟ್ ಎಕ್ಸ್ 132 ಹೆಲ್ ಕ್ಯಾಟ್, ವಿಂಟೇಜ್ ನಾರ್ಟನ್ ಜುಬಿಲಿ 250 ಮತ್ತು ಹಲವಾರು ಗಮನಾರ್ಹ ಬೈಕುಗಳಂತಹ ವಿಶಿಷ್ಟ ಮತ್ತು ಅಪರೂಪದ ಮಾದರಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ, ಧೋನಿ ಹೊಸದಾಗಿ ಕಸ್ಟಮೈಸ್ ಮಾಡಿದ ಜಾವಾ 42 ಬಾಬ್ಬರ್ ಅನ್ನು ತಮ್ಮ ಬೆಳೆಯುತ್ತಿರುವ ಬೈಕುಗಳ ಸಂಗ್ರಹಕ್ಕೆ ಸೇರಿಸಿದ್ದಾರೆ.

ಮಹೇಂದ್ರ ಸಿಂಗ್​ ಧೋನಿ(MS Dhoni Retirement) ಅವರ ನಿವೃತ್ತಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೀಗ ಧೋನಿ ನಿವೃತ್ತಿ ವಿಚಾರವಾಗಿ ಸಿಎಸ್​ಕೆ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಹತ್ವದ ಹೇಳಿಕೆ ನೀಡಿದ್ದಾರೆ.

“ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ಕೆಲವು ಸಕ್ರಿಯ ಕ್ರಿಕೆಟಿಗರಿಂದ ಹೆಚ್ಚು ಟೀಕೆಗೆ ಒಳಗಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ. ನಿಯಮವು ಮುಂದುವರಿದರೆ, ತಂಡದೊಂದಿಗೆ ನಿರ್ದಿಷ್ಟ ಕೆಲಸವನ್ನು ಪೂರೈಸಲು ಇದು ಅವರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ನಿಯಮವನ್ನು ರದ್ದುಗೊಳಿಸಿದರೆ, ಧೋನಿ ಆಡುವುದು ಕಷ್ಟ” ಎಂದು ಹೇಳಿದ್ದಾರೆ.

ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಾಗಿತ್ತು. ಇದೀಗ ಚೆನ್ನೈ ಸೋತು ಟೂರ್ನಿಯಿಂದ ಹೊರಬಿದ್ದರೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

Continue Reading

ಕ್ರೀಡೆ

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

IPL 2024: ರಾಜಸ್ಥಾನ್​(RCB vs RR) ವಿರುದ್ಧ ಬುಧವಾರ ನಡೆಯುವ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಆಟಗಾರರು ಫುಟ್ಬಾಲ್​ ಆಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ ಟೂರ್ನಿ(IPL 2024) ಆರಂಭಕ್ಕೂ ಮುನ್ನ ವಿರಾಟ್​ ಕೊಹ್ಲಿ(virat kohli) ಇದು ಆರ್​ಸಿಬಿಯ ಹೊಸ ಅಧ್ಯಾಯ ಎಂದು ಹೇಳುವು ಮೂಲಕ ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಈ ಮಾತಿಗೆ ತಕ್ಕಂತೆ ಮೊದಲ ಹಂತದಲ್ಲಿ ಆರ್​ಸಿಬಿ(RCB players) ಪ್ರದರ್ಶನ ನೀಡಲು ವಿಫಲವಾಗಿತ್ತು. 7 ಸೋಲು ಕಂಡು ಇನ್ನೇನು ಟೂರ್ನಿಯಿಂದ ಹೊರಬೀಳುವ ಸ್ಥಿತಿಯಲ್ಲಿತ್ತು. ಆರ್​ಸಿಬಿ ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಇದು ಮುಗಿದು ಹೋದ ಅಧ್ಯಾಯ ಎಂದು ಬೇಸರ ಹೊರಹಾಕಿದ್ದರು. ಆದರೆ ಆ ಬಳಿಕ ನಡೆದದ್ದೇ ಬೇರೆ. ಪವಾಡ ಸಂಭವಿಸಿದೆ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಒಟ್ಟು 7 ಪಂದ್ಯಗಳಲ್ಲಿ ಜಯ ಸಾಧಿಸಿ ಕೊನೆಯ ಸ್ಥಾನದಿಂದ ಮೇಲೆದ್ದು ಅಚ್ಚರಿ ಎಂಬಂತೆ ಪ್ಲೇ ಆಫ್​ ಪ್ರವೇಶಿಸಿತ್ತು. ಇದೀಗ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​(RCB vs RR) ವಿರುದ್ಧ ಆಡಲಿದೆ.

ಆರ್​ಸಿಬಿ ತಂಡದ ಆಟಗಾರರು ರಾಜಸ್ಥಾನ್​ ವಿರುದ್ಧ ಎಲಿಮಿನೇಟರ್​ ಪಂದ್ಯವನ್ನಾಡಲು ಈಗಾಗಲೇ ಅಹಮದಾಬಾದ್​ಗೆ ತಲುಪಿದ್ದಾರೆ. ಸೋಮವಾರ ಆಟಗಾರರು ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡುವ(RCB players played football) ಮೂಲಕ ತಮ್ಮ ಫಿಟ್​ನೆಸ್​ ತರಬೇತಿ ಮುಗಿಸಿದ್ದಾರೆ. ಆಟಗಾರರು 2 ತಂಡಗಳಾಗಿ ಫುಟ್ಬಾಲ್​ ಆಡಿದ ವಿಡಿಯೊವನ್ನು ಆರ್​ಸಿಬಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕಳೆದ 5 ವರ್ಷದಲ್ಲಿ ಆರ್‌ಸಿಬಿ 4 ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಿದೆ. ಈ ಮೂಲಕ ಆರ್‌ಸಿಬಿ ನಿರಂತವಾಗಿ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ. 3 ಬಾರಿ ಫೈನಲ್​ ಪ್ರವೇಶೀಸಿದರೂ ಕಪ್​ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಆರ್​ಸಿಬಿ ಫೈನಲ್​ಗೆ ಲಗ್ಗೆಯಿಟ್ಟಿತ್ತು.

ಎಲಿಮಿನೇಟರ್(IPL 2024 Eliminator)​ ಪಂದ್ಯಕ್ಕೂ ಮುನ್ನವೇ ಆರ್​ಸಿಬಿಗೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ರಾಷ್ಟ್ರೀಯ ತಂಡದಿಂದ ಕರೆ ಬಂದರೆ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಬೇಕಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಬೇಕಾಗಬಹುದು. ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಎಲಿಮಿನೇಟರ್​ ಮತ್ತು ಕ್ವಾಲಿಫೈಯರ್​ ಪಂದ್ಯದಲ್ಲಿ ಆಡಿದರೂ ಕೂಡ ಫೈನಲ್​ ತನಕ ಭಾರತದಲ್ಲಿ ನಿಲ್ಲುವುದು ಅನುಮಾನ ಎನ್ನಲಾಗಿದೆ.

Continue Reading

ವೈರಲ್ ನ್ಯೂಸ್

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

Yamuna Bridge: ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

VISTARANEWS.COM


on

Yamuna Bridge
Koo

ಹೊಸದಿಲ್ಲಿ: ಭಾರತೀಯ ರೈಲ್ವೆ ಇಲಾಖೆ (Railways Ministry) ಆಗಾಗ ತನ್ನ ಕಾಮಗಾರಿಗಳ ವಿವರಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತದೆ. ಸ್ವೇಷನ್‌, ಸೇತುವೆ ನಿರ್ಮಾಣ ಕಾಮಗಾರಿ, ಹೊಸ ಯೋಜನೆಗಳ ಮಾಹಿತಿಯನ್ನು ನೀಡುತ್ತಿರುತ್ತದೆ. ಇದೀಗ ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ (Viral News).

“ಆಗ್ರಾದಲ್ಲಿನ ಯಮುನಾ ಸೇತುವೆಯ ಪಕ್ಷಿ ನೋಟ. ಸೇತುವೆಯ ಹಿನ್ನೆಲೆಯಲ್ಲಿ ಭವ್ಯವಾದ ತಾಜ್ ಮಹಲ್ ಅನ್ನೂ ಕಾಣಬಹುದುʼʼ ಎಂದು ಫೋಟೊಕ್ಕೆ ಕ್ಯಾಪ್ಶನ್‌ ನೀಡಲಾಗಿದೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

ನೆಟ್ಟಿಗರು ಏನಂದ್ರು?

ʼʼವಾವ್‌ ತಾಜ್‌ʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಜೈ ಭಾರತ್‌, ಜೈ ಭಾರತಿʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼವಿಹಂಗಮ ದೃಶ್ಯʼʼ ಎಂದು ಮಗದೊಬ್ಬರು ಉದ್ಘರಿಸಿದ್ದಾರೆ. ʼʼನಿಜವಾಗಿಯೂ ಈ ಫೋಟೊ ಮನಮೋಹಕವಾಗಿದೆʼʼ ಎಂದು ನೆಟ್ಟಿಗರೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ಒಟ್ಟಿನಲ್ಲಿ ಯಮುನೆಯ ಒನಪು, ಸೇತುವೆಯ ಗಾಂಭೀರ್ಯ, ತಾಜ್‌ ಮಹಲ್‌ನ ಸೌಂದರ್ಯ ಹಲವರ ಗಮನ ಸೆಳೆದಿದ್ದು ಸುಳ್ಳಲ್ಲ.

ಶತಮಾನಗಳ ಇತಿಹಾಸ

ವಿಶೇಷವೆಂದರೆ ಭಾರತೀಯ ರೈಲ್ವೆಯ ಪ್ರಮುಖ ಜೀವನಾಡಿಯಾದ ಈ ಸೇತುವೆ 1875ರಲ್ಲಿ ಸಂಚಾರಕ್ಕೆ ಮುಕ್ತವಾಗಿತ್ತು. ಆಗ್ರಾ ಈಸ್ಟ್ ಬ್ಯಾಂಕ್ ನಿಲ್ದಾಣ ಮತ್ತು ಆಗ್ರಾ ಕೋಟೆ ನಿಲ್ದಾಣವನ್ನು ಇದು ಸಂಪರ್ಕಿಸುತ್ತದೆ. ಶತಮಾನಗಳ ಇತಿಹಾಸ ಹೊಂದಿರುವ ಯಮುನಾ ಸೇತುವೆಯ ಸಮೀಪದ ಆಗ್ರಾ ರೈಲ್ವೆ ನಿಲ್ದಾಣವು ಅತ್ಯಂತ ಜನನಿಬಿಡ ರೈಲ್ವೆ ನಿಲ್ದಾಣಗಳಲ್ಲಿ ಒಂದಾಗಿದೆ. ಇದು ಪ್ರಯಾಣಿಕರು ಮತ್ತು ಸರಕುಗಳೆರಡಕ್ಕೂ ಪ್ರಮುಖ ಸಾರಿಗೆ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಜತೆಗೆ ಆಗ್ರಾವನ್ನು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ.

ಜನರೊಂದಿಗೆ ನಿರಂತರ ಸಂಪರ್ಕ

ರೈಲ್ವೆ ಸಚಿವಾಲಯವು ರೈಲುಗಳು ಮತ್ತು ಅವುಗಳ ಸೇವೆಗಳ ಬಗ್ಗೆ ಆಗಾಗ ಆಸಕ್ತಿದಾಯಕ ಸಂಗತಿಗಳು ಮತ್ತು ಮಾಹಿತಿಯನ್ನು ಹಂಚಿಕೊಂಡು ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ. ಕೆಲವು ವಾರಗಳ ಹಿಂದೆ ಸಚಿವಾಲಯವು ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗಾಗಿ ನಿರ್ಮಿಸಲಾದ ಗುಜರಾತ್‌ನ ಔರಂಗ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿತ್ತು. ವಲ್ಸಾದ್ ಜಿಲ್ಲೆಯ ಔರಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಕಾಮಗಾರಿ 2023ರ ಆಗಸ್ಟ್‌ನಲ್ಲಿ ಪೂರ್ಣಗೊಂಡಿತ್ತು. ಜತೆಗೆ ಪಶ್ಚಿಮ ಘಟ್ಟದ ಹಸಿರಿನ ನಡುವೆ, ಗುಡ್ಡಗಳ ಮಧ್ಯೆ ಚಲಿಸುವ ರೈಲಿನ ವಿಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿತ್ತು. ʼʼಸ್ವರ್ಗ ಸದೃಶ ಪಶ್ಚಿಮ ಘಟ್ಟದ ಸೌಂದರ್ಯವನ್ನು ಭಾರತೀಯ ರೈಲ್ವೆಯೊಂದಿಗೆ ಆನಂದಿಸಿʼʼ ಎನ್ನುವ ಶೀರ್ಷಿಕೆಯಡಿ ಹಂಚಿಕೊಂಡ ಈ ಪೋಸ್ಟ್‌ಗೂ ನೂರಾರು ಲೈಕ್‌ಗಳು ಸಂದಿವೆ.

ಇದನ್ನೂ ಓದಿ: India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Continue Reading

ತುಮಕೂರು

Theft Case : ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

Theft Case : ತುಮಕೂರಿನಲ್ಲಿ ಬೋರ್‌ವೇಲ್‌ ಕೇಬಲ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಕಳ್ಳರ ಗ್ಯಾಂಗ್‌ ಅನ್ನು ಬೆಂಗಳೂರಿನಲ್ಲಿ ಹಿಡಿಯಲಾಗಿದೆ. ಪೊಲೀಸರ ವಿಚಾರಣೆ ವೇಳೆ ಪ್ರಳಯಾಂತಕನೊಬ್ಬ ಕದಿಯೋಕೆ ಎಂದೇ ಒಬ್ಬನನ್ನು ನೇಮಿಸಿಕೊಂಡು ತಿಂಗಳ ಸಂಬಳ ಕೊಡುತ್ತಿದ್ದನಂತೆ.

VISTARANEWS.COM


on

By

theft case
ಸಾಂದರ್ಭಿಕ ಚಿತ್ರ
Koo

ತುಮಕೂರು: ಕಳ್ಳತನವೂ ಈಗ ಪ್ರೊಫೆಷನಲ್‌ ಆಗಿಬಿಟ್ಟಿದೆ. ಭೂಪನೊಬ್ಬ ಬೋರ್‌ವೇಲ್‌ ಕೇಬಲ್‌ಗಳನ್ನು ಕದಿಯೋಕೆ ಅಂತಲೇ ತಿಂಗಳ ಸಂಬಳಕ್ಕೆ ಕಳ್ಳನನ್ನು (Theft Case) ನೇಮಿಸಿಕೊಂಡಿರುವ ಅಪರೂಪದ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ವೆಂಕಟೇಶ್‌ ಎಂಬಾತ ಕಳ್ಳತನಕ್ಕಾಗಿಯೇ ಬೆಂಗಳೂರು ಮೂಲದ ರಾಘವೇಂದ್ರ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ವೆಂಕಟೇಶ್‌ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.

ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ಕೊರಟಗೆರೆ ತಾಲೂಕಿನಲ್ಲಿ ಬೋರ್‌ವೇಲ್‌ ಕೇಬಲ್‌ಗಳ ಕಳುವಿನಿಂದ ರೈತರು ಹೈರಾಣಾಗಿದ್ದರು. ಕೊರಟಗೆರೆಯಲ್ಲಿ ಒಂದು ತಿಂಗಳಿಂದ ನಿರಂತರವಾಗಿ ಕಳ್ಳರು ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಬಳಿ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Theft Case The thief was paid a salary for theft

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದರು. ಕೊರಟಗೆರೆ ಪೊಲೀಸರು ಖತರ್ನಾಕ್ ಕಳ್ಳನ ಸಹಿತ ಮೂವರ ಹೆಡೆಮುರಿ ಕಟ್ಟಿದ್ದಾರೆ. ಐನಾತಿ ಕಳ್ಳರು ಕದ್ದ ಮಾಲನ್ನು ವಿನೇಶ್ ಪಟೇಲ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದರು.

ಸದ್ಯ ಮೂವರು ಆರೋಪಿಗಳಾದ ವೆಂಕಟೇಶ್, ರಾಘವೇಂದ್ರ ಹಾಗೂ ವಿನೇಶ್‌ನನ್ನು ಕೊರಟಗೆರೆ ಪೊಲೀಸರು ಬೆಂಗಳೂರಿನ ಕಾಮಾಕ್ಷಿಪಾಳ್ಳದಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್‌ ಅನಿಲ್‌ ಹಾಗೂ ತಂಡ ಕಳ್ಳರನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕಳ್ಳರ ಬಂಧನದಿಂದ ಕೊರಟಗೆರೆ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Congress Guarantee
ಪ್ರಮುಖ ಸುದ್ದಿ8 mins ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ30 mins ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ38 mins ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ1 hour ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ2 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ2 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ2 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ2 hours ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ2 hours ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ2 hours ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌