Viral News: 'ಎಣ್ಣೆ' ಹೊಡೆದಿದ್ದ ಇಲಿಯನ್ನು ಬಂಧಿಸಿದ ಪೊಲೀಸರು! ಅಚ್ಚರಿ ಎನಿಸಿದರೂ ಇದು ಸತ್ಯ - Vistara News

ವೈರಲ್ ನ್ಯೂಸ್

Viral News: ‘ಎಣ್ಣೆ’ ಹೊಡೆದಿದ್ದ ಇಲಿಯನ್ನು ಬಂಧಿಸಿದ ಪೊಲೀಸರು! ಅಚ್ಚರಿ ಎನಿಸಿದರೂ ಇದು ಸತ್ಯ

Viral News: ಮದ್ಯಪಾನ ಮಾಡಿದ ಆರೋಪದಲ್ಲಿ ಮಧ್ಯ ಪ್ರದೇಶ ಪೊಲೀಸರು ಇಲಿಯನ್ನು ಬಂಧಿಸಿದದಾರೆ. ಅರೆ! ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸುವ ಮುನ್ನ ಈ ಸುದ್ದಿಯನ್ನು ಓದಿ.

VISTARANEWS.COM


on

rat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್‌: ಇಲಿ (Rat) ಕಾಟದಿಂದ ಹೈರಾಣಾದ ಬಹುತೇಕರಿದ್ದಾರೆ. ನಗರ ಇರಲಿ, ಗ್ರಾಮೀಣ ಪ್ರದೇಶ ಇರಲಿ ಈ ಮೂಷಿಕ ಎಲ್ಲೆಂದರಲ್ಲಿ ಕಾಣಿಸಿಕೊಂಡು ಕಣ್ಣಿಗೆ ಕಂಡಿದ್ದನ್ನೆಲ್ಲ ಕಡಿದು ಹಾಕುತ್ತದೆ. ಇಲಿ ಕಾಟದಿಂದ ಜನ ಸಾಮಾನ್ಯರು ಮಾತ್ರವಲ್ಲ ಪೊಲೀಸರೂ ಬೇಸತ್ತಿದ್ದಾರೆ. ಎಲ್ಲಿಯವರೆಗೆ ಪೊಲೀಸರು ರೋಸಿ ಹೋಗಿದ್ದಾರೆ ಎಂದರೆ ಇಲಿಗೆ ʼಬಂಧನʼದ ಶಿಕ್ಷೆಯನ್ನೂ ನೀಡಿದ್ದಾರೆ. ಹೌದು, ಮಧ್ಯ ಪ್ರದೇಶದ ಛಿಂದ್ವಾರದಲ್ಲಿ (Chhindwara) ಪೊಲೀಸರು ಕಾಟ ಕೊಡುತ್ತಿದ್ದ ಇಲಿಯನ್ನು ಬಂಧಿಸಿ ಬೋನಿನಲ್ಲಿಟ್ಟಾರೆ (Viral News).

ಆಗಿದ್ದೇನು?

ಛಿಂದ್ವಾರದ ಪೊಲೀಸ್ ಗೋದಾಮಿನಲ್ಲಿ ಸಂಗ್ರಹಿಸಿ ಇರಿಸಿದ್ದ ಮದ್ಯದ ಪ್ಲಾಸ್ಟಿಕ್ ಬಾಟಲಿಗಳನ್ನು ಕೊರೆದು ಇಲಿಗಳು ಸಾಕಷ್ಟು ಮದ್ಯವನ್ನು ಖಾಲಿ ಮಾಡಿವೆ. ಈ ಮದ್ಯವನ್ನು ಇಲಿಗಳು ಕುಡಿದಿವೆಯೋ ಅಥವಾ ಬಾಟಲಿ ಕೊರೆದ ಕಾರಣ ಸೋರಿಕೆಯಾಗಿ ಹೋಗಿದೆಯೊ ಗೊತ್ತಿಲ್ಲ. ಆದರೆ ಪೊಲೀಸರು ಈ ಇಲಿಗಳ ಕಾಟದಿಂದ ಬೇಸತ್ತಿದ್ದಾರೆ. ಹೀಗಾಗಿ ಇಲಿ ಹಿಡಿಯಲು ಗೋದಾಮಿನಲ್ಲಿ ಬೋನು ಇರಿಸಿದ್ದಾರೆ. ಇದರಲ್ಲಿ ಒಂದು ಇಲಿ ಸಿಕ್ಕಿ ಬಿದ್ದಿದೆ.

ಸುಮಾರು 60- 65 ಸಣ್ಣ ಪ್ಲಾಸ್ಟಿಕ್ ಬಾಟಲಿಗಳಲ್ಲಿದ್ದ ಮದ್ಯ ಖಾಲಿಯಾಗಿದೆ. ಸದ್ಯ ಮದ್ಯ ವಶ ಪಡಿಸಿಕೊಂಡ ಪ್ರಕರಣ ಇನ್ನೂ ನ್ಯಾಯಾಲಯದ ವಿಚಾರಣೆ ಹಂತದಲ್ಲಿದೆ. ಕೋರ್ಟ್‌ಗೆ ಸಾಕ್ಷಿಯಾಗಿ ಮದ್ಯವನ್ನು ಪೊಲೀಸರು ಹಾಜರುಪಡಿಸಬೇಕಿತ್ತು. ಆದರೆ ಅದನ್ನು ಇಲಿಗಳು ನಾಶ ಮಾಡಿದ್ದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಅವರು ಗೋದಾಮಿನಲ್ಲಿರುವ ಇಲಿಗಳ ನಾಶಕ್ಕೆ ಮುಂದಾಗಿದ್ದಾರೆ.

ಇಲಿಗಳ ಕಾಟ ಸಾಮಾನ್ಯ

ಪೊಲೀಸ್‌ ಠಾಣೆ ಕಟ್ಟಡ ತುಂಬ ಹಳೆಯದಾಗಿದ್ದು, ಇಲ್ಲಿ ಇಲಿಗಳ ಕಾಟ ಸಾಕಷ್ಟಿದೆ. ಅಲ್ಲಿ ಇಲ್ಲಿ ಓಡಾಡಿಕೊಂಡು ಸಮಸ್ಯೆ ತಂದೊಡ್ಡುತ್ತವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಇಂಥವರೂ ಇರ್ತಾರೆ ನೋಡಿ! ನಿರ್ಮಾಣ ಹಂತದ ರಸ್ತೆಯನ್ನೇ ದೋಚಿದ ಖತರ್ನಾಕ್‌ ಗ್ರಾಮಸ್ಥರು!

ಹಿಂದೆಯೂ ನಡೆದಿತ್ತು

ಪೊಲೀಸ್ ಠಾಣೆಯಲ್ಲಿ ಇಲಿಗಳ ಕಾಟದ ಬಗ್ಗೆ ಆರೋಪ ಕೇಳಿ ಬರುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಮಧ್ಯ ಪ್ರದೇಶದ ಶಾಜಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಇದೇ ರೀತಿಯ ಘಟನೆಯನ್ನು ಪೊಲೀಸರು ವಿವರಿಸಿದಾಗ ನ್ಯಾಯಾಧೀಶರು ಮತ್ತು ಇಡೀ ನ್ಯಾಯಾಲಯದ ಸಿಬ್ಬಂದಿ ನಕ್ಕಿದ್ದರು. 2018ರಲ್ಲಿ ಉತ್ತರ ಪ್ರದೇಶದ ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಉಗ್ರಾಣದಲ್ಲಿ ಇರಿಸಲಾಗಿದ್ದ 1,000 ಲೀಟರ್ ಮದ್ಯವು ಕಣ್ಮರೆಯಾಗಿತ್ತು. ಸ್ಥಳೀಯ ಪೊಲೀಸರು ಇಲಿಗಳು ಮದ್ಯವನ್ನು ಖಾಲಿ ಮಾಡಿವೆ ಎಂದು ಹೇಳಿದ್ದರು. ಅಲ್ಲದೆ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಇಲಿಗಳು ನಾಶಪಡಿಸಿದ್ದರಿಂದ ಆರೋಪಿಗಳು ಖುಲಾಸೆಗೊಂಡ ಘಟನೆ ಕೆಲವು ತಿಂಗಳ ಹಿಂದೆ ತಮಿಳುನಾಡಿನಲ್ಲಿ ನಡೆದಿತ್ತು. ಚೆನ್ನೈನ ಮರೀನಾ ಪೊಲೀಸ್‌ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿ 22 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದರು. ಈ ಮಾದಕ ವಸ್ತುಗಳನ್ನು ಅವರು ಪೊಲೀಸ್ ಠಾಣೆಯ ಉಗ್ರಾಣದಲ್ಲಿ ಇರಿಸಿದ್ದರು. ಆದರೆ ಇಲ್ಲೂ ಇಲಿಗಳು ತಮ್ಮ ಕರಾಮತ್ತು ತೋರಿದ್ದವು. ಪೊಲೀಸ್‌ ಠಾಣೆಯ ಸ್ಟೋರ್‌ನಲ್ಲಿ ಸಂಗ್ರಹಿಸಿದ್ದ 22 ಕೆ.ಜಿ. ಗಾಂಜಾವನ್ನು ಇಲಿಗಳು ತಿಂದು ಮುಗಿಸಿದ್ದವು. ಕೊನೆಗೆ ಸಾಕ್ಷ್ಯ ಕೊರತೆಯ ಕಾರಣದಿಂದ ಅಪರಾಧಿಗಳು ಪಾರಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Manu Bhaker: ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಮನು ಭಾಕರ್; ವಿಡಿಯೊ ವೈರಲ್​

Manu Bhaker: ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯಲಿನ್‌ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದಾರೆ.

VISTARANEWS.COM


on

Manu Bhaker
Koo

ಪ್ಯಾರಿಸ್​: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ(paris olympics) 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ(Bronze Medalist Manu Bhaker) ಪದಕ ಗೆದ್ದು ಭಾರತೀಯರ ಮನಗೆದ್ದ ಮನು ಭಾಕರ್(Manu Bhaker) ಇದೀಗ ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದಿದ್ದಾರೆ. ಅವರು ಭಾರತದ ರಾಷ್ಟ್ರಗೀತೆಯನ್ನು ವಯಲಿನ್‌ ಮೂಲಕ ನುಡಿಸಿದ ವಿಡಿಯೊವೊಂದು ವೈರಲ್ ಆಗಿದೆ.

ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯಲಿನ್‌ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವರದಿಯಾದ ಪ್ರಕಾರ ಮನು ಕಂಚಿನ ಪದಕ ಗೆದ್ದ ಬಳಿಕ ವಯಲಿನ್‌ ನಡಿಸಿದ್ದು ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆಯುವ 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ(Paris Olympics) ಸರಬ್ಜೊತ್‌ ಸಿಂಗ್‌ ಜತೆ ಕಂಚಿನ ಪದಕದ ಪ್ಲೇ ಆಫ್ ಸುತ್ತಿನಲ್ಲಿ ಮನು ಕಣಕ್ಕಿಳಿಯಲಿದ್ದಾರೆ. ಭಾರತದ ಈ ಜೋಡಿ ಕೊರಿಯಾದ ಒಹ್‌ ಯೆ ಜಿನ್‌-ಲೀ ವೊನ್ಹೊ ವಿರುದ್ಧ ಸ್ಪರ್ಧೆಗೆ ಇಳಿಯಲಿದ್ದಾರೆ.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಆಗ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಅಂದಿನ ನಿರಾಸೆಯನ್ನು ಈ ಬಾರಿ ಪ್ಯಾರಿಸ್​ನಲ್ಲಿ ಪದಕ ಗೆಲ್ಲುವ ಮೂಲಕ ನೀಗಿಸಿಕೊಂಡರು.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

ಹರಿಯಾಣದ 22 ವರ್ಷದ ಮನು ಭಾಕರ್​ ಕಳೆದ ಅರ್ಹತಾ ಸುತ್ತಿನಲ್ಲಿ ಒಟ್ಟು 580 ಅಂಕ ಕಲೆ ಹಾಕಿ 3ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದರು. ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: 195 ಕಿ.ಮೀ ಒಂಟಿಯಾಗಿ ನಡೆದು ಮಾಲೀಕನಲ್ಲಿಗೆ ಮರಳಿದ ನಾಯಿ ಮಹಾರಾಜ!

Dog Love: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ಜ್ಞಾನದೇವ ಕುಂಬಾರ ಎಂಬವರಿಗೆ ಸೇರಿದ ಶ್ವಾನವಿದು. ಇದರ ಹೆಸರು ಮಹಾರಾಜ. ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಈ ಶ್ವಾನ 4 ದಿನಗಳ ಬಳಿಕ ಮನೆಯ ಮುಂದೆ ಪ್ರತ್ಯಕ್ಷವಾದುದನ್ನು ಕಂಡು ಮಾಲೀಕ ದಂಗಾಗಿದ್ದಾರೆ. ಇದು ಹೇಗೆ ಮರಳಿ ದಾರಿ ಹುಡುಕಿಕೊಂಡಿರಬಹುದು ಎಂಬ ಆಶ್ಚರ್ಯ ಎಲ್ಲರಲ್ಲೂ ಮೂಡಿದೆ.

VISTARANEWS.COM


on

dog love
Koo

ಚಿಕ್ಕೋಡಿ: ನಾಯಿಗಳು ಸ್ವಾಮಿನಿಷ್ಠೆಗೆ (loyalty) ಹೆಸರಾದವು ಎಂಬುದು ನಮಗೆಲ್ಲ ಗೊತ್ತಿದ್ದದ್ದೇ. ಅಂಥ ಹಲವು ಘಟನೆಗಳನ್ನೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನಾಯಿ ತನ್ನ ಸ್ವಾಮಿನಿಷ್ಠೆ, ಪ್ರೀತಿ, (Dog love) ಚುರುಕುತನದಿಂದ ಎಲ್ಲರನ್ನೂ ಅಚ್ಚರಿ ಆನಂದಲ್ಲಿ ಕೆಡವಿದೆ. 195 ಕಿಲೋಮೀಟರ್‌ ಕ್ರಮಿಸಿ ತನ್ನ ಮಾಲೀಕನ (Owner) ಮನೆಯ ಮುಂದೆ ಪ್ರತ್ಯಕ್ಷವಾಗಿದೆ! ಈ ಸುದ್ದಿ ಹಾಗೂ ನಾಯಿಯ ಫೋಟೋ ಎಲ್ಲೆಡೆ ವೈರಲ್‌ (Viral News) ಆಗುತ್ತಿದೆ.

ಬೆಳಗಾವಿ (Belagavi news) ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ಜ್ಞಾನದೇವ ಕುಂಬಾರ ಎಂಬವರಿಗೆ ಸೇರಿದ ಶ್ವಾನವಿದು. ಇದರ ಹೆಸರು ಮಹಾರಾಜ. ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಈ ಶ್ವಾನ 4 ದಿನಗಳ ಬಳಿಕ ಮನೆಯ ಮುಂದೆ ಪ್ರತ್ಯಕ್ಷವಾದುದನ್ನು ಕಂಡು ಮಾಲೀಕ ದಂಗಾಗಿದ್ದಾರೆ. ಇದು ಹೇಗೆ ಮರಳಿ ದಾರಿ ಹುಡುಕಿಕೊಂಡಿರಬಹುದು ಎಂಬ ಆಶ್ಚರ್ಯ ಎಲ್ಲರಲ್ಲೂ ಮೂಡಿದೆ.

ಇತ್ತೀಚೆಗೆ ಆಷಾಢ ಏಕಾದಶಿ ನಿಮಿತ್ತ ಇವರು ಕುಟುಂಬ ಸಮೇತ ಸೊಲ್ಹಾಪುರದ ಪಂಢರಪುರಕ್ಕೆ ತೀರ್ಥಯಾತ್ರೆಗೆ ಹೋಗಿದ್ದರು. ಜೊತೆಗೆ ಮಹಾರಾಜನೂ ತೆರಳಿತ್ತು. ಆದರೆ ಅಲ್ಲಿ ಜನಜಂಗುಳಿಯ ನಡುವೆ ಮಹಾರಾಜ ಮಿಸ್‌ ಆಗಿದ್ದ. ಎಷ್ಟೇ ಹುಡುಕಿದರೂ ಸಹ ಕಾಣದಾಗಿದ್ದ. ಆತನನ್ನು ಹುಡುಕಿ ಕಾಣದೆ ಇನ್ನು ಈತ ಸಿಗಲಾರ ಎಂದುಕೊಂಡ ಮರಳಿ ಬಂದಿದ್ದರು.

ಪಂಢರಪುರದಿಂದ ಯಮಗರ್ಣಿಗೆ 195 ಕಿಲೋಮೀಟರ್‌ ದೂರವಿದೆ. ಇವರು ಮನೆಗೆ ಬಂದ ನಾಲ್ಕು ದಿನಗಳ ಬಳಿಕ ಮಹಾರಾಜ, ಮನೆಯ ಮುಂದೆ ಕಾಣಿಸಿಕೊಂಡಿದ್ದಾನೆ! ಸುಮಾರು 195 ಕಿಮೀ ಕ್ರಮಿಸಿ ಮನೆಗೆ ಮರಳಿದ್ದಾನೆ. ಇದನ್ನು ಕಂಡು ಕುಟುಂಬದವರು ಮಾತ್ರವಲ್ಲ, ಇಡೀ ಗ್ರಾಮ ಚಕಿತವಾಗಿದೆ. ಶ್ವಾನಕ್ಕೆ ಹಾರ ಹಾಕಿ ಗುಲಾಲ್‌ ಹಚ್ಚಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಶ್ವಾನ‌ ನಿಷ್ಠೆಗೆ ಇಡೀ ಯಮಗರ್ಣಿ‌ ಗ್ರಾಮಸ್ಥರು ಫಿದಾ ಆಗಿದ್ದಾರೆ.

ಕಚೇರಿಯ ಟೇಬಲ್‌ನೊಳಗೆ ಅಡಗಿದ್ದ ಬೃಹತ್‌ ಹಾವನ್ನು ಹಿಡಿದ ಮಹಿಳಾ ಸಿಬ್ಬಂದಿ!

ಸಾಮಾನ್ಯವಾಗಿ ಮಹಿಳೆಯರು ಹಾವನ್ನು ನೋಡಿದರೆ ಭಯಬೀಳುತ್ತಾರೆ. ಒಂದು ಚಿಕ್ಕ ಹುಳ ಮೈಮೇಲೆ ಹರಿದಾಡಿದರೆ ದೊಡ್ಡ ಹಾವು ಮೈಮೇಲೆ ಬಿದ್ದಂತೆ ಕಿರುಚುತ್ತಾ ಓಡುತ್ತಾರೆ. ಅಂತಹದರಲ್ಲಿ ಮಹಿಳೆಯೊಬ್ಬಳು ಯಾವುದೇ ಭಯವಿಲ್ಲದೆ ದೊಡ್ಡ ಗಾತ್ರದ ಹಾವನ್ನೇ ಕೈಯಲ್ಲಿ ಸಲೀಸಾಗಿ ಹಿಡಿದಿದ್ದಾಳೆ. ಮಹಿಳೆ ಕಚೇರಿಯಲ್ಲಿ ಕೈಯಲ್ಲಿ ಹಾವನ್ನು ಹಿಡಿದು ಸ್ಟಂಟ್ ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಮಹಿಳೆಯ ಈ ಧೈರ್ಯಶಾಲಿ ಕೆಲಸವನ್ನು ಕಂಡು ಅಲ್ಲಿದ್ದ ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ಧೈರ್ಯಶಾಲಿ ಮಹಿಳೆ ಕಚೇರಿಯಲ್ಲಿ ಇರುವ ದೊಡ್ಡ ಗಾತ್ರದ ಹಾವನ್ನು ಯಾವುದೇ ಸುರಕ್ಷತಾ ಉಡುಗೆ ಅಥವಾ ಅಗತ್ಯ ಉಪಕರಣಗಳಿಲ್ಲದೆ ಬಹಳ ಸುಲಭವಾಗಿ ಹಿಡಿದಿದ್ದಾಳೆ.ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು @moronhumor ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ, ವಿಡಿಯೊದಲ್ಲಿ ಮಹಿಳೆ ಒಬ್ಬ ವ್ಯಕ್ತಿಯೊಂದಿಗೆ ಬರುತ್ತಿದ್ದು, ಅಲ್ಲಿ ಕಂಪ್ಯೂಟರ್ ಕೇಬಲ್ ಅನ್ನು ಸರಿಪಡಿಸುತ್ತಿದ್ದಾಳೆ ಎಂದು ವೀಕ್ಷಕರು ಭಾವಿಸುವಂತಿದೆ.

ಆದರೆ ಆಕೆ ಸಡನ್ ಆಗಿ ಹಾವಿನ ತಲೆಯನ್ನು ಹಿಡಿದು ಮೇಲಕ್ಕೆ ಎತ್ತಿದ್ದಾಳೆ. ನಂತರ ಹಾವು ಕಚ್ಚುತ್ತದೆ ಎಂಬ ಭಯವು ಇಲ್ಲದೇ ಅದನ್ನು ಚೀಲದಲ್ಲಿ ತುಂಬಿಸಿ ದಿನಸಿ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗುವಂತೆ ಹೊರಗೆ ತೆಗೆದುಕೊಂಡು ಬಂದಿದ್ದಾಳೆ. ಆ ವೇಳೆ ಅವಳ ಮುಖದಲ್ಲಿ ಭಯದ ಬದಲು ನಗು ಕಂಡುಬಂದಿದೆ. ಅಲ್ಲದೇ ಮಹಿಳೆ ಈ ವೇಳೆ ಹಾವಿನ ಬಗ್ಗೆ ಕೆಲವು ಸಲಹೆಗಳನ್ನು ಸಹ ಹಂಚಿಕೊಳ್ಳುತ್ತಾಳೆ. ಹಾವು ವಿಷಕಾರಿಯಲ್ಲ ಎಂದು ಅವಳು ತನ್ನ ಸಹೋದ್ಯೋಗಿಗಳಿಗೆ ಹೇಳಿದಳು. ಅವಳು ಹಾವುಗಳ ವಿವಿಧ ಲಕ್ಷಣಗಳು ಮತ್ತು ಹಾವನ್ನು ನಿರ್ವಹಿಸುವ ವಿಧಾನದ ಬಗ್ಗೆ ಜನರಿಗೆ ಮಾರ್ಗದರ್ಶನ ನೀಡಿದ್ದಾಳೆ. ಅಲ್ಲಿ ಹಾಜರಿದ್ದ ಜನರು ಆಕೆ ಸುಲಭವಾಗಿ ಹಾವನ್ನು ಹಿಡಿಯುವುದನ್ನು ಕಂಡು ಆಶ್ಚರ್ಯಚಕಿತರಾದರು. ಈ ವಿಡಿಯೊ ಅನೇಕರ ಗಮನವನ್ನು ಸೆಳೆದಿದೆ ಮತ್ತು ಅನೇಕರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರು ಮಹಿಳೆಯ ವೀಡಿಯೊವನ್ನು ಕಂಡು ಅವಳ ಶಾಂತ, ಧೈರ್ಯಶಾಲಿ ಕಾರ್ಯವನ್ನು ಕಂಡು ಹೊಗಳಿದ್ದಾರೆ.

ಬಳಕೆದಾರರೊಬ್ಬರು ಅವಳ ಕಾರ್ಯಕ್ಕೆ ಮತ್ತು ಅವಳ ತಿಳಿವಳಿಕೆಯನ್ನು ಕಂಡು ಆಕೆಯನ್ನು ರಾಕ್‌ಸ್ಟಾರ್‌ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಹೆಣ್ಣು ಹಾವು ಹಿಡಿಯುವುದನ್ನು ನೋಡಿಲ್ಲ ಎಂದು ಹೇಳಿ ಮಹಿಳೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೂರನೆಯವರು ಈಕೆ ನಿಜವಾದ ನಾಯಕಿ. ಹೀರೋಗಳಿಗಿಂತ ಒಂದು ಹೆಜ್ಜೆ ಮುಂದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Continue Reading

ದೇಶ

Taj Mahal : ತಾಜ್​ ಮಹಲ್ ಅಥವಾ ತೇಜೋ ಮಹಾಲಯ? ಐತಿಹಾಸಿಕ ಸ್ಮಾರಕ ಶಿವ ದೇವಾಲಯ ಎಂದು ವಾದಿಸಿ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ!

Taj Mahal : ಆಕೆಯನ್ನು ಪಶ್ಚಿಮ ದ್ವಾರದ ಬಳಿ ತಡೆಯಲಾಯಿತು. ಹೀಗಾಗಿ ಅವರಿಗೆ ತಾಜ್ ಮಹಲ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಸಮಯದ ನಂತರ, ರಾಜೇಶ್ವರ ದೇವಸ್ಥಾನದಲ್ಲಿ ಗಂಗಾಜಲವನ್ನು ಅರ್ಪಿಸಿದರು ” ಎಂದು ತಾಜ್ ಸುರಕ್ಷಾದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೈಯದ್ ಆರೀಬ್ ಅಹ್ಮದ್ ಹೇಳಿದ್ದಾರೆ.

VISTARANEWS.COM


on

Taj Mahal
Koo

ನವದೆಹಲಿ: ಕನ್ವರ್ ಯಾತ್ರೆಗೆ ಬಂದಿದ್ದ ಮಹಿಳೆಯೊಬ್ಬರು ಸೋಮವಾರ ಐತಿಹಾಸಿಕ ಸ್ಮಾರಕ ಹಾಗೂ ಪ್ರೀತಿಯ ಪ್ರತೀಕ ಎಂದು ಪರಿಗಣಿಸಲಾಗಿರುವ ತಾಜ್ ಮಹಲ್ (Taj Mahal ) ಹೊರಗೆ ‘ಕವಾಡ್’ ನೊಂದಿಗೆ (ಕನ್ವರ್ ಯಾತ್ರೆಯ ಸಮಯದಲ್ಲಿ ಗಂಗಾ ನದಿಯಿಂದ ಪವಿತ್ರ ನೀರು ಸಾಗಿಸುವ ಮಡಕೆಗಳು) ಬಂದ ಘಟನೆ ನಡೆಯಿತು. ಅವರು ತಾಜ್​ ಮಹಲ್ ಅಲ್ಲ, ಶಿವ ದೇವಾಲಯ ಎಂದು ವಾದಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷೆ ಮೀನು ರಾಥೋಡ್ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ. ಸೋಮವಾರ ತಾಜ್ ಮಹಲ್ನ ಪಶ್ಚಿಮ ದ್ವಾರಕ್ಕೆ ‘ಕವಡ್’ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದಾಗ ಅವರನ್ನು ತಡೆಯಲಾಯಿತು. ಆವರಣದಲ್ಲಿ ನಿಯೋಜಿಸಲಾಗಿದ್ದ ‘ತಾಜ್ ಸುರಕ್ಷಾ’ದ ಪೊಲೀಸರು ಆಕೆಗೆ ಮುಂದೆ ಹೋಗಲು ಅವಕಾಶ ನೀಡಲಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆಕೆಯನ್ನು ಪಶ್ಚಿಮ ದ್ವಾರದ ಬಳಿ ತಡೆಯಲಾಯಿತು. ಹೀಗಾಗಿ ಅವರಿಗೆ ತಾಜ್ ಮಹಲ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಸಮಯದ ನಂತರ, ರಾಜೇಶ್ವರ ದೇವಸ್ಥಾನದಲ್ಲಿ ಗಂಗಾಜಲವನ್ನು ಅರ್ಪಿಸಿದರು ” ಎಂದು ತಾಜ್ ಸುರಕ್ಷಾದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೈಯದ್ ಆರೀಬ್ ಅಹ್ಮದ್ ಹೇಳಿದ್ದಾರೆ.

ತಾಜ್ ಮಹಲ್ ಅನ್ನು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂ ಗುಂಪುಗಳು ವಾದಿಸುತ್ತಿವೆ. ಅಂತೆಯೇ ಈ ವಾದವನ್ನು ಉಲ್ಲೇಖಿಸಿ ಮೀನು ರಾಥೋಡ್ “ತೇಜೋ ಮಹಾಲಯ” ದಲ್ಲಿ ‘ಗಂಗಾಜಲ’ ಅರ್ಪಿಸಲು ಅನುಮತಿ ನೀಡುವಂತೆ ಪೊಲೀಸ್ರಿಗೆ ಬೇಡಿಕೆ ಇಟ್ಟಿದ್ದರು.

ಅದು ತೇಜೋ ಮಹಾಲಯ’

ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೀನು ರಾಥೋಡ್, ತನ್ನ ಕನಸಿನಲ್ಲಿ ಶಿವ ಬಂದಿದ್ದು ತೇಜೋ ಮಹಾಲಯದಲ್ಲಿ ಗಂಗಾಜಲವನ್ನು ಅರ್ಪಿಸಲು ಆದೇಶಿಸಿದ್ದ ಎಂದು ಹೇಳಿದ್ದಾರೆ. “ನಾನು ಗಂಗಾಜಲ ಅರ್ಪಿಸಲು ತೇಜೋ ಮಹಾಲಯಕ್ಕೆ ಬಂದಿದ್ದೇನೆ. ಭೋಲೆ ಬಾಬಾ ನನ್ನ ಕನಸಿನಲ್ಲಿ ನನ್ನ ಬಳಿಗೆ ಬಂದಿದ್ದರು. ನಾನು ತೇಜೋ ಮಹಾಲಯದಲ್ಲಿ ಅರ್ಪಿಸಲು ಕನ್ವರ್ ಅನ್ನು ತಂದಿದ್ದೆ . ಆದರೆ, ಪೊಲೀಸರು ನನ್ನನ್ನು ಮುಂದೆ ಹೋಗದಂತೆ ತಡೆದಿದ್ದಾರೆ ಎಂದು ರಾಥೋಡ್ ಹೇಳಿದ್ದಾರೆ.

ಇದನ್ನೂ ಓದಿ: NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

ಬಲಪಂಥೀಯ ಗುಂಪಿನ ವಕ್ತಾರ ಸಂಜಯ್ ಜಾಟ್​ ಅವರು “ತೇಜೋ ಮಹಾಲಯ” ಎಂಬುದನ್ನು ಪುನರುಚ್ಚರಿಸಿದರು. ತಾಜ್ ಮಹಲ್ ಶಿವನ ದೇವಾಲಯವಾಗಿರುವುದರಿಂದ ಗಂಗಾಜಲವನ್ನು ಅರ್ಪಿಸುವುದು “ನಮ್ಮ ಹಕ್ಕು” ಎಂದು ಪ್ರತಿಪಾದಿಸಿದರು.

ತಾಜ್ ಮಹಲ್ ಶಿವನ ದೇವಾಲಯವಾದ ‘ತೇಜೋ ಮಹಾಲಯ’ ಆಗಿರುವುದರಿಂದ ತಾಜ್ ಮಹಲ್​​ನಲ್ಲಿ ‘ಗಂಗಾ ಜಲ’ ಅರ್ಪಿಸುವುದು ನಮ್ಮ ಹಕ್ಕು. ಮೀನು ಅವರು ಕಾಸ್​ಗಂಜ್​ನ ಸೊರೊನ್ ಜಿಯಿಂದ ಕನ್ವರ್ ತಂದು ಎರಡು ದಿನಗಳ ನಂತರ ಆಗ್ರಾ ತಲುಪಿದ್ದರು ಎಂದು ಜಾಟ್ ಹೇಳಿದ್ದಾರೆ.

ತಾಜ್ ಮಹಲ್

ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಉತ್ತರ ಪ್ರದೇಶದ ಆಗ್ರಾದಲ್ಲಿ ಯಮುನಾ ನದಿಯ ದಡದಲ್ಲದೆ. ಇದು ಬಿಳಿ ಅಮೃತಶಿಲೆಯಲ್ಲಿ ನಿರ್ಮಿಸಿದ ಸಮಾಧಿಯಾಗಿದೆ. ಈ ಅಪ್ರತಿಮ ಸ್ಮಾರಕವನ್ನು ಕ್ರಿ.ಶ 1631 ರಲ್ಲಿ ಐದನೇ ಮೊಘಲ್ ಚಕ್ರವರ್ತಿ ಶಹಜಹಾನ್ ತನ್ನ ಪತ್ನಿ ಮುಮ್ತಾಜ್ ನೆನಪಿನ ಸಮಾಧಿಯನ್ನು ಕಟ್ಟಿದ್ದ ಎಂದು ಇತಿಹಾಸ ಹೇಳುತ್ತದೆ.

ಈ ಸಂಕೀರ್ಣ ಸುಮಾರು 42 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದು, ಸಮಾಧಿಯು ಅದರ ಕೇಂದ್ರಬಿಂದುವಾಗಿದೆ. ಈ ಸಂಕೀರ್ಣವು ಮಸೀದಿ ಮತ್ತು ಅತಿಥಿ ಗೃಹ ಸಹ ಒಳಗೊಂಡಿದೆ/. ಉದ್ಯಾನಗಳಲ್ಲಿ ಮೂರು ಬದಿಗಳಲ್ಲಿ ಕ್ರೆನೆಲ್ಡ್ ಗೋಡೆಯಿಂದ ಸುತ್ತುವರೆದಿದೆ. ತಾಜ್ ಮಹಲ್ ನಲ್ಲಿ 1658 ರಲ್ಲಿ ನಿಧನರಾದ ಶಹಜಹಾನ್ ಅವರ ಸಮಾಧಿಯೂ ಇದೆ.

Continue Reading

ವೈರಲ್ ನ್ಯೂಸ್

Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Viral News: ನಗರದ ಲಕ್ಷ್ಮೀನಗರ ಚೌಕ್ ಬಳಿ ಘಟನೆ ನಡೆದಿದ್ದು, ಈ ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ದಂಪತಿಗಳು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಇಳಿದು ರಸ್ತೆಯಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೇ ಹಾದು ಹೋಗುತ್ತಿದ್ದ ನಗರದ ಕೆಲ ಯುವಕರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

VISTARANEWS.COM


on

Koo

ನಾಗ್ಪುರ: ಕಾರು-ಬೈಕುಗಳಲ್ಲಿ ಜೋಡಿಗಳ ರೊಮ್ಯಾನ್ಸ್‌, ಅಶ್ಲೀಲ ಕೃತ್ಯಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯ ಎನ್ನುವ ರೀತಿಯಲ್ಲಿ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಮಹಾರಾಷ್ಟ್ರದ ಉಪ-ರಾಜಧಾನಿ ನಾಗ್ಪುರದಲ್ಲಿ ಇದೀಗ ಅಂತಹದ್ದೇ ಮತ್ತೊಂದು ಘಟನೆ ಜನರನ್ನು ಬೆಚ್ಚಿ ಬೀಳಿಸುವಂತಿದೆ. ಜೋಡಿಯೊಂದು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಇಳಿದು ರಸ್ತೆಯಲ್ಲಿ ತಿರುಗಾಡಿದ್ದಾರೆ. ಇದನ್ನು ಕಂಡು ಜನ ಶಾಕ್‌ ಆಗಿದ್ದು, ಈ ಘಟನೆಗೆ ಖಂಡನೆ ವ್ಯಕ್ತವಾಗಿದೆ(Viral News).

ಘಟನೆ ವಿವರ:

ನಗರದ ಲಕ್ಷ್ಮೀನಗರ ಚೌಕ್ ಬಳಿ ಘಟನೆ ನಡೆದಿದ್ದು, ಈ ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ದಂಪತಿಗಳು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಇಳಿದು ರಸ್ತೆಯಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೇ ಹಾದು ಹೋಗುತ್ತಿದ್ದ ನಗರದ ಕೆಲ ಯುವಕರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

ಸಿಕ್ಕಿರುವ ಮಾಹಿತಿ ಪ್ರಕಾರ ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ಲಕ್ಷ್ಮೀನಗರ ಚೌಕ್‌ನಿಂದ ಶ್ರದ್ಧಾನಂದಪೇಟ್ ಚೌಕ್‌ಗೆ ಹೋಗುವ ರಸ್ತೆಯಲ್ಲಿ ಜೋಡಿಯೊಂದು ಜಗಳ ಮಾಡಿಕೊಂಡು ಯುವಕನೊಬ್ಬ ಕಾರಿನಿಂದ ಇಳಿದಿದ್ದಾನೆ. ಅವನ ಮೈಮೇಲೆ ಒಂದೇ ಒಂದು ಬಟ್ಟೆಯೂ ಇರಲಿಲ್ಲ. ಸ್ವಲ್ಪ ಸಮಯದ ನಂತರ ಅದೇ ಸ್ಥಿತಿಯಲ್ಲಿದ್ದ ಯುವತಿಯೊಬ್ಬಳು ಕೂಡ ಕಾರಿನಿಂದ ಇಳಿದು ಯುವಕನ ಬಳಿ ಕ್ಷಮೆ ಯಾಚಿಸುತ್ತಿರುವುದು ಕಂಡು ಬಂದಿದೆ. ಇದಾದ ಬಳಿಕ ಯುವಕ ಫುಟ್ ಪಾತ್ ಬದಿಯಲ್ಲಿದ್ದ ತೆರೆದ ಮನೆಯತ್ತ ತೆರಳಿದ್ದಾನೆ. ಆಗ ರಸ್ತೆಯಲ್ಲಿ ಕೆಲವೇ ವಾಹನಗಳು ಸಂಚರಿಸುತ್ತಿದ್ದವು. ಹೀಗಿರುವಾಗ ಎರಡು ಬೈಕ್‌ಗಳಲ್ಲಿ ಹೋಗುತ್ತಿದ್ದ ಕೆಲ ಹುಡುಗರು ಈ ದೃಶ್ಯವನ್ನು ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ.

ಪೊಲೀಸರು ಹೇಳೋದೇನು?

ಬಜಾಜ್ ನಗರ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ವಿಠಲ್ ರಜಪೂತ್ ದಂಪತಿಯನ್ನು ಭಾನುವಾರ ಬೆಳಿಗ್ಗೆ ಗುರುತಿಸಲಾಯಿತು ಆದರೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿರುವಂತೆ ತೋರುತ್ತಿದ್ದರಿಂದ ಯಾವುದೇ ಕಾನೂನು ಕ್ರಮವನ್ನು ತೆಗೆದುಕೊಂಡಿಲ್ಲ. ಘಟನೆ ಬಗ್ಗೆ ಪರಿಶೀಲಿಸಲಾಗಿದೆ. “ನಾವು ದಂಪತಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಕರೆಸಿದ್ದೇವೆ, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಅನಿಯಂತ್ರಿತ ನಡವಳಿಕೆಯ ವಿರುದ್ಧ ಸಮರ್ಪಕವಾಗಿ ಸಲಹೆ ನೀಡಲಾಯಿತು. ದಂಪತಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿರುವುದರಿಂದ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ವರದಿಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ನಡೆದಿತ್ತು ಇಂತಹದ್ದೇ ಘಟನೆ

ಇತ್ತೀಚೆಗಷ್ಟೇ ನಗರದಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಜೋಡಿಯೊಂದು ರೋಮ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಸೀತಾಬುಲ್ಡಿ ಪೊಲೀಸರು ಯುವಕ ಹಾಗೂ ಯುವತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕುಟುಂಬ ಸಮೇತ ಠಾಣೆಗೆ ಕರೆಸಿ ಇಬ್ಬರಿಗೂ ವಾರ್ನಿಂಗ್‌ ಮಾಡಿದ್ದರು. ಇದಾದ ಬಳಿಕ ಬೈಕ್‌ನಲ್ಲಿ ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಇದನ್ನೋ ಓದಿ: Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Continue Reading
Advertisement
physical abuse
ದೇಶ9 seconds ago

Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Kerala Cyclist Reaches Paris
ಕ್ರೀಡೆ22 mins ago

Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

Gold Rate Today
ಚಿನ್ನದ ದರ22 mins ago

Gold Rate Today: ಆಭರಣ ಖರೀದಿಗೆ ಗೋಲ್ಡನ್‌ ಟೈಮ್‌; ಮತ್ತೆ ಇಳಿಮುಖವಾದ ಚಿನ್ನದ ದರ

murder case
ತುಮಕೂರು48 mins ago

Murder Case : ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

ITR Filing
ವಾಣಿಜ್ಯ53 mins ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ದಿನಾಂಕ 1 ತಿಂಗಳು ವಿಸ್ತರಣೆಗೆ ಮನವಿ

Brutal Murder
ದೇಶ59 mins ago

Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Actor Darshan
ಪ್ರಮುಖ ಸುದ್ದಿ1 hour ago

Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

Train Accident
ದೇಶ1 hour ago

Train Accident: ಹೌರಾ-ಮುಂಬೈ ಮೇಲ್​ ಎಕ್ಸ್​ಪ್ರೆಸ್​​ ರೈಲು ಹಳಿ ತಪ್ಪಿ ದುರಂತ; ಸಾವಿನ ಸಂಖ್ಯೆ 2ಕ್ಕೆ ಏರಿಕೆ

Manu Bhaker
ಕ್ರೀಡೆ2 hours ago

Manu Bhaker: ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಮನು ಭಾಕರ್; ವಿಡಿಯೊ ವೈರಲ್​

SL vs IND 3rd T20I
ಕ್ರೀಡೆ2 hours ago

SL vs IND 3rd T20I: ಇಂದು ಅಂತಿಮ ಟಿ20; ವೈಟ್‌ವಾಶ್‌ ಭೀತಿಯಿಂದ ಪಾರಾದೀತೇ ಶ್ರೀಲಂಕಾ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ19 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ22 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌