Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ - Vistara News

ವೈರಲ್ ನ್ಯೂಸ್

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Viral News: ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ಸದ್ಯ ವೈರಲ್‌ ಆಗಿದೆ. ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಮೊಸಳೆ- ಈ ಹೆಸರು ಕೇಳಿದರೆ ಸಾಕು ದೈತ್ಯ ದೇಹ, ಚೂಪಾದ ಹಲ್ಲು, ಸದಾ ಬೇಟೆಯಾಡಲು ಹೊಂಚು ಹಾಕುತ್ತಿರುವ ದೃಶ್ಯವೇ ಕಣ್ಣ ಮುಂದೆ ಬರುತ್ತದೆ. ಮೃಗಾಲಯದಲ್ಲಿ ದೂರದಿಂದ ಮೊಸಳೆಯನ್ನು ನೋಡಿ ಅದರ ಅಗಾಧ ಶಕ್ತಿಗೆ ಬೆರಗಾಗುತ್ತೇವೆ. ಅದು ಬಿಟ್ಟು ಕೋಟಿ ರೂ. ಕೊಡುತ್ತೇವೆ ಎಂದರೆ ಯಾರೂ ಮೊಸಳೆ ಸಮೀಪಕ್ಕೆ ಸುಳಿಯುವ ದುಸ್ಸಾಹಸ ಮಾಡುವುದಿಲ್ಲ. ಹೀಗಿರುವಾಗ ನಗರದ ಮಧ್ಯೆ ದೈತ್ಯ ದೇಹಿ ಮೊಸಳೆ ಕಂಡು ಬಂದರೆ ಏನಾಗಬೇಡ? ಹೌದು, ಇಂತಹದ್ದೊಂದು ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ನೋಡಿ ನೆಟ್ಟಿಗರು ರೋಮಾಂಚನಗೊಂಡಿದ್ದಾರೆ (Viral News).

ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೊದಲ್ಲಿ ಏನಿದೆ?

ಅದು ನರೋರಾ ಘಾಟ್‌ನ ನರೋರಾ ಬ್ಯಾರೇಜ್. ಕಾಲುವೆ ಸುತ್ತಲೂ ಕಬ್ಬಿಣದ ಸರಳುಗಳ ಗೇಟ್‌ ಅಳವಡಿಸಲಾಗಿದೆ. ಹೇಗೋ ಗೇಟ್‌ ದಾಟಿ ಈಚೆ ಬಂದ ಮೊಸಳೆಯೊಂದು ಸಿಮೆಂಟ್‌ ನೆಲದ ಮೇಲೆ ಒದ್ದಾಡುತ್ತಿರುವುದನ್ನು ತೋರಿಸುವ ಮೂಲಕ ದೃಶ್ಯ ಆರಂಭವಾಗುತ್ತದೆ. ನೀರಿಗೆ ಹೋಗಲು ಆ ಗೇಟ್‌ ದಾಟಲು ಮೊಸಳೆ ಪ್ರಯತ್ನಿಸುತ್ತದೆ. ಸರಳು ಹತ್ತಿ ಇನ್ನೇನು ಆಚೆ ಜಿಗಿಯಬೇಕು ಎನ್ನುವಷ್ಟರಲ್ಲಿ ನಿಯಂತ್ರಣ ತಪ್ಪಿ ದೈತ್ಯ ದೇಹದೊಂದಿಗೆ ದೊಪ್ಪೆಂದು ಸಿಮೆಂಟ್‌ ನೆಲಕ್ಕೆ ಬೀಳುತ್ತದೆ. ಮತ್ತೂ ಕೂಡ ಅದು ತನ್ನ ಪ್ರಯತ್ನವನ್ನು ಬಿಡುವುದಿಲ್ಲ. ಗೇಟ್‌ ಆಚೆ ಹಾರಲು ಯತ್ನಿಸುತ್ತದೆ. ಅಲ್ಲೇ ಸಮೀಪದಲ್ಲಿರುವ ಅಧಿಕಾರಿಯೊಬ್ಬರು ದೊಣ್ಣೆ ಹಿಡಿದು ಮೊಸಳೆ ಜನರತ್ತ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ಇದಿಷ್ಟು ವಿಡಿಯೊದಲ್ಲಿ ದಾಖಲಾಗಿದೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಅದನ್ನು ಸುರಕ್ಷಿತವಾಗಿ ನೀರಿಗೆ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆ ಹೇಗಿತ್ತು?

ಈ ಮೊಸಳೆಯನ್ನು ನೀರಿಗೆ ಸಾಗಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಹರ ಸಾಹಸವನ್ನೇ ಪಡಬೇಕಾಯಿತು. ಆರಂಭದಲ್ಲಿ ಅದರ ತಲೆಯನ್ನು ಬಟ್ಟೆಯಿಂದ ಮುಚ್ಚಿ ಅದರ ಕಾಲುಗಳನ್ನು ಹಗ್ಗದಿಂದ ಕಟ್ಟಲಾಯಿತು. ಬಳಿಕ ನಾಲ್ವರು ಅರಣ್ಯ ಅಧಿಕಾರಿಗಳು ಮೊಸಳೆಯ ತಲೆ ಮತ್ತು ಮುಂಭಾಗದ ಕಾಲುಗಳನ್ನು ಬಿಗಿದಿರುವ ಹಗ್ಗಗಳನ್ನು ಹಿಡಿದರು. ಈ ವೇಳೆ ಇನ್ನೊಬ್ಬ ಅಧಿಕಾರಿ ಅದರ ಹಿಂದಿನ ಕಾಲುಗಳಿಗೆ ಹಗ್ಗವನ್ನು ಸುತ್ತಿದರು. ಇಬ್ಬರು ಮೊಸಳೆಯ ಬಾಲವನ್ನು ಎತ್ತಿಕೊಂಡರು. ಹೀಗೆ ಕೆಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸುರಕ್ಷಿತವಾಗಿ ನೀರಿಗೆ ಬಿಡಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹುಲಿ-ಮೊಸಳೆ ಮಧ್ಯೆ ರಣ ರೋಚಕ ಕದನ; ಕೊನೆಯಲ್ಲಿ ಗೆದ್ದವರು ಯಾರು?

ಹಲವರು ವಿಡಿಯೊ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಾಪ ಮೊಸಳೆ ಹಸಿದಿರಬೇಕು. ಆಹಾರ ಅರಸಿಕೊಂಡು ಬಂದಿದೆ ಎಂದು ಹಲವರು ಕರುಣೆ ತೋರಿದ್ದಾರೆ. ಇನ್ನು ಕೆಲವರು ಇದು ಫೇಕ್‌ ವಿಡಿಯೊ, ಕೃತಕ ಬುದ್ಧಿಮತ್ತೆ ಬಳಸಿ ತಯಾರಿಸಲಾಗಿದೆ ಎಂದೂ ಹೇಳಿದ್ದಾರೆ. ಅದೇನೇ ಇರಲಿ ಇಷ್ಟು ದೈತ್ಯ ದೇಹಿ ಮೊಸಳೆ, ಅದರ ಸಾಹಸವನ್ನು ನೋಡಿ ಹಲವರು ರೋಮಾಂಚನಗೊಂಡಿದ್ದು ಸುಳ್ಳಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

Virat Kohli:2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು.

VISTARANEWS.COM


on

virat kohli
Koo

ಪ್ರೊವಿಡೆನ್ಸ್‌: ವಿರಾಟ್​ ಕೊಹ್ಲಿ(Virat Kohli) ಅವರು ಮೊಟ್ಟ ಮೊದಲ ಬಾರಿಗೆ ಟಿ20 ವಿಶ್ವಕಪ್(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಸಿಂಗಲ್​ ಡಿಜಿಟ್​ಗೆ ವಿಕೆಟ್​ ಒಪ್ಪಿಸಿದ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಅನಗತ್ಯ ದಾಖಲೆ ಬರೆದರು.

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು.

ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​.

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ Virat kohli : ನಿವೃತ್ತಿಯಾಗುವುದು ಉತ್ತಮ; ಕೊಹ್ಲಿ, ರೋಹಿತ್​ಗೆ ಸಲಹೆ ನೀಡಿದ ವೀರೇಂದ್ರ ಸೆಹ್ವಾಗ್​

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು.

Continue Reading

ವೈರಲ್ ನ್ಯೂಸ್

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Viral Video: ಪಶ್ಚಿಮ ಗರೋ ಹಿಲ್ಸ್‌ ಜಿಲ್ಲೆಯ ದಡೆಂಗರೆ ಗ್ರಾಮದ ಟೆಕ್ಸಾಗ್ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ವ್ಯಕ್ತಿಗಳು ಸೇರಿ ಮಹಿಳೆಯನ್ನು ಕೋಲಿನಿಂದ ಥಳಿಸಿ ಆಕೆಯ ಕೂದಲು ಹಿಡಿದು ನೆಲದಲ್ಲಿ ಎಳೆದಾಡಿದ್ದಾರೆ. ಅದೂ ಅಲ್ಲದೇ ಆಕೆಯನ್ನು ನೆಲಕ್ಕೆ ಬಡಿದು ಕಾಲಿನಿಂದ ಒದ್ದಿದ್ದಾರೆ. ಸಾರ್ವಜನಿಕವಾಗಿ ಇಂತಹ ಕ್ರೌರ್ಯ ನಡೆಯುತ್ತಿದ್ದರೂ ಸ್ಥಳದಲ್ಲಿದ್ದ ಜನ ಆಕೆಯ ಸಹಾಯಕ್ಕೆ ಬರಲಿಲ್ಲ. ಹಿರಿಯ ವ್ಯಕ್ತಿ ಮತ್ತು ಮಕ್ಕಳು ಅಲ್ಲಿ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಮೇಘಾಲಯ: ಕೋಲಾರದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಜಮೀನು ವಿವಾದದ ಹಿನ್ನೆಲೆ ಮಹಿಳೆಯನ್ನು ಗ್ರಾಮಸ್ಥರು ಸೇರಿ ಥಳಿಸಿರುವ ಘಟನೆ ನಡೆದಿತ್ತು. ಇಂತಹದ್ದೇ ಒಂದು ಘಟನೆ ಮೇಘಾಲಯದಲ್ಲಿ ನಡೆದಿದೆ. ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದಲ್ಲಿ ಮಹಿಳೆಯನ್ನು ನಾಲ್ವರು ಸೇರಿದ ದೊಣ್ಣೆಯಿಂದ ಥಳಿಸಿ, ನೆಲದಲ್ಲಿ ಎಳೆದಾಡಿದ ಘಟನೆ ಮೇಘಾಲಯದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಪಶ್ಚಿಮ ಗರೋ ಹಿಲ್ಸ್‌ ಜಿಲ್ಲೆಯ ದಡೆಂಗರೆ ಗ್ರಾಮದ ಟೆಕ್ಸಾಗ್ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ವ್ಯಕ್ತಿಗಳು ಸೇರಿ ಮಹಿಳೆಯನ್ನು ಕೋಲಿನಿಂದ ಥಳಿಸಿ ಆಕೆಯ ಕೂದಲು ಹಿಡಿದು ನೆಲದಲ್ಲಿ ಎಳೆದಾಡಿದ್ದಾರೆ. ಅದೂ ಅಲ್ಲದೇ ಆಕೆಯನ್ನು ನೆಲಕ್ಕೆ ಬಡಿದು ಕಾಲಿನಿಂದ ಒದ್ದಿದ್ದಾರೆ. ಸಾರ್ವಜನಿಕವಾಗಿ ಇಂತಹ ಕ್ರೌರ್ಯ ನಡೆಯುತ್ತಿದ್ದರೂ ಸ್ಥಳದಲ್ಲಿದ್ದ ಜನ ಆಕೆಯ ಸಹಾಯಕ್ಕೆ ಬರಲಿಲ್ಲ. ಹಿರಿಯ ವ್ಯಕ್ತಿ ಮತ್ತು ಮಕ್ಕಳು ಅಲ್ಲಿ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಘಟನೆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಒಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದ್ದಾರೆ. ಏತನ್ಮಧ್ಯೆ, ಮಹಿಳಾ ಸಬಲೀಕರಣದ ಮೇಘಾಲಯ ಅಸೆಂಬ್ಲಿ ಸಮಿತಿಯ ಅಧ್ಯಕ್ಷೆಯಾಗಿರುವ ಸುಟ್ಂಗಾ ಸೈಪುಂಗ್ ಶಾಸಕಿ ಸಾಂತಾ ಮೇರಿ ಶೈಲ್ಲಾ ಅವರು ಪೊಲೀಸರಿಂದ ವರದಿಯನ್ನು ಕೇಳಿದ್ದಾರೆ ಮತ್ತು ಮಹಿಳೆಯರ ವಿರುದ್ಧ ಯಾವುದೇ ರೀತಿಯ ಅಪರಾಧ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಕೇಳುವುದಾಗಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಜಮೀನು ವಿವಾದ ಹಿನ್ನೆಲೆಯಲ್ಲಿ ಒಂಟಿ ಮಹಿಳೆಯನ್ನು ಸಂಬಂಧಿಕರು ಥಳಿಸಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತೊಂಗಲಕುಪ್ಪ ಗ್ರಾಮದಲ್ಲಿ ಘಟನೆ ನಡೆದಿತ್ತು. ಆಶಾ ಎಂಬಾಕೆಯನ್ನು ಐದಾರು ಮಂದಿ ಸೇರಿ ಕಲ್ಲು ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್‌ ಸದಸ್ಯ ಶ್ರೀನಿವಾಸ್‌ ಸೇರಿ ಆಶಾಗೆ ಕಾಲಿನಿಂದ ಒದ್ದು, ಮನಬಂದಂತೆ ಥಳಿಸಿದ್ದಾರೆ.

ಪತಿಯನ್ನು ಕಳೆದುಕೊಂಡು ಒಂಟಿಯಾಗಿರುವ ಆಶಾ ನಿನ್ನೆ ಗುರುವಾರ ಸಂಜೆ ಆಸ್ತಿ ಪಾಲು ಕೇಳಲು ಹೋದಾಗ ಸಂಬಂಧಿಕರ ಜತೆಗೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಗಲಾಟೆ ಶುರುವಾಗಿದ್ದು, ನೋಡನೋಡುತ್ತಿದ್ದಂತೆ ಎಲ್ಲ ಸಂಬಂಧಿಕರು ಒಂಟಿಯಾಗಿದ್ದ ಆಶಾ ಮೇಲೆ ಎರಗಿದ್ದಾರೆ.

ಆಶಾಳನ್ನು ನೆಲಕ್ಕುರಳಿಸಿ ಸಿಕ್ಕ ಸಿಕ್ಕ ವಸ್ತುಗಳಿಂದ ಐದಾರು ವ್ಯಕ್ತಿಗಳು ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದೆಲ್ಲವೂ ಅಲ್ಲೆ ಇದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ. ಒಂಟಿ ಹೆಣ್ಣಿನ ಮೇಲೆ ಕ್ರೌರ್ಯ ಮೆರೆದ ಪುಂಡರ ವಿರುದ್ಧ ಆಕ್ರೋಶಗಳು ಕೇಳಿ ಬಂದಿದೆ. ಕ್ಯಾಸಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bulldozer: ‌ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

Continue Reading

Latest

Viral News: ಆರ್ಡರ್ ಮಾಡಿ 6 ವರ್ಷ ಕಳೆದರೂ ವಸ್ತು ಕಳುಹಿಸದ ಫ್ಲಿಪ್‌ಕಾರ್ಟ್!

Viral News: ಈಗ ಮನೆಗೆ ಬೇಕಾಗಿರುವ ವಸ್ತುಗಳಿಂದ ಹಿಡಿದು ತಿನ್ನುವುದಕ್ಕೆ ಬೇಕಾಗಿರುವ ಆಹಾರದವರೆಗೆ ಎಲ್ಲವನ್ನೂ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿಕೊಳ್ಳುವ ಕಾಲ! ಕಣ್ಣು ಮುಚ್ಚಿ ತೆರೆಯುವುದರೊಳಗೆ ಮನೆಬಾಗಿಲಿಗೆ ನೀವು ಆರ್ಡರ್ ಮಾಡಿದ ವಸ್ತು ಬಂದು ಬೀಳುತ್ತೆ. ಅಂಥದ್ದರಲ್ಲಿ ಇಲ್ಲೊಬ್ಬರಿಗೆ ಆರ್ಡರ್ ಮಾಡಿ 6 ವರ್ಷದ ಬಳಿಕ ಪೇಡಿಂಗ್‌ ಆರ್ಡರ್‌ ಕುರಿತು ಫ್ಲಿಪ್‌ಕಾರ್ಟ್‌ನಿಂದ ಕರೆ ಬಂದಿದೆಯಂತೆ. ಅಹ್ಸಾನ್ ಖರ್ಬಾಯಿ ಎಂಬ ಮುಂಬೈ ನಿವಾಸಿ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಅವರ ಆರ್ಡರ್ ಹಿಸ್ಟ್ರಿಯನ್ನು ಸ್ಕ್ರೀನ್ ಶಾಟ್ ತೆಗೆದು ಪೋಸ್ಟ್ ಮಾಡಿ ತಮಗಾದ ಈ ವಿಚಿತ್ರ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Viral News
Koo

ಮುಂಬೈ: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಆನ್‌ಲೈನ್ ವೆಬ್‌ಸೈಟ್‌ಗಳಲ್ಲಿ ವಸ್ತುಗಳನ್ನು ಆರ್ಡರ್ ಮಾಡುತ್ತಾರೆ. ಬಹುತೇಕ ಸಮಯ ಈ ಆರ್ಡರ್ ಅವರು ತಿಳಿಸಿದ ಸಮಯಕ್ಕೆ ಸರಿಯಾಗಿ ಬರುತ್ತದೆ, ಕೆಲವೊಮ್ಮೆ ಅದಕ್ಕೂ ಮುಂಚಿತವಾಗಿ ಬರುತ್ತದೆ. ಆದರೆ ಮುಂಬೈ ವ್ಯಕ್ತಿಯೊಬ್ಬರಿಗೆ ವಸ್ತುವನ್ನು ಆರ್ಡರ್ ಮಾಡಿದ 6 ವರ್ಷಗಳ ನಂತರ ಕಸ್ಟಮರ್ ಕೇರ್‌ನಿಂದ ಕರೆ ಬಂದಿದೆಯಂತೆ. ಅಂದ ಹಾಗೆ ಆರು ವರ್ಷ ಕಳೆದರೂ ಅವರಿಗೆ ಆರ್ಡರ್‌ ಮಾಡಿದ ವಸ್ತು ಬಂದಿರಲಿಲ್ಲ. ಈ ಸುದ್ದಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದು ವೈರಲ್(Viral News) ಆಗಿದೆ.

ಅಹ್ಸಾನ್ ಖರ್ಬಾಯಿ ಎಂಬ ಮುಂಬೈ ನಿವಾಸಿ ತಮ್ಮ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅವರ ಆರ್ಡರ್ ಹಿಸ್ಟ್ರಿಯನ್ನು ಸ್ಕ್ರೀನ್ ಶಾಟ್ ತೆಗೆದು ಪೋಸ್ಟ್ ಮಾಡಿ ತಮಗಾದ ಈ ವಿಚಿತ್ರ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಅವರು ತಿಳಿಸಿದಂತೆ 2018ರಲ್ಲಿ ಫ್ಲಿಪ್ ಕಾರ್ಟ್ ಇ ಕಾಮರ್ಸ್ ವೆಬ್ ಸೈಟ್‌ನಲ್ಲಿ ಅಹ್ಸಾನ್ ಸ್ಪಾರ್ಕ್ಸ್ ಚಪ್ಪಲಿಯನ್ನು ಆರ್ಡರ್ ಮಾಡಿದ್ದರಂತೆ. ಆದರೆ ಚಪ್ಪಲಿಯನ್ನು ಅವರು ಇಂದಿಗೂ ಡೆಲಿವರಿ ನೀಡಲಿಲ್ಲ. ಆದರೆ 6 ವರ್ಷಗಳು ಕಳೆದ ನಂತರ ಅದು ಡೆಲಿವರಿ ಆಗಲಿದೆ ಎಂದು ತೋರಿಸುತ್ತಿದ್ದ ಕಾರಣ ಅವರು ಅದನ್ನು ಕ್ಲಿಕ್ ಮಾಡಿದ್ದಾರೆ. ಆಗ ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ನಿಂದ ಕರೆ ಬಂದಿದೆಯಂತೆ. “ನೀವು ಆರ್ಡರ್ ನೊಂದಿಗೆ ಯಾವ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?” ಎಂದು ಕೇಳುವ ಕರೆಯನ್ನು ಸ್ವೀಕರಿಸಿದ ಅಹ್ಸಾನ್ ಅದಕ್ಕೆ ಉತ್ತರಿಸಿದ್ದಕ್ಕೆ “ಫ್ಲಿಪ್ ಕಾರ್ಟ್ ನಿಂದ ನಿಮಗೆ ಯಾವುದೇ ಕರೆ ಬರಲಿಲ್ಲವೇ? ಇದಕ್ಕಾಗಿ ನಾವು ವಿಷಾದಿಸುತ್ತೇವೆ ಸರ್” ಎಂದು ಹೇಳಿ ಕರೆ ಕಟ್ ಆಗಿದೆಯಂತೆ.

ಅಹ್ಸಾನ್ ಅವರು ಆರ್ಡರ್ ಅನ್ನು ಕ್ಯಾಶ್ ಆನ್ ಡೆಲಿವರಿಗೆ ಮಾಡಿದ್ದರಿಂದ ಅವರು ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲು ಹೋಗಲಿಲ್ಲವಂತೆ. ಆದರೆ ಅದನ್ನು ರದ್ದುಗೊಳಿಸಲು ಅದರಲ್ಲಿ ಯಾವುದೇ ಆಯ್ಕೆ ಇರಲಿಲ್ಲ ಎಂಬುದಾಗಿ ಅವರು ತಿಳಿಸಿದ್ದಾರೆ. ಆದರೆ ಅವರ ಆರ್ಡರ್ ಲಿಸ್ಟ್ ತೆಗೆದಾಗ ಮೊದಲು ಅದೇ ಆರ್ಡರ್ ಬರುವ ಕಾರಣ ಅದನ್ನು ಅವರೇ ರದ್ದುಗೊಳಿಸಬೇಕೆಂದು ಅಹ್ಸಾನ್ ಕೇಳಿಕೊಂಡಿದ್ದಾರೆ.

Viral News

ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪೋಸ್ಟ್ ಗೆ 1.3 ಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ. ಜೊತೆಗೆ ಅನೇಕ ಕಾಮೆಂಟ್ ಗಳು ಕೂಡ ಬಂದಿದೆ. ಅದರಲ್ಲಿ ಕೆಲವರು ಫ್ಲಿಪ್ ಕಾರ್ಟ್ ನಲ್ಲಿ ತಮಗೂ ಇದೇ ರೀತಿಯ ಅನುಭವವಾಗಿರುವುದಾಗಿ ತಿಳಿಸಿದ್ದಾರೆ. ಆದರೆ ಅದರಲ್ಲಿ ಯಾವುದೂ 6 ವರ್ಷಗಳ ದೀರ್ಘಕಾಲದವರೆಗೆ ವಿಳಂಬವಾಗಿರಲಿಲ್ಲ.

ಇದನ್ನೂ ಓದಿ: ಸರ್ಜಾಪುರ-ಹೆಬ್ಬಾಳದ 3ಎ ಮೆಟ್ರೋ ಮಾರ್ಗ ಯಾವಾಗ ಪೂರ್ಣ?

ಹಾಗಾಗಿ ಫ್ಲಿಪ್ ಕಾರ್ಟ್ ಸೇರಿದಂತೆ ಯಾವುದೇ ಆನ್ ಲೈನ್ ವೆಬ್ ಸೈಟ್ ಗಳಲ್ಲಿ ಮೋಸ, ವಂಚನೆ ನಡೆಯುತ್ತಿರುತ್ತದೆ. ಆದಕಾರಣ ಇವುಗಳಲ್ಲಿ ಯಾವುದೇ ವಸ್ತುಗಳನ್ನು ಆರ್ಡರ್ ಮಾಡುವಾಗ ಕ್ಯಾಶ್ ಆನ್ ಡೆಲಿವರಿ ಗೆ ಆರ್ಡರ್ ಮಾಡಿ. ಇದರಿಂದ ನಿಮಗೆ ಯಾವುದೇ ನಷ್ಟವಾಗುವುದಿಲ್ಲ.

Continue Reading

Latest

Viral News: ಬಿಜೆಪಿಗೆ ಮತ ಹಾಕಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ!

Viral News: ನಮ್ಮ ದೇಶದ ಕಾನೂನಿನ ಪ್ರಕಾರ ಪ್ರತಿಯೊಬ್ಬರಿಗೂ ಅವರಿಗೆ ಇಷ್ಟವಾದ ರಾಜಕೀಯ ಪಕ್ಷವನ್ನು ಬೆಂಬಲಿಸುವ ಸ್ವತಂತ್ರವಿದೆ. ಆದರೆ ಇಲ್ಲೊಬ್ಬಳು ಮಹಿಳೆ ಬಿಜೆಪಿ ಪಕ್ಷವನ್ನು ಬೆಂಬಲಿಸಿ ವೋಟ್ ಹಾಕಿದ್ದಕ್ಕೆ ಕೋಪಗೊಂಡ ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ಘಟನೆ ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.

VISTARANEWS.COM


on

Viral News
Koo

ಮಧ್ಯಪ್ರದೇಶ: ಮಹಿಳೆಯೊಬ್ಬರು ಬಿಜೆಪಿ ಪಕ್ಷವನ್ನು ಬೆಂಬಲಿಸಿ ವೋಟ್ ಹಾಕಿದ್ದಕ್ಕೆ ಕೋಪಗೊಂಡ ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ಘಟನೆ ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಸುದ್ದಿ ಎಲ್ಲೆಡೆ ವೈರಲ್‌ (Viral News) ಆಗಿದೆ.

ದೂರಿನಲ್ಲಿ ಮಹಿಳೆ, ತಾನು ಸುಮಾರು ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದು, ಸ್ವಲ್ಪ ಸಮಯದ ನಂತರ ಅತ್ತೆ, ಪತಿ ಹಾಗೂ ನಾದಿನಿಯರು ಹಿಂಸೆ ನೀಡಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾರೆ. ಒಂದೂವರೆ ವರ್ಷದಿಂದ ಪತಿಯ ಜೊತೆ ಆಕೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳಂತೆ. ಆದರೆ ಮಹಿಳೆ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಅದರ ಪರವಾಗಿ ಮತ ಹಾಕಿದ್ದಕ್ಕೆ ಕೋಪಗೊಂಡ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ ಎಂಬುದಾಗಿ ತಿಳಿಸಿದ್ದಾಳೆ.

Viral News

ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಆಕೆಯ ಪತಿ, ಅತ್ತೆ ಹಾಗೂ ನಾದಿನಿಯರ ವಿರುದ್ಧ ವರದಕ್ಷಿಣ ನಿಷೇಧ ಕಾಯಿದೆ, ಮುಸ್ಲಿಂ ಮಹಿಳೆಯರ ಕಾಯ್ದೆ ಮತ್ತು ಭಾರತೀಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹಾಗೇ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Viral News

ಆದರೆ ಮಹಿಳೆಯ ಪತಿ ಆರೋಪವನ್ನು ತಳ್ಳಿ ಹಾಕಿದ್ದು, ಆಕೆಗೆ ಅಕ್ರಮ ಸಂಬಂಧವಿದೆ. ಅದನ್ನು ಮರೆಮಾಚಲು ಇಂತಹ ಆರೋಪ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾನೆ. ತಮ್ಮ ಮಗುವಿನ ಭವಿಷ್ಯಕ್ಕಾಗಿ ಆಕೆಗೆ ಹಲವಾರು ಅವಕಾಶಗಳನ್ನು ನೀಡಿದ್ದರೂ ಕೂಡ ಆಕೆ ಸರಿಹೋಗದ ಕಾರಣ ಆಕೆಗೆ ಮುಸ್ಲಿಂ ಕಾನೂನಿಗೆ ಅನುಸಾರವಾಗಿ ತಲಾಖ್ ನೀಡಿರುವುದಾಗಿ ತಿಳಿಸಿದ್ದಾನೆ. ಹಾಗೇ ಪತ್ನಿ ತನಗೆ ಬೆದರಿಕೆ ಹಾಕುತ್ತಿದ್ದಾಳೆ, ತನ್ನ ಮರ್ಯಾದೆಗೆ ಧಕ್ಕೆ ತರುತ್ತಿದ್ದಾಳೆ, ತನ್ನ ಮನೆಯವರ ಜೀವನ ಹಾಳುಮಾಡುತ್ತಿದ್ದಾಳೆ. ತನ್ನ ಅಕ್ರಮ ಸಂಬಂಧವನ್ನು ಮರೆಮಾಚಲು ಇಂತಹ ಆರೋಪ ಮಾಡುತ್ತಿದ್ದಾಳೆ . ಪ್ರತ್ಯೇಕವಾಗಿ ವಾಸವಾಗಿರುವುದರಿಂದ ಆಕೆಗೆ ಯಾರು ಕಿರುಕುಳ ನೀಡಿಲ್ಲ. ತನ್ನ ಸಹೋದರಿ ಬೇರೆ ಪಟ್ಟಣದಲ್ಲಿ ನೆಲೆಸಿದ್ದಾಳೆ. ಆಕೆಯ ಹೆಸರನ್ನು ತಪ್ಪಾಗಿ ಪ್ರಕರಣದಲ್ಲಿ ಸೇರಿಸಿದ್ದಾಳೆ. ಪ್ರತಿಯೊಬ್ಬರಿಗೂ ಅವರಿಗೆ ಇಷ್ಟವಾದ ರಾಜಕೀಯ ಪಕ್ಷವನ್ನು ಬೆಂಬಲಿಸುವ ಸ್ವತಂತ್ರವಿದೆ. ಎಂದು ಆಕೆಯ ಪತಿ ಪ್ರತ್ಯಾರೋಪ ಮಾಡಿದ್ದಾನೆ.

ಇದನ್ನೂ ಓದಿ: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

ಈ ಹಿಂದೆ ಉತ್ತರ ಪ್ರದೇಶದ ಬುದೌನ್ ನಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಕ್ಷೌರಿಕನೊಬ್ಬ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕನ ತಲೆಯನ್ನು ಬೋಳಿಸಿದ ಘಟನೆ ನಡೆದಿತ್ತು. ಲೋಕಸಭಾ ಚುನಾವಣೆಯ ಸಮಯದಲ್ಲಿ ಬಾಲಕನ ಕುಟುಂಬವು ಬಿಜೆಪಿಗೆ ಬೆಂಬಲ ನೀಡಿದೆ. ಇದರಿಂದ ಕ್ಷೌರಿಕ ಮತ್ತು ಆ ಪ್ರದೇಶದ ಇತರ ಕೆಲವರು ಅಸಮಾಧಾನಗೊಂಡಿದ್ದರು. ಆಗ ಅವರು ಮನೆಯ ಬಳಿ ಆಟವಾಡುತ್ತಿದ್ದ ಬಾಲಕನನ್ನು ಬಲವಂತವಾಗಿ ಕರೆದೊಯ್ದು ತಲೆ ಬೋಳಿಸಿದ್ದಾರೆ. ಈ ಬಗ್ಗೆ ಬಾಲಕನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿ ಕ್ಷೌರಿಕನನ್ನು ಬಂಧಿಸಿದ್ದರು.

Continue Reading
Advertisement
IND vs ENG Semi Final
ಕ್ರೀಡೆ1 hour ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ3 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ4 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ4 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ4 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ5 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ5 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು11 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌