Viral News: 25 ಬೆರಳುಗಳಿರುವ ಮಗು ಜನನ! ನೋಡಲು ಮುಗಿಬಿದ್ದ ಜನ - Vistara News

ವೈರಲ್ ನ್ಯೂಸ್

Viral News: 25 ಬೆರಳುಗಳಿರುವ ಮಗು ಜನನ! ನೋಡಲು ಮುಗಿಬಿದ್ದ ಜನ

Viral News: ತಾಯಿ ಗರ್ಭಿಣಿ ಆಗುವ ಸಂದರ್ಭದಲ್ಲಿ ಪಡೆಯುವ ಕ್ರೋಮೋಸೋಮ್‌ಗಳಲ್ಲಿ ಇಂತಹ ಗುಣಗಳಿದ್ದರೆ ಇಂತಹ ಮಗು ಹುಟ್ಟುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದೀಗ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿದಂತೆ ಈ ಮಗುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ.

VISTARANEWS.COM


on

viral news baby
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಜಿಲ್ಲೆಯಲ್ಲಿ ಮಹಿಳೆಯೊಬ್ಬರು 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ಆಕರ್ಷಣೆಗೆ (Viral news) ಕೇಂದ್ರವಾಗಿದೆ.

ಈ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ನಡೆದಿದೆ. ಮಗುವಿನ ಬಲಗೈಗೆ 6, ಎಡಗೈಗೆ 7 ಮತ್ತು ಎರಡು ಕಾಲಿನಲ್ಲಿ ಕೂಡ ತಲಾ 6 ಬೆರಳುಗಳಿವೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ಯಾವುದೇ ತೊಂದರೆಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ತಾಯಿ ಗರ್ಭಿಣಿ ಆಗುವ ಸಂದರ್ಭದಲ್ಲಿ ಪಡೆಯುವ ಕ್ರೋಮೋಸೋಮ್‌ಗಳಲ್ಲಿ ಇಂತಹ ಗುಣಗಳಿದ್ದರೆ ಇಂತಹ ಮಗು ಹುಟ್ಟುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಮಕ್ಕಳ ಭಾಗ್ಯ ಕರುಣಿಸುವಂತೆ ಕುಂದರಗಿಯ ಭುವನೇಶ್ವರಿ ದೇವಿಗೆ ನನ್ನ ಹೆಂಡತಿ ಹರಹೆ ಹೊತ್ತಿದ್ದಳು. ಹರಕೆ ಹೊತ್ತ 4ನೇ ವಾರದಲ್ಲಿಯೇ ಗರ್ಭಿಣಿಯಾದಳು ಎಂದು ಮಗುವಿನ ತಂದೆ ಗುರಪ್ಪ ಸಂತಸ ಹಂಚಿಕೊಂಡಿದ್ದಾರೆ. ಇದೀಗ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿದಂತೆ ಈ ಮಗುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ.

ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ

ಪಂಜಾಬ್: ಇತ್ತೀಚೆಗೆ ಸಣ್ಣ-ಪುಟ್ಟ ಕಾರಣಕ್ಕೆ ಪ್ರಾಣ ಕಳೆದುಕೊಳ್ಳುವ ಅನೇಕ ಘಟನೆಗಳು ಆಗಾಗ ವರದಿಯಾಗುತ್ತಿರುತ್ತದೆ. ಅದರಲ್ಲೂ ಯುವಕರೇ ಹೆಚ್ಚಾಗಿ ದುಡುಕಿ ಇಂತಹ ನಿರ್ಧಾರಕ್ಕೆ ಬರುತ್ತಾರೆ. ಅಂತಹದ್ದೇ ಒಂದು ಘಟನೆ ಹರ್ಯಾಣದಲ್ಲಿ ನಡೆದಿದೆ. ಈ ಹಣಕಾಸಿನ ಸಮಸ್ಯೆಯಿಂದ ನೊಂದು 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ (Self Harming)ಮಾಡಿಕೊಂಡಿದ್ದಾನೆ. ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡವನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದನು ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಯುವಕ ನೀರಿನ ಟ್ಯಾಂಕ್ ಹತ್ತಿ ಟ್ಯಾಂಕ್‍ನ ಅಂಚಿನಲ್ಲಿ ನಿಂತಿರುವುದನ್ನು ಕಾಣಬಹುದು. ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಇಬ್ಬರು ಪುರುಷರು ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಹತ್ತುತ್ತಿರುವುದನ್ನು ಸಹ ಕಾಣಬಹುದು. ಅವರು ನೀರಿನ ಟ್ಯಾಂಕ್‍ನ ನಾಲ್ಕನೇ ಮಹಡಿಯನ್ನು ತಲುಪಿದಾಗ, ಯುವಕ ಅವರನ್ನು ಮೇಲಿನಿಂದ ಗಮನಿಸಿದನು. ನಂತರ ಅವರು ತನನ್ನು ರಕ್ಷಿಸಲು ಬರುತ್ತಿರುವುದನ್ನು ನೋಡಿ ಅವನು ಮುಂದೆ ಓಡಿ ನೀರಿನ ಟ್ಯಾಂಕ್‍ನಿಂದ ಹಾರಿದನು. ಈ ಘಟನೆಯನ್ನು ತನ್ನ ಮೊಬೈಲ್ ಪೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯು ಯುವಕ ನೆಲಕ್ಕೆ ಬೀಳುತ್ತಿದ್ದಂತೆ ಆಘಾತದಿಂದ ಕಿರುಚುವುದನ್ನು ಕೇಳಬಹುದು. ಜಿಗಿತದ ಪರಿಣಾಮ ಎಷ್ಟಿತ್ತೆಂದರೆ ಯುವಕ ನೆಲದ ಮೇಲೆ ಬಿದ್ದ ನಂತರ ಮತ್ತೆ ಮೇಲೆ ಜಿಗಿದು ನಂತರ ಮತ್ತೆ ಬಿದ್ದಿದ್ದಾನೆ.

ನೆಲಕ್ಕೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನೀರಿನ ಟ್ಯಾಂಕ್‍ನ ಮೆಟ್ಟಿಲುಗಳನ್ನು ಏರುತ್ತಿದ್ದ ಇಬ್ಬರು ಪುರುಷರು, ಯುವಕ ಜೀವಂತವಾಗಿದ್ದಾನೆಯೇ ಎಂದು ಪರೀಕ್ಷಿಸಲು ಕೆಳಗೆ ಓಡಿ ಬರುತ್ತಿರುವುದು ಕಂಡುಬಂದಿದೆ.
ಯುವಕನನ್ನು ತಕ್ಷಣ ಖರಾರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಯುವಕನ ಎರಡೂ ಕಾಲುಗಳು ಮುರಿದು ಕಾಲುಗಳ ಮೂಳೆಗಳು ಹೊರಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಇಲ್ಲಿನ ವೈದ್ಯರು ಪರೀಕ್ಷಿಸಿದಾಗ, ಅವನು ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಥೇಟ್‌ ನಮ್ಮದೇ ಕೈಬರಹದಂತೆ ಬರೆಯುತ್ತದೆ ಈ ಯಂತ್ರ!

ವಿಜ್ಞಾನ, ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಕೆಲವೊಂದು ಕೆಲಸ ಯಂತ್ರಗಳಿಗೆ ಮಾಡುವುದು ಸಾಧ್ಯವೇ ಇಲ್ಲ ಎನ್ನಲಾಗುತ್ತಿತ್ತು. ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ (Viral Video) ಮಾತ್ರ ಇದನ್ನು ಸುಳ್ಳು ಮಾಡಿದೆ. ಅಂತಹ ಕೆಲಸ ಯಾವುದು, ಈ ಯಂತ್ರ ಏನು ಮಾಡಿದೆ ನೀವೇ ವಿಡಿಯೋ ನೋಡಿ.

VISTARANEWS.COM


on

By

Viral Video
Koo

ವಿಜ್ಞಾನ ಮತ್ತು ತಂತ್ರಜ್ಞಾನ (Science and Technology) ಎಷ್ಟೇ ಮುಂದುವರಿದರೂ ಕೆಲವೊಂದು ಕೆಲಸ ಯಂತ್ರಗಳಿಗೆ ಮಾಡುವುದು ಸಾಧ್ಯವೇ ಇಲ್ಲ ಎನ್ನಲಾಗುತ್ತಿತ್ತು. ಅದರಲ್ಲೂ ಮುಖ್ಯವಾಗಿ ಮಾನವನ ಹ್ಯಾಂಡ್ ರೈಟಿಂಗ್ (Handwriting). ಆದರೆ ಈ ಯಂತ್ರ ಮಾತ್ರ ಮಾನವನ ಹ್ಯಾಂಡ್ ರೈಟಿಂಗ್ ಅನ್ನು ಕಾಪಿ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿರುವ ಈ ವಿಡಿಯೋ (Viral Video) ಈಗ ಸಾಕಷ್ಟು ವೈರಲ್ ಆಗಿದೆ.

ವಿಜ್ಞಾನ, ತಂತ್ರಜ್ಞಾನದಿಂದಾಗಿ ನಮ್ಮ ಸಾಕಷ್ಟು ಕೆಲಸ ಕಾರ್ಯಗಳು ಸುಲಭವಾಗಿದೆ. ಕೆಲವೇ ಕೆಲವು ನಿಮಿಷಗಳಲ್ಲಿ ಯಂತ್ರಗಳ ಸಹಾಯದಿಂದ ಸಾಕಷ್ಟು ಕೆಲಸಗಳನ್ನು ಪೂರ್ಣಗೊಳಿಸಬಹುದು. ಕೆಲಸದ ಸ್ಥಳ, ಮನೆಯ ಬಹುತೇಕ ಕೆಲಸಗಳನ್ನು ನಿರ್ವಹಿಸುವ ಯಂತ್ರಗಳಿಂದಾಗಿ ನಮ್ಮ ಜೀವನ ಇಂದು ಬಹುತೇಕ ಸರಳವಾಗಿದೆ.

ಕಳೆದ ದಶಕದಲ್ಲಿ ಕೃತಕ ಬುದ್ಧಿಮತ್ತೆಯು ವಿಕಸನಗೊಂಡ ಪರಿಣಾಮ ಸಾಕಷ್ಟು ಸಂಕೀರ್ಣವೆನಿಸುವ ಕಾರ್ಯಗಳು ಇಂದು ಸುಲಭವಾಗಿದೆ. ವಿಶ್ಲೇಷಣಾತ್ಮಕ ಮತ್ತು ತಾರ್ಕಿಕತೆಯನ್ನು ಸಹ ಎಐ ನಿರ್ವಹಿಸುತ್ತಿದೆ. ಇನ್ನು ಕೈಯಾರೆಯೇ ಮಾಡಬೇಕಾದ ಒಂದು ಕೆಲಸವೆಂದರೆ ಪೆನ್ನಿನಿಂದ ಕಾಗದದ ಮೇಲೆ ಬರೆಯುವುದು. ಆದರೆ ಇನ್ನು ಈ ಕೆಲಸವು ಕಷ್ಟವಲ್ಲ. ಯಾಕೆಂದರೆ ಇದೀಗ ಬಂದಿರುವ ಹೊಸ ಯಂತ್ರವೆಂದು ಈ ಕಾರ್ಯವನ್ನು ಅತ್ಯಂತ ವೇಗವಾಗಿ ಮಾಡಿ ಮುಗಿಸುತ್ತದೆ.

ಕಾಗದದ ಮೇಲೆ ಬರೆಯುವ ಮತ್ತು ಮುದ್ರಿಸದ ಹಳೆಯ ಶೈಲಿ ಈಗ ಸುಲಭವಾಗಿದೆ. ಇನ್ನು ಮುಂದೆ ಹಸ್ತಚಾಲಿತ ಹಸ್ತಕ್ಷೇಪದ ಅಗತ್ಯವಿಲ್ಲದೆ ಯಂತ್ರಗಳು ಈ ಕಾರ್ಯವನ್ನು ಮಾಡಿ ಮುಗಿಸುತ್ತದೆ.

ಪ್ರಾಜೆಕ್ಟ್‌, ವಿವರಣೆಗಳನ್ನು ರಚಿಸಲು ಮಕ್ಕಳು ಕಂಪ್ಯೂಟರ್‌ಗಳನ್ನು ಬಳಸುತ್ತಾರೆ. ಆದರೆ ಇಲ್ಲಿಯವರೆಗೆ ಕೈಯಿಂದ ಬರೆಯುವುದು ಮಾತ್ರ ಯಂತ್ರಗಳಿಗೆ ಸಾಧ್ಯವಿರಲಿಲ್ಲ. ಆದರೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಹೊಸ ಆವಿಷ್ಕಾರವೊಂದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.


ಇದು ಮಾನವ ಕೈಬರಹವನ್ನು ಪುನರಾವರ್ತಿಸುತ್ತದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ ಅಸೈನ್ಮೆಂಟ್ ಅನ್ನು ಬರೆಯಲಾಗುತ್ತಿದೆ. ವಿಷಯವೇನೆಂದರೆ ಇದನ್ನು ಬರೆಯುತ್ತಿರುವುದು ಒಂದು ಯಂತ್ರ. ಪೆನ್ ಅನ್ನು ಯಂತ್ರದಲ್ಲಿ ಅಳವಡಿಸಲಾಗಿದೆ, ಇದು ಯಾವುದೇ ದೋಷಗಳಿಲ್ಲದೆ ಮಾನವ ಕೈಬರಹದಂತೆ ಬರೆಯುವುದನ್ನು ಮುಂದುವರಿಸಿದೆ. ಪುಟದ ಕೊನೆಯಲ್ಲಿ ಯಂತ್ರವು ಸ್ವಯಂಚಾಲಿತವಾಗಿ ಪುಟವನ್ನು ತಿರುಗಿಸಿ ಇನ್ನೊಂದು ಬದಿಯಲ್ಲಿ ಬರೆಯಲು ಪ್ರಾರಂಭಿಸುತ್ತದೆ.

ಈ ವಿಡಿಯೋವನ್ನು ಹಸ್ನಾ ಜರೂರಿ ಹೈ ಹೆಸರಿನ ಖಾತೆಯಿಂದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಳ್ಳಲಾಗಿದೆ. ಇದು ಸಾವಿರಾರು ವೀಕ್ಷಣೆಗಳನ್ನು ಪಡೆದಿದೆ.

ಇದನ್ನೂ ಓದಿ: Viral Video: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಬಿದ್ದ; ಹೆಡ್ ಕಾನ್‌ಸ್ಟೇಬಲ್‌ ಹೀರೋನಂತೆ ಜೀವ ರಕ್ಷಿಸಿದ!

ಈ ವಿಡಿಯೋಗೆ ಹಲವಾರು ಮಂದಿ ಕಾಮೆಂಟ್ ಮಾಡಿದ್ದು, ಒಬ್ಬ ಬಳಕೆದಾರ, ಹಿಂದೆ, ಪೋಷಕರು ನಿಮಗೆ ಚೆನ್ನಾಗಿ ಅಧ್ಯಯನ ಮಾಡಲು ಹೇಳುತ್ತಿದ್ದರು; ಈಗ ಅವರು ನಿಮಗೆ ಯಂತ್ರವನ್ನು ಚೆನ್ನಾಗಿ ಕೆಲಸ ಮಾಡಲು ಹೇಳುತ್ತಾರೆ ಎಂದಿದ್ದಾರೆ.

Continue Reading

ಪ್ರಮುಖ ಸುದ್ದಿ

Kailash Vijayvargiya: 30 ವರ್ಷದಲ್ಲಿ ದೇಶದೊಳಗೆ ಅಂತರ್ಯುದ್ಧ, ಹಿಂದೂಗಳು ಬದುಕುವುದೇ ಕಷ್ಟ: ಕೈಲಾಶ್‌ ವಿಜಯ್‌ವರ್ಗೀಯ

ಹಿಂದೂ ಪದವನ್ನು ಬಲಪಡಿಸುವ ಕೆಲಸ ಮಾಡಬೇಕು. ಬ್ರಿಟಿಷರ ಒಡೆದು ಆಳುವ ನೀತಿಯಂತೆ ಕೆಲವರು ಹಿಂದೂ ಸಮಾಜವನ್ನು ಜಾತಿ ಆಧಾರದ ಮೇಲೆ ವಿಭಜಿಸಲು ಬಯಸುತ್ತಿದ್ದಾರೆ ಎಂದು ಕೈಲಾಶ್‌ ವಿಜಯ್‌ವರ್ಗೀಯ (Kailash Vijayvargiya) ಹೇಳಿದ್ದಾರೆ.

VISTARANEWS.COM


on

Kailash Vijayvargiya
Koo

ಇಂದೋರ್: 30 ವರ್ಷಗಳ ನಂತರ ದೇಶದಲ್ಲಿ ಅಂತರ್ಯುದ್ಧ (Civil War) ಪ್ರಾರಂಭವಾಗಲಿದೆ. 30 ವರ್ಷಗಳ ನಂತರ ಹಿಂದೂಗಳು (Hindus) ಈ ರೀತಿ ಬದುಕಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವ (Madhya Pradesh BJP minister) ಕೈಲಾಶ್‌ ವಿಜಯ್‌ವರ್ಗೀಯ (Kailash Vijayvargiya) ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ.

ಇಂದಿನ ಕಾಲದಲ್ಲಿ ಸಾಮಾಜಿಕ ಸಾಮರಸ್ಯ ಅತಿಮುಖ್ಯವಾಗಿದೆ. ನಿನ್ನೆ ನಾನು ನಿವೃತ್ತ ಸೇನಾ ಅಧಿಕಾರಿಯೊಬ್ಬರನ್ನು ಭೇಟಿಯಾಗಿದ್ದೆ. ಅವರು ಸಾಮಾಜಿಕ ಕಾರ್ಯಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. 30 ವರ್ಷಗಳ ನಂತರ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗಲಿದೆ. 30 ವರ್ಷಗಳ ನಂತರ ಹಿಂದೂಗಳು ಈ ರೀತಿ ಬದುಕಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ನಾವು ಈ ವಿಷಯದ ಬಗ್ಗೆ ಚಿಂತನ ಮನನ ಮಾಡಬೇಕು ಎಂದು ವಿಜಯ್‌ವರ್ಗೀಯ ಹೇಳಿದರು.

ಹಿಂದೂ ಪದವನ್ನು ಬಲಪಡಿಸುವ ಕೆಲಸ ಮಾಡಬೇಕು ಎಂದವರು ನುಡಿದರು. ʼಸಾಮಾಜಿಕ ಸಾಮರಸ್ಯ ರಕ್ಷಾಬಂಧನ ಉತ್ಸವ’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಬ್ರಿಟಿಷರ ಒಡೆದು ಆಳುವ ನೀತಿಯಂತೆ ಕೆಲವರು ಹಿಂದೂ ಸಮಾಜವನ್ನು ಜಾತಿ ಆಧಾರದ ಮೇಲೆ ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳಿದರು.

ವಿಜಯವರ್ಗೀಯ ಅವರ ಹೇಳಿಕೆ ಬೇಜವಾಬ್ದಾರಿತನದ್ದಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಮಧ್ಯಪ್ರದೇಶ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಅವರು ವಿಜಯವರ್ಗೀಯ ಅವರ ಹೇಳಿಕೆ ಸಂಪೂರ್ಣ ಬೇಜವಾಬ್ದಾರಿಯಿಂದ ಕೂಡಿದೆ ಎಂದು ಟೀಕಿಸಿದ್ದಾರೆ. ಈ ಹೇಳಿಕೆಯು ದೇಶದಲ್ಲಿ ಅಸ್ಥಿರತೆ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ಶಾಂತಿ ಮತ್ತು ಸಹೋದರತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದಕ್ಕೆ ವಿಜಯವರ್ಗೀಯ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. 30 ವರ್ಷಗಳ ನಂತರ ದೇಶದಲ್ಲಿ ಅಂತರ್ಯುದ್ಧದ ಭೀತಿಯನ್ನು ಯಾವ ನಿವೃತ್ತ ಸೇನಾಧಿಕಾರಿ ವ್ಯಕ್ತಪಡಿಸಿದ್ದಾರೆ ಮತ್ತು ಅದಕ್ಕೆ ಆಧಾರವೇನು ಎಂಬುದನ್ನು ವಿಜಯವರ್ಗೀಯ ಅವರು ಸ್ಪಷ್ಟಪಡಿಸಬೇಕು ಎಂದು ಅವರು ಹೇಳಿದರು.

ಒತ್ತಡಕ್ಕೆ ಒಳಗಾಗಬೇಡಿ; ಭಾರತದ ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ಇದೇ ತಿಂಗಳು ಆಗಸ್ಟ್​ 28ರಿಂದ ಪ್ಯಾರಿಸ್​ನಲ್ಲಿ(Paralympic 2024) ಆರಂಭಗೊಳ್ಳಲಿರುವ ಪ್ಯಾರಾಲಿಂಪಿಕ್ಸ್(Paris Paralympics)​ ಕ್ರೀಡಾಕೂಟದಲ್ಲಿ ಈ ಬಾರಿ ಭಾರತದಿಂದ ದಾಖಲೆಯ 84 ಮಂದಿ ಪ್ಯಾರಾ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಕಳೆದ ಶುಕ್ರವಾರ ಭಾರತ ಪ್ಯಾರಾಲಿಂಪಿಕ್‌ ಸಮಿತಿ (ಪಿಸಿಐ) ಮತ್ತು ಭಾರತ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಎಲ್ಲ ಕ್ರೀಡಾಪಟುಗಳಿಗೆ ಅದ್ಧೂರಿ ಬೀಳ್ಕೊಡುಗೆ ನೀಡಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಭಾರತದ ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ. ಜತೆಗೆ ಆತ್ಮ ವಿಶ್ವಾಸ ತುಂಬಿದ್ದಾರೆ.

ಸೋಮವಾರ ರಾತ್ರಿ ನಡೆದಿದ್ದ ವರ್ಚುವಲ್‌ ಸಂವಾದದಲ್ಲಿ ಮೋದಿ ಅವರು ಅಥ್ಲೀಟ್​ಗಳ ಜತೆ ಸಂವಾದ ನಡೆಸಿದ್ದರು. ಇದೇ ವೇಳೆ ಹಲವು ಕ್ರೀಡಾಪಟುಗಳು ತಮ್ಮ ತಯಾರಿಯ ಬಗ್ಗೆ ಮತ್ತು ಈ ಬಾರಿ ಪದಕ ಗೆಲ್ಲುವ ವಿಶ್ವಾಸವನ್ನು ಮೋದಿ ಜತೆ ಹಂಚಿಕೊಂಡರು. ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಜಾವೆಲಿನ್‌ ತ್ರೋವರ್‌ ಸುಮಿತ್‌ ಅಂಟಿಲ್‌ ಈ ಬಾರಿಯೂ ಚಿನ್ನ ಗೆಲ್ಲುವುದಾಗಿ ಮೋದಿಗೆ ಭರವಸೆ ನೀಡಿದರು. ಸುಮಿತ್‌ ಅಂಟಿಲ್‌ ಪ್ಯಾರಾಲಿಂಪಿಕ್ಸ್‌ ಉದ್ಘಾಟನ ಸಮಾರಂಭದಲ್ಲಿ ಶಾಟ್‌ಪುಟರ್‌ ಭಾಗ್ಯಶ್ರೀ ಜಾಧವ್‌ ಅವರೊಂದಿಗೆ ಭಾರತದ ಧ್ವಜಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Continue Reading

ವೈರಲ್ ನ್ಯೂಸ್

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

Road Rage Incident: ಬೆಂಗಳೂರು ಹೊರವಲಯದ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ವ್ಯಕ್ತಿಯ ದೌರ್ಜನ್ಯ ಕಂಡು ಕಾರೊಳಗೆ ಇದ್ದ ಮಹಿಳೆ ಮತ್ತು ಮಗು ಕಿರುಚಾಡಿದ್ದಾರೆ. ಅಲ್ಲದೇ ಬೈಕ್ ಸವಾರನ ಗುಂಡಾ ವರ್ತನೆ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

VISTARANEWS.COM


on

Koo

ಬೆಂಗಳೂರು: ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಹೋಗುವಾಗ ಸೈಡ್ ಬಿಡಲಿಲ್ಲ ಎಂದು ಗಲಾಟೆ, ಹಲ್ಲೆ, ಕಿರಿಕ್ ಸೇರಿ ಒಂದಲ್ಲಾ ಒಂದು ಪ್ರಕರಣ ನಡೆಯುತ್ತಲೇ ಇರುತ್ತವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಪುಂಡರ ಕಾಟ ಮಾತ್ರ ತಪ್ಪುತ್ತಿಲ್ಲ. ಈ ನಡುವೆ ನಗರ ಹೊರವಲಯದ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಇಂತಹುದೇ ಘಟನೆಯೊಂದು (Road Rage Incident) ನಡೆದಿದ್ದು, ಕಾರು ತಡೆದು ಯುವಕನೊಬ್ಬ ಪುಂಡಾಟ ಮೆರೆದಿರುವ ಘಟನೆ ನಡೆದಿದೆ.

ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಬಲ ತಿರುವು ಪಡೆಯಲು ಇಂಡಿಕೇಟರ್ ಬಳಸದೆ ಕಾರು ಚಾಲಕ ಏಕಾಏಕಿ ನುಗ್ಗಿಸಿದ್ದ. ಇದರಿಂದ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಅನಿಲ್ ರೆಡ್ಡಿ ಎಂಬಾತ ರಸ್ತೆಗೆ ಬಿದ್ದಿದ್ದಾನೆ. ಹೀಗಾಗಿ ಕೋಪಗೊಂಡ ಆತ, ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ್ದಾನೆ.

ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಕಾರು ತಡೆದು ಯುವಕನೋರ್ವ ಪುಂಡಾಟ ಮೆರೆದಿರುವ ಘಟನೆ ನಡೆದಿದೆ. ಕಾರಿನಲ್ಲಿ ಮಗು ಮತ್ತು ಮಹಿಳೆ ಇದ್ದರೂ ಯೋಚಿಸದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಬೈಕ್‌ ಸವಾರ, ಕಲ್ಲು ಹಿಡಿದು ಕಾರಿನಲ್ಲಿದ್ದವರಿಗೆ ಬೆದರಿಸಿ ವೈಪರ್ ಕಿತ್ತು ಗ್ಲಾಸ್ ಒಡೆದಿದ್ದಾನೆ. ಈ ಸನ್ನಿವೇಶವನ್ನು ಕಾರಿನಲ್ಲಿದ್ದ ದಂಪತಿ ವಿಡಿಯೊ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಬೆಳ್ಳಂದೂರು ಪೊಲೀಸರು ಎಫ್ಐಆರ್ ದಾಖಲಿಸಿ, ಕಾರಿನ ಗ್ಲಾಸ್ ಒಡೆದು ಹಾಕಿದ್ದ ಆರೋಪಿ ಅನಿಲ್ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ.

ಇಂಡಿಕೇಟರ್‌ ಹಾಕದೆ ಕಾರು ಚಾಲಕ ಯಡವಟ್ಟು

ಘಟನೆ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಆರೋಪಿ ಅನಿಲ್ ರೆಡ್ಡಿ ಎಂಬಾತನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಬಲ ತಿರುವ ಪಡೆಯಲು ಇಂಡಿಕೇಟರ್ ಬಳಸದೆ ಏಕಾಏಕಿ ನುಗ್ಗಿದ್ದ. ಈ ವೇಳೆ ಬೈಕ್ ಸವಾರನಿಗೆ ಕಾರ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದ. ಸಾವರಿಸಿಕೊಂಡು ಮೇಲೆ ಎದ್ದ ಅನಿಲ್ ರೆಡ್ಡಿ ಕಾರಿನಿಂದ ಕೆಳಗೆಇಳಿಯುವಂತೆ ಚಾಲಕನಿಗೆ ಹೇಳಿದ್ದ. ಆದರೆ ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಕಲ್ಲಿನಿಂದ ಗ್ಲಾಸ್ ಪುಡಿಗಟ್ಟಿದ್ದ. ಘಟನೆ ಸಂಬಂಧ ಕಾರು ಚಾಲಕನಿಂದ ಬೆಳ್ಳಂದೂರು ಠಾಣೆಗೆ ದೂರು ದೂರಿನ ಹಿನ್ನಲೆ ಕೇಸ್ ದಾಖಲಾಗಿತ್ತು. ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಅನಿಲ್ ರೆಡ್ಡಿ ಗ್ಲಾಸ್ ಪುಡಿಗಟ್ಟಿದ್ದ ಎಂಬುದು ವಿಚಾರಣೆ ವೇಳೆ ಬಯಲಾಗಿದೆ.

Continue Reading

ಕ್ರೀಡೆ

Manu Bhaker Dance: ‘ಕಾಲಾ ಚಷ್ಮಾ’ ಹಾಡಿಗೆ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಒಲಿಂಪಿಯನ್​ ಮನು ಭಾಕರ್​

Manu Bhaker Dance: ತಮಿಳುನಾಡಿನ ವೇಲಮ್ಮಾಳ್ ನೆಕ್ಸಸ್ ಗ್ರೂಪ್​ನ ಶಾಲೆಯಲ್ಲಿ ನಡೆದ ಕ್ರೀಡಾ ಸ್ಕಾಲರ್‌ಷಿಪ್‌ ವಿತರಣಾ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಮನು ಭಾಕರ್ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Manu Bhaker Dance
Koo

ಚೆನ್ನೈ: ಪ್ಯಾರಿಸ್​ ಒಲಿಂಪಿಕ್ಸ್ ಶೂಟಿಂಗ್​ನಲ್ಲಿ ಅವಳಿ ಪದಕ ಗೆದ್ದ ಮನು ಭಾಕರ್​ ಅವರು ತಮ್ಮ ನೆಚ್ಚಿನ ಭರತನಾಟ್ಯ(Manu Bhaker Bharatnatyam) ಕಲಿಕೆಗಾಗಿ ತಮಿಳುನಾಡಿನಲ್ಲಿದ್ದಾರೆ. ಇಲ್ಲಿನ ಸ್ಥಳೀಯ ಶಾಲಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಮನು ಭಾಕರ್(Manu Bhaker Dance)​ ವಿದ್ಯಾರ್ಥಿಗಳ ಜತೆಗೆ ವೇದಿಕೆಯಲ್ಲಿ ನೃತ್ಯ ಮಾಡಿದ್ದಾರೆ. ಸದ್ಯ ಈ ವಿಡಿಯೊ ವೈರಲ್(viral video)​ ಆಗಿದೆ.

ತಮಿಳುನಾಡಿನ ವೇಲಮ್ಮಾಳ್ ನೆಕ್ಸಸ್ ಗ್ರೂಪ್​ನ ಶಾಲೆಯಲ್ಲಿ ನಡೆದ ಕ್ರೀಡಾ ಸ್ಕಾಲರ್‌ಷಿಪ್‌ ವಿತರಣಾ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಮನು ಭಾಕರ್​ ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಕುರಿತಾದ ಸಂವಾದ ನಡೆಸಿದರು. ಬಳಿಕ ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದರು.

ತಮಿಳುನಾಡಿನ ಶಿಕ್ಷಕರೊಬ್ಬರ ಸಹಾಯದಿಂದ ಆನ್​ಲೈನ್​ನಲ್ಲಿಯೇ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದ 22 ವರ್ಷದ ಮನು ಭಾಕರ್​ ಇದೀಗ ಶೂಟಿಂಗ್​ನಿಂದ ಮೂರು ತಿಂಗಳ ವಿಶ್ರಾಂತಿ ಪಡೆದು ನೇರವಾಗಿ ತರಗತಿಗೆ ಹಾಜರಾಗಿ ನೃತ್ಯ ಕಲಿಯಲಿದ್ದಾರೆ. ಜತೆಗೆ ವಯೋಲಿನ್​ ಕಲಿಕೆ ಕೂಡ ಮಾಡಲಿದ್ದಾರೆ. ಇದಾದ ಬಳಿಕ ಕುದುರೆ ಸವಾರಿ ಮಾರ್ಷಿಯಲ್​ ಆರ್ಟ್ಸ್​ ಮತ್ತು ಸ್ಕೇಟಿಂಗ್ ಅಭ್ಯಾಸ ಕೂಡ ಮಾಡಲಿದ್ದೇನೆ ಎಂದು ಮನು ಅವರು ಹೇಳಿದ್ದರು.​

ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು.

ಇದನ್ನೂ ಓದಿ Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು.

ಭಾರತ ತಂಡದ ಸ್ಟಾರ್​ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ. ಬ್ಯಾಡ್ಮಿಂಟನ್​ ಆಟಗಾರ್ತಿ ಪಿ,ವಿ ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್4 mins ago

Viral Video: ಥೇಟ್‌ ನಮ್ಮದೇ ಕೈಬರಹದಂತೆ ಬರೆಯುತ್ತದೆ ಈ ಯಂತ್ರ!

ನನ್ನ ದೇಶ ನನ್ನ ದನಿ ಅಂಕಣ bangladesh hindus
ಅಂಕಣ5 mins ago

ನನ್ನ ದೇಶ ನನ್ನ ದನಿ ಅಂಕಣ: ಇಂದು ಬಾಂಗ್ಲಾದೇಶದ ಹಿಂದೂ ಉಳಿದರೆ, ನಾಳೆ ಹಿಂದೂ-ಭಾರತ ಉಳಿದೀತು!

Oral health
ಆರೋಗ್ಯ11 mins ago

Oral health: ಹಲ್ಲುಗಳನ್ನು ಬೇಕಾಬಿಟ್ಟಿಯಾಗಿ ಉಜ್ಜಬೇಡಿ! ಬ್ರಷ್‌ ಮಾಡುವಾಗ ಈ ಸಂಗತಿ ಮರೆಯಬೇಡಿ!

Kannada New Movie
ಕರ್ನಾಟಕ14 mins ago

Kannada New Movie: ಅವಿನಾಶ್ ವಿಜಯಕುಮಾರ್ ನಿರ್ದೇಶನದ “ಮೈ ಹೀರೋ” ಚಿತ್ರ ಆ.30ಕ್ಕೆ ರಿಲೀಸ್‌

vinod-kambli-1 ರಾಜಮಾರ್ಗ ಅಂಕಣ
ಅಂಕಣ27 mins ago

ರಾಜಮಾರ್ಗ ಅಂಕಣ: ಹೇಗಿದ್ದವನು ಹೇಗಾಗಿ ಹೋದ ಕ್ರಿಕೆಟರ್ ವಿನೋದ್ ಕಾಂಬ್ಳಿ?

karnataka Weather Forecast
ಮಳೆ2 hours ago

Karnataka Weather : 23 ಜಿಲ್ಲೆಗಳಲ್ಲಿ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ

Brahmashri Narayanguru Jayanti
ಕರ್ನಾಟಕ7 hours ago

Brahmashri Narayanaguru Jayanti: ಸಮ ಸಮಾಜದ ನಿರ್ಮಾಣ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

puttur stabbing case
ಕ್ರೈಂ8 hours ago

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Cincinnati Open
ಕ್ರೀಡೆ8 hours ago

ATP Cincinnati Open: ಚೊಚ್ಚಲ ಪ್ರಶಸ್ತಿ ಗೆದ್ದ ಜಾನಿಕ್‌ ಸಿನ್ನರ್‌, ಅರಿನಾ ಸಬಲೆಂಕಾ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌