Viral News : ಮಗನ ಹೆಂಡತಿಯನ್ನೇ ಕದ್ದುಮುಚ್ಚಿ ಮದುವೆಯಾದ 70ರ ಮುದುಕ! Vistara News
Connect with us

ವೈರಲ್ ನ್ಯೂಸ್

Viral News : ಮಗನ ಹೆಂಡತಿಯನ್ನೇ ಕದ್ದುಮುಚ್ಚಿ ಮದುವೆಯಾದ 70ರ ಮುದುಕ!

70 ವರ್ಷದ ವ್ಯಕ್ತಿಯೊಬ್ಬ ತನ್ನ ಮಗನ ಹೆಂಡತಿಯನ್ನೇ ಮದುವೆಯಾಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ.

VISTARANEWS.COM


on

Koo

ಲಖನೌ: 20-30 ವರ್ಷಗಳ ವಯಸ್ಸಿನ ಅಂತರವಿರುವವರೂ ಮದುವೆಯಾಗುವುದು ಆಗಾಗ (Viral News) ಸುದ್ದಿಯಾಗುತ್ತಿರುತ್ತದೆ. ಇದೀಗ ಉತ್ತರ ಪ್ರದೇಶದಲ್ಲಿ 70 ವರ್ಷದ ವ್ಯಕ್ತಿಯೊಬ್ಬ 28 ವರ್ಷದ ಮಹಿಳೆಯನ್ನು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಅಂದ ಹಾಗೆ ಆಕೆ ಬೇರೆ ಯಾರೋ ಅಲ್ಲ, ಆ ವ್ಯಕ್ತಿಯ ಮಗನ ಹೆಂಡತಿಯೇ!

ಗೋರಖ್‌ಪುರ ಜಿಲ್ಲೆಯ ಛಪಿಯಾ ಉಮರೊ ಗ್ರಾಮದಲ್ಲಿ ಇಂತಹ ಘಟನೆ ವರದಿಯಾಗಿದೆ. ಬರ್ಹಲ್‌ಗಂಜ್ ಪೋಲೀಸ್ ಠಾಣೆಯಲ್ಲಿ ಚೌಕಿದಾರ ಆಗಿ ಕೆಲಸ ಮಾಡುವ ಕೈಲಾಶ್‌ ಯಾದವ್‌ ಪತ್ನಿ 12 ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದಾರೆ. ಆತನಿಗೆ ಮೂವರು ಗಂಡು ಮಕ್ಕಳಿದ್ದು, ಮೂವರಿಗೂ ಮದುವೆಯಾಗಿದೆ. ಕೈಲಾಶ್‌ನ ಮೂರನೇ ಮಗ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: Viral Video: ಉಜ್ಜಯಿನಿ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಇ ರಿಕ್ಷಾ ಸೀಟ್​​ಗಾಗಿ ಬಡಿದಾಡಿಕೊಂಡ ಭಕ್ತರು
ಕೈಲಾಶ್‌ನ ಮಗ ಸತ್ತಾಗಿನಿಂದ ಆತನ ಹೆಂಡತಿ ಒಬ್ಬಂಟಿಯಾಗಿ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಇತ್ತೀಚೆಗೆ ಕೈಲಾಶ್‌ ಆಕೆಯನ್ನು ಮದುವೆಯಾಗಿದ್ದು, ಇಬ್ಬರೂ ಒಂದೇ ಮನೆಯಲ್ಲಿ ಸಂಸಾರ ನಡೆಸಿದ್ದಾರೆ. ಅದರಲ್ಲೂ ಊರಿನ ಯಾರೊಬ್ಬರಿಗೂ ತಿಳಿಯದಂತೆ ಕದ್ದುಮುಚ್ಚಿ ವಿವಾಹವಾಗಿದ್ದಾರೆ. ಮದುವೆಯಾದ ಕೆಲ ದಿನಗಳಲ್ಲೇ ಆ ಮಹಿಳೆ ಕೈಲಾಶ್‌ನಿಂದ ಬೇರಾಗಿದ್ದು, ತೀರಿಕೊಂಡಿರುವ ತನ್ನ ಮೊದಲನೇ ಗಂಡನ ಮನೆಗೆ ತೆರಳಿ ಅಲ್ಲಿಯೇ ವಾಸ ಮಾಡುತ್ತಿದ್ದಾಳೆ. ಈ ಜೋಡಿಯ ಗೌಪ್ಯ ವಿವಾಹದ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ ಆಗಿದೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ತಂತ್ರಜ್ಞಾನ

Viral News : ಚಾಟ್‌ಜಿಪಿಟಿ ಬಗ್ಗೆ ಪಾಠ ಮಾಡಿ ಮೂರೇ ತಿಂಗಳಲ್ಲಿ 28 ಲಕ್ಷ ರೂ. ದುಡಿದ!

ಜಾಟ್‌ಜಿಪಿಟಿ ಬಗ್ಗೆ ಅರ್ಥ ಮಾಡಿಸುವುದಕ್ಕೆ, ಅದನ್ನು ಕಲಿಸುವುದಕ್ಕೆಂದೇ ಯವಕನೊಬ್ಬ ಕೋರ್ಸ್‌ ನಡೆಸುತ್ತಿದ್ದಾನೆ. ಅದರಿಂದ ಆತನಿಗೆ ಮೂರೇ ತಿಂಗಳಲ್ಲಿ 28 ಲಕ್ಷ ರೂ. ಲಾಭ ಬಂದಿರುವುದಾಗಿಯೂ (Viral News) ವರದಿಯಾಗಿದೆ.

VISTARANEWS.COM


on

Edited by

ChatGPT chatbot
Koo

ಬೆಂಗಳೂರು: ಚಾಟ್‌ಜಿಪಿಟಿ (ChatGPT) ಬಗ್ಗೆ ಇತ್ತೀಚಿನ ದಿನಗಳಲ್ಲಿ ನೀವು ಕೇಳಿರುತ್ತೀರಿ. ಈ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸಿ(ಎಐ) ಬಗ್ಗೆ ಎಲ್ಲೆಲ್ಲೂ ಸುದ್ದಿಯಾಗುತ್ತಿದೆ. ತಾಂತ್ರಿಕ ಕ್ಷೇತ್ರದಲ್ಲಿ ಸಮಸ್ಯೆ ಉಂಟು ಮಾಡಬಹುದು ಎನ್ನಲಾಗಿದ್ದ ಈ ಎಐ ಇದೀಗ ಯುವಕನೊಬ್ಬನಿಗೆ ಬದುಕನ್ನೂ ಕಟ್ಟಿಕೊಟ್ಟಿದೆ. ಈ ಎಐ ಅನ್ನೇ ನಂಬಿಕೊಂಡು ಯುವಕನೊಬ್ಬ ಕೇವಲ ಮೂರು ತಿಂಗಳುಗಳಲ್ಲಿ ಬರೋಬ್ಬರಿ 28 ಲಕ್ಷ ರೂ. ಲಾಭ (Viral News) ಗಳಿಸಿಕೊಂಡಿದ್ದಾನೆ.

ಇದನ್ನೂ ಓದಿ: Viral News: ಮಥುರಾ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತ ಕುಳಿತಿದ್ದವನ ಕೊಲೆ
ಲ್ಯಾನ್ಸ್‌ ಜಂಕ್(23) ಹೆಸರಿನ ವ್ಯಕ್ತಿ ಚಾಟ್‌ಜಿಪಿಟಿಯನ್ನೇ ತನ್ನ ಆದಾಯ ಮೂಲವಾಗಿಸಿಕೊಂಡಿದ್ದಾರೆ. ಚಾಟ್‌ಜಿಪಿಟಿಯನ್ನು ಹಲವರು ಸರಾಗವಾಗಿ ಬಳಕೆ ಮಾಡುತ್ತಿದ್ದರೆ, ಇನ್ನೂ ಹಲವರು ಬಳಸಲಾಗದೆ ಒದ್ದಾಡುತ್ತಿದ್ದದ್ದನ್ನು ಲ್ಯಾನ್ಸ್‌ ಗಮನಿಸಿದ್ದಾರೆ. ಅದಕ್ಕಾಗಿ ಜನರಿಗೆ ಚಾಟ್‌ಜಿಪಿಟಿ ಬಗ್ಗೆ ತಿಳಿಸುವುದಕ್ಕೆಂದೇ ಉಡೆಮಿ ಆಪ್‌ನಲ್ಲಿ ಕೋರ್ಸ್‌ ಒಂದನ್ನು ಆರಂಭಿಸಿದ್ದಾರೆ. “ಚಾಟ್‌ಜಿಪಿಟಿ ಮಾಸ್ಟರ್‌ಕ್ಲಾಸ್‌: ಎ ಕಂಪ್ಲೀಟ್‌ ಚಾಟ್‌ಜಿಪಿಟಿ ಗೈಡ್‌ ಫಾರ್‌ ಬಿಗಿನರ್ಸ್‌” ಹೆಸರಿನಲ್ಲಿ ಕೋರ್ಸ್‌ ಆರಂಭಿಸಿದ್ದು, ಕೋರ್ಸ್‌ ಆರಂಭವಾದ ಕೆಲವೇ ದಿನಗಳಲ್ಲಿ ಬರೋಬ್ಬರಿ 15,000 ಮಂದಿ ಕೋರ್ಸ್‌ ಸೇರಿಕೊಂಡಿದ್ದಾರೆ. ಅದರಿಂದಾಗಿ ಒಟ್ಟಾರೆಯಾಗಿ 35,000 ಡಾಲರ್‌ ಅಂದರೆ 28 ಲಕ್ಷ ರೂ. ಲಾಭವನ್ನೂ ಗಳಿಸಿದ್ದಾರೆ.

“ಜನರು ಚಾಟ್‌ಜಿಪಿಟಿ ಬಗ್ಗೆ ಭಯ ಪಟ್ಟಿರುವುದು ನನಗೆ ಗೊತ್ತಾಯಿತು. ಆ ಭಯವನ್ನು ಹೋಗಲಾಡಿಸುವ ಪ್ರಯತ್ನವನ್ನು ನಾನು ಮಾಡಿದೆ. ನಾನೇನು ಚಾಟ್‌ಜಿಪಿಟಿ ಬಗ್ಗೆ ಬೇರೆ ಕಡೆ ತರಬೇತಿ ಪಡೆದಿಲ್ಲ. ನಾನಾಗೇ ನಾನು ಪ್ರಯತ್ನಗಳನ್ನು ಮಾಡಿ ಅನುಭವ ಪಡೆದೆ” ಎಂದು ಹೇಳಿದ್ದಾರೆ ಲ್ಯಾನ್ಸ್‌.

ಇದನ್ನೂ ಓದಿ: Viral Video: ಹುಡುಗನ ಕೈಯಲ್ಲಿದ್ದ ತಿಂಡಿ ತಿನ್ನಲು ಬಾಯಿ ಹಾಕಿದ ನಾಯಿ; ನಾಲಿಗೆಗೆ ಸಿಕ್ಕ ಟಿವಿ ಪರದೆ ನೆಕ್ಕಿ, ವಾಪಸ್ ಬಂತು!
ಜಂಕ್‌ ಒಟ್ಟಾರೆಯಾಗಿ ಏಳು ಗಂಟೆಗಳ ಕೋರ್ಸ್‌ ಅನ್ನು ಕೊಡುತ್ತಿದ್ದಾರೆ. ಅದಕ್ಕೆಂದೇ ಒಟ್ಟು 50 ತಜ್ಞರಿಂದ ವಿಡಿಯೊಗಳನ್ನು ಮಾಡಿಸಿಕೊಂಡಿದ್ದಾರೆ. ಆ ವಿಡಿಯೊಗಳನ್ನು ಮಾಡುವುದಕ್ಕೆಂದೇ ಜಂಕ್‌ ಅವರಿಗೆ ಮೂರು ವಾರಗಳು ತಗುಲಿವೆ. ಒಬ್ಬ ವಿದ್ಯಾರ್ಥಿಗೆ 20 ಡಾಲರ್‌ನಂತೆ ಶುಲ್ಕ ವಿಧಿಸಲಾಗುತ್ತಿದೆ. ಅಮೆರಿಕ, ಭಾರತ, ಜಪಾನ್‌, ಕೆನಡಾ ಸೇರಿ ಹಲವಾರು ರಾಷ್ಟ್ರಗಳಿಂದ ವಿದ್ಯಾರ್ಥಿಗಳು ಈ ಕೋರ್ಸ್‌ ಸೇರಿಕೊಂಡಿರುವುದಾಗಿ ಹೇಳಲಾಗಿದೆ.

Continue Reading

ಪ್ರಮುಖ ಸುದ್ದಿ

Chai Chatbot: ಬೆಲ್ಜಿಯಂನಲ್ಲಿ ವ್ಯಕ್ತಿ ಆತ್ಮಹತ್ಯೆ; ಚಾಟ್‌ಜಿಪಿಟಿ ಮಾದರಿಯ ಚಾಟ್‌ಬಾಟ್‌ಗೆ ಅಡಿಕ್ಟ್‌ ಆಗಿದ್ದೇ ಕಾರಣ?

Chai Chatbot: ತಂತ್ರಜ್ಞಾನದ ಬಳಕೆ ಇತಿಮಿತಿಯಲ್ಲಿದ್ದಷ್ಟು, ಎಷ್ಟು ಬೇಕೋ ಅಷ್ಟೇ ಬಳಕೆ ಮಾಡಿದಷ್ಟು ಉತ್ತಮ ಎಂಬ ಮಾತಿಗೆ ಪುಷ್ಟಿ ಬಂದಿದೆ. ಇದಕ್ಕೆ ನಿದರ್ಶನ ಎಂಬಂತೆ, ಬೆಲ್ಜಿಯಂನಲ್ಲಿ ವ್ಯಕ್ತಿಯೊಬ್ಬರು ಅತಿಯಾಗಿ ಚಾಟ್‌ಜಿಪಿಟಿ ಮಾದರಿಯ ಚಾಟ್‌ಬಾಟ್‌ ಬಳಸಿ, ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Edited by

Man kills self after chatting with ChatGPT like chatbot about climate change
Koo

ಬ್ರುಸ್ಸೆಲ್ಸ್:‌ ಭಾರತ ಸೇರಿ ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಚಾಟ್‌ಬಾಟ್‌ ಆದ ಚಾಟ್‌ಜಿಪಿಟಿಯದ್ದೇ ಸುದ್ದಿಯಾಗುತ್ತಿದೆ. ಚಾಟ್‌ಜಿಪಿಟಿ ಚಾಟ್‌ಬಾಟ್‌ನಿಂದ ಜನರ ಉದ್ಯೋಗಕ್ಕೆ ಸಂಕಷ್ಟ ಎದುರಾಗಲಿದೆ. ಇದೇ ಜಗತ್ತನ್ನು ಆಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗೆಯೇ, ಮೆಟಾ, ಗೂಗಲ್‌, ಟ್ವಿಟರ್‌ನಂತಹ ದಿಗ್ಗಜ ಸಂಸ್ಥೆಗಳು ಕೂಡ ಚಾಟ್‌ಬಾಟ್‌ ಅಭಿವೃದ್ಧಿಪಡಿಸುತ್ತಿವೆ. ಆದರೆ, ಬೆಲ್ಜಿಯಂನಲ್ಲಿ ಇದೇ ಚಾಟ್‌ಜಿಪಿಟಿ ಮಾದರಿಯ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಚಾಟ್‌ಬಾಟ್‌ ಆದ ಚೈ (Chai Chatbot)ಗೆ ಅಡಿಕ್ಟ್‌ ಆಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಪತಿಯ ಆತ್ಮಹತ್ಯೆಗೆ ಚೈ ಚಾಟ್‌ಬಾಟ್‌ ಕಾರಣ ಎಂಬುದಾಗಿ ಆರೋಪ ಮಾಡಿದ್ದಾರೆ.

ಚೈ ಎಂಬ App ಡೌನ್‌ಲೋಡ್‌ ಮಾಡಿಕೊಂಡ ನನ್ನ ಪತಿಯು ಆರು ವಾರಗಳಿಂದ ಅದನ್ನೇ ಬಳಸುತ್ತಿದ್ದರು. ಜಾಗತಿಕ ಹವಾಮಾನ ಬದಲಾವಣೆ, ಅದರಿಂದಾಗುವ ಪರಿಣಾಮ, ಮನುಕುಲಕ್ಕೆ ಎದುರಾಗುವ ಸಮಸ್ಯೆ ಕುರಿತು ಅವರಿಗೆ ಭೀತಿಯಾಗಿದೆ. ಇದೇ ಭಯದಿಂದ ಅವರು ಮಾನಸಿಕವಾಗಿ ಕುಗ್ಗಿ, ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅವರು ಆರು ವಾರದಿಂದ ನಿರಂತರವಾಗಿ ಚೈ ಚಾಟ್‌ಬಾಟ್‌ಅನ್ನು ಬಳಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ. ಆದಾಗ್ಯೂ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಿರೆ ಎಂಬುದಾಗಿ ಹಾಗೂ ಆತನ ಪತ್ನಿಯ ಹೆಸರು ಕ್ಲೈರ್‌ ಎಂಬುದಾಗಿ ತಿಳಿದುಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪತಿಗೆ ಭೀತಿ ಇತ್ತು ಎಂದ ಮಹಿಳೆ

“ಇತ್ತೀಚೆಗೆ ನಾನು ನನ್ನ ಪತಿಯ ಜತೆ ಮಾತನಾಡಿದಾಗಲೆಲ್ಲ ಅವರು ಜಾಗತಿಕ ತಾಪಮಾನದ ಕುರಿತು ಮಾತನಾಡುತ್ತಿದ್ದರು. ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಬೀರುವ ಪರಿಣಾಮಗಳ ಬಗ್ಗೆ ಅವರು ಆತಂಕಕ್ಕೀಡಾಗಿದ್ದರು. ತಾಪಮಾನದ ಏರಿಕೆ ಕುರಿತು ಮನುಷ್ಯರು ಕಂಡುಕೊಳ್ಳಬಹುದಾದ ಪರಿಹಾರಗಳು, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹೇಳುತ್ತಿದ್ದರು. ಹಾಗೊಂದು ವೇಳೆ, ಪರಿಹಾರ ಕಂಡುಕೊಳ್ಳದಿದ್ದರೆ ಏನೆಲ್ಲ ಆಗಬಹುದು ಎಂದು App ಮೂಲಕ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಇದೇ ರೀತಿ ಅವರು ಚಾಟ್‌ಬಾಟ್‌ನಲ್ಲಿಯೇ ತಲ್ಲೀನರಾಗಿ, ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

ಆದಾಗ್ಯೂ, ಘಟನೆ ಕುರಿತು ಚಾಟ್‌ಬಾಟ್‌ ಸಂಸ್ಥೆ ಚೈ ಪ್ರತಿಕ್ರಿಯಿಸಿದ್ದು, “ಬಳಕೆದಾರರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲಾಗುತ್ತದೆ. ಆದರೆ, ಆತ್ಮಹತ್ಯೆಯಂತಹ ಸೂಕ್ಷ್ಮ ಪ್ರಕರಣಗಳ ಕುರಿತು ನಾವು ಎಚ್ಚರಿಕೆ ನೀಡುತ್ತೇವೆ” ಎಂದು ಸ್ಪಷ್ಟನೆ ನೀಡಿದೆ. ಆದಾಗ್ಯೂ, ಚೈ ರಿಸರ್ಚ್‌ನ ಚಾಟ್‌ಬಾಟ್‌ಅನ್ನ ಜಗತ್ತಿನಾದ್ಯಂತ 50 ಲಕ್ಷ ಜನ ಬಳಸುತ್ತಿದ್ದಾರೆ. ಅದರಲ್ಲೂ ಭಾರತದಲ್ಲಿ ಚಾಟ್‌ಜಿಪಿಟಿ ಚಾಟ್‌ಬಾಟ್‌ ಖ್ಯಾತಿ ಗಳಿಸುತ್ತಿದ್ದು, ಲೇಖನ, ಪತ್ರ, ರಾಜೀನಾಮೆ ಪತ್ರ ಬರೆಯುವುದು, ಕೋಡ್‌ ರಚಿಸುವುದು ಸೇರಿ ಹಲವು ರೀತಿಯಲ್ಲಿ ಬಳಕೆಯಾಗುತ್ತಿದೆ. ಅಷ್ಟೇ ಅಲ್ಲ, ಇದು ಕಂಪನಿಗಳಿಗೆ ಅನುಕೂಲ ಆಗುತ್ತಿದೆ. ಕಿರಿಯ ಉದ್ಯೋಗಿಗಳು ಚಾಟ್‌ಜಿಪಿಟಿಯಿಂದ ಕೌಶಲ ಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಕ್ಯಾಪಿಟಲ್‌ ಮೈಂಡ್‌ ಎಂಬ ಕಂಪನಿಯು ಉದ್ಯೋಗಿಗಳಿಗೆ ಚಾಟ್‌ಜಿಪಿಟಿಯ ನೋಂದಣಿ ಶುಲ್ಕ ನೀಡಿದೆ.

Continue Reading

ವೈರಲ್ ನ್ಯೂಸ್

Viral Video: ಹುಡುಗನ ಕೈಯಲ್ಲಿದ್ದ ತಿಂಡಿ ತಿನ್ನಲು ಬಾಯಿ ಹಾಕಿದ ನಾಯಿ; ನಾಲಿಗೆಗೆ ಸಿಕ್ಕ ಟಿವಿ ಪರದೆ ನೆಕ್ಕಿ, ವಾಪಸ್ ಬಂತು!

ವಿಡಿಯೊದಲ್ಲೋ, ಫೋಟೋದಲ್ಲೋ ನಾವು ವಿವಿಧ ಬಗೆಯ ಖಾದ್ಯಗಳನ್ನು ನೋಡಿದರೆ ಸಾಕು ನಮ್ಮ ಬಾಯಲ್ಲೂ ನೀರೂರುತ್ತದೆ. ನಮಗೂ ತಿಂದುಬಿಡಬೇಕು ಎನ್ನಿಸುತ್ತದೆ. ಹಾಗೇ, ಈ ನಾಯಿಗೂ ಅನ್ನಿಸಿತು.

VISTARANEWS.COM


on

Edited by

Dog Tries to eat Food Shown On TV Screen Viral Video
Koo

ಸಾಕಿದ ನಾಯಿಗಳ ಆಟ-ತುಂಟಾಟ, ಮುಗ್ಧತೆಯನ್ನೆಲ್ಲ ಪ್ರಸ್ತುತ ಪಡಿಸುವ ಹಲವು ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಮನೆಯಲ್ಲಿ ಸಾಕುವ ಶ್ವಾನಗಳು ಮನೆ ಸದಸ್ಯರಂತೆ ಆಗಿಬಿಡುತ್ತವೆ. ಮನೆಯಲ್ಲಿ ಎಲ್ಲ ಕಡೆ ಓಡಾಡಿಕೊಂಡು, ಸೋಫಾ-ಬೆಡ್​ ಮೇಲೆ ಮಲಗುತ್ತ, ಟಿವಿ ನೋಡಿಕೊಂಡು ಸಖತ್ ಎಂಜಾಯ್ ಮಾಡಿಕೊಂಡಿರುತ್ತವೆ.

ಈಗ ಲ್ಯಾಬ್ರಡರ್​ ನಾಯಿಯೊಂದು ಟಿವಿಯಲ್ಲಿ ಕಾಣಿಸುವ ತಿಂಡಿ ನಿಜವೆಂದು ಭಾವಿಸಿ, ಓಡಿ ಹೋಗಿ ಟಿವಿ ಸ್ಕ್ರೀನ್​ಗೆ ಬಾಯಿ ಹಾಕಿದ ಕ್ಯೂಟ್​ ವಿಡಿಯೊವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೊದಲ್ಲೋ, ಫೋಟೋದಲ್ಲೋ ನಾವು ವಿವಿಧ ಬಗೆಯ ಖಾದ್ಯಗಳನ್ನು ನೋಡಿದರೆ ಸಾಕು ನಮ್ಮ ಬಾಯಲ್ಲೂ ನೀರೂರುತ್ತದೆ. ನಮಗೂ ತಿಂದುಬಿಡಬೇಕು ಎನ್ನಿಸುತ್ತದೆ. ತಿಂಡಿ/ತಿನಿಸು ಚಿತ್ರ-ವಿಡಿಯೊ ಕಂಡಾಕ್ಷಣ ಅದನ್ನು ಬಾಯಿಗೆ ಹಾಕಿಕೊಳ್ಳಬೇಕು ಎಂದೆನಿಸುವುದು ಸಹಜವಾದರೂ, ನಾವು ಮನುಷ್ಯರಿಗೆ ಅದು ಫೋಟೋ/ವಿಡಿಯೊ ಎಂದು ಗೊತ್ತಿರುತ್ತದೆ. ಆದರೆ ನಾಯಿಗಳು ಹಾಗಲ್ಲ. ಅದು ನಿಜವಲ್ಲ ಎಂಬುದು ಅವಕ್ಕೆ ತಕ್ಷಣಕ್ಕೇ ಗೊತ್ತಾಗುವುದಿಲ್ಲ.

ಇದನ್ನೂ ಓದಿ: Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

ಹಾಗೇ ಈ ನಾಯಿ ಕೂಡ. ತನ್ನ ಸಾಕಿದ ಮನೆಯಲ್ಲಿ ಅಳವಡಿಸಲಾಗಿರುವ ದೊಡ್ಡದಾದ ಟಿವಿಯಲ್ಲಿ ಬರುತ್ತಿರುವ ದೃಶ್ಯ ನಿಜವೆಂದೇ ಭಾವಿಸಿಬಿಟ್ಟಿತು. ಟಿವಿಯಲ್ಲಿ ಒಂದು ಹೋಟೆಲ್​ನ ಸನ್ನಿವೇಶ ಬರುತ್ತಿತ್ತು. ಅಲ್ಲಿ ಹಲವರು ಕುಳಿತು ತಿಂಡಿ ತಿನ್ನುತ್ತಿದ್ದಾರೆ. ಅದರಲ್ಲಿ ಒಬ್ಬ ಹುಡುಗ ಒಂದು ಕೈಯಲ್ಲಿ ಆಹಾರ ಸೇವಿಸುತ್ತ, ಎಡಗೈಯಲ್ಲಿ ಅದ್ಯಾವುದೋ ತಿಂಡಿಯನ್ನು ಹಿಡಿದುಕೊಂಡಿದ್ದಾನೆ. ಅಷ್ಟೊತ್ತು ಟಿವಿ ನೋಡುತ್ತಿದ್ದ ನಾಯಿ, ಹುಡುಗ ಎಡಗೈಯಲ್ಲಿ ತಿನಿಸನ್ನು ಹಿಡಿದು, ಸ್ವಲ್ಪವೇ ಚಾಚುತ್ತಿದ್ದಂತೆ ಓಡಿ ಹೋಗಿ ಅಲ್ಲಿ ಬಾಯಿ ಹಾಕಿದೆ. ಟಿವಿ ಸ್ಕ್ರೀನ್​ನ್ನು ನಾಲಿಗೆಯಿಂದ ನೆಕ್ಕಿದೆ. ಹೀಗೆ ಎರಡು ಬಾರಿ ಮಾಡಿದ ನಂತರ ಅದು ಮುಖದಲ್ಲಿ ಬೇಸರದ ಭಾವ ಹೊತ್ತು, ಮರಳಿ ಬಂದು ಕುಳಿತಿದೆ. ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ. ನೆಟ್ಟಿಗರು ಮೆಚ್ಚಿ ಕಮೆಂಟ್ ಮಾಡುತ್ತಿದ್ದಾರೆ.

ವಿಡಿಯೋಕ್ಕಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:

Continue Reading

ವೈರಲ್ ನ್ಯೂಸ್

Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

ಬ್ರಿಟನ್‌ನಲ್ಲೂ ರಸ್ತೆ ಗುಂಡಿಗಳ ಸಮಸ್ಯೆಯಿದೆ. ಈ ಸಮಸ್ಯೆಯನ್ನು ಅಲ್ಲಿನ ವ್ಯಕ್ತಿಯೊಬ್ಬರು ವಿಶೇಷ ರೀತಿಯಲ್ಲಿ ಸರ್ಕಾರದ ಗಮನಕ್ಕೆ ತರಲು ಯತ್ನಿಸುತ್ತಿದ್ದು, ಆ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ.

VISTARANEWS.COM


on

Edited by

Koo

ಲಂಡನ್‌: ರಸ್ತೆ ಗುಂಡಿ ಸಮಸ್ಯೆ ನಮ್ಮ ಬೆಂಗಳೂರಿನ ಮಂದಿಗೆ ಚೆನ್ನಾಗಿ ಗೊತ್ತಿರುವಂತದ್ದು. ಕೇವಲ ಬೆಂಗಳೂರು ಮಾತ್ರವಲ್ಲ, ದೇಶ ವಿದೇಶದಲ್ಲೂ ಈ ರಸ್ತೆ ಗುಂಡಿ ದೊಡ್ಡ ಸಮಸ್ಯೆಯೇ. ಅಭಿವೃದ್ಧಿಹೊಂದಿರುವ ರಾಷ್ಟ್ರ ಎಂದು ಕರೆಸಿಕೊಳ್ಳುವ ಬ್ರಿಟನ್‌ನಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಅಲ್ಲಿಯೂ ಕೂಡ ಈ ರಸ್ತೆ ಗುಂಡಿ ವಿಚಾರದಲ್ಲಿ ಸಾಕಷ್ಟು ಮಂದಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿ, ಸೋತಿದ್ದಾರೆ. ಇದೀಗ ಈ ವ್ಯಕ್ತಿಯೊಬ್ಬರು ವಿಶೇಷ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದು, ಈ ಸುದ್ದಿ ಎಲ್ಲೆಡೆ ವೈರಲ್‌ (Viral News) ಆಗಿದೆ.

ಇದನ್ನೂ ಓದಿ: Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!
ಮಾರ್ಕ್‌ ಮೊರೆಲ್‌ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಿಸ್ಟರ್‌ ಪ್ಯಾಥ್‌ಹೋಲ್‌ ಎಂದೇ ಕರೆಯಲಾಗುತ್ತದೆ. ಕಾರಣ ಅವರು ಮಾಡುತ್ತಿರುವ ಕೆಲಸ. ರಸ್ತೆಗಳಲ್ಲಿರುವ ಗುಂಡಿಗಳಿಂದ ಚಾಲಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಇವರು ಹತ್ತು ವರ್ಷಗಳಿಂದ ಸರ್ಕಾರಕ್ಕೆ ಮನವರಿಕೆ ಮಾಡಿಸುವ ಯತ್ನದಲ್ಲೇ ಇದ್ದಾರಂತೆ. ಗುಂಡಿಗಳಿಗೆ ರಬ್ಬರ್‌ ತುಂಬುವುದು, ಬೇರೆ ಬೇರೆ ವಸ್ತು ತುಂಬಿಸಿ ಗುಂಡಿ ಮುಚ್ಚುವ ಕೆಲಸವನ್ನು ಅವರು ಈವರೆಗೆ ಮಾಡಿಕೊಂಡು ಬಂದಿದ್ದಾರೆ. ಆದರೆ ಇದೀಗ ವಿಶೇಷ ರೀತಿಯಲ್ಲಿ ಗುಂಡಿ ಮುಚ್ಚುವುದಕ್ಕೆ ಆರಂಭಿಸಿದ್ದಾರೆ.


ಮಾರ್ಕ್‌ ಅವರು ರಸ್ತೆ ಗುಂಡಿಗಳಿಗೆ ತಿನ್ನುವ ನೂಡೆಲ್ಸ್‌ ಅನ್ನೇ ಹಾಕಿ ಮುಚ್ಚಲಾರಂಭಿಸಿದ್ದಾರೆ. ಅದಕ್ಕೆಂದೇ ನೂಡಲ್ಸ್‌ ಕಂಪನಿಯೊಂದರ ಜತೆಗೆ ಒಪ್ಪಂದವನ್ನೂ ಮಾಡಿಕೊಂಡಿದ್ದಾರೆ. ರಸ್ತೆಯಲ್ಲಿ ಎಲ್ಲೆಲ್ಲಿ ಗುಂಡಿ ಕಾಣುತ್ತದೆಯೋ ಅಲ್ಲೆಲ್ಲಾ ಅವರು ನೂಡಲ್ಸ್‌ ತುಂಬಲಾರಂಭಿಸಿದ್ದಾರೆ. ನೂಡಲ್ಸ್‌ ಗುಂಡಿಯೊಳಗೆ ನೀಟಾಗಿ ಕುಳಿತುಕೊಳ್ಳುತ್ತದೆ ಎಂದೂ ಅವರು ಹೇಳಿದ್ದಾರೆ. ಅವರ ಮೂಲ ಊರಾದ ಬ್ರಾಕ್ಲೆ ನಗರದಲ್ಲಿ ಬಹುತೇಕ ಗುಂಡಿಗಳನ್ನು ಇದೇ ರೀತಿಯಲ್ಲಿ ಮುಚ್ಚಿದ್ದಾರೆ.


ಈ ಮಾರ್ಕ್‌ ಅವರ ಕೆಲಸ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಲ್ಲಿರುವಂತಹ ವಿಚಾರ. ನನ್ನ ಈ ಕೆಲಸದಿಂದಾದರೂ ಸರ್ಕಾರ ಎಚ್ಚೆತ್ತುಕೊಂಡು ಗುಂಡಿ ಮುಚ್ಚಲಿ ಎನ್ನುತ್ತಾರೆ ಮಾರ್ಕ್‌.

Continue Reading
Advertisement
Elephant trap
ಕರ್ನಾಟಕ3 hours ago

Elephant trapped : ಮೂರು ತಿಂಗಳಿನಿಂದ ಸತಾಯಿಸುತ್ತಿರುವ 10 ವರ್ಷದ ಗಂಡಾನೆ ಕೊನೆಗೂ ಹನಿ ಟ್ರ್ಯಾಪ್‌ಗೆ ಬಿತ್ತು!

Unaccounted 6.4 Crore rupees seized in Chikmagalur
ಕರ್ನಾಟಕ3 hours ago

Karnataka Election 2023: ಚುನಾವಣೆ ಹಿನ್ನೆಲೆ ಹಣದ ಹೊಳೆ, ದಾಖಲೆ ಇಲ್ಲದ 6 ಕೋಟಿ ರೂ., 17 ಕೆಜಿ ಚಿನ್ನ, ಬೆಳ್ಳಿ ವಶ

Champion Gujarat won by 5 wickets in the first match, CSK was disappointed
ಕ್ರಿಕೆಟ್4 hours ago

IPL 2023 : ಚಾಂಪಿಯನ್​ ಗುಜರಾತ್​​ಗೆ ಮೊದಲ ಪಂದ್ಯದಲ್ಲಿ 5 ವಿಕೆಟ್ ಜಯ, ಸಿಎಸ್​ಕೆ ನಿರಾಸೆ

holalu urus
ಕರ್ನಾಟಕ4 hours ago

Communal Harmony : ಉರೂಸ್‌ ಸಂಭ್ರಮದಲ್ಲಿ ಹಿಂದೂ ಶ್ರೀಗಳನ್ನು ಗೌರವಿಸಿ ಭಾವೈಕ್ಯತೆ ಮೆರೆದ ಮುಸ್ಲಿಮರು

Nelyadi suicide
ಕರ್ನಾಟಕ4 hours ago

Suicide case : ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಆ ಮನೆಯಲ್ಲಿ ಇದು ಮೂರನೇ ಸುಸೈಡ್‌!

Bangalore mysore highway
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ಟೋಲ್ ದರ ಜನರಿಗೆ ದುಃಸ್ವಪ್ನವಾಗದಿರಲಿ

IT Raid on the bank owned by Belgaum Congress leader VS Sadhunavar
ಕರ್ನಾಟಕ4 hours ago

IT Raid: ಕಾಂಗ್ರೆಸ್‌ ಮುಖಂಡ ವಿ.ಎಸ್.‌ ಸಾಧುನವರ ಒಡೆತನದ ಬ್ಯಾಂಕ್‌ ಮೇಲೆ ಐಟಿ ದಾಳಿ

IPL 2023
ಕ್ರಿಕೆಟ್4 hours ago

IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?

People In Pakistan Unhappy, Believe Partition Was A Mistake: Says Mohan Bhagwat
ದೇಶ4 hours ago

Mohan Bhagwat: ಪಾಕ್ ಜನಕ್ಕೆ ನೆಮ್ಮದಿ ಇಲ್ಲ, ದೇಶ ವಿಭಜನೆ ಪ್ರಮಾದ ಎಂಬ ಭಾವನೆ ಇದೆ: ಮೋಹನ್‌ ಭಾಗವತ್‌

Mohammad Shami who scored a century in bowling, what is the achievement?
ಕ್ರಿಕೆಟ್5 hours ago

IPL 2023 : ಬೌಲಿಂಗ್​ನಲ್ಲಿ ಶತಕ ಬಾರಿಸಿದ ಮೊಹಮ್ಮದ್​ ಶಮಿ, ಏನಿದು ಸಾಧನೆ?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್6 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ15 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ1 day ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ2 days ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ5 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ5 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ2 weeks ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ2 weeks ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!