Viral News: ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸುವ ಅಭ್ಯರ್ಥಿ; ವಿಶಿಷ್ಟ ಪ್ರಚಾರದ ಈ ವಿಡಿಯೊ ನೀವೂ ನೋಡಿ - Vistara News

ವೈರಲ್ ನ್ಯೂಸ್

Viral News: ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸುವ ಅಭ್ಯರ್ಥಿ; ವಿಶಿಷ್ಟ ಪ್ರಚಾರದ ಈ ವಿಡಿಯೊ ನೀವೂ ನೋಡಿ

Viral News: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಗಿದೆ. ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಚುನಾವಣಾ ಪ್ರಚಾರ ತೊಡಗಿಸಿಕೊಂಡಿವೆ. ಮತದಾರರನ್ನು ಆಕರ್ಷಿಸಲು ನಾನಾ ಕಸರತ್ತು ನಡೆಸಲಾಗುತ್ತಿದೆ. ಈ ಪೈಕಿ ಉತ್ತರ ಪ್ರದೇಶದ ಅಭ್ಯರ್ಥಿಯೊಬ್ಬರು ತಮ್ಮ ವಿಶಿಷ್ಟ ಕಾರ್ಯ ವೈಖರಿಯಿಂದ ದೇಶದ ಗಮನ ಸೆಳೆದಿದ್ದಾರೆ. ಈ ವಿಡಿಯೊ ಸದ್ಯ ವೈರಲ್‌ ಆಗಿದೆ. ಆ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಏರತೊಗಿದೆ. ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಚುನಾವಣಾ ಪ್ರಚಾರ ತೊಡಗಿಸಿಕೊಂಡಿವೆ. ಮತದಾರರನ್ನು ಆಕರ್ಷಿಸಲು ನಾನಾ ಕಸರತ್ತು ನಡೆಸಲಾಗುತ್ತಿದೆ. ಪ್ರಣಾಳಿಕೆ, ವಿವಿಧ ಯೋಜನೆಗಳನ್ನು ಪ್ರಕಟಿಸಿ ಮತದಾರ ಪ್ರಭುಗಳ ಗಮನ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಇದರ ಜತೆಗೆ ಕೆಲವರು ಚಿತ್ರ-ವಿಚಿತ್ರ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಈ ಪೈಕಿ ಉತ್ತರ ಪ್ರದೇಶದ ಅಭ್ಯರ್ಥಿಯೊಬ್ಬರು ತಮ್ಮ ವಿಶಿಷ್ಟ ಕಾರ್ಯ ವೈಖರಿಯಿಂದ ದೇಶದ ಗಮನ ಸೆಳೆದಿದ್ದಾರೆ. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Viral News).

ಸಾಮಾನ್ಯವಾಗಿ ಯಾರ ಮೇಲಾದರೂ ಸಹಿಸಲಸಾಧ್ಯ ರೋಷ ಇದ್ದರೆ ಅವರ ಮೇಲೆ ಚಪ್ಪಲಿ ಎಸೆಯುವುದನ್ನು ನೋಡಿದ್ದೇವೆ. ಇನ್ನು ಕೆಲವೊಮ್ಮೆ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳ ಪ್ರತಿಕೃತಿಗೆ ಚಪ್ಪಲಿ ಹಾರ ತೊಡಿಸಿ ಪ್ರತಿಭಟನೆ ನಡೆಸುವುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬರು ತಮ್ಮ ಕೊರಳಿಗೆ ತಾವೇ ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸುತ್ತಿದ್ದಾರೆ! ಅದಕ್ಕೆ ಕಾರಣ ಏನು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಾರಣ ಏನು?

ಉತ್ತರ ಪ್ರದೇಶದ ಪಂಡಿತ್ ಕೇಶವ್ ದೇವ್ ಎನ್ನುವವವರೇ ಈ ವಿನೂತನ ಚುನಾವಣಾ ಪ್ರಚಾರ ನಡೆಸುತ್ತಿರುವವರು. ಪಂಡಿತ್ ಕೇಶವ್ ದೇವ್ ಅವರು ಅಲಿಘಡ್‌ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಚುನಾವಣಾ ಆಯೋಗವು ಅವರಿಗೆ ಚಪ್ಪಲಿ ಚಿಹ್ನೆಯನ್ನು ನೀಡಿದೆ. ಹೀಗಾಗಿ ಅವರು ಹೂವಿನೊಂದಿಗೆ ಚಪ್ಪಲಿ ಹಾರವನ್ನು ಕೊರಳಿಗೆ ಹಾಕಿಕೊಂಡು ವೈವಿಧ್ಯಮಯ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ದಾರಕ್ಕೆ ಏಳು ಚಪ್ಪಲಿಗಳನ್ನು ಪೋಣಿಸಿದ ಹಾರ ಧರಿಸಿಕೊಂಡು ಅವರು ಜನರ ಬಳಿ ಮತ ಯಾಚಿಸುತ್ತಿದ್ದಾರೆ. ಹೀಗೆ ದೇಶಾದ್ಯಂತ ಗಮನ ಸೆಳೆದಿದ್ದಾರೆ.

ʼʼತಮ್ಮ ಚುನಾವಣಾ ಚಿಹ್ನೆಯನ್ನು ಮತದಾರರು ಚೆನ್ನಾಗಿ ನೆನಪಿಟ್ಟುಕೊಳ್ಳಲು 7 ಚಪ್ಪಲಿಗಳ ಹಾರವನ್ನು ಕೊರಳಿಗೆ ಹಾಕಿಕೊಂಡಿದ್ದಾರೆʼʼ ಎಂದು ಅವರ ಬೆಂಬಲಿಗರು ಹೇಳುತ್ತಾರೆ. ಇದೀಗ ಮತದಾರರು ಈ ಹೊಸ ರೀತಿಯ ಪ್ರಚಾರವನ್ನು ಎಂಜಾಯ್‌ ಮಾಡುತ್ತಿದೆ. ಇದು ಎಷ್ಟರ ಮಟ್ಟಿಗೆ ಮತವಾಗಿ ಪರಿವರ್ತನೆಯಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಮೋದಿ ಮತ್ತೆ ಪಿಎಂ ಆಗಲೆಂದು 13 ಸಾವಿರ ಅಡಿಯಿಂದ ಸ್ಕೈ ಡೈವ್‌ ಮಾಡಿದ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಗೆದ್ದು, ನರೇಂದ್ರ ಮೋದಿ ಅವರೇ ಮತ್ತೆ ದೇಶದ ಪ್ರಧಾನಿಯಾಗಲಿ ಎಂದು ಬಿಜೆಪಿ ಕಾರ್ಯಕರ್ತರ ಜತೆಗೆ ಮೋದಿ ಅಭಿಮಾನಿಗಳು ಕೂಡ ದೇಶಾದ್ಯಂತ ಪ್ರಚಾರ, ಸೋಷಿಯಲ್‌ ಮೀಡಿಯಾ ಮೂಲಕ ಅಭಿಯಾನ ಕೈಗೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ವಿಜಯಪುರದ ಅಭಿಮಾನಿಗಳು ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗಬೇಕು ಎಂದು ವಿದೇಶದಲ್ಲಿ 13 ಸಾವಿರ ಅಡಿಯಿಂದ ಸ್ಕೈ ಡೈವ್‌ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಹೌದು, ವಿಜಯಪುರದ ಉದ್ಯಮಿ ರಾಜಶೇಖರ ಮುತ್ತಿನಪೆಂಡಿಮಠ ಅವರ ನೇತ್ರತ್ವದಲ್ಲಿ ಬ್ಯಾಂಕಾಕ್‌ನ ಖೋಯಾಯ್‌ ಎಂಬ ಪ್ರದೇಶದಲ್ಲಿ ಯುವಕರು 13 ಸಾವಿರ ಅಡಿಯಿಂದ ಸ್ಕೈ ಡೈವ್‌ ಮಾಡಿದ್ದಾರೆ. ಔರ್‌ ಏಕ್‌ ಬಾರ್‌ ಮೋದಿ ಸರ್ಕಾರ್‌ ಎಂದು ಘೋಷಣೆ ಕೂಗುತ್ತ, ಯುವಕರು ಸ್ಕೈ ಡೈವ್‌ ಮಾಡಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ನಮೋ ಸ್ಕೈ ಡೈವರ್ಸ್‌ ಎಂಬ ನಾಲ್ಕು ಯುವಕರ ತಂಡವು ವಿಭಿನ್ನ ಪ್ರಯತ್ನ ಮಾಡಿದೆ. ಅಲ್ಲದೆ, ನಮೋ ಎಂದು ಬರೆದ ಬ್ಯಾನರ್‌ಗಳನ್ನೂ ಅವರು ಆಗಸದಲ್ಲೇ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: ಅಂದು ಮೋದಿ ಜತೆ ವೇದಿಕೆ ಏರಲು ನಿರಾಕರಿಸಿದ್ದ ನಿತೀಶ್ ಕುಮಾರ್ ಈಗ ಮೋದಿಯ ಕಾಲು ಮುಟ್ಟಿ ನಮಸ್ಕರಿಸಿದರು!

ಬೆಂಗಳೂರಿನ ರಾಹುಲ್ ಡಾಕ್ರೆ, ಅನುಭವ್ ಅಗರವಾಲ್ ಹಾಗೂ ಮಹಾರಾಷ್ಟ್ರದ ಹಿಮಾಂಶು ಸಾಬಳೆ ಅವರ ತಂಡದಿಂದ ಸ್ಕೈ ಡೈವ್‌ ಮಾಡಲಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು ಎಂದು ದೇಶಾದ್ಯಂತ ಯುವಕರು ಮದುವೆ ಆಮಂತ್ರಣ ಪತ್ರಿಕೆ ಮೇಲೆ ಮೋದಿಗೆ ಮತ ನೀಡಿ ಎಂದು ಬರೆಸಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಹಲವು ರೀತಿಯ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ವಿಜಯಪುರ ಉದ್ಯಮಿಯ ನೇತೃತ್ವದಲ್ಲಿ ಸ್ಕೈ ಡೈವ್‌ ಮೂಲಕ ವಿಭಿನ್ನವಾಗಿ ಮೋದಿ ಮೇಲಿನ ಅಭಿಮಾನವನ್ನು ಪ್ರದರ್ಶಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Chandrababu Naidu: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.

VISTARANEWS.COM


on

Chandrababu Naidu
Koo

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಎನ್‌.ಚಂದ್ರಬಾಬು ನಾಯ್ಡು (Chandrababu Naidu) ಅವರು ಬುಧವಾರ (ಜೂನ್‌ 12) ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಕೂಡ ಭಾಗಿಯಾಗಿದ್ದರು. ನರೇಂದ್ರ ಮೋದಿ ಅವರನ್ನು ವೇದಿಕೆಗೆ ಸ್ವಾಗತಿಸಿದ ಚಂದ್ರಬಾಬು ನಾಯ್ಡು ಅವರು, ಪ್ರಧಾನಿಗೆ ಹೂಗುಚ್ಛ ನೀಡಿದರು. ಇದಾದ ಬಳಿಕ ನರೇಂದ್ರ ಮೋದಿ (Narendra Modi) ಅವರ ಕಾಲು ಮುಟ್ಟಿ ನಮಸ್ಕರಿಸಲು ಮುಂದಾದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಚಂದ್ರಬಾಬು ನಾಯ್ಡು ಅವರು ನರೇಂದ್ರ ಮೋದಿ ಅವರಿಗಿಂತ ಒಂದು ವರ್ಷ ದೊಡ್ಡವರು. ಹೀಗಿದ್ದರೂ ಮೋದಿ ಅವರ ಮೇಲಿನ ಗೌರವದಿಂದಾಗಿ ಅವರ ಕಾಲು ಮುಟ್ಟಿ ನಮಸ್ಕರಿಸಲು ಚಂದ್ರಬಾಬು ನಾಯ್ಡು ಮುಂದಾದರು. ಆದರೆ, ಇದಕ್ಕೆ ನರೇಂದ್ರ ಮೋದಿ ಅವರು ಅವಕಾಶ ಕೊಡದೆ, ಚಂದ್ರಬಾಬು ನಾಯ್ಡು ಅವರನ್ನು ತಬ್ಬಿಕೊಂಡು, ನೂತನ ಸರ್ಕಾರಕ್ಕೆ ಶುಭ ಹಾರೈಸಿದರು. ಕೇಂದ್ರದ ಎನ್‌ಡಿಎ ಸರ್ಕಾರಕ್ಕೆ ಚಂದ್ರಬಾಬು ನಾಯ್ಡು ಅವರ ಟಿಡಿಪಿಯು ಬೆಂಬಲ ಸೂಚಿಸಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ನಟ, ಪವನ್‌ ಕಲ್ಯಾಣ್‌ ಸಹೋದರ ಚಿರಂಜೀವಿ, ತಮಿಳು ನಟ ರಜನಿಕಾಂತ್‌, ನಂದಮೂರಿ ಬಾಲಕೃಷ್ಣ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.

ನಿತೀಶ್‌ ಕೂಡ ಹೀಗೆಯೇ ಮಾಡಿದ್ದರು

ಕೆಲ ದಿನಗಳ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರು ಕೂಡ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾಗಿದ್ದರು. ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.

ಇದನ್ನೂ ಓದಿ: Shah Rukh Khan: ಶಾರುಖ್​ ಖಾನ್​ ಕಾಲು ಮುಟ್ಟಿ ನಮಸ್ಕರಿಸಿದ ಖ್ಯಾತ ನಿರ್ದೇಶಕ!

Continue Reading

ಕ್ರೀಡೆ

Harbhajan Singh: ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

Harbhajan Singh: ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

VISTARANEWS.COM


on

Harbhajan Singh
Koo

ಮುಂಬಯಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್​ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

ಇದಕ್ಕೂ ಮುನ್ನ ಹರ್ಭಜನ್​ ಸಿಂಗ್​ ಅವರು ಟ್ವೀಟ್​ ಮಾಡಿ ಅಕ್ಮಲ್​ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ IND vs USA: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್​?

ಕ್ಷಮೆ ಕೇಳಿದ್ದ ಅಕ್ಮಲ್​


ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದರು. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ. ನಿಜವಾಗಿಯೂ ಕ್ಷಮೆ ಯಾಚಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದರು.

ಏನಿದು ಪ್ರಕರಣ?


ಭಾನುವಾರ ಪಾಕ್​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭಾರತ ತಂಡದ ವೇಗಿ ಅರ್ಶ್​ದೀಪ್ ಅವರು ಪಂದ್ಯದ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಅಕ್ಮಲ್​ “ಕುಚ್ ಭೀ ಹೋ ಸಕ್ತಾ ಹೈ.. 12 ಬಜ್ ಗಯೇ ಹೈ (ಏನು ಬೇಕಾದರೂ ಸಂಭವಿಸಬಹುದು. 12 ರ ನಂತರ ಯಾವುದೇ ಸಿಖ್ಖರನ್ನು ನೀಡಲಾಗುವುದಿಲ್ಲ) ಎಂದು ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಭಾನುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿತು. ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತ್ತು.

Continue Reading

ಪ್ರಮುಖ ಸುದ್ದಿ

Viral News: ರೈಲಿನಲ್ಲಿ ಜನಿಸಿದ ತಮ್ಮ ಮಗುವಿಗೆ ʼಮಹಾಲಕ್ಷ್ಮಿʼ ಎಂದು ಹೆಸರಿಟ್ಟಿದ್ದೇಕೆ ಮುಸ್ಲಿಂ ದಂಪತಿ?

Viral News: ಕೆಲವೊಂದು ಘಟನೆಗಳು ಜಾತಿ, ಧರ್ಮಗಳನ್ನು ಮೀರಿ ನಡೆಯುತ್ತವೆ. ರೈಲಿನಲ್ಲಿ ಜನಿಸಿದ ತಮ್ಮ ಮಗುವಿಗೆ ಮಹಾಲಕ್ಷ್ಮಿ ಎಂದು ಹೆಸರಿಡುವ ಮೂಲಕ ಮುಸ್ಲಿಂ ದಂಪತಿ ಎಲ್ಲರ ಕಣ್ಣಂಚನ್ನು ಒದ್ದೆ ಮಾಡಿದ್ದಾರೆ. ಈ ದಂಪತಿ ತಮ್ಮ ಮಗುವಿಗೆ ಮಹಾಲಕ್ಷ್ಮಿ ಎಂದು ಹೆಸರಿಟ್ಟಿದ್ದೇಕೆ? ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

Viral News
Koo

ಮಹಾರಾಷ್ಟ್ರ: ಎಲ್ಲಾ ಜನರಿಗೂ ಅವರ ಧರ್ಮ ಮತ್ತು ದೇವರ ಮೇಲೆ ಗೌರವವಿರುತ್ತದೆ. ಹಾಗಾಗಿ ಅವರು ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ತಮ್ಮ ಧರ್ಮಕ್ಕೆ ಅನುಗುಣವಾಗಿ ದೇವರ ಹೆಸರನ್ನು ಇಡುತ್ತಾರೆ. ಆ ಧರ್ಮದವರನ್ನು ನೋಡಿದರೆ ಈ ಧರ್ಮದವರಿಗೆ ಆಗಲ್ಲ ಇತ್ಯಾದಿ ವೈರುದ್ಯಗಳೂ ಇವೆ. ಕೆಲವೊಮ್ಮೆ ಈ ಜಾತಿ, ಧರ್ಮಗಳನ್ನು ಮೀರಿದ ಭಾವವೊಂದು ಮೂಡುತ್ತದೆ. ಇಂತಹದ್ದೇ ಒಂದು ಘಟನೆ ನಡೆದಿದೆ. ಮುಸ್ಲಿಂ ದಂಪತಿ ತಮ್ಮ ಮಗಳಿಗೆ ಹಿಂದೂ ದೇವರ ಹೆಸರನ್ನು ಇಡುವ ಮೂಲಕ ಆಶ್ಚರ್ಯವನ್ನುಂಟು ಮಾಡಿದ್ದಾರೆ. ಈ ಸುದ್ದಿ ಎಲ್ಲೆಡೆ ವೈರಲ್ (Viral News)ಆಗಿದೆ.

ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆ ಮಗುವಿಗೆ ʼಮಹಾಲಕ್ಷ್ಮಿ ʼ ಎಂದು ನಾಮಕರಣ ಮಾಡಿದ್ದಾರಂತೆ. ಜೂನ್ 6ರಂದು ಕೋಲ್ಹಾಪುರ-ಮುಂಬೈ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ನಲ್ಲಿ ಮೀರಾ ರೋಡ್ ನ ಫಾತಿಮಾ ಖಾತುನ್ ಎಂಬ 31 ವರ್ಷದ ಗರ್ಭಿಣಿ ಪ್ರಯಾಣಿಸುತ್ತಿದ್ದರು. ಆ ವೇಳೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವಿಚಾರ ಮಹಿಳೆ ತನ್ನ ಪತಿಗೆ ತಿಳಿಸಿದ್ದಾಳೆ ಮತ್ತು ನೋವು ಹೆಚ್ಚಾದ ಕಾರಣ ರೈಲಿನಲ್ಲಿರುವ ಶೌಚಾಲಯಕ್ಕೆ ತೆರಳಿದ್ದಾಳೆ. ಬಳಿಕ ರೈಲು ಲೋನಾವಾಲಾ ದಾಟಿದ ನಂತರ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ರೈಲಿನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ಆಕೆಗೆ ಸಹಾಯ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಮಹಿಳೆಯ ಪತಿ ತಯ್ಯಬ್ ಕರ್ಜಾತ್ ಸರ್ಕಾರಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತಾಯಿ ಮಗುವನ್ನು ರೈಲಿನಿಂದ ಕೆಳಗಿಳಿಸಿ ಹತ್ತಿರವಿದ್ದ ಉಪಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ಸಿಬ್ಬಂದಿಗಳು ತಾಯಿ, ಮಗುವಿಗೆ ಅಗತ್ಯವಿರುವ ಚಿಕಿತ್ಸೆ ನೀಡಿ ಮೂರು ದಿನಗಳ ನಂತರ ಡಿಸ್ಚಾರ್ಜ್ ಮಾಡಿದ್ದಾರೆ. ನಂತರ ಆ ಮುಸ್ಲಿಂ ದಂಪತಿ ಮಗುವಿಗೆ ‘ಮಹಾಲಕ್ಷ್ಮಿ’ ಎಂದು ಹಿಂದೂ ದೇವರ ಹೆಸರನ್ನು ಇಟ್ಟು ಕುತೂಹಲ ಮೂಡಿಸಿದ್ದಾರೆ.

ಈ ಬಗ್ಗೆ ಮಗುವಿನ ತಂದೆ ತಯ್ಯಬ್ ಕರ್ಜಾತ್ ಅವರನ್ನು ಕೇಳಿದಾಗ, ತಿರುಪತಿಯಿಂದ ಕೊಲ್ಲಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪ್ರಯಾಣಿಸಿದ ಕೆಲವು ಸಹ ಪ್ರಯಾಣಿಕರು ತನ್ನ ಮಗಳು ಈ ರೈಲಿನಲ್ಲಿ ಹುಟ್ಟಿದ್ದು, ದೇವಿಯ ದರ್ಶನ ಪಡೆದಂತೆ ಆಯಿತು ಎಂದು ಹೇಳಿದರಂತೆ. ಹಾಗಾಗಿ ತಾನು ಮಗುವಿಗೆ ಈ ಹೆಸರಿಟ್ಟೆ ಎಂದು ತಿಳಿಸಿದ್ದಾರೆ. ಹಾಗೇ ಈ ಘಟನೆಯ ವೇಳೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಈ ದಂಪತಿಗೆ ಈಗಾಗಲೇ ಮೂವರು ಗಂಡು ಮಕ್ಕಳಿದ್ದಾರೆ. ಫಾತಿಮಾ ಅವರಿಗೆ ಜೂನ್ 20ಕ್ಕೆ ಹೆರಿಗೆ ಡೇಟ್ ನೀಡಲಾಗಿತ್ತು, ಆದರೆ ಹೊಟ್ಟೆ ನೋವು ಕಾಣಿಸಿಕೊಂಡ ಪರಿಣಾಮ ಆಕೆಗೆ ಜೂನ್ 6ಕ್ಕೆ ರೈಲಿನಲ್ಲಿ ಪ್ರಯಾಣಿಸುವ ವೇಳೆ ಹೆರಿಗೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ:Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

ಒಟ್ಟಾರೆ ಮುಸ್ಲಿಂ ದಂಪತಿ ತಮ್ಮ ಮಗಳಿಗೆ ಹಿಂದೂ ದೇವರ ಹೆಸರನ್ನಿಟ್ಟಿದ್ದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದ್ದಂತು ಖಂಡಿತ. ಈ ಮೂಲಕವಾದರೂ ಹಿಂದೂ ಮತ್ತು ಮುಸ್ಲಿಂ ಧರ್ಮದವರು ಸಹಬಾಳ್ವೆಯಿಂದ ಬಾಳುವಂತಾಗಲಿ.

Continue Reading

ವೈರಲ್ ನ್ಯೂಸ್

Viral News: ಕೊಳದಲ್ಲಿ ತೇಲುತ್ತಿದ್ದ ದೇಹ ಮೇಲೆತ್ತಲು ಹೋದ ಪೊಲೀಸರು! ಹೆಣ ನಡೆಯತೊಡಗಿತು!

Viral News: ವ್ಯಕ್ತಿಯ ದೇಹವೊಂದು ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಹೆದರಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸ್ ತಂಡ ವ್ಯಕ್ತಿ ಸತ್ತಿದ್ದಾನೆ ಎಂದು ಎತ್ತಲು ಹೋದಾಗ ಶಾಕ್‌ ಆಗಿದ್ದಾರೆ. ತೆಲಂಗಾಣದಲ್ಲಿ ಈ ಘಟನೆ ನಡೆದಿದೆ. ಈ ಕುರಿತ ವಿಡಿಯೊ ಇಲ್ಲಿದೆ ನೋಡಿ.

VISTARANEWS.COM


on

Viral News
Koo

ತೆಲಂಗಾಣ: ಕೊಳದಲ್ಲಿ, ನದಿಯಲ್ಲಿ ಹೆಣಗಳು ತೇಲುತ್ತಿರುವ ಘಟನೆಯನ್ನು ನಾವು ಹಲವು ಬಾರಿ ನೋಡಿರುತ್ತೇವೆ ಹಾಗೂ ಈ ತರಹದ ಘಟನೆಯ ಬಗ್ಗೆ ಕೇಳಿರುತ್ತೇವೆ. ವ್ಯಕ್ತಿಯನ್ನು ಯಾರಾದರೂ ಕೊಂದು ನದಿಗೆ ಎಸೆದಿರುತ್ತಾರೆ ಅಥವಾ ವ್ಯಕ್ತಿಯೇ ಜೀವನದ ಕಷ್ಟಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಆಗ ಅವರ ಹೆಣ ನೀರಿನ ಮೇಲೆ ಬಂದು ತೇಲುತ್ತಿರುತ್ತದೆ. ಇಂತಹದ್ದೇ ಒಂದು ಘಟನೆ ಹನಮಕೊಂಡನಗರದಲ್ಲಿ ನಡೆದಿದೆ. ಹೆಣ ತೇಲುತ್ತಿದೆ ಎಂದು ಎತ್ತಲು ಹೋದ ಪೊಲೀಸ್‌ ತಂಡ ಬೇಸ್ತು ಬಿದ್ದಿದ್ದಾರೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ವ್ಯಕ್ತಿಯ ದೇಹವೊಂದು ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸ್ ತಂಡ ವ್ಯಕ್ತಿಯ ದೇಹವನ್ನು ಎತ್ತಲು ಹೋದಾಗ ಆ ವ್ಯಕ್ತಿ ಎದ್ದು ನಿಂತಿದ್ದಾನೆ. ಸತ್ತಿದ್ದಾನೆ ಎಂದುಕೊಂಡ ವ್ಯಕ್ತಿ ಎದ್ದು ನಿಂತು ಮಾತನಾಡಿದರೆ ಯಾರಿಗೆ ತಾನೆ ಭಯವಾಗುವುದಿಲ್ಲ? ಅದೇ ರೀತಿ ಪೊಲೀಸರು ಈ ಘಟನೆಯಿಂದ ದಿಗ್ಭ್ರಮೆಗೊಂಡಿದ್ದಾರೆ.

ಹೆಣ ಎತ್ತಲು ಹೋದಾಗ ಎದ್ದು ನಿಂತ ವ್ಯಕ್ತಿ!

ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ವ್ಯಕ್ತಿ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ನಿವಾಸಿಯಾಗಿದ್ದು, ಕಾಜಿಪೇಟೆಯ ಡೀಸೆಲ್ ಕಾಲೋನಿಯಲ್ಲಿ ವಾಸವಾಗಿದ್ದ. ಅವನು ಗ್ರಾನೈಟ್ ಗಣಿಯಲ್ಲಿ ಕೆಲಸ ಮಾಡುತ್ತಿದ್ದು, ಬಿಸಿಲಿನ ತಾಪದಲ್ಲಿ ಸುಮಾರು ಹನ್ನೆರಡು ಗಂಟೆಗಳ ಕಾಲ ನಿರಂತರವಾಗಿ ಕೆಲಸ ಮಾಡಿ ಸುಸ್ತಾದ ಕಾರಣ ಸ್ವಲ್ಪ ವಿಶ್ರಾಂತಿ ಪಡೆಯಲು ಕೊಳಕ್ಕೆ ಇಳಿದಿರುವುದಾಗಿ ತಿಳಿಸಿದ್ದಾನೆ. ಹಾಗೇ ವಿಶ್ರಾಂತಿ ಪಡೆಯುತ್ತಿದ್ದ ಆತ ಅಲ್ಲೇ ನಿದ್ರೆಗೆ ಜಾರಿದ. ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆತನ ದೇಹ ಕೊಳದಲ್ಲಿ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಬಂದು ವ್ಯಕ್ತಿಯ ದೇಹವನ್ನು ಎತ್ತಲು ಹೋದಾಗ ಆತ ಎದ್ದು ನಿಂತಿದ್ದಾನೆ.

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪ ಎಷ್ಟಿದೆ ಎಂದರೆ ಜನರು ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಬಿಸಿಲಿನ ತಾಪವನ್ನು ಸಹಿಸಲಾಗದೆ ಹೆಚ್ಚಿನ ಜನರು ನದಿ, ಕೊಳದಲ್ಲೇ ಮುಳುಗಿಕೊಂಡು ಹೆಚ್ಚು ಸಮಯ ಕಳೆಯುತ್ತಿದ್ದರು. ಇದಕ್ಕೆ ಈಗ ಈ ಘಟನೆಯು ಒಂದು ಸಾಕ್ಷಿಯಾಗಿದೆ.

ಇದನ್ನೂ ಓದಿ: salaries of prime minister: ರಾಷ್ಟ್ರಪತಿ, ಪ್ರಧಾನಿಗೆ ಸಂಬಳ, ಸೌಲಭ್ಯ ಎಷ್ಟಿರುತ್ತವೆ ಗೊತ್ತೆ?

ಅಲ್ಲದೇ ಕಳೆದವಾರ ರಾಜ್ಯದ ನಲ್ಗೊಂಡ ನಗರದ ನೀರಿನ ತೊಟ್ಟಿಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ಈ ವಿಚಾರ ತಿಳಿಯದೇ ಜನರು ಅದೇ ನೀರನ್ನು ಸೇವಿಸುತ್ತಿದ್ದರು. ಈ ಬಗ್ಗೆ ಪೊಲೀಸ್ ತನಿಖೆ ನಡೆದಿದ್ದು, ಸತ್ತ ವ್ಯಕ್ತಿ ಅವುಲಾ ವಂಶಿ ಎಂದು ತಿಳಿದುಬಂದಿದ್ದು, ಮೇ 24ರಿಂದ ಕಾಣೆಯಾಗಿದ್ದ. ನಂತರ ಕುಟುಂಬದವರು ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು. ಮರಣೋತ್ತರ ಪರೀಕ್ಷೆಯ ನಂತರ ಆತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Continue Reading
Advertisement
Ready Saree Fashion Tips
ಫ್ಯಾಷನ್11 mins ago

Ready Saree Fashion Tips: ರೆಡಿ ಸೀರೆ ಪ್ರಿಯರು ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Virat Kohli
ಕ್ರೀಡೆ21 mins ago

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Chandrababu Naidu
ದೇಶ44 mins ago

Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Benefits Of Eating Guava
ಆರೋಗ್ಯ51 mins ago

Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

Actor Darshan
ಪ್ರಮುಖ ಸುದ್ದಿ59 mins ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ1 hour ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ1 hour ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್1 hour ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Fish Spa awareness
ಫ್ಯಾಷನ್1 hour ago

Fish Spa Awareness: ಫಿಶ್‌ ಸ್ಪಾಗೂ ಮುನ್ನ ನೂರು ಬಾರಿ ಯೋಚಿಸಿ!

Kuwait Fire
ವಿದೇಶ1 hour ago

Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌