Viral News: ಫ್ಯಾಷನ್‌ ಲೋಕದಲ್ಲಿ ಧೂಳೆಬ್ಬಿಸಲು ಬಂತು ಟವೆಲ್‌ ಸ್ಕರ್ಟ್‌; ಬೆಲೆ ಕೇಳಿದರೆ ಹೌಹಾರುವುದು ಖಚಿತ - Vistara News

ವೈರಲ್ ನ್ಯೂಸ್

Viral News: ಫ್ಯಾಷನ್‌ ಲೋಕದಲ್ಲಿ ಧೂಳೆಬ್ಬಿಸಲು ಬಂತು ಟವೆಲ್‌ ಸ್ಕರ್ಟ್‌; ಬೆಲೆ ಕೇಳಿದರೆ ಹೌಹಾರುವುದು ಖಚಿತ

Viral News: ಪ್ರಮುಖ ಫ್ಯಾಷನ್‌ ಬ್ರ್ಯಾಂಡ್‌ ಬಲೆನ್ಸಿಯಾಗಾ ಉಡುಪನ್ನು ಪರಿಚಯಿಸಲು ಮುಂದಾಗಿದೆ. ಬಾತ್‌ ಟವೆಲ್‌ ಮಾದರಿಯ ಸ್ಕರ್ಟ್‌ ಇದಾಗಿದ್ದು ಬೆಲೆ ಕೇಳಿದರೆ ನೀವು ಬೆಚ್ಚಿ ಬೀಳುವುದು ಖಚಿತ.

VISTARANEWS.COM


on

towel skirt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾತ್‌ ಟವೆಲ್‌ ಧರಿಸಿಕೊಂಡು ಹೊರಗೆ ಹೋಗುವುದನ್ನು ನಮ್ಮಿಂದ ಊಹಿಸಲೂ ಸಾಧ್ಯವಿಲ್ಲ. ಆದರೆ ಸದ್ಯದಲ್ಲೇ ಇಂತಹದ್ದೊಂದು ದೃಶ್ಯ ಎಲ್ಲೆಡೆ ಕಂಡು ಬರುವ ಸಾಧ್ಯತೆ ಇದೆ. ಅಂದರೆ ಬಾತ್‌ ಟವೆಲ್‌ ಮಾದರಿಯ ಸ್ಕರ್ಟ್‌ (Towel Skirt) ಅನ್ನು ಪ್ರಮುಖ ಫ್ಯಾಷನ್‌ ಬ್ರ್ಯಾಂಡ್‌ ಬಲೆನ್ಸಿಯಾಗಾ (Balenciaga) ಹೊರ ತರಲು ಸಜ್ಜಾಗಿದೆ. ಲಿಂಗ ಬೇಧವಿಲ್ಲದೆ ಈ ಉಡುಪನ್ನು ಎಲ್ಲರೂ ಧರಿಸಬಹುದು. ಆದರೆ ಇದರ ಬೆಲೆ ಕೇಳಿದರೆ ನೀವು ಹೌಹಾರುವುದು ಖಚಿತ. ಸದ್ಯ ಈ ಟವೆಲ್‌ ಸ್ಕರ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ಬೆಲೆ ಎಷ್ಟು ಗೊತ್ತೆ?

ಈ ಟವೆಲ್‌ ಸ್ಕರ್ಟ್‌ನ ಬೆಲೆ ಬರೋಬ್ಬರಿ 925 ಡಾಲರ್‌ ಅಂದರೆ ಬರೋಬ್ಬರಿ 77,000 ರೂ.! ಬ್ರ್ಯಾಂಡ್‌ನ ಸೃಜನಶೀಲ ಪ್ರತಿಭೆ ಡೆಮ್ನಾ ಗ್ವಾಸಲಿಯಾ ಈ ವಿಶೇಷ ಉಡುಪನ್ನು ವಿನ್ಯಾಸಗೊಳಿಸಿದ್ದಾರೆ. ಈ ಸ್ಕರ್ಟ್‌ ಧರಿಸಿದರೆ ಬಾತ್‌ ಟವೆಲ್ ಅನ್ನು ಸೊಂಟದ ಸುತ್ತಲೂ ಸುತ್ತಿದಂತೆ ಕಾಣುತ್ತದೆ. ಇತ್ತೀಚೆಗೆ ಪ್ಯಾರಿಸ್‌ನಲ್ಲಿ ನಡೆದ ಸ್ಪ್ರಿಂಗ್ 2024 ಪ್ರದರ್ಶನದಲ್ಲಿ ಅನಾವರಣಗೊಂಡ ಈ ಅಸಾಮಾನ್ಯ ಉಡುಪು ಅತಿಯಾದ ಬೆಲೆಯಿಂದಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ಉಡುಪು ಮೊಣಕಾಲಿನವರೆಗೆ ಬರುವ ಉದ್ದದ ವಿನ್ಯಾಸವನ್ನು ಹೊಂದಿದೆ. ಟೆರ್ರಿ-ಕಾಟನ್ ಬಟ್ಟೆಯಿಂದ ಈ ಟವೆಲ್‌ ಅನ್ನು ನಿರ್ಮಿಸಲಾಗಿದೆ. ಅದರ ಮುಂಭಾಗದಲ್ಲಿ ಬಲೆನ್ಸಿಯಾಗಾ ಲಾಂಛನವನ್ನು ಕಸೂತಿ ಮಾಡಲಾಗಿದೆ. ಇದು ಯುನಿಸೆಕ್ಸ್ ಆಯ್ಕೆ ಮತ್ತು ಕಸ್ಟಮೈಸ್ ಮಾಡಬಹುದಾದ ಅವಕಾಶವನ್ನು ಹೊಂದಿದೆ. ಇದು ಮೂಲತಃ ದೈನಂದಿನ ಟವೆಲ್‌ನಂತೆ ಕಂಡು ಬರುತ್ತಿದೆ ಮತ್ತು ಫ್ಯಾಷನ್ ಆವಿಷ್ಕಾರವಲ್ಲ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: Viral Video: ಗೂಳಿಯೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸಬೇಕೆ? ಈತನ ತಂತ್ರ ಫಾಲೋ ಮಾಡಿ!

ನೆಟ್ಟಿಗರು ಏನಂದ್ರು?

ʼʼಟವೆಲ್‌ ಸ್ಕರ್ಟ್‌ ಹೊಸ ಫ್ಯಾಷನ್‌ ಅಂತೆ. ಇದು ಕೆಟ್ಟದಾಗಿದೆʼʼ ಎಂದು ಒಬ್ಬರು ಹೇಳಿದ್ದಾರೆ. “ಟವೆಲ್ ಸ್ಕರ್ಟ್ ತಮಾಷೆಯಲ್ಲ ಎಂದು ನನಗೆ ನಂಬಲು ಸಾಧ್ಯವಿಲ್ಲʼʼ ಎಂದಿದ್ದಾರೆ ಇನ್ನೊಬ್ಬರು. ಇತರರು ಈ ಸ್ಕರ್ಟ್‌ನ ಅಸಂಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ. “ಯಾರಾದರೂ ಅದನ್ನು ಧರಿಸುವುದನ್ನು ನೋಡಿದರೆ ಅವರು ಬಾತ್‌ರೂಮ್‌ನಿಂದ ಹಾಗೆಯೇ ಸೀದಾ ಬಂದಿದ್ದಾರೆ ಎಂದು ಭಾವಿಸುತ್ತೇನೆʼʼ ಎಂದು ಮತ್ತೊಬ್ಬರು ಟೀಕಿಸಿದ್ದಾರೆ. “ನಾನು ಈ ಡಿಸೈನರ್ ಬ್ರ್ಯಾಂಡ್‌ ಅನ್ನು ಪ್ರೀತಿಸುತ್ತೇನೆ. ಆದರೆ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲʼʼ ಮಗದೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. “ಬಲೆನ್ಸಿಯಾಗಾ ಟವೆಲ್ ಸ್ಕರ್ಟ್‌ಗೆ 920 ಡಾಲರ್‌ಗೆ ಎನ್ನುವುದು ಹುಚ್ಚುತನದ ಪರಮಾವಧಿ. ಯಾಕೆಂದರೆ 5 ಡಾಲರ್‌ನ ಟವೆಲ್‌ ಧರಿಸಿದರೆ ನಾನು ಇದೇ ನೋಟವನ್ನು ಸಾಧಿಸಬಹುದುʼʼ ಎಂದು ನೆಟ್ಟಿಗರೊಬ್ಬರು ತಿಳಿಸಿದ್ದಾರೆ.

ಐಕೆಇಎ (IKEA) ಈ ನಡುವೆ ಬಲೆನ್ಸಿಯಾಗಾ ಅನ್ನು ಟ್ರೋಲ್ ಮಾಡಲು ಮತ್ತು ಮಾರ್ಕೆಟಿಂಗ್ ತಂತ್ರವಾಗಿ ಬಳಸಲು ಈ ಅವಕಾಶವನ್ನು ಬಳಸಿಕೊಂಡಿದೆ. ಐಕೆಇಎಯ ಯುಕೆ ಇನ್‌ಸ್ಟಾಗ್ರಾಮ್‌ ಹ್ಯಾಂಡಲ್ ಬಲೆನ್ಸಿಯಾಗಾ ವೆಬ್‌ಸೈಟ್‌ನಲ್ಲಿ ಕಂಡುಬರುವ ತನ್ನ ವಿನಾರ್ನ್ ಬಾತ್ ಟವೆಲ್ ಮಾದರಿಯನ್ನು ಹೈಲೈಟ್ ಮಾಡಿದೆ. ಐಕೆಇಎಯಲ್ಲಿ ಟವೆಲ್ ಬೆಲೆ 16 ಡಾಲರ್‌ ಆಗಿದ್ದು, ಇದು ಅಗ್ಗದ ಮತ್ತು ಹೆಚ್ಚು ಸೂಕ್ತ ಆವೃತ್ತಿ ಎಂದು ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Manu Bhaker: ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಮನು ಭಾಕರ್; ವಿಡಿಯೊ ವೈರಲ್​

Manu Bhaker: ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯಲಿನ್‌ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದಾರೆ.

VISTARANEWS.COM


on

Manu Bhaker
Koo

ಪ್ಯಾರಿಸ್​: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ(paris olympics) 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ(Bronze Medalist Manu Bhaker) ಪದಕ ಗೆದ್ದು ಭಾರತೀಯರ ಮನಗೆದ್ದ ಮನು ಭಾಕರ್(Manu Bhaker) ಇದೀಗ ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದಿದ್ದಾರೆ. ಅವರು ಭಾರತದ ರಾಷ್ಟ್ರಗೀತೆಯನ್ನು ವಯಲಿನ್‌ ಮೂಲಕ ನುಡಿಸಿದ ವಿಡಿಯೊವೊಂದು ವೈರಲ್ ಆಗಿದೆ.

ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯಲಿನ್‌ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವರದಿಯಾದ ಪ್ರಕಾರ ಮನು ಕಂಚಿನ ಪದಕ ಗೆದ್ದ ಬಳಿಕ ವಯಲಿನ್‌ ನಡಿಸಿದ್ದು ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆಯುವ 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ(Paris Olympics) ಸರಬ್ಜೊತ್‌ ಸಿಂಗ್‌ ಜತೆ ಕಂಚಿನ ಪದಕದ ಪ್ಲೇ ಆಫ್ ಸುತ್ತಿನಲ್ಲಿ ಮನು ಕಣಕ್ಕಿಳಿಯಲಿದ್ದಾರೆ. ಭಾರತದ ಈ ಜೋಡಿ ಕೊರಿಯಾದ ಒಹ್‌ ಯೆ ಜಿನ್‌-ಲೀ ವೊನ್ಹೊ ವಿರುದ್ಧ ಸ್ಪರ್ಧೆಗೆ ಇಳಿಯಲಿದ್ದಾರೆ.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಆಗ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಅಂದಿನ ನಿರಾಸೆಯನ್ನು ಈ ಬಾರಿ ಪ್ಯಾರಿಸ್​ನಲ್ಲಿ ಪದಕ ಗೆಲ್ಲುವ ಮೂಲಕ ನೀಗಿಸಿಕೊಂಡರು.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

ಹರಿಯಾಣದ 22 ವರ್ಷದ ಮನು ಭಾಕರ್​ ಕಳೆದ ಅರ್ಹತಾ ಸುತ್ತಿನಲ್ಲಿ ಒಟ್ಟು 580 ಅಂಕ ಕಲೆ ಹಾಕಿ 3ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದರು. ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: 195 ಕಿ.ಮೀ ಒಂಟಿಯಾಗಿ ನಡೆದು ಮಾಲೀಕನಲ್ಲಿಗೆ ಮರಳಿದ ನಾಯಿ ಮಹಾರಾಜ!

Dog Love: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ಜ್ಞಾನದೇವ ಕುಂಬಾರ ಎಂಬವರಿಗೆ ಸೇರಿದ ಶ್ವಾನವಿದು. ಇದರ ಹೆಸರು ಮಹಾರಾಜ. ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಈ ಶ್ವಾನ 4 ದಿನಗಳ ಬಳಿಕ ಮನೆಯ ಮುಂದೆ ಪ್ರತ್ಯಕ್ಷವಾದುದನ್ನು ಕಂಡು ಮಾಲೀಕ ದಂಗಾಗಿದ್ದಾರೆ. ಇದು ಹೇಗೆ ಮರಳಿ ದಾರಿ ಹುಡುಕಿಕೊಂಡಿರಬಹುದು ಎಂಬ ಆಶ್ಚರ್ಯ ಎಲ್ಲರಲ್ಲೂ ಮೂಡಿದೆ.

VISTARANEWS.COM


on

dog love
Koo

ಚಿಕ್ಕೋಡಿ: ನಾಯಿಗಳು ಸ್ವಾಮಿನಿಷ್ಠೆಗೆ (loyalty) ಹೆಸರಾದವು ಎಂಬುದು ನಮಗೆಲ್ಲ ಗೊತ್ತಿದ್ದದ್ದೇ. ಅಂಥ ಹಲವು ಘಟನೆಗಳನ್ನೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನಾಯಿ ತನ್ನ ಸ್ವಾಮಿನಿಷ್ಠೆ, ಪ್ರೀತಿ, (Dog love) ಚುರುಕುತನದಿಂದ ಎಲ್ಲರನ್ನೂ ಅಚ್ಚರಿ ಆನಂದಲ್ಲಿ ಕೆಡವಿದೆ. 195 ಕಿಲೋಮೀಟರ್‌ ಕ್ರಮಿಸಿ ತನ್ನ ಮಾಲೀಕನ (Owner) ಮನೆಯ ಮುಂದೆ ಪ್ರತ್ಯಕ್ಷವಾಗಿದೆ! ಈ ಸುದ್ದಿ ಹಾಗೂ ನಾಯಿಯ ಫೋಟೋ ಎಲ್ಲೆಡೆ ವೈರಲ್‌ (Viral News) ಆಗುತ್ತಿದೆ.

ಬೆಳಗಾವಿ (Belagavi news) ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ಜ್ಞಾನದೇವ ಕುಂಬಾರ ಎಂಬವರಿಗೆ ಸೇರಿದ ಶ್ವಾನವಿದು. ಇದರ ಹೆಸರು ಮಹಾರಾಜ. ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಈ ಶ್ವಾನ 4 ದಿನಗಳ ಬಳಿಕ ಮನೆಯ ಮುಂದೆ ಪ್ರತ್ಯಕ್ಷವಾದುದನ್ನು ಕಂಡು ಮಾಲೀಕ ದಂಗಾಗಿದ್ದಾರೆ. ಇದು ಹೇಗೆ ಮರಳಿ ದಾರಿ ಹುಡುಕಿಕೊಂಡಿರಬಹುದು ಎಂಬ ಆಶ್ಚರ್ಯ ಎಲ್ಲರಲ್ಲೂ ಮೂಡಿದೆ.

ಇತ್ತೀಚೆಗೆ ಆಷಾಢ ಏಕಾದಶಿ ನಿಮಿತ್ತ ಇವರು ಕುಟುಂಬ ಸಮೇತ ಸೊಲ್ಹಾಪುರದ ಪಂಢರಪುರಕ್ಕೆ ತೀರ್ಥಯಾತ್ರೆಗೆ ಹೋಗಿದ್ದರು. ಜೊತೆಗೆ ಮಹಾರಾಜನೂ ತೆರಳಿತ್ತು. ಆದರೆ ಅಲ್ಲಿ ಜನಜಂಗುಳಿಯ ನಡುವೆ ಮಹಾರಾಜ ಮಿಸ್‌ ಆಗಿದ್ದ. ಎಷ್ಟೇ ಹುಡುಕಿದರೂ ಸಹ ಕಾಣದಾಗಿದ್ದ. ಆತನನ್ನು ಹುಡುಕಿ ಕಾಣದೆ ಇನ್ನು ಈತ ಸಿಗಲಾರ ಎಂದುಕೊಂಡ ಮರಳಿ ಬಂದಿದ್ದರು.

ಪಂಢರಪುರದಿಂದ ಯಮಗರ್ಣಿಗೆ 195 ಕಿಲೋಮೀಟರ್‌ ದೂರವಿದೆ. ಇವರು ಮನೆಗೆ ಬಂದ ನಾಲ್ಕು ದಿನಗಳ ಬಳಿಕ ಮಹಾರಾಜ, ಮನೆಯ ಮುಂದೆ ಕಾಣಿಸಿಕೊಂಡಿದ್ದಾನೆ! ಸುಮಾರು 195 ಕಿಮೀ ಕ್ರಮಿಸಿ ಮನೆಗೆ ಮರಳಿದ್ದಾನೆ. ಇದನ್ನು ಕಂಡು ಕುಟುಂಬದವರು ಮಾತ್ರವಲ್ಲ, ಇಡೀ ಗ್ರಾಮ ಚಕಿತವಾಗಿದೆ. ಶ್ವಾನಕ್ಕೆ ಹಾರ ಹಾಕಿ ಗುಲಾಲ್‌ ಹಚ್ಚಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಶ್ವಾನ‌ ನಿಷ್ಠೆಗೆ ಇಡೀ ಯಮಗರ್ಣಿ‌ ಗ್ರಾಮಸ್ಥರು ಫಿದಾ ಆಗಿದ್ದಾರೆ.

ಕಚೇರಿಯ ಟೇಬಲ್‌ನೊಳಗೆ ಅಡಗಿದ್ದ ಬೃಹತ್‌ ಹಾವನ್ನು ಹಿಡಿದ ಮಹಿಳಾ ಸಿಬ್ಬಂದಿ!

ಸಾಮಾನ್ಯವಾಗಿ ಮಹಿಳೆಯರು ಹಾವನ್ನು ನೋಡಿದರೆ ಭಯಬೀಳುತ್ತಾರೆ. ಒಂದು ಚಿಕ್ಕ ಹುಳ ಮೈಮೇಲೆ ಹರಿದಾಡಿದರೆ ದೊಡ್ಡ ಹಾವು ಮೈಮೇಲೆ ಬಿದ್ದಂತೆ ಕಿರುಚುತ್ತಾ ಓಡುತ್ತಾರೆ. ಅಂತಹದರಲ್ಲಿ ಮಹಿಳೆಯೊಬ್ಬಳು ಯಾವುದೇ ಭಯವಿಲ್ಲದೆ ದೊಡ್ಡ ಗಾತ್ರದ ಹಾವನ್ನೇ ಕೈಯಲ್ಲಿ ಸಲೀಸಾಗಿ ಹಿಡಿದಿದ್ದಾಳೆ. ಮಹಿಳೆ ಕಚೇರಿಯಲ್ಲಿ ಕೈಯಲ್ಲಿ ಹಾವನ್ನು ಹಿಡಿದು ಸ್ಟಂಟ್ ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಮಹಿಳೆಯ ಈ ಧೈರ್ಯಶಾಲಿ ಕೆಲಸವನ್ನು ಕಂಡು ಅಲ್ಲಿದ್ದ ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ಧೈರ್ಯಶಾಲಿ ಮಹಿಳೆ ಕಚೇರಿಯಲ್ಲಿ ಇರುವ ದೊಡ್ಡ ಗಾತ್ರದ ಹಾವನ್ನು ಯಾವುದೇ ಸುರಕ್ಷತಾ ಉಡುಗೆ ಅಥವಾ ಅಗತ್ಯ ಉಪಕರಣಗಳಿಲ್ಲದೆ ಬಹಳ ಸುಲಭವಾಗಿ ಹಿಡಿದಿದ್ದಾಳೆ.ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು @moronhumor ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ, ವಿಡಿಯೊದಲ್ಲಿ ಮಹಿಳೆ ಒಬ್ಬ ವ್ಯಕ್ತಿಯೊಂದಿಗೆ ಬರುತ್ತಿದ್ದು, ಅಲ್ಲಿ ಕಂಪ್ಯೂಟರ್ ಕೇಬಲ್ ಅನ್ನು ಸರಿಪಡಿಸುತ್ತಿದ್ದಾಳೆ ಎಂದು ವೀಕ್ಷಕರು ಭಾವಿಸುವಂತಿದೆ.

ಆದರೆ ಆಕೆ ಸಡನ್ ಆಗಿ ಹಾವಿನ ತಲೆಯನ್ನು ಹಿಡಿದು ಮೇಲಕ್ಕೆ ಎತ್ತಿದ್ದಾಳೆ. ನಂತರ ಹಾವು ಕಚ್ಚುತ್ತದೆ ಎಂಬ ಭಯವು ಇಲ್ಲದೇ ಅದನ್ನು ಚೀಲದಲ್ಲಿ ತುಂಬಿಸಿ ದಿನಸಿ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗುವಂತೆ ಹೊರಗೆ ತೆಗೆದುಕೊಂಡು ಬಂದಿದ್ದಾಳೆ. ಆ ವೇಳೆ ಅವಳ ಮುಖದಲ್ಲಿ ಭಯದ ಬದಲು ನಗು ಕಂಡುಬಂದಿದೆ. ಅಲ್ಲದೇ ಮಹಿಳೆ ಈ ವೇಳೆ ಹಾವಿನ ಬಗ್ಗೆ ಕೆಲವು ಸಲಹೆಗಳನ್ನು ಸಹ ಹಂಚಿಕೊಳ್ಳುತ್ತಾಳೆ. ಹಾವು ವಿಷಕಾರಿಯಲ್ಲ ಎಂದು ಅವಳು ತನ್ನ ಸಹೋದ್ಯೋಗಿಗಳಿಗೆ ಹೇಳಿದಳು. ಅವಳು ಹಾವುಗಳ ವಿವಿಧ ಲಕ್ಷಣಗಳು ಮತ್ತು ಹಾವನ್ನು ನಿರ್ವಹಿಸುವ ವಿಧಾನದ ಬಗ್ಗೆ ಜನರಿಗೆ ಮಾರ್ಗದರ್ಶನ ನೀಡಿದ್ದಾಳೆ. ಅಲ್ಲಿ ಹಾಜರಿದ್ದ ಜನರು ಆಕೆ ಸುಲಭವಾಗಿ ಹಾವನ್ನು ಹಿಡಿಯುವುದನ್ನು ಕಂಡು ಆಶ್ಚರ್ಯಚಕಿತರಾದರು. ಈ ವಿಡಿಯೊ ಅನೇಕರ ಗಮನವನ್ನು ಸೆಳೆದಿದೆ ಮತ್ತು ಅನೇಕರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರು ಮಹಿಳೆಯ ವೀಡಿಯೊವನ್ನು ಕಂಡು ಅವಳ ಶಾಂತ, ಧೈರ್ಯಶಾಲಿ ಕಾರ್ಯವನ್ನು ಕಂಡು ಹೊಗಳಿದ್ದಾರೆ.

ಬಳಕೆದಾರರೊಬ್ಬರು ಅವಳ ಕಾರ್ಯಕ್ಕೆ ಮತ್ತು ಅವಳ ತಿಳಿವಳಿಕೆಯನ್ನು ಕಂಡು ಆಕೆಯನ್ನು ರಾಕ್‌ಸ್ಟಾರ್‌ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಹೆಣ್ಣು ಹಾವು ಹಿಡಿಯುವುದನ್ನು ನೋಡಿಲ್ಲ ಎಂದು ಹೇಳಿ ಮಹಿಳೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೂರನೆಯವರು ಈಕೆ ನಿಜವಾದ ನಾಯಕಿ. ಹೀರೋಗಳಿಗಿಂತ ಒಂದು ಹೆಜ್ಜೆ ಮುಂದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Continue Reading

ದೇಶ

Taj Mahal : ತಾಜ್​ ಮಹಲ್ ಅಥವಾ ತೇಜೋ ಮಹಾಲಯ? ಐತಿಹಾಸಿಕ ಸ್ಮಾರಕ ಶಿವ ದೇವಾಲಯ ಎಂದು ವಾದಿಸಿ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ!

Taj Mahal : ಆಕೆಯನ್ನು ಪಶ್ಚಿಮ ದ್ವಾರದ ಬಳಿ ತಡೆಯಲಾಯಿತು. ಹೀಗಾಗಿ ಅವರಿಗೆ ತಾಜ್ ಮಹಲ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಸಮಯದ ನಂತರ, ರಾಜೇಶ್ವರ ದೇವಸ್ಥಾನದಲ್ಲಿ ಗಂಗಾಜಲವನ್ನು ಅರ್ಪಿಸಿದರು ” ಎಂದು ತಾಜ್ ಸುರಕ್ಷಾದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೈಯದ್ ಆರೀಬ್ ಅಹ್ಮದ್ ಹೇಳಿದ್ದಾರೆ.

VISTARANEWS.COM


on

Taj Mahal
Koo

ನವದೆಹಲಿ: ಕನ್ವರ್ ಯಾತ್ರೆಗೆ ಬಂದಿದ್ದ ಮಹಿಳೆಯೊಬ್ಬರು ಸೋಮವಾರ ಐತಿಹಾಸಿಕ ಸ್ಮಾರಕ ಹಾಗೂ ಪ್ರೀತಿಯ ಪ್ರತೀಕ ಎಂದು ಪರಿಗಣಿಸಲಾಗಿರುವ ತಾಜ್ ಮಹಲ್ (Taj Mahal ) ಹೊರಗೆ ‘ಕವಾಡ್’ ನೊಂದಿಗೆ (ಕನ್ವರ್ ಯಾತ್ರೆಯ ಸಮಯದಲ್ಲಿ ಗಂಗಾ ನದಿಯಿಂದ ಪವಿತ್ರ ನೀರು ಸಾಗಿಸುವ ಮಡಕೆಗಳು) ಬಂದ ಘಟನೆ ನಡೆಯಿತು. ಅವರು ತಾಜ್​ ಮಹಲ್ ಅಲ್ಲ, ಶಿವ ದೇವಾಲಯ ಎಂದು ವಾದಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷೆ ಮೀನು ರಾಥೋಡ್ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ. ಸೋಮವಾರ ತಾಜ್ ಮಹಲ್ನ ಪಶ್ಚಿಮ ದ್ವಾರಕ್ಕೆ ‘ಕವಡ್’ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದಾಗ ಅವರನ್ನು ತಡೆಯಲಾಯಿತು. ಆವರಣದಲ್ಲಿ ನಿಯೋಜಿಸಲಾಗಿದ್ದ ‘ತಾಜ್ ಸುರಕ್ಷಾ’ದ ಪೊಲೀಸರು ಆಕೆಗೆ ಮುಂದೆ ಹೋಗಲು ಅವಕಾಶ ನೀಡಲಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆಕೆಯನ್ನು ಪಶ್ಚಿಮ ದ್ವಾರದ ಬಳಿ ತಡೆಯಲಾಯಿತು. ಹೀಗಾಗಿ ಅವರಿಗೆ ತಾಜ್ ಮಹಲ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಸ್ವಲ್ಪ ಸಮಯದ ನಂತರ, ರಾಜೇಶ್ವರ ದೇವಸ್ಥಾನದಲ್ಲಿ ಗಂಗಾಜಲವನ್ನು ಅರ್ಪಿಸಿದರು ” ಎಂದು ತಾಜ್ ಸುರಕ್ಷಾದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೈಯದ್ ಆರೀಬ್ ಅಹ್ಮದ್ ಹೇಳಿದ್ದಾರೆ.

ತಾಜ್ ಮಹಲ್ ಅನ್ನು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂ ಗುಂಪುಗಳು ವಾದಿಸುತ್ತಿವೆ. ಅಂತೆಯೇ ಈ ವಾದವನ್ನು ಉಲ್ಲೇಖಿಸಿ ಮೀನು ರಾಥೋಡ್ “ತೇಜೋ ಮಹಾಲಯ” ದಲ್ಲಿ ‘ಗಂಗಾಜಲ’ ಅರ್ಪಿಸಲು ಅನುಮತಿ ನೀಡುವಂತೆ ಪೊಲೀಸ್ರಿಗೆ ಬೇಡಿಕೆ ಇಟ್ಟಿದ್ದರು.

ಅದು ತೇಜೋ ಮಹಾಲಯ’

ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೀನು ರಾಥೋಡ್, ತನ್ನ ಕನಸಿನಲ್ಲಿ ಶಿವ ಬಂದಿದ್ದು ತೇಜೋ ಮಹಾಲಯದಲ್ಲಿ ಗಂಗಾಜಲವನ್ನು ಅರ್ಪಿಸಲು ಆದೇಶಿಸಿದ್ದ ಎಂದು ಹೇಳಿದ್ದಾರೆ. “ನಾನು ಗಂಗಾಜಲ ಅರ್ಪಿಸಲು ತೇಜೋ ಮಹಾಲಯಕ್ಕೆ ಬಂದಿದ್ದೇನೆ. ಭೋಲೆ ಬಾಬಾ ನನ್ನ ಕನಸಿನಲ್ಲಿ ನನ್ನ ಬಳಿಗೆ ಬಂದಿದ್ದರು. ನಾನು ತೇಜೋ ಮಹಾಲಯದಲ್ಲಿ ಅರ್ಪಿಸಲು ಕನ್ವರ್ ಅನ್ನು ತಂದಿದ್ದೆ . ಆದರೆ, ಪೊಲೀಸರು ನನ್ನನ್ನು ಮುಂದೆ ಹೋಗದಂತೆ ತಡೆದಿದ್ದಾರೆ ಎಂದು ರಾಥೋಡ್ ಹೇಳಿದ್ದಾರೆ.

ಇದನ್ನೂ ಓದಿ: NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

ಬಲಪಂಥೀಯ ಗುಂಪಿನ ವಕ್ತಾರ ಸಂಜಯ್ ಜಾಟ್​ ಅವರು “ತೇಜೋ ಮಹಾಲಯ” ಎಂಬುದನ್ನು ಪುನರುಚ್ಚರಿಸಿದರು. ತಾಜ್ ಮಹಲ್ ಶಿವನ ದೇವಾಲಯವಾಗಿರುವುದರಿಂದ ಗಂಗಾಜಲವನ್ನು ಅರ್ಪಿಸುವುದು “ನಮ್ಮ ಹಕ್ಕು” ಎಂದು ಪ್ರತಿಪಾದಿಸಿದರು.

ತಾಜ್ ಮಹಲ್ ಶಿವನ ದೇವಾಲಯವಾದ ‘ತೇಜೋ ಮಹಾಲಯ’ ಆಗಿರುವುದರಿಂದ ತಾಜ್ ಮಹಲ್​​ನಲ್ಲಿ ‘ಗಂಗಾ ಜಲ’ ಅರ್ಪಿಸುವುದು ನಮ್ಮ ಹಕ್ಕು. ಮೀನು ಅವರು ಕಾಸ್​ಗಂಜ್​ನ ಸೊರೊನ್ ಜಿಯಿಂದ ಕನ್ವರ್ ತಂದು ಎರಡು ದಿನಗಳ ನಂತರ ಆಗ್ರಾ ತಲುಪಿದ್ದರು ಎಂದು ಜಾಟ್ ಹೇಳಿದ್ದಾರೆ.

ತಾಜ್ ಮಹಲ್

ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಉತ್ತರ ಪ್ರದೇಶದ ಆಗ್ರಾದಲ್ಲಿ ಯಮುನಾ ನದಿಯ ದಡದಲ್ಲದೆ. ಇದು ಬಿಳಿ ಅಮೃತಶಿಲೆಯಲ್ಲಿ ನಿರ್ಮಿಸಿದ ಸಮಾಧಿಯಾಗಿದೆ. ಈ ಅಪ್ರತಿಮ ಸ್ಮಾರಕವನ್ನು ಕ್ರಿ.ಶ 1631 ರಲ್ಲಿ ಐದನೇ ಮೊಘಲ್ ಚಕ್ರವರ್ತಿ ಶಹಜಹಾನ್ ತನ್ನ ಪತ್ನಿ ಮುಮ್ತಾಜ್ ನೆನಪಿನ ಸಮಾಧಿಯನ್ನು ಕಟ್ಟಿದ್ದ ಎಂದು ಇತಿಹಾಸ ಹೇಳುತ್ತದೆ.

ಈ ಸಂಕೀರ್ಣ ಸುಮಾರು 42 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದು, ಸಮಾಧಿಯು ಅದರ ಕೇಂದ್ರಬಿಂದುವಾಗಿದೆ. ಈ ಸಂಕೀರ್ಣವು ಮಸೀದಿ ಮತ್ತು ಅತಿಥಿ ಗೃಹ ಸಹ ಒಳಗೊಂಡಿದೆ/. ಉದ್ಯಾನಗಳಲ್ಲಿ ಮೂರು ಬದಿಗಳಲ್ಲಿ ಕ್ರೆನೆಲ್ಡ್ ಗೋಡೆಯಿಂದ ಸುತ್ತುವರೆದಿದೆ. ತಾಜ್ ಮಹಲ್ ನಲ್ಲಿ 1658 ರಲ್ಲಿ ನಿಧನರಾದ ಶಹಜಹಾನ್ ಅವರ ಸಮಾಧಿಯೂ ಇದೆ.

Continue Reading

ವೈರಲ್ ನ್ಯೂಸ್

Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Viral News: ನಗರದ ಲಕ್ಷ್ಮೀನಗರ ಚೌಕ್ ಬಳಿ ಘಟನೆ ನಡೆದಿದ್ದು, ಈ ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ದಂಪತಿಗಳು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಇಳಿದು ರಸ್ತೆಯಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೇ ಹಾದು ಹೋಗುತ್ತಿದ್ದ ನಗರದ ಕೆಲ ಯುವಕರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

VISTARANEWS.COM


on

Koo

ನಾಗ್ಪುರ: ಕಾರು-ಬೈಕುಗಳಲ್ಲಿ ಜೋಡಿಗಳ ರೊಮ್ಯಾನ್ಸ್‌, ಅಶ್ಲೀಲ ಕೃತ್ಯಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯ ಎನ್ನುವ ರೀತಿಯಲ್ಲಿ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಮಹಾರಾಷ್ಟ್ರದ ಉಪ-ರಾಜಧಾನಿ ನಾಗ್ಪುರದಲ್ಲಿ ಇದೀಗ ಅಂತಹದ್ದೇ ಮತ್ತೊಂದು ಘಟನೆ ಜನರನ್ನು ಬೆಚ್ಚಿ ಬೀಳಿಸುವಂತಿದೆ. ಜೋಡಿಯೊಂದು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಇಳಿದು ರಸ್ತೆಯಲ್ಲಿ ತಿರುಗಾಡಿದ್ದಾರೆ. ಇದನ್ನು ಕಂಡು ಜನ ಶಾಕ್‌ ಆಗಿದ್ದು, ಈ ಘಟನೆಗೆ ಖಂಡನೆ ವ್ಯಕ್ತವಾಗಿದೆ(Viral News).

ಘಟನೆ ವಿವರ:

ನಗರದ ಲಕ್ಷ್ಮೀನಗರ ಚೌಕ್ ಬಳಿ ಘಟನೆ ನಡೆದಿದ್ದು, ಈ ಘಟನೆ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ದಂಪತಿಗಳು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಇಳಿದು ರಸ್ತೆಯಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಈ ದೃಶ್ಯವನ್ನು ಅಲ್ಲೇ ಹಾದು ಹೋಗುತ್ತಿದ್ದ ನಗರದ ಕೆಲ ಯುವಕರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

ಸಿಕ್ಕಿರುವ ಮಾಹಿತಿ ಪ್ರಕಾರ ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ಲಕ್ಷ್ಮೀನಗರ ಚೌಕ್‌ನಿಂದ ಶ್ರದ್ಧಾನಂದಪೇಟ್ ಚೌಕ್‌ಗೆ ಹೋಗುವ ರಸ್ತೆಯಲ್ಲಿ ಜೋಡಿಯೊಂದು ಜಗಳ ಮಾಡಿಕೊಂಡು ಯುವಕನೊಬ್ಬ ಕಾರಿನಿಂದ ಇಳಿದಿದ್ದಾನೆ. ಅವನ ಮೈಮೇಲೆ ಒಂದೇ ಒಂದು ಬಟ್ಟೆಯೂ ಇರಲಿಲ್ಲ. ಸ್ವಲ್ಪ ಸಮಯದ ನಂತರ ಅದೇ ಸ್ಥಿತಿಯಲ್ಲಿದ್ದ ಯುವತಿಯೊಬ್ಬಳು ಕೂಡ ಕಾರಿನಿಂದ ಇಳಿದು ಯುವಕನ ಬಳಿ ಕ್ಷಮೆ ಯಾಚಿಸುತ್ತಿರುವುದು ಕಂಡು ಬಂದಿದೆ. ಇದಾದ ಬಳಿಕ ಯುವಕ ಫುಟ್ ಪಾತ್ ಬದಿಯಲ್ಲಿದ್ದ ತೆರೆದ ಮನೆಯತ್ತ ತೆರಳಿದ್ದಾನೆ. ಆಗ ರಸ್ತೆಯಲ್ಲಿ ಕೆಲವೇ ವಾಹನಗಳು ಸಂಚರಿಸುತ್ತಿದ್ದವು. ಹೀಗಿರುವಾಗ ಎರಡು ಬೈಕ್‌ಗಳಲ್ಲಿ ಹೋಗುತ್ತಿದ್ದ ಕೆಲ ಹುಡುಗರು ಈ ದೃಶ್ಯವನ್ನು ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ.

ಪೊಲೀಸರು ಹೇಳೋದೇನು?

ಬಜಾಜ್ ನಗರ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ವಿಠಲ್ ರಜಪೂತ್ ದಂಪತಿಯನ್ನು ಭಾನುವಾರ ಬೆಳಿಗ್ಗೆ ಗುರುತಿಸಲಾಯಿತು ಆದರೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿರುವಂತೆ ತೋರುತ್ತಿದ್ದರಿಂದ ಯಾವುದೇ ಕಾನೂನು ಕ್ರಮವನ್ನು ತೆಗೆದುಕೊಂಡಿಲ್ಲ. ಘಟನೆ ಬಗ್ಗೆ ಪರಿಶೀಲಿಸಲಾಗಿದೆ. “ನಾವು ದಂಪತಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಕರೆಸಿದ್ದೇವೆ, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಅನಿಯಂತ್ರಿತ ನಡವಳಿಕೆಯ ವಿರುದ್ಧ ಸಮರ್ಪಕವಾಗಿ ಸಲಹೆ ನೀಡಲಾಯಿತು. ದಂಪತಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿರುವುದರಿಂದ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ವರದಿಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ನಡೆದಿತ್ತು ಇಂತಹದ್ದೇ ಘಟನೆ

ಇತ್ತೀಚೆಗಷ್ಟೇ ನಗರದಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಜೋಡಿಯೊಂದು ರೋಮ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಸೀತಾಬುಲ್ಡಿ ಪೊಲೀಸರು ಯುವಕ ಹಾಗೂ ಯುವತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕುಟುಂಬ ಸಮೇತ ಠಾಣೆಗೆ ಕರೆಸಿ ಇಬ್ಬರಿಗೂ ವಾರ್ನಿಂಗ್‌ ಮಾಡಿದ್ದರು. ಇದಾದ ಬಳಿಕ ಬೈಕ್‌ನಲ್ಲಿ ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಇದನ್ನೋ ಓದಿ: Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Continue Reading
Advertisement
WhatsApp Shut down
ದೇಶ10 mins ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ11 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಮಳೆ18 mins ago

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Paris Olympics 2024
ಕ್ರೀಡೆ27 mins ago

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

Mekedatu Project
ಕರ್ನಾಟಕ33 mins ago

Mekedatu Project: ಎಚ್‌ಡಿಕೆ ಅನುಮತಿ ಕೊಡಿಸಿದರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

HD Kumaraswamy
ಕರ್ನಾಟಕ56 mins ago

Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

Nawab Malik
ದೇಶ1 hour ago

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

SSC Recruitment 2024
ಉದ್ಯೋಗ1 hour ago

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

Paris Olympics 2024
ಕ್ರೀಡೆ1 hour ago

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ20 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ21 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌