Viral News : ರೋಗಿಯ ಶವದ ಜತೆಯೇ ಏಳು ವರ್ಷ ಬದುಕಿದ ವೈದ್ಯ! ಇದು ನಿಜವಾದ ಹಾರರ್‌ ಸ್ಟೋರಿ Vistara News
Connect with us

ವೈರಲ್ ನ್ಯೂಸ್

Viral News : ರೋಗಿಯ ಶವದ ಜತೆಯೇ ಏಳು ವರ್ಷ ಬದುಕಿದ ವೈದ್ಯ! ಇದು ನಿಜವಾದ ಹಾರರ್‌ ಸ್ಟೋರಿ

ಅಮೆರಿಕದ ಫ್ಲೋರಿಡಾದಲ್ಲಿ ಕಾರ್ಲ್‌ ಹೆಸರಿನ ವೈದ್ಯ ತನ್ನ ಬಳಿ ಚಿಕಿತ್ಸೆ ಪಡೆದಿದ್ದ ರೋಗಿಯ ಮೃತದೇಹವನ್ನೇ ಏಳು ವರ್ಷಗಳ ಕಾಲ ಮನೆಯಲ್ಲಿಟ್ಟುಕೊಂಡಿದ್ದ (Viral News) ಕಥೆಯಿದು.

VISTARANEWS.COM


on

Koo

ವಾಷಿಂಗ್ಟನ್:‌ ಯಾರನ್ನಾದರೂ ಕೊಲೆ ಮಾಡಿ, ಅವರ ಶವದ ಜತೆಯೇ ಕೆಲ ದಿನಗಳ ಕಾಲ ಬದುಕುವ ವಿಚಿತ್ರ ಅಪರಾಧಿಗಳನ್ನು ನಾವು ಇತ್ತೀಚಿನ ದಿನಗಳಲ್ಲಿ ಕಂಡಿದ್ದೇವೆ. ಆದರೆ ಬಹಳ ಹಿಂದೆ ಅಂದರೆ 1880ರ ದಶಕದಲ್ಲಿಯೇ ವೈದ್ಯನೊಬ್ಬ ತಾನು ಚಿಕಿತ್ಸೆ ನೀಡಿದ್ದ ಯುವತಿಯ ಶವದೊಂದಿಗೇ ಬರೋಬ್ಬರಿ ಏಳು ವರ್ಷಗಳ ಕಾಲ ಬದುಕಿದ್ದ. ಅಂತದ್ದೊಂದು ವಿಚಿತ್ರ ಕಥೆ (Viral News) ಇಲ್ಲಿದೆ.

ಇದನ್ನೂ ಓದಿ: Viral Video: ಮಹೀಂದ್ರ XUV700 ಎಡಿಎಎಸ್ ದುರ್ಬಳಕೆ, ಸ್ಟಂಟ್ ವಿಡಿಯೋ ವೈರಲ್
ಹೌದು. ಅಮೆರಿಕದ ಫ್ಲೋರಿಡಾದಲ್ಲಿ ಡಾ.ಡೆತ್‌ ಎಂದೇ ಕರೆಸಿಕೊಂಡಿದ್ದ ವೈದ್ಯ ಕಾರ್ಲ್‌ ಟಾಂಜ್ಲರ್‌ ಒಮ್ಮೆ ಎಲೆನಾ ಮಿಲಾಗ್ರೊ ಡಿ ಹೊಯೊಸ್ ಹೆಸರಿನ ಯುವತಿಗೆ ಟ್ಯೂಮರ್‌ ಕಾಯಿಲೆಗೆ ಚಿಕಿತ್ಸೆ ನೀಡಿದ್ದ. ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಳು. ಆಕೆಯ ಕುಟುಂಬಸ್ಥರು ಶವವನ್ನು ಸಮಾಧಿ ಮಾಡಿದ ನಂತರ ಅಲ್ಲಿಗೆ ತೆರಳಿದ್ದ ಕಾರ್ಲ್‌ ಆ ಶವವನ್ನು ಮತ್ತೆ ಬದುಕಿಸುವುದಕ್ಕೆಂದು ಅದನ್ನು ಮನೆಗೆ ತಂದಿದ್ದ.

ಎಲೆನಾಳ ಕಣ್ಣನ್ನು ಗಾಜಿನಿಂದ ಬದಲಿಸಿ, ಕೆಲವು ಭಾಗಗಳನ್ನು ಬೇರೆ ಬೇರೆ ವಸ್ತುಗಳಿಂದ ಬದಲಿಸಿ ಆಕೆಯನ್ನು ಬದುಕಿಸುವ ಪ್ರಯತ್ನ ಮಾಡಿದ್ದ. ಬರೋಬ್ಬರಿ ಏಳು ವರ್ಷಗಳಾದ ನಂತರ ಎಲೆನಾಳ ಶವ ಸಮಾಧಿಯಲ್ಲಿ ಇಲ್ಲದಿರುವ ವಿಚಾರ ತಿಳಿದು ಆಕೆಯ ಕುಟುಂಬ ಪೊಲೀಸ್‌ ದೂರು ನೀಡಿತ್ತು. ಆಗ ಈ ವೈದ್ಯ ಸಿಕ್ಕಿಬಿದ್ದಿದ್ದ.

ಇದನ್ನೂ ಓದಿ: Viral Video : ಹಾವು ಮತ್ತು ಮುಂಗುಸಿ ನಡುವೆ ನಡೆಯಿತು ಫೈಟ್‌; ವೈರಲ್‌ ಆಯ್ತು ವಿಡಿಯೊ
ಹಲವಾರು ಡಿಗ್ರಿಗಳನ್ನು ಪಡೆದುಕೊಂಡು ಭೂಮಿ ಮೇಲಿನ ಬುದ್ಧಿವಂತ ವೈದ್ಯ ಎಂದೇ ಪ್ರಖ್ಯಾತಿ ಪಡೆದಿದ್ದ ಕಾರ್ಲ್‌ ಆಗ ಪೊಲೀಸರು ಹಾಗೂ ನ್ಯಾಯಾಲಯದ ಎದುರು ಹೇಳಿದ್ದ ಕಥೆ ಎಲ್ಲರಲ್ಲೂ ಭಯ ಹುಟ್ಟಿಸಿತ್ತು. ಕಾರ್ಲ್‌ 12 ವರ್ಷದವನಿದ್ದಾಗ ಆತನ ಹಿಂದಿನ ತಲೆಮಾರಿನವರ ದೆವ್ವ ಅವನ ಬಳಿ ಬಂದು ಮಾತನಾಡಿತ್ತಂತೆ. ಮುಂದೆ ಇವಳೇ ನಿನ್ನ ವಧುವಾಗುವವಳು ಎಂದು ಎಲೆನಾಳ ಆತ್ಮವನ್ನು ಕರೆತಂದು ಪರಿಚಯಿಸಿತ್ತಂತೆ. ಅದೇ ಕಾರಣಕ್ಕೆ ಆತ ಆಕೆಯ ದೇಹವನ್ನು ಏಳು ವರ್ಷಗಳ ಕಾಲ ಮನೆಯಲ್ಲೇ ಇಟ್ಟುಕೊಂಡು ಬದುಕಿಸುವ ಪ್ರಯತ್ನ ಮಾಡಿದ್ದ. ಆಕೆಯೇ ನನ್ನ ವಧು ಎಂದು ನ್ಯಾಯಾಲಯದ ಮುಂದೆಯೂ ಹೇಳಿದ್ದ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ದೇಶ

Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

ಶಾಸಕ ಬೇದಿರಾಮ್ ಅವರು ಭೇಟಿಕೊಟ್ಟಿದ್ದು ಗಾಝಿಪುರದ ಜಖಾನಿಯನ್​ ಏರಿಯಾದಲ್ಲಿ ನಿರ್ಮಿಸಲಾದ, ಜಂಗೀಪುರ- ಬಹರಿಯಾಬಾದ್-ಯೂಸುಫ್‌ಪುರ್ ಸಂಪರ್ಕ ರಸ್ತೆಗೆ. ಇಲ್ಲಿ 4.5 ಕಿಮೀಗಳಷ್ಟು ದೂರವನ್ನು 3.8 ಕೋಟಿ ರೂಪಾಯಿ ವೆಚ್ಚದಲ್ಲಿ ಆರು ತಿಂಗಳ ಹಿಂದಷ್ಟೇ ನಿರ್ಮಿಸಲಾಗಿತ್ತು.

VISTARANEWS.COM


on

Edited by

MLA scrapes off the asphalt Of Road In Uttar Pradesh Video Viral
Koo

ಗಾಝಿಪುರ: ಕಳಪೆಯಾದ ರಸ್ತೆಯನ್ನು ನೋಡಿ ಶಾಸಕರೊಬ್ಬರು ಕೆಂಡಾಮಂಡಲರಾಗಿ, ತಮ್ಮ ಬೂಟು ಕಾಲಿನಿಂದ ಆ ರಸ್ತೆಯನ್ನು ಕೆದರಿ, ಜಲ್ಲಿಕಲ್ಲು, ಡಾಂಬರುಗಳನ್ನೆಲ್ಲ ತೆಗೆದು ತೋರಿಸಿದ ಘಟನೆ ಉತ್ತರ ಪ್ರದೇಶದ ಗಾಝಿಪುರದಲ್ಲಿ ನಡೆದಿದೆ. ಶಾಸಕರ ಆಕ್ರೋಶ ಮತ್ತು ಅವರು ಕಾಲಿನಿಂದಲೇ ರಸ್ತೆಯನ್ನು ಕೆದರಿದ, ಗುತ್ತಿಗೆದಾರನಿಗೆ ಬಾಯಿಗೆ ಬಂದಂತೆ ಬೈದಿರುವ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಸುಹೇಲ್​ದೇವ್​ ಭಾರತೀಯ ಸಮಾಜ ಪಾರ್ಟಿ ಶಾಸಕ ಬೇದಿರಾಮ್​ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ಗಾಝಿಪುರಕ್ಕೆ ಭೇಟಿಕೊಟ್ಟಿದ್ದರು. ಅಲ್ಲಿ ಒಂದು ಕಡೆ ಹಾಳಾದ ರಸ್ತೆಯನ್ನು ನೋಡಿದ ಅವರು ಉಗ್ರಸ್ವರೂಪ ತಾಳಿದ್ದಾರೆ. ‘ಇದಕ್ಕೆ ಯಾರಾದರೂ ರಸ್ತೆ ಎನ್ನುತ್ತಾರಾ? ಇಲ್ಲಿ ಕಾರು ಸಂಚಾರ ಮಾಡಬಹುದಾ?’ ಎಂದು ಕೋಪದಿಂದ ಗುತ್ತಿಗೆದಾರನ ಬಳಿ ಪ್ರಶ್ನಿಸಿದ್ದಾರೆ.

‘ಗಾಝಿಪುರದಲ್ಲಿ ಹಲವು ಕಡೆಗಳಲ್ಲಿ ರಸ್ತೆ ಸರಿಯಿಲ್ಲ ಎಂದು ಸ್ಥಳೀಯರು ದೂರು ಕೊಟ್ಟ ಕಾರಣಕ್ಕೆ, ಪರಿಶೀಲನೆ ನಡೆಸಲು ಅಲ್ಲಿಗೆ ತೆರಳಿದ್ದೆ. ಆದರೆ ನಾನು ಅಲ್ಲಿಗೆ ಹೋದರೆ ಪಿಡಬ್ಲ್ಯೂಡಿ ಇಲಾಖೆಯ ಯಾವ ಅಧಿಕಾರಿಯೂ ಇರಲಿಲ್ಲ. ಹೀಗಾಗಿ ಗುತ್ತಿಗೆದಾರನನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಏನೆಂದು ತೋರಿಸಿದ್ದೇನೆ. ಅದಾದ ಮೇಲೆ ಪಿಡಬ್ಲ್ಯೂಡಿ ಉನ್ನತ ಅಧಿಕಾರಿಯೊಂದಿಗೆ ಮಾತಾಡಿದ್ದೇನೆ. ಕೋಟ್ಯಂತರ ರೂಪಾಯಿ ಬಿಡುಗಡೆ ಮಾಡಲಾಗಿದ್ದರೂ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಲ್ಲ. ಒಂದು ವರ್ಷ ಬಿಡಿ, ಆರು ತಿಂಗಳೂ ಕೂಡ ರಸ್ತೆ ಬಾಳಿಕೆಗೆ ಬರುವುದಿಲ್ಲ’ ಎಂದು ಶಾಸಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಂದಹಾಗೇ, ಶಾಸಕ ಬೇದಿರಾಮ್ ಅವರು ಭೇಟಿಕೊಟ್ಟಿದ್ದು ಗಾಝಿಪುರದ ಜಖಾನಿಯನ್​ ಏರಿಯಾದಲ್ಲಿ ನಿರ್ಮಿಸಲಾದ, ಜಂಗೀಪುರ- ಬಹರಿಯಾಬಾದ್-ಯೂಸುಫ್‌ಪುರ್ ಸಂಪರ್ಕ ರಸ್ತೆಗೆ. ಇಲ್ಲಿ 4.5 ಕಿಮೀಗಳಷ್ಟು ದೂರವನ್ನು 3.8 ಕೋಟಿ ರೂಪಾಯಿ ವೆಚ್ಚದಲ್ಲಿ ಆರು ತಿಂಗಳ ಹಿಂದಷ್ಟೇ ನಿರ್ಮಿಸಲಾಗಿತ್ತು. ಆದರೆ ಈಗಲೇ ಹಾಳಾಗಿದೆ. ಹೀಗಾಗಿ ಸ್ಥಳೀಯರು ಒಟ್ಟಾಗಿ ಅಲ್ಲಿನ ಶಾಸಕರಿಗೆ ದೂರು ಕೊಟ್ಟಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಹಾಳಾದ ರಸ್ತೆಯ ಚಿತ್ರಣ ಬಹಿರಂಗವಾಗಿದ್ದು ಇದೇ ಮೊದಲಲ್ಲ. ಕಳೆದ ವರ್ಷ ಪಿಲಿಬಿತ್​​ನಲ್ಲಿ ನಾಗರಿಕರೊಬ್ಬರು ರಸ್ತೆಯನ್ನು ತಮ್ಮ ಕೈಗಳಿಂದಲೇ ಕಿತ್ತು ಹಾಕಿದ್ದರು. ರಸ್ತೆ ಮೇಲ್ಮೈಯೆಲ್ಲ ಕಿತ್ತುಬಂದಿದ್ದನ್ನು ತೋರಿಸಿದ್ದರು. ಅದೆಷ್ಟು ಕಳಪೆಯಾಗಿ ರಸ್ತೆ ನಿರ್ಮಾಣ ಮಾಡಲಾಗಿದೆ ನೋಡಿ ಎಂದು ವಿಡಿಯೊ ಮೂಲಕ ತೋರಿಸಿದ್ದರು. ಆ ವಿಡಿಯೊ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿತ್ತು.

Continue Reading

ಕರ್ನಾಟಕ

Viral Video: ಅರ್ಧ ರಾತ್ರೀಲಿ ಮಧ್ಯ ರಸ್ತೇಲಿ ಮೊಬೈಲ್‌ ಹಿಡಿದು ನಿಂತಿದ್ದ ಇನ್ಫ್ಲುಯೆನ್ಸರ್‌; ಮುಂದಾಗಿದ್ದೇನು?

Viral Video: ಸೋಶಿಯಲ್‌ ಮೀಡಿಯಾ ಇನ್ಫ್ಲುಯೆನ್ಸರ್‌ಗಳು (social media influencers) ಎಲ್ಲೆಂದರಲ್ಲಿ ಮೊಬೈಲ್‌ ಹಿಡಿದು ವಿಡಿಯೊ ಮಾಡುವ ಮುನ್ನ ಹುಷಾರಾಗಿ ಇರಬೇಕು ಎಂದು ಸಾರುತ್ತಿದೆ ಈ ಘಟನೆ.

VISTARANEWS.COM


on

Edited by

Thieves who came to steal mobile phones will social media influencers making video
Koo

ಬೆಂಗಳೂರು: ನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿದೆ. ಸ್ಕೂಟರ್‌ನಲ್ಲಿ ಬಂದ ಕಳ್ಳರಿಬ್ಬರು ಮೊಬೈಲ್‌ ಕಸಿದು ಪರಾರಿ ಆಗಲು ಯತ್ನಿಸಿದ್ದಾರೆ. ರೆಸ್ಟೋರೆಂಟ್‌ ಬಳಿ ನಿಂತು ವಿಡಿಯೊ ಮಾಡುತ್ತಿದ್ದ ಇನ್ಫ್ಲುಯೆನ್ಸರ್‌ವೊಬ್ಬರ ಮೊಬೈಲ್‌ ಎಗರಿಸಲು ಬಂದ ಕಳ್ಳರ ಕೃತ್ಯದ ವಿಡಿಯೊ ಬೆಂಗಳೂರು 360 ಎಂಬ ಟ್ವಿಟರ್ ಪೇಜ್‌ನಲ್ಲಿ ವೈರಲ್‌ (viral video) ಆಗಿದೆ.

ಸೋಶಿಯಲ್‌ ಮೀಡಿಯಾ ಇನ್ಫ್ಲುಯೆನ್ಸರ್‌ ಆಗಿರುವ ರುಚಿಕಾ ಎಂಬುವರು ರೆಸ್ಟೋರೆಂಟ್‌ವೊಂದರ ಕಂಟೆಂಟ್‌ ಕ್ರಿಯೆಟ್‌ ಮಾಡಲು ಮುಂದಾಗಿದ್ದರು. ಮೊದಲಿಗೆ ಇಬ್ಬರು ಹುಡುಗಿಯರು Ever tried Gufha Restaurant? ಎನ್ನುತ್ತಾ ಮತ್ತಿಬ್ಬರು ಹುಡುಗಿಯರತ್ತ ಕ್ಯಾಮೆರಾ ತಿರುಗಿಸಿದರು. ಅಷ್ಟರಲ್ಲಿ ಸ್ಕೂಟರ್‌ನಲ್ಲಿ ಬಂದ ಇಬ್ಬರು ಖದೀಮರು ಮೊಬೈಲ್‌ ಎಗರಿಸಲು ಮುಂದಾದರು.

viral video Thieves who came to steal mobile phones will social media influencers making video
ಮೊಬೈಲ್‌ ಕಸಿಯಲು ಯತ್ನಿಸಿದ ಕಳ್ಳರು

ವಿಡಿಯೊ ಸಮೇತ ತಮ್ಮ ಅನುಭವ ಹಂಚಿಕೊಂಡಿರುವ ರುಚಿಕಾ, ನಾವು ಕಂಟೆಂಟ್ ಕ್ರಿಯೇಟರ್‌ಗಳಾಗಿರುವುದರಿಂದ ರೆಸ್ಟೋರೆಂಟ್‌ವೊಂದರ ಕಂಟೆಂಟ್‌ ಶೂಟಿಂಗ್ ಮಾಡುತ್ತಿದ್ದೆವು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಹುಡುಗರು ನಮ್ಮ ಕೈನಲ್ಲಿದ್ದ ನನ್ನ ಫೋನ್‌ ಕಸಿದುಕೊಳ್ಳಲು ಪ್ರಯತ್ನಿಸಿದರು. ಆದರೆ ಅದೃಷ್ಟವಶಾತ್ ನಾನು ಆ ಸಮಯದಲ್ಲಿ ನನ್ನ ಫೋನ್ ಅನ್ನು ಕೆಳಗೆ ಮಾಡಿದ್ದರಿಂದ ಕಳ್ಳತನ ಆಗುವುದು ತಪ್ಪಿತು ಎಂದಿದ್ದಾರೆ.

ಮೊಬೈಲ್‌ ಕಸಿಯಲು ಬಂದ ಕಳ್ಳರು

ರಾತ್ರಿ 11.15ರ ಸುಮಾರಿಗೆ ಜಯನಗರದಲ್ಲಿರುವ ರೆಸ್ಟೋರೆಂಟ್ ಹೊರಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಈ ಘಟನೆ ನಡೆಯುವ ಮುನ್ನ ಈ ಯುವತಿಯರು ಕನಿಷ್ಠ 20 ನಿಮಿಷಗಳ ಕಾಲ ಅಲ್ಲೆ ವಿಡಿಯೊ ರೆಕಾರ್ಡ್ ಮಾಡುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಇದೆನ್ನಲ್ಲ ದೂರದಿಂದಲೇ ಗಮನಿಸಿ ಕಳ್ಳರು ಫೋನ್‌ ಎಗರಿಸುವ ಕೃತ್ಯಕ್ಕೆ ಮುಂದಾಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು, ಘಟನೆಯ ವಿವರ ಹಾಗೂ ದೂರುದಾರರ ಫೋನ್‌ ನಂಬರ್‌ ನೀಡುವಂತೆ ತಿಳಿಸಿದ್ದಾರೆ.

ತಮಗೂ ಹೀಗೆಲ್ಲ ಆಗಿದೆ ಎಂದು ಕಮೆಂಟ್‌

ಯುವತಿಯ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಇದೇ ರೀತಿಯ ಅನುಭವ ತಮಗೂ ಆಗಿದೆ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ. ಅದರಲ್ಲೊಬ್ಬರು ತಾನು ರಾತ್ರಿ 8.30ರ ಸುಮಾರಿಗೆ ಕೋರಮಂಗಲ 1ನೇ ಬ್ಲಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಟೊದಲ್ಲಿ ಹಿಂಬಾಲಿಸಿ ಕೆಲವರು ಫೋನ್‌ ಕಸಿದುಕೊಳ್ಳಲು ಪ್ರಯತ್ನಸಿದರು. ಆದರೆ ಫೋನ್‌ ಗಟ್ಟಿಯಾಗಿ ಹಿಡಿದಿದ್ದರಿಂದ ಅದು ಸಾಧ್ಯವಾಗಲಿಲ್ಲ. ನಿತ್ಯವೂ ಈ ದಾರಿಯಲ್ಲೆ ಮನೆಗೆ ಹೋಗಿ ಬರಬೇಕಾಗಿರುವುದರಿಂದ ಭೀತಿಯಲ್ಲೆ ಓಡಾಡಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: Karnataka Rain: ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಬೆಂಗಳೂರು ಸೇರಿ ಇಲ್ಲೆಲ್ಲ ವರ್ಷಧಾರೆ

ಬೆಂಗಳೂರು ಸೇರಿದಂತೆ ವಿವಿಧೆಡೆ ಕಳ್ಳತನ ಪ್ರಕರಣಗಳು ವರದಿ ಆಗುತ್ತಿದ್ದು, ಪೊಲೀಸರ ಕಾರ್ಯವೈಖರಿ ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಸರಗಳ್ಳತನದಿಂದ ಹಿಡಿದು ಮೊಬೈಲ್‌ ಹಾಗೂ ಅಪಾರ್ಟ್‌ಮೆಂಟ್‌ನಲ್ಲಿ ಚಪ್ಪಲಿ, ಶೂ ಕಳ್ಳತನ ಮಾತ್ರವಲ್ಲದೆ ಮನೆಯ ಮುಂದೆ ಇಟ್ಟಿರುವ ಹೂ ಕುಂಡಗಳನ್ನೂ ಕಳ್ಳತನ ಮಾಡುವ ಖರ್ತಾನಕ್‌ ಕಳ್ಳರ ಹಾವಳಿ ಹೆಚ್ಚಿದೆ.

Continue Reading

ಕ್ರೈಂ

Viral News : ಅಪ್ಪ ಓದಿಕೋ ಎಂದಿದ್ದೇ ತಪ್ಪಾಯ್ತು; ನೇಣು ಬಿಗಿದುಕೊಂಡು ಮೃತಳಾದ 9 ವರ್ಷದ ಇನ್‌ಸ್ಟಾ ಕ್ವೀನ್!

ಅಪ್ಪ ಓದಿಕೊಳ್ಳುವುದಕ್ಕೆ ಹೇಳಿದರು ಎನ್ನುವ ಕಾರಣಕ್ಕೇ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ವಿಚಾರ ಎಲ್ಲೆಡೆ ಸುದ್ದಿಯಾಗಿದೆ.

VISTARANEWS.COM


on

Edited by

Koo

ಚೆನ್ನೈ: ಮಕ್ಕಳೆಂದ ಮೇಲೆ ಆಟ, ಪಾಠ ಇರಲೇಬೇಕು. ಓದದೆ ಆಟವನ್ನೇ ಆಡುತ್ತಿದ್ದರೆ ತಂದೆ ತಾಯಿ ಬೈಯುವುದು, ಹೊಡೆಯುವುದು ಸಾಮಾನ್ಯವೇ. ಆದರೆ ತಮಿಳುನಾಡಿನಲ್ಲಿ ಬಾಲಕಿಯೊಬ್ಬಳು ತನ್ನ ತಂದೆ ಓದಿಕೊಳ್ಳುವುದಕ್ಕೆ ಹೇಳಿದರು ಎನ್ನುವ ಕಾರಣಕ್ಕೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್‌ಸ್ಟಾಗ್ರಾಂನಲ್ಲಿ ಮಿಂಚುತ್ತಿದ್ದ ಆ ಬಾಲಕಿಯ ಸಾವು ಇದೀಗ ಎಲ್ಲೆಡೆ ವೈರಲ್‌ (Viral News) ಸುದ್ದಿಯಾಗಿದೆ. ಈ ಬಾಲಕಿ ಇನ್‌ಸ್ಟಾ ಕ್ವೀನ್ ಎಂದೇ ಖ್ಯಾತಳಾಗಿದ್ದಳು.

ಇದನ್ನೂ ಓದಿ: Viral Video: ಐಸ್​ ಕ್ರೀಂ ತಯಾರಿಸೋಕೆ ಫ್ರಿಜ್​ ಬೇಡ್ವೇ ಬೇಡ; ಸೀಲಿಂಗ್ ಫ್ಯಾನ್ ಇದ್ದರೂ ಸಾಕು ಎನ್ನುತ್ತಿದ್ದಾರೆ ಈ ಮಹಿಳೆ
ತಮಿಳುನಾಡಿನ ತಿರವಲ್ಲೂರು ನಿವಾಸಿ ಶಿವಮೂರ್ತಿ ಅವರ ಮಗಳು ಪ್ರತೀಕ್ಷಾ ಈಗಿನ್ನೂ 9ನೇ ವರ್ಷದಲ್ಲಿದ್ದಳು. ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌, ಪೋಸ್ಟ್‌ಗಳನ್ನು ಹಾಕುತ್ತಿದ್ದ ಪ್ರತೀಕ್ಷಾ ಊರಲೆಲ್ಲ ತುಂಬ ಪ್ರಸಿದ್ಧಳಾಗಿದ್ದಳಂತೆ. ಊರವರೆಲ್ಲರೂ ಆಕೆಗೆ ಇನ್‌ಸ್ಟಾ ಕ್ವೀನ್‌ ಎಂದೇ ಕರೆಯುತ್ತಿದ್ದರಂತೆ. ಸೋಮವಾರದಂದು ಆಕೆ ಶಿವಮೂರ್ತಿ ಅವರ ಮಾವನ ಮನೆ ಬಳಿ ಆಟವಾಡುತ್ತಿದ್ದಳು. ಅದನ್ನು ಕಂಡ ಶಿವಮೂರ್ತಿ ಆಟವಾಡಿದ್ದು ಸಾಕು, ಮನೆಗೆ ಹೋಗಿ ಓದಿಕೋ ಎಂದು ಹೇಳಿದ್ದಾರೆ. ಹಾಗೆಯೇ ಮನೆಯ ಕೀಯನ್ನು ಆಕೆಯ ಕೈಗೆ ಕೊಟ್ಟಿದ್ದಾರೆ.

ಮಗಳಿಗೆ ಕೀ ಕೊಟ್ಟ ಶಿವಮೂರ್ತಿ ಬೈಕ್‌ಗೆ ಪೆಟ್ರೋಲ್‌ ಹಾಕಿಸಿಕೊಂಡು ಬರಲೆಂದು ತೆರಳಿದ್ದಾರೆ. ರಾತ್ರಿ 8.15ರ ವೇಳೆಗೆ ಮನೆಗೆ ವಾಪಸು ಬಂದಿದ್ದಾರೆ. ಆಗ ಮನೆ ಒಳಗಿನಿಂದ ಲಾಕ್‌ ಆಗಿತ್ತು. ಎಷ್ಟೇ ಕರೆದರೂ ಮಗಳು ಬಂದು ಬಾಗಿಲು ತೆರೆದಿಲ್ಲ. ಗಾಬರಿಗೊಂಡ ಶಿವಮೂರ್ತಿ ಮನೆಯ ಕಿಟಕಿಯೊಂದನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಪ್ರತೀಕ್ಷಾ ಟವಲ್‌ ಒಂದರಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಆಕೆಯ ಜೀವ ಹೋಗದೆ ಒದ್ದಾಡುತ್ತಿದ್ದ ಹಿನ್ನೆಲೆ ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಐಸ್​ ಕ್ರೀಂ ತಯಾರಿಸೋಕೆ ಫ್ರಿಜ್​ ಬೇಡ್ವೇ ಬೇಡ; ಸೀಲಿಂಗ್ ಫ್ಯಾನ್ ಇದ್ದರೂ ಸಾಕು ಎನ್ನುತ್ತಿದ್ದಾರೆ ಈ ಮಹಿಳೆ

ಮಹಿಳೆ ಮೊದಲು ಹಾಲನ್ನು ಕಾಯಿಸಿಕೊಂಡು, ಐಸ್​ಕ್ರೀಂ ಮಾಡಲು ಹಾಕಬೇಕಾದ ಪದಾರ್ಥಗಳನ್ನೆಲ್ಲ ಅದಕ್ಕೆ ಹಾಕಿ, ಗ್ಯಾಸ್ ಸ್ಟವ್​ ಮೇಲಿಟ್ಟು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳುತ್ತಾರೆ. ಆ ಮಿಶ್ರಣವನ್ನು ಒಂದು ಚಿಕ್ಕ ಸ್ಟೀಲ್​ ಕ್ಯಾನ್​ಗೆ ಸುರಿಯುತ್ತಾರೆ. ಆಮೇಲೆ ಏನು ಮಾಡಿದರು ಎಂಬುದನ್ನು ಕೆಳಗಿನ ವಿಡಿಯೊದಲ್ಲೇ ನೋಡಿ !

VISTARANEWS.COM


on

Edited by

woman making ice cream using fan viral video
Koo

ಮೊದಲು ಐಸ್​ಕ್ರೀಂ ಎಂದರೆ ಅದು ಹೊರಗೆ ಅಂಗಡಿಗಳಲ್ಲಿ ಮಾತ್ರ ಸಿಗುತ್ತದೆ ಎಂಬ ಕಾಲವಿತ್ತು. ಆದರೆ ಈಗ ಫ್ರಿಜ್ ಇರುವ ಮನೆಗಳಲ್ಲೆಲ್ಲ ಸಾಮಾನ್ಯವಾಗಿ ಐಸ್​​ಕ್ರೀಂ ತಯಾರಿ ಮಾಡುತ್ತಾರೆ. ಅದೇನೇ ಇದ್ದರೂ, ಐಸ್​ಕ್ರೀಂ ಮಾಡಲು ಫ್ರಿಜ್​ ಅಂತೂ ಬೇಕೇಬೇಕು. ಆದರೆ ಫ್ರಿಜ್ ಇಲ್ಲದೆಯೂ ನಾನು ಐಸ್​ಕ್ರೀಂ ತಯಾರಿ ಮಾಡುತ್ತೇನೆ ಎನ್ನುತ್ತಾರೆ ಈ ಮಹಿಳೆ. ಈಕೆಯ ಐಡಿಯಾ ನೋಡಿ ನೆಟ್ಟಿಗರು ಅಚ್ಚರಿಯಿಂದ ಹುಬ್ಬೇರಿಸಿದ್ದಾರೆ. ಉದ್ಯಮಿ ಆನಂದ್​ ಮಹೀಂದ್ರಾ ಅವರು ಟ್ವಿಟರ್​ನಲ್ಲಿ ವಿಡಿಯೊ ಶೇರ್ (Viral Video) ಮಾಡಿಕೊಂಡಿದ್ದಾರೆ. ನೀವು ಒಮ್ಮೆ ನೋಡಿಬಿಡಿ.

ಮಹಿಳೆ ಮೊದಲು ಹಾಲನ್ನು ಕಾಯಿಸಿಕೊಂಡು, ಐಸ್​ಕ್ರೀಂ ಮಾಡಲು ಹಾಕಬೇಕಾದ ಪದಾರ್ಥಗಳನ್ನೆಲ್ಲ ಅದಕ್ಕೆ ಹಾಕಿ, ಗ್ಯಾಸ್ ಸ್ಟವ್​ ಮೇಲಿಟ್ಟು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳುತ್ತಾರೆ. ಆ ಮಿಶ್ರಣವನ್ನು ಒಂದು ಚಿಕ್ಕ ಸ್ಟೀಲ್​ ಕ್ಯಾನ್​ಗೆ ಸುರಿಯುತ್ತಾರೆ. ಇಷ್ಟಾದ ಮೇಲೆ ಆಕೆ ಆ ಕ್ಯಾನ್​ಗೆ ಮುಚ್ಚಲು ಹಾಕಿ, ಮತ್ತೊಂದು ದೊಡ್ಡದಾದ ಅಲ್ಯೂಮೀನಿಯಂ ಪಾತ್ರೆಯಲ್ಲಿ ಅದನ್ನು ಇಡುತ್ತಾರೆ ಮತ್ತು ಹಾಲಿನ ಮಿಶ್ರಣ ಇರುವ ಕ್ಯಾನ್​​ಗೆ ಇರುವ ಹಿಡಿಕೆಗೆ ಒಂದು ಹಗ್ಗ ಕಟ್ಟುತ್ತಾರೆ. ಇದಾದ ಮೇಲೆ ಆಕೆ ಅಲ್ಯೂಮಿನಿಯಂ ಪಾತ್ರೆಯಲ್ಲಿ, ಸ್ಟೀಲ್​ ಕ್ಯಾನ್ ಸುತ್ತಲೂ ದೊಡ್ಡದೊಡ್ಡ ಐಸ್​ ತುಂಡುಗಳನ್ನು ಹಾಕುತ್ತಾರೆ. ಅಷ್ಟಾದ ಮೇಲೆ ಫ್ಯಾನ್​ ಸ್ವಿಚ್​ ಆನ್ ಮಾಡುತ್ತಾರೆ. ಅರೆ, ಅವರೇಕೆ ಫ್ಯಾನ್ ಆನ್​ ಮಾಡುತ್ತಾರೆ ಎಂದು ನಿಮಗೆ ಅನ್ನಿಸಬಹುದು. ಅಲ್ಲೇ ಇರುವುದು ಟ್ವಿಸ್ಟ್​…!

ಸ್ಟೀಲ್​ ಕ್ಯಾನ್​ ಹಿಡಿಕೆಗೆ ಕಟ್ಟಿರುವ ಹಗ್ಗದ ಇನ್ನೊಂದು ತುದಿಯನ್ನು ಸೀಲಿಂಗ್ ಫ್ಯಾನ್​ಗೆ ಕಟ್ಟಲಾಗಿರುತ್ತದೆ. ಫ್ಯಾನ್​ ತಿರುಗುತ್ತಿದ್ದಂತೆ ಇತ್ತ ಅಲ್ಯೂಮೀನಿಯಂ ಪಾತ್ರೆಯಲ್ಲಿರುವ ಸ್ಟೀಲ್​ ಕ್ಯಾನ್​ ಗಿರಗಿರನೆ ತಿರುಗುತ್ತದೆ. ಐಸ್​ ತುಂಡುಗಳ ಮಧ್ಯೆ ಅದು ತಿರುಗುತ್ತಿದ್ದಂತೆ, ಅದರೊಳಗೆ ಇರುವ ಹಾಲಿನ ಮಿಶ್ರಣ ಐಸ್​ಕ್ರೀಂ ಆಗಿ ಬದಲಾಗುತ್ತದೆ. ಮಹಿಳೆ ಕೆಲ ಹೊತ್ತು ಕ್ಯಾನ್​ಗೆ ಮುಚ್ಚಳವನ್ನು ಹಾಕಿ ತಿರುಗಿಸಿ, ಮತ್ತೆ ಕೆಲ ನಿಮಿಷಗಳ ಕಾಲ ಮುಚ್ಚಳವನ್ನು ತೆಗೆದು ತಿರುಗಲು ಬಿಡುತ್ತಾರೆ. ಬಳಿಕ ಅದನ್ನು ಅಲ್ಲಿಂದ ತೆಗೆದು, ಐಸ್​ ಕ್ರೀಂ ಎಂದು ಸರ್ವ್ ಮಾಡುತ್ತಾರೆ.

ವಿಡಿಯೊ ಶೇರ್ ಮಾಡಿಕೊಂಡ ಆನಂದ್ ಮಹೀಂದ್ರಾ ಅವರು, ‘ಮನಸ್ಸಿದ್ದಲ್ಲಿ ಮಾರ್ಗ. ಇದು ಹ್ಯಾಂಡ್​ ಮೇಡ್​ ಮತ್ತು ಫ್ಯಾನ್ ಮೇಡ್​ ಐಸ್​ ಕ್ರೀಂ. ಇದೆಲ್ಲ ಸಾಧ್ಯವಾಗುವುದು ಭಾರತದಲ್ಲಿ ಮಾತ್ರ’ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ. ಮಾರ್ಚ್​ 29ರಂದು ಈ ವಿಡಿಯೊವನ್ನು ಆನಂದ್ ಮಹೀಂದ್ರಾ ಶೇರ್ ಮಾಡಿಕೊಂಡಿದ್ದು, ಇಲ್ಲಿಯವರೆಗೆ 1.1 ಮಿಲಿಯನ್​ಗಳಷ್ಟು ವೀವ್ಸ್ ಬಂದಿದೆ. ಸಾವಿರಾರು ಜನರು ಲೈಕ್ಸ್ ಕೊಟ್ಟಿದ್ದಾರೆ. ವಿಶ್ವದಲ್ಲೇ ಅತ್ಯುತ್ತಮವಾದ ಐಸ್​ಕ್ರೀಂ ತಯಾರಿಸುವ ವಿಧಾನ ಎಂದು ಒಬ್ಬರು ಬರೆದಿದ್ದರೆ, ಇನ್ನೊಬ್ಬರು, ಮಹಿಳೆಯ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.

Continue Reading
Advertisement
Dakshina Kannada District 1st PUC result 2023 declared; here how to check
ಶಿಕ್ಷಣ8 mins ago

1st PUC Result 2023 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

Producer K Manju from Padmanabha Nagar assembly constituency Entry into the political arena
ರಾಜಕೀಯ10 mins ago

K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?

is State is Impotent? why did stop hate speech, asks supreme Court
ಕೋರ್ಟ್13 mins ago

Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ

karnataka election AT Ramaswamy and NY Gopalakrishna resigns
ಕರ್ನಾಟಕ21 mins ago

Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

T Chandrasekhar Former city council president Hiriyur
ಕರ್ನಾಟಕ32 mins ago

Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ

MLA scrapes off the asphalt Of Road In Uttar Pradesh Video Viral
ದೇಶ34 mins ago

Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

IPL 2023: Dhoni injured; Doubt for the first game
ಕ್ರಿಕೆಟ್36 mins ago

IPL 2023: ಧೋನಿಗೆ ಗಾಯ; ಮೊದಲ ಪಂದ್ಯಕ್ಕೆ ಅನುಮಾನ; ಸ್ಟೋಕ್ಸ್​ ನಾಯಕತ್ವ ಸಾಧ್ಯತೆ

WinLife Trust shivamogga
ಆರೋಗ್ಯ39 mins ago

Shivamogga News: ವಿನ್‌ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ

NY Gopalakrishna resigns
ಉತ್ತರ ಕನ್ನಡ39 mins ago

Karnataka Elections : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್‌ವೈ ಗೋಪಾಲಕೃಷ್ಣ; ಕಾಂಗ್ರೆಸ್‌ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ!

Question paper leak
ಕರ್ನಾಟಕ47 mins ago

SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್‌ನಲ್ಲಿ ಹರಿದಾಡಿದ ಕನ್ನಡ ಪೇಪರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ9 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ20 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!