Viral News : ಈ ಫೋಟೋದಲ್ಲಿ ಗೊಂಬೆಯನ್ನು ಹುಡುಕೋದು ಎಷ್ಟೊಂದು ಕಷ್ಟ! ನೀವೇನಾದರೂ ಹುಡುಕಬಲ್ಲಿರಾ? - Vistara News

ವೈರಲ್ ನ್ಯೂಸ್

Viral News : ಈ ಫೋಟೋದಲ್ಲಿ ಗೊಂಬೆಯನ್ನು ಹುಡುಕೋದು ಎಷ್ಟೊಂದು ಕಷ್ಟ! ನೀವೇನಾದರೂ ಹುಡುಕಬಲ್ಲಿರಾ?

ಫೋಟೋದಲ್ಲಿ ಅಡಗಿಕೊಂಡಿರುವ ಗೊಂಬೆಯನ್ನು ಹುಡುಕುವ ಆಟವಿದು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral News) ಆಗಿರುವ ಈ ಆಟದಲ್ಲಿ ನೀವು ಗೆಲ್ಲಬಲ್ಲಿರಾ?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೈಂಡ್ ಗೇಮ್ ಎಲ್ಲದಕ್ಕಿಂತ ದೊಡ್ಡ ಗೇಮ್. ಮನುಷ್ಯನ ಮೆದುಳಿಗೆ ಕೆಲಸ ಕೊಡುವ ಈ ಆಟ ನೋಡುವುದಕ್ಕೆ ಚಿಕ್ಕದೆನಿಸಿದರೂ ಆಡುವಾಗ ಚಾಣಾಕ್ಷತನ ಇರಬೇಕಾಗುತ್ತದೆ. ಅದೇ ರೀತಿ ಮೆದುಳು ಮತ್ತು ಕಣ್ಣಿಗೆ ಕೆಲಸ ಕೊಡುವ ಫೋಟೋ ಒಂದನ್ನು ನಾವಿಲ್ಲಿ ಕೊಡುತ್ತಿದ್ದೇವೆ. ಅದರಲ್ಲಿ ನೀವು ಮಾಡಬೇಕಾಗಿರುವುದು ಗೊಂಬೆಯನ್ನು ಹುಡುಕುವ (Viral News) ಕೆಲಸ.

ಇದನ್ನೂ ಓದಿ: Viral Video: ಹಿರಿಯ ನಟಿ ರೇಖಾರನ್ನು ನೋಡುತ್ತಿದ್ದಂತೆಯೇ ಓಡಿ ಹೋಗಿ ತಬ್ಬಿಕೊಂಡ ಅಲಿಯಾ ಭಟ್
ಈ ಚಿತ್ರದಲ್ಲಿ ಬಾತು ಕೋಳಿ, ಟೆಡ್ಡಿ ಬೇರ್ ಸೇರಿ ಅನೇಕ ರೀತಿಯ ಚಿಕ್ಕ ಚಿಕ್ಕ ಚಿತ್ರಗಳಿವೆ. ಆದರೆ ಇದರಲ್ಲಿ ಒಂದೇ ಒಂದು ಗೊಂಬೆಯೂ ಇದೆ. ಅದನ್ನು ಹುಡುಕುವ ಆಟ ಈಗ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದೆ. ಮತ್ತೇನಕ್ಕೆ ತಡ, ನೀವೂ ಒಮ್ಮೆ ಚಿತ್ರವನ್ನು ಕೂಲಂಕುಷವಾಗಿ ನೋಡಿ ಗೊಂಬೆಯನ್ನು ಹುಡುಕಿ.


ಚಿತ್ರದ ಎಡಭಾಗದಲ್ಲಿ ಗೊಂಬೆಯಿದೆ. ಫೋನು, ಬಾತುಕೋಳಿ, ಚೆಂಡು, ಟೆಡ್ಡಿ ಬೇರ್ ಮತ್ತು ಕಾರು ಈ ಗೊಂಬೆಯನ್ನು ಅಲ್ಪಸ್ವಲ್ಪ ಮುಚ್ಚಿವೆ. ಈ ಫೋಟೋ ನೋಡಿ ಗೊಂಬೆ ಹುಡುಕಲಾಗದೆ ಅನೇಕರು ಸೋತಿದ್ದಾರೆ. ಎಲ್ಲೋ ಕೆಲವರು ಮಾತ್ರ ಗೊಂಬೆಯನ್ನು ಪತ್ತೆ ಹಚ್ಚಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

ಯಾವಾಗ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಇದೇ ವೇಳೆ ಮೋದಿ ಅವರು ತಮ್ಮ ಬಗ್ಗೆ ಮಾಡಲಾದ ಟ್ರೋಲ್‌ ವಿಡಿಯೊವನ್ನು ಇಷ್ಟಪಟ್ಟಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಸೋಷಿಯಲ್‌ ಮೀಡಿಯಾ ಜಮಾನದಲ್ಲಿ ಗಣ್ಯರ ಕುರಿತು ಟ್ರೋಲ್‌ (Troll) ಮಾಡುವುದು, ಮೀಮ್‌ಗಳ (Meme) ಮೂಲಕ ಅವರ ಕಾಲೆಳೆಯುವುದು ಸಾಮಾನ್ಯ. ವಿಡಿಯೊ ಅಥವಾ ರೀಲ್ಸ್‌ ನೋಡಿ, ನಕ್ಕು, ಮುಂದೆ ಹೋಗುವಂತಹ ಟ್ರೋಲ್‌ಗಳು ವೈರಲ್‌ (Viral Video) ಆಗುತ್ತವೆ. ಆದರೆ, ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ ಮೂಲಕ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಟ್ರೋಲ್‌ ಮಾಡಿದ್ದಕ್ಕೆ ಇಬ್ಬರು ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಪಶ್ಚಿಮ ಬಂಗಾಳ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ತಮ್ಮ ಬಗ್ಗೆ ಮಾಡಿದ ಟ್ರೋಲ್‌ ವಿಡಿಯೊವನ್ನು ಮೆಚ್ಚಿಕೊಂಡಿದ್ದಾರೆ.

ಸಾವಿರಾರು ಜನರ ಮಧ್ಯೆ ವ್ಯಕ್ತಿಯೊಬ್ಬ ಅತ್ಯುತ್ಸಾಹದಿಂದ ಬಂದು ಡಾನ್ಸ್‌ ಮಾಡುತ್ತಾನೆ. ಆ ವ್ಯಕ್ತಿಯ ಬದಲಿಗೆ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಮೋದಿ ಅವರು ಡಾನ್ಸ್‌ ಮಾಡುವಂತೆ ಎಡಿಟ್‌ ಮಾಡಲಾಗಿದೆ. ಈ ಟ್ರೋಲ್‌ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ ವ್ಯಕ್ತಿಯೊಬ್ಬ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾನೆ. “ಸರ್ವಾಧಿಕಾರಿ ನರೇಂದ್ರ ಮೋದಿ ಅವರು ಈ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ್ದಕ್ಕೆ ನನ್ನನ್ನು ಬಂಧಿಸಲಿಕ್ಕಿಲ್ಲ” ಎಂದು ಕ್ರಿಪ್ಟಿಕ್‌ ಆಗಿ ಪೋಸ್ಟ್‌ ಮಾಡಿದ್ದಾನೆ. ಆದರೆ, ಆ ವಿಡಿಯೊವನ್ನೇ ಶೇರ್‌ ಮಾಡಿದ ಮೋದಿ, ಅದನ್ನು ಮೆಚ್ಚಿಕೊಂಡಿದ್ದಾರೆ.

ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

“ನಿಮ್ಮಂತೆ, ನಾನು ಕೂಡ ನಾನೇ ನೃತ್ಯ ಮಾಡಿದಂತೆ ಬಿಂಬಿಸಿರುವ ವಿಡಿಯೊವನ್ನು ನೋಡಿ ಎಂಜಾಯ್‌ ಮಾಡಿದ್ದೇನೆ. ಇಂತಹ ಕ್ರಿಯೇಟಿವಿಯಿಂದ ಕೂಡಿರುವ ಟ್ರೋಲ್‌ಗಳು ಚುನಾವಣೆ ಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿವೆ” ಎಂದು ಹೇಳುವ ಮೂಲಕ ನರೇಂದ್ರ ಮೋದಿ ಅವರು ತಮ್ಮ ಬಗ್ಗೆ ಮಾಡಿದ ಟ್ರೋಲ್‌ಅನ್ನು ಕೂಡ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಸಕಾರಾತ್ಮಕ ಮನೋಭಾವ, ಮೀಮರ್‌ಗಳನ್ನು ಕೂಡ ಹೊಗಳುವ ರೀತಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ರೋಲ್‌ ಸಹಿಸದ ದೀದಿ

ನರೇಂದ್ರ ಮೋದಿ ಅವರು ಡಾನ್ಸ್‌ ಮಾಡುವ ರೀತಿ ಬಿಂಬಿಸಿದ ರೀತಿಯೇ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಮೊದಲು ಹಂಚಿಕೊಳ್ಳಲಾಗಿತ್ತು. ತಮಾಷೆಗಾಗಿ ಮಾಡಿದ ವಿಡಿಯೊ ಕಂಡ ಪಶ್ಚಿಮ ಬಂಗಾಳ ಪೊಲೀಸರು, ಪೋಸ್ಟ್‌ ಮಾಡಿದ ಇಬ್ಬರಿಗೆ ಕಠಿಣ ಕ್ರಮದ ಎಚ್ಚರಿಕೆ ಜತೆಗೆ ನೋಟಿಸ್‌ ನೀಡಿದ್ದಾರೆ.

ಯಾವಾಗ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಆ ಮೂಲಕ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading

ಪ್ರಮುಖ ಸುದ್ದಿ

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Anand Mahindra: ದೆಹಲಿಯಲ್ಲಿ ಜಸ್‌ಪ್ರೀತ್‌ ಎಂಬ ಬಾಲಕನು ತನ್ನ ತಂದೆ ತೀರಿಕೊಂಡ ಬಳಿಕ ಕುಟುಂಬಕ್ಕೆ ನೆರವಾಗಲಿ ಎಂದು ಶಾಲೆ ಬಿಟ್ಟು, ಬೀದಿ ಬದಿ ಊಟ, ತಿಂಡಿಯ ಅಂಗಡಿ ಇಟ್ಟುಕೊಂಡಿದ್ದ. ಈ ವಿಡಿಯೊ ವೈರಲ್‌ ಆಗುತ್ತಲೇ ಆತನ ನೆರವಿಗೆ ಧಾವಿಸುವ ಮೂಲಕ ಆನಂದ್‌ ಮಹೀಂದ್ರಾ ಮಾನವೀಯತೆ ಮೆರೆದಿದ್ದಾರೆ. ಬಾಲಕನ ಶಿಕ್ಷಣಕ್ಕೆ ನೆರವು ನೀಡಲಾಗುವುದು ಎಂದು ಆನಂದ್‌ ಮಹೀಂದ್ರಾ ಘೋಷಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Anand Mahindra
Koo

ನವದೆಹಲಿ: ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್‌ ಮಹೀಂದ್ರಾ (Anand Mahindra) ಅವರು ಉದ್ಯಮಿಯಾಗಿ, ಸ್ಫೂರ್ತಿದಾಯಕ ಮಾತುಗಳಿಂದ ಜನರಿಗೆ ಪ್ರೇರೇಪಣೆ ನೀಡುವ ಜತೆಗೆ ಸಮಾಜಮುಖಿ ಕಾರ್ಯಗಳಿಂದಲೂ ಖ್ಯಾತಿ ಗಳಿಸಿದ್ದಾರೆ. ದೇಶಕ್ಕಾಗಿ ಸೇವೆ ಸಲ್ಲಿಸಿದವರು, ಕಷ್ಟದಲ್ಲಿರುವವರು ಸೇರಿ ಹಲವರಿಗೆ ಅವರು ಆಗಾಗ ಸಹಾಯ ಮಾಡುತ್ತಲೇ ಇರುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲಿ (Delhi) ತಂದೆ ತೀರಿಕೊಂಡ ಬಳಿಕ ಶಿಕ್ಷಣ ತೊರೆದು, ಬೀದಿ ಬದಿ ಗೂಡಂಗಡಿ ಇಟ್ಟಿದ್ದ ಬಾಲಕನಿಗೆ ಆನಂದ್‌ ಮಹೀಂದ್ರಾ ನೆರವಿನ ಹಸ್ತ ಚಾಚಿದ್ದಾರೆ.

ಹೌದು, ಜಸ್‌ಪ್ರೀತ್‌ ಎಂಬ ಬಾಲಕನು ತನ್ನ ತಂದೆ ತೀರಿಕೊಂಡ ಬಳಿಕ ಕುಟುಂಬಕ್ಕೆ ನೆರವಾಗಲಿ ಎಂದು ಶಾಲೆ ಬಿಟ್ಟು, ಬೀದಿ ಬದಿ ಊಟ, ತಿಂಡಿಯ ಅಂಗಡಿ ಇಟ್ಟುಕೊಂಡಿದ್ದ. ಈ ವಿಡಿಯೊ ವೈರಲ್‌ ಆಗುತ್ತಲೇ ಆತನ ನೆರವಿಗೆ ಧಾವಿಸುವ ಮೂಲಕ ಆನಂದ್‌ ಮಹೀಂದ್ರಾ ಮಾನವೀಯತೆ ಮೆರೆದಿದ್ದಾರೆ. “ಧೈರ್ಯಕ್ಕೆ ಇನ್ನೊಂದು ಹೆಸರೇ ಜಸ್‌ಪ್ರೀತ್.‌ ಆದರೆ, ಈತನ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು. ಈತ ದೆಹಲಿಯ ತಿಲಕ್‌ ನಗರದಲ್ಲಿ ಇದ್ದಾನೆ ಎಂದು ಅನಿಸುತ್ತಿದೆ. ಯಾರಿಗಾದರೂ ಈತನ ಕಾಂಟ್ಯಾಕ್ಟ್‌ ನಂಬರ್‌ ಸಿಕ್ಕರೆ ನನಗೆ ಕೊಡಿ. ಈತನ ಶಿಕ್ಷಣಕ್ಕೆ ಮಹೀಂದ್ರಾ ಫೌಂಡೇಷನ್‌ ಸಹಾಯ ಮಾಡಲಿದೆ” ಎಂದು ಬಾಲಕನ ವಿಡಿಯೊ ಸಮೇತ ಆನಂದ್‌ ಮಹೀಂದ್ರಾ ಅವರು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರ ಪ್ರದೇಶದಲ್ಲಿ ಕೆಲ ದಿನಗಳ ಹಿಂದಷ್ಟೇ ಅಮೆಜಾನ್‌ನ ಅಲೆಕ್ಸಾ (Alexa) ವಾಯ್ಸ್‌ ಅಸಿಸ್ಟಂಟ್‌ ಬಳಸಿ ಮಂಗಗಳ ದಾಳಿಯಿಂದ ತನ್ನನ್ನು ಹಾಗೂ ತನ್ನ ಅಕ್ಕನ ಮಗಳನ್ನು ರಕ್ಷಿಸಿದ 13 ವರ್ಷದ ಚಾಣಾಕ್ಷ ಬಾಲಕಿಗೆ ಈಗ ಆನಂದ್‌ ಮಹೀಂದ್ರಾ ಅವರು ಉದ್ಯೋಗ ನೀಡುವ ಆಫರ್‌ ಕೊಟ್ಟಿದ್ದರು. ತಂತ್ರಜ್ಞಾನವನ್ನು ಬಳಸಿ ಮಂಗಗಳಿಂದ ಬಚಾವಾದ 13 ವರ್ಷದ ಬಾಲಕಿ ನಿಕಿತಾಗೆ ಉದ್ಯೋಗ ಕೊಡುವ ಕುರಿತು ಆನಂದ್‌ ಮಹೀಂದ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. “ಆಧುನಿಕ ಕಾಲದಲ್ಲಿ ನಾವು ತಂತ್ರಜ್ಞಾನದ ಗುಲಾಮರಾಗುತ್ತೇವೋ ಎಂಬ ಆತಂಕ ಕಾಡುತ್ತಿದೆ. ಆದರೆ, ಈ ಬಾಲಕಿಯು ಜಗತ್ತಿನಲ್ಲಿ ಮನುಷ್ಯನ ದಕ್ಷತೆಯನ್ನು ತಂತ್ರಜ್ಞಾನವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾಳೆ” ಎಂಬುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

“ಬಾಲಕಿಯ ಕ್ಷಿಪ್ರ ಯೋಚನಾಶಕ್ತಿಯು ಅತ್ಯದ್ಭುತವಾಗಿದೆ. ಅನಿರೀಕ್ಷಿತ ಜಗತ್ತಿನಲ್ಲಿ ಹೇಗೆ ಯೋಚಿಸಬೇಕು, ಯಾವ ರೀತಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಈಕೆಯು ಸಾಬೀತುಪಡಿಸಿದ್ದಾಳೆ. ಈ ಬಾಲಕಿಯು ಶಿಕ್ಷಣ ಮುಗಿಸಿ, ಕಾರ್ಪೊರೇಟ್‌ ಜಗತ್ತಿಗೆ ಕಾಲಿಡಲು ತೀರ್ಮಾನಿಸಿದರೆ, ಮಹೀಂದ್ರಾ ಕಂಪನಿಯಲ್ಲಿ ಅವಳಿಗೊಂದು ಕುರ್ಚಿ ಕಾಯುತ್ತಿರುತ್ತದೆ” ಎಂಬುದಾಗಿ ಆನಂದ್‌ ಮಹೀಂದ್ರಾ ಅವರು ನಿಕಿತಾಗೆ ಉದ್ಯೋಗದ ಆಫರ್‌ ನೀಡಿದ್ದಾರೆ. ಆನಂದ್‌ ಮಹೀಂದ್ರಾ ಅವರ ಕುರಿತೂ ಜನ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ: Anand Mahindra: ಸರ್ಫರಾಜ್ ಖಾನ್ ತಂದೆಗೆ ಥಾರ್ ಎಸ್‌ಯುವಿ ಗಿಫ್ಟ್​ ಕೊಟ್ಟ ಮಹೀಂದ್ರಾ

Continue Reading

ಪ್ರಮುಖ ಸುದ್ದಿ

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಮೆಹರ್‌ ಜಹಾನ್‌ ಹಾಗೂ ಮನ್ನಾನ್‌ ಜೈದಿಯು 2023ರ ನವೆಂಬರ್‌ನಲ್ಲಿ ಮದುವೆಯಾಗಿದ್ದಾರೆ. ಮೆಹರ್‌ ಜಹಾನ್‌ಗೆ ಕುಡಿತದ ಚಟ ಇರುವ, ಆಗಾಗ ಸಿಗರೇಟು ಸೇದುವ ಚಟ ಇರುವುದು ಮನ್ನಾನ್‌ ಜೈದಿಗೆ ಗೊತ್ತಾಗಿದೆ. ಪತ್ನಿಯ ಚಟಗಳ ಕುರಿತು ಅರಿತುಕೊಂಡ ಮನ್ನಾನ್‌ ಜೈದಿಯು ನಾಲ್ಕು ಮಾತು ಬೈದಿದ್ದಾನೆ. ಇಷ್ಟಕ್ಕೇ ಆಕೆಯು, ಗಂಡನಿಗೆ ಇನ್ನಿಲ್ಲದ ಕಿರುಕುಳ ನೀಡಿ, ಕೊಲೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ.

VISTARANEWS.COM


on

Woman
Koo

ಲಖನೌ: ರಾತ್ರಿ ಗಂಡ ಕುಡಿದು ಮನೆಗೆ ಬಂದರೆ ಹೆಂಡತಿಗೆ ಕೋಪ ಬಂದೇ ಬರುತ್ತದೆ. ಆಗ ಅವರು ಬೈಯುತ್ತಾರೆ, ಊಟ ಕೊಡಲ್ಲ, ನಾನೇ ಸತ್ತುಹೋಗುತ್ತೇನೆ ಎಂದು ಹೆದರಿಸುತ್ತಾರೆ. ಆತನ ನಶೆ ಇಳಿದ ಮೇಲೆ ಸಂಬಂಧಿಕರನ್ನು ಕರೆಸಿ ಬುದ್ಧಿವಾದ ಹೇಳುತ್ತಾರೆ. ಆದರೆ, ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯೊಬ್ಬರು ತಾವೇ ಮದ್ಯಪಾನ ಮಾಡಿ, ಪತಿ ಗಂಡನ ಗುಪ್ತಾಂಗವನ್ನೇ ಸುಟ್ಟು, ಅದನ್ನು ಕತ್ತರಿಸಲು ಯತ್ನಿಸಿದ್ದಾರೆ. ಈ ಭೀಕರ ವಿಡಿಯೊ (Viral Video) ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಹೌದು, ಅಮ್ರೋಹ ಜಿಲ್ಲೆಯ ಚಾಕ್‌ ಮೆಹೂದ್‌ ಗ್ರಾಮದಲ್ಲಿ ಮೆಹರ್‌ ಜಹಾನ್‌ ಎಂಬ 30 ವರ್ಷದ ಮಹಿಳೆಯು ಪತಿ ಮನ್ನಾನ್‌ ಜೈದಿಯ ಗುಪ್ತಾಂಗ ಸುಟ್ಟು, ಕತ್ತರಿಸಲು ಯತ್ನಿಸಿದ್ದಾರೆ. ದಿನವಿಡೀ ದುಡಿದು ಮನೆಗೆ ಬಂದ ಗಂಡನಿಗೆ ಮಹಿಳೆಯು ಹಾಲಿನಲ್ಲಿ ಮತ್ತು ಬರುವ ಅಂಶವನ್ನು ಸೇರಿಸಿ, ಆತ ನಶೆಗೆ ಜಾರುತ್ತಲೇ ಕೈ ಕಾಲು ಕಟ್ಟಿಹಾಕಿದ್ದಾರೆ. ಕೈ ಕಾಲು ಕಟ್ಟಿ, ಆತನ ಗುಪ್ತಾಂಗವನ್ನು ಸಿಗರೇಟಿನಿಂದ ಸುಟ್ಟ ಬಳಿಕವೇ ಮನ್ನಾನ್‌ ಜೈದಿಗೆ ಎಚ್ಚರವಾಗಿದೆ. ಇನ್ನೇನು ಗುಪ್ತಾಂಗ ಕತ್ತರಿಸಬೇಕು ಎನ್ನುವಷ್ಟರಲ್ಲೇ ಆತನು ಕೂಗಾಡಿದ್ದಾನೆ. ಬಳಿಕ ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಮೆಹರ್‌ ಜಹಾನ್‌ನನ್ನು ಬಂಧಿಸಿದ್ದಾರೆ.

ಕುಡಿತದ ಚಟ ಇರುವ ಮೆಹರ್‌

ಮೂಲಗಳ ಪ್ರಕಾರ, ಮೆಹರ್‌ ಜಹಾನ್‌ ಹಾಗೂ ಮನ್ನಾನ್‌ ಜೈದಿಯು 2023ರ ನವೆಂಬರ್‌ನಲ್ಲಿ ಮದುವೆಯಾಗಿದ್ದಾರೆ. ಮೆಹರ್‌ ಜಹಾನ್‌ಗೆ ಕುಡಿತದ ಚಟ ಇರುವ, ಆಗಾಗ ಸಿಗರೇಟು ಸೇದುವ ಚಟ ಇರುವುದು ಮನ್ನಾನ್‌ ಜೈದಿಗೆ ಗೊತ್ತಾಗಿದೆ. ಪತ್ನಿಯ ಚಟಗಳ ಕುರಿತು ಅರಿತುಕೊಂಡ ಮನ್ನಾನ್‌ ಜೈದಿಯು ನಾಲ್ಕು ಮಾತು ಬೈದಿದ್ದಾನೆ. ನಿನ್ನ ತಂದೆ-ತಾಯಿಗೆ ಹೇಳುತ್ತೇನೆ ಎಂದಿದ್ದಾರೆ. ಇದರಿಂದಾಗಿ ಕುಪಿತಗೊಂಡ ಮೆಹರ್‌ ಜಹಾನ್‌, ಗಂಡನನ್ನು ಕಟ್ಟಿ ಹಾಕಿ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಕುಡಿದ ನಶೆಯಲ್ಲಿಯೇ ಮಹಿಳೆಯು ಗಂಡನಿಗೆ ಕಿರುಕುಳ ಕೊಟ್ಟಿದ್ದಾರೆ ಎನ್ನಲಾಗಿದೆ. ವೈರಲ್‌ ಆದ ವಿಡಿಯೊದ ಪ್ರಕಾರ, ಪತ್ನಿಯು ಸಿಗರೇಟಿನಿಂದ ಸುಡುತ್ತಲೇ ಸಹಾಯಕ್ಕಾಗಿ ಅಂಗಲಾಚಿದ ಧ್ವನಿಯು ಕೇಳಿಸಿದೆ. ನನ್ನ ಪಾಡಿಗೆ ನಾನು ಮದ್ಯಪಾನ ಮಾಡಿಕೊಂಡು, ಸಿಗರೇಟು ಸೇದಿಕೊಂಡು ಇರುತ್ತೇನೆ. ಇದರ ಕುರಿತು ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ ಎಂಬುದಾಗಿ ಮಹಿಳೆಯು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸದ್ಯ, ಮನ್ನಾನ್‌ ಜೈದಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Continue Reading

ಕೊಡಗು

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Marriage Cancel : ಯಾವ್ಯಾವುದೋ ಕಾರಣಕ್ಕೆ ಮದುವೆಯ ದಿನ ಮುರಿದು ಬಿದ್ದಿರುವುದು ನೋಡಿದ್ದೇವೆ. ಆದರೆ ಕೊಡಗಿನಲ್ಲಿ ವರನ ಕಡೆಯವರಿಗೆ ಸಿಹಿ ತಿಂಡಿ‌ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯೊಂದು ಮುರಿದಿದೆ.

VISTARANEWS.COM


on

By

marriage cancel in kodagu
Koo

ಕೊಡಗು: ವರದಕ್ಷಿಣೆ ಕೊಡಲಿಲ್ಲ ಎಂದು ಮದುವೆ ದಿನವೇ ವರನೊಬ್ಬ ಮದುವೆ ಬೇಡ (Marriage Cancel) ಎಂದಿದ್ದಾನೆ. ಮದುವೆ ಬೇಡ ಎನ್ನಲು ಮೊದಲು ಕಾರಣ ಕೊಟ್ಟಿದ್ದು, ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲದ ಕಾರಣ ಹೇಳಿ ನನಗೆ ಈ ಮದುವೆ ಬೇಡ ಎಂದು ಗಲಾಟೆ ಮಾಡಿದ್ದಾನೆ.

ಕೊಡಗು ಜಿಲ್ಲೆಯಲ್ಲಿ ಸೋಮವಾರ ಪೇಟೆಯ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ಘಟನೆ ನಡೆದಿದೆ. ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿ ಮತ್ತು ತುಮಕೂರು ಜಿಲ್ಲೆಯ ಯುವಕ ನೊಂದಿಗೆ ಮೇ 5ರಂದು ಮದುವೆ ನಿಶ್ಚಯಾಗಿವಾಗಿತ್ತು. ಆದರೆ ರಾತ್ರೋ ರಾತ್ರಿ ವರ ಉಂಗುರ ಕಳಚಿಕೊಟ್ಟು ಹೋಗಿದ್ದಾನೆ.

ವಿವಾಹಕ್ಕೂ ಮೊದಲು ವರನ ಕಡೆಯವರಿಂದ ವರದಕ್ಷಿಣೆ ಕೊಡುವಂತೆ ಒತ್ತಾಯವು ಕೇಳಿ ಬಂದಿತ್ತು ಎನ್ನಲಾಗಿದೆ. ಚಿನ್ನಾಭರಣ ಮತ್ತು ಬೆಂಗಳೂರಿನಲ್ಲಿ ಸೈಟ್ ಕೊಡುವಂತೆ ವರನ ಪೋಷಕರು ಒತ್ತಾಯಿಸಿದ್ದರು. ಮದುವೆ ದಿನ ಚಿನ್ನ ಕೊಟ್ಟಿಲ್ಲ ಎಂದು ಊಟದ ನೆಪ ಹೇಳಿ ಗಲಾಟೆ ತೆಗೆದು ಮದುವೆ ಬೇಡ ಎಂದು ಬಿಟ್ಟು ಹೋಗಿದ್ದಾರೆ ಎಂದು ವಧುವಿನ ಪೋಷಕರು ಆರೋಪಿಸಿದ್ದಾರೆ.

ವರನ ಕಡೆಯವರು ಶನಿವಾರ ಸಂಜೆಯೇ ತುಮಕೂರಿನಿಂದ ಮಂಟಪಕ್ಕೆ ಆಗಮಿಸಿದ್ದರು. ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ, ಎಂದು ಸಣ್ಣ ಗಲಾಟೆ ತೆಗೆದಿದ್ದಾರೆ. ನಂತರ ಈ ಮದುವೆ ಗಲಾಟೆಯು ಪೊಲೀಸ್‌ ಠಾಣೆಯ ಮೆಟ್ಟಿಲೇರಿದಾಗ, ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದಾನೆ.

ಇದೆಲ್ಲ ಘಟನೆಯಿಂದ ಬೇಸತ್ತ ವಧು ಕೂಡ ಈ ಮದುವೆಯೇ ಬೇಡ, ಈಗಲೇ ಈ ರೀತಿ ವರ್ತಿಸುವ ಗಂಡು ನನಗೂ ಬೇಡಪ್ಪಾ ಎಂದು ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ. ಹೀಗಾಗಿ ಗುರು ಹಿರಿಯರೆಲ್ಲರೂ ಸೇರಿ ನಿಶ್ಚಯಿಸಿದ ವಿವಾಹ ಕಾರ್ಯವು ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿದ್ದಿದೆ.

ಇದನ್ನೂ ಓದಿ: 12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್‌ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.

ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್‌ (Sam459om) ಎಂಬುವವರ ಖಾತೆಯಿಂದ ಪೋಸ್ಟ್‌ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.

ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bengaluru Rain
ಕರ್ನಾಟಕ4 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ4 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ4 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ4 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ4 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ5 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ5 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ5 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ5 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ9 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ10 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ10 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌