Viral News: ಆಗಸದಲ್ಲೇ ತೆಗೆದುಕೊಂಡಿತು ವಿಮಾನದ ಬಾಗಿಲು! ಭಯಾನಕ ದೃಶ್ಯದ ವಿಡಿಯೊ ಸೆರೆ Vistara News
Connect with us

ವೈರಲ್ ನ್ಯೂಸ್

Viral News: ಆಗಸದಲ್ಲೇ ತೆಗೆದುಕೊಂಡಿತು ವಿಮಾನದ ಬಾಗಿಲು! ಭಯಾನಕ ದೃಶ್ಯದ ವಿಡಿಯೊ ಸೆರೆ

ಆಗಸದಲ್ಲಿ ಹಾರುತ್ತಿದ್ದ ಏಷಿಯನ್‌ ಏರ್‌ಲೈನ್‌ ವಿಮಾನದ ಬಾಗಿಲು ತೆರೆದುಕೊಂಡ ಘಟನೆ ದಕ್ಷಿಣ ಕೋರಿಯಾದಲ್ಲಿ ನಡೆದಿದೆ. 194 ಮಂದಿ ಇದ್ದ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ (Viral News) ಮಾಡಿದೆ.

VISTARANEWS.COM


on

Koo

ದಕ್ಷಿಣ ಕೋರಿಯಾ: ಇತ್ತೀಚೆಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಪ್ರಯತ್ನಿಸಿದ್ದರು ಎಂಬ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈಗ ಅಂಥದ್ದೇ ಒಂದು ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಶುಕ್ರವಾರ ಏಷಿಯನ್‌ ಏರ್‌ಲೈನ್‌ನ ವಿಮಾನ ಡಯೆಗು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಮಾಡುವ ಸಮಯದಲ್ಲಿ ಈ ಘಟನೆ ನಡೆದಿದ್ದಾಗಿ (Viral News) ವರದಿಯಾಗಿದೆ.

ವಿಮಾನದಲ್ಲಿ ಒಟ್ಟು 194 ಮಂದಿ ಪ್ರಯಾಣಿಸುತ್ತಿದ್ದು, ಈ ಘಟನೆಯಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಲಾಗಿದೆ. ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಗಿದೆ. ಬಾಗಿಲ ಬಳಿ ಕುಳಿತಿದ್ದ ಆರು ಮಂದಿಗೆ ಉಸಿರಾಟ ತೊಂದರೆಯುಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಾಗಿ ಗಾಳಿ ನುಗ್ಗಿದ್ದರಿಂದ ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Viral News : ಈಗಲೂ ಬಡತನದಲ್ಲೇ ಬೇಯುತ್ತಿದ್ದಾರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದು ಕೊಟ್ಟ ʼಸ್ಮೈಲ್‌ ಪಿಂಕಿʼ
ಬಾಗಿಲ ಬಳಿ ಕುಳಿತಿದ್ದ 30 ವರ್ಷ ಆಸುಪಾಸಿನ ವ್ಯಕ್ತಿಯೊಬ್ಬರು ಬಾಗಿಲನ್ನು ಕಾಲಿನಿಂದ ಒತ್ತಿದ್ದರಿಂದಾಗಿ ಬಾಗಿಲು ತೆರೆದುಕೊಂಡಿದೆ ಎನ್ನಲಾಗಿದೆ. ಈ ಸಂಬಂಧ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆತನ ಈ ನಡವಳಿಕೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.


ವಿಮಾನದ ಬಾಗಿಲು ತೆರೆದಾಗ ಗಾಳಿ ಒಳಗೆ ನುಗ್ಗಿದ್ದನ್ನು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ವಿಡಿಯೊ ಮಾಡಿದ್ದಾರೆ. ಅದರಲ್ಲಿ ಗಾಳಿಯ ಎಷ್ಟು ರಭಸದಲ್ಲಿ ನುಗ್ಗಿದೆ ಎನ್ನುವುದನ್ನು ಕಾಣಬಹುದಾಗಿದೆ. ವಿಡಿಯೊದ ಕೊನೆಯಲ್ಲಿ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ ಎಂದು ತೋರಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ವಿಡಿಯೊವನ್ನು ತೋರಿಸಲಾಗಿದೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡುತ್ತಿದ್ದು, ವೈರಲ್‌ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್‌ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್

Viral News: ಅತ್ಯಾಚಾರಕ್ಕೀಡಾದ ಬಾಲಕಿಯು ಈಗ ಗರ್ಭ ಧರಿಸಿದ್ದು, ಆಕೆಯ ವಯಸ್ಸನ್ನು ಪರಿಗಣಿಸಿ ನ್ಯಾಯಾಲಯವು ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ. ಆದರೆ, ಇದಕ್ಕೆ ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದೆ.

VISTARANEWS.COM


on

Edited by

Gujarat High Court On Termination Of Pregnancy
Koo

ಗಾಂಧಿನಗರ: 17 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೋಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆ ಗರ್ಭ ಧರಿಸಿ ಈಗ ತಿಂಗಳಾಗಿದೆ. ಆಕೆಯ ಗರ್ಭಪಾತಕ್ಕೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ತಳ್ಳಿಹಾಕಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು, “ಮೊದಲೆಲ್ಲ 17 ವರ್ಷದ ಹೆಣ್ಣುಮಕ್ಕಳು ಮಕ್ಕಳನ್ನು ಹೆರುತ್ತಿದ್ದರು, 14-15 ವರ್ಷಕ್ಕೆ ಮದುವೆಯಾಗುತ್ತಿದ್ದರು. ಇದೆಲ್ಲ ತಿಳಿಯಲು (Viral News) ಮನುಸ್ಮೃತಿ ಓದಿ” ಎಂದು ಕೂಡ ಹೇಳಿದೆ.

ಅತ್ಯಾಚಾರ ಸಂತ್ರಸ್ತೆಯ ವಯಸ್ಸನ್ನು ಪರಿಗಣಿಸಿ, ಆಕೆಗೆ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಸಂತ್ರಸ್ತ ಬಾಲಕಿಯ ತಂದೆಯು ಅರ್ಜಿ ಸಲ್ಲಿಸಿದ್ದರು. “ಹಿಂದಿನ ಕಾಲದಲ್ಲಿ 18 ವರ್ಷ ತುಂಬುವ ಮೊದಲೇ ಹೆಣ್ಣುಮಕ್ಕಳು ಮದುವೆಯಾಗಿ, ಮಕ್ಕಳನ್ನು ಹೆರುತ್ತಿದ್ದರು ಎಂಬುದು ಗೊತ್ತಿರಲಿ. ಇದನ್ನು ನೀವು ಓದಿಲ್ಲವೆಂದರೆ, ಮನುಸ್ಮೃತಿ ಓದಿ ತಿಳಿದುಕೊಳ್ಳಿ” ಎಂದು ನ್ಯಾಯಮೂರ್ತಿ ಸಮೀರ್‌ ಜೆ ದಾವೆ ಹೇಳಿದರು.

ಸಂತ್ರಸ್ತೆಯ ತಂದೆ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿಕಂದರ್‌ ಸೈಯದ್‌, “ಆಗಸ್ಟ್‌ 18ರಂದು ಬಾಲಕಿಯು ಮಗು ಹೆರುವ ಸಾಧ್ಯತೆ ಇದೆ. ವೈದ್ಯರು ಡೇಟ್‌ ಕೊಟ್ಟಿದ್ದಾರೆ. ಆಕೆಯ ವಯಸ್ಸನ್ನು ಪರಿಗಣಿಸಿ ಗರ್ಭಪಾತಕ್ಕೆ ಅನುಮತಿ ನೀಡಬೇಕು” ಎಂದು ವಾದ ಮಂಡಿಸಿದರು. ಆದರೆ, ನ್ಯಾಯಾಲಯವು, “ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದರೆ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿತು. ಹಾಗೆಯೇ, ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತು.

ಇದನ್ನೂ ಓದಿ: Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

ರಾಜಕೋಟ್‌ನಲ್ಲಿರುವ ಸಿವಿಲ್‌ ಆಸ್ಪತ್ರೆಯ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಅವರು ಬಾಲಕಿ ಹಾಗೂ ಆಕೆಯ ಹೊಟ್ಟೆಯಲ್ಲಿರುವ ಮಗುವಿನ ವೈದ್ಯಕೀಯ ತಪಾಸಣೆಯನ್ನು ತುರ್ತಾಗಿ ಮಾಡಬೇಕು ಎಂದು ಗುಜರಾತ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ. ವೈದ್ಯಕೀಯ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ ನ್ಯಾಯಾಲಯವು, ಜೂನ್‌ 15ಕ್ಕೆ ವಿಚಾರಣೆ ಮುಂದೂಡಿದೆ.

ಸಹೋದರನಿಂದಲೇ ಗರ್ಭ ಧರಿಸಿದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕೆಲ ದಿನಗಳ ಹಿಂದೆ ಕೇರಳ ಹೈಕೋರ್ಟ್‌ ಅನುಮತಿ ನೀಡಿತ್ತು. ಗರ್ಭಪಾತ ಮಾಡಿಸಲು ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದ ಏಕ ಸದಸ್ಯ ಪೀಠದ ನ್ಯಾ. ಜಿಯಾದ್‌ ರೆಹಮಾನ್‌ ಅವರು ಗರ್ಭಪಾತ ಮಾಡಿಸಲು ಅನುಮತಿ ನೀಡಿದ್ದರು.

“ಗರ್ಭಪಾತಕ್ಕೆ ಅನುಮತಿ ನೀಡದೆ ಹೋದರೆ ಸಾಮಾಜಿಕ ವ್ಯವಸ್ಥೆ ಹಾಗೂ ಬಾಲಕಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿತು. ವೈದ್ಯಕೀಯ ಮಂಡಳಿಯು ಗರ್ಭಪಾತದ ಕುರಿತು ವರದಿ ಸಲ್ಲಿಸಿತ್ತು. 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಸಾಮಾಜಿಕ ವ್ಯವಸ್ಥೆ ಹಾಗೂ ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ಸಿಕ್ಕಿತ್ತು.

Continue Reading

ಕ್ರಿಕೆಟ್

WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

ವಿರಾಟ್​ ಕೊಹ್ಲಿ ಅವರು ವಿಶ್ವ ಟೆಸ್ಟ್​​ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಔಟಾದ ತಕ್ಷಣ ಡಗೌಟ್​ನಲ್ಲಿ ಆಹಾರ ಸೇವಿಸಿದ ಕಾರಣಕ್ಕೆ ಟ್ರೋಲ್​ ಆಗಿದ್ದಾರೆ.

VISTARANEWS.COM


on

Edited by

Virat Kohli troll
Koo

ಲಂಡನ್​: ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅವರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರುವಲ್ಲಿ ಎಡವಿದ್ದಾರೆ. ಆದರೆ ಅವರು ಔಟ್​​ ಆಗಿರುವ ವಿಚಾರವನ್ನು ಹೊರತುಪಡಿಸಿ ಬೇರೆಯೇ ಕಾರಣಕ್ಕೆ ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ವಿರಾಟ್​ ಅವರು 14 ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ಪೆವಿಲಿಯನ್‌ಗೆ ತೆರಳಿದ ವಿರಾಟ್‌ ಕೊಹ್ಲಿ ಯಾವುದೇ ಚಿಂತೆ ಇಲ್ಲದವರಂತೆ ಇಶಾನ್​ ಕಿಶನ್​ ಮತ್ತು ಗಿಲ್​ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್​ ಆಗಿದೆ.

ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್​ ಇಂಡಿಯಾದ ಅಭಿಮಾನಿಗಳು ಮತ್ತು ಕೆಲವು ಕ್ರಿಕೆಟ್​ ಪಂಡಿತರು ಟೀಕೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರನ್ನು ತೀಕ್ಷ್ಣ ಮಾತುಗಳಿಂದ ಟ್ರೋಲ್​ ಮಾಡಿದ್ದಾರೆ. ಐಪಿಎಲ್​ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ನೆಟ್ಟಿಗರೊಬ್ಬರು ಟ್ರೋಲ್​ ಮಾಡಿದ್ದಾರೆ.

ಇದನ್ನೂ ಓದಿ WTC Final 2023: ಇನಿಂಗ್ಸ್​ ಹಿನ್ನಡೆ ಭಯದಲ್ಲಿ ಟೀಮ್​ ಇಂಡಿಯಾ

ತಂಡ ಸಂಕಷ್ಟದಲ್ಲಿದ್ದರೂ ನೀವು ಈ ರೀತಿ ಆನಂದದಲ್ಲಿರುವುದನ್ನು ಕಾಣುವಾಗ ಭಾರತ ತಂಡಕ್ಕಿಂತ ನಿಮಗೆ ಐಪಿಎಲ್​ ಟೂರ್ನಿಯೇ ಹೆಚ್ಚಾದಂತೆ ಕಾಣುತ್ತಿದೆ ಎಂದು ಮತ್ತೊಬ್ಬ ನೆಟ್ಟಿಗ ಟ್ರೋಲ್​ ಮಾಡಿದ್ದಾರೆ. ಇನ್ನಿ ಕೆಲವರು ಅರೇ ನೀವು ತಿನ್ನುತ್ತಿರುವ ಆಹಾರ ಯಾವುದು? ಎಂದು ಪ್ರಶ್ನೆ ಮಾಡುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.

ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್​ ಕೊಹ್ಲಿಯನ್ನು ಸಚಿನ್​ ತೆಂಡೂಲ್ಕರ್​ ಜತೆ ಯಾವತ್ತೂ ಹೋಲಿ ಮಾಡಬೇಡಿ ಎಂದು ನೆಟ್ಟಿಗೊರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಹ್ಲಿಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಲವು ಕಾರಣಕ್ಕೆ ಟ್ರೋಲ್​ ಆಗುತ್ತಿದೆ.

Continue Reading

ಕರ್ನಾಟಕ

Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್‌ ಕಾರ್ಡ್‌ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಡುಕರ ಸಂಘವು ಪತ್ರ ಬರೆದು ಮನವಿ ಮಾಡಿದೆ!

VISTARANEWS.COM


on

Edited by

Appeals to CM not to increase liquor prices
Koo

ಬೆಂಗಳೂರು: ಅನೇಕ ಬಜೆಟ್‌ ಮಂಡನೆ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಆಯಾ ಸರ್ಕಾರಗಳು ಶಾಕ್‌ ಕೊಡುತ್ತಲೇ ಬರುತ್ತಿವೆ. ಮದ್ಯದ ದರದ ಮೇಲೆ ಅಬಕಾರಿ ಸುಂಕವನ್ನು ಹೇರುತ್ತಿವೆ. ಈಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ನಡುವೆ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸವಾಲಿದೆ. ಅದಕ್ಕೆ ಹಣ ಹೊಂದಾಣಿಕೆಯನ್ನು ಮಾಡಬೇಕಿದೆ. ಇದು ಈಗ ಮದ್ಯ ಪ್ರಿಯರಲ್ಲಿ ತಲ್ಲಣವನ್ನು ಹುಟ್ಟಿಸಿದೆ. ಈ ಕಾರಣಕ್ಕೆ ಅವರೆಲ್ಲರೂ “ಎಣ್ಣೆಯ ವಿಷ್ಯ, ಬೇಡವೋ ಶಿಷ್ಯ” ಎಂಬ ಹಾಡನ್ನು ಹಾಡಬೇಕಾಗುತ್ತದೆ ಎಂದು ಆತಂಕದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮದ್ಯ ಪ್ರೇಮಿಗಳ/ಕುಡುಕರ ಸಂಘವು, ಈಗಾಗಲೇ ಮದ್ಯದ ಸುಂಕವನ್ನು ಹೆಚ್ಚಳ ಮಾಡಿದ್ದು, ಅದನ್ನು ಇಳಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರ ಈಗ ವೈರಲ್‌ (Viral News) ಆಗಿದೆ.

ಇದಲ್ಲದೆ, ಅಬಕಾರಿ ಸಚಿವರು, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ದಯಮಾಡಿ ಅಬಕಾರಿ ಸುಂಕವನ್ನು ಇಳಿಸಿ ಸಂಕಷ್ಟದಲ್ಲಿರುವ ಮದ್ಯ ಪ್ರಿಯರ ರಕ್ಷಣೆಗೆ ದಾವಿಸಿ ಎಂದು ಮೊರೆ ಇಟ್ಟಿದ್ದಾರೆ!

ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್!‌ 90 ರೂಪಾಯಿ ಮಿನಿಮಮ್ ಚಾರ್ಜ್‌ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?

Appeals to CM not to increase liquor prices Viral News
ಮುಖ್ಯಮಂತ್ರಿಗೆ ಪತ್ರ ಬರೆದ ಮದ್ಯಪ್ರಿಯರು

ಮನವಿ ಪತ್ರದಲ್ಲೇನಿದೆ?

ಮಾನ್ಯ ಮುಖ್ಯಮಂತ್ರಿ ಮತ್ತು ಮದ್ಯ ಪ್ರಿಯರ ಇಲಾಖೆ ಅಂದರೆ ಅಬಕಾರಿ ಇಲಾಖೆಯ ಸಚಿವರಲ್ಲಿ ವಿನಂತಿಸುವುದೇನೆಂದರೆ, ರಾಜ್ಯದಲ್ಲಿ ಜಾತಿ, ಧರ್ಮ, ಬಡವ ,ಬಲ್ಲಿದ, ರಾಜಕಾರಣಿ, ಡಾಕ್ಟರ್, ಪತ್ರಕರ್ತ, ಸರ್ಕಾರಿ ನೌಕರರು,‌ ವಕೀಲರು ಎಂಬ ತಾರತಮ್ಯ ಇಲ್ಲದೆ ಮದ್ಯ ಸೇವನೆಯನ್ನು ಮಾಡುತ್ತಾರೆ. ಎಲ್ಲ ವರ್ಗದವರು ಮದ್ಯ ಸೇವನೆಯನ್ನು ಮಾಡುತ್ತಿದ್ದು, ಇದು ಆಹಾರ ಸಂಸ್ಕೃತಿಯ ಭಾಗವಾಗಿದೆ. ಮದುವೆ, ಹಬ್ಬ ಹರಿದಿನಗಳಲ್ಲಿ ಆರಾಧನೆ ಪದ್ಧತಿಯಲ್ಲಿ, ಸಂತೋಷ ಕೂಟದಲ್ಲಿ ಮದ್ಯ ಪ್ರಿಯರು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ. ಸುರಪಾನಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ.

ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಇಷ್ಟೆಲ್ಲ ಆದಾಯ ಬರುತ್ತಿದ್ದರೂ ಮದ್ಯ ಪ್ರೇಮಿಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬ ದುಃಖಕರ ವಿಷಯ. ಈಗಾಗಲೇ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ.

Appeals to CM not to increase liquor prices Viral News
ಸಾಂದರ್ಭಿಕ ಚಿತ್ರ

ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಏನೆಂದರೆ, ಒಬ್ಬ ‌ಬಿಪಿಎಲ್‌ ಕಾರ್ಡ್ ಹೊಂದಿದವನ ಆದಾಯ ಅಲ್ಪ ಪ್ರಮಾಣದಲ್ಲಿ ಇರುತ್ತದೆ. ಮದ್ಯ ಪ್ರೇಮಿ ದಿನಗೂಲಿ ನೌಕರ ದಿನವೂ ಸರಾಸರಿ 180 ಎಂ.ಎಲ್‌. ಕುಡಿದರೂ ಅವನಿಗೆ ದಿನಕ್ಕೆ 200 ರಿಂದ 250 ರೂಪಾಯಿಯಷ್ಟು ಮದ್ಯಕ್ಕೆ ಖರ್ಚು ತಗಲುತ್ತದೆ. ಅಂದರೆ, ತಿಂಗಳಿಗೆ 7500 ರೂಪಾಯಿ ಬೇಕಾಗುತ್ತದೆ. ವಾರ್ಷಿಕ 90,000 ರೂಪಾಯಿ ಒಬ್ಬ ಮದ್ಯ ಪ್ರೇಮಿ ಕುಡುಕನಿಗೆ ಬೇಕಾಗುತ್ತದೆ.

ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಇದರಿಂದ ಮದ್ಯಮ ವರ್ಗ ಮತ್ತು ಬಡವರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಆದ್ದರಿಂದ ಮದ್ಯದ ಮೇಲಿನ ಸುಂಕದ ದರ ಹೆಚ್ಚಳ ಬಗ್ಗೆ ಪುನರ್ ಪರಿಶೀಲನೆ ಮಾಡಿ ಸ್ಥಳೀಯ ಬ್ರಾಂಡ್‌ನ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ ಹಾಗೂ ಬಿಯರ್ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಎಲ್ಲ ಮದ್ಯ ಪ್ರಿಯ ಬ್ರದರ್ಸ್ & ಸಿಸ್ಟರ್ಸ್ ಪರವಾಗಿ ವಿನಂತಿಸುತ್ತೇವೆ.

Continue Reading

ಪ್ರಮುಖ ಸುದ್ದಿ

New Country: ಕೇವಲ 15 ಲಕ್ಷ ರೂ.ನಲ್ಲಿ ರೆಡಿ ಆಯ್ತು ಹೊಸ ದೇಶ, ಹೆಸರು ಸ್ಲೋಜಾಮ್‌ಸ್ತಾನ!

New Country: ಅಮೆರಿಕದ ಪ್ರವಾಸಿಗ ತನ್ನದೇ ಆದ ಸ್ವಂತ ರಾಷ್ಟ್ರ ನಿರ್ಮಾಣ ಮಾಡಿದ್ದಾನೆ. ಅದು ಕೇವಲ ಹದಿನೈದು ಲಕ್ಷ ರೂಪಾಯಿ ವೆಚ್ಚ ಮಾಡಿದ್ದಾನಷ್ಟೇ.

VISTARANEWS.COM


on

Edited by

A new country is ready in just Rs 15 lakh and the name is Slowjamastan
Koo

ನವದೆಹಲಿ: ರೇಪ್ ಆರೋಪ ಹೊತ್ತು ದೇಶ ಪಲಾಯನ ಮಾಡಿದ ನಿತ್ಯಾನಂದ ಸ್ವಾಮಿ ಈಕ್ವೆಡಾರ್ ಕರಾವಳಿಯಲ್ಲಿ ಕೈಲಾಸ ಎಂಬ ತನ್ನದೇ ಆದ ಸ್ವಂತ ದೇಶ ನಿರ್ಮಾಣ ಮಾಡಿದ್ದು ಭಾರತೀಯರಿಗೆ ಗೊತ್ತೇ ಇರುತ್ತದೆ. ಅದೇ ರೀತಿ, ಅಮೆರಿಕ ವ್ಯಕ್ತಿಯೊಬ್ಬ ಸ್ವಂತ ದೇಶವನ್ನು (New Country) ಸೃಷ್ಟಿಸಿಕೊಂಡಿದ್ದಾನೆ. ವೃತ್ತಿಯಿಂದ ಡಿಜೆ ಆಗಿರುವ ಆರ್ ಡಬ್ ವಿಲಿಯಮ್ಸ್(R Dub Williams), ತಮ್ಮ ಪ್ರದರ್ಶನಕ್ಕೆ ಸ್ಲೋ ಜಾಮ್ಸ್ ಎಂದು ಹೆಸರಿಟ್ಟಿದ್ದಾರೆ. ಈಗ ಅದೇ ಹೆಸರನ್ನು ತಮ್ಮ ದೇಶಕ್ಕೆ ಇಟ್ಟಿದ್ದಾರೆ(Viral News). ಅಂದರೆ, ವಿಲಿಯಮ್ಸ್ ಅವರ ದೇಶದ ಹೆಸರು ಸ್ಲೋಜಾಮ್‌ಸ್ತಾನ (Slowjamastan).

ಸಿಎನ್ಎನ್ ಟ್ರಾವೆಲ್ಲರ್ ಜತೆ ಮಾತನಾಡಿರುವ ವಿಲಿಯಮ್ಸ್, ನನಗೆ ಪ್ರವಾಸ ಮಾಡಲು ಈಗ ದೇಶಗಳೇ ಉಳಿದಿಲ್ಲ. ಹಾಗಾಗಿ, ನನ್ನದೇ ಆದ ಸ್ವಂತ ನಿರ್ಮಾಣ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ವಿಶ್ವಸಂಸ್ಥೆ ಗುರುತಿಸಿರುವ 193 ರಾಷ್ಟ್ರಗಳ ಪೈಕಿ 192 ರಾಷ್ಟ್ರಗಳನ್ನು ಈ ಮಿಲಿಯಮ್ಸ್ ಭೇಟಿ ನೀಡಿದ್ದಾರೆ. ತಮ್ಮ ಈ ಪ್ರವಾಸದ ಪಟ್ಟಿಯಲ್ಲಿ ತುರ್ಕಮೇನಿಸ್ತಾನ ಕೊನೆಯ ರಾಷ್ಟ್ರವಾಗಿದ್ದು, ಶೀಘ್ರವೇ ಆ ರಾಷ್ಟ್ರಕ್ಕೂ ಅವರ ಭೇಟಿ ನೀಡಲಿದ್ದಾರೆ. ಈ ಕಾರಣಕ್ಕಾಗಿಯೇ ಅವರು 194ನೇ ರಾಷ್ಟ್ರವಾಗಿ ತಮ್ಮದೇ ಸ್ವಂತ ದೇಶವನ್ನು ನಿರ್ಮಾಣ ಮಾಡಿದ್ದಾರೆಂದು ಸಿಎನ್ಎನ್ ವರದಿ ಮಾಡಿದೆ.

ಅಮೆರಿಕದ ಕ್ಯಾಲಿಫೋರ್ನಿಯಾದ ಮರಳುಗಾಡಿನಲ್ಲಿ 11.07 ಎಕರೆ ಭೂಮಿಯನ್ನು ಖರೀದಿಸಿ ವಿಲಿಯಮ್ಸ್ ಅದಕ್ಕೆ ತಾವು ನಡೆಸಿಕೊಡುವ ಶೋ ಹೆಸರನ್ನೇ ಇಟ್ಟಿದ್ದಾರೆ. ಸ್ಲೋಜಾಮ್‌ಸ್ತಾನ್ ಸುಲ್ತಾನ್ ಆಗಿರುವ ವಿಲಿಯಮ್ಸ್, 2021 ಡಿಸೆಂಬರ್ 1ರಂದ ಅಮೆರಿಕದಿಂದ ಪ್ರತ್ಯೇಕಗೊಂಡ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದ್ದಾರೆ. ದುಬ್ಲಾಂಡಿಯಾ, ಸ್ಲೋಜಾಮ್‌ಸ್ತಾನ್ ರಾಷ್ಟ್ರದ ರಾಜಧಾನಿಯಾಗಿದೆ. ಅಲ್ಲಿಂದಲೇ ಲೈವ್ ಮೂಲಕ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: Swami Nithyananda: ʼಕೈಲಾಸʼದಿಂದ ವಿಶ್ವಸಂಸ್ಥೆಗೆ ಬಂದ ನಿತ್ಯಾನಂದನ ಪ್ರತಿನಿಧಿ ಯಾರೀಕೆ?

ಈ ಹೊಸ ರಾಷ್ಟ್ರವು ತನ್ನದೇ ಪಾಸ್‌ಪೋರ್ಟ್, ಸ್ವಂತ ಧ್ವಜ, ಸ್ವಂತ ಕರೆನ್ಸ್, ರಾಷ್ಟ್ರಗೀತೆ ಸೇರಿದಂತೆ ಸಾರ್ವಭೌಮ ರಾಷ್ಟ್ರಕ್ಕಿರುವ ಎಲ್ಲ ಸಂಗತಿಗಳನ್ನು ಒಳಗೊಂಡಿದೆ. ಸಿಎನ್ಎನ್ ಟ್ರಾವಲರ್ ವರದಿಯ ಪ್ರಕಾರ, ಸದ್ಯ 500 ನೋಂದಾಯಿತ ನಾಗರಿಕರಿದ್ದರು, ನೋಂದಣಿಗೆ ಇನ್ನೂ 4500 ಜನರು ಕಾಯ್ದು ಕುಳಿತಿದ್ದಾರೆ. ಅಂದ ಹಾಗೆ, ಹೊಸ ದೇಶ ನಿರ್ಮಾಣಕ್ಕೆ ವಿಲಿಯಮ್ಸ್ ಕೇವಲ 15 ಲಕ್ಷ ವೆಚ್ಚವಾಗಿದೆ.

ವಿದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading
Advertisement
Actress Nayanthara
South Cinema4 mins ago

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

rajeev sen and Charu Asopa divorce
ಕಿರುತೆರೆ6 mins ago

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

World Cup schedule
ಕ್ರಿಕೆಟ್10 mins ago

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

bhola shankar movie set
South Cinema12 mins ago

Chiranjeevi: ಅದ್ಧೂರಿಯಾಗಿದೆ ಭೋಲಾ ಶಂಕರ್‌ ಸೆಟ್‌; ಮತ್ತೊಮ್ಮೆ ಕ್ಯಾಬ್‌ ಡ್ರೈವರ್ ಪಾತ್ರದಲ್ಲಿ ಚಿರು

Darbar Movie Review
South Cinema16 mins ago

Darbar Movie Review: ಇದು ರಾಜಕಾರಣದ ʻದರ್ಬಾರ್‌ʼ, ಮತದಾರರ ಕಾರುಬಾರು!

western ghats in rain
ಪ್ರಮುಖ ಸುದ್ದಿ29 mins ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

Monsoon Fashion 2023
ಫ್ಯಾಷನ್1 hour ago

Monsoon Fashion 2023: ಫ್ಯಾಷನ್‌ ಲೋಕಕ್ಕೆ ಲಗ್ಗೆ ಇಟ್ಟ ಮಾನ್ಸೂನ್‌ ಸೀಸನ್‌ ವೈಬ್ರೆಂಟ್‌ ಔಟ್‌ಫಿಟ್ಸ್!

Chamarajanagar oxygen tragedy and Dinesh Gundu Rao
ಆರೋಗ್ಯ1 hour ago

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Manja Thread dead person
ಕರ್ನಾಟಕ1 hour ago

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Lock and unlock of aadhar services through online
ತಂತ್ರಜ್ಞಾನ1 hour ago

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ12 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ5 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ5 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ5 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ7 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ22 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ23 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!