Viral News : ಶ್ರೀ ಕೃಷ್ಣನನ್ನೇ ಮದುವೆಯಾದ ಯುವತಿ! ಅದ್ಧೂರಿಯಾಗಿ ನಡೆಯಿತು ವಿವಾಹ - Vistara News

ವೈರಲ್ ನ್ಯೂಸ್

Viral News : ಶ್ರೀ ಕೃಷ್ಣನನ್ನೇ ಮದುವೆಯಾದ ಯುವತಿ! ಅದ್ಧೂರಿಯಾಗಿ ನಡೆಯಿತು ವಿವಾಹ

ಉತ್ತರ ಪ್ರದೇಶದಲ್ಲಿ ಯುವತಿಯೊಬ್ಬಳು ಕೃಷ್ಣನನ್ನೇ ಮದುವೆಯಾಗಿದ್ದಾಳೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ವೈರಲ್‌ (Viral News) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಶ್ರೀ ಕೃಷ್ಣನನ್ನು ಆರಾಧಿಸುವವರನ್ನು ನೋಡಿರುತ್ತೀರಿ. ಆದರೆ ಉತ್ತರ ಪ್ರದೇಶದಲ್ಲಿ ಯುವತಿಯೊಬ್ಬಳು ಶ್ರೀ ಕೃಷ್ಣನನ್ನೇ ಮದುವೆಯಾಗಿದ್ದಾಳೆ. ಈ ಸುದ್ದಿ ಎಲ್ಲೆಡೆ ಭಾರೀ ವೈರಲ್‌ (Viral News) ಆಗಿದೆ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ನಿವೃತ್ತ ಶಿಕ್ಷಕ ರಂಜಿತ್‌ ಸಿಂಗ್‌ ಸೋಲಂಕಿ ಅವರ ಮಗಳು ರಕ್ಷಾ(30) ಕೃಷ್ಣನನ್ನು ವರಿಸಿರುವ ಯುವತಿ. ಸ್ನಾತಕೋತ್ತರ ಪದವಿ ಪಡೆದುಕೊಂಡು ಸದ್ಯ ಎಲ್‌ಎಲ್‌.ಬಿ ಅಧ್ಯಯನ ಮಾಡುತ್ತಿರುವ ರಕ್ಷಾಗೆ ಬಾಲ್ಯದಿಂದಲೂ ಕೃಷ್ಣನೆಂದರೆ ಇಷ್ಟವಾಗಿತ್ತಂತೆ. ಅದೇ ಕಾರಣಕ್ಕೆ ಕೃಷ್ಣನನ್ನೇ ಮದುವೆಯಾಗುವ ನಿರ್ಧಾರವನ್ನು ಆಕೆ ಮಾಡಿದ್ದಾಳೆ. ಅದಕ್ಕೆ ಕುಟುಂಬವೂ ಒಪ್ಪಿದ್ದು, ಇತ್ತೀಚೆಗೆ ಅದ್ಧೂರಿಯಾಗಿ ಮದುವೆಯನ್ನು ಮಾಡಲಾಗಿದೆ.

ಇದನ್ನೂ ಓದಿ: Viral News: ಹಣದಿಂದ ಸಂತೋಷ ಕೊಂಡುಕೊಳ್ಳಲು ಸಾಧ್ಯ ಎಂದಿದೆ ಹೊಸ ಸಮೀಕ್ಷೆ!

ಮೆರವಣಿಗೆ ಮೂಲಕ ಕೃಷ್ಣನ ಮೂರ್ತಿಯನ್ನು ಮದುವೆ ಮಂಟಪಕ್ಕೆ ತರಲಾಗಿದೆ. ಮಾಮೂಲಿ ಮದುವೆಯಲ್ಲಿ ಕುಣಿಯುವಂತೆಯೇ ಎಲ್ಲರೂ ಈ ಮದುವೆಯಲ್ಲಿ ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದ್ದಾರೆ. ನಂತರ ಯುವತಿ ಕೃಷ್ಣನ ಮೂರ್ತಿಯೊಂದಿಗೆ ಮದುವೆಯಾಗಿದ್ದಾಳೆ. ಸಂಬಂಧಿಕರು, ಗ್ರಾಮಸ್ಥರೆಲ್ಲರಿಗೂ ಮದುವೆಗೆ ಆಹ್ವಾನಿಸಲಾಗಿದ್ದು, ಮದುವೆ ಊಟವನ್ನೂ ಹಾಕಿಸಲಾಗಿದೆ.

ಇದನ್ನೂ ಓದಿ: Viral Video: ಜಿರಾಫೆ ಮರಿಯನ್ನು ಹಿಡಿದು ಕುತ್ತಿಗೆಗೆ ಬಾಯಿ ಹಾಕಿದ್ದ ಸಿಂಹಿಣಿ ಏಕಾಏಕಿ ಬಿಟ್ಟು ಓಡಿತು; ಯಾಕೆ?
ವಿವಾಹವಾದ ನಂತರ ರಕ್ಷಾ ಕೃಷ್ಣನ ಮೂರ್ತಿಯೊಂದಿಗೆ ನೆಂಟರೊಬ್ಬರ ಮನೆಗೆ ತೆರಳಿದ್ದಾಳೆ. ಅಲ್ಲಿ ಒಂದು ದಿನ ತಂಗಿದ್ದು ನಂತರ ಕೃಷ್ಣನ ಮೂರ್ತಿಯೊಂದಿಗೆ ತವರು ಮನೆಗೆ ವಾಪಸಾಗಿದ್ದಾಳೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Viral News: ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದ ಚಂದ್ರಪ್ರಕಾಶ್ ಮಿಶ್ರಾನನ್ನು ಪತ್ನಿ ಮನೆಯವರು ಕೊಲೆ ಮಾಡಿದ್ದಾರೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚಿನ ದಿನಗಳಲ್ಲಿ ಸಣ್ಣ-ಪುಟ್ಟ ಕಾರಣಕ್ಕೂ ಜಗಳ ನಡೆಯುವುದು ಸಾಮಾನ್ಯ ಎಂಬಂತಾಗಿದೆ. ಮದುವೆ ಮನೆಯಲ್ಲಿ ನೆಚ್ಚಿನ ತಿಂಡಿ ಬಡಿಸಲಿಲ್ಲ, ಸರಿಯಾಗಿ ಉಪಚಾರ ಮಾಡಲಿಲ್ಲ ಎಂಬಿತ್ಯಾದಿ ಕಾರಣಕ್ಕೆ ಜಗಳ ನಡೆದು ಸಂಭ್ರಮದ ಮನೆ ಸ್ಮಶಾನವಾಗಿ ಮಾರ್ಪಟ್ಟಿದ್ದನ್ನು ನೋಡಿದ್ದೇವೆ. ಇಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಕಲಹ ವ್ಯಕ್ತಿಯೊಬ್ಬನ ಜೀವವನ್ನೇ ಬಲಿ ಪಡೆದಿದೆ. ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಸಂಭ್ರಮದಿಂದ ಕೂಡಿದ್ದ ಮನೆಯಲ್ಲಿ ಈಗ ದುಃಖ ಮಡುಗಟ್ಟಿದೆ (Viral News).

ಘಟನೆ ವಿವರ

ಚಂದ್ರಪ್ರಕಾಶ್ ಮಿಶ್ರಾ (35) ಕೊಲೆಯಾದ ವ್ಯಕ್ತಿ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದೇ ಆತ ಮಾಡಿದ ದೊಡ್ಡ ತಪ್ಪು! ಹೌದು, ಚಂದ್ರಪ್ರಕಾಶ್ ಮಿಶ್ರಾ ತನ್ನ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ನೀಡಲು ಚಿಂತನೆ ನಡೆಸಿದ್ದರು. ಇದರಿಂದ ಕೋಪಗೊಂಡ ಆತನ ಪತ್ನಿ ಚಾಬಿ ಈ ವಿಚಾರವನ್ನು ತನ್ನ ಕುಟುಂಬದವರಿಗೆ ತಿಳಿಸಿದ್ದಳು. ಇದರಿಂದ ಅಸಮಾಧಾನಗೊಂಡ ಆಕೆಯ ಮನೆಯವರು ಚಂದ್ರಪ್ರಕಾಶ್ ಮಿಶ್ರಾ ಅವರನ್ನು ಚೆನ್ನಾಗಿ ಥಳಿಸಿದ್ದರು. ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಏಪ್ರಿಲ್‌ 26ಕ್ಕೆ ಚಂದ್ರಪ್ರಕಾಶ್ ಮಿಶ್ರಾ ಅವರ ತಂಗಿಯ ಮದುವೆ ನಿಗದಿಯಾಗಿದೆ. ಹೀಗಾಗಿ ಅವರು ಪ್ರೀತಿಯ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ಕೊಡಲು ಯೋಜನೆ ಹಾಕಿಕೊಂಡಿದ್ದರು. ಅದನ್ನು ಪತ್ನಿ ಚಾಬಿ ಬಳಿ ಹೇಳಿಕೊಂಡಿದ್ದರು. ಆದರೆ ಇದನ್ನು ಕೇಳಿ ಚಾಬಿ ಉರಿದು ಬಿದ್ದಳು. ಈ ವಿಚಾರವಾಗಿ ದಂಪತಿಯ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವೇ ನಡೆಯಿತುʼʼ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಅಷ್ಟಕ್ಕೇ ಸುಮ್ಮನಾಗದ ಚಾಬಿ ತನ್ನ ಸಹೋದರರನ್ನು ಕರೆದು ಚಂದ್ರಪ್ರಕಾಶ್‌ಗೆ ಪಾಠ ಕಲಿಸುವಂತೆ ಹೇಳಿದ್ದಾಳೆ. ತಂಗಿಯ ಕರೆಗೆ ಓಗೊಟ್ಟು ಬಂದ ಚಾಬಿಯ ಸಹೋದರರು ಚಂದ್ರಪ್ರಕಾಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಕೋಲುಗಳಿಂದ ಥಳಿಸಿದ್ದಾನೆ. ಕೊನೆಗೆ ಚಂದ್ರಪ್ರಕಾಶ್‌ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದರೆ ಆಸ್ಪತ್ರೆಯಲ್ಲಿ ನಿಧನರಾದರುʼʼ ಎಂದು ಅಧಿಕಾರಿಗಳು ಘಟನೆಯನ್ನು ವಿವರಿಸಿದ್ದಾರೆ.

ಸದ್ಯ ಪೊಲೀಸರು ಘಟನೆಯ ಸಂಬಂಧ ಐವರನ್ನು ಬಂಧಿಸಿದ್ದಾರೆ. ಚಾಬಿ ಮತ್ತು ಆಕೆಯ ಸಹೋದರರು ಸೇರಿ 5 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಮದುವೆ ಮನೇಲಿ ರಸಗುಲ್ಲಾಗಾಗಿ ಹೊಡೆದಾಟ; ಆರು ಮಂದಿಯ ಪರಿಸ್ಥಿತಿ ಗಂಭೀರ!

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ವಿವಾಹ ವಾರ್ಷಿಕೋತ್ಸವದ ಉಡುಗೊರೆಯನ್ನು ನೀಡದ ಕಾರಣಕ್ಕೆ ಕೋಪಗೊಂಡ ಮಹಿಳೆಯೊಬ್ಬಳು ತನ್ನ ಪತಿಗೆ ಚಾಕುವಿನಿಂದ ಇರಿದಿದ್ದಳು. ಕೂಡಲೇ ಎಚ್ಚೆತ್ತುಕೊಂಡ ಆತ ತಪ್ಪಿಸಿಕೊಂಡು ಪಾರಾಗಿದ್ದ. ಬಳಿಕ ನೆರೆಮನೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ತನ್ನ ಅಜ್ಜ ನಿಧನ ಹೊಂದಿದ್ದರಿಂದ ಪತ್ನಿಗೆ ಉಡುಗೊರೆ ನೀಡಿರಲಿಲ್ಲ. ಇದೇ ಕಾರಣಕ್ಕೆ ಆಕೆ ಹಲ್ಲೆ ನಡೆಸಿದ್ದಳು ಎಂದು ಬಳಿಕ ಆತ ದೂರು ನೀಡಿದ್ದ.

Continue Reading

ವೈರಲ್ ನ್ಯೂಸ್

Board Exam Result: 93.5% ಫಲಿತಾಂಶ ನೋಡಿ ಮೂರ್ಛೆ ಹೋದ ವಿದ್ಯಾರ್ಥಿ! ಐಸಿಯುಗೆ ದಾಖಲು

Board Exam Result: ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಸಂತೋಷದಿಂದ ಜಿಗಿಯುವುದು ಸ್ವಾಭಾವಿಕ. ವಿಶೇಷವಾಗಿ, 90%ಕ್ಕಿಂತ ಹೆಚ್ಚಿರುವಾಗ ಇನ್ನಷ್ಟು ಸಂತಸವಾಗುತ್ತದೆ. ಆದರೆ ಮೀರತ್‌ನ 10ನೇ ತರಗತಿಯ ವಿದ್ಯಾರ್ಥಿ ತನ್ನ ಫಲಿತಾಂಶಗಳನ್ನು ನೋಡಿದ ನಂತರ ಮೂರ್ಛೆ ಹೋದ.

VISTARANEWS.COM


on

board exam tension viral news
Koo

ಲಖನೌ: ತನ್ನ ಯುಪಿ ಬೋರ್ಡ್ (UP Board Exam, Public Exam) 10ನೇ ತರಗತಿಯ ಪರೀಕ್ಷೆಯಲ್ಲಿ 93.5% ಅಂಕಗಳನ್ನು ಪಡೆದ ಪಾಸಾದ ವಿದ್ಯಾರ್ಥಿಯೊಬ್ಬ (Student), ಫಲಿತಾಂಶ ನೋಡಿದ ಕ್ಷಣವೇ ನಂಬಲಾಗದೆ ಮೂರ್ಛೆ ಹೋಗಿದ್ದಾನೆ. ನಂತರ ಈತನನ್ನು ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಯಿತು.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಸಂತೋಷದಿಂದ ಜಿಗಿಯುವುದು ಸ್ವಾಭಾವಿಕ. ವಿಶೇಷವಾಗಿ, 90%ಕ್ಕಿಂತ ಹೆಚ್ಚಿರುವಾಗ ಇನ್ನಷ್ಟು ಸಂತಸವಾಗುತ್ತದೆ. ಆದರೆ ಮೀರತ್‌ನ 10ನೇ ತರಗತಿಯ ವಿದ್ಯಾರ್ಥಿ ತನ್ನ ಫಲಿತಾಂಶಗಳನ್ನು ನೋಡಿದ ನಂತರ ಮೂರ್ಛೆ ಹೋದ. ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿಗಳು ಅನುಭವಿಸುವ ಒತ್ತಡವನ್ನು ಇದು ಎತ್ತಿ ತೋರಿಸಿದೆ.

ತನ್ನ ಯುಪಿ ಬೋರ್ಡ್ 10ನೇ ತರಗತಿಯ ಪರೀಕ್ಷೆಯಲ್ಲಿ 93.5% ಪಡೆದ ನಂತರ, ಐಸಿಯುಗೆ ದಾಖಲಾದ ವಿದ್ಯಾರ್ಥಿ ನಂತರ ಚೇತರಿಸಿಕೊಂಡಿದ್ದಾನೆ. ಮೀರತ್‌ನ ಮೋದಿಪುರಂನಲ್ಲಿರುವ ಮಹರ್ಷಿ ದಯಾನಂದ ಇಂಟರ್ ಕಾಲೇಜಿನ 16 ವರ್ಷದ ಅನ್ಶುಲ್ ಕುಮಾರ್ ತನ್ನ ಪರೀಕ್ಷೆಗಳಲ್ಲಿ 93.5% ಅಂಕಗಳನ್ನು ಗಳಿಸಿದ್ದಾನೆ. ಆದರೆ ಸಂತೋಷದ ಕ್ಷಣವೇ ಆತನ ಕುಟುಂಬಕ್ಕೆ ದುಃಖದಾಯಕವಾಯಿತು. ಆತನ ಸ್ಥಿತಿ ಸುಧಾರಿಸದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ನಂತರ ಕುಮಾರ್ ಬೇಗನೆ ಪ್ರಜ್ಞೆಯನ್ನು ಪಡೆದ.

ಉತ್ತರ ಪ್ರದೇಶದಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಏಪ್ರಿಲ್ 20, 2024ರಂದು ಬಿಡುಗಡೆ ಮಾಡಲಾಯಿತು. 10 ನೇ ತರಗತಿಯಲ್ಲಿ 89.55% ಮತ್ತು 12 ನೇ ತರಗತಿಯಲ್ಲಿ 82.60% ಮಂದಿ ಉತ್ತೀರ್ಣರಾಗಿದ್ದಾರೆ. ಶುಭಂ ವರ್ಮಾ ಮತ್ತು ಪ್ರಾಚಿ ನಿಗಮ್ ಯುಪಿಎಂಎಸ್‌ಪಿ 10 ಮತ್ತು 12 ನೇ ತರಗತಿಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದರು.

ಇದನ್ನೂ ಓದಿ: Drought Relief: ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ; ಸುಪ್ರೀಂಗೆ ಕೇಂದ್ರ ಮಹತ್ವದ ಮಾಹಿತಿ

Continue Reading

ಪ್ರಮುಖ ಸುದ್ದಿ

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Look between H and L : ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

VISTARANEWS.COM


on

ook between H and L
Koo

ಬೆಂಗಳೂರು: ಮೇಣದ ಅರಮನೆಗೆ ಬೆಂಕಿ ಹಿಡಿದಷ್ಟೇ ವೇಗವಾಗಿ ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್ ಗಳು ಸೃಷ್ಟಿಯಾಗುತ್ತವೆ. ವ್ಯಕ್ತಿಯೊಬ್ಬರು ಶೇರ್ ಮಾಡುವ ಯಾವುದೊ ಒಂದು ಕಾನ್ಸೆಪ್ಟ್​ ಬೆಳೆಬೆಳೆದು ವಿಶ್ವ ವ್ಯಾಪಿಯಾಗುತ್ತದೆ. ಆ ವಿಷಯಕ್ಕೆ ತಲೆ, ಕಾಲು ಮತ್ತು ಬಾಲಗಳೂ ಸೇರಿಕೊಳ್ಳುತ್ತವೆ. ಮುಂದೆ ಅದು ಎಲ್ಲರ ಮನಸ್ಸನ್ನೂ ಗೆಲ್ಲುವ ಸೋಶಿಯಲ್​ ಮೀಡಿಯಾ ಟ್ರೆಂಡ್ ಆಗಿ ಉಳಿಯುತ್ತದೆ. ಅಂತೆಯೇ ಮಂಗಳವಾರ (ಏಪ್ರಿಲ್ 23ರಂದು) ಸೋಶಿಯಲ್​ ಮೀಟಿಯಾ ವೇದಿಕೆಯಾಗಿರುವ ಎಕ್ಸ್​​ನಲ್ಲಿ ಎಚ್​​ ಮತ್ತು ಎಲ್ ಮಧ್ಯೆ ನೋಡಿ (Look between H and L) ಟ್ರೆಂಡ್​ ಕಿಡಿ ಹಚ್ಚಿತ್ತು. ಎಲ್ಲಿ ನೋಡಿದರೂ ಇದೇ ರೀತಿಯ ಪೋಸ್ಟ್​ಗಳು ಕಾಣಿಸುತ್ತಿದ್ದವು. ಆರಂಭದಲ್ಲಿ ಪೋಸ್ಟ್​​ ನೋಡಿ ಗಾಬರಿ ಬಿದ್ದಿದ್ದರು ಹಲವರು. ಅರ್ಥ ಮಾಡಿಕೊಂಡ ಬಳಿಕ ಅದು ದೊಡ್ಡ ವಿನೋದವಾಗಿ ಮಾರ್ಪಾಡಾಯಿತು.

ಸೋಶಿಯಲ್​ ಮೀಡಿಯಾಗಳಲ್ಲಿ ಆಗಾಗ್ಗೆ ಮೀಮ್ ಗಳು, ವೀಡಿಯೊಗಳು ಮತ್ತು ನೆಟ್ಟಿಗರು ಹಂಚಿಕೊಳ್ಳುವ ವಿಷಯಗಳು ಸಮೃದ್ಧವಾಗಿರುತ್ತವೆ. ಆದಾಗ್ಯೂ, ಈ ಕೆಲವು ಸಂಗತಿಗಳ ಅರ್ಥದ ಬಗ್ಗೆ ತಿಳಿದಿಲ್ಲದ ಬಹಳಷ್ಟು ಜನರಿಗೆ ಇದೇನು ಅನಿಸುವುದು ಸಹಜ. ಅಂತೆಯೇ “ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

ಏನಿದು Look between H and L?

ನಿಮ್ಮ ಕಂಪ್ಯೂಟರ್ ಅಥವಾ ಮೊಬೈಲ್ ಕಿ ಪ್ಯಾಡ್​ನಲ್ಲಿ ಇಂಗ್ಲಿಷ್​ನ H ಮತ್ತು L ನಡುವೆ J ಮತ್ತು K ಇದೆ. ಹಾಗಾದರೆ ಜೆ.ಕೆ ಎಂದರೇನು? ಇಂಗ್ಲಿಷ್​ನಲ್ಲಿ Just Kidding ( ಕೇವಲ ತಮಾಷೆಗಾಗಿ) ಎಂಬ ಮಾತಿದೆ. ಅದನ್ನು ನೇರವಾಗಿ ಹೇಳುವ ಬದಲು Look between H and L ಟ್ರೆಂಡ್​ ಸೃಷ್ಟಿ ಮಾಡಲಾಗಿದೆ. ಅಂದ ಹಾಗೆ ಇದಕ್ಕೂ ಒಂದು ಕಾರಣವಿದೆ. ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಾಲು’ ಎಂಬ ಸಿನಿಮಾ ಬಿಡುಗಡೆಯಾಗಿತ್ತು. ಅದು ಈಗ ಒಟಿಟಿಯಲ್ಲೂ ಲಭ್ಯ. ಅದಲ್ಲಿ ಭಗ್ನ ಪ್ರೇಮಿ ಹಾಗೂ ಐಟಿ ಕಂಪನಿಯೊಂದರ ಪ್ರಾಜೆಕ್ಟ್​ ಮ್ಯಾನೇಜರ್​ ಆದಿ ಎಂಬ ಪಾತ್ರವನ್ನು Just Kidding ಅನ್ನು ಪದೇ ಪದೆ ಬಳಸುತ್ತಾನೆ. ಗಂಭೀರವಾದ ವಿಷಯವನ್ನು ಹೇಳಿ just kidding ಎಂದು ಹೇಳುತ್ತಿದ್ದಾನೆ.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ಇದೇ ವೇಳೆ Look Between T and O ಟ್ರೆಂಡ್​ ಕೂಡ ಆಗಿದೆ. ಇದು 2021ರಲ್ಲಿ ಆರಂಭಗೊಂಡಿತು. 4Chan ಎಂಬ ಚಿತ್ರ ಆಧಾರಿತ ವೆಬ್​​ ಸರಣಿಯದ್ದಾಗಿದೆ. ಕೀಬೋರ್ಡ್​​ನಲ್ಲಿ T ಮತ್ತು O ನಡುವಿನ Y, U ಮತ್ತು I ಅಕ್ಷರಗಳಿವೆ. ಇದು ಅನಿಮೆ ಸರಣಿಯ ಪಾತ್ರವಾದ Yui ಹೆಸರಾಗಿದೆ. ಇದು ತಮ್ಮ ಪ್ರೌಢ ಶಾಲೆಯ ಸಂಗೀತ ಕ್ಲಬ್ ಮೂಲಕ ಬ್ಯಾಂಡ್ ನುಡಿಸುವು ಹುಡುಗಿಯ ಕುರಿತದ್ದು.

ಬಹಳಷ್ಟು ಜನರು ಈ ಟ್ರೆಂಡ್​ ತಮ್ಮ ಪ್ರತಿಕ್ರಿಯೆಗಳನ್ನು ಸಹ ವ್ಯಕ್ತಪಡಿಸಿದರು. ಕೆಲವರು ಅದರ ಬಗ್ಗೆ ಗೊಂದಲಕ್ಕೊಳಗಾಗಿದ್ದರೆ ಇತರರು ಇದು “ಕಿರಿಕಿರಿ” ಎಂದು ಎಂದೂ ಕಾಮೆಂಟ್​ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ರಾಮನ ಚಿತ್ರವಿರುವ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ; ಅಂಗಡಿ ಮಾಲೀಕ ಅರೆಸ್ಟ್‌

Viral News: ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ ಮಾಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

By

Viral News
Koo

ದೆಹಲಿ: ಭಗವಾನ್ ರಾಮನ (god ram) ಚಿತ್ರಗಳನ್ನು ಹೊಂದಿರುವ ಪ್ಲೇಟ್‌ಗಳಲ್ಲಿ (plate) ನಾನ್‌ವೆಜ್‌ ಬಿರಿಯಾನಿ (biriyani) ಬಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social) ವೈರಲ್ (Viral News) ಆಗಿದೆ. ಈ ಘಟನೆ ಉತ್ತರ ದೆಹಲಿಯ (north delhi) ಜಹಾಂಗೀರ್‌ಪುರಿಯಲ್ಲಿರುವ (jahangirpuri) ಬಿರಿಯಾನಿ ಜಾಯಿಂಟ್‌ನಲ್ಲಿ ಭಾನುವಾರ ನಡೆದಿದೆ.

ಈ ವಿಡಿಯೋದಲ್ಲಿ ಭಗವಾನ್ ರಾಮನ ಚಿತ್ರಗಳನ್ನು ಒಳಗೊಂಡ ಪ್ಲೇಟ್‌ ಗಳಲ್ಲಿ ಬಿರಿಯಾನಿ ನೀಡುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ಬಿರಿಯಾನಿ ಅಂಗಡಿಯ ಬಳಿ ಜನರ ಗುಂಪಾಗಿ ನಿಂತು ಬಳಕೆ ಮಾಡಿ ಬಿಸಾಡುವ ಪ್ಲೇಟ್ ಗಳಲ್ಲಿ ಬಿರಿಯಾನಿ ತಿನ್ನುತ್ತಿದ್ದರು. ಅಂಗಡಿ ಮಾಲೀಕನ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ತೆರಳಿದ ಪೊಲೀಸರು ರಾಮನ ಚಿತ್ರವಿದ್ದ ಪ್ಲೇಟ್‌ಗಳನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕನನ್ನು ಬಂಧಿಸಿದರು.

ಇದನ್ನೂ ಓದಿ: IPL 2024: ಹಾರ್ದಿಕ್​ ಪಾಂಡ್ಯ ನಿಜವಾಗಿಯೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರಾ?; ವಿಚಿತ್ರ ವರ್ತನೆಯ ವಿಡಿಯೊ ವೈರಲ್​

ಬಿರಿಯಾನಿ ಅಂಗಡಿಯಲ್ಲಿ ಗಲಾಟೆ

ರಾಮನ ಚಿತ್ರವಿರುವ ಪ್ಲೇಟ್ ನಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿರುವ ಮಾಹಿತಿ ತಿಳಿದು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಮತ್ತು ಬಜರಂಗದಳದ ಸದಸ್ಯರು ಸೇರಿದ್ದು ಅಂಗಡಿಯ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಆ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡುವುದನ್ನು ವಿರೋಧಿಸಿ ಪೊಲೀಸರಿಗೆ ದೂರು ನೀಡಿದರು. ಅಂಗಡಿಯಲ್ಲಿ ಬಿರಿಯಾನಿ ಮಾರುವವರ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸ್ಥಳೀಯ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.


ಪೇಪರ್ ಪ್ಲೇಟ್‌ಗಳ ಬಂಡಲ್‌ ನಲ್ಲಿ ಒಂದೆರಡು ಪ್ಲೇಟ್‌ಗಳು ಮಾತ್ರ ಭಗವಾನ್ ರಾಮನ ಫೋಟೋಗಳನ್ನು ಹೊಂದಿದ್ದವು. ಪ್ರಸ್ತುತ, ಜಹಾಂಗೀರ್ಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ಮುಂದುವರಿಕೆ

ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಅಂಗಡಿ ಮಾಲೀಕರ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳು ಮಾರ್ಕೆಟಿಂಗ್ ಉದ್ದೇಶಕ್ಕಾಗಿ ಇದನ್ನು ಮಾಡಿದ್ದಾರೆಯೇ ಅಥವಾ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲು ಇದನ್ನು ಮಾಡಲಾಗಿದೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ದೆಹಲಿಯ ಜನರು ಬೀದಿ ಬದಿಯ ಆಹಾರವನ್ನು ಹೆಚ್ಚಾಗಿ ಸೇವಿಸುತ್ತಾರೆ. ಹಳೆಯ ದೆಹಲಿಯಲ್ಲಿಯೂ ಆಹಾರದ ರುಚಿ ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಈ ಭಾಗದಲ್ಲಿ ಬಿರಿಯಾನಿ ಕೂಡ ಅನೇಕರು ಇಷ್ಟಪಡುತ್ತಾರೆ. ಆದರೆ ಆಹಾರ ಮಾರಾಟಕ್ಕಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವುದು ಸರಿಯಲ್ಲ ಎಂದು ನಗರದ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Continue Reading
Advertisement
Sachin Tendulkar
ಕ್ರಿಕೆಟ್2 mins ago

Sachin Birthday: ಬದುಕಿನಲ್ಲಿ ಸಚಿನ್‌ ಅರ್ಧ ಶತಕ; ಕ್ರಿಕೆಟ್ ದೇವರ ಕುರಿತ 30 ಕುತೂಹಲಕರ ಸಂಗತಿಗಳಿವು

Viral News
ವೈರಲ್ ನ್ಯೂಸ್23 mins ago

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Rajkumar Birth Anniversary ​​Jaggesh said that Rajkumar blessed him when he was admitted due to suicide attempt
ಸ್ಯಾಂಡಲ್ ವುಡ್27 mins ago

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

World Chess Championship
ಕ್ರೀಡೆ30 mins ago

World Chess Championship: ಡಿ.ಗುಕೇಶ್‌-ಲಿರೆನ್‌ ನಡುವಣ ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ಮುಹೂರ್ತ ಫಿಕ್ಸ್​

VVPAT Verification
ದೇಶ46 mins ago

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

Sunita Williams
ದೇಶ47 mins ago

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Marcus Stoinis
ಕ್ರಿಕೆಟ್56 mins ago

IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

Areca Price
ಪರಿಸರ58 mins ago

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

Veteran journalist Arjun Deva passes away
ಶ್ರದ್ಧಾಂಜಲಿ1 hour ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ1 hour ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌