Viral News : ಶ್ರೀ ಕೃಷ್ಣನನ್ನೇ ಮದುವೆಯಾದ ಯುವತಿ! ಅದ್ಧೂರಿಯಾಗಿ ನಡೆಯಿತು ವಿವಾಹ Vistara News
Connect with us

ವೈರಲ್ ನ್ಯೂಸ್

Viral News : ಶ್ರೀ ಕೃಷ್ಣನನ್ನೇ ಮದುವೆಯಾದ ಯುವತಿ! ಅದ್ಧೂರಿಯಾಗಿ ನಡೆಯಿತು ವಿವಾಹ

ಉತ್ತರ ಪ್ರದೇಶದಲ್ಲಿ ಯುವತಿಯೊಬ್ಬಳು ಕೃಷ್ಣನನ್ನೇ ಮದುವೆಯಾಗಿದ್ದಾಳೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ವೈರಲ್‌ (Viral News) ಆಗಿದೆ.

VISTARANEWS.COM


on

Koo

ಲಕ್ನೋ: ಶ್ರೀ ಕೃಷ್ಣನನ್ನು ಆರಾಧಿಸುವವರನ್ನು ನೋಡಿರುತ್ತೀರಿ. ಆದರೆ ಉತ್ತರ ಪ್ರದೇಶದಲ್ಲಿ ಯುವತಿಯೊಬ್ಬಳು ಶ್ರೀ ಕೃಷ್ಣನನ್ನೇ ಮದುವೆಯಾಗಿದ್ದಾಳೆ. ಈ ಸುದ್ದಿ ಎಲ್ಲೆಡೆ ಭಾರೀ ವೈರಲ್‌ (Viral News) ಆಗಿದೆ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ನಿವೃತ್ತ ಶಿಕ್ಷಕ ರಂಜಿತ್‌ ಸಿಂಗ್‌ ಸೋಲಂಕಿ ಅವರ ಮಗಳು ರಕ್ಷಾ(30) ಕೃಷ್ಣನನ್ನು ವರಿಸಿರುವ ಯುವತಿ. ಸ್ನಾತಕೋತ್ತರ ಪದವಿ ಪಡೆದುಕೊಂಡು ಸದ್ಯ ಎಲ್‌ಎಲ್‌.ಬಿ ಅಧ್ಯಯನ ಮಾಡುತ್ತಿರುವ ರಕ್ಷಾಗೆ ಬಾಲ್ಯದಿಂದಲೂ ಕೃಷ್ಣನೆಂದರೆ ಇಷ್ಟವಾಗಿತ್ತಂತೆ. ಅದೇ ಕಾರಣಕ್ಕೆ ಕೃಷ್ಣನನ್ನೇ ಮದುವೆಯಾಗುವ ನಿರ್ಧಾರವನ್ನು ಆಕೆ ಮಾಡಿದ್ದಾಳೆ. ಅದಕ್ಕೆ ಕುಟುಂಬವೂ ಒಪ್ಪಿದ್ದು, ಇತ್ತೀಚೆಗೆ ಅದ್ಧೂರಿಯಾಗಿ ಮದುವೆಯನ್ನು ಮಾಡಲಾಗಿದೆ.

ಇದನ್ನೂ ಓದಿ: Viral News: ಹಣದಿಂದ ಸಂತೋಷ ಕೊಂಡುಕೊಳ್ಳಲು ಸಾಧ್ಯ ಎಂದಿದೆ ಹೊಸ ಸಮೀಕ್ಷೆ!

ಮೆರವಣಿಗೆ ಮೂಲಕ ಕೃಷ್ಣನ ಮೂರ್ತಿಯನ್ನು ಮದುವೆ ಮಂಟಪಕ್ಕೆ ತರಲಾಗಿದೆ. ಮಾಮೂಲಿ ಮದುವೆಯಲ್ಲಿ ಕುಣಿಯುವಂತೆಯೇ ಎಲ್ಲರೂ ಈ ಮದುವೆಯಲ್ಲಿ ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದ್ದಾರೆ. ನಂತರ ಯುವತಿ ಕೃಷ್ಣನ ಮೂರ್ತಿಯೊಂದಿಗೆ ಮದುವೆಯಾಗಿದ್ದಾಳೆ. ಸಂಬಂಧಿಕರು, ಗ್ರಾಮಸ್ಥರೆಲ್ಲರಿಗೂ ಮದುವೆಗೆ ಆಹ್ವಾನಿಸಲಾಗಿದ್ದು, ಮದುವೆ ಊಟವನ್ನೂ ಹಾಕಿಸಲಾಗಿದೆ.

ಇದನ್ನೂ ಓದಿ: Viral Video: ಜಿರಾಫೆ ಮರಿಯನ್ನು ಹಿಡಿದು ಕುತ್ತಿಗೆಗೆ ಬಾಯಿ ಹಾಕಿದ್ದ ಸಿಂಹಿಣಿ ಏಕಾಏಕಿ ಬಿಟ್ಟು ಓಡಿತು; ಯಾಕೆ?
ವಿವಾಹವಾದ ನಂತರ ರಕ್ಷಾ ಕೃಷ್ಣನ ಮೂರ್ತಿಯೊಂದಿಗೆ ನೆಂಟರೊಬ್ಬರ ಮನೆಗೆ ತೆರಳಿದ್ದಾಳೆ. ಅಲ್ಲಿ ಒಂದು ದಿನ ತಂಗಿದ್ದು ನಂತರ ಕೃಷ್ಣನ ಮೂರ್ತಿಯೊಂದಿಗೆ ತವರು ಮನೆಗೆ ವಾಪಸಾಗಿದ್ದಾಳೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ವೈರಲ್ ನ್ಯೂಸ್

Viral Video: ಹುಡುಗನ ಕೈಯಲ್ಲಿದ್ದ ತಿಂಡಿ ತಿನ್ನಲು ಬಾಯಿ ಹಾಕಿದ ನಾಯಿ; ನಾಲಿಗೆಗೆ ಸಿಕ್ಕ ಟಿವಿ ಪರದೆ ನೆಕ್ಕಿ, ವಾಪಸ್ ಬಂತು!

ವಿಡಿಯೊದಲ್ಲೋ, ಫೋಟೋದಲ್ಲೋ ನಾವು ವಿವಿಧ ಬಗೆಯ ಖಾದ್ಯಗಳನ್ನು ನೋಡಿದರೆ ಸಾಕು ನಮ್ಮ ಬಾಯಲ್ಲೂ ನೀರೂರುತ್ತದೆ. ನಮಗೂ ತಿಂದುಬಿಡಬೇಕು ಎನ್ನಿಸುತ್ತದೆ. ಹಾಗೇ, ಈ ನಾಯಿಗೂ ಅನ್ನಿಸಿತು.

VISTARANEWS.COM


on

Edited by

Dog Tries to eat Food Shown On TV Screen Viral Video
Koo

ಸಾಕಿದ ನಾಯಿಗಳ ಆಟ-ತುಂಟಾಟ, ಮುಗ್ಧತೆಯನ್ನೆಲ್ಲ ಪ್ರಸ್ತುತ ಪಡಿಸುವ ಹಲವು ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಮನೆಯಲ್ಲಿ ಸಾಕುವ ಶ್ವಾನಗಳು ಮನೆ ಸದಸ್ಯರಂತೆ ಆಗಿಬಿಡುತ್ತವೆ. ಮನೆಯಲ್ಲಿ ಎಲ್ಲ ಕಡೆ ಓಡಾಡಿಕೊಂಡು, ಸೋಫಾ-ಬೆಡ್​ ಮೇಲೆ ಮಲಗುತ್ತ, ಟಿವಿ ನೋಡಿಕೊಂಡು ಸಖತ್ ಎಂಜಾಯ್ ಮಾಡಿಕೊಂಡಿರುತ್ತವೆ.

ಈಗ ಲ್ಯಾಬ್ರಡರ್​ ನಾಯಿಯೊಂದು ಟಿವಿಯಲ್ಲಿ ಕಾಣಿಸುವ ತಿಂಡಿ ನಿಜವೆಂದು ಭಾವಿಸಿ, ಓಡಿ ಹೋಗಿ ಟಿವಿ ಸ್ಕ್ರೀನ್​ಗೆ ಬಾಯಿ ಹಾಕಿದ ಕ್ಯೂಟ್​ ವಿಡಿಯೊವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೊದಲ್ಲೋ, ಫೋಟೋದಲ್ಲೋ ನಾವು ವಿವಿಧ ಬಗೆಯ ಖಾದ್ಯಗಳನ್ನು ನೋಡಿದರೆ ಸಾಕು ನಮ್ಮ ಬಾಯಲ್ಲೂ ನೀರೂರುತ್ತದೆ. ನಮಗೂ ತಿಂದುಬಿಡಬೇಕು ಎನ್ನಿಸುತ್ತದೆ. ತಿಂಡಿ/ತಿನಿಸು ಚಿತ್ರ-ವಿಡಿಯೊ ಕಂಡಾಕ್ಷಣ ಅದನ್ನು ಬಾಯಿಗೆ ಹಾಕಿಕೊಳ್ಳಬೇಕು ಎಂದೆನಿಸುವುದು ಸಹಜವಾದರೂ, ನಾವು ಮನುಷ್ಯರಿಗೆ ಅದು ಫೋಟೋ/ವಿಡಿಯೊ ಎಂದು ಗೊತ್ತಿರುತ್ತದೆ. ಆದರೆ ನಾಯಿಗಳು ಹಾಗಲ್ಲ. ಅದು ನಿಜವಲ್ಲ ಎಂಬುದು ಅವಕ್ಕೆ ತಕ್ಷಣಕ್ಕೇ ಗೊತ್ತಾಗುವುದಿಲ್ಲ.

ಇದನ್ನೂ ಓದಿ: Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

ಹಾಗೇ ಈ ನಾಯಿ ಕೂಡ. ತನ್ನ ಸಾಕಿದ ಮನೆಯಲ್ಲಿ ಅಳವಡಿಸಲಾಗಿರುವ ದೊಡ್ಡದಾದ ಟಿವಿಯಲ್ಲಿ ಬರುತ್ತಿರುವ ದೃಶ್ಯ ನಿಜವೆಂದೇ ಭಾವಿಸಿಬಿಟ್ಟಿತು. ಟಿವಿಯಲ್ಲಿ ಒಂದು ಹೋಟೆಲ್​ನ ಸನ್ನಿವೇಶ ಬರುತ್ತಿತ್ತು. ಅಲ್ಲಿ ಹಲವರು ಕುಳಿತು ತಿಂಡಿ ತಿನ್ನುತ್ತಿದ್ದಾರೆ. ಅದರಲ್ಲಿ ಒಬ್ಬ ಹುಡುಗ ಒಂದು ಕೈಯಲ್ಲಿ ಆಹಾರ ಸೇವಿಸುತ್ತ, ಎಡಗೈಯಲ್ಲಿ ಅದ್ಯಾವುದೋ ತಿಂಡಿಯನ್ನು ಹಿಡಿದುಕೊಂಡಿದ್ದಾನೆ. ಅಷ್ಟೊತ್ತು ಟಿವಿ ನೋಡುತ್ತಿದ್ದ ನಾಯಿ, ಹುಡುಗ ಎಡಗೈಯಲ್ಲಿ ತಿನಿಸನ್ನು ಹಿಡಿದು, ಸ್ವಲ್ಪವೇ ಚಾಚುತ್ತಿದ್ದಂತೆ ಓಡಿ ಹೋಗಿ ಅಲ್ಲಿ ಬಾಯಿ ಹಾಕಿದೆ. ಟಿವಿ ಸ್ಕ್ರೀನ್​ನ್ನು ನಾಲಿಗೆಯಿಂದ ನೆಕ್ಕಿದೆ. ಹೀಗೆ ಎರಡು ಬಾರಿ ಮಾಡಿದ ನಂತರ ಅದು ಮುಖದಲ್ಲಿ ಬೇಸರದ ಭಾವ ಹೊತ್ತು, ಮರಳಿ ಬಂದು ಕುಳಿತಿದೆ. ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ. ನೆಟ್ಟಿಗರು ಮೆಚ್ಚಿ ಕಮೆಂಟ್ ಮಾಡುತ್ತಿದ್ದಾರೆ.

ವಿಡಿಯೋಕ್ಕಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:

Continue Reading

ವೈರಲ್ ನ್ಯೂಸ್

Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

ಬ್ರಿಟನ್‌ನಲ್ಲೂ ರಸ್ತೆ ಗುಂಡಿಗಳ ಸಮಸ್ಯೆಯಿದೆ. ಈ ಸಮಸ್ಯೆಯನ್ನು ಅಲ್ಲಿನ ವ್ಯಕ್ತಿಯೊಬ್ಬರು ವಿಶೇಷ ರೀತಿಯಲ್ಲಿ ಸರ್ಕಾರದ ಗಮನಕ್ಕೆ ತರಲು ಯತ್ನಿಸುತ್ತಿದ್ದು, ಆ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ.

VISTARANEWS.COM


on

Edited by

Koo

ಲಂಡನ್‌: ರಸ್ತೆ ಗುಂಡಿ ಸಮಸ್ಯೆ ನಮ್ಮ ಬೆಂಗಳೂರಿನ ಮಂದಿಗೆ ಚೆನ್ನಾಗಿ ಗೊತ್ತಿರುವಂತದ್ದು. ಕೇವಲ ಬೆಂಗಳೂರು ಮಾತ್ರವಲ್ಲ, ದೇಶ ವಿದೇಶದಲ್ಲೂ ಈ ರಸ್ತೆ ಗುಂಡಿ ದೊಡ್ಡ ಸಮಸ್ಯೆಯೇ. ಅಭಿವೃದ್ಧಿಹೊಂದಿರುವ ರಾಷ್ಟ್ರ ಎಂದು ಕರೆಸಿಕೊಳ್ಳುವ ಬ್ರಿಟನ್‌ನಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಅಲ್ಲಿಯೂ ಕೂಡ ಈ ರಸ್ತೆ ಗುಂಡಿ ವಿಚಾರದಲ್ಲಿ ಸಾಕಷ್ಟು ಮಂದಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿ, ಸೋತಿದ್ದಾರೆ. ಇದೀಗ ಈ ವ್ಯಕ್ತಿಯೊಬ್ಬರು ವಿಶೇಷ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದು, ಈ ಸುದ್ದಿ ಎಲ್ಲೆಡೆ ವೈರಲ್‌ (Viral News) ಆಗಿದೆ.

ಇದನ್ನೂ ಓದಿ: Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!
ಮಾರ್ಕ್‌ ಮೊರೆಲ್‌ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಿಸ್ಟರ್‌ ಪ್ಯಾಥ್‌ಹೋಲ್‌ ಎಂದೇ ಕರೆಯಲಾಗುತ್ತದೆ. ಕಾರಣ ಅವರು ಮಾಡುತ್ತಿರುವ ಕೆಲಸ. ರಸ್ತೆಗಳಲ್ಲಿರುವ ಗುಂಡಿಗಳಿಂದ ಚಾಲಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಇವರು ಹತ್ತು ವರ್ಷಗಳಿಂದ ಸರ್ಕಾರಕ್ಕೆ ಮನವರಿಕೆ ಮಾಡಿಸುವ ಯತ್ನದಲ್ಲೇ ಇದ್ದಾರಂತೆ. ಗುಂಡಿಗಳಿಗೆ ರಬ್ಬರ್‌ ತುಂಬುವುದು, ಬೇರೆ ಬೇರೆ ವಸ್ತು ತುಂಬಿಸಿ ಗುಂಡಿ ಮುಚ್ಚುವ ಕೆಲಸವನ್ನು ಅವರು ಈವರೆಗೆ ಮಾಡಿಕೊಂಡು ಬಂದಿದ್ದಾರೆ. ಆದರೆ ಇದೀಗ ವಿಶೇಷ ರೀತಿಯಲ್ಲಿ ಗುಂಡಿ ಮುಚ್ಚುವುದಕ್ಕೆ ಆರಂಭಿಸಿದ್ದಾರೆ.


ಮಾರ್ಕ್‌ ಅವರು ರಸ್ತೆ ಗುಂಡಿಗಳಿಗೆ ತಿನ್ನುವ ನೂಡೆಲ್ಸ್‌ ಅನ್ನೇ ಹಾಕಿ ಮುಚ್ಚಲಾರಂಭಿಸಿದ್ದಾರೆ. ಅದಕ್ಕೆಂದೇ ನೂಡಲ್ಸ್‌ ಕಂಪನಿಯೊಂದರ ಜತೆಗೆ ಒಪ್ಪಂದವನ್ನೂ ಮಾಡಿಕೊಂಡಿದ್ದಾರೆ. ರಸ್ತೆಯಲ್ಲಿ ಎಲ್ಲೆಲ್ಲಿ ಗುಂಡಿ ಕಾಣುತ್ತದೆಯೋ ಅಲ್ಲೆಲ್ಲಾ ಅವರು ನೂಡಲ್ಸ್‌ ತುಂಬಲಾರಂಭಿಸಿದ್ದಾರೆ. ನೂಡಲ್ಸ್‌ ಗುಂಡಿಯೊಳಗೆ ನೀಟಾಗಿ ಕುಳಿತುಕೊಳ್ಳುತ್ತದೆ ಎಂದೂ ಅವರು ಹೇಳಿದ್ದಾರೆ. ಅವರ ಮೂಲ ಊರಾದ ಬ್ರಾಕ್ಲೆ ನಗರದಲ್ಲಿ ಬಹುತೇಕ ಗುಂಡಿಗಳನ್ನು ಇದೇ ರೀತಿಯಲ್ಲಿ ಮುಚ್ಚಿದ್ದಾರೆ.


ಈ ಮಾರ್ಕ್‌ ಅವರ ಕೆಲಸ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಲ್ಲಿರುವಂತಹ ವಿಚಾರ. ನನ್ನ ಈ ಕೆಲಸದಿಂದಾದರೂ ಸರ್ಕಾರ ಎಚ್ಚೆತ್ತುಕೊಂಡು ಗುಂಡಿ ಮುಚ್ಚಲಿ ಎನ್ನುತ್ತಾರೆ ಮಾರ್ಕ್‌.

Continue Reading

ದೇಶ

Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

ಶಾಸಕ ಬೇದಿರಾಮ್ ಅವರು ಭೇಟಿಕೊಟ್ಟಿದ್ದು ಗಾಝಿಪುರದ ಜಖಾನಿಯನ್​ ಏರಿಯಾದಲ್ಲಿ ನಿರ್ಮಿಸಲಾದ, ಜಂಗೀಪುರ- ಬಹರಿಯಾಬಾದ್-ಯೂಸುಫ್‌ಪುರ್ ಸಂಪರ್ಕ ರಸ್ತೆಗೆ. ಇಲ್ಲಿ 4.5 ಕಿಮೀಗಳಷ್ಟು ದೂರವನ್ನು 3.8 ಕೋಟಿ ರೂಪಾಯಿ ವೆಚ್ಚದಲ್ಲಿ ಆರು ತಿಂಗಳ ಹಿಂದಷ್ಟೇ ನಿರ್ಮಿಸಲಾಗಿತ್ತು.

VISTARANEWS.COM


on

Edited by

MLA scrapes off the asphalt Of Road In Uttar Pradesh Video Viral
Koo

ಗಾಝಿಪುರ: ಕಳಪೆಯಾದ ರಸ್ತೆಯನ್ನು ನೋಡಿ ಶಾಸಕರೊಬ್ಬರು ಕೆಂಡಾಮಂಡಲರಾಗಿ, ತಮ್ಮ ಬೂಟು ಕಾಲಿನಿಂದ ಆ ರಸ್ತೆಯನ್ನು ಕೆದರಿ, ಜಲ್ಲಿಕಲ್ಲು, ಡಾಂಬರುಗಳನ್ನೆಲ್ಲ ತೆಗೆದು ತೋರಿಸಿದ ಘಟನೆ ಉತ್ತರ ಪ್ರದೇಶದ ಗಾಝಿಪುರದಲ್ಲಿ ನಡೆದಿದೆ. ಶಾಸಕರ ಆಕ್ರೋಶ ಮತ್ತು ಅವರು ಕಾಲಿನಿಂದಲೇ ರಸ್ತೆಯನ್ನು ಕೆದರಿದ, ಗುತ್ತಿಗೆದಾರನಿಗೆ ಬಾಯಿಗೆ ಬಂದಂತೆ ಬೈದಿರುವ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಸುಹೇಲ್​ದೇವ್​ ಭಾರತೀಯ ಸಮಾಜ ಪಾರ್ಟಿ ಶಾಸಕ ಬೇದಿರಾಮ್​ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ಗಾಝಿಪುರಕ್ಕೆ ಭೇಟಿಕೊಟ್ಟಿದ್ದರು. ಅಲ್ಲಿ ಒಂದು ಕಡೆ ಹಾಳಾದ ರಸ್ತೆಯನ್ನು ನೋಡಿದ ಅವರು ಉಗ್ರಸ್ವರೂಪ ತಾಳಿದ್ದಾರೆ. ‘ಇದಕ್ಕೆ ಯಾರಾದರೂ ರಸ್ತೆ ಎನ್ನುತ್ತಾರಾ? ಇಲ್ಲಿ ಕಾರು ಸಂಚಾರ ಮಾಡಬಹುದಾ?’ ಎಂದು ಕೋಪದಿಂದ ಗುತ್ತಿಗೆದಾರನ ಬಳಿ ಪ್ರಶ್ನಿಸಿದ್ದಾರೆ.

‘ಗಾಝಿಪುರದಲ್ಲಿ ಹಲವು ಕಡೆಗಳಲ್ಲಿ ರಸ್ತೆ ಸರಿಯಿಲ್ಲ ಎಂದು ಸ್ಥಳೀಯರು ದೂರು ಕೊಟ್ಟ ಕಾರಣಕ್ಕೆ, ಪರಿಶೀಲನೆ ನಡೆಸಲು ಅಲ್ಲಿಗೆ ತೆರಳಿದ್ದೆ. ಆದರೆ ನಾನು ಅಲ್ಲಿಗೆ ಹೋದರೆ ಪಿಡಬ್ಲ್ಯೂಡಿ ಇಲಾಖೆಯ ಯಾವ ಅಧಿಕಾರಿಯೂ ಇರಲಿಲ್ಲ. ಹೀಗಾಗಿ ಗುತ್ತಿಗೆದಾರನನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಏನೆಂದು ತೋರಿಸಿದ್ದೇನೆ. ಅದಾದ ಮೇಲೆ ಪಿಡಬ್ಲ್ಯೂಡಿ ಉನ್ನತ ಅಧಿಕಾರಿಯೊಂದಿಗೆ ಮಾತಾಡಿದ್ದೇನೆ. ಕೋಟ್ಯಂತರ ರೂಪಾಯಿ ಬಿಡುಗಡೆ ಮಾಡಲಾಗಿದ್ದರೂ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಲ್ಲ. ಒಂದು ವರ್ಷ ಬಿಡಿ, ಆರು ತಿಂಗಳೂ ಕೂಡ ರಸ್ತೆ ಬಾಳಿಕೆಗೆ ಬರುವುದಿಲ್ಲ’ ಎಂದು ಶಾಸಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಂದಹಾಗೇ, ಶಾಸಕ ಬೇದಿರಾಮ್ ಅವರು ಭೇಟಿಕೊಟ್ಟಿದ್ದು ಗಾಝಿಪುರದ ಜಖಾನಿಯನ್​ ಏರಿಯಾದಲ್ಲಿ ನಿರ್ಮಿಸಲಾದ, ಜಂಗೀಪುರ- ಬಹರಿಯಾಬಾದ್-ಯೂಸುಫ್‌ಪುರ್ ಸಂಪರ್ಕ ರಸ್ತೆಗೆ. ಇಲ್ಲಿ 4.5 ಕಿಮೀಗಳಷ್ಟು ದೂರವನ್ನು 3.8 ಕೋಟಿ ರೂಪಾಯಿ ವೆಚ್ಚದಲ್ಲಿ ಆರು ತಿಂಗಳ ಹಿಂದಷ್ಟೇ ನಿರ್ಮಿಸಲಾಗಿತ್ತು. ಆದರೆ ಈಗಲೇ ಹಾಳಾಗಿದೆ. ಹೀಗಾಗಿ ಸ್ಥಳೀಯರು ಒಟ್ಟಾಗಿ ಅಲ್ಲಿನ ಶಾಸಕರಿಗೆ ದೂರು ಕೊಟ್ಟಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಹಾಳಾದ ರಸ್ತೆಯ ಚಿತ್ರಣ ಬಹಿರಂಗವಾಗಿದ್ದು ಇದೇ ಮೊದಲಲ್ಲ. ಕಳೆದ ವರ್ಷ ಪಿಲಿಬಿತ್​​ನಲ್ಲಿ ನಾಗರಿಕರೊಬ್ಬರು ರಸ್ತೆಯನ್ನು ತಮ್ಮ ಕೈಗಳಿಂದಲೇ ಕಿತ್ತು ಹಾಕಿದ್ದರು. ರಸ್ತೆ ಮೇಲ್ಮೈಯೆಲ್ಲ ಕಿತ್ತುಬಂದಿದ್ದನ್ನು ತೋರಿಸಿದ್ದರು. ಅದೆಷ್ಟು ಕಳಪೆಯಾಗಿ ರಸ್ತೆ ನಿರ್ಮಾಣ ಮಾಡಲಾಗಿದೆ ನೋಡಿ ಎಂದು ವಿಡಿಯೊ ಮೂಲಕ ತೋರಿಸಿದ್ದರು. ಆ ವಿಡಿಯೊ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿತ್ತು.

Continue Reading

ಕರ್ನಾಟಕ

Viral Video: ಅರ್ಧ ರಾತ್ರೀಲಿ ಮಧ್ಯ ರಸ್ತೇಲಿ ಮೊಬೈಲ್‌ ಹಿಡಿದು ನಿಂತಿದ್ದ ಇನ್ಫ್ಲುಯೆನ್ಸರ್‌; ಮುಂದಾಗಿದ್ದೇನು?

Viral Video: ಸೋಶಿಯಲ್‌ ಮೀಡಿಯಾ ಇನ್ಫ್ಲುಯೆನ್ಸರ್‌ಗಳು (social media influencers) ಎಲ್ಲೆಂದರಲ್ಲಿ ಮೊಬೈಲ್‌ ಹಿಡಿದು ವಿಡಿಯೊ ಮಾಡುವ ಮುನ್ನ ಹುಷಾರಾಗಿ ಇರಬೇಕು ಎಂದು ಸಾರುತ್ತಿದೆ ಈ ಘಟನೆ.

VISTARANEWS.COM


on

Edited by

Thieves who came to steal mobile phones will social media influencers making video
Koo

ಬೆಂಗಳೂರು: ನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿದೆ. ಸ್ಕೂಟರ್‌ನಲ್ಲಿ ಬಂದ ಕಳ್ಳರಿಬ್ಬರು ಮೊಬೈಲ್‌ ಕಸಿದು ಪರಾರಿ ಆಗಲು ಯತ್ನಿಸಿದ್ದಾರೆ. ರೆಸ್ಟೋರೆಂಟ್‌ ಬಳಿ ನಿಂತು ವಿಡಿಯೊ ಮಾಡುತ್ತಿದ್ದ ಇನ್ಫ್ಲುಯೆನ್ಸರ್‌ವೊಬ್ಬರ ಮೊಬೈಲ್‌ ಎಗರಿಸಲು ಬಂದ ಕಳ್ಳರ ಕೃತ್ಯದ ವಿಡಿಯೊ ಬೆಂಗಳೂರು 360 ಎಂಬ ಟ್ವಿಟರ್ ಪೇಜ್‌ನಲ್ಲಿ ವೈರಲ್‌ (viral video) ಆಗಿದೆ.

ಸೋಶಿಯಲ್‌ ಮೀಡಿಯಾ ಇನ್ಫ್ಲುಯೆನ್ಸರ್‌ ಆಗಿರುವ ರುಚಿಕಾ ಎಂಬುವರು ರೆಸ್ಟೋರೆಂಟ್‌ವೊಂದರ ಕಂಟೆಂಟ್‌ ಕ್ರಿಯೆಟ್‌ ಮಾಡಲು ಮುಂದಾಗಿದ್ದರು. ಮೊದಲಿಗೆ ಇಬ್ಬರು ಹುಡುಗಿಯರು Ever tried Gufha Restaurant? ಎನ್ನುತ್ತಾ ಮತ್ತಿಬ್ಬರು ಹುಡುಗಿಯರತ್ತ ಕ್ಯಾಮೆರಾ ತಿರುಗಿಸಿದರು. ಅಷ್ಟರಲ್ಲಿ ಸ್ಕೂಟರ್‌ನಲ್ಲಿ ಬಂದ ಇಬ್ಬರು ಖದೀಮರು ಮೊಬೈಲ್‌ ಎಗರಿಸಲು ಮುಂದಾದರು.

viral video Thieves who came to steal mobile phones will social media influencers making video
ಮೊಬೈಲ್‌ ಕಸಿಯಲು ಯತ್ನಿಸಿದ ಕಳ್ಳರು

ವಿಡಿಯೊ ಸಮೇತ ತಮ್ಮ ಅನುಭವ ಹಂಚಿಕೊಂಡಿರುವ ರುಚಿಕಾ, ನಾವು ಕಂಟೆಂಟ್ ಕ್ರಿಯೇಟರ್‌ಗಳಾಗಿರುವುದರಿಂದ ರೆಸ್ಟೋರೆಂಟ್‌ವೊಂದರ ಕಂಟೆಂಟ್‌ ಶೂಟಿಂಗ್ ಮಾಡುತ್ತಿದ್ದೆವು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಹುಡುಗರು ನಮ್ಮ ಕೈನಲ್ಲಿದ್ದ ನನ್ನ ಫೋನ್‌ ಕಸಿದುಕೊಳ್ಳಲು ಪ್ರಯತ್ನಿಸಿದರು. ಆದರೆ ಅದೃಷ್ಟವಶಾತ್ ನಾನು ಆ ಸಮಯದಲ್ಲಿ ನನ್ನ ಫೋನ್ ಅನ್ನು ಕೆಳಗೆ ಮಾಡಿದ್ದರಿಂದ ಕಳ್ಳತನ ಆಗುವುದು ತಪ್ಪಿತು ಎಂದಿದ್ದಾರೆ.

ಮೊಬೈಲ್‌ ಕಸಿಯಲು ಬಂದ ಕಳ್ಳರು

ರಾತ್ರಿ 11.15ರ ಸುಮಾರಿಗೆ ಜಯನಗರದಲ್ಲಿರುವ ರೆಸ್ಟೋರೆಂಟ್ ಹೊರಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಈ ಘಟನೆ ನಡೆಯುವ ಮುನ್ನ ಈ ಯುವತಿಯರು ಕನಿಷ್ಠ 20 ನಿಮಿಷಗಳ ಕಾಲ ಅಲ್ಲೆ ವಿಡಿಯೊ ರೆಕಾರ್ಡ್ ಮಾಡುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಇದೆನ್ನಲ್ಲ ದೂರದಿಂದಲೇ ಗಮನಿಸಿ ಕಳ್ಳರು ಫೋನ್‌ ಎಗರಿಸುವ ಕೃತ್ಯಕ್ಕೆ ಮುಂದಾಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು, ಘಟನೆಯ ವಿವರ ಹಾಗೂ ದೂರುದಾರರ ಫೋನ್‌ ನಂಬರ್‌ ನೀಡುವಂತೆ ತಿಳಿಸಿದ್ದಾರೆ.

ತಮಗೂ ಹೀಗೆಲ್ಲ ಆಗಿದೆ ಎಂದು ಕಮೆಂಟ್‌

ಯುವತಿಯ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಇದೇ ರೀತಿಯ ಅನುಭವ ತಮಗೂ ಆಗಿದೆ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ. ಅದರಲ್ಲೊಬ್ಬರು ತಾನು ರಾತ್ರಿ 8.30ರ ಸುಮಾರಿಗೆ ಕೋರಮಂಗಲ 1ನೇ ಬ್ಲಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಟೊದಲ್ಲಿ ಹಿಂಬಾಲಿಸಿ ಕೆಲವರು ಫೋನ್‌ ಕಸಿದುಕೊಳ್ಳಲು ಪ್ರಯತ್ನಸಿದರು. ಆದರೆ ಫೋನ್‌ ಗಟ್ಟಿಯಾಗಿ ಹಿಡಿದಿದ್ದರಿಂದ ಅದು ಸಾಧ್ಯವಾಗಲಿಲ್ಲ. ನಿತ್ಯವೂ ಈ ದಾರಿಯಲ್ಲೆ ಮನೆಗೆ ಹೋಗಿ ಬರಬೇಕಾಗಿರುವುದರಿಂದ ಭೀತಿಯಲ್ಲೆ ಓಡಾಡಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: Karnataka Rain: ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಬೆಂಗಳೂರು ಸೇರಿ ಇಲ್ಲೆಲ್ಲ ವರ್ಷಧಾರೆ

ಬೆಂಗಳೂರು ಸೇರಿದಂತೆ ವಿವಿಧೆಡೆ ಕಳ್ಳತನ ಪ್ರಕರಣಗಳು ವರದಿ ಆಗುತ್ತಿದ್ದು, ಪೊಲೀಸರ ಕಾರ್ಯವೈಖರಿ ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಸರಗಳ್ಳತನದಿಂದ ಹಿಡಿದು ಮೊಬೈಲ್‌ ಹಾಗೂ ಅಪಾರ್ಟ್‌ಮೆಂಟ್‌ನಲ್ಲಿ ಚಪ್ಪಲಿ, ಶೂ ಕಳ್ಳತನ ಮಾತ್ರವಲ್ಲದೆ ಮನೆಯ ಮುಂದೆ ಇಟ್ಟಿರುವ ಹೂ ಕುಂಡಗಳನ್ನೂ ಕಳ್ಳತನ ಮಾಡುವ ಖರ್ತಾನಕ್‌ ಕಳ್ಳರ ಹಾವಳಿ ಹೆಚ್ಚಿದೆ.

Continue Reading
Advertisement
IPL 2023: A special drone show will be staged at the IPL opening ceremony
ಕ್ರಿಕೆಟ್30 seconds ago

IPL 2023: ಐಪಿಎಲ್​ ಉದ್ಘಾಟನಾ ಸಮಾರಂಭದಲ್ಲಿ ಕಂಗೊಳಿಸಲಿದೆ ವಿಶೇಷ ಡ್ರೋನ್​​ ಶೋ

shoping
ಪ್ರಮುಖ ಸುದ್ದಿ2 mins ago

Price hike : ನಾಳೆಯಿಂದ ಯಾವುದು ದುಬಾರಿ, ಯಾವುದು ಅಗ್ಗ, ಹೊಸ ಬದಲಾವಣೆ ಏನು?

bjp karnataka actor shashikumar meets cm basavaraj bommai
ಕರ್ನಾಟಕ8 mins ago

BJP Karnataka: ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನ ತೀವ್ರಗೊಳಿಸಿದ ಚಿತ್ರನಟ ಶಶಿಕುಮಾರ್‌

Gujarat high court imposes rs 25,000 penalty on delhi CM Kejriwal
ದೇಶ14 mins ago

Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 25 ಸಾವಿರ ರೂ. ದಂಡ!

Ram Navami Violence erupted in West Bengal and Gujarat, 24 detained
ದೇಶ14 mins ago

Ram Navami Violence: ಗುಜರಾತ್‌, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ

Dog Tries to eat Food Shown On TV Screen Viral Video
ವೈರಲ್ ನ್ಯೂಸ್16 mins ago

Viral Video: ಹುಡುಗನ ಕೈಯಲ್ಲಿದ್ದ ತಿಂಡಿ ತಿನ್ನಲು ಬಾಯಿ ಹಾಕಿದ ನಾಯಿ; ನಾಲಿಗೆಗೆ ಸಿಕ್ಕ ಟಿವಿ ಪರದೆ ನೆಕ್ಕಿ, ವಾಪಸ್ ಬಂತು!

siddaramaiah may contest in kolar along with varuna
ಕರ್ನಾಟಕ17 mins ago

Siddaramaiah: ಕೋಲಾರದಿಂದಲೂ ಸಿದ್ದರಾಮಯ್ಯ ಸ್ಪರ್ಧೆ: ರಾಹುಲ್‌ ಗಾಂಧಿಯಿಂದಲೇ ಘೋಷಣೆಗೆ ಮುಹೂರ್ತ?

Two riders killed on the spot after bike collides with truck
ಕರ್ನಾಟಕ24 mins ago

Bengaluru Murder Case: ಬೆಂಗಳೂರಲ್ಲಿ ನೇಪಾಳಿ ಯುವಕನ ಕೊಲೆಗೆ ಕಾರಣವಾಯ್ತು ಗಾಂಜಾ ನಶೆ; ಹಂತಕರ ಸೆರೆ

Suicide Case updates 21 year old woman commits suicide by hanging herself
ಕರ್ನಾಟಕ30 mins ago

Suicide Case: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 21ರ ಮಹಿಳೆ; ಕೌಟುಂಬಿಕ ಕಲಹ ಶಂಕೆ

IPL 2023: IPL fan park after three years; Opportunity in Karnataka too
ಕ್ರಿಕೆಟ್41 mins ago

IPL 2023: ಮೂರು ವರ್ಷಗಳ ಬಳಿಕ ಐಪಿಎಲ್​ ಫ್ಯಾನ್​ ಪಾರ್ಕ್​; ಕರ್ನಾಟಕದಲ್ಲಿಯೂ ಇರಲಿದೆ ಜೋಶ್​

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ11 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ4 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ22 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!