Viral News: ಅಮ್ಮಾ ನಿನ್ನ ತೋಳಿನಲ್ಲಿ... ತಾಯಿಯ ಬೆಚ್ಚನೆ ಅಪ್ಪುಗೆಯಲ್ಲಿರುವ ಮರಿ ಆನೆಯ ಫೋಟೊ ವೈರಲ್‌ - Vistara News

ವೈರಲ್ ನ್ಯೂಸ್

Viral News: ಅಮ್ಮಾ ನಿನ್ನ ತೋಳಿನಲ್ಲಿ… ತಾಯಿಯ ಬೆಚ್ಚನೆ ಅಪ್ಪುಗೆಯಲ್ಲಿರುವ ಮರಿ ಆನೆಯ ಫೋಟೊ ವೈರಲ್‌

Viral News: ಕೆಲವು ದಿನಗಳ ಹಿಂದೆ ಹಿಂಡಿನಿಂದ ಬೇರ್ಪಟ್ಟ ಮರಿ ಆನೆಯನ್ನು ತಾಯಿಯ ಜತೆಗೆ ಸೇರಿಸಲಾಗಿತ್ತು. ಇದೀಗ ತಾಯಿಯ ತೋಳಿನಲ್ಲಿ ಮರಿ ಆನೆ ವಿಶ್ರಾಂತಿ ಪಡೆಯುತ್ತಿರುವ ಫೊಟೊ ವೈರಲ್‌ ಆಗಿದೆ.

VISTARANEWS.COM


on

elephent
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಇತ್ತೀಚೆಗೆ ತಮಿಳುನಾಡು ಅರಣ್ಯ ಇಲಾಖೆ(Tamil Nadu Forest Department)ಯ ಸಿಬ್ಬಂದಿ ಆನಮಲೈ ಹುಲಿ ಮೀಸಲು ಪ್ರದೇಶದಲ್ಲಿ (Anamalai Tiger Reserve-ATR) ಸಿಕ್ಕಿಬಿದ್ದ ಆನೆ ಮರಿಯನ್ನು ಅದರ ಹಿಂಡಿನೊಂದಿಗೆ ಮತ್ತೆ ಸೇರಿಸಿದ್ದರು. ಇದೀಗ ಆ ಮರಿ ಆನೆ ತನ್ನ ತಾಯಿಯ ತೋಳಿನಲ್ಲಿ ತಲೆ ಇಟ್ಟು ಮಲಗಿರುವ ಹೃದಯಸ್ಪರ್ಶಿ ಚಿತ್ರ ವೈರಲ್‌ ಆಗಿದೆ (Viral News).

ರಾಜ್ಯ ಪರಿಸರ ಮತ್ತು ಅರಣ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ಐಎಎಸ್ ಈ ಫೋಟೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದಾರೆ. ಅರಣ್ಯ ಕ್ಷೇತ್ರ ಸಿಬ್ಬಂದಿ ತೆಗೆದ ಈ ಫೋಟೊದಲ್ಲಿ ಮರಿ ಆನೆ ತನ್ನ ತಾಯಿಯ ಬೆಚ್ಚಗಿನ ಅಪ್ಪುಗೆಯಲ್ಲಿ ಮಧ್ಯಾಹ್ನದ ಕಿರು ನಿದ್ದೆ ಮಾಡುತ್ತಿರುವುದು ಕಂಡು ಬಂದಿದೆ. ʼʼಕೆಲವೊಮ್ಮೆ ಒಂದು ಚಿತ್ರ ಸಾವಿರ ಪದಗಳನ್ನು ಆಡುತ್ತದೆ. ಬೇರ್ಪಟ್ಟ ಮರಿ ಆನೆ ಮರಳಿ ತನ್ನ ಕುಟುಂಬದೊಂದಿಗೆ ಸೇರಿದ ಬಳಿಕ ತನ್ನ ತಾಯಿಯ ತೋಳಿನಲ್ಲಿ ಸುರಕ್ಷಿತವಾಗಿ ವಿಶ್ರಾಂತಿ ಪಡೆಯುತ್ತಿದೆ. ಪ್ರಾಣಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಣ್ಗಾವಲು ಇಡುತ್ತಿರುವ ಅರಣ್ಯ ಕ್ಷೇತ್ರ ಸಿಬ್ಬಂದಿ ಆನಮಲೈ ಹುಲಿ ಮೀಸಲು ಪ್ರದೇಶದಲ್ಲಿ ತೆಗೆದ ಚಿತ್ರ ಇದು” ಎಂದು ಸಾಹು ಬರೆದುಕೊಂಡಿದ್ದಾರೆ.

ಆನೆ ಮರಿಯನ್ನು ರಕ್ಷಿಸಿದ್ದ ಅರಣ್ಯ ಕ್ಷೇತ್ರ ಸಿಬ್ಬಂದಿ

2023ರ ಡಿಸೆಂಬರ್‌ 30ರಂದು ಸುಮಾರು 4-5 ತಿಂಗಳ ಕಾಡಾನೆ ಮರಿಯೊಂದು ಏಕಾಂಗಿಯಾಗಿ ಆನಮಲೈ ಹುಲಿ ಮೀಸಲು ಪ್ರದೇಶದಲ್ಲಿ ಪತ್ತೆಯಾಗಿತ್ತು. ತನ್ನವರಿಂದ ಬೇರ್ಪಟ್ಟ ಆ ಆನೆ ಮರಿ ತನ್ನ ತಾಯಿಗಾಗಿ ಹುಡುಕಾಟ ನಡೆಸುತ್ತಿತ್ತು. ಬಳಿಕ ಇದು ಅರಣ್ಯ ಕ್ಷೇತ್ರ ಸಿಬ್ಬಂದಿ ಕಣ್ಣಿಗೆ ಬಿತ್ತು. ಆನೆ ಹಿಂಡನ್ನು ಪತ್ತೆಹಚ್ಚಲು ಶೋಧ ತಂಡವನ್ನು ಕಳುಹಿಸಲಾಯಿತು. ಡ್ರೋನ್‌ಗಳ ಸಹಾಯದಿಂದ ಸುಮಾರು 3 ಕಿ.ಮೀ. ದೂರದಲ್ಲಿ ಆನೆ ಹಿಂಡನ್ನು ಗುರುತಿಸಲಾಯಿತು. ನಂತರ ಆನೆ ಮರಿಯನ್ನು ಅಲ್ಲಿಗೆ ಕರೆದೊಯ್ಯಲಾಯಿತು. ಮರಿ ಆನೆಯನ್ನು ಹಿಂಡಿನ ಬಳಿ ಬಿಡುವ ಮುನ್ನ ಅದರ ಶರೀರಕ್ಕೆ ಮಣ್ಣ ಲೇಪಿಸಿ ಮಾನವ ಹಸ್ತಕ್ಷೇಪದ ಕುರುಹು ಅಳಿಸಲಾಗಿತ್ತು. ಮರಿ ಆನೆಯನ್ನು ಮತ್ತೆ ತನ್ನ ತಾಯಿಯೊಂದಿಗೆ ಸೇರಿಕೊಂಡಿತ್ತು.

ನೆಟ್ಟಿಗರಿಂದ ಮೆಚ್ಚುಗೆ

ಸದ್ಯ ತಾಯಿ-ಮರಿ ಆನೆಯ ಈ ಫೋಟೊ ವೈರಲ್‌ ಆಗಿದ್ದು, ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಹಲವರು ಭಾವುಕರಾಗಿದ್ದಾರೆ. ʼʼಮರಿ ಆನೆ ತನ್ನ ತಾಯಿಯ ತೋಳಿನಲ್ಲಿ ನೆಮ್ಮದಿಯಿಂದ ವಿಶ್ರಾಂತಿ ಪಡೆಯುತ್ತಿದೆ. ಹೃದಯಸ್ಪರ್ಶಿ ಫೋಟೊ ಇದು. ಪ್ರಾಣಿ ಪ್ರಪಂಚದ ದೃಢ ಬಾಂಧವ್ಯಕ್ಕೆ ಉತ್ತಮ ಉದಾಹರಣೆʼʼ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ.

ʼʼಮರಿ ಆನೆ ತನ್ನ ತಾಯಿಯೊಂದಿಗೆ ಸೇರಲು ಸಹಾಯ ಮಾಡಿದ ತಮಿಳುನಾಡು ಅರಣ್ಯ ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿ ಮತ್ತು ಸ್ವಯಂ ಸೇವಕರು ಅಭಿನಂದನೆಗೆ ಅರ್ಹರು. ಅತ್ಯುತ್ತಮ ಮಾನವೀಯ ಸಂದೇಶವನ್ನು ಈ ತಲೆಮಾರಿಗೆ ಅವರು ರವಾನಿಸಿದ್ದಾರೆʼʼ ಎಂದು ಇನ್ನೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ.

“ತಾಯಿಯ ಪ್ರೀತಿಯ, ಮೃದುವಾದ ಅಪ್ಪುಗೆಯಲ್ಲಿ ರಕ್ಷಿಸಲ್ಪಟ್ಟ ಈ ಮರಿ ಆನೆ ವಿಶ್ರಾಂತಿ ಪಡೆದುಕೊಳ್ಳುತ್ತಿದೆ. ಸಹಾನುಭೂತಿ ಮತ್ತು ರಕ್ಷಣೆಯ ಪ್ರಾಮುಖ್ಯತೆಯನ್ನು ಈ ಚಿತ್ರ ತಿಳಿಸುತ್ತದೆʼʼ ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ”ತಾಯಿ ಮತ್ತು ಮರಿಯ ಸಮಾಗಮ ನೋಡಿ ಹೃದಯ ತುಂಬಿ ಬಂತು” ಎಂದು ಮಗದೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಕಣ್ಣೆದುರಿದ್ದರೂ ಬೆಕ್ಕನ್ನು ಬೇಟೆಯಾಡದ ಗಿಡುಗ; ಕಾರಣಕ್ಕಾಗಿ ವಿಡಿಯೊ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

MS Dhoni: ಕಳೆದ ವಾರವಷ್ಟೇ ಧೋನಿ ಅವರು ಪ್ಯಾರಿಸ್​ನ ಪ್ರವಾಸಿ ಸ್ಥಳವೊಂದಕ್ಕೆ ಭೇಟಿ ನೀಡಿದ ಸಂದರ್ಭ ಅವರ ಅಭಿಮಾನಿಯೊಬ್ಬ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ. ಈ ಫೋಟೊ ಎಲ್ಲಡೆ ವೈರಲ್​ ಆಗಿತ್ತು. ಇದೀಗ ರಾಂಚಿಯಲ್ಲಿ ಅಭಿಮಾನಿಯೊಬ್ಬ ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ನಿಲ್ಲಿಸಿ ಅವರ ಜತೆ ಫೋಟೊ ತೆಗಿಸಿಕೊಂಡಿದ್ದಾನೆ.

VISTARANEWS.COM


on

MS Dhoni
Koo

ರಾಂಚಿ: ಐಪಿಎಲ್​ ಟೂರ್ನಿ ಮುಗಿಸಿ ಪ್ಯಾರಿಸ್​ ಪ್ರವಾಸ ಮಾಡಿದ್ದ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಮತ್ತೆ ತವರಿಗೆ ವಾಪಸ್​ ಆಗಿದ್ದಾರೆ. ತವರಿಗೆ ಮರಳಿದ್ದೇ ತಡ ರಾಂಚಿಯಲ್ಲಿ ಧೋನಿ ತಮ್ಮ ಐಶಾರಾಮಿ ಮರ್ಸಿಡಿಸ್‌ ಬೆಂಜ್‌ ಕಾರಿನಲ್ಲಿ ಸುತ್ತಾಡಿದ್ದಾರೆ. ಈ ವಿಡಿಯೊವನ್ನು ಧೋನಿ ಅವರ ಅಭಿಮಾನಿಯೊಬ್ಬ(ms dhoni fan) ಮೊಬೈಲ್​ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಇದೇ ವೇಳೆ ಧೋನಿ ಜತೆಗೆ ಈ ಅಭಿಮಾನಿ ಫೋಟೊ ಕೂಡ ತೆಗೆಸಿಕೊಂಡಿದ್ದಾರೆ.


ಕಳೆದ ವಾರವಷ್ಟೇ ಧೋನಿ ಅವರು ಪ್ಯಾರಿಸ್​ನ ಪ್ರವಾಸಿ ಸ್ಥಳವೊಂದಕ್ಕೆ ಭೇಟಿ ನೀಡಿದ ಸಂದರ್ಭ ಅವರ ಅಭಿಮಾನಿಯೊಬ್ಬ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ. ಈ ಫೋಟೊ ಎಲ್ಲಡೆ ವೈರಲ್​ ಆಗಿತ್ತು. ಇದೀಗ ರಾಂಚಿಯಲ್ಲಿ ಅಭಿಮಾನಿಯೊಬ್ಬ ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ನಿಲ್ಲಿಸಿ ಅವರ ಜತೆ ಫೋಟೊ ತೆಗಿಸಿಕೊಂಡಿದ್ದಾನೆ. ಈ ಫೊಟೊ ಕಂಡ ಧೋನಿ ಅಭಿಮಾನಿಗಳು ನೀವು ನಿಜವಾಗಿಯೂ ಅದೃಷ್ಟಶಾಲಿ ಎಂದು ಕಮೆಂಟ್‌ ಮಾಡಿದ್ದಾರೆ.

ಧೋನಿ(MS Dhoni) ಯಾವಾಗಲೂ ತಮ್ಮ ವ್ಯಕ್ತಿತ್ವದಿಂದ ಅವರ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಾರೆ. ಹೀಗಾಗಿ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು(MS Dhoni Fan) ಹೊಂದಿದ್ದಾರೆ. ಅವರ ಭೇಟಿಗಾಗಿ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಕೆಲ ಅಭಿಮಾನಿಗಳು ಧೋನಿಯನ್ನು ಭೇಟಿಯಾಗಿ ಅವರಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಾರೆ. 

ಇದನ್ನೂ ಓದಿ MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಈ ಆವೃತ್ತಿಯಲ್ಲಿ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿತ್ತು. ಆದರೆ ಧೋನಿ ಇದುವರೆಗೆ ತಮ್ಮ ನಿವೃತ್ತಿ ಪ್ರಕಟಿಸಿಲ್ಲ. ಮುಂದಿನ ಬಾರಿಯೂ ಅವರು ಆಡಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ಮಾಹಿತಿ ನೀಡಿದೆ.

ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದರು. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿತ್ತು.

ಧೋನಿ ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಈ ಫಾರ್ಮ್​ಹೌಸ್​ನ ವಿಡಿಯೊ ವೈರಲ್​ ಆಗಿತ್ತು.

Continue Reading

ಪ್ರಮುಖ ಸುದ್ದಿ

Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

Viral Video: ದೇಶದಲ್ಲಿ ಸಾಮರಸ್ಯ ಕದಡುವ ಘಟನೆ ಆಗಾಗ ನಡೆಯುತ್ತಲೇ ಇರುತ್ತವೆ. ಅದರಲ್ಲೂ ಈ ಧಾರ್ಮಿಕ ಹಬ್ಬಗಳು ಬಂದಾಗ ಏನಾದರೊಂದು ಘಟನೆ ಮಾಡಿ ನೆಮ್ಮದಿ ಹಾಳು ಮಾಡುತ್ತಿರುತ್ತಾರೆ. ಬಕ್ರೀದ್ ಹಬ್ಬದ ಹಿನ್ನೆಲೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದಾನೆ. ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದಾನೆ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ ಇದಕ್ಕೆ ಸಂಬಂಧಿಸಿದ ವಿಡಿಯೊ ಈ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಮುಂಬೈ : ಮುಸ್ಲಿಮರಿಗೆ ಬಕ್ರೀದ್ ಹಬ್ಬ ತುಂಬಾ ವಿಶೇಷವಾದದ್ದು. ಹಾಗಾಗಿ ಈ ದಿನ ಅವರ ಸಂಪ್ರದಾಯದಂತೆ ಮೇಕೆಗಳನ್ನು ಬಲಿಕೊಡಲಾಗುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಗಳೂ ಕೂಡ ಇತರರ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಯಾವುದೇ ದುರ್ಘಟನೆಗಳು ನಡೆಯಬಾರದೆಂದು ಮುಸ್ಲಿಂರಿಗೆ ಹಾಗೂ ಆಡಳಿತ ಅಧಿಕಾರಿಗೂ ಸೂಚಿಸಿದೆ. ಆದರೂ ಇದರ ನಡುವೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video )ಆಗಿದೆ.

ಮುಂಬೈನ ಬೆಲಾಪುರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ನಲ್ಲಿರುವ ಗುಡ್ ಲಕ್ ಮಟನ್ ಅಂಗಡಿ ಮಾಲೀಕ ಮಹಮ್ಮದ್ ಶಾಫಿ ಎಂಬುವವನು ಬಲಿದಾನದ ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ. ಜೂನ್ 15ರಂದು ಈ ಘಟನೆ ನಡೆದಿದ್ದು, ರಾಮ ಎನ್ನುವುದು ಹಿಂದೂಗಳ ದೇವರಾದ ಕಾರಣ ಹಿಂದೂ ಸಂಘಟನೆಯ ಕೆಲವು ಜನರು ಅಲ್ಲಿಗೆ ಬಂದು ಗಲಾಟೆ ಮಾಡಿದ್ದಾರೆ. ಹಾಗೇ ಈ ದೃಶ್ಯವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಹಿಂದೂಗಳು ಅಂಗಡಿಗೆ ನುಗ್ಗಿ ಮಾಲೀಕನ ಜೊತೆ ಗಲಾಟೆ ನಡೆಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹಾಗೂ ಆತನ ಅಂಗಡಿಯನ್ನು ಮುಚ್ಚಲಾಗಿದೆ. ಸೋಶಿಯಲ್ ಮೀಡಿಯಾದ ಬಳಕೆದಾರರು, ಹಿಂದೂ ಸಂಘಟನೆಗಳು ಸೇರಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:  ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

ಹಿಂದುತ್ವ ನೈಟ್ ಎಂಬ ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ನಲ್ಲಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ. “ಇದು ಅತಿರೇಕವಾಗಿದೆ. ಗುಡ್ ಲಕ್ ಮಟನ್ ಸ್ಟೋರ್ ಮಾರಾಟ ಮಾಡುವ ಮೇಕೆಯ ಮೇಲೆ ರಾಮ್ ಹೆಸರನ್ನು ಬರೆಯಲಾಗಿದೆ. ಬಕ್ರೀದ್ ದಿನದಂದು ಈ ಮೇಕೆಯನ್ನು ಬಹಿರಂಗವಾಗಿ ಕೊಲ್ಲುವುದರ ಮೂಲಕ ಹಿಂದೂ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುತ್ತಿದ್ದಾರೆ. ಈ ಮೂಲಕ ಅವರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಲ್ಲಿ ವಿನಂತಿಸುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Reasi Terror Attack: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಹೇಳಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

VISTARANEWS.COM


on

Reasi Terror Attack
Koo

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಭಯೋತ್ಪಾದಕ ದಾಳಿ (Reasi Terror Attack)ಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪಾಕಿಸ್ತಾನದಲ್ಲಿ ‘ಅಪರಿಚಿತ ವ್ಯಕ್ತಿಗಳು’ ಹತ್ಯೆ ಮಾಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಹೇಳಿದ್ದಾರೆ. ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದೀಗ ಈ ಕೃತ್ಯಕ್ಕೆ ಸಂಚು ರೂಪಿಸಿದವನ ವಿರುದ್ಧ ಪ್ರತಿಕಾರ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಇಬ್ಬರು ವ್ಯಕ್ತಿಗಳು ಈ ಬಗ್ಗೆ ಮಾಹಿತಿ ನೀಡುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಈ 16 ಸೆಕೆಂಡುಗಳ ಈ ಪುಟ್ಟ ವಿಡಿಯೊ ಇದೀಗ ಇಂಟರ್‌ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಇಬ್ಬರು ಕ್ಯಾಮೆರಾ ಮುಂದೆ ನಿಂತು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಚರ್ಚಿಸುತ್ತಾರೆ. ಬಳಿಕ ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಈ ಕೃತ್ಯದ ಮಾಸ್ಟರ್ ಮೈಂಡ್ ಅನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳುತ್ತಾರೆ. ಸದ್ಯ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಪಾಕಿಸ್ತಾನದಲ್ಲಿ ಹೆಚ್ಚುತ್ತಿದೆ ಉಗ್ರರ ಹತ್ಯೆ

ವಿಶೇಷ ಎಂದರೆ ಪಾಕಿಸ್ತಾನದಲ್ಲಿ ಉಗ್ರರ ಹತ್ಯೆ ಹೆಚ್ಚುತ್ತಿದೆ. ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ಬೇಹುಗಾರಿಕೆ ಆರೋಪ ಹೊತ್ತು ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಅವರನ್ನು ಹತ್ಯೆ ಮಾಡಿದ್ದ ಅಮೀರ್ ಸರ್ಫರಾಜ್ ಅಲಿಯಾಸ್ ತಾಂಬಾ ಎಂಬಾತನನ್ನು ಏಪ್ರಿಲ್‌ 14ರಂದು ಪಾಕಿಸ್ತಾನದ ಲಾಹೋರ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು.

ಬಂಧಿತರ ಸಂಖ್ಯೆ 50ಕ್ಕೆ ಏರಿಕೆ

ಈತನ್ಮಧ್ಯೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 50 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 9ರಂದು ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ್ದರು. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಆಳವಾದ ಕಂದಕಕ್ಕೆ ಬಿದ್ದಿತ್ತು. ʼʼಈ ಘಟನೆ ಬಗ್ಗೆ ಕಾಂಡಾ ಪ್ರದೇಶ ಪೊಲೀಸ್ ಠಾಣೆಯ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಈವರೆಗೆ 50 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆʼʼ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಹೇಳಿದ್ದಾರೆ.

ಮತ್ತೆ ಕಣಿವೆ ರಾಜ್ಯದಲ್ಲಿ ಗುಂಡಿನ ಮೊರೆತ

ಇದುವರೆಗೆ ಶಾಂತವಾಗಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಆರಂಭವಾಗಿದೆ. ರಿಯಾಸಿ ಜತೆಗೆ ಭಯೋತ್ಪಾದಕರು ಇತರ ಎರಡು ಕಡೆ ದಾಳಿ ನಡೆಸಿದ್ದಾರೆ. ಕಥುವಾ ಮತ್ತು ದೋಡಾದಲ್ಲಿ ಉಗ್ರರು ದಾಂಧಲೆ ಎಬ್ಬಿಸಿದ್ದಾರೆ. ಈ ಪೈಕಿ 3 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

Continue Reading

Latest

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Bakrid ಬಕ್ರೀದ್ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಮುಸ್ಲಿಂರು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಕೇಳಿದ್ರೆ ಎಲ್ಲರೂ ಶಾಕ್ ಆಗುತ್ತಾರೆ. ಇನ್ನು ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ.ಅದುವೇ ಬ್ರಾಡ್ ಹೆಸರಿನ ಮೇಕೆ.

VISTARANEWS.COM


on

Bakrid
Koo

ಬೆಂಗಳೂರು : ಬಕ್ರೀದ್‌ ಮುಸ್ಲಿಂ ಭಾಂದವರು ಆಚರಿಸುವ ಹಬ್ಬ. ಬಕ್ರೀದ್‌ (Bakrid) ಹಬ್ಬದಂದು ಮೇಕೆಗಳನ್ನು ಬಲಿಕೊಡುವುದು ಅವರ ಸಂಪ್ರದಾಯ. ಇನ್ನು ವಿಶೇಷವೆಂದರೆ ಈ ಬಕ್ರೀದ್‌ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಗಗನಕ್ಕೇರಿರುತ್ತದೆ.

ಇನ್ನು ಈ ಸಂದರ್ಭದಲ್ಲಿ ಲಕ್ಷಾಂತರ ಬೆಲೆಗೆ ಮೇಕೆಗಳು ಮಾರಾಟವಾಗುತ್ತವೆ. ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ. ಅದರ ಬಗ್ಗೆ ತಿಳಿದುಕೊಳ್ಳಿ.
ಬ್ರಾಡ್ ಎಂಬ ಹೆಸರಿನ ಮೇಕೆ ವಿಶ್ವದಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ಹಾಗಾಗಿ ಅದರ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.. ವರ್ಲ್ಡ್ ರೆಕಾರ್ಡ್ಸ್ ನ ಪ್ರಕಾರ, ಈ ಮೇಕೆಯ ಬೆಲೆ 82,600 ಯುಎಸ್ ಡಿ ಆಗಿದೆ. ಅಂದರೆ ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಇದರ ಬೆಲೆ ಅಂದಾಜು 69 ಲಕ್ಷ ರೂ.ಗಳಾಗಿವೆ. ಇಂತಹ ಅತ್ಯಂತ ದುಬಾರಿ ಬೆಲೆಯ ಮೇಲೆ ಬ್ರಿಟನ್ ನಲ್ಲಿ ಹೆಚ್ಚು ಮಾರಾಟವಾಗುತ್ತದೆಯಂತೆ. ಇದಕ್ಕೆ ಇತ್ತೀಚಿನ ದಿನಗಳಲ್ಲಿ ಈ ಬೆಲೆ ನಿಗದಿಯಾಗಿಲ್ಲ ಬಹಳ ಹಿಂದೆ ಅಂದರೆ 1985ರಲ್ಲಿಯೇ ಈ ಮೇಕೆಗೆ ದುಬಾರಿ ಬೆಲೆ ನೀಡಲಾಗುತ್ತಿತ್ತಂತೆ.

ಅಂಗೋರಾ ಮೇಕೆಯ ವಿಶೇಷತೆಗಳು:

ಬಿಳಿ ಬಣ್ಣದ ಕೂದಲನ್ನು ಹೊಂದಿರುವ ಈ ಅಂಗೋರಾ ಮೇಕೆಗಳು ವಿಶ್ವದ ಅತ್ಯುತ್ತಮ ಮೇಕೆ ತಳಿಗಳಲ್ಲಿ ಒಂದಾಗಿದೆ. ಈ ಮೇಕೆಗಳನ್ನು ಉಣ್ಣೆಗಳಿಗಾಗಿ ಹೆಚ್ಚಿನ ಜನರು ಸಾಕುತ್ತಾರೆ. ಇದರಿಂದ ದೊರೆಯುವ ಉಣ್ಣೆಗಳಿಗೆ ಮೊಹೇರ್ ಎಂದು ಕರೆಯುತ್ತಾರೆ. ಇದರ ಉಣ್ಣೆ ಉತ್ತಮ ಗುಣಮಟ್ಟದಾಗಿರುತ್ತದೆ. ಹಾಗಾಗಿ ಈ ಮೇಕೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಬಕ್ರೀದ್ ಸಮಯದಲ್ಲಿ ಅನೇಕ ಜನರು ಹಣಕ್ಕಾಗಿ ಅವುಗಳನ್ನು ಮಾರಾಟ ಮಾಡುತ್ತಾರೆ.
ಮೇಕೆಗಳು ಅವುಗಳ ತಳಿಗಳ ಆಧಾರದ ಮೇಲೆ ವಿಶೇಷತೆಯನ್ನು ಹೊಂದಿರುತ್ತವೆ. ಮೇಕೆಗಳಲ್ಲಿ ಕೆಲವು ಕಪ್ಪು, ಬಿಳಿ ಬಣ್ಣದಲ್ಲಿದ್ದರೆ ಕೆಲವು ತಳಿಗಳ ಮೇಕೆಗಳ ಮೈಮೇಲೆ ವಿಶಿಷ್ಟವಾದ ಗುರುತುಗಳಿರುತ್ತದೆ. ಹಾಗಾಗಿ ಅವುಗಳನ್ನು ವಿಶೇಷವಾದವು ಎನ್ನಲಾಗುತ್ತದೆ.

ಇದನ್ನೂ ಓದಿ:ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

ಇದೇ ರೀತಿ 2023ರಲ್ಲಿ ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಮೇಕೆಯೊಂದು ಬಹಳ ಪ್ರಸಿದ್ಧವಾಗಿತ್ತು. ಅದು ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಕಾರಣ ಅದರ ಮಾಲೀಕ 1 ಕೋಟಿ 12 ಲಕ್ಷದ 786 ರೂ. ಎಂಬುದಾಗಿ ತಿಳಿಸಿದ್ದ. ಈ ಮೇಕೆಯ ಹೆಸರು ಶೇರು. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಮೇಕೆ ಮಾಲೀಕನೊಬ್ಬನ ಬಳಿ ಇದು ಇತ್ತು. ಇದರ ದೇಹದ ಮೇಲೆ ಇದ್ದ ಗುರುತುಗಳನ್ನು ಹತ್ತಿರದಿಂದ ನೋಡಿದರೆ ಅದು “ ಅಲ್ಲಾ” ಮತ್ತು “ಮೊಹಮ್ಮದ್” ಎಂದು ಉರ್ದುವಿನಲ್ಲಿ ಬರೆದಿರುವುದನ್ನು ಕಾಣಬಹುದು. ಆದರೆ ಈ ಮೇಕೆ ಮಾರಾಟವಾಗುವ ಮುನ್ನವೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Continue Reading
Advertisement
Train Accident
EXPLAINER4 mins ago

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident
ದೇಶ8 mins ago

Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲು​ ದುರಂತ; ಮೃತರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ

Model Fashion pratibha nataraj
ಫ್ಯಾಷನ್12 mins ago

Model Fashion: ಸೀಸನ್‌ ಗೆ ತಕ್ಕಂತೆ ಫ್ಯಾಷನ್‌ ಬದಲಿಸುವ ಮಿಸೆಸ್‌ ಬೆಂಗಳೂರು ಟೈಟಲ್‌ ವಿಜೇತೆ ಪ್ರತಿಭಾ ನಟರಾಜ್‌

Amy Jackson shares a glimpse of her Paris bachelorette
ಸಿನಿಮಾ24 mins ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ28 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ32 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ40 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ49 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ1 hour ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌