Viral News: ಅಮ್ಮಾ ನಿನ್ನ ತೋಳಿನಲ್ಲಿ... ತಾಯಿಯ ಬೆಚ್ಚನೆ ಅಪ್ಪುಗೆಯಲ್ಲಿರುವ ಮರಿ ಆನೆಯ ಫೋಟೊ ವೈರಲ್‌ - Vistara News

ವೈರಲ್ ನ್ಯೂಸ್

Viral News: ಅಮ್ಮಾ ನಿನ್ನ ತೋಳಿನಲ್ಲಿ… ತಾಯಿಯ ಬೆಚ್ಚನೆ ಅಪ್ಪುಗೆಯಲ್ಲಿರುವ ಮರಿ ಆನೆಯ ಫೋಟೊ ವೈರಲ್‌

Viral News: ಕೆಲವು ದಿನಗಳ ಹಿಂದೆ ಹಿಂಡಿನಿಂದ ಬೇರ್ಪಟ್ಟ ಮರಿ ಆನೆಯನ್ನು ತಾಯಿಯ ಜತೆಗೆ ಸೇರಿಸಲಾಗಿತ್ತು. ಇದೀಗ ತಾಯಿಯ ತೋಳಿನಲ್ಲಿ ಮರಿ ಆನೆ ವಿಶ್ರಾಂತಿ ಪಡೆಯುತ್ತಿರುವ ಫೊಟೊ ವೈರಲ್‌ ಆಗಿದೆ.

VISTARANEWS.COM


on

elephent
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಇತ್ತೀಚೆಗೆ ತಮಿಳುನಾಡು ಅರಣ್ಯ ಇಲಾಖೆ(Tamil Nadu Forest Department)ಯ ಸಿಬ್ಬಂದಿ ಆನಮಲೈ ಹುಲಿ ಮೀಸಲು ಪ್ರದೇಶದಲ್ಲಿ (Anamalai Tiger Reserve-ATR) ಸಿಕ್ಕಿಬಿದ್ದ ಆನೆ ಮರಿಯನ್ನು ಅದರ ಹಿಂಡಿನೊಂದಿಗೆ ಮತ್ತೆ ಸೇರಿಸಿದ್ದರು. ಇದೀಗ ಆ ಮರಿ ಆನೆ ತನ್ನ ತಾಯಿಯ ತೋಳಿನಲ್ಲಿ ತಲೆ ಇಟ್ಟು ಮಲಗಿರುವ ಹೃದಯಸ್ಪರ್ಶಿ ಚಿತ್ರ ವೈರಲ್‌ ಆಗಿದೆ (Viral News).

ರಾಜ್ಯ ಪರಿಸರ ಮತ್ತು ಅರಣ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ಐಎಎಸ್ ಈ ಫೋಟೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದಾರೆ. ಅರಣ್ಯ ಕ್ಷೇತ್ರ ಸಿಬ್ಬಂದಿ ತೆಗೆದ ಈ ಫೋಟೊದಲ್ಲಿ ಮರಿ ಆನೆ ತನ್ನ ತಾಯಿಯ ಬೆಚ್ಚಗಿನ ಅಪ್ಪುಗೆಯಲ್ಲಿ ಮಧ್ಯಾಹ್ನದ ಕಿರು ನಿದ್ದೆ ಮಾಡುತ್ತಿರುವುದು ಕಂಡು ಬಂದಿದೆ. ʼʼಕೆಲವೊಮ್ಮೆ ಒಂದು ಚಿತ್ರ ಸಾವಿರ ಪದಗಳನ್ನು ಆಡುತ್ತದೆ. ಬೇರ್ಪಟ್ಟ ಮರಿ ಆನೆ ಮರಳಿ ತನ್ನ ಕುಟುಂಬದೊಂದಿಗೆ ಸೇರಿದ ಬಳಿಕ ತನ್ನ ತಾಯಿಯ ತೋಳಿನಲ್ಲಿ ಸುರಕ್ಷಿತವಾಗಿ ವಿಶ್ರಾಂತಿ ಪಡೆಯುತ್ತಿದೆ. ಪ್ರಾಣಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಣ್ಗಾವಲು ಇಡುತ್ತಿರುವ ಅರಣ್ಯ ಕ್ಷೇತ್ರ ಸಿಬ್ಬಂದಿ ಆನಮಲೈ ಹುಲಿ ಮೀಸಲು ಪ್ರದೇಶದಲ್ಲಿ ತೆಗೆದ ಚಿತ್ರ ಇದು” ಎಂದು ಸಾಹು ಬರೆದುಕೊಂಡಿದ್ದಾರೆ.

ಆನೆ ಮರಿಯನ್ನು ರಕ್ಷಿಸಿದ್ದ ಅರಣ್ಯ ಕ್ಷೇತ್ರ ಸಿಬ್ಬಂದಿ

2023ರ ಡಿಸೆಂಬರ್‌ 30ರಂದು ಸುಮಾರು 4-5 ತಿಂಗಳ ಕಾಡಾನೆ ಮರಿಯೊಂದು ಏಕಾಂಗಿಯಾಗಿ ಆನಮಲೈ ಹುಲಿ ಮೀಸಲು ಪ್ರದೇಶದಲ್ಲಿ ಪತ್ತೆಯಾಗಿತ್ತು. ತನ್ನವರಿಂದ ಬೇರ್ಪಟ್ಟ ಆ ಆನೆ ಮರಿ ತನ್ನ ತಾಯಿಗಾಗಿ ಹುಡುಕಾಟ ನಡೆಸುತ್ತಿತ್ತು. ಬಳಿಕ ಇದು ಅರಣ್ಯ ಕ್ಷೇತ್ರ ಸಿಬ್ಬಂದಿ ಕಣ್ಣಿಗೆ ಬಿತ್ತು. ಆನೆ ಹಿಂಡನ್ನು ಪತ್ತೆಹಚ್ಚಲು ಶೋಧ ತಂಡವನ್ನು ಕಳುಹಿಸಲಾಯಿತು. ಡ್ರೋನ್‌ಗಳ ಸಹಾಯದಿಂದ ಸುಮಾರು 3 ಕಿ.ಮೀ. ದೂರದಲ್ಲಿ ಆನೆ ಹಿಂಡನ್ನು ಗುರುತಿಸಲಾಯಿತು. ನಂತರ ಆನೆ ಮರಿಯನ್ನು ಅಲ್ಲಿಗೆ ಕರೆದೊಯ್ಯಲಾಯಿತು. ಮರಿ ಆನೆಯನ್ನು ಹಿಂಡಿನ ಬಳಿ ಬಿಡುವ ಮುನ್ನ ಅದರ ಶರೀರಕ್ಕೆ ಮಣ್ಣ ಲೇಪಿಸಿ ಮಾನವ ಹಸ್ತಕ್ಷೇಪದ ಕುರುಹು ಅಳಿಸಲಾಗಿತ್ತು. ಮರಿ ಆನೆಯನ್ನು ಮತ್ತೆ ತನ್ನ ತಾಯಿಯೊಂದಿಗೆ ಸೇರಿಕೊಂಡಿತ್ತು.

ನೆಟ್ಟಿಗರಿಂದ ಮೆಚ್ಚುಗೆ

ಸದ್ಯ ತಾಯಿ-ಮರಿ ಆನೆಯ ಈ ಫೋಟೊ ವೈರಲ್‌ ಆಗಿದ್ದು, ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಹಲವರು ಭಾವುಕರಾಗಿದ್ದಾರೆ. ʼʼಮರಿ ಆನೆ ತನ್ನ ತಾಯಿಯ ತೋಳಿನಲ್ಲಿ ನೆಮ್ಮದಿಯಿಂದ ವಿಶ್ರಾಂತಿ ಪಡೆಯುತ್ತಿದೆ. ಹೃದಯಸ್ಪರ್ಶಿ ಫೋಟೊ ಇದು. ಪ್ರಾಣಿ ಪ್ರಪಂಚದ ದೃಢ ಬಾಂಧವ್ಯಕ್ಕೆ ಉತ್ತಮ ಉದಾಹರಣೆʼʼ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ.

ʼʼಮರಿ ಆನೆ ತನ್ನ ತಾಯಿಯೊಂದಿಗೆ ಸೇರಲು ಸಹಾಯ ಮಾಡಿದ ತಮಿಳುನಾಡು ಅರಣ್ಯ ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿ ಮತ್ತು ಸ್ವಯಂ ಸೇವಕರು ಅಭಿನಂದನೆಗೆ ಅರ್ಹರು. ಅತ್ಯುತ್ತಮ ಮಾನವೀಯ ಸಂದೇಶವನ್ನು ಈ ತಲೆಮಾರಿಗೆ ಅವರು ರವಾನಿಸಿದ್ದಾರೆʼʼ ಎಂದು ಇನ್ನೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ.

“ತಾಯಿಯ ಪ್ರೀತಿಯ, ಮೃದುವಾದ ಅಪ್ಪುಗೆಯಲ್ಲಿ ರಕ್ಷಿಸಲ್ಪಟ್ಟ ಈ ಮರಿ ಆನೆ ವಿಶ್ರಾಂತಿ ಪಡೆದುಕೊಳ್ಳುತ್ತಿದೆ. ಸಹಾನುಭೂತಿ ಮತ್ತು ರಕ್ಷಣೆಯ ಪ್ರಾಮುಖ್ಯತೆಯನ್ನು ಈ ಚಿತ್ರ ತಿಳಿಸುತ್ತದೆʼʼ ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ”ತಾಯಿ ಮತ್ತು ಮರಿಯ ಸಮಾಗಮ ನೋಡಿ ಹೃದಯ ತುಂಬಿ ಬಂತು” ಎಂದು ಮಗದೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಕಣ್ಣೆದುರಿದ್ದರೂ ಬೆಕ್ಕನ್ನು ಬೇಟೆಯಾಡದ ಗಿಡುಗ; ಕಾರಣಕ್ಕಾಗಿ ವಿಡಿಯೊ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

Viral Video: ಬಟ್ಟೆ ಒಗೆಯುವುದು, ಕಸ ಗುಡಿಸುವುದು ಇವು ಎಂದಿಗೂ ಮುಗಿಯದ ಕೆಲಸಗಳು! ದಿನಾ ಬೆಳಗಾದರೆ ಈ ಕೆಲಸಗಳನ್ನು ಮಾಡಲೇಬೇಕಾಗುತ್ತದೆ. ಇದನ್ನು ಸುಲಭ ಮಾಡುವುದಕ್ಕೆ ಈಗ ಸಾಕಷ್ಟು ಎಲೆಕ್ಟ್ರಾನಿಕ್ ಸಾಧನಗಳು ಬಂದಿವೆ. ಇಲ್ಲೊಬ್ಬಳು ಮಹಿಳೆ ಕಲ್ಲು ಹಾಗೂ ಸಿಮೆಂಟ್ ಬಳಸಿ ವಾಷಿಂಗ್ ಮೆಷಿನ್ ತಯಾರಿಸಿದ್ದಾಳೆ ಇದು ಸಿಕ್ಕಾಪಟ್ಟೆ ವೈರಲ್ (Viral Video )ಆಗಿದೆ. ಈ ವಾಷಿಂಗ್ ಮೆಷಿನ್ ನ ಒಂದು ಬದಿಯಲ್ಲಿ ಸಿಂಕ್ ಅನ್ನು ಹೊಂದಿದ್ದು, ಅದಕ್ಕೆ ನಲ್ಲಿಯನ್ನು ಜೋಡಿಸಲಾಗಿದೆ. ಹಾಗೇ ಇನ್ನೊಂದು ಬದಿಯಲ್ಲಿ ನಿಂತು ಬಟ್ಟೆಗಳನ್ನು ಒಗೆಯಲು ಕಲ್ಲುಗಳನ್ನು ಇರಿಸಲಾಗಿದೆ.

VISTARANEWS.COM


on

Viral Video
Koo

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಪುರುಷರ ಜತೆ ಮಹಿಳೆಯರೂ ಕೆಲಸದ ನಿಮಿತ್ತ ಹೊರಗೆ ಹೋಗುವುದರಿಂದ ಮನೆಗೆಲಸಗಳು ಹಾಗೇ ಉಳಿದುಬಿಡುತ್ತವೆ. ಹಾಗಾಗಿ ಜನರು ಎಲೆಕ್ಟ್ರಾನಿಕ್ಸ್ ಮೆಷಿನ್ ಗಳ ಮೇಲೆ ಅವಲಂಬಿತರಾಗುತ್ತಿದ್ದಾರೆ. ಬಟ್ಟೆ ಒಗೆಯಲು, ಅಡುಗೆ ಮಾಡಲು, ನೆಲ ಗುಡಿಸಿ (Floor cleaning), ಒರೆಸಲು ಕೂಡ ಎಲೆಕ್ಟ್ರಾನಿಕ್ಸ್ ಮೆಷಿನ್ ಗಳು ಬಂದಿವೆ. ಅದರಲ್ಲೂ ಬಟ್ಟೆ (Cloth) ಒಗೆಯುವುದಂತು ಒಂದು ದೊಡ್ಡ ಕೆಲಸ ಎಂದೇ ಹೇಳಬಹುದು. ಹಾಗಾಗಿ ಎಲ್ಲರ ಮನೆಯಲ್ಲಿ ವಾಷಿಂಗ್ ಮೆಷಿನ್ ಇದ್ದೆ ಇರುತ್ತದೆ. ಆದರೆ ಇಲ್ಲೊಬ್ಬ ಮಹಿಳೆ ಬಟ್ಟೆ ಒಗೆಯಲು ಸಿಮೆಂಟ್ ಮತ್ತು ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ್ದು, ಅದು ವೈರಲ್ (Viral Video )ಆಗಿದೆ.

ವಿಡಿಯೊದಲ್ಲಿ ಮಹಿಳೆ ಕಲ್ಲು ಮತ್ತು ಸಿಮೆಂಟ್ ಬಳಸಿ ವಾಷಿಂಗ್ ಮೆಷಿನ್ ರೆಡಿ ಮಾಡುತ್ತಿದ್ದಾಳೆ. ಅದಕ್ಕಾಗಿ ವಾಷಿಂಗ್ ಮೆಷಿನ್‌ನ ಅಂಚುಗಳನ್ನು ಪರಿಪೂರ್ಣಗೊಳಿಸುತ್ತಿರುವುದನ್ನು ನಾವು ಈ ವಿಡಿಯೊದಲ್ಲಿ ನೋಡಬಹುದು. ಈ ವಾಷಿಂಗ್ ಮೆಷಿನ್ ನ ಒಂದು ಬದಿಯಲ್ಲಿ ಸಿಂಕ್ ಅನ್ನು ಹೊಂದಿದ್ದು, ಅದಕ್ಕೆ ನಲ್ಲಿಯನ್ನು ಜೋಡಿಸಲಾಗಿದೆ. ಹಾಗೇ ಇನ್ನೊಂದು ಬದಿಯಲ್ಲಿ ನಿಂತು ಬಟ್ಟೆಗಳನ್ನು ಒಗೆಯಲು ಕಲ್ಲುಗಳನ್ನು ಇರಿಸಲಾಗಿದೆ. ಇದು ನೋಡಲು ತುಂಬಾ ವ್ಯವಸ್ಥಿತವಾಗಿ ಕಂಡುಬಂದರೂ ಕೂಡ ವಾಷಿಂಗ್ ಮೆಷಿನ್ ನ ಹಾಗೇ ಬಟ್ಟೆಯನ್ನು ತಾನೇ ವಾಶ್ ಮಾಡುವುದಿಲ್ಲ. ಬದಲಾಗಿ ಬಟ್ಟೆ ಮಹಿಳೆ ಕೈಯಿಂದ ತೊಳೆಯಬೇಕಾಗುತ್ತದೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದೆ. ಆದರೆ ಜನರು ಹೆಚ್ಚು ಇದಕ್ಕೆ ಪ್ರಭಾವಿತರಾಗಿಲ್ಲ. ಯಾಕೆಂದರೆ ಇದರಲ್ಲಿ ಬಟ್ಟೆ ತಾವೇ ಕೈಯಿಂದ ತೊಳೆಯಬೇಕಾದ ಕಾರಣ ಇದು ಬಟ್ಟೆ ತೊಳೆಯುವ ಸಮಸ್ಯೆಗೆ ಪರಿಹಾರ ನೀಡುವುದಿಲ್ಲ ಒಂದು ಜನರು ಅಭಿಪ್ರಾಯ ತಿಳಿಸಿದ್ದಾರೆ. ಅಲ್ಲದೇ ಇದರಿಂದ ಹೆಚ್ಚು ನೀರು ಕೂಡ ವ್ಯರ್ಥವಾಗುತ್ತದೆ ಎಂಬುದಾಗಿ ಸೂಚಿಸಿದ್ದಾರೆ.

ಇದನ್ನೂ ಓದಿ: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

ಇದೇರೀತಿ ಇತ್ತೀಚೆಗಷ್ಟೇ ವ್ಯಕ್ತಿಯೊಬ್ಬ ಎಸಿಯಿಂದ ನೀರನ್ನು ಕೂಲರ್‌ಗೆ ಮರು ನಿರ್ದೇಶಿಸುತ್ತಿರುವುದನ್ನು ತೋರಿಸುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿತ್ತು. ಅದರಲ್ಲಿ ವ್ಯಕ್ತಿ ಎಸಿಯಿಂದ ಒಂದು ಪೈಪ್ ಅನ್ನು ನೆಲಮಹಡಿಯಲ್ಲಿರುವ ಕೂಲರ್‌ಗೆ ಸಂಪರ್ಕಿಸಿರುವುದನ್ನು ತೋರಿಸುವುದು ಕಂಡುಬಂದಿದೆ. ಇದರಲ್ಲಿ ಎಸಿಯಿಂದ ನೀರು ಕೂಲರ್ ಗೆ ವರ್ಗಾಯಿಸಲಾಗುತ್ತದೆ. ಇದು ವೈರಲ್ ಆಗಿದೆ. ಈ ವಿಡಿಯೊಗೆ 2.9 ದಶಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ. ವ್ಯಕ್ತಿಯ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

Latest

Viral Video: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

Viral Video: ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎನ್ನುತ್ತಾರೆ. ಆದರೆ ಇತ್ತೀಚೆಗೆ ಕೊಲ್ಕತ್ತಾದಲ್ಲಿ ನಡೆದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಹಿಳೆಯರನ್ನು ಅವಮಾನ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ಸಿಎ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲ ಐದು ಸಾಲುಗಳಲ್ಲಿ ಯಾವುದೇ ಮಹಿಳೆ ಅಥವಾ ಹುಡುಗಿಯರು ಇರಬಾರದು. ಒಂದು ವೇಳೆ ಷರತ್ತು ಪಾಲಿಸದಿದ್ದರೆ ಸ್ವಾಮಿಜಿ ವೇದಿಕೆ ಬಿಟ್ಟು ಹೋಗಲಿದ್ದಾರೆ ಎಂದು ಘೋಷಿಸಿ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಕೋಲ್ಕತ್ತಾ: ಜಗತ್ತಿನಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ನೀಡಬೇಕು ಎನ್ನುತ್ತಾರೆ. ಯಾಕೆಂದರೆ ತಾಯಿ, ಸಹೋದರಿ, ಪತ್ನಿ, ಮಗಳಾಗಿ ಮಹಿಳೆ ಪುರುಷರ ಪಾಲಿನ ದೀಪವಾಗುತ್ತಾಳೆ, ಅವರ ಬದುಕಿಗೆ ಸ್ಫೂರ್ತಿಯಾಗುತ್ತಾಳೆ ಮಹಿಳೆ. ಹಾಗಾಗಿ ಕಾನೂನುಗಳಲ್ಲಿ ಪುರುಷರಂತೆ ಮಹಿಳೆಯರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ. ಆದರೆ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇತ್ತೀಚೆಗೆ ಮಹಿಳೆಯರಿಗೆ ಘೋರ ಅವಮಾನ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಇತ್ತೀಚೆಗೆ ಕೊಲ್ಕತ್ತಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸ್ವಾಮಿ ಜ್ಞಾನವತ್ಸಲ್ಯ ಹಾಗೂ ಸಮ್ಮೇಳನದ ಸಂಘಟಕರು ಮಹಿಳೆಯರಿಗೆ ಅವಮಾನ ಮಾಡಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಕೊಲ್ಕತ್ತಾದಲ್ಲಿ ಸಿಎ ವಿದ್ಯಾರ್ಥಿಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರದ ಸ್ವಾಮಿ ಜ್ಞಾನವತ್ಸಲ್ಯ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಅಲ್ಲಿ ಹಲವು ಮಹಿಳೆಯರು ಹಾಗೂ ಪುರುಷರು ನೆರೆದಿದ್ದರು. ಆದರೆ ಐಸಿಎಐ ಅಧ್ಯಕ್ಷ ರಂಜಿತ್ ಕುಮಾರ್ ಅಗರ್ವಾಲ್ ಅವರು ಭಾಷಣದ ವೇಳೆ ಸಭಾಂಗಣದ ಮೊದಲ ಐದು ಸಾಲುಗಳಲ್ಲಿ ಯಾವುದೇ ಮಹಿಳೆ ಅಥವಾ ಹುಡುಗಿಯರು ಇರಬಾರದು. ಒಂದು ವೇಳೆ ಷರತ್ತು ಪಾಲಿಸದಿದ್ದರೆ ಸ್ವಾಮೀಜಿ ವೇದಿಕೆ ಬಿಟ್ಟು ಹೋಗಲಿದ್ದಾರೆ ಎಂದು ಹೇಳಿದ್ದಾರೆ.

ಅವರು ಯಾವ ಸಮಯದಲ್ಲಾದರೂ ಬರಬಹುದು. ಹಾಗಾಗಿ ಯಾವುದೇ ಹುಡುಗಿಯರು, ಮಹಿಳಾ ಸ್ವಯಂಸೇವಕರು ಮುಂದೆ ಬರಬಾರದು. ಎಲ್ಲರೂ ಹಿಂದೆ ಹೋಗುವಂತೆ ತಿಳಿಸಲಾಗಿದೆ. ಆಗ ಎಲ್ಲಾ ಮಹಿಳೆಯರು ಹಿಂದಿನ ಸಾಲಿಗೆ ತೆರಳಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಸಖತ್ ವೈರಲ್ ಆಗಿದೆ. ಮಹಿಳೆಯರ ಬಗ್ಗೆ ತಾರತಮ್ಯ ತೋರಿದ ಸ್ವಾಮಿ ಜ್ಞಾನವತ್ಸಲ್ಯ ಮತ್ತು ಸಮ್ಮೇಳನದ ಸಂಘಟಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಕೌಂಟೆಂಟ್ ವೃತ್ತಿಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ ನಮ್ಮ ಹೆಮ್ಮೆಯ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ(ಐಸಿಎಐ)ಯ ತನ್ನ ವೇದಿಕೆಗೆ ಸಮಾನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ವ್ಯಕ್ತಿಯನ್ನು ಅತಿಥಿಯಾಗಿ ಆಹ್ವಾನಿಸುತ್ತದೆ ಎಂದರೆ ನಾಚಿಕೆಗೇಡಿನ ವಿಚಾರ ಎಂದು ಹಲವರು ಟೀಕೆ ಮಾಡಿದ್ದಾರೆ.

ಅಲ್ಲದೇ ‘2047ರ ವೇಳೆಗೆ ಭಾರತ ವಿಕಾಸ ಹೊಂದುತ್ತದೆ ಎಂಬ ಸ್ವಾಮೀಜಿಯ ಧೋರಣೆ ನೇರವೇರುವುದಿಲ್ಲ’ ಎಂದು ಒಬ್ಬರು ಬರೆದಿದ್ದಾರೆ. ಹಾಗೇ ಮತ್ತೊಬ್ಬರು ‘ಸಿಎಂ ಮಮತಾ ಬ್ಯಾನರ್ಜಿ ಅವರು ಈ ಸಮ್ಮೇಳನದಲ್ಲಿ ಉಪಸ್ಥಿತರಿದ್ದರೆ ನೀವು ಏನು ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬರು ‘ಇಂತಹ ತಪ್ಪನ್ನು ಮಾಡಿದ ಪ್ರತಿಯೊಬ್ಬರನ್ನೂ ವಜಾಗೊಳಿಸಬೇಕು’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

ಈ ಘಟನೆಗೆ ಸಂಬಂಧಿಸಿದಂತೆ ಸ್ವಾಮಿ ಜ್ಞಾನವತ್ಸಲ್ಯ ಹಾಗೂ ಐಸಿಎಐನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯರಿಗೆ ಅವಮಾನ, ಅಗೌರವ ತೋರಿದ್ದಕ್ಕೆ ಟೀಕೆ ವ್ಯಕ್ತವಾಗುತ್ತಿದೆ ಮತ್ತು ಎಲ್ಲರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡುವ ತತ್ವಗಳನ್ನು ಎತ್ತಿ ಹಿಡಿಯುವಂತೆ ಜನರು ಆಗ್ರಹಿಸಿದ್ದಾರೆ.

Continue Reading

Latest

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

Viral Video: ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ ಹೆಚ್ಚಾಗಿ ಎಲ್ಲಾ ಮಂತ್ರಿಗಳು, ಸಂಸದರು ತಮ್ಮ ಮುಂದೆ ಪೇಪರ್ ಇಟ್ಟುಕೊಂಡು ಅದನ್ನು ನೋಡಿಕೊಂಡೇ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಇಲ್ಲೊಬ್ಬರು ಸಂಸದೆ ಪೇಪರ್ ನೋಡದೇ ಎದುರಿಗಿದ್ದ ಸಭೆಯನ್ನು ನೋಡುತ್ತಾ ಪ್ರಮಾಣ ವಚನ ಸ್ವೀಕರಿಸಿದ್ದು ಎಲ್ಲೆಡೆ ವೈರಲ್ ಆಗಿದೆ. ಅಂದಹಾಗೇ, ಆ ಸಂಸದೇ ಮತ್ಯಾರು ಅಲ್ಲ 26 ವರ್ಷದ ಶಾಂಭವಿ ಚೌಧರಿ. ಇವರ ಬಗ್ಗೆ ಇನ್ನಷ್ಟು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

VISTARANEWS.COM


on

Viral Video
Koo

ನವದೆಹಲಿ : ಜನಪ್ರತಿನಿಧಿಗಳು ಸಾಮಾನ್ಯವಾಗಿ ಪೇಪರ್ ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಅತ್ಯಂತ ಕಿರಿಯ ಸಂಸದೆ ಒಬ್ಬರು ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಸುದ್ದಿ ವೈರಲ್ (Viral Video) ಆಗಿದೆ.

ಅತ್ಯಂತ ಕಿರಿಯ ಸಂಸದೆ ಎಂದು ಕರೆಸಿಕೊಂಡ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ತಮ್ಮ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. 26 ವರ್ಷ ವಯಸ್ಸಿನ ಇವರು ಸಂಸತ್ತಿನಲ್ಲಿ ಸಂಸದೆಯಾಗಿ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಎಲ್ಲರೂ ಸಂಸದೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೊದಲ್ಲಿ ಶಾಂಭವಿಯವರು ಬಿಳಿ ಬಣ್ಣದ ಸೀರೆ ಧರಿಸಿ ಪೇಪರ್ ನೋಡದೆ ಸಭೆಯನ್ನು ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಲೋಕ ಸಭಾ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಅಭ್ಯರ್ಥಿಯಾಗಿ ಬಿಹಾರದ ಸಮಸ್ತಿಪುರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸನ್ನಿ ಹಜಾರಿ ಅವರನ್ನು 1,87,251 ಮತಗಳಿಂದ ಸೋಲಿಸಿದ್ದಾರೆ. ಆ ಮೂಲಕ ಇವರು ಸಮಸ್ತಿಪುರದ ಮೊದಲ ಮಹಿಳಾ ಸಂಸದೆ ಎನಿಸಿಕೊಂಡಿದ್ದಾರೆ.
ಶಾಂಭವಿ ಚೌಧರಿ ಅವರು ಜೆಡಿಯು ನಾಯಕರಾದ ಅಶೋಕ್ ಚೌಧರಿ ಅವರ ಪುತ್ರಿ. ಅಶೋಕ್ ಚೌಧರಿ ಅವರು ನಿತೀಶ್ ಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಅತ್ಯಂತ ಪ್ರಭಾವಶಾಲಿ ಮಂತ್ರಿಗಳಲ್ಲಿ ಒಬ್ಬರಾಗಿದ್ದರು. ಇವರು ಮೊದಲಿಗೆ ಕಾಂಗ್ರೆಸ್ ನಲ್ಲಿದ್ದು ನಂತರ ಜೆಡಿಯು ಪಕ್ಷಕ್ಕೆ ಸೇರಿಕೊಂಡರು. ಅಲ್ಲದೇ ಶಾಂಭವಿ ಚೌಧರಿ ಅವರ ಅಜ್ಜ ದಿ.ಮಹಾವೀರ್ ಚೌಧರಿ ಕೂಡ ಕಾಂಗ್ರೆಸ್ ಸದಸ್ಯರಾಗಿದ್ದರು. ಅವರು ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ಸಾನಿಯಾ ಮಿರ್ಜಾ ಗೊತ್ತು, ಆಕೆಯ ತಂಗಿ ಅನಮ್ ಮಿರ್ಜಾ ಗೊತ್ತಾ?

ಹಾಗಾಗಿ ಮೂರನೇ ತಲೆಮಾರಿನ ರಾಜಕಾರಣಿಯಾದ ಶಾಂಭವಿ ಅವರಿಗೆ ರಾಜಕೀಯ ವಿಚರದಲ್ಲಿ ಆಸಕ್ತಿ ಇತ್ತು ಎನ್ನಲಾಗಿದೆ. ಶಾಂಭವಿ ಅವರು ಪ್ರತಿಷ್ಠಿತ ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ನಿಂದ ‘ಮಾಸ್ಟರ್ಸ್ ಆಫ್ ಆರ್ಟ್ಸ್’ ಪದವಿ ಪಡೆದಿದ್ದಾರೆ. ಹಾಗೇ ಶಾಂಭವಿ ಅವರು ಮಾಜಿ ಐಪಿಎಸ್ ಅಧಿಕಾರಿ ಆಚಾರ್ಯ ಕಿಶೋರ್ ಕುನಾಲ್ ಅವರ ಮಗ ಸಾಯನ್ ಕುನಾಲ್ ಅವರನ್ನು ವಿವಾಹವಾಗಿದ್ದಾರೆ.

Continue Reading

Latest

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Viral Video: ಧರ್ಮ ಧರ್ಮದ ನಡುವೆ ಸಾಮರಸ್ಯ ಬೆಳೆದರೆ ದೇಶ ಕೂಡ ಸುಭಿಕ್ಷವಾಗಿರುತ್ತದೆ. ಆದರೆ ಪದೇ ಪದೇ ಒಂದು ಧರ್ಮದವರು ಇನ್ನೊಂದು ಧರ್ಮದ ಮೇಲೆ ಕಿಡಿಕಾರುತ್ತಲೇ ಇರುತ್ತಾರೆ. ಇಂತಹದ್ದೊಂದು ಅಮಾನವೀಯ ಘಟನೆಯೊಂದು ಬಿಹಾರದ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಯುವಕರ ಗುಂಪೊಂಡು 15 ವರ್ಷದ ಹಿಂದೂ ಬಾಲಕನ್ನು ಕೋಣೆಯೊಂದರಲ್ಲಿ ಬಂಧಿಸಿ ಹಲ್ಲೆ ಮಾಡಿದ್ದು ಅಲ್ಲದೇ, ‘ಅಲ್ಲಾಹು ಅಕ್ಬರ್’ ಮತ್ತು ‘ಮಿಯಾನ್ ಸಾಹೇಬ್ ಜಿಂದಾಬಾದ್’ ಎಂದು ಇಸ್ಲಾಮಿಕ್ ಧರ್ಮದ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಹಾಗೇ ಪಾದಕ್ಕೆ ಎಂಜಲು ಉಗುಳಿ ಅದನ್ನು ನೆಕ್ಕುವಂತೆ ಬಾಲಕನಿಗೆ ಹಿಂಸೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಬಿಹಾರ : ಬಿಹಾರದ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ಹಿಂದೂ ಅಪ್ರಾಪ್ತ ಬಾಲಕನ್ನು ವಶಕ್ಕೆ ಪಡೆದ ಮುಸ್ಲಿಂ ಯುವಕರು ಅಮಾನವೀಯವಾಗಿ ಥಳಿಸಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video ) ಆಗಿದೆ.

ವಿಡಿಯೊದಲ್ಲಿ 15 ವರ್ಷದ ಬಾಲಕನ್ನು ಕೋಣೆಯೊಂದರಲ್ಲಿ ಬಂಧಿಸಿ ಗೋಣಿ ಚೀಲದ ಮೇಲೆ ಕೂರಿಸಿ ಅದರಲ್ಲಿ ಒಬ್ಬ ದುಷ್ಕರ್ಮಿ ಕೋಲು ಹಿಡಿದು ಆತನ ಮೇಲೆ ಪದೇ ಪದೇ ಹಲ್ಲೆ ಮಾಡುತ್ತಿದ್ದಾನೆ. ಮತ್ತೊಬ್ಬ ‘ಅಲ್ಲಾಹು ಅಕ್ಬರ್’ ಮತ್ತು ‘ಮಿಯಾನ್ ಸಾಹೇಬ್ ಜಿಂದಾಬಾದ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸುತ್ತಿರುವುದು ಕಂಡುಬಂದಿದೆ. ಹಾಗೇ ಅದರ ಜೊತೆಗೆ ದುಷ್ಕರ್ಮಿಗಳು ಅವರ ಪಾದಕ್ಕೆ ಎಂಜಲು ಉಗುಳಿ ಅದನ್ನು ನೆಕ್ಕುವಂತೆ ಬಾಲಕನಿಗೆ ಹಿಂಸೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೊಲೀಸರು ಈ ಘಟನೆಯ ಬಗ್ಗೆ ಮಾಹಿತಿ ಪಡೆದು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಮುನ್ನಾ ಮತ್ತು ಸಾಹಿಲ್ ಹಾಗೂ ಮತ್ತೊಬ್ಬ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ ಎನ್ನಲಾಗಿದೆ. ಆದರೆ ಉಳಿದವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ವಿಡಿಯೊವನ್ನು ಆರೋಪಿಗಳೇ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಉದ್ವಿಗ್ಧ ಪರಿಸ್ಥಿತಿಗೆ ಕಾರಣವಾಗಿದೆ ಎನ್ನಲಾಗಿದೆ. ಈ ಬಗ್ಗೆ ವೀಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು?

ಈ ಬಗ್ಗೆ ಸಂತ್ರಸ್ತ ಬಾಲಕನ ತಂದೆ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಬಾಲಕನ ಕೈಗೆ ಪೆಟ್ಟಾಗಿದೆ ಎಂಬುದಾಗಿ ತಿಳಿದುಬಂದಿದೆ. ಬಿಹಾರದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಕಾನೂನು ಸುವ್ಯವಸ್ಥೆ ಕಾಪಾಲು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲು ಸ್ಥಳೀಯ ಅಧಿಕಾರಿಗಳು, ಪೊಲೀಸರು ಹೆಣಗಾಡುತ್ತಿದ್ದಾರೆ.

Continue Reading
Advertisement
Prajwal revanna Case
ಕರ್ನಾಟಕ1 min ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್6 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

ಕ್ರೀಡೆ8 mins ago

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

ಕಿರುತೆರೆ34 mins ago

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Renuka Swamy Murder
ಕರ್ನಾಟಕ41 mins ago

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

IND vs ENG Semi Final
ಕ್ರೀಡೆ42 mins ago

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

Lok Sabha Speaker
ದೇಶ45 mins ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು45 mins ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ48 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ51 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌