Viral News: ಇಂಡಿಗೋ ವಿಮಾನದಲ್ಲಿ ಕಿತ್ತೋಗಿರೋ ಕುಶನ್‌ !; ನೆಟ್ಟಿಗರ ತೀವ್ರ ಗೇಲಿ - Vistara News

ವೈರಲ್ ನ್ಯೂಸ್

Viral News: ಇಂಡಿಗೋ ವಿಮಾನದಲ್ಲಿ ಕಿತ್ತೋಗಿರೋ ಕುಶನ್‌ !; ನೆಟ್ಟಿಗರ ತೀವ್ರ ಗೇಲಿ

Viral News: ಇತ್ತೀಚೆಗೆ ಇಂಡಿಗೋ ವಿಮಾನದಲ್ಲಿನ ಕುಶನ್‌ ಇಲ್ಲದಿರುವ ಫೋಟೊವನ್ನು ಪ್ರಯಾಣಿಕರೊಬ್ಬರು ಪೋಸ್ಟ್‌ ಮಾಡಿದ್ದರು. ಇದು ವೈರಲ್‌ ಆಗಿ ಸಾಕಷ್ಟು ಟೀಕೆಗೆ ಕಾರಣವಾಗಿತ್ತು. ಇದೀಗ ವಿಮಾನ ಯಾನ ಸಂಸ್ಥೆ ಸ್ಪಷ್ಟನೆ ನೀಡಿದೆ.

VISTARANEWS.COM


on

indigo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುವ ಇಂಡಿಗೋ ವಿಮಾನ (IndiGo Flights) ಇದೀಗ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಇತ್ತೀಚೆಗೆ ಇಂಡಿಗೊ ವಿಮಾನದಲ್ಲಿ ಬೆಂಗಳೂರಿನಿಂದ ಭೋಪಾಲ್‌ಗೆ ತೆರಳಿದ್ದ ಯವನಿಕಾ ರಾಜ್ ಶಾ ಎನ್ನುವ ಪ್ರಯಾಣಿಕರೊಬ್ಬರು ತಮ್ಮ ಸೀಟಿನಲ್ಲಿ ಕುಶನ್‌ (ಮೆತ್ತೆ) ಇಲ್ಲದಿರುವ ವಿಚಾರವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಜತೆಗೆ ಸೀಟ್‌ನ ಫೋಟೊವನ್ನೂ ಪೋಸ್ಟ್‌ ಮಾಡಿದ್ದರು. ಇದು ನೆಟ್ಟಿಗರ ಗಮನ ಸೆಳೆದು ಸಾಕಷ್ಟು ವೈರಲ್‌ ಆಗಿತ್ತು (Viral News). ಇದೀಗ ವಿಮಾನಯಾನ ಸಂಸ್ಥೆ ಇದಕ್ಕೆ ಪ್ರತಿಕ್ರಿಯಿಸಿದೆ. ಸ್ವಚ್ಛಗೊಳಿಸುವ ಉದ್ದೇಶದಿಂದ ಕುಶನ್‌ ತೆಗೆಯಲಾಗಿತ್ತು ಎಂದು ಸ್ಪಷ್ಟನೆ ನೀಡಿದೆ.

ವೈರಲ್‌ ಪೋಸ್ಟ್‌ನಲ್ಲಿ ಏನಿದೆ?

ʼʼಸುಂದರ IndiGo6E. ಈ ವಿಮಾನದ ಮೂಲಕ ಸುರಕ್ಷಿತವಾಗಿ ಇಳಿಯುತ್ತೇನೆ ಎಂದು ಭಾವಿಸುತ್ತೇನೆ. ಇದು ಬೆಂಗಳೂರಿನಿಂದ ಭೋಪಾಲ್‌ಗೆ ತೆರಳುವ ನಿಮ್ಮ 6ಇ 6465 ವಿಮಾನ” ಎಂದು ಯವನಿಕಾ ಬರೆದುಕೊಂಡು ಕುಶನ್ ಇಲ್ಲಿದಿರುವ ಸೀಟುಗಳ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದರು. ಇದು ಕೆಲವೇ ಕ್ಷಣಗಳಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ನೆಟ್ಟಿಗರ ಗಮನ ಸೆಳೆದಿತ್ತು. 7 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದರು.

ಇಂಡಿಗೋ ಅಧಿಕಾರಿಗಳು ಹೇಳಿದ್ದೇನು?

ಇದೀಗ ಈ ಬಗ್ಗೆ ಇಂಡಿಗೋ ವಿಮಾನ ಯಾನ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ಸ್ವಚ್ಛಗೊಳಿಸುವ ಉದ್ದೇಶದಿಂದ ಸೀಟ್‌ಗಳ ಕುಶನ್ ಅನ್ನು ತೆಗೆಯಲಾಗಿತ್ತು ಎಂದು ವಿವರಿಸಿದೆ. ವಿಮಾನ ಹೊರಡುವ ಮೊದಲು ಸೀಟ್‌ ಅನ್ನು ಶುಚಿಗೊಳಿಸಲು ಕುಶನ್ ತೆಗೆದುಹಾಕಲಾಗಿತ್ತು. ಕೂಡಲೇ ನಮ್ಮ ಸಿಬ್ಬಂದಿ ಈ ಬಗ್ಗೆ ಗ್ರಾಹಕರ ಗಮನಕ್ಕೆ ತಂದಿದ್ದರು ಎಂದು ಸ್ಪಷ್ಟಪಡಿಸಿದೆ.

“ನಮ್ಮೊಂದಿಗೆ ಮಾತನಾಡಿದ್ದಕ್ಕೆ ಧನ್ಯವಾದಗಳು ಮೇಡಂ. ಶುಚಿಗೊಳಿಸುವ ಉದ್ದೇಶಗಳಿಗಾಗಿ ವಿಮಾನದ ಹಾರಾಟಕ್ಕೆ ಮುಂಚಿತವಾಗಿ ಸೀಟ್ ಕುಶನ್‌ಗಳನ್ನು ಬದಲಾಯಿಸಲಾಯಿತು. ನಮ್ಮ ಕ್ಯಾಬಿನ್ ಸಿಬ್ಬಂದಿ ತಕ್ಷಣ ಸಮಸ್ಯೆ ಬಗೆಹರಿಸಿದರು. ಅಗತ್ಯವಿದ್ದಾಗ ಕುಶನ್‌ ತೆಗೆದು ಸ್ವಚ್ಛಗೊಳಿಸುತ್ತೇವೆ. ನಮ್ಮ ಗ್ರಾಹಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಅತ್ಯುನ್ನತ ಮಾನದಂಡಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಬರೆದುಕೊಂಡಿದೆ.

ನೆಟ್ಟಿಗರ ಪ್ರತಿಕ್ರಿಯೆ

“ಕಳೆದ ವಾರ ಮುಂಬೈನಿಂದ ಇಂದೋರ್‌ಗೆ ತೆರಳುವ ಇಂಡಿಗೊ ವಿಮಾನದಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ. ಪ್ರಯಾಣಿಕರು ಬಂದ ನಂತರವೇ ಸಿಬ್ಬಂದಿ ಕುಶನ್ ಸರಿಪಡಿಸಿದರು. ಬಹುಶಃ ಇಂಡಿಗೋ ಸಿಬ್ಬಂದಿ ಕುಶನ್ ಕೊರತೆಯನ್ನು ಎದುರಿಸುತ್ತಿದ್ದಾರೆ ಮತ್ತು ಬೇಡಿಕೆಗೆ ಅನುಗುಣವಾಗಿ ಅದನ್ನು ಬಳಸುತ್ತಿದ್ದಾರೆ!” ಎಂದು ಒಬ್ಬರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: IndiGo Flight: ವಿಮಾನದೊಳಗೆ ಬೀಡಿ ಸೇದಿದ; ಬಳಿಕ ಜೈಲು ಕಂಬಿ ಎಣಿಸಿದ!

ಇನ್ನೊಬ್ಬರು ತಮಾಷೆ ಮಾಡಿ, “ಆಕ್ಯುಪ್ರೆಷರ್ ಸೌಲಭ್ಯದೊಂದಿಗೆ ಇರುವ ಇಂತಹ ಸೀಟ್‌ ಬುಕ್‌ ಮಾಡಲು ಎಷ್ಟು ಶುಲ್ಕವನ್ನು ಪಾವತಿಸಬೇಕಾಗುತ್ತದೆ?ʼʼ ಎಂದು ಪ್ರಶ್ನಿಸಿದ್ದಾರೆ. “ನೀವು ಇನ್ನು ನಿಮ್ಮ ಸೀಟ್ ಬೆಲ್ಟ್‌ ಬಿಗಿಗೊಳಿಸಬೇಕಾಗಿಲ್ಲʼʼ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ. “ಕಳೆದ ಎರಡು ವರ್ಷಗಳಲ್ಲಿ ಇಂಡಿಗೊ ಸೇವೆ ನಿಜವಾಗಿಯೂ ಕುಸಿತ ಕಂಡಿದೆ” ಎಂದು ಮಗದೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಈ ವಿಚಾರ ಗಮನ ಸೆಳೆದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೋಲಾರ

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌ ಆಗಿದೆ. ಭೀಕರ ದೃಶ್ಯಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

Road Accident
Koo

ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಕ್ಕಿ ಪಿಕ್ಕಿ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರನ ತಲೆಯೇ ತುಂಡಾಗಿ ಬಿದ್ದಿದೆ. ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ದಾರುಣ ಅಂತ್ಯ ಕಂಡ ಸವಾರನಾಗಿದ್ದಾನೆ.

ಬೈಕ್‌ ಮೂಲಕ ಗುಣಶೇಖರ್‌ ರಾಯಲ್ಪಾಡುನಿಂದ ಆಂಧ್ರಪ್ರದೇಶದಕ್ಕೆ ತೆರಳುತ್ತಿದ್ದ. ಈ ವೇಳೆ ಬೈಕ್‌ಗೆ ಅಪರಿಚಿತ ವಾಹನ ಗುದ್ದಿದೆ. ಅಪಘಾತದ ರಭಸಕ್ಕೆ ಗುಣಶೇಖರ್‌ ತಲೆಯೇ ತುಂಡಾಗಿ ರಸ್ತೆಗೆ ಬಿದ್ದಿತ್ತು. ಭೀಕರ ದೃಶ್ಯ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು. ಕೂಡಲೇ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ತುಮಕೂರಿನಲ್ಲಿ ಕಾರು ಅಪಘಾತ; ಇಬ್ಬರು ಸಾವು

ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟರೆ, ಮತ್ತೋರ್ವ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಜೀವ ಬಿಟ್ಟಿದ್ದಾನೆ. ತುಮಕೂರು ತಾಲೂಕಿನ ಕೋರಾ ಬ್ರಿಡ್ಜ್ ಬಳಿ ಕಾರು ಅಪಘಾತವಾಗಿ ದಾವಣಗೆರೆ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ತೂರಿನಲ್ಲಿ ಟೆಂಪೋ ಟ್ರಾವೆಲರ್‌-ಗೂಡ್ಸ್‌ ವಾಹನದ ನಡುವೆ ಅಪಘಾತ

ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂ ಮಂಡಲಂ ಮೊಗಿಲಿ ಘಾಟ್ ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಗೋಲ್ಡ್ ಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದ ಉಡುಪಿಯಿಂದ ಟೆಂಪೋ ಟ್ರಾವೆಲರ್ ತಿರುಮಲಕ್ಕೆ ಹೋಗುವಾಗ ಘಟನೆ ನಡೆದಿದೆ.

ಘಾಟ್‌ನಲ್ಲಿದ್ದ ಸ್ಪೀಡ್ ಬ್ರೇಕರ್‌ಗಳಿಗೆ ಟೊಮೆಟೊ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಕಳೆದ 13ರಂದು ನಡೆದ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಇತ್ತೀಚೆಗೆ ಮೊಗಿಲಿ ಘಾಟ್ ರಸ್ತೆಯಲ್ಲಿ ಹೆದ್ದಾರಿ ಅಪಘಾತ ತಡೆಯಲು ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಲಾಗಿದೆ. ಆದರೂ ಅತಿವೇಗವಾಗಿ ಓಡಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಂಗಾರುಪಾಳ್ಯಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Siddhagiri Hospital : ರೋಗಿ ಕೊಳಲು ನುಡಿಸುವಾಗಲೇ ಮೆದುಳು ಶಸ್ತ್ರಚಿಕಿತ್ಸೆ; ಸಿದ್ದಗಿರಿ ಆಸ್ಪತ್ರೆ ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

Siddhagiri Hospital : ರೋಗಿ ಕೈಗೆ ಕೊಳಲು ಕೊಟ್ಟ ವೈದ್ಯರು ಕೊಳಲು ಊದುತ್ತಿರುವಾಗಲೇ ಮೆದುಳು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದಾರೆ. ಸಿದ್ದಗಿರಿ ಆಸ್ಪತ್ರೆ ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

By

Doctors at Siddagiri Hospital perform brain surgery on patient while playing flute
ಸಾಂದರ್ಭಿಕ ಚಿತ್ರ
Koo

ಬೆಳಗಾವಿ: ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಯಶಸ್ವಿ ಮೆದುಳು ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಬೆಳಗಾವಿಯ ಕೊಲ್ಲಾಪುರದ ಕನ್ಹೇರಿ ಮಠದ ಸಿದ್ದಗಿರಿ ಆಸ್ಪತ್ರೆ (Siddhagiri Hospital) ವೈದ್ಯರು ರೋಗಿಯು ಕೊಳಲು ಊದುವಾಗಲೇ ಮೆದುಳು ಆಪರೇಷನ್ ಮಾಡಿದ್ದಾರೆ.

ವ್ಯಕ್ತಿಯ ಬ್ರೇನ್‌ನಲ್ಲಿ ಬೆಳೆದ ಟ್ಯೂಮರ್‌ ಅನ್ನು ಸುಮಾರು 5 ಗಂಟೆಗಳ ಕಾಲ ಆಪರೇಷನ್ ಮಾಡಿ ಗಡ್ಡೆ ಹೊರ ತೆಗೆದಿದ್ದಾರೆ. ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ.ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡರಿಂದ ಯಶಸ್ವಿ ಶಸ್ತ್ರಚಿಕಿತ್ಸೆ ನಡೆದಿದೆ.

ವೈದ್ಯರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ವೈದ್ಯರ ತಂಡ ಈವರೆಗೂ ಒಟ್ಟು ಮಂದಿಗೆ 103 ಮೆದುಳು ಶಸ್ತ್ರ‌ಚಿಕಿತ್ಸೆ ಮಾಡಿದೆ. ಸಿದ್ದಗಿರಿ ಆಸ್ಪತ್ರೆ ಅವೇಕ್ ಕ್ರೇನಿಯೊಟಮಿ ಶಸ್ತ್ರಚಿಕಿತ್ಸೆಗೆ ಹೆಸರುವಾಸಿಯಾಗಿದೆ. ವೈದ್ಯರ ಸಾಧನೆಗೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಶ್ಲಾಘಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft Case : ಟೊಮ್ಯಾಟೊ ಬೆಳೆ ಲಾಸ್‌ ಆಗಿದ್ದಕ್ಕೆ ಕಂಪೆನಿ ಲ್ಯಾಪ್‌ಟ್ಯಾಪ್‌ಗಳನ್ನು ಕಳವು ಮಾಡಿದ ಟೆಕ್ಕಿ!

Theft Case : ಟೊಮ್ಯಾಟೊ ಬೆಳೆ ಲಾಸ್‌ ಆಗಿದ್ದಕ್ಕೆ ಅಡ್ಡದಾರಿ ಹಿಡಿದ ಟೆಕ್ಕಿಯೊಬ್ಬ ಖಾಸಗಿ ಕಂಪೆನಿಯ ಲ್ಯಾಪ್‌ಟ್ಯಾಪ್‌ಗಳನ್ನು ಕಳವು ಮಾಡಿ ಸಿಕ್ಕಿ ಬಿದ್ದಿದ್ದಾನೆ.

VISTARANEWS.COM


on

By

theft Case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೈಟ್ ಫೀಲ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಲ್ಯಾಪ್‌ಟ್ಯಾಪ್‌ಗಳನ್ನು ಕಳವು ಟೆಕ್ಕಿಯನ್ನು (Theft case) ಬಂಧಿಸಿದ್ದಾರೆ. ಟೊಮ್ಯಾಟೋ ಬೆಳೆ ನಷ್ಟವಾಗಿದ್ದಕ್ಕೆ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿದ್ದ ಟೆಕ್ಕಿ ಸಿಸ್ಟಮ್ ಆಡ್ಮಿನ್ ಮುರುಗೇಶನನ್ನು ಬಂಧಿಸಲಾಗಿದೆ. ಹೊಸೂರಿನಲ್ಲಿ ಸಾಲ ಮಾಡಿ ಆರು ಎಕರೆಯಲ್ಲಿ ಟೊಮ್ಯಾಟೋ ಬೆಳೆದಿದ್ದ. ಆದರೆ ಬೆಳೆ ಕೈಕೊಟ್ಟ ಹಿನ್ನೆಲೆ ಸಾಕಷ್ಟು ನಷ್ಟವಾಗಿತ್ತು. ಸಾಲ ತೀರಿಸಲು ತಾನು ಕೆಲಸ ಮಾಡುತ್ತಿದ್ದ ಐಟಿಪಿಎಲ್ ಕಂಪನಿಯಲ್ಲಿ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿದ್ದ.

ಕಳೆದ ಆರು ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದ ಆರೋಪಿ ಲ್ಯಾಪ್ ಟಾಪ್ ಸರ್ವಿಸ್, ರಿಪೇರಿ ಮಾಡುವ ನೆಪದಲ್ಲಿ ಸಾಕಷ್ಟು ಲ್ಯಾಪ್ ಟ್ಯಾಪ್ ಕದ್ದಿದ್ದ. ಈ ಬಗ್ಗೆ ಕಂಪನಿಯವರು ಪ್ರಶ್ನೆ ಮಾಡಿದಾಗ ರಜೆ ಹಾಕಿ ಎಸ್ಕೇಪ್ ಆಗಿದ್ದ. ಕದ್ದ ಲ್ಯಾಪ್ ಟ್ಯಾಪ್ ಗಳನ್ನು ಹೊಸೂರಿನಲ್ಲಿ ಮಾರಾಟ ಮಾಡಿದ್ದ. ಬಂಧಿತನಿಂದ 22 ಲಕ್ಷ ಮೌಲ್ಯದ 50 ಲ್ಯಾಪ್ ಟ್ಯಾಪ್ ಸೀಜ್ ಮಾಡಲಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

theft Case
ಬಂಧಿತ ಆರೋಪಿ

ಬೈಕ್‌ ಕಳ್ಳರನ್ನು ಹಿಡಿದ ಬ್ಯಾಡರಹಳ್ಳಿ ಪೊಲೀಸರು

ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹ್ಮದ್, ವಿಶ್ವನಾಥ್ ಬಂಧಿತರು.
ಬಂಧಿತರಿಂದ 9 ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಬ್ಯಾಡರಹಳ್ಳಿ, ಜ್ಞಾನ ಭಾರತಿ, ಚಂದ್ರಾ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದರು. ಬಂಧಿತರಿಂದ ಏಳು ಲಕ್ಷ ಮೌಲ್ಯದ ಹತ್ತು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್‌ ಕದಿಯುತ್ತಿದ್ದ ಸಹೋದರರ ಬಂಧನ

ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ, ಮೊಬೈಲ್ ಕಳುವು ಮಾಡುತ್ತಿದ್ದ ಸಹೋದರರ ಬಂಧನವಾಗಿದೆ. ಆನಂದ್, ಕಿರಣ್ ಬಂಧಿತ ಆರೋಪಿಗಳಾಗಿದ್ದಾರೆ. ರಸ್ತೆಯಲ್ಲಿ ಓಡಾಡುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಕಿಲಾಡಿಗಳು, ಬೈಕ್‌ನಲ್ಲಿ ಬಂದು ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿ ವ್ಯಕ್ತಿಯೊಬ್ಬರ ಮೊಬೈಲ್ ಎಗರಿಸಿದ್ದರು. ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದರು. ಬಂಧಿತರಿಂದ ವಿವಿಧ ಕಂಪನಿಗಳ 3 ಲಕ್ಷ ಮೌಲ್ಯದ 20 ಮೊಬೈಲ್‌ಗಳನ್ನು ಸೀಜ್ ಮಾಡಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೋಕಿಗಾಗಿ ಕಳ್ಳತನ

ಕುಮಾರಸ್ವಾಮಿ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ, ಅಭಿಷೇಕ್ ಅಲಿಯಾಸ್‌ ಮಿಲ್ಕಿ ಎಂಬಾತನನ್ನು ಬಂಧಿಸಿದ್ದಾರೆ. ಶೋಕಿಕಾಗಿ ಅಭಿಷೇಕ್‌ ಆಟೋರಿಕ್ಷಾ, ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ 6 ಲಕ್ಷ ಮೌಲ್ಯದ 3 ಆಟೋರಿಕ್ಷಾ ಮತ್ತು 2 ದ್ವಿಚಕ್ರ ವಾಹನಗಳ ವಶಕ್ಕೆ ಪಡೆಯಲಾಗಿದೆ. ಕೆ.ಎಸ್. ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft case : ನೋಡನೋಡುತ್ತಿದ್ದಂತೆ ಗೊಂಬೆಗೆ ಹಾಕಿದ್ದ ಪ್ಯಾಂಟ್‌ ಬಿಚ್ಚಿ ಕದ್ದು ಹೋದ ಕಳ್ಳ!

theft Case : ಪ್ರತ್ಯೇಕ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದೆ. ಶೋಗಾಗಿ ಗೊಂಬೆಗೆ ಹಾಕಿದ್ದ ಪ್ಯಾಂಟ್ ಕದ್ದರೆ, ಮೊಬೈಲ್‌ ಕದಿಯುತ್ತಿದ್ದ ಸಹೋದರರ ಬಂಧನವಾಗಿದೆ. ಟೊಮ್ಯಾಟೊ ಬೆಳೆ ಲಾಸ್‌ ಆಗಿದ್ದಕ್ಕೆ ಲ್ಯಾಪ್‌ಟ್ಯಾಪ್‌ ಕಳವು ಮಾಡಿದ್ದ ಟೆಕ್ಕಿಯನ್ನು ಹಾಗೂ ಬೈಕ್‌ ಕಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Theft Case
Koo

ಬೆಂಗಳೂರು: ಕಳ್ಳನೊಬ್ಬ ಬಟ್ಟೆ ಅಂಗಡಿ ಮುಂದೆ ಶೋಗಾಗಿ ನಿಲ್ಲಿಸಿದ್ದ ಗೊಂಬೆಗೆ ಹಾಕಿದ್ದ ಪ್ಯಾಂಟ್ (Theft Case) ಕದ್ದಿದ್ದಾನೆ. ಗೊಂಬೆಯ ಸುತ್ತಲೂ ಸುತ್ತಿ ನಂತರ ಗೊಂಬೆಗೆ ಹಾಕಿದ್ದ ಪ್ಯಾಂಟ್ ಕದ್ದು ಪರಾರಿ ಆಗಿದ್ದಾನೆ. ಯಲಹಂಕದ ತಿರುಮೆನಹಳ್ಳಿಯಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಪ್ಯಾಂಟ್ ಕದ್ದ ದೃಶ್ಯ ಸೆರೆಯಾಗಿದೆ.

Theft case
Theft case

ಮೊಬೈಲ್‌ ಕದಿಯುತ್ತಿದ್ದ ಸಹೋದರರ ಬಂಧನ

ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ, ಮೊಬೈಲ್ ಕಳುವು ಮಾಡುತ್ತಿದ್ದ ಸಹೋದರರ ಬಂಧನವಾಗಿದೆ. ಆನಂದ್, ಕಿರಣ್ ಬಂಧಿತ ಆರೋಪಿಗಳಾಗಿದ್ದಾರೆ. ರಸ್ತೆಯಲ್ಲಿ ಓಡಾಡುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಕಿಲಾಡಿಗಳು, ಬೈಕ್‌ನಲ್ಲಿ ಬಂದು ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿ ವ್ಯಕ್ತಿಯೊಬ್ಬರ ಮೊಬೈಲ್ ಎಗರಿಸಿದ್ದರು. ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದರು. ಬಂಧಿತರಿಂದ ವಿವಿಧ ಕಂಪನಿಗಳ 3 ಲಕ್ಷ ಮೌಲ್ಯದ 20 ಮೊಬೈಲ್‌ಗಳನ್ನು ಸೀಜ್ ಮಾಡಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್‌ ರಾಬರಿ ಮಾಡುತ್ತಿದ್ದ ಖದೀಮರ ಬಂಧನ

ಒಂದೇ ದಿನ ಮೂರು ಕಡೆ ಮೊಬೈಲ್‌ ರಾಬರಿ ಮಾಡಿದ್ದ ಖತರ್ನಾಕ್ ಖದೀಮರ ಬಂಧನವಾಗಿದೆ. ರಾಕೇಶ್, ಸಂತೋಷ, ತೇಜಸ್ ಬಂಧಿತ ಆರೋಪಿಗಳು. ಬೆಂಗಳೂರಿನ ವಿಧಾನಸೌಧ, ಮಾಗಡಿ ರಸ್ತೆ, ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಬರಿ ನಡೆಸಿದ್ದರು. ಆಟೋದಲ್ಲಿ ಬಂದು ಮಚ್ಚು ತೋರಿಸಿ ಮೊಬೈಲ್ ರಾಬರಿ ಮಾಡುತ್ತಿದ್ದರು. ರಸ್ತೆಯಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಬೆದರಿಸಿ ಮೊಬೈಲ್ ಕಸಿದು ಪರಾರಿಯಾಗಿದ್ದರು.

ವಿಧಾನಸೌಧ, ಮಾಗಡಿ ರಸ್ತೆ, ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಬರಿ ನಡೆದಿದೆ. ಆಟೋ ನಂಬರ್ ಮೂಲಕ ಆರೋಪಿಗಳನ್ನು ಟ್ರೇಸ್ ಮಾಡಿದ ಪೊಲೀಸರು, ಆರೋಪಿಗಳನ್ನು 48 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 60 ಸಾವಿರ ಮೌಲ್ಯದ ಮೊಬೈಲ್, ಕೃತ್ಯಕ್ಕೆ ಬಳಸಿದ್ದ ಒಂದು ಮಚ್ಚು, ಆಟೋ ಸೀಜ್ ಮಾಡಲಾಗಿದೆ. ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೊಮ್ಯಾಟೊ ಬೆಳೆ ಲಾಸ್‌ ಆಗಿದ್ದಕ್ಕೆ ಲ್ಯಾಪ್‌ಟ್ಯಾಪ್‌ ಕಳವು ಮಾಡಿದ ಟೆಕ್ಕಿ

ವೈಟ್ ಫೀಲ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಟೆಕ್ಕಿಯನ್ನು ಬಂಧಿಸಿದ್ದಾರೆ. ಟೊಮ್ಯಾಟೋ ಬೆಳೆ ನಷ್ಟವಾಗಿದ್ದಕ್ಕೆ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿದ್ದ ಟೆಕ್ಕಿ ಸಿಸ್ಟಮ್ ಆಡ್ಮಿನ್ ಮುರುಗೇಶನನ್ನು ಬಂಧಿಸಲಾಗಿದೆ. ಹೊಸೂರಿನಲ್ಲಿ ಸಾಲ ಮಾಡಿ ಆರು ಎಕರೆಯಲ್ಲಿ ಟೊಮ್ಯಾಟೋ ಬೆಳೆದಿದ್ದ. ಆದರೆ ಬೆಳೆ ಕೈಕೊಟ್ಟ ಹಿನ್ನೆಲೆ ಸಾಕಷ್ಟು ನಷ್ಟವಾಗಿತ್ತು. ಸಾಲ ತೀರಿಸಲು ತಾನು ಕೆಲಸ ಮಾಡುತ್ತಿದ್ದ ಐಟಿಪಿಎಲ್ ಕಂಪನಿಯಲ್ಲಿ ಲ್ಯಾಪ್ ಟ್ಯಾಪ್ ಕಳ್ಳತನ ಮಾಡಿದ್ದ.

ಕಳೆದ ಆರು ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದ ಆರೋಪಿ ಲ್ಯಾಪ್ ಟಾಪ್ ಸರ್ವಿಸ್, ರಿಪೇರಿ ಮಾಡುವ ನೆಪದಲ್ಲಿ ಸಾಕಷ್ಟು ಲ್ಯಾಪ್ ಟ್ಯಾಪ್ ಕದ್ದಿದ್ದ. ಈ ಬಗ್ಗೆ ಕಂಪನಿಯವರು ಪ್ರಶ್ನೆ ಮಾಡಿದಾಗ ರಜೆ ಹಾಕಿ ಎಸ್ಕೇಪ್ ಆಗಿದ್ದ. ಕದ್ದ ಲ್ಯಾಪ್ ಟ್ಯಾಪ್ ಗಳನ್ನು ಹೊಸೂರಿನಲ್ಲಿ ಮಾರಾಟ ಮಾಡಿದ್ದ. ಬಂಧಿತನಿಂದ 22 ಲಕ್ಷ ಮೌಲ್ಯದ 50 ಲ್ಯಾಪ್ ಟ್ಯಾಪ್ ಸೀಜ್ ಮಾಡಲಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಕಳ್ಳರನ್ನು ಹಿಡಿದ ಬ್ಯಾಡರಹಳ್ಳಿ ಪೊಲೀಸರು

ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹ್ಮದ್, ವಿಶ್ವನಾಥ್ ಬಂಧಿತರು.
ಬಂಧಿತರಿಂದ 9 ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಬ್ಯಾಡರಹಳ್ಳಿ, ಜ್ಞಾನ ಭಾರತಿ, ಚಂದ್ರಾ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದರು. ಬಂಧಿತರಿಂದ ಏಳು ಲಕ್ಷ ಮೌಲ್ಯದ ಹತ್ತು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ8 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು9 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು9 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು12 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು13 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ13 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್14 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ14 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ21 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌