Viral News: ಹಜ್‌ ಯಾತ್ರೆಗೆಂದು 8,600 ಕಿ.ಮೀ. ನಡೆದ ಕೇರಳಿಗ! ಅಲ್ಲಿಗೆ ಹೋಗಲು ತೆಗೆದುಕೊಂಡ ಟೈಮ್ ಎಷ್ಟು? - Vistara News

ವೈರಲ್ ನ್ಯೂಸ್

Viral News: ಹಜ್‌ ಯಾತ್ರೆಗೆಂದು 8,600 ಕಿ.ಮೀ. ನಡೆದ ಕೇರಳಿಗ! ಅಲ್ಲಿಗೆ ಹೋಗಲು ತೆಗೆದುಕೊಂಡ ಟೈಮ್ ಎಷ್ಟು?

ಕೇರಳದ ವ್ಯಕ್ತಿಯೊಬ್ಬ ಹಜ್ ಯಾತ್ರೆಗೆ ಕಾಲ್ನಡಿಗೆಯಲ್ಲೇ ಹೋಗಿದ್ದಾನೆ. 8,600 ಕಿ.ಮೀ. ನಡೆದ ಅವರ ಕಥೆ ಎಲ್ಲೆಡೆ ವೈರಲ್‌ (Viral News) ಆಗಿದೆ.

VISTARANEWS.COM


on

Shihab Chottur walks 8,600km
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಧರ್ಮಸ್ಥಳ ಸೇರಿ ಕರ್ನಾಟಕದ ಅನೇಕ ಪುಣ್ಯಸ್ಥಳಗಳಿಗೆ ಕಾಲ್ನಡಿಗೆಯಲ್ಲಿ ಯಾತ್ರೆ ಹೋಗುವವರನ್ನು ನೋಡಿರುತ್ತೀರಿ. ಆದರೆ ಕೇರಳದ ಈ ಒಬ್ಬ ವ್ಯಕ್ತಿ 8,600 ಕಿ.ಮೀ. ದೂರದ ಹಜ್‌ಗೆ ಪಾದಯಾತ್ರೆ ನಡೆಸಿದ್ದಾನೆ. ಬರೋಬ್ಬರಿ ಒಂದು ವರ್ಷದ ಕಾಲ ನಡೆದು ಇದೀಗ ಹಜ್‌ (Viral News) ತಲುಪಿದ್ದಾನೆ.

ಕೇರಳದ ಮಲಪ್ಪುರಂನ ವಲಂಚೇರಿಯ ನಿವಾಸಿಯಾಗಿರುವ ಯೂಟ್ಯೂಬರ್‌ ಶಿಹಾಬ್‌ ಚೋಟ್ಟೂರ್‌ ಈ ರೀತಿ ಸಾಹಸ ಮಾಡಿರುವ ವ್ಯಕ್ತಿ. ಆತ ಕಳೆದ ವರ್ಷ ಜೂನ್‌ 2ರಂದು ಮನೆಯಿಂದ ಕಾಲ್ನಡಿಗೆ ಆರಂಭಿಸಿದ್ದಾನೆ. ಭಾರತ, ಪಾಕಿಸ್ತಾನ, ಇರಾನ್‌ ಮತ್ತು ಕುವೈತ್‌ ಮಾರ್ಗವಾಗಿ ಸೌದಿ ಅರೇಬಿಯಾ ತಲುಪಿದ್ದಾನೆ. ಒಟ್ಟಾರೆಯಾಗಿ 8,640ಕಿ.ಮೀ. ದೂರ ನಡೆದಿದ್ದಾನೆ.

ಇದನ್ನೂ ಓದಿ: Viral Video: ಎಸ್​ಎಸ್​ಎಲ್​​ಸಿಯಲ್ಲಿ ಶೇ. 35 ಅಂಕ ಪಡೆದ ಮಗ; ಭರ್ಜರಿ ಖುಷಿಯಿಂದ ಸಂಭ್ರಮಿಸಿದ ಅಪ್ಪ-ಅಮ್ಮ
ಶಿಹಾಬ್‌ ಈ ವರ್ಷದ ಮೇ ತಿಂಗಳ ಎರಡನೇ ವಾರದಲ್ಲಿ ಕುವೈತ್‌ ಗಡಿ ದಾಟಿ ಸೌದಿ ಅರೇಬಿಯಾಕ್ಕೆ ತೆರಳಿದ್ದಾನೆ. ಅಲ್ಲಿ ಇಸ್ಲಾಂನ ಎರಡನೇ ಪವಿತ್ರ ನಗರ ಮತ್ತು ಪ್ರವಾದಿ ಮುಹಮ್ಮದ್‌ ಅವರ ಸಮಾಧಿ ಇರುವ ಮದೀನಾಕ್ಕೆ ತೆರಳಿದ್ದಾನೆ. ಅದಾದ ನಂತರ 21 ದಿನ ಬಿಟ್ಟು ಮೆಕ್ಕಾದತ್ತ ಹೆಜ್ಜೆ ಹಾಕಲಾರಂಭಿಸಿದ್ದಾನೆ. ಮದೀನಾದಿಂದ ಮೆಕ್ಕಾಗಿರು 440ಕಿ.ಮೀ ಅನ್ನು ಕೇವಲ 9 ದಿನಗಳಲ್ಲಿ ನಡೆದಿದ್ದಾನೆ. ಮೆಕ್ಕಾ ತಲುಪಿರುವ ಆತ ಅಲ್ಲಿಗೆ ಕೇರಳದಿಂದ ತನ್ನ ತಾಯಿ ಜೈನಾಬಾ ಬರುವುದನ್ನು ಕಾಯುತ್ತಿದ್ದಾನೆ. ತಾಯಿ ಬಂದ ಮೇಲೆ ಅವರು ಹಜ್‌ನ ಅಂತಿಮ ಯಾತ್ರೆ ನಡೆಸಲಿದ್ದಾರೆ.

ಶಿಹಾಬ್‌ ತನ್ನ ಪಾದಯಾತ್ರೆ ಕುರಿತಾಗಿ ಯೂಟ್ಯೂಬ್‌ನಲ್ಲಿ ಬ್ಲಾಗ್‌ಗಳನ್ನು ಹಾಕಿದ್ದಾನೆ. ಅದರಲ್ಲಿ ಅವನು ಹೇಳಿರುವ ಪ್ರಕಾರ ಪಾಕಿಸ್ತಾನದಲ್ಲಿ ಆತನಿಗೆ ವೀಸಾ ಸಮಸ್ಯೆ ಉಂಟಾಗಿದೆ. ರಾಯಭಾರ ಕಚೇರಿಯಿಂದ ಅವರ ವೀಸಾವನ್ನು ನಿರಾಕರಿಸಲಾಗಿತ್ತು. ವೀಸಾ ಕೊಡುವುದಕ್ಕೆ ಲಾಹೋರ್‌ ಹೈಕೋರ್ಟ್‌ ಕೂಡ ಒಪ್ಪಿಗೆ ನೀಡಿರಲಿಲ್ಲ. ಆದರೆ ಸುಪ್ರೀಂ ಕೋರ್ಟ್‌ನಲ್ಲಿ ವೀಸಾಕ್ಕೆ ಅನುಮತಿ ನೀಡಲಾಗಿದ್ದು, ಅವರು ಫೆಬ್ರವರಿಯಲ್ಲಿ ಪಾಕಿಸ್ತಾನದಿಂದ ಮೆಕ್ಕಾದತ್ತ ಹೊರಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Viral Video: ಮನೆಯಲ್ಲಿ ಒಂದು ಕಾರಿದ್ದರೆ ಮಕ್ಕಳು ಎಲ್ಲಿ ಹಾಳು ಮಾಡುತ್ತಾರೆ ಎಂದು ಬಹಳ ಕಾಳಜಿಯಿಂದ ನೋಡಿಕೊಳ್ಳುತ್ತೇವೆ. ಇಲ್ಲೊಬ್ಬಳು ಮಹಿಳೆ ಮಾತ್ರ ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಹತ್ತಿ ಕುಣಿದು ಕಾರನ್ನು ಯಾವ ಅವಸ್ಥೆಗೆ ತಂದಿದ್ದಾಳೆ ನೋಡಿ.

VISTARANEWS.COM


on

Viral Video
Koo

ಬೆಂಗಳೂರು: ಇತ್ತೀಚೆಗೆ ಏನೇ ಮಾಡಿದರೂ ಸೋಷಿಯಲ್ ಮೀಡಿಯಾದಲ್ಲಿ ಹಾಕಬೇಕು ಎನ್ನುವ ಹಪಹಪಿಯವರೇ ಹೆಚ್ಚು. ಊಟ ಮಾಡಿದ್ದು, ತಿರುಗಾಡಿದ್ದು ಕೊನೆಗೆ ಹೊಡೆದಾಡಿಕೊಂಡಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಅಲ್ಲಿ ಬರುವ ಲೈಕ್ಸ್, ಕಾಮೆಂಟ್ ಗಳನ್ನೇ ಚಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ಮಾತ್ರ ತೀರಾ ಅತಿರೇಕಕ್ಕೆ ಹೋಗಿದ್ದಾಳೆ. ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಹಿಗ್ಗಾಮುಗ್ಗಾ ಕುಣಿದು ಅದರ ವಿಂಡ್ ಶೀಲ್ಡ್ ಅನ್ನೇ ಒಡೆದುಹಾಕಿದ್ದಾಳೆ. ಈ ವಿಡಿಯೊ ಈಗ ಸಖತ್ ವೈರಲ್ (Viral Video) ಆಗಿದೆ.

ಕಾರೆಂದರೆ ಜೀವಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ. ಅದರಲ್ಲೂ ದುಬಾರಿ ಬೆಲೆಯ ಕಾರನ್ನು ಮುಟ್ಟುವುದಕ್ಕೂ ಬಿಡುವುದಿಲ್ಲ ಕೆಲವರು. ಆದರೆ ಈ ಮಹಿಳೆ ಮಾತ್ರ ವೀವ್ಸ್ ಹಾಗೂ ಲೈಕ್ಸ್ ಪಡೆಯಲು ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿ ಅದರ ವಿಂಡ್ ಶೀಲ್ಡ್ ಒಡೆದು ಹಾಕಿದ್ದಾಳೆ.ಈ ವಿಡಿಯೋ ಈಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ಜನ ಹಿಗ್ಗಾಮುಗ್ಗಾ ಬೈದಿದ್ದಾರೆ.

ವಿಂಡ್ ಶಿಲ್ಡ್ ಒಡೆದರೂ ಡಾನ್ಸ್ ಬಿಡದ ಮಹಿಳೆ!

ಈ ವಿಡಿಯೊದಲ್ಲಿ ಗುಲಾಬಿ ಬಣ್ಣದ ಟ್ಯೂಬ್ ಟಾಪ್ ಮತ್ತು ಬಿಳಿ ಬಣ್ಣದ ಶಾರ್ಟ್ ಸ್ಕರ್ಟ್ ಧರಿಸಿದ ಮಹಿಳೆಯೊಬ್ಬಳು ನೀಲಿ ಬಣ್ಣದ ಲ್ಯಾಂಬೋರ್ಗಿನಿ ಕಾರ್ ನ ಮೇಲೆ ಡ್ಯಾನ್ಸ್ ಮಾಡುತ್ತಿದ್ದಳು. ಕುಣಿದ ಸ್ಪೀಡಿಗೆ ಕಾರಿನ ವಿಂಡ್ ಶಿಲ್ಡ್ ಒಡೆದು ಬಿರುಕು ಬಿಟ್ಟಿದೆ. ಕಾರಿನ ವಿಂಡ್ ಶಿಲ್ಡ್ ಒಡೆದಿದ್ದು ನೋಡಿಯೂ ಮಹಿಳೆ ಡ್ಯಾನ್ಸ್ ಮಾಡುವುದನ್ನು ಬಿಟ್ಟಿಲ್ಲ. ಈ ವಿಡಿಯೋವನ್ನು ರೆಡ್ಡಿಟ್ ಪೋಸ್ಟ್ ಮಾಡಿದ್ದು, ‘ಕೇವಲ ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜನರು ಇದನ್ನೆಲ್ಲಾ ಯಾಕೆ ಮಾಡುತ್ತಾರೆ’? ಎಂದು ಈ ವಿಡಿಯೋಗೆ ಶೀರ್ಷಿಕೆ ನೀಡಿದೆ. ಇನ್ನು ಈ  ಘಟನೆ ನಡೆದ ಸ್ಥಳ ಮತ್ತು ದಿನ ತಿಳಿದುಬಂದಿಲ್ಲ.

ಸಿಕ್ಕಾಪಟ್ಟೆ ದುಬಾರಿಯಾಗಿರುವ ಲ್ಯಾಂಬೋರ್ಗಿನಿ ಕಾರು ಇರುವವರು ಅದನ್ನು ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ. ಅಂತಹದರಲ್ಲಿ ಈ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು ವೀವ್ಸ್ ಪಡೆಯಲು ಅಂತಹ ದುಬಾರಿ ಕಾರನ್ನೇ ಹಾಳುಮಾಡಿಕೊಳ್ಳುತ್ತಿರುವುದು ಜನರಿಗೆ ಬಹಳ ಅಚ್ಚರಿಯನ್ನುಂಟು ಮಾಡಿದೆ.

MC dances on top of car and breaks the windshield 🤦‍♂️
byu/EthanthegamerGD inImTheMainCharacter

ಈ ಹಿಂದೆಯೂ ಟಿಕ್ ಟಾಕ್ ನಲ್ಲಿ ಮಹಿಳೆಯರು ಇಂತಹ ವಿಡಿಯೊಗಳನ್ನು ಮಾಡಿದ್ದರು. ಕಾರುಗಳ ಮೇಲೆ ಕೆಸರನ್ನು ಎರಚುವುದು, ಕಾರಿನ ಮೇಲೆ ಹತ್ತಿ ಅದರ ಗ್ಲಾಸ್ ಅನ್ನು ಒಡೆಯುವಂತಹ ಹಲವಾರು ವಿಡಿಯೋಗಳು ಟಿಕ್ ಟಾಕ್ ನಲ್ಲಿ ಕಂಡುಬಂದಿವೆ.

ಈ ವಿಡಿಯೊ ವೈರಲ್ ಆಗಿದ್ದು, ಇದಕ್ಕೆ ವೀಕ್ಷಕರಿಂದ ಹಲವಾರು ಪ್ರತಿಕ್ರಿಯೆ ಬಂದಿದೆ. ಕೆಲವರು ಈ ವಿಡಿಯೊ ನೋಡಿ ಕೋಪವನ್ನು ವ್ಯಕ್ತಪಡಿಸಿದ್ದರೆ, ಕೆಲವರು ದುಬಾರಿ ಕಾರನ್ನು ಹಾಳುಮಾಡುತ್ತಿರುವುದನ್ನು ಕಂಡು ನೊಂದುಕೊಂಡಿದ್ದಾರೆ. ಕೆಲವರು ಕಾರಿನ ಗ್ಲಾಸ್ ಬಿರುಕು ಬಿಟ್ಟಿರುವುದನ್ನು ನೋಡಿಯೂ ಮತ್ತೆ ಡ್ಯಾನ್ಸ್ ಮುಂದುವರಿಸಿದ ಮಹಿಳೆಯ ಮೇಲೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: Honour Killing: ರಸ್ತೆ ಬದಿಯಲ್ಲೇ ಮಹಿಳೆಯನ್ನು ದರದರನೆ ಎಳೆದು, ತಲೆಗೆ ಹೊಡೆದು ಕೊಲೆ ಮಾಡಿದ್ರು; ಇದೇನು ಮರ್ಯಾದೆ ಹತ್ಯೆಯಾ?

ಒಟ್ಟಾರೆ ಯುವಕ, ಯುವತಿಯರು ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು,  ವೀವ್ಸ್ ಮತ್ತು ಲೈಕ್ಸ್ ಅನ್ನು ಪಡೆಯಲು ಮಾಡುತ್ತಿರುವ ಹುಚ್ಚಾಟಗಳನ್ನು ನೋಡಿದರೆ ಮುಂದೆ ಅವರ ಜೀವಕ್ಕೆ ಅಪಾಯ ತಂದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅನಿಸುತ್ತದೆ.

Continue Reading

ಕ್ರೀಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Virat Kohli: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

VISTARANEWS.COM


on

virat kohli
Koo

ಜೈಪುರ: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿಗೆ(Virat Kohli) ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅದರಲ್ಲಿಯೂ ಕೊಹ್ಲಿಯನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಕೊಹ್ಲಿ ಮೇಲಿನ ಅಭಿಮಾನಕ್ಕೋಸ್ಕರ ಜೈಪುರದಲ್ಲಿ ಕೊಹ್ಲಿಯ ಮೇಣದ ಪ್ರತಿಮೆಯೊಂದನ್ನು(Virat Kohli wax statue) ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆ ಜೈಪುರದ ವ್ಯಾಕ್ಸ್‌ ಮ್ಯೂಸಿಯಂನಲ್ಲಿದೆ. ಗುರುವಾರ ಇದನ್ನು ಅನಾವರಣಗೊಳಿಸಲಾಗಿತ್ತು.

35 ಕೆ.ಜಿ. ತೂಕದ ಕೊಹ್ಲಿ ಅವರ ಪ್ರತಿಮೆಯನ್ನು ಸುಮಾರು ಎರಡು ತಿಂಗಳಲ್ಲಿ ಕೆತ್ತಲಾಗಿದೆ. ಈ ಮ್ಯೂಸಿಯಂನಲ್ಲಿ ಈಗಾಗಗಲೇ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಸಚಿನ್‌ ತೆಂಡೂಲ್ಕರ್‌ ಮತ್ತು ಎಂ.ಎಸ್‌. ಧೋನಿ ಸಹಿತ 44 ಮಂದಿಯ ಮೇಣದ ಪ್ರತಿಮೆಗಳಿವೆ. ಮಹಾತ್ಮಾ ಗಾಂಧಿ, ಜವಾಹರ್‌ಲಾರ್‌ ನೆಹರೂ, ಎಪಿಜೆ ಅಬ್ದುಲ್‌ ಕಲಾಂ, ಸುಭಾಷ್‌ಚಂದ್ರ ಬೋಸ್‌, ಭಗತ್‌ ಸಿಂಗ್‌, ಕಲ್ಪನಾ ಚಾವ್ಲಾ, ಅಮಿತಾಭ್‌ ಬಚ್ಚನ್‌ ಮತ್ತು ಮದರ್‌ ತೆರೇಸಾ ಅವರ ಪ್ರತಿಮೆಯಿದೆ. ಕೊಹ್ಲಿಯ ಪ್ರತಿಮೆಯನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಬರುತ್ತಿದ್ದಾರೆ ಎಂದು ಮ್ಯೂಸಿಯಂನ ಸಂಸ್ಥಾಪಕ ನಿರ್ದೇಶಕ ಅನೂಪ್‌ ಶ್ರೀವಾಸ್ತವ ಹೇಳಿದ್ದಾರೆ.

ಕಳೆದ ವರ್ಷ ದೆಹಲಿಯ ಮೇಡಮ್ ಟುಸ್ಸಾಡ್ಸ್‌ನಲ್ಲಿರುವ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಗೆ ಯುವತಿಯೊಬ್ಬಳು ಲಿಪ್ ಕಿಸ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜತೆಗೆ ಮೇಣದ ಪ್ರತಿಮೆಯೊಂದಿಗೆ ಯುವತಿ ಪೋಸ್ ನೀಡಿರುವ ಫೋಟೋಗಳು ಕೂಡ ವೈರಲ್ ಆಗಿತ್ತು.

ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ವಿರಾಟ್​ ಅವರು ರೋಹಿತ್​ ಜತೆ ಆರಂಭಿಕನಾಗಿ ಆಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

ಏಕದಿನ ವಿಶ್ವಕಪ್​ನಲ್ಲಿ ಹಲವು ದಾಖಲೆ


ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಬ್ಯಾಟಿಂಗ್​ ವಿರಾಟ ದರ್ಶನ ತೋರಿದ್ದ ಕೊಹ್ಲಿ ಟೂರ್ನಿಯ ಟಾಪ್‌ ಸ್ಕೋರರ್‌ ಆಗಿ ಹೊರಮೊಮ್ಮಿದ್ದರು. ಅಲ್ಲದೆ ತಮ್ಮ ಹೆಸರಿಗೆ ನಾನಾ ದಾಖಲೆಗಳನ್ನೂ ಬರೆದಿದ್ದರು. ಲೀಗ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 101 ರನ್‌ ಗಳಿಸಿ ಸಚಿನ್​ ಅವರ 49ನೇ ಶತಕವನ್ನು ಸರಿಗಟ್ಟಿದ್ದರು. ನ್ಯೂಜಿಲ್ಯಾಂಡ್‌ ವಿರುದ್ಧದ ಸೆಮಿಫೈನಲ್‌ನಲ್ಲಿ 117 ರನ್‌ ಗಳಿಸಿದ ಕೊಹ್ಲಿ, ಸಚಿನ್​ ಅವರ ದಾಖಲೆ ಮುರಿದು 50ನೇ ಸೆಂಚುರಿ ಬಾರಿಸಿ ದಾಖಲೆ ನಿರ್ಮಿಸಿದ್ದರು. ಒಟ್ಟಾರೆಯಾಗಿ ಟೂರ್ನಿಯಲ್ಲಿ ಆಡಿದ 11 ಪಂದ್ಯಗಳಲ್ಲಿ 765 ರನ್​ ಬಾರಿಸಿದ್ದರು.

Continue Reading

ಪ್ರಮುಖ ಸುದ್ದಿ

Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

Viral Video ಜೊಮ್ಯಾಟೋ ಡೆಲಿವರಿ ಬಾಯ್ ಒಬ್ಬ ಹಾರ್ಲೆ –ಡೇವಿಡ್ಸ್ ನ ಬೈಕ್ ನಲ್ಲಿ ಪಾರ್ಸೆಲ್ ಅನ್ನು ಸಾಗಿಸುತ್ತಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Video Viral
Koo

ಬೆಂಗಳೂರು: ನಮ್ಮಲ್ಲಿ ಹಲವಾರು ಫುಡ್ ಡೆಲಿವರಿ ಕಂಪೆನಿಗಳಿವೆ. ಅವುಗಳಲ್ಲಿ ಹಲವಾರು ಯುವಕರು ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಈ ಡೆಲಿವರಿ ಬಾಯ್​ ಕೆಲಸವನ್ನು (Viral Video) ತುಂಬಾ ಬಡತನದಲ್ಲಿರುವವರೇ ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಮನೆಯ ದಿನನಿತ್ಯದ ಖರ್ಚುಗಳನ್ನು ತೂಗಿಸಲು, ಓದಿನ ಫೀಸ್ ಗಾಗಿ ಇಲ್ಲಿ ಕೆಲಸಕ್ಕೆ ಸೇರುತ್ತಾರೆ. ಬಿಸಿಲು, ಮಳೆ, ಚಳಿ ಎನ್ನದೇ ಸಮಯಕ್ಕೆ ಸರಿಯಾಗಿ ಗ್ರಾಹಕರ ಮನೆಗೆ ಫುಡ್ ಅನ್ನು ತಂದು ಕೊಡುತ್ತಾರೆ.

ಫುಡ್ ಡೆಲಿವರಿ ಕಂಪೆನಿಗಳಲ್ಲಿ ಕೆಲಸ ಮಾಡುವ ಹುಡುಗರು ಬೈಕ್ ಅನ್ನು ಹೊಂದಿರಲೇಬೇಕು. ಯಾಕೆಂದರೆ ಫುಡ್ ಗಳನ್ನು ಡೆಲಿವರಿ ಮಾಡಲು ಬೈಕ್ ಮೂಲಕವೇ ಹೋಗಬೇಕಾಗುತ್ತದೆ ಹಾಗಾಗಿ ಇಲ್ಲಿ ಕೆಲಸ ಮಾಡುವಂತಹ ಹೆಚ್ಚಿನ ಯುವಕರು ಬೈಕ್ ಅನ್ನು ಸಾಲ ಮಾಡಿ ಖರೀದಿಸಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುತ್ತದೆ. ಆದರೆ ಇಲ್ಲೊಬ್ಬ ಡೆಲಿವರಿ ಬಾಯ್ ಸೂಪರ್ ಬೈಕ್​ನಲ್ಲಿ ಹೋಗಿ ಡೆಲಿವರಿ ಮಾಡುತ್ತಿದ್ದಾನೆ. ಆತನ ವೈಖರಿ ನೋಡಿ ಎಲ್ಲರೂ ಚಕಿತರಾಗಿದ್ದಾರೆ.

ಜೊಮ್ಯಾಟೋ ಡೆಲಿವರಿ ಬಾಯ್ ಒಬ್ಬ ಹಾರ್ಲೆ –ಡೇವಿಡ್ಸನ್​ ಬೈಕ್ ನಲ್ಲಿ ಪಾರ್ಸೆಲ್ ಅನ್ನು ಸಾಗಿಸುವುದು ಕಂಡು ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೊದಲ್ಲಿರುವ ಸಿಟಿ ಪೊಲೀಸ್ ಬ್ಯಾರಿಕೆಡ್ ಮತ್ತು ಪೊಲೀಸರ ಸಮವಸ್ತ್ರ ನೋಡಿ ಇದು ಬೆಂಗಳೂರಿನಲ್ಲಿ ಶೂಟ್ ಮಾಡಿದ ವಿಡಿಯೊ ಎನ್ನಲಾಗಿದೆ.

ಈ ವಿಡಿಯೊ ಡೆಲಿವರಿ ಬಾಯ್ ಕೆಲಸವನ್ನು ಕೀಳುಮಟ್ಟದಲ್ಲಿ ನೋಡತ್ತಿಲ್ಲ. ಆದರೆ ಹಾರ್ಲೆ ಡೇವಿಡ್ಸ್ ಕಂಪೆನಿ ಅಮೇರಿಕಾ ಪ್ರಸಿದ್ಧ ಬೈಕ್ ಉತ್ಪಾದನಾ ಕಂಪೆನಿಯಾಗಿದೆ. ಕೆಲ ದಿನಗಳ ಹಿಂದೆ ಈ ಕಂಪೆನಿ ಎಕ್ಸ್ 440 ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಬೈಕ್ ನ ಬೆಲೆ 2.4 ಲಕ್ಷ ರೂಪಾಯಿಯಾಗಿದೆ. ಇಂತಹ ಐಷರಾಮಿ ಬೈಕ್ ಅನ್ನು ಹೆಚ್ಚಾಗಿ ಶ್ರೀಮಂತರು ಬಳಸುತ್ತಾರೆ. ಆದರೆ ಇದನ್ನು ಜೊಮೆಟೊ ಡೆಲಿವರಿ ಬಾಯ್ ಬಳಿ ನೋಡಿ ಜನರು ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಫುಡ್ ಕಂಪೆನಿಯ ಗಿಮಿಕ್!

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದುವರೆಗೂ 2 ಮಿಲಿಯನ್ ಕ್ಕಿಂತ ಹೆಚ್ಚು ವೀವ್ಸ್​ ಅನ್ನು ಪಡೆದಿದೆ ಎನ್ನಲಾಗಿದೆ. ಅಲ್ಲದೇ ಈ ವಿಡಿಯೊಗೆ ಹೆಚ್ಚು ಕಾಮೆಂಟ್ ಬಂದಿದ್ದು, ಕೆಲವರು ವ್ಯಕ್ತಿಯನ್ನು ಹೊಗಳಿದರೆ ಇನ್ನು ಕೆಲವರು ತಮಾಷೆ ಮಾಡಿದ್ದಾರೆ. ಇದು ಫುಡ್ ಕಂಪೆನಿಯ ಪ್ರಚಾರಕ್ಕಾಗಿ ಮಾಡಿರಬಹುದು ಎಂದರೆ ಕೆಲವರು ಜೊಮ್ಯಾಟೋ ಫುಡ್ ಕಂಪೆನಿ ಮಾಲೀಕರು ಈ ಫುಡ್ ಅನ್ನು ಡೆಲಿವರಿ ಮಾಡುತ್ತಿರಬಹುದು ಎಂದಿದ್ದಾರೆ. ಇನ್ನೂಬ್ಬರು ಮನೆಯಲ್ಲಿ ಖರ್ಚಿಗೆ ಹಣ ನೀಡದ ಕಾರಣ ಈ ಕೆಲಸ ಮಾಡುತ್ತಿದ್ದಾನೆ ಎಂದಿದ್ದಾರೆ. ಒಟ್ಟಾರೆ ಡೆಲಿವರಿ ಬಾಯ್ ಬಳಿ ಈ ಬೈಕ್ ನೋಡಿ ಜನರು ಅಚ್ಚರಿಗೊಂಡಿದ್ದಲ್ಲದೇ ಡೆಲಿವರಿ ಬಾಯ್ ಐಷರಾಮಿ ಬೈಕ್ ಅನ್ನು ಹೊಂದಲು ಸಾಧ್ಯವಿಲ್ಲ ಎಂಬ ನಿಲುವನ್ನು ಬದಲಾಯಿಸಿದ್ದಾರೆ.

Continue Reading

ದೇಶ

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Mahua Moitra: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಪಡೆದ ಆರೋಪ ಹೊತ್ತಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಅದು ಸೆಕ್ಸ್‌ ಎಂಬುದಾಗಿ ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Mahua Moitra
Koo

ಕೋಲ್ಕೊತಾ: ಕೇಂದ್ರ ಸರ್ಕಾರದ (Central Government) ವಿರುದ್ಧ ಸಂಸತ್ತಿನಲ್ಲಿ ಟೀಕಾಸ್ತ್ರ ಬಳಸುತ್ತಿದ್ದ, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದಲ್ಲಿ ಸಿಲುಕಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಟಿಎಂಸಿಯಿಂದ ಕೃಷ್ಣನಗರ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಮಹುವಾ ಮೊಯಿತ್ರಾ ಅವರು ಪತ್ರಕರ್ತರೊಬ್ಬರ ಪ್ರಶ್ನೆಗೆ, “ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಸೆಕ್ಸ್”‌ ಎಂಬುದಾಗಿ ಹೇಳಿದ್ದಾರೆ ಎನ್ನಲಾದ ವಿಡಿಯೊ ಈಗ ಭಾರಿ ವೈರಲ್‌ (Viral Video) ಆಗಿದೆ. ಇದು ವಿವಾದಕ್ಕೂ ಕಾರಣವಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಮನೆಗೆ, ಪ್ರತಿ ಗ್ರಾಮಕ್ಕೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಹೀಗೆ, ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿರುವ ಮಹುವಾ ಮೊಯಿತ್ರಾ ಅವರಿಗೆ ಪತ್ರಕರ್ತರೊಬ್ಬರು “ನಿಮ್ಮ ಸಾಮರ್ಥ್ಯದ ಗಟ್ಟೇನು” ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಹುವಾ ಮೊಯಿತ್ರಾ ಅವರು, “ಸೆಕ್ಸ್‌ ನನ್ನ ಸಾಮರ್ಥ್ಯದ ಗುಟ್ಟು” ಎಂದಿದ್ದಾರೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ವರದಿಗಾರನ ಸ್ಪಷ್ಟನೆ ಏನು?

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ಒಪ್ಪಿಸಿದ್ದಾರೆ. ಅವರು ಲಂಚವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಲಾಗಿನ್‌ ವಿವರ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು. ಅಲ್ಲದೆ ಇದು ಸಂಸದರಲ್ಲಿ ಸಾಮಾನ್ಯ ಅಭ್ಯಾಸ ಎಂದು ವಾದಿಸಿದ್ದರು. ಆರು ಸದಸ್ಯರ ಸಮಿತಿಯಲ್ಲಿ ನಾಲ್ಕು ಮಂದಿ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಮತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಈಗಲೂ ಅವರ ವಿರುದ್ಧ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Mahua Moitra: ಹಣ ಅಕ್ರಮ ವರ್ಗಾವಣೆ; ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

Continue Reading
Advertisement
summer trip
ಪ್ರವಾಸ9 mins ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್12 mins ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್30 mins ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

murali sreeshankar
ಕ್ರೀಡೆ35 mins ago

Murali Sreeshankar: ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪದಕ ಭರವಸೆಯ ಕ್ರೀಡಾಪಟು

virat kohli
ಕ್ರೀಡೆ1 hour ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ1 hour ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ2 hours ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Solution For Pimple
ಆರೋಗ್ಯ2 hours ago

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

indian navy chief of naval staff dinesh tripathi
ಪ್ರಮುಖ ಸುದ್ದಿ2 hours ago

Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

IPL 2024
ಕ್ರೀಡೆ2 hours ago

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌