Viral news | ಈ ರೆಸ್ಟೋರೆಂಟಿನಲ್ಲಿ ಮೀನೂ ಹಿಡಿಯಬಹುದು! ಅದೇ ಮೀನಿನ ಊಟವನ್ನೂ ಮಾಡಿ! - Vistara News

ವೈರಲ್ ನ್ಯೂಸ್

Viral news | ಈ ರೆಸ್ಟೋರೆಂಟಿನಲ್ಲಿ ಮೀನೂ ಹಿಡಿಯಬಹುದು! ಅದೇ ಮೀನಿನ ಊಟವನ್ನೂ ಮಾಡಿ!

ಜಪಾನಿನ ಒಸಾಕಾದಲ್ಲಿನ ಝೌ ಎಂಬ ರೆಸ್ಟೋರೆಂಟು ವಿನೂತನ ಐಡಿಯಾ ಮಾಡಿದೆ. ಇಲ್ಲಿಗೆ ಬರುವ ಗ್ರಾಹಕರು, ರೆಸ್ಟೋರೆಂಟಿನ ಒಳಗಿರುವ ಕೊಳದಲ್ಲಿ ಮೀನು ಹಿಡಿಯಬಹುದು. ಅದು ನಿಮ್ಮ ಟೇಬಲ್ಲಿಗೂ ಬರುತ್ತದೆ!

VISTARANEWS.COM


on

fishing restaurant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಂದಾದರೂ ರೆಸ್ಟೋರೆಂಟಿಗೆ ಹೋಗಿ ನಿಮ್ಮ ಊಟಕ್ಕೆ ನೀವೇ ತಯಾರಿ ಮಾಡಿ ಕೊಟ್ಟಿದ್ದೀರಾ?

ಇದೆಂಥಾ ಪ್ರಶ್ನೆ! ರೆಸ್ಟೋರೆಂಟಿಗೆ ಹೋಗೋದು ಅಡುಗೆಗೆ ಸಹಾಯ ಮಾಡೋದಕ್ಕಾ? ಎಲ್ಲಾದರೂ ಉಂಟೇ? ಇದರ ಬದಲು ನಮ್ಮ ನಮ್ಮಮನೆಯಲ್ಲೇ ಅಡುಗೆ ಮಾಡಿ ಉಣ್ಣಬಹುದಲ್ವಾ? ರೆಸ್ಟೋರೆಂಟಿಗೆ ಹೋಗಿ ಉಣ್ಣುವ ಕರ್ಮ ಯಾಕೆ ಎನ್ನುತ್ತೀರಾ? ಹಾಗಾದರೆ ಇಲ್ಲಿ ಕೇಳಿ. ಇಲ್ಲೊಂದು ರೆಸ್ಟೋರೆಂಟು ನಿಮಗೆ ಒಂದು ಡಿಫರೆಂಟ್‌ ಅನುಭವ ನೀಡಲು ಮುಂದಾಗಿದೆ. ಇಲ್ಲಿ ನಿಮ್ಮ ಊಟಕ್ಕೆ ಬೇಕಾದ ಮೀನನ್ನು ನೀವೇ ಹಿಡಿದು ಕೊಡಬಹುದು. ಸ್ವಲ್ಪ ಹೊತ್ತಿನಲ್ಲಿ ನಿಮಗೆ ನೀವು ಹಿಡಿದ ಮೀನಿನ ಅಡುಗೆ ಸಿದ್ಧವಾಗಿ ನಿಮ್ಮ ಟೇಬಲ್‌ ಮುಂದೆ ರೆಡಿಯಾಗುತ್ತದೆ!

ಹೌದು. ಜಪಾನಿನ ಒಸಾಕಾದಲ್ಲಿನ ಝೌ ಎಂಬ ರೆಸ್ಟೋರೆಂಟೊಂದು ಇಂತಹ ವಿನೂತನ ಐಡಿಯಾ ಮಾಡಿದೆ. ಇಲ್ಲಿಗೆ ಬರುವ ಗ್ರಾಹಕರು, ರೆಸ್ಟೋರೆಂಟಿನ ಒಳಗಿರುವ ಕೊಳದ ಪಕ್ಕ ಕೂತು ಗಾಳ ಹಾಕಿ ಮೀನು ಹಿಡಿಯಬಹುದು. ಅಥವಾ ದೋಣಿಯಲ್ಲಿ ಕೊಳದಲ್ಲಿ ಸುತ್ತಾಡಿ, ಮೀನು ಹಿಡಿಯಬಹುದು. ಮೀನು ಹಿಡಿದಿರೆಂದಾದಲ್ಲಿ, ಈ ರೆಸ್ಟೋರೆಂಟು ಅದನ್ನು ಘೋಷಿಸಿ ಗ್ರಾಹಕರು ಮಾಡಿದ ಸಾಧನೆಯನ್ನು ಎಲ್ಲರಿಗೂ ಕೇಳುವಂತೆ ಹೇಳಿ, ಮೀನು ಹಿಡಿದ ಗ್ರಾಹಕ ಹಾಗೂ ಮೀನಿನ ಜೊತೆಗೆ ಫೋಟೋ ಕ್ಲಿಕ್ಕಿಸುತ್ತಾರೆ. ಇದಾದ ನಂತರ ಈ ಮೀನನ್ನು ರೆಸ್ಟೋರೆಂಟಿನ ಅಡುಗೆಯವರ ಬಳಿಗೆ ಕಳಿಸಲಾಗುತ್ತದೆ. ಅವರು, ಮೀನು ಹಿಡಿದವರ ಆಸೆಯಂತೆ, ಅವರ ರುಚಿಗೆ ತಕ್ಕಂತೆ ಅವರಿಗೆ ಬೇಕಾದ ಅಡುಗೆಯನ್ನು ಮಾಡುತ್ತಾರೆ. ಮಾಡಿದ ಅಡುಗೆ ಸ್ವಲ್ಪ ಹೊತ್ತಿನಲ್ಲಿ ಟೇಬಲ್ಲಿಗೆ ಬರುತ್ತದೆ!

ಇಂಥದ್ದೊಂದು ವಿಶಿಷ್ಟ ಮಾದರಿಯ ರೆಸ್ಟೋರೆಂಟಿನ ಬಗೆಗಿನ ವಿಡಿಯೋ ಒಂದು ಇನ್ಸ್‌ಟಾಗ್ರಾಂನಲ್ಲಿ ಶೇರ್‌ ಮಾಡಲಾಗಿದ್ದು, ೧೯ ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ಸಾಮಾಜಿಕ ಜಾಲತಾಣದ ಬಳಕೆದಾರರು ಈ ಹೊಸ ಬಗೆಯ ರೆಸ್ಟೋರೆಂಟಿನ ಐಡಿಯಾಕ್ಕೆ ಫಿದಾ ಆಗಿದ್ದಾರೆ.

ರೆಸ್ಟೋರೆಂಟ್‌ ತನ್ನ ವೆಬ್‌ಸೈಟಿನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ʻನಿಮಗೆ ಮೀನು ಹಿಡಿಯಲು ಆಸೆಯಿದ್ದರೆ ಇಲ್ಲಿಗೆ ಬನ್ನಿ. ಕಡಿಮೆ ದರದಲ್ಲಿ, ಮೀನು ಹಿಡಿಯಿರಿ, ಅಷ್ಟೇ ಅಲ್ಲ, ನೀವೇ ಹಿಡಿದ ತಾಜಾ ಮೀನನ್ನೇ ತಿನ್ನಿ. ಮೀನು ಹಿಡಿಯುವುದು ಹೇಗೆ ಎಂದೂ ನಿಮಗೆ ತಿಳಿದ ಅನುಭವವೂ ಇಲ್ಲಿ ದಕ್ಕುವ ಜೊತೆಗೆ ಅದೇ ಮೀನಿನಡುಗೆಯನ್ನು ತಿಂದ ಸಂತೃಪ್ತಿಯೂ ನಿಮ್ಮದುʼ ಎಂದಿದೆ.

ಇದನ್ನೂ ಓದಿ | Viral Video | ಸರಿಯಾದ ಸಮಯಕ್ಕೆ ಬಾರದೆ ವಿಮಾನ ತಪ್ಪಿಸಿಕೊಂಡ ಮಹಿಳೆ, ಏರ್​ಪೋರ್ಟ್​​ನಲ್ಲಿ ಮಾಡಿದ್ದು ಹುಚ್ಚಾಟ !

ಮಜಾ ಎಂದರೆ, ರೆಡ್‌ ಸ್ನ್ಯಾಪರ್‌ ಮೀನಿನ ನಿಜವಾದ ಬೆಲೆ ೪,೧೮೦ ಜಪಾನಿ ಯೆನ್‌ಗಳಾಗಿದ್ದು, ಇದನ್ನೂ ನೀವೇ ಹಿಡಿದಿರೆಂದಾದಲ್ಲಿ ಇದರ ಬೆಲೆ ೧,೮೧೦ ರೂಪಾಯಿಗಳಂತೆ!

ಇದನ್ನು ಕೇಳಿ ಹೌದಾ ಎಂದು ಕೊಳಕ್ಕೆ ನೆಗೆದುಬಿಡಬೇಡಿ. ಇಲ್ಲಿಗೇ ಕಥೆ ಮುಗಿದಿಲ್ಲ. ಮೀನು ಹಿಡಿಯಲು ಹಾಗೇ ಹೊರಟು ಬಿಡಲಾಗುವುದಿಲ್ಲ ಎಂಬುದು ನೆನಪಿದೆಯೇ? ಈ ರೆಸ್ಟೋರೆಂಟಿನೊಳಕ್ಕೆ ಕಾಲಿಟ್ಟು, ಅದೇನೇ ಆಗಲಿ ಈ ಬಾರಿ ರೆಡ್‌ ಸ್ನ್ಯಾಪರ್‌ ಮೀನು ಹಿಡಿದೇ ಬಿಡುತ್ತೇನೆ ಎಂದು ಶಪಥ ಹಾಕಿ ಮೀನು ಹಿಡಿಯಲು ಕೊಳಕ್ಕೆ ಧುಮುಕುವ ಮೊದಲು, ಗಾಳ ಕೊಂಡುಕೊಳ್ಳುವುದು ಬಹಳ ಮುಖ್ಯ ಎಂಬುದು ನೆನಪಿಡಿ. ಅದಕ್ಕಾಗಿ ಈ ರೆಸ್ಟೋರೆಂಟಿನಲ್ಲಿ ೧೧೦ ಜಪಾನೀ ಯೆನ್‌ ಪ್ರತ್ಯೇಕವಾಗಿ ನೀಡಬೇಕು.

ಮೀನು ಹಿಡಿಯುವುದು ಕಷ್ಟವಾಗುತ್ತದೆ ಎಂದನಿಸಿದರೆ, ರೆಸ್ಟೋರೆಂಟಿನ ಸಿಬ್ಬಂದಿಗಳ ಕೈಯಲ್ಲಿ ಹೇಗೆ ಹಿಡಿಯುವುದು ಎಂದು ಕಲಿಯಬಹುದು. ಅವರೂ ಗ್ರಾಹಕರ ಜೊತೆ ಸಹಾಯಕ್ಕೆ ಬರುತ್ತಾರಂತೆ.

ಬಹಳಷ್ಟು ಮಂದಿಗೆ ಈ ರೆಸ್ಟೋರೆಂಟಿನ ವಿನೂತನ ಐಡಿಯಾ ಬಹಳ ಇಷ್ಟವಾಗಿದೆ. ಹಲವರು ಇದನ್ನು ತಮ್ಮ ಬಕೆಟ್‌ ಲಿಸ್ಟಿಗೆ ಸೇರಿಸುತ್ತೇವೆಂದು ಬರೆದುಕೊಂಡಿದ್ದಾರೆ. ಇದೊಂದು ಬಹಳ ಇಂಟರೆಸ್ಟಿಂಗ್‌ ಐಡಿಯಾ ಎಂದು ಅನೇಕರು ಹೊಗಳಿದ್ದಾರೆ. ಮತ್ತೊಬ್ಬರು ನಾವು ಈಗಾಗಲೇ ಇಲ್ಲಿ ನು ಹಿಡಿದು ಉಂಡಿದ್ದೇವೆ, ಇದೊಂದು ಬಹಳ ಸುಂದರ ಅನುಭವ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Viral Video | ಹಿಮಾಚಲ ಪ್ರದೇಶದಲ್ಲಿ ಆಂಬ್ಯುಲೆನ್ಸ್​ಗಾಗಿ ತಮ್ಮ ಬೆಂಗಾವಲು ಕಾರು ನಿಲ್ಲಿಸಿದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

DC vs GT: ಗುಜರಾತ್​ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಟ್ರಿಸ್ಟಾನ್ ಸ್ಟಬ್ಸ್ ಕೇವಲ 7 ಎಸೆತಗಳಿಂದ 26 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು.

VISTARANEWS.COM


on

DC vs GT
Koo

ನವದೆಹಲಿ: ವಿರಾಟ್​ ಕೊಹ್ಲಿ(Virat Kohli) ಅವರು ಇದೇ ವರ್ಷಾರಂಭದಲ್ಲಿ ಅಫಘಾನಿಸ್ತಾನ ವಿರುದ್ಧದ ಟಿ20 ಪಂದ್ಯದಲ್ಲಿ ಸೂಪರ್​ ಮ್ಯಾನ್​ ರೀತಿಯಲ್ಲಿ ಹಾರಿ ಸಿಕ್ಸರ್​ ತಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೇ ರೀತಿಯಲ್ಲಿ ನಿನ್ನೆ (ಬುಧವಾರ) ನಡೆದ ಗುಜರಾತ್​ ಟೈಟಾನ್ಸ್​(DC vs GT) ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿಯೂ ಡೆಲ್ಲಿ ತಂಡದ ಆಟಗಾರ ಟ್ರಿಸ್ಟಾನ್ ಸ್ಟಬ್ಸ್(Tristan Stubbs) ಕೂಡ ಸಿಕ್ಸರ್​ ತಡೆದು ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಟ್ರಿಸ್ಟಾನ್ ಸ್ಟಬ್ಸ್ ಫೀಲ್ಡಿಂಗ್​ನ ಈ ಫೋಟೊ ಎಲ್ಲಡೆ ವೈರಲ್​ ಆಗಿದ್ದು ಮಾಜಿ ಕ್ರಿಕೆಟಿಗರು ಕೊಹ್ಲಿ 2.0 ವರ್ಷನ್​ ಎಂದು ಹೇಳಿದ್ದಾರೆ.

ಗುಜರಾತ್ ಇನ್ನಿಂಗ್ಸ್‌ನ 19 ನೇ ಓವರ್‌ನಲ್ಲಿ ಈ ಘಟನೆ ಸಂಭವಿಸಿತು. ರೋಮಾಂಚನಕಾರಿ ಕ್ಲೈಮ್ಯಾಕ್ಸ್​ನಲ್ಲಿ ರಶೀದ್ ಖಾನ್ ಸ್ಟ್ರೈಕ್‌ನಲ್ಲಿದ್ದರು. ರಸಿಖ್ ಸಲಾಮ್‌ ಎಸೆದ ನಿಧಾನಗತಿಯ ಎಸೆತವನ್ನು ರಶೀದ್​ ಖಾನ್​ ಸಿಕ್ಸರ್​ಗೆ ಬಡಿದಟ್ಟಿದರು. ಈ ವೇಳೆ ಬೌಂಡರಿ ಲೈನ್​ನಲ್ಲಿ ನಿಂತಿದ್ದ ಟ್ರಿಸ್ಟಾನ್ ಸ್ಟಬ್ಸ್ ಎತ್ತರಕ್ಕೆ ಜಿಗಿದು ಸಿಕ್ಸರ್​ ತಡೆದರು. ಅವರು ಈ ಸಿಕ್ಸರ್​ ತಡೆದಯೇ ಹೋಗಿದ್ದರೆ ಡೆಲ್ಲಿ ಸೋಲು ಕಾಣುತ್ತಿತ್ತು. ಡೆಲ್ಲಿ ಗೆದ್ದದ್ದು ಕೇವಲ 4 ರನ್​ ಅಂತರದಿಂದ.

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಟ್ರಿಸ್ಟಾನ್ ಸ್ಟಬ್ಸ್ ಕೇವಲ 7 ಎಸೆತಗಳಿಂದ 26 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಚೇಸಿಂಗ್​ ವೇಳೆ ಕೆಲ ಕ್ರಮಾಂಕದಲ್ಲಿ ಶಕ್ತಿ ಮೀರಿ ಬ್ಯಾಟಿಂಗ್​ ನಡೆಸಿದ ಡೇವಿಡ್​ ಮಿಲ್ಲರ್​ ಅರ್ಧಶತಕ ಬಾರಿಸುವ ಮೂಲಕ ಒಂದು ಹಂತದಲ್ಲಿ ಗುಜರಾತ್​ ಪಾಳಯದಲ್ಲಿ ಗೆಲುವಿನ ಆಸೆ ಚಿಗುರೊಡೆಯುವಂತೆ ಮಾಡಿದರು. ಆದರೆ ಉಳಿದ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ದೊಡ್ಡ ಹೊಡೆತಗಳಿಗೆ ಕೈ ಹಾಕಿ ರಾಸಿಖ್ ಸಲಾಂ ಅವರಿಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಪತನದ ಬಳಿಕ ರಶೀದ್​ ಖಾನ್​ ಮತ್ತು ಸಾಯಿ ಕಿಶೋರ್​ ಸಿಡಿದು ನಿಂತರು. ಅಂತಿಮ ಓವರ್​ನಲ್ಲಿ ಗೆಲುವಿಗೆ 19 ರನ್​ ತೆಗೆಯುವ ಸವಾಲಿನಲ್ಲಿ ರಶೀದ್​ ಅವರು ಮುಕೇಶ್​ ಕುಮಾರ್​ಗೆ ಸತತ 2 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಬೇಕಿದ್ದಾಗ ಇದನ್ನು ಬಾರಿಸುವಲ್ಲಿ ರಶೀದ್​ ಎಡವಿದರು. ಡೆಲ್ಲಿ ರೋಚಕ 4 ರನ್​ಗಳ ಗೆಲುವು ಸಾಧಿಸಿತು.

Continue Reading

ವೈರಲ್ ನ್ಯೂಸ್

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Arunachal Pradesh landslide: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ.

VISTARANEWS.COM


on

arunachal pradesh landslide
Koo

ಗುವಾಹಟಿ: ಮಳೆಯಿಂದ (Rain) ಉಂಟಾದ ಭಾರೀ ಭೂಕುಸಿತದಿಂದ (Landslide) ಅರುಣಾಚಲ ಪ್ರದೇಶದ ಹೆದ್ದಾರಿಯ ಪ್ರಮುಖ ಭಾಗ ಕೊಚ್ಚಿ (Arunachal Pradesh landslide) ಹೋಗಿದ್ದು, ಚೀನಾ ಗಡಿಗೆ (China Border) ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕತ್ತರಿಸಿಹೋಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ. ಹೆದ್ದಾರಿಯ ಒಂದು ಭಾಗ ಕಾಣೆಯಾಗಿರುವುದನ್ನು ಇವು ತೋರಿಸಿವೆ.

ರಸ್ತೆ ತುಂಡಾಗಿದ್ದು, ವಾಹನಗಳು ಇನ್ನೊಂದು ಬದಿಗೆ ದಾಟಲು ಅಸಾಧ್ಯವಾಗಿದೆ. ಈ ಕಷ್ಟಕರವಾದ ಭೂಪ್ರದೇಶದಲ್ಲಿ ಹೆದ್ದಾರಿಯನ್ನು ಜೀವನಾಡಿ ಎಂದು ಪರಿಗಣಿಸುವ ಸ್ಥಳೀಯರು ಮತ್ತು ಭದ್ರತಾ ಪಡೆಗಳಿಗೆ ಇದರಿಂದ ಭಾರೀ ತೊಂದರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL) ಈ ಹೆದ್ದಾರಿಯ ಹಾನಿಗೊಳಗಾದ ಭಾಗವನ್ನು ಸರಿಪಡಿಸಲು ಮುಂದಾಗಿದೆ.

ಪ್ರಸ್ತುತ, ಕತ್ತರಿಸಿಹೋಗಿರುವ ಪ್ರದೇಶಕ್ಕೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳ ಕೊರತೆ ಆಗಿಲ್ಲ. “ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿಗೆ ವ್ಯಾಪಕವಾದ ಹಾನಿಯಿಂದಾಗಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ಅನನುಕೂಲತೆಯನ್ನು ನಿವಾರಿಸಲು ಯತ್ನಿಸಲಾಗುತ್ತಿದೆ. ಈ ರಸ್ತೆಯು ದಿಬಾಂಗ್ ಕಣಿವೆಯನ್ನು ದೇಶದ ಇತರ ಭಾಗಗಳಿಗೆ ಸಂಪರ್ಕಿಸುತ್ತದೆ. ಹೀಗಾಗಿ ಶೀಘ್ರವಾಗಿ ಸಂಪರ್ಕವನ್ನು ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ” ಎಂದು ಅರುಣಾಚಲ ಪ್ರದೇಶದ ಸಚಿವ ಪೆಮಾ ಖಂಡು ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ದಿಬಾಂಗ್ ವ್ಯಾಲಿ ಆಡಳಿತದ ಪ್ರಕಾರ ಹೆದ್ದಾರಿ ಮರುಸ್ಥಾಪನೆಗೆ ಕನಿಷ್ಠ ಮೂರು ದಿನಗಳು ಬೇಕಾಗಬಹುದು. ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ಮತ್ತು ಜಲಮೂಲಗಳಿಂದ ಹಾಗೂ ಮೀನುಗಾರಿಕೆಯಂತಹ ಚಟುವಟಿಕೆಗಳಿಂದ ದೂರವಿರಲು ಆಡಳಿತವು ಜನರಿಗೆ ಮನವಿ ಮಾಡಿದೆ. ರಾತ್ರಿಯಲ್ಲಿ ಪ್ರಯಾಣಿಸುವುದರ ವಿರುದ್ಧ ಮತ್ತು ಮಳೆಗಾಲದಲ್ಲಿ ಮಣ್ಣನ್ನು ಕತ್ತರಿಸದಂತೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

Continue Reading

ಕ್ರೀಡೆ

IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

IPL 2024: 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಧೋನಿಯನ್ನು(MS Dhoni) ಭೇಟಿ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಜತೆಗೆ ಚೆನ್ನೈ ಮತ್ತು ಧೋನಿಯನ್ನು ನೋಡಲು ದೆಹಲಿಯ ವರೆಗೂ ನಡೆದುಕೊಂಡೇ ಹೋಗುವೆ ಎಂದು ಹೇಳಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

VISTARANEWS.COM


on

IPL 2024
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಧೋನಿಯನ್ನು(MS Dhoni) ಭೇಟಿ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಜತೆಗೆ ಚೆನ್ನೈ ಮತ್ತು ಧೋನಿಯನ್ನು ನೋಡಲು ದೆಹಲಿಯ ವರೆಗೂ ನಡೆದುಕೊಂಡೇ ಹೋಗುವೆ ಎಂದು ಹೇಳಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ರಾಮದಾಸ್ ಅವರು ಕ್ರಿಕೆಟ್​ನ ಕಟ್ಟಾ ಅಭಿಮಾನಿಯಾಗಿದ್ದು ಇಂದಿಗೂ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಸಮಯ ತೆಗೆದುಕೊಳ್ಳುತ್ತಾರೆ. ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಮಗ ತಂದೆಯ ಬಳಿ ನೀವು ಎಂಎಸ್ ಧೋನಿಯನ್ನು ಭೇಟಿಯಾಗಲು ಬಯಸುತ್ತೀರಾ ಎಂದು ಕೇಳಿದಾಗ “ಓಹ್ ಹೌದು” ಎಂದಿದ್ದಾರೆ. ಸೂಪರ್ ಕಿಂಗ್ಸ್ ಒಳಗೊಂಡ ಐಪಿಎಲ್ ಪಂದ್ಯವನ್ನು ಮತ್ತು ಧೋನಿಯನ್ನು ನೋಡಲು ರಾಜಧಾನಿಗೆ ಪ್ರಯಾಣಿಸಲು ನೀವು ಸಿದ್ಧರಿದ್ದೀರಾ ಎಂದು ಕೇಳಿದಾಗ “ನಾನು ದೆಹಲಿಯವರೆಗೂ ನಡೆದುಕೊಂಡು ಹೋಗುತ್ತೇನೆ” ಎಂದು ರಾಮದಾಸ್ ಹೇಳಿದರು. 103 ವರ್ಷದ ಈ ಅಭಿಮಾನಿಯ ವಿಡಿಯೊ ವೈರಲ್​ ಆಗಿದೆ. ಮುಂದಿನ ಪಂದ್ಯದಲ್ಲಿ ಈ ಶತಾಯುಷಿ ಅಭಿಮಾನಿಗೆ ಚೆನ್ನೈ ಪಂದ್ಯ ವೇಳೆ ಕಾಣಿಸಿಕೊಂಡು ಧೋನಿಯನ್ನು ಭೇಟಿಯಾದರೂ ಅಚ್ಚರಿಯಿಲ್ಲ.

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

Continue Reading

ದೇಶ

ಪಾಕಿಸ್ತಾನದ ಯುವತಿಯ ಪ್ರಾಣ ಉಳಿಸಿತು ಭಾರತದ ಹೃದಯ; ‘ಹಾರ್ಟ್‌’ ಟಚಿಂಗ್ ಸ್ಟೋರಿ ಇದು!

ಪಾಕಿಸ್ತಾನದ ಆಯೇಷಾ ರೆಶಾನ್‌ ಅವರು ಕಳೆದ ಒಂದು ದಶಕದಿಂದ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದರು. ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಕೆಯ ಸರ್ಜರಿ ಕೂಡ ವಿಫಲವಾಯಿತು. ಆದರೆ, ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ನುರಿತ ವೈದ್ಯರು ಆಯೇಷಾಗೆ ಹೃದಯದ ಕಸಿ ಮಾಡುವ ಮೂಲಕ, ಬೇರೊಬ್ಬರ ಹೃದಯವನ್ನು ಇವರಿಗೆ ಅಳವಡಿಸುವ ಮೂಲಕ ಆಕೆಯ ಬಾಳಿಗೆ ಬೆಳಕಾಗಿದ್ದಾರೆ.

VISTARANEWS.COM


on

Pakistan Teen
Koo

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ (India Pakistan) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಇದೆ. ಭಾರತದ ಮೇಲೆ ಪಾಕ್‌ ಕೃಪಾಪೋಷಿತ ಉಗ್ರರು ದಾಳಿ ಮಾಡಿದಾಗ, ಭಾರತ-ಪಾಕಿಸ್ತಾನ ಮಧ್ಯೆ ಕ್ರಿಕೆಟ್‌ ಪಂದ್ಯ ನಡೆದಾಗ ಭಾರತೀಯರು ಪಾಕಿಸ್ತಾನವನ್ನು ಬಗ್ಗುಬಡಿಯಲಿ ಎಂದು ಪ್ರಾರ್ಥಿಸುತ್ತೇವೆ. ಆದರೆ, ಇಷ್ಟೆಲ್ಲ ಬಿಕ್ಕಟ್ಟಿನ ಮಧ್ಯೆಯೂ ಭಾರತ ಹಾಗೂ ಪಾಕಿಸ್ತಾನ ನಾಗರಿಕರ ಮಧ್ಯೆ ಸಹೋದರತ್ವದ ಭಾವನೆ ಇದೆ. ಭಾರತದಲ್ಲಿ (India) ಜನಿಸಿ, ದೇಶ ಇಬ್ಭಾಗವಾದಾಗ ಪಾಕ್‌ಗೆ ತೆರಳಿದವರು ಈಗಲೂ ಭಾರತದ ನಂಟನ್ನು ನೆನಪಿಸಿಕೊಳ್ಳುತ್ತಾರೆ. ಈ ನಂಟಿಗೆ ನಿದರ್ಶನ ಎಂಬಂತೆ, ಭಾರತದ ʼಹೃದಯʼವೊಂದು (Indian Heart) ಪಾಕಿಸ್ತಾನದ ಯುವತಿಯ (Pakistan Teen) ಪ್ರಾಣವನ್ನು ಉಳಿಸಿದೆ.

ಹೌದು, ಹೃದಯದ ಸಮಸ್ಯೆಯಿಂದಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಆಯೇಷಾ ರೆಶಾನ್‌ (19) ಎಂಬ ಯುವತಿಗೆ ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ವೈದ್ಯರು ಉಚಿತವಾಗಿ ಹೃದಯದ ಕಸಿ ಮಾಡುವ ಮೂಲಕ ನೆರೆ ರಾಷ್ಟ್ರದ ಯುವತಿಯ ಬಾಳಿಗೆ ಬೆಳಕಾಗಿದ್ದಾರೆ. ಭಾರತೀಯರೊಬ್ಬರ ಹೃದಯವನ್ನು ಪಾಕಿಸ್ತಾನದ ಯುವತಿಗೆ ಕಸಿ ಮಾಡುವ ಮೂಲಕ, ಆಕೆ ಮತ್ತೆ ಬದುಕು ಕಟ್ಟಿಕೊಳ್ಳಲು ಅಪೂರ್ವ ಅವಕಾಶ ನೀಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಇದಕ್ಕಾಗಿ ಆಯೇಷಾ ರೆಶಾನ್‌ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆಯೇಷಾ ರೆಶಾನ್‌ಗೆ ಏನಾಗಿತ್ತು?

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಆದರೆ, ಹಾರ್ಟ್‌ ಪಂಪ್‌ ಅಳವಡಿಸಿದ ಬಳಿಕ ಶಸ್ತ್ರಚಿಕಿತ್ಸೆಯು ವಿಫಲವಾಗಿತ್ತು. ಇದರಿಂದಾಗಿ ಆಯೇಷಾ ರೆಶಾನ್‌ ಅವರ ಪ್ರಾಣಕ್ಕೆ ಕುತ್ತು ಬಂದಿತ್ತು. ಆಗ, ಆಸ್ಪತ್ರೆಯ ಸರ್ಜನ್‌ಗಳು ದಾನಿಯೊಬ್ಬರ ಹೃದಯವನ್ನು ಆಯೇಷಾ ರೆಷಾನ್‌ ಅವರಿಗೆ ಅಳವಡಿಸುವ ಮೂಲಕ ಆಕೆಯ ಪ್ರಾಣ ಉಳಿಸಿದ್ದಾರೆ.

ಹೃದಯದ ಕಸಿ ಮಾಡಲು ಸುಮಾರು 35 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಚೆನ್ನೈನ ಐಶ್ವರ್ಯನ್‌ ಟ್ರಸ್ಟ್‌ ಹಾಗೂ ಆಸ್ಪತ್ರೆ ವೈದ್ಯರೇ ಖರ್ಚು ಭರಿಸಿ, ಉಚಿತವಾಗಿ ಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದೆಹಲಿ ಮೂಲದ ದಾನಿಯಿಂದ ಹೃದಯ ಪಡೆದ ವೈದ್ಯರು, ಆಯೇಷಾಗೆ ಅಳವಡಿಸಿದ್ದಾರೆ. “ಹೃದಯ ಕಸಿ ಬಳಿಕ ನಾನೀಗ ಆರೋಗ್ಯದಿಂದ ಇದ್ದೇನೆ. ಚೆನ್ನೈ ವೈದ್ಯರಿಂದಾಗಿ ನಾನು ಉಸಿರಾಡುತ್ತಿದ್ದೇನೆ. ನನ್ನ ಜೀವ ಉಳಿಸಿದ ವೈದ್ಯರಿಗೆ ಕೃತಜ್ಞತೆಗಳು. ಪಾಕಿಸ್ತಾನಕ್ಕೆ ತೆರಳಿ ನಾನು ಪದವಿ ಪಡೆಯುತ್ತೇನೆ” ಎಂಬುದಾಗಿ ಆಯೇಷಾ ಹೇಳಿದ್ದಾರೆ.

ಇದನ್ನೂ ಓದಿ: Humanity : ಗಡಿ ಮೀರಿದ ಮಾನವೀಯತೆ; ನಿರಾಶ್ರಿತರಿಗೆ ಹಣ ಹಂಚಿದ ಆಫ್ಘನ್ ಆಟಗಾರ ಗುರ್ಬಜ್​

Continue Reading
Advertisement
World Malaria Day
ಆರೋಗ್ಯ15 mins ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ21 mins ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 202424 mins ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Anant-Radhika wedding
ವಾಣಿಜ್ಯ30 mins ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ36 mins ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ52 mins ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ1 hour ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್1 hour ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ1 hour ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ1 hour ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ2 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20243 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌