Viral News: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಕ್ರೀಡಾ ಸಚಿವೆ ಕಿಸ್‌ ಕೊಟ್ಟಿದ್ದು ಸಂಸ್ಕೃತಿಯ ಭಾಗ; ಸಮರ್ಥಿಸಿಕೊಂಡ ನೆಟ್ಟಿಗರು - Vistara News

ವೈರಲ್ ನ್ಯೂಸ್

Viral News: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಕ್ರೀಡಾ ಸಚಿವೆ ಕಿಸ್‌ ಕೊಟ್ಟಿದ್ದು ಸಂಸ್ಕೃತಿಯ ಭಾಗ; ಸಮರ್ಥಿಸಿಕೊಂಡ ನೆಟ್ಟಿಗರು

Viral News: ಮ್ಯಾಕ್ರನ್ ಅವರನ್ನು ಕ್ಯಾಸ್ಟೆರಾ ತಮ್ಮ ತೋಳುಗಳಿಂದ ಬಿಗಿಯಾಗಿ ಹಿಡಿದುಕೊಂಡು ಮೈಮರೆತು ಚುಂಬಿಸುತ್ತಿರುವ ಫೋಟೊವನ್ನು ಹಲವು ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಇದು ನಾಚಿಕೆಗೇಡಿನ ಕೃತ್ಯ ಎಂದು ಹೇಳಿದ್ದರು.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಪ್ರಸಕ್ತ ನಡೆಯುತ್ತಿರುವ ಪ್ಯಾರಿಸ್‌ ಒಲಿಂಪಿಕ್ಸ್‌(paris olympics) ಈಗಾಗಲೇ ಹಲವು ವಿವಾದಗಳಿಂದ ಸುದ್ದಿಯಾಗಿದೆ. ಈ ಮಧ್ಯೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್(Emmanuel Macron) ಮತ್ತು ಕ್ರೀಡಾ ಸಚಿವೆ ಅಮೆಲಿ ಔಡಿಯಾ-ಕ್ಯಾಸ್ಟೆರಾ(Amelie Oudea-Castera) ಸಾರ್ವಜನಿಕವಾಗಿ ಪರಸ್ಪರ ಚುಂಬಿಸಿದ ಫೋಟೊಗಳು ವೈರಲ್‌(Viral News) ಆಗಿತ್ತು. ಇವರ ಈ ವರ್ತನೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಇಲ್ಲಿನ ನೆಟ್ಟಿಗರು ಈ ಘಟನೆ ಬಗ್ಗೆ ಸಮಥಿಸಿಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಎಮ್ಯಾನುಯೆಲ್ ಮತ್ತು ಅಮೆಲಿ ಔಡಿಯಾ-ಕ್ಯಾಸ್ಟೆರಾ ಪರಸ್ಪರ ಚುಂಬಿಸಿದ್ದ ಫೋಟೊ 2 ದಿನಗಳ ಹಿಂದೆ ವೈರಲ್‌ ಆಗಿತ್ತು. ಮಾಜಿ ಟೆನಿಸ್ ಆಟಗಾರ್ತಿಯಾಗಿರುವ ಕ್ಯಾಸ್ಟೆರಾ ಅವರು ಎಮ್ಯಾನುಯೆಲ್ ಅವರನ್ನು ಬಿಗಿದಪ್ಪಿಕೊಂಡು ಚುಂಚಿಸುತ್ತಿರುವುದನ್ನು ಫೋಟೊದಲ್ಲಿ ಕಂಡು ಬಂದಿತ್ತು. ಇವರಿಬ್ಬರು ಚುಂಬಿಸುತ್ತಿರುವುದನ್ನು ನೋಡಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಕ್ ನಗುತ್ತಿರುವ ಫೋಟೊ ಕೂಡ ವೈರಲ್‌ ಆಗಿತ್ತು.

ಮ್ಯಾಕ್ರನ್ ಅವರನ್ನು ಕ್ಯಾಸ್ಟೆರಾ ತಮ್ಮ ತೋಳುಗಳಿಂದ ಬಿಗಿಯಾಗಿ ಹಿಡಿದುಕೊಂಡು ಮೈಮರೆತು ಚುಂಬಿಸುತ್ತಿರುವ ಫೋಟೊವನ್ನು ಹಲವು ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಇದು ನಾಚಿಕೆಗೇಡಿನ ಕೃತ್ಯ ಎಂದು ಹೇಳಿದ್ದರು. ಆದರೆ ಇದೀಗ ಫ್ರಾನ್ಸ್‌ನ ನೆಟ್ಟಿಗರು ಇದರಲ್ಲಿ ಯಾವುದೇ ನಾಚಿಕೆಗೇಡಿನ ಸಂಗತಿಯಿಲ್ಲ. ಇದು ಫ್ರಾನ್ಸ್‌ನ ಸಂಸ್ಕೃತಿಯ ಒಂದು ಭಾಗ ಎಂದು ಸಮರ್ಥಿಸಿಕೊಂಡಿದ್ದಾರೆ.

ಕಳೆದ ಭಾರಿ ಮ್ಯಾಕ್ರಾನ್‌ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೊತೆಗೂಡಿ ಚಹಾ ಸೇವಿಸಿದ್ದರು. ಜೈಪುರದ ಹವಾ ಮಹಲ್ ಬಳಿಯ ಅಂಗಡಿಯಲ್ಲಿ ಮ್ಯಾಕ್ರಾನ್ ಮತ್ತು ಮೋದಿ ಕುಲ್ಹಾಡ್ ಚಹಾ ಸೇವಿಸಿದ್ದರು. ಮೋದಿ ಅದಕ್ಕೆ ತಮ್ಮ ಫೋನ್‌ನಲ್ಲಿ ಯುಪಿಐ ಬಳಸಿ ಚಹಾಕ್ಕೆ ಹಣ ಪಾವತಿಸಿದ್ದರು. ಮ್ಯಾಕ್ರಾನ್ ಇದನ್ನು ಆಶ್ಚರ್ಯಚಕಿತರಾಗಿ ವೀಕ್ಷಿಸಿದರು. ಅಂಗಡಿ ಮಾಲೀಕರು ತಮ್ಮ ಫೋನ್‌ನಲ್ಲಿ ಪಾವತಿಯ ದೃಢೀಕರಣ ಪಡೆದಿದ್ದನ್ನು ಸಹ ಮೋದಿ ತಮಗೆ ತೋರಿಸಿದರು ಎಂದು ಮ್ಯಾಕ್ರಾನ್‌ ಬಳಿಕ ಸ್ಮರಿಸಿದ್ದರು.

ಇದನ್ನೂ ಓದಿ Paris Olympics: ಆರ್ಚರಿ ಪ್ರೀ ಕ್ವಾರ್ಟರ್‌ನಲ್ಲಿ ನಾಳೆ ಭಾರತದ ದೀಪಿಕಾ ಕುಮಾರಿ-ಭಜನ್ ಕೌರ್ ಕಣಕ್ಕೆ

ಭಾರತದಿಂದ UPI ಅನ್ನು ಅಳವಡಿಸಿಕೊಳ್ಳಲು ಫ್ರಾನ್ಸ್ ಬಲವಾದ ಆಸಕ್ತಿಯನ್ನು ತೋರಿಸಿದೆ. ಜುಲೈನಲ್ಲಿ ಮೋದಿಯವರು ಫ್ರಾನ್ಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಐಫೆಲ್ ಟವರ್‌ನಿಂದ ಪ್ರಾರಂಭವಾಗುವ ಯುಪಿಐ ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ. ಫ್ರಾನ್ಸ್‌ನಲ್ಲಿರುವ ಭಾರತೀಯ ಪ್ರವಾಸಿಗರು ಈಗ ರೂಪಾಯಿಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದ್ದರು. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎನ್‌ಸಿಪಿಐ) ಅಂತಾರಾಷ್ಟ್ರೀಯ ಅಂಗವು ಯುಪಿಐ ಮತ್ತು ರುಪೇ ಸ್ವೀಕರಿಸಲು ಫ್ರಾನ್ಸ್‌ನ ಲೈರಾ ನೆಟ್‌ವರ್ಕ್‌ನೊಂದಿಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Haris Rauf: ʼದಿ ಹಂಡ್ರೆಡ್‌ʼ ಕ್ರಿಕೆಟ್‌ ಲೀಗ್‌ ಆಡುತ್ತಿದ್ದ ಪಾಕ್‌ ವೇಗಿ ರೌಫ್‌ಗೆ ಕೊಹ್ಲಿ ಬಾರಿಸಿದ ಸಿಕ್ಸರ್‌ ನೆನಪಿಸಿದ ಅಭಿಮಾನಿ; ವಿಡಿಯೊ ವೈರಲ್‌

Haris Rauf: ಅಂದು ನಡೆದಿದ್ದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು ರೌಫ್‌ ಅವರು ಎಸೆದಿದ್ದ 19ನೇ ಓವರ್‌ನ ಕೊನೆಯ 2 ಎಸೆತಗಳನ್ನು ಅಸಾಮಾನ್ಯ ಬ್ಯಾಟಿಂಗ್‌ ಮೂಲಕ ಸತತವಾಗಿ ಸಿಕ್ಸರ್‌ಗೆ ಬಡಿದಿಟ್ಟಿದ್ದರು. ಇದು ಪಂದ್ಯಕ್ಕೆ ಮಹತ್ವದ ತಿರುವು ನೀಡಿತ್ತು.

VISTARANEWS.COM


on

Haris Rauf
Koo

ಲಂಡನ್‌: 2022ರಲ್ಲಿ ಆಸ್ಟ್ರೇಲಿಯಾದ ಮೆಲ್ಬರ್ನ್ ಮೈದಾನದಲ್ಲಿ ನಡೆದಿದ್ದ​ ಟಿ-20 ವಿಶ್ವಕಪ್‌(t20 world cup 2022) ಪಂದ್ಯದ ವೇಳೆ ಪಾಕಿಸ್ತಾನದ ವೇಗಿ ಹ್ಯಾರಿಸ್‌ ರೌಫ್‌(Haris Rauf) ಬೌಲಿಂಗ್‌ಗೆ ವಿರಾಟ್‌ ಕೊಹ್ಲಿ(Virat Kohli) ಲೀಲಾಜಾಲವಾಗಿ ಸಿಕ್ಸರ್‌ ಬಾರಿಸಿದ್ದನ್ನು ಯಾವ ಭಾರತೀಯನೂ ಮರೆತಿರಲಿಕ್ಕಿಲ್ಲ. ಕೊಹ್ಲಿ ಈ ಓವರ್​ನಲ್ಲಿ ಬಾರಿಸಿದ ಸಿಕ್ಸರ್​ನಿಂದಾಗಿ ಅಂದು ಭಾರತ(t20 world cup 2022 ind vs pak) ಪಂದ್ಯವನ್ನು ಗೆದ್ದು ಬೀಗಿತ್ತು. ಇದೀಗ ದಿ ಹಂಟ್ರೆಡ್​ ಕ್ರಿಕೆಟ್​ ಟೂರ್ನಿಯನ್ನಾಡುತ್ತಿದ್ದ ರೌಫ್​ ಅವರನ್ನು ಭಾರತೀಯ ಅಭಿಮಾನಿಯೊಬ್ಬ ಕೆಣಕ್ಕಿದ ವಿಡಿಯೊ ವೈರಲ್(viral video)​ ಆಗಿದೆ.

ಲಂಡನ್ ಸ್ಪಿರೀಟ್‌ ವಿರುದ್ಧದ ಪಂದ್ಯದಲ್ಲಿ ಹ್ಯಾರಿಸ್‌ ರೌಫ್‌ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್‌ ಮಾಡುತ್ತಿದ್ದಋು. ಈ ವೇಳೆ ಪ್ರೇಕ್ಷಕರ ಸ್ಟ್ಯಾಂಡ್‌ನಲ್ಲಿದ್ದ ಅಭಿಮಾನಿಯೊಬ್ಬ ಹಿಂದಿಯಲ್ಲಿ ರೌಫ್‌ ಭಾಯ್…ರೌಫ್‌ ಭಾಯ್ ಎಂದು ಕರೆದು ನೆನೆಪಿದೆಯಾ ಅಂದು ಮೆಲ್ಬರ್ನ್ ಮೈದಾನದಲ್ಲಿ ನಿಮ್ಮ ಓವರ್‌ನಲ್ಲಿ ವಿರಾಟ್‌ ಕೊಹ್ಲಿ ಸಿಕ್ಸರ್‌ ಬಾರಿಸಿದ್ದು ಎಂದು ಹೇಳುವ ಮೂಲಕ ಕೀಚಾಯಿಸಿದ್ದಾರೆ. ಈ ವೇಳೆ ರೌಫ್‌ ತಲೆಯಾಡಿಸುತ್ತಾ ಹಾ ನೆನಪಿದೆ ಎನ್ನುವಂತೆ ಸನ್ನೆ ಮಾಡಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

ಅಂದು ನಡೆದಿದ್ದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು ರೌಫ್‌ ಅವರು ಎಸೆದಿದ್ದ 19ನೇ ಓವರ್‌ನ ಕೊನೆಯ 2 ಎಸೆತಗಳನ್ನು ಅಸಾಮಾನ್ಯ ಬ್ಯಾಟಿಂಗ್‌ ಮೂಲಕ ಸತತವಾಗಿ ಸಿಕ್ಸರ್‌ಗೆ ಬಡಿದಿಟ್ಟಿದ್ದರು. ಇದು ಪಂದ್ಯಕ್ಕೆ ಮಹತ್ವದ ತಿರುವು ನೀಡಿತ್ತು. ಕೊಹ್ಲಿ ಈ 2 ಸಿಕ್ಸರ್‌ ಬಾರಿಸದೇ ಹೋಗಿದ್ದರೆ ಪಾಕಿಸ್ತಾನ ಪಂದ್ಯವನ್ನು ಗೆಲ್ಲುತ್ತಿತ್ತು. ರೌಫ್‌ ಈ ಓವರ್‌ನಲ್ಲಿ 15 ರನ್‌ ಬಿಟ್ಟುಕೊಟ್ಟಿದ್ದರು. ಈ ಪಂದ್ಯದಲ್ಲಿ ಕೊಹ್ಲಿ ಅಜೇಯ 82 ರನ್‌ ಬಾರಿಸಿ ಭಾರತದ ಗೆಲುವಿನ ಹೀರೊ ಎನಿಸಿಕೊಂಡಿದ್ದರು.

ಇದನ್ನೂ ಓದಿ ಮ್ಯಾಚ್‌ ಫಿಕ್ಸಿಂಗ್‌ ಕಳಂಕಿತ ಅಂಪೈರ್‌ ಅಸದ್‌ ರೌಫ್‌ ಇನ್ನಿಲ್ಲ

ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ರೌಫ್​


ಈ ಬಾರಿಯ ಟ್ವಿ20 ವಿಶ್ವಕಪ್‌ ಟೂನಿಯ ವೇಳೆ ಹ್ಯಾರಿಸ್ ರೌಫ್ ಅಭಿಮಾನಿಯೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿ ಭಾರೀ ಟೀಕೆಗೆ ಒಳಗಾಗಿದ್ದರು. ಫ್ಲೋರಿಡಾದಲ್ಲಿ ರೌಫ್​ ಅವರು ಪತ್ನಿ ಜತೆ ತಾವು ತಂಗಿದ್ದ ಹೋಟೆಲ್​ಗೆ ಹೋಗುತ್ತಿದ್ದಾಗ ವೇಳೆ ಅಭಿಮಾನಿಯೊಬ್ಬ ನಿಮ್ಮ ಜತೆಗೊಂದು ಫೋಟೊ ಬೇಕಿತ್ತು ಎಂದು ಕೇಳಿದ್ದ. ಈ ವೇಳೆ ರೌಫ್​, ನೀನು ಭಾರತೀಯನಾಗಿರಬೇಕು ಎಂದು ಹೇಳಿದ್ದರು. ಇದಕ್ಕೆ ಸಿಟ್ಟಿನಿಂದ ಉತ್ತರಿಸಿದ ಅಭಿಮಾನಿ ನಾನು ಕೂಡ ಪಾಕಿಸ್ತಾನ ಮೂಲದವನೇ ಎಂದು ಹೇಳಿ ಬಳಿಕ ಏನೋ ಕೆಟ್ಟ ಪದಗಳಿಂದ ನಿಂದಿಸಿದ್ದರು. ಇದು ರೌಫ್​ ಅವರ ಪಿತ್ತ ನೆತ್ತಿಗೇರುವಂತೆ ಮಾಡಿತ್ತು. ಏಕಾಏಕಿ ಓಡಿ ಬಂದು ಈತನ ಮೇಲೆ ರೌಫ್ ಹಲ್ಲೆಗೆ ಯತ್ನಿಸಿದ್ದರು. ಈ ವಿಡಿಯೊ ಭಾರೀ ವೈರಲ್‌ ಆಗಿತ್ತು.

ಪತ್ನಿ ರೌಫ್​ ಅವರನ್ನು ಹಿಡಿದು ನಿಲ್ಲಿಸುವ ಪ್ರಯತ್ನ ಪಟ್ಟರೂ ಕೂಡ ರೌಫ್​ ತಪ್ಪಿಸಿಕೊಂಡು ಹಲ್ಲೆಗೆ ಮುಂದಾದರು. ತಕ್ಷಣ ರೌಫ್​ ಅವರ ಮ್ಯಾನೇಜರ್​ ಹಾಗು ಕೆಲ ಸಿಬ್ಬಂದಿಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಪತ್ನಿ ಕೂಡ ಅವರ ಕೈಗಳನ್ನು ಹಿಡಿದು ಹಲ್ಲೆ ಮಾಡದಂತೆ ಮನವಿ ಮಾಡುತ್ತಲೇ ಅವರನ್ನು ಸಮಾಧಾನ ಪಡಿಸಿದ್ದರು. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿತ್ತು.

 

Continue Reading

Latest

Viral Video: ಥೋ! ಈ ಮುದುಕರಿಗೆ ಈ ವಯಸ್ಸಲ್ಲಿ ಏನೆಲ್ಲ ಚಪಲ ನೋಡಿ! ಹಿಂದೆಂದೂ ಕಂಡಿರದಂಥ ವಿಡಿಯೊ!

Viral Video: ಇಲ್ಲೊಬ್ಬ ಬೊಕ್ಕ ತಲೆಯ ವ್ಯಕ್ತಿ ಮಹಿಳೆಯ ಕೂದಲಿನ ಜೊತೆ ವಿಚಿತ್ರವಾಗಿ ವರ್ತಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಅನೇಕರಲ್ಲಿ ಆಶ್ಚರ್ಯವನ್ನುಂಟು ಮಾಡಿದೆ. ಕ್ಯಾಮೆರಾದಲ್ಲಿ ಸೆರೆಯಾದ ಘಟನೆಯಲ್ಲಿ ಮಹಿಳೆಯ ಹಿಂದೆ ಬೊಕ್ಕ ತಲೆಯ ಮುದುಕನೊಬ್ಬ ಅವಳ ಕೂದಲನ್ನು ಸ್ಪರ್ಶಿಸಲು ಮತ್ತು ಅದರ ವಾಸನೆ ನೋಡಲು ಪ್ರಯತ್ನಿಸುತ್ತಿದ್ದಾನೆ. ಅಶ್ಲೀಲವಾಗಿರುವುದರ ಜೊತೆಗೆ, ಅವನ ವರ್ತನೆ ಕಳವಳಕಾರಿಯಾಗಿದೆ.

VISTARANEWS.COM


on

Viral Video
Koo


ಈ ಮುದುಕರಿಗೆ ವಯಸ್ಸಾಗುತ್ತಿದ್ದಂತೆ ಏನೆಲ್ಲ ಚಪಲ ಬರುತ್ತದೋ ಹೇಳಲಾಗುವುದಿಲ್ಲ. ಕೆಲವರು ಚಿಕ್ಕ ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ಎಸಗಲು ಹೇಸುವುದಿಲ್ಲ. ಕೆಲವರು ಬಸ್‌ಗಳಲ್ಲಿ, ರೈಲುಗಳಲ್ಲಿ ಮಹಿಳೆಯರ ಮೈ ಸವರುವುದರಲ್ಲೇ ವಿಕೃತ ಖುಷಿ ಅನುಭವಿಸುತ್ತಾರೆ. ಆದರೆ ಇಲ್ಲಿ ಈ ಮುದುಕ ಯುವತಿಯೊಬ್ಬಳ ಕೂದಲನ್ನು ಮುಟ್ಟಲು, ಅದನ್ನು ಮುದ್ದಿಸಲು ಪಡುವ ಪ್ರಯತ್ನ ನಗು ತರಿಸುತ್ತದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಇದು ಅನೇಕರಲ್ಲಿ ಆಶ್ಚರ್ಯವನ್ನುಂಟುಮಾಡಿದೆ.

ಉತ್ತರ ಪ್ರದೇಶದ ಬಿಸೋಲಿಯಲ್ಲಿ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೊದಲ್ಲಿ ವಯಸ್ಸಾದ ಬೊಕ್ಕ ತಲೆಯ ವ್ಯಕ್ತಿ ಮತ್ತು ಉದ್ದವಾದ ಕೂದಲನ್ನು ಹೊಂದಿರುವ ಮಹಿಳೆ ಕಾಣಿಸುತ್ತಿದ್ದಾರೆ. ಈ ವಿಡಿಯೊದಲ್ಲಿ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ವಿಚಿತ್ರವಾಗಿ ವರ್ತಿಸುತ್ತಿರುವುದು, ಅನೇಕರ ಗಮನವನ್ನು ಸೆಳೆದಿದೆ. ಕ್ಯಾಮೆರಾದಲ್ಲಿ ಸೆರೆಯಾದ ಘಟನೆಯಲ್ಲಿ ಮಹಿಳೆಯ ಹಿಂದೆ ಬೊಕ್ಕ ತಲೆಯ ಮುದುಕನೊಬ್ಬ ಅವಳ ಕೂದಲನ್ನು ಸ್ಪರ್ಶಿಸಲು ಮತ್ತು ವಾಸನೆ ನೋಡಲು ಪ್ರಯತ್ನಿಸುತ್ತಿದ್ದಾನೆ. ಅಶ್ಲೀಲವಾಗಿರುವುದರ ಜೊತೆಗೆ, ಅವನ ವರ್ತನೆ ಕಳವಳಕಾರಿಯಾಗಿದೆ. ಏಕೆಂದರೆ ಆ ಮಹಿಳೆಗೆ ತನ್ನ ಹಿಂದೆ ಏನು ನಡೆಯುತ್ತಿದೆ ಎಂಬುದರ ಬಗ್ಗೆ ತಿಳಿದಿಲ್ಲ.

ವಿಡಿಯೊ ಮುಂದುವರಿಯುತ್ತಿದ್ದಂತೆ ಆ ವ್ಯಕ್ತಿ ಮಹಿಳೆಗೆ ಹತ್ತಿರವಾಗಲು ಅನೇಕ ಬಾರಿ ಪ್ರಯತ್ನಿಸುತ್ತಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅವನ ಎಲ್ಲಾ ಅನುಚಿತ ಕೃತ್ಯಗಳು ರೆಕಾರ್ಡ್ ಆಗಿದೆ. ಈ ವಿಡಿಯೊವನ್ನು ಘರ್ ಕೆ ಕಾಲೇಶ್ ಎಂಬ ಖಾತೆಯಿಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೊವನ್ನು ಕಂಡು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಇದನ್ನು ನೋಡಿದ ನಂತರ ಅನೇಕ ವೀಕ್ಷಕರು ಕೋಪಗೊಂಡಿದ್ದಾರೆ.

ಇದನ್ನೂ ಓದಿ: ಕಾಂಡೋಮ್, ಲೂಬ್ರಿಕೆಂಟ್‍ ಬಳಸಿದರೂ ಕ್ಯಾನ್ಸರ್‌! ಅಧ್ಯಯನ ವರದಿಯಲ್ಲಿ ಆಘಾತಕಾರಿ ಸಂಗತಿ

ಜುಲೈ 31ರಂದು ಪೋಸ್ಟ್ ಮಾಡಲಾದ ಈ ವಿಡಿಯೊ ವೈರಲ್ ಆಗಿದ್ದು, 3.3 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಇದಕ್ಕೆ ಅನೇಕರು ಕಾಮೆಂಟ್ ಮಾಡಿದ್ದಾರೆ. ಅವರಲ್ಲಿ ಅನೇಕರು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ. “ಅವನ ತಲೆ ಬೋಳು ಆಗಿರುವುದರಿಂದ ಅವಳ ಕೂದಲಿನ ಮೇಲೆ ಆಸೆ ಪಟ್ಟಿರಬೇಕು” ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು “ವಯಸ್ಸಾದಂತೆ ಕೆಲವು ಮುದುಕರಲ್ಲಿ ವಿಕೃತ ಸ್ವಭಾವವು ಹೆಚ್ಚಾಗುತ್ತದೆ. ಅನೇಕ ವೃದ್ಧರು ಇಂಥದ್ದನ್ನು ಮಾಡುವುದನ್ನು ನೋಡಿದ್ದೇನೆ” ಎಂಬುದಾಗಿ ಬರೆದಿದ್ದಾರೆ. ಇನ್ನೂ ಕೆಲವರು ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

Continue Reading

Latest

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

Viral Video: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಹೆಚ್ಚಿನ ಪೋಷಕರು ಸುಮ್ಮನಿದ್ದು ಬಿಡುತ್ತಾರೆ. ಆದರೆ ಇಂತಹ ಸಂದರ್ಭದಲ್ಲಿಯೇ ದುರಂತಗಳು ಸಂಭವಿಸುವುದು. ಇಂತಹದೊಂದು ಘಟನೆ ಪುಣೆಯಲ್ಲಿ ನಡೆದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮೂರೂವರೆ ವರ್ಷದ ಬಾಲಕಿಯ ಮೇಲೆ ಭಾರವಾದ ಕಬ್ಬಿಣದ ಗೇಟ್ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಪಿಂಪ್ರಿ-ಚಿಂಚ್ವಾಡಿಯ ಗಣೇಶ್ ನಗರದ ಬೋಪ್ಖೇಲ್‌ನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ಪುಣೆ : ಮಕ್ಕಳನ್ನು ಮನೆಯ ಹೊರಗೆ ಆಟವಾಡಲು ಬಿಡುವಾಗ ಪೋಷಕರು ಸ್ವಲ್ಪ ಎಚ್ಚರ ವಹಿಸಬೇಕು. ಮಕ್ಕಳನ್ನು ಅವರ ಪಾಡಿಗೆ ಬಿಡಬಾರದು. ಅವರು ಮನೆಯ ಹೊರಗೆ ಆಟವಾಡುತ್ತಿದ್ದರೆ ಅವರ ಕಡೆ ಗಮನ ಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ದುರ್ಘಟನೆಗಳು ಸಂಭವಿಸಿ ಮಕ್ಕಳಿಗೆ ಅಪಾಯವಾಗಬಹುದು. ಅಂತಹದೊಂದು ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕಿಯ ಮೇಲೆ ಭಾರವಾದ ಕಬ್ಬಿಣದ ಗೇಟ್ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಪಿಂಪ್ರಿ-ಚಿಂಚ್ವಾಡಿಯ ಗಣೇಶ್ ನಗರದ ಬೋಪ್ಖೇಲ್‍ನಲ್ಲಿ ಬುಧವಾರ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ನಾಲ್ಕು ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದರು. ಕೆಲವು ಕ್ಷಣಗಳ ನಂತರ, ಹುಡುಗರಲ್ಲಿ ಒಬ್ಬ ಸೈಕಲ್ ಹೊಂದಿರುವ ಮತ್ತೊಂದು ಹುಡುಗನಿಗೆ ಮನೆಯೊಳಗೆ ಹೋಗಲು ಗೇಟ್ ಅನ್ನು ಹಿಂದಕ್ಕೆ ತಳ್ಳಿದನು. ಹುಡುಗ ಪ್ರವೇಶಿಸಿದಾಗ, ಅವನು ಅದನ್ನು ಲಾಕ್ ಮಾಡಲು ಗೇಟ್ ಅನ್ನು ಮುಂದಕ್ಕೆ ಎಳೆದಿದ್ದಾನೆ. ಇದನ್ನು ನೋಡಿದ ಇಬ್ಬರು ಹುಡುಗಿಯರು ಕಬ್ಬಿಣದ ಗೇಟ್ ಕಡೆಗೆ ಓಡಿ ಬಂದಿದ್ದಾರೆ. ಆಗ ಗೇಟ್ ಆಯತಪ್ಪಿ ಕೆಳಗೆ ಬಿದ್ದಿದೆ. ಆ ವೇಳೆ ಟೆಡ್ಡಿ ಬೇರ್ ಹಿಡಿದಿದ್ದ ಒಬ್ಬ ಹುಡುಗಿ ಸಮಯಕ್ಕೆ ಸರಿಯಾಗಿ ಅಲ್ಲಿಂದ ಜಿಗಿದರೆ, ಗೇಟ್ ಕೆಳಗೆ ಬಿದ್ದು ಇನ್ನೊಬ್ಬ ಹುಡುಗಿ ನಜ್ಜುಗುಜ್ಜಾಗಿದ್ದಾಳೆ.

ಭಯಭೀತರಾದ ಮಕ್ಕಳು ಸಹಾಯಕ್ಕಾಗಿ ಕೂಗುತ್ತಾ ಓಡಿಹೋದರು. ನಂತರ ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು ಗೇಟ್ ಅನ್ನು ಎತ್ತಿ ಮಗುವನ್ನು ಎತ್ತಿಕೊಂಡು ಓಡಿದ್ದಾರೆ. ವರದಿಗಳ ಪ್ರಕಾರ, ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಪ್ರಾರಂಭವಾಗುವ ಮೊದಲೇ ಅವಳು ಸತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

ಮೃತಪಟ್ಟ ಹುಡುಗಿಯನ್ನು ಗಿರಿಜಾ ಗಣೇಶ್ ಶಿಂಧೆ ಎಂದು ಗುರುತಿಸಲಾಗಿದೆ. ಕಟ್ಟಡದ ಮಾಲೀಕರು ಮತ್ತು ನಿವಾಸಿಗಳು ಗೇಟ್ ಸರಿಯಾಗಿರಲಿಲ್ಲ. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ತನಿಖೆಯ ವೇಳೆ ತಿಳಿಸಿದ್ದಾರೆ. ಈ ಘಟನೆಯು ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಕಟ್ಟಡ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Rahul Gandhi: ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ಈಗ ರಾಮ್‌ ಚೇಟ್‌ ಅವರ ಜೀವನವೇ ಬದಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅವರು ಸೆಲೆಬ್ರಿಟಿ ಆಗಿದ್ದಾರೆ.

VISTARANEWS.COM


on

Rahul Gandhi
Koo

ಲಖನೌ: ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಜುಲೈ 26ರಂದು ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಚಪ್ಪಲಿ ಹೊಲಿಯುವ ರಾಮ್‌ ಚೇಟ್‌ (Ram Chet) ಎಂಬುವರ ಅಂಗಡಿಗೆ ಭೇಟಿ ನೀಡಿದ್ದರು. ಸುಲ್ತಾನ್‌ಪುರದಲ್ಲಿರುವ ಚಪ್ಪಲಿ ಅಂಗಡಿಗೆ (UP Cobbler) ರಾಹುಲ್‌ ಗಾಂಧಿ ಅವರು ಭೇಟಿ ನೀಡಿದ ಬಳಿಕ ರಾಮ್‌ ಚೇಟ್‌ ಅವರ ದಿಸೆಯೇ ಬದಲಾಗಿದೆ. ಜನ ಅವರ ಅಂಗಡಿಗೆ ಬಂದು ಚಪ್ಪಲಿ ಹೊಲಿಸಿಕೊಳ್ಳುವುದು, ಅವರ ಜತೆ ಸೆಲ್ಫಿ ತೆಗೆಸಿಕೊಳ್ಳುವುದು ಮಾಡುತ್ತಿದ್ದಾರೆ. ಇನ್ನು, ರಾಹುಲ್‌ ಗಾಂಧಿ ಅವರು ಭೇಟಿ ವೇಳೆ ಹೊಲಿದ ಚಪ್ಪಲಿಗೆ ಈಗ ಭಾರಿ ಬೇಡಿಕೆ ಉಂಟಾಗಿದೆ. ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ ಉದ್ಯಮಿಯೊಬ್ಬರು 10 ಲಕ್ಷ ರೂ. ಆಫರ್‌ ನೀಡಿದ್ದಾರೆ. ಇಷ್ಟಾದರೂ ರಾಮ್‌ ಚೇಟ್‌ ಅವರು ಮಾರಾಟ ಮಾಡಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಮಾಧ್ಯಮಗಳೊಂದಿಗೆ ರಾಮ್‌ ಚೇಟ್‌ ಮಾತನಾಡಿದ್ದು, “ರಾಹುಲ್‌ ಗಾಂಧಿ ಅವರು ನನ್ನ ಅಂಗಡಿಗೆ ಬಂದು ಹೋದ ಬಳಿಕ ನನ್ನ ಬದುಕೇ ಬದಲಾಗಿದೆ. ಕಾರು, ಬೈಕುಗಳಲ್ಲಿ ಬರುವ ಜನ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ಹೊಲಿದ ಚಪ್ಪಲಿಗೆ ಭಾರಿ ಬೇಡಿಕೆ ಉಂಟಾಗಿದೆ. 5 ಲಕ್ಷ ರೂ. ಕೊಡುತ್ತೇವೆ, 10 ಲಕ್ಷ ರೂ. ಕೊಡುತ್ತೇವೆ ಆ ಚಪ್ಪಲಿ ಕೊಡು ಎನ್ನುತ್ತಿದ್ದಾರೆ. ನಾನು ಆ ಚಪ್ಪಲಿ ಹೊಲಿಯಲು ಬಿಟ್ಟು ಹೋದ ಗ್ರಾಹಕನಿಗೂ ಕೊಡುವುದಿಲ್ಲ. ಚಪ್ಪಲಿಯ ಮೊತ್ತವನ್ನು ಗ್ರಾಹಕನಿಗೆ ನೀಡುತ್ತೇನೆ. ಇದನ್ನು ಮಾರಾಟ ಮಾಡುವುದಿಲ್ಲ” ಎಂದು ಹೇಳುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೊಲಿಗೆ ಯಂತ್ರ ಕೊಡಿಸಿದ ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಮ್‌ ಚೇಟ್‌ ಅವರನ್ನು ಭೇಟಿಯಾಗಿದ್ದು ಮಾತ್ರವಲ್ಲ, ಅವರಿಗೆ ಚಪ್ಪಲಿ, ಬೂಟುಗಳನ್ನು ಹೊಲಿಯುವ ಯಂತ್ರವನ್ನು ಕೊಡಿಸಿದ್ದಾರೆ. ರಾಹುಲ್‌ ಗಾಂಧಿ ಭೇಟಿ ನೀಡಿದ ಮರುದಿನ ಅಂದರೆ ಜುಲೈ 27ರಂದು ರಾಮ್‌ ಚೇಟ್‌ ಅವರಿಗೆ ಹೊಲಿಗೆ ಯಂತ್ರ ತಲುಪಿದೆ. ಇದರಿಂದ ಅವರು ಸುಲಭವಾಗಿ ಚಪ್ಪಲಿ ಹಾಗೂ ಶೂಗಳನ್ನು ಹೊಲಿಯಲು ಸಾಧ್ಯವಾಗುತ್ತಿದೆ. ರಾಹುಲ್‌ ಗಾಂಧಿ ಭೇಟಿ ಬಳಿಕ ಅವರ ವ್ಯಾಪಾರವೂ ಚೆನ್ನಾಗಿ ನಡೆಯುತ್ತಿದೆ.

ರಾಹುಲ್‌ ಗಾಂಧಿ ಅವರು ಜುಲೈ 26ರಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಕೋರ್ಟ್‌ಗೆ ಹಾಜರಾಗಿದ್ದರು. ಇದಾದ ಬಳಿಕ ಅವರು ಲಖನೌಗೆ ತೆರಳುವ ಮಾರ್ಗದ ಮಧ್ಯೆ ಸುಲ್ತಾನ್‌ಪುರದಲ್ಲಿರುವ ರಾಮ್‌ ಚೇಟ್‌ ಅಂಗಡಿಗೆ ತೆರಳಿದ್ದರು. ರಾಮ್‌ ಚೇಟ್‌ ಅವರ ಅಂಗಡಿ ವ್ಯಾಪಾರ ಸೇರಿ ಹಲವು ವಿಷಯಗಳ ಕುರಿತು ಕಾಂಗ್ರೆಸ್‌ ನಾಯಕ ಮಾತನಾಡಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಚಪ್ಪಲಿ ಹೊಲಿದಿದ್ದರು. ಈ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದ್ದವು.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Continue Reading
Advertisement
Wayanad Landslide
ದೇಶ27 mins ago

Wayanad Landslide: 144 ಸೈನಿಕರು 31 ಗಂಟೆಯೊಳಗೆ 190 ಅಡಿ ಉದ್ದದ ಸೇತುವೆ ನಿರ್ಮಿಸಿದ್ದು ಹೇಗೆ?

Actress Kiara Aadvani
Latest28 mins ago

Actress Kiara Aadvani: ಬಿಕಿನಿ ಪ್ರಿಯರು ಕಿಯಾರಾ ಅಡ್ವಾಣಿಯ ಈ ಟಾಪ್ 5 ಬಿಕಿನಿ ಟ್ರೈ ಮಾಡಬಹುದು!

Indian 2 OTT Release
ಸಿನಿಮಾ29 mins ago

Indian 2 OTT Release: ಒಟಿಟಿಯಲ್ಲಿ ಇಂಡಿಯನ್ 2 ಬಿಡುಗಡೆ ವಿಳಂಬ ಆಗುತ್ತಿರುವುದು ಈ ಕಾರಣಕ್ಕೆ!

One day workshop on 10th August by G Academy in Bengaluru
ಬೆಂಗಳೂರು38 mins ago

Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

Ranadhurandhara book release in Bengaluru on August 4
ಕರ್ನಾಟಕ39 mins ago

Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

Manu Bhaker
ಕ್ರೀಡೆ51 mins ago

Manu Bhaker : 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ​​; ಒಂದೇ ಒಲಿಂಪಿಕ್ಸ್​ನಲ್ಲಿ ಮೂರನೇ ಬಾರಿ ಫೈನಲ್​ಗೆ

Woman Deliver Baby in Auto
ಕರ್ನಾಟಕ1 hour ago

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Mangaluru Train Timings
Latest1 hour ago

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

BSNL 5G Service
ಪ್ರಮುಖ ಸುದ್ದಿ1 hour ago

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

karnataka Rain
ಮಳೆ1 hour ago

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌