Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌! - Vistara News

ವೈರಲ್ ನ್ಯೂಸ್

Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Viral News: ಜೂನ್ 2ರಂದು ಮೊದಲ ಬಾರಿ ಮನೆಯಲ್ಲಿ ಮಲಗಿದ್ದಾಗ ವಿಕಾಸ್ ದುಬೆ ಅವರಿಗೆ ಹಾವು ಕಚ್ಚಿತ್ತು. ಹಾವು ಕಚ್ಚಿದ ತಕ್ಷಣ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ವಿಕಾಸ್ ದುಬೆ ಮನೆಗೆ ಹಿಂದಿರುಗಿದ್ದರು. ನಂತರ ಜೂನ್ 10ರಂದು ಎರಡನೇ ಬಾರಿ ಹಾವು ಕಚ್ಚಿದೆ. ಕೂಡಲೇ ಪೋಷಕರು ಅದೇ ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖರಾಗಿ ಬಂದ ಬಳಿಕ ಮನೆಗೆ ಬಂದ ವಿಕಾಸ್ ದುಬೆ ಬಹಳ ಭಯಭೀತರಾಗಿದ್ದರು.

VISTARANEWS.COM


on

Snake Bites
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರಪ್ರದೇಶ: ವ್ಯಕ್ತಿಯೊಬ್ಬನಿಗೆ ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಚ್ಚಿದ್ದು(Snake Bite), ಪವಾಡವೆನ್ನುವಂತೆ ಆತ ಅಪಾಯದಿಂದ ಪಾರಾಗಿರುವ ಘಟನೆ(Viral News) ಉತ್ತರಪ್ರದೇಶದಲ್ಲಿ ನಡೆದಿದೆ. ಫತ್ಹೇಪುರ ನಿವಾಸಿ ವಿಕಾಸ್ ದುಬೆ ಎಂಬವರಿಗೆ 45 ದಿನದಲ್ಲಿ 5 ಬಾರಿ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಶೀಘ್ರದಲ್ಲಿಯೇ ಚಿಕಿತ್ಸೆ ಪಡೆದುಕೊಂಡ ಪರಿಣಾಮ ವಿಕಾಸ್ ದುಬೆ ಜೀವ ಉಳಿದಿದೆ. ಇನ್ನು ಈ ರೀತಿಯಾಗಿ ಒಬ್ಬನ್ನೇ ವ್ಯಕ್ತಿ ಪದೇ ಪದೆ ಹಾವು ಕಡಿತಕ್ಕೆ ಒಳಗಾಗುತ್ತಿರುವ ಸಂಗತಿ ಕೇಳಿ ವೈದ್ಯರು ಮಾತ್ರವಲ್ಲದೇ ಸ್ಥಳೀಯರು ಶಾಕ್‌ ಆಗಿದ್ದಾರೆ.

ಜೂನ್ 2ರಂದು ಮೊದಲ ಬಾರಿ ಮನೆಯಲ್ಲಿ ಮಲಗಿದ್ದಾಗ ವಿಕಾಸ್ ದುಬೆ ಅವರಿಗೆ ಹಾವು ಕಚ್ಚಿತ್ತು. ಹಾವು ಕಚ್ಚಿದ ತಕ್ಷಣ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ವಿಕಾಸ್ ದುಬೆ ಮನೆಗೆ ಹಿಂದಿರುಗಿದ್ದರು. ನಂತರ ಜೂನ್ 10ರಂದು ಎರಡನೇ ಬಾರಿ ಹಾವು ಕಚ್ಚಿದೆ. ಕೂಡಲೇ ಪೋಷಕರು ಅದೇ ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖರಾಗಿ ಬಂದ ಬಳಿಕ ಮನೆಗೆ ಬಂದ ವಿಕಾಸ್ ದುಬೆ ಬಹಳ ಭಯಭೀತರಾಗಿದ್ದರು. ಅದೂ ಅಲ್ಲದೇ ಒಬ್ಬರೇ ಇರುವುದಕ್ಕೆ ಭಯ ಬಿದ್ದು ವಿಕಾಸ್ ಸ್ವಂತ ಮನೆ ತೊರೆದು ಚಿಕ್ಕಮ್ಮನ ಮನೆಯಲ್ಲಿ ಉಳಿದುಕೊಂಡಿದ್ದರು. ಆದರೆ ಅಲ್ಲಿಯೂ ವಿಷಕಾರಿ ಹಾವು ಕಚ್ಚಿದೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ವಿಕಾಸ್ ದುಬೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವು ಕಚ್ಚುವ ಭಯದಿಂದ ಸದಾ ಜನರೊಂದಿಗೆ ವಿಕಾಸ್ ಇರಿಸಲು ಆರಂಭಿಸಿದರು. ರಾತ್ರಿ ಮಲಗುವ ಸ್ಥಳದಲ್ಲಿ ಹಾವು ಬರದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು. ಇಷ್ಟೆಲ್ಲಾ ವ್ಯವಸ್ಥೆ ಮಾಡಿಕೊಂಡರೂ ಜೂನ್ 17ರಂದು ಮನೆಯಲ್ಲಿಯೇ ಮೂರನೇ ಬಾರಿ ಹಾವು ಕಚ್ಚಿದೆ. ನಂತರ ಚಿಕಿತ್ಸೆ ಪಡೆದು ಹಿಂದಿರುಗಿ ಬರುತ್ತಿದ್ದಂತೆ ನಾಲ್ಕನೇ ಬಾರಿ ಹಾವು ಕಚ್ಚಿದೆ. ಮತ್ತೆ ಚಿಕಿತ್ಸೆ ವಿಕಾಸ್ ದುಬೆ ಅವರಿಗೆ ಚಿಕಿತ್ಸೆ ಕೊಡಿಸಲಾಯ್ತು. ನಂತರ ಗ್ರಾಮದ ಹಿರಿಯರು ಸಲಹೆ ಮೇರೆಗೆ ವಿಕಾಸ್ ದುಬೆ ಅವರನ್ನು ರಾಧಾ ನಗರದಲ್ಲಿರುವ ಅವರ ಚಿಕ್ಕಮ್ಮನ ಮನೆಗೆ ಕಳುಹಿಸಲಾಗಿತ್ತು. ಆದರೆ ಅಲ್ಲಿಯೂ ವಿಕಾಸ್‌ ದುಬೆಗೆ ಐದನೇ ಬಾರಿ ಹಾವು ಕಚ್ಚಿದೆ.

ಇನ್ನು ಘಟನೆ ಬಗ್ಗೆ ವೈದ್ಯರು ಪ್ರತಿಕ್ರಿಯಿಸಿದ್ದು, ಇದೊಂದು ವಿಚಿತ್ರ ಘಟನೆಯಾಗಿದೆ. ಮೂರನೇ ಬಾರಿ ಹಾವು ಕಚ್ಚಿದಾಗ ಊರು ತೊರೆಯುವಂತೆ ಸಲಹೆ ನೀಡಿದ್ದೆ. ಆದರೂ ಮತ್ತೆ ಹಾವು ಕಚ್ಚಿದೆ. ಸದ್ಯ ವಿಕಾಸ್ ದುಬೆ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಇಂತಹದ್ದೇ ಒಂದು ಘಟನೆ ರಾಜಸ್ಥಾನದಲ್ಲಿ ನಡೆದಿತ್ತು. ಹಾವಿನ ಬಳಿ ಕಚ್ಚಿಸಿಕೊಂಡು ಹಾಗೋ-ಹೀಗೋ ಬದುಕಿ ಉಳಿದಿದ್ದವನ ಜೀವ ಹಾವಿನಿಂದಲೇ ಹೋಗಿದೆ. ಹೀಗೊಂದು ವಿಚಿತ್ರ ಘಟನೆ ರಾಜಸ್ಥಾನದ ಜೋಧ್​ಪುರದ (Rajasthan News) ಮೆಹ್ರಾನ್ ಗಢ್​​ನಲ್ಲಿ ನಡೆದಿತ್ತು. 44 ವರ್ಷದ ಜಸಬ್​ ಖಾನ್​ ಎಂಬುವರಿಗೆ ಒಂದು ಹಾವು ಕಚ್ಚಿತ್ತು. ಕಚ್ಚಿದ್ದು ವಿಷಕಾರಿ ವೈಪರ್ ಹಾವು. ಹೀಗಾಗಿ ಜಸಬ್​ ಖಾನ್​ ಕೂಡಲೇ ಪೋಖ್ರಾನ್​ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.

ಆದರೆ ಅದಾಗಿ ಒಂದೇ ವಾರದಲ್ಲಿ ಜಸಬ್ ಖಾನ್ ಪ್ರಾಣ ಹಾವಿನಿಂದಲೇ ಹೋಗಿದೆ. ಜೂ.26ರಂದು ಮತ್ತೆ ಅವರಿಗೆ ಮನೆ ಬಳಿಯೇ ಹಾವು ಕಡಿದಿದೆ. ಜೂ.20ರಂದು ಕಚ್ಚಿದ ಹಾವೇ ಕಚ್ಚಿತಾ? ಅಥವಾ ಬೇರೆ ಹಾವು ಕಚ್ಚಿದ್ದಾ? ಎಂಬುದು ಗೊತ್ತಿಲ್ಲ. ಆದರೆ ಎರಡನೇ ಸಲವೂ ಕೂಡ ಕಡಿದಿದ್ದು ವಿಷಕಾರಿ ವೈಪರ್​. ಮೊದಲ ಸಲ ಹಾವಿನ ಬಳಿ ಕಚ್ಚಿಸಿಕೊಂಡು ಬದುಕುಳಿದಿದ್ದ ಜಸಬ್ ಈ ಸಲ ಬದುಕಲಿಲ್ಲ. ಜೋಧಪುರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಜಸಬ್​ ಮೃತಪಟ್ಟಿದ್ದಾರೆ.

ಇದನ್ನೂ ಓದಿ:Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

Hathras Stampede:ಘಟನೆ ಬಳಿಕ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ಎಸ್ಕೇಪ್‌ ಆಗುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Hatras Stampede
Koo

ಲಖನೌ: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ(Hathras Stampede) ದುರ್ಘಟನೆಗೆ ಸಂಬಂಧಿಸಿದ ಕೆಲವೊಂದು ಸಿಸಿಟಿವಿ ದೃಶ್ಯಾವಳಿಗಳು ಇದೀಗ ವೈರಲ್‌ ಆಗುತ್ತಿದೆ. ಅದರಲ್ಲಿ ಪ್ರಮುಖವಾಗಿ ಘಟನೆ ಬಳಿಕ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ(Bhole Baba) ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ಎಸ್ಕೇಪ್‌ ಆಗುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

“ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ಇದುವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯೂ ಮುಕ್ತಾಯಗೊಂಡಿದೆ” ಎಂದು ಅಲಿಗಢ ಐಜಿ ಶಾಲಾಭ್‌ ಮಾಥುರ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading

Latest

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Viral Video: ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಅದನ್ನು ರಿಪೇರಿ ಮಾಡದೇ ರಸ್ತೆ ಪ್ರಾಧಿಕಾರ ಕೂಡ ನಿರ್ಲಕ್ಷ್ಯ ತೋರಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಘಟನೆ ಇದು. ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ. ಈ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Viral Video
Koo

ಇಂದೋರ್: ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೊಂಡಗಳ ಸಮಸ್ಯೆ ಸಾಮಾನ್ಯ ಎನ್ನುವಂತಾಗಿದೆ. ರಸ್ತೆಗಳಲ್ಲಿ ಅಲ್ಲಲ್ಲಿ ಹೊಂಡಗಳು, ಚರಂಡಿಗಳನ್ನು ತೆರೆದಿಡುವುದರಿಂದ ಮಳೆಗಾಲದಲ್ಲಿ ಪ್ರಾಣಕ್ಕೇ ಕುತ್ತು ಬರುವಂತಾಗುತ್ತದೆ. ಇದೀಗ ಅಂತಹದೊಂದು ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಅದನ್ನು ರಿಪೇರಿ ಮಾಡದೇ ರಸ್ತೆ ಪ್ರಾಧಿಕಾರ ಕೂಡ ನಿರ್ಲಕ್ಷ್ಯ ತೋರಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಸನ್ನಿವೇಶವದು. ಇಂದೋರ್‌ನ ಅಮ್ಮರ್ ನಗರದಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಹನ್ನೆರಡು ವರ್ಷದ ಬಾಲಕಿಯೊಬ್ಬಳು 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ನಂತರ ನೀರಿನಲ್ಲಿ ಒದ್ದಾಡುತ್ತಿದ್ದ ಬಾಲಕಿಯನ್ನು ಅಲ್ಲಿಗೆ ಬಂದ ಹುಡುಗನೊಬ್ಬ ಕಾಪಾಡಿದ್ದಾನೆ. ಈ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಾಲಕಿ ಅಜ್ಜಿಯ ಜೊತೆಗೆ ರಸ್ತೆ ದಾಟಲು ಮುಂದಾಗಿದ್ದಾಳೆ. ಅಜ್ಜಿ ಮುಂದೆ ಹೋಗಿದ್ದು, ಹಿಂದಿನಿಂದ ಬಂದ ಹುಡುಗಿ ರಸ್ತೆಯಲ್ಲಿ ಸಣ್ಣ ಹೊಂಡವೆಂದು ನೀರಿಗೆ ಕಾಲಿಡಲು ಪ್ರಯತ್ನಿಸಿದ್ದಾಳೆ. ಆಗ ಬ್ಯಾಲೆನ್ಸ್ ತಪ್ಪಿ ಬಾಲಕಿ 4 ಅಡಿ ಆಳದ ನೀರಿನ ಗುಂಡಿಗೆ ಬಿದ್ದಿದ್ದಾಳೆ. ಆಕೆ ಮುಳುಗಿ ನಂತರ ಸಮತೋಲನ ಮಾಡಿ ಗುಂಡಿಯ ಬದಿಗೆ ಬಂದಿದ್ದಾಳೆ. ಆಕೆ ಗುಂಡಿಯಿಂದ ಹೊರಗೆ ಬರಲು ಹೆಣಗಾಡುತ್ತಿರುವಾಗ ಅಲ್ಲಿಗೆ ಬಂದ ಹುಡುಗನೊಬ್ಬ ಆಕೆಯನ್ನು ಮೇಲಕ್ಕೆ ಎತ್ತಿದ್ದಾನೆ. ಇದರಿಂದ ಆಕೆಯ ಜೀವ ಉಳಿದಿದೆ.

ಇದನ್ನೂ ಓದಿ: ಹೆಂಡತಿಯನ್ನು ಯಾಮಾರಿಸಿ ಪ್ರೇಯಸಿಯನ್ನು ಮನೆಗೆ ಕರೆಸಬಾರದಿತ್ತು! ಗೂಸಾ ತಿಂದವನ ಪ್ರತಿಕ್ರಿಯೆ!

ಮಾಹಿತಿಯ ಪ್ರಕಾರ, ನಿರ್ಮಾಣ ಕಾರ್ಯಕ್ಕಾಗಿ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಗುಂಡಿಯನ್ನು ಅಗೆದಿದ್ದರು ಆದರೆ ಅದನ್ನು ಮುಚ್ಚದೆ ಹಾಗೇ ಬಿಟ್ಟಿದ್ದರು. ಅದು ಮಳೆಯ ಸಮಯದಲ್ಲಿ ತುಂಬಿದ್ದರಿಂದ ಈ ಘಟನೆ ಸಂಭವಿಸಿದೆ. ಚಂದನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಮರ್ ನಗರದ ವಾರ್ಡ್ ನಂ.1ರಲ್ಲಿ ಜೂನ್ 29ರಂದು ಈ ಘಟನೆ ನಡೆದಿದೆ. ಇಡೀ ಘಟನೆಯನ್ನು ಅಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದು ಬುಧವಾರ ವೈರಲ್ ಆಗಿದೆ. ಆದರೆ ಈ ಘಟನೆಯ ಬಗ್ಗೆ ಯಾವುದೇ ಮಾಹಿತಿ ಅಥವಾ ದೂರು ದಾಖಲಾಗಿಲ್ಲ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

Continue Reading

Latest

Viral Video: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

Viral Video: ದೆಹಲಿಯ ನಿಹಾಲ್ ವಿಹಾರ್‌ ರಸ್ತೆಯೊಂದರಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕ ಟ್ರಾಫಿಕ್‌ನಿಂದಾಗಿ ತನ್ನ ವಾಹನವನ್ನು ನಿಲ್ಲಿಸಿದಾನೆ. ಆಗ ಹಿಂದೆ ಬುಲೆಟ್‌ನಲ್ಲಿ ಬಂದ ಯುವತಿ ಆಟೋ ಚಾಲಕನಿಗೆ ಹಾರ್ನ್ ಮಾಡಿದ್ದಾಳೆ. ಆದರೆ ಆತನಿಗೆ ವಾಹನವೊಂದು ರಸ್ತೆಗೆ ತಡಲಾಗಿ ನಿಂತಿದ್ದರಿಂದ ತನ್ನ ಆಟೋವನ್ನು ಮುಂದೆ ಸಾಗಿಸಲು ಸಾಧ್ಯವಾಗಲಿಲ್ಲ. ನಂತರ ಯುವತಿ ತಾಳ್ಮೆ ಕಳೆದುಕೊಂಡು ಆಟೊ ಚಾಲಕನೊಂದಿಗೆ ಗಲಾಟೆಗೆ ಇಳಿದಿದ್ದಾಳೆ, ಆಟೋ ಚಾಲಕನ ಮೇಲೆ ಕಬ್ಬಿಣದ ಉಪಕರಣದಿಂದ ಹಲ್ಲೆ ಮಾಡಿದ್ದಾಳೆ.

VISTARANEWS.COM


on

Viral Video
Koo

ಟ್ರಾಫಿಕ್ ಸಮಸ್ಯೆ ಎಲ್ಲೆಂದರಲ್ಲಿ ಕಂಡುಬರುವುದು ಸಾಮಾನ್ಯ. ಕೆಲವೊಂದು ಕಡೆ ರಸ್ತೆಗಳ ಸಮಸ್ಯೆಯಿಂದಾಗಿ ವಾಹನಗಳು ಮುಂದೆ ಚಲಾಯಿಸಲಾಗದೆ ಗಂಟೆಗಟ್ಟಲೆ ಅಲ್ಲೇ ನಿಂತು ಕಾಯುವಂತಾಗುತ್ತದೆ. ಇದರಿಂದ ಕೆಲಸಕ್ಕೆ ಹೋಗುವವರು, ಶಾಲಾ ಮಕ್ಕಳಿಗೆ ತುಂಬಾ ಸಮಸ್ಯೆಯಾಗುತ್ತದೆ. ದೆಹಲಿ, ಬೆಂಗಳೂರಿನಂತಹ ಸಿಟಿಗಳಲ್ಲಿ ಈ ಸಮಸ್ಯೆ ಸಾಮಾನ್ಯ. ಇದೀಗ ಇಂತಹ ಟ್ರಾಫಿಕ್‌ನಿಂದಾಗಿ ರೊಚ್ಚಿಗೆದ್ದ ಯುವತಿಯೊಬ್ಬಳು ಆಟೋ ಚಾಲಕನ ಮೇಲೆ ಕಬ್ಬಿಣದ ಉಪಕರಣದಿಂದ ಹಲ್ಲೆ ಮಾಡಿದ ಘಟನೆ ದೆಹಲಿಯ ನಿಹಾಲ್ ವಿಹಾರ್‌ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದ ಪೋಸ್ಟ್ ಆಗಿದ್ದು, ಸಖತ್ ವೈರಲ್ (Viral Video) ಆಗಿ ಚರ್ಚೆಗೆ ಕಾರಣವಾಗಿದೆ.

ದೆಹಲಿಯ ನಿಹಾಲ್ ವಿಹಾರ್‌ನ ರಸ್ತೆಯೊಂದರಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕ ಟ್ರಾಫಿಕ್‍ನಿಂದಾಗಿ ತನ್ನ ವಾಹನವನ್ನು ನಿಲ್ಲಿಸಿದಾನೆ. ಆಗ ಹಿಂದೆ ಬುಲೆಟ್‍ನಲ್ಲಿ ಬಂದ ಯುವತಿ ಆಟೋ ಚಾಲಕನಿಗೆ ಹಾರ್ನ್ ಮಾಡಿದ್ದಾಳೆ. ಆದರೆ ಆತನಿಗೆ ವಾಹನವೊಂದು ರಸ್ತೆಗೆ ತಡಲಾಗಿ ನಿಂತಿದ್ದರಿಂದ ತನ್ನ ಆಟೋವನ್ನು ಮುಂದೆ ಸಾಗಿಸಲು ಸಾಧ್ಯವಾಗಲಿಲ್ಲ. ನಂತರ ಯುವತಿ ತಾಳ್ಮೆ ಕಳೆದುಕೊಂಡು ಆಟೊ ಚಾಲಕನೊಂದಿಗೆ ಗಲಾಟೆಗೆ ಇಳಿದಿದ್ದಾಳೆ, ನಂತರ ಕೋಪಗೊಂಡು ಕಬ್ಬಿಣದ ಉಪಕರಣದಿಂದ ಆಟೋ ಚಾಲಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾಳೆ. ಇದರಿಂದ ಆತನ ತಲೆಗೆ ಗಾಯವಾಗಿ ರಕ್ತ ಸೋರಿದೆ.

ವಿಡಿಯೊದಲ್ಲಿ ಯುವತಿ ಕಬ್ಬಿಣದ ಉಪಕರಣದಿಂದ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೊಡೆಯುವುದನ್ನು ಕಾಣಬಹುದು. ಅಲ್ಲಿದ್ದವರು ಆಕೆಯನ್ನು ತಡೆದರೂ ಕೇಳದ ಯುವತಿ ಮತ್ತೆ ಆತನಿಗೆ ಹೊಡೆದಿದ್ದಾಳೆ. ಚಾಲಕನ ತಲೆಯಲ್ಲಿ ರಕ್ತ ಸೋರುತ್ತಿರುವುದು ಕಂಡುಬಂದಿದೆ. ಇಷ್ಟಾದರೂ ಯುವತಿ ವಾಗ್ದಾಳಿ ನಡೆಸುವುದನ್ನು ನಿಲ್ಲಿಸಿಲ್ಲ. ಈ ಘಟನೆಯನ್ನು ನೋಡುಗರು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಜನರ ಗಮನ ಸೆಳೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ರಸ್ತೆ ಶಿಷ್ಟಾಚಾರ, ಸುರಕ್ಷತೆ ಮತ್ತು ಅಂತಹ ಘರ್ಷಣೆಗಳನ್ನು ತಡೆಗಟ್ಟುವಲ್ಲಿ ಕಾನೂನು ಜಾರಿಯ ಪಾತ್ರದ ಬಗ್ಗೆ ಜನರು ಚರ್ಚೆ ಮಾಡಿದ್ದಾರೆ. ದೆಹಲಿಯಂತಹ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ರಸ್ತೆ ಮೂಲಸೌಕರ್ಯಗಳಲ್ಲಿ ಸಮಸ್ಯೆ ಎದುರಿಸುತ್ತಿರುವುದನ್ನು ಕಂಡು ಆಶ್ವರ್ಯವಾಗಿದೆ. ಕಿಕ್ಕಿರಿದ ರಸ್ತೆಗಳಲ್ಲಿ ಸಂಚರಿಸುವಾಗ ಸುರಕ್ಷತೆ ಮತ್ತು ಪರಸ್ಪರ ಗೌರವಕ್ಕೆ ಆದ್ಯತೆ ನೀಡುವಂತೆ ಚಾಲಕರಿಗೆ ಮನದಟ್ಟು ಮಾಡಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ರಸ್ತೆ ಸುರಕ್ಷತೆ ಮತ್ತು ಜವಾಬ್ದಾರಿಯುತ ಚಾಲನೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನಗಳು ನಡೆಯಬೇಕಿದೆ ಎಂದು ಹೇಳಲಾಗಿದೆ.

Continue Reading

Latest

Viral News: ಚಾಲಕನ ಹೆಸರು ʼಯಮರಾಜʼ ಎನ್ನುವುದು ಗೊತ್ತಾಗುತ್ತಲೇ ಕ್ಯಾಬ್ ಬುಕಿಂಗ್‌ ಕ್ಯಾನ್ಸಲ್‌ ಮಾಡಿದ ಗ್ರಾಹಕ!

Viral News: ಮೊದಲೆಲ್ಲ ಬಸ್, ಆಟೊಗಳಿಗಾಗಿ ಕಾಯುತ್ತಿದ್ದರು. ಆದರೆ ಈ ಬುಕ್ಕಿಂಗ್ ಮಾಡಿ ಕಣ್ಮುಚ್ಚಿ ತೆರೆಯುವುದರೊಳಗೆ ಮನೆ ಮುಂದೆ ಕ್ಯಾಬ್ ಬಂದು ನಿಲ್ಲುತ್ತದೆ. ಅಲ್ಲದೇ ಓಲಾ ಮತ್ತು ಉಬರ್‌ನಂತಹ ಕ್ಯಾಬ್ ಕಂಪನಿಗಳು ತಮ್ಮ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಗಾಗಿ ಕಂಪನಿಗಳು, ಡ್ರೈವರ್ ಹೆಸರುಗಳು ಮತ್ತು ಸ್ಥಳಗಳ ಬಗ್ಗೆ ಮೊದಲೇ ಮಾಹಿತಿ ನೀಡುತ್ತವೆ, ಹಾಗೇ ಇದರಲ್ಲಿ ಗ್ರಾಹಕರು ತಮ್ಮ ಬುಕಿಂಗ್ ಅನ್ನು ರದ್ದುಗೊಳಿಸುವ ಆಯ್ಕೆಯನ್ನು ಸಹ ಹೊಂದಿದ್ದಾರೆ. ಬುಕ್ಕಿಂಗ್ ಮಾಡಿದ ಪ್ರಯಾಣಿಕರೊಬ್ಬರು ಡ್ರೈವರ್ ಹೆಸರು ನೋಡಿ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ ತಮಾಷೆಯ ಘಟನೆಯೊಂದು ನಡೆದಿದೆ.

VISTARANEWS.COM


on

Viral News
Koo

ಇತ್ತೀಚಿನ ದಿನಗಳಲ್ಲಿ ಸಿಟಿಯಲ್ಲಿ ವಾಸಿಸುವ ಜನರು ಆಟೊಗಳಿಗಿಂತ ಹೆಚ್ಚು ಕ್ಯಾಬ್‌ಗಳನ್ನು ಬುಕ್ ಮಾಡಿಕೊಂಡು ಹೋಗುತ್ತಾರೆ. ಇದು ತುಂಬಾ ಸುಲಭ ಮತ್ತು ಕಡಿಮೆ ದರಗಳಲ್ಲಿ ನೀವು ಯಾವುದೇ ಭಯವಿಲ್ಲದೆ ನಿಮಗಿಷ್ಟ ಬಂದ ಕಡೆ ಹೋಗಬಹುದು. ಅಲ್ಲದೇ ಓಲಾ ಮತ್ತು ಉಬರ್‌ನಂತಹ ಕ್ಯಾಬ್ ಕಂಪನಿಗಳು ತಮ್ಮ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ರೈವರ್ ಹೆಸರುಗಳು ಮತ್ತು ಸ್ಥಳಗಳ ಬಗ್ಗೆ ಮೊದಲೇ ಮಾಹಿತಿ ನೀಡುತ್ತವೆ. ಹಾಗೇ ಇದರಲ್ಲಿ ಗ್ರಾಹಕರು ತಮ್ಮ ಬುಕಿಂಗ್ ಅನ್ನು ರದ್ದುಗೊಳಿಸುವ ಆಯ್ಕೆಯನ್ನು ಸಹ ಹೊಂದಿದ್ದಾರೆ. ಆದರೆ ಈ ಸುರಕ್ಷತೆಯ ಸೌಲಭ್ಯಗಳು ಈಗ ಕ್ಯಾಬ್ ಕಂಪನಿಗಳಿಗೆ ಸಮಸ್ಯೆಯನ್ನುಂಟುಮಾಡಿದೆ. ಯಾಕೆಂದರೆ ಕ್ಯಾಬ್ ಡ್ರೈವರ್ ಹೆಸರು ತಿಳಿದು ವ್ಯಕ್ತಿಯೊಬ್ಬ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದು, ಈ ತಮಾಷೆಯ ಕಾರಣದಿಂದ ಈ ಸುದ್ದಿ ಸಖತ್ ವೈರಲ್ (Viral News) ಆಗಿದೆ.

ಈ ವೈರಲ್ ಪೋಸ್ಟ್ ಅನ್ನು @timepassstruggler ಎಂಬ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಇದು ಓಲಾದಿಂದ ಬಂದ ಸಂದೇಶದ ಸ್ಕ್ರೀನ್‍ಶಾಟ್ ಆಗಿದೆ. ಅದರಲ್ಲಿ “ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ” ಎಂದು ಬರೆಯಲಾಗಿತ್ತು. ಈ ಬಗ್ಗೆ ನೀಡಿದ ವಿವರಣೆಯಲ್ಲಿ ಕರ್ನಾಟಕದಲ್ಲಿ ಯಾರೋ ಒಬ್ಬರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ಆದರೆ ಚಾಲಕನ ಹೆಸರು ʼಯಮರಾಜʼ ಎಂದು ನೋಡಿದ ನಂತರ ಅದನ್ನು ರದ್ದುಗೊಳಿಸಿದರು ಎನ್ನಲಾಗಿದೆ.

ಹಿಂದೂ ಧರ್ಮದ ಪ್ರಕಾರ, ಯಮರಾಜನು ಸಾವಿನ ದೇವರು. ಆತ ಬಂದಿದ್ದಾನೆ ಎಂದರೆ ಸಾವು ನಮ್ಮ ಹತ್ತಿರದಲ್ಲಿದೆ ಎಂಬ ನಂಬಿಕೆ ನಮ್ಮಲಿದೆ. ಆದ್ದರಿಂದ, ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ ಎಂದು ಬರೆದ ಮೆಸೇಜ್ ನೋಡಿ ಗ್ರಾಹಕರು ಹೆದರಿ ಕ್ಯಾಬ್ ಬುಕ್ಕಿಂಗ್ ಅನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿಸುವ ಮೂಲಕ ಆಶ್ವರ್ಯವನ್ನುಂಟು ಮಾಡಿದ್ದಾರೆ.

ಇದನ್ನೂ ಓದಿ: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

ಇದೇ ತರಹದ ಘಟನೆ ಕಳೆದ ಜನವರಿಯಲ್ಲಿ ನಡೆದಿದ್ದು, ಇದು ಆನ್‌ಲೈನ್ ನಲ್ಲಿ ವೈರಲ್ ಆಗಿತ್ತು. ಅದನ್ನು @ashimhta ಎಂಬ ಬಳಕೆದಾರರು ತಮ್ಮ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ. ಆಕೆ ತನ್ನ ಉಬರ್ ಡ್ರೈವರ್ ನಡುವಿನ ಸಂಭಾಷಣೆಯ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡಿದ್ದು, ಇದರಲ್ಲಿ ಭರತ್ ಎಂಬ ಚಾಲಕ “ಈ ಬುಕ್ಕಿಂಗ್ ಅನ್ನು ರದ್ದುಗೊಳಿಸಿ, ನನಗೆ ನಿದ್ರೆ ಬರುತ್ತಿದೆ” ಎಂದು ಮೆಸೇಜ್ ಕಳುಹಿಸಿದರು. ತನಗೆ ತುಂಬಾ ಸುಸ್ತಾಗಿದೆ. ಹಾಗಾಗಿ ಬರಲು ಆಗಲ್ಲ ಎಂದಿದ್ದ ಮೆಸೇಜ್‌ನ ಸ್ಕ್ರೀನ್‍ಶಾಟ್ ಅನ್ನು ಪೋಸ್ಟ್ ಮಾಡಿದ್ದಾರೆ.

Continue Reading
Advertisement
Team India
ಪ್ರಮುಖ ಸುದ್ದಿ40 mins ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ41 mins ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ42 mins ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ1 hour ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ1 hour ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ1 hour ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು1 hour ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest1 hour ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Robot Suicide
ತಂತ್ರಜ್ಞಾನ2 hours ago

Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

Muda site allocation Politically motivated allegation says CM Siddaramaiah
ಕರ್ನಾಟಕ2 hours ago

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ5 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ6 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ8 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ9 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ10 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌