Viral news: 4ನೇ ಹಂತದ ಕ್ಯಾನ್ಸರ್ ಪೀಡಿತ ಮಹಿಳೆಗೆ ಕೆಲಸಕ್ಕೆ ಹಾಜರಾಗಲು ಆದೇಶ! - Vistara News

ವೈರಲ್ ನ್ಯೂಸ್

Viral news: 4ನೇ ಹಂತದ ಕ್ಯಾನ್ಸರ್ ಪೀಡಿತ ಮಹಿಳೆಗೆ ಕೆಲಸಕ್ಕೆ ಹಾಜರಾಗಲು ಆದೇಶ!

Viral news: ಕಾಯಿಲೆಗಳು ಹೇಳಿ ಕೇಳಿ ಬರುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಕೊಂಚವೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುವವರೂ ಇದ್ದಾರೆ. ಇಲ್ಲೊಬ್ಬ ಮಹಿಳೆ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರೂ ಆಕೆಯ ಮ್ಯಾನೇಜರ್ ಕೆಲಸಕ್ಕೆ ಮರಳಲು ಆದೇಶಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ.

VISTARANEWS.COM


on

Viral news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಐರ್ಲೆಂಡ್: ತಾಯಿ ಕ್ಯಾನ್ಸರ್ (cancer) ವಿರುದ್ಧ ಹೋರಾಡುತ್ತಿದ್ದರೂ ಅವರನ್ನು ಮ್ಯಾನೇಜರ್ ಕೆಲಸಕ್ಕೆ ಬರಲು ಒತ್ತಾಯಿಸುತ್ತಿರುವುದಾಗಿ ಮಗಳು ಹಾಕಿರುವ ಪೋಸ್ಟ್ ವೊಂದು (post) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದ್ದು, ಕಂಪೆನಿಯ ಮ್ಯಾನೇಜರ್ ವಿರುದ್ಧ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕಳೆದ 18 ತಿಂಗಳಿನಿಂದ ತಾಯಿ 4ನೇ ಹಂತದ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದಾರೆ. ಆದರೆ ಅವರ ಮ್ಯಾನೇಜರ್ ಕೆಲಸಕ್ಕೆ ಮರಳುವಂತೆ ತಾಯಿಯ ಮೇಲೆ ಒತ್ತಡ ಹೇರುತ್ತಿರುವುದಾಗಿ ಕಾಲೇಜು ವಿದ್ಯಾರ್ಥಿ ಆನ್‌ಲೈನ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾನೆ.

ರೆಡ್ಡಿಟ್ ನಲ್ಲಿ (reddit) ಕಳುಹಿಸಲಾದ ಇ ಮೇಲ್ ನ ಕಾಪಿಯನ್ನು @disneydoll96 ಎಂಬ ಹೆಸರಿನಲ್ಲಿ ಹಂಚಿಕೊಳ್ಳಲಾಗಿದೆ. ಇದರಲ್ಲಿ ಆಕೆಯ ಸಾಮರ್ಥ್ಯ, ಚಿಕಿತ್ಸೆಯ ಯೋಜನೆಗಳ ಜೊತೆಗೆ ಕೆಲಸ ಮಾಡಲು ಆಕೆಯ ಫಿಟ್‌ನೆಸ್ ಅನ್ನು ದೃಢೀಕರಿಸುವ ವೈದ್ಯರ ಟಿಪ್ಪಣಿಯನ್ನು ನೀಡುವಂತೆ ಆಕೆಯ ಕಚೇರಿ ಮ್ಯಾನೇಜರ್ ಕೇಳಿಕೊಂಡಿದ್ದಾನೆ. ತಾಯಿಯ ಮೇಲ್ವಿಚಾರಕರು ಕಳುಹಿಸಿದ ಇ-ಮೇಲ್‌ನ ಸ್ಕ್ರೀನ್‌ಶಾಟ್ ಅನ್ನು ಮಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.

ಮಹಿಳೆಯ ಅನಾರೋಗ್ಯವನ್ನು ಕಡೆಗಣಿಸಿ, ಯಾವುದೇ ರೀತಿಯಲ್ಲಿ ಮಾನವೀಯ ಕಾಳಜಿ ತೋರದೆ ಕಚೇರಿಯಲ್ಲಿ ನಡೆಯುವ ಮರುದಿನದ ಮೀಟಿಂಗ್ ಗೆ ಹಾಜರಾಗಲು ಹೇಳಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಐರ್ಲೆಂಡ್‌ನಿಂದ ಹಂಚಿಕೊಂಡಿರುವ ಈ ಪೋಸ್ಟ್ ಭಾವನಾತ್ಮಕವಾಗಿದ್ದು, ಆರ್ಥಿಕ ಒತ್ತಡದ ನಡುವೆ ಮಾನಸಿಕ ಒತ್ತಡವನ್ನು ಉಂಟು ಮಾಡುವ ಪರಿಸ್ಥಿತಿಯ ಬಗ್ಗೆ ಹೇಳುತ್ತದೆ.

My Mum has stage 4 cancer in 5 areas and her boss has been pressuring her to come back to work.
byu/disneydoll96 inmildlyinfuriating

ಸಂಕಷ್ಠದಲ್ಲಿದೆ ಕುಟುಂಬ

ಅಂಗಡಿಯ ಮೇಲ್ವಿಚಾರಕಿಯಾಗಿರುವ ಮಹಿಳೆ ಕೆಲಸಕ್ಕೆ ಮರಳಲು ಬಯಸುತ್ತಿದ್ದಾರೆ. ಪತಿಯನ್ನು ಕಳೆದುಕೊಂಡಿರುವ ಮಹಿಳೆಯ ಮನೆಯಲ್ಲಿ ಆರ್ಥಿಕ ಸಂಕಷ್ಟವೂ ಎದುರಾಗಿದೆ. ಕುಟುಂಬ ನಿರ್ವಹಣೆಗಾಗಿ ಉದ್ಯೋಗ ಹುಡುಕುತ್ತಿರುವ ಮಗಳು ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾಳೆ.

ಕ್ಯಾನ್ಸರ್ ನಾಲ್ಕನೇ ಹಂತ

ಈ ಬಗ್ಗೆ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ. ಇದರಲ್ಲಿ ಮಹಿಳೆಯ ಆರೋಗ್ಯದ ಬಗ್ಗೆ ಸಾಕಷ್ಟು ಮಂದಿ ಪ್ರಶ್ನೆಯನ್ನೂ ಕೇಳಿದ್ದಾರೆ. ಅದಕ್ಕೆ ಅವರ ಮಗಳು ಪ್ರತಿಕ್ರಿಯೆ ನೀಡಿದ್ದು, ತಾಯಿ ಈಗ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರ ರೋಗನಿರ್ಣಯದ ಬಳಿಕ ಸರಿಯಾದ ಚಿಕಿತ್ಸೆ ಪಡೆಯಲು ಹಣಕಾಸಿನ ತೊಂದರೆಯೂ ಎದುರಾಗಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ತಾಯಿಯ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ ಎಂದು ಹೇಳಿದ್ದಾರೆ. ಚಿಕಿತ್ಸೆಯ ವೇಳೆ ಸಾಕಷ್ಟು ಹೋರಾಡುತ್ತಿದ್ದಾರೆ. ಬಹಳ ಸಮಯದಿಂದ ಕೀಮೋಥೆರಪಿಯಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಗಳು ಹೇಳಿಕೊಂಡಿದ್ದಾಳೆ.

ನೆಟ್ಟಿಗರಿಂದ ಆಕ್ರೋಶ

ಇಷ್ಟೆಲ್ಲ ಗೊತ್ತಿದ್ದರೂ ಆಕೆಯನ್ನು ಕೆಲಸಕ್ಕೆ ಬರಲು ಒತ್ತಾಯಿಸುತ್ತಿರುವ ಮಹಿಳೆಯ ಮ್ಯಾನೇಜರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ ಮತ್ತು ಅವರಿಗೆ ಸಾಂತ್ವನ ಹೇಳಿ ಹಲವಾರು ಸಲಹೆಗಳೂ ಬಂದಿವೆ.

.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Viral News: ಸದ್ಯ ದೇಶಾದ್ಯಂತ ಉಷ್ಣಾಂಶ ವಿಪರೀತ ಮಟ್ಟಕ್ಕೆ ಏರಿಕೆಯಾಗಿದ್ದು, ಮನುಷ್ಯರು ಸೇರಿದಂತೆ ಸಕಲ ಜೀವ ರಾಶಿಯನ್ನು ಬಾಧಿಸಿದೆ. ಈ ಮಧ್ಯೆ ಉತ್ತರ ಪ್ರದೇಶದ ಕನೌಜ್‌ನ ಶಾಲೆಗೆ ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದರು. ಇದಕ್ಕೆ ಶಾಲೆಯ ಶಿಕ್ಷಕರು ಪರಿಹಾರ ಕಂಡುಕೊಂಡಿದ್ದಾರೆ. ಈ ಕ್ರಮದಿಂದಾಗಿ ಇದೀಗ ಶಾಲೆಯ ಹಾಜರಾತಿ ಹೆಚ್ಚಿದೆ. ಹಾಗಾದರೆ ಶಿಕ್ಷಕರು ಕಂಡುಕೊಂಡ ಉಪಾಯವೇನು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Viral Video
Koo

ಲಕ್ನೋ: ʼʼಉಫ್‌! ಏನು ಸೆಕೆʼʼ ಸದ್ಯ ಎಲ್ಲೆಂದರಲ್ಲಿ ಈ ಮಾತು ಕಿವಿಗೆ ಬೀಳುತ್ತಿದೆ. ದೇಶಾದ್ಯಂತ ತಾಪಮಾನ ತೀವ್ರವಾಗಿ ಏರಿಕೆ ಕಂಡಿದೆ. ಈ ಎಲ್‌ ನಿನೊ ಪರಿಣಾಮದಿಂದ ದೇಶಾದ್ಯಂತ ಜನರು ಪರಿತಪಿಸುತ್ತಿದ್ದಾರೆ. ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿ ಮುಂದೆ ಸಾಗುತ್ತಿದೆ. ಜತೆಗೆ ಉಷ್ಣ ಅಲೆ (Heatwave)ಯು ಜನ-ಜೀವನವನ್ನು ಬಾಧಿಸಿದೆ. ಮನುಷ್ಯರು ಸೇರಿದಂತೆ ಸಕಲ ಜೀವ ರಾಶಿಯನ್ನು ಈ ಬೇಸಿಗೆ ಹೈರಾಣಾಗಿಸಿದೆ. ಮನೆಯಿಂದ ಹೊರಗೆ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ಮಧ್ಯಾಹ್ನ ಅಘೋಷಿತ ಬಂದ್‌ ಎನಿಸುವಂತೆ ರಸ್ತೆಗಳೆಲ್ಲ ಖಾಲಿ ಹೊಡೆಯುತ್ತವೆ. ಈ ಮಧ್ಯೆ ವಿದ್ಯಾರ್ಥಿಗಳನ್ನು ಉರಿ ಸೆಕೆಯಿಂದ ಪಾರು ಮಾಡಲು ಶಾಲೆಯೊಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಉತ್ತರ ಪ್ರದೇಶದ ಶಾಲೆಯ ಈ ವಿಡಿಯೊ ಸದ್ಯ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗಿದೆ (Viral News).

ಶಿಕ್ಷಕರ ಐಡಿಯಾ ನೋಡಿ

ಉತ್ತರ ಪ್ರದೇಶದ ಕನೌಜ್‌ನ ಶಾಲೆಯ ತರಗತಿಯೊಂದನ್ನು ಈಜುಕೊಳವನ್ನಾಗಿ ಪರಿವರ್ತಿಸಿ ತೀವ್ರ ಶಾಖದಿಂದ ಮಕ್ಕಳನ್ನು ಪಾರು ಮಾಡಲಾಗಿದೆ. ಸುಮಾರು ಎರಡು ಅಡಿ ನೀರು ತುಂಬಿದ ಕ್ಲಾಸ್‌ ರೂಮ್‌ನಲ್ಲಿ ವಿದ್ಯಾರ್ಥಿಗಳು ಖುಷಿಯಿಂದ ಈಜಾಡುತ್ತಿರುವ, ಆಡುತ್ತಿರುವ ದೃಶ್ಯ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

ಕಾರಣ ಏನು?

ದೇಶದ ಇತರ ಭಾಗಗಳಂತೆ ಉತ್ತರ ಪ್ರದೇಶದಲ್ಲಿಯೂ ವಿಪರೀತ ಉಷ್ಣತೆ ದಾಖಲಾಗುತ್ತಿದೆ. ಹೀಗಾಗಿ ಮಕ್ಕಳು ಶಾಲೆಗಳಿಗೆ ಬರಲೂ ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಶಾಲೆಯಲ್ಲಿ ಕಡಿಮೆ ಹಾಜರಾತಿ ಕಂಡು ಬಂದಿತ್ತು. ಇದನ್ನು ಗಮನಿಸಿದ ಕನ್ನೌಜ್ ಜಿಲ್ಲೆಯ ಮಹಾಸೌನಾಪುರ್‌ನ ಪ್ರಾಥಮಿಕ ಶಾಲೆಯ ಶಿಕ್ಷಕರು ಈ ಸಮಸ್ಯೆಯ ಪರಿಹಾರಕ್ಕೆ ಕಂಡುಕೊಂಡ ಮಾರ್ಗವೇ ಈ ಈಜುಕೊಳದ ಉಪಾಯ. ಸದ್ಯ ವಿದ್ಯಾರ್ಥಿಗಳು ಖುಷಿಯಿಂದಲೇ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.

ಪ್ರಾಂಶುಪಾಲರು ಹೇಳೋದೇನು?

ʼʼಕೆಲವು ದಿನಗಳಿಂದ ವಾತಾವರಣದ ಉಷ್ಣಾಂಶ 38ರಿಂದ 40 ಡಿಗ್ರಿ ಸೆಲ್ಶಿಯಸ್‌ಗೆ ತಲುಪುತ್ತಿದೆ. ಹೀಗಾಗಿ ನಿರಂತರವಾಗಿ ಮಕ್ಕಳು ಶಾಲೆಗೆ ಗೈರಾಗುತ್ತಿದ್ದರು. ಇದನ್ನು ತಪ್ಪಿಸಲು ಈ ಉಪಾಯ ಕೈಗೊಂಡಿದ್ದೇವೆʼʼ ಎಂದು ಶಾಲೆಯ ಪ್ರಾಂಶುಪಾಲ ವೈಭವ್‌ ರಾಜಪೂತ್‌ ತಿಳಿಸಿದ್ದಾರೆ. ಇದೀಗ ಕ್ಲಾಸ್‌ ರೂಮಿಗೆ ನೀರನ್ನು ತುಂಬಿಸಿರುವುದರಿಂದ ಮಕ್ಕಳು ಶಾಲೆಗೆ ಉತ್ಸಾಹದಿಂದ ಬರುತ್ತಿದ್ದಾರೆ. ಇದೀಗ ಮಕ್ಕಳು ನೀರಿನಲ್ಲಿ ಆಟವಾಡುತ್ತಾ ಕಲಿಯುತ್ತಿದ್ದಾರೆʼʼ ಎಂದು ಅವರು ವಿವರಿಸಿದ್ದಾರೆ. ಅವರ ಈ ಐಡಿಯಾಕ್ಕೆ ಗ್ರಾಮಸ್ಥರು ಭೇಷ್‌ ಎಂದಿದ್ದಾರೆ. ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ

ಈ ಮಧ್ಯೆ ಹವಾಮಾನ ಇಲಾಖೆ ಹೆಚ್ಚುತ್ತಿರುವ ತಾಪಮಾನದ ಬಗ್ಗೆ ಎಚ್ಚರಿಕೆ ನೀಡಿದೆ. ಸೋಮವಾರ ದೇಶದ ಕೆಲವೆಡೆ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು. ಮುಂದಿನ ಐದು ದಿನಗಳಲ್ಲಿ ಇದೇ ರೀತಿಯ ಬಿಸಿಯ ವಾತಾವರಣ ಮುಂದುವರಿಯಲಿದೆ ಎಂದು ಎಚ್ಚರಿಸಿದೆ. ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಮುಂತಾದೆಡೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ತೆಲಂಗಾಣ, ಕರ್ನಾಟಕ, ಕೇರಳ ಮತ್ತು ಸಿಕ್ಕಿಂಗೆ ಆರಂಜ್‌ ಅಲರ್ಟ್‌ ಸೂಚಿಸಲಾಗಿದೆ.

Continue Reading

ವೈರಲ್ ನ್ಯೂಸ್

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

Divorce Celebration: ಕಾನ್ಪುರದ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಮಗಳ ವಿಚ್ಚೇದನವನ್ನು ಬ್ಯಾಂಡ್ ಬಾಜಾದೊಂದಿಗೆ ಆಚರಿಸಿ ಸಂಭ್ರಮಿಸಿದ್ದಾರೆ.
ವಿಚ್ಛೇದನದ ಬಳಿಕ ಮಗಳಿಗೆ ಯಾವುದೇ ಕಳಂಕ ಬಾರದೇ ಇರಲಿ ಎಂದು ತಂದೆಯೊಬ್ಬರು ವಿಭಿನ್ನ ಹೆಜ್ಜೆಯನ್ನು ಇಟ್ಟಿದ್ದಾರೆ.

VISTARANEWS.COM


on

By

Divorce Celebration
Koo

ಕಾನ್ಪುರ: ಮಗಳ ಮದುವೆ (daughter wedding) ಮಾಡಿ ಗಂಡನ ಮನೆಗೆ ಕಳುಹಿಸುವಾಗ ಬ್ಯಾಂಡ್ ಬಾಜಾದೊಂದಿಗೆ (band baja) ಕಳುಹಿಸುವುದು ಸಂಪ್ರದಾಯ. ಆದರೆ ಇಲ್ಲೊಬ್ಬರು ಮಗಳ ವಿಚ್ಛೇದನದ ಬಳಿಕ ಬ್ಯಾಂಡ್ ಬಾಜಾದೊಂದಿಗೆ (Divorce Celebration) ಮಗಳನ್ನು ಮರಳಿ ಮನೆಗೆ ಕರೆ ತಂದು ಸಂಭ್ರಮಿಸಿದ್ದಾರೆ. ಈ ಘಟನೆ ಕಾನ್ಪುರದಲ್ಲಿ (Kanpur) ಭಾರಿ ಸದ್ದು ಮಾಡಿದೆ.

ಕಾನ್ಪುರದ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಮಗಳ ವಿಚ್ಚೇದನವನ್ನು ಬ್ಯಾಂಡ್ ಬಾಜಾದೊಂದಿಗೆ ಆಚರಿಸಿ ಸಂಭ್ರಮಿಸಿದ್ದಾರೆ. ವಿಚ್ಛೇದನದ ಬಳಿಕ ಮಗಳು ಸಾಕಷ್ಟು ನೋವು ಅನುಭವಿಸಬೇಕಾಗುತ್ತದೆ. ಸಮಾಜದ ಚುಚ್ಚು ಮಾತುಗಳನ್ನು ಕೇಳಬೇಕಾಗುತ್ತದೆ. ಮಗಳಿಗೆ ಯಾವುದೇ ಸಾಮಾಜಿಕ ಕಳಂಕ ಬಾರದೇ ಇರಲಿ ಎಂದು ತಂದೆಯೊಬ್ಬರು ಸ್ಫೂರ್ತಿದಾಯಕ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದನ್ನೂ ಓದಿ: Divorce Case : ಶುಭ ಸುದ್ದಿ! ಕಾರಣ ಸರಿಯಾಗಿದ್ದರೆ ಕೂಲಿಂಗ್‌ ಪೀರಿಯೆಡ್‌ ಇಲ್ಲದೆಯೇ ತಕ್ಷಣ ಡೈವೋರ್ಸ್ ಸಿಗುತ್ತೆ!

ಮಗಳು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸುವಾಗ ಬ್ಯಾಂಡ್ ಬಾಜಾದೊಂದಿಗೆ ಗಂಡನ ಮನೆಗೆ ಕಳುಹಿಸಿಕೊಡುತ್ತೇವೆ. ಅದೇ ರೀತಿ ವಿಚ್ಛೇದನದ ಬಳಿಕ ಆಕೆ ಹೊಸ ಜೀವನವನ್ನು ಆರಂಭಿಸುವ ಸಮಯ. ನಾವು ಅವಳನ್ನು ಕೆಲವು ವರ್ಷಗಳ ಹಿಂದೆ ಕಳುಹಿಸಿದ್ದೇವೆ. ಈಗ ಮರಳಿ ಕರೆ ತಂದಿದ್ದೇವೆ. ಅವಳು ಹೊಸದಾಗಿ ಜೀವನ ಪ್ರಾರಂಭಿಸುವ ಸಮಯ ಬಂದಿದೆ ಎಂದು ಬಿಎಸ್ ಎನ್ ಎಲ್ ನ ನಿವೃತ್ತ ಅಧಿಕಾರಿ ಅನಿಲ್ ಕುಮಾರ್ ಹೇಳಿದರು.


ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಎಂಜಿನಿಯರ್ ಆಗಿರುವ ಅನಿಲ್ ಅವರ ಪುತ್ರಿ ಉರ್ವಿ (36) ಅವರಿಗೆ 2016ರಲ್ಲಿ ಕಂಪ್ಯೂಟರ್ ಎಂಜಿನಿಯರ್ ಒಬ್ಬನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಉರ್ವಿ ದಂಪತಿ ದೆಹಲಿಯಲ್ಲಿ ವಾಸಿಸುತ್ತಿದ್ದರು. ಅವರಿಗೆ ಒಬ್ಬ ಮಗಳು ಇದ್ದಾಳೆ. ಆದರೆ ಉರ್ವಿಯ ಅತ್ತೆಯಂದಿರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಫೆ. 28ರಂದು ಅವರು ವಿವಾಹ ವಿಚ್ಛೇದನ ಪಡೆದಿದ್ದಾರೆ. ಎಂಟು ವರ್ಷಗಳ ಚಿತ್ರಹಿಂಸೆ, ಹೊಡೆತ ಮತ್ತು ನಿಂದೆಗಳನ್ನು ಸಹಿಸಿಕೊಂಡಿದ್ದೇನೆ. ಆದರೆ ಕೊನೆಗೆ ಮದುವೆ ಮುರಿಯುವ ನಿರ್ಧಾರ ಮಾಡಿದೆ ಎಂದು ಉರ್ವಿ ಹೇಳಿದರು.

ವಿಚ್ಛೇದನಕ್ಕೂ ಸಂಭ್ರಮ

ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎನ್ನುವ ನಂಬಿಕೆ ಇತ್ತು. ಆದರೆ ಈಗ ವಿಚ್ಛೇದನಗಳು ಹೆಚ್ಚಾಗುತ್ತಿದೆ. ಸಣ್ಣಪುಟ್ಟ ಜಗಳಗಳು ಕೋರ್ಟ್ ಮೆಟ್ಟಿಲೇರಿ ವಿಚ್ಛೇದನ ಪಡೆಯುತ್ತಿದ್ದಾರೆ.

ವಿಚ್ಛೇದನ ಎನ್ನುವುದು ಕೇವಲ ಒಂದು ಹೆಣ್ಣನ್ನು ಮಾತ್ರವಲ್ಲ ಆಕೆಯ ಸಂಪೂರ್ಣ ಕುಟುಂಬವನ್ನೇ ಜರ್ಜರಿತರನ್ನಾಗಿ ಮಾಡುತ್ತದೆ. ತಮ್ಮ ನೋವು ತಮಗೆ ಆದರೂ ಸಮಾಜದ ಚುಚ್ಚು ಮಾತುಗಳು ಅವರನ್ನು ಮತ್ತಷ್ಟು ಕುಗ್ಗುವಂತೆ ಮಾಡುತ್ತದೆ. ವಿಚ್ಛೇದನ ಎನ್ನುವುದು ಹೆಣ್ಣಿಗೆ ಶಾಪವಲ್ಲ ಎಂಬುದನ್ನು ತೋರ್ಪಡಿಸಲು ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಸಂಭ್ರಮಿಸುವವರು ಹೆಚ್ಚಾಗಿದ್ದಾರೆ. ವಿದೇಶದಲ್ಲಿದ್ದ ಈ ಸಂಸ್ಕೃತಿ ಈಗ ನಮ್ಮಲ್ಲೂ ಬೇರೂರುತ್ತಿದೆ.

ದೊಡ್ಡದೊಡ್ಡ ಸೆಲೆಬ್ರಿಟಿಗಳು ತಮ್ಮ ವಿಚ್ಛೇದನವನ್ನು ಸಂಭ್ರಮಿಸುತ್ತಾರೆ. ಇತ್ತೀಚಿಗೆ ಫ್ಯಾಶನ್ ಡಿಸೈನರ್ ಶಾಲಿನಿ ಕೆಂಪು ಬಣ್ಣದ ಬಟ್ಟೆ ಧರಿಸಿ ಫೋಟೋಶೂಟ್ ಮಾಡಿಕೊಂಡು ವಿಚ್ಛೇದನವನ್ನು ಸಂಭ್ರಮಿಸಿದ್ದರು.

ಇಂತಹ ಸಂಸ್ಕೃತಿಯನ್ನು ಇದೀಗ ಪೋಷಕರೇ ಮುಂದೆ ನಿಂತು ಆಚರಿಸುತ್ತಿರುವುದು ನೊಂದ ಹೆಣ್ಣಿಗೆ ಶಕ್ತಿ ತುಂಬಿದಂತಾಗುವುದು.

Continue Reading

ವಿದೇಶ

Jai Shri Ram Slogan: ಪ್ಯಾಲೆಸ್ತೇನ್ ವಿರುದ್ಧ ಜೈಶ್ರೀರಾಮ್ ಘೋಷಣೆ ಕೂಗಿದ ಇಸ್ರೇಲ್ ಬೆಂಬಲಿಗರು!

Jai Shri Ram Slogan: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ ಕೂಗಿದ್ದಾರೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

VISTARANEWS.COM


on

Jai Shri Ram Slogan
Koo

ವಾಷಿಂಗ್ಟನ್‌: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (UCLA) ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ (Jai Shri Ram Slogan) ಕೂಗಿದ್ದಾರೆ.

ವಾರಾಂತ್ಯದಲ್ಲಿ ಯುಸಿಎಲ್ಎಯಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಇಸ್ರೇಲ್ ಪರ ಪ್ರತಿಭಟನಾಕಾರರ ನಡುವಿನ ಘರ್ಷಣೆಗಳು ತೀವ್ರಗೊಂಡಿದ್ದವು. ಬ್ಲೂಮಿಂಗ್ಟನ್‌ನ ಇಂಡಿಯಾನಾ ವಿಶ್ವವಿದ್ಯಾಲಯ, ಅರಿಜೋನಾ ಸ್ಟೇಟ್ ಯೂನಿವರ್ಸಿಟಿ ಮತ್ತು ಸೇಂಟ್ ಲೂಯಿಸ್‌ನ ವಾಷಿಂಗ್ಟನ್ ವಿಶ್ವವಿದ್ಯಾಲಯದಂತಹ ಇತರ ಕ್ಯಾಂಪಸ್‌ಗಳಲ್ಲಿಯೂ ಇದೇ ರೀತಿಯ ದೃಶ್ಯಗಳನ್ನು ಕಂಡು ಬಂದಿವೆ. ಇನ್ನು ಯುಸಿಎಲ್ಎಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಈ ಗೊಂದಲದ ಮಧ್ಯೆ ಅಮೆರಿಕದ ರಾಷ್ಟ್ರೀಯವಾದಿಯೊಬ್ಬರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವ ಮೂಲಕ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಈ ಘೋಷಣೆಯನ್ನು ಭಾರತದಲ್ಲಿ ಹಿಂದುಗಳಿಗೆ ಸಂಬಂಧಿಸಿದ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಕೂಗಲಾಗುತ್ತದೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

ಯುಸಿಎಲ್ಎಯ ಕಾರ್ಯತಂತ್ರದ ಸಂವಹನಗಳ ಉಪಕುಲಪತಿ ಮೇರಿ ಒಸಾಕೊ ಈ ಬಗ್ಗೆ ಮಾತನಾಡಿ, ʼʼಎರಡೂ ಕಡೆಯ ಪ್ರತಿಭಟನಾಕಾರರು ವಾಗ್ವಾದಗಳಲ್ಲಿ ತೊಡಗಿದ್ದರು. ಜತೆಗೆ ಘರ್ಷಣೆಯೂ ನಡೆಯಿತು. ಎರಡೂ ಕಡೆಯವರ ಘೋಷಣೆಗಳು ಮುಗಿಲು ಮುಟ್ಟಿದ್ದವುʼʼ ಎಂದು ವಿವರಿಸಿದ್ದಾರೆ. “ಯುಸಿಎಲ್ಎಯಲ್ಲಿ ಇದುವರೆಗೆ ಅನೇಕ ಶಾಂತಿಯುತ ಪ್ರತಿಭಟನೆ ನಡೆದಿದ್ದವು. ಆದರೆ ಇದೀಗ ಇಲ್ಲಿ ಭುಗಿಲೆದ್ದ ಹಿಂಸಾಚಾರ ತೀವ್ರ ನೋವುಂಟು ಮಾಡಿದೆʼʼ ಎಂದು ಹೇಳಿದ್ದಾರೆ.

ತೀವ್ರಗೊಂಡ ಪ್ರತಿಭಟನೆ

ಕಳೆದ ವಾರ ಅಮೆರಿಕದ ಕ್ಯಾಂಪಸ್‌ಗಳಲ್ಲಿ ವ್ಯಾಪಕವಾಗಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ನಡೆದವು. ಈ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯವೊಂದರಿಂದಲೇ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಯೇಲ್ ವಿಶ್ವವಿದ್ಯಾಲದಿಂದಲೂ ಅನೇಕರನ್ನು ವಶಕ್ಕೆ ಪಡೆಯಲಾಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದಲೂ ಪ್ರತಿಭಟನಾಕಾರರನ್ನು ಸೆರೆ ಹಿಡಿಯಲಾಗಿದೆ. ಆಸ್ಟಿನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿನ ಪ್ರತಿಭನಾಕಾರರನ್ನು ಬಲವಂತವಾಗಿ ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ಪ್ಯಾಲೆಸ್ತೀನ್‌ ವಿರುದ್ಧ ನಡೆಸುತ್ತಿರುವ ಯುದ್ಧವನ್ನು ಇಸ್ರೇಲ್ ನಿಲ್ಲಿಸಬೇಕು. ಇಸ್ರೇಲ್‌ಗೆ ಅಮೆರಿಕದ ಮಿಲಿಟರಿ ಸಹಾಯವನ್ನು ಕೊನೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಈ ರೀತಿಯ ಪ್ರತಿಭಟನೆಗಳು ಶಿಕ್ಷಣಕ್ಕೆ ಅಡ್ಡಿಪಡಿಸುತ್ತವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ ಅಧ್ಯಕ್ಷ ಜೋ ಬೈಡನ್ ಈ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prakash Raj: ಕಾಶ್ಮೀರವನ್ನು ಪ್ಯಾಲೆಸ್ತೀನ್‌ಗೆ ಹೋಲಿಸಿದ ಪ್ರಕಾಶ್‌ ರಾಜ್;‌ ಕೆಂಡವಾದ ಜನ

“ಜೋ ಬೈಡನ್ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸುತ್ತಾರೆ. ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ತಮ್ಮ ದೃಷ್ಟಿಕೋನಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು ಎನ್ನುವುದು ಅವರ ಅಭಿಪ್ರಾಯ. ಆದರೆ ಅದು ಶಾಂತಿಯುತವಾಗಿರಬೇಕು. ಜತೆಗೆ ಯಹೂದಿ ವಿರೋಧಿ ಮತ್ತು ದ್ವೇಷ ಭಾಷಣವನ್ನು ಅವರು ಖಂಡಿಸುತ್ತಾರೆʼʼ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ತಿಳಿಸಿದ್ದಾರೆ.

Continue Reading

ದೇಶ

Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

Viral Video: ಅಪಾರ್ಟ್‌ಮೆಂಟ್‌ವೊಂದರ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ನಾಯಿಯೊಂದು ಡೆಡ್ಲಿ ಅಟ್ಯಾಕ್‌ ಮಾಡಿದ್ದು, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

VISTARANEWS.COM


on

Koo

ಉತ್ತರಪ್ರದೇಶ: ಕೆಲವು ದಿನಗಳ ಹಿಂದೆ ಪಿಟ್‌ಬುಲ್‌ ನಾಯಿ ದಾಳಿ(Viral Video)ಯಿಂದ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಬೆನ್ನಲ್ಲೇ ಉತ್ತರಪ್ರದೇಶ(Uttar Pradesh)ದ ಗಾಜಿಯಾಬಾದ್‌ನಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್‌(Apartment)ವೊಂದರ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌(German Shepherd) ನಾಯಿಯೊಂದು ಡೆಡ್ಲಿ ಅಟ್ಯಾಕ್‌(Dog attack) ಮಾಡಿದ್ದು, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್‌ ಆಗಿದೆ

ಏನಿದು ಘಟನೆ?

ಅಂಜರಾ ಇಂಟಿಗ್ರಿಟಿ ಸೊಸೈಟಿ ಎಂಬ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಸೈಕಲ್‌ನಲ್ಲಿ ಆಟ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಅಲ್ಲೇ ಇದ್ದ ಜರ್ಮನ್‌ ಶಫರ್ಡ್‌ ನಾಯಿ ಏಕಾಏಕಿ ದಾಳಿ ನಡೆಸಿ, ಆಕೆ ತೋಳನ್ನು ಕಚ್ಚಿದೆ. ತಕ್ಷಣ ಅಲ್ಲೇ ಇದ್ದ ಬಾಲಕಿಯ ತಾಯಿ ಓದಿ ಬಂದು ನಾಯಿಯನ್ನು ಓಡಿಸಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ ಆಕೆಯ ಸಹಾಯಕ್ಕೆ ಬರುತ್ತಾರೆ. ಘಟನೆಯಲ್ಲಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಇನ್ನು ಸ್ಥಳದಲ್ಲಿ ಅನೇಕ ಮಕ್ಕಳು ಆಟವಾಡುತ್ತಿರುರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಘಟನೆ ಬೆನ್ನಲ್ಲೇ ಬಾಲಕಿ ತಾಯಿ ನಮಿತಾ ಚೌಹಾಣ್‌ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ನಾಯಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಯಿಯನ್ನು ಹೊರ ಕರೆತರುವ ವೇಳೆ ಅದರ ಬಾಯಿಗೆ ಯಾವುದೇ ಕವಚ ಹಾಕಿರಲಿಲ್ಲ. ಮುಂದಿನ ದಿನಗಳಲ್ಲಿ ಇಂಥಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಜರುಗಿಸಬೇಕು. ಅಲ್ಲದೇ ಅಪಾರ್ಟ್‌ಮೆಂಟ್‌ನಲ್ಲಿ ಆ ನಾಯಿಯನ್ನು ಸಾಕದಂತೆ ನಿಯಮ ಜಾರಿಗೊಳಿಸಬೇಕು ಎಂದು ನಮಿತಾ ಆಗ್ರಹಿಸಿದ್ದಾರೆ.

ಗಾಜಿಯಾಬಾದ್‌ನಲ್ಲಿ ಎರಡು ವಾಗಳ ಹಿಂದೆ ಬಾಲಕನೊಬ್ಬನ ಮೇಲೆ ಪಿಟ್‌ಬುಲ್‌ ತಳಿಯ ನಾಯಿಯೊಂದು ದಾಳಿ ನಡೆಸಿದ್ದ ವಿಡಿಯೋ ವೈರಲ್‌ ಆಗಿತ್ತು. 15 ವರ್ಷದ ಅಲ್ತಾಫ್‌ ಎಂಬ ಬಾಲಕ ನಡೆದುಕೊಂಡು ಹೋಗುತ್ತಿದ್ದಾಗ ಪಿಟ್‌ಬುಲ್ ದಾಳಿ ನಡೆಸುತ್ತದೆ. ಇನ್ನೇನು ತನ್ನ ಮನೆಯ ಗೇಟ್‌ ತೆರೆಯಬೇಕು ಎನ್ನುವಷ್ಟರಲ್ಲಿ ಆತನ ಮೇಲೆ ಈ ಆಕ್ರಮಣ ನಡೆದಿತ್ತು. ಅನಿರೀಕ್ಷಿತ ಆಘಾತದಿಂದ ಆತ ನಿಯಂತ್ರಣ ತಪ್ಪಿ ನೆಲದ ಮೇಲೆ ಬೀಳುತ್ತಾನೆ. ಜನರು ನೋಡುತ್ತಿದ್ದರೂ ಭಯದಿಂದಾಗಿ ಯಾರೂ ಆತನನ್ನು ರಕ್ಷಿಸಲು ಮುಂದೆ ಬರಲಿಲ್ಲ. ಮೇಲಿನ ಮನೆಯವರು ನಾಯಿ ಮೇಲೆ ನೀರು ಸುರಿದರೂ ಅದು ಶಾಂತವಾಗಲಿಲ್ಲ

ನೆಲದಲ್ಲಿ ಬಿದ್ದು ಒದ್ದಾಡುತ್ತಿದ್ದ ಅಲ್ತಾಫ್‌ ಕೊನೆಗೂ ಅದರಿಂದ ತಪ್ಪಿಸಿಕೊಂಡು ಗೇಟ್‌ ಬಳಿಗೆ ಓಡುತ್ತಾನೆ. ಅವನನ್ನು ಹಿಂಬಾಲಿಸಿಕೊಂಡು ಪಿಟ್‌ಬುಲ್‌ ಕೂಡ ಬರುತ್ತದೆ. ನಾಯಿ ಮತ್ತೆ ದಾಳಿ ಮಾಡುತ್ತದೆ. ಆಗಲೇ ಅಲ್ಲಿದ್ದ ಬೀದಿ ನಾಯಿಗಳು ತಕ್ಷಣ ಧಾವಿಸಿ ಬಂದು ಪಿಟ್​ಬುಲ್‌ ಅನ್ನು ಕಚ್ಚಿ ಎಳೆದು ಹೊರ ಹಾಕುತ್ತವೆ. ಇದರಿಂದ ಬಾಲಕ ಸುಲಭವಾಗಿ ತಪ್ಪಿಸಿಕೊಂಡು ಮನೆಯ ಒಳಗೆ ತೆರಳಿತ್ತಾನೆ. ಈ ಮಧ್ಯೆ ಪಿಟ್‌ಬುಲ್‌ನನ್ನು ಓಡಿಸಲು ನೆರೆ ಮನೆಯ ಯುವಕನೊಬ್ಬ ಕೋಲು ಹಿಡಿದು ಮುಂದೆ ಬರುತ್ತಾನೆ. ಬಾಲಕ ತಪ್ಪಿಸಿಕೊಂಡ ರೋಷದಲ್ಲಿ ಅದು ಆತನ ಮೇಲೆ ಎರಗಲು ಮುಂದಾಗುತ್ತದೆ. ಅದೃಷ್ಟವಶಾತ್‌ ಆತ ತಪ್ಪಿಸಿಕೊಂಡು ಮನೆಯೊಳಗೆ ಸೇರಿ ಬಾಗಿಲು ಹಾಕಿಕೊಂಡು ಬಚಾವಾಗುತ್ತಾನೆ.

ಇದನ್ನೂ ಓದಿ:Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

ಕೆಲವು ದಿನಗಳ ಹಿಂದೆಯಷ್ಟೇ ಪಿಟ್‌ಬುಲ್‌ ಹೊಂದಿದ್ದ ಕುಟುಂಬ ಗಾಜಿಯಾಬಾದ್‌ಗೆ ಆಗಮಿಸಿತ್ತು. ಸದ್ಯ ಈ ನಾಯಿಯನ್ನು ಮುನ್ಸಿಪಲ್ ಕಾರ್ಪೊರೇಷನ್ ವಶಪಡಿಸಿಕೊಂಡಿದೆ. ಈ ರೀತಿಯ ನಾಯಿಯನ್ನು ಸಾಕುವುದಕ್ಕೆ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಆದರೂ ಮನೆಯವರು ನಮ್ಮ ಮಾತನ್ನು ಕೇಳಿರಲಿಲ್ಲ ಎಂದು ನೆರೆಮನೆಯವರು ತಿಳಿಸಿದ್ದಾರೆ.

Continue Reading
Advertisement
IPL 2024
ಪ್ರಮುಖ ಸುದ್ದಿ4 mins ago

IPL 2024 : ಅತಿ ವೇಗದ ಬೌಲರ್​ ಮಾಯಾಂಕ್​ ಯಾದವ್​ಗೆ ಮತ್ತೆ ಗಾಯ?

labour Day
ಪ್ರಮುಖ ಸುದ್ದಿ58 mins ago

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Parliament Flashback
Lok Sabha Election 20241 hour ago

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Viral Video
ವೈರಲ್ ನ್ಯೂಸ್1 hour ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Prime Minister Narendra Modi wrote a letter to former CM Basavaraj Bommai
ಕರ್ನಾಟಕ1 hour ago

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Labour Day 2024
ದೇಶ1 hour ago

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

State government conspiracy behind Prajwal Hassan Pen Drive Case says HD Kumaraswamy
ಕ್ರೈಂ2 hours ago

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Karnataka Weather
ಕರ್ನಾಟಕ2 hours ago

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

IPL 2024
ಪ್ರಮುಖ ಸುದ್ದಿ2 hours ago

IPL 2024 : ಗುಜರಾತ್​ ಟೀಮ್​ನಲ್ಲಿ ಬುಮ್ರಾ 2.0; ಕನ್ನಡಿಗನ ಬೌಲಿಂಗ್​ ಶೈಲಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​

Rescue of a boy who drowned at Malpe beach Two boys die after taking bath in Sindagi
ಕ್ರೈಂ2 hours ago

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ17 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌