Viral News : ಪತ್ನಿಯ ಋತುಸ್ರಾವದ ರಕ್ತ ಮಾಟಮಂತ್ರಕ್ಕಾಗಿ 50 ಸಾವಿರ ರೂ.ಗೆ ಮಾರಾಟ! - Vistara News

ವೈರಲ್ ನ್ಯೂಸ್

Viral News : ಪತ್ನಿಯ ಋತುಸ್ರಾವದ ರಕ್ತ ಮಾಟಮಂತ್ರಕ್ಕಾಗಿ 50 ಸಾವಿರ ರೂ.ಗೆ ಮಾರಾಟ!

ಮಹಾರಾಷ್ಟ್ರದಲ್ಲಿ ಮಹಿಳೆಯೊಬ್ಬಳ ಬಳಿ ಋತುಸ್ರಾವದ ರಕ್ತ ಕೊಡುವುದಕ್ಕೆ ಆಕೆಯ ಪತಿ ಮತ್ತು ಅತ್ತೆ ಮಾವ ಹಿಂಸೆ ನೀಡಿರುವ ಘಟನೆ (Viral News) ವರದಿಯಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಹೆಣ್ಣು ಮಕ್ಕಳ ಮೇಲಿನ ಶೋಷಣೆ ಈಗಲೂ ಎಷ್ಟೋ ಕಡೆಗಳಲ್ಲಿ ನಡೆಯುತ್ತಿದೆ. ಕೌಟುಂಬಿಕ ಹಲ್ಲೆಗಳೂ ವರದಿಯಾಗುತ್ತಿರುತ್ತವೆ. ಅದೇ ರೀತಿ ಇದೀಗ ಮಹಾರಾಷ್ಟ್ರದ ಪುಣೆಯಲ್ಲಿ 27 ವರ್ಷದ ಮಹಿಳೆಯೊಬ್ಬಳು ತನ್ನ ಪತಿ ಮತ್ತು ಅತ್ತೆ ಮಾವನ ವಿರುದ್ಧ ದೈಹಿಕ, ಮಾನಸಿಕ ಹಿಂಸೆಯ ದೂರು ದಾಖಲಿಸಿದ್ದಾರೆ. ತಮ್ಮ ಋತುಸ್ರಾವದ ರಕ್ತವನ್ನು ಮಾರಾಟ ಮಾಡಲು ಕೊಡುವಂತೆ ಅವರು ಹಿಂಸೆ ನೀಡಿದ್ದಾಗಿ ಮಹಿಳೆ (Viral News) ಹೇಳಿದ್ದಾರೆ.

ಇದನ್ನೂ ಓದಿ: Viral News: ವ್ಯಕ್ತಿಯ ಹೊಟ್ಟೆಯಿಂದ ವೋಡ್ಕಾ ಬಾಟಲಿ ತೆಗೆದ ವೈದ್ಯರು, ಬಾಟಲಿ ಹೊಟ್ಟೆ ಸೇರಿದ್ದೇ ರೋಚಕ ಕತೆ
ಮಹಾರಾಷ್ಟ್ರದ ಬೀಡ್‌ ಜಿಲ್ಲೆಯವರಾಗಿರುವ ಮಹಿಳೆಗೆ 2019ರಿಂದಲೂ ಪತಿ ಮತ್ತು ಅತ್ತೆ ಮಾವ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದಾರಂತೆ. 2022ರ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಆಕೆ ಋತುಸ್ರಾವದಿಂದ ಬಳಲುತ್ತಿದ್ದರು. ಆ ವೇಳೆ ಪತಿ ಮತ್ತು ಅತ್ತೆ ಮಾವ ಮಾಟ ಮಂತ್ರದ ಪೂಜೆಗೆಂದು ಋತುಸ್ರಾವದ ರಕ್ತವನ್ನು ಕೊಡುವಂತೆ ಆಕೆಯನ್ನು ಪೀಡಿಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಇಷ್ಟು ದಿನ ಪತಿಯ ಮನೆಯಲ್ಲಿದ್ದ ಮಹಿಳೆ ಇತ್ತೀಚೆಗೆ ಪುಣೆಯಲ್ಲಿರುವ ತಾಯಿ ಮನೆಗೆ ಬಂದಿದ್ದು, ಅಲ್ಲಿ ಪೊಲೀಸ್‌ ದೂರು ದಾಖಲಿಸಿದ್ದಾರೆ.

ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣವನ್ನು ಬೀಡ್‌ ಜಿಲ್ಲೆಗೆ ಹಸ್ತಾಂತರಿಸಲಾಗಿರುವುದಾಗಿಯೂ ತಿಳಿಸಲಾಗಿದೆ.

ಈ ಪ್ರಕರಣದ ಬಗ್ಗೆ ಮಹಾರಾಷ್ಟ್ರದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್‌ ಖಂಡನೆ ವ್ಯಕ್ತಪಡಿಸಿದ್ದಾರೆ. “ಆರೋಪಿಗಳು ಅಘೋರಿ ಪೂಜೆಗೆಂದು ರಕ್ತವನ್ನು ತೆಗೆದುಕೊಂಡು ಅದನ್ನು 50,000 ರೂ.ಗೆ ಮಾರಾಟ ಮಾಡಿದ್ದಾರೆ. ಇದು ಮಾನವೀಯತೆಗೆ ಮಸಿ ಬಳಿಯುವ ಘಟನೆ. ಪುಣೆಯಂತಹ ಪ್ರಗತಿಪರ ನಗರಗಳಲ್ಲಿ ಮಹಿಳೆಯರು ಇನ್ನೂ ಇಂತಹ ಅಪರಾಧಗಳಿಗೆ ಬಲಿಯಾಗುತ್ತಿರುವುದು ಆಘಾತಕಾರಿಯಾಗಿದೆ. ಇಂತಹ ಅಪರಾಧಗಳಿಂದ ಮಹಿಳೆಯರನ್ನು ರಕ್ಷಿಸಲು ಮತ್ತು ಸಮಾಜದಲ್ಲಿ ಅವರನ್ನು ಮತ್ತಷ್ಟು ಬಲಪಡಿಸಲು ಇನ್ನೂ ಎಷ್ಟು ಹೋರಾಟದ ಅಗತ್ಯವಿದೆ ಎಂಬ ಪ್ರಶ್ನೆಯಿದೆ. ರಾಜ್ಯ ಮಹಿಳಾ ಆಯೋಗವು ಈ ಘಟನೆಯನ್ನು ಗಮನಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video : ಮಾರುದ್ದದ ವಿಷಕಾರಿ ಹಾವನ್ನು ಕೈನಲ್ಲಿ ಹಿಡಿದು ವಿಡಿಯೊ ಮಾಡಿದ ವ್ಯಕ್ತಿ; ಇಲ್ಲಿದೆ ನೋಡಿ ವೈರಲ್‌ ವಿಡಿಯೊ
ಈ ರೀತಿ ಅಘೋರಿ ಪೂಜೆ ಪ್ರಕರಣ ವರದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2022ರಲ್ಲಿ ಮಹಿಳೆಯೊಬ್ಬಳಿಗೆ ಆಕೆಯ ಪತಿ ಮತ್ತು ಅತ್ತೆ ಮಾವ ಮನುಷ್ಯನ ಮಾಂಸ ಮತ್ತು ಮೂಳೆಯನ್ನು ತಿನ್ನುವಂತೆ ಒತ್ತಾಯಿಸಿದ್ದ ಘಟನೆ ವರದಿಯಾಗಿತ್ತು. ಮಗು ಪಡೆಯುವುದಕ್ಕಾಗಿ ಆ ಪೂಜೆ ಮಾಡಿದ್ದಾಗಿ ಹೇಳಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಶಾಕಿಂಗ್‌ ವಿಡಿಯೊ; ಹಾವು ಕಚ್ಚಿದ್ದ ಯುವಕ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ನೇತಾಡಿಸಿದರು!

Viral News: ಆಧುನಿಕ ಯುಗ, ವೈಜ್ಞಾನಿಕ ಯುಗದಲ್ಲಿ ನಾವಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಇದೇ ವೇಳೆ ಕೆಲವೊಮ್ಮೆ ಮೂಢ ನಂಬಿಕೆ ಆಚರಣೆ ನಾವು ತಲೆ ತಗ್ಗಿಸುವಂತೆ ಮಾಡುತ್ತದೆ. ಅದಕ್ಕೆ ;ಜ್ವಲಂತ ಉದಾಹರಣೆ ಇಲ್ಲಿದೆ. ಹಾವು ಕಚ್ಚಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಗುಣಮುಖನಾಗಲೆಂದು ಆತನ ದೇಹವನ್ನು ಎರಡು ದಿನಗಳ ಕಾಲ ಗಂಗಾ ನದಿಯಲ್ಲಿ ನೇತಾಡಿಸಲಾಗಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral News
Koo

ಲಕ್ನೋ: ವೈಜ್ಞಾನಿಕವಾಗಿ ನಮ್ಮ ದೇಶ ಸಾಕಷ್ಟು ಮುಂದುವರಿದಿದೆ. ಕೋಟ್ಯಂತರ ಕಿ.ಮೀ. ದೂರ ಇರುವ ಚಂದ್ರನಲ್ಲಿಗೆ ರಾಕೆಟ್‌ ಕಳಿಸುದ್ದೇವೆ. ಭೂ ಗರ್ಭದಲ್ಲಿ ಏನೇನಿದೆ ಎನ್ನುವುದನ್ನು ಶೋಧಿಸಿದ್ದೇವೆ. ಹಾಗಿದ್ದರೂ ಕೆಲವೆಡೆ ಇನ್ನೂ ಮೂಢ ನಂಬಿಕೆ ಎನ್ನುವುದು ತಾಂಡವವಾಡುತ್ತಿದೆ ಎನ್ನುವುದು ವಿಷಾಧನೀಯ. ನಂಬಿಕೆ ಮತ್ತು ಮೂಢ ನಂಬಿಕೆ ಎನ್ನುವುದರ ನಡುವಿನ ಗೆರೆ ತೀರಾ ತೆಳುವಾದುದು. ಯಾರದೋ ಮಾತು ನಂಬಿ, ಅಸಾಧ್ಯವಾದುದನ್ನು ಸಾಧ್ಯವೆಂದು ನಂಬಿ ಮೌಢ್ಯ ಆಚರಣೆಯಲ್ಲಿ ತೊಡಗಿರುವವರು ಈಗಲೂ ಇದ್ದಾರೆ. ಇಷ್ಟೆಲ್ಲ ಯಾಕೆ ಹೇಳುತ್ತಿದ್ದೇವೆ ಎಂದರೆ ಉತ್ತರ ಪ್ರದೇಶದಲ್ಲಿ ಹಾವು ಕಚ್ಚಿದ ಯುವಕ ಗುಣಮುಖನಾಗಲೆಂದು ಎರಡು ದಿನಗಳ ಕಾಲ ಗಂಗಾ ನದಿಯಲ್ಲಿ ಆತನನ್ನು ನೇತಾಡಿಸಲಾಗಿದೆ. ಶರೀರದಲ್ಲಿರುವ ವಿಷ ಇಳಿದು ಆತ ಜೀವಂತವಾಗಿ ಎದ್ದು ಬರುತ್ತಾನೆ ಎನ್ನುವ ಮೂಢ ನಂಬಿಕೆಯೇ ಇದಕ್ಕೆ ಕಾರಣ (Viral News).

ಘಟನೆ ಹಿನ್ನೆಲೆ

ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಜೈರಾಮ್‌ಪುರ ಕುಡೇನಾ ಗ್ರಾಮದ, 20 ವರ್ಷದ ಮೋಹಿತ್‌ ಕುಮಾರ್‌ಗೆ ವಿಷದ ಹಾವು ಕಚ್ಚಿತ್ತು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರು ಚಿಕಿತ್ಸೆ ಮುಂದುವರಿಸಿದರೂ ಆರೋಗ್ಯ ಸುಧಾರಿಸಿರಲಿಲ್ಲ. ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ವೈದ್ಯರೂ ಕೈ ಚೆಲ್ಲಿದ್ದರು. ಕೊನೆಗೆ ಆತನ ಕುಟುಂಬ ಸ್ಥಳೀಯ ಚಿಕಿತ್ಸಕನ ಮೊರೆ ಹೋಯಿತು. ಆತ ಸೂಚಿಸಿದ ವಿಧಾನವೇ ಈ ಗಂಗಾ ಚಿಕಿತ್ಸೆ.

ಯುವಕನ ಶರೀರವನ್ನು ಹಗ್ಗದಲ್ಲಿ ಕಟ್ಟಿ ಗಂಗಾ ನದಿಯಲ್ಲಿ ನೇತಾಡಿಸುವಂತೆ ಸ್ಥಳೀಯ ಚಿಕಿತ್ಸಕ ಸಲಹೆ ನೀಡಿದ್ದ. ಇದರಿಂದ ಯುವಕನ ಶರೀರದೊಳಕ್ಕೆ ಸೇರಿದ್ದ ವಿಷವೆಲ್ಲ ಇಳಿದು ಹೋಗಿ ಆತ ಮೊದಲಿನಂತಾಗುತ್ತಾನೆ ಎಂದು ತಿಳಿಸಿದ್ದ. ಅದರಂತೆ ಕುಟುಂಬಸ್ಥರು ಹರಿಯುವ ನದಿಯಲ್ಲಿ ಮೋಹಿತ್‌ ಕುಮಾರ್‌ನ ಶರೀರವನ್ನು ಅರ್ಧ ಮುಳುಗುವಂತೆ ನೇತಾಡಿಸಿದ್ದರು. ಸುಮಾರು ಎರಡು ದಿನಗಳ ಕಾಲ ಈ ʼಚಿಕಿತ್ಸೆʼ ಮುಂದುವರಿದಿತ್ತು. ಸದ್ಯ ಆತ ಮೃತಪಟ್ಟಿದ್ದಾನೆ. ಈ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿದೆ.

ನೆಟ್ಟಿಗರು ಹೇಳಿದ್ದೇನು?

ವಿಡಿಯೊ ನೋಡಿದ ನೆಟ್ಟಿಗರಿಗೆ ತಮ್ಮ ಕಣ್ಣುಗಳನ್ನೇ ನಂಬಲಾಗಲಿಲ್ಲ. ಅನೇಕರು ಈ ಶಾಕ್‌ನಿಂದ ಇನ್ನೂ ಹೊರ ಬಂದಿಲ್ಲ. ಈ ಆಚರಣೆಯ ಹಿಂದಿನ ವೈಜ್ಞಾನಿಕತೆಯನ್ನು ಹಲವರು ಪ್ರಶ್ನಿಸಿದ್ದಾರೆ. ʼʼವಿಜ್ಞಾನಮುಕ್ತ ಭಾರತಕ್ಕೆ ಸ್ವಾಗತʼʼ ಎಂದು ಒಬ್ಬರು ವ್ಯಂಗ್ಯವಾಡಿದ್ದಾರೆ. ʼʼಹಾವಿನ ವಿಷ ಹೇಗೆ ಶರೀರಕ್ಕೆ ಸೇರಿಕೊಳ್ಳುತ್ತದೆ ಮತ್ತು ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದನ್ನು ಶಾಲೆಗಳ ಪಠ್ಯದಲ್ಲಿ ಸೇರಿಸಬೇಕು. ಇದರಿಂದ ಇಂತಹ ಅನಾಚಾರಗಳನ್ನು ನಿಯಂತ್ರಿಸಬಹುದುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಅತ್ಯಂತ ನಾಚೆಕೆಗೇಡಿನ ಸಂಗತಿ. ಇದನ್ನು ಸೂಚಿಸಿದ ಸ್ಥಳೀಯ ಚಿಕಿತ್ಸಿಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼʼ ಎಂದು ಮತ್ತೊಬ್ಬರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್‌ ತೊಲಗಲಿ ಎಂದು ಮಗನನ್ನು ಗಂಗಾ ನದಿಯಲ್ಲಿ ಮುಳುಗಿಸಿದ ತಾಯಿ, ಬಾಲಕ ಸಾವು; Video ಇದೆ

ಕೆಲವು ದಿನಗಳ ಹಿಂದೆಯೂ ಇಂತಹದ್ದೆ ಘಟನೆ ನಡೆದಿತ್ತು. ಮಹಿಳೆಯೊಬ್ಬಳು ತನ್ನ ಕ್ಯಾನ್ಸರ್‌ ಪೀಡಿತ 4 ವರ್ಷದ ಮಗ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ಮುಳುಗಿಸಿದ್ದಳು. ಈ ವೇಳೆ ಬಾಲಕ ಉಸಿರುಗಟ್ಟಿ ಮೃತಪಟ್ಟಿದ್ದ.

Continue Reading

ವಿದೇಶ

Kim Jong Un: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಸುಖಕ್ಕೆ ಬೇಕು ಪ್ರತಿ ವರ್ಷ 25 ಹುಡುಗಿಯರು! ಏನಿದು ಆಹ್ಲಾದ ತಂಡ?

Kim Jong Un: ಸದಾ ವಿವಾದಗಳಿಂದಲೇ ಸುದ್ದಿಯಾಗುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಕುರಿತಾದ ಇನ್ನೊಂದು ಬೆಚ್ಚಿ ಬೀಳಿಸುವ ಸಂಗತಿ ಹೊರ ಬಿದ್ದಿದೆ. ಕಿಮ್‌ ಜಾಂಗ್‌ ಉನ್‌ ಪ್ರತಿ ವರ್ಷ ತನ್ನ ʼಆಹ್ಲಾದ ತಂಡʼಕ್ಕಾಗಿ 25 ಹುಡುಗಿಯರನ್ನು ಆರಿಸಿಕೊಳ್ಳುತ್ತಾನೆ ಎಂದು ಉತ್ತರ ಕೊರಿಯಾದಿಂದ ತಪ್ಪಿಸಿಕೊಂಡಿರುವ ಯುವತಿಯೊಬ್ಬಳು ತಿಳಿಸಿದ್ದಾಳೆ. ಶಾಲೆಯಲ್ಲಿ ಓದುತ್ತಿರುವ ಚಂದದ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿ ಅವರನ್ನು ಸರ್ವಾಧಿಕಾರಿಯ ಲೈಂಗಿಕ ಬಯಕೆಯನ್ನು ತೀರಿಸಲು ಬಳಸಲಾಗುತ್ತದೆ ಎಂದು ಯುವತಿ ವಿವರಿಸಿದ್ದಾಳೆ.

VISTARANEWS.COM


on

Kim Jong Un
Koo

ಫ್ಯೊಂಗ್ಯಾಂಗ್‌: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ (Kim Jong Un) ಬಗ್ಗೆ ವಿವಿಧ ಕಥೆಗಳನ್ನು ಕೇಳಿದ್ದೇವೆ. ಇದೀಗ ಆ ದೇಶದ ಯುವತಿಯೊಬ್ಬಳು ಬೆಚ್ಚಿ ಬೀಳಿಸುವ ಘೋರ ಸಂಗತಿಯೊಂದನ್ನು ಬಹಿರಂಗಪಡಿಸಿದ್ದಾಳೆ. ಕಿಮ್‌ ಜಾಂಗ್‌ ಉನ್‌ ಪ್ರತಿ ವರ್ಷ ತನ್ನ ʼಆಹ್ಲಾದ ತಂಡʼ (Pleasure Squad)ಕ್ಕಾಗಿ 25 ಹುಡುಗಿಯರನ್ನು ಆರಿಸಿಕೊಳ್ಳುತ್ತಾನೆ ಎಂದು ಉತ್ತರ ಕೊರಿಯಾದಿಂದ ತಪ್ಪಿಸಿಕೊಂಡಿರುವ ಈ ಯುವತಿ ಹೇಳಿದ್ದಾಳೆಂದು ವರದಿಯೊಂದು ತಿಳಿಸಿದೆ. ವಿಶೇಷವೆಂದರೆ ಹುಡುಗಿಯರನ್ನು ಅವರ ರೂಪ ಮತ್ತು ರಾಜಕೀಯ ನಿಷ್ಠೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದೂ ಯುವತಿ ವಿವರಿಸಿದ್ದಾಳೆ.

ಕಿಮ್‌ನ ಈ ಆಹ್ಲಾದ ತಂಡಕ್ಕಾಗಿ ಅವರನ್ನು ತನ್ನನ್ನು ಎರಡು ಬಾರಿ ಪರಿಗಣಿಸಿದ್ದರು. ಆದರೆ ತನ್ನ ಕುಟುಂಬದ ಸ್ಥಾನಮಾನದಿಂದಾಗಿ ಆಯ್ಕೆಯಾಗಿರಲಿಲ್ಲ ಎಂಬ ವಿಚಾರವನ್ನೂ ಆಕೆ ತಿಳಿಸಿದ್ದಾಳೆ.

ಆಯ್ಕೆ ಹೇಗೆ?

ಇನ್ನು ಈ ಕರಾಳ ಸಂಗತಿಯನ್ನು ಯುವತಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಕಿಮ್‌ ಜಾಂಗ್‌ ಉನ್‌ ತಂಡದ ಸದಸ್ಯರು ಶಾಲೆಗಳಿಗೆ ತೆರಳಿ ಚಂದದ ಹುಡುಗಿಯರನ್ನು ಹುಡುಕುತ್ತಾರೆ. ಒಂದಷ್ಟು ಜನರನ್ನು ಆಯ್ಕೆ ಮಾಡುವ ಅವರು ಬಳಿಕ ಆ ಹುಡುಗಿಯರ ಕುಟುಂಬದ ಸ್ಥಿತಿ ಮತ್ತು ರಾಜಕೀಯ ನಿಲುವುಗಳನ್ನು ಶೋಧಿಸುತ್ತಾರೆ. ಹೀಗೆ ಪರಿಶೀಲಿಸುವ ವೇಳೆ ಉತ್ತರ ಕೊರಿಯಾದಿಂದ ತಪ್ಪಿಸಿಕೊಂಡು ಬಂದ ಕುಟುಂಬಕ್ಕೆ ಸೇರಿದ ಮತ್ತು ದಕ್ಷಿಣ ಕೊರಿಯಾ ಅಥವಾ ಇತರ ದೇಶಗಳಲ್ಲಿ ಸಂಬಂಧಿಕರು ಹೊಂದಿರುವ ಹುಡುಗಿಯರನ್ನು ಕೈಬಿಡಲಾಗುತ್ತದೆ ಎಂದು ಹೇಳಿದ್ದಾಳೆ.

ಕನ್ಯತ್ವ ಪರೀಕ್ಷೆ

ಎಲ್ಲ ಕೂಲಂಕುಷವಾಗಿ ಪರಿಶೀಲಿಸಿದ ನಂತರ ಉಳಿದುಕೊಳ್ಳುವ ಹುಡುಗಿಯರ ಕನ್ಯತ್ವ ಪರೀಕ್ಷಿಸಲು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಈ ವೇಳೆ ಸಣ್ಣ ಗಾಯ ಕಂಡು ಬಂದರೂ ಆಕೆಯನ್ನು ಕೈ ಬಿಡಲಾಗುತ್ತದೆ. ಹೀಗೆ ಹಲವು ಕಠಿಣ ಹಂತಗಳನ್ನು ದಾಟಿದ ಹುಡುಗಿಯರ ಪೈಕಿ ಕೆಲವರನ್ನು ಫ್ಯೊಂಗ್ಯಾಂಗ್‌ಗೆ ಕಳುಹಿಸಲಾಗುತ್ತದೆ. ಅಲ್ಲಿ ಅವರು ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ನ ಎಲ್ಲ ಆಸೆಗಳನ್ನು ಪೂರೈಸಬೇಕಾಗುತ್ತದೆ ಎಂದು ಯುವತಿ ತಿಳಿಸಿದ್ದಾಳೆ.

ಮೂರು ಗುಂಪು

ಆಯ್ಕೆಯಾದ ಹುಡುಗಿಯರನ್ನು ಮೂರು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಒಂದು ತಂಡಕ್ಕೆ ಮಸಾಜ್‌ ತರಬೇತಿ ನೀಡಿದರೆ ಇನ್ನೊಂದು ಗುಂಪಿಗೆ ಹಾಡು ಮತ್ತು ನೃತ್ಯವನ್ನು ಹೇಳಿಕೊಡಲಾಗುತ್ತದೆ. ಮೂರನೇ ತಂಡ ಸರ್ವಾಧಿಕಾರಿ ಮತ್ತು ಆತನ ಆಪ್ತರಿಗೆ ಲೈಂಗಿಕವಾಗಿ ಸಹಕರಿಸಬೇಕು. ಅವರು ಸರ್ವಾಧಿಕಾರಿ ಮತ್ತು ಇತರ ಪುರುಷರ ಲೈಂಗಿಕ ವಾಂಛೆಗೆ ಸಹಕರಿಸಬೇಕು. ಪುರುಷರನ್ನು ಹೇಗೆ ಮೆಚ್ಚಿಸಬೇಕು ಎನ್ನುವುದನ್ನು ಅವರಿಗೆ ಕಲಿಸಲಾಗುತ್ತದೆ ಎಂದು ಯುವತಿ ವಿವರಿದ್ದಾಳೆ.

ಇದನ್ನೂ ಓದಿ: Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

ಅತ್ಯಂತ ಆಕರ್ಷಕ ಹುಡುಗಿಯರನ್ನು ಸರ್ವಾಧಿಕಾರಿಯ ಸೇವೆ ಮಾಡಲು ಆಯ್ಕೆ ಮಾಡಿದರೆ, ಇತರರನ್ನು ಕೆಳದರ್ಜೆಯ ಜನರಲ್‌ಗಳು ಮತ್ತು ರಾಜಕಾರಣಿಗಳನ್ನು ತೃಪ್ತಿಪಡಿಸಲು ನಿಯೋಜಿಸಲಾಗುತ್ತದೆ. ವಿಶೇಷ ಎಂದರೆ ಹುಡುಗಿಯರ ವಯಸ್ಸು ಇಪ್ಪತ್ತು ದಾಟಿದ ನಂತರ ಅವರನ್ನು ತಂಡದಿಂದ ಕೈ ಬಿಡಲಾಗುತ್ತದೆ. ಆ ಪೈಕಿ ಕೆಲವರು ಬಾಡಿಗಾರ್ಡ್‌ ಅನ್ನು ಮದುವೆಯಾಗುತ್ತಾರೆ. ಈ ʼಆಹ್ಲಾದ ತಂಡʼ ಕಿಮ್ ಜಾಂಗ್ ಉನ್‌ನ ತಂದೆ ಕಿಮ್ ಜಾಂಗ್-2 ಕಾಲದಲ್ಲಿಯೇ ಇತ್ತು. ಅವರು ಹೀಗೆ ಲೈಂಗಿಕ ಸಂಬಂಧ ಹೊಂದುವುದು ಅಮರತ್ವವನ್ನು ನೀಡುತ್ತದೆ ಎಂದು ನಂಬಿದ್ದರು ಎಂದು ಯುವತಿ ಕರಾಳ ದಂಧೆಯ ಮೇಲೆ ಬೆಳಕು ಚೆಲ್ಲಿದ್ದಾಳೆ. ಕಿಮ್ ಜಾಂಗ್-2 2011ರಲ್ಲಿ ತಮ್ಮ 70ನೇ ವಯಸ್ಸಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು.

Continue Reading

ವೈರಲ್ ನ್ಯೂಸ್

Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

Viral News: ಕೇರಳ ಪ್ರವಾಸೋದ್ಯಮ ಇಲಾಖೆಯು ಬಸ್ ಬ್ರ್ಯಾಂಡಿಂಗ್ ಮೂಲಕ ಕೇರಳದ ಹಿರಿಮೆಯನ್ನು ವಿದೇಶಗಳಲ್ಲಿ ಪಸರಿಸಲು ಮುಂದಾಗಿದೆ. ದೂರದ ಇಂಗ್ಲೆಂಡ್‌ನಲ್ಲಿ ಇದೀಗ ಕೇರಳದ ಪ್ರಾಕೃತಿಕ ಸೌಂದರ್ಯ ಬಹು ಜನಪ್ರಿಯ. ಅದಕ್ಕೆ ಕಾರಣವಾಗಿದ್ದು ಲಂಡನ್‌ನ ಡಬಲ್ ಡೆಕ್ಕರ್ ಬಸ್‌ನ ಅಲಂಕರಿಸಿರುವ ಕೇರಳದ ಅದ್ಭುತ ದೃಶ್ಯಗಳು. ಸದ್ಯ ಬಸ್‌ ರಸ್ತೆಯಲ್ಲಿ ಸಂಚರಿಸುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Viral News
Koo

ಲಂಡನ್‌: ದೇವರ ಸ್ವಂತ ನಾಡು (God’s Own Country) ಎಂದು ಕರೆಯಲ್ಪಡುವ ಕೇರಳ (Kerala) ಪ್ರಾಕೃತಿಕವಾಗಿ ಸಂಪತ್ಭರಿತ ರಾಜ್ಯ. ಇದೇ ಕಾರಣಕ್ಕೆ ದೇಶ-ವಿದೇಶದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಇದೀಗ ಕೇರಳ ಪ್ರವಾಸೋದ್ಯಮ ಇಲಾಖೆಯು ಬಸ್ ಬ್ರ್ಯಾಂಡಿಂಗ್ ಮೂಲಕ ಕೇರಳದ ಹಿರಿಮೆಯನ್ನು ವಿದೇಶಗಳಲ್ಲಿ ಪಸರಿಸಲು ಮುಂದಾಗಿದೆ. ದೂರದ ಇಂಗ್ಲೆಂಡ್‌ನಲ್ಲಿ ಇದೀಗ ಕೇರಳದ ಪ್ರಾಕೃತಿಕ ಸೌಂದರ್ಯ ಬಹು ಜನಪ್ರಿಯ. ಅದಕ್ಕೆ ಕಾರಣವಾಗಿದ್ದು ಲಂಡನ್‌ನ ಡಬಲ್ ಡೆಕ್ಕರ್ ಬಸ್‌ನ ಅಲಂಕರಿಸಿರುವ ಕೇರಳದ ಅದ್ಭುತ ದೃಶ್ಯಗಳು. ಸದ್ಯ ಬಸ್‌ ರಸ್ತೆಯಲ್ಲಿ ಸಂಚರಿಸುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಡಬಲ್ ಡೆಕ್ಕರ್ ಬಸ್‌ನ ಸುತ್ತ ಕೇರಳದ ಸುಂದರ ಹಿನ್ನೀರಿನ ದೃಶ್ಯಗಳನ್ನು ಅಳವಡಿಸಲಾಗಿದೆ. ಈ ಮನವೋಹಕ ದೃಶ್ಯವನ್ನು ನೋಡಿದ ಎಂತಹವರೂ ತಲೆದೂಗಲೇಬೇಕು. ಕೇರಳದತ್ತ ಆಕರ್ಷಿತರಾಗಲೇಬೇಕು. ರಾಜ್ಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಈ ಜಾಹೀರಾತು ಈಗಾಗಲೇ ಹಲವರ ಗಮನ ಸೆಳೆದಿದೆ. ವಿಶೇಷವಾಗಿ ಬೇಸಿಗೆ ರಜಾದಿನಗಳಲ್ಲಿ ಪ್ರವಾಸಿಗರನ್ನು ಇನ್ನಷ್ಟು ರಾಜ್ಯದತ್ತ ಸೆಳೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊವನ್ನು ಈಗಾಗಲೇ ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಕೇರಳ ಪ್ರವಾಸೋದ್ಯಮವನ್ನು ಉತ್ತೇಜಿಸುವ ಜಾಹೀರಾತು ಹೊತ್ತ ಬಸ್‌ ದೂರದ ಲಂಡನ್‌ನಲ್ಲಿ ಸಂಚರಿಸುತ್ತಿರುವುದನ್ನು ನೋಡಿ ಅನೇಕರು ರೋಮಾಂಚಿತರಾಗಿದ್ದಾರೆ. ಬಸ್‌ನಲ್ಲಿ ಚಿತ್ರೀಕರಿಸಿರುವ ಹಿನ್ನೀರಿನ ದೃಶ್ಯಗಳನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತದೆ. ಬಳಿಕ ವಿಡಿಯೊ ಬಸ್‌ನ ಸಂಪೂರ್ಣ ಚಿತ್ರಣವನ್ನು ಒದಗಿಸುತ್ತದೆ. ಅಲಪ್ಪುಳದ ಹೌಸ್‌ ಬೋಟ್‌, ಸ್ನೇಕ್ ಬೋಟ್ ರೇಸ್‌ ಮತ್ತು ನದಿ, ಹಸಿರಿನ ಚಿತ್ರದೊಂದಿಗೆ ಈ ಬಸ್‌ ಕೇರಳ ಪ್ರವಾಸೋದ್ಯಮದ ಲಾಂಛನವನ್ನೂ ಒಳಗೊಂಡಿದೆ. ಬಸ್‌ನ ಒಂದು ಬದಿಯಲ್ಲಿ #TravelForGood ಎಂದು ಹ್ಯಾಶ್ ಬರೆಯಲಾಗಿದೆ.

ನೆಟ್ಟಿಗರ ಪ್ರತಿಕ್ರಿಯೆ

ವಿಡಿಯೊ ನೋಡಿದ ನೆಟ್ಟಿಗರು ಖುಷಿಯ ಉದ್ಘಾರ ತೆಗೆದಿದ್ದಾರೆ. ʼʼವಾವ್‌! ಇಡೀ ಆಲಪ್ಪುಳವೇ ಈ ಒಂದು ಬಸ್‌ನಲ್ಲಿದೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಆಳಪ್ಪುಳ ಮತ್ತು ಕುಟ್ಟನಾಡು ತನ್ನ ಸೌಂದರ್ಯದಿಂದ ವಿದೇಶಿಗರನ್ನೂ ಸೆಳೆಯುತ್ತದೆʼʼ ಎಂದಿದ್ದಾರೆ ಮತ್ತೊಬ್ಬರು. ಇನ್ನೊಬ್ಬರು ಕಮೆಂಟ್‌ ಮಾಡಿ ʼʼಪ್ರಪಂಚದಾದ್ಯಂತದ ಜನರು ಭಾರತವನ್ನು ಕೇರಳದ ಮೂಲಕ ಗುರುತಿಸುತ್ತಿರುವುದು ಹೆಮ್ಮೆಯ ಸಂಗತಿʼʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಮಗದೊಬ್ಬರು ಈ ಜಾಹೀರಾತಿನ ಯೋಚನೆಯನ್ನು ಶ್ಲಾಘಿಸಿದ್ದಾರೆ. ʼʼಅತ್ಯುತ್ತಮ ಯೋಜನೆ ಇದು. ಕೇರಳ ಪ್ರವಾಸೋದ್ಯಮಕ್ಕೆ ಇಲಾಖೆಗೆ ಹ್ಯಾಟ್‌ಆಫ್‌ʼʼ ಎಂದಿದ್ದಾರೆ.

ಇದನ್ನೂ ಓದಿ: Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

ಕೇರಳ ಪ್ರವಾಸೋದ್ಯ,ಮ ಸಚಿವ ಪಿ.ಎ..ಮೊಹಮ್ಮದ್‌ ರಿಯಾಸ್‌ ಈ ವಿಡಿಯೊವನ್ನು ಶೇರ್‌ ಮಾಡಿದ್ದಾರೆ. ʼʼಕೇರಳ ಟೂರಿಸಂನ ಹೊಸ ಅಭಿಯಾನ ಇದು. ನಮ್ಮ ಆಲಪ್ಪುಳ ಮತ್ತು ಹೌಸ್‌ಬೋಟ್‌ ಲಂಡನ್‌ನ ಬಸ್ಸಿನಲ್ಲಿ ರಾರಾಜಿಸುತ್ತಿದೆ. ಇನ್ನಷ್ಟು ದೇಶಗಳಲ್ಲಿ ಈ ರೀತಿಯ ಜಾಹೀರಾತು ಅಭಿಯಾನ ಮುಂದುವರಿಸಲಿದ್ದೇವೆʼʼ ಎಂದು ತಿಳಿಸಿದ್ದಾರೆ. ಕೇರಳದ ಈ ರೀತಿಯ ಸೃಜನಶೀಲತೆ ಹಿಂದೆಯೂ ವಿದೇಶಿಗರ ಗಮನ ಸೆಳೆದಿತ್ತು. 2018ರಲ್ಲಿಯೂ ಲಂಡನ್‌ನ ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಕೇರಳದ ಪ್ರವಾಸಿ ತಾಣಗಳನ್ನು ಪ್ರಚುರಪಡಿಸಲಾಗಿತ್ತು. ಒಟ್ಟಿನಲ್ಲಿ ಕೇರಳದ ಈ ಐಡಿಯ ಸೂಪರ್‌ ಎಂದಿದ್ದಾರೆ ನೆಟ್ಟಿಗರು.

Continue Reading

ವೈರಲ್ ನ್ಯೂಸ್

Viral Video:ಶಾಕಿಂಗ್‌ ವಿಡಿಯೋ! ಮಗನನ್ನು ಟ್ರೆಡ್‌ಮಿಲ್‌ನಲ್ಲಿ ಓಡಿಸಿ ಪ್ರಾಣವನ್ನೇ ತೆಗೆದ ಪಾಪಿ ತಂದೆ

Viral Video: ಆರು ವರ್ಷದ ಮಗನನ್ನು ದಪ್ಪ ಇದ್ದಾನೆಂದು ಬಲವಂತವಾಗಿ ಟ್ರೆಡ್‌ಮಿಲ್‌ನಲ್ಲಿ ಓಡಿಸಿದ ಪಾಪಿ ತಂದೆ ಮಗನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಅಮೆರಿಕದ ನ್ಯೂ ಜೆರ್ಸಿಯಲ್ಲಿ ನಡೆದಿದೆ. 2021ರಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದೆ.

VISTARANEWS.COM


on

Viral video
Koo

ಅಮೆರಿಕ: ಪ್ರಪಂಚದಲ್ಲಿ ಎಂತೆಂಥಾ ವಿಕೃತ ಮನಸ್ಸಿನ ವ್ಯಕ್ತಿಗಳಿರುತ್ತಾರೆ ಅಂದ್ರೆ ಕೆಲವೊಮ್ಮೆ ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬ ಪಾಪಿ ತಂದೆಯ ಹುಚ್ಚಾಟಕ್ಕೆ ಪುಟ್ಟ ಬಾಲಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಆರು ವರ್ಷದ ಮಗನನ್ನು ದಪ್ಪ ಇದ್ದಾನೆಂದು ಬಲವಂತವಾಗಿ ಟ್ರೆಡ್‌ಮಿಲ್‌(Treadmill) ನಲ್ಲಿ ಓಡಿಸಿದ ಪಾಪಿ ತಂದೆ ಮಗನನ್ನೇ ಬಲಿ ತೆಗೆದುಕೊಂಡಿರುವ ಘಟನೆ ಅಮೆರಿಕ(America)ದ ನ್ಯೂ ಜೆರ್ಸಿಯಲ್ಲಿ ನಡೆದಿದೆ. 2021ರಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣ(Social Media)ದಲ್ಲಿ ಈ ವಿಡಿಯೋ ವೈರಲ್‌(Viral video) ಆಗುತ್ತಿದೆ.

ಕ್ರಿಸ್ಟೋಫರ್‌ ಜಾರ್ಜ್‌ ಎಂಬ ವ್ಯಕ್ತಿ ಅಟ್ಲಾಂಟಿಕ್‌ ಫಿಟ್‌ನೆಸ್‌ ಕ್ಲಬ್‌ ಹೌಸ್‌ ಎಂಬ ಜಿಮ್‌ನಲ್ಲಿ ತನ್ನ ಆರು ವರ್ಷದ ಮಗ ಕೋರೆ ಮಿಕ್ಕಿಯೊಲೋನನ್ನು ಪದೇ ಪದೇ ಟ್ರೆಡ್‌ಮಿಲ್‌ನಲ್ಲಿ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ನೀನು ದಪ್ಪಗಿದ್ದಿಯಾ ಎಂದು ಪದೇ ಪದೇ ಹೇಳುತ್ತಾ ಟ್ರೆಡ್‌ಮಿಲ್‌ ವೇಗವನ್ನು ಸ್ಪೀಡಾಗಿ ಸೆಟ್‌ ಮಾಡಿ ಮಗನನ್ನು ಅದರಲ್ಲಿ ಓಡಿಸುತ್ತಾನೆ. ಮಗ ಟ್ರೆಡ್‌ಮಿಲ್‌ನಿಂದ ಬ್ಯಾಲೆನ್ಸ್‌ ತಪ್ಪಿ ಬಿದ್ದರೂ ಬಿಡದ ಕ್ರಿಸ್ಟೋಫರ್‌, ಮತ್ತೆ ಮತ್ತೆ ಬಾಲಕನನ್ನು ಬಲವಂತವಾಗಿ ಟ್ರೆಡ್‌ಮಿಲ್‌ ಮೇಲೆ ನಿಲ್ಲಿಸುತ್ತಾನೆ. ಬಾಲಕ ಎಷ್ಟೇ ಬೇಡ ಎಂದು ಅಳುತ್ತಿದ್ದರೂ ಕೇಳದ ಕ್ರಿಸ್ಟೋಫರ್‌ ಮತ್ತೆ ಮತ್ತೆ ಹಿಂಸೆ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ತಂದೆಯ ಹಿಂಸೆಯ ತಡೆಯಲಾರದೇ ತೀವ್ರ ಒತ್ತಡ ಅನುಭವಿಸಿದ್ದ ಬಾಲಕ ಕೋರೆ ತೀವ್ರವಾಗಿ ಅಸ್ವಸ್ತಗೊಂಡಿದ್ದ. ಕೋರೆ ದೇಹದ ಮೇಲೆ ಗಂಭೀರವಾದ ಗಾಯಗಳೂ ಆಗಿದ್ದವು. ಇದರಿಂದ ಬಾಲಕನ ತಾಯಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾಳೆ. ಬಾಲಕನ ಸಿಟಿ ಸ್ಕ್ಯಾನ್‌ ಮಾಡಿದಾಗ ಆತನಿಗೆ ಹೃದಯ ಸಂಬಂಧ ಖಾಯಿಲೆ ಇರುವುರು ವೈದ್ಯರಿಗೆ ತಿಳಿದು ಬಂದಿತ್ತು. ಈ ವೇಳೆ ವೈದ್ಯರ ಮಾಹಿತಿ ಮೇರೆಗೆ ಕ್ರಿಸ್ಟೋಫರ್‌ ಜಾರ್ಜ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ವೇಳೆ ತಂದೆ ನೀಡುತ್ತಿದ್ದ ಹಿಂಸೆಯ ಬಗ್ಗೆ ಬಾಲಕ ತಿಳಿಸಿದ್ದ. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳಿಕ ಕ್ರಿಸ್ಟೋಫರ್‌ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು. ಕೋರ್ಟ್‌ ವಿಚಾರಣೆ ವೇಳೆ ಈ ವಿಡಿಯೋ ಪ್ರಸಾರ ಮಾಡಿ ಮಾಡಿದ್ದಾರೆ. ಆ ವಿಡಿಯೋ ನೋಡುತ್ತಿದ್ದಂತೆ ಕೊರ್ಟ್‌ನಲ್ಲಿ ಹಾಜರಿದ್ದ ಬಾಲಕನ ತಾಯಿ ಕಣ್ಣೀರು ಹಾಕಿದ್ದಾಳೆ.

ಇದನ್ನೂ ಓದಿ: Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

2022 ಮಾರ್ಷ್‌ 9ರಂದು ಕೊಲೆ ಪ್ರಕರಣದಲ್ಲಿ ಕ್ರಿಸ್ಟೋಫರ್‌ ಜಾರ್ಜ್‌ನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ಇದೀಗ ಜಾಮೀನು ರಹಿತ ಬಂಧನಕ್ಕೊಳಗಾಗಿರುವ ಆತನನ್ನು ಓಶಿಯನ್‌ ಸಿಟಿ ಜೈಲಿನಲ್ಲಿ ಇರಿಸಲಾಗಿದೆ. ಮಂಗಳವಾರ ವಿಚಾರಣೆಗೆ ಹಾಜರಾದ ಕ್ರಿಸ್ಟೋಫರ್‌ ಜಾರ್ಜ್‌ನ ಕೃತ್ಯವನ್ನು ಕಂಡು ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಕಂಡು ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading
Advertisement
prajwal revanna case hd revanna farm house
ಕ್ರೈಂ48 seconds ago

Prajwal Revanna Case: ಪ್ರಜ್ವಲ್‌ ರೇವಣ್ಣ, ರೇವಣ್ಣ ಮನೆ ಇಂಚಿಂಚೂ ತಲಾಶ್, ಸಿಗ್ತಾ ಮಹತ್ವದ ಕ್ಲೂ?

Thomas Cup 2024
ಕ್ರೀಡೆ36 mins ago

Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ACTOR DHANUSH Nagarjuna mysterious first look from Kubera
ಕಾಲಿವುಡ್38 mins ago

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Viral News
ವೈರಲ್ ನ್ಯೂಸ್40 mins ago

Viral News: ಶಾಕಿಂಗ್‌ ವಿಡಿಯೊ; ಹಾವು ಕಚ್ಚಿದ್ದ ಯುವಕ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ನೇತಾಡಿಸಿದರು!

T20 World Cup 2024
ಕ್ರಿಕೆಟ್1 hour ago

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

woman assault case haveri
ಕ್ರೈಂ1 hour ago

Assault Case: ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿತ

West Bengal Governor
ದೇಶ1 hour ago

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

Actor Darshan React about Kaatera 2
ಸ್ಯಾಂಡಲ್ ವುಡ್2 hours ago

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

KSET Exam 2023 provisional score list
ಪ್ರಮುಖ ಸುದ್ದಿ2 hours ago

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ16 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌