Viral News : ನಿತ್ಯ ಶಾಪಿಂಗ್‌ಗೆಂದೇ 70 ಲಕ್ಷ ರೂ. ಖರ್ಚು ಮಾಡುತ್ತಾಳಂತೆ ಈ ಮಹಿಳೆ! - Vistara News

ವೈರಲ್ ನ್ಯೂಸ್

Viral News : ನಿತ್ಯ ಶಾಪಿಂಗ್‌ಗೆಂದೇ 70 ಲಕ್ಷ ರೂ. ಖರ್ಚು ಮಾಡುತ್ತಾಳಂತೆ ಈ ಮಹಿಳೆ!

ದುಬೈನಲ್ಲಿ ಸೌದಿ ಹೆಸರಿನ ಮಹಿಳೆ ತಾನು ಒಮ್ಮೆ ಶಾಪಿಂಗ್‌ಗೆ ಹೋದರೆ 70 ಲಕ್ಷ ರೂ.ವರೆಗೆ ಖರ್ಚು ಮಾಡುವುದಾಗಿ ಹೇಳಿಕೊಂಡಿದ್ದಾರೆ. ಆಕೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು (Viral News) ಮಾಡುತ್ತಿವೆ.

VISTARANEWS.COM


on

soudi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಶಾಪಿಂಗ್‌ ಎಂದರೆ ಹೆಣ್ಣು ಮಕ್ಕಳಿಗೆ ಪ್ರೀತಿ. ಒಮ್ಮೆ ಶಾಪಿಂಗ್‌ ಹೋದರೆ ದುಡ್ಡಿನ ಲೆಕ್ಕಾಚಾರ ಮರೆತೇ ಹೋಗುವಂತೆ ಶಾಪಿಂಗ್‌ ಮಾಡಿಬಿಡುತ್ತಾರೆ. ಆದರೆ ಈ ಮಹಿಳೆಯ ಕಥೆ ಕೇಳಿಬಿಟ್ಟರೆ ಎಲ್ಲೆ ಮೀರಿ ಖರ್ಚು ಮಾಡುವ ಹೆಣ್ಣು ಮಕ್ಕಳೂ ಕೂಡ ಬಾಯಿ ಮೇಲೆ ಬೆರಳಿಡುತ್ತಾರೆ. ಏಕೆಂದರೆ ಈ ಮಹಿಳೆ ಒಮ್ಮೆ ಶಾಪಿಂಗ್‌ಗೆಂದು ಹೋದರೆ ಖರ್ಚು ಮಾಡುವುದು ಬರೋಬ್ಬರಿ 70 ಲಕ್ಷ ರೂ. (Viral News) ಅಂತೆ!

ಹೌದು ದುಬೈನ ಇನ್‌ಫ್ಲೂಯೆನ್ಸರ್‌ ಆಗಿರುವ ಸೌದಿ ಈ ರೀತಿಯಲ್ಲಿ ಹೇಳಿಕೊಂಡಿದ್ದಾಳೆ. ಆಕೆಯ ಗಂಡ ಜಮಾಲ್‌ ದುಬೈನ ಶ್ರೀಮಂತರಲ್ಲಿ ಒಬ್ಬನಂತೆ. ಹಾಗಾಗಿ ಆಕೆ ಒಮ್ಮೆ ಶಾಪಿಂಗ್‌ಗೆಂದು ಹೋದರೆ 70 ಲಕ್ಷ ರೂ.ವರೆಗೂ ಖರ್ಚು ಮಾಡಿ ಬರುತ್ತಾಳಂತೆ. ಅಂದ ಹಾಗೆ ಆಕೆ ಮಾಮೂಲಿ ವಸ್ತುಗಳನ್ನು ಮುಟ್ಟುವುದೇ ಇಲ್ಲವಂತೆ. ಆಕೆ ಬಳಸುವ ಪ್ರತಿ ವಸ್ತುವೂ ಬ್ರ್ಯಾಂಡೆಡ್‌ ವಸ್ತುವಂತೆ.

ಇದನ್ನೂ ಓದಿ: Viral News : ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಸಿಕ್ಕಿತು ಹಾವು! ಹಲವು ಮಕ್ಕಳು ಅಸ್ವಸ್ಥ
ಈ ಸೌದಿ ಟಿಕ್‌ಟಾಕ್‌ನಲ್ಲಿ ತನ್ನ ಬಗ್ಗೆ ಸಾಕಷ್ಟು ವಿಡಿಯೊಗಳನ್ನು ಮಾಡಿ ಬಿಟ್ಟಿದ್ದಾಳೆ. ಪ್ರತಿ ದಿನ ರಾತ್ರಿ ಆಕೆಯ ಪತಿ ಆಕೆಗೆ ಸರ್ಪೈಸ್‌ ಕೊಟ್ಟೇ ಮಲಗಿಸುವುದಂತೆ. ಹಾಗೆಯೇ ಒಮ್ಮೊಮ್ಮೆ ಲಕ್ಷಗಟ್ಟಲೆ ಹಣ ಕೊಟ್ಟು ಪೂರ್ತಿ ರೆಸ್ಟೋರೆಂಟ್‌ ಅನ್ನೇ ಬುಕ್‌ ಮಾಡಿಬಿಡುತ್ತಾನಂತೆ. ಆ ದಿನಕ್ಕೆ ಯಾವ ಬಟ್ಟೆ ಹಾಕಬೇಕು ಎಂದು ನಿರ್ಧರಿಸಿ ಅದನ್ನು ಕಳುಹಿಸಿಕೊಟ್ಟು ರೆಡಿಯಾಗುವುದಕ್ಕೆ ಹೇಳುತ್ತಾನಂತೆ.

ಈ ಜೋಡಿ ಈಗಾಗಲೇ ಸಾಕಷ್ಟು ದೇಶಗಳನ್ನು ಪ್ರವಾಸ ಮಾಡಿದೆಯಂತೆ. ಮೂರ್ನಾಲ್ಕು ತಿಂಗಳಿಗೆ ಒಮ್ಮೆಯಾದರೂ ಲಂಡನ್‌ಗೆ ಹೋಗುತ್ತಿರುತ್ತಾರಂತೆ. ಎಲ್ಲಿಗೇ ಹೋದರೂ ಲಕ್ಷಗಟ್ಟಲೆ ಹಣ ಖರ್ಚಾಗುತ್ತದೆಯಂತೆ. ಇತ್ತೀಚೆಗೆ ಮಾಲ್ಡೀವ್ಸ್‌ ಪ್ರಯಾಣ ಮಾಡಿದ್ದಾರಂತೆ. ಅದಕ್ಕೆಂದು ಅವರಿಗೆ 13 ಲಕ್ಷ ರೂ. ಖರ್ಚಾಗಿದೆಯಂತೆ. ಹಾಗೆಯೇ ಸೌದಿ ಬಳಿ ಕೆಜಿಗಟ್ಟಲೆ ಚಿನ್ನಾಭರಣವಿದ್ದು, ಅದನ್ನೂ ಆಕೆ ವಿಡಿಯೊ ಮಾಡಿ ಹಂಚಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಡಿಆರ್​ಎಸ್​ ಚೀಟಿಂಗ್ ವೇಳೆ ಸಿಕ್ಕಿ ಬಿದ್ದ ಮುಂಬೈ ಇಂಡಿಯನ್ಸ್​; ವಿಡಿಯೊ ವೈರಲ್​

IPL 2024: ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಮುಂಬೈ ನಾಯಕ ಹಾರ್ದಿಕ್​ ಪಾಂಡ್ಯ(Hardik Pandya)​ ಅವರಿಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ. “ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

IPL 2024
Koo

ಮುಂಬಯಿ: ಮುಂಬೈ ಇಂಡಿಯನ್ಸ್(Mumbai Indians)​ ವಿರುದ್ಧ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಹಲವು ಆರೋಪಗಳು ಕೇಳಿ ಬರುತ್ತಲೇ ಇದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಟಾಸ್​ ಚೀಟಿಂಗ್, ನೋಬಾಲ್​ ನೀಡದ​ ಆರೋಪ ಕೇಳಿಬಂದಿತ್ತು. ಇದೀಗ ಪಂಜಾಬ್​ ವಿರುದ್ಧ ಪಂದ್ಯದಲ್ಲಿ ಡಿಆರ್​ಎಸ್ ಚೀಟಿಂಗ್​ನ(‘DRS Cheating) ಆರೋಪ ಕೇಳಿ ಬಂದಿದೆ. ಅಲ್ಲದೆ ಈ ಘಟನೆಯ ದೃಶ್ಯ ​ ವೈರಲ್​ ಆಗಿದ್ದು ಫ್ರಾಂಚೈಸಿ ವಿರುದ್ಧ ಹಲವರು ಛೀಮಾರಿ ಹಾಕಿದ್ದಾರೆ.

ಪಂದ್ಯದ 15ನೇ ಓವರ್​ನಲ್ಲಿ ಈ ಘಟನೆ ನಡೆದಿದೆ. ಅರ್ಶ್​ದೀಪ್​ ಸಿಂಗ್​ ಎಸೆತ ಈ ಓವರ್​ನ 5ನೇ ಎಸೆತ ವೈಡ್​ ಲೈನ್​ನಲ್ಲಿ ಸಾಗಿ ಕೀಪರ್​ ಕೈ ಸೇರಿತು. ಸೂರ್ಯಕುಮಾರ್ ಯಾದವ್​ ಬ್ಯಾಟಿಂಗ್​ ನಡೆಸುತ್ತಿದ್ದರು. ಈ ವೇಳೆ ಡಗೌಟ್​ನಲ್ಲಿದ್ದ ಟಿಮ್​ ಡೇವಿಡ್​ ಮತ್ತು ಕೋಚ್​ ಮಾರ್ಕ್​ ಬೌಚರ್ ಡಿಆರ್​ಎಸ್​ ತೆಗೆದುಕೊಳ್ಳುವಂತೆ ಸನ್ನೆಯ ಮೂಲಕ ಸೂರ್ಯ ಅವರಿಗೆ ಮನವಿ ಮಾಡಿದ್ದಾರೆ. ಇದು ಪಂದ್ಯದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ​ಬೌಚರ್ ಮತ್ತು ಡೇವಿಡ್ ಡಿಆರ್​ಎಸ್​ ಸನ್ನೆ ಮಾಡುತ್ತಿರುವುದನ್ನು ಕಂಡ ಪಂಜಾಬ್​ ನಾಯಕ ಸ್ಯಾಮ್​ ಕರನ್​ ಓಡಿ ಬಂದು ಅಂಪೈರ್​ ಗಮನಕ್ಕೆ ತಂದಿದ್ದಾರೆ. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ.

ಇದೇ ಪಂದ್ಯದಲ್ಲಿ ಪಂಜಾಬ್​ ಬ್ಯಾಟಿಂಗ್​ ನಡೆಸುತ್ತಿದ್ದ ವೇಳೆ ಹಾರ್ದಿಕ್​ ಪಾಂಡ್ಯ ಎಸೆದ 19ನೇ ಓವರ್​ನಲ್ಲಿ ಬ್ಯಾಟರ್​ನ ಲೆಗ್​ ಸೈಡ್​ನಿಂದ ಚೆಂಡು ಸಾಗಿದರೂ ಕೂಡ ಅಂಪೈರ್​ ಇದನ್ನು ವೈಡ್​ ನೀಡಲಿಲ್ಲ. ಈ ವಿಚಾರವಾಗಿಯೂ ಮುಂಬೈ ಮತ್ತು ಅಂಪೈರ್​ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಮುಂಬೈ ಇಂಡಿಯನ್ಸ್​ ಬದಲು ಮುಂಬೈ ಅಂಪೈರ್ಸ್​ ಎಂದು ತಂಡಕ್ಕೆ ಹೆಸರಿಡುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ ಮುಂಬೈ ತಂಡ ಈ ಬಾರಿ ಕೇವಲ ವಿವಾದದಿಂದಲೇ ಸುದ್ದಿಯಾಗುತ್ತಿದೆ.

ಇದನ್ನೂ ಓದಿ IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

ಈ ಪಂದ್ಯದಲ್ಲಿ (IPL 2024) ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಮುಂಬೈ ನಾಯಕ ಹಾರ್ದಿಕ್​ ಪಾಂಡ್ಯ(Hardik Pandya)​ ಅವರಿಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ. “ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಕೇವಲ 9 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು. ಗೆಲುವು ಸಾಧಿಸಿದ ಮುಂಬೈ ಅಂಕಪಟ್ಟಿಯಲ್ಲಿ(IPL 2024 Points Table) ಪ್ರಗತಿ ಸಾಧಿಸಿದೆ. ಈ ಪಂದ್ಯಕ್ಕೂ ಮುನ್ನ 9ನೇ ಸ್ಥಾನದಲ್ಲಿದ್ದ ಮುಂಬೈ ಈ ಗೆಲುವಿನೊಂದಿಗೆ 7ನೇ ಸ್ಥಾನಕ್ಕೇರಿದೆ. ಸೋಲು ಕಂಡ ಪಂಜಾಬ್​ 9ನೇ ಸ್ಥಾನಕ್ಕೆ ಕುಸಿದಿದೆ.

Continue Reading

ವೈರಲ್ ನ್ಯೂಸ್

Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

Pesticide: ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ ಎಂದು ಸಿಂಗಾಪುರ ಹೇಳಿದೆ,

VISTARANEWS.COM


on

pesticide everest fish curry masala
Koo

ಹೊಸದಿಲ್ಲಿ: ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ (Spices) ತಯಾರಕ ಎವರೆಸ್ಟ್‌ನ (Everest) ಫಿಶ್ ಕರಿ ಮಸಾಲಾ (Fish Curry Masala) ಅನ್ನು ಹಿಂಪಡೆಯಲು ಸಿಂಗಾಪುರ (Singapore) ಆದೇಶಿಸಿದೆ. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ (Pesticide) ಎಥಿಲೀನ್ ಆಕ್ಸೈಡ್ (Ethylene oxide) ಇದೆ ಎಂದು ಅದು ಆರೋಪಿಸಿದೆ.

ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು SFA ಹೇಳಿದೆ.

“ಸಿಂಗಾಪುರದ ಆಹಾರ ನಿಯಮಗಳ ಅಡಿಯಲ್ಲಿ, ಎಥಿಲೀನ್ ಆಕ್ಸೈಡ್ ಅನ್ನು ಮಸಾಲೆಗಳ ಸ್ಟೆರಿಲೈಸೇಶನ್‌ನಲ್ಲಿ ಮಾತ್ರ ಬಳಸಲು ಅನುಮತಿಸಲಾಗಿದೆ” ಎಂದು SFA ಹೇಳಿದೆ. ಕಡಿಮೆ ಮಟ್ಟದ ಎಥಿಲೀನ್ ಆಕ್ಸೈಡ್‌ ಸೇರಿರುವ ಆಹಾರವನ್ನು ಸೇವಿಸುವುದರಿಂದ ತಕ್ಷಣದ ಅಪಾಯವಿಲ್ಲ. ಆದರೆ ಇದರ ದೀರ್ಘಕಾಲಿಕ ಬಳಕೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಆಹಾರ ಸಂಸ್ಥೆ ಹೇಳಿದೆ.

“ಈ ಆಹಾರ ಸೇವನೆಯಿಂದ ತಕ್ಷಣದ ಅಪಾಯವಿಲ್ಲ. ಆದರೆ ಈ ಮಸಾಲೆಗೆ ಒಡ್ಡಿಕೊಳ್ಳುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು” ಎಂದು ಅದು ಹೇಳಿದೆ. “ಸಂಬಂಧಿತ ಉತ್ಪನ್ನಗಳನ್ನು ಖರೀದಿಸಿದ ಗ್ರಾಹಕರು ಅದನ್ನು ಸೇವಿಸದಂತೆ ಸೂಚಿಸಲಾಗಿದೆ. ಈ ಉತ್ಪನ್ನಗಳನ್ನು ಸೇವಿಸಿದವರು, ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವವರು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಗ್ರಾಹಕರು ವಿಚಾರಣೆಗಾಗಿ ತಮ್ಮ ಖರೀದಿ ಕೇಂದ್ರವನ್ನು ಸಂಪರ್ಕಿಸಬಹುದು” ಎಂದು SFA ತಿಳಿಸಿದೆ.

ಮಸಾಲೆ ಉತ್ಪಾದನೆ ಸಂಸ್ಥೆ ಎವರೆಸ್ಟ್ ಈ ಬೆಳವಣಿಗೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Shubman Gill: ಗ್ಯಾಲರಿಯಲ್ಲಿ ಕುಳಿತಿದ್ದ ಸುಂದರ ಹುಡುಗಿಯನ್ನು ಕಂಡು ಕ್ಲೀನ್​ ಬೌಲ್ಡ್​ ಆದ ಗಿಲ್​; ವಿಡಿಯೊ ವೈರಲ್​

Continue Reading

ವೈರಲ್ ನ್ಯೂಸ್

Viral Video: ಶಾಲೆಯಲ್ಲಿ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ಪ್ರಿನ್ಸಿಪಾಲ್!

Viral Video: ವಿದ್ಯೆ ಕಲಿಸಬೇಕಿರುವ ಗುರು ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ವಿಡಿಯೊ ಈಗ ಎಲ್ಲೆಡೆ ಹರಿದಾಡುತ್ತಿದೆ. ಹೀಗೆ ಆದರೆ ನಮ್ಮ ಮುಂದಿನ ಪೀಳಿಗೆಯ ಭವಿಷದ್ಯದ ಗತಿಯೇನು ಎಂಬ ಚಿಂತೆ ಪೋಷಕರದ್ದು!

VISTARANEWS.COM


on

Viral Video
Koo

ಲಖನೌ: ಇತ್ತೀಚೆಗಷ್ಟೇ ಶಿಕ್ಷಕಿಗೆ ವಿದ್ಯಾರ್ಥಿಯೊಬ್ಬ ಕಪಾಳಮೋಕ್ಷ ಮಾಡಿದ ವಿಡಿಯೊ ವೈರಲ್ ಆಗಿದೆ. ಈಗ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಮಾಡಿದ ಅವಾಂತರದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಮಕ್ಕಳಿಗೆ ವಿದ್ಯೆ ಕಲಿಸಿ ಬುದ್ದಿ ಹೇಳಬೇಕಾಗಿರುವ ಶಿಕ್ಷಕರಿಯೊಬ್ಬರು ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.

ಒಳ್ಳೆಯ ಗುರುವಿದ್ದರೆ ಮಕ್ಕಳ ಭವಿಷ್ಯ  ಒಳ್ಳೆಯದಾಗಿರುತ್ತದೆ ಎಂಬ ನಂಬಿಕೆ ಪೋಷಕರದ್ದು. ನಮ್ಮ ಮಗು ಶಾಲೆಗೆ ಹೋಗುತ್ತಿದೆ. ಏನಾದರೂ ಕಲಿತು ನಾಳೆ ನಮ್ಮ ಕಷ್ಟವನ್ನು ನಿಭಾಯಿಸುತ್ತದೆ ಎಂದು ಸಾಲ ಮಾಡಿ ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ. ಆದರೆ ಅಲ್ಲಿ ಅವರಿಗೆ ವಿದ್ಯೆಯನ್ನು ಧಾರೆ ಎರೆಯುವವರೇ ಸರಿ ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಗತಿಯೇನು? ವಿದ್ಯೆ ಕಲಿಸುವ ಗುರುಗಳೇ ಬೇರೆ ಕೆಲಸದಲ್ಲಿ ತೊಡಗಿಕೊಂಡು ಉಳಿದ ಶಿಕ್ಷಕರನ್ನು ತಲೆ ತಗ್ಗಿಸುವಂತೆ ಮಾಡಿದ ಘಟನೆ ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ನಡೆದಿದೆ.

ಏಪ್ರಿಲ್ 18ರಂದು ಬೆಳಿಗ್ಗೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಲೆಯೊಂದರಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರು ಮಕ್ಕಳಿಗೆ ಪಾಠ ಮಾಡುವ ಬದಲು ತನ್ನ ಮುಖದ ಸೌಂದರ್ಯ ಹೆಚ್ಚು ಮಾಡಿಕೊಳ್ಳುವುದಕ್ಕಾಗಿ ಫೇಶಿಯಲ್ ಮಾಡಿಸಿಕೊಳ್ಳುವುದರಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇದರಿಂದ ಆ ಶಾಲೆಯ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎನ್ನಲಾಗಿದೆ.

ಶಾಲಾ ಮುಖ್ಯೋಪಾಧ್ಯಾಯಿನಿ ಸಂಗೀತಾ ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡ ಶಿಕ್ಷಕಿ.  ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ವಿಡಿಯೊ ಮಾಡಿದ್ದಾರೆ. ಇದರಿಂದ ಕೋಪಗೊಂಡ ಸಂಗೀತಾ ಸಿಂಗ್, ಅನಮ್ ಖಾನ್ ಅವರನ್ನು ಹಿಗ್ಗಾಮುಗ್ಗಾ  ಥಳಿಸಿ, ಆಕೆಯ ಕೈಯನ್ನು ಕಚ್ಚಿ ಗಾಯಗೊಳಿಸಿದ್ದಾರೆ. ಇನ್ನು ಸಂಗೀತ ಸಿಂಗ್ ಹಲ್ಲೆ ಮಾಡಿದ ವಿಡಿಯೊ ಹಾಗೂ ಫೇಶಿಯಲ್ ಮಾಡಿದ ವಿಡಿಯೊಗಳನ್ನು ಅನಮ್ ಖಾನ್ ಪೋಸ್ಟ್ ಮಾಡಿದ್ದಾರೆ. ಇವೆರಡು ವಿಡಿಯೊಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.

ಈ ವಿಡಿಯೊ ನೋಡಿದ ಬ್ಲಾಕ್ ನ ಶಿಕ್ಷಣಾಧಿಕಾರಿ ಸಂಗೀತಾ ಸಿಂಗ್ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಶಿಕ್ಷಕಿ ಅನಮ್ ಖಾನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಸಂಗೀತಾ ಸಿಂಗ್ ವಿರುದ್ಧ ಬಿಘಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಂಡಮಾವು ಗ್ರಾಮದ ಶಾಲಾ ಮುಖ್ಯ ಶಿಕ್ಷಕಿ ಶಾಲಾ ಆವರಣದಲ್ಲೇ ಫೇಶಿಯಲ್ ಮಾಡಿಸಿಕೊಳ್ಳುತ್ತಿದ್ದು, ಸಿಕ್ಕಿಬಿದ್ದಿದ್ದಕ್ಕಾಗಿ ಥಳಿಸಿದ್ದಾರೆ ಎಂದು ಶಾಲಾ ಸಹಾಯಕ ಶಿಕ್ಷಕಿಯಿಂದ ದೂರು ಬಂದಿದೆ. ಈ ಬಗ್ಗ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಘಾಪುರ ವೃತ್ತಾಧಿಕಾರಿ ಮಾಯಾ ರೈ ತಿಳಿಸಿದ್ದಾರೆ.

ಇದನ್ನೂ ಓದಿ:  ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವ ಬದಲು ಶಿಕ್ಷಕರು ತಮ್ಮ ವೈಯಕ್ತಿಕ ಕೆಲಸಗಳಲ್ಲಿ ತಲ್ಲೀನರಾಗಿರುತ್ತಾರೆ. ಇದಕ್ಕೆ ಕಾರಣ ಸರ್ಕಾರದ ನಿರ್ಲಕ್ಷ್ಯ ಎನ್ನಬಹುದು. ಯಾಕೆಂದರೆ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ  ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತರದ ಕಾರಣ ಶಿಕ್ಷಕರು ಮನಬಂದಂತೆ ವರ್ತಿಸುತ್ತಿದ್ದಾರೆ. ಹಾಗಾಗಿ ಇದನ್ನು ಗಮನಿಸಿದ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹಣವಿಲ್ಲದಿದ್ದರೂ ಸಾಲ ಮಾಡಿ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಂಡರೆ ಒಳಿತು.

Continue Reading

ವೈರಲ್ ನ್ಯೂಸ್

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Viral Video: ಮನೆಯಲ್ಲಿ ಒಂದು ಕಾರಿದ್ದರೆ ಮಕ್ಕಳು ಎಲ್ಲಿ ಹಾಳು ಮಾಡುತ್ತಾರೆ ಎಂದು ಬಹಳ ಕಾಳಜಿಯಿಂದ ನೋಡಿಕೊಳ್ಳುತ್ತೇವೆ. ಇಲ್ಲೊಬ್ಬಳು ಮಹಿಳೆ ಮಾತ್ರ ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಹತ್ತಿ ಕುಣಿದು ಕಾರನ್ನು ಯಾವ ಅವಸ್ಥೆಗೆ ತಂದಿದ್ದಾಳೆ ನೋಡಿ.

VISTARANEWS.COM


on

Viral Video
Koo

ಬೆಂಗಳೂರು: ಇತ್ತೀಚೆಗೆ ಏನೇ ಮಾಡಿದರೂ ಸೋಷಿಯಲ್ ಮೀಡಿಯಾದಲ್ಲಿ ಹಾಕಬೇಕು ಎನ್ನುವ ಹಪಹಪಿಯವರೇ ಹೆಚ್ಚು. ಊಟ ಮಾಡಿದ್ದು, ತಿರುಗಾಡಿದ್ದು ಕೊನೆಗೆ ಹೊಡೆದಾಡಿಕೊಂಡಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಅಲ್ಲಿ ಬರುವ ಲೈಕ್ಸ್, ಕಾಮೆಂಟ್ ಗಳನ್ನೇ ಚಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ಮಾತ್ರ ತೀರಾ ಅತಿರೇಕಕ್ಕೆ ಹೋಗಿದ್ದಾಳೆ. ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಹಿಗ್ಗಾಮುಗ್ಗಾ ಕುಣಿದು ಅದರ ವಿಂಡ್ ಶೀಲ್ಡ್ ಅನ್ನೇ ಒಡೆದುಹಾಕಿದ್ದಾಳೆ. ಈ ವಿಡಿಯೊ ಈಗ ಸಖತ್ ವೈರಲ್ (Viral Video) ಆಗಿದೆ.

ಕಾರೆಂದರೆ ಜೀವಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ. ಅದರಲ್ಲೂ ದುಬಾರಿ ಬೆಲೆಯ ಕಾರನ್ನು ಮುಟ್ಟುವುದಕ್ಕೂ ಬಿಡುವುದಿಲ್ಲ ಕೆಲವರು. ಆದರೆ ಈ ಮಹಿಳೆ ಮಾತ್ರ ವೀವ್ಸ್ ಹಾಗೂ ಲೈಕ್ಸ್ ಪಡೆಯಲು ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿ ಅದರ ವಿಂಡ್ ಶೀಲ್ಡ್ ಒಡೆದು ಹಾಕಿದ್ದಾಳೆ.ಈ ವಿಡಿಯೋ ಈಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ಜನ ಹಿಗ್ಗಾಮುಗ್ಗಾ ಬೈದಿದ್ದಾರೆ.

ವಿಂಡ್ ಶಿಲ್ಡ್ ಒಡೆದರೂ ಡಾನ್ಸ್ ಬಿಡದ ಮಹಿಳೆ!

ಈ ವಿಡಿಯೊದಲ್ಲಿ ಗುಲಾಬಿ ಬಣ್ಣದ ಟ್ಯೂಬ್ ಟಾಪ್ ಮತ್ತು ಬಿಳಿ ಬಣ್ಣದ ಶಾರ್ಟ್ ಸ್ಕರ್ಟ್ ಧರಿಸಿದ ಮಹಿಳೆಯೊಬ್ಬಳು ನೀಲಿ ಬಣ್ಣದ ಲ್ಯಾಂಬೋರ್ಗಿನಿ ಕಾರ್ ನ ಮೇಲೆ ಡ್ಯಾನ್ಸ್ ಮಾಡುತ್ತಿದ್ದಳು. ಕುಣಿದ ಸ್ಪೀಡಿಗೆ ಕಾರಿನ ವಿಂಡ್ ಶಿಲ್ಡ್ ಒಡೆದು ಬಿರುಕು ಬಿಟ್ಟಿದೆ. ಕಾರಿನ ವಿಂಡ್ ಶಿಲ್ಡ್ ಒಡೆದಿದ್ದು ನೋಡಿಯೂ ಮಹಿಳೆ ಡ್ಯಾನ್ಸ್ ಮಾಡುವುದನ್ನು ಬಿಟ್ಟಿಲ್ಲ. ಈ ವಿಡಿಯೋವನ್ನು ರೆಡ್ಡಿಟ್ ಪೋಸ್ಟ್ ಮಾಡಿದ್ದು, ‘ಕೇವಲ ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜನರು ಇದನ್ನೆಲ್ಲಾ ಯಾಕೆ ಮಾಡುತ್ತಾರೆ’? ಎಂದು ಈ ವಿಡಿಯೋಗೆ ಶೀರ್ಷಿಕೆ ನೀಡಿದೆ. ಇನ್ನು ಈ  ಘಟನೆ ನಡೆದ ಸ್ಥಳ ಮತ್ತು ದಿನ ತಿಳಿದುಬಂದಿಲ್ಲ.

ಸಿಕ್ಕಾಪಟ್ಟೆ ದುಬಾರಿಯಾಗಿರುವ ಲ್ಯಾಂಬೋರ್ಗಿನಿ ಕಾರು ಇರುವವರು ಅದನ್ನು ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ. ಅಂತಹದರಲ್ಲಿ ಈ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು ವೀವ್ಸ್ ಪಡೆಯಲು ಅಂತಹ ದುಬಾರಿ ಕಾರನ್ನೇ ಹಾಳುಮಾಡಿಕೊಳ್ಳುತ್ತಿರುವುದು ಜನರಿಗೆ ಬಹಳ ಅಚ್ಚರಿಯನ್ನುಂಟು ಮಾಡಿದೆ.

MC dances on top of car and breaks the windshield 🤦‍♂️
byu/EthanthegamerGD inImTheMainCharacter

ಈ ಹಿಂದೆಯೂ ಟಿಕ್ ಟಾಕ್ ನಲ್ಲಿ ಮಹಿಳೆಯರು ಇಂತಹ ವಿಡಿಯೊಗಳನ್ನು ಮಾಡಿದ್ದರು. ಕಾರುಗಳ ಮೇಲೆ ಕೆಸರನ್ನು ಎರಚುವುದು, ಕಾರಿನ ಮೇಲೆ ಹತ್ತಿ ಅದರ ಗ್ಲಾಸ್ ಅನ್ನು ಒಡೆಯುವಂತಹ ಹಲವಾರು ವಿಡಿಯೋಗಳು ಟಿಕ್ ಟಾಕ್ ನಲ್ಲಿ ಕಂಡುಬಂದಿವೆ.

ಈ ವಿಡಿಯೊ ವೈರಲ್ ಆಗಿದ್ದು, ಇದಕ್ಕೆ ವೀಕ್ಷಕರಿಂದ ಹಲವಾರು ಪ್ರತಿಕ್ರಿಯೆ ಬಂದಿದೆ. ಕೆಲವರು ಈ ವಿಡಿಯೊ ನೋಡಿ ಕೋಪವನ್ನು ವ್ಯಕ್ತಪಡಿಸಿದ್ದರೆ, ಕೆಲವರು ದುಬಾರಿ ಕಾರನ್ನು ಹಾಳುಮಾಡುತ್ತಿರುವುದನ್ನು ಕಂಡು ನೊಂದುಕೊಂಡಿದ್ದಾರೆ. ಕೆಲವರು ಕಾರಿನ ಗ್ಲಾಸ್ ಬಿರುಕು ಬಿಟ್ಟಿರುವುದನ್ನು ನೋಡಿಯೂ ಮತ್ತೆ ಡ್ಯಾನ್ಸ್ ಮುಂದುವರಿಸಿದ ಮಹಿಳೆಯ ಮೇಲೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: Honour Killing: ರಸ್ತೆ ಬದಿಯಲ್ಲೇ ಮಹಿಳೆಯನ್ನು ದರದರನೆ ಎಳೆದು, ತಲೆಗೆ ಹೊಡೆದು ಕೊಲೆ ಮಾಡಿದ್ರು; ಇದೇನು ಮರ್ಯಾದೆ ಹತ್ಯೆಯಾ?

ಒಟ್ಟಾರೆ ಯುವಕ, ಯುವತಿಯರು ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು,  ವೀವ್ಸ್ ಮತ್ತು ಲೈಕ್ಸ್ ಅನ್ನು ಪಡೆಯಲು ಮಾಡುತ್ತಿರುವ ಹುಚ್ಚಾಟಗಳನ್ನು ನೋಡಿದರೆ ಮುಂದೆ ಅವರ ಜೀವಕ್ಕೆ ಅಪಾಯ ತಂದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅನಿಸುತ್ತದೆ.

Continue Reading
Advertisement
IPL 2024
ಕ್ರೀಡೆ2 mins ago

MS Dhoni: ಧೋನಿ ಅಭಿಮಾನಿಗಳಿಗೆ ನಿರಾಸೆ; ಇಂದಿನ ಪಂದ್ಯಕ್ಕೆ ಅನುಮಾನ

evm vvpat verification lok sbha election 2024
Lok Sabha Election 20248 mins ago

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

Neha Murder case JDS slams hands for defending love jihad to protect accused
ಕರ್ನಾಟಕ8 mins ago

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Pro Pak Slogan
ಕರ್ನಾಟಕ10 mins ago

Pro Pak Slogan: ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

lok sabha Election
ದೇಶ12 mins ago

Lok Sabha Election : ಮಣಿಪುರದ ಮತಗಟ್ಟೆಯಲ್ಲಿ ಗುಂಡಿನ ಚಕಮಕಿ; ಇಲ್ಲಿದೆ ವಿಡಿಯೊ

Neha Murder Case
ಹುಬ್ಬಳ್ಳಿ40 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Neha Murder case Niranjan urges Joshi to guarantee the lives of Hindu girls
ಕ್ರೈಂ49 mins ago

Neha Murder Case: ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ ಸರ್: ಜೋಶಿಗೆ ನೇಹಾ ತಂದೆ ನಿರಂಜನ್ ಮನವಿ

Kannada Serials TRP IPL Matches Effected On Kannada Serial
ಕಿರುತೆರೆ1 hour ago

Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

IPL 2024
ಕ್ರೀಡೆ1 hour ago

IPL 2024: ಡಿಆರ್​ಎಸ್​ ಚೀಟಿಂಗ್ ವೇಳೆ ಸಿಕ್ಕಿ ಬಿದ್ದ ಮುಂಬೈ ಇಂಡಿಯನ್ಸ್​; ವಿಡಿಯೊ ವೈರಲ್​

Job Alert
ಉದ್ಯೋಗ1 hour ago

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರಕ್ಟ್‌ ಲಿಂಕ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ40 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ11 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌