Viral post: ಜಿಲೇಬಿ ಮಸಾಲಾ! ಹೀಗೊಂದು ವಿಚಿತ್ರವಾದ ಬೀದಿಬದಿಯ ಚಾಟ್‌ - Vistara News

ವೈರಲ್ ನ್ಯೂಸ್

Viral post: ಜಿಲೇಬಿ ಮಸಾಲಾ! ಹೀಗೊಂದು ವಿಚಿತ್ರವಾದ ಬೀದಿಬದಿಯ ಚಾಟ್‌

ಜಿಲೇಬಿ ಜೊತೆ ಮಸಾಲೆಯೇ? ಇದು ಹೇಗೆ ಸಾಧ್ಯ, ಎಂದು ಅಂದುಕೊಂಡರೆ, ಇಲ್ಲೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಜಿಲೇಬಿ ಮಸಾಲಾ ಬೇಕಾ ಎಂದು ಫೋಟೋದೊಂದಿಗೆ ಪೋಸ್ಟ್‌ ಕೂಡಾ ಮಾಡಿದ್ದಾರೆ! ಈ ಪೋಸ್ಟ್‌ ನೋಡಿ ಹಲವರು, ಹೀಗೂ ಉಂಟೇ ಎಂದು ಚಕಿತರಾದರೆ, ಇನ್ನೂ ಕೆಲವರು, ಇದು ವಿಚಿತ್ರವಾಗಿದೆ ಎಂದಿದ್ದಾರೆ.

VISTARANEWS.COM


on

masala jalebi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿಂಡಿಯ ವಿಷಯಕ್ಕೆ ಬಂದರೆ ಭಾರತೀಯರು ಏನು ಪ್ರಯೋಗ ಮಾಡುವುದಕ್ಕೂ ರೆಡಿಯೇ. ಚಿತ್ರವಿಚಿತ್ರ ಕಾಂಬಿನೇಶನ್ನುಗಳ ತಿಂಡಿ, ಚಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಐರಲ್‌ ಆಗುತ್ತಲೇ ಇರುತ್ತವೆ. ಅದರಲ್ಲೂ ಬೀದಿಬದಿಯ ತಿಂಡಿಗಳಲ್ಲಿ ಥರಹೇವಾರಿ ರುಚಿಯ ಪ್ರಯೋಗಗಳು ನಡೆಯುತ್ತಲೇ ಇವೆ. ಆದರೆ, ಇಲ್ಲೊಂದು ವಿಚಿತ್ರವಾದ, ಯಾರೂ ಅಂದುಕೊಳ್ಳದ ಕಾಂಬಿನೇಶನ್ನಿನ ಪ್ರಯೋಗವೊಂದು ನಡೆದಿದೆ. ಅದೀಗ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಲೂ ಇದೆ.

ಚಿಲೇಬಿ ಚಳಿಗಾಲದ ಅತ್ಯಂತ ಪ್ರಿಯವಾದ ಸಿಹಿತಿಂಡಿ. ಚಳಿಗಾಲ ಬಂದರೆ ಸಾಕು ಬಿಸಿಬಿಸಿ ಜಿಲೇಬಿ ಅಂಗಡಿಗಳು ಬೀದಿಬದಿಯಲ್ಲಿ ತೆರೆಯಲು ಆರಂಭವಾಗುತ್ತದೆ. ಬೆಚ್ಚನೆಯ ಸ್ವೆಟರ್‌ ಹಾಕಿಕೊಂಡು ಚಳಿಯಲ್ಲಿ ಹಿತವಾಗಿ ನಡುಗುತ್ತಾ ರಸ್ತೆಯಲ್ಲಿ ಹೋಗುವಾಗ ಬಾಯಲ್ಲಿಟ್ಟರೆ ಕರಗುವ ಬಿಸಿಬಿಸಿ ಜಿಲೇಬಿ ಕಂಡರೆ ಯಾರಿಗೆ ತಾನೇ ತಿನ್ನಲು ಮನಸಾಗದು ಹೇಳಿ! ಅದರಲ್ಲೂ ಬಿಸಿ ಜಿಲೇಬಿ ಜೊತೆಗೆ ಚಳಿಚಳಿ ಐಸ್‌ಕ್ರೀಮ್‌ ಅಥವಾ ರಬ್ಡೀ ಸೇರಿಸಿ ತಿನ್ನುವ ಕಾಂಬಿನೇಶನ್ನು ಎಲ್ಲರಿಗೂ ಪ್ರಿಯವಾದದ್ದು. ಆದರೆ, ಇಲ್ಲೊಂದು ವಿಚಿತ್ರ ಕಾಂಬಿನೇಶನ್ನು ಈಗ ರೆಡಿಯಿದೆ. ಅದು ಜಿಲೇಬಿ ಮಸಾಲಾ!

ಇದನ್ನೂ ಓದಿ: Viral Video : ಸಂಸತ್ತಿನಲ್ಲಿ ಕವನದ ಮೂಲಕವೇ ಮೋದಿಯನ್ನು ಹೊಗಳಿ, ರಾಹುಲ್‌ ಕಾಲೆಳೆದ ಸಚಿವ

ಜಿಲೇಬಿ ಜೊತೆ ಮಸಾಲೆಯೇ? ಇದು ಹೇಗೆ ಸಾಧ್ಯ, ಎಂದು ಅಂದುಕೊಂಡರೆ, ಇಲ್ಲೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಜಿಲೇಬಿ ಮಸಾಲಾ ಬೇಕಾ ಎಂದು ಫೋಟೋದೊಂದಿಗೆ ಪೋಸ್ಟ್‌ ಕೂಡಾ ಮಾಡಿದ್ದಾರೆ! ಈ ಪೋಸ್ಟ್‌ ನೋಡಿ ಹಲವರು, ಹೀಗೂ ಉಂಟೇ ಎಂದು ಚಕಿತರಾದರೆ, ಇನ್ನೂ ಕೆಲವರು, ಇದು ವಿಚಿತ್ರವಾಗಿದೆ ಎಂದಿದ್ದಾರೆ. ಜಿಲೇಬಿಯಂಥಾ ಸಿಹಿತಿಂಡಿಯನ್ನು ಹೀಗೆಲ್ಲಾ ಮಸಾಲೆ ಹಾಕಿ ಹಾಳುಗೆಡವಿದ್ದಾರೆ ಎಂದು ಕೆಲವರು ಇದಕ್ಕೆ ಅಸಹನೆ ವ್ಯಕ್ತಪಡಿಸಿದ್ದಾರೆ ಕೂಡಾ.

ಇನ್ನೊಬ್ಬ ಫುಡ್‌ ಬ್ಲಾಗರ್‌ ದೆಹಲಿಯಲ್ಲಿ, ಜಿಲೇಬಿಯ ಜೊತೆಗೆ ಆಲೂ ಸಬ್ಜಿಯ ಕಾಂಬಿನೇಶನ್ನು ಟ್ರೈ ಮಾಡಿದ್ದಾರೆ. ಬೀದಿಬದಿಯ ತಿಂಡಿ ಅಂಗಡಿಯಲ್ಲಿ ಬಿಸಿಬಿಸಿ ಜಿಲೇಬಿಯ ಮೇಲೆ ಆಲೂ ಸಬ್ಜಿಯನ್ನು ಹಾಕಿಸಿಕೊಂಡು ತಿನ್ನುವ ವಿಡಿಯೋ ಒಂದನ್ನು ಶೇರ್‌ ಮಾಡಿದ್ದಾರೆ. ಆರಂಭದಲ್ಲಿ ಚೆನ್ನಾಗಿದೆ ಎನಿಸಿದರೂ ಆಮೇಲೆ ಅಷ್ಟೊಂದು ತೃಪ್ತಿದಾಯಕವಾಗಿಲ್ಲ ಎಂಬ ಪ್ರತಿಕ್ರಿಯೆ ಕೊಟ್ಟ ಈಕೆ, ಜೀವನದಲ್ಲಿ ತಿಂದ ಅತ್ಯಂತ ವಿಚಿತ್ರ ಕಾಂಬಿನೇಶನ್ನಿನ ತಿಂಡಿ ಇದು ಎಂದು ಆಕೆ ಹೇಳಿದ್ದಾರೆ. ಜನರು ಕೂಡಾ ಇಂತಹ ವಿಚಿತ್ರ ಕಾಂಬಿನೇಶನ್ನಿಗೆ ತೀವ್ರ ಅಸಮಧಾನಕರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು.

ಅಂದಹಾಗೆ ಜಿಲೇಬಿಗೆ ಆಲೂ ಸಬ್ಜಿ ಸೇರಿಸಿ ತಿನ್ನುವ ಕಾಂಬಿನೇಶನ್ನು ಮಥುರಾ ಹಾಗೂ ಬೃಂದಾವನದಲ್ಲಿ ಅತ್ಯಂತ ಜನಪ್ರಿಯ ಕೂಡಾ.

ಇದನ್ನೂ ಓದಿ: Viral Video : ʼಇವರೇ ನೋಡಿ ಫಾದರ್‌ ಆಫ್‌ ದಿ ಇಯರ್‌ʼ ಎನ್ನುತ್ತಿದ್ದಾರೆ ನೆಟ್ಟಿಗರು; ವೈರಲ್‌ ಆಗಿದೆ ವಿಡಿಯೊ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

Silicon City Hospital: ಲಕ್ಷದಲ್ಲಿ ಇಬ್ಬರಲ್ಲಿ ಕಾಣಿಸಿಕೊಳ್ಳುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಗೆ ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ಬಾಲಕಿ ಉಳಿಸಲು ಆಗಲ್ಲ ಎಂದು ಕೈಚೆಲ್ಲಿದ್ದ ದೊಡ್ಡ ಆಸ್ಪತ್ರೆಗಳಿಗೂ ಅಚ್ಚರಿ ಮೂಡಿಸುವುದರೊಂದಿಗೆ ಮೆಚ್ಚುಗೆಯನ್ನು ಪಡೆದಿದ್ದಾರೆ.

VISTARANEWS.COM


on

By

Silicon City Hospital doctors successful surgery on girl suffering from Arterio Venus malpermation
Koo

ಬೆಂಗಳೂರು: ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯ ಪ್ರಾಣವನ್ನು ಸಿಲಿಕಾನ್‌ ಸಿಟಿ ಆಸ್ಪತ್ರೆ ವೈದ್ಯರು (Silicon City Hospital) ಉಳಿಸಿದ್ದಾರೆ. ಒಂದು ಲಕ್ಷದಲ್ಲಿ ಇಬ್ಬರಿಗೆ ಮಾತ್ರ ಬರುವ ಈ ಅಪರೂಪದ ಕಾಯಿಲೆಯು ಬಾಲಕಿಗೆ ಕೊನೆ ಹಂತದಲ್ಲಿತ್ತು. ಇದನ್ನೇ ಸವಾಲಾಗಿ ಸ್ವೀಕರಿಸಿದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಬಾಲಕಿ ಜೀವ ಉಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನೆರನಹಳ್ಳಿ ಗ್ರಾಮದ ನೆರನಹಳ್ಳಿಯ ಬಾಬು ಮತ್ತು ಲಾವಣ್ಯ ದಂಪತಿ ಮಗಳು ಸ್ನೇಹಾ ಅಪಾಯದಿಂದ ಪಾರಾದವಳು . ಕಳೆದ ಮೇ 3ರಂದು ಚೆನ್ನಾಗಿದ್ದ ಸ್ನೇಹಾ ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಂಡು ಒದ್ದಾಡಿದ್ದಳು. ಮಗಳ ಪರಿಸ್ಥಿತಿ ಕಂಡು ಭಯಗೊಂಡ ಪೋಷಕರು ಮುಳಬಾಗಿಲಿನ ಖಾಸಗಿ‌ ಆಸ್ಪತ್ರೆಗೆ ತೋರಿಸಿದ್ದರು. ಆದರೆ ಅಲ್ಲಿನ ವೈದ್ಯರು ನಿಮ್ಮ ಮಗಳಿಗೆ ನರರೋಗಕ್ಕೆ ಸಂಬಂಧಿಸಿದ ಕಾಯಿಲೆ ಇದೆ ಎಂದಿದ್ದರು.

ತಡ ಮಾಡದೆ ಅಲ್ಲಿಂದ ಬೆಂಗಳೂರಿಗೆ ಮಗಳು ಸ್ನೇಹಾಳನ್ನು ಕರೆತಂದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ತಲೆ ಮೆದುಳಿನ ರಕ್ತನಾಳ ಒಡೆದು ರಕ್ತ ಸೋರುವ ಈ ಕಾಯಿಲೆ ಇದೆ ಎಂದು ಗೊತ್ತಾಗಿತ್ತು. ಸ್ನೇಹಾಳಿಗೆ ಬಂದ ಈ ಕಾಯಿಲೆ ಅದಾಗಲೇ ಯಾರಿಗೂ ತಿಳಿಯದಂತೆ ಕೊನೆ ಹಂತ ತಲುಪಿತ್ತು. ಹೀಗಾಗಿ ನಿಮ್ಹಾನ್ಸ್‌ ವೈದ್ಯರು ನಿಮ್ಮ ಮಗಳನ್ನು ಬದುಕಿಸುವುದು ಕಷ್ಟ ವಾಪಸ್‌ ಕರೆದುಕೊಂಡು ಹೋಗಿ ಎಂದು ಕೈ ಚೆಲ್ಲಿದ್ದರು.

ಇದರಿಂದ ಮತ್ತಷ್ಟು ಗಾಬರಿಗೊಂಡ ಬಾಬು, ಲಾವಣ್ಯ ದಂಪತಿಗೆ ಆ್ಯಂಬುಲೆನ್ಸ್ ಚಾಲಕ ಸಮಾಧಾನಪಡಿಸಿದ್ದಾರೆ. ಬಳಿಕ ಹೊಸಕೋಟೆಯಲ್ಲಿರುವ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ. ನುರಿತ ವೈದ್ಯರು ಇರುವ ನಿಮ್ಹಾನ್ಸ್‌ ಆಸ್ಪತ್ರೆಯಲ್ಲೆ ಮಗುವನ್ನು ಬದುಕಿಸುವುದು ಕಷ್ಟ ಎಂದಿರುವಾಗ ಬೇರೊಂದು ಆಸ್ಪತ್ರೆಗೆ ಹೋಗಿ ಏನು ಪ್ರಯೋಜನ ಎಂದು ಸ್ನೇಹಿತರು, ಸಂಬಂಧಿಕರು ಹೇಳಿದ್ದಾರೆ. ಆದರೆ ಮಗಳು ಉಳಿಯುತ್ತಾಳೆ ಎಂದಾಗ ಬಾಬು, ಲಾವಣ್ಯ ದಂಪತಿ ಕ್ಷಣವೂ ಯೋಚಿಸದೇ ಸಿಲಿಕಾನ್‌ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Silicon City Hospital doctors

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರಾದ ಡಾ.ಸುಪ್ರಿತ್ ಮತ್ತು ಡಾ.ಮನೋಹರ್‌ರವರ ನರರೋಗ ತಜ್ಞರ ತಂಡ, ಅಚ್ಚರಿ ಪಡುವ ರೀತಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಿ ಮಗುವಿನ ಜೀವ ಉಳಿಸಿದ್ದಾರೆ.

Silicon City Hospital doctors

ವೈದ್ಯ ಲೋಕದಲ್ಲಿ ಅಚ್ಚರಿ ಎನಿಸುವ ಅನೇಕ‌ ಕಾಯಿಲೆಗಳಿವೆ. ಒಂದು ಕಡೆ ವೈದ್ಯರಿಗೆ ಕೆಲವು‌‌ ಕಾಯಿಲೆ ಸವಾಲಾದರೆ, ಕೆಲವು ಕಾಯಿಲೆಯ ಸಕ್ಸಸ್ ರೇಟ್ ವೈದ್ಯರನ್ನು ಮತ್ತಷ್ಟು ಒಳ್ಳೆಯ ಕೆಲಸ ಮಾಡಲು ಪ್ರೇರೇಪಿಸುತ್ತದೆ. ಹೊಸಕೋಟೆ ಸಿಲಿಕಾನ್ ಸಿಟಿ ವೈದ್ಯರ ಸೇವೆಯೇ ಸಾಕ್ಷಿಯಾಗಿದೆ.

ಲಕ್ಷದಲ್ಲಿ ಇಬ್ಬರಿಗೆ ಕಾಣಿಸಿಕೊಳ್ಳುವ “ಅರ್ಟೆರಿಯೊ ವೀನಸ್ ಮಾಲ್ಪರ್ಮೇಷನ್- Alterio Venous Malformation (ಮೆದುಳು ನರಗಳಲ್ಲಿ ಗುಳ್ಳೆಗಳಾಗಿ‌ ಒಡೆದು ಹೋಗಿ ರಕ್ತ ಸೋರುವ ಕಾಯಿಲೆ) ಎಂಬ ಕಾಯಿಲೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಡು ಬಡವರಾದ ಅಂಗವಿಕಲರಾದ ಬಾಬು ಲಾವಣ್ಯ ದಂಪತಿ‌ ಇನ್ನೇನು ನಮ್ಮ ಒಬ್ಬಳೆ ಮಗಳು ನಮ್ಮಿಂದ ದೂರ ಆಗುತ್ತೆ ಎಂಬ ಆತಂಕವನ್ನು ಸಿಲಿಕಾನ್ ಸಿಟಿ ಆಸ್ಪತ್ರೆ ವೈದ್ಯರು ದೂರ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

KL Rahul: ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಇದರ ಬೆನ್ನಲ್ಲೇ ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

ಇದನ್ನೂ ಓದಿ IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಲಕ್ನೋಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಡೆಲ್ಲಿ ವಿರುದ್ಧ ಗೆದ್ದರೆ ಮಾತ್ರ ಸಾಲದು ಅಂತಿಮ ಪಂದ್ಯದಲ್ಲಿ ಮುಂಬೈ ವಿರುದ್ಧವೂ ಗೆಲುವು ಅತ್ಯಗತ್ಯ.

Continue Reading

ವೈರಲ್ ನ್ಯೂಸ್

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Viral News: ಪತ್ನಿಯ ಈ ವ್ಯಸನ ಪ್ರತಿದಿನ ದಂಪತಿಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು. ಪತಿ ಮನೆಗೆ ಪ್ಯಾಕೆಟ್‌ ತರಲು ಮರೆತಾಗ ಈ ವಿವಾದ ಉಲ್ಬಣಗೊಂಡಿದೆ. ಇದು ತಾರಕಕ್ಕೆ ಹೋಗಿದೆ. ತನ್ನ ದೈನಂದಿನ ಆಸ್ವಾದವನ್ನು ನಿರಾಕರಿಸಿದ್ದರಿಂದ ಕೋಪಗೊಂಡ ಪತ್ನಿ, ಗಂಡನ ಮನೆಯನ್ನು ತೊರೆದು ಹೆತ್ತವರ ಮನೆಗೆ ಹೋಗಿದ್ದಾಳೆ.

VISTARANEWS.COM


on

kurkure divorce viral news
Koo

ಲಖನೌ: ಉತ್ತರ ಪ್ರದೇಶದ ಆಗ್ರಾದ ಮಹಿಳೆಯೊಬ್ಬಳು, ಕುರ್ಕುರೆ (Kurkure) ಪ್ಯಾಕೆಟ್‌ ತರಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದು ಪತಿಯಿಂದ ವಿಚ್ಛೇದನ (Divorce) ಬಯಸಿದ್ದಾಳೆ! ಇದು ನಿಜ. ಪ್ರತಿನಿತ್ಯ ಪತಿಯಿಂದ ಕುರ್ಕುರೆ ತರಿಸಿಕೊಂಡು ತಿನ್ನುತ್ತಿದ್ದ ಈಕೆ, ಒಂದು ದಿನ ಅದನ್ನು ತರಲು ಪತಿ ನಿರಾಕರಿಸಿದ್ದಕ್ಕಾಗಿ ಕೋಪಗೊಂಡು ದಾಂಪತ್ಯವನ್ನೇ ಬರ್ಬಾದ್‌ ಮಾಡಿದ್ದಾಳೆ. ಈ ಸುದ್ದಿ ಈಗ ವೈರಲ್‌ (Viral news) ಆಗಿದೆ.

5 ರೂಪಾಯಿ ಚಿಲ್ಲರೆ ಬೆಲೆಯ ಕುರ್ಕುರೆ ಪ್ಯಾಕೆಟ್ ಇವರ ದಾಂಪತ್ಯ ವಿಚ್ಛೇದನಕ್ಕೆ ಕಾರಣವಾಗಿದ್ದು, ಈ ಮಹಿಳೆಯ ಹೆಸರು ಬಹಿರಂಗಪಡಿಸಲಾಗಿಲ್ಲ. ಪತ್ನಿಯ ಈ ವ್ಯಸನ ಪ್ರತಿದಿನ ದಂಪತಿಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು. ಪತಿ ಮನೆಗೆ ಪ್ಯಾಕೆಟ್‌ ತರಲು ಮರೆತಾಗ ಈ ವಿವಾದ ಉಲ್ಬಣಗೊಂಡಿದೆ. ಇದು ತಾರಕಕ್ಕೆ ಹೋಗಿದೆ. ತನ್ನ ದೈನಂದಿನ ಆಸ್ವಾದವನ್ನು ನಿರಾಕರಿಸಿದ್ದರಿಂದ ಕೋಪಗೊಂಡ ಪತ್ನಿ, ಗಂಡನ ಮನೆಯನ್ನು ತೊರೆದು ಹೆತ್ತವರ ಮನೆಗೆ ಹೋಗಿದ್ದಾಳೆ. ಬಳಿಕ ಪತಿಯಿಂದ ವಿಚ್ಛೇದನ ಕೋರಿ ಪೊಲೀಸರ ಮೊರೆ ಹೋಗಿದ್ದಾಳೆ.

ಕಳೆದ ವರ್ಷ ವಿವಾಹವಾದ ದಂಪತಿಯನ್ನು ಆಗ್ರಾದ ಶಹಾಗಂಜ್ ಪೊಲೀಸರು ಕುಟುಂಬ ಸಮಾಲೋಚನೆಗಾಗಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಪತಿ, ತನ್ನ ಹೇಳಿಕೆಯಲ್ಲಿ, ತನ್ನ ಹೆಂಡತಿಯ ಕುರ್ಕುರೆ ಗೀಳಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾನೆ. ಇದು ಅವರ ನಡುವಿನ ವಿವಾದದ ಬಿಂದುವಾಗಿದೆ. ಮತ್ತೊಂದೆಡೆ, ಪತಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದರಿಂದ ಆತನ ಮನೆಯನ್ನು ತೊರೆಯಬೇಕಾಯಿತು ಎಂದು ಪತ್ನಿ ಆರೋಪಿಸಿದ್ದಾಳೆ. ಈ ಆರೋಪದ ಹಿಂದಿನ ಸತ್ಯಾಸತ್ಯತೆ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಗ್ರಾ ಇನ್ನೊಂದು ದಂಪತಿ ಕೂಡ ಈ ವರ್ಷದ ಫೆಬ್ರವರಿಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. “ತುಂಬಾ ಜನಪ್ರಿಯತೆ” ಗಳಿಸಿದ ಹೆಂಡತಿಯ ರಾಜಕೀಯ ಚಟುವಟಿಕೆಗಳು ಪತಿಗೆ ಕಿರಿಕಿರಿ ಉಂಟುಮಾಡಿದ್ದು, ಜೊತೆಗೆ ಇರಲಾರೆ ಎಂದು ಗಂಡ ಹೇಳಿದ್ದ. ಪರಿಸ್ಥಿತಿ ಪೊಲೀಸರಿಗೆ ತಲುಪಿತ್ತು. ಅಪರಿಚಿತರೊಂದಿಗೆ ತನ್ನ ಹೆಂಡತಿ ಮುಖಾಮುಖಿ ಭೇಟಿಯಾಗುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ಗಂಡ ಹೇಳಿದ್ದ. ನಂತರ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

ಇಲ್ಲಿ ಪತಿ ಸಿಕಂದರಾ ಮೂಲದವರಾಗಿದ್ದರೆ, ಮಹಿಳೆ ನ್ಯೂ ಆಗ್ರಾದ ಠಾಣಾದವರು. ಅವರಿಗೆ ಮದುವೆಯಾಗಿ ಎರಡು ವರ್ಷವಾಗಿತ್ತು. ಪತ್ನಿ ರಾಜಕೀಯದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸಿದ್ದು, ಅದನ್ನು ತ್ಯಜಿಸಲು ಸಿದ್ಧರಿರಲಿಲ್ಲ. ಅವಳು ರಾಜಕೀಯ ಕ್ಷೇತ್ರವನ್ನು ಬಿಡದಿದ್ದರೆ ತಾನು ಅವಳ ಜೊತೆಗೆ ಇರುವುದಿಲ್ಲ ಎಂದು ಪತಿ ಹಠ ಹಿಡಿದಿದ್ದ.

ಇದನ್ನೂ ಓದಿ: Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

Continue Reading

ವೈರಲ್ ನ್ಯೂಸ್

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Viral video: ಗುಜರಾತ್​ ಟೈಟಾನ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ ಮುಖಾಮುಖಿ ನೋಡಲು ಬಂದಿದ್ದ ಅಭಿಮಾನಿಯೊಬ್ಬ ಪಂದ್ಯದ ಬಾಲ್ ಕದಿಯಲು ಯತ್ನಿಸಿದ ವೇಳೆ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದು ಸರಿಯಾಗಿ ಗೂಸಾ ತಿಂದ ಘಟನೆ ಸೋಮವಾರ ನಡೆದಿದೆ.

VISTARANEWS.COM


on

Viral video
Koo

ಅಹಮದಾಬಾದ್:​ ಕ್ರಿಕೆಟ್​ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಮತ್ತು ಆಟಗಾರರನ್ನು ನೋಡಲು ಮೈದಾನಕ್ಕೆ ಬರುವುದು ಸರ್ವೆ ಸಾಮಾನ್ಯ. ಆದರೆ, ಇಲ್ಲೊಬ್ಬ ಭೂಪ ಕೆಕೆಆರ್​(Kolkata Knight Riders) ಮತ್ತು ಗುಜರಾತ್​ ಟೈಟಾನ್ಸ್​(Gujarat Titans) ನಡುವಣ ಪಂದ್ಯದ ವೇಳೆ ಚೆಂಡನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ಬಳಿಕ ಪೊಲೀಸರಿಂದ ಈತನಿಗೆ ಹಿಗ್ಗಾಮುಗ್ಗಾ ಗೂಸಾ ಬಿದ್ದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral video)​ ಆಗಿದೆ.

ಸೋಮವಾರದ ಐಪಿಎಲ್​ ಪಂದ್ಯದಲ್ಲಿ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಗುಜರಾತ್​ ಟೈಟಾನ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಮುಖಾಮುಖಿಯಾಗಬೇಕಿತ್ತು. ಇದೇ ಪಂದ್ಯ ವೀಕ್ಷಣೆಗೆ ಬಂದ ಅಭಿಮಾನಿಯೊಬ್ಬ ರಿಂಕು ಸಿಂಗ್(Rinku Singh)​ ಜೆರ್ಸಿ ತೊಟ್ಟು, ಆಟಗಾರರು ಪಂದ್ಯಕ್ಕೂ ಮುನ್ನ ನಡೆಸುತ್ತಿದ್ದ ಅಭ್ಯಾಸವನ್ನು ನೋಡುತ್ತಿದ್ದ. ಇದೇ ವೇಳೆ ಅಲ್ಲಿದ್ದ ಪಂದ್ಯದ ಬಾಲ್ ಕದಿಯಲು ಪ್ರಯತ್ನಿಸಿದ್ದಾನೆ. ಚೆಂಡು ಕದ್ದು ತನ್ನ ಪ್ಯಾಂಟ್​ನ ಒಳಗಡೆ ಬಚ್ಚಿಟ್ಟಿದ್ದ. ಇದು ಭದ್ರತಾ ಸಿಬ್ಬಂದಿ ಗಮನಕ್ಕೆ ಬಂದಿದೆ. ಕೂಡಲೇ ಆತನನ್ನು ವಿಚಾರಿಸಿದಾಗ ಆತ ಪ್ಯಾಂಟ್​ನ ಒಳಗಡೆ ಬಚ್ಚಿಟ್ಟ ಚೆಂಡನ್ನು ಹಿಂದಿರುಗಿಸಿದ್ದಾನೆ. ಕಳ್ಳತನ ಮಾಡಿದ ತಪ್ಪಿಗಾಗಿ ಭದ್ರತಾ ಸಿಬ್ಬಂದಿ ಆತನಿಗೆ ಸರಿಯಾಗಿ 2 ಗೂಸಾ ಕೊಟ್ಟಿದ್ದಾರೆ.

ಈ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಪರಿಣಾಮ ಗುಜರಾತ್​ ಟೈಟಾನ್ಸ್​ ಟೂರ್ನಿಯಿಂದ ಹೊರ ಬಿದ್ದ ಸಂಕಟಕ್ಕೆ ಸಿಲುಕಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

ಇದನ್ನೂ ಓದಿ IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

ಗುಜರಾತ್​ ಟೈಟಾನ್ಸ್ ಪ್ಲೇಆಫ್​ನಲ್ಲಿ ಸ್ಥಾನ ಪಡೆಯುವ ರೇಸ್​​ನಿಂದ ಹೊರಗುಳಿದಿದೆ. ಹಾರ್ದಿಕ್ ಪಾಂಡ್ಯ ನಿರ್ಗಮನ ಮತ್ತು ಮೊಹಮ್ಮದ್ ಶಮಿ ಗಾಯಗೊಂಡ ನಂತರ ಜಿಟಿಗೆ ಉತ್ತಮ ಅನುಕೂಲಗಳು ಸಿಗಲಿಲ್ಲ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶ ಆ ತಂಡಕ್ಕೆ ಇತ್ತು. ಆದರೆ, ಮಳೆ ಅವರ ಭರವಸೆಗಳನ್ನು ಭಗ್ನಗೊಳಿಸಿತು.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಆರ್​ಸಿಬಿ136712 (+0.387)
ಡೆಲ್ಲಿ136712 (-0.482)
ಲಕ್ನೋ126612 (-0.769)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)
Continue Reading
Advertisement
Silicon City Hospital doctors successful surgery on girl suffering from Arterio Venus malpermation
ಬೆಂಗಳೂರು1 min ago

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

CM Siddaramaiah says Our government is stable for 5 years BJP will disintegrate
Lok Sabha Election 20247 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

Team India New Head Coach
ಕ್ರೀಡೆ10 mins ago

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Money Guide
ಮನಿ-ಗೈಡ್21 mins ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Hebbal Flyover
ಪ್ರಮುಖ ಸುದ್ದಿ30 mins ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

DK Shivakumar hits back at HD Kumaraswamy
ರಾಜಕೀಯ49 mins ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು56 mins ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

America
ವಿದೇಶ56 mins ago

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

KL Rahul
ಕ್ರೀಡೆ1 hour ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ1 hour ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 20247 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ4 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು5 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ12 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ22 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ22 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ23 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ23 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌