Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ - Vistara News

ವೈರಲ್ ನ್ಯೂಸ್

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ಆಸ್ತಿಯನ್ನು ವಶಪಡಿಕೊಳ್ಳಲು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿ ಜನಾಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಜಾರಿಗೆ ತಂದಿರುವ ಮಧ್ಯಾಹ್ನ ಬಿಸಿಯೂಟದ ಯೋಜನೆಗಳಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಕೆಲವೆಡೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಛತ್ತೀಸ್‌ಗಢದ ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

VISTARANEWS.COM


on

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರಿದ್ದು, ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶ ಈ ಬಾರಿಯ ಚುನಾವಣೆಯನ್ನು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದೆ. ಇದೇ ಹೊತ್ತಲ್ಲಿ, ಮಲೇಷ್ಯಾದಿಂದ ತನ್ನ ನೆಚ್ಚಿನ ನಟನಿಗಾಗಿ ಮತ ಚಲಾಯಿಸಲು ಬಂದ ಯುವತಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೆಲಸದ ನಿಮಿತ್ತ ಮಲೇಷ್ಯಾದಲ್ಲಿದ್ದ ಈ ಯುವತಿ, ಮತದಾನದ ದಿನದಂದೇ ತಾಯ್ನಾಡಿಗೆ ಬರುವ ವಿಮಾನವನ್ನು (Flight) ತಪ್ಪಿಸಿಕೊಂಡ ಕಾರಣ, ಮತ ಚಲಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ನಡುರಸ್ತೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತು ವಿಜಯ್ ಬಳಿ ಕ್ಷಮೆಯಾಚಿಸಿದ್ದರು.

“ನನ್ನ ತಪ್ಪಿನಿಂದ ಫ್ಲೈಟ್ ಮಿಸ್ ಆಯ್ತು, ವಿಜಯ್ ಅಣ್ಣನ ಮೊದಲ ಹೆಜ್ಜೆಗೆ ಬೆಂಬಲ ನೀಡಲು ಸಾಧ್ಯವಾಗುತ್ತಿಲ್ಲವಲ್ಲ ಎಂಬ ನೋವು ನನ್ನನ್ನು ಕಾಡುತ್ತಿದೆ. ನನ್ನ ಒಂದು ವೋಟ್‌ನಿಂದ ಏನಾಗುತ್ತೆ ಎಂದು ಕೆಲವರು ಕೇಳಬಹುದು, ಆದರೆ ‘ನಾವು ನಿಮ್ಮ ಜೊತೆ ಇದ್ದೀವಿ’ ಎಂದು ಅವರಿಗೆ ಭರವಸೆ ನೀಡುವ ದಾರಿ ಇದಾಗಿತ್ತು” ಎಂದು ಆ ಯುವತಿ ಕಣ್ಣೀರಿಡುತ್ತಾ ಹೇಳಿಕೊಂಡಿದ್ದರು. ಈ ಹೃದಯವಿದ್ರಾವಕ ವಿಡಿಯೋ ನೋಡಿ ದಳಪತಿ ಅಭಿಮಾನಿಗಳು ಸಹ ಬೇಸರ ವ್ಯಕ್ತಪಡಿಸಿದ್ದರು. ಆದರೆ ಈ ಕಥೆಗೆ ಒಂದು ಸುಖಾಂತ್ಯವಿದ್ದು, ಆ ಯುವತಿ ಕೇವಲ ಅತ್ತು ಸುಮ್ಮನಾಗದೆ, ಎಲ್ಲಾ ಅಡೆತಡೆಗಳನ್ನು ದಾಟಿ ಮತ್ತೊಂದು ವಿಮಾನದ ಮೂಲಕ ಹೇಗಾದರೂ ಮಾಡಿ ತಮಿಳುನಾಡಿಗೆ ತಲುಪಿದ್ದಾರೆ.

ಏಪ್ರಿಲ್ 22, 2026 ರಂದು ಹರಿದಾಡುತ್ತಿರುವ ಲೇಟೆಸ್ಟ್ ಮಾಹಿತಿಯ ಪ್ರಕಾರ, ಕಣ್ಣೀರಿಟ್ಟಿದ್ದ ಅದೇ ಯುವತಿ ಕೊನೆಗೂ ಸಮಯಕ್ಕೆ ಸರಿಯಾಗಿ ತನ್ನ ಮತಗಟ್ಟೆಗೆ ಬಂದು ಮತ ಚಲಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. “ಧೈರ್ಯ ಬಿಡದೆ ಮನೆಗೆ ಬಂದು ಮತ ಚಲಾಯಿಸಿದ್ದಾರೆ” ಎಂಬ ಟ್ವೀಟ್‌ಗಳು ಈಗ ಅಭಿಮಾನಿಗಳ ವಲಯದಲ್ಲಿ ಸಂಚಲನ ಮೂಡಿಸಿವೆ. ಇನ್ನುಳಿದಂತೆ ತಮಿಳುನಾಡು ಚುನಾವಣೆಯಲ್ಲಿ ನಟ ಅಜಿತ್ ಕುಮಾರ್ ಮೊದಲನೆಯವರಾಗಿ ಮತ ಚಲಾಯಿಸಿದರೆ, ನಂತರ ರಜನಿಕಾಂತ್, ತ್ರಿಷಾ, ವಿಕ್ರಮ್ ಮತ್ತು ಸೂರ್ಯ ಸೇರಿದಂತೆ ದಿಗ್ಗಜ ನಟರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.

Continue Reading

Latest

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

VISTARANEWS.COM


on

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ದಿಗಂತ್ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟು ಈಗ ಭರ್ತಿ 20 ವರ್ಷಗಳಾಗಿವೆ. 2006ರಲ್ಲಿ ‘ಮಿಸ್ ಕ್ಯಾಲಿಫೋರ್ನಿಯಾ’ ಮೂಲಕ ಆರಂಭವಾದ ಇವರ ಸಿನಿ ಪಯಣ ಇಂದು ‘ರುದ್ರ ಕಾಲ’ ಎಂಬ ವಿಭಿನ್ನ ಸಬ್ಜೆಕ್ಟ್‌ನ ಸಿನಿಮಾವರೆಗೆ ಬಂದು ನಿಂತಿದೆ. ಇತ್ತೀಚೆಗೆ ಈ ಚಿತ್ರದ ಪೋಸ್ಟರ್ ಅನ್ನು ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅನಾವರಣಗೊಳಿಸಿದ್ದರು. ಈ ವೇಳೆ ನಡೆದ ಒಂದು ತಮಾಷೆಯ ಪ್ರಸಂಗದ ಬಗ್ಗೆ ದಿಗಂತ್ ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ. ಪೋಸ್ಟರ್ ಲಾಂಚ್ ಆದ ಮೇಲೆ ಯೂಟ್ಯೂಬ್ ಕಮೆಂಟ್ ಬಾಕ್ಸ್‌ನಲ್ಲಿ ಅಭಿಮಾನಿಗಳು ಸತತವಾಗಿ ‘ದೂದ್ ಪೇಡ’ ಎಂದು ಕರೆಯುತ್ತಿರುವುದನ್ನು ನೋಡಿ ಸಮಂತಾ ಅವರು ಆಶ್ಚರ್ಯಚಕಿತರಾಗಿ ದಿಗಂತ್ ಅವರನ್ನೇ ಪ್ರಶ್ನೆ ಮಾಡಿದ್ದರಂತೆ!

“ಯಾರಿದು ದೂದ್ ಪೇಡ? ಕಮೆಂಟ್ಸ್‌ನಲ್ಲಿ ಯಾಕೆ ಈ ರೀತಿ ಬರೆಯುತ್ತಿದ್ದಾರೆ?” ಎಂದು ಸಮಂತಾ ಕುತೂಹಲದಿಂದ ದಿಗಂತ್ ಅವರನ್ನು ಕೇಳಿದ್ದಾರೆ. ಇದಕ್ಕೆ ಮುಗುಳ್ನಕ್ಕ ದಿಗಂತ್, “ಇದು ನನಗಿರುವ ಬಿರುದು, ‘ಗಾಳಿಪಟ’ ಸಿನಿಮಾದ ನಂತರ ಕನ್ನಡಿಗರು ಪ್ರೀತಿಯಿಂದ ನನ್ನನ್ನು ದೂದ್ ಪೇಡ ಎಂದು ಕರೆಯುತ್ತಾರೆ” ಎಂದು ವಿವರಿಸಿದ್ದಾರೆ. ಸಮಂತಾ ಅವರ ಈ ಮುಗ್ಧ ಪ್ರಶ್ನೆಗೆ ದಿಗಂತ್ ಒಂದು ಕ್ಷಣ ಶಾಕ್ ಆದರೂ, ನಂತರ ತಮ್ಮ ಹೆಸರಿನ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟು ನಗೆ ಬೀರಿದ್ದಾರೆ. ಸಮಂತಾ ಅವರು ದಿಗಂತ್ ಅವರ ಹೊಸ ಚಿತ್ರತಂಡಕ್ಕೆ ಶುಭ ಹಾರೈಸಿದ್ದಲ್ಲದೆ, ನಟನ ವೃತ್ತಿಜೀವನದ 20 ವರ್ಷಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.

ತಮ್ಮ 20 ವರ್ಷಗಳ ಸುದೀರ್ಘ ಪಯಣದ ಬಗ್ಗೆ ಮಾತನಾಡಿದ ದಿಗಂತ್, “ಹಿಂತಿರುಗಿ ನೋಡಿದಾಗ ಒಂದಷ್ಟು ಏಳು-ಬೀಳುಗಳು, ಒಳ್ಳೆಯ ಅನುಭವಗಳು ಸಿಕ್ಕಿವೆ. ‘ರುದ್ರ ಕಾಲ’ ಸಿನಿಮಾದ ಕಥೆ ಇವತ್ತಿನ ಟ್ರೆಂಡ್‌ಗೆ ತಕ್ಕಂತಿದ್ದು, ದೈವಶಕ್ತಿಯ ಎಳೆಯನ್ನು ಹೊಂದಿದೆ. ನಿರ್ದೇಶಕರ ಪ್ರತಿಭೆ ಮತ್ತು ವಿಭಿನ್ನ ಸಬ್ಜೆಕ್ಟ್ ನನ್ನನ್ನು ಈ ಸಿನಿಮಾ ಒಪ್ಪಿಕೊಳ್ಳುವಂತೆ ಮಾಡಿತು” ಎಂದು ಹೇಳಿದ್ದಾರೆ. ಸದ್ಯ ಸಮಂತಾ ಮತ್ತು ದಿಗಂತ್ ನಡುವಿನ ಈ ‘ದೂದ್ ಪೇಡ’ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭ ಹಾರೈಸುತ್ತಿದ್ದಾರೆ

Continue Reading

Latest

ಸ್ಟೇಜ್ ಪರ್ಫಾರ್ಮೆನ್ಸ್ ವೇಳೆ ಲಿಪ್‌ಸಿಂಕ್‌ ಮಾಡಿದ ‘ಧುರಂಧರ್‌’ ಗಾಯಕಿ: ನೆಟ್ಟಿಗರು ಫುಲ್ ಗರಂ!

VISTARANEWS.COM


on

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ಮತ್ತು ಟ್ರೋಲ್‌ಗಳಿಗೆ ಗುರಿಯಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾದ ಹಾಡುಗಳ ಮೂಲಕ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದ ಗಾಯಕಿಯ ಅಸಲಿ ಬಣ್ಣ ಲೈವ್ ಕಾರ್ಯಕ್ರಮವೊಂದರಲ್ಲಿ ಬಯಲಾಗಿದೆ. ಏಪ್ರಿಲ್ 19ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಜಾಸ್ಮಿನ್ ಅವರು ಲೈವ್ ಆಗಿ ಹಾಡುವ ಬದಲು ‘ಲಿಪ್ ಸಿಂಕ್’ (Lip Sync) ಮಾಡುವ ಮೂಲಕ ಪ್ರೇಕ್ಷಕರಿಗೆ ಮೋಸ ಮಾಡಿರುವುದು ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ.

ಕಾರ್ಯಕ್ರಮದ ವೇಳೆ ಜಾಸ್ಮಿನ್ ತಮ್ಮ ಹಿಟ್ ಹಾಡು ‘ಶರಾರತ್’ ಹಾಡುತ್ತಾ ವೇದಿಕೆಯ ಮೇಲೆ ಅತಿರೇಕದ ವರ್ತನೆ ತೋರಿದ್ದಾರೆ. ಹಾಡಿನ ಮಧ್ಯೆ ಹಠಾತ್ತನೆ ಮೈಮೇಲೆ ನೀರು ಸುರಿದುಕೊಂಡು, ವಿಚಿತ್ರವಾಗಿ ಸ್ಟೆಪ್ ಹಾಕುತ್ತಾ ಪ್ರೇಕ್ಷಕರನ್ನು ರಂಜಿಸಲು ಯತ್ನಿಸಿದ್ದಾರೆ. ಆದರೆ, ಇದೇ ವೇಳೆ ಅವರು ಮೈಕ್ ಅನ್ನು ಬಾಯಿಯಿಂದ ದೂರವಿಟ್ಟು ಕೆಳಗೆ ಇಳಿಸಿದರೂ ಹಿನ್ನೆಲೆಯಲ್ಲಿ ಹಾಡು ಮಾತ್ರ ಯಾವುದೇ ಅಡೆತಡೆಯಿಲ್ಲದೆ ಕೇಳಿಬರುತ್ತಿತ್ತು. ಇದನ್ನು ಗಮನಿಸಿದ ನೆಟ್ಟಿಗರು, ‘ಲೈವ್ ಕಾನ್ಸರ್ಟ್ ಹೆಸರಿನಲ್ಲಿ ಈಕೆ ಮಾಡುತ್ತಿರುವುದು ಕೇವಲ ಓವರ್ ಆ್ಯಕ್ಟಿಂಗ್ ಅಷ್ಟೇ’ ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಗಾಯಕಿಯ ವಿರುದ್ಧ ಸಮರ ಸಾರಿದ್ದಾರೆ. “ಲೈವ್ ಕಾನ್ಸರ್ಟ್ ಟಿಕೆಟ್ ಪಡೆದು ಜನರನ್ನು ವಂಚಿಸುತ್ತಿದ್ದಾರೆ” ಎಂದು ಕೆಲವರು ದೂರಿದರೆ, “ಕೇವಲ ಎರಡು ಹಾಡು ಹಿಟ್ ಆದ ತಕ್ಷಣ ಇವರಿಗೆ ಅಹಂಕಾರ ನೆತ್ತಿಗೇರಿದೆ” ಎಂದು ಮಗದೊಬ್ಬರು ಕಿಡಿಕಾರಿದ್ದಾರೆ. ಗಾಯಕಿಯನ್ನು ಹಾಡಲು ಕರೆಸಿದ್ದಾರೋ ಅಥವಾ ನಟನೆ ಮಾಡಲೋ ಎಂಬ ಪ್ರಶ್ನೆಗಳು ವ್ಯಕ್ತವಾಗುತ್ತಿವೆ. ಇಷ್ಟೆಲ್ಲಾ ವಿವಾದ ಮತ್ತು ಟೀಕೆಗಳು ಕೇಳಿಬರುತ್ತಿದ್ದರೂ, ಜಾಸ್ಮಿನ್ ಸ್ಯಾಂಡ್ಲಸ್ ಈ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಅಭಿಮಾನಿಗಳು ಅವರ ಪರವಾಗಿ ಬ್ಯಾಟ್ ಬೀಸುತ್ತಿದ್ದರೂ, ವಿಡಿಯೋ ಸಾಕ್ಷಿ ಮಾತ್ರ ಅವರ ಕಳ್ಳಾಟವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದೆ.

Continue Reading

Latest

ಅಂಬಾನಿ ಮನೆ ಅಡುಗೆಮನೆ ಮೆನು ಹೇಗಿರುತ್ತೆ ಗೊತ್ತಾ? ಪ್ರತಿದಿನ 4000 ರೊಟ್ಟಿ ತಯಾರಾಗುವುದರ ಹಿಂದಿನ ಅಸಲಿ ಕಾರಣವೇನು?

VISTARANEWS.COM


on

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ನಿವಾಸ ‘ಆಂಟಿಲಿಯಾ’ ಕೇವಲ ಐಷಾರಾಮಿ ಜೀವನಕ್ಕೆ ಮಾತ್ರವಲ್ಲ, ಅಲ್ಲಿನ ಶಿಸ್ತುಬದ್ಧ ಆಹಾರ ಪದ್ಧತಿಗೂ ಹೆಸರುವಾಸಿ. ಅಂಬಾನಿ ಕುಟುಂಬದ ಸದಸ್ಯರು ಅಪ್ಪಟ ಸಸ್ಯಾಹಾರಿಗಳಾಗಿದ್ದು, ಅತ್ಯಂತ ಸಾತ್ವಿಕ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುತ್ತಾರೆ. ಮುಖೇಶ್ ಅಂಬಾನಿ ಅವರ ದಿನಚರಿ ಬೆಳಿಗ್ಗೆ ಪಪ್ಪಾಯಿ ರಸ ಮತ್ತು ಇಡ್ಲಿ-ಸಾಂಬಾರ್‌ನೊಂದಿಗೆ ಆರಂಭವಾದರೆ, ನೀತಾ ಅಂಬಾನಿ ಅವರು ಹಣ್ಣುಗಳು ಹಾಗೂ ಡ್ರೈಫ್ರೂಟ್ಸ್ ಗೆ ಆದ್ಯತೆ ನೀಡುತ್ತಾರೆ. ಮಧ್ಯಾಹ್ನದ ಊಟದಲ್ಲಿ ಗುಜರಾತಿ ಶೈಲಿಯ ದಾಲ್, ಅನ್ನ, ರೊಟ್ಟಿ ಮತ್ತು ಸಲಾಡ್‌ಗಳಿದ್ದರೆ, ರಾತ್ರಿಯ ಭೋಜನದಲ್ಲಿ ಆರೋಗ್ಯಕ್ಕೆ ಪೂರಕವಾದ ರಾಗಿ ರೊಟ್ಟಿ ಮತ್ತು ಹಗುರವಾದ ತರಕಾರಿ ಖಾದ್ಯಗಳಿರುತ್ತವೆ.

ಆಂಟಿಲಿಯಾದಲ್ಲಿ ಪ್ರತಿದಿನ ಬರೋಬ್ಬರಿ 4,000 ರೊಟ್ಟಿಗಳು ತಯಾರಾಗುತ್ತವೆ ಎಂಬ ಸುದ್ದಿ ಕೇಳಲು ಅಚ್ಚರಿಯೆನಿಸಿದರೂ ಇದರ ಹಿಂದೆ ಒಂದು ಅಚ್ಚರಿಯ ಕಾರಣವಿದೆ. ಅಂಬಾನಿ ಕುಟುಂಬದ ಸದಸ್ಯರಿಗಾಗಿ ಮಾತ್ರವಲ್ಲದೆ, ಆ ಭವ್ಯ ಬಂಗಲೆಯಲ್ಲಿ ಹಗಲಿರುಳು ಕೆಲಸ ಮಾಡುವ ಸುಮಾರು 600ಕ್ಕೂ ಹೆಚ್ಚು ಸಿಬ್ಬಂದಿಗಳಿಗಾಗಿ ಈ ರೊಟ್ಟಿಗಳನ್ನು ತಯಾರಿಸಲಾಗುತ್ತದೆ. ಭದ್ರತಾ ಸಿಬ್ಬಂದಿ, ಚಾಲಕರು, ಅಡುಗೆಯವರು ಮತ್ತು ತಂತ್ರಜ್ಞರು ಸೇರಿದಂತೆ ಪ್ರತಿಯೊಬ್ಬರಿಗೂ ಮನೆಯ ಸದಸ್ಯರಂತೆಯೇ ಪೌಷ್ಟಿಕ ಮತ್ತು ರುಚಿಕರವಾದ ಊಟವನ್ನು ಇಲ್ಲಿ ನೀಡಲಾಗುತ್ತದೆ. ನೂರಾರು ರೊಟ್ಟಿಗಳನ್ನು ಕ್ಷಣಾರ್ಧದಲ್ಲಿ ತಯಾರಿಸುವ ಅತ್ಯಾಧುನಿಕ ಯಂತ್ರಗಳು ಅಲ್ಲಿವೆ, ಆದರೆ ರುಚಿ ಮತ್ತು ಗುಣಮಟ್ಟಕ್ಕೆ ಯಾವುದೇ ಕುಂದು ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಇನ್ನು ಈ ಬೃಹತ್ ಅಡುಗೆಮನೆಯನ್ನು ನಿರ್ವಹಿಸುವ ಅಡುಗೆಯವರ ಬಗ್ಗೆ ಹೇಳುವುದಾದರೆ, ಅವರ ಆಯ್ಕೆ ಪ್ರಕ್ರಿಯೆಯೇ ಒಂದು ರೋಚಕ ಕಥೆ. ದೇಶದ ಅತ್ಯುತ್ತಮ ಹೊಟೇಲ್‌ಗಳ ನುರಿತ ಅಡುಗೆಯವರನ್ನು ಇಲ್ಲಿ ನೇಮಿಸಿಕೊಳ್ಳಲಾಗುತ್ತಿದ್ದು, ಇವರ ಸಂಬಳ ಕೇಳಿದರೆ ಸಾಮಾನ್ಯರು ಬೆಚ್ಚಿಬೀಳುತ್ತಾರೆ. ವರದಿಗಳ ಪ್ರಕಾರ, ಇಲ್ಲಿನ ಮುಖ್ಯ ಅಡುಗೆಯವರು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕೇವಲ ಹಣ ಮಾತ್ರವಲ್ಲದೆ, ಅವರಿಗೆ ವಿಮೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ನೆರವು ನೀಡಲಾಗುತ್ತದೆ. ಹೀಗೆ ಅಂಬಾನಿ ಮನೆಯ ಅಡುಗೆಮನೆ ಕೇವಲ ಊಟ ತಯಾರಿಸುವ ಸ್ಥಳವಾಗಿರದೆ, ನೂರಾರು ಜನರಿಗೆ ಅನ್ನ ನೀಡುವ ಮತ್ತು ಅತ್ಯುತ್ತಮ ಕೆಲಸಗಾರರಿಗೆ ರಾಜಮರ್ಯಾದೆ ನೀಡುವ ತಾಣವಾಗಿದೆ.

Continue Reading
Advertisement
HD Revanna
Latest6 hours ago

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

Latest7 hours ago

ಮತದಾನಕ್ಕೆ ಕ್ಯೂನಲ್ಲಿ ನಿಂತರೂ ಕಷ್ಟ; ನಿಲ್ಲದಿದ್ದರೂ ಕಷ್ಟ: ಹಾಗಾದ್ರೆ ನಟ ಕಮಲ್‌ ಹಾಸನ್‌ ಏನು ಮಾಡಬೇಕಿತ್ತು?

Latest7 hours ago

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

Latest7 hours ago

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

Latest7 hours ago

ಮಹಿಳಾ ಮೀಸಲಾತಿ: ಡಿಎಂಕೆ ಹುನ್ನಾರಕ್ಕೆ ರಾಜ್ಯ ಬಲಿ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಆರೋಪ

Latest8 hours ago

ಬೆಸ್ಕಾಂ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ; ಹೆಚ್‌ಟಿ ಗ್ರಾಹಕರಿಗೆ ಅನುಕೂಲ

Latest8 hours ago

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

HD DeveGowda Wont celebrate 92nd birthday
Latest8 hours ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

Latest8 hours ago

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ; ಥಳಿಸಿದ ಗ್ರಾಮಸ್ಥರು

Latest8 hours ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌