Viral Video: ಬಟ್ಟೆ ಹರಿದುಕೊಂಡು ಪುರುಷನ ಮೇಲೆ ಮುಗಿಬಿದ್ದ ಮಹಿಳೆ! ಅಬ್ಬಾ, ಎಂಥ ಜಗಳಗಂಟಿ ಎಂದ ನೆಟ್ಟಿಗರು! - Vistara News

ವೈರಲ್ ನ್ಯೂಸ್

Viral Video: ಬಟ್ಟೆ ಹರಿದುಕೊಂಡು ಪುರುಷನ ಮೇಲೆ ಮುಗಿಬಿದ್ದ ಮಹಿಳೆ! ಅಬ್ಬಾ, ಎಂಥ ಜಗಳಗಂಟಿ ಎಂದ ನೆಟ್ಟಿಗರು!

Viral Video: ಜಗಳ, ಹೊಡೆದಾಟ ನಮ್ಮೊಳಗಿನ ರಾಕ್ಷಸತ್ವವನ್ನು ಹೆಚ್ಚಿಸುತ್ತದೆ ಹೊರತು ಕಡಿಮೆ ಮಾಡುವುದಿಲ್ಲ. ಇಲ್ಲೊಬ್ಬಳು ಮಹಿಳೆ ಪುರುಷನೊಂದಿಗೆ ಜಗಳವಾಡುತ್ತಾ ತನ್ನ ಬಟ್ಟೆಯನ್ನು ತಾನೇ ಹಿದುಕೊಂಡಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೊ ನೋಡಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮೆಂಟ್ ವಿಭಾಗದಲ್ಲಿ, ಹೆಚ್ಚಿನ ಸಂಖ್ಯೆಯ ಬಳಕೆದಾರರು ಬಟ್ಟೆಯನ್ನು ಹರಿದುಹಾಕಿದ ಮಹಿಳೆಯ ಕೃತ್ಯದ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ವಿಡಿಯೊ ರೆಕಾರ್ಡ್ ಮಾಡಿ ತನ್ನನ್ನು ಸುಳ್ಳು ಆರೋಪಗಳಿಂದ ಕಾಪಾಡಿಕೊಂಡ ವ್ಯಕ್ತಿಯನ್ನು ಶ್ಲಾಘಿಸಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಕಾಲು ಕೆರೆದುಕೊಂಡು ಜಗಳಕ್ಕೆ ಬಂದಿದ್ದಲ್ಲದೆ ಮೈಮೇಲಿದ್ದ ಬಟ್ಟೆಯನ್ನು ಹರಿದುಕೊಂಡು ಪುರುಷನೊಬ್ಬನ ಜೊತೆ ಮಹಿಳೆಯೊಬ್ಬಳು ಜಗಳವಾಡಿದ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ. ಇದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೊದಲ್ಲಿ ಪುರುಷ ಮತ್ತು ಮಹಿಳೆ ಕೆಟ್ಟದಾಗಿ ಜಗಳವಾಡುತ್ತಿರುವ ದೃಶ್ಯ ಕಂಡು ಬಂದಿದೆ. ಈ ಕ್ಲಿಪ್‍ನಲ್ಲಿ ಮಹಿಳೆ ಮತ್ತು ಪುರುಷರೊಬ್ಬರ ನಡುವೆ ಬಿಸಿಯಾದ ಮಾತಿನ ಚಕಮಕಿ ನಡೆಯುತ್ತಿದೆ. ಮಹಿಳೆಯೊಬ್ಬಳು ಜಮೀನಿನಲ್ಲಿ ನೀರು ನಿಲ್ಲುವ ವಿವಾದದ ಬಗ್ಗೆ ವ್ಯಕ್ತಿಯೊಂದಿಗೆ ವಾದಿಸುತ್ತ ತನ್ನ ಬಟ್ಟೆಗಳನ್ನು ತಾನೇ ಹರಿದುಕೊಂಡಿದ್ದಾಳೆ. ಕೈಯಲ್ಲಿ ರಾಡ್ ಹಿಡಿದುಕೊಂಡು ಆ ವ್ಯಕ್ತಿಯನ್ನು ಹೊಡೆಯಲು ಓಡಿಸಿಕೊಂಡು ಹೋಗುತ್ತಿದ್ದಾಳೆ. ನಂತರ ಅವಳು ತನ್ನ ಕೈಯಲ್ಲಿ ರಾಡ್ ಅನ್ನು ತೆಗೆದುಕೊಂಡು ಇಟ್ಟಿಗೆಯ ಗೋಡೆಯನ್ನು ಒಡೆದು ಹಾಕಿದ್ದಾಳೆ. ಆ ವ್ಯಕ್ತಿ ಅದನ್ನು ವಿಡಿಯೊ ಮಾಡಿದ್ದಾನೆ.

ಅದನ್ನು ನೋಡಿದ , ಮಹಿಳೆ ತನ್ನನ್ನು ವಿಡಿಯೊ ಮಾಡುವ ವ್ಯಕ್ತಿಗೆ ಅದೇ ಕೋಲಿನಿಂದ ಹೊಡೆಯುವುದಾಗಿ ಬೆದರಿಕೆ ಹಾಕುತ್ತಾಳೆ. ʼಹಿಮಾಲಯನ್ ಹಿಂದೂʼ ಎಂಬ ಬಳಕೆದಾರರು ಎಕ್ಸ್ (ಈ ಹಿಂದೆ ಟ್ವಿಟರ್)ನಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಘಟನೆಯ ನಿಖರವಾದ ದಿನಾಂಕ, ಸ್ಥಳ ಮತ್ತು ಸಮಯದ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಇದನ್ನೂ ಓದಿ: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ, ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮೆಂಟ್ ವಿಭಾಗದಲ್ಲಿ, ಹೆಚ್ಚಿನ ಸಂಖ್ಯೆಯ ಬಳಕೆದಾರರು ಬಟ್ಟೆಯನ್ನು ಹರಿದುಹಾಕಿದ ಮಹಿಳೆಯ ಕೃತ್ಯದ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ವಿಡಿಯೊ ರೆಕಾರ್ಡ್ ಮಾಡಿ ತನ್ನನ್ನು ಸುಳ್ಳು ಆರೋಪಗಳಿಂದ ಕಾಪಾಡಿಕೊಂಡ ವ್ಯಕ್ತಿಯನ್ನು ಶ್ಲಾಘಿಸುತ್ತಿದ್ದಾರೆ. ‘ಸುಳ್ಳು ಆರೋಪಗಳನ್ನು ಹೊರಿಸುವುದು ಇತ್ತೀಚಿನ ದಿನಗಳಲ್ಲಿ ಸುಲಭದ ಕೆಲಸ’ ಎಂದು ಇನ್ನೊಬ್ಬರು ಬರೆದಿದ್ದಾರೆ. ಈ ಜಗಳದ ವಿಡಿಯೊ ನೋಡಿದ ಜನ, ಥೋ…ಈಕೆ ಎಂಥ ಜಗಳಗಂಟಿ ಎಂದು ಉದ್ಗರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಜಲಾವೃತ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಿರುಕುಳ; ವಿಡಿಯೊ ನೋಡಿ ಜನಾಕ್ರೋಶ

Viral Video: ಉತ್ತರ ಪ್ರದೇಶದ ಲಕ್ನೊದಲ್ಲಿ ಜಲಾವೃತ ರಸ್ತೆಯಲ್ಲಿ ಬೈಕ್‍ನಲ್ಲಿ ಪುರುಷನೊಂದಿಗೆ ಹಿಂಬದಿಯಲ್ಲಿ ಮಹಿಳೆ ಕುಳಿತು ಪ್ರಯಾಣಿಸುತ್ತಿರುವಾಗ ಆಕೆಗೆ ಪುಂಡರ ಗುಂಪು ಕಿರುಕುಳ ನೀಡಿದೆ. ಈ ಘಟನೆಯು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಗಮನ ಸೆಳೆದಿದೆ ಮತ್ತು ಟೀಕೆಗೆ ಗುರಿಯಾಗಿದೆ. ಉತ್ತರ ಪ್ರದೇಶದ ರಾಜಧಾನಿಯ ತಾಜ್ ಹೋಟೆಲ್ ಸೇತುವೆಯ ಕೆಳಗೆ ಈ ಘಟನೆ ನಡೆದಿದೆ. ಈ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನ ಆಗ್ರಹಿಸುತ್ತಿದ್ದಾರೆ.

VISTARANEWS.COM


on

Viral Video
Koo


ದೇಶದ ಹಲವೆಡೆ ಭಾರೀ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಎಲ್ಲೆಡೆ ಪ್ರವಾಹ ಸೃಷ್ಟಿಯಾಗಿದೆ. ರಸ್ತೆಗಳಲ್ಲಿ, ಮನೆಯ ಸುತ್ತಮುತ್ತ, ಹೊಲಗದ್ದೆಗಳಲ್ಲಿ ನೀರು ತುಂಬಿಕೊಂಡಿದೆ. ಪರಿಸ್ಥಿತಿ ಹೀಗಿರುವಾಗ ಪ್ರವಾಹದಿಂದ ತುಂಬಿದ ರಸ್ತೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಂಕಷ್ಟದಲ್ಲಿ ಸಹಾಯ ಮಾಡುವುದು ಮಾನವೀಯತೆ. ಆದರೆ ಇಲ್ಲೊಂದು ಪುರುಷರು ಗುಂಪು ಮೋಟಾರ್ ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ್ದಾರೆ. ಈ ಘಟನೆ ಬುಧವಾರ ಲಕ್ನೋದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಉತ್ತರ ಪ್ರದೇಶದ ಲಕ್ನೊದಲ್ಲಿ ಜಲಾವೃತ ರಸ್ತೆಯಲ್ಲಿ ಬೈಕ್‍ನಲ್ಲಿ ಪುರುಷನೊಂದಿಗೆ ಹಿಂಬದಿಯಲ್ಲಿ ಮಹಿಳೆ ಕುಳಿತು ಪ್ರಯಾಣಿಸುತ್ತಿರುವಾಗ ಆಕೆಗೆ ಪುರುಷರ ಗುಂಪು ಕಿರುಕುಳ ನೀಡಿದೆ. ಈ ಘಟನೆಯು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಗಮನ ಸೆಳೆದಿದೆ ಮತ್ತು ಟೀಕೆಗೆ ಗುರಿಯಾಗಿದೆ.ಯುಪಿ ರಾಜಧಾನಿಯ ತಾಜ್ ಹೋಟೆಲ್ ಸೇತುವೆಯ ಕೆಳಗೆ ಬುಧವಾರ ಹಗಲಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ವಿಡಿಯೊದಲ್ಲಿ, ನೀರು ತುಂಬಿದ ರಸ್ತೆಯಲ್ಲಿ ಸೇತುವೆಯ ಕೆಳಗೆ ಜಮಾಯಿಸಿದ ಪುರುಷರ ಗುಂಪು ಮಹಿಳೆ ಮತ್ತು ಪುರುಷ ಸವಾರಿ ಮಾಡುತ್ತಿದ್ದ ಬೈಕ್ ಅನ್ನು ಸುತ್ತುವರಿದಿದ್ದಾರೆ. ಅವರು ಪ್ರವಾಹದ ರಸ್ತೆಯನ್ನು ದಾಟುತ್ತಿದ್ದಾಗ, ಆಗಲೇ ಅಲ್ಲಿದ್ದ ಪುರುಷರ ಗುಂಪು ಅವರ ಮೇಲೆ ನೀರನ್ನು ಚಿಮುಕಿಸಲು ಪ್ರಾರಂಭಿಸಿದರು. ಭಾರಿ ಮಳೆಯ ಸಮಯದಲ್ಲಿ ಪ್ರವಾಹದ ರಸ್ತೆಯಲ್ಲಿ, ಪುರುಷರ ಈ ಕೃತ್ಯದಿಂದ ಇವರಿಬ್ಬರಿಗೆ ರಸ್ತೆಯನ್ನು ದಾಟಲು ಕಷ್ಟವಾಯಿತು. ಅಲ್ಲದೇ ಕೆಲವು ಪುರುಷರು ಬೈಕ್ ಅನ್ನು ಹಿಂದಿನಿಂದ ಎಳೆಯಲು ಪ್ರಯತ್ನಿಸಿದರು, ಇದರಿಂದ ಅವರಿಬ್ಬರು ಬೈಕ್‍ನಿಂದ ಕೆಳಗೆ ಬಿದ್ದಿದ್ದಾರೆ. ಮಹಿಳೆ ಬೈಕಿನಿಂದ ಬಿದ್ದಾಗ, ಒಬ್ಬ ವ್ಯಕ್ತಿ ಅವಳಿಗೆ ಎದ್ದೇಳಲು ಸಹಾಯ ಮಾಡಿದನು. ನಂತರ ಪೊಲೀಸರು ಮಧ್ಯಪ್ರವೇಶಿಸಿ ಸೇತುವೆಯ ಕೆಳಗೆ ಇದ್ದ ಜನಸಮೂಹವನ್ನು ಚದುರಿಸಿದರು.

ಇದನ್ನೂ ಓದಿ: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

ಜಲಾವೃತ ರಸ್ತೆಯಲ್ಲಿ ಪುರುಷ ಮತ್ತು ಮಹಿಳೆಗೆ ಕಿರುಕುಳ ನೀಡಿದ ಪುರುಷರನ್ನು ಗುರುತಿಸಲು ಪೊಲೀಸರು ಮುಂದಾಗಿದ್ದಾರೆ. ಈ ವಿಡಿಯೊ ನೋಡಿ ಹಲವಾರು ಸೋಶಿಯಲ್ ಮೀಡಿಯಾ ಬಳಕೆದಾರರು ಪುರುಷರ ನಡವಳಿಕೆಯ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು ಮತ್ತು ಘಟನೆಯನ್ನು ಟೀಕಿಸಿದಾರೆ.

Continue Reading

Latest

Viral Video: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

Viral Video: ಪ್ರೀತಿಗೆ ನಂಬಿಕೆಯೇ ತಳಹದಿ. ಒಬ್ಬರನ್ನೊಬ್ಬರು ಪ್ರೀತಿಸುತ್ತೇವೆ ಎಂದರೆ ಅವರ ಎಲ್ಲಾ ಸಮಸ್ಯೆಗಳು, ಅವರ ಹಿಂದಿನ ಕಹಿ ಘಟನೆಗಳನ್ನು ಒಪ್ಪಿಕೊಂಡು ಜೊತೆಯಾಗಿ ಬಾಳಬೇಕು.ಕೆಲವೊಮ್ಮೆ ಯಾವುದೋ ಕಹಿಯ ನೆನಪನ್ನು ಹೇಳದೇ ಹೋದರೆ ಅದನ್ನು ತಪ್ಪಾಗಿ ತಿಳಿಯದೇ ಇಬ್ಬರೂ ಕುಳಿತು ಪರಸ್ಪರ ಚರ್ಚಿಸಿ ಸರಿಯಾದ ತೀರ್ಮಾನ ತೆಗೆದುಕೊಳ್ಳಬೇಕು. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಗೆಳತಿಗೆ ಈ ಹಿಂದೆ ಸಂಬಂಧವಿದೆ ಎಂದು ತಿಳಿದ ನಂತರ ಆಕೆಯನ್ನು ಹಿಗ್ಗಾಮುಗ್ಗಾ ಹೊಡೆದಿದ್ದಾನೆ. ಈ ವಿಡಿಯೊ ದೀಪಿಕಾ ಭಾರದ್ವಾಜ್ ಹಂಚಿಕೊಂಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

VISTARANEWS.COM


on

Viral Video
Koo


ಸಂಬಂಧದಲ್ಲಿ ನಂಬಿಕೆ, ಪ್ರೀತಿ ಬಹಳ ಮುಖ್ಯವಾಗುತ್ತದೆ. ಪ್ರೀತಿ, ನಂಬಿಕೆ ಇಲ್ಲದ ಸಂಬಂಧವನ್ನು ಮುಂದುವರಿಸುವುದು ಒಳ್ಳೆಯದಲ್ಲ. ಇದರಿಂದ ನಮ್ಮ ಜೀವನ ನಾವೇ ಹಾಳುಮಾಡಿಕೊಂಡಂತಾಗುತ್ತದೆ. ಕೆಲವರ ಜೀವನದಲ್ಲಿ ಈ ಹಿಂದೆ ಲವ್ ಆಗಿ ಬ್ರೇಕ್ ಅಪ್ ಕೂಡ ಆಗಿರಬಹುದು. ಆದರೆ ನಾವು ಪ್ರೀತಿಸಿದವರು ನಮ್ಮನ್ನು ಮಾತ್ರ ಪ್ರೀತಿಸಿರಬೇಕು ಎಂಬ ಮನೋಭಾವ ಕೆಲವು ಯುವಕರಲ್ಲಿರುತ್ತದೆ. ಹಾಗಾಗಿ ಅಂತವರೊಂದಿಗೆ ಬದುಕುವುದು ಬಾರೀ ಕಷ್ಟ. ಅಂತಹದೊಂದು ವಿಚಾರ ಈಗ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ (Viral Video) ಆಗಿದೆ.

ತನ್ನ ಗೆಳತಿಗೆ ಈ ಹಿಂದೆ ಸಂಬಂಧವಿದೆ ಎಂದು ತಿಳಿದ ನಂತರ ಗೆಳೆಯ ಆಕೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವಿಡಿಯೊ ದೀಪಿಕಾ ಭಾರದ್ವಾಜ್ ಹಂಚಿಕೊಂಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಬಿಸಿ ಚರ್ಚೆಯನ್ನು ಹುಟ್ಟುಹಾಕಿದೆ.

ಈ ವಿಷಯವು ನಂಬಿಕೆ, ಪ್ರಾಮಾಣಿಕತೆ ಮತ್ತು ಸಂಬಂಧಗಳಲ್ಲಿ ಹಿಂಸೆಯ ಸ್ವೀಕಾರಾರ್ಹತೆಯ ಬಗ್ಗೆ ಪ್ರಮುಖ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಕೀಲೆ ದೀಪಿಕಾ ಭಾರದ್ವಾಜ್ ಅವರು ಪುರುಷರ ಹಕ್ಕುಗಳ ಬಗ್ಗೆ ವಿವಾದಾತ್ಮಕ ಪ್ರಶ್ನೆಯನ್ನು ಮುಂದಿಟ್ಟ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ. ಮತ್ತು “ನಿಮ್ಮ ಗೆಳತಿಗೆ ಈ ಹಿಂದೆ ಲವ್ ಇತ್ತು ಎಂದು ನಿಮಗೆ ತಿಳಿದರೆ ಮತ್ತು ಅವಳು ಅದನ್ನು ನಿಮ್ಮಿಂದ ಮರೆಮಾಚಿದರೆ ಅವಳನ್ನು ಹೊಡೆಯುವುದು ಸಮರ್ಥನೀಯವೇ?” ಎಂದು ಪ್ರಶ್ನಿಸಿದ್ದಾರೆ.

ಈ ಪ್ರಶ್ನೆಯು ವಿವಿಧ ವೇದಿಕೆಗಳಲ್ಲಿ ಚರ್ಚೆಗಳನ್ನು ಹುಟ್ಟುಹಾಕಿದೆ. ಭಾವನಾತ್ಮಕ ಅಥವಾ ದೈಹಿಕ ಯಾವುದೇ ರೂಪದಲ್ಲಿ ಹಿಂಸೆಯನ್ನು ಎಂದಿಗೂ ಸಮರ್ಥಿಸಲಾಗುವುದಿಲ್ಲ. ಸಂಬಂಧಗಳು ಪರಸ್ಪರ ಗೌರವ, ನಂಬಿಕೆ ಮತ್ತು ಸಂವಹನದ ಮೇಲೆ ನಿರ್ಮಿಸಲ್ಪಟ್ಟಿವೆ. ಸಂಗಾತಿಯು ತನ್ನ ಹಿಂದಿನ ಪ್ರೀತಿ ವಿಚಾರ ಬಹಿರಂಗಪಡಿಸಿದರೆ ಅದು ಹಿಂಸಾತ್ಮಕ ಪ್ರತಿಕ್ರಿಯೆಗಳಿಗೆ ಕಾರಣವಾಗಬಾರದು. ಅಂತಹ ನಡವಳಿಕೆಯು ನೈತಿಕವಾಗಿ ತಪ್ಪು ಮಾತ್ರವಲ್ಲ, ಕಾನೂನಾತ್ಮಕವಾಗಿಯೂ ಶಿಕ್ಷಾರ್ಹವಾಗಿದೆ. ದೈಹಿಕ ಹಲ್ಲೆ, ಯಾವುದೇ ಸಂದರ್ಭದಲ್ಲೂ, ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಮತ್ತು ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ತಿಳಿಸಲಾಗಿದೆ.

ನಂಬಿಕೆ ಮತ್ತು ಸಂವಹನವು ಯಾವುದೇ ಆರೋಗ್ಯಕರ ಸಂಬಂಧದ ಆಧಾರಸ್ತಂಭಗಳಾಗಿವೆ. ಸಂಗಾತಿಯು ತಮ್ಮ ಹಿಂದಿನ ಪ್ರೇಮ ಪ್ರಸಂಗವನ್ನು ಮರೆಮಾಚಿದರೆ, ಅದು ಸಂಬಂಧವನ್ನು ಕಳೆದುಕೊಳ್ಳುವ ಭಯದಿಂದ ಮಾಡಿರಬಹುದು. ಅದಕ್ಕಾಗಿ ಹಿಂಸಾಚಾರದ ಮಾರ್ಗವನ್ನು ಅನುಸರಿಸುವ ಬದಲು, ಮುಕ್ತ ಮತ್ತು ಪ್ರಾಮಾಣಿಕ ಸಂವಹನದ ಮೂಲಕ ಸಮಸ್ಯೆಯನ್ನು ಪರಿಹರಿಸುವುದು ಬಹಳ ಮುಖ್ಯ. ಮರೆಮಾಚುವಿಕೆಯ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಂಡರೆ ಹೊಡೆದಾಟವಿಲ್ಲದೇ ಜಗಳಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಲಾಗಿದೆ.

ಮಹಿಳೆಯರ ಮೇಲಿನ ಹಿಂಸಾಚಾರವು ವಿಶ್ವಾದ್ಯಂತ ವ್ಯಾಪಕವಾದ ಸಮಸ್ಯೆಯಾಗಿದೆ. ಈ ಸಮಸ್ಯೆಯ ತೀವ್ರತೆಯನ್ನು ಎತ್ತಿ ತೋರಿಸಲು ಮಹಿಳೆಯರ ಮೇಲಿನ ದೌರ್ಜನ್ಯದ ಹಿಂದಿನ ಕೆಲವು ಪ್ರಕರಣಗಳನ್ನು ಉದಾಹರಣೆಯಾಗಿ ನೀಡಲಾಗಿದೆ. 2012ರ ನಿರ್ಭಯಾ ಪ್ರಕರಣ, 2013 ದಕ್ಷಿಣ ಆಫ್ರಿಕಾದ ರೂಪದರ್ಶಿ ರೀವಾ ಸ್ಟೀನ್ಕಾಂಪ್ ಪ್ರಕರಣ, 2015ರ ಜ್ಯೋತಿ ಸಿಂಗ್ ಅತ್ಯಾಚಾರ ಪ್ರಕರಣ , 2018ರಲ್ಲಿ ನಡೆದ ಕಥುವಾ ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ನಡೆಯುತ್ತಿರುವ ಲೈಂಗಿಕ ಹಿಂಸಾಚಾರದ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಕಾನೂನಾತ್ಮಕವಾಗಿ, ದೈಹಿಕ ಹಲ್ಲೆ ಅಪರಾಧವಾಗಿದೆ. ಕೌಟುಂಬಿಕ ಹಿಂಸಾಚಾರದಿಂದ ವ್ಯಕ್ತಿಗಳನ್ನು ರಕ್ಷಿಸಲು ಅನೇಕ ದೇಶಗಳು ಕಠಿಣ ಕಾನೂನುಗಳನ್ನು ಹೊಂದಿವೆ. ಭಾರತದಲ್ಲಿ, ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005, ಮಹಿಳೆಯರನ್ನು ನಿಂದನೆಯಿಂದ ರಕ್ಷಿಸಲು ಸೂಕ್ತ ಕ್ರಮಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: ಮೆಟ್ರೊದೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು! ವಿಡಿಯೊ ನೋಡಿ

ದೀಪಿಕಾ ಭಾರದ್ವಾಜ್ ಅವರ ಟ್ವೀಟ್‌ನಲ್ಲಿ ಕೇಳಲಾದ ಪ್ರಶ್ನೆಯು ಹಿಂಸಾಚಾರ, ನಂಬಿಕೆ ಮತ್ತು ಸಂಬಂಧಗಳಲ್ಲಿ ಗೌರವದ ಬಗ್ಗೆ ವ್ಯಾಪಕ ಚರ್ಚೆಗಳಿಗೆ ಕಾರಣವಾಗಿದೆ. ಸಂವಹನ ಮತ್ತು ತಿಳುವಳಿಕೆ ಹಿಂಸೆ ಮತ್ತು ಆಕ್ರಮಣಶೀಲತೆಯನ್ನು ಬದಲಿಸುವ ಸಂಸ್ಕೃತಿಯನ್ನು ಬೆಳೆಸುವುದು ಬಹಳ ಮುಖ್ಯ. ಮಹಿಳೆಯರು ಸುರಕ್ಷಿತ ಮತ್ತು ಗೌರವಾನ್ವಿತರು ಎಂದು ಭಾವಿಸುವ ಮತ್ತು ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸಬಹುದಾದ ವಾತಾವರಣವನ್ನು ಸೃಷ್ಟಿಸುವತ್ತ ಸಮಾಜವು ಕೆಲಸ ಮಾಡಬೇಕು ಎಂಬುದಾಗಿ ತಿಳಿಸಲಾಗಿದೆ.

Continue Reading

Latest

Wayanad Tragedy: ಈ ಮುದ್ದು ವಿದ್ಯಾರ್ಥಿನಿಯರ ನಗು, ಸೈಕಲ್‌ ಸವಾರಿ ಇನ್ನೆಲ್ಲಿ? ಮಣ್ಣಿನಡಿ ಸಮಾಧಿ; ಕಣ್ಣಂಚಲಿ ನೀರು ತರಿಸುವ ವಿಡಿಯೊ

Wayanad Tragedy: ಕೇರಳದ ವಯನಾಡಿನಲ್ಲಿ ಅತೀಯಾದ ಮಳೆಯ ಕಾರಣದಿಂದ ಭೂಕುಸಿತ ಉಂಟಾಗಿದೆ. ಇಲ್ಲೊಬ್ಬರು ಶಿಕ್ಷಕಿ ಭೂಕುಸಿತದಿಂದ ಸಾವನ್ನಪ್ಪಿದ ತನ್ನ ವಿದ್ಯಾರ್ಥಿಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಇತ್ತೀಚೆಗಷ್ಟೇ ಶಿಕ್ಷಕಿಯೊಬ್ಬರು ಶಾಲಾ ಆಟದ ಮೈದಾನದಲ್ಲಿ ತನ್ನ ವಿದ್ಯಾರ್ಥಿಗಳು ಸಣ್ಣ ಸೈಕಲೊಂದನ್ನು ಓಡಿಸುತ್ತಿರುವ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆ ವಿಡಿಯೊ ಎಲ್ಲರ ಗಮನ ಸೆಳೆದಿತ್ತು. ಆದರೆ ಇಂದು ವಿಡಿಯೊದಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ವಿಡಿಯೊ ಪೋಸ್ಟ್ ಮಾಡಿದ ಶಿಕ್ಷಕಿ ಮಾಧ್ಯಮದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

VISTARANEWS.COM


on

Wayanad Tragedy
Koo


ಒಂದು ವರ್ಷದ ಹಿಂದೆ ಕೇರಳದ ವಯನಾಡ್‌ನ (Wayanad Tragedy) ಮುಂಡಕ್ಕೈನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ಶಾಲಾ ಆಟದ ಮೈದಾನದಲ್ಲಿ ತಮ್ಮ ವಿದ್ಯಾರ್ಥಿಗಳು ಸಣ್ಣ ಸೈಕಲೊಂದನ್ನು ಓಡಿಸುತ್ತಿರುವ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅಂದು ಆ ವಿಡಿಯೊ ಎಲ್ಲರ ಗಮನ ಸೆಳೆದಿತ್ತು. ಆದರೆ ಇಂದು, ಗುಡ್ಡ ಕುಸಿತದ ದೊಡ್ಡ ದುರಂತದ ಕಾರಣಕ್ಕಾಗಿ ಮಕ್ಕಳು ಸೈಕಲ್ ಆಡುತ್ತಿದ್ದ ಸ್ಥಳವು ಎಲ್ಲಾ ಮಾಧ್ಯಮಗಳ ಗಮನವನ್ನು ಸೆಳೆದಿದೆ.

ಯಾಕೆಂದರೆ ಅಂದು ನಗು ಮತ್ತು ಸಂತೋಷದಿಂದ ಪ್ರತಿಧ್ವನಿಸುತ್ತಿದ್ದ ಆ ಆಟದ ಮೈದಾನ ಇಂದು ಅತಿಯಾದ ಮಳೆಯಿಂದಾಗಿ ಭೂಕುಸಿತಕ್ಕೊಳಗಾಗಿ ಅತಿಯಾದ ಪ್ರಮಾಣದ ಮಣ್ಣು ಮತ್ತು ಕೆಸರಿನಿಂದ ತುಂಬಿಕೊಂಡಿದೆ. ಅಲ್ಲದೇ ವಿಡಿಯೊದಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ವಿಡಿಯೊ ಪೋಸ್ಟ್ ಮಾಡಿದ ಶಿಕ್ಷಕಿ ಮಾಧ್ಯಮದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ತಮ್ಮ ವಿದ್ಯಾರ್ಥಿಗಳಿಗೆ ಸೈಕಲ್ ಓಡಿಸಲು ಅವಕಾಶ ನೀಡಿದ ಶಿಕ್ಷಕಿ ಶಾಲಿನಿ ಈಗ ವಯನಾಡಿನ ಮೀನಂಗಡಿಯ ಸರ್ಕಾರಿ ಎಲ್ಪಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾಲ್ಕನೇ ತರಗತಿಯ ಶಿಕ್ಷಕಿಯಾಗಿದ್ದ ಶಾಲಿನಿ ಅಂದು ಪಿಟಿ ಪಿರಿಯಡ್‌ನಲ್ಲಿ ಆಟದ ಮೈದಾನದಲ್ಲಿದ್ದ ಸೈಕಲ್ ನೋಡಿ ಓಡಿಸಲು ಬಯಸಿದ್ದ ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಸೈಕಲ್ ಓಡಿಸಲು ಅವಕಾಶ ಮಾಡಿಕೊಟ್ಟಿದ್ದರು. ಅದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಅಂದು ಪೋಸ್ಟ್ ಮಾಡಿದ್ದರು. ಆದರೆ ಇಂದು ಚೂರಲ್ಮಾಲಾ ಶಾಲೆಯಲ್ಲಿ ಪದವಿ ಪಡೆದು ಐದನೇ ತರಗತಿಗೆ ಸೇರಿದ ಸೈಕಲ್ ಸವಾರಿ ಮಾಡಿದ ಆ ಮೂವರು ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

“ನಾನು ಇನ್ನು ಮುಂದೆ ವಿಡಿಯೊವನ್ನು ನೋಡಲು ಸಾಧ್ಯವಿಲ್ಲ. ವಿಡಿಯೊದಲ್ಲಿ ಕಾಣಿಸಿಕೊಂಡ ಮೂವರು ವಿದ್ಯಾರ್ಥಿಗಳು ಇನ್ನಿಲ್ಲ. ಅವರ ಇಡೀ ಕುಟುಂಬ ಸತ್ತುಹೋಗಿದೆ. ಅವರಲ್ಲದೆ, ಈ ವರ್ಷ ನಾಲ್ಕನೇ ತರಗತಿಗೆ ಪದವಿ ಪಡೆದ ಆರು ವಿದ್ಯಾರ್ಥಿಗಳು ಸಹ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಶಾಲಿನಿ ದುಃಖದಲ್ಲಿ ಹೇಳಿದ್ದಾರೆ. ಅಲ್ಲದೇ ಶಾಲೆಯು 72 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾಯಿತು. ಆದರೆ, ಪುತ್ತುಮಾಲಾ ಭೂಕುಸಿತದ ನಂತರ, ಸುಮಾರು 52 ಕುಟುಂಬಗಳು ಇತರ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ. ಇದು ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕುಸಿತಕ್ಕೆ ಕಾರಣವಾಯಿತು ಎಂದು ಅವರು ತಿಳಿಸಿದ್ದಾರೆ.

ಶಿಕ್ಷಕಿ ಶಾಲಿನಿಯವರು ಕೊಟ್ಟಾಯಂ ಮೂಲದವರಾಗಿದ್ದು, ಸ್ಥಳ ಮತ್ತು ಜನರ ಬಗ್ಗೆ ತಿಳಿದ ನಂತರ ಅವರು ವಯನಾಡ್‌ನಲ್ಲಿ ಪೋಸ್ಟಿಂಗ್ ಮಾಡಿಕೊಂಡರು. ಅವರು ಎರಡು ವರ್ಷಗಳ ಕಾಲ ಮುಂಡಕ್ಕೈ ಎಲ್ ಪಿ ಶಾಲೆಯಲ್ಲಿ ಕೆಲಸ ಮಾಡಿದ್ದಾರೆ. ಮತ್ತು ಆ ಎರಡು ವರ್ಷಗಳು ಅವರು ಅಲ್ಲಿನ ಮಕ್ಕಳು ಹಾಗೂ ಜನರೊಂದಿಗೆ ತುಂಬಾ ಬೆರೆತಿದ್ದರು. ಇಲ್ಲಿನ ಜನರು ತುಂಬಾ ಸರಳರು ಮತ್ತು ವಿದ್ಯಾರ್ಥಿಗಳು ತುಂಬಾ ಪ್ರತಿಭಾವಂತರು. ಆದರೆ ಈಗ ಅವರೆಲ್ಲರೂ ತನಗೆ ಕೇವಲ ನೆನಪು ಮಾತ್ರ ಎಂದು ತನ್ನ ಒಂಬತ್ತು ವಿದ್ಯಾರ್ಥಿಗಳನ್ನು ಕಳೆದುಕೊಂಡ ಶಿಕ್ಷಕಿ ದುಃಖಿಸಿದ್ದಾರೆ.

ಇದನ್ನೂ ಓದಿ: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

ಜುಲೈ 30ರಂದು ಕೇರಳದ ಗುಡ್ಡಗಾಡು ವಯನಾಡ್ ಜಿಲ್ಲೆಯ ವೈತಿರಿ ತಾಲ್ಲೂಕಿನ ಸುಮಾರು ಮೂರು ಹಳ್ಳಿಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 122 ಜನರು ಸಾವನ್ನಪ್ಪಿದ್ದಾರೆ ಮತ್ತು 197 ಜನರು ಗಾಯಗೊಂಡಿದ್ದಾರೆ. ಕೇರಳ ಸರ್ಕಾರ ಜುಲೈ 30 ಮತ್ತು 31 ರಂದು ಶೋಕಾಚರಣೆ ಘೋಷಿಸಿದೆ. ಮುಂಡಕ್ಕೈ, ಚೂರಲ್ಮಾಲಾ ಮತ್ತು ಅತ್ತಮಾಲಾ ಪ್ರದೇಶಗಳಲ್ಲಿ ರಾಜ್ಯ ಮತ್ತು ಕೇಂದ್ರ ಪಡೆಗಳನ್ನು ಒಳಗೊಂಡ ತೀವ್ರ ರಕ್ಷಣಾ ಪ್ರಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Continue Reading

ದೇಶ

Parliament Building: ಸೋರುತಿಹುದು ನೂತನ ಸಂಸತ್‌ ಭವನದ ಮಾಳಿಗೆ! ವಿಡಿಯೋ ಶೇರ್‌ ಮಾಡಿ ಪ್ರತಿಪಕ್ಷಗಳು ಕಿಡಿ

Parliament Building: ಸಮಾಜವಾದಿ ಪಕ್ಷದ ಸಂಸದ ಅಖಲೇಶ್‌ ಯಾದವ್‌ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 1000ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂಸತ್‌ ಭವನದ ಛಾವಣಿ ಸೋರುತ್ತಿದೆ. ಛಾವಣಿ ಮೇಲಿನ ಗ್ಲಾಸ್‌ ಒಡೆದಿದ್ದು, ನೆಲದಲ್ಲಿ ನೀಲಿ ಬಕೆಟ್‌ ಇಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Parliament session
Koo

ನವದೆಹಲಿ: ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ(Heavy Rain)ಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಇದುವರೆಗೆ ಒಂಬತ್ತು ಮಂದಿಯನ್ನು ಬಲಿ ತೆಗೆದುಕೊಂಡಿದೆ. ಸಾಲದೆನ್ನುವಂತೆ ಇದೀಗ ಭಾರೀ ಮಳೆಗೆ ನೂತನ ಸಂಸತ್‌ ಭವನ(Parliament Building)ದ ಛಾವಣಿಯೇ ಸೋರುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಪ್ರತಿಪಕ್ಷಗಳು ಕಳಪೆ ಕಾಮಗಾರಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌(Viral Video) ಆಗುತ್ತಿದೆ.

ಸಮಾಜವಾದಿ ಪಕ್ಷದ ಸಂಸದ ಅಖಲೇಶ್‌ ಯಾದವ್‌ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 1000ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂಸತ್‌ ಭವನದ ಛಾವಣಿ ಸೋರುತ್ತಿದೆ. ಛಾವಣಿ ಮೇಲಿನ ಗ್ಲಾಸ್‌ ಒಡೆದಿದ್ದು, ನೆಲದಲ್ಲಿ ನೀಲಿ ಬಕೆಟ್‌ ಇಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ನೂತನ ಸಂಸತ್‌ ಭವನಕ್ಕಿಂತ ಹಳೆಯ ಕಟ್ಟಡವೇ ಉತ್ತಮವಾಗಿತ್ತು. ಕೊನೇಪಕ್ಷ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸತ್‌ ಭವನದಲ್ಲಿ ನೀರು ಸೋರುತ್ತಿರುವುದು ನಿಲ್ಲುವವರೆಗೆ ನಾವು ಹಳೆಯ ಸಂಸತ್‌ ಭವನಕ್ಕೆ ಹೋಗಬಾರದೇಕೆ? ಇದು ಕೇಂದ್ರ ಸರ್ಕಾರದ ಕಲಪೆ ಕಾಮಗಾರಿಗೆ ನಿದರ್ಶನವೇ ಎಂದು ಜನ ಕೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮತ್ತೊಂದೆಡೆ ತೃಣಮೂಲ ಕಾಂಗ್ರೆಸ್‌ ಸಂಸದ ಮಹುವಾ ಮೋಯಿತ್ರಾ ಕೂಡ ಇದೇ ವಿಡಿಯೋವನ್ನು ಶೇರ್‌ ಮಾಡಿದ್ದು, ಹೊರಗಡೆ ಪ್ರಶ್ನೆ ಪತ್ರಿಕೆ ಸೋರಿಕೆ…ಒಳಗಡೆ ಮಳೆ ನೀರು ಸೋರಿಕೆ ಎಂದು ಟೀಕಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಅಯೋಧ್ಯೆ ಶ್ರೀರಾಮ ಮಂದಿರದ ಛಾವಣಿಯೂ ಮಳೆಗೆ ಸೋರಿತ್ತು. ಈ ಬಗ್ಗೆ ಎಂಬುದಾಗಿ ದೇವಾಲಯದ ಮುಖ್ಯ ಅರ್ಚಕರೇ ಮಾಹಿತಿ ನೀಡಿದ್ದರು. ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದ್ದರು. “ಮೊದಲ ಮಳೆಗೇ ಗರ್ಭಗುಡಿಯ ಚಾವಣಿ ಮೂಲಕ ನೀರು ಒಳಗೆ ಬಂದಿದೆ. ನೂರಾರು ಎಂಜಿನಿಯರ್‌ಗಳು ಇಲ್ಲಿದ್ದಾರೆ. ಸುಸಜ್ಜಿತವಾಗಿಯೇ ರಾಮಮಂದಿರ ನಿರ್ಮಿಸಲಾಗಿದೆ. ಹೀಗಿದ್ದರೂ ಗರ್ಭಗುಡಿಯೇ ಸೋರುತ್ತಿರುವುದು ಆತಂಕ ಸೃಷ್ಟಿಸಿದೆ. ಹೀಗಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಕೂಡಲೇ ರಾಮಮಂದಿರ ಕಡೆ ಗಮನ ಹರಿಸಿ, ಸಮಸ್ಯೆಯನ್ನು ಸರಿಪಡಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ನೆರೆ ಹಾನಿ ಪ್ರದೇಶಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

Continue Reading
Advertisement
karnataka Weather Forecast
ಮಳೆ2 mins ago

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Paris Olympics
ಕ್ರೀಡೆ7 mins ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

MS Dhoni
ಪ್ರಮುಖ ಸುದ್ದಿ14 mins ago

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MLA Belur Gopalakrishna visits and inspects flood affected areas in hosanagara taluk
ಶಿವಮೊಗ್ಗ15 mins ago

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

State Level hasiru nairmalya shala abhyudaya Award for Hadlubailu Government School
ಶಿವಮೊಗ್ಗ16 mins ago

Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Viral Video
Latest18 mins ago

Viral Video: ಜಲಾವೃತ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಿರುಕುಳ; ವಿಡಿಯೊ ನೋಡಿ ಜನಾಕ್ರೋಶ

Viral Video
Latest26 mins ago

Viral Video: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

New Traffic Rules
ಕರ್ನಾಟಕ30 mins ago

New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

Wayanad Tragedy
Latest41 mins ago

Wayanad Tragedy: ಈ ಮುದ್ದು ವಿದ್ಯಾರ್ಥಿನಿಯರ ನಗು, ಸೈಕಲ್‌ ಸವಾರಿ ಇನ್ನೆಲ್ಲಿ? ಮಣ್ಣಿನಡಿ ಸಮಾಧಿ; ಕಣ್ಣಂಚಲಿ ನೀರು ತರಿಸುವ ವಿಡಿಯೊ

murder case
ಬೆಂಗಳೂರು45 mins ago

Murder Case : ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌