Viral Video: ಛೇ...ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಥಳಿಸಿ ದಲಿತ ಯುವಕನ ಹತ್ಯೆ - Vistara News

ವೈರಲ್ ನ್ಯೂಸ್

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಥಳಿಸಿ ದಲಿತ ಯುವಕನ ಹತ್ಯೆ

Viral Video: ಅಕ್ರಮ ಮದ್ಯ ದಂಧೆಕೋರರು ರಾಮೇಶ್ವರ ವಾಲ್ಮೀಕಿಯನ್ನು ಅಪಹರಿಸಿದ್ದರು, ಇದಾದ ಬಳಿಕ ನಾಲ್ಕೈದು ಜನ ಸೇರಿಕೊಂಡು ಆತನ ಕೈ ಮತ್ತು ಕಾಲುಗಳನ್ನು ಕಟ್ಟಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನೂ ಕೂಡ ಮಾಡಿದ್ದಾರೆ. ವಿಡಿಯೋದಲ್ಲಿ ವಾಲ್ಮೀಕಿಯ ಕಾಲುಗಳನ್ನು ಹಗ್ಗದಿಂದ ಒಂದು ರಾಡ್‌ಗೆ ಕಟ್ಟಿ ಮತ್ತೊಬ್ಬ ಆತನ ಕೈಗಳನ್ನು ಹಿಡಿದಿರುತ್ತಾನೆ. ಮತ್ತೊಬ್ಬ ಕಿಡಿಗೇಡಿ ಕೋಲಿನಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಲ್ಮೀಕಿ ಕೊನೆಯುಸಿಳೆದಿದ್ದಾನೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜಸ್ಥಾನ: ದಲಿತ ಯುವಕ(Dalit Youth)ನನ್ನು ಅಪಹರಿಸಿ ಹಗ್ಗದಲ್ಲಿ ಕಟ್ಟಿ ಥಳಿಸಿ ಕೊಂದಿರುವ ಅಮಾನವೀಯ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಜುನ್‌ಜುನ್‌ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ರಾಮೇಶ್ವರ ವಾಲ್ಮೀಕಿ(Rameshwar Valmiki) ಎಂದು ಗುರುತಿಸಲಾಗಿದೆ. ಇನ್ನು ಈ ಶಾಕಿಂಗ್‌ ಘಟನೆಯ ವಿಡಿಯೋವನ್ನು(Viral Video) ಸ್ವತಃ ದುಷ್ಕರ್ಮಿಗಳೇ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದಾದ ಬಳಿಕ ಆಪ್‌ ಮುಖಂಡ ಸಂಜಯ್‌ ಸಿಂಗ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ ಕಾರಿದ್ದಾರೆ.

ಘಟನೆ ವಿವರ:

ಮೇ ̆̆14 ರಂದು ಜುನ್‌ಜನ್‌ ಜಿಲ್ಲೆಯ ಬಲೋಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ರಮ ಮದ್ಯ ದಂಧೆಕೋರರು ರಾಮೇಶ್ವರ ವಾಲ್ಮೀಕಿಯನ್ನು ಅಪಹರಿಸಿದ್ದರು, ಇದಾದ ಬಳಿಕ ನಾಲ್ಕೈದು ಜನ ಸೇರಿಕೊಂಡು ಆತನ ಕೈ ಮತ್ತು ಕಾಲುಗಳನ್ನು ಕಟ್ಟಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನೂ ಕೂಡ ಮಾಡಿದ್ದಾರೆ. ವಿಡಿಯೋದಲ್ಲಿ ವಾಲ್ಮೀಕಿಯ ಕಾಲುಗಳನ್ನು ಹಗ್ಗದಿಂದ ಒಂದು ರಾಡ್‌ಗೆ ಕಟ್ಟಿ ಮತ್ತೊಬ್ಬ ಆತನ ಕೈಗಳನ್ನು ಹಿಡಿದಿರುತ್ತಾನೆ. ಮತ್ತೊಬ್ಬ ಕಿಡಿಗೇಡಿ ಕೋಲಿನಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಲ್ಮೀಕಿ ಕೊನೆಯುಸಿಳೆದಿದ್ದಾನೆ.

ಬಿಜೆಪಿ ವಿರುದ್ಧ ಆಪ್‌ ಕಿಡಿ

ಇನ್ನು ವಾಲ್ಮೀಕಿ ಮೇಲಿನ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿರುವ ಆಪ್‌ ಮುಖಂಡ ಸಂಜಯ್‌ ಸಿಂಗ್‌ ಪ್ರಧಾನಿ ಮೋದಿ ಮತ್ತು ರಾಜಸ್ಥಾನ ಸಿಎಂ ಭಜನ್‌ಲಾಲ್‌ ವಿರುದ್ಧ ಕಿಡಿ ಕಾರಿದ್ದಾರೆ. ಇದು ರಾಜಸ್ಥಾನದಲ್ಲಿ ಡಬಲ್‌ ಎಂಜಿನ್‌ ಸರ್ಕಾರದ ನೈಜ ಸ್ಥಿತಿ. ದಲಿತರ ಮೀಸಲಾತಿ ಕಿತ್ತುಕೊಂಡು ಅವರು ಹೊಡೆದು ಬಡಿದು ಕೊಲ್ಲಲು ಬಿಜೆಪಿಗೆ 400 ಸ್ಥಾನಗಳು ಬೇಕಾಗಿವೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಲೇ ಇರುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Mother Dies: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

ಐವರ ಬಂಧನ

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಐವರು ಕಿಡಿಗೇಡಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ದೀಪೇಂದ್ರ ಅಲಿಯಾಸ್ ಚಿಂಟು ರಜಪೂತ್, ಪ್ರವೀಣ್ ಅಲಿಯಾಸ್ ಪಿಕೆ ಮೇಘವಾಲ್, ಪ್ರವೀಣ್ ಅಲಿಯಾಸ್ ಬಾಬಾ ಮೇಘವಾಲ್, ಸುಭಾಷ್ ಅಲಿಯಾಸ್ ಚಿಂಟು ಮೇಘವಾಲ್, ಮತ್ತು ಸತೀಶ್ ಅಲಿಯಾಸ್ ಸುಖ ಮೇಘವಾಲ್ ಬಂಧಿತ ಆರೋಪಿಗಳು. ಆರೋಪಿಗಳು ಈ ಹಿಂದೆಯೂ ಇತರ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂಬ ವರದಿಗಳಿವೆ. ಸೂರಜ್‌ಗಢ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Viral Video: ಸಾಮಾನ್ಯವಾಗಿ ರಸ್ತೆ ಅಪಘಾತವಾದಾಗ ಅಕ್ಕಪಕ್ಕ ಇದ್ದವರು ನೆರವಿಗೆ ಧಾವಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತ್ ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡು ಹೋಗುತ್ತಿದ್ದಾನೆ! ಅಲ್ಲದೆ ಆತ ಕೈಯಲ್ಲಿ ದುಬಾರಿ ಐಫೋನ್‌ ಹಿಡಿದುಕೊಂಡಿದ್ದಾನೆ. ಸದ್ಯ ಆತನ ವರ್ತನೆಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ವೈರಲ್‌ ವಿಡಿಯೊ ನೀವೂ ನೋಡಿ.

VISTARANEWS.COM


on

Viral Video
Koo

ಲಕ್ನೋ: ಐಫೋನ್‌ ಹೊಂದಿದವರು ತಕ್ಕಮಟ್ಟಿನ ಶ್ರೀಮಂತರು ಎನ್ನುವ ಮಾತಿದೆ. ಈ ಫೋನ್‌ಗಳಿಗೆ ದುಬಾರಿ ಬೆಲೆ ಆಗಿರುವ ಕಾರಣ ಹೀಗೆ ಹೇಳಲಾಗುತ್ತದೆ. ಜತೆಗೆ ಐಫೋನ್‌ ಪ್ರತಿಷ್ಠೆಯ ವಿಷಯ ಎಂದೂ ಕೆಲವರು ಭಾವಿಸುತ್ತಾರೆ. ಇದೇ ಕಾರಣಕ್ಕೆ ಐಫೋನ್‌ ಕುರುತಾದ ತಹೇವಾರಿ ಮೀಮ್ಸ್‌, ರೀಲ್ಸ್‌ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತವೆ. ಇದೆಲ್ಲೆ ಫನ್ನಿ ವಿಡಿಯೊ ಬಿಡಿ. ಆದರೆ ಇದೀಗ ವೈರಲ್‌ ಆಗುತ್ತಿರುವ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ. ಅಂತಹದ್ದೇನಿದೆ ಈ ವಿಡಿಯೊದಲ್ಲಿ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Viral Video).

ಹೆದ್ದಾರಿಯೊಂದರಲ್ಲಿ ಲಾರಿ ಅಪಘಾತವಾಗಿದ್ದು, ಅದರಿಂದ ಹೊರಬಿದ್ದ ಜ್ಯೂಸ್‌ನ ಬಾಕ್ಸ್‌ ಅನ್ನು ಯುಕನೊಬ್ಬ ಎತ್ತಿಕೊಂಡು ಹೋಗುವ ದೃಶ್ಯ ಇದಾಗಿದೆ. ಅಪಘಾತಗೊಂಡ ಲಾರಿಯಲ್ಲಿದ್ದವರಿಗೆ ನೆರವಾಗುವುದು ಬಿಟ್ಟು ಈತ ಜ್ಯೂಸ್‌ ಎಗರಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ವಿಡಿಯೊದಲ್ಲಿ ಏನಿದೆ?

ಉತ್ತರಪ್ರದೇಶದ ಗಾಜಿಯಾಬಾದ್‌ನ ಲಾಲ್ ಕುವಾನ್ ಪ್ರದೇಶದಲ್ಲಿ ಸರಕು ಸಾಗಿಸುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿತ್ತು. ಇದರಿಂದ ಹೊರ ಚೆಲ್ಲಿದ ತಂಪು ಪಾನೀಯಗಳ ಪ್ಯಾಕ್, ಬಾಕ್ಸ್‌ ರಸ್ತೆಯಲ್ಲಿ ಹರಡಿತ್ತು. ʼಕರ್ಮ್ ಕರೋ ಕಾಂಡ್ ನಹೀಂʼ (ಒಳ್ಳೆಯ ಕಾರ್ಯಗಳನ್ನು ಮಾಡಿ, ಕಿಡಿಗೇಡಿತನವನ್ನು ಮಾಡಬೇಡಿ) ಎಂದು ಬರೆದಿರುವ ಕಪ್ಪು ಟೀ ಶರ್ಟ್ ಧರಿಸಿದ ವ್ಯಕ್ತಿ ಅಪಘಾತ ಸಂಭವಿಸಿದ ಸ್ಥಳದ ಬಳಿ ನಡೆದುಕೊಂಡು ಬರುತ್ತಾನೆ. ಅವನು ಟ್ರಕ್‌ನಲ್ಲಿದ್ದವರಿಗೆ ನೆರವಾಗಲು ಬರುತ್ತಿದ್ದಾನೆ ಎಂದುಕೊಂಡರೆ ಅದು ತಪ್ಪು. ಅವನು ಫೋನಿನಲ್ಲಿ ಮಾತನಾಡುತ್ತ ರಸ್ತೆಯಲ್ಲಿ ಬಿದ್ದಿರುವ ತಂಪು ಪಾನೀಯದ ಪ್ಯಾಕ್‌ ಎತ್ತಿ ಏನೂ ನಡೆದೇ ಇಲ್ಲವೆನ್ನುವಂತೆ ತನ್ನ ಪಾಡಿಗೆ ತಾನು ಹೊರಟು ಹೋಗುತ್ತಾನೆ. ವಿಶೇಷ ಎಂದರೆ ಆತನ ಕೈಯಲ್ಲಿರುವುದು ದುಬಾರಿ ಐಫೋನ್‌ ಎನ್ನುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ಒಟ್ಟಿನಲ್ಲಿ ಆತನ ಟೀಷರ್ಟ್‌ನ ಸಂದೇಶಕ್ಕೂ, ಕೈಯಲ್ಲಿರುವ ಐಫೋನ್‌ಗೂ ಆತನ ವರ್ತನೆಗೂ ಅಜಗಜಾಂತರ ವ್ಯತ್ಯಾಸ ಕಂಡು ಬಂದಿದೆ.

“ಬ್ರೋ, ತಂಪು ಪಾನೀಯವನ್ನು ಏಕೆ ಕದಿಯುತ್ತಿದ್ದೀಯಾ? ಅಪಘಾತ ಸಂಭವಿಸಿದೆ. ಕನಿಷ್ಠ ಅಪಘಾತ ಸ್ಥಳದಿಂದಾದರೂ ಕದಿಯಬೇಡ” ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅದಾಗ್ಯೂ ಐಫೋನ್‌ಧಾರಿ ತನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ತಂಪು ಪಾನೀಯ ಪ್ಯಾಕ್‌ನೊಂದಿಗೆ ಹೊರಟು ಹೋಗುತ್ತಾನೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

ನೆಟ್ಟಿಗರಿಂದ ಟೀಕೆ

ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಆ ವ್ಯಕ್ತಿಯ ವರ್ತನೆಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ʼʼಆತನ ನಿಜವಾದ ಸ್ವಭಾವ ಹೊರ ಬಂದಿದೆʼʼ ಎಂದು ಒಬ್ಬರು ಅಸಮಾಧಾನ ತೋಡಿಕೊಂಡಿದ್ದಾರೆ. ʼʼಇಂತಹ ವ್ಯಕ್ತಿಗಳಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?ʼʼ ಎಂದು ಇನ್ನೊಬ್ಬರು ಹತಾಶೆ ವ್ಯಕ್ತಪಡಿಸಿದ್ದಾರೆ. ʼʼತೀರ ಬಡವʼʼ ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ. ʼʼಇಎಂಐ ಪಾವತಿಸಿ ಐಫೋನ್‌ ಖರೀದಿಸಿರಬೇಕುʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ಮಾನವೀಯತೆ ಮರೆಯಾಗುತ್ತಿದೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ. ಕೆಲವರಂತೂ ಈತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗಾಜಿಯಾಬಾದ್‌ ಪೊಲೀಸರನ್ನು ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ ಆತನ ವರ್ತನೆ ಸಾಕಷ್ಟು ಟೀಕೆಗೆ ಗುರಿಯಾಗಿದೆ.

Continue Reading

ಪ್ರಮುಖ ಸುದ್ದಿ

Viral News: ಜೈಲಿಂದ ಹೊರಬಂದ ಖುಷಿಗೆ ರೌಡಿಯ ಬೃಹತ್ ಮೆರವಣಿಗೆ; ಮತ್ತೆ ಜೈಲಿಗೇ ಕಳುಹಿಸಿದ ಪೊಲೀಸರು!

Viral News ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಹರ್ಷದ್ ಪಟಾಂಕರ್ ಅನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್ ರ‍್ಯಾಲಿಯನ್ನು ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

VISTARANEWS.COM


on

Viral News
Koo

ಮಹಾರಾಷ್ಟ್ರ : ಮದುವೆ, ದೇವಸ್ಥಾನದ ಪ್ರತಿಷ್ಠಾಪನೆ ಸಮಾರಂಭದ ವೇಳೆ ಬೃಹತ್ ಮೆರವಣಿಗೆಯನ್ನು ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಕುಖ್ಯಾತ ರೌಡಿನೊಬ್ಬನನ್ನು ಸ್ವಾಗತಿಸಲು ಆತನ ಬೆಂಬಲಿಗರು ಬೃಹತ್‌ ರ‍್ಯಾಲಿಯನ್ನು  ಆಯೋಜಿಸಿದ್ದರು. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral News) ಆಗಿದೆ. ಆದರೆ ಈ ರ‍್ಯಾಲಿ ನಡೆಸಿ ಮತ್ತೆ ಆತ ಜೈಲು ಪಾಲಾಗಿದ್ದಾನೆ ಎನ್ನಲಾಗಿದೆ.

ಮಹಾರಾಷ್ಟ್ರ ಅಪಾಯಕಾರಿ ಚಟುವಟಿಕೆಗಳ ತಡೆ (ಎಂಪಿಡಿಎ) ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಿದ್ದ ನಾಸಿಕ್‌ನ ಕುಖ್ಯಾತ ರೌಡಿ ಹರ್ಷದ್ ಪಟಾಂಕರ್ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ. ಹಾಗಾಗಿ ಆ ದಿನ ಮಧ್ಯಾಹ್ನ 3:30 ಕ್ಕೆ ಸುಮಾರು 15 ದ್ವಿಚಕ್ರ ವಾಹನಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಗಿದೆ. ಈ ಮೆರವಣಿಗೆ ಬೆತೆಲ್ ನಗರದಿಂದ ಪ್ರಾರಂಭವಾಗಿ ಅಂಬೇಡ್ಕರ್ ಚೌಕ್, ಸಾಧು ವಾಸ್ವಾನಿ ರಸ್ತೆ ಮತ್ತು ಶರಣಪುರ ರಸ್ತೆ ಮೂಲಕ ಸಾಗಿದೆ. ಕಾರಿನ ಸನ್ ರೂಫ್‌ನಿಂದ ಕೈ ಬೀಸುತ್ತಿದ್ದ ಪಟಾಂಕರ್ ಅವರೊಂದಿಗೆ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗುತ್ತಿದ್ದರು.

ವರದಿ ಪ್ರಕಾರ, ಪಟಾಂಕರ್ ಮಾತ್ರವಲ್ಲದೆ ಅವರ ಏಳು ಸಹಚರರ ವಿರುದ್ಧವೂ ಸರ್ಕಾರ್ವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಟಾಂಕರ್ ಅವರನ್ನು ಈ ಹಿಂದೆ ಕೊಲೆ ಯತ್ನ, ಕಳ್ಳತನ ಮತ್ತು ಹಿಂಸಾಚಾರ ಸೇರಿದಂತೆ ಹಲವಾರು ಅಪರಾಧಗಳಿಗಾಗಿ ಬಂಧಿಸಲಾಗಿತ್ತು ಮತ್ತು ಜೈಲಿಗೆ ಹಾಕಲಾಗಿತ್ತು.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಒಂದು ವರ್ಷದ ಹಿಂದೆ ಎಂಪಿಡಿಎ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಸಂಭ್ರಮಾಚರಣೆಯ ರ‍್ಯಾಲಿಯಿಂದಾಗಿ ಪೊಲೀಸ್ ಕ್ರಮಕೈಗೊಂಡು ಈಗ ಅವರನ್ನು ಮತ್ತೆ ಜೈಲಿಗೆ ತಳ್ಳಿದೆ ಎನ್ನಲಾಗಿದೆ. ಅವರ ಆರು ಸಹಚರರನ್ನು ಗೋಪಾಲ್ ನಾಗೋರ್ಕರ್, ವೇದಾಂತ್ ಚಾಲ್ಡೆ, ಶಾನ್ ಮೈಕೆಲ್, ಜಾಯ್ ಮೈಕೆಲ್, ರಾಬಿನ್ಸನ್ ಬ್ಯಾಟಿಸ್, ವೈಭವ್ ಖಂಡ್ರೆ ಮತ್ತು ವಿಕಾಸ್ ನೇಪಾಳಿ ಎಂದು ಗುರುತಿಸಲಾಗಿದೆ.

Continue Reading

Latest

Viral Video: ಕೈದಿಗೆ ಕೈಕೋಳ ಹಾಕಿ ತಾಜ್ ಮಹಲ್‌ ತೋರಿಸಲು ಹೋಗಿದ್ದ ಪೊಲೀಸರು! ವಿಡಿಯೊ ನೋಡಿ

Viral Video: ಇತ್ತೀಚೆಗೆ ಕೈಕೋಳ ಧರಿಸಿದ ಕೈದಿಯೊಬ್ಬನನ್ನು ಪೊಲೀಸ್ ಅಧಿಕಾರಿಯೊಬ್ಬರು ತಾಜ್ ಮಹಲ್‌ಗೆ ಕರೆದೊಯ್ಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೈಕೋಳ ತೊಡಿಸಿದ್ದರಿಂದ ಕೈದಿಗೆ ತಾಜ್ ಮಹಲ್ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ತಿಳಿಸಿದೆ. ಈ ಘಟನೆ ಈಗ ರಾಜಸ್ಥಾನದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Viral Video
Koo


ಆಗ್ರಾ: ಕೈಗೆ ಬೇಡಿ ಹಾಕಿದ ಎಂದ ಮೇಲೆ ಅವರು ಕೈದಿಯಾಗಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುತ್ತದೆ. ಕೈದಿ ಜೈಲಿನಲ್ಲಿರಬೇಕು. ಅವರನ್ನು ಮನಬಂದಂತೆ ಹೊರಗಡೆ ಬಿಡುವ ಹಾಗಿಲ್ಲ. ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಕೈದಿಗಳನ್ನು ಕರೆದುಕೊಂಡು ಬರುವಂತಿಲ್ಲ. ಆದರೆ ಇತ್ತೀಚೆಗೆ ಕೈಕೋಳ ಧರಿಸಿದ ಕೈದಿಯೊಬ್ಬನನ್ನು ಪೊಲೀಸ್ ಅಧಿಕಾರಿಯೊಬ್ಬರು ತಾಜ್ ಮಹಲ್‍ಗೆ ಕರೆದೊಯ್ಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಕೈಕೋಳ ತೊಡಿಸಿದ್ದರಿಂದ ಕೈದಿಗೆ ತಾಜ್ ಮಹಲ್ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ತಿಳಿಸಿದೆ. ತಾಜ್ ಮಹಲ್‌ ಬಳಿ ರಕ್ಷಣೆಗೆ ನಿಯೋಜಿಸಲಾಗಿರುವ ಸಹಾಯಕ ಪೊಲೀಸ್ ಆಯುಕ್ತ ಸೈಯದ್ ಆರೀಬ್ ಅಹ್ಮದ್ ಅವರು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೊ ಹಳೆಯದು ಎಂದು ತಿಳಿಸಿದ್ದಾರೆ. ಅಲ್ಲದೇ ಕೈದಿಯ ಜೊತೆಗಿದ್ದ ಪೊಲೀಸ್ ಅಧಿಕಾರಿಯನ್ನು ಹಿಮಾಚಲ ಪ್ರದೇಶದ ಪೊಲೀಸ್ ಇಲಾಖೆಯಲ್ಲಿ ನಿಯೋಜಿಸಲಾಗಿತ್ತು ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ ಹಿಮಾಚಲ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಮತ್ತು ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜ್ ಮಹಲ್‍ನಿಂದ 500 ಮೀಟರ್ ದೂರದಲ್ಲಿ ಬಿಳಿ ಪೊಲೀಸ್ ಜೀಪ್ ನಿಲ್ಲಿಸಲಾಗಿತ್ತು ಮತ್ತು ಅಲ್ಲಿ ರಕ್ಷಣೆಗೆ ನಿಯೋಜಿಸಲಾದ ಸ್ಥಳೀಯ ಪೊಲೀಸರು ಹಿಮಾಚಲ ಪ್ರದೇಶದ ಅಧಿಕಾರಿಗಳಿಗೆ ತಮ್ಮ ಶಸ್ತ್ರಾಸ್ತ್ರಗಳನ್ನು ಅಲ್ಲಿಯೇ ಬಿಡುವಂತೆ ಕೇಳಿಕೊಂಡರು. ಇದರ ನಂತರ, ಒಬ್ಬ ಅಧಿಕಾರಿ ಕೈದಿಯೊಂದಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ ಎಎಸ್ಐ ಸಿಬ್ಬಂದಿ ಅವರನ್ನು ತಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 34 ಲಕ್ಷ ರೂ.ಗೆ ಮಾರಾಟವಾಯಿತು ʼರಾಮ ಜನ್ಮಭೂಮಿʼ ಸ್ಪೆಷಲ್‌ ವಾಚ್!

ಸ್ಥಳೀಯರು ಈ ಘಟನೆಯನ್ನು ವಿಡಿಯೊದಲ್ಲಿ ಸೆರೆಹಿಡಿದಿದ್ದು, ಇದರಲ್ಲಿ ಕೈಕೋಳ ಧರಿಸಿದ ಕೈದಿ ಮತ್ತು ಅವರ ಬೆಂಗಾವಲಿಗೆ ಇದ್ದ ಅಧಿಕಾರಿಯನ್ನು ತೋರಿಸಿದ್ದಾರೆ. ಅಲ್ಲದೇ ವಿಡಿಯೊ ತೆಗೆಯದಂತೆ ಅಧಿಕಾರಿಗಳು ಆಕ್ಷೇಪ ಮಾಡುತ್ತಿರುವುದನ್ನು ವಿಡಿಯೊದಲ್ಲಿ ತೋರಿಸಲಾಗಿದೆ.

Continue Reading

ದೇಶ

Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Rahul Gandhi: ಉತ್ತರ ಪ್ರದೇಶದ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಯೊಂದಕ್ಕೆ ರಾಹುಲ್‌ ಗಾಂಧಿ ಅವರು ಭೇಟಿ ನೀಡಿದರು. ಇದೇ ವೇಳೆ, ಚಮ್ಮಾರರ ಸಮಸ್ಯೆಗಳನ್ನು ಆಲಿಸಿದ ಅವರು, ಚಪ್ಪಲಿಯನ್ನೂ ಹೊಲಿದರು. ಚಪ್ಪಲಿ ಹೊಲಿಯುವುದು ಹೇಗೆ ಎಂಬುದನ್ನು ಅಂಗಡಿ ಮಾಲೀಕ ಹೇಳಿಕೊಟ್ಟರು.

VISTARANEWS.COM


on

Rahul Gandhi
Koo

ಲಖನೌ: ದೇಶಾದ್ಯಂತ ಸಂಚರಿಸುವ ಭಾರತ್‌ ಜೋಡೋ ಯಾತ್ರೆಯ (Bharat Jodo Yatra) ಹೊರತಾಗಿಯೂ ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಾಮಾನ್ಯ ಜನರೊಂದಿಗೆ ಬೆರೆಯುತ್ತಿದ್ದಾರೆ. ರೈತರು, ಕುಶಲಕರ್ಮಿಗಳು, ಯುವಕರೊಂದಿಗೆ ಬೆರೆಯುವ ಮೂಲಕ ಅವರ ಸಮಸ್ಯೆಗಳಿಗೆ ಕಿವಿಯಾಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ರಾಹುಲ್‌ ಗಾಂಧಿ ಅವರು ಶುಕ್ರವಾರ (ಜುಲೈ 26) ಉತ್ತರ ಪ್ರದೇಶದಲ್ಲಿ ಚಪ್ಪಲಿ ಅಂಗಡಿಯೊಂದಕ್ಕೆ (Cobbler Shop) ದಿಢೀರನೆ ಭೇಟಿ ನೀಡಿ, ಅಲ್ಲಿ ಚಪ್ಪಲಿ ಹೊಲಿಯುವ ಮೂಲಗ ಗಮನ ಸೆಳೆದಿದ್ದಾರೆ.

ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾದರು. ಕೋರ್ಟ್‌ಗೆ ಹಾಜರಾದ ಬಳಿಕ ಲಖನೌಗೆ ವಾಪಸಾಗುವ ವೇಳೆ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಗೆ ತೆರಳಿದ ಅವರು, ಮಾತುಕತೆ ನಡೆಸುವ ಜತೆಗೆ ಚಪ್ಪಲಿ ಹೊಲಿದರು. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

2023ರ ಸೆಪ್ಟೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕೀರ್ತಿ ನಗರ ಫರ್ನಿಚರ್‌ ಮಾರುಕಟ್ಟೆಗೆ ತೆರಳಿದ್ದರು. ಆಗ ಅವರು ಹಲವು ಮೇಜುಗಳನ್ನು ತಯಾರಿಸಿದ್ದರು. ಕಾರ್ಪೆಂಟರ್‌ಗಳ ಜತೆಗೂಡಿ ರಾಹುಲ್‌ ಗಾಂಧಿ ಅವರು ಮೇಜುಗಳನ್ನು ತಯಾರಿಸಿದ್ದರು. ಈ ಮೇಜುಗಳನ್ನು ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ಹಾಗೂ ಕಾರ್ಪೆಂಟರ್‌ಗಳು ಜತೆಗೂಡಿ ಪ್ರಮೀಳಾ ಬಾಯಿ ಚವ್ಹಾಣ್ ಶಾಲೆಗೆ ದೇಣಿಗೆಯಾಗಿ ನೀಡಿದ್ದರು. ಕಾರ್ಕರ್‌ಡೂಮಾದಲ್ಲಿರುವ ಶಾಲೆಗೆ ಮೇಜುಗಳನ್ನು ದೇಣಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಮಾಹಿತಿ ನೀಡಿತ್ತು.

ಬೈಕ್‌ ರಿಪೇರಿ ಮಾಡಿದ್ದ ರಾಹುಲ್‌ ಗಾಂಧಿ

2023ರ ಜೂನ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಜೋಲ್‌ಬಾಗ್‌ನಲ್ಲಿರುವ ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ ಬೈಕ್‌ ರಿಪೇರಿ ಮಾಡಿದ್ದರು. “ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ, ನಾನೂ ವ್ರೆಂಚ್‌ಗಳನ್ನು ತಿರುಗಿಸಿದೆ. ಅವರಿಂದ ಬೈಕ್‌ ರಿಪೇರಿ ಮಾಡುವುದನ್ನು ಕಲಿತೆ. ಬೈಕ್‌ ರಿಪೇರಿ ಮಾಡುವ ಇಂತಹ ಕೈಗಳೇ ಭಾರತವನ್ನು ನಿರ್ಮಿಸಿವೆ. ಇಲ್ಲಿಗೆ ಭೇಟಿ ನೀಡುವ ಮೂಲಕ ನಾನು ಮತ್ತೆ ಭಾರತ್‌ ಜೋಡೋ ಯಾತ್ರೆಯನ್ನು ಮುಂದುವರಿಸಿದ್ದೇನೆ” ಎಂದು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: Acharya Pramod Krishnam: ರಾಹುಲ್‌ ಗಾಂಧಿಯನ್ನು ‘ರಾಷ್ಟ್ರೀಯ ಸಮಸ್ಯೆ’ ಎಂದ ಆಚಾರ್ಯ ಪ್ರಮೋದ್‌ ಕೃಷ್ಣಂ!

Continue Reading
Advertisement
PARIS 2024 OLYMPICS
ಕ್ರೀಡೆ16 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ22 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್27 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್46 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ1 hour ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ1 hour ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ2 hours ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ2 hours ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ23 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌