Viral Video: ಮೆಟ್ರೋ, ವಿಮಾನ ಆಯಿತು ಈಗ ರೈಲಿನಲ್ಲಿ ಮಕ್ಕಳ ಎದುರೇ ಜೋಡಿಯ ಸರಸ! - Vistara News

ವೈರಲ್ ನ್ಯೂಸ್

Viral Video: ಮೆಟ್ರೋ, ವಿಮಾನ ಆಯಿತು ಈಗ ರೈಲಿನಲ್ಲಿ ಮಕ್ಕಳ ಎದುರೇ ಜೋಡಿಯ ಸರಸ!

ಕಳೆದ ಕೆಲವು ದಿನಗಳಿಂದ ಮೆಟ್ರೋದಲ್ಲಿ, ಬೈಕ್ ನಲ್ಲಿ ಅಸಭ್ಯವಾಗಿ ವರ್ತಿಸುತ್ತಿರುವ ಜೋಡಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು. ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಜೋಡಿಯೊಂದು ಸಣ್ಣ ಮಕ್ಕಳ ಎದುರೇ ರೈಲಿನಲ್ಲಿ ಮುದ್ದಾಡುತ್ತಾ ಸಾಗಿರುವುದು ವೈರಲ್ (Viral Video) ಆಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೆಹಲಿ ಮೆಟ್ರೋದಲ್ಲಿ (delhi metro) ಅಶ್ಲೀಲ ವರ್ತನೆಯ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (social media) ಆಗಾಗ ವೈರಲ್ (Viral Video) ಆಗುತ್ತಿದೆ. ಇದೀಗ ರೈಲಿನಲ್ಲೂ (train) ಜೋಡಿಯೊಂದು ಅಶ್ಲೀಲವಾಗಿ ವರ್ತಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಕಳೆದ ಕೆಲವು ದಿನಗಳಿಂದ ಮೆಟ್ರೋದಲ್ಲಿ, ಬೈಕ್ ನಲ್ಲಿ ಅಸಭ್ಯವಾಗಿ ವರ್ತಿಸುತ್ತಿರುವ ಜೋಡಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು. ಇದೀಗ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಜೋಡಿಯೊಂದು ಸಣ್ಣ ಮಕ್ಕಳ ಎದುರೇ ರೈಲಿನಲ್ಲಿ ಮುದ್ದಾಡುತ್ತಾ ಸಾಗಿರುವುದು ವೈರಲ್ ಆಗಿದೆ.

ಸ್ಲೀಪರ್ ಕೋಚ್‌ನಲ್ಲಿ ದಂಪತಿ ಮುದ್ದಾಡುತ್ತಿದ್ದಾಗ ರೈಲಿನ ಟಿಕೇಟ್ ಪರೀಕ್ಷಿಸಲು ಪರೀಕ್ಷಕರು ಅಲ್ಲಿಗೆ ಬಂದಿದ್ದಾರೆ. ಅವರೊಂದಿಗೆ ಮಾತನಾಡುತ್ತಿದ್ದರೂ ದಂಪತಿ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಎಲ್ಲರ ಉಪಸ್ಥಿತಿಯಲ್ಲಿಯೂ ಪರಸ್ಪರ ಮುದ್ದಾಡುತ್ತಿದ್ದರು. ಇದು ಮಕ್ಕಳು ಸೇರಿದಂತೆ ಇತರ ಪ್ರಯಾಣಿಕರಿಗೂ ಮುಜುಗರ ಉಂಟು ಮಾಡುವಂತಿತ್ತು.
ಈ ವಿಡಿಯೋ ಯಾವಾಗ ಮತ್ತು ಎಲ್ಲಿ ತೆಗೆದಿರುವುದೆಂದು ತಿಳಿದು ಬಂದಿಲ್ಲ. ಈ ಕುರಿತು ಸಾಕಷ್ಟು ನೆಟ್ಟಿಗರು ಕಾಮೆಂಟ್ ಕೂಡ ಮಾಡಿದ್ದಾರೆ.


ಎಕ್ಸ್ ನಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. 2.6 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿರುವ ಈ ವಿಡಿಯೋ ನೋಡಿ ಸಾಕಷ್ಟು ನೆಟ್ಟಿಗರು ಟೀಕಿಸಿದ್ದಾರೆ.

ಒಬ್ಬ ಬಳಕೆದಾರ, ರೈಲಿನಲ್ಲಿ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಇನ್ನೊಬ್ಬರು ಇದು ಜಾಸ್ತಿಯಾಯಿತು, ನಾಚಿಕೆ ಎನ್ನುವುದೇ ಇಲ್ಲ ಎಂದು ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ವಿಮಾನದಲ್ಲಿ ಜೋಡಿಯೊಂದು ಆಸನದಲ್ಲಿ ಕುಳಿತು ಮುದ್ದಾಡಿದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಮಾನ ಹಾರಾಟದ 4 ಗಂಟೆಗಳ ಕಾಲ ಜೋಡಿಯು ಆಲಿಂಗನದಲ್ಲಿದ್ದು ಸಾಕಷ್ಟು ನೆಟ್ಟಿಗರ ಟೀಕೆಗೆ ಗುರಿಯಾಗಿತ್ತು.

ರೈಲಿನಲ್ಲಿ ಹುಟ್ಟಿದ ಮಗುವಿಗೆ ʼಮಹಾಲಕ್ಷ್ಮಿʼ ಎಂದು ಹೆಸರಿಟ್ಟ ಮುಸ್ಲಿಂ ದಂಪತಿ

ಚಲಿಸುತ್ತಿದ್ದ ರೈಲಿನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆ ಮಗುವಿಗೆ ʼಮಹಾಲಕ್ಷ್ಮಿ ʼ ಎಂದು ನಾಮಕರಣ ಮಾಡಿದ್ದಾರಂತೆ ಎನ್ನುವ ಕುರಿತು ಸುದ್ದಿಯೊಂದು ವೈರಲ್ ಆಗಿದೆ.

ಜೂನ್ 6ರಂದು ಕೋಲ್ಹಾಪುರ-ಮುಂಬೈ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ನಲ್ಲಿ ಮೀರಾ ರೋಡ್ ನ ಫಾತಿಮಾ ಖಾತುನ್ ಎಂಬ 31 ವರ್ಷದ ಗರ್ಭಿಣಿ ಪ್ರಯಾಣಿಸುತ್ತಿದ್ದರು. ಆ ವೇಳೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವಿಚಾರ ಮಹಿಳೆ ತನ್ನ ಪತಿಗೆ ತಿಳಿಸಿದ್ದಾಳೆ ಮತ್ತು ನೋವು ಹೆಚ್ಚಾದ ಕಾರಣ ರೈಲಿನಲ್ಲಿರುವ ಶೌಚಾಲಯಕ್ಕೆ ತೆರಳಿದ್ದಾಳೆ. ಬಳಿಕ ರೈಲು ಲೋನಾವಾಲಾ ದಾಟಿದ ನಂತರ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ರೈಲಿನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ಆಕೆಗೆ ಸಹಾಯ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಮಹಿಳೆಯ ಪತಿ ತಯ್ಯಬ್ ಕರ್ಜಾತ್ ಸರ್ಕಾರಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತಾಯಿ ಮಗುವನ್ನು ರೈಲಿನಿಂದ ಕೆಳಗಿಳಿಸಿ ಹತ್ತಿರವಿದ್ದ ಉಪಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ಸಿಬ್ಬಂದಿಗಳು ತಾಯಿ, ಮಗುವಿಗೆ ಅಗತ್ಯವಿರುವ ಚಿಕಿತ್ಸೆ ನೀಡಿ ಮೂರು ದಿನಗಳ ನಂತರ ಡಿಸ್ಚಾರ್ಜ್ ಮಾಡಿದ್ದಾರೆ. ನಂತರ ಆ ಮುಸ್ಲಿಂ ದಂಪತಿ ಮಗುವಿಗೆ ‘ಮಹಾಲಕ್ಷ್ಮಿ’ ಎಂದು ಹಿಂದೂ ದೇವರ ಹೆಸರನ್ನು ಇಟ್ಟು ಕುತೂಹಲ ಮೂಡಿಸಿದ್ದಾರೆ.

ಈ ಬಗ್ಗೆ ಮಗುವಿನ ತಂದೆ ತಯ್ಯಬ್ ಕರ್ಜಾತ್ ಅವರು ಪ್ರತಿಕ್ರಿಯಿಸಿ ತಿರುಪತಿಯಿಂದ ಕೊಲ್ಲಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪ್ರಯಾಣಿಸಿದ ಕೆಲವು ಸಹ ಪ್ರಯಾಣಿಕರು ತನ್ನ ಮಗಳು ಈ ರೈಲಿನಲ್ಲಿ ಹುಟ್ಟಿದ್ದು, ದೇವಿಯ ದರ್ಶನ ಪಡೆದಂತೆ ಆಯಿತು ಎಂದು ಹೇಳಿದರಂತೆ. ಹಾಗಾಗಿ ತಾನು ಮಗುವಿಗೆ ಈ ಹೆಸರಿಟ್ಟೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Viral Video: ಈಗ ಸೋಶಿಯಲ್ ಮೀಡಿಯಾದ್ದೇ ಹವಾ. ಕೈಲ್ಲೊಂದು ಮೊಬೈಲ್ ಇದ್ದರೆ ಜಗತ್ತೇ ಮೆರಯುವ ಯುವಜನಾಂಗ ಏನು ಮಾಡುತ್ತಿದ್ದೇವೆ? ಇದು ಸರಿನಾ… ತಪ್ಪಾ…? ಇದರ ಪರಿವೇ ಇಲ್ಲದೇ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದ ಬುಲಂದ್ ಶಹರ್ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಯಿತು!

VISTARANEWS.COM


on

Viral Video
Koo

ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಲೈಕ್ಸ್ , ಕಾಮೆಂಟ್‌ ಪಡೆಯಲು ಯುವಕರು ಅನೇಕ ದುಸ್ಸಾಹಸಗಳಿಗೆ ಕೈ ಹಾಕಿ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಅದೇ ರೀತಿ ಇದೀಗ ಯುವಕರು ಸಿನಿಮಾವೊಂದರಲ್ಲಿ ಹೀರೊ ಲುಕ್‌ ಅನ್ನು ನಕಲು ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video) ಆಗಿದೆ.

ಉತ್ತರ ಪ್ರದೇಶದ ಬುಲಂದ್ ಶಹರ್‌ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೊದಲ್ಲಿ ಆರು ಮಂದಿ ಯುವಕರು ರಕ್ತದಂತೆ ಕಾಣುವ ಬಣ್ಣವನ್ನು ಬ್ಯಾಂಡೇಜ್‌ಗೆ ಬಳಿದುಕೊಂಡು ಅದನ್ನು ಮುಖಕ್ಕೆ ಸುತ್ತಿಕೊಂಡು ಕೈಯಲ್ಲಿ ಕೋಲುಗಳನ್ನು ಹಿಡಿದು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿಹಾಕಿದ್ದಾರೆ. ಇವರಲ್ಲಿ ಒಬ್ಬ ಶರ್ಟ್ ಧರಿಸಿದೆ ತನ್ನ ಇಡೀ ದೇಹವನ್ನು ರಕ್ತದ ಕಲೆಯಂತೆ ಕಾಣುವ ಬ್ಯಾಂಡೇಜ್‌ನಿಂದ ಮುಚ್ಚಿಕೊಂಡಿದ್ದಾನೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಗಿದೆ. ಈ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ವಿಡಿಯೊ 15 ನಿಮಿಷಗಳ ಕಾಲವಿದ್ದು, ಸಮಾಜದ ಜನತೆಗೆ ಉಪದ್ರವ ನೀಡುವಂತಹ ಈ ರೀಲ್ಸ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದಕ್ಕೆ ಶೀರ್ಷಿಕೆ ನೀಡಲಾಗಿದೆ. ಈ ಆರು ಮಂದಿ ಸ್ಥಳೀಯರನ್ನು ಹೆದರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೇ ಮುಂದೆ ಇಂತಹ ಕುಚೇಷ್ಠೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

ರೀಲ್ಸ್‌ಗಾಗಿ ಯುವಕರು ಇಂತಹ ಕುಚೇಷ್ಠೆಗಳನ್ನು ಈ ಹಿಂದೆ ಹಲವು ಬಾರಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಅನೇಕ ಬಾರಿ ಎಚ್ಚರಿಕೆ ನೀಡಿದರೂ ಕೂಡ ಇಂತಹ ಘಟನೆಗಳು ನಡೆಯುತ್ತಿರುತ್ತದೆ. ಈ ಹಿಂದೆ ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ವೇಗವಾಗಿ ಬರುವ ರೈಲಿಗೆ ನೀರು ಚುಮ್ಮುವಂತೆ ರೈಲು ಹಳಿ ಮೇಲೆ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿ ರೈಲಿನ ಪ್ರಯಾಣಿಕರಿಂದ ಒದೆ ತಿಂದಿದ್ದಾರೆ. ಹಾಗೇ ರೀಲ್ಸ್ ಗಾಗಿ ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ಕೆಳಗಿಳಿದು ನೇತಾಡಿದ ಯುವತಿಯನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು.

Continue Reading

ಪ್ರಮುಖ ಸುದ್ದಿ

Snake: ಮಲಗಿದ್ದವನ ಚಡ್ಡಿಯೊಳಗೆ ನುಗ್ಗಿದ ನಾಗರಹಾವು; ಅದು ಹೊರಬರುವ ಮುನ್ನ ಮಾಡಿದ ಅನಾಹುತ ಏನು?

Snake: ಥಾಯ್ಲೆಂಡ್‌ನಲ್ಲಿ ಇತ್ತೀಚೆಗೆ ಯುವಕನೊಬ್ಬ ರಾತ್ರಿ ಮಲಗಿದ್ದಾನೆ. ಇಡೀ ದಿನ ಸುತ್ತಾಡಿದ ಸುಸ್ತೋ ಏನೋ, ಗಾಢವಾಗಿ ಆತನನ್ನು ನಿದ್ರಾದೇವತೆ ಆವರಿಸಿದ್ದಾಳೆ. ಇದೇ ವೇಳೆ ಎಲ್ಲಿಂದಲೋ ಮೆಲ್ಲಗೆ ಬಂದ ಹಾವು, ನಿಧಾನವಾಗಿ ಯುವಕನ ಚಡ್ಡಿಯೊಳಗೆ (ಶಾರ್ಟ್ಸ್)‌ ಪ್ರವೇಶಿಸಿದೆ. ಇಡೀ ರಾತ್ರಿ ಹಾವು ಆತನ ಚಡ್ಡಿಯೊಳಗೆ ಕಳೆದಿದ್ದು, ಯುವಕನು ಬೆಳಗ್ಗೆ ಎದ್ದು ನೋಡಿದಾಗ ಬರೀ ಆಘಾತವಲ್ಲ, ಮರ್ಮಾಘಾತವಾಗಿದೆ.

VISTARANEWS.COM


on

Snake
Koo

ನವದೆಹಲಿ: ಮಳೆಗಾಲ ಶುರುವಾಗಿದೆ. ಗ್ರಾಮೀಣ ಭಾಗಗಳಲ್ಲಿ ವಾಸಿಸುವವರು, ಬೆಟ್ಟ-ಗುಡ್ಡಗಳ ಪಕ್ಕದಲ್ಲಿ, ಜಮೀನಿನಲ್ಲಿ ಮನೆ ಮಾಡಿಕೊಂಡಿರುವವರಿಗೆ ಹಾವುಗಳು (Snake) ಕಾಣಿಸುವುದು ಮಳೆಯಷ್ಟೇ ಸಹಜವಾಗಿರುತ್ತದೆ. ಆದರೆ, ನಗರ ಪ್ರದೇಶಗಳಲ್ಲಿ ಹಾವುಗಳು ಮಳೆಗಾಲದಲ್ಲೂ ಕಾಣಿಸಿಕೊಳ್ಳುವುದು ವಿರಳ. ಆದರೂ, ಶೂನಲ್ಲೇ, ಹೆಲ್ಮೆಟ್‌ನಲ್ಲೋ, ಕಿಟಕಿಯಲ್ಲೋ ಕಾಣಿಸಿಕೊಳ್ಳುವ ಹಾವುಗಳು ಭಾರಿ ಆತಂಕ ಸೃಷ್ಟಿಸುತ್ತವೆ. ಆದರೆ, ಥಾಯ್ಲೆಂಡ್‌ನಲ್ಲಿ (Thailand) ಮಲಗಿದ್ದ ಯುವಕನೊಬ್ಬನ ಚಡ್ಡಿಯೊಳಗೇ ನಾಗರಹಾವೊಂದು ನುಗ್ಗಿದ್ದು, ಆತ ಎಚ್ಚರಗೊಂಡಾಗ ಪ್ರಾಣವು ಬಾಯಿಗೆ ಬಂದಿದ್ದಂತೂ ಸುಳ್ಳಲ್ಲ.

ಹೌದು, ಥಾಯ್ಲೆಂಡ್‌ನಲ್ಲಿ ಇತ್ತೀಚೆಗೆ ಯುವಕನೊಬ್ಬ ರಾತ್ರಿ ಮಲಗಿದ್ದಾನೆ. ಇಡೀ ದಿನ ಸುತ್ತಾಡಿದ ಸುಸ್ತೋ ಏನೋ, ಗಾಢವಾಗಿ ಆತನನ್ನು ನಿದ್ರಾದೇವತೆ ಆವರಿಸಿದ್ದಾಳೆ. ಇದೇ ವೇಳೆ ಎಲ್ಲಿಂದಲೋ ಮೆಲ್ಲಗೆ ಬಂದ ಹಾವು, ನಿಧಾನವಾಗಿ ಯುವಕನ ಚಡ್ಡಿಯೊಳಗೆ (ಶಾರ್ಟ್ಸ್)‌ ಪ್ರವೇಶಿಸಿದೆ. ಇಡೀ ರಾತ್ರಿ ಹಾವು ಯುವಕನ ಚಡ್ಡಿಯೊಳಗೆ ಬೆಚ್ಚಗೆ ಮಲಗಿದೆ. ಯುವಕನೂ ಮಲಗಿದ್ದಾನೆ. ಆದರೆ, ಬೆಳಗ್ಗೆ ಏಳುತ್ತಲೇ ಯುವಕನಿಗೆ ತನ್ನ ಚಡ್ಡಿಯೊಳಗೆ ಏನೂ ನುಸುಳಿದ, ಅಲುಗಾಡಿದ ಅನುಭವವಾಗಿದೆ.

ಅಪಾಯದ ಮುನ್ಸೂಚನೆ ಅರಿತ ಯುವಕನು ಅಲುಗಾಡದೆ ಚಡ್ಡಿಯೊಳಗೆ ಏನಿದೆ ಎಂಬುದನ್ನು ನೋಡಿದ್ದಾನೆ. ಆಗ ನಾಗರಹಾವು ಕಂಡ ಆತನಿಗೆ ಆಘಾತವಾಗಿದೆ. ಸ್ವಲ್ಪ ಅಲುಗಾಡಿದರೂ ಹಾವು ಕಚ್ಚುತ್ತದೆ ಎಂಬುದನ್ನು ಅರಿತ ಆತನು ಗೆಳೆಯರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಸುದ್ದಿ ತಿಳಿದ ಗೆಳೆಯರು ಕೂಡ ಆಘಾತಕ್ಕೊಳಗಾಗಿದ್ದು, ಕೂಡಲೇ ಸ್ಥಳೀಯ ಉರಗ ತಜ್ಞರನ್ನು ಕರೆದುಕೊಂಡು ಮನೆಗೆ ಹೋಗಿದ್ದಾರೆ.

ಯುವಕನ ಮನೆಗೆ ಬಂದ ಉರಗ ತಜ್ಞನು ಯುವಕನ ಚಡ್ಡಿಯಿಂದ ನಿಧಾನವಾಗಿ ಹಾವನ್ನು ಹೊರತೆಗೆದಿದ್ದಾರೆ. ಹಾವು ನೋಡಿದ ಕ್ಷಣದಿಂದ, ಗೆಳೆಯರಿಗೆ ಕರೆ ಮಾಡಿ, ಅವರು ಉರಗ ತಜ್ಞನನ್ನು ಕರೆದುಕೊಂಡು ಬಂದು, ಆತ ಹಾವನ್ನು ಹೊರಗೆ ತೆಗೆಯುವವರೆಗೂ ಯುವಕನು ಸ್ವಲ್ಪವೂ ಅಲುಗಾಡದೆ ಇದ್ದಿದ್ದು, ಹಾವು ಕೂಡ ಕೋಪದಲ್ಲಿ ಈತನಿಗೆ ಕಚ್ಚದೆ ಇದ್ದಿದ್ದು ಆತನ ಅದೃಷ್ಟವೇ ಸರಿ. ಇನ್ನು, ಯುವಕನ ಚಡ್ಡಿಯಿಂದ ಹಾವನ್ನು ತೆಗೆದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಇನ್ನು ಯುವಕನು ಮಲಗುವ ಮುನ್ನ ಹಾಗೂ ಎದ್ದ ನಂತರ ಚಡ್ಡಿಯನ್ನು ನೋಡಿಕೊಳ್ಳುವುದೇ ಕೆಲಸವಾಗಿದೆ. ಅವನಿಗೆ ಅಷ್ಟು ಆಘಾತವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral Video: ನಾಗರಹಾವು ಟಾಯ್ಲೆಟ್ ಕಮೋಡ್ ನೊಳಗೂ ಇರಬಹುದು, ಹುಷಾರ್! ಈ ವಿಡಿಯೊ ನೋಡಿ

Continue Reading

Latest

Viral Video: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

Viral Video: ಕೆಲವೊಮ್ಮೆ ನಾವು ಮಾಡುವ ತಮಾಷೆ ನಮ್ಮ ಪಾಲಿಗೆ ಹೇಗೆ ಉಲ್ಟಾ ಹೊಡೆಯುತ್ತೆ ಎಂಬುದಕ್ಕೆ ಇಲ್ಲೊಂದು ಘಟನೆ ನಿದರ್ಶನವಾಗಿದೆ. ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ಕಠಿಣ ಮಾರ್ಗವನ್ನು ಅನುಸರಿಸಿದ್ದಾರೆ. ಚಲಿಸುವ ರೈಲು ಮಧ್ಯದಲ್ಲಿ ಎಲ್ಲೂ ನಿಲ್ಲುವುದಿಲ್ಲ ಎಂದು ಭಾವಿಸಿದ ಯುವಕರು ವೇಗವಾಗಿ ಬರುವ ರೈಲಿಗೆ ನೀರು ಚಿಮ್ಮುವಂತೆ ರೈಲು ಹಳಿ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆಗ ಬಂದ ರೈಲಿಗೆ ಆ ನೀರು ಹಾರಿದೆ. ಆದರೆ ಅವರ ತಮಾಷೆ ಅವರಿಗೆ ದುಬಾರಿಯಾಗಿದೆ. ಈ ಸುದ್ದಿ ಓದಿ.

VISTARANEWS.COM


on

Viral Video
Koo

ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕೆಂದು ಎಲ್ಲರೂ ಬಯಸುವುದು ಸಹಜ. ಅದಕ್ಕಾಗಿ ರೀಲ್ಸ್‌ಗಳನ್ನು ಮಾಡುತ್ತಾರೆ. ಆದರೆ ನೀವು ಮಾಡುವಂತಹ ರೀಲ್ಸ್ ನಿಮಗೂ ಹಾಗೂ ಬೇರೆಯರಿಗೆ ಹಾನಿ ಮಾಡುವಂತದಾಗಿರಬಾರದು. ಯಾಕೆಂದರೆ ಆಮೇಲೆ ಅದರ ಫಲವನ್ನು ನೀವೇ ಅನುಭವಿಸಬೇಕಾಗುತ್ತದೆ. ಇದಕ್ಕೆ ನಿದರ್ಶನವೆಂಬಂತೆ ಪಾಕಿಸ್ತಾನದಲ್ಲಿ ಇಂತಹದೊಂದು ಘಟನೆ ನಡೆದಿದೆ, ರೀಲ್ ಮಾಡಲು ಹೋಗಿ ಯುವಕರ ಗುಂಪೊಂದು ರಿಯಲ್ ಆಗಿ ಸಾರ್ವಜನಿಕರಿಂದ ಒದೆ ತಿಂದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ಕಠಿಣ ಮಾರ್ಗವನ್ನು ಅನುಸರಿಸಿದ್ದಾರೆ. ಚಲಿಸುವ ರೈಲು ಮಧ್ಯದಲ್ಲಿ ಎಲ್ಲೂ ನಿಲ್ಲುವುದಿಲ್ಲ ಎಂದು ಭಾವಿಸಿದ ಯುವಕರು ವೇಗವಾಗಿ ಬರುವ ರೈಲಿಗೆ ನೀರು ಚುಮ್ಮುವಂತೆ ರೈಲು ಹಳಿ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆಗ ಬಂದ ರೈಲಿಗೆ ಆ ನೀರು ಹಾರಿದೆ. ಅವರ ತಮಾಷೆ ಅವರಿಗೆ ದುಬಾರಿಯಾಗಿದೆ. ಯಾಕೆಂದರೆ ರೈಲು ಮಧ್ಯದಲ್ಲಿ ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಕರು ಕೋಪಗೊಂಡು ಯುವಕರ ಮೇಲೆ ದಾಳಿ ಮಾಡಿದ್ದಾರೆ.

ವಿಡಿಯೊದಲ್ಲಿ ವೇಗವಾಗಿ ಬರುತ್ತಿರುವ ರೈಲಿಗೆ ಇವರು ತೊರೆಗೆ ಅಡ್ಡಲಾಗಿ ಇಟ್ಟ ಬೈಕಿಂದ ನೀರು ಚಿಮ್ಮುತ್ತಿದೆ. ಆ ವೇಳೆ ರೈಲು ಮಧ್ಯದಲ್ಲೆ ನಿಂತು ಪ್ರಯಾಣಿಕರು ಕೋಪಗೊಂಡು ಯುವಕರನ್ನು ಅಡ್ಡಾಡಿಸಿಕೊಂಡು ಹೊಡೆಯುತ್ತಿರುವುದು ಕಾಣಿಸುತ್ತಿದೆ. ಆಗ ಪರಿಸ್ಥಿತಿ ವಿಕೋಪಕ್ಕೆ ಹೋದ ಕಾರಣ ಪೊಲೀಸರು ಮಧ್ಯ ಪ್ರವೇಶಿಸಿ ಅವರ ಬೈಕ್‌ನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈವರೆಗೆ ಇದಕ್ಕೆ 2.5 ಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ. ಅನೇಕರು ಕಾಮೆಂಟ್ ಕೂಡ ಮಾಡಿದ್ದಾರೆ. ನೆಟ್ಟಿಗರು ಯುವಕರು ರೈಲನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತಿದ್ದಾರೆ ಎಂದು ತಮಾಷೆ ಮಾಡಿದ್ದಾರೆ.

Viral Video

ಈ ಘಟನೆ ಗಂಭೀರವಾಗಿದೆಯಾದರೂ ಇಲ್ಲಿಯವೆರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಹಾಗಾಗಿ ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಕೂಡ ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ ಹಾಗೂ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

ಇನ್ನೊಬ್ಬರಿಗೆ ತಮಾಷೆ ಮಾಡುವುದು ಕೆಲವೊಮ್ಮೆ ನಮಗೆ ದುಬಾರಿಯಾಗಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಪ್ರಯಾಣಿಕರನ್ನು ತಮಾಷೆ ಮಾಡಲು ಹೋದ ಯುವಕರಿಗೆ ಈ ಘಟನೆ ತಕ್ಕ ಪಾಠ ಕಲಿಸಿದೆ. ದುರುದ್ದೇಶವುಳ್ಳ ತಮಾಷೆ ಅನಗತ್ಯ ಸಮಸ್ಯೆಯನ್ನು, ಅಪಾಯವನ್ನು ತಂದೊಡ್ಡುತ್ತದೆ ಎಂಬುದು ಈ ಘಟನೆಯಿಂದ ಎಲ್ಲರಿಗೂ ತಿಳಿದಂತಾಗಿದೆ.

Continue Reading

Latest

Viral Video: ಒಂದು ದಿನದ ಮಟ್ಟಿಗೆ ಈ ಬಾಲಕ ಐಪಿಎಸ್‌ ಅಧಿಕಾರಿ; ಇವನ ಕಥೆ ಕಣ್ಣೀರು ತರಿಸುವಂಥದ್ದು

Viral Video: ಉತ್ತರ ಪ್ರದೇಶದ ವಾರಣಾಸಿಯ 9 ವರ್ಷದ ಬಾಲಕ ರಣವೀರ್ ಭಾರತಿಗೆ ದೊಡ್ಡವನಾದ ಮೇಲೆ ಓದಿ ಐಪಿಎಸ್ ಅಧಿಕಾರಿಯಾಗಬೇಕೆಂಬ ಕನಸಿತ್ತು. ಆದರೆ ಆತ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿರುವುದರಿಂದ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಿಲ್ಲ ಎಂಬ ಬೇಸರ ಕಾಡುತ್ತಿತ್ತು.ವಾರಣಾಸಿ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿಯೂಷ್ ಮೊರ್ಡಿಯಾ ಈ ವಿಚಾರ ತಿಳಿದು ಆತನ ಕನಸನ್ನು ನನಸು ಮಾಡಲು ಒಂದು ದಿನದ ಮಟ್ಟಿಗೆ ಐಪಿಎಸ್ ಅಧಿಕಾರಿಯಾಗಲು ಅನುಮತಿ ನೀಡಿದ್ದರು.

VISTARANEWS.COM


on

Viral Video
Koo

ವಾರಣಾಸಿ : ಐಪಿಎಸ್, ಐಎಎಸ್ ಹುದ್ದೆ ಎನ್ನುವುದು ಬಹಳ ದೊಡ್ಡ ಹುದ್ದೆಗಳು. ಹಾಗಾಗಿ ಕೆಲವರು ಐಪಿಎಸ್, ಐಎಎಸ್ ಅಧಿಕಾರಿಯಾಗಬೇಕೆಂದು ಬಯಸುತ್ತಾರೆ. ಆದರೆ ಒಬ್ಬ ಐಪಿಎಸ್, ಐಎಎಸ್ ಆಗಬೇಕೆಂದರೆ ಅವರು ಕಠಿಣ ಶ್ರಮವನ್ನು ಹಾಕಬೇಕಾಗುತ್ತದೆ. ಈ ವೇಳೆ ಅನೇಕ ಸವಾಲುಗಳು ಎದುರಾಗುತ್ತದೆ. ಇವುಗಳನ್ನು ಎದುರಿಸಿ ಐಪಿಎಸ್, ಐಎಎಸ್ ಅಧಿಕಾರಿ ಆಗುವುದು ಸಾಮಾನ್ಯವಾದ ಕೆಲಸವಲ್ಲ. ಆದರೆ 9 ವರ್ಷದ ಬಾಲಕನೊಬ್ಬ ಐಪಿಎಸ್ ಅಧಿಕಾರಿ ಆಗಿದ್ದಾನಂತೆ. ಆತನ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಉತ್ತರಪ್ರದೇಶದ ವಾರಾಣಾಸಿಯ 9 ವರ್ಷದ ಬಾಲಕ ರಣವೀರ್ ಭಾರತಿಗೆ ದೊಡ್ಡವನಾದ ಮೇಲೆ ಓದಿ ಐಪಿಎಸ್ ಅಧಿಕಾರಿಯಾಗಬೇಕೆಂಬ ಕನಸಿತ್ತು. ಆದರೆ ಆತ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿರುವುದು ಇತ್ತೀಚೆಗೆ ತಿಳಿದಿದೆ. ಅದಕ್ಕಾಗಿ ಆತ ವಾರಣಾಸಿಯ ಮಹಾಮಾನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಾಗಾಗಿ ಆತ ಎಷ್ಟೇ ಪ್ರಯತ್ನಿಸಿದರೂ ಆತನಿಗೆ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಿಲ್ಲ ಎಂದು ಅರಿತು ಬೇಸರಗೊಂಡಿದ್ದಾನೆ.

Viral Video

ಆದರೆ ವಾರಣಾಸಿ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿಯೂಷ್ ಮೊರ್ಡಿಯಾ ಈ ವಿಚಾರ ತಿಳಿದು ಆತನ ಕನಸನ್ನು ನನಸು ಮಾಡಲು ಒಂದು ದಿನದ ಮಟ್ಟಿಗೆ ಐಪಿಎಸ್ ಅಧಿಕಾರಿಯಾಗಲು ಅನುಮತಿ ನೀಡಿದ್ದಾರೆ. ಹಾಗಾಗಿ ಬಾಲಕ ಖಾಕಿ ಸಮವಸ್ತ್ರ ಧರಿಸಿ ಐಪಿಎಸ್ ಅಧಿಕಾರಿಯ ಸೀಟಿನಲ್ಲಿ ಕುಳಿತುಕೊಂಡು ಅಧಿಕಾರಿಗಳಿಗೆ ಹಸ್ತಲಾಘವ ಮಾಡಿದ್ದಾನೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಎಡಿಜಿ ವಲಯ ವಾರಣಾಸಿಯ ಅಧಿಕೃತ ಟ್ವೀಟರ್ ಖಾತೆಯಲ್ಲಿ ಜೂನ್ 26ರಂದು ಪೋಸ್ಟ್ ಮಾಡಲಾಗಿದೆ. ಈ ವಿಡಿಯೊ ವೈರಲ್ ಆಗಿದ್ದು, ಬಾಲಕನ ಆಸೆಯನ್ನು ಪೂರ್ತಿ ಮಾಡಿದ ಪೊಲೀಸರ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇಲಾಖೆಯಿಂದ ಇದು ಉತ್ತಮ ಆಲೋಚನೆ ಎಂದು ಹಲವರು ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಇನ್ನೊಬ್ಬರು ಇದರಿಂದ ಮಗು ಬಹಳ ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

Viral Video

ಇದನ್ನೂ ಓದಿ:  ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

ಪೊಲೀಸರೆಂದರೆ ಕರುಣೆ, ಕನಿಕರ ಇಲ್ಲದವರು, ಎಲ್ಲರ ಮೇಲೆ ದೌರ್ಜನ್ಯ ಎಸಗುತ್ತಾರೆ ಎಂದು ಹಲವರು ಹೇಳುತ್ತಿರುತ್ತಾರೆ. ಆದರೆ ಈ ಘಟನೆಯನ್ನು ನೋಡಿದರೆ ಪೊಲೀಸರಿಗೂ ಒಂದು ಒಳ್ಳೆ ಮನಸ್ಸಿದೆ ಎಂಬುದು ತಿಳಿಯುತ್ತದೆ.

Continue Reading
Advertisement
karnataka Rain
ಮಳೆ7 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Mohan Bhagwat
ದೇಶ14 mins ago

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Kalki 2898 AD Yash calls visually stunning spectacle
ಟಾಲಿವುಡ್29 mins ago

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

IND vs SA Final
ಕ್ರೀಡೆ33 mins ago

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

Law And Order
ಕರ್ನಾಟಕ41 mins ago

Law And Order: ಗದಗ, ರಾಯಚೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

Actor Darshan Renuka Swamy case In colorskannada shantam Paapam
ಸ್ಯಾಂಡಲ್ ವುಡ್50 mins ago

Actor Darshan: ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Isha Ambani
ವಾಣಿಜ್ಯ1 hour ago

Isha Ambani: ತಾನು ಅವಳಿ ಮಕ್ಕಳಿಗೆ ತಾಯಿಯಾಗಿದ್ದು ಐವಿಎಫ್ ಮೂಲಕ ಎಂದ ಇಶಾ ಅಂಬಾನಿ

Road Accident
ದೇಶ1 hour ago

Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

IND vs SA Final
ಕ್ರಿಕೆಟ್1 hour ago

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

Job Alert
ಉದ್ಯೋಗ2 hours ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌