Viral Video: ನಾಗರಹಾವು ಟಾಯ್ಲೆಟ್ ಕಮೋಡ್ ನೊಳಗೂ ಇರಬಹುದು, ಹುಷಾರ್! ಈ ವಿಡಿಯೊ ನೋಡಿ - Vistara News

ವೈರಲ್ ನ್ಯೂಸ್

Viral Video: ನಾಗರಹಾವು ಟಾಯ್ಲೆಟ್ ಕಮೋಡ್ ನೊಳಗೂ ಇರಬಹುದು, ಹುಷಾರ್! ಈ ವಿಡಿಯೊ ನೋಡಿ

Viral Video: ಕೆಲವೊಮ್ಮೆ ಸ್ನಾನಗೃಹದಲ್ಲಿ ಅವಿತುಕೊಳ್ಳುವ ಹಾವುಗಳು ಮೂರು ದಿನಗಳವರೆಗೆ ಇರುತ್ತವೆ. ಹಾವು ಯಾವ ಮಹಡಿಯಲ್ಲಿ ಕಾಣಿಸುತ್ತದೆ ಎಂಬುದರ ಮೇಲೆ ಇದು ಅವಲಂಬಿತವಾಗಿದೆ. ಅವು ನೆಲಮಹಡಿಗೆ ಮಾತ್ರ ಬರುತ್ತವೆ ಎಂಬುದು ತಪ್ಪು ಕಲ್ಪನೆ. ಯಾವುದೇ ಮಹಡಿಗೆ ಅವು ಬಹಳ ಸುಲಭವಾಗಿ ಪ್ರಯಾಣಿಸಬಲ್ಲವು ಎಂದು ಈ ಹಾವನ್ನು ಹಿಡಿದಿರುವ ವನ್ಯಪ್ರಾಣಿ ಸಂರಕ್ಷಕ ಹೇಳಿದ್ದಾರೆ.

VISTARANEWS.COM


on

Viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್: ಟಾಯ್ಲೆಟ್ ಕಮೋಡ್ ನಲ್ಲಿ (toilet commode) ನಾಗರಹಾವು (cobra) ಪತ್ತೆಯಾದ ಘಟನೆ ಇಂದೋರ್ ನಲ್ಲಿ (Indore) ನಡೆದಿದ್ದು, ಭಯ ಹುಟ್ಟಿಸುವ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ (social media) ಇನ್ ಸ್ಟಾಗ್ರಾಮ್ ನಲ್ಲಿ (Instagram) ಹಾವು ರಕ್ಷಕ ರಾಜೇಶ್ ಜಾಟ್ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೊ ಭಾರೀ ವೈರಲ್ (Viral Video) ಆಗಿದೆ.

ಇಂದೋರ್‌ನ ವಾಯ್ಸ್ 4 ವೈಲ್ಡ್‌ಲೈಫ್ ಫೌಂಡೇಶನ್‌ನ ( Voice4Wildlife Foundation) ನಿರ್ದೇಶಕ ಮತ್ತು ಸಂಸ್ಥಾಪಕ ಜಾಟ್ ಅವರು ತಮ್ಮ ಫೌಂಡೇಶನ್ ನಗರಕ್ಕೆ ಬರುವ ವನ್ಯಜೀವಿ ಪ್ರಾಣಿಗಳಾದ ವಿಷಕಾರಿ ಹಾವು ಮತ್ತು ಉಡ ವನ್ನು ರಕ್ಷಿಸುತ್ತಿದೆ. ಗೂಗಲ್ ನಲ್ಲಿ ನಮ್ಮ ಫೌಂಡೇಶನ್ ಮಾಹಿತಿ ಇದೆ. ಇಂತಹ ಸಂದರ್ಭದಲ್ಲಿ ಜನರು ನಮ್ಮ ವೆಬ್‌ಸೈಟ್ ‘voice4wildlife.in’ ಮೂಲಕ ನಮ್ಮನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 1ರಂದು ಮಧ್ಯರಾತ್ರಿ ವನ್ಯಜೀವಿಯೊಂದು ನಗರಕ್ಕೆ ಬಂದಿರುವುದಾಗಿ ಫೌಂಡೇಷನ್ ಗೆ ಕರೆ ಬಂದಿತ್ತು. ಇಂದೋರ್‌ನ ನಿವಾಸಿಯೊಬ್ಬರು ತಮ್ಮ ಮನೆಯಲ್ಲಿ ಹಾವನ್ನು ನೋಡಿ ಕರೆ ಮಾಡಿದ್ದರು ಎಂದು ರಾಜೇಶ್ ಜಾಟ್ ಹೇಳಿದ್ದಾರೆ. ಕೂಡಲೇ ಹಾವಿನ ಮೇಲೆ ನಿಗಾ ಇಡಲು ಮತ್ತು ಅಂತರವನ್ನು ಕಾಯ್ದುಕೊಳ್ಳಲು ನಾನು ಅವರನ್ನು ಕೇಳಿದೆ. ಆದರೆ ಅವರು ಹೆದರಿದರು ಮತ್ತು ಹೊರಗಿನಿಂದ ಬಾಗಿಲು ಹಾಕಿದರು. ನಾನು ಬಂದಾಗ ನನಗೆ ಹಾವು ಕಾಣಿಸಲಿಲ್ಲ. ಅನಂತರ ಕಮೋಡ್ ಒಳಗೆ ನೋಡಿದೆ. ಕಪ್ಪು ಬಣ್ಣದ, ಹೆಚ್ಚು ವಿಷಪೂರಿತ ನಾಗರ ಹಾವಿನಂತೆ ಕಾಣುತ್ತಿತ್ತು ಎಂದರು. ಜಾಟ್ ಅವರು ಇದರ ವಿಡಿಯೋ ಹಂಚಿಕೊಂಡಿದ್ದು, ಐದು ಮಿಲಿಯನ್ ಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಸಾಕಷ್ಟು ಮಂದಿ ಇದನ್ನು ಭಯಾನಕ ಎಂದು ಪ್ರತಿಕ್ರಿಯಿಸಿದ್ದಾರೆ.

ಒಬ್ಬ ಬಳಕೆದಾರ ನನ್ನ ಬಾಲ್ಯದಿಂದಲೂ ಹಾವಿಗೆ ಹೆದರುತ್ತಿದ್ದೆ ಎಂದು ಬರೆದಿದ್ದಾರೆ. ಮತ್ತೊಬ್ಬರು ನನ್ನ ಭಯವು ಈಗ ವಾಸ್ತವವಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು ಹೊಸ ಭಯವನ್ನು ಅನ್ಲಾಕ್ ಮಾಡಲಾಗಿದೆ ಎಂದು ಹೇಳಿದರು. ಕೆಲವು ಬಳಕೆದಾರರು ಜಾಟ್ ಅವರ ಕೆಲಸವನ್ನು ಶ್ಲಾಘಿಸಿದ್ದು, ನಿಮ್ಮ ಕೆಲಸವು ಪ್ರಶಂಸನೀಯವಾಗಿದೆ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ನಗರಗಳಲ್ಲಿನ ಒಳಚರಂಡಿ ವ್ಯವಸ್ಥೆಯ ಮೂಲಕ ಹಾವುಗಳು ಸ್ನಾನಗೃಹದೊಳಗೆ ಬರುತ್ತವೆ ಎಂದು ಜಾಟ್ ವಿವರಿಸಿದರು. ಈ ಸನ್ನಿವೇಶದಲ್ಲಿ ಇಂದೋರ್‌ನಲ್ಲಿನ ಹೆಚ್ಚಿನ ತಾಪಮಾನ ಮತ್ತು ಇಲಿಗಳು ಒಳಚರಂಡಿ ಪೈಪ್‌ಗಳಲ್ಲಿ ರಂಧ್ರಗಳನ್ನು ಅಗೆಯುವುದರಿಂದ, ಹಾವುಗಳು ಈ ಪೈಪ್‌ಗಳ ಮೂಲಕ ಚಲಿಸುತ್ತವೆ ಮತ್ತು ಟಾಯ್ಲೆಟ್ ಕಮೋಡ್‌ಗಳು ಮತ್ತು ಅಡುಗೆ ಮನೆಯ ಪೈಪ್‌ಗಳನ್ನು ಸಹ ತಲುಪುತ್ತವೆ ಎಂದು ಜಾಟ್ ಹೇಳಿದರು.

ಬಿಸಿ ವಾತಾವರಣದಿಂದಾಗಿ ಅವು ಹಗಲಿನಲ್ಲಿ ಡ್ರೈನೇಜ್ ಪೈಪ್‌ಗಳೊಳಗೆ ಅಡಗಿಕೊಳ್ಳುತ್ತವೆ ಮತ್ತು ರಾತ್ರಿಯಲ್ಲಿ ತಂಪಾಗಿರುವಾಗ ಹೊರಬರುತ್ತವೆ. ಇದರ ಚಲನವಲನವನ್ನು ಪತ್ತೆಹಚ್ಚಿದ ತಕ್ಷಣ ಅದು ಮತ್ತೆ ಅಡಗಿಕೊಳ್ಳುವುದರಿಂದ ಅವುಗಳನ್ನು ಹಿಡಿದು ರಕ್ಷಿಸುವುದು ಸವಾಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಮೋಡ್ ನೊಳಗೆ ಸೇರಿದ್ದ ಹಾವನ್ನು ರಕ್ಷಿಸಲು, ನಾವು ಕಮೋಡ್‌ಗೆ ನೀರು ಹಾಕಿದ್ದೇವೆ. ಡ್ರೈನೇಜ್ ಪೈಪ್‌ನೊಳಗೆ ನಿರಂತರ ನೀರು ಹರಿಯುವುದರಿಂದ ಹಾವು ಆಮ್ಲಜನಕದ ಕೊರತೆಯನ್ನು ಅನುಭವಿಸಿ ಹೊರಗೆ ಬರಲು ಪ್ರಯತ್ನಿಸುತ್ತದೆ. ಅದು ಆಮ್ಲಜನಕಕ್ಕಾಗಿ ಹೊರಬಂದ ತಕ್ಷಣ ನಾನು ಬಾಯಿಗೆ ನೀರು ಸುರಿಯಲು ಪ್ರಾರಂಭಿಸಿದೆ ಮತ್ತು ಅದನ್ನು ಹಿಡಿದು ರಕ್ಷಿಸಿದೆ ಎಂದು ಅವರು ತಿಳಿಸಿದರು. ಪ್ರತಿಯೊಂದು ಹಾವನ್ನು ಹಿಡಿಯುವುದು ಸುಲಭವಲ್ಲ. ಇದನ್ನು 15 ನಿಮಿಷಗಳಲ್ಲಿ ಹಿಡಿಯಲಾಗಿದೆ. ಕೆಲವೊಮ್ಮೆ ಸ್ನಾನಗೃಹದಲ್ಲಿ ಅವಿತುಕೊಳ್ಳುವ ಹಾವುಗಳು ಮೂರು ದಿನಗಳವರೆಗೆ ಇರುತ್ತದೆ. ಹಾವು ಯಾವ ಮಹಡಿಯಲ್ಲಿ ಕಾಣಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅವು ನೆಲಮಹಡಿಗೆ ಮಾತ್ರ ಬರುತ್ತವೆ ಎಂಬುದು ತಪ್ಪು ಕಲ್ಪನೆ. ಯಾವುದೇ ಮಹಡಿಗೆ ಅವು ಬಹಳ ಸುಲಭವಾಗಿ ಪ್ರಯಾಣಿಸಬಲ್ಲವು ಎಂದು ಜಾಟ್ ತಿಳಿಸಿದರು.

ಇದನ್ನೂ ಓದಿ: Viral Video: ತಲೆ ಮೇಲೆ ಎರಡು ಗ್ಯಾಸ್ ಸಿಲಿಂಡರ್, ಅದರ ಮೇಲೆ ಬಿಂದಿಗೆ! ಅಬ್ಬಾ ಎಂಥ ಅದ್ಭುತ!

ಇಂತಹ ಘಟನೆಗಳನ್ನು ತಡೆಗಟ್ಟಲು ಸಲಹೆ ನೀಡಿದ ಅವರು, ಒಳಚರಂಡಿ ಪೈಪ್‌ಗಳ ಸುತ್ತಲಿನ ಪ್ರದೇಶವನ್ನು ತೆರೆದಿಡಬಾರದು ಅಥವಾ ಅವುಗಳ ಬಳಿ ಕಸವನ್ನು ಎಸೆಯಬಾರದು. ಇದು ಇಲಿಗಳು ಪೈಪ್‌ಗಳ ಒಳಗೆ ರಂಧ್ರಗಳನ್ನು ಅಗೆಯಲು ಕಾರಣವಾಗುತ್ತದೆ. ಹಾವುಗಳಿಗೆ ಮಾರ್ಗವನ್ನು ಸೃಷ್ಟಿಸುತ್ತದೆ. ತೆರೆದ ಒಳಚರಂಡಿ ಪೈಪ್ ಅನ್ನು ಕಂಡುಕೊಂಡರೆ, ಅಂತಹ ಘಟನೆಗಳನ್ನು ತಡೆಗಟ್ಟಲು ನಗರದ ಪುರಸಭೆಯನ್ನು ಸಂಪರ್ಕಿಸಿ ಮತ್ತು ಅದಕ್ಕೆ ಸಿಮೆಂಟ್ ಹಾಕಿಸಿ ಎಂದರು.

ವಾಯ್ಸ್ 4 ವೈಲ್ಡ್‌ಲೈಫ್ ಫೌಂಡೇಶನ್‌ ಇಂದೋರ್ ಮತ್ತು ಹತ್ತಿರದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಜಾಟ್ ಐದರಿಂದ ಆರು ಸದಸ್ಯರ ತಂಡವನ್ನು ಮುನ್ನಡೆಸುತ್ತಿದ್ದಾರೆ. ನಮ್ಮಲ್ಲಿ ನಾಲ್ಕು ಜನರು ಮಾತ್ರ ಪೂರ್ಣ ಸಮಯ ಲಭ್ಯವಿರುತ್ತಾರೆ. ಉಳಿದ ಇಬ್ಬರು ಅವರ ಬಿಡುವಿನ ಸಮಯದಲ್ಲಿ ಮಾತ್ರ ಸಿಗುತ್ತಾರೆ. ಪ್ರತಿ ನಗರದಲ್ಲಿ ಹೆಚ್ಚಿನ ರಕ್ಷಣಾ ತಂಡಗಳನ್ನು ಸ್ಥಾಪಿಸುವ ಗುರಿಯನ್ನು ಜಾಟ್ ಹೊಂದಿರುವುದಾಗಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Rohit Sharma: ತಂಡ ಫೈನಲ್​ ಪ್ರವೇಶಿಸಿದ ಖುಷಿಯಲ್ಲಿ ಕಣ್ಣೀರು ಹಾಕಿದ ರೋಹಿತ್​; ವಿಡಿಯೊ ವೈರಲ್​

Rohit Sharma: ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

VISTARANEWS.COM


on

Koo

ಪ್ರೊವಿಡೆನ್ಸ್‌: ಮಳೆಯಿಂದ ಅಡಚಣೆಯಾದ ಗುರುವಾರ ತಡರಾತ್ರಿ ನಡೆದ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್​ ತಂಡವನ್ನು 68 ರನ್​ಗಳಿಂದ ಬಗ್ಗುಬಡಿದು ಫೈನಲ್​ ಪ್ರವೇಶಿಸಿತು. ತಂಡ ಫೈನಲ್​ ಪ್ರವೇಶಿಸುತ್ತಿದ್ದಂತೆ ನಾಯಕ ರೋಹಿತ್​ ಶರ್ಮ(Rohit Sharma) ಅವರು ಈ ಸಂತಸದಲ್ಲಿ ಆನಂದಭಾಷ್ಪ ಸುರಿಸಿದರು. ಈ ವಿಡಿಯೊ ವೈರಲ್​ ಆಗಿದೆ.

2007ರಿಂದ ಎಲ್ಲ ಟಿ20 ವಿಶ್ವಕಪ್ ಆಡಿರುವ ರೋಹಿತ್​ ಶರ್ಮ ತಮ್ಮ ನಾಯಕತ್ವದಲ್ಲಿ ಇದೇ ಮೊದಲ ಬಾರಿಗೆ ತಂಡ ಫೈನಲ್​ ಪ್ರವೇಶಿಸಿತು. ಜತೆಗೆ 10 ವರ್ಷಗಳ ಬಳಿಕ ಭಾರತ ತಂಡ ಈ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತಿಗೇರಿತು. ಈ ಎಲ್ಲ ಖುಷಿಯಿಂದ ರೋಹಿತ್​ ಕಣ್ಣೀರು ಸುರಿಸಿದರು. ರೋಹಿತ್​ ಕಣ್ಣೀರು ಹಾಕುತ್ತಿದ್ದ ವೇಳೆ ಸಹ ಆಟಗಾರ ವಿರಾಟ್​ ಬೆನ್ನು ತಟ್ಟಿ ಬೆಂಬಲ ಸೂಚಿಸಿದ್ದು ಕೂಡ ಈ ವಿಡಿಯೊದಲ್ಲಿ ನೋಡಬಹುದಾಗಿದೆ. ರೋಹಿತ್​ ಅವರಿಗೆ ಈ ಬಾರಿಯ ಟಿ20 ವಿಶ್ವಕಪ್​ ಬಹುತೇಕ ವಿದಾಯದ ಟೂರ್ನಿಯಾಗಿದೆ. ಅಂತಿಮ ಹಂತದ ಅವಕಾಶದಲ್ಲಿ ಕಪ್​ ಗೆಲ್ಲಲಿದ್ದಾರಾ ಎಂದು ಕಾದು ನೋಡಬೇಕಿದೆ. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

ದಾಖಲೆ ಬರೆದ ರೋಹಿತ್​


ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಈ ಪಂದ್ಯದಲ್ಲಿ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲ ಜಯವರ್ಧನೆ(111 ಬೌಂಡರಿ) ಹೆಸರಿನಲ್ಲಿತ್ತು. 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.  

ಸೇಡು ತೀರಿಸಿಕೊಂಡ ಭಾರತ


ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

Continue Reading

ವಿದೇಶ

Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

2024ರ ಅಂತ್ಯದ ವೇಳೆಗೆ ಅಂದರೆ ಮುಂಬರುವ ಆರು ತಿಂಗಳಲ್ಲಿ ಭಾರತೀಯ ಮೂಲದ ಕಾಗೆಗಳನ್ನು(Indian Origin Crow) ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. 10 ಲಕ್ಷ ಕಾಗೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ ಯಾಕೆ ಗೊತ್ತೇ? ಇಲ್ಲಿದೆ ಮಾಹಿತಿ.

VISTARANEWS.COM


on

By

Indian Origin Crow
Koo

ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು (Indian Origin Crow) ಈ ವರ್ಷಾಂತ್ಯದ ವೇಳೆಗೆ ಕೊಲ್ಲಲು ಕೀನ್ಯಾ (Kenya) ಯೋಜನೆ ಹಾಕಿಕೊಂಡಿದೆ. ಕಾಗೆಯು ಪ್ರಾಥಮಿಕ ಪರಿಸರ ವ್ಯವಸ್ಥೆಯ ಭಾಗವಲ್ಲ. ಈ ಕಾಗೆಗಳು ದಶಕಗಳಿಂದ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು, ಸ್ಥಳೀಯ ಪಕ್ಷಿಗಳನ್ನು ಸಾಯಿಸುತ್ತಿವೆ ಎಂದು ಕೀನ್ಯಾದ ವನ್ಯಜೀವಿ ಇಲಾಖೆ (Wildlife Department) ಹೇಳಿದೆ.

2024ರ ಅಂತ್ಯದ ವೇಳೆಗೆ ಅಂದರೆ ಮುಂಬರುವ ಆರು ತಿಂಗಳಲ್ಲಿ ಭಾರತೀಯ ಮೂಲದ ಕಾಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. 10 ಲಕ್ಷ ಕಾಗೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಭಾರತೀಯ ಮೂಲದ ಕಾಗೆಗಳನ್ನು ‘ಆಕ್ರಮಣಕಾರಿ ವಿದೇಶಿ ಪಕ್ಷಿಗಳು’ ಎಂದು ಕರೆದಿರುವ ಕೀನ್ಯಾದ ವನ್ಯಜೀವಿ ಪ್ರಾಧಿಕಾರವು ಈ ಕಾಗೆಗಳು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿಲ್ಲ ಎಂದಿದೆ.

ಕಳೆದ ಕೆಲವು ವರ್ಷಗಳಲ್ಲಿ ಕರಾವಳಿ ನಗರಗಳಾದ ಮೊಂಬಾಸಾ, ಮಲಿಂಡಿ, ಕಿಲಿಫಿ ಮತ್ತು ವಟಮುಗಳಲ್ಲಿ ಅವುಗಳ ಸಂಖ್ಯೆಯು ವೇಗವಾಗಿ ಹೆಚ್ಚಾಗಿದೆ. ಇದರಿಂದ ಉಂಟಾಗುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು 1 ಮಿಲಿಯನ್ ಕಾಗೆಗಳನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದೆ. ಹೊಟೇಲ್ ಉದ್ಯಮದ ಪ್ರತಿನಿಧಿಗಳು ಮತ್ತು ಕಾಗೆ ನಿಯಂತ್ರಣದಲ್ಲಿ ಪರಿಣತಿ ಹೊಂದಿರುವ ವೈದ್ಯರನ್ನು ಒಳಗೊಂಡ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಹೊಟೇಲ್ ಉದ್ಯಮಕ್ಕೆ ತೊಂದರೆ

ವನ್ಯಜೀವಿ ಪ್ರಾಧಿಕಾರವು ನೀಡಿರುವ ಹೇಳಿಕೆಯಲ್ಲಿ ಕರಾವಳಿ ನಗರಗಳ ಹೊಟೇಲ್ ಉದ್ಯಮಕ್ಕೆ ಈ ಕಾಗೆಗಳು ದೊಡ್ಡ ಸಮಸ್ಯೆಯಾಗುತ್ತಿವೆ. ಕಾಗೆಗಳಿಂದ ಪ್ರವಾಸಿಗರು ತೆರೆದ ಜಾಗದಲ್ಲಿ ಕುಳಿತು ಆಹಾರ ಸೇವಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಟೇಲ್ ಉದ್ಯಮಕ್ಕೆ ಸಂಬಂಧಿಸಿದವರು ಸಹ ಕಾಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಅವುಗಳ ಮೇಲೆ ನಿಯಂತ್ರಣಕ್ಕೆ ಒತ್ತಾಯಿಸುತ್ತಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯಿಂದ ಕಾಗೆಗಳನ್ನು ನಿರ್ಮೂಲನೆ ಮಾಡಲು ನಿರ್ಧರಿಸಲಾಗಿದೆ ಎಂದು ಕೀನ್ಯಾ ವನ್ಯಜೀವಿ ಪ್ರಾಧಿಕಾರ ತಿಳಿಸಿದೆ.

ಯಾರಿಗೆ ಅಪಾಯ?

ಕೀನ್ಯಾದಲ್ಲಿ ಕಾಗೆಗಳಿಂದಾಗಿ ಅನೇಕ ಪಕ್ಷಿಗಳು ಅಳಿವಿನಂಚಿನಲ್ಲಿವೆ. ಅಂತಹ ಪಕ್ಷಿಗಳನ್ನು ಕಾಗೆಗಳು ನಿರಂತರವಾಗಿ ಬೇಟೆಯಾಡುತ್ತಿವೆ ಎಂದು ವನ್ಯಜೀವಿ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

ಈ ಕಾಗೆಗಳು ಸಣ್ಣ ಸ್ಥಳೀಯ ಪಕ್ಷಿಗಳ ಗೂಡುಗಳನ್ನು ನಾಶಪಡಿಸುತ್ತವೆ ಮತ್ತು ಅವುಗಳ ಮೊಟ್ಟೆಗಳು ಮತ್ತು ಮರಿಗಳನ್ನು ತಿನ್ನುತ್ತವೆ, ಇದರಿಂದಾಗಿ ಅನೇಕ ಪಕ್ಷಿ ಪ್ರಭೇದಗಳು ಕಡಿಮೆಯಾಗುತ್ತಿವೆ ಎಂದು ಕೀನ್ಯಾದ ಪಕ್ಷಿವಿಜ್ಞಾನಿ ಕಾಲಿನ್ ಜಾಕ್ಸನ್ ತಿಳಿಸಿದ್ದಾರೆ.

ಸ್ಥಳೀಯ ಪಕ್ಷಿಗಳ ಕೊರತೆಯಿಂದ ಪರಿಸರ ಸಂರಕ್ಷಣೆಗೆ ತೊಂದರೆಯಾಗಿದೆ. ಕಾಗೆಗಳ ಹೆಚ್ಚುತ್ತಿರುವ ಸಂಖ್ಯೆಯ ಪರಿಣಾಮವು ಅಂತಹ ಪಕ್ಷಿಗಳ ಮೇಲೆ ಮಾತ್ರವಲ್ಲ ಇಡೀ ಪರಿಸರ ವ್ಯವಸ್ಥೆಯು ಪರಿಣಾಮ ಬೀರುತ್ತಿದೆ ಎಂದು ಕೀನ್ಯಾ ಹೇಳಿದೆ.

Continue Reading

ಕ್ರೀಡೆ

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

Virat Kohli:2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು.

VISTARANEWS.COM


on

virat kohli
Koo

ಪ್ರೊವಿಡೆನ್ಸ್‌: ವಿರಾಟ್​ ಕೊಹ್ಲಿ(Virat Kohli) ಅವರು ಮೊಟ್ಟ ಮೊದಲ ಬಾರಿಗೆ ಟಿ20 ವಿಶ್ವಕಪ್(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಸಿಂಗಲ್​ ಡಿಜಿಟ್​ಗೆ ವಿಕೆಟ್​ ಒಪ್ಪಿಸಿದ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಅನಗತ್ಯ ದಾಖಲೆ ಬರೆದರು.

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು.

ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​.

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ Virat kohli : ನಿವೃತ್ತಿಯಾಗುವುದು ಉತ್ತಮ; ಕೊಹ್ಲಿ, ರೋಹಿತ್​ಗೆ ಸಲಹೆ ನೀಡಿದ ವೀರೇಂದ್ರ ಸೆಹ್ವಾಗ್​

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು.

Continue Reading

ವೈರಲ್ ನ್ಯೂಸ್

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Viral Video: ಪಶ್ಚಿಮ ಗರೋ ಹಿಲ್ಸ್‌ ಜಿಲ್ಲೆಯ ದಡೆಂಗರೆ ಗ್ರಾಮದ ಟೆಕ್ಸಾಗ್ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ವ್ಯಕ್ತಿಗಳು ಸೇರಿ ಮಹಿಳೆಯನ್ನು ಕೋಲಿನಿಂದ ಥಳಿಸಿ ಆಕೆಯ ಕೂದಲು ಹಿಡಿದು ನೆಲದಲ್ಲಿ ಎಳೆದಾಡಿದ್ದಾರೆ. ಅದೂ ಅಲ್ಲದೇ ಆಕೆಯನ್ನು ನೆಲಕ್ಕೆ ಬಡಿದು ಕಾಲಿನಿಂದ ಒದ್ದಿದ್ದಾರೆ. ಸಾರ್ವಜನಿಕವಾಗಿ ಇಂತಹ ಕ್ರೌರ್ಯ ನಡೆಯುತ್ತಿದ್ದರೂ ಸ್ಥಳದಲ್ಲಿದ್ದ ಜನ ಆಕೆಯ ಸಹಾಯಕ್ಕೆ ಬರಲಿಲ್ಲ. ಹಿರಿಯ ವ್ಯಕ್ತಿ ಮತ್ತು ಮಕ್ಕಳು ಅಲ್ಲಿ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಮೇಘಾಲಯ: ಕೋಲಾರದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಜಮೀನು ವಿವಾದದ ಹಿನ್ನೆಲೆ ಮಹಿಳೆಯನ್ನು ಗ್ರಾಮಸ್ಥರು ಸೇರಿ ಥಳಿಸಿರುವ ಘಟನೆ ನಡೆದಿತ್ತು. ಇಂತಹದ್ದೇ ಒಂದು ಘಟನೆ ಮೇಘಾಲಯದಲ್ಲಿ ನಡೆದಿದೆ. ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದಲ್ಲಿ ಮಹಿಳೆಯನ್ನು ನಾಲ್ವರು ಸೇರಿದ ದೊಣ್ಣೆಯಿಂದ ಥಳಿಸಿ, ನೆಲದಲ್ಲಿ ಎಳೆದಾಡಿದ ಘಟನೆ ಮೇಘಾಲಯದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಪಶ್ಚಿಮ ಗರೋ ಹಿಲ್ಸ್‌ ಜಿಲ್ಲೆಯ ದಡೆಂಗರೆ ಗ್ರಾಮದ ಟೆಕ್ಸಾಗ್ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ವ್ಯಕ್ತಿಗಳು ಸೇರಿ ಮಹಿಳೆಯನ್ನು ಕೋಲಿನಿಂದ ಥಳಿಸಿ ಆಕೆಯ ಕೂದಲು ಹಿಡಿದು ನೆಲದಲ್ಲಿ ಎಳೆದಾಡಿದ್ದಾರೆ. ಅದೂ ಅಲ್ಲದೇ ಆಕೆಯನ್ನು ನೆಲಕ್ಕೆ ಬಡಿದು ಕಾಲಿನಿಂದ ಒದ್ದಿದ್ದಾರೆ. ಸಾರ್ವಜನಿಕವಾಗಿ ಇಂತಹ ಕ್ರೌರ್ಯ ನಡೆಯುತ್ತಿದ್ದರೂ ಸ್ಥಳದಲ್ಲಿದ್ದ ಜನ ಆಕೆಯ ಸಹಾಯಕ್ಕೆ ಬರಲಿಲ್ಲ. ಹಿರಿಯ ವ್ಯಕ್ತಿ ಮತ್ತು ಮಕ್ಕಳು ಅಲ್ಲಿ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಘಟನೆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಒಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದ್ದಾರೆ. ಏತನ್ಮಧ್ಯೆ, ಮಹಿಳಾ ಸಬಲೀಕರಣದ ಮೇಘಾಲಯ ಅಸೆಂಬ್ಲಿ ಸಮಿತಿಯ ಅಧ್ಯಕ್ಷೆಯಾಗಿರುವ ಸುಟ್ಂಗಾ ಸೈಪುಂಗ್ ಶಾಸಕಿ ಸಾಂತಾ ಮೇರಿ ಶೈಲ್ಲಾ ಅವರು ಪೊಲೀಸರಿಂದ ವರದಿಯನ್ನು ಕೇಳಿದ್ದಾರೆ ಮತ್ತು ಮಹಿಳೆಯರ ವಿರುದ್ಧ ಯಾವುದೇ ರೀತಿಯ ಅಪರಾಧ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಕೇಳುವುದಾಗಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಜಮೀನು ವಿವಾದ ಹಿನ್ನೆಲೆಯಲ್ಲಿ ಒಂಟಿ ಮಹಿಳೆಯನ್ನು ಸಂಬಂಧಿಕರು ಥಳಿಸಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತೊಂಗಲಕುಪ್ಪ ಗ್ರಾಮದಲ್ಲಿ ಘಟನೆ ನಡೆದಿತ್ತು. ಆಶಾ ಎಂಬಾಕೆಯನ್ನು ಐದಾರು ಮಂದಿ ಸೇರಿ ಕಲ್ಲು ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್‌ ಸದಸ್ಯ ಶ್ರೀನಿವಾಸ್‌ ಸೇರಿ ಆಶಾಗೆ ಕಾಲಿನಿಂದ ಒದ್ದು, ಮನಬಂದಂತೆ ಥಳಿಸಿದ್ದಾರೆ.

ಪತಿಯನ್ನು ಕಳೆದುಕೊಂಡು ಒಂಟಿಯಾಗಿರುವ ಆಶಾ ನಿನ್ನೆ ಗುರುವಾರ ಸಂಜೆ ಆಸ್ತಿ ಪಾಲು ಕೇಳಲು ಹೋದಾಗ ಸಂಬಂಧಿಕರ ಜತೆಗೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಗಲಾಟೆ ಶುರುವಾಗಿದ್ದು, ನೋಡನೋಡುತ್ತಿದ್ದಂತೆ ಎಲ್ಲ ಸಂಬಂಧಿಕರು ಒಂಟಿಯಾಗಿದ್ದ ಆಶಾ ಮೇಲೆ ಎರಗಿದ್ದಾರೆ.

ಆಶಾಳನ್ನು ನೆಲಕ್ಕುರಳಿಸಿ ಸಿಕ್ಕ ಸಿಕ್ಕ ವಸ್ತುಗಳಿಂದ ಐದಾರು ವ್ಯಕ್ತಿಗಳು ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದೆಲ್ಲವೂ ಅಲ್ಲೆ ಇದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ. ಒಂಟಿ ಹೆಣ್ಣಿನ ಮೇಲೆ ಕ್ರೌರ್ಯ ಮೆರೆದ ಪುಂಡರ ವಿರುದ್ಧ ಆಕ್ರೋಶಗಳು ಕೇಳಿ ಬಂದಿದೆ. ಕ್ಯಾಸಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bulldozer: ‌ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

Continue Reading
Advertisement
Gold Rate Today
ವಾಣಿಜ್ಯ4 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Sonu Srinivas Gowda harassed by darshan fans
ಸ್ಯಾಂಡಲ್ ವುಡ್8 mins ago

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Paris Olympics 2024
ಕ್ರೀಡೆ28 mins ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

haveri accident tt
ಪ್ರಮುಖ ಸುದ್ದಿ48 mins ago

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Rohit Sharma
ಕ್ರೀಡೆ53 mins ago

Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

Payal Ghosh says she did not had physical relationship with anyone in past 9 years
ಬಾಲಿವುಡ್1 hour ago

Payal Ghosh: 9 ವರ್ಷ ಆಯ್ತು ಯಾರ ಜತೆಗೂ ಮಲಗಿಲ್ಲ, ಇರ್ಫಾನ್‌ ಪಠಾಣ್‌ನೇ ಕೊನೆ ಎಂದ ನಟಿ ಪಾಯಲ್‌ ಘೋಷ್‌ !

Delhi Rain
ದೇಶ1 hour ago

Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

ಕ್ರಿಕೆಟ್1 hour ago

Rohit Sharma: ತಂಡ ಫೈನಲ್​ ಪ್ರವೇಶಿಸಿದ ಖುಷಿಯಲ್ಲಿ ಕಣ್ಣೀರು ಹಾಕಿದ ರೋಹಿತ್​; ವಿಡಿಯೊ ವೈರಲ್​

rain news bhagamandala
ಪ್ರಮುಖ ಸುದ್ದಿ2 hours ago

Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

Actor Darshan incident Naga Shaurya support
ಟಾಲಿವುಡ್2 hours ago

Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ15 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು19 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ22 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌