Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌ - Vistara News

ವೈರಲ್ ನ್ಯೂಸ್

Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌

Viral Video:ಬೈಕ್‌ ಚಾಲಕನೋರ್ವ ಬೈಕ್‌ ಚಲಾಯಿಸಲು ಬೈಕ್‌ ಸ್ಟಾರ್ಟ್‌ ಮಾಡಲು ಯತ್ನಿಸುತ್ತಿರುತ್ತಾನೆ. ಆಗ ಆತನ ಸಹಾಯಕ್ಕೆ ಬಂದ ಯುವಕನೋರ್ವ ಬೈಕ್‌ ಕಿಕ್‌ ಹೊಡೆದು ಸ್ಟಾರ್ಟ್‌ ಮಾಡುತ್ತಾ ಹಾಗೆಯೇ ಬೈಕ್‌ ಚಾಲಕನ ಪ್ಯಾಂಟಿನ ಜೇಬಿನಿಂದ ಮೆಲ್ಲಗೆ ಪರ್ಸ್‌ ಕದಿಯಲು ಯತ್ನಿಸುತ್ತಾನೆ. ಆಗ ಅದೆಲ್ಲೋ ಇದ್ದ ಪೊಲೀಸ್‌ ತಕ್ಷಣ ಅಲ್ಲಿಗೆ ಓದಿ ಬಂದ್ ಕಳ್ಳನನ್ನು ರೆಡ್‌ಹ್ಯಾಂಡಾಗಿ ಹಿಡಿಯುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಳ್ಳರು(thief) ಎಷ್ಟು ಚಾಲಾಕಿಗಳಾಗಿರುತ್ತಾರೆ ಎಂದರೆ ಕೆಲವೊಮ್ಮೆ ನೋಡ ನೋಡ್ತಿದ್ದಂತೆ ನಮ್ಮ ಕಣ್ಣೆದುರಿನಿಂದಲೇ ವಸ್ತುಗಳನ್ನು ದೋಚಿ ಎಸ್ಕೇಪ್ ಆಗುತ್ತಾರೆ. ಆದರೆ ನಸೀಬು ಕೆಟ್ಟರೆ ತಗಲಾಕ್ಕೊಂಡು ಧರ್ಮದೇಟು ತಿಂದಿರುವ ಘಟನೆಗಳೂ ಆಗಾಗ ಕಾಣ ಸಿಗುತ್ತವೆ. ಇದೀಗ ಅಂತಹದ್ದೇ ಒಂದು ಘಟನೆಯ ವಿಡಿಯೋ ವೈರಲ್‌(Viral Video) ಆಗಿದೆ. ಪಿಕ್‌ ಪಾಕೆಟ್‌(Pick Pocketing) ಮಾಡ್ತಿದ್ದ ಕಳ್ಳನೊಬ್ಬ ರೆಡ್‌ ಹ್ಯಾಂಡಾಗಿ ನಡು ರಸ್ತೆಯಲ್ಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ.

ಈ ವಿಡಿಯೋವನ್ನು ದಿಲ್ಲಿ ಪೊಲೀಸರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಬೈಕ್‌ ಚಾಲಕನೋರ್ವ ಬೈಕ್‌ ಚಲಾಯಿಸಲು ಬೈಕ್‌ ಸ್ಟಾರ್ಟ್‌ ಮಾಡಲು ಯತ್ನಿಸುತ್ತಿರುತ್ತಾನೆ. ಆಗ ಆತನ ಸಹಾಯಕ್ಕೆ ಬಂದ ಯುವಕನೋರ್ವ ಬೈಕ್‌ ಕಿಕ್‌ ಹೊಡೆದು ಸ್ಟಾರ್ಟ್‌ ಮಾಡುತ್ತಾ ಹಾಗೆಯೇ ಬೈಕ್‌ ಚಾಲಕನ ಪ್ಯಾಂಟಿನ ಜೇಬಿನಿಂದ ಮೆಲ್ಲಗೆ ಪರ್ಸ್‌ ಕದಿಯಲು ಯತ್ನಿಸುತ್ತಾನೆ. ಆಗ ಅದೆಲ್ಲೋ ಇದ್ದ ಪೊಲೀಸ್‌ ತಕ್ಷಣ ಅಲ್ಲಿಗೆ ಓದಿ ಬಂದ್ ಕಳ್ಳನನ್ನು ರೆಡ್‌ಹ್ಯಾಂಡಾಗಿ ಹಿಡಿಯುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ದಿಲ್ಲಿಯ ಸದಾರ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾನ್‌ಸ್ಟೇಬಲ್‌ ಸಚಿನ್‌ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಪದ್ಬಾಂದವನಂತೆ ಬಂದ ಕಾನ್‌ಸ್ಟೇಬಲ್‌ ಹಿಂದಿನಿಂದ ಬಂದು ಕಳ್ಳ ಕತ್ತು ಹಿಡಿದು ಆತನನ್ನು ಲಾಕ್‌ ಮಾಡಿರುವ ವಿಡಿಯೋ ನೋಡಿ ರಿಯಲ್‌ ಹೀರೋ ಎಂದು ಹಾಡಿ ಹೊಗಳಿದ್ದಾರೆ. ಇನ್ನು ಕೆಲವರು ಈ ವಿಡಿಯೋದ ಅಸಲಿಯತ್ತಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕಳ್ಳತನ ನಡೆಯುತ್ತದೆ, ಪೊಲೀಸ್‌ ಬಂದು ಹಿಡಿಯುತ್ತಾರೆ ಎಂಬುದು ವಿಡಿಯೋ ಮಾಡುವವನಿಗೆ ಮೊದಲೇ ಗೊತ್ತಿತ್ತೇ ಎಂದು ಹಲವರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾವಾಗ ನಡೆದಿದ್ದು ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ.

ಇದನ್ನೂ ಓದಿ: Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

ಇನ್ನು ಕೆಲವರು ಕಾನ್‌ಸ್ಟೇಬಲ್‌ ಸಚಿನ್‌ ಧೈರ್ಯ, ಸಮಯಪ್ರಜ್ಞೆಗೆ ಸಲಾಂ. ದಿಲ್ಲಿ ಪೊಲೀಸ್‌ಗೆ ಇಂತಹ ಪೊಲೀಸರು ಬೇಕೇ ಹೊರತು ಅಕ್ರಮವಾಗಿ ನೇಮಕಗೊಂಡು ಓಡಿಹೋಗವವರು ಅಲ್ಲ. ದಿಲ್ಲಿ ಪೊಲೀಸರಿರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Viral News:ಮಗುವಿನ ತಾಯಿ ರಮ್ಯಾ ತೀರ ಖಿನ್ನತೆಗೊಳಗಾಗಿದ್ದರು. ತನ್ನ ಅಜಾಗುರೂಕತೆಯಿಂದ ದುರಂತ ಸಂಭವಿಸಿದೆ ಎಂಬುದನ್ನು ಪದೇ ಪದೇ ಹೇಳುತ್ತಲೇ ಇದ್ದರು. ಇನ್ನು ನೆರೆಹೊರೆಯವರು, ನೆಟ್ಟಿಗರು ಈ ಘಟನೆ ಬಗ್ಗೆ ತಿಳಿದವರು ಎಲ್ಲರೂ ರಮ್ಯಾಳ ಅಜಾಗುರೂಕತೆಯಿಂದಲೇ ಈ ಘಟನೆ ನಡೆದಿದೆ ಎಂದು ದೂರುತ್ತಿದ್ದರು.

VISTARANEWS.COM


on

Viral News
Koo

ಕೊಯಂಬತ್ತೂರ್‌: ಕಳೆದ ತಿಂಗಳು ಅಪಾರ್ಟ್‌ಮೆಂಟ್‌(Apartment)ನ ಕಿಟಕಿಯಿಂದ ವಿಂಡೋ ಪೋರ್ಚ್‌(Window Porch) ಮೇಲೆ ಬಿದ್ದು, ಪವಾಡ ಸದೃಶ್ಯವಾಗಿ ಬದುಕಿ ಬಂದ ಏಳು ತಿಂಗಳ ಮಗುವಿನ(Toddler) ತಾಯಿ ಇದೀಗ ಆತಹತ್ಯೆಗೆ ಶರಣಾಗಿದ್ದಾಳೆ(Viral News). ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ಮಗು ಅದೃಷ್ಟವಶಾತ್‌ ಅಲ್ಲೇ ನೇತಾಡಿಕೊಂಡು ಸ್ಥಳೀಯರ ಸಹಾಯದಿಂದ ಬದುಕುಳಿದಿತ್ತು.

ಈ ಘಟನೆ ಬಳಿಕ ಮಗುವಿನ ತಾಯಿ ರಮ್ಯಾ ತೀರ ಖಿನ್ನತೆಗೊಳಗಾಗಿದ್ದರು. ತನ್ನ ಅಜಾಗುರೂಕತೆಯಿಂದ ದುರಂತ ಸಂಭವಿಸಿದೆ ಎಂಬುದನ್ನು ಪದೇ ಪದೇ ಹೇಳುತ್ತಲೇ ಇದ್ದರು. ಇನ್ನು ನೆರೆಹೊರೆಯವರು, ನೆಟ್ಟಿಗರು ಈ ಘಟನೆ ಬಗ್ಗೆ ತಿಳಿದವರು ಎಲ್ಲರೂ ರಮ್ಯಾಳ ಅಜಾಗುರೂಕತೆಯಿಂದಲೇ ಈ ಘಟನೆ ನಡೆದಿದೆ ಎಂದು ದೂರುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ರಮ್ಯಾ ಖಿನ್ನತೆಗೊಳಗಾಗಿದ್ದರು. ಇದನ್ನು ಗಮನಿಸಿದ ಆಕೆಯ ಪತಿ ವೆಂಕಟೇಶ್‌ ಕೊಯಂಬತ್ತೂರ್‌ನಲ್ಲಿರುವ ಆಕೆಯ ತವರು ಮನೆಗೆ ಕರೆದುಕೊಂಡು ಬಂದಿದ್ದರು.

ಭಾನುವಾರ ರಮ್ಯಾಳನ್ನು ಒಬ್ಬಳೇ ಮನೆಯಲ್ಲಿ ಬಿಟ್ಟು ಎಲ್ಲರೂ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ವಾಪಸ್‌ ಮನೆಗೆ ಬಂದಾಗ ರಮ್ಯಾ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡು ಮನೆಯವರು ಗಾಬರಿಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ. ಇನ್ನು ಆಕೆಯ ಸಾವಿಗೆ ಕಾರಣ ಏನೆಂಬುದು ಸರಿಯಾಗಿ ತಿಳಿದುಬಂದಿಲ್ಲ. ಆಕೆ ಏನಾದರೂ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಏ.28ರಂದು ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಮಗುವಿನ ರಕ್ಷಣೆಗೆ ಧಾವಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಂಡೋ ಪೋರ್ಚ್‌ ಮೇಲೆ ಬಿದ್ದಿ ಮಗುವಿನ ರಕ್ಷಣೆಗೆ ದೌಡಾಯಿಸಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಂದು ಕಿಟಕಿಯಿಂದ ಹೊರಬಂದು ಮಗುವನ್ನು ರಕ್ಷಿಸಿಲು ಹರಸಾಹನ ಪಟ್ಟರು. ನಾಲ್ಕೈದು ಜನ ಕಿಟಕಿಯ ಹೊರ ಭಾಗದಲ್ಲಿರುವ ಸಣ್ಣ ಜಾಗದಲ್ಲಿ ನಿಂತು ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ರಕ್ಷಿಸಿದ್ದಾರೆ. ಇನ್ನು ಕೆಳಗೆ ಅನೇಕ ಜನ ದೊಡ್ಡ ಬಟ್ಟೆಯೊಂದು ಹಿಡಿದು ಮಗುವಿನ ರಕ್ಷಣೆಗೆ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಶಂಸೆ ವ್ಯಕ್ತಪಡಿಸಿರುವ ನೆಟ್ಟಿಗರು, ಅಚಾನಕ್ಕಾಗಿ ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದ್ದ 7 ತಿಂಗಳಿನ ಮಗುವನ್ನು ಬಹಳ ಜಾಣ್ಮೆಯಿಂದ ರಕ್ಷಿಸಿದ್ದಾರೆ. ಅವರ ಕಾರ್ಯಕ್ಕೆ ಸಲಾಂ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

Continue Reading

ದೇಶ

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Great Khali: ಜ್ಯೋತಿ ಆಮ್ಗೆ ಅವರನ್ನು ಒಂದೇ ಕೈಯಲ್ಲಿ ತಮಾಷೆಗಾಗಿ ಎತ್ತಿ ಆಡಿಸಿದ ವಿಡಿಯೊವನ್ನು ಗ್ರೇಟ್‌ ಖಲಿ ಅವರೇ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಲಕ್ಷಾಂತರ ಜನ ವೀಕ್ಷಿಸಿದ್ದಾರೆ. ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ. ಆದರೆ, ಎತ್ತಿ ಆಡಿಸಿದ್ದಕ್ಕೆ ಗ್ರೇಟ್‌ ಖಲಿ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಬ್ಯಾಡ್‌ ಟಚ್‌ ಎಂದು ದಿ ಗ್ರೇಟ್‌ ಖಲಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

Great Khali
Koo

ನವದೆಹಲಿ: ಆಜಾನುಬಾಹು ದೇಹದಿಂದಲೇ ದೇಶಾದ್ಯಂತ ಖ್ಯಾತಿ ಗಳಿಸಿರುವ, ಡಬ್ಲ್ಯೂಡಬ್ಲ್ಯೂಇನಲ್ಲಿ (WWE) ಭಾರತವನ್ನು ಪ್ರತಿನಿಧಿಸಿದ ಕುಸ್ತಿಪಟು ದಿ ಗ್ರೇಟ್‌ ಖಲಿ (Great Khali) ಅವರು ವಿಶ್ವದಲ್ಲೇ ಅತಿ ಕುಬ್ಜ ಮಹಿಳೆ ಎನಿಸಿರುವ ಜ್ಯೋತಿ ಆಮ್ಗೆ (Jyoti Amge) ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಆದರೆ, ತಮಾಷೆಗಾಗಿ ಒಂದೇ ಕೈಯಲ್ಲಿ ಮಗುವಿನಂತೆ ಎತ್ತಿ ಆಡಿಸಿದ ವಿಡಿಯೊ ವೈರಲ್‌ (Viral Video) ಆದ ಬೆನ್ನಲ್ಲೇ ಗ್ರೇಟ್‌ ಖಲಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದವರಾದ ಜ್ಯೋತಿ ಆಮ್ಗೆ (30) ಅವರು ಕೇವಲ 2.3 ಅಡಿ ಎತ್ತರವಾಗಿದ್ದು, ಜಗತ್ತಿನಲ್ಲೇ ಅತಿ ಕುಬ್ಜ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇವರು ಗಿನ್ನಿಸ್‌ ದಾಖಲೆಗೂ ಭಾಜನರಾಗಿದ್ದಾರೆ. ಜ್ಯೋತಿ ಆಮ್ಗೆ ಹಾಗೂ ದಿ ಗ್ರೇಟ್‌ ಖಲಿ ಅವರು ಇತ್ತೀಚೆಗೆ ಭೇಟಿಯಾಗಿದ್ದು, ಗ್ರೇಟ್‌ ಖಲಿ ಅವರು ತಮಾಷೆಗಾಗಿ ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ್ದಾರೆ. “ನಾನು ನಿಮ್ಮನ್ನು ನಾಗ್ಪುರಕ್ಕೆ ಕಳುಹಿಸಿಬಿಡುತ್ತೇನೆ” ಎಂದು ತಮಾಷೆ ಮಾಡಿದ್ದಾರೆ. ಇದರಿಂದ ಜ್ಯೋತಿ ಆಮ್ಗೆ ಅವರು ನಾಚಿ ನೀರಾಗಿದ್ದಾರೆ.

ಕೆರಳಿ ಕೆಂಡವಾದ ಜನ

ಜ್ಯೋತಿ ಆಮ್ಗೆ ಅವರನ್ನು ಎತ್ತಿ ಆಡಿಸಿದ ವಿಡಿಯೊವನ್ನು ಗ್ರೇಟ್‌ ಖಲಿ ಅವರೇ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಲಕ್ಷಾಂತರ ಜನ ವೀಕ್ಷಿಸಿದ್ದಾರೆ. ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ. ಆದರೆ, ಎತ್ತಿ ಆಡಿಸಿದ್ದಕ್ಕೆ ಗ್ರೇಟ್‌ ಖಲಿ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಗ್ರೇಟ್‌ ಖಲಿಯವರೇ, ನಮಗೆ ನಿಮ್ಮ ಬಗ್ಗೆ ಗೌರವ ಇದೆ. ಆದರೆ, ನೀವು ಹೀಗೆ ಮಾಡಬಾರದಿತ್ತು. ಅದು ಮಗು ಅಲ್ಲ‌, 30 ವರ್ಷದ ಮಹಿಳೆ ಅವರು. ನೀವು ಹಾಗೆ ಮಾಡಬಾರದಿತ್ತು” ಎಂದು ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಇದು ಬ್ಯಾಡ್ ಟಚ್” ಎಂಬುದಾಗಿ ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “ಇದು ತಮಾಷೆಯಾಗಿಲ್ಲ. ಹೀಗೆ ಮಾಡಲು ಜ್ಯೋತಿ ಅವರು ಅನುಮತಿ ನೀಡಿದ್ದಾರೆ ಎಂದುಕೊಳ್ಳುತ್ತೇನೆ” ಎಂದು ಮತ್ತೊಬ್ಬರು ನಯವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಒಂದಷ್ಟು ಜನ ತಮಾಷೆಯಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಜ್ಯೋತಿ ಆಮ್ಗೆ ಅವರನ್ನು ಹಾಗೆಯೇ ಎತ್ತಿಕೊಂಡು ವರ್ಲ್ಡ್‌ ಟೂರ್‌ ಕೂಡ ಮಾಡಬಹುದು”, “ಅವರನ್ನು ಹಾಗೆಯೇ ತಿಂದು ಬಿಡಿ” ಎಂಬುದು ಸೇರಿ ಹಲವು ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಇನ್ನು ವಿಡಿಯೊಗೆ ಖುದ್ದು ಜ್ಯೋತಿ ಆಮ್ಗೆ ಅವರೇ ಪ್ರತಿಕ್ರಿಯಿಸಿದ್ದು, “ತುಂಬ ಧನ್ಯವಾದ” ಎಂದು ಹೇಳಿದ್ದಾರೆ. ಅಲ್ಲಿಗೆ, ಜನ ತಣ್ಣಗಾದಂತಾಗಿದೆ.

ಇದನ್ನೂ ಓದಿ: Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

Continue Reading

ಕ್ರಿಕೆಟ್

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

RCB vs CSK: ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಮಹೇಂದ್ರ ಸಿಂಗ್‌ ಧೋನಿ(MS Dhoni) ಕ್ರಿಕೆಟ್‌ ಮೈದಾನದಲ್ಲಿ ಶಾಂತಿಯಿಂದ ವ‌ರ್ತಿಸುತ್ತಾರೆ. ಬ್ಯಾಟಿಂಗ್‌, ವಿಕೆಟ್‌ ಕೀಪಿಂಗ್‌ ಅಥವಾ ನಾಯಕನಾಗೇ ಇರಲಿ ಶಾಂತಚಿತ್ತ ಅವರ ಮುಖ್ಯ ಗುಣ. ಎಂತಹ ಸನ್ನಿವೇಶವಿದ್ದರೂ ಧೋನಿ(MS Dhoni leaves without shaking hands) ತಾಳ್ಮೆ ಕಳೆದುಕೊಳ್ಳುವುದು ವಿರಳ. ಇದೇ ಕಾರಣಕ್ಕೆ ಅವರಿಗೆ ಕ್ಯಾಪ್ಟನ್‌ ಕೂಲ್‌ ಎಂಬ ಹೆಸರು ಕೂಡ ಇದೆ. ಆದರೆ ನಿನ್ನೆ(ಶನಿವಾರ) ನಡೆದ ಆರ್​ಸಿಬಿ(RCB vs CSK) ವಿರುದ್ಧದ ಪಂದ್ಯದಲ್ಲಿ ಧೋನಿ ತೋರಿದ ವರ್ತನೆಗೆ ಎದುರಾಳಿ ತಂಡದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ಇದನ್ನೂ ಓದಿ RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಆರ್​ಸಿಬಿ ಅಭಿಮಾನಿಗಳು ಚೆನ್ನೈ ವಿರೋದಿಯಾಗಿದ್ದರೂ ಕೂಡ ನಿನ್ನೆ ಧೋನಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದರು. ಅಲ್ಲದೆ ಧೋನಿಯ ಜೆರ್ಸಿ ತೊಟ್ಟು, ದೊಡ್ಡ ಬ್ಯಾನರ್​ ಮೂಲಕ ನೀವು ವಿದಾಯ ಹೇಳಬೇಡಿ ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳ ಬೇಡಿಕೆ ಎಂದು ಮನವಿ ಮಾಡಿದ್ದರು. ಈ ಮೂಲಕ ಧೋನಿಗೆ ಸಪೋರ್ಟ್​ ಮಾಡಿದ್ದರು. ಆದರೆ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದೆ ತೆರಳಿದ್ದು ಮಾತ್ರ ಬೇಸರ ತಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ‘ಇಟ್‌ ಹರ್ಟ್ಸ್‌​’ ಎಂದ ಹ್ಯಾಶ್​ ಟ್ಯಾಗ್​ನೊಂದಿಗೆ ಬರೆದುಕೊಂಡಿದ್ದಾರೆ.

ಧೋನಿ ಮೈದಾನದಲ್ಲಿದ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದಿದ್ದರೂ ಕೂಡ ತಾವು ಪೆವಿಲಿಯನ್​ ಕಡೆಗೆ ಹೋಗುವಾಗ ಎದುರಿಗೆ ಸಿಕ್ಕ ಆರ್​ಸಿಬಿ ಸಿಬ್ಬಂದಿಗಳಿಗೆ ಹಸ್ತಲಾಘವ ನೀಡಿದ್ದಾರೆ. ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಧೋನಿ ವಿಕೆಟ್​ ಪತನಗೊಳ್ಳುತ್ತಿದ್ದಂತೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು.

Continue Reading

ವೈರಲ್ ನ್ಯೂಸ್

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Viral News:ವುಡ್‌ಸ್ಪ್ರಿಂಗ್‌ ಸೂಟ್ಸ್‌ ಹೊಟೇಲ್‌ನಲ್ಲಿ ಘಟನೆ ನಡೆದಿದ್ದು, ಶೆಂಟಿಂಗ್‌ ಗೋ ಎಂಬ 32ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ ಅನ್ನು ಹಲವು ಬಾರಿ ಚುಚ್ಚಿದ್ದಾಳೆ. ಬಳಿಕ ಅವನ ಗುಪ್ತಾಂಗವನ್ನು ಕಟ್‌ ಮಾಡಿ ಎಸೆದಿದ್ದಾಳೆ. ಈ ವಿಚಾರ ತಿಳಿದ ಹೊಟೇಲ್‌ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್‌ ಸ್ಥಳಕ್ಕೆ ಬಂದು ನೋಡಿದಾಗ ಯುವಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆತನ ಗುಪ್ತಾಂಗವನ್ನು ಕತ್ತರಿಸಲಾಗಿತ್ತು. ಕತ್ತರಿಸಿಲಾಗಿದ್ದ ಗುಪ್ತಾಂಗ ಬೆಡ್‌ ಪಕ್ಕದಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಸಿಕ್ಕಿತ್ತು.

VISTARANEWS.COM


on

Viral News
Koo

ನವದೆಹಲಿ: ಗಾಢನಿದ್ದೆಯಲ್ಲಿದ್ದ ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಮಹಿಳೆಯೊಬ್ಬಳು ಕತ್ತರಿಸಿ ಎಸೆದಿರುವ ಘಟನೆ(Viral News) ಅಮೆರಿಕದ(America) ಕೊಲೋರಡೋ ಪ್ರದೇಶದಲ್ಲಿ ನರೆದಿದೆ. ತನ್ನನ್ನು ನೆಮ್ಮದಿಯಿಂದ ಮಲಗುವುದಕ್ಕೆ ಬಿಡದಿದ್ದ ಕಾರಣ ಮತ್ತು ಆತ ಮತ್ತೆ ತನ್ನನ್ನು ಗರ್ಭಿಣಿ(Pregnant)ಯನ್ನಾಗಿ ಮಾಡಿದ್ದಾನೆಂಬ ಕಾರಣಕ್ಕೆ ಕೋಪಗೊಂಡ ಮಹಿಳೆ ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕತ್ತರಿಸಿದ್ದಾಳೆ.

ಘಟನೆ ವಿವರ

ವುಡ್‌ಸ್ಪ್ರಿಂಗ್‌ ಸೂಟ್ಸ್‌ ಹೊಟೇಲ್‌ನಲ್ಲಿ ಘಟನೆ ನಡೆದಿದ್ದು, ಶೆಂಟಿಂಗ್‌ ಗೋ ಎಂಬ 32ವರ್ಷದ ಮಹಿಳೆ ತನ್ನ ಬಾಯ್‌ಫ್ರೆಂಡ್‌ ಅನ್ನು ಹಲವು ಬಾರಿ ಚುಚ್ಚಿದ್ದಾಳೆ. ಬಳಿಕ ಅವನ ಗುಪ್ತಾಂಗವನ್ನು ಕಟ್‌ ಮಾಡಿ ಎಸೆದಿದ್ದಾಳೆ. ಈ ವಿಚಾರ ತಿಳಿದ ಹೊಟೇಲ್‌ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್‌ ಸ್ಥಳಕ್ಕೆ ಬಂದು ನೋಡಿದಾಗ ಯುವಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆತನ ಗುಪ್ತಾಂಗವನ್ನು ಕತ್ತರಿಸಲಾಗಿತ್ತು. ಕತ್ತರಿಸಿಲಾಗಿದ್ದ ಗುಪ್ತಾಂಗ ಬೆಡ್‌ ಪಕ್ಕದಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಸಿಕ್ಕಿತ್ತು.

ಮತ್ತೆ ಗರ್ಭಿಯಾಗಿದ್ದ ಮಹಿಳೆ

ಕೊಲೆಯಾದ ವ್ಯಕ್ತಿ , ಶೆಂಟಿಂಗ್‌ ಗೋ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಎರಡನೇ ಬಾರಿ ಗರ್ಭಿಣಿಯನ್ನಾಗಿ ಮಾಡಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಭಾರೀ ಗಲಾಟೆಯಾಗಿತ್ತು. ಆಕೆಯನ್ನು ಮಲಗಲೂ ಬಿಡದೇ ವ್ಯಕ್ತಿ ಬಹಳಷ್ಟು ಕಿರಿ ಕಿರಿ ಮಾಡುತ್ತಿದ್ದ. ಇದರಿಂದ ಕೋಪಕೊಂಡ ಶೆಂಟಿಂಗ್‌ ಗೋ ಚಾಕುವಿನಿಂದ ಆತನನ್ನು ಚುಚ್ಚಿದ್ದಾಳೆ. ಬಳಿಕ ಆತನ ಗುಪ್ತಾಂಗ ಕಿತ್ತು ಕಸದ ಬುಟ್ಟಿಗೆ ಹಾಕಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಶೆಂಟಿಂಗ್‌ ಗೋಳನ್ನು ಅರೆಸ್ಟ್‌ ಮಾಡಿದ್ದು, ಮೃತ ವ್ಯಕ್ತಿಯ ಗುರುತು ಬಹಿರಂಗ ಪಡಿಸಿಲ್ಲ.

ಮಹಾರಾಷ್ಟ್ರದ ಪುಣೆಯಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಪತಿಯ ಶೀಲ ಶಂಕಿಸಿ, ಆಕೆ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕುವ ಮೂಲಕ ರಕ್ಕಸ ಕೃತ್ಯ ಎಸಗಿದ್ದಾನೆ. ಪುಣೆಯ ವಾಕಡ್‌ ಪ್ರದೇಶದಲ್ಲಿ ಮೇ 11ರಂದು ಪತಿಯು ಮೃಗದಂತೆ ವರ್ತಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ದುಷ್ಟನನ್ನು ಬಂಧಿಸಿದ್ದಾರೆ. ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

ಇದನ್ನೂ ಓದಿ: Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

ಪ್ರಕರಣದ ಕುರಿತು ತನಿಖಾಧಿಕಾರಿ ಬಾಲಾಜಿ ಮೆತೆ ಅವರು ಮಾಹಿತಿ ನೀಡಿದ್ದಾರೆ. “ಗಂಡ ಹಾಗೂ ಹೆಂಡತಿ ನೇಪಾಳದವರು. ಉದ್ಯೋಗ ಅರಸಿ ಅವರು ಮೇ ತಿಂಗಳ ಮೊದಲ ವಾರದಲ್ಲಿ ವಾಕಡ್‌ಗೆ ಬಂದು ನೆಲೆಸಿದ್ದರು. ಮೇ 11ರಂದು ಪಾನಮತ್ತನಾಗಿ ಬಂದ ವ್ಯಕ್ತಿಯು ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಶೀಲ ಶಂಕಿಸಿದ ಆತನು ಒದ್ದು, ಆಕೆಯ ಕೈಕಾಲು ಕಟ್ಟಿ, ಗುಪ್ತಾಂಗಕ್ಕೆ ಮೊಳೆ ಜಡಿದು, ಚಾಕುವಿನಿಂದ ಹಲ್ಲೆ ನಡೆಸಿ, ಬೀಗ ಹಾಕಿದ್ದಾನೆ. ಮಹಿಳೆಯು ಅಂಗಲಾಚಿದರೂ ಆತನು ಬಿಟ್ಟಿಲ್ಲ” ಎಂದು ತಿಳಿಸಿದ್ದಾರೆ. ಮಹಿಳೆ ಅರಚುವ ಧ್ವನಿ ಕೇಳಿ ಪಕ್ಕದ ಮನೆಯ ಲಲಿತ್‌ ಪರಿಹಾರ್‌ ಎಂಬುವರು ಮನೆಗೆ ತೆರಳಿ ನೋಡಿದಾಗ, ಮಹಿಳೆಯು ರಕ್ತದ ಮಧ್ಯೆ ಬಿದ್ದಿರುವುದು ಕಂಡಿದೆ. ಕೂಡಲೇ ಅವರು ಸುತ್ತಮುತ್ತಲಿವರನ್ನು ಕರೆದ ಅವರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದಾದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Continue Reading
Advertisement
Lok Sabha Election 2024
Lok Sabha Election 20247 mins ago

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

actor Chetan Kumar Ahimsa
ಸಿನಿಮಾ38 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ56 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್1 hour ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್1 hour ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ2 hours ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ2 hours ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ22 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌