Viral Video | 'ಕಮರ್ ತೇರಿ ಲೆಫ್ಟ್, ರೈಟ್' ಎನ್ನುತ್ತ ಕುಣಿದ ಬಾಲಕಿಗೆ ಎಲ್ಲರೂ ಫಿದಾ! - Vistara News

ವೈರಲ್ ನ್ಯೂಸ್

Viral Video | ‘ಕಮರ್ ತೇರಿ ಲೆಫ್ಟ್, ರೈಟ್’ ಎನ್ನುತ್ತ ಕುಣಿದ ಬಾಲಕಿಗೆ ಎಲ್ಲರೂ ಫಿದಾ!

ದಿಶು ಯಾದವ್ ಹೆಸರಿನ ಬಾಲಕಿ ‘ಕಮರ್ ತೆರಿ ಲೆಫ್ಟ್, ರೈಟ್’ ಹಾಡಿಗೆ ಮಾಡಿರುವ ನೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಈ ಹಾಡನ್ನು ಅಜಯ್ ಹೂಡಾ ಅವರು ಹಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗ ಸೋಶಿಯಲ್ ಮೀಡಿಯಾಗಳದ್ದೇ ಹವಾ. ಚಿಕ್ಕ ಪುಟ್ಟ ಮಕ್ಕಳು ಕೂಡ ವಿಡಿಯೋ ಕ್ರಿಯೇಟ್ ಮಾಡಿ ಟ್ರೆಂಡ್ ಆಗಲಾರಂಭಿಸಿದ್ದಾರೆ. ಅದೇ ರೀತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚಿಕ್ಕ ಬಾಲಕಿಯೊಬ್ಬಳ ನೃತ್ಯ ಭಾರೀ ವೈರಲ್ (Viral Video) ಆಗಿದೆ. ಪ್ರಸಿದ್ಧ ಗಾಯಕ ಅಜಯ್ ಹೂಡಾ ಅವರೊಂದಿಗೆ ‘ಕಮರ್ ತೇರಿ ಲೆಫ್ಟ್, ರೈಟ್’ ಹಾಡಿಗೆ ಕುಣಿದಿರುವ ಬಾಲಕಿಯ ವಿಡಿಯೋಗೆ ಮೆಚ್ಚುಗೆಯ ಸುರಿಮಳೆಯೇ ಸುರಿದಿದೆ.

ಇದನ್ನೂ ಓದಿ: Viral Video | ಹುಡುಗಿಯರ ಮಸ್ತ್ ಡ್ಯಾನ್ಸ್, ಬೆಸ್ಟ್‌ನಲ್ಲಿ ಬೆಸ್ಟ್ ಅಂತಿದ್ದಾರೆ ನೆಟ್ಟಿಗರು

ಈ ರೀತಿ ಸೊಂಟ ಕುಣಿಸಿರುವ ಬಾಲಕಿಯ ಹೆಸರು ದಿಶು ಯಾದವ್. ಇತ್ತೀಚೆಗೆ ಅಜಯ್ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಅವರೊಂದಿಗೆ ನೃತ್ಯ ಕಲಾವಿದರು ಹೆಜ್ಜೆ ಹಾಕಿದ್ದಾರೆ. ಅವರಿಗೆ ಜತೆಯಾದ ದಿಶು ವೇದಿಕೆಯ ಮೇಲೆ ನಿಂತು ನೃತ್ಯ ಮಾಡಿದ್ದಾರೆ. ಖುಷಿಯಿಂದ ಅಜಯ್ ಕೂಡ ದಿಶು ಅವರ ಜತೆಯಲ್ಲೇ ನಿಂತು ಹಾಡು ಹೇಳಿ ತಾವೂ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋವನ್ನು ದಿಶು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋವನ್ನು 6 ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದು, 58 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

ಹಳದಿ ಬಣ್ಣದ ಡ್ರೆಸ್ ಹಾಗೂ ಬ್ಲೂ ಜೀನ್ಸ್ ಕೋಟ್ ತೊಟ್ಟಿರುವ ದಿಶು ತಮ್ಮ ಮುದ್ದಾದ ನೃತ್ಯದಿಂದ ನೆಟ್ಟಿಗರ ಮನಸ್ಸನ್ನು ಗೆದ್ದಿದ್ದಾರೆ. ಅಂದ ಹಾಗೆ ದಿಶು ಕೂಡ ಒಬ್ಬ ವಿಡಿಯೋ ಕ್ರಿಯೇಟರ್ ಆಗಿದ್ದಾರೆ. ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ 4 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.

ಇದನ್ನೂ ಓದಿ: Viral Post | ತಿಂಗಳಿಂದಲೂ ಮೂಗಲ್ಲಿ ರಕ್ತಸ್ರಾವ, ನೋವು ಎಂದು ವೈದ್ಯರ ಬಳಿ ಹೋದವನ ಮೂಗಿನೊಳಗೆ ನೋಡಿದ ವೈದ್ಯರೇ ಕಂಗಾಲು!

ಕಮರ್ ತೆರಿ ಲೆಫ್ಟ್, ರೈಟ್ ಹಾಡನ್ನು 2022ರಲ್ಲಿ ಬಿಡುಗಡೆ ಮಾಡಲಾಗಿದೆ. ಅಜಯ್ ಹೂಡಾ ಬ್ಲಾಕ್ ಬಸ್ಟರ್ ಸಾಂಗ್ಸ್ ಹೆಸರಿನ ಆಲ್ಬಂ ಮೂಲಕ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Crocodile Attack: ತಂದೆಯ ಜೀವ ಉಳಿಸಲು ಮೊಸಳೆ ಬಾಯಿಗೆ ಕೈ ಹಾಕಿದ ಬಾಲಕ!

Crocodile Attack: ರಬಿಯುಲ್ ಶೇಖ್ ಎಂಬ 12 ವರ್ಷದ ಬಾಲಕ ತನ್ನ ತಂದೆಯನ್ನು ಉಳಿಸುವ ಪ್ರಯತ್ನದಲ್ಲಿ ಸುಂದರ್ ಬನ್‌ನಲ್ಲಿ ಮೊಸಳೆಯೊಂದಿಗೆ ಹೋರಾಡಿದ್ದಾನೆ. ಆದರೆ ಆತನ ನಿರಂತರ ಹೋರಾಟದ ಹೊರತಾಗಿಯೂ, ಅವನು ತನ್ನ ತಂದೆಯನ್ನು ಮೊಸಳೆಯ ಹಿಡಿತದಿಂದ ಬಿಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಳ್ಳಿಗೆ ಹೋಗಿ ಮಗ ಕೆಲವು ಜನರೊಂದಿಗೆ ಹಿಂದಿರುಗಿದ. ಆದರೆ ಅಷ್ಟರಲ್ಲಿ ಮೊಸಳೆ ಆತನ ತಂದೆಯನ್ನು ನದಿಗೆ ಎಳೆದುಕೊಂಡು ಹೋಗಿತ್ತು.

VISTARANEWS.COM


on

Crocodile Attack
Koo


ಮಳೆಗಾಲದಲ್ಲಿ ನದಿಗಳಲ್ಲಿ ನೀರು ತುಂಬಿ ಹರಿಯುವುದರಿಂದ ನದಿಯಲ್ಲಿರುವ ಮೊಸಳೆಗಳು ದಡಕ್ಕೆ ಬಂದು ಸೇರುತ್ತವೆ. ಅವುಗಳಿಗೆ ಆಹಾರ ಸಿಗದಿದ್ದಾಗ ಕೆಲವೊಮ್ಮೆ ಅವುಗಳು ಮನುಷ್ಯರ ಮೇಲೆ ದಾಳಿ ಮಾಡುತ್ತವೆ. ಅಂತಹದೊಂದು ಘಟನೆ ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಮೀನುಗಾರಿಕೆಗಾಗಿ ನದಿಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಮೊಸಳೆ ದಾಳಿ (Crocodile Attack)ಮಾಡಿದ್ದು, ಆಗ ಆತನ ಜೊತೆಗಿದ್ದ 12 ವರ್ಷದ ಬಾಲಕನೊಬ್ಬ ತನ್ನ ತಂದೆಯನ್ನು ಮೊಸಳೆ ಹಿಡಿತದಿಂದ ರಕ್ಷಿಸಲು ಮೊಸಳೆ ಜೊತೆಗೆ ಹೋರಾಡಿದ್ದಾನೆ.

ರಬಿಯುಲ್ ಶೇಖ್ ಎಂಬ 12 ವರ್ಷದ ಬಾಲಕ ತನ್ನ ತಂದೆಯನ್ನು ಉಳಿಸುವ ಪ್ರಯತ್ನದಲ್ಲಿ ಸುಂದರ್ ಬನ್‌ನಲ್ಲಿ 10 ಅಡಿ ಉಪ್ಪುನೀರಿನ ಮೊಸಳೆಯೊಂದಿಗೆ ಹೋರಾಡಿದ್ದಾನೆ. ಆದರೆ ಆತನ ನಿರಂತರ ಹೋರಾಟದ ಹೊರತಾಗಿಯೂ, ಅವನು ತನ್ನ ತಂದೆಯನ್ನು ಮೊಸಳೆಯ ಹಿಡಿತದಿಂದ ಬಿಡಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ದಕ್ಷಿಣ 24-ಪರಗಣದ ಪಥರ್ ಪ್ರತಿಮಾದ ಸತ್ಯದಾಸ್ಪುರ ಗ್ರಾಮದ ಜಗದ್ದಲ್ ನದಿಯ ದಡದಲ್ಲಿ ಭಾನುವಾರ ಈ ಘಟನೆ ನಡೆದಿದೆ. ತಂದೆ ಮಗ ಇಬ್ಬರೂ ನದಿಗೆ ಮೀನುಗಾರಿಕೆಗೆ ಹೋಗಿದ್ದರು. ಮೀನುಗಾರಿಕೆ ಬಲೆಯನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದ 45 ವರ್ಷದ ಅಸ್ಮುದ್ದೀನ್ ಶೇಖ್ ಮೇಲೆ ಮೊಸಳೆ ದಾಳಿ ಮಾಡಿದೆ. ಇದನ್ನು ನೋಡಿದ ಮಗ ಮೊಸಳೆಯ ಮೇಲೆ ಹಾರಿ ತನ್ನ ತಂದೆಯ ತೋಳನ್ನು ಮೊಸಳೆಯ ಬಾಯಿಂದ ಬಿಡಿಸಲು ತನ್ನ ಕೈಗಳಿಂದ ಅದರ ದವಡೆಗಳನ್ನು ತೆರೆಯಲು ಪ್ರಯತ್ನಿಸಿದನು. ತನ್ನ ಮಗ ಹೆಣಗಾಡುತ್ತಿರುವುದನ್ನು ನೋಡಿದ ಅಸ್ಮಾವುದ್ದೀನ್, ಹಳ್ಳಿಗೆ ಹೋಗಿ ಕೆಲವು ಜನರನ್ನು ತನ್ನೊಂದಿಗೆ ಕರೆತರುವಂತೆ ಮಗನಿಗೆ ಹೇಳಿದ್ದಾನೆ. ಬಾಲಕ ನದಿಯ ದಡಕ್ಕೆ ಧಾವಿಸಿ ಕೆಲವು ನಿಮಿಷಗಳಲ್ಲಿ ಕೆಲವು ಜನರೊಂದಿಗೆ ಹಿಂದಿರುಗಿದನು. ಆದರೆ ಅಷ್ಟರಲ್ಲಿ ಮೊಸಳೆ ಆತನ ತಂದೆಯನ್ನು ನದಿಗೆ ಎಳೆದುಕೊಂಡು ಹೋಗಿತ್ತು.

ಇದನ್ನೂ ಓದಿ: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

ಆನಂತರ ಈ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅರಣ್ಯ ಅಧಿಕಾರಿಗಳ ಸಹಾಯದಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅಸ್ಮುದ್ದೀನ್ ಅವರ ಶವ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನ್ನ ತಂದೆಯನ್ನು ಉಳಿಸಲು ಅಸಾಮಾನ್ಯ ಧೈರ್ಯವನ್ನು ತೋರಿಸಿದ ಹುಡುಗನನ್ನು ಪೊಲೀಸರು ಹೊಗಳಿದ್ದಾರೆ. ಆದರೆ ಎಷ್ಟೇ ಹೋರಾಡಿದರೂ ತನ್ನ ತಂದೆಯ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದೆ ಆತ ದುಃಖಿಸುತ್ತಿದ್ದಾನೆ.

Continue Reading

Latest

Viral Video: ನಾಗದೇವತೆ ವಿಗ್ರಹದ ಮೇಲೆ ಹೆಡೆ ಬಿಚ್ಚಿ ನಿಂತ ನಾಗರ ಹಾವು!

Viral Video: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಶಂಭು ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗದೇವತಾ ವಿಗ್ರಹದ ಮೇಲೆ ಭಕ್ತರು ಬೃಹತ್ ನಾಗರ ಹಾವನ್ನು ನೋಡಿದ್ದಾರೆ. ಹಾವು ತನ್ನ ದೊಡ್ಡ ಹೆಡೆಯನ್ನು ತೆರೆದು ನಾಗದೇವತೆಯ ವಿಗ್ರಹದ ಮೇಲೆ ನಿಂತಿದೆ. ಸ್ಥಳೀಯರು ನಾಗ ದೇವತೆಯ ವಿಗ್ರಹದ ಮೇಲೆ ನಿಂತ ಹಾವಿನ ವಿಡಿಯೊವನ್ನು ತೆಗೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Viral Video
Koo


ಕಣ್ಣಿಗೆ ಕಾಣುವ ದೇವರೆಂದರೆ ಅದು ನಾಗರ ಹಾವು ಎನ್ನುತ್ತಾರೆ. ಆಗಸ್ಟ್ 9ರಂದು ಎಲ್ಲೆಡೆ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಜನರು ತಾವು ನಂಬಿದ ನಾಗದೇವನಿಗೆ ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ. ಆದರೆ ಇದೀಗ ನಾಗರ ಪಂಚಮಿ ಹಬ್ಬ ಸಮೀಪಿಸುತ್ತಿದ್ದಂತೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಾಗದೇವರು ಪ್ರತ್ಯೇಕ್ಷರಾಗಿ ಭಕ್ತರಿಗೆ ದರ್ಶನ ನೀಡಿದ್ದಾರೆ. ಇಲ್ಲಿನ ಶಂಭು ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗದೇವತಾ ವಿಗ್ರಹದ ಮೇಲೆ ನಾಗರ ಹಾವು ಹೆಡೆ ಬಿಚ್ಚಿ ನಿಂತಿದ್ದು, ಇದನ್ನು ಕಂಡು ಭಕ್ತರು ಇದು ಶಿವನ ಮಹಿಮೆ ಎಂದು ಹಾವಿಗೆ ಕೈಮುಗಿದು ಭಕ್ತಿಯ ಸಾಗರದಲ್ಲಿ ಮುಳುಗಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಶಂಭು ಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗದೇವತಾ ವಿಗ್ರಹದ ಮೇಲೆ ಭಕ್ತರು ಬೃಹತ್ ನಾಗರ ಹಾವನ್ನು ನೋಡಿದ್ದಾರೆ. ಹಾವು ತನ್ನ ದೊಡ್ಡ ಹೆಡೆಯನ್ನು ತೆರೆದು ನಾಗದೇವತೆಯ ವಿಗ್ರಹದ ಮೇಲೆ ನಿಂತಿದೆ. ಸ್ಥಳೀಯರು ನಾಗ ದೇವತೆಯ ವಿಗ್ರಹದ ಮೇಲೆ ನಿಂತ ಹಾವಿನ ವಿಡಿಯೊವನ್ನು ತೆಗೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೆಲವೇ ನಿಮಿಷಗಳಲ್ಲಿ, ಈ ವಿಷಯವು ಪಟ್ಟಣದಾದ್ಯಂತ ಹರಡಿತು. ಇದು ಹೆಚ್ಚಿನ ಸಂಖ್ಯೆಯ ಭಕ್ತರು ಮತ್ತು ಕುತೂಹಲಕಾರಿ ವೀಕ್ಷಕರನ್ನು ದೇವಾಲಯದತ್ತ ಸೆಳೆದಿದೆ. ಹಾಗಾಗಿ ಭಕ್ತರು ದೇವರ ದರ್ಶನಕ್ಕೆ ಬಂದಿದ್ದಾರೆ. ದೇವಾಲಯದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅನೇಕರು ಈ ಘಟನೆಯನ್ನು ಶುಭ ಸಂಕೇತವೆಂದು ಪರಿಗಣಿಸಿದರು, ಮತ್ತು ಇದನ್ನು ದೇವರ ಆಶೀರ್ವಾದವೆಂದು ಸಂತೋಷಗೊಂಡಿದ್ದಾರೆ.

ಮುಂಜಾನೆ ದೇವಾಲಯದ ಅರ್ಚಕರು ದೈನಂದಿನ ಆಚರಣೆಗಳನ್ನು ನಡೆಸುತ್ತಿದ್ದಾಗ, ನಾಗದೇವತೆ ವಿಗ್ರಹದ ಮೇಲೆ ಹಾವು ತನ್ನ ಹೆಡೆಯನ್ನು ಬಿಚ್ಚಿರುವುದನ್ನು ನೋಡಿದ್ದಾರೆ. ಭಗವಾನ್ ಶಿವನಿಗೆ ಸಮರ್ಪಿತವಾಗಿರುವ ದೇವಾಲಯದಲ್ಲಿ ಭಕ್ತರು ಶಿವನ ಕೊರಳಿನ ಆಭರಣವಾಗಿರುವ ನಾಗದೇವತೆಗಳಿಗೂ ಪ್ರಾರ್ಥನೆ ಸಲ್ಲಿಸುತ್ತಾರೆ. ಹಾಗಾಗಿ ಭಗವಾನ್ ಶಿವನ ಆಲಯದಲ್ಲಿ ಈ ಹಾವು ನಾಗದೇವರ ವಿಗ್ರಹದ ಮೇಲೆ ಕಂಡುಬಂದಿದ್ದು, ಊರಿನ ಉದ್ಧಾರಕ್ಕಾಗಿ ಶಿವನು ಕಳುಹಿಸಿದ ಧೂತ ಎಂದು ಜನರು ನಂಬಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಮಲಗಿದ್ದ ಮಹಿಳೆಯ ತಲೆಕೂದಲಿನಲ್ಲಿ ಹರಿದಾಡಿದ ಹಾವು!

ಇಲ್ಲಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದರೂ, ನಾಗರಹಾವು ಹೆದರಲಿಲ್ಲ. ಅದು ನಾಗಾ ದೇವತೆ ವಿಗ್ರಹದ ಮೇಲೆ ಹಾಗೆಯೇ ನಿಂತುಕೊಂಡಿದೆ. ಹಾವು ಹೋಗದ ಕಾರಣ, ಸ್ಥಳೀಯರು ಹಾವು ಹಿಡಿಯುವವರಿಗೆ ಮಾಹಿತಿ ನೀಡಿದರು. ಅವನು ಬಂದು ಹಾವನ್ನು ಹಿಡಿಯಲು ಬಹಳ ಸಮಯ ಶ್ರಮಿಸಿದನು. ಆದರೆ ಅವನಿಗೆ ಅದನ್ನು ಹಿಡಿಯಲಾಗದೆ ಬಿಟ್ಟುಹೋದನು. ಈ ಘಟನೆಗೆ ಗ್ರಾಮಸ್ಥರು ಪ್ರತಿಕ್ರಿಯಿಸಿದ್ದಾರೆ. “ನಾವು ಅಂತಹ ಸನ್ನಿವೇಶವನ್ನು ಎಂದಿಗೂ ನೋಡಿಲ್ಲ ಮತ್ತು ಇದು ನಮ್ಮ ಅದೃಷ್ಟ” ಎಂದು ಹೇಳಿದ್ದಾರೆ. ಎಲ್ಲವೂ ಶಿವಯ್ಯನ ಮಹಿಮೆ ಎಂದು ಭಕ್ತರು ಹೇಳುತ್ತಾರೆ.

Continue Reading

Latest

Viral Video: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

Viral Video: ಬೀದಿಯಲ್ಲಿ ಹಸುಗಳು ಮಹಿಳೆಯ ಮೇಲೆ ಕ್ರೂರವಾಗಿ ದಾಳಿ ಮಾಡುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ, ಬೀದಿ ದನಗಳ ಗುಂಪು ಮಹಿಳೆಯ ಮೇಲೆ ದಾಳಿ ಮಾಡಿದೆ. ಹಸುವೊಂದು ಮಹಿಳೆಯ ಎದೆ ಹಾಗೂ ಕುತ್ತಿಗೆಗೆ ತೀವ್ರವಾಗಿ ತಿವಿದಿದೆ. ಕಾಲಿನಿಂದ ತುಳಿದು ತುಳಿದು ಘಾಸಿಗೊಳಿಸಿದೆ. ಈ ವಿಡಿಯೊ ಆತಂಕ ಮೂಡಿಸುತ್ತದೆ.

VISTARANEWS.COM


on

Viral Video
Koo


ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡುವಂತಹ ಘಟನೆಗಳು ಹೆಚ್ಚು ಕಂಡುಬರುತ್ತಿದೆ. ಸಾಧು ಪ್ರಾಣಿಗಳಾದ ಹಸು, ಎಮ್ಮೆಗಳು ಕ್ರೂರ ಪ್ರಾಣಿಗಳಂತೆ ವರ್ತಿಸಲು ಶುರು ಮಾಡಿವೆ. ಎಲ್ಲೆಂದರಲ್ಲಿ ಜನರನ್ನು ಅಟ್ಟಾಡಿಸಿಕೊಂಡು ದಾಳಿ ಮಾಡುತ್ತಿವೆ. ಇದೀಗ ಅಂತಹದೊಂದು ಆಘಾತಕಾರಿ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದ್ದು, ಬೀದಿ ಹಸುವಿನ ದಾಳಿಗೆ ಮಹಿಳೆಯೊಬ್ಬರು ತುತ್ತಾಗಿ ಭೀಕರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ (Viral Video) ಹರಿದಾಡುತ್ತಿದೆ.

ಬೀದಿಯಲ್ಲಿ ಹಸುಗಳು ಮಹಿಳೆಯ ಮೇಲೆ ಕ್ರೂರವಾಗಿ ದಾಳಿ ಮಾಡುವುದನ್ನು ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ ಆಗಿರುವ ಈ ವಿಡಿಯೊದಲ್ಲಿ, ಬೀದಿ ಹಸುಗಳ ಗುಂಪು ಮಹಿಳೆಯ ಮೇಲೆ ದಾಳಿ ಮಾಡಿದೆ. ಹಸುವೊಂದು ಮಹಿಳೆಯ ಎದೆ ಹಾಗೂ ಕುತ್ತಿಗೆಗೆ ತಿವಿದಿದೆ. ಕಾಲಿನಿಂದ ತುಳಿದು ತುಳಿದು ಘಾಸಿಗೊಳಿಸಿದೆ. ಹಲವಾರು ಜನರು ಮಹಿಳೆಯನ್ನು ಉಳಿಸಲು ಪ್ರಯತ್ನಿಸಿದರು. ಆದರೆ ದನಗಳು ಮಾತ್ರ ತಮ್ಮ ಕೃತ್ಯವನ್ನು ನಿಲ್ಲಿಸಲಿಲ್ಲ. ಇದರ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಸು ಮಹಿಳೆಯನ್ನು ತಿವಿದ ಭಯಾನಕ ದೃಶ್ಯದ ಬಗ್ಗೆ ಹಾಗೂ ಇದರ ಪರಿಣಾಮ ಮಹಿಳೆಯ ಎದೆ ಮತ್ತು ಗಂಟಲು ಹರಿದುಹಾಕಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ವಿವರಿಸಿದಾಗ ಎಂಥವರಿಗೂ ಮೈ ಜುಮ್ಮೆನಿಸುತ್ತದೆ.

ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಭವಿಷ್ಯದಲ್ಲಿ ಇದೇ ರೀತಿಯ ದುರಂತಗಳು ನಡೆಯದಂತೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜನಾಗ್ರಹ ಕೇಳಿ ಬಂದಿದೆ. ಆದರೆ ಕುರುಕ್ಷೇತ್ರದ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಇನ್ನೂ ಕಠಿಣ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

ಈ ಘಟನೆಗೆ ಸಂಬಂಧಿಸಿದಂತೆ ನಗರ ಪ್ರದೇಶಗಳಲ್ಲಿ ಆಕ್ರಮಣಕಾರಿ ಪ್ರಾಣಿಗಳ ಅನಿಯಂತ್ರಿತ ಉಪಸ್ಥಿತಿಯ ಬಗ್ಗೆ ಸಂಬಂಧಪಟ್ಟ ನಾಗರಿಕರು ಮತ್ತು ಸ್ಥಳೀಯ ನಿವಾಸಿಗಳು ಆಕ್ರೋಶ ಮತ್ತು ಭಯವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಕುರುಕ್ಷೇತ್ರದಲ್ಲಿ ಬೀದಿ ಪ್ರಾಣಿಗಳ ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳಿಂದ ತುರ್ತು ಕ್ರಮ ಅಗತ್ಯವಿದೆ ಎಂಬುದನ್ನು ತಿಳಿಸುತ್ತದೆ.

Continue Reading

Latest

Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

Viral Video: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತೆ ನೃತ್ಯ ಮಾಡಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಹೊರಳಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಯಲ್ಲಿ ಕುಣಿದಿದ್ದಾಳೆ. ಇನ್ನು ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ!

VISTARANEWS.COM


on

Viral Video
Koo


ಜನರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವು ಬಗೆಯ ರೀಲ್ಸ್‌ಗಳನ್ನ ಮಾಡಿ ಹರಿಬಿಡುತ್ತಾರೆ. ಈ ರೀಲ್ಸ್ ಮೂಲಕ ಅನೇಕ ಪ್ರತಿಭೆಗಳು ಹೊರಗೆ ಬರುತ್ತವೆ. ಇದೀಗ ದಂಪತಿಯ ಅಂತಹದೊಂದು ಪ್ರತಿಭೆ ಹೊರಗೆ ಬಂದಿದೆ. ಇನ್ನೇನು ನಾಗರ ಪಂಚಮಿ ಹಬ್ಬ ಹತ್ತಿರ ಬರುತ್ತಿದೆ. ಜನರು ನಾಗದೇವರನ್ನು ನೆನೆದು ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಸಮಯದಲ್ಲಿ ಇದೀಗ ದಂಪತಿ ನಾಗಿನಿ ಡ್ಯಾನ್ಸ್ ಮೂಲಕ ಜನರಿಗೆ ನಾಗದೇವರ ದರ್ಶನ ನೀಡಿದ್ದಾರೆ. ಅವರ ಡ್ಯಾನ್ಸ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ. ಅವರ ಡ್ಯಾನ್ಸ್ ವೀಕ್ಷಕರ ಮುಖದಲ್ಲಿ ನಗುವನ್ನು ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೊದಲ್ಲಿ, ದಂಪತಿ ನೀರಿನಿಂದ ತುಂಬಿರುವ ಹೊಲದಲ್ಲಿ ಹಾವಿನಂತಹ ಚಲನೆಗಳಿಂದ ಸ್ಫೂರ್ತಿ ಪಡೆದ ನಾಗಿನ್ ಡ್ಯಾನ್ಸ್ ಅನ್ನು ಪ್ರದರ್ಶಿಸಿದ್ದಾರೆ. ಅವರಿಬ್ಬರು ಹೊಲದಲ್ಲಿನ ಕೆಸರಿನಲ್ಲಿ ಮಲಗಿಕೊಂಡು, ನಂತರ ನಿಂತು ಹಾವಿನಂತೆ ಬಳಕುತ್ತಾ ನೃತ್ಯ ಮಾಡಿದ್ದಾರೆ. ಇಲ್ಲಿ ಮಹಿಳೆ ರೊಮ್ಯಾಂಟಿಕ್ ಭಂಗಿಗಳನ್ನು ನೀಡಿದ್ದಾಳೆ. ಆ ಹೊಲದಲ್ಲಿ ಕೆಸರೇ ತುಂಬಿರುವುದರಿಂದ ದಂಪತಿಯ ಬಟ್ಟೆ, ಮೈ ಕೇಸರಿನಿಂದ ಬಳಿದುಕೊಂಡಿದೆ. ಈ ದೃಶ್ಯವು ಅನೇಕ ವೀಕ್ಷಕರನ್ನು ರಂಜಿಸಿದೆ ಮತ್ತು ಗೊಂದಲಕ್ಕೀಡು ಮಾಡಿದೆ.

ವಿನಯ್ ವಿಕೆ 9351 ಎಂಬ ಬಳಕೆದಾರರು ಯೂಟ್ಯೂಬ್‍ನಲ್ಲಿ ಹಂಚಿಕೊಂಡಿರುವ ಈ ವಿಡಿಯೊ ಶೀಘ್ರದಲ್ಲೇ ವೈರಲ್ ಆಗಿದ್ದು, ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ ಮತ್ತು ಅನೇಕರು ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಲೈಕ್‌ಗಳು ಮತ್ತು ವೀಕ್ಷಣೆಗಳ ಹಸಿವು ಜನರನ್ನು ಹುಚ್ಚರನ್ನಾಗಿ ಮಾಡುತ್ತಿದೆ” ಎಂದು ಒಬ್ಬ ವೀಕ್ಷಕರು ಕಾಮೆಂಟ್ ಮಾಡಿದರೆ, ಇನ್ನೊಬ್ಬರು “ನಾಗಿನ್ ಈ ರೀತಿ ನೃತ್ಯ ಮಾಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 1 ಸಾವಿರ ರೂ. ಲಂಚ ಪ್ರಕರಣ 25 ವರ್ಷಗಳ ಬಳಿಕ ಇತ್ಯರ್ಥ! ಹಿಂಗಾಂದ್ರೆ ಹೆಂಗೆ ಅಂತಿದ್ದಾರೆ ಜನ!

ಸಾಮಾನ್ಯವಾಗಿ ಜನರು ಕೆಸರು ಕಾಲಿಗೆ ತಗುಲಿದರೆ ಅದನ್ನು ಕಂಡು ಅಸಹ್ಯಪಟ್ಟುಕೊಂಡು ಬೇಗನೆ ಹೋಗಿ ಸ್ವಚ್ಛಗೊಳಿಸಿಕೊಳ್ಳುತ್ತಾರೆ. ಅಂತಹದರಲ್ಲಿ ಈ ದಂಪತಿ ಕೆಸರು ಗದ್ದೆಯಲ್ಲೇ ಬಿದ್ದು ಉರುಳಾಡುತ್ತಿದ್ದಾರೆ. ಇದನ್ನು ನೋಡಿದರೆ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಜನರು ಎಷ್ಟು ದೂರ ಹೋಗುತ್ತಾರೆ ಮತ್ತು ಯಾವ ಕೆಲಸಕ್ಕೂ ಮುಂದಾಗುತ್ತಾರೆ ಎಂಬುದನ್ನು ಎತ್ತಿ ತೋರಿಸುತ್ತದೆ. ಕೆಲವು ವೀಕ್ಷಕರು ವಿಡಿಯೊವನ್ನು ಮನರಂಜನೆಯಾಗಿ ಕಂಡುಕೊಂಡರೆ, ಇತರರು ಆನ್‍ಲೈನ್‍ ಖ್ಯಾತಿಯಗಾಗಿ ಜನರು ಎಷ್ಟು ದೂರ ಹೋಗಬಹುದು ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Continue Reading
Advertisement
Infosys
ಕರ್ನಾಟಕ6 mins ago

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Paris Olympics
ಕ್ರೀಡೆ27 mins ago

Paris Olympics: ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಮುಗ್ಗರಿಸಿದ ಮಣಿಕಾ ಬಾತ್ರಾ

Indians spend 15 billion hours waiting for customer service time in 2023 ServiceNow information
ದೇಶ43 mins ago

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Former MLA Rupali Nayka appeals to DC to resolve various issues under Karwara Ankola Assembly Constituency
ಉತ್ತರ ಕನ್ನಡ45 mins ago

Uttara Kannada News: ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕರಿಂದ ಡಿಸಿಗೆ ಮನವಿ

Kolluru bridge inundation by Krishna river flood Chalavadi Narayanaswamy visits the flood damaged area
ಮಳೆ45 mins ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ನೆರೆ ಹಾನಿ ಪ್ರದೇಶಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

Successful complex surgery at Fortis Hospital for a boy who had a hole in his intestine due to a road accident
ಕರ್ನಾಟಕ47 mins ago

Fortis Hospital: ರಸ್ತೆ ಅಪಘಾತದಿಂದ ಕರುಳಿನಲ್ಲಿ ರಂಧ್ರ; 10 ವರ್ಷದ ಬಾಲಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

New Rules
ದೇಶ48 mins ago

New Rules: ಕ್ರೆಡಿಟ್‌ ಕಾರ್ಡ್‌ನಿಂದ ಎಲ್‌ಪಿಜಿ ದರ; ನಾಳೆಯಿಂದ ಯಾವೆಲ್ಲ ನಿಯಮ, ದರ ಬದಲು? ಜೇಬಿಗೆ ಹೊರೆಯೇ?

Pakistani Labours
ವಿದೇಶ49 mins ago

Pakistani Labours: ಭಿಕ್ಷಾಟನೆ, ಅಪರಾಧ ಕೃತ್ಯ; ಪಾಕಿಸ್ತಾನಿಯರನ್ನು ಒದ್ದು ಓಡಿಸುತ್ತಿರುವ ಗಲ್ಫ್‌ ರಾಷ್ಟ್ರಗಳು!

Star Monsoon gym fashion
ಫ್ಯಾಷನ್52 mins ago

Star Monsoon Gym Fashion: ನಟ ಕಾರ್ತಿಕ್‌ ಜಯರಾಮ್‌ ಮಾನ್ಸೂನ್‌ ಜಿಮ್‌ ಫ್ಯಾಷನ್‌ ಮಂತ್ರ ಹೀಗಿದೆ!

Crocodile Attack
Latest1 hour ago

Crocodile Attack: ತಂದೆಯ ಜೀವ ಉಳಿಸಲು ಮೊಸಳೆ ಬಾಯಿಗೆ ಕೈ ಹಾಕಿದ ಬಾಲಕ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌