Viral Video: ಪುಷ್ಪ 2 ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಅಜ್ಜಿ; ವಾವ್ಹ್‌ ಕ್ಯೂಟ್ ಎಂದ ನೆಟ್ಟಿಗರು - Vistara News

ವೈರಲ್ ನ್ಯೂಸ್

Viral Video: ಪುಷ್ಪ 2 ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಅಜ್ಜಿ; ವಾವ್ಹ್‌ ಕ್ಯೂಟ್ ಎಂದ ನೆಟ್ಟಿಗರು

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಮುಂಬರುವ ಪುಷ್ಪ ೨ ಚಿತ್ರದ ಸೊಸಕಿ ಹಾಡಿಗೆ ನಗುಮೊಗದಿಂದ ಅಜ್ಜಿಯೊಬ್ಬರು ಹೆಜ್ಜೆ ಹಾಕಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ. ಸಾಕಷ್ಟು ಮಂದಿ ಅಜ್ಜಿಯ ನೃತ್ಯವನ್ನು ನೋಡಿ ವಾವ್ ಕ್ಯೂಟ್ ಎಂದು ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಗುಮೊಗದ ಅಜ್ಜಿಯೊಬ್ಬರು (grandma) ಮುಂಬರುವ ಪುಷ್ಪ 2 (Pushpa 2) ಚಿತ್ರದ ಹಾಡಿಗೆ ಹೆಜ್ಜೆ ಹಾಕುತ್ತಿದ್ದರೆ ಮತ್ತೆ ಮತ್ತೆ ನೋಡಬೇಕೆನಿಸುತ್ತದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣವಾದ (social media) ಇನ್ ಸ್ಟಾಗ್ರಾಮ್ ನಲ್ಲಿ (instagram) ವೈರಲ್ (Viral Video) ಆಗಿದ್ದು ಅಜ್ಜಿಗೆ ಪ್ರಶಂಸೆಯ ಹೊಳೆಯೇ ಹರಿದು ಬರುತ್ತಿದೆ.

ಪುಷ್ಪ: ದಿ ರೂಲ್‌ನ ಇತ್ತೀಚಿನ ಸಂಗೀತ ಟ್ರ್ಯಾಕ್ ಗೆ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಮಾಡಿರುವ ರೋಮ್ಯಾಂಟಿಕ್ ಡ್ಯಾನ್ಸ್ ಮೂವ್‌ಗಳನ್ನು ಅಜ್ಜಿಯೊಬ್ಬರು ಮಾಡಿ ಆನಂದಿಸುತ್ತಿರುವ ವಿಡಿಯೋ ಇದಾಗಿದೆ.
ವೈರಲ್ ಡ್ಯಾನ್ಸ್ ರೀಲ್‌ನಲ್ಲಿ ಪುಷ್ಪಾ 2 ರ ‘ಸೂಸೆಕಿ’ ಹಾಡನ್ನು ಅಜ್ಜಿ ಆನಂದಿಸುತ್ತಾ ಮಾಡಿದ್ದಾರೆ. ಅವರ ‘ಮುದ್ದಾದ’ ಪ್ರದರ್ಶನವನ್ನು ನೋಡಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.

ಅನೇಕ ಇನ್ ಸ್ಟಾ ಬಳಕೆದಾರರು ಡ್ಯಾನ್ಸ್ ರೀಲ್‌ಗೆ ಉತ್ತರಿಸಿದ್ದು, ಅದನ್ನು “ಕ್ಯೂಟ್” ಎಂದು ಕರೆದಿದ್ದಾರೆ. ಅಜ್ಜಿಯ ಅಭಿನಯದ ಬಗ್ಗೆ ಅನೇಕರು ಸಂತೋಷ ವ್ಯಕ್ತಪಡಿಸಿದ್ದಾರೆ. “ಸೂಪರ್ ಅದ್ಬುತ… ಪಾಟಿ’ (ಪಾಟಿ ಎಂದರೆ ಬೆಂಕಿ) ಎಂದು ನೆಟಿಜನ್‌ಗಳು ಆಕೆ ಮತ್ತು ಆಕೆಯ ನೃತ್ಯದ ಭಂಗಿಯನ್ನು ಶ್ಲಾಘಿಸಿದ್ದಾರೆ.

ಅಜ್ಜಿಯು ರಶ್ಮಿಕಾ ಅವರ ನೃತ್ಯದ ಸರಳವಾದ ಹೆಜ್ಜೆಗಳನ್ನು ಹಾಕಲು ತಮ್ಮ ಕೈಲಾದಷ್ಟು ಪ್ರಯತ್ನಿಸಿದ್ದಾರೆ. ಕೆಮರಾದಲ್ಲಿ ಅವರು ಕೆಲವು ಶಾಸ್ತ್ರೀಯ ನೃತ್ಯ ಭಂಗಿಗಳನ್ನು ಪ್ರದರ್ಶಿಸಲು ಸೀರೆಯನ್ನು ಧರಿಸಿದ್ದಾರೆ.

ಅಜ್ಜಿ ತನ್ನ ಮುದ್ದಾದ ನಗುವಿನ ಮೂಲಕ ವಿಡಿಯೋವನ್ನು ಪ್ರಾರಂಭಿಸಿದ್ದಾರೆ. ನಿಧಾನವಾಗಿ ತಲೆಯಾಡಿಸುತ್ತಾ, ತಮ್ಮ ಬೆರಳುಗಳ ಮೂಲಕ ಉಂಗುರದಂತಹ ಸನ್ನೆಯನ್ನು ಮಾಡಿದ್ದಾರೆ. ಕಣ್ಣಿನ ದೃಷ್ಟಿಯನ್ನು ಅತ್ತಿತ್ತ ಹಾರಿಸುತ್ತ ಹಾಡಿಗೆ ತಕ್ಕನಾಗಿ ತಮ್ಮ ಹೆಜ್ಜೆಯನ್ನು ಹಾಕಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: Viral Video: ಹೃದಯ ಸ್ತಬ್ಧಗೊಳಿಸುವ ಈ 3ಡಿ ದೃಶ್ಯ ನೋಡಿ! ಇನ್ನಾದರು ಸುರಕ್ಷಿತವಾಗಿ ವಾಹನ ಚಲಾಯಿಸಿ

ಮುಂದಿನದು ಚಿತ್ರದ ಅತ್ಯಂತ ನಿರೀಕ್ಷಿತ ಭಂಗಿಯಾಗಿದೆ. ಅದು ಇಲ್ಲದೆ ಪ್ರದರ್ಶನವು ಅಪೂರ್ಣವಾಗಿ ಉಳಿಯುತ್ತದೆ. ಅಜ್ಜಿಗೆ ಇದರಲ್ಲಿ ಮೊಮ್ಮಗ ಅಕ್ಷಯ್ ಪಾರ್ಥ ಸಾಥಿಯಾಗಿದ್ದಾರೆ.

ಸೂಸೆಕಿ ಮೂಲತಃ ತೆಲುಗು ಹಾಡು. ಮುಂಬರುವ ಚಿತ್ರ ಪುಷ್ಪ: ದಿ ರೂಲ್‌ನಲ್ಲಿ ಗಣೇಶ್ ಆಚಾರ್ಯ ಅವರ ನೃತ್ಯ ಸಂಯೋಜನೆಯ ಈ ಹಾಡಿಗೆ ಪುಷ್ಪರಾಜ್ ಮತ್ತು ಶ್ರೀವಲ್ಲಿ ಜೋಡಿ ಹೆಜ್ಜೆ ಹಾಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಇದೆಂಥಾ ಹುಚ್ಚಾಟ! ಎನ್‌ಡಿಎ ಕಳಪೆ ಪ್ರದರ್ಶನದಿಂದ ಖಿನ್ನತೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

Viral News:ಶ್ರೀನಗರ ಗ್ರಾಮದ ಸುಖ್ವಿಂದರ್‌ ಎಂಬಾತ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಬಹುಮತ ಗಳಿಸುವಲ್ಲಿ ವಿಫಲರಾಗಿರುವ ಹಿನ್ನೆಲೆ ಖಿನ್ನತೆಗೊಳಗಾಗಿದ್ದ, ಜೂ.4ರಂದು ಫಲಿತಾಂಶ ಬಂದ ನಂತರ ಅವರು ಖಿನ್ನತೆಗೊಳಗಾಗಿದ್ದರು. ಕುಟುಂಬಸ್ಥರು ಆತನಿಗೆ ಎಷ್ಟೇ ಸಮಾಧಾನ ಹೇಳಿದರೂ ಆತ ಏನೂ ಹೇಳದೇ ಬರೀ ಮೌನ ವಹಿಸಿದ್ದ. ಇದೇ ಬೇಸರದಲ್ಲಿ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

VISTARANEWS.COM


on

Koo

ಹರಿಯಾಣ: ಚುನಾವಣೆ(Election) ಅಂದ್ರೆನೇ ಹಾಗೆಯೇ ಅದೊಂದು ತರಹ ಯುದ್ಧದ ರೀತಿಯೇ ಭಾಸವಾಗುತ್ತದೆ. ತಮ್ಮ ತಮ್ಮ ನೆಚ್ಚಿನ ಪಕ್ಷಗಳು, ನಾಯಕರ ಗೆಲುವಿಗೆ ನೂರಾರು ಕಾರ್ಯಕರ್ತರು, ಬೆಂಬಲಿಗರು ಹಂಬಲಿಸೋದು ಸಹಜ. ಕೆಲವೊಮ್ಮೆ ಕಾರ್ಯಕರ್ತರ ಪಕ್ಷದ ಬಗೆಗಿನ ಒಲವು ಅತಿರೇಕಕ್ಕೆ ತಿರುಗಿದಾಗ ಅನೇಕ ಅವಘಡಗಳು ಸಂಭವಿಸುತ್ತಿರುತ್ತವೆ. ಅಂತಹದ್ದೇ ಒಂದು ಘಟನೆ(Viral News) ಹರಿಯಾಣದಲ್ಲಿ ನಡೆದಿದೆ. ಇಲ್ಲಿ ಹಿಸಾರ್‌ ಜಿಲ್ಲೆಯ ಮಿರ್ಜಾಪುರ ರಸ್ತೆ ಕಾಲೋನಿಯಲ್ಲಿ ವ್ಯಕ್ತಿಯೊಬ್ಬ ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಕಳಪೆ ಪ್ರದರ್ಶನ ತೋರಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆ ವಿವರ:

ಶ್ರೀನಗರ ಗ್ರಾಮದ ಸುಖ್ವಿಂದರ್‌ ಎಂಬಾತ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಬಹುಮತ ಗಳಿಸುವಲ್ಲಿ ವಿಫಲರಾಗಿರುವ ಹಿನ್ನೆಲೆ ಖಿನ್ನತೆಗೊಳಗಾಗಿದ್ದ, ಜೂ.4ರಂದು ಫಲಿತಾಂಶ ಬಂದ ನಂತರ ಅವರು ಖಿನ್ನತೆಗೊಳಗಾಗಿದ್ದರು. ಕುಟುಂಬಸ್ಥರು ಆತನಿಗೆ ಎಷ್ಟೇ ಸಮಾಧಾನ ಹೇಳಿದರೂ ಆತ ಏನೂ ಹೇಳದೇ ಬರೀ ಮೌನ ವಹಿಸಿದ್ದ. ಇದೇ ಬೇಸರದಲ್ಲಿ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಇಂತಹದ್ದೇ ಒಂದು ಛತ್ತೀಸ್‌ಗಡದಲ್ಲಿ ನಡೆದಿತ್ತು. ಎನ್‌ಡಿಎ(NDA) ಬಹುಮತದೊಂದಿಗೆ ಗೆಲವು ಸಾಧಿಸಿರುವ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ್ದಾನೆ.ಛತ್ತೀಸ್‌ಗಡದ ಬಾಲರಾಮ್‌ಪುರದಲ್ಲಿ ಈ ಘಟನೆ ನಡೆದಿದ್ದು, ದುರ್ಗೇಶ್‌ ಪಾಂಡೆ ಎಂಬಾತನೇ ಬಿಜೆಪಿ ಬೆಂಬಲಿಗ. ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡಿದ್ದನಂತೆ. ಈ ಬಾರಿ ಅಧಿಕಾರ ಎನ್‌ಡಿಎ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆ ಬಿದ್ದ ದುರ್ಗೇಶ್‌, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ.

ಇನ್ನು ಬೆರಳು ಕತ್ತರಿಸಿಕೊಂಡ ದುರ್ಗೇಶ್‌ ಪಾಂಡೆ, ಬಟ್ಟೆಯನ್ನು ಕಟ್ಟಿ ಸುರಿಯುತ್ತಿದ್ದ ರಕ್ತವನ್ನು ತಡೆಯಲು ಯತ್ನಿಸಿದ್ದಾನೆ. ಆದರೆ ರಕ್ತ ಮಾತ್ರ ನಿಲ್ಲಲೇ ಇಲ್ಲ. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ಆತನ ಕುಟುಂಬಸ್ಥರು ಆತನನ್ನು ತಕ್ಷಣ ಸಮಾರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಆತನನ್ನು ಅಂಬಿಕಾಪುರದ ಮೆಡಿಕಲ್‌ ಕಾಲೇಜಿಗೆ ರವಾನಿಸಲಾಗಿತ್ತು. ಬಹಳ ಹೊತ್ತಾದ ಕಾರಣ ನಜ್ಜುಗುಜ್ಜಾಗಿದ್ದ ಆತನ ಬೆರಳನ್ನು ಮತ್ತೆ ಜೋಡಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Continue Reading

Latest

Viral Video: ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪ್ಲೀಸ್‌ ಎಂದ ಸಂಸದೆ; ಹೆಂಗಸರನ್ನು ನೋಡಲ್ಲ ಎಂದ ಸ್ಪೀಕರ್‌!

Viral Video: ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ. ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo

ಸಾಮಾನ್ಯವಾಗಿ ಎಲ್ಲರೂ ಮಾತನಾಡುವಾಗ ಮುಂದೆ ಇರುವ ವ್ಯಕ್ತಿಗಳ ಕಣ್ಣುಗಳನ್ನು ನೋಡಿಕೊಂಡು ಮಾತನಾಡುತ್ತಾರೆ. ಆಗ ಅವರು ಯಾರ ಜೊತೆ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಅರ್ಥವಾಗುತ್ತದೆ. ಆದರೆ ಕೆಲವು ಜನರು ಮಾತನಾಡುತ್ತಿರುವವರ ಕಣ್ಣುಗಳನ್ನು ನೋಡದೆ ಅತ್ತಿತ್ತ ನೋಡಿದರೆ ಮಾತನಾಡುವವರಿಗೆ ಅವರಿಗೆ ಈ ಬಗ್ಗೆ ಆಸಕ್ತಿ ಇಲ್ಲ ಎಂಬ ಭಾವನೆ ಮೂಡುತ್ತದೆ. ಇದು ಎಲ್ಲರಿಗೂ ಆಗುವುದು ಸಹಜ. ಇಂತಹದೊಂದು ವಿಚಾರದ ಬಗ್ಗೆ ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಚರ್ಚೆಯಾಗಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

Viral Video

ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ.

ಜರ್ತಾಜ್ ಗುಲ್ ಅವರು ಸಭೆಯಲ್ಲಿ ಮಾತನಾಡುವಾಗ “ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

Viral Video

ಪಾಕಿಸ್ತಾನ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಸಂಸತ್ತಿನ ಕಲಾಪಗಳಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೊದಲ್ಲಿ ಸಚಿವೆ “ನನ್ನ ಪಕ್ಷದ ನಾಯಕರು ನನಗೆ ಕಣ್ಣುಗಳನ್ನು ನೋಡುತ್ತಾ ಮಾತನಾಡಲು ಕಲಿಸಿದ್ದಾರೆ. ನೀವು ಈ ರೀತಿಯ ಕಣ್ಣಿನ ಸಂಪರ್ಕವನ್ನು ತಪ್ಪಿಸಿದರೆ ನಾನು ಮಾತನಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ. ನಿಮ್ಮ ಕನ್ನಡಕವನ್ನು ಧರಿಸಿ, ಸರ್” ಎಂದು ಜರ್ತಾಜ್ ಗುಲ್ ಸ್ಪೀಕರ್ ಅಯಾಜ್ ಸಾದಿಕ್ ಅವರಿಗೆ ಹೇಳಿದರು. ʼನಾನು ಒಬ್ಬಳು ಲೀಡರ್ʼ ನನಗೆ 1.5 ಲಕ್ಷ ಮತಗಳು ಬಂದಿವೆ. ನೀವು ನನ್ನ ಮಾತನ್ನು ಕೇಳದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡಲು ಸಾಧ್ಯವಾಗುವುದಿಲ್ಲ” ಎಂದು ಜರ್ತಾಜ್ ಗುಲ್ ಹೇಳಿದರು. ‌

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ʼಮಹಿಳೆಯೊಂದಿಗೆ ಕಣ್ಣಿನ ಸಂಪರ್ಕ ಮಾಡುವುದು ಒಳ್ಳೆಯದಲ್ಲ ಎಂದು ನಾನು ಕೇಳಿದ್ದೇನೆ. ಆದಕಾರಣ ಹೆಣ್ಣಿನ ಕಣ್ಣಿನ ಸಂಪರ್ಕವನ್ನು ಮಾಡುವುದಿಲ್ಲʼ ಎಂದು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಮರು ಉತ್ತರಿಸಿದ ಸಚಿವೆ, ಈ ರೀತಿಯಲ್ಲಿ 52% ಮಹಿಳೆಯರನ್ನು ನೀವು ನಿರ್ಲಕ್ಷಿಸಿದರೆ, ಆಯ್ದ ಜನರು ಮಾತ್ರ ಇಲ್ಲಿಗೆ ಬರುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಜರ್ತಾಜ್ ಗುಲ್ 2024ರಲ್ಲಿ ಡೇರಾ ಘಾಜಿಯಿಂದ ಮರು ಆಯ್ಕೆಯಾದವರು. ಗುಲ್ ಪಾಕಿಸ್ತಾನದ ರಾಜಕಾರಣಿಯಾಗಿದ್ದು, ಇಮ್ರಾನ್ ಖಾನ್ ಅವರ ಸಂಪುಟದಲ್ಲಿ ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಅಕ್ಟೋಬರ್ 5 ,2018ರಿಂದ ಏಪ್ರಿಲ್ 10, 2022ರವರೆಗೆ ಸೇವೆ ಸಲ್ಲಿಸಿದರು.

Continue Reading

Latest

Viral Video: ಪ್ರೇಯಸಿಯ ಕಣ್ಮುಂದೆಯೇ ಆಕೆಯ ತಂದೆಯನ್ನು ಬರ್ಬರವಾಗಿ ಕೊಂದ ಪ್ರಿಯಕರ!

Viral Video: ಪ್ರೀತಿ ಮನಸ್ಸು ಮನಸ್ಸುಗಳನ್ನು ಬೆಸೆಯಬೇಕು ಎನ್ನುತ್ತಾರೆ. ಆದರೆ ಇಲ್ಲಿ ರಕ್ತದೋಕುಳಿಯನ್ನು ಹರಿಸಿದೆ. ಮಗಳ ಪ್ರೀತಿಯನ್ನು ನಿರಾಕರಿಸಿದ ತಂದೆಯನ್ನು ಆಕೆಯ ಪ್ರಿಯತಮ ಚಾಕುವಿನಿಂದ ಚುಚ್ಚಿ ಸಾಯಿಸಿದ ಘಟನೆ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ದೈಹಿಕ ಶಿಕ್ಷಕನನ್ನು ಹುಡುಗಿಯೊಬ್ಬಳು ಪ್ರೀತಿಸಿದ್ದಳು. ಈ ವಿಚಾರ ತಿಳಿದ ಹುಡುಗಿ ತಂದೆ ಇವರ ಪ್ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತು ಆರೋಪಿಯ ಮನೆಯವರಿಗೆ ಈ ವಿಚಾರ ತಿಳಿಸಿದ್ದಾರೆ.ಇದರಿಂದ ಕೋಪಗೊಂಡ ಹುಡುಗ ಮಗಳು ಹಾಗೂ ತಂದೆ ಸ್ಕೂಟರ್‌ನಲ್ಲಿ ಬರುವ ವೇಳೆ ದಾರಿ ಮಧ್ಯೆ ತಡೆದು ಈ ಕೃತ್ಯ ಎಸಗಿದ್ದಾನೆ.

VISTARANEWS.COM


on

Viral Video
Koo

ವಿಜಯವಾಡ: ಪ್ರೀತಿ ಎಂದರೆ ಒಂದು ಮಾಯೆ ಎಂತ ಹೇಳಬಹುದು. ಯಾಕೆಂದರೆ ಪ್ರೀತಿಯಲ್ಲಿ ಬಿದ್ದ ಜನರು ಏನು ಬೇಕಾದರೂ ಮಾಡುತ್ತಾರೆ. ಆ ಬಗ್ಗೆ ಅವರಲ್ಲಿ ಭಯ ಇರುವುದಿಲ್ಲ. ಅದರಲ್ಲೂ ಯುವಕರು ಹೆಚ್ಚು ಇದರ ಪ್ರಭಾವಕ್ಕೆ ಒಳಗಾಗುವುದನ್ನು ನಾವು ಕೇಳಿರುತ್ತೇವೆ. ಅಂತಹದೊಂದು ಘಟನೆ ಇದೀಗ ಆಂಧ್ರಪ್ರದೇಶದ ವಿಜಯವಾಡದ ಬೃಂದಾವನ ಕಾಲೋನಿ ಬಳಿ ನಡೆದಿದೆ. ಯುವಕನೊಬ್ಬ ಪ್ರೀತಿಸಿದ ಹುಡುಗಿಗಾಗಿ ಆಕೆಯ ತಂದೆಯನ್ನೇ ಆಕೆಯ ಕಣ್ಣಮುಂದೆಯೇ ಬರ್ಬರವಾಗಿ ಕೊಂದಿದ್ದು, ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ. ಇದನ್ನು ಜನರು ಬೆಚ್ಚಿಬಿದ್ದಿದ್ದಾರೆ.

ಆರೋಪಿ ಶಿವ ಮಣಿಕಂಠ (26 ವರ್ಷ) ಈತ ಖಾಸಗಿ ಕಾಲೇಜಿನಲ್ಲಿ ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಹಾಗೇ ಕೊಲೆಯಾದ ವ್ಯಕ್ತಿ ಕಿರಾಣಿ ಅಂಗಡಿ ಮಾಲೀಕ ಕೆ.ರಾಮಚಂದ್ರ ಪ್ರಸಾದ್ (56) ಎಂಬುದಾಗಿ ತಿಳಿದುಬಂದಿದೆ. ಹುಡುಗಿ ಇಂಜಿನಿಯರಿಂಗ್ ಓದುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ಈಕೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಆರೋಪಿಯನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದ ಹುಡುಗಿ ತಂದೆ ಇವರ ಪ್ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತು ಆರೋಪಿಯ ಮನೆಯವರಿಗೆ ಈ ವಿಚಾರ ತಿಳಿಸಿದ್ದಾರೆ.

ಇದರಿಂದ ಆರೋಪಿಯ ಮನೆಯಲ್ಲಿ ಗಲಾಟೆ ಶುರುವಾಗಿದೆ. ಇದರಿಂದ ಕೋಪಗೊಂಡ ಆರೋಪಿ ಜೂನ್ 27ರ ರಾತ್ರಿ ಮಗಳು ಹಾಗೂ ತಂದೆ ಸ್ಕೂಟರ್‌ನಲ್ಲಿ ಬರುವ ವೇಳೆ ದಾರಿ ಮಧ್ಯ ತಡೆದು ಹುಡುಗಿಯ ಮುಂದೆಯೇ ಆಕೆಯ ತಂದೆಯ ಕುತ್ತಿಗೆ ಮತ್ತು ಮುಖಕ್ಕೆ ಚಾಕುವಿನಿಂದ ಆರು ಬಾರಿ ಇರಿದು ಪರಾರಿಯಾಗಿದ್ದಾನೆ. ಹುಡುಗಿ ಈ ದೃಶ್ಯ ಕಂಡು ಕಿರುಚಿದಾಗ ಸ್ಥಳೀಯರು ಬಂದು ಪ್ರಸಾದ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ಸಾವನಪ್ಪಿದ್ದಾರೆ.

ಇದನ್ನೂ ಓದಿ: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

ಈ ಬಗ್ಗೆ ಕೃಷ್ಣಲಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಹಾಗೂ ಆರೋಪಿಯನ್ನು ಬಂಧಿಸಿದ ಪೊಲೀಸರು ಆತ ಕೊಲೆಗೆ ಬಳಸಿದ ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ವಿಡಿಯೊದಲ್ಲಿ ಆರೋಪಿ ಪ್ರಸಾದ್ ಅವರಿಗೆ ಚಾಕುವಿನಿಂದ ಇರಿಯುತ್ತಿದ್ದು, ಹುಡುಗಿ ಕಿರುಚಾಡುತ್ತಿರುವ ದೃಶ್ಯ ಕಂಡುಬಂದಿದೆ. ನಂತರ ಅಲ್ಲಿಗೆ ಸ್ಥಳೀಯರು ಬಂದು ಸುತ್ತುವರಿದಿದ್ದಾರೆ. ಈ ವಿಡಿಯೊಗೆ ಸಾಕಷ್ಟು ವೀವ್ಸ್ ಬಂದಿದ್ದು, ಜನರು ಇದನ್ನು ನೋಡಿ ಬೆಚ್ಚಿಬಿದ್ದಿದ್ದಾರೆ.

Continue Reading

ಬೆಂಗಳೂರು

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Inspirational Story: ಮಗಳ ದುರಂತ ಸಾವಿನಿಂದ ನೊಂದಿದ್ದ ಎಎಸ್‌ಐ ಲೋಕೇಶಪ್ಪ ಬಡಮಕ್ಕಳಲ್ಲಿ ಮಗಳನ್ನು ಕಾಣುತ್ತಿದ್ದಾರೆ. ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣವನ್ನು ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ಧನ ಸಹಾಯ ಮಾಡುತ್ತಿದ್ದಾರೆ

VISTARANEWS.COM


on

By

Inspirational Story
ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಲೋಕೇಶಪ್ಪ
Koo

ಬೆಂಗಳೂರು: ಜನ-ಸಾಮಾನ್ಯರ ರಕ್ಷಣೆ ಮಾಡುವ ಆ ಎಎಸ್‌ಐಗೆ ಮಗಳೇ ಜೀವವಾಗಿದ್ದಳು. ಆಕೆಯ ಭವಿಷ್ಯಕ್ಕಾಗಿ ನೂರಾರು ಕನಸು ಕಂಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಸಾಕಿ ಸಾಲುಹಿದ್ದ ಮಗಳು ಅಗ್ನಿ ದುರಂತದಲ್ಲಿ ತಂದೆ ಕಣ್ಣೆದುರೇ ಸುಟ್ಟು ಕರಕಲಾಗಿದ್ದಳು. ಮಗಳ ಅಗಲಿಕೆಯಿಂದ ಮನನೊಂದಿದ್ದ ಅವರು ಕೊರಗಿ ಕಂಗಲಾಗಿದ್ದರು. ಆದರೆ ಮಗಳ ಸಾವಿಗೆ ಗೌರವ ಸರ್ಮಪಿಸಬೇಕೆಂದು ಆ ಖಾಕಿ ಇಟ್ಟ ಹೆಜ್ಜೆ ಹಲವು ಮಕ್ಕಳ ಭವಿಷ್ಯಕ್ಕೆ ದಾರಿ (Inspirational Story) ದೀಪವಾಗಿದೆ.

ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕೆಲಸ ಮಾಡುತ್ತಿರುವ ಲೋಕೇಶಪ್ಪ ಬಡ ಮಕ್ಕಳಿಗೆ ಮಾಡಿದ ದಾನದಿಂದಲೇ ಹೆಸರು ಮಾಡಿದ್ದಾರೆ. 2019ರಲ್ಲಿ ಬೆಂಕಿ ಅವಘಡದಲ್ಲಿ ತಮ್ಮ ಮಗಳು ಹರ್ಷಾಲಿಯನ್ನು ಕಳೆದುಕೊಂಡಿದ್ದರು. ಇದರಿಂದ ಮನನೊಂದಿದ್ದ ಅವರು ಮಗಳ ಸಾವಿನ ಗೌರವಾರ್ಥವಾಗಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ತಮ್ಮ ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣವನ್ನು ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ಧನಸಹಾಯ ಮಾಡುತ್ತಿದ್ದಾರೆ. ಲೊಕೇಶಪ್ಪ ಪತ್ನಿ ಕೂಡ ಮಗಳನ್ನು ಕಳೆದುಕೊಂಡು ತೀವ್ರವಾಗಿ ನೊಂದಿದ್ದರು. ಹೀಗಾಗಿ ಶಿಕ್ಷಣ ಇಲಾಖೆಯ ಕೆಲಸ ಬಿಟ್ಟು , ಹರ್ಷಾಲಿ ಹೆಸರಿನಲ್ಲಿ ಎನ್‌ಜಿಒ ಶುರು ಮಾಡಿ ಅದರ ಮೂಲಕ ಬಡ ಮಕ್ಕಳಿಗೆ ಸಹಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

ಇನ್ನು ಲೋಕೇಶಪ್ಪ ದಂಪತಿ ಕಳೆದ ಒಂದು ವರ್ಷದಿಂದ ಈ ಕಾರ್ಯವನ್ನು ನೆರವೇರಿಸಿಕೊಂಡು ಬರುತ್ತಿದ್ದಾರೆ. ಮೈಸೂರು 1, ಹಾಸನ 4 , ಬೆಂಗಳೂರು 1 ಶಾಲೆ ಸೇರಿ ಒಟ್ಟು ಆರು ಸರ್ಕಾರಿ ಶಾಲೆಗಳಲ್ಲಿರುವ ಬಡ ಮಕ್ಕಳನ್ನು ಗುರುತಿಸಿದ್ದಾರೆ. ಅವರ ವಿದ್ಯಾಭ್ಯಾಸಕ್ಕೆ ಬೇಕಾದ ಪರಿಕರಗಳಾದ ಪುಸ್ತಕ, ಪೆನ್ನು, ಪೆನ್ಸಿಲ್, ವಾಟರ್ ಬಾಟಲ್ ಸೇರಿದಂತೆ ಹಲವು ವಸ್ತುಗಳನ್ನ ವಿತರಣೆ ಮಾಡುತ್ತಿದ್ದಾರೆ.

ಆರು ಶಾಲೆಗಳ ಸುಮಾರು 600‌ ಮಕ್ಕಳ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ್ದಾರೆ. ಬೆಂಗಳೂರಿನ 200 ಮಕ್ಕಳು ಸೇರಿದಂತೆ 600 ಮಕ್ಕಳಿಗೆ ಆಸರೆಯಾಗಿದ್ದಾರೆ. ಸದ್ಯ ಎಎಸ್‌ಐ ಅವರ ಕೆಲಸಕ್ಕೆ ಹಲವೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಬಡ ಮಕ್ಕಳಲ್ಲಿ ತನ್ನ ಮಗಳನ್ನ ಕಾಣುತ್ತಿರುವ ಎಎಸೈ ಲೊಕೇಶಪ್ಪ ಪ್ರತಿ ವರ್ಷವೂ ಕೂಡ ಮಗಳ ಸಾವಿನ ದಿನವನ್ನು ದಾನ ಮಾಡುವ ಮೂಲಕ ಸ್ಮರಣಾರ್ಥ ದಿನವಾಗಿ ಮಾಡಲು ನಿರ್ಧರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Praveen Tej starrer Jigar released on July 5
ಕರ್ನಾಟಕ30 seconds ago

Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ವೈರಲ್ ನ್ಯೂಸ್8 mins ago

Viral News: ಇದೆಂಥಾ ಹುಚ್ಚಾಟ! ಎನ್‌ಡಿಎ ಕಳಪೆ ಪ್ರದರ್ಶನದಿಂದ ಖಿನ್ನತೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

Hyperpigmentation
ಆರೋಗ್ಯ10 mins ago

Hyperpigmentation: ಕಾಡುವ ಈ ‘ಕಪ್ಪುಕಲೆ’ ಸಮಸ್ಯೆಗೆ ಇಲ್ಲಿದೆ ಪರಿಹಾರ

Viral Video
Latest15 mins ago

Viral Video: ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪ್ಲೀಸ್‌ ಎಂದ ಸಂಸದೆ; ಹೆಂಗಸರನ್ನು ನೋಡಲ್ಲ ಎಂದ ಸ್ಪೀಕರ್‌!

Viral Video
Latest23 mins ago

Viral Video: ಪ್ರೇಯಸಿಯ ಕಣ್ಮುಂದೆಯೇ ಆಕೆಯ ತಂದೆಯನ್ನು ಬರ್ಬರವಾಗಿ ಕೊಂದ ಪ್ರಿಯಕರ!

Dating Application
Latest31 mins ago

Dating Application: ಡೇಟಿಂಗ್‌ ನೆಪದಲ್ಲಿ ಕೆಫೆಗೆ ಕರೆದ ಮಹಿಳೆ ಹೀಗಾ ಮಾಡೋದು?

Special awareness programme on drug abuse illegal trafficking
ಬೆಂಗಳೂರು36 mins ago

Bengaluru News: ಮಾದಕ ದ್ರವ್ಯ ಅಕ್ರಮ ಸಾಗಾಟ; ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು

Monsoon session
ಕರ್ನಾಟಕ37 mins ago

Monsoon session: ರಾಜ್ಯ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌; ದಿನಾಂಕ ಫೈನಲ್ ಮಾಡಿದ ಸಿಎಂ

UPSC 2024
ಪ್ರಮುಖ ಸುದ್ದಿ41 mins ago

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

Kabzaa movie Appreciation Letter from Union Finance Ministry to Sri siddeshwar Enterprises
ಕರ್ನಾಟಕ1 hour ago

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌