Viral Video: ಅರೇ..! ಇವ್ರು ನಮ್ಮ ಪ್ರಧಾನಿ ಮೋದಿ ಅಲ್ಲ; ಪಾನಿಪುರಿ ಮಾರೋ ಈ ಮೋದಿ ಫುಲ್‌ ಫೇಮಸ್‌ - Vistara News

ವೈರಲ್ ನ್ಯೂಸ್

Viral Video: ಅರೇ..! ಇವ್ರು ನಮ್ಮ ಪ್ರಧಾನಿ ಮೋದಿ ಅಲ್ಲ; ಪಾನಿಪುರಿ ಮಾರೋ ಈ ಮೋದಿ ಫುಲ್‌ ಫೇಮಸ್‌

Viral Video ಗುಜರಾತ್‌ನಲ್ಲೊಬ್ಬ ಮೋದಿ ಪಾನಿಪುರಿ ಮಾರುತ್ತಾ ಎಲ್ಲರನ್ನು ತನ್ನತ್ತ ಸೆಳೆಯುತ್ತಿದ್ದಾನೆ. ಒಂದು ಕ್ಷಣ ನೋಡೋರಿಗೆ ಪ್ರಧಾನಿ ಮೋದಿಯೇ ಪಾನಿಪುರಿ ಮಾರುತ್ತಿದ್ದಾರೋ ಅಂತ ಅನಿಸೋದು ಪಕ್ಕಾ!

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುಜರಾತ್‌: ದೇಶಾದ್ಯಂತ ಲೋಕಸಭೆ ಚುನಾವಣೆ ರಂಗೇರಿದೆ. ಅಬ್ಬರದ ಪ್ರಚಾರ, ಪ್ರತಿಪಕ್ಷಗಳಿಗೆ ಟಾಂಗ್‌ ಕೊಡುತ್ತಾ ಒಂದೆಡೆ ಪ್ರಧಾನಿ ಮೋದಿ ಬ್ಯುಸಿ ಆಗಿದ್ದರೆ, ಮತ್ತೊಂದೆಡೆ ಗುಜರಾತ್‌ನಲ್ಲೊಬ್ಬ ಮೋದಿ ಪಾನಿಪುರಿ(Viral video) ಮಾರುತ್ತಾ ಎಲ್ಲರನ್ನು ತನ್ನತ್ತ ಸೆಳೆಯುತ್ತಿದ್ದಾನೆ. ಒಂದು ಕ್ಷಣ ನೋಡೋರಿಗೆ ಪ್ರಧಾನಿ ಮೋದಿಯೇ ಪಾನಿಪುರಿ ಮಾರುತ್ತಿದ್ದಾರೋ ಅಂತ ಅನಿಸೋದು ಪಕ್ಕಾ! ಗುಜರಾತ್‌ನ ಆನಂದ್‌ನಲ್ಲಿ ಪಾನಿಪುರಿ ಅಂಗಡಿ(Pani puri seller) ನಡೆಸುತ್ತಿರುವ ಅನಿಲ್‌ ಭಾಯಿ ಠಕ್ಕರ್‌ ಪ್ರಧಾನಿ ನರೇಂದ್ರ ಮೋದಿ(Narendra Modi) ಯಂತೆ ಉಡುಪು ತೊಟ್ಟು, ಕನ್ನಡಕ ಧರಿಸಿ, ಹೇರ್‌ಸ್ಟೈಲ್‌ ಮಾಡಿಕೊಂಡು ಸ್ಥಳೀಯ ಮಟ್ಟದಲ್ಲಿ ಮೋದಿ ಎಂದೇ ಫುಲ್‌ ಫೇಮಸ್‌ ಆಗಿದ್ದಾರೆ.

ಬಿಳಿ ಗಡ್ಡ, ಕೇಶ ವಿನ್ಯಾಸ ಆತನ ಹಾವಭಾವ ಪ್ರಧಾನಿ ಮೋದಿಗೆ ಹೋಲುತ್ತಿರುವ ಠಕ್ಕರ್‌, ಮೂಲತಃ ಜುನಾಗಢ್‌ ನಿವಾಸಿ. ಅವರು ತಮ್ಮ 18ನೇ ವಯಸ್ಸಿನಿಂದಲೂ ತುಳಸಿ ಪಾನಿ ಪುರಿ ಎಂಬ ಅಂಗಡಿಯನ್ನು ನಡೆಸುತ್ತಿದ್ದಾರೆ. ಈ ಅಂಗಡಿಯನ್ನು ಅವರ ತಾತ ಶುರು ಮಾಡಿದ್ದರು ಎಂಬುದು ವಿಶೇಷ. ಇನ್ನು ಮೋದಿಯಂತೆ ಕಾಣುತ್ತಿರುವ ಠಕ್ಕರ್‌ ಅವರ ವಿಶೇಷ ಲುಕ್‌ಗೆ ಮನಸೋತಿರುವ ಗ್ರಾಹಕರು ಅವರ ಬಳಿ ಬಂದು ಪಾನಿಪುರಿ ತಿಂದು ಸೆಲ್ಫಿ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ.

ಸುಮಾರು 71 ವರ್ಷದ ಠಕ್ಕರ್‌ ಪ್ರಧಾನಿ ನರೇಂದ್ರ ಮೋದಿಯ ಅಪ್ಪಟ ಅಭಿಮಾನಿ. ಅವರ ಸ್ವಚ್ಛ ಭಾರತ ಅಭಿಯಾನದಿಂದ ಬಹಳಷ್ಟು ಸ್ಫೂರ್ತಿಗೊಂಡಿರುವ ಠಕ್ಕರ್‌ ತಮ್ಮ ಅಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತಾರೆ. ತಮ್ಮ ವಿಶೇಷ ಲುಕ್‌ ಬಗ್ಗೆ ಪ್ರತಿಕ್ರಿಯಿಸಿರುವ ಠಕ್ಕರ್‌, ನನ್ನ ಪ್ರಧಾನಿ ಮೋದಿಯ ಲುಕ್‌ ಬಗ್ಗೆ ಜನ ಅತ್ಯಂತ ಪ್ರೀತಿ ತೋರುತ್ತಿದ್ದಾರೆ. ಸ್ಥಳೀಯರು ಮತ್ತು ಪ್ರವಾಸಿಗರು ನನ್ನ ಬಳಿ ಬಂದು ಸೆಲ್ಫಿ ತೆಗೆದುಕೊಂಡು ಹೋಗುವುದು ಬಹಳ ಸಂತೋಷ ಕೊಡುತ್ತಿದೆ. ಅವರ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ಇನ್ನು ಠಕ್ಕರ್‌ ಮಾತ್ರವಲ್ಲ ಮುಂಬೈನಲ್ಲೂ ಮತ್ತೋರ್ವ ವ್ಯಕ್ತಿಯೂ ಪ್ರಧಾನಿ ಮೋದಿಯಂತೆ ತನ್ನ ಸ್ಟೈಲ್‌ ಅನ್ನು ಬದಲಿಸಿಕೊಂಡು ಫುಲ್‌ ಫೇಮಸ್‌ ಆಗಿದ್ದಾನೆ. ಮುಂಬೈನ ವಿಕಾಸ್‌ ಮಹಂತೆ ಎಂಬಾತ ಗರ್ಬಾ ಡಾನ್ಸ್‌ ಮಾಡುತ್ತಿರುವ ವಿಡಿಯೋ ಫೇಮಸ್‌ ಆಗಿತ್ತು. ಇದು ಪ್ರಧಾನಿ ಮೋದಿಯ ಡೀಪ್‌ ಫೇಕ್‌ ವಿಡಿಯೋ ಎನ್ನಲಾಗಿತ್ತು. ಆದಾದ ಬಳಿಕ ಸ್ವತಃ ವಿಕಾಸ್‌ ಮಹಾಂತೆ ವಿಡಿಯೋದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ತಾವೊಬ್ಬ ಪ್ರಧಾನಿ ಮೋದಿಯ ಅಭಿಯಾನಿ. ಆ ವಿಡಿಯೋ ಸ್ವತಃ ತನ್ನದೇ ಎಂದು ಹೇಳಿದ್ದರು. ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಆಗಾಗ ಜೂನಿಯರ್‌ ಮೋದಿಗಳು ಗಮನ ಸೆಳೆಯುತ್ತಿರುತ್ತಾರೆ. ಆದರೆ ಇದೀಗ ಪಾನಿಪುರಿ ಮಾರುತ್ತಿರುವ ಮೋದಿಯನ್ನು ಕಂಡು ಜನಕ್ಕೆ ಖುಷಿಯೋ ಖುಷಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

Viral Video: ತೈವಾನ್‌ನಿಂದ ಕ್ಯಾಲಿಫೋರ್ನಿಯಾ ಹೋಗುತ್ತಿದ್ದ EVA ವಿಮಾನದಲ್ಲಿ ಪ್ರಯಾಣಿಕರಿಬ್ಬರು ಸೀಟಿಗಾಗಿ ಮಾರಾಮಾರಿ ನಡೆಸಿದ್ದಾರೆ. ಈ ಗಲಾಟೆಯ ದೃಶ್ಯವನ್ನು ಸಹ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

VISTARANEWS.COM


on

Viral video
Koo

ಕ್ಯಾಲಿಪೋರ್ನಿಯಾ: ಬಸ್‌ ರೈಲಿನಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ಜಗಳ ಆಗುವುದನ್ನು ನಾವು ಅದೆಷ್ಟೋ ಬಾರಿ ಕಂಡಿರುತ್ತೇವೆ. ಆದರೆ ಇಲ್ಲಿ ವಿಮಾನ(Flight)ದಲ್ಲಿಯೂ ಪ್ರಯಾಣಿಕರು ಸೀಟಿಗಾಗಿ ಹೊಡೆದಾಟ ನಡೆಸಿರುವ ಅಪರೂಪ ಘಟನೆ ವರದಿಯಾಗಿದೆ. ತೈವಾನ್‌(Taiwan)ನಿಂದ ಕ್ಯಾಲಿಫೋರ್ನಿಯಾ(California) ಹೋಗುತ್ತಿದ್ದ EVA ವಿಮಾನದಲ್ಲಿ ಪ್ರಯಾಣಿಕರಿಬ್ಬರು ಸೀಟಿಗಾಗಿ ಮಾರಾಮಾರಿ ನಡೆಸಿದ್ದಾರೆ. ಈ ಗಲಾಟೆಯ ದೃಶ್ಯವನ್ನು ಸಹ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಸುಮಾರು 11.5ಗಂಟೆಗಳ ಸುದೀರ್ಘ ಪ್ರಯಾಣ ಬೆಳೆಸಿದ್ದ EVA ವಿಮಾನದಲ್ಲಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಪತ್ರಿಕೆಯ ವರದಿ ಪ್ರಕಾರ ಪಕ್ಷದಲ್ಲಿ ಕುಳಿತಿದ್ದ ವ್ಯಕ್ತಿ ನಿರಂತರವಾಗಿ ಕೆಮ್ಮುತ್ತಿದ್ದ ಕಾರಣ ಒಬ್ಬ ಪ್ರಯಾಣಿಕ ಖಾಲಿ ಇದ್ದ ಸೀಟ್‌ನಲ್ಲಿ ಹೋಗಗಿ ಕುಳಿತುಕೊಳ್ಳುತ್ತಾನೆ. ಆಗ ಮೊದಲೇ ಆ ಸೀಟ್‌ನಲ್ಲಿ ಕುಳಿತಿದ್ದ ವ್ಯಕ್ತಿ ಅಲ್ಲಿಗೆ ಬಮದು ತಕರಾರು ತೆಗೆದಿದ್ದಾನೆ. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಪ್ರಯಾಣಿಕರ ಜಗಳ ಬಿಡಿಸಲು ವಿಮಾನ ಸಿಬ್ಬಂದಿ ಹರಸಾಹಸ ಪಟ್ಟರು. ಇಬ್ಬರು ಹಿಡಿದೆಳೆದು ಜಗಳ ನಿಲ್ಲಿಸಲು ಅವರು ಎಲ್ಲಾ ಪ್ರಯಾತ್ನ ನಡೆಸಿದರು. ಮತ್ತೊಂದೆಡೆ ಇವರಿಬ್ಬರ ಜಗಳ ಕಂಡು ಇತರೆ ಪ್ರಯಾಣಿಕರು ಗಾಬರಿಗೊಂಡು ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕೊನೆಗೆ ಇಬ್ಬರು ಸಮಾಧಾನಪಡಿಸಿ ಪರಸ್ಥಿತಿ ತಿಳಿಗೊಳಿಸುವಲ್ಲಿ ಸಿಬ್ಬಂದಿ ಸುಸ್ತು ಬಿದ್ದಿದ್ದರು. ಸ್ಯಾನ್‌ ಫ್ರಾನ್ಸಿಸ್ಕೋಕ್ಕೆ ವಿಮಾನ ಬಂದಿಳಿಯುತ್ತಿದ್ದಂತೆ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಲಾಗಿದೆ.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ವಿಡಿಯೋ 34,೦೦೦ ವ್ಯೂವ್ಸ್‌ ಪಡೆದುಕೊಂಡಿದ್ದು, ವಿಮಾನ ಸಿಬ್ಬಂದಿಯ ತಾಳ್ಮೇ ಮತ್ತು ಕರ್ತವ್ಯ ಪ್ರಜ್ಞೆಗೆ ಜನ ಸಲಾಂ ಹೇಳಿದ್ದಾರೆ. ಇನ್ನು ಆರೋಪಿಗಳಿಗೆ ಶಿಕ್ಷೆ ಆಗಿದೆಯೇ? ಅವರ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳಲಾಯಿತು ಎಂದು ಎಕ್ಸ್‌ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌

ವಿಮಾನ ಪ್ರಯಾಣದ ವೇಳೆ ಅಶಿಸ್ತು ತೋರಿಸುವವರ ಬಗ್ಗೆ ವರದಿಯಾಗುವ ಪ್ರಕರಣಗಳು ಹೆಚ್ಚುತ್ತಿವೆ. ಏರ್ ಇಂಡಿಯಾ ವಿಮಾನದಲ್ಲೂ ಇಂತಹದ್ದೇ ಪ್ರಕರಣವೊಂದು ನಡೆದಿತ್ತು. ಪ್ರಯಾಣಿಕನೊಬ್ಬ ಮಲ-ಮೂತ್ರ ವಿಸರ್ಜನೆ ಮಾಡಿ, ಗಲೀಜು ಸೃಷ್ಟಿಸಿ ಬಂಧಿತನಾಗಿದ್ದ. ಮುಂಬಯಿ-ದೆಹಲಿ ಮಾರ್ಗದ ಎಐಸಿ 866 ಎಂಬ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ರಾಮ್ ಸಿಂಗ್ ಇಂಥ ಹೊಲಸು ಮಾಡಿದ್ದ. ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ.

Continue Reading

ಕ್ರೀಡೆ

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Andre Russell: ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡ ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Andre Russell
Koo

ಮುಂಬಯಿ: ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​, ಕೆಕೆಆರ್(KKR)​ ತಂಡದ ಆಂಡ್ರೆ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ್ದಾರೆ. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಇಂದು(ಮೇ 9 ಗುರುವಾರ) ಬಿಡುಗಡೆಯಾಗಿದ್ದು, ಎಲ್ಲಡೆ ಸಂಚಲನ ಮೂಡಿಸಿದೆ.

ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚಿದ್ದಾರೆ ಮತ್ತು ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಈ ಜೋಡಿಯ ಡ್ಯಾನ್ಸ್ ಕಂಡು ಅಭಿಮಾನಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ವಿಂಡೀಸ್​ ಆಟಗಾರರು ಕ್ರಿಕೆಟ್​ ಜತೆ ನಟನೆ, ಸಂಗೀತ, ಡ್ಯಾನ್ಸ್​ನಲ್ಲಿ ಅಪಾರ ಕ್ರೇಜ್​ ಹೊಂದಿರುತ್ತಾರೆ. ಈಗಾಗಲೇ ಯೂನಿವರ್ಸಲ್​ ಬಾಸ್ ಖ್ಯಾತಿಯ​ ಕ್ರಿಸ್ ಗೇಲ್ ಮತ್ತು ಡ್ವೇನ್ ಬ್ರಾವೋ ಹಲವು ಆಲ್ಬಮ್​ ಸಾಂಗ್​ ಮಾಡಿ ಖ್ಯಾತಿಗಳಿಸಿದ್ದಾರೆ. ಇದೀಗ ಈ ಸಾಲಿಗೆ ರಸೆಲ್​ ಕೂಡ ಸೇರಿದ್ದಾರೆ.


ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ಈ ಬಾರಿಯ ಐಪಿಎಲ್‌ನಲ್ಲಿ ರಸೆಲ್​ ಕೆಕೆಆರ್​ ಪರ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುವ ಮೂಲಕ ಗಮನಸೆಳೆಯುತ್ತಿದ್ದಾರೆ. 11 ಪಂದ್ಯಗಳಲ್ಲಿ 198 ರನ್ ಗಳಿಸಿರುವ ರಸೆಲ್, ಬೌಲಿಂಗ್‌ನಲ್ಲೂ ಮಿಂಚಿ 13 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸದ್ಯ ಕೆಕೆಆರ್​ 16 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಇನ್ನೊಂದು ಪಂದ್ಯ ಗೆದ್ದರೆ ಪ್ಲೇ ಆಫ್​ ಟಿಕೆಟ್​ ಅಧಿಕೃತಗೊಳ್ಳಲಿದೆ.

ಇದನ್ನೂ ಓದಿ PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ


ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ವಿರುದ್ಧ 10 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಪ್ರಗತಿ ಸಾಧಿಸಿ ಮೂರನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಈ ಹಿಂದೆ ಮೂರನೇ ಸ್ಥಾನಿಯಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಸದ್ಯ ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಬಹುತೇಕ ಪ್ಲೇ ಆಫ್​ ಪ್ರವೇಶಿಸುವುದು ಖಚಿತ. ಹೈದರಾಬಾದ್​ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು. ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಲಿವೆ. ಪ್ಲೇ ಆಫ್​ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

Continue Reading

ವೈರಲ್ ನ್ಯೂಸ್

Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌

Viral Video:ಬೈಕ್‌ ಚಾಲಕನೋರ್ವ ಬೈಕ್‌ ಚಲಾಯಿಸಲು ಬೈಕ್‌ ಸ್ಟಾರ್ಟ್‌ ಮಾಡಲು ಯತ್ನಿಸುತ್ತಿರುತ್ತಾನೆ. ಆಗ ಆತನ ಸಹಾಯಕ್ಕೆ ಬಂದ ಯುವಕನೋರ್ವ ಬೈಕ್‌ ಕಿಕ್‌ ಹೊಡೆದು ಸ್ಟಾರ್ಟ್‌ ಮಾಡುತ್ತಾ ಹಾಗೆಯೇ ಬೈಕ್‌ ಚಾಲಕನ ಪ್ಯಾಂಟಿನ ಜೇಬಿನಿಂದ ಮೆಲ್ಲಗೆ ಪರ್ಸ್‌ ಕದಿಯಲು ಯತ್ನಿಸುತ್ತಾನೆ. ಆಗ ಅದೆಲ್ಲೋ ಇದ್ದ ಪೊಲೀಸ್‌ ತಕ್ಷಣ ಅಲ್ಲಿಗೆ ಓದಿ ಬಂದ್ ಕಳ್ಳನನ್ನು ರೆಡ್‌ಹ್ಯಾಂಡಾಗಿ ಹಿಡಿಯುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral video
Koo

ನವದೆಹಲಿ: ಕಳ್ಳರು(thief) ಎಷ್ಟು ಚಾಲಾಕಿಗಳಾಗಿರುತ್ತಾರೆ ಎಂದರೆ ಕೆಲವೊಮ್ಮೆ ನೋಡ ನೋಡ್ತಿದ್ದಂತೆ ನಮ್ಮ ಕಣ್ಣೆದುರಿನಿಂದಲೇ ವಸ್ತುಗಳನ್ನು ದೋಚಿ ಎಸ್ಕೇಪ್ ಆಗುತ್ತಾರೆ. ಆದರೆ ನಸೀಬು ಕೆಟ್ಟರೆ ತಗಲಾಕ್ಕೊಂಡು ಧರ್ಮದೇಟು ತಿಂದಿರುವ ಘಟನೆಗಳೂ ಆಗಾಗ ಕಾಣ ಸಿಗುತ್ತವೆ. ಇದೀಗ ಅಂತಹದ್ದೇ ಒಂದು ಘಟನೆಯ ವಿಡಿಯೋ ವೈರಲ್‌(Viral Video) ಆಗಿದೆ. ಪಿಕ್‌ ಪಾಕೆಟ್‌(Pick Pocketing) ಮಾಡ್ತಿದ್ದ ಕಳ್ಳನೊಬ್ಬ ರೆಡ್‌ ಹ್ಯಾಂಡಾಗಿ ನಡು ರಸ್ತೆಯಲ್ಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ.

ಈ ವಿಡಿಯೋವನ್ನು ದಿಲ್ಲಿ ಪೊಲೀಸರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಬೈಕ್‌ ಚಾಲಕನೋರ್ವ ಬೈಕ್‌ ಚಲಾಯಿಸಲು ಬೈಕ್‌ ಸ್ಟಾರ್ಟ್‌ ಮಾಡಲು ಯತ್ನಿಸುತ್ತಿರುತ್ತಾನೆ. ಆಗ ಆತನ ಸಹಾಯಕ್ಕೆ ಬಂದ ಯುವಕನೋರ್ವ ಬೈಕ್‌ ಕಿಕ್‌ ಹೊಡೆದು ಸ್ಟಾರ್ಟ್‌ ಮಾಡುತ್ತಾ ಹಾಗೆಯೇ ಬೈಕ್‌ ಚಾಲಕನ ಪ್ಯಾಂಟಿನ ಜೇಬಿನಿಂದ ಮೆಲ್ಲಗೆ ಪರ್ಸ್‌ ಕದಿಯಲು ಯತ್ನಿಸುತ್ತಾನೆ. ಆಗ ಅದೆಲ್ಲೋ ಇದ್ದ ಪೊಲೀಸ್‌ ತಕ್ಷಣ ಅಲ್ಲಿಗೆ ಓದಿ ಬಂದ್ ಕಳ್ಳನನ್ನು ರೆಡ್‌ಹ್ಯಾಂಡಾಗಿ ಹಿಡಿಯುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ದಿಲ್ಲಿಯ ಸದಾರ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾನ್‌ಸ್ಟೇಬಲ್‌ ಸಚಿನ್‌ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಪದ್ಬಾಂದವನಂತೆ ಬಂದ ಕಾನ್‌ಸ್ಟೇಬಲ್‌ ಹಿಂದಿನಿಂದ ಬಂದು ಕಳ್ಳ ಕತ್ತು ಹಿಡಿದು ಆತನನ್ನು ಲಾಕ್‌ ಮಾಡಿರುವ ವಿಡಿಯೋ ನೋಡಿ ರಿಯಲ್‌ ಹೀರೋ ಎಂದು ಹಾಡಿ ಹೊಗಳಿದ್ದಾರೆ. ಇನ್ನು ಕೆಲವರು ಈ ವಿಡಿಯೋದ ಅಸಲಿಯತ್ತಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕಳ್ಳತನ ನಡೆಯುತ್ತದೆ, ಪೊಲೀಸ್‌ ಬಂದು ಹಿಡಿಯುತ್ತಾರೆ ಎಂಬುದು ವಿಡಿಯೋ ಮಾಡುವವನಿಗೆ ಮೊದಲೇ ಗೊತ್ತಿತ್ತೇ ಎಂದು ಹಲವರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಯಾವಾಗ ನಡೆದಿದ್ದು ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ.

ಇದನ್ನೂ ಓದಿ: Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

ಇನ್ನು ಕೆಲವರು ಕಾನ್‌ಸ್ಟೇಬಲ್‌ ಸಚಿನ್‌ ಧೈರ್ಯ, ಸಮಯಪ್ರಜ್ಞೆಗೆ ಸಲಾಂ. ದಿಲ್ಲಿ ಪೊಲೀಸ್‌ಗೆ ಇಂತಹ ಪೊಲೀಸರು ಬೇಕೇ ಹೊರತು ಅಕ್ರಮವಾಗಿ ನೇಮಕಗೊಂಡು ಓಡಿಹೋಗವವರು ಅಲ್ಲ. ದಿಲ್ಲಿ ಪೊಲೀಸರಿರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

Viral News: ತಮಿಳುನಾಡಿನ ದೇವಸ್ಥಾನವೊಂದರ ಆವರಣದಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಕಾರಿನ ಚಾಲಕ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಿದ್ದಾನೆ. ದೇಗುಲದ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಸಂಪೂರ್ಣ ಜಖಂಗೊಂಡಿದೆ. ವಿಶೇಷ ಎಂದರೆ ಹೊಸ ಕಾರಿನ ಪೂಜೆಯ ವೇಳೆ ಈ ಅಪಘಾತ ನಡೆದಿದೆ. ಸದ್ಯ ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

VISTARANEWS.COM


on

Viral News
Koo

ಚೆನ್ನೈ: ಹೊಸ ಮನೆ, ವಾಹನ, ದುಬಾರಿ ವಸ್ತು ಕೊಂಡುಕೊಳ್ಳುವುದು ಮಧ್ಯಮ ವರ್ಗದ ಭಾರತೀಯರ ಪಾಲಿನ ಬಹು ದೊಡ್ಡ ಕನಸು. ಈ ಕನಸು ನನಸಾದ ವೇಳೆ ನಾವು ಅದಕ್ಕೆ ಪೂಜೆ ಸಲ್ಲಿಸುವುದು ವಾಡಿಕೆ. ವಾಹನವಾದರೆ ಬಳಸುವ ಮುನ್ನ ದೇವಸ್ಥಾನಕ್ಕೆ ಕೊಂಡೊಯ್ದು ಅದಕ್ಕೆ ಅರ್ಚಕರ ಕೈಯಿಂದ ಪೂಜೆ ಮಾಡಿಸುತ್ತೇವೆ. ಮುಂದೆ ಯಾವ ರೀತಿಯ ವಿಘ್ನವೂ ಎದುರಾಗದಿರಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇವೆ. ಅದೇ ರೀತಿ ಇಲ್ಲೊಬ್ಬ ತಾನು ಖರೀದಿಸಿದ ಹೊಸ ಕಾರಿಗೆ ಪೂಜೆ ಸಲ್ಲಿಸಲೆಂದು ದೇವಸ್ಥಾನಕ್ಕೆ ತೆರಳಿದ್ದಾನೆ. ಎಲ್ಲವೂ ಸುಸೂತ್ರವಾಗಿ ನಡೆಸಿತ್ತು. ಆದರೆ ಕೊನೆಯಲ್ಲಿ ಎಡವಟ್ಟೊಂದು ನಡೆದೇ ಹೋಯ್ತು. ಆತ ಬ್ರೇಕ್‌ ಎಂದು ಎಕ್ಸಿಲೇಟರ್‌ ತುಳಿದಿದ್ದು ಕಾರು ದೇವಸ್ಥಾನದ ಕಂಬಕ್ಕೆ ಗುದ್ದಿ ಜಖಂಗೊಂಡಿದೆ. ಸದ್ಯ ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೈರಲ್‌ ಆಗಿದೆ (Viral News).

ತಮಿಳುನಾಡಿನ ಕಡಲೂರು ಜಿಲ್ಲೆಯ ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆದಿದೆ. ಸುಧಾಕರ್‌ ಎನ್ನುವವರು ಹೊಸ ಕಾರು ಖರೀದಿಸಿದ್ದರು. ವಾಡಿಕೆಯಂತೆ ಹೊಸ ಕಾರನ್ನು ಪೂಜೆಗಾಗಿ ದೇವಸ್ಥಾನಕ್ಕೆ ತಂದಿದ್ದರು. ಹೂ ಮಾಲೆಗಳಿಂದ ಕಾರನ್ನು ಅಲಂಕರಿಸಲಾಗಿತ್ತು. ಅರ್ಚಕರು ಪೂಜೆ ನೆರವೇರಿಸಿ ಕಾರನ್ನು ಸ್ವಲ್ಪ ಮುಂದಕ್ಕೆ ಚಲಾಯಿಸುವಂತೆ ಹೇಳಿದರು.

ಈ ವೇಳೆ ನಡೆಯಿತು ಬಹು ದೊಡ್ಡ ಅಚಾತುರ್ಯ. ಸುಧಾಕರ್‌ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಿದ್ದಾರೆ. ಕಾರು ದೇವಸ್ಥಾನದ ಆವರಣದಲ್ಲಿದ್ದ ಹಂಪ್‌, ಮೆಟ್ಟಿಲು ದಾಟಿ ಸೀದಾ ಮುಂದಕ್ಕೆ ಚಲಿಸಿ ಕಂಬಕ್ಕೆ ಗುದ್ದಿದೆ. ಪಕ್ಕದಲ್ಲಿ ಇದ್ದವರಿಗೆ ಒಂದು ಕ್ಷಣ ಗರ ಬಡಿದಂತಾಗಿದ್ದು, ಏನು ಮಾಡಬೇಕೆಂದು ತೋಚದ ಸ್ಥಿತಿ ನಿರ್ಮಾಣವಾಗಿತ್ತು. ವಿಶೇಷ ಎಂದರೆ ಚಾಲಕನ ಇನ್ನೊಂದು ಬದಿಯ ಡೋರ್ ಬಳಿ ನಿಂತಿದ್ದ ವ್ಯಕ್ತಿಯೊಬ್ಬರು ಕೂಡ ನೇತಾಡಿಕೊಂಡೇ ಹೋಗಿದ್ದಾರೆ. ವಾಹನದ ಹಿಂದೆ ಇನ್ನೊಬ್ಬ ವ್ಯಕ್ತಿಯೊಬ್ಬರು ಓಡುತ್ತಿರುವುದು ಕೂಡ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಹೊಸ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ. ಚಾಲಕ ಮತ್ತು ಕಾರಿನ ಸ್ಟೆಪ್‌ನಲ್ಲಿ ನೇತಾಡಿಕೊಂಡಿದ್ದ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಹೊಸ ಕಾರು ಮಾತ್ರ ಜಖಂಗೊಂಡಿದೆ. ಸಣ್ಣ ಅಚಾತುರ್ಯದಿಂದ ನಡೆದ ಈ ಅನಾಹುತದಿಂದ ಚಾಲಕ ಈಗ ಕೈ ಹಿಸುಕುವಂತಾಗಿದೆ.

ಬೆಂಗಳೂರಿನಲ್ಲಿಯೂ ನಡೆದಿತ್ತು ಇದೇ ರೀತಿಯ ಘಟನೆ

ಇದೇ ರೀತಿಯ ಘಟನೆ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿಯೂ ನಡೆದಿತ್ತು. ಆಂಬ್ಯುಲೆನ್ಸ್‌ ಚಾಲಕನ ಎಡವಟ್ಟಿನಿಂದ ಸರಣಿ ಅಪಘಾತ ಸಂಭವಿಸಿತ್ತು. ಆತ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಪರಿಣಾಮ ಆಂಬುಲೆನ್ಸ್, ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿತ್ತು. ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಈ ಘಟನೆ ವರದಿಯಾಗಿದ್ದು, ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದರು.

ಇದನ್ನೂ ಓದಿ: Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Continue Reading
Advertisement
Mahender Pratap Singh
ದೇಶ2 mins ago

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

No one has failed in SSLC says Education Department
ಕರ್ನಾಟಕ6 mins ago

SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

SSLC Result 2024 what is the reason for most of the students fail in SSLC
ಕರ್ನಾಟಕ28 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್37 mins ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sslc exam Result 2024
ಶಿಕ್ಷಣ38 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ44 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ53 mins ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್55 mins ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

SSLC Result 2024 secret behind 20 percent grace marks
ಕರ್ನಾಟಕ1 hour ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ1 hour ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ28 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ38 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 hour ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌