Viral video | ಜಾಗಿಂಗ್‌ ಮಾಡುತ್ತಿದ್ದವಳನ್ನು ಹಿಂಬಾಲಿಸಿದ ಕುರಿಗಳು ಸಾರ್ ಕುರಿಗಳು! - Vistara News

ವೈರಲ್ ನ್ಯೂಸ್

Viral video | ಜಾಗಿಂಗ್‌ ಮಾಡುತ್ತಿದ್ದವಳನ್ನು ಹಿಂಬಾಲಿಸಿದ ಕುರಿಗಳು ಸಾರ್ ಕುರಿಗಳು!

ನಿಸಾರ್‌ ಅಹಮದ್‌ ಅವರ ʼಕುರಿಗಳು ಸಾರ್‌ ಕುರಿಗಳುʼ ಪದ್ಯಕ್ಕೆ ಇವು ಹೇಳಿ ಮಾಡಿಸಿದಂತೆ ಇವೆ. ಜಾಗಿಂಗ್‌ ಮಾಡುತ್ತಿದ್ದವಳನ್ನು ಹಿಂಬಾಲಿಸಿ, ಅವಳು ನಿಂತಲ್ಲಿ ತಾವೂ ನಿಂತು, ಮತ್ತೆ ಓಡಿದ ಕುರಿಗಳ ಫನ್ನಿ ವಿಡಿಯೋ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೀವೆಲ್ಲರೂ ಪಂಚತಂತ್ರದ ಮಕ್ಕಳ ನೀತಿಕತೆಯೊಂದನ್ನು ಕೇಳಿರಬಹುದು ಅಥವಾ ಓದಿರಬಹುದು. ಕಾಡಿನಲ್ಲಿ ಯಾವುದೋ ಒಂದು ಪ್ರಾಣಿ ಓಡುತ್ತಿರುವುದನ್ನು ನೋಡಿದ ಮತ್ತೊಂದು ಪ್ರಾಣಿ ಅದರ ಹಿಂದೆ ಓಡುತ್ತದೆ. ಯಾಕೆ ಓಡುತ್ತಿದೆ ಎಂದು ತಿಳಿಯದ ಅದನ್ನು ಇನ್ನೊಂದು ಪ್ರಾಣಿ ಹಿಂಬಾಲಿಸುತ್ತದೆ. ಹೀಗೆ ಒಂದರ ಹಿಂದೆ ಮತ್ತೊಂದು, ಅದರ ಹಿಂದೆ ಇನ್ನೊಂದು ಎಂದು ಇಡೀ ಕಾಡಿನ ಎಲ್ಲ ಪ್ರಾಣಿಗಳು ಗೊತ್ತುಗುರಿಯಿಲ್ಲದೆ ಗುಂಪಾಗಿ ಓಡುತ್ತಲೇ ಇರುತ್ತವೆ! ವಿಷಯ ಏನೆಂದು ಕೇಳಿದರೆ ಯಾವ ಪ್ರಾಣಿಗೂ ಏನೂ ಗೊತ್ತಿರುವುದಿಲ್ಲ, ಅಂತಿಮವಾಗಿ ಸುಮ್ಮನೆ ಓಡಿದ್ದಷ್ಟೇ ಗೊತ್ತು!

ಇಂಥದ್ದೊಂದು ಕತೆ ನಿಜವಾಗಿಯೂ ನಡೆದರೆ! ಹೌದು. ಹೆಚ್ಚು ಕಡಿಮೆ ಇಂಥದ್ದೆ ಮಜವಾದ ವಿಡಿಯೋವೊಂದು ಈಗ ಜಾಲತಾಣದಲ್ಲಿ ಸದ್ದುಮಾಡುತ್ತಿದೆ. ದೇಹ ಫಿಟ್‌ ಆಗಿರುವ ಜೊತೆ ಮನಸ್ಸೂ ಪ್ರಫುಲ್ಲವಾಗಿರಲು ಬೆಳಗ್ಗಿನ ಜಾಗಿಂಗ್‌, ವಾಕಿಂಗ್ ಬಹುತೇಕ ಎಲ್ಲರಿಗೂ ಮುದ ನೀಡುವ ದಿನಚರಿ. ಇಲ್ಲಿ, ಅಂಥ ಒಬ್ಬ ಮಹಿಳೆ ಬೆಳಗ್ಗೆ ಎದ್ದು ಕಾಡ ಹಾದಿಯಲ್ಲಿ ಓಡುತ್ತಿದ್ದರೆ ಆಕೆಯನ್ನು ನೂರಾರು ಕುರಿಗಳು ಹಿಂಬಾಲಿಸುವ ವಿಡಿಯೋ ಒಂದು ಈಗ ವೈರಲ್‌ ಆಗಿದೆ. ಕುರಿಗಳೆಂದರೆ ಕೇಳಬೇಕಾ? ಒಂದು ಕುರಿ ಬಂದರೆ ಸಾಕು, ಮಂದೆಯೇ ಅದರ ಹಿಂದೆ ಸಾಲುಗಟ್ಟುತ್ತವೆ. ಇಲ್ಲೂ ಆಗಿದ್ದಿಷ್ಟು. ನೂರಾರು ಕುರಿಗಳಿದ್ದ ಮಂದೆ ಆಕೆಯೇ ತನ್ನನ್ನು ಮೇಯಿಸುವವಳು ಎಂದುಕೊಂಡವಾ ಗೊತ್ತಿಲ್ಲ! ಗೊತ್ತುಗುರಿಯಿಲ್ಲದೆ ಆಕೆಯ ಹಿಂದೆ ಓಡಿವೆ.

ಇದರಲ್ಲೇನಿದೆ ವಿಶೇಷ ಅಂತೀರಾ? ತಮಾಷೆಯೆಂದರೆ, ಸಂಬಂಧವೇ ಇಲ್ಲದೆ ಈ ಕುರಿಗಳು ಎಲ್ಲಿಂದ ಬಂದವು, ಯಾಕೆ ಆಕೆಯ ಹಿಂದೆ ಬಂದವು ಎಂದು ಆಕೆಗೂ ಗೊತ್ತಿಲ್ಲ. ಫ್ರಾನ್ಸ್‌ನ ಎಲಾನೋರ್‌ ಶೋಲ್ಝ್‌ ಎಂಬಾಕೆ ತನ್ನ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಖಾತೆಯಲ್ಲಿ ʻತಾನು ನೋಡಿದ ಅದ್ಭುತಗಳಲ್ಲೊಂದುʼ ಎಂದು ಪೋಸ್ಟ್‌ ಶೇರ್‌ ಮಾಡಿದ್ದು, ಇದೀಗ ಹಲವರ ಗಮನ ಸೆಳೆಯುತ್ತಿದೆ.‌

ಇದನ್ನೂ ಓದಿ | ಸೆಕ್ಸ್​ಗೆ ಒಪ್ಪದ ಪತಿಯ ನಿಜ ಸ್ವರೂಪ ತಿಳಿದು ದಂಗಾದ ಮಹಿಳೆ; 8 ವರ್ಷದ ನಂತರ ತಿಳಿಯಿತು ಸತ್ಯ!

ಮಜಾ ಎಂದರೆ, ಓಡುತ್ತಿರುವಾಕೆಯ ಹಿಂದೆ ನೂರಾರು ಕುರಿಗಳು ಅದೇ ವೇಗದಲ್ಲಿ ಆಕೆಯನ್ನು ಹಿಂಬಾಲಿಸುತ್ತಿವೆ. ಆಕೆ ಇದ್ದಕ್ಕಿದ್ದಂತೆ ಎಲಾನೋರ್‌ ಜೊತೆ ಮಾತಾಡಲೆಂದು ನಿಂತಾಗ ತುಟಿಪಿಟಿಕ್ಕೆನ್ನದೆ ಆ ಕುರಿಗಳೂ ಸಾಲಾಗಿ ಹಾಗೆಯೇ ನಿಂತುಕೊಳ್ಳುತ್ತವೆ. ಆಕೆ ಫೋಟೋ ಕೂಡಾ ತೆಗೆಯುತ್ತಾಳೆ. ಆಗೆಲ್ಲಾ ಕುರಿಗಳು ಚಲಿಸದೆ ನಿಂತು ಆಕೆಗೆ ಪೋಸ್‌ ಕೊಡುತ್ತವೆ. ಆಕೆ ಫೋನ್‌ ಜೇಬಿನೊಳಗಿಟ್ಟು ಓಡಲು ಶುರು ಮಾಡಿದರೆ ಮತ್ತೆ ಹಿಂಬಾಲಿಸುತ್ತವೆ, ಆಕೆಯದೇ ವೇಗದಲ್ಲಿ! ಇವು ಒಂದೆರಡು ಕುರಿಗಳ ಕತೆಯಲ್ಲ. ನೂರಾರು ಕುರಿಗಳು ಹಾಗೆ ಓಡುತ್ತಿರುವುದು ವಿಚಿತ್ರವೆನಿಸಿದರೂ ಕ್ಯೂಟ್‌ ಆಗಿ ಎಲ್ಲರನ್ನೂ ಮಂತ್ರಮುಗ್ಧಗೊಳಿಸಿದೆ. ಎಲ್ಲೋ ಮೇಯುತ್ತಿದ್ದ ಇವುಗಳು ತಮ್ಮ ಒಡೆಯನನ್ನು ಹಾದಿ ಮಧ್ಯೆ ಕಳೆದುಕೊಂಡಿದ್ದು, ಅದೇ ಸಮಯ ಓಡುತ್ತಿರುವ ಈಕೆಯನ್ನು ಕಂಡು ಹಿಂಬಾಲಿಸತೊಡಗಿದ್ದವಂತೆ. ಮುಂದಿದ್ದ ಒಂದೇ ಒಂದು ಕುರಿಯ ಈ ನಿರ್ಧಾರಕ್ಕೆ ಈಗ ಎಲ್ಲ ಕುರಿಗಳೂ ಬಲಿ ಬಿದ್ದಿವೆ!

ಈ ವಿಡಿಯೋ ಮಾಡಿದಾಕೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದು ಇದು ಮಿಲಿಯಗಟ್ಟಲೆ ವೀಕ್ಷಣೆ ಪಡೆದಿದೆ. ಆಕೆ ಒಬ್ಬಳೇ ಫ್ರಾನ್ಸ್‌ನ ಬೆಟ್ಟಗಳಲ್ಲಿ ಅಡ್ಡಾಡುತ್ತಿದ್ದಾಗ ಈ ದೃಶ್ಯ ಕಂಡು ತಬ್ಬಿಬ್ಬಾಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾಳೆ. ʻಅಂದಹಾಗೆ, ಈ ಕುರಿಗಳು ಇನ್ನೂ ಆಕೆಯನ್ನು ಹಿಂಬಾಲಿಸುತ್ತಲೇ ಇರಬಹುದಾ?ʼ ಎಂದಾಕೆ ಆಶ್ಚರ್ಯಭರಿತ ಟೈಟಲ್‌ ಕೂಡಾ ನೀಡಿದ್ದಾಳೆ.

ಇದಕ್ಕೆ ನೂರಾರು ಪ್ರತಿಕ್ರಿಯೆಗಳು ಬಂದಿದ್ದು ಹಲವರು, ʻಇದೊಂದು ಮಜಾ ಘಟನೆ. ಕೊನೆಗೂ ಆಕೆ ಎಷ್ಟು ದೂರ ಓಡಿದಳು ಹಾಗೂ ಆ ಕುರಿಗಳು ಎಷ್ಟು ದೂರ ಓಡಿವೆ ಎಂದು ತಿಳಿದರೆ ಒಳ್ಳೆಯದಿತ್ತುʼ ಎಂದಿದ್ದಾರೆ. ಹಲವರು ʻಇದು ಸಕತ್‌ ಮಜಾ ಕೊಡುವ ವಿಡಿಯೋʼ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ | Viral news | ಹಾದಿ ಮಧ್ಯೆ ಹೆರಿಗೆ, ಉಪಯೋಗವಾಗಿದ್ದು ಫೋನ್‌ ಚಾರ್ಜರ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

Snake Bite: ಕಾಲಿಗೆ ಎರಡು ಬಾರಿ ಹಾವು ಕಚ್ಚಿದ್ದರೂ, ಮುಳ್ಳು ಚುಚ್ಚಿರಬಹುದೆಂದು ನಿರ್ಲಕ್ಷ್ಯ ತೋರಿದ ವ್ಯಕ್ತಿಯೊಬ್ಬ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

snake bite in chikkamagaluru
Koo

ಚಿಕ್ಕಮಗಳೂರು: ಜಮೀನಿನಲ್ಲಿ ಕೆಲಸ ಮುಗಿಸಿ ಬಂದ ವ್ಯಕ್ತಿಯೊಬ್ಬ ಮುಳ್ಳು ಚುಚ್ಚಿದೆ ಎಂದು ತಿಳಿದು ರಾತ್ರಿ ಊಟ ಮಾಡಿ ಮಲಗಿದವ ಚಿರನಿದ್ರೆಗೆ ಜಾರಿದ್ದ. ಗ್ರಾಮದ ಗಣ್ಯ ನಾಯ್ಕ್ (44) ಮೃತ ದುರ್ದೈವಿ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಘಟನೆ (Snake Bite) ನಡೆದಿದೆ.

ಗಣ್ಯ ನಾಯ್ಕ್‌ ಜಮೀನಿನಲ್ಲಿ ಕೆಲಸ ಮಾಡುವಾಗ ಕಾಲಿಗೆ ಎರಡು ಬಾರಿ ಹಾವು ಕಚ್ಚಿತ್ತು. ಆದರೆ ಮುಳ್ಳು ಚುಚ್ಚಿರಬೇಕು ಏನು ಆಗಲ್ಲ ಎಂದು ನಿರ್ಲಕ್ಷಿಸಿದ್ದ. ಹಾವು ಕಚ್ಚಿದ್ದು ಗಮನಕ್ಕೆ ಬಾರದೆ ಮನೆಗೆ ಬಂದು ಊಟ ಮಾಡಿ ಮಲಗಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಹೆಣವಾಗಿದ್ದ.

ಕುಟುಂಬಸ್ಥರು ಮಲಗಿದ್ದ ಗಣ್ಯನನ್ನು ಎಬ್ಬಿಸಲು ಮುಂದಾಗಿದ್ದಾರೆ. ಆದರೆ ಆತ ಅಲುಗಾಡದೆ ಇದ್ದಾಗ ಅನುಮಾನಗೊಂದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾಗಿ ಹೇಳಿದ್ದಾರೆ. ಒಂದು ಸಣ್ಣ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಜಿಂಕೆಗಳ ಅನುಮಾನಾಸ್ಪದ ಸಾವು

ಹತ್ತು ದಿನಗಳ ಅಂತರದಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ‌ತಾಲ್ಲೂಕಿನ‌ ಏನಿಗದೆಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಏನಿಗದೆಲೆ ಗ್ರಾಮದ ಹರೀಶ್ ಎಂಬುವರ ತೋಟದಲ್ಲಿ ಜಿಂಕೆಗಳ ಮೃತಪಟ್ಟಿವೆ. ಚಿಲಕಲನೇರ್ಪು ಗ್ರಾಮಪಂಚಾಯ್ತಿ ವ್ಯಾಪ್ತಿಯ ಏನಿಗದೆಲೆ ಗ್ರಾಮದಲ್ಲಿ ಬೇಟೆಗಾರರ ಹಾವಳಿಗೆ ಜಿಂಕೆಗಳು ಬಲಿಯಾಗುತ್ತಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

ಚಿಕ್ಕಮಗಳೂರು/ಬೆಳಗಾವಿ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ನಾಲಿಗೆ ಕಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ (Road Accident) ಘಟನೆ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ನಾಲಿಗೆ ಕಳೆದುಕೊಂಡವಳು. ಲಾವಣ್ಯ ಹಾಸನದ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಳು. ಶಿವರಾಜ್-ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

ಇಬ್ಬರು ಬೈಕ್‌ನಲ್ಲಿ ಬರುವಾಗ ಕ್ಯಾಂಟರ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಶಿವರಾಜ್‌ ಸ್ಥಳದಲ್ಲೆ ಮೃತಪಟ್ಟರೆ, ಇತ್ತ ಹಿಂಬದಿ ಕುಳಿತಿದ್ದ ಲಾವಣ್ಯ ಡಿಕ್ಕಿ ರಭಸಕ್ಕೆ ನಾಲಿಗೆಯೇ ಕಟ್‌ ಆಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಗಾಯಾಳು ಲಾವಣ್ಯಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರೈತ ಮಂಜುನಾಥ್ ದಾಸನಕೊಪ್ಪ ಮೃತ ದುರ್ದೈವಿ.

ಗ್ರಾಮದಲ್ಲ ಭಾರಿ ಮಳೆ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದ ರೈತ ಮಂಜುನಾಥ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ರೈಫಲ್‌ ಜೊತೆ ಬಾರ್‌ಗೆ ನುಗ್ಗಿದ ಕಿಡಿಗೇಡಿ..ಡಿಜೆ ಮೇಲೆ ಗುಂಡಿನ ದಾಳಿ-ಶಾಕಿಂಗ್‌ ವಿಡಿಯೋ ನೋಡಿ

Viral Video: ಆರೋಪಿ ಹಾಗೂ ಆತನ ನಾಲ್ವರು ಸ್ನೇಹಿತರು ಮಧ್ಯರಾತ್ರಿ ಸುಮಾರು 1 ಗಂಟೆಗೆ ಬಾರ್‌ಗೆ ಬಂದಿದ್ದರು. ಆ ಸಮಯದಲ್ಲಿ ಬಾರ್‌ ಮುಚ್ಚಲಾಗಿತ್ತು. ಆದರೂ ಅಲ್ಲಿದ್ದ ಸಿಬ್ಬಂದಿಗೆ ಮದ್ಯ ಸರ್ವ್‌ ಮಾಡುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದು, ಆಗ ಜಗಳ ಶುರುವಾಗಿದೆ. ಬಾರ್‌ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯೇ ನಡೆದಿತ್ತು. ಈ ನಡುವೆ ಕೋಪದಲ್ಲಿ ತನ್ನ ಕಾರ್‌ನಲ್ಲಿದ್ದ ರೈಫಲ್‌ ತೆಗೆದುಕೊಂಡ ಬಂದ ಒಬ್ಬ ಡಿಜೆ ಎದೆಗೆ ಗುಂಡಿಕ್ಕಿದ್ದಾನೆ.

VISTARANEWS.COM


on

Viral Video
Koo

ಪಾಟ್ನಾ: ಕುಡಿದ ಮತ್ತಿನಲ್ಲಿ ಕೆಲವೊಮ್ಮೆ ಎಂಥೆಂಥಾ ಅನಾಹುತಗಳು ಸಂಭವಿಸಬಹುದೆಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮದ್ಯ ಸರ್ವ್‌ ಮಾಡಲು ಬಾರ್‌ ಸಿಬ್ಬಂದಿ ನಿರಾಕರಿಸಿದರೆಂಬ ಕೋಪಕ್ಕೆ ವ್ಯಕ್ತಿಯೊಬ್ಬ ಅಲ್ಲೇ ಇದ್ದ ಡಿಜೆ(Disc Jockey)ಯನ್ನು ಗುಂಡಿಕ್ಕಿ ಹತ್ಯೆಮಾಡಿದ್ದಾನೆ. ಜಾರ್ಖಂಡ್‌ನ ರಾಂಚಿಯಲ್ಲಿ ಈ ಘಟನೆ ನಡೆದಿದ್ದು, ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಆರೋಪಿ ಹಾಗೂ ಆತನ ನಾಲ್ವರು ಸ್ನೇಹಿತರು ಮಧ್ಯರಾತ್ರಿ ಸುಮಾರು 1 ಗಂಟೆಗೆ ಬಾರ್‌ಗೆ ಬಂದಿದ್ದರು. ಆ ಸಮಯದಲ್ಲಿ ಬಾರ್‌ ಮುಚ್ಚಲಾಗಿತ್ತು. ಆದರೂ ಅಲ್ಲಿದ್ದ ಸಿಬ್ಬಂದಿಗೆ ಮದ್ಯ ಸರ್ವ್‌ ಮಾಡುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದು, ಆಗ ಜಗಳ ಶುರುವಾಗಿದೆ. ಬಾರ್‌ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯೇ ನಡೆದಿತ್ತು. ಈ ನಡುವೆ ಕೋಪದಲ್ಲಿ ತನ್ನ ಕಾರ್‌ನಲ್ಲಿದ್ದ ರೈಫಲ್‌ ತೆಗೆದುಕೊಂಡ ಬಂದ ಒಬ್ಬ ಡಿಜೆ ಎದೆಗೆ ಗುಂಡಿಕ್ಕಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಡಿಜೆಯನ್ನು ರಾಜೇಂದ್ರ ಮೆಡಿಕಲ್‌ ಸೈನ್ಸ್‌ ಆಸ್ಪತ್ರೆಗೆ ದಾಖಲಿಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಅಲ್ಲೇ ಕೊನೆಯುಸಿರೆಳೆದಿದ್ದಾನೆ.

ಎಕ್ಸ್‌ಟ್ರೀಂ ಬಾರ್‌ನಲ್ಲಿ ಈ ಘಟನೆ ನಡೆದಿದ್ದು, ಶೂಟರ್‌ ಬಾರ್‌ ಒಳಗೆ ನುಗ್ಗುತ್ತಿರುವುದು ಮತ್ತು ತನ್ನ ಮುಖವನ್ನು ಟೀ ಶರ್ಟ್‌ನಿಂದ ಮುಚ್ಚಿಕೊಂಡಿರುವ ದೃಶ್ಯವನ್ನು ಸಿಸಿಟಿವಿಯಲ್ಲಿ ಕಾಣಬಹುದಾಗಿದೆ. ಇನ್ನು ಸ್ಥಳಕ್ಕೆ ರಾಂಚಿಯ ಪೊಲೀಸ್‌ ವರಿಷ್ಠಾಧಿಕಾರಿ ಭೇಟಿ ಕೊಟ್ಟಿದ್ದು, ಶೂಟರ್‌ ಮತ್ತು ಆತನ ಸಹಚರರಿಗಾಗಿ ಬಲೆ ಬೀಸಿದ್ದಾರೆ. ಎಲ್ಲಾ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಬಾರ್‌ ಸಿಬ್ಬಂದಿಯನ್ನೂ ವಿಚಾರಣೆಗೊಳಪಡಿಸಲಾಗಿದೆ.

ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

ಅಸಾದುದ್ದೀನ್ ಓವೈಸಿಯವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (All India Majlis-e-Ittehadul Muslimeen – AIMIM – ಎಐಎಂಐಎಂ) ಪಕ್ಷದ ನಾಯಕ, ಮಹಾರಾಷ್ಟ್ರದ ಮಾಲೆಗಾಂವ್‌ನ ಮಾಜಿ ಮೇಯರ್ (Ex Malegaon Mayor) ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ ಎಂಬಾತನ ಮೇಲೆ ಇಂದು ಬೆಳಗ್ಗೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ (Firing) ನಡೆಸಿದ್ದಾರೆ.

ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಇದನ್ನೂ ಓದಿ:MLC Election: ಕಾಂಗ್ರೆಸ್ ಎಂಬುದು ದೇಶದಲ್ಲಿ ರಿಜೆಕ್ಟೆಡ್, ಎಕ್ಸ್‌ಪೈರಿ ಗೂಡ್ಸ್: ಪ್ರಲ್ಹಾದ್ ಜೋಶಿ ಲೇವಡಿ

ಮಾಲೆಗಾಂವ್ ನಗರ ಪೊಲೀಸ್ ಅಧಿಕಾರಿಯ ಪ್ರಕಾರ, ಓಲ್ಡ್ ಆಗ್ರಾ ರಸ್ತೆಯಲ್ಲಿರುವ ಅಂಗಡಿಯೊಂದರ ಹೊರಗೆ ಮಲಿಕ್ ಕುಳಿತಿದ್ದಾಗ 1:20ಕ್ಕೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸರು ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ, ಅಸಾದುದ್ದೀನ್‌ ಓವೈಸಿಯ ಆಪ್ತನಾಗಿದ್ದು, ಮಾಲೆಗಾಂವ್‌ನ ಮೇಯರ್‌ ಆಗಿದ್ದ.

Continue Reading

ಬಾಗಲಕೋಟೆ

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Love Propose : ಹಿಂದು ಮಹಿಳೆಗೆ ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದ್ಹೇಗೋ ಮಹಿಳೆಯ ಫೋನ್‌ ನಂಬರ್‌ ಕಲೆಹಾಕಿದ ಆತ ಐ ಲವ್ ಯೂ ಎಂದು ಮೆಸೇಜ್‌ ಹಾಕಿದ್ದ. ಇದರಿಂದ ಸಿಟ್ಟಾದ ಮಹಿಳೆ ಚಪ್ಪಲಿ ಏಟು ಕೊಟ್ಟಿದ್ದಾಳೆ.

VISTARANEWS.COM


on

By

Love Propose
Koo

ಬಾಗಲಕೋಟೆ: ಐ ಲವ್ ಯೂ ಎಂದು (Love Propose) ಮೆಸೇಜ್‌ ಹಾಕಿದ ಮುಸ್ಲಿಂ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿ ಏಟು ಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರದಲ್ಲಿ ಘಟನೆ ನಡೆದಿದೆ. ಯಾಸಿನ್ ಎಂಬಾತ ನಿವೇದಿತಾ ಎಂಬಾಕೆ ಪ್ರೀತಿಸುವಂತೆ ವಾಟ್ಸ್‌ ಆ್ಯಪ್‌ನಿಂದ ಪ್ರೇಮ ನಿವೇದನೆಯನ್ನು ಮಾಡಿದ್ದ.

ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಸಹ ವಿವಾಹಿತರು. ಹೀಗಿದ್ದರೂ ಮದುವೆ ಆಗಿರುವ ಮಹಿಳೆಯ ಹಿಂದೆ ಬಿದ್ದ ಯಾಸಿನ್‌ ಪ್ರೀತಿಸುವಂತೆ ನಿವೇದಿತಾಳಿಗೆ ಮಸೇಜ್‌ ಮೂಲಕ ಹಿಂಸೆ ನೀಡುತ್ತಿದ್ದ. ಯಾಸಿನ್‌ ನಡೆಗೆ ರೋಸಿ ಹೋದ ನಿವೇದಿತಾ ಆತನ ಮನೆ ನುಗ್ಗಿ ಕುತ್ತಿಗೆ ಪಟ್ಟಿ ಹಿಡಿದು ಥಳಿಸಿ, ಚಪ್ಪಲಿ ಏಟು ನೀಡಿದ್ದಾರೆ.

ಇನ್ನೂ ನಿವೇದಿತಾ ಹಾಗೂ ಯಾಸಿನ್ ಇಬ್ಬರೂ ಕಾಂಗ್ರೆಸ್ ‌ಪಕ್ಷದ‌ಲ್ಲಿ ಕಾರ್ಯಕರ್ತರಾಗಿದ್ದು, ಪರಿಚಿತರೇ ಆಗಿದ್ದಾರೆ. ಇತ್ತೀಚೆಗೆ ಯಾಸಿನ್‌ ಪ್ರೀತಿ-ಪ್ರೇಮ ಎಂದು ಹಿಂದೆ ಬಿದ್ದು ಚಾಟಿಂಗ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ನಿವೇದಿತಾ ಯಾಸೀನ್ ಮನೆಗೆ ನುಗ್ಗಿ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸ್ಥಳೀಯರ ಮಧ್ಯಸ್ಥಿಕೆಯಿಂದ ಚಪ್ಪಲಿ‌ ಏಟಿನ ಪ್ರಸಂಗ ಬಗೆಹರಿದಿದೆ. ಇಲಕಲ್ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ (Dhruva Sarja) ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಅಟ್ಯಾಕ್ ಆಗಿದೆ ಎಂದು ವರದಿಯಾಗಿದೆ. ಭಾನುವಾರ (ಮೇ 26) ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಸ್ಥಳೀಯ ಹುಡುಗರ ಜತೆ ಗಲಾಟೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಧ್ರುವ ಸರ್ಜಾ ಅವರು ಸ್ಪಷ್ಟನೆ ಕೊಡಬೇಕಿದೆ. ಸದ್ಯಕ್ಕೆ ಮಚ್ಚಿನಿಂದ‌ ಪ್ರಶಾಂತ್ ಮೇಲೆ ಹಲ್ಲೆ ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈಯಕ್ತಿಕ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಗಲಾಟೆ ಆಗಿದೆ ಎನ್ನಲಾಗಿದೆ. ಸಿಟ್ಟಿನಲ್ಲಿ ಮಚ್ಚಿನಿಂದ ಪ್ರಶಾಂತ್ ಮೇಲೆ ಸ್ಥಳೀಯ ಹುಡುಗರು ಹಲ್ಲೆ ಮಾಡಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಶಾಂತ್‌ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ (KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

ಬಹುನಿರೀಕ್ಷಿತ ‘ವಾರ್-2’ ಚಿತ್ರದಲ್ಲಿ ಕನ್ನಡದ ನಟ ಬಣ್ಣ ಹಚ್ಚುತ್ತಾರೆ ಎನ್ನಲಾಗುತ್ತಿದೆ. ತೆಲುಗು ಮಾಧ್ಯಮಗಳಲ್ಲಿ ಕೂಡ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ಜ್ಯೂ. ಎನ್‌ಟಿಆರ್ ಸಹೋದರನ ಪಾತ್ರದಲ್ಲಿ ಧ್ರುವ ನಟಿಸುತ್ತಾರೆ ಎಂದು ಎಂದು ವರದಿಯಾಗುತ್ತಿದೆ. ಧ್ರುವ ಸರ್ಜಾ ಈ ಚಿತ್ರದಲ್ಲಿ ನಟಿಸುತ್ತಾರೆ, ಆ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ವರದಿಯ ಪ್ರಕಾರ, ಜ್ಯೂನಿಯರ್‌ ಎನ್‌ಟಿಆರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ʼವಾರ್ 2ʼ 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

Deep fake Scam : ದೇಶದಲ್ಲಿ ನಟಿಯರ ಡೀಪ್‌ಫೇಕ್‌ ವಿಡಿಯೊಗಳು ವೈರಲ್‌ ಆಗಿರುವುದು ತಂತ್ರಜ್ಞಾನದ ದುರ್ಬಳಕೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಈ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ ಶುರುವಾಗಿದೆ.

VISTARANEWS.COM


on

By

deep fake
Koo

ಬೆಂಗಳೂರು: ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: Dhruva Sarja:  ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

ಡೀಪ್‌ಫೇಕ್‌ ಬಳಸಿ ಕಂಪನಿಗೆ 200 ಕೋಟಿ ರೂ. ವಂಚಿಸಿದ ದುಷ್ಟರು! ಹೇಗೆ?

ನವದೆಹಲಿ: ಡೀಪ್‌ಫೇಕ್‌ ತಂತ್ರಜ್ಞಾನದ (Deepfake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನವನ್ನೀಗ ನೂರಾರು ಕೋಟಿ ರೂ. ವಂಚಿಸುವ (Deepfake Scam) ಮಟ್ಟಿಗೆ ದುಷ್ಕರ್ಮಿಗಳು ಬಳಸಿಕೊಳ್ಳುತ್ತಿದ್ದಾರೆ. ಹಾಂಕಾಂಗ್‌ನಲ್ಲಿ (Hong Kong) ಬಹುರಾಷ್ಟ್ರೀಯ ಕಂಪನಿಯೊಂದಕ್ಕೆ ಡೀಪ್‌ಫೇಕ್‌ ಮೂಲಕವೇ ಸುಮಾರು 207 ಕೋಟಿ ರೂ. (25 ದಶಲಕ್ಷ ಡಾಲರ್)‌ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಗೆಯೇ, ಇದು ಜಗತ್ತಿನ ಅತಿದೊಡ್ಡ ಡೀಪ್‌ಫೇಕ್‌ ವಂಚನೆ (Deepfake Fraud) ಎಂದು ಹೇಳಲಾಗುತ್ತಿದೆ.

ಹೌದು, ಹಾಂಕಾಂಗ್‌ ಮೂಲದ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬರಿಗೆ ಡೀಪ್‌ಫೇಕ್‌ ಮೂಲಕ ವಂಚಿಸಿದ ದುಷ್ಕರ್ಮಿಗಳು, ಸುಮಾರು 207 ಕೋಟಿ ರೂಪಾಯಿಯನ್ನು ವಂಚಿಸಿದ್ದಾರೆ. ನೂರಾರು ಕೋಟಿ ರೂ. ವಂಚನೆ ಪ್ರಕರಣ ವಿಶ್ವಾದ್ಯಂತ ಸುದ್ದಿಯಾದರೂ ಇದುವರೆಗೆ ಡೀಪ್‌ಫೇಕ್‌ ತಂತ್ರಜ್ಞಾನದ ಮೂಲಕ ವಂಚಿಸಿದ ದುರುಳರ ಕುರಿತು ಪೊಲೀಸರಿಗೆ ಸ್ವಲ್ಪವೂ ಮಾಹಿತಿ ಲಭ್ಯವಾಗಿಲ್ಲ. ಇದುವರೆಗೆ ಒಬ್ಬನನ್ನೂ ಬಂಧಿಸಲು ಸಾಧ್ಯವಾಗಿಲ್ಲ ಎಂಬುದು ಅಚ್ಚರಿಯ ಸಂಗತಿಯಾಗಿದೆ. ಕಳೆದ ಜನವರಿಯಲ್ಲಿಯೇ ಹಗರಣ ಬೆಳಕಿಗೆ ಬಂದರೂ ಇದುವರೆಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Rashmika Mandanna: ಡೀಪ್‌ಫೇಕ್‌ ವಿಡಿಯೊ ಆರೋಪಿ ಬಂಧನ; ಪ್ರತಿಕ್ರಿಯಿಸಿದ ರಶ್ಮಿಕಾ!

ವಂಚನೆ ಮಾಡಿದ್ದು ಹೇಗೆ?

ಹಾಂಕಾಂಗ್‌ ಮೂಲದ ಕಂಪನಿಯ ಹಣಕಾಸು ವಿಭಾಗದ ಉದ್ಯೋಗಿಯೊಬ್ಬರ ಮೊಬೈಲ್‌ಗೆ ಮೆಸೇಜ್‌ ರವಾನೆಯಾಗಿದೆ. ಆ ಮೆಸೇಜ್‌ನಲ್ಲಿ ಉದ್ಯೋಗಿಗೆ ಬ್ರಿಟನ್‌ ಮೂಲದ, ತಾನು ಕೆಲಸ ಮಾಡುವ ಕಂಪನಿಯದ್ದೇ ಮುಖ್ಯ ಹಣಕಾಸು ಅಧಿಕಾರಿ (CFO) ಎಂಬುದಾಗಿ ನಂಬಿಸಲಾಗಿದೆ. ಹಾಂಕಾಂಗ್‌ ಕಂಪನಿಯ ಉದ್ಯೋಗಿಯು ಇದನ್ನು ನಂಬಿದ ಉದ್ಯೋಗಿಯು ಮೆಸೇಜ್‌ನಲ್ಲಿ ಬಂದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದ್ದಾನೆ. ಆಗ ಕಂಪನಿಯ ಸಿಎಫ್‌ಒ ಎಂದು ಹೇಳಲಾದ ವ್ಯಕ್ತಿ ಜತೆ ವಿಡಿಯೊ ಕಾಲ್‌ ಡಯಲ್‌ ಆಗಿದೆ. ಆಗ ಕಂಪನಿಯ ಉದ್ಯೋಗಿ ಮತ್ತು ಬ್ರಿಟನ್‌ ಮೂಲದ ಸಿಎಫ್‌ಒ ಮಾತುಕತೆ ನಡೆಸಿದ್ದಾರೆ.

ವಿಡಿಯೊ ಕಾಲ್‌ ವೇಳೆ ಕಾನ್ಫರೆನ್ಸ್‌ ಮೂಲಕ ಹಲವು ಉದ್ಯೋಗಿಗಳ ಜತೆ ಮಾತುಕತೆ ನಡೆಸಿದಂತೆ ಸಿಎಫ್‌ಒ ಎಂದು ಹೇಳಿಕೊಂಡವನು ನಾಟಕ ಮಾಡಿದ್ದಾನೆ. ಅಷ್ಟೇ ಅಲ್ಲ, ಸಿಎಫ್‌ಒ ಆದೇಶದಂತೆ ಹಾಂಕಾಂಗ್‌ನ ಸುಮಾರು 15 ಬ್ಯಾಂಕ್‌ ಖಾತೆಗಳಿಗೆ ಉದ್ಯೋಗಿಯು 207 ಕೋಟಿ ರೂ. ವರ್ಗಾಯಿಸಿದ್ದಾನೆ. ಇಷ್ಟೆಲ್ಲ ನಡೆದ ಬಳಿಕವೇ ವಂಚನೆಯ ಜಾಲ ಬಯಲಾಗಿದೆ. ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿ ಹಾಂಕಾಂಗ್‌ ಕಂಪನಿಯ ಉದ್ಯೋಗಿ ಜತೆ ವಿಡಿಯೊ ಕಾಲ್‌ನಲ್ಲಿ ನಕಲಿ ವ್ಯಕ್ತಿಗಳು ಮಾತನಾಡಿದ ಹಾಗೆ ಚಿತ್ರಿಸಲಾಗಿದೆ. ಇದನ್ನು ನಂಬಿದ ವ್ಯಕ್ತಿಯು ಸಿಎಫ್‌ಒ ಎಂದು ಭಾವಿಸಿ ನೂರಾರು ಕೋಟಿ ರೂ. ವರ್ಗಾಯಿಸಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Porsche Crash
ದೇಶ3 mins ago

Porsche Crash: ಕಾರು ಅಪಘಾತ; ದುಡ್ಡಿಗಾಗಿ ರಕ್ತದ ಮಾದರಿಯನ್ನು ಡಸ್ಟ್‌ಬಿನ್‌ಗೆ ಎಸೆದ ಗುಮಾಸ್ತನ ಬಂಧನ!

Prajwal Revanna Case
ಪ್ರಮುಖ ಸುದ್ದಿ24 mins ago

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Hemchand Manjhi
ದೇಶ41 mins ago

Hemchand Manjhi: ಕಳೆದ ತಿಂಗಳು ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ; ಏಕೆ?

Prajwal Revanna Case
ಕರ್ನಾಟಕ1 hour ago

Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿ ಜಿಂದಾಬಾದ್‌ ಎನ್ನುತ್ತಲೇ ಕುಸಿದ ವೇದಿಕೆ; ತಬ್ಬಿಬ್ಬಾದ ಕಾಂಗ್ರೆಸ್‌ ನಾಯಕ, ವಿಡಿಯೊ ಇಲ್ಲಿದೆ

Karnataka Weather Forecast
ಮಳೆ2 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

HairStyle Craze
ಫ್ಯಾಷನ್2 hours ago

Hairstyle Craze: ಸೋಷಿಯಲ್‌ ಮೀಡಿಯಾದಲ್ಲಿ ರಂಗೇರಿದ ಹೇರ್‌ ಸ್ಟೈಲ್ಸ್

Lok Sabha Election 2024
ಕರ್ನಾಟಕ2 hours ago

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Prajwal Revanna Video
ಕರ್ನಾಟಕ2 hours ago

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Mouthwashes
ಆರೋಗ್ಯ2 hours ago

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌