Viral Video: ಮದುವೆಗೂ ಮೊದಲು ವಧುವನ್ನು ಕಿಡ್ನ್ಯಾಪ್‌ ಮಾಡಲೇಬೇಕು! ಇದು ಈ ಜನಾಂಗದ ಕಡ್ಡಾಯ ನಿಯಮ! - Vistara News

ವೈರಲ್ ನ್ಯೂಸ್

Viral Video: ಮದುವೆಗೂ ಮೊದಲು ವಧುವನ್ನು ಕಿಡ್ನ್ಯಾಪ್‌ ಮಾಡಲೇಬೇಕು! ಇದು ಈ ಜನಾಂಗದ ಕಡ್ಡಾಯ ನಿಯಮ!

ಮದುವೆಗೂ ಮುನ್ನ ಹಿಂಬಾ ಬುಡಕಟ್ಟಿನ ಸಂಪ್ರದಾಯದಲ್ಲಿ ವಧುವನ್ನು ಅಪಹರಿಸಿ ನೂರು ದಿನಗಳ ಕಾಲ ಕೆಂಪು ಮಣ್ಣಿನ ಲೇಪನ ಮಾಡಲಾಗುತ್ತದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿವಾಹ ವಿಧಿವಿಧಾನಗಳು (Wedding Rituals) ವಿಶ್ವದ ಬೇರೆಬೇರೆ ಭಾಗಗಳಲ್ಲಿ ಬೇರೆಬೇರೆಯಾಗಿರುತ್ತದೆ. ಅದರಲ್ಲೂ ಕೆಲವೊಂದು ಚಿತ್ರವಿಚಿತ್ರ ಆಚರಣೆಗಳೂ ಇವೆ. ಅದರಲ್ಲಿ ನಮಿಬಿಯಾದ (Namibia) ಅರೆ ಅಲೆಮಾರಿ ಬುಡಕಟ್ಟು (tribe) ಜನಾಂಗವಾದ ಹಿಂಬಾದ (himba) ಈ ವಿವಾಹ ಆಚರಣೆಯು ಸೇರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋಗಳು ವೈರಲ್ (Viral Video) ಆಗಿ ಚರ್ಚೆಗೆ ಕಾರಣವಾಗಿದೆ.

ಹಿಂಬಾವನ್ನು ನಮೀಬಿಯಾದ ಕೊನೆಯ ಅರೆ ಅಲೆಮಾರಿ ಬುಡಕಟ್ಟು ಜನಾಂಗ ಎಂದು ಪರಿಗಣಿಸಲಾಗಿದೆ. ಸುಮಾರು 50,000 ಜನಸಂಖ್ಯೆಯನ್ನು ಹೊಂದಿರುವ ಇವರು ಇಲ್ಲಿನ ಸ್ಥಳೀಯ ಜನರು. ಅವರಿಗೆ ಸ್ವಂತ ಮನೆಗಳಿದ್ದರೂ ಮಳೆ ಅಥವಾ ನೀರಿನ ಕೊರತೆಯಿಂದಾಗಿ ಅಲೆಮಾರಿಗಳಂತೆ ಜೀವನ ನಡೆಸುತ್ತಾರೆ. ಹೀಗಾಗಿ ಇವರನ್ನು ಅರೆ ಅಲೆಮಾರಿ ಎಂದು ಕರೆಯಲಾಗುತ್ತದೆ. ಈ ಬುಡಕಟ್ಟು ಜನ ತಮ್ಮ ವಿಚಿತ್ರ ವಿವಾಹ ಪದ್ಧತಿಗಳಿಂದಾಗಿ ಆಗಾಗ್ಗೆ ಎಲ್ಲರ ಗಮನ ಸೆಳೆಯುತ್ತಾರೆ.

ವಧುವಿನ ಅಪಹರಣ

ಹಿಂಬಾ ಬುಡಕಟ್ಟಿನಲ್ಲಿ ಮದುವೆಗೆ ಮೊದಲು ವಧುವನ್ನು ಅಪಹರಿಸಲಾಗುತ್ತದೆ. ಆಕೆಯನ್ನು 100 ದಿನಗಳ ಕಾಲ ಹೆಚ್ಚಿನ ಭದ್ರತೆಯ ಕೋಣೆಯಲ್ಲಿ ಇರಿಸಲಾಗುತ್ತದೆ. ಆ ಸಮಯದಲ್ಲಿ ಕೆಂಪು ಮಣ್ಣನ್ನು ಅವಳ ಸಂಪೂರ್ಣ ದೇಹಕ್ಕೆ ಲೇಪಿಸಲಾಗುತ್ತದೆ. ಇದೀಗ ಅಂತಹ ವಿಡಿಯೋ ವೈರಲ್ ಆಗಿದೆ. ಹಿಂಬಾ ಬುಡಕಟ್ಟಿನಲ್ಲಿ ಮದುವೆಯ ಸಂಪ್ರದಾಯದಲ್ಲಿ ವಧುವಿನ ಅಪಹರಣ ಮತ್ತು ಅವಳಿಗೆ ಕೆಂಪು ಮಣ್ಣನ್ನು ಹೊದಿಸುವುದನ್ನು ಒಳಗೊಂಡಿರುತ್ತದೆ.

ಹೀಗೆ ಅವಳನ್ನು ಅಪಹರಿಸುವಾಗ ವಧು ಹೊಸ ಬಟ್ಟೆ ಮತ್ತು ದುಬಾರಿ ಆಭರಣಗಳೊಂದಿಗೆ ಅಲಂಕರಿಸಲ್ಪಡುತ್ತಾಳೆ. ಈ ಸಮಯದಲ್ಲಿ ಅವಳು ಧರಿಸುವ ಕೆಲವು ವಿಶೇಷ ಉಡುಪುಗಳು ಒಕೋರಿ ಎಂದು ಕರೆಯಲ್ಪಡುವ ಚರ್ಮದ ಶಿರಸ್ತ್ರಾಣವಾಗಿದೆ. ಇದು ಸಾಮಾನ್ಯವಾಗಿ ವಧುವಿನ ತಾಯಿಯಿಂದ ಸಿಗುವ ಉಡುಗೊರೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಹಿಂಬಾ ಬುಡಕಟ್ಟಿನ ಹುಡುಗಿಯೊಬ್ಬಳು ತನ್ನ ದೇಹದಾದ್ಯಂತ ಕೆಂಪು ಮಣ್ಣನ್ನು ಲೇಪಿಸಿಕೊಂಡು ಕುಳಿತಿದ್ದಾಳೆ. ಕಾಲ್ಬೆರಳಿನಿಂದ ಕೂದಲಿನವರೆಗೆ, ಹುಡುಗಿ ಕೆಂಪು ಮಣ್ಣಿನಲ್ಲಿಮುಚ್ಚಲ್ಪಟ್ಟಿರುತ್ತಾಳೆ.
ಘಾನಾದ ಫ್ರಾಫಾ ಬುಡಕಟ್ಟು ಕೂಡ ಈ ಪದ್ಧತಿಯನ್ನು ಅನುಸರಿಸುತ್ತದೆ.

ಈ ಕುರಿತು ಕಾಮೆಂಟ್ ಮಾಡಿರುವ ಒಬ್ಬರು, ಹುಡುಗಿಯನ್ನು 100 ದಿನಗಳ ಕಾಲ ಕೆಂಪು ಮಣ್ಣಿನಲ್ಲಿ ಮುಚ್ಚಲು ಏನಾದರೂ ವೈಜ್ಞಾನಿಕ ಕಾರಣವಿದೆಯೇ ಎಂದು ಪ್ರಶ್ನಿಸಿದ್ದಾರೆ.


ಮದುವೆ ಮತ್ತು ಮಧುಚಂದ್ರದ ಮೊದಲು ಅವಳ ಚರ್ಮವನ್ನು ನಯಗೊಳಿಸುವುದಕ್ಕಾಗಿ ಮತ್ತು ಅವಳ ದೇಹವನ್ನು ಸ್ವಚ್ಛ ಗೊಳಿಸುವುದಕ್ಕಾಗಿ ಈ ರೀತಿ ಮಾಡುತ್ತಾರೆಯೇ ಎಂಬುದನ್ನು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಂಪ್ರದಾಯ, ಪದ್ಧತಿ ಮತ್ತು ಆಚರಣೆಗಳು ವೈಜ್ಞಾನಿಕ ಮಹತ್ವವನ್ನು ಹೊಂದಿವೆ ಮತ್ತು ಜನರು ಅದನ್ನು ಅನುಸರಿಸುವಂತೆ ಮಾಡಲು ಧಾರ್ಮಿಕ ನಂಬಿಕೆಗಳಿಗೆ ಸೇರಿಸಲಾಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

Amithab Bacchan: ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ತಮ್ಮ ಮಗ ಅಭಿಷೇಕ್ ಬಚ್ಚನ್ ಅಭಿನಯದ ‘ರಾವಣ್’ ಚಿತ್ರ 14ನೇ ವರ್ಷಕ್ಕೆ ಕಾಲಿಟ್ಟ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಷೇಕ್ ಅವರ ನಟನೆಯನ್ನು ಹೊಗಳಿದ್ದಾರೆ. ಆದರೆ ಅದರಲ್ಲಿ ನಟಿಸಿದ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಉಲ್ಲೇಖ ಮಾಡಲಿಲ್ಲ. ಇದರಿಂದ ಅಮಿತಾಬ್ ಬಚ್ಚನ್ ಅವರ ಕುಟುಂಬದಲ್ಲಿ ಸಮಸ್ಯೆ ಇರಬೇಕು. ಹಾಗಾಗಿ ಅವರು ತಮ್ಮ ಸೊಸೆಯ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

Amithab Bacchan
Koo

ಮುಂಬೈ: ಬಾಲಿವುಡ್‌ ಖ್ಯಾತ ನಟ ಅಮಿತಾಭ್‌ ಬಚ್ಚನ್ (Amithab Bacchan) ತಮ್ಮ ನಟನೆಯ ಮೂಲಕ ಎಲ್ಲರ ಮನ ಸೆಳೆದವರು. ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡುವ ಮೂಲಕ ಜನಪ್ರಸಿದ್ಧರಾಗಿದ್ದಾರೆ. ಇನ್ನು ಬಿಗ್‌ ಬಿ ಕುಟುಂಬವು ಕೂಡ ಸಿನಿಮಾ ರಂಗದಲ್ಲಿ ಹೆಸರು ಮಾಡಿದೆ. ಮಗ ಅಭಿಷೇಕ್ ಬಚ್ಚನ್, ಪತ್ನಿ ಜಯಾ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರು ಕೂಡ ಸಿನಿಮಾ ರಂಗದಲ್ಲಿ ಮಿಂಚಿದವರೇ. ಆದರೆ ಇದೀಗ ನಟ ಅಮಿತಾಭ್ ಬಚ್ಚನ್ ಅವರನ್ನು ಜನರು ಸೋಶಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ.

ಇತ್ತೀಚೆಗೆ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ತಮ್ಮ ಮಗ ಅಭಿಷೇಕ್ ಬಚ್ಚನ್ ಅಭಿನಯದ ‘ರಾವಣ್’ ಚಿತ್ರ 14ನೇ ವರ್ಷಕ್ಕೆ ಕಾಲಿಟ್ಟ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಷೇಕ್ ಅವರ ನಟನೆಯನ್ನು ಹೊಗಳಿದ್ದಾರೆ. ಆದರೆ ಅದರಲ್ಲಿ ನಟಿಸಿದ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಎಲ್ಲೂ ಉಲ್ಲೇಖ ಮಾಡಲಿಲ್ಲ.

ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರನ್ನು ಉಲ್ಲೇಖಿಸದೆ ನಿರ್ಲಕ್ಷ್ಯ ಮಾಡಿದ್ದಕ್ಕೆ ನೆಟ್ಟಿಗರು ಅಮಿತಾಭ್ ಬಚ್ಚನ್ ಅವರನ್ನು ಟ್ರೋಲ್ ಮಾಡಿದ್ದಾರೆ. ಮಣಿರತ್ನಂ ಅವರ ನಿರ್ದೇಶನದ ‌ʼರಾವಣ್ʼ ಚಿತ್ರ ಬಿಡುಗಡೆಯಾಗಿ ಜೂನ್ 18, 2024ಕ್ಕೆ 14 ವರ್ಷ ಪೂರೈಸಿದೆ. ಅಭಿಷೇಕ್ ಬಚ್ಚನ್ ಅಭಿಮಾನಿ ಸಂಘವೊಂದು ಈ ದಿನವನ್ನು ಆಚರಿಸಲು ಪೋಸ್ಟ್ ಅನ್ನು ಹಂಚಿಕೊಂಡಿದೆ. ಆಗ ಅಮಿತಾಭ್ ಬಚ್ಚನ್ ಅವರು ಚಿತ್ರವನ್ನು ಪೋಸ್ಟ್ ಮಾಡಿ, “ಅಭಿಷೇಕ್ ಅಭಿನಯ ಮರೆಯಲಾಗದಂತಹದು. ನಿಮ್ಮ ಇತರ ಚಿತ್ರಗಳಿಗಿಂತ ಈ ಚಿತ್ರ ತುಂಬಾ ಭಿನ್ನವಾಗಿದೆ. ಮತ್ತು ಇದು ಕಲಾವಿದನಿಗೆ ನಿಜವಾದ ಮೌಲ್ಯವನ್ನು ನೀಡುತ್ತದೆ” ಎಂದು‌ ಶ್ಲಾಘಿಸಿ ಬರೆದಿದ್ದಾರೆ.

ಆದರೆ ಈ ಚಿತ್ರದಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಅಭಿಷೇಕ್ ಜೊತೆ ಮುಖ್ಯ ಪಾತ್ರದಲ್ಲಿ ನಟಿಸಿದ್ದರು ಮತ್ತು ಅವರ ಅಭಿನಯವನ್ನು ಅಭಿಮಾನಿಗಳು ಹೊಗಳಿದ್ದರು. ಆದರೆ ಈ ಪೋಸ್ಟ್ ನಲ್ಲಿ ಅಮಿತಾಭ್‌ ಬಚ್ಚನ್ ಅವರು ಎಲ್ಲೂ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಈ ಬಗ್ಗೆ ನೆಟ್ಟಿಗರು ಅಮಿತಾಭ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

Amithab Bacchan

ಈ ಹಿಂದೆ ಕೂಡ ಕಜಾ ರಾರೇ ಹಾಡು 19ನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಅಮಿತಾಭ್ ಅವರು ಅಭಿಷೇಕ್ ಅವರನ್ನು ಹೊಗಳಿ ತಮ್ಮ ಸೊಸೆ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿರಲಿಲ್ಲ. ಕಜಾ ರಾರೇ ಹಾಡಿನಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ಹಾಗೂ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಂಡಿದ್ದರು.
ಇದರಿಂದ ಅಮಿತಾಭ್ ಬಚ್ಚನ್ ಅವರ ಕುಟುಂಬದಲ್ಲಿ ಸಮಸ್ಯೆ ಇರಬೇಕು. ಹಾಗಾಗಿ ಅವರು ತಮ್ಮ ಸೊಸೆಯ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

Continue Reading

Latest

Viral Video: ಗಡ್ಡ, ಮೀಸೆ ಬೋಳಿಸಿ ಶಿಸ್ತಾಗಿ ಬಂದ ಮಗನಿಗೆ ಅಪ್ಪನ ಕಪಾಳಮೋಕ್ಷ! ನೆಟ್ಟಿಗರ ಆಕ್ರೋಶ

Viral Video: ಮಗನೊಬ್ಬ ತಂದೆಯನ್ನು ಅಚ್ಚರಿಗೊಳಿಸಬೇಕು ಎಂದು ಹೋಗಿ ಕಪಾಳಮೋಕ್ಷ ಮಾಡಿಸಿಕೊಂಡ ಘಟನೆ ನಡೆದಿದೆ. ಕ್ಲೀನ್ ಶೇವ್ ಮಾಡಿಕೊಂಡು ಮಗ ತನ್ನ ಹೊಸ ಲುಕ್ ಅನ್ನು ತಂದೆಗೆ ತೋರಿಸಿ ಅವರಿಗೆ ಆಶ್ವರ್ಯವನ್ನುಂಟುಮಾಡಬೇಕು ಎಂಬ ಉತ್ಸಾಹದಿಂದ ತಂದೆಯ ಮುಖ ನೋಡಿದ್ದಾನೆ. ಆದರೆ ಮಗ ಕ್ಲೀವ್ ಶೇವ್ ಮಾಡಿದ್ದಕ್ಕೆ ಕೋಪಗೊಂಡ ತಂದೆ ಆತನ ಕೆನ್ನೆಗೆ ಬಾರಿಸಿದ್ದಾರೆ. ನಂತರ ಒಂದು ಸೆಕೆಂಡುಗಳ ಕಾಲ ಅವನನ್ನು ದಿಟ್ಟಿಸಿ ನೋಡುತ್ತಾ ಅವನ ಕುತ್ತಿಗೆ ಹಿಡಿದು ‘’ನಾನು ಹೇಳುವುದನ್ನು ನೀನು ಎಂದಿಗೂ ಕೇಳುವುದಿಲ್ಲ” ಎಂದು ಬೈಯುತ್ತಾ ಮತ್ತೊಮ್ಮೆ ಕೆನ್ನೆಗೆ ಬಾರಿಸಿದ್ದಾರೆ.

VISTARANEWS.COM


on

Viral Video
Koo

ಮಕ್ಕಳ ಭವಿಷ್ಯದ ಬಗೆಗಿನ ಕಾಳಜಿ ಪೋಷಕರಿಗೆ ಇರುತ್ತದೆ. ಹಾಗಾಗಿ ಪೋಷಕರಿಗೆ ತಮ್ಮ ಮಕ್ಕಳನ್ನು ದಂಡಿಸುವ , ಶಿಕ್ಷಿಸುವ ಹಕ್ಕು ಇರುತ್ತದೆ. ಅಂದಮಾತ್ರಕ್ಕೆ ಪೋಷಕರು ಮಕ್ಕಳನ್ನು ತಮಗೆ ಮನಬಂದಂತೆ ಶಿಕ್ಷಿಸುವ ಹಾಗೇ ಇಲ್ಲ. ಅವರು ಮಕ್ಕಳನ್ನು ದಂಡಿಸುವ ರೀತಿ ಎಲ್ಲೆ ಮೀರಬಾರದು. ಇಲ್ಲವಾದರೆ ಇದರಿಂದ ಮುಂದೆ ದೊಡ್ಡ ಸಮಸ್ಯೆ ಉದ್ಭವಿಸಬಹುದು. ಇದಕ್ಕೆ ಉದಾಹರಣೆ ಎಂಬಂತೆ ಇದೀಗ ತಂದೆ- ಮಗನಿಗೆ ಸಂಬಂಧಪಟ್ಟ ವಿಡಿಯೊ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್(Viral Video) ಆಗಿದೆ.

ಹುಡುಗನೊಬ್ಬ ಕ್ಲೀನ್ ಶೇವ್ ಮಾಡಿಕೊಂಡು ತನ್ನ ತಂದೆಗೆ ತೋರಿಸಿ ಅವರ ಮೆಚ್ಚುಗೆ ಗಳಿಸಬೇಕು ಎಂದು ಹೋಗಿ ಕಪಾಳಮೋಕ್ಷಕ್ಕೆ ಒಳಗಾದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಟ್ರೋಲ್ ಆಗುತ್ತಿದೆ.
ವಿಡಿಯೊದಲ್ಲಿ ಹುಡುಗ ಕ್ಲೀನ್ ಶೇವ್ ಮಾಡಿ ಕ್ಯಾಮರಾಕ್ಕೆ ಮುಖ ಮಾಡಿ ನಿಂತಿದ್ದಾಗ ತಂದೆ ‘’ಏನಾಗುತ್ತಿದೆ’’ ಎಂದು ಕೇಳುತ್ತಾ ಆತನ ಹಿಂದೆ ಬಂದಿದ್ದಾರೆ. ಆಗ ಆತ ತನ್ನ ತಂದೆಗೆ ತನ್ನ ಹೊಸ ಲುಕ್ ಅನ್ನು ತೋರಿಸಿ ಅವರಿಗೆ ಆಶ್ವರ್ಯವನ್ನುಂಟುಮಾಡಬೇಕು ಎಂಬ ಉತ್ಸಾಹದಿಂದ ಹಿಂದೆ ತಿರುಗಿದ್ದಾನೆ. ಆದರೆ ಮಗ ಕ್ಲೀವ್ ಶೇವ್ ಮಾಡಿದ್ದಕ್ಕೆ ಕೋಪಗೊಂಡ ತಂದೆ ಆತನ ಕೆನ್ನೆಗೆ ಬಾರಿಸಿದ್ದಾರೆ. ನಂತರ ಒಂದು ಸೆಕೆಂಡುಗಳ ಕಾಲ ಅವನನ್ನು ದಿಟ್ಟಿಸಿ ನೋಡುತ್ತಾ ಅವನ ಕುತ್ತಿಗೆ ಹಿಡಿದು ‘’ನಾನು ಹೇಳುವುದನ್ನು ನೀನು ಎಂದಿಗೂ ಕೇಳುವುದಿಲ್ಲ” ಎಂದು ಬೈಯುತ್ತಾ ಮತ್ತೊಮ್ಮೆ ಕೆನ್ನೆಗೆ ಬಾರಿಸಿದ್ದಾರೆ.

ಈ ವಿಡಿಯೊ ಘರ್ ಕೆ ಕಾಲೆಶ್ ಎಂಬ ಸೋಶಿಯಲ್ ಮೀಡಿಯಾ ಹ್ಯಾಂಡಲ್ ನಲ್ಲಿ ಪೋಸ್ಟ್ ಆಗಿದ್ದು, ತಕ್ಷಣವೇ ವೈರಲ್ ಆಗಿದೆ. ಈ ಪೋಸ್ಟ್ ಗೆ 3 ಮಿಲಿಯನ್ ವೀವ್ಸ್ ಬಂದಿದ್ದು, ಮಗನ ಮೇಲೆ ತಂದೆ ಕೈ ಮಾಡಿದ್ದಕ್ಕೆ ಹಲವರು ಟೀಕೆ ಮಾಡಿದ್ದಾರೆ. ಇದು ವಿವಾದವನ್ನು ಹುಟ್ಟುಹಾಕಿದೆ ಎನ್ನಲಾಗಿದೆ.

ಅನೇಕರು ಈ ವಿಡಿಯೊ ನೋಡಿ ‘ಇದು ಕೆಟ್ಟ ನಡತೆಯ ಪೋಷಕರಿಗೆ ಪರಿಪೂರ್ಣ ಉದಾಹರಣೆಯಾಗಿದೆ’ ಎಂದು ಬರೆದಿದ್ದಾರೆ. ಇನ್ನೂ ಕೆಲವರು ‘ತನ್ನ ಗಡ್ಡ ಮೀಸೆ ಮಾತ್ರ ಬೋಳಿಸಿದ್ದಕ್ಕೆ ತಂದೆ ತಮ್ಮ ಮಗನಿಗೆ ಹೊಡೆಯುವುದು ಇದು ಮಿತಿ ಮೀರಿದ ವರ್ತನೆಯಾಯಿತು’ ಎಂದು ಕಿಡಿಕಾರಿದ್ದಾರೆ. ‘ಜಗತ್ತಿನಲ್ಲಿ ಲೈಂಗಿಕ ಶಿಕ್ಷಣಕ್ಕಿಂತ ಪೋಷಕರಿಗೆ ಶಿಕ್ಷಣ ನೀಡುವ ಅಗತ್ಯವಿದೆ’ ಎಂದು ಒಬ್ಬ ಬಳಕೆದಾರರು ತಿಳಿಸಿದ್ದಾರೆ. ‘ಹೆಚ್ಚಿನ ಭಾರತೀಯ ಪೋಷಕರು ತಮ್ಮ ಹತಾಶೆ ಮತ್ತು ವೈಫಲ್ಯವನ್ನು ತಮ್ಮ ಸ್ವಂತ ಮಕ್ಕಳ ಮೂಲಕ ಹೊರಹಾಕುತ್ತಾರೆ’ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಪವಿತ್ರಾ ಗೌಡ ಮಾಜಿ ಪತಿಯಿಂದ ಕೇಸ್!

ಈ ವಿಡಿಯೊದಲ್ಲಿ ಆ ತಂದೆ ಮಗ ಮೀಸೆ , ಗಡ್ಡ ಬೋಳಿಸಿದ್ದಕ್ಕೆ ಯಾಕೆ ಕೋಪಗೊಂಡು, ಹೊಡೆದರು ಎಂಬುದಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಭಾರತೀಯ ಸಂಪ್ರದಾಯದ ಪ್ರಕಾರ ಗಂಡು ಮಕ್ಕಳು ತನ್ನ ತಂದೆ ಅಥವಾ ತಾಯಿ ತೀರಿಕೊಂಡಾಗ ಮಾತ್ರ ಗಡ್ಡ, ಮೀಸೆ, ತಲೆ ಬೋಳಿಸುತ್ತಾರೆ. ಹಾಗಾಗಿ ತಮ್ಮ ಸಂಪ್ರದಾಯದ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ತಂದೆ ಮಗನಿಗೆ ಹೊಡೆದಿರಬಹುದು ಎನ್ನಲಾಗಿದೆ.

Continue Reading

ಕ್ರೀಡೆ

Smriti Mandhana: ಕೊಹ್ಲಿಯ ಶೈಲಿಯಲ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತ ಸ್ಮೃತಿ ಮಂಧಾನ

Smriti Mandhana: ಸ್ಮೃತಿ ಮಂಧಾನ ಈ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಸತತ 2 ಏಕದಿನ ಪಂದ್ಯಗಳಲ್ಲಿ ಸೆಂಚುರಿ ಹೊಡೆದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾದರು

VISTARANEWS.COM


on

Smriti Mandhana
Koo

ಬೆಂಗಳೂರು: ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ 4 ರನ್​ಗಳ ಗೆಲುವು ಸಾಧಿಸಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿತು. ಪಂದ್ಯದಲ್ಲಿ ಶತಕ ಬಾರಿಸಿ ಸಂಭ್ರಮಿಸಿದ ಸ್ಮೃತಿ ಮಂಧಾನ(Smriti Mandhana) ಬೌಲಿಂಗ್​ನಲ್ಲಿಯೂ ಒಂದು ವಿಕೆಟ್​ ಕಿತ್ತು ಮಿಂಚಿದ್ದರು. ಸ್ಮೃತಿ ಅವರು ವಿರಾಟ್ ಕೊಹ್ಲಿಯ(Virat Kohli) ಶೈಲಿಯಲ್ಲೇ ಬೌಲಿಂಗ್​ ನಡೆಸಿದ ವಿಡಿಯೊ ಮತ್ತು ಫೋಟೊಗಳು ಇದೀಗ ವೈರಲ್​ ಆಗಿದೆ.

​ವಿರಾಟ್​ ಕೊಹ್ಲಿ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಅವರು ಬೌಲಿಂಗ್​ ನಡೆಸುತ್ತಿದ್ದ ವೇಳೆ ಗಾಯಗೊಂಡು ಪಂದ್ಯದಿಂದ ಹೊರಗುಳಿದಾಗ ವಿರಾಟ್​ ಕೊಹ್ಲಿ ಅವರು ಈ ಓವರ್​ ಪೂರ್ಣಗೊಳಿಸಿದ್ದರು. ಈ ವೇಳೆ ಕೊಹ್ಲಿ ನಡೆಸಿದ ಬೌಲಿಂಗ್​ ಶೈಲಿಯಲ್ಲೇ ಇದೀಗ ಸ್ಮೃತಿ ಕೂಡ ಬೌಲಿಂಗ್​ ನಡೆಸಿದ್ದಾರೆ. ಉಭಯ ಕ್ರಿಕೆಟರ್​ಗಳ ಬೌಲಿಂಗ್​ ಶೈಲಿಯ ಫೋಟೊವನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ.

ವಿರಾಟ್​ ಮತ್ತು ಸ್ಮೃತಿ ಐಪಿಎಲ್​ನಲ್ಲಿ ಆರ್​ಸಿಬಿ ಫ್ರಾಂಚೈಸಿ ಪರ ಆಡುತ್ತಿದ್ದಾರೆ. ಅಲ್ಲದೆ ಸ್ಮೃತಿ ಅವರು ಕೊಹ್ಲಿಯ ಅಪ್ಪಟ್ಟ ಅಭಿಮಾನಿ ಕೂಡ ಹೌದು. ಹಿಂದೊಮ್ಮೆ ಅವರು ಸಂದರ್ಶನಲ್ಲಿ ಕೊಹ್ಲಿ ನನ್ನ ಕ್ರಿಕೆಟ್ ಸ್ಫೂರ್ತಿ ಎಂದು ಹೇಳಿದ್ದರು. ಕೊಹ್ಲಿಯಂತೆ ಸ್ಮೃತಿ ಕೂಡ ಭಾರತ ಮಹಿಳಾ ಕ್ರಿಕೆಟ್​ ತಂಡದಲ್ಲಿ ಸ್ಟಾರ್​ ಆಟಗಾರ್ತಿಯಾಗಿದ್ದಾರೆ. ಜತೆಗೆ ಹಲವು ದಾಖಲೆಯನ್ನು ಕೂಡ ಹೊಂದಿದ್ದಾರೆ. ಶತಕ ಬಾರಿಸಿದಾಗಲೂ ಕೂಡ ಮಂಧಾನ ಅವರು ಕೊಹ್ಲಿಯಂತೆ ಮೇಲಕ್ಕೆ ಜಿಗಿದು ಸಂಭ್ರಮಿಸಿದರು.

​ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಮತ್ತು ದ್ವಿತೀಯ ಏಕದಿನ ಪಂದ್ಯದಲ್ಲಿಯೂ ಸ್ಮೃತಿ ಶತಕ ಬಾರಿಸಿ ಮಿಂಚಿದ್ದಾರೆ. ನಿನ್ನೆ ನಡೆದ ಪಂದ್ಯದಲ್ಲಿ 2 ಓವರ್​ ಎಸೆದ ಮಂಧಾನ 13 ರನ್​ಗೆ ಒಂದು ವಿಕೆಟ್ ಕಿತ್ತರು. ಪ್ರಚಂಡ ಬ್ಯಾಟಿಂಗ್ ನಡೆಸಿದ ಅವರು 136 ರನ್​ ಬಾರಿಸಿದರು. ಒಟ್ಟು 4 ಶತಕಗಳು ಈ ಪಂದ್ಯದಲ್ಲಿ ದಾಖಲಾಯಿತು. ಭಾರತ ಪರ ಹರ್ಮನ್​ಪ್ರೀತ್​ ಮತ್ತು ಮಂಧಾನ ಶತಕ ಬಾರಿಸಿದರೆ ದಕ್ಷಿಣ ಆಫ್ರಿಕಾ ಪರ ನಾಯಕಿ ಲಾರಾ ವೋಲ್ವಾರ್ಟ್‌ ಮತ್ತು ಮರಿಜಾನ್‌ ಕಾಪ್‌ ಶತಕ ಬಾರಿಸಿದರು. ಆದರೆ ಪಂದ್ಯವನ್ನು ಕೇವಲ 4 ರನ್​ ಅಂತರದಿಂದ ಕಳೆದುಕೊಂಡರು.

ದಾಖಲೆ ಬರೆದ ಸ್ಮೃತಿ


ಸ್ಮೃತಿ ಮಂಧಾನ ಈ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಸತತ 2 ಏಕದಿನ ಪಂದ್ಯಗಳಲ್ಲಿ ಸೆಂಚುರಿ ಹೊಡೆದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾದರು. ಜತೆಗೆ 7ನೇ ಶತಕ ಪೂರ್ತಿಗೊಳಿಸಿ ಮಿಥಾಲಿ ರಾಜ್‌(7) ಜತೆ ಜಂಟಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ 3 ವಿಕೆಟಿಗೆ 325 ರನ್‌ ಬಾರಿಸಿತು. ಬೃಹತ್​ ಮೊತ್ತವನ್ನು ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 6 ವಿಕೆಟಿಗೆ 321 ರನ್‌ ಮಾಡಿ ಶರಣಾಯಿತು. ಸರಣಿಯ ಅಂತಿಮ ಪಂದ್ಯ ಭಾನುವಾರ ನಡೆಯಲಿದೆ

Continue Reading

ಬೆಳಗಾವಿ

Assault Case : ಮಗನ ಜತೆ ಜಗಳವಾಡಿದ್ದಕ್ಕೆ ಸಿಟ್ಟು; ಬಾಲಕನಿಗೆ ಕಾಲಿನಿಂದ ಜಾಡಿಸಿ ಒದ್ದು ಕ್ರೌರ್ಯ ಮರೆದ ತಂದೆ!

Assault Case : ತನ್ನ ಮಗನ ಜತೆಗೆ ಬಾಲಕನೊಬ್ಬ ಜಗಳವಾಡಿದ್ದಕ್ಕೆ ಸಿಟ್ಟಾದ ತಂದೆಯೊಬ್ಬ, ಮನಬಂದಂತೆ ಬಾಲಕನನ್ನು ಥಳಿಸಿದ್ದಾನೆ. ನಮಾಜ್‌ ಮಾಡಿ ಹೊರಗೆ ಬಂದ ಬಾಲಕನನ್ನು ಹಿಡಿದು ಕಾಲಿನಿಂದ ಒದ್ದು ತೀವ್ರ ಹಲ್ಲೆ ನಡೆಸಿರುವ ಕ್ರೌರ್ಯವೆಲ್ಲವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

By

Assault Case in Belgavi
Koo

ಬೆಳಗಾವಿ: ಮಗನ ಜತೆ ಜಗಳವಾಡಿದ ಬಾಲಕನ ಮೇಲೆ ತಂದೆಯೊಬ್ಬ (Assault Case) ಕ್ರೌರ್ಯ ಮರೆದಿದ್ದಾನೆ. ತನ್ನ ಮಗನೊಂದಿಗೆ ಜಗಳವಾಡಿದ ಸಿಟ್ಟಿಗೆ ಬಾಲಕನನ್ನು ಹಿಡಿದು ಕಾಲಿನಿಂದ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಬಾಲಕನ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇಸ್ಮಾಯಿಲ್ ಗಫಾರ್ ಮುಲ್ಲಾ ಎಂಬಾತ 12 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ನೂರಾಣಿ ಮಸೀದಿಯಲ್ಲಿ ಘಟನೆ ನಡೆದಿದೆ. ಕಳೆದ ಜೂನ್‌ 9ರಂದು ಇಸ್ಮಾಯಿಲ್ ಮಗನ‌ ಜತೆಗೆ ಬಾಲಕನೊಬ್ಬ ಜಗಳವಾಡಿದ್ದ. ನಂತರ ಮಸೀದಿಗೆ ನಮಾಜ್ ಮಾಡಲು ತೆರಳಿದ್ದ.

ಮಗನೊಟ್ಟಿಗೆ ಜಗಳವಾಡಿದ ವಿಷಯ ತಿಳಿದ ಇಸ್ಮಾಯಿಲ್‌ ಇದೇ ಸಿಟ್ಟಿನಲ್ಲಿ ಮಸೀದಿಗೆ ತೆರಳಿ ಬಾಲಕನನ್ನು ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ್ದ. ಚಿಕ್ಕ ಹುಡುಗ ಎಂಬುದನ್ನೂ ನೋಡದೆ ಆತನನ್ನು ನೆಲಕ್ಕುರುಳಿಸಿ ಎದೆಗೆ, ಹೊಟ್ಟೆಗೆ ಒದ್ದು ಹಲ್ಲೆ ನಡೆಸಿದ್ದ. ಇಸ್ಮಾಯಿಲ್‌ ಹೊಡೆತಕ್ಕೆ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದ. ಇತರರು ಬಿಡಿಸಲು ಬಂದರೂ ಇಸ್ಮಾಯಿಲ್‌ ನನ್ನ ಮಗನೊಟ್ಟಿಗೆ ಯಾಕೆ ಜಗಳವಾಡುತ್ಯಾ ಎಂದು ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಹಲ್ಲೆ ಮಾಡಿದ್ದು ಹಾಗೂ ಪಾಪಿ ಇಸ್ಮಾಯಿಲ್ ಕ್ರೌರ್ಯವೆಲ್ಲವೂ ಮಸೀದಿಯಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಗೊಂಡು ಮನೆಗೆ ತೆರಳಿದ್ದ ಬಾಲಕನಿಗೆ ಪೋಷಕರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಇಸ್ಮಾಯಿಲ್ ವಿರುದ್ಧ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Dead Body Found : ಗ್ರಾಮದ ಕೆರೆಯಲ್ಲಿ ತೇಲಿ ಬಂದ ಯುವಕನ ಶವ ಕಂಡು ಜನರು ತಬ್ಬಿಬ್ಬು

ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ಪ್ರಯಾಣಿಸುತ್ತಿದ್ದ 24ರ ಯುವಕ ಅರೆಸ್ಟ್!

ನವದೆಹಲಿ: ಜೀವನದಲ್ಲಿ ದುಡಿದು ತಿನ್ನಬೇಕು ಎನ್ನುವವರಿಗೆ ಸಾವಿರ ದಾರಿಯಿರುತ್ತಾರೆ. ಆದರೆ ಇವೆಲ್ಲವನ್ನೂ ಬಿಟ್ಟು ಇಂದಿನ ಯುವ ಜನಾಂಗ ಇನ್ಯಾವುದೋ ಕೆಟ್ಟ ದಾರಿಯಲ್ಲಿ ಸಾಗುವ ಹುಮ್ಮಸ್ಸಿನಲ್ಲಿರುತ್ತಾರೆ. ಕಾನೂನಿನ ಕಣ್ಣಿಗೆ ಮಣ್ಣೆರೆಚಿ ಏನಾದರು ಮಾಡಬಹುದು ಎಂದುಕೊಂಡವರು ಕೊನೆಗೆ ಸಿಕ್ಕಿಬಿದ್ದು ಜೈಲುಪಾಲಾಗುತ್ತಾರೆ. ಇಂತಹದ್ದೇ ಒಂದು ಘಟನೆ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನಕಲಿ ಪಾಸ್‌ಪೋರ್ಟ್‌ (Passport Forgery Case) ಪ್ರಕರಣದಡಿಯಲ್ಲಿ ಯುವಕನೊಬ್ಬ ಜೈಲುಪಾಲಾಗಿದ್ದಾನೆ.

ಕೆನಡಾಕ್ಕೆ ಪ್ರಯಾಣಿಸುತ್ತಿದ್ದ ಯುವಕನನ್ನು ಸಿಐಎಸ್ ಎಫ್ ತಂಡ ಆತನ ಅನುಮಾನಾಸ್ಪದ ನಡೆಯ ಹಿನ್ನೆಲೆ ವಿಚಾರಣೆ ನಡೆಸಿ ಬಂಧಿಸಿದೆ. 24 ವರ್ಷದ ಗುರುಸೇವಕ್‌ ಸಿಂಗ್‌ ಬಂಧನಕ್ಕೊಳಗಾದ ಯುವಕ.

ಪ್ರಯಾಣಿಕ ಗುರು ಸೇವಕ್ ಸಿಂಗ್(24) ಗಡ್ಡ ಮತ್ತು ಕೂದಲಿಗೆ ಬಣ್ಣ ಹಚ್ಚಿ 67 ವರ್ಷದ ವ್ಯಕ್ತಿಯ ವೇಷ ಧರಿಸಿ ರಶ್ಮಿಂದರ್ ಸಿಂಗ್ ಸಹೋಟಾ ಎಂಬ ಹೆಸರಿನ ಪಾಸ್ ಪೋರ್ಟ್ ತೋರಿಸಿ ಮಂಗಳವಾರ ದೆಹಲಿಯಿಂದ ಹೊರಡುವ ಏರ್ ಕೆನಡಾ ವಿಮಾನ ಹತ್ತಿ ಕೆನಡಕ್ಕೆ ಪ್ರಯಾಣಿಸುವ ಪ್ಲ್ಯಾನ್ ಮಾಡಿದ್ದನು. ಆದರೆ ಅವನ ಚಟುವಟಿಕೆಗಳು ಅನುಮಾನಾಸ್ಪದವೆಂದು ಕಂಡು ಬಂದ ಹಿನ್ನಲೆಯಲ್ಲಿ ಆತನನ್ನು ಮೊದಲು ಸಿಐಎಸ್ ಎಫ್ ಸಿಬ್ಬಂದಿ ಪರಿಶೀಲಿಸಿದರು. ವ್ಯಕ್ತಿಯ ನೋಟ, ಧ್ವನಿ ಮತ್ತು ಚರ್ಮದ ವಿನ್ಯಾಸವು ಪಾಸ್ ಪೋರ್ಟ್ ನಲ್ಲಿ ತಿಳಿಸಿದ ವಿವರಗಳಿಗೆ ಭಿನ್ನವಾಗಿತ್ತು. ಸೂಕ್ಷ್ಮವಾಗಿ ನೋಡಿದರೆ ಆತನ ಗಡ್ಡ ಮತ್ತು ಕೂದಲಿಗೆ ಬಣ್ಣಹಚ್ಚಿದ್ದು, ವಯಸ್ಸಾದವರಂತೆ ಕಾಣಲು ಕನ್ನಡಕ ಧರಿಸಿದ್ದನು ಎಂಬುದನ್ನು ಅವರು ಗಮನಿಸಿದರು.

ಹಾಗಾಗಿ ಅನುಮಾನಗೊಂಡು ಆತನನ್ನು ವಿಚಾರಿಸಿದಾಗ ಆತ ಸತ್ಯಾಂಶ ಬಾಯ್ಬಿಟ್ಟಿದ್ದಾನೆ. ಹಾಗೇ ಆತನ ಹೆಸರಿನ ಪಾಸ್ ಪೋರ್ಟ್ ಅವನ ಮೊಬೈಲ್ ನಲ್ಲಿತ್ತು ಎನ್ನಲಾಗಿದೆ. ಹಾಗಾಗಿ ಈ ಪ್ರಕರಣವು ನಕಲಿ ಪಾಸ್ ಪೋರ್ಟ್ ಗೆ ಸಂಬಂಧಿಸಿದ್ದಾದ್ದರಿಂದ ಸಿಐಎಸ್ ಎಫ್ ಆತನನ್ನು ಬಂಧಿಸಿ ಕಾನೂನಿನ ಕ್ರಮದಂತೆ ಆತನನ್ನು‌ ಹಾಗೂ ಆತನ ವಸ್ತುಗಳೊಂದಿಗೆ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Renuka swamy Murder case
ಬೆಂಗಳೂರು5 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್16 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest29 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ30 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್34 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ39 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು41 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ46 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest58 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ1 hour ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌