Viral video | ಕೆಸರಿನಲ್ಲಿ ಹೂತುಹೋದ ಆನೆಮರಿಯನ್ನು ರಕ್ಷಿಸಿದ ಹುಡುಗಿ! - Vistara News

ವೈರಲ್ ನ್ಯೂಸ್

Viral video | ಕೆಸರಿನಲ್ಲಿ ಹೂತುಹೋದ ಆನೆಮರಿಯನ್ನು ರಕ್ಷಿಸಿದ ಹುಡುಗಿ!

ಕಬ್ಬು ತಿನ್ನುವ ಆಸೆಯಿಂದ ಗದ್ದೆಗೆ ನುಗ್ಗಿದ ಆನೆಮರಿ ಕೆಸರಿನಲ್ಲಿ ಕಾಲು ಹೂತು ಹೋಗಿ ಮೇಲೆ ಬರಲು ಪ್ರಯಾಸ ಪಡುವಾಗ ಹುಡುಗಿಯೊಬ್ಬಳು ಧೈರ್ಯದಿಂದ ಆನೆಮರಿಯ ಬಳಿ ಹೋಗಿ ಸಹಾಯ ಮಾಡುವ ಈ ವಿಡಿಯೋ ನೋಡಿದರೆ ನಿಮಗೂ ಮುದವೆನಿಸದೇ ಇರದು.

VISTARANEWS.COM


on

baby elephant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಮಾಜಿಕ ಜಾಲತಾಣದಲ್ಲಿ, ಇಂತಹ ವಿಡಿಯೋಗಳು ಜನಮನ ಗೆಲ್ಲುತ್ತವೆ, ವೈರಲ್‌ ಆಗುತ್ತವೆ. ಮನುಷ್ಯನಷ್ಟು ಬುದ್ಧಿವಂತ ಪ್ರಾಣಿ ಇನ್ನೊಂದಿಲ್ಲ ಎಂದುಕೊಳ್ಳುವಾಗಲೆಲ್ಲ, ಸಹಾಯ ಮಾಡಿದವರನ್ನೂ ಮರೆತು ಮನುಷ್ಯ ಮುಂದೆ ಸಾಗುವಾಗ ಆಗೊಮ್ಮೆ ಈಗೊಮ್ಮೆ ಇಂತಹ ಅಪರೂಪದ ವಿಡಿಯೋಗಳು ಕಣ್ಣಂಚು ಒದ್ದೆ ಮಾಡುತ್ತವೆ. ಮನುಷ್ಯ ತೋರಿಸಬೇಕಾದ ಪ್ರೀತಿ, ಕಾಳಜಿ, ದಯೆಯನ್ನು ಆಗಾಗ ನೆನಪಿಸುವ ಪ್ರಯತ್ನ ಮಾಡುತ್ತವೆ. ಪ್ರಾಣಿಗಳು ತೋರಿಸುವ ಪ್ರೀತಿ ಅವುಗಳಲ್ಲಿರುವ ಬುದ್ಧಿಮತ್ತೆಯನ್ನು ನಮ್ಮ ಮುಂದೆ ಅನಾವರಣಗೊಳಿಸುತ್ತದೆ.

ಇಂಥದ್ದೇ ಒಂದು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿಯನ್ನು ಹಂಚುತ್ತಿದೆ. ಐಎಫ್‌ಎಸ್‌ ಅಧಿಕಾರಿ ಸುಸಂತಾ ನಂದಾ ಅವರು ಶೇರ್‌ ಮಾಡಿರುವ ಈ ವಿಡಿಯೋನಲ್ಲಿ, ಪುಟಾಣಿ ಆನೆಯೊಂದು ಹಳ್ಳಿರಸ್ತೆ ಬದಿಯಲ್ಲಿ ಕಂಡ ಕಬ್ಬಿನಗದ್ದೆಯಲ್ಲಿ ಮನಸೋ ಇಚ್ಛೆ ಕಬ್ಬು ತಿನ್ನುವ ಆಸೆಯಿಂದ ಗದ್ದೆಗೆ ನುಗ್ಗಿದ್ದ ಸಂದರ್ಭ ಕೆಸರಿನಲ್ಲಿ ಕಾಲು ಹೂತು ಹೋಗಿ ಮೇಲೆ ಬರಲು ಪ್ರಯಾಸ ಪಡುತ್ತಿತ್ತು. ಕಾಲುಗಳೆರಡು ಕೆಸರಿನಲ್ಲಿ ಹೂತುಕೊಂಡು ಅದನ್ನು ಮೇಲೆತ್ತಲಾಗದೆ ಕಷ್ಟಪಡುತ್ತಿರುವಾಗ ಹುಡುಗಿಯೊಬ್ಬಳು ಧೈರ್ಯದಿಂದ ಆನೆಮರಿಯ ಬಳಿ ಹೋಗಿ ಮರಿಯಾನೆಯ ಕಾಲುಗಳನ್ನು ಕಷ್ಟಪಟ್ಟು ಕೆಸರಿನಿಂದ ಮೇಲೆತ್ತಲು ಸಹಾಯ ಮಾಡುವ ವಿಡಿಯೋ ಇದಾಗಿದೆ. ಹಳ್ಳಿಯ ರಸ್ತೆಬದಿಯಲ್ಲಿರುವ ಕಬ್ಬಿನ ಗದ್ದೆಯಲ್ಲಿ ಕಬ್ಬು ತಿನ್ನಲು ಬಂದ ಮರಿಯಾನೆಯ ಮೇಲೆ ಕೋಪ ಮಾಡಿಕೊಳ್ಳದೆ, ಆಕೆ, ಪ್ರೀತಿಯಿಂದ ಕಷ್ಟಪಟ್ಟು ಸಹಾಯ ಮಾಡುತ್ತಿರುವುದು ಎಲ್ಲರ ಮನಗೆದ್ದಿದೆ. ಜೊತೆಗೆ ಆಕೆಯ ಧೈರ್ಯಕ್ಕೆ ಭೇಷ್‌ ಎಂದಿದೆ.

ಇದು ಇಷ್ಟಕ್ಕೇ ನಿಂತಿಲ್ಲ. ಕೊನೆಗೂ ಹೂತುಹೋದ ಕಾಲನ್ನು ಮೇಲೆತ್ತುವಲ್ಲಿ ಸಫಲವಾಗಿ ಮುಂದೆ ಹೊರಟ ಆನೆಮರಿ, ಖುಷಿಯಿಂದ ತನಗೆ ಸಹಾಯ ಮಾಡಿದ ಯುವತಿಯ ಕಡೆಗೆ ನೋಡಿ ಮಾಡಿದ ಸಹಾಯಕ್ಕೆ ಪ್ರತಿಯಾಗಿ ಸೊಂಡಿಲು ಮೇಲೆತ್ತಿ ಧನ್ಯವಾದವನ್ನೂ ಹೇಳಿದೆ. ಸಹಾಯಕ್ಕೆ ಪ್ರತಿಯಾಗಿ ಪುಟ್ಟ ಆನೆಮರಿ ಸೊಂಡಿಲು ಎತ್ತಿ ತೋರಿಸಿದ ಪ್ರೀತಿ ಎಲ್ಲರ ಮನಗೆದ್ದಿದೆ.

ಇದನ್ನೂ ಓದಿ | Viral video | ನೀರಿಗೆ ಬಿದ್ದ ಕಾಗೆಯನ್ನು ರಕ್ಷಿಸಿದ ಕರಡಿ!

೩೬ ಸೆಕೆಂಡುಗಳ ಈ ವೀಡಿಯೋ ಹಲವರ ಮುಖದಲ್ಲಿ ಖುಷಿ ತರಿಸಿದೆ. ಸಾವಿರಗಟ್ಟಲೆ ವೀಕ್ಷಣೆಯನ್ನು ಇದು ಕಂಡಿದ್ದು, ನೂರಾರು ಮಂದಿ ಈ ಹುಡುಗಿಯ ಧೈರ್ಯಕ್ಕೆ ಮೆಚ್ಚಿ ತಲೆದೂಗಿದ್ದಾರೆ. ಈ ಭೂಮಿ ಎಲ್ಲರಿಗೂ ಸೇರಿದ್ದಾಗಿದ್ದು, ಎಲ್ಲರಿಗೂ ಇಲ್ಲಿ ಬದುಕುವ ಹಕ್ಕಿದೆ ಎಂಬ ಸಂದೇಶ ರವಾನಿಸಿದ ಈ ಪೋಸ್ಟ್‌ಗೆ ಧನ್ಯವಾದಗಳು ಎಂದು ಕಾಮೆಂಟ್‌ ಮಾಡಿದ್ದಾರೆ.

ಪ್ರಕೃತಿಯ ಮಡಿಲಲ್ಲಿ ಎಲ್ಲರೂ ಒಂದೇ. ಮನುಷ್ಯರೂ, ಪ್ರಾಣಿಗಳೂ ಪರಸ್ಪರ ಸಹಾಯ ಮಾಡಿಕೊಂಡು ಬದುಕಬೇಕು. ಎಲ್ಲರಿಗೂ ಇಲ್ಲಿ ಸಮಾನವಾಗಿ ಬದುಕುವ ಹಕ್ಕಿದೆ. ಆ ಹುಡುಗಿ ಧೈರ್ಯದಿಂದ ಹೋಗಿ ಆನೆಮರಿಗೆ ಸಹಾಯ ಮಾಡಿದ್ದು ಮನಮಿಡಿಯುವಂತಿದೆ. ಎಲ್ಲರೂ ಇದರಿಂದ ಲಭಿಸುವ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪರಸ್ಪರ ಸಹಾಯ ಮಾಡಬೇಕು. ನೀವೂ ಬದುಕಿ, ಇತರರನ್ನೂ ಬದುಕಲು ಬಿಡಿ ಎಂದು ಎಂದೂ ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

ಆನೆಮರಿಗೆ ಸಹಾಯ ಮಾಡಿದ ಆಕೆಗೆ ಅನಂತಾನಂತ ಧನ್ಯವಾದಗಳು ಎಂದೂ ಕೆಲವರು ಆಕೆಯೆಡೆಗೆ ಮೆಚ್ಚುಗೆ ಸೂಚಿಸಿದ್ದರೆ, ಇನ್ನೂ ಕೆಲವರು, ಆನೆ ಸೊಂಡಿಲೆತ್ತಿ ಧನ್ಯವಾದವನ್ನು ಸಲ್ಲಿಸಿರುವುದಕ್ಕೆ ಮನಸೋತಿದ್ದಾರೆ. 

ಇದನ್ನೂ ಓದಿ | Viral Video | ಪ್ರೀತಿ ಎಲ್ಲಿದೆ? – ಪತ್ನಿಯ ಕಾಲ್ಬೆರಳ ಉಗುರಿಗೆ ನೇಲ್​ಪಾಲಿಶ್​ ಹಚ್ಚುವುದರಲ್ಲೂ ಇದೆ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Mahua Moitra: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಪಡೆದ ಆರೋಪ ಹೊತ್ತಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಅದು ಸೆಕ್ಸ್‌ ಎಂಬುದಾಗಿ ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Mahua Moitra
Koo

ಕೋಲ್ಕೊತಾ: ಕೇಂದ್ರ ಸರ್ಕಾರದ (Central Government) ವಿರುದ್ಧ ಸಂಸತ್ತಿನಲ್ಲಿ ಟೀಕಾಸ್ತ್ರ ಬಳಸುತ್ತಿದ್ದ, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದಲ್ಲಿ ಸಿಲುಕಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಟಿಎಂಸಿಯಿಂದ ಕೃಷ್ಣನಗರ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಮಹುವಾ ಮೊಯಿತ್ರಾ ಅವರು ಪತ್ರಕರ್ತರೊಬ್ಬರ ಪ್ರಶ್ನೆಗೆ, “ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಸೆಕ್ಸ್”‌ ಎಂಬುದಾಗಿ ಹೇಳಿದ್ದಾರೆ ಎನ್ನಲಾದ ವಿಡಿಯೊ ಈಗ ಭಾರಿ ವೈರಲ್‌ (Viral Video) ಆಗಿದೆ. ಇದು ವಿವಾದಕ್ಕೂ ಕಾರಣವಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಮನೆಗೆ, ಪ್ರತಿ ಗ್ರಾಮಕ್ಕೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಹೀಗೆ, ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿರುವ ಮಹುವಾ ಮೊಯಿತ್ರಾ ಅವರಿಗೆ ಪತ್ರಕರ್ತರೊಬ್ಬರು “ನಿಮ್ಮ ಸಾಮರ್ಥ್ಯದ ಗಟ್ಟೇನು” ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಹುವಾ ಮೊಯಿತ್ರಾ ಅವರು, “ಸೆಕ್ಸ್‌ ನನ್ನ ಸಾಮರ್ಥ್ಯದ ಗುಟ್ಟು” ಎಂದಿದ್ದಾರೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ವರದಿಗಾರನ ಸ್ಪಷ್ಟನೆ ಏನು?

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ಒಪ್ಪಿಸಿದ್ದಾರೆ. ಅವರು ಲಂಚವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಲಾಗಿನ್‌ ವಿವರ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು. ಅಲ್ಲದೆ ಇದು ಸಂಸದರಲ್ಲಿ ಸಾಮಾನ್ಯ ಅಭ್ಯಾಸ ಎಂದು ವಾದಿಸಿದ್ದರು. ಆರು ಸದಸ್ಯರ ಸಮಿತಿಯಲ್ಲಿ ನಾಲ್ಕು ಮಂದಿ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಮತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಈಗಲೂ ಅವರ ವಿರುದ್ಧ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Mahua Moitra: ಹಣ ಅಕ್ರಮ ವರ್ಗಾವಣೆ; ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

Continue Reading

ವೈರಲ್ ನ್ಯೂಸ್

Viral News: ಬಿಕಿನಿ ಧರಿಸಿ ಬಸ್‌ ಏರಿದ ಮಹಿಳೆಯಿಂದ ಅಸಭ್ಯ ವರ್ತನೆ: ಬೆಚ್ಚಿಬಿದ್ದ ಪ್ರಯಾಣಿಕರು; ಇಲ್ಲಿದೆ ವಿಡಿಯೊ

Viral News: ಬಸ್‌ ಏರಿದ ಮಹಿಳೆಯೊಬ್ಬಳು ಅಸಭ್ಯವಾಗಿ ವರ್ತಿಸಿರುವ ಘಟನೆ ದಿಲ್ಲಿಯಲ್ಲಿ ನಡೆದಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ. ಬಿಕಿನಿ ಧರಿಸಿದ್ದ ಈ ಮಹಿಳೆ ದೆಹಲಿಯ ಡಿಟಿಸಿ ಬಸ್‌ಗೆ ಏರಿ ಅಶ್ಲೀಲವಾಗಿ ವರ್ತಿಸಿದ್ದಾಳೆ. ಬಳಿಕ ಪುರುಷರತ್ತ ಅಸಭ್ಯವಾಗಿ ಸನ್ನೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಬೇಸತ್ತ ಪ್ರಯಾಣಿಕನೊಬ್ಬ ಕುಳಿತಿದ್ದ ಸೀಟಿನಿಂದಲೇ ಎದ್ದು ಆಚೆ ಬರುತ್ತಾನೆ. ಅಲ್ಲದೆ ಆಕೆಯ ಮೈ ಪೂರ್ತಿ ಒದ್ದೆಯಾಗಿರುವುದೂ ವಿಡಿಯೊದಲ್ಲಿ ಕಂಡು ಬಂದಿದೆ. ಮಹಿಳೆಯ ಈ ವರ್ತನೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ.

VISTARANEWS.COM


on

Viral News
Koo

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ, ಸಾರಿಗೆಗಳಲ್ಲಿ ಮಹಿಳೆಯರ ವಿರುದ್ಧ ಪುರುಷರು ಅಸಭ್ಯವಾಗಿ ವರ್ತಿಸುವುದು, ಕಿರುಕುಳ ನೀಡುವುದನ್ನು ಕೇಳಿದ್ದೇವೆ, ಓದಿದ್ದೇವೆ. ಆದರೆ ಇಲ್ಲೊಂದು ಇದಕ್ಕೆ ತದ್ವಿರುದ್ಧ ಪ್ರಸಂಗ ನಡೆದಿದೆ. ಬಸ್‌ ಏರಿದ ಮಹಿಳೆಯೊಬ್ಬಳು ಅಸಭ್ಯವಾಗಿ ವರ್ತಿಸಿದ್ದಾಳೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral News).

ಬಿಕಿನಿ ಧರಿಸಿದ್ದ ಈ ಮಹಿಳೆ ದೆಹಲಿಯ ಡಿಟಿಸಿ ಬಸ್‌ಗೆ ಏರಿ ಅಶ್ಲೀಲವಾಗಿ ವರ್ತಿಸಿದ್ದಾಳೆ. ಬಳಿಕ ಪುರುಷರತ್ತ ಅಸಭ್ಯವಾಗಿ ಸನ್ನೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಬೇಸತ್ತ ಪ್ರಯಾಣಿಕನೊಬ್ಬ ಕುಳಿತಿದ್ದ ಸೀಟಿನಿಂದಲೇ ಎದ್ದು ಆಚೆ ಬರುತ್ತಾನೆ. ಅಲ್ಲದೆ ಆಕೆಯ ಮೈ ಪೂರ್ತಿ ಒದ್ದೆಯಾಗಿರುವುದೂ ವಿಡಿಯೊದಲ್ಲಿ ಕಂಡು ಬಂದಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನ ʼದಿಲ್ಲಿ ಬಸ್‌ʼ (Delhi Buses) ಎಂಬ ಖಾತೆಯಲ್ಲಿ ಈ ವಿಡಿಯೊವನ್ನು ಪೋಸ್ಟ್‌ ಮಾಡಲಾಗಿದೆ. ಈಗಾಗಲೇ 5 ಲಕ್ಷಕ್ಕಿಂತ ಅಧಿಕ ಮಂದಿ ಈ ವಿಡಿಯೊವನ್ನು ವೀಕ್ಷಿಸಿ ಮಹಿಳೆಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಸಾರಿಗೆ ಕಾರ್ಪೋರೇಷನ್‌ಗೆ ಸೇರಿದ ಬಸ್‌ನಲ್ಲಿ ಈ ಘಟನೆ ನಡೆದಿದೆ. ʼʼಮಹಿಳೆ ಬಸ್ ಏರುತ್ತಿದ್ದಂತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾಳೆ. ಅಲ್ಲದೇ ಇತರ ಪ್ರಯಾಣಿಕರ ಜತೆ ವಾದ ಮಾಡುತ್ತಾಳೆ. ಈಕೆಯ ವರ್ತನೆ ಪ್ರಯಾಣಿಕರನ್ನು ಗೊಂದಲಕ್ಕೀಡು ಮಾಡಿದೆ. ಅನೇಕರು ಈಕೆಯ ವರ್ತನೆಯಿಂದ ಕಿರಿಕಿರಿಗೊಳಗಾಗಿದ್ದರು. ಇಂತಹ ವರ್ತನೆಗೆ ಕಡಿವಾಣ ಹಾಕಲೇ ಬೇಕಿದೆʼʼ ಎಂದು ನೆಟ್ಟಿಗರೊಬ್ಬರು ತಿಳಿಸಿದ್ದಾರೆ.

ಈ ರೀತಿ ಅಸಭ್ಯವಾಗಿ ವರ್ತಿಸಿದ ಮಹಿಳೆ ಯಾರು ಎಂಬುದು ತಿಳಿದು ಬಂದಿಲ್ಲ. ಅಧಿಕಾರಿಗಳು ಈಕೆಯ ಗುರುತನ್ನು ಕೆಲವು ಕಾರಣಗಳಿಗಾಗಿ ಬಹಿರಂಗಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಈ ವಿಡಿಯೊ ವೀಕ್ಷಿಸಿದ ಅನೇಕರು ಇಂತಹ ವರ್ತನೆಗಳನ್ನು ತಡೆಯುವ ಯಾವುದೇ ಕಾನೂನುಗಳು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದವರೆಗೆ ಇಂತಹ ಅಸಹ್ಯ ವರ್ತನೆ ದೆಹಲಿ ಮೆಟ್ರೋದಲ್ಲಿ ಕಂಡು ಬರುತ್ತಿತ್ತು. ಇದೀಗ ಈ ಚಾಳಿ ಡಿಟಿಸಿ ಬಸ್‌ಗೂ ವ್ಯಾಪಿಸಿದೆ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಪ್ರಯಾಣಿಸುತ್ತಿರುತ್ತಾರೆ. ಈ ವೇಳೆ ಇಂತಹ ವರ್ತನೆ ತೋರುವುದು ಮುಜುಗರ ಉಂಟು ಮಾಡುತ್ತದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಇದನ್ನೂ ಓದಿ: Viral video: ಫುಟ್‌ರೆಸ್ಟ್‌ ಮೇಲೆ ಮಗು ನಿಲ್ಲಿಸಿಕೊಂಡು ಬೆಂಗಳೂರು ದಂಪತಿ ಬೈಕ್‌ ರೈಡ್‌! ಬೆಚ್ಚಿಬಿದ್ದ ನೆಟಿಜನ್ಸ್

ಈ ಮಧ್ಯೆ ಕೆಲವರು ಆಕೆಯ ಬೆಂಬಲಕ್ಕೂ ಧಾವಿಸಿದ್ದಾರೆ. “ಇದು ಅವಳ ದೇಹ ಮತ್ತು ಅವಳ ಆಯ್ಕೆ. ಅವಳನ್ನು ಒಂಟಿಯಾಗಿ ಬಿಡಿ” ಎಂದು ಒಬ್ಬರು ಹೇಳಿದ್ದಾರೆ. ಆಕೆ ಧರಿಸುವ ಬಟ್ಟೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ದೇಹವನ್ನು ಪ್ರದರ್ಶಿಸುವಂತಹ, ಪ್ರಚೋದನಕಾರಿ ಬಟ್ಟೆ ಧರಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಅವರದ್ದೆ ಮನೆಯಲ್ಲಿ ಹೇಗೆ ಬೇಕಾದರೂ ಇರಲಿ. ಹೊರಗೆ ಬಂದಾಗ ಇತರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಅನೇಕರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ ಆಕೆಯ ವರ್ತನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Continue Reading

ಕ್ರೀಡೆ

Shubman Gill: ಗ್ಯಾಲರಿಯಲ್ಲಿ ಕುಳಿತಿದ್ದ ಸುಂದರ ಹುಡುಗಿಯನ್ನು ಕಂಡು ಕ್ಲೀನ್​ ಬೌಲ್ಡ್​ ಆದ ಗಿಲ್​; ವಿಡಿಯೊ ವೈರಲ್​

Shubman Gill: ಡೆಲ್ಲಿ ತಂಡ ಗೆಲುವು ಸಾಧಿಸಿದನ್ನು ಕಂಡು ಗ್ಯಾಲರಿಯಲ್ಲಿದ್ದ ಹುಡುಗಿಯೊಬ್ಬಳು ಚಪ್ಪಾಳೆ ತಟ್ಟುತ್ತಾ ತಂಡಕ್ಕೆ ಅಭಿನಂದಿಸಿದ್ದಾಳೆ. ಇದೇ ವೇಳೆ ಗಿಲ್​ ಈ ಹುಡುಗಿಯನ್ನು ಕಂಡು ವಾಹ್​… ಎಂಬ ಸನ್ನೆ ಮಾಡಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Shubman Gill
Koo

ಅಹಮದಾಬಾದ್​: ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಿ ಗುಜರಾತ್​ ತಂಡ 6 ವಿಕೆಟ್​ಗಳ ಸೋಲು ಕಂಡಿತು. ಇದೇ ಪಂದ್ಯದಲ್ಲಿ ಶುಭಮನ್​ ಗಿಲ್(Shubman Gill)​ ಅವರು ಗ್ಯಾಲರಿಯಲ್ಲಿ ಕುಳಿತಿದ್ದ ಸುಂದರ ಹುಡುಗಿಯನ್ನು ಕಂಡು ಜೊಲ್ಲು ಸುರಿಸಿದ ವಿಡಿಯೊ ವೈರಲ್(viral video)​ ಆಗಿದೆ. ಈ ವಿಡಿಯೊಗೆ ‘ಮೆನ್​ ವಿಲ್​ ಬಿ ಮೆನ್​” ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಡೆಲ್ಲಿ ತಂಡ ಗೆಲುವು ಸಾಧಿಸಿದನ್ನು ಕಂಡು ಗ್ಯಾಲರಿಯಲ್ಲಿದ್ದ ಹುಡುಗಿಯೊಬ್ಬಳು ಚಪ್ಪಾಳೆ ತಟ್ಟುತ್ತಾ ತಂಡಕ್ಕೆ ಅಭಿನಂದಿಸಿದ್ದಾಳೆ. ಇದೇ ವೇಳೆ ಗಿಲ್​ ಈ ಹುಡುಗಿಯನ್ನು ಕಂಡು ವಾಹ್​… ಎಂಬ ಸನ್ನೆ ಮಾಡಿದರು. ಈ ದೃಶ್ಯ ಪಂದ್ಯದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಂದ್ಯ ಸೋತರೂ ಈ ಹುಡಿಯನ್ನು ಕಂಡ ಗಿಲ್​ ಎಲ್ಲ ಚಿಂತೆಯನ್ನು ಮರೆತರು.

ಗಿಲ್​ ಅವರ ಈ ವಿಡಿಯೊ ಕಂಡ ಕೆಲ ನೆಟ್ಟಿಗರು ಸಾರಾ ತೆಂಡೂಲ್ಕರ್​ ಕಂಡರೆ ನಿಮಗೆ ಮಾರಿ ಹಬ್ಬ ಕಂಡಿತ ಎಂದು ತಮಾಷೆಯ ಕಮೆಂಟ್​ ಮಾಡಿದ್ದಾರೆ. ಪಂದ್ಯಕ್ಕೂ ಮುನ್ನವೇ ನಿಮ್ಮ ತಂಡದ ಆಟಗಾರರು ಈ ಹುಡುಗಿಯನ್ನು ಕಂಡಿರಬೇಕು, ಹೀಗಾಗಿ ಆಟದಲ್ಲಿ ಏಕಾಗ್ರತೆ ಕಳೆದುಕೊಂಡು ಕಳಪೆ ಪ್ರದರ್ಶನ ತೋರಿ ಸೋಲು ಕಂಡಿದ್ದು ಎಂದು ಕಾಲೆಳೆದಿದ್ದಾರೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಡೆಲ್ಲಿ(Delhi Capitals) ತಂಡಕ್ಕೆ. ಬೌಲರ್​ಗಳು ತಮ್ಮ ಘಾತಕ ದಾಳಿಯ ಮೂಲಕ ಎದುರಾಳಿ ಗುಜರಾತ್​ ತಂಡವನ್ನು 89 ರನ್​ಗಳಿಗೆ ಆಲೌಟ್​ ಮಾಡಿದರು. ಸಾಧಾರಣ ಮೊತ್ತವನ್ನು ಬೆನ್ನತ್ತಿದ ಡೆಲ್ಲಿ 8.5 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 92 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

ಇದನ್ನೂ ಓದಿ IPL 2024 POINTS TABLE: ಗುಜರಾತ್​​ ಮಣಿಸಿ ಅಂಕಪಟ್ಟಿಯಲ್ಲಿ 3 ಸ್ಥಾನ ಜಿಗಿತ ಕಂಡ ಡೆಲ್ಲಿ

ಚೇಸಿಂಗ್​ ವೇಳೆ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಇವರ ಈ ಆಕ್ರಮಣಕಾರಿ ಬ್ಯಾಟಿಂಗ್​ನಿಂದಾಗಿ 2 ಓವರ್​ ಮುಕ್ತಾಯಗೊಳ್ಳುವ ಮುನ್ನವೇ ತಂಡಕ್ಕೆ 25 ರನ್​ ಹರಿದುಬಂತು. ಆದರೆ ಇವರ ಈ ಆಟ ಹೆಚ್ಚು ಹೊತ್ತು ಸಾಗಲಿಲ್ಲ. ಸ್ಪೆನ್ಸರ್ ಜಾನ್ಸನ್ ಎಸೆದ ವೈಡ್​ ಲೆಂತ್​ ಬಾಲ್​ನ ಮರ್ಮವನರಿಯದೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಅವರ ಗಳಿಕ 10 ಎಸೆತಗಳಿಂದ 20 ರನ್. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಅಭಿಷೇಕ್​ ಪೋರೆಲ್(15)​ ಮತ್ತು ಶಾಯ್ ಹೋಪ್(19)​ ಬೇಗನೆ​ ವಿಕೆಟ್​ ಕಳೆದುಕೊಂಡು ತಂಡಕ್ಕೆ ಆತಂಕ ತಂದೊಡ್ಡಿದರು. ಈ ವೇಳೆ ತಾಳ್ಮೆಯುತ ಬ್ಯಾಟಿಂಗ್​ ನಡೆಸಿದ ನಾಯಕ ಪಂತ್​(16) ಮತ್ತು ಸುಮೀತ್​ ಕುಮಾರ್​(9) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಗುಜರಾತ್​ ಪರ ಸಂದೀಪ್​ ವಾರಿಯರ್​ 2 ವಿಕೆಟ್​ ಕಿತ್ತರು.

ಇನಿಂಗ್ಸ್​ ಆರಂಭಿಸಿದ ಗುಜರಾತ್​ ತಂಡದ ಬ್ಯಾಟರ್​ಗಳು ಡೆಲ್ಲಿ ಬೌಲರ್​ಗಳಾದ ಇಶಾಂತ್​ ಶರ್ಮ, ಮುಕೇಶ್​ ಕುಮಾರ್​ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಕರಾರುವಾಕ್ ಬೌಲಿಂಗ್ ಎದುರು ಅಬ್ಬರಿಸಲು ವಿಫಲರಾದರು. ನಾಯಕ ಶುಭಮನ್​​ ಗಿಲ್​(8), ವೃದ್ಧಿಮಾನ್​ ಸಾಹಾ(2), ಡೇವಿಡ್​ ಮಿಲ್ಲರ್​(2), ಅಭಿನವ್​ ಮನೋಹರ್​(8) ಮತ್ತು ಈ ಆವೃತ್ತಿಯಲ್ಲಿ ಮೊದಲ ಪಂದ್ಯವಾನ್ನಾಡಿದ ಶಾರುಖ್ ಖಾನ್(0) ಸಿಂಗಲ್​ ಡಿಜಿಟ್​ಗೆ ಸೀಮಿತರಾಗಿ ಪೆವಿಲಿಯನ್​ ಪರೇಡ್​ ನಡೆಸಿದರು. 8ನೇ ಕ್ರಮಾಂಕದಲ್ಲಿ ಆಡಲಿಳಿದ ರಶೀದ್​ ಖಾನ್​ ಏಕಾಂಗಿ ಹೋರಾಟ ನಡೆಸಿ 24 ಎಸೆತಗಳಿಂದ 31 ರನ್​ ಚಚ್ಚಿ ತಂಡದ ಮೊತ್ತವನ್ನು 80ರ ಗಡಿ ದಾಟಿಸಿ ಮಾನ ಉಳಿಸಿದರು. 

Continue Reading

ಪ್ರಮುಖ ಸುದ್ದಿ

Viral Video: ಅಕ್ಷರ ಕಲಿಸಿದ ಶಿಕ್ಷಕಿಯ ಕಪಾಳಕ್ಕೆ ಹೊಡೆದ ವಿದ್ಯಾರ್ಥಿ; ಎಂಥ ಕಾಲ ಬಂತು ನೋಡಿ!

Viral Video ಮುಂದೆ ಗುರಿ ಹಿಂದೆ ಗುರುವಿದ್ದರೆ ಯಾರ ಬದುಕು ಕೂಡ ದಾರಿ ತಪ್ಪಲ್ಲ ಎನ್ನುತ್ತಾರೆ. ಆದರೆ ಈಗ ಗುರಿಯೂ ಇಲ್ಲ, ದಾರಿ ತೋರುವ ಗುರುವಿಗೂ ಬೆಲೆ ಇಲ್ಲ ಎನ್ನುವ ಕಾಲ ಬಂದಿದೆ. ಜೀವನದಲ್ಲಿ ಎರಡಕ್ಷರ ಹೇಳಿಕೊಟ್ಟ ಗುರುವನ್ನು ಕಂಡರೆ ಕೈಮುಗಿಯುವ ಬದಲು ಈಗ ಕೈ ಮಾಡುವ ಹಂತಕ್ಕೆ ನಾವು ಬಂದು ನಿಂತಿದ್ದೇವೆ ಎಂದರೆ ಎಂತಹ ದೌರ್ಭಾಗ್ಯ ನಮ್ಮದು!

VISTARANEWS.COM


on

Viral Video
Koo

ಬೆಂಗಳೂರು: ಬಹಳ ಹಿಂದಿನ ಕಾಲದಲ್ಲಿ ವಿದ್ಯೆ ಕಲಿಸುವ ಗುರುವನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ತಮ್ಮ ಜೀವನದಲ್ಲಿ ಗುರಿ ತಲುಪಲು ಸಹಾಯ ಮಾಡುವಂತಹ ಗುರುವಿಗೆ ಗೌರವನ್ನು ನೀಡುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳು (Viral Video) ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ಕೀಳಾಗಿ ಕಾಣುತ್ತಿದ್ದರೆ. ಇದನ್ನು ನೋಡಿದರೆ ನಮ್ಮ ಯುವಜನತೆ ಎಷ್ಟು ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂಬುದು ತಿಳಿಯುತ್ತದೆ.

ಇದಕ್ಕೆ ಸಾಕ್ಷಿಯಂಬಂತೆ ಉತ್ತರ ಕೆರೊಲಿನಾದ ವಿನ್ ಸ್ಟನ್ –ಸೇಲಂ ಹೈಸ್ಕೂಲ್ ನಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕಿಗೆ ತರಗತಿಯಲ್ಲಿಯೇ ಎರಡು ಬಾರಿ ಕಪಾಳಮೋಕ್ಷ ಮಾಡಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಹೀನಕೃತ್ಯಕ್ಕೆ ಕಾರಣನಾದ ವಿದ್ಯಾರ್ಥಿಯ ಹೆಸರು ಮಾತ್ರ ತಿಳಿದುಬಂದಿಲ್ಲ.

ಹದಿಹರೆಯದ ವಿದ್ಯಾರ್ಥಿ ತರಗತಿಯಲ್ಲಿ ಕುರ್ಚಿಯ ಮೇಲೆ ಕುಳಿತ ಶಿಕ್ಷಕಿಯ ಸಮೀಪ ಬಂದು ಆಕೆಯ ಕಪಾಳಕ್ಕೆ ರಪ್ಪೆಂದು ಹೊಡೆಯುತ್ತಿದ್ದ. ಆದರೆ ಶಿಕ್ಷಕಿ ವಿಚಲಿತಳಾಗದೆ ತನ್ನ ಮೇಲೆ ಯಾವುದೇ ಮೇಲೆ ಪರಿಣಾಮ ಬೀರಲಿಲ್ಲ ಎಂಬಂತೆ ಸುಮ್ಮನಿದ್ದರು. ಇಷ್ಟಕ್ಕೆ ಸುಮ್ಮನಾಗದ ವಿದ್ಯಾರ್ಥಿ ಮತ್ತೆ ಅವರ ಹತ್ತಿರ ಬಂದು ಕೈ ಎತ್ತಿ ಎರಡನೇ ಬಾರಿ ಕಪಾಳಕ್ಕೆ ಹೊಡೆದಿದ್ದಾನೆ. ಇದರಿಂದ ಅವಳ ಕನ್ನಡಕ ಕಳಚಿ ಬಿದ್ದಿದೆ. ವಿದ್ಯಾರ್ಥಿಯ ಈ ಘನ ಕಾರ್ಯಕ್ಕೆ ಉಳಿದ ವಿದ್ಯಾರ್ಥಿಗಳು ನಗುವುದು ಕಂಡುಬಂದಿದೆ. ಅಲ್ಲದೆ ವಿದ್ಯಾರ್ಥಿ ಶಿಕ್ಷಕಿಗೆ ಕೆಟ್ಟ ಪದಗಳನ್ನು ಬಳಸಿ ಬೈಯುತ್ತಿರುವುದು ಕಂಡುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯ ಮೇಲೆ ಹಲ್ಲೆ ಮತ್ತು ಬೆದರಿಕೆಯ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಯ ಈ ವರ್ತನೆಯನ್ನು ಶಾಲಾವರ್ಗದವರು ಖಂಡಿಸಿದ್ದಾರೆ. ಹಾಗೇ ಈ ಬಗ್ಗೆ ಮಾತನಾಡಿದ ಶೆರಿಫ್ ಬಾಬಿ ಎಫ್ ಕಿಂಬ್ರೋ ಜೂನಿಯರ್ ಅವರು, “ಈ ಘಟನೆಯು ಸಮುದಾಯ ಮತ್ತು ಸಮುದಾಯ ಸಂಸ್ಥೆಗಳಿಗೆ ಶೋಚನೀಯ ಮತ್ತು ಅತಿರೇಕದ ಕೃತ್ಯವಾಗಿದೆ ಎಂದು ನಾವೆಲ್ಲರೂ ಒಪ್ಪುತ್ತೇವೆ. ನಮಗೆ ಶಿಕ್ಷಣ ನೀಡುವವರ ಮೇಲೆ ಹಲ್ಲೆ ನಡೆದಾಗ ಸಹಿಸುವುದು ಹೇಗೆ?” ಎಂದು ಹೇಳಿದ್ದಾರೆ.

ಹಾಗೇ ಹೈಸ್ಕೂಲ್ ನ ಪ್ರಾಂಶುಪಾಲರಾದ ನೋಯೆಲ್ ಕೀನರ್ ಕೂಡ ಈ ಘಟನೆಯನ್ನುದ್ದೇಶಿಸಿ ಮಾತನಾಡಿ ವೈರಲ್ ಆದ ವಿಡಿಯೊ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಹಾಗೂ ಶಾಲೆಯಲ್ಲಿ ಶಿಸ್ತು ಕ್ರಮಗಳನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Kangana Ranaut: ವಿಶೇಷ ಗೆಟಪ್ ನಲ್ಲಿ ಮತದಾರರ ಸೆಳೆಯುತ್ತಿರುವ ಕಂಗನಾ ರಣಾವತ್

ಈ ಘಟನೆಗೆ ಪ್ರತಿಕ್ರಿಯಿಸಿದ ವಿನ್ ಸ್ಟನ್ –ಸೇಲಂ/ಫೋರ್ಸಿತ್ ಕೌಂಟಿ ಶಾಲೆಗಳ ಅಧೀಕ್ಷಕ ಟ್ರಿಸಿಯಾ ಮ್ಯಾಕ್ ಮಾನಸ್, ”ಈ ನಡವಳಿಕೆಯನ್ನು ಸಹಿಸಲಾಗುವುದಿಲ್ಲ. ವಿನ್ ಸ್ಟನ್ –ಸೇಲಂ/ಫೋರ್ಸಿತ್ ಕೌಂಟಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಕೈ ಎತ್ತುವುದನ್ನು ಯಾವುದೇ ಸಮಯದಲ್ಲಿ ಒಪ್ಪಿಕೊಳ್ಳಲಾಗುವುದಿಲ್ಲ. ಹಾಗಾಗಿ ಈಗ ನನ್ನ ಗಮನ ನಮ್ಮ ಶಿಕ್ಷಕರನ್ನು ನೋಡಿಕೊಳ್ಳುವುದಾಗಿದೆ. ಈ ಘಟನೆಯ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದರು.

Continue Reading
Advertisement
Fact Check
Fact Check5 mins ago

Fact Check: ಮತದಾನ ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ? ವಾಸ್ತವ ಹೀಗಿದೆ

Paris Olympics 2024
ಕ್ರೀಡೆ17 mins ago

Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು

Fraud Case
ಬೆಂಗಳೂರು31 mins ago

Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

Food poisoning 45 people fall ill after consuming drink buttermilk
ತುಮಕೂರು56 mins ago

Food poisoning: ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ

Unblock A Kitchen Sink
ಲೈಫ್‌ಸ್ಟೈಲ್57 mins ago

Unblock A Kitchen Sink: ನಿಮ್ಮ ಅಡುಗೆ ಮನೆಯ ಸಿಂಕ್‌ ಆಗಾಗ ಬ್ಲಾಕ್ ಆಗುತ್ತದೆಯೆ? ಇಲ್ಲಿದೆ ಸರಳ ಉಪಾಯ

Mahua Moitra
ದೇಶ58 mins ago

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Best Airport
ಪ್ರಮುಖ ಸುದ್ದಿ58 mins ago

Best Airport: ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳ ಪಟ್ಟಿ; ಸಿಂಗಾಪುರದ ಚಾಂಗಿಯನ್ನು ಹಿಂದಿಕ್ಕಿದ ದೋಹಾದ ಹಮದ್

IPL 2024
ಕ್ರೀಡೆ1 hour ago

IPL 2024: ಕಾನ್ವೆ ಬದಲಿಗೆ ಚೆನ್ನೈ ತಂಡ ಸೇರ್ಪಡೆಗೊಂಡ ರಿಚರ್ಡ್ ಗ್ಲೀಸನ್

Viral News
ವೈರಲ್ ನ್ಯೂಸ್1 hour ago

Viral News: ಬಿಕಿನಿ ಧರಿಸಿ ಬಸ್‌ ಏರಿದ ಮಹಿಳೆಯಿಂದ ಅಸಭ್ಯ ವರ್ತನೆ: ಬೆಚ್ಚಿಬಿದ್ದ ಪ್ರಯಾಣಿಕರು; ಇಲ್ಲಿದೆ ವಿಡಿಯೊ

Lok sabha election 2024
ದೇಶ2 hours ago

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌