Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌ - Vistara News

ವೈರಲ್ ನ್ಯೂಸ್

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

Viral Video: ತಲ್ರೋ ಗಾರ್ಡನ್‌ ಬಳಿ ವಾಹನವೊಂದು ಏಕಾಏಕಿ ಕಟ್ಟಡಕ್ಕೆ ಗುದ್ದಿತ್ತು. ಅದರಲ್ಲಿದ್ದ ದುಷ್ಕರ್ಮಿ ಕೆಳಗಿಳಿದು ಕೈಯಲ್ಲಿ ಕತ್ತಿ ಹಿಡಿದುಕೊಂದು ಓಡಾಡುತ್ತಿದ್ದ. ಬಳಿಕ ಇದ್ದಕ್ಕಿದ್ದಂತೆ ಸಿಕ್ಕ ಸಿಕ್ಕವರ ಮೇಲೆ ಕತ್ತಿಯಿಂದ ದಾಳಿ ನಡೆಸಲು ಆರಂಭಿಸಿದ್ದ. ಎದುರಿಗೆ ಸಿಕ್ಕಿದ್ದ 14 ವರ್ಷದ ಬಾಲಕ ಸೇರಿದಂತೆ ಒಟ್ಟು ಐವರ ಮೇಲೆ ಕತ್ತಿಯಿಂದ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು

VISTARANEWS.COM


on

Viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ(Stabbed) ನಡೆಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಂಡನ್‌(London)ನ ಹೈನಾಲ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. 36 ವರ್ಷದ ಆರೋಪಿ ಏಕಾಏಕಿ ಚಾಕು ದಾಳಿ ನಡೆಸಿ ಎಸ್ಕೇಪ್‌ ಆಗೋಕೆ ಯತ್ನಿಸುತ್ತಿರುವಾಗಲೇ ಆತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

22 ಸೆಕೆಂಡ್ಸ್‌ ವಿಡಿಯೋದಲ್ಲಿ ಕೃತ್ಯದ ಬಳಿಕ ಓಡಿ ಹೋಗಲು ಯತ್ನಿಸುತ್ತಿದ್ದ ಹಳದಿ ಬಣ್ಣದ ಜ್ಯಾಕೆಟ್‌ ತೊಟ್ಟಿದ್ದ ದುಷ್ಕರ್ಮಿ ಬಳಿ ಮಹಿಳಾ ಪೊಲೀಸ್‌ ಸಿಬ್ಬಂದಿ ಪಿಸ್ತೂಲ್‌ ಹಿಡಿದು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕೆಲವು ನಿಮಿಷಗಳ ಬಳಿ ಆರು ಜನ ಪೊಲೀಸರು ಆತನನ್ನು ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಕೃತ್ಯಕ್ಕೂ ಮುನ್ನ ಆತನ ವಾಹನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು, ಆತನಿಗೆ ಸ್ವಲ್ಪ ಮಟ್ಟ ಗಾಯಗಳಾಗಿವೆ. ಹೀಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವಿವರ:

ತಲ್ರೋ ಗಾರ್ಡನ್‌ ಬಳಿ ವಾಹನವೊಂದು ಏಕಾಏಕಿ ಕಟ್ಟಡಕ್ಕೆ ಗುದ್ದಿತ್ತು. ಅದರಲ್ಲಿದ್ದ ದುಷ್ಕರ್ಮಿ ಕೆಳಗಿಳಿದು ಕೈಯಲ್ಲಿ ಕತ್ತಿ ಹಿಡಿದುಕೊಂದು ಓಡಾಡುತ್ತಿದ್ದ. ಬಳಿಕ ಇದ್ದಕ್ಕಿದ್ದಂತೆ ಸಿಕ್ಕ ಸಿಕ್ಕವರ ಮೇಲೆ ಕತ್ತಿಯಿಂದ ದಾಳಿ ನಡೆಸಲು ಆರಂಭಿಸಿದ್ದ. ಎದುರಿಗೆ ಸಿಕ್ಕಿದ್ದ 14 ವರ್ಷದ ಬಾಲಕ ಸೇರಿದಂತೆ ಒಟ್ಟು ಐವರ ಮೇಲೆ ಕತ್ತಿಯಿಂದ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಆರೋಪಿ ಯಾವುದಾದರೂ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದಾನೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸಿದ್ದು, ಆ ಅನುಮಾನ ಸುಳ್ಳಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Godrej Group: ಶತಮಾನದ ಇತಿಹಾಸ ಹೊಂದಿರುವ ಗೋದ್ರೇಜ್‌ ಗ್ರೂಪ್‌ ಇಬ್ಬಾಗ; ಎರಡು ಕುಟುಂಬಗಳಲ್ಲಿ ಆಡಳಿತ ವಿಭಜನೆ

ಕಿಂಗ್‌ ಚಾರ್ಲ್ಸ್‌, ರಿಷಿ ಸುನಕ್‌ ಖಂಡನೆ

ಇನ್ನು ಘಟನೆಗೆ ಬ್ರಿಟನ್‌ ರಾಜ ಚಾರ್ಲ್ಸ್‌, ಪ್ರಧಾನಿ ರಿಷಿ ಸುನಕ್‌ ಖಂಡನೆ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಬಾಲಕ ಕುಟುಂಬಕ್ಕೆ ಸಾಂತ್ವನ ಹೇಳಿರುವ ಚಾರ್ಲ್ಸ್‌, ಮೃತ ಬಾಲಕನ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ದಿಟ್ಟತನ ತೋರಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರನ್ನು ಶ್ಲಾಘಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನು ಇದೊಂದು ಆಘಾತಕಾರಿ ಘಟನೆ ಎಂದು ಕರೆದಿರುವ ರಿಷಿ ಸುನಕ್‌, ಇಂಥಹ ಘಟನೆಗಳು ದೇಶದಲ್ಲಿ ನಡೆಯಬಾರದು. ಮೃತ ಹಾಗೂ ಗಾಯಾಳುಗಳ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಪೊಲೀಸರನ್ನೂ ನಾನು ಪ್ರಶಂಸಿಸುತ್ತೇನೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

Viral Video:ಬೂದು ಬಣ್ಣದ ಈ ಗಿಳಿ ಜೊತೆಗಿದ್ದ ವ್ಯಕ್ತಿ ಹೇಳಿದ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸುವುದನ್ನು ಕಾಣಬಹುದಾಗಿದೆ. ಮೈಕ್‌ ನಲ್ಲಿ ಮಾತನಾಡನಾಡುವ ಗಿಳಿ ವಿವಿಧ ಶಬ್ಧಗಳನ್ನು ಮಾಡುತ್ತದೆ. ಇನ್ನು ಸ್ವತಃ ತಾನೇ ಮೈಕ್‌ ಅನ್ನು ಎಳೆದು ಮಾತನಾಡುವುದು ವಿಶೇಷವಾಗಿ ಗಮನಸೆಳೆಯುತ್ತದೆ. ಇನ್‌ಸ್ಟಾಗ್ರಾಂನಲ್ಲಿ ಈ ವಿಡಿಯೋವನ್ನು @birdslover212 ಎಂಬವರು ಶೇರ್‌ ಮಾಡಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Viral Video
Koo

ನವದೆಹಲಿ: ಈಗ ಪ್ರಾಣಿ-ಪಕ್ಷಿಗಳು ಮನುಷ್ಯರಿಗಿಂತ ಹೆಚ್ಚು ಟ್ಯಾಲೆಂಟೆಡ್‌ ಆಗಿರುತ್ತವೆ. ಸಾಮಾನ್ಯವಾಗಿ ನಾಯಿ, ಬೆಕ್ಕು, ಪಾಂಡಾ ಹೀಗೆ ಕೆಲವು ಪ್ರಾಣಿಗಳು ತಮ್ಮ ವಿಶೇಷ ಕಲೆ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿರುತ್ತವೆ.ಇದೀಗ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ. ಈ ವಿಡಿಯೋದಲ್ಲಿ ಗಿಣಿ(Parrot)ಯೊಂದು ಇಂಗ್ಲಿಷ್‌ನಲ್ಲಿ ಮಾತನಾಡೋದು ಮಾತ್ರ ಅಲ್ಲ, ಬೇರೆ ಬೇರೆ ಶಬ್ದಗಳನ್ನು ಮಿಮಿಕ್ರಿಯನ್ನೂ ಮಾಡುವುದನ್ನು ಕಾಣಬಹುದಾಗಿದೆ.

ಬೂದು ಬಣ್ಣದ ಈ ಗಿಳಿ ಜೊತೆಗಿದ್ದ ವ್ಯಕ್ತಿ ಹೇಳಿದ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸುವುದನ್ನು ಕಾಣಬಹುದಾಗಿದೆ. ಮೈಕ್‌ ನಲ್ಲಿ ಮಾತನಾಡನಾಡುವ ಗಿಳಿ ವಿವಿಧ ಶಬ್ಧಗಳನ್ನು ಮಾಡುತ್ತದೆ. ಇನ್ನು ಸ್ವತಃ ತಾನೇ ಮೈಕ್‌ ಅನ್ನು ಎಳೆದು ಮಾತನಾಡುವುದು ವಿಶೇಷವಾಗಿ ಗಮನಸೆಳೆಯುತ್ತದೆ. ಇನ್‌ಸ್ಟಾಗ್ರಾಂನಲ್ಲಿ ಈ ವಿಡಿಯೋವನ್ನು @birdslover212 ಎಂಬವರು ಶೇರ್‌ ಮಾಡಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಎಂಥಾ ಅಮೇಜಿಂಗ್‌ ಸಂಗತಿ ಎಂದು ಬರೆದುಕೊಂಡಿದ್ದಾರೆ.

ಈ ಗಿಣಿಯ ವಿಶೇಷತೆ ಏನು?

ಕಾಗೆ, ರಾವೆನ್‌ ಮತ್ತು ಜೇ ಹಕ್ಕಿಗಳಂತೆ ಬುದ್ಧಿವಂತ ಪಕ್ಷಿ ಆಫ್ರಿಕಾದ ಬೂದು ಬಣ್ಣದ ಗಿಳಿ. ಇದರ ವೈಜ್ಞಾನಿಕ ಹೆಸರು ಪಿಟ್ಟಾಕಸ್‌ ಎರಿಥಕಸ್‌ (95112005 61118605). ಆಫ್ರಿಕಾದಲ್ಲಿರುವ ಈ ಗಿಳಿ ಮಾತ್ರ ಬೂದು ಬಣ್ಣದಲ್ಲಿರುತ್ತದೆ. ಇದರಲ್ಲಿ ಈವರೆಗೆ ಎರಡು ತಳಿಗಳನ್ನು ಗುರುತಿಸಲಾಗಿದೆ. ಅವೆಂದರೆ ಕಾಂಗೊ ಆಫ್ರಿಕನ್‌ ಗ್ರೇ ಮತ್ತು
ಟಮ್‌ನೆ ಅಪ್ರಿಕನ್‌ ಗ್ರೇ. ಇದರ ದೇಹವು ಬೂದು ಬಣ್ಣದ ಗರಿಗಳಿಂದ ಅವೃತವಾಗಿರುತ್ತದೆ. ಇದರ ರೆಕ್ಕೆಗಳೂ ಕಪ್ಪು
ಮಿಶ್ರಿತ ಬೂದು ಬಣ್ಣದಲ್ಲಿ ಇರುತ್ತವೆ. ಬಾಲದ ಪುಕ್ಕಗಳು ಕೆಂಪು ಬಣ್ಣದಲ್ಲಿರುತ್ತವೆ. ಬಾಗಿದ ಕೊಕ್ಕು, ಹಳದಿ ಬಣ್ಣದ
ಕಣ್ಣಾಲಿಗಳನ್ನು ಹೊಂದಿರುತ್ತದೆ. ಆಫ್ರಿಕಾ ದೇಶಗಳ ಅರಣ್ಯಗಳು, ಹುಲ್ಲುಗಾವಲು, ಕೃಷಿ ಭೂಮಿ ಪ್ರದೇಶಗಳಲ್ಲಿ ಇದರ ಸಂತತಿ ವಿಸ್ತರಿಸಿದೆ.

ಇದನ್ನೂ ಓದಿ: Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

ಸಾಮಾನ್ಯವಾಗಿ ಈ ಗಿಳಿಗಳು ಮಾನವ ದ್ವನಿಯನ್ನು ಅನುಕರಿಸಬಲ್ಲವು. ಈ ಗಿಳಿ ಕೂಡಾ ಸಣ್ಣಪದ ಹಾಗೂ ಸರಳ
ವಾಕ್ಕಗಳನ್ನು ನುಡಿಯಬಲ್ಲದು. ಇದು ಒಂಟಿಯಾಗಿ ಜೀವಿಸಲು ಇಷ್ಟಪಡುತ್ತದೆ. ಇತರೆ ಪಕ್ಷಿಗಳಿಗೆ ಹೋಲಿಸಿದರೆ ಇದರ ಜೀವಿತಾವಧಿ ಸುದೀರ್ಘವಾಗಿರುತ್ತದೆ. ತಳಿಗಳಲ್ಲಿ ಅತಿ ಚಾಣಾಕ್ಷ ಪಕ್ಷಿ ಎಂದು ಇದನ್ನು ಪರಿಗಣಿಸಲಾಗಿದೆ. ಮನುಷ್ಯರ ಮಾತುಗಳನ್ನು ಅರ್ಥಮಾಡಿಕೊಳ್ಳುವ, ದ್ವನಿಯನ್ನು ಅನುಕರಿಸುವ ಸಾಮರ್ಥ್ಯವನ್ನು ಹೊಂದಿದೆ.ಕೆಲವು
ಗಿಳಿಗಳು ವಸ್ತುಗಳನ್ನು ಗುರುತಿಸುವ, ವಿವರಿಸುವ ಹಾಗೂ ಎಣಿಸುವ ಸಾಮರ್ಥ್ಯವನ್ನೂ ಹೊಂದಿರುವುದು ವಿಶೇಷ.

Continue Reading

ವೈರಲ್ ನ್ಯೂಸ್

Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Viral Video: ನೂತನ ಜೋಡಿ ಜೊತೆಗೆ ಫೋಟೋ ತೆಗೆಸಿಕೊಳ್ಳಲೆಂದು ವೇದಿಕೆಗೆ ಬಂದಿದ ಮಾಜಿ ಪ್ರಿಯಕರ ಏಕಾಏಕಿ ವರನ ಮೇಲೆ ಹಲ್ಲೆ ನಡೆಸುತ್ತಾನೆ. ಮೂಖಾಮೂತಿ ನೋಡದೇ ವರನನ್ನು ಚಚ್ಚಿದ ಆ ಯುವಕನನ್ನು ಕಂಡು ಒಂದು ಕ್ಷಣಕ್ಕೆ ಎಲ್ಲರು ಗರ ಬಡಿದಂತೆ ನಿಂತಿದ್ದರು. ತಕ್ಷಣ ವಧು ಹಾಗೂ ಸಂಬಂಧಿಕರು ವರನನ್ನು ರಕ್ಷಿಸಲು ಪ್ರಯತ್ನಿಸುತ್ತಾರೆ.

VISTARANEWS.COM


on

Viral Video
Koo

ರಾಜಸ್ಥಾನ: ಸಾಮಾನ್ಯವಾಗಿ ಟಿವಿ ಸೀರಿಯಲ್‌ಗಳಲ್ಲಿ ತ್ರಿಕೋನ ಪ್ರೇಮಕಥೆಗಳು, ಇನ್ನೇನು ತಾಳಿ ಕಟ್ಟಬೇಕೆನ್ನುವ ವೇಳೆ ಮಾಜಿ ಪ್ರೇಯಸಿಯೋ ಅಥವಾ ಪ್ರಿಯಕರನೋ ಬಂದು ಮದುವೆ ನಿಲ್ಲಿಸೋದು ಹೀಗೆ ಚಿತ್ರ ವಿಚಿತ್ರ ಹೈಡ್ರಾಮಾಗಳನ್ನು ನೋಡಿರ್ತೇವೆ. ಇಂತಹದ್ದೇ ಒಂದು ಘಟನೆ ಇದೀಗ ರಾಜಸ್ಥಾನ(Rajasthan)ದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಮದುವೆಗೆ ಹೋಗಿ ದಾಂಧಲೆ ಎಬ್ಬಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದ್ದು, ಹಲವು ರೀತಿಯಲ್ಲಿ ಕಮೆಂಟ್‌ಗಳು ಬಂದಿವೆ.

ವೈರಲ್‌ ವಿಡಿಯೋದಲ್ಲಿ ಏನಿದೆ?

ಘರ್‌ ಕೇ ಕಲೇಶ್‌ ಎಂಬ ಸೋಶಿಯಲ್‌ ಮೀಡಿಯಾ ಹ್ಯಾಂಡ್ಲರ್‌ ಈ ವಿಡಿಯೋ ಶೇರ್‌ ಮಾಡಿದ್ದು, ಮದುವೆಯಲ್ಲಿ ಬಾಲಿವುಡ್‌ ಸಿನಿಮಾದಂತಹ ಟ್ವಿಸ್ಟ್‌ ಎಂದು ಬರೆದುಕೊಂಡಿದ್ದಾರೆ. ನೂತನ ಜೋಡಿ ಜೊತೆಗೆ ಫೋಟೋ ತೆಗೆಸಿಕೊಳ್ಳಲೆಂದು ವೇದಿಕೆಗೆ ಬಂದಿದ ಮಾಜಿ ಪ್ರಿಯಕರ ಏಕಾಏಕಿ ವರನ ಮೇಲೆ ಹಲ್ಲೆ ನಡೆಸುತ್ತಾನೆ. ಮೂಖಾಮೂತಿ ನೋಡದೇ ವರನನ್ನು ಚಚ್ಚಿದ ಆ ಯುವಕನನ್ನು ಕಂಡು ಒಂದು ಕ್ಷಣಕ್ಕೆ ಎಲ್ಲರು ಗರ ಬಡಿದಂತೆ ನಿಂತಿದ್ದರು. ತಕ್ಷಣ ವಧು ಹಾಗೂ ಸಂಬಂಧಿಕರು ವರನನ್ನು ರಕ್ಷಿಸಲು ಪ್ರಯತ್ನಿಸುತ್ತಾರೆ.

ಈ ವಿಡಿಯೋ ಸಾಮಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ. ಬಾಯ್‌ಫ್ರೆಂಡ್‌ ಮತ್ತು ವರನ ನಡುವೆ ಕಬೀರ್‌ ಸಿಂಗ್‌ನಂತಹ ಜಗಳ ರಾಜಸ್ಥಾನ ಬಿಲ್ವಾರಾದಲ್ಲಿ ಮದುವೆ ವೇದಿಕೆಯಲ್ಲಿ ನಡೆದಿದೆ ಎಂಬ ಬರಹದೊಂದಿಗೆ ಈ ವಿಡಿಯೋ ಶೇರ್‌ ಮಾಡಲಾಗಿದೆ. ಕೆಲವರು ಆ ವ್ಯಕ್ತಿಯನ್ನು ಹೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಇದೇ ರೀತಿಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು. ಮದುವೆ ಮಂಟಪದಲ್ಲೇ ವರನಿಗಾಗಿ ಇಬ್ಬರು ಯುವತಿಯರ ನಡುವೆ ಮಾರಾಮಾರಿ ನಡೆದಿದ್ದು, ಈ ಫೈಟ್‌ ಯಾವ WWFಗೂ ಕಡಿಮೆಯಿಲ್ಲ. ಈ ವೈರಲ್‌(Viral Video) ಆಗಿರುವ ವಿಡಿಯೋಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡಿದ್ದರು.

ಅನಿತಾ ಸುರೇಶ್‌ ಶರ್ಮಾ ಎಂಬ ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ಈ ವಿಡಿಯೋ ಹಂಚಿಕೊಂಡಿದ್ದು, ಇಬ್ಬರು ಯುವತಿಯರು ವೇದಿಕೆಯಲ್ಲೇ ಯುವಕನಿಗಾಗಿ ಹೊಡೆದಾಟ ನಡೆಸಿದ್ದಾರೆ. ಇಲ್ಲಿ ಮಧು ಮತ್ತು ವರನ ಪ್ರೇಯಸಿ ನಡುವೆ ಮಾರಾಮಾರಿ ನಡೆದಿದೆ. ಒಬ್ಬರನೊಬ್ಬರು ಬೈದಾಡಿಕೊಂಡು ಇಬ್ಬರು ಜುಟ್ಟು ಹಿಡಿ ಹೊಡೆದಾಟ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಯುವಕ ಇನ್ನೇನು ತಾಳಿ ಕಟ್ಟಬೇಕೆನ್ನುವ ಹೊತ್ತಲ್ಲಿ ಮದುವೆ ಮಂಟಪಕ್ಕೆ ಬಂದಿದ್ದ ಆತನ ಪ್ರೇಯಸಿ ತಕರಾರು ಮಾಡಿದ್ದಾಳೆ. ಆಗ ವೇದಿಕೆಯಲ್ಲಿದ್ದ ವಧು ಕೂಡ ಆಕೆಯ ಜೊತೆ ಜಗಳಕ್ಕಿಳಿದಿದ್ದಾಳೆ. ಇನ್ನು ಇಬ್ಬರು ಯುವತಿಯರೂ ಕೆಂಪು ಬಣ್ಣ ಮದುವೆ ಲೆಹಂಗಾ ತೊಟ್ಟಿದ್ದು, ಎಲ್ಲರೆದುರೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ನಡುವಲ್ಲಿದ್ದ ವರ ಇಬ್ಬರನ್ನೂ ತಡೆಯಲು ಪ್ರಯತ್ನಿಸಿದ್ದನಾದರೂ ಯುವತಿಯರಿಬ್ಬರು ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳಲೇ ಇಲ್ಲ. ಇನ್ನು ಮದುವೆ ಆಗಮಿಸಿದ ಅತಿಥಿಗಳಲ್ಲಿ ಒಬ್ಬರು ಈ ಘಟನೆ ವಿಡಿಯೋ ಮಾಡಿದ್ದು, ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಐದು ದಿನಗಳ ಹಿಂದೆ ಇನ್‌ಸ್ಟಾ ಗ್ರಾಂನಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, 1ಲಕ್ಷಕ್ಕೂ ಅಧಿಕ ಲೈಕ್ಸ್‌ ಬಂದಿದೆ.

ಇದನ್ನೂ ಓದಿ: Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Continue Reading

ಕೊಡಗು

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Love Case : ಮಗಳನ್ನು ಪ್ರೀತಿಸುತ್ತಿದ್ದ ಯುವಕ ಮನೆಗೆ ಬಂದಿದ್ದಕ್ಕೆ ಮುಖಕ್ಕೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಸುಟ್ಟ ಗಾಯಗಳಿಂದ ಯುವ ಪ್ರೇಮಿ ಆಸ್ಪತ್ರೆ ಪಾಲಾಗಿದ್ದಾನೆ.

VISTARANEWS.COM


on

By

Love Case Father throws hot water on man who loved his daughter for coming home
Koo

ಕೊಡಗು: ಮಗಳನ್ನು ಪ್ರೀತಿಸುತ್ತಿದ್ದ (Love Case) ಯುವಕನಿಗೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಘಟನೆ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ.

ಸುಹೇಲ್‌ಗೆ ಮದೆನಾಡಿನ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರು ಕೈ-ಕೈ ಹಿಡಿದು ಊರೆಲ್ಲ ಓಡಾಡಿದ್ದರು. ಇವರಿಬ್ಬರ ಪ್ರೀತಿ ವಿಚಾರವು ಯುವತಿ ಮನೆಯವರಿಗೆ ತಿಳಿದುಹೋಗಿತ್ತು. ಇವರಿಬ್ಬರ ಪ್ರೀತಿಗೆ ನಿರಾಕರಿಸಿದ್ದರು. ಇತ್ತ ಯುವತಿ ಸುಹೇಲ್‌ಗೆ ಫೋನ್‌ ಮಾಡಿ ಮನೆಯಲ್ಲಿ ಹಿಂಸೆಯಾಗುತ್ತಿದೆ. ಮನೆಗೆ ಬಂದು ನನ್ನನ್ನು ಕರೆದುಕೊಂಡು ಹೋಗು ಎಂದಿದ್ದಾಳೆ.

ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್‌ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್‌ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತ ಕುದಿಯುತ್ತಿದ್ದ ನೀರನ್ನು ಎರಚಿದ್ದಾರೆ. ಬಿಸಿ ನೀರು ಎರಚಿದ್ದರಿಂದ ಸುಹೇಲ್‌ನ ಮುಖ ಹಾಗೂ ಕುತ್ತಿಗೆ ಭಾಗವೆಲ್ಲ ಸುಟ್ಟು ಹೋಗಿದೆ.

ಸದ್ಯ ಸುಹೇಲ್‌ಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಾಶತ್‌ ಸುಹೇಲ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಟ್ಟುಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸದ್ಯ ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌

ಉತ್ತರಪ್ರದೇಶ: ಸೊಸೆ ಮೇಲೆ ಅತ್ತೆ ಮತ್ತು ನಾದಿನಿ ಸೇರಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಇಟಾ ಪ್ರದೇಶದಲ್ಲಿ ನಡೆದಿದೆ. ವಿಚಿತ್ರವೆಂದರೆ ಮಹಿಳೆಯ ಪತಿ, ತನ್ನ ತಾಯಿ ಮತ್ತು ತಂಗಿಯನ್ನು ತಡೆಯುವ ಬದಲು ವಿಡಿಯೋ ರೆಕಾರ್ಡ್‌(Video record) ಮಾಡಿದ್ದಾನೆ. ಬಿಟ್ಟು ಬಿಡುವಂತೆ ಎಷ್ಟೇ ಗೋಗರೆದರೂ ಕೇಳದೆ ಮಹಿಳೆ ಮೇಲೆ ಬಹಳ ಕ್ರೂರವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಇಟಾದಲ್ಲಿ ಈ ಘಟನೆ ನಡೆದಿದ್ದು, ಸೊಸೆಯನ್ನು ಅತ್ತೆ ಮತ್ತು ನಾದಿನಿ ಸೇರಿಕೊಂಡು ಚೆನ್ನಾಗಿ ಥಳಿಸಿದ್ದು, ಬಳಿಕ ಆಕೆಯನ್ನು ನೆಲದಲ್ಲಿ ಎಳೆದಾಡಿದ್ದಾರೆ. ಅಲ್ಲೇ ಇದ್ದ ಪತಿ ಮತ್ತು ಮಾವನ ಬಳಿ ಸಹಾಯಕ್ಕಾಗಿ ಆಕೆ ಎಷ್ಟೇ ಅಂಗಲಾಚಿದರೂ ಆಕೆ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ಹಲ್ಲೆ ಮಾತ್ರ ನಿಲ್ಲುವುದೇ ಇಲ್ಲ. ಮಹಿಳೆಯ ಜೋರಾಗಿ ಕಿರುಚಿಕೊಂಡು ಬಿಟ್ಟು ಬಿಡಿ ಎಂದು ಬೇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಕೈಹಿಡಿದು ರಕ್ಷಿಸಬೇಕಿದ್ದ ಪತಿಯೇ ಆಕೆಯ ಸಹಾಯಕ್ಕೆ ಬಾರದೇ ಬರೀ ವಿಡಿಯೋ ಮಾಡುತ್ತಾ ನಿಂತಿದ್ದ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ. ಇಂತಹ ಕ್ರೂರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೊಲೀಸರು ಸ್ವಯಂಪ್ರೇರಿತರಾಗಿ ದೂರ ದಾಖಲಿಸಿಕೊಂಡು ಆರೋಪಿಗಳನ್ನು ತಕ್ಷಣ ಅರೆಸ್ಟ್‌ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Viral Video: ತೆಲಂಗಾಣದ ಪೆಟ್ರೋಲ್‌ ಬಂಕ್‌ನಲ್ಲಿ ಲಾರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕೂಡಲೇ ಸಿಬ್ಬಂದಿ ಏಕಾಂಗಿಯಾಗಿ ನಂದಿಸಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸಿಬ್ಬಂದಿಯ ಸಮಯೋಚಿತ ನಿರ್ಧಾರವನ್ನು, ಧೈರ್ಯವನ್ನು ಹಲವರು ಮುಕ್ತಕಂಠದಿಂದ ಹೊಗಳಿದ್ದಾರೆ. ಈತನೇ ನಿಜವಾದ ಹೀರೋ ಎಂದು ಅನೇಕರು ಶ್ಲಾಘಿಸಿದ್ದಾರೆ.

VISTARANEWS.COM


on

Viral Video
Koo

ಹೈದರಾಬಾದ್‌: ದೇಶದಲ್ಲಿ ತಾಪಮಾನ ಹೆಚ್ಚಾಗುತ್ತಿದೆ. ಇತ್ತೀಚೆಗೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ತಾಪಮಾನ ಗಣನೀಯವಾಗಿ ಕಡಿಮೆಯಾಗುತ್ತಿಲ್ಲ. ಅತ್ಯಧಿಕ ಉಷ್ಣಾಂಶದ ಕಾರಣದಿಂದ ದೇಶದ ಹಲವೆಡೆ ನಿಲ್ಲಿಸಿದ್ದ, ಚಲಿಸುತ್ತಿರುವ ವಾಹನಗಳು ಬೆಂಕಿಗಾಹುತಿಯಾಗುವ ಘಟನೆ ಪದೇ ಪದೆ ಘಟಿಸುತ್ತಲೇ ಇದೆ. ಸದ್ಯ ಅಂತಹದ್ದೇ ಒಂದು ದುರಂತ ತೆಲಂಗಾಣದಲ್ಲಿ ನಡೆದಿದ್ದು, ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬರ ಸಮಯಪ್ರಜ್ಞೆಯಿಂದ ಬಹು ದೊಡ್ಡ ಅನಾಹುತವೊಂದು ತಪ್ಪಿದೆ. ಸಿಬ್ಬಂದಿ ಬೆಂಕಿ ನಂದಿಸಲು ಏಕಾಂಗಿಯಾಗಿ ನಡೆಸುತ್ತಿರುವ ಪ್ರಯತ್ನ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸದ್ಯ ವೈರಲ್‌ ಆಗಿದೆ (Viral Video).

ತೆಲಂಗಾಣದ ಯಾದಾದ್ರಿ ಭುವನಗಿರಿಯ ಉಪನಗರದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಇಂಧನ ಹಾಕಿಸಿಕೊಳ್ಳಲು ಟ್ರಕ್ಕೊಂದು ಪೆಟ್ರೋಲ್‌ ಬಂಕ್‌ ಪ್ರವೇಶಿಸುತ್ತದೆ. ಬಿಸಿಲಿನ ಝಳಕ್ಕೆ ಇದ್ದಕ್ಕಿದ್ದಂತೆ ಟ್ರಕ್‌ನ ಇಂಧನ ಟ್ಯಾಂಕ್‌ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಳ್ಳುತ್ತದೆ. ಚಾಲಕ ಮತ್ತು ನಿರ್ವಾಹಕ ಕೂಡಲೇ ಟ್ರಕ್‌ನಿಂದ ಜಿಗಿದು ಪಾರಾಗುತ್ತಾರೆ.

ಸ್ಫೋಟದ ಶಬ್ದಕ್ಕೆ ಎಲ್ಲರೂ ದಂಗಾಗಿ ನಿಲ್ಲುತ್ತಾರೆ. ಈ ವೇಳೆ ಕೂಡಲೆ ಎಚ್ಚೆತ್ತುಕೊಳ್ಳುವ ಪೆಟ್ರೋಲ್‌ ಬಂಕ್‌ ಸಿಬ್ಬಂದಿಯೋರ್ವರು ಧೈರ್ಯದಿಂದ ಮುನ್ನುಗ್ಗಿ ಅಗ್ನಿಶಾಮಕ ಯಂತ್ರ (Fire extinguisher)ವನ್ನು ಹಿಡಿದು ಉರಿಯುತ್ತಿರುವ ಟ್ರಕ್ ಕಡೆಗೆ ಧಾವಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಾರೆ.

ಅವರ ಆರಂಭಿಕ ಪ್ರಯತ್ನಗಳ ಹೊರತಾಗಿಯೂ, ಅಗ್ನಿಶಾಮಕ ಸಿಲಿಂಡರ್ ಖಾಲಿಯಾದ ನಂತರ ಬೆಂಕಿ ಮತ್ತೆ ಹೊತ್ತಿಕೊಂಡಿತು. ಕೂಡಲೇ ಅವರು ಮತ್ತೊಂದು ಅಗ್ನಿಶಾಮಕವನ್ನು ತಂದು ಬೆಂಕಿಯನ್ನು ನಿಯಂತ್ರಿಸುವ ಸಾಹಸವನ್ನು ಮುಂದುವರಿಸಿದರು. ಅವರ ಧೈರ್ಯದಿಂದ ಪ್ರೇರಿತರಾಗಿ ಬಂಕ್‌ನಲ್ಲಿದ್ದ ಇತರರು ಸಹ ಕೈ ಜೋಡಿಸತೊಡಗಿದರು. ಎಲ್ಲರ ಪ್ರಯತ್ನದ ಫಲವಾಗಿ, ಸತತ ಹೋರಾಟದ ನಂತರ ಬೆಂಕಿ ನಿಯಂತ್ರಣಕ್ಕೆ ಬಂತು. ಈ ಮೂಲಕ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿತು. ಅದು ಪೆಟ್ರೋಲ್‌ ಬಂಕ್‌ ಆಗಿರುವ ಕಾರಣ ತುಸು ಹೆಚ್ಚು ಕಡಿಮೆಯಾಗಿದ್ದರೂ ಬಹು ದೊಡ್ಡ ಸ್ಫೋಟ ಸಂಭವಿಸುವ ಸಾಧ್ಯತೆ ಇತ್ತು. ಸಿಬ್ಬಂದಿಯ ಸಮಯೋಚಿತ ಕಾರ್ಯದಿಂದಾಗಿ ಆಪತ್ತು ಕೂದಲೆಳೆ ಅಂತರದಲ್ಲಿ ತಪ್ಪಿತು.

ನೆಟ್ಟಿಗರಿಂದ ಮೆಚ್ಚುಗೆ

ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಅಪ್‌ಲೋಡ್‌ ಅದ ಕೆಲವೇ ಕ್ಷಣಗಳಲ್ಲಿ ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಹಲವು ಲೈಕ್‌ ಬಟನ್‌ ಒತ್ತಿದರೆ ಇನ್ನು ಕೆಲವರು ಸಿಬ್ಬಂದಿಯ ಸಮಯೋಚಿತ ನಿರ್ಧಾರವನ್ನು, ಧೈರ್ಯವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ.

ʼʼಬೆಂಕಿ ನಂದಿಸಲು ಏಕಾಂಗಿಯಾಗಿ ಹೋರಾಡಿದ ಸಿಬ್ಬಂದಿಗೆ ಅತ್ಯಂತ ಶೂರ ಎನ್ನುವ ಅವಾರ್ಡ್‌ ಕೊಡಬೇಕು. ಒಂದು ವೇಳೆ ಸ್ಥಳದಲ್ಲಿ ನಾನು ಇದ್ದಿದ್ದರೆ ಇತರರಂತೆ ಓಡಿ ಹೋಗುತ್ತಿದ್ದೆʼʼ ಎಂದು ಒಬ್ಬರು ಪ್ರಾಮಾಣಿಕವಾಗಿ ಹೇಳಿಕೊಂಡಿದ್ದಾರೆ.

ʼʼಈ ಸಿಬ್ಬಂದಿಯ ಧೈರ್ಯಕ್ಕೆ ಹ್ಯಾಟ್ಸಾಫ್‌ʼʼ ಎಂದು ಮತ್ತೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ʼʼಬೆಂಕಿ ಆಕಸ್ಮಿಕದಿಂದ ಪಾರಾಗುವುದು ಹೇಗೆ ಎನ್ನುವ ಬಗ್ಗೆ ಈತನಿಗೆ ತರಬೇತಿ ಸಿಕ್ಕಿರಬೇಕು. ಅದಕ್ಕೆ ಆತ ಧೈರ್ಯವಾಗಿ ಮುನ್ನುಗ್ಗಿದ್ದಾನೆʼʼ ಎಂದು ಇನ್ನೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ʼʼಆತನ ಧೈರ್ಯಕ್ಕೆ ಪ್ರಶಸ್ತಿ ಕೊಡಲೇಬೇಕುʼʼ ಎಂದು ಮಗದೊಬ್ಬರು ಆಗ್ರಹಿಸಿದ್ದಾರೆ. ಈತನೇ ನಿಜವಾದ ಹೀರೋ ಎಂದು ಅನೇಕರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:Weight Lose: ತೂಕ ಇಳಿಸಲು ಬಯಸುವಿರಾ? ಈ ಸಂಗತಿ ತಿಳಿದಿರಲಿ

Continue Reading
Advertisement
Kempegowda International Airport parking
ಬೆಂಗಳೂರು3 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ8 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು23 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema33 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್50 mins ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್51 mins ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು54 mins ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Chitta Ranjan Dash
ದೇಶ1 hour ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Road Accident
ಕ್ರೈಂ1 hour ago

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ2 hours ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌