Viral Video | 15,700 ಕೆ.ಜಿ ತೂಕದ ಲಾರಿಯನ್ನು ಹಲ್ಲಿನಲ್ಲೇ ಎಳೆದ! ಇಲ್ಲಿದೆ ನೋಡಿ ವಿಡಿಯೊ - Vistara News

ವೈರಲ್ ನ್ಯೂಸ್

Viral Video | 15,700 ಕೆ.ಜಿ ತೂಕದ ಲಾರಿಯನ್ನು ಹಲ್ಲಿನಲ್ಲೇ ಎಳೆದ! ಇಲ್ಲಿದೆ ನೋಡಿ ವಿಡಿಯೊ

ಈಜಿಪ್ಟ್‌ನ ಅಶ್ರಫ್ ಎಂಬಾತ ಹಲ್ಲಿನಲ್ಲೇ 15,730 ಕೆ.ಜಿ. ತೂಕದ ಲಾರಿಯನ್ನು ಎಳೆದಿದ್ದಾನೆ. ಗಿನ್ನೆಸ್ ದಾಖಲೆ ಬರೆದಿರುವ ಈ ಸಾಹಸದ ವಿಡಿಯೊ (Viral Video) ಎಲ್ಲೆಡೆ ಹರಿದಾಡಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಬ್ಬು ತಿಂದರೂ ಹಲ್ಲು ನೋವು ಬಂದುಬಿಡುತ್ತದೆ ಎನ್ನುವ ಅಳಲು ಅನೇಕರದ್ದು. ಆದರೆ ಈ ಮನುಷ್ಯ ಮಾತ್ರ ತನ್ನ ಹಲ್ಲಿನಲ್ಲೇ ಲಾರಿಯನ್ನೂ ಎಳೆಯಬಲ್ಲ! ಈಜಿಪ್ಟ್ ದೇಶದ ಈ ವ್ಯಕ್ತಿ ಹಲ್ಲಿನಲ್ಲೇ 15,730 ಕೆ.ಜಿ ತೂಕದ ಲಾರಿ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ (Viral Video) ಬರೆದಿದ್ದಾನೆ.

ಇದನ್ನೂ ಓದಿ: Viral Video | ಪಾನ್‌ ಬನಾರಸ್‌ ವಾಲಾ ಹಾಡಿಗೆ ಮನಬಿಚ್ಚಿ ಕುಣಿದ ಅಂಕಲ್‌, ಎನರ್ಜಿಗೆ ಸೆಲ್ಯೂಟ್‌ ಎಂದ ಜನ
ಅಶ್ರಫ್ ಮಹ್ರೋಸ್ ಮೊಹಮದ್ ಸುಲಿಮನ್ ಹೆಸರಿನ ವ್ಯಕ್ತಿ ಈ ರೀತಿ ದಾಖಲೆ ಬರೆದವ. ಆತ 2021ರ ಜೂ.13ರಂದು ಈಜಿಪ್ಟ್‌ನ ಇಸ್ಮೈಲಿಯಾದಲ್ಲಿ ಇಂಥದ್ದೊಂದು ಸಾಹಸ ಪ್ರದರ್ಶನ ಮಾಡಿದ್ದಾನೆ. ಭಾರೀ ತೂಕದ ಲಾರಿಯನ್ನು ಚಾಲಕನ ಸಮೇತವಾಗಿ ತನ್ನ ಹಲ್ಲಿನಲ್ಲೇ ಎಳೆದುಕೊಂಡು ಹೋಗಿದ್ದಾನೆ.


ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ಅಶ್ರಫ್‌ನ ವಿಡಿಯೋವನ್ನು ಇತ್ತೀಚೆಗೆ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಆ ವಿಡಿಯೊ ಎಲ್ಲೆಡೆ ಭಾರೀ ಸದ್ದು ಮಾಡಿದೆ. “ಅಶ್ರಫ್ ಅವರೇ ನಿಮ್ಮ ಹಲ್ಲುಗಳು ನಮ್ಮ ಕೈಗಿಂತಲೂ ಗಟ್ಟಿಯಾಗಿವೆ” ಎಂದು ಕೆಲವರು ಹೇಳಿದರೆ, “ನಿಮ್ ಡೆಂಟಿಸ್ಟ್ ಯಾರು ಹೇಳಿ, ನಾವೂ ಅಲ್ಲಿಯೇ ತೋರಿಸುತ್ತೇವೆ” ಎಂದು ಅನೇಕರು ಕಮೆಂಟ್ ಮಾಡಿದ್ದಾರೆ!

ಇದನ್ನೂ ಓದಿ: Viral Video | ಮುಂದಿನ 2 ಚಕ್ರಗಳೇ ಇಲ್ಲದೆ ವೇಗವಾಗಿ ಓಡುವ ಟ್ರಕ್‌, ಇದೆಲ್ಲ ಭಾರತದಲ್ಲಿ ಮಾತ್ರ ಸಾಧ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

Inspirational Story: ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ ದೃಷ್ಟಿದೋಷವುಳ್ಳ ಹೆಣ್ಣು ಶಿಶುವೊಂದು ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಕಸದ ಬುಟ್ಟಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಆಕೆಗೆ 25 ವರ್ಷ. ಮಹಾರಾಷ್ಟ್ರ ಸರ್ಕಾರದ ಉದ್ಯೋಗ ಪರೀಕ್ಷೆಯಲ್ಲಿ ಆಕೆ ಉತ್ತೀರ್ಣಳಾಗಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ.

VISTARANEWS.COM


on

By

Inspirational Story
Koo

ಅಮರಾವತಿ: ಇಪ್ಪತ್ತೈದು ವರ್ಷಗಳ (Inspirational Story) ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದ ದೃಷ್ಟಿ ದೋಷವುಳ್ಳ ಹೆಣ್ಣು ಮಗುವೊಂದು ಈಗ ಬೆಳೆದು ಬ್ರೈಲ್ ಲಿಪಿಯಲ್ಲಿ (Braille script) ಮಹಾರಾಷ್ಟ್ರ (maharastra) ಸಾರ್ವಜನಿಕ ಸೇವಾ ಆಯೋಗದ (Maha Job Test) ಪರೀಕ್ಷೆಯನ್ನು ಬರೆದು ಉತ್ತೀರ್ಣಳಾಗಿದ್ದಾಳೆ. ಅಲ್ಲದೇ ಯುಪಿಎಸ್ ಸಿ (UPSC) ಪರೀಕ್ಷೆ ಬರೆಯುವ ತಯಾರಿ ನಡೆಸುತ್ತಿದ್ದಾಳೆ.

ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ ದೃಷ್ಟಿದೋಷವುಳ್ಳ ಹೆಣ್ಣು ಶಿಶುವೊಂದು ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಕಸದ ಬುಟ್ಟಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆಯ ಹೆತ್ತವರು ಸಿಗದ ಕಾರಣ ಪೊಲೀಸರು ಹಸಿವಿನಿಂದ ಬಳಲುತ್ತಿದ್ದ ನವಜಾತ ಶಿಶುವನ್ನು ಜಲಗಾಂವ್‌ನ ರಿಮ್ಯಾಂಡ್ ಹೋಮ್‌ಗೆ ಕರೆದೊಯ್ದರು. ಅಲ್ಲಿ ಆಕೆಗೆ ಆಹಾರವನ್ನು ನೀಡಲಾಯಿತು. ಬಳಿಕ ಸುಮಾರು 270 ಕಿ.ಮೀ. ದೂರದಲ್ಲಿರುವ ಅಮರಾವತಿಯ ಪರತ್ವಾಡದಲ್ಲಿ ಕಿವುಡ ಮತ್ತು ಕುರುಡರಿಗಾಗಿ ಇರುವ ಸುಸಜ್ಜಿತ ಪುನರ್ವಸತಿ ಮನೆಗೆ ಆಕೆಯನ್ನು ಸ್ಥಳಾಂತರಿಸಲಾಯಿತು.

ಇಲ್ಲಿ ಆಕೆಗೆ ಮಾಲಾ ಪಾಪಲ್ಕರ್ ಎಂದು ಹೆಸರಿಟ್ಟು ಸಾಕಲಾಯಿತು. ಇದೀಗ ಎರಡು ದಶಕಗಳ ಅನಂತರ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ (MPSC) ಪರೀಕ್ಷೆಯನ್ನು ಬರೆದು ಆಕೆ ಉತ್ತೀರ್ಣಳಾಗಿದ್ದಾಳೆ ಮತ್ತು ಮುಂಬಯಿನ ಮಹಾರಾಷ್ಟ್ರ ಸೆಕ್ರೆಟರಿಯೇಟ್ – ಗುಮಾಸ್ತ-ಕಮ್-ಟೈಪಿಸ್ಟ್ ಆಗಿ ಸಚಿವಾಲಯಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಮಾಲಾ ಅವರ ಮಾರ್ಗದರ್ಶಕ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ 81 ವರ್ಷದ ಶಂಕರಬಾಬಾ ಪಾಪಲ್ಕರ್ ಅವರು ಅವರಿಗೆ ತಮ್ಮ ಉಪನಾಮವನ್ನು ಮಾತ್ರ ನೀಡಲಿಲ್ಲ. ಅವಳಲ್ಲಿದ್ದ ಪ್ರತಿಭೆಯನ್ನು ಪೋಷಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮಾಲಾ, ದೇವರು ಕೇವಲ ನನ್ನನ್ನು ರಕ್ಷಿಸಲಿಲ್ಲ. ನಾನು ಇಂದು ಇರುವ ಸ್ಥಳಕ್ಕೆ ಕರೆದೊಯ್ಯಲು ದೇವತೆಗಳನ್ನು ಕಳುಹಿಸಿದ್ದಾರೆ. ನಾನು ಇಲ್ಲಿ ನಿಲ್ಲುವುದಿಲ್ಲ. ನಾನು ಯುಪಿಎಸ್ ಸಿ ಪರೀಕ್ಷೆಗಳಿಗೆ ಕುಳಿತು ಐಎಎಸ್ ಅಧಿಕಾರಿಯಾಗುತ್ತೇನೆ ಎಂದರು.

ಶಂಕರಬಾಬಾ ಅವರ ಪ್ರಕಾರ, ಮಾಲಾ ತನ್ನ ಪ್ರಾಥಮಿಕ ಶಿಕ್ಷಣವನ್ನು ಅಂಧರ ಶಾಲೆಯಲ್ಲಿ ಮುಗಿಸಿದರು ಮತ್ತು ಹೈಯರ್ ಸೆಕೆಂಡರಿಯನ್ನು ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದರು. ಅವರು 2018ರಲ್ಲಿ ಅಮರಾವತಿ ವಿಶ್ವವಿದ್ಯಾನಿಲಯದಿಂದ ಪದವಿ ಮತ್ತು ಸರ್ಕಾರಿ ವಿದರ್ಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಹ್ಯುಮಾನಿಟೀಸ್ ನಿಂದ ಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು ಬ್ರೈಲ್ ಅನ್ನು ಬಳಸಿದರು ಮತ್ತು ಪ್ರತಿ ಪರೀಕ್ಷೆಯಲ್ಲಿ ಬರಹಗಾರರ ಸಹಾಯವನ್ನು ಪಡೆದರು. ಅನಂತರ ದರ್ಯಾಪುರದ ಪ್ರೊ. ಪ್ರಕಾಶ್ ತೋಪ್ಲೆ ಪಾಟೀಲ್ ಅವರು ಅವಳನ್ನು ದತ್ತು ಪಡೆದರು ಎಂದು ತಿಳಿಸಿದರು.

ಇದನ್ನೂ ಓದಿ: KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

ಎಂಪಿಎಸ್‌ಸಿ ಪರೀಕ್ಷೆಗಳಿಗೆ ಮಾಲಾಗೆ ತರಬೇತಿ ನೀಡುವ ಜವಾಬ್ದಾರಿಯನ್ನು ವಹಿಸಿಕೊಂಡ ವಿಶಿಷ್ಟ ಅಕಾಡೆಮಿಯ ನಿರ್ದೇಶಕ ಪ್ರೊ. ಅಮೋಲ್ ಪಾಟೀಲ್‌ನಲ್ಲಿ ಮಾಲಾ ಮತ್ತೊಬ್ಬ ಉತ್ತಮ ಸಮರಿಟನ್‌ನನ್ನು ಕಂಡುಕೊಂಡರು. ಮಾಲಾ ಅವರು ಆಗಸ್ಟ್ 2022 ಮತ್ತು ಡಿಸೆಂಬರ್ 2023 ರಲ್ಲಿ ತಹಸೀಲ್ದಾರ್ ಹುದ್ದೆಗೆ ಪರೀಕ್ಷೆಯನ್ನು ಬರೆದಿದ್ದು ಎರಡು ಬಾರಿ ವಿಫಲರಾಗಿದ್ದಾರೆ. ಇದೀಗ MPSC ಕ್ಲರ್ಕ್ (ಟೈಪ್ ರೈಟಿಂಗ್) ಪರೀಕ್ಷೆಯನ್ನು ತೆಗೆದುಕೊಂಡರು. ಈ ಪರೀಕ್ಷೆಯಲ್ಲಿ ಆಕೆ ಪಡೆದಿರುವ ಯಶಸ್ಸು ಆಕೆಯ ಮನೆಯಾದ ಪರತ್ವಾಡದಲ್ಲಿರುವ ನಿರ್ಗತಿಕರ ಕೇಂದ್ರಕ್ಕೆ ಸಂತೋಷ ತಂದಿದೆ ಎಂದರು.

Continue Reading

ದೇಶ

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ದಕ್ಷಿಣ ಕೊರಿಯಾದ ಮಾಲ್‌ನಲ್ಲಿ ಯುವಕನೊಬ್ಬ ತನ್ನ ಗೆಳತಿಯೊಂದಿಗೆ ಮಾಡಿರುವ ವಿಡಿಯೋದಲ್ಲಿ (Viral Video) ಗೆಳತಿಗೆ ಗೊತ್ತಾಗದಂತೆ ಯುವಕ ಐಸ್ ಕ್ರೀಂ ಕೋನ್ ನಲ್ಲಿ ಚಿನ್ನದ ಉಂಗುರ ಅಡಗಿಸಿ ಇಟ್ಟು ಅದನ್ನು ಗೆಳತಿಗೆ ನೀಡಿದ್ದಾನೆ. ಆಕೆ ಪೂರ್ತಿ ಐಸ್ ಕ್ರೀಮ್ ತಿಂದಿದ್ದಾಳೆ. ಇಲ್ಲಿದೆ ಕುತೂಹಲಕಾರಿ ವಿಡಿಯೊ.

VISTARANEWS.COM


on

By

Viral Video
Koo

ಮದುವೆಯು (wedding) ಪ್ರತಿಯೊಬ್ಬರ ಜೀವನದ ಅತ್ಯಂತ ಪ್ರಮುಖ ನಿರ್ಧಾರವಾಗಿರುತ್ತದೆ. ಪ್ರತಿಯೊಬ್ಬರೂ ಇದನ್ನು ವಿಶೇಷವಾಗಿ ಹಂಚಿಕೊಳ್ಳಲು ಬಯಸುತ್ತಾರೆ. ಇಲ್ಲೊಬ್ಬ ತಾನು ಮದುವೆಯಾಗ ಬಯಸುವ ಹುಡುಗಿಗೆ ವಿಶೇಷ ರೀತಿಯಲ್ಲಿ ಪ್ರಪೋಸ್ ಮಾಡಲು ಹೋಗಿ ತಾನೇ ಆಶ್ಚರ್ಯಚಕಿತನಾದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ.

ದಕ್ಷಿಣ ಕೊರಿಯಾದ (South Korea) ಯುವಕನೊಬ್ಬ ಐಸ್ ಕ್ರೀಂನಲ್ಲಿ ಉಂಗುರವನ್ನು ಬಚ್ಚಿಟ್ಟು ತನ್ನ ಗೆಳತಿಯನ್ನು ಅಚ್ಚರಿಗೊಳಿಸಲು ಬಯಸಿದ ಘಟನೆಯ ವಿಡಿಯೋ ಇದಾಗಿದೆ. ದಕ್ಷಿಣ ಕೊರಿಯಾದ ಮಾಲ್‌ ನಲ್ಲಿ ಯುವಕನೊಬ್ಬ ತನ್ನ ಗೆಳತಿಯೊಂದಿಗೆ ಈ ವಿಡಿಯೋ ಮಾಡಿದ್ದಾನೆ. ಗೆಳತಿಗೆ ಗೊತ್ತಾಗದಂತೆ ಯುವಕ ಐಸ್ ಕ್ರೀಂ ಕೋನ್ ನಲ್ಲಿ ಚಿನ್ನದ ಉಂಗುರ ಅಡಗಿಸಿ ಇಟ್ಟು ಅದನ್ನು ಗೆಳತಿಗೆ ನೀಡಿದ್ದಾನೆ. ಅನಂತರ ವಿಡಿಯೋದಲ್ಲಿ ಹುಡುಗಿ ಐಸ್ ಕ್ರೀಮ್ ತಿನ್ನುತ್ತಾಳೆ. ಆಕೆಗೆ ಐಸ್ ಕ್ರೀಮ್ ತಿನ್ನುವಾಗ ಆಕೆಗೆ ಉಂಗುರ ಸಿಗುತ್ತದೆ ಎಂದು ಆತ ಭಾವಿಸುತ್ತಾನೆ. ಆದರೆ ಹುಡುಗಿ ಸಂಪೂರ್ಣ ಐಸ್ ಕ್ರೀಂ ಅನ್ನು ತಿನ್ನುತ್ತಾಳೆ. ಆದರೆ ಐಸ್ ಕ್ರೀಮ್ ನಲ್ಲಿ ಉಂಗುರ ಆಕೆಗೆ ಸಿಗದೇ ಇದ್ದಾಗ ಹುಡುಗ ಆಶ್ಚರ್ಯ ಚಕಿತನಾಗುತ್ತಾನೆ.


ಹುಡುಗಿ ಐಸ್ ಕ್ರೀಮ್ ತಿನ್ನುವ ಸಂತೋಷವನ್ನು ಅತ್ಯಂತ ಮುಗ್ಧತೆಯಿಂದ ಆಚರಿಸುತ್ತಿರುವುದು ಈ ವಿಡಿಯೋದಲ್ಲಿ ಕಂಡು ಬಂದಿದೆ. ಇನ್ ಸ್ಟಾ ಗ್ರಾಮ್ ಪುಟದಲ್ಲಿ k_kangs_ಹೆಸರಿನಲ್ಲಿ ಈ ವಿಡಿಯೋ ಅನ್ನು ಹಂಚಿಕೊಳ್ಳಲಾಗಿದೆ.
ಸುಮಾರು 13 ಮಿಲಿಯನ್ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. 76,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಜನರು ಈ ವಿಡಿಯೋವನ್ನು ಬಹಳಷ್ಟು ಇಷ್ಟಪಡುತ್ತಿದ್ದರೂ ಈ ಕ್ಲಿಪ್ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅಷ್ಟಕ್ಕೂ ಆ ಉಂಗುರವನ್ನೇ ನುಂಗಿದ್ದೇ ಹುಡುಗಿಗೆ ಹೇಗೆ ತಿಳಿಯಲಿಲ್ಲ? ಈ ವಿಡಿಯೋ ನಕಲಿಯೋ ಅಲ್ಲವೋ ಎಂಬ ಪ್ರಶ್ನೆಯನ್ನು ಹಲವಾರು ಮಂದಿ ಕೇಳಿದ್ದಾರೆ.

PS4 ಅನ್ನು ಒಡೆದು ಹಾಕಿದಳು

ತನ್ನ ಸಂಗಾತಿಯನ್ನು ಅಚ್ಚರಿಗೊಳಿಸಲು ಗೆಳತಿಯೊಬ್ಬಳು ಮಾಡಿದ ವಿಡಿಯೋವೊಂದು ಟ್ವಿಟ್ಟರ್ ನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಇದು ಇಲ್ಲಿಯವರೆಗೆ ನೋಡಿದ್ದಕ್ಕಿಂತ ಸ್ವಲ್ಪ ಭಿನ್ನವಾಗಿದೆ. ಗೆಳತಿ ತನ್ನ ಗೆಳೆಯನ ಪಿಎಸ್ 4 ಅನ್ನು ಒಡೆದು ಹಾಕುವುದರೊಂದಿಗೆ ವಿಡಿಯೋ ಪ್ರಾರಂಭವಾಗುತ್ತದೆ, ಅನಂತರ ಆಕೆ ಅವನನ್ನು ಆಶ್ಚರ್ಯಗೊಳಿಸುತ್ತಾಳೆ. ಕ್ಲಿಪ್‌ನಲ್ಲಿ, ಹುಡುಗಿ ತನ್ನ ಗೆಳೆಯನ ಪ್ಲೇಸ್ಟೇಷನ್ 4 ಅನ್ನು ಕ್ರೂರವಾಗಿ ಒಡೆದು ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.


ಆಕೆಯ ಅನಿರೀಕ್ಷಿತ ಕೃತ್ಯದಿಂದ ದಿಗ್ಭ್ರಮೆಗೊಂಡಂತೆ ತೋರುವ ಹುಡುಗನು ತನ್ನ ಹಾನಿಗೊಳಗಾದ ಆಟದ ವಸ್ತುಗಳತ್ತ ಕಣ್ಣು ಹಾಯಿಸಿದಾಗ ಮೂಕನಾಗುತ್ತಾನೆ. ಸಿಟ್ಟಿನಲ್ಲಿ ಗೆಳತೀ ಕೋಣೆಯಿಂದ ಹೊರನಡೆದಳು.

ಇದನ್ನೂ ಓದಿ: RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

ಏನಾಯಿತು ಎಂಬುದರ ಅರಿವಿಲ್ಲದ ಹುಡುಗ ಗೆಳತಿ ಹೊಸ ಪಿಎಸ್ 5 ನೊಂದಿಗೆ ಕೋಣೆಗೆ ಹಿಂತಿರುಗಿದಾಗ ಅವನು ಸಂಪೂರ್ಣ ಆಶ್ಚರ್ಯಚಕಿತನಾಗುತ್ತಾನೆ. ತಕ್ಷಣವೇ ತನ್ನ ಗೆಳತಿಯನ್ನು ತಬ್ಬಿಕೊಳ್ಳುತ್ತಾನೆ. ಈ ವಿಡಿಯೋವನ್ನು ಏಪ್ರಿಲ್ 29 ರಂದು ಹಂಚಿಕೊಳ್ಳಲಾಗಿದೆ ಮತ್ತು ಇಲ್ಲಿಯವರೆಗೆ, ಟ್ವಿಟರ್‌ನಲ್ಲಿ 9 ಲಕ್ಷಕ್ಕೂ ಹೆಚ್ಚು ಮಂದಿ ನೋಡಿದ್ದಾರೆ.

Continue Reading

ಕ್ರೀಡೆ

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

RCB FANS BIKE RALLY: ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ.

VISTARANEWS.COM


on

RCB FANS BIKE RALLY
Koo

ಬೆಂಗಳೂರು: ಐಪಿಎಲ್​ನ(IPL 20124) ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಚೆನ್ನೈ ಸೂಪರ್(Chennai Super Kings)​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ಇಂದು ನಡೆಯುವ ಪ್ಲೇ ಆಫ್​ ಪ್ರವೇಶದ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನವೇ ಆರ್​ಸಿಬಿ(RCB) ಅಭಿಮಾನಿಗಳು(Craze RCB FANS) ಚಿನ್ನಸ್ವಾಮಿ ಮೈದಾನದ ಬಳಿ ಬೃಹತ್​ ಬೈಕ್​ ರ‍್ಯಾಲಿ(RCB FANS BIKE RALLY) ನಡೆಸಿ ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪಂದ್ಯಕ್ಕೆ ಮಳೆಯ ಭೀತಿಯೂ ಇದ್ದು ಸಸ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಅಲ್ಲದೆ ರಾತ್ರಿ ಮಳೆಯಾಗುವುದು ಬಹುತೇಕ ಖಚಿತ ಎನ್ನುವಂತಿದೆ. ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮಳೆ ಬಾರದಂತೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದು ಕಡೆ ಚೆನ್ನೈ ಅಭಿಮಾನಿಗಳಿ ಮಳೆ ಬಂದು ಪಂದ್ಯ ರದ್ದಾಗಲಿ ಎಂದು ಪ್ರಾರ್ಥಿಸುತ್ತಿದ್ದರೆ. ಪಂದ್ಯ ರದ್ದಾದರೆ ಚೆನ್ನೈ 4ನೇ ತಂಡವಾಗಿ ಅಧಿಕೃತ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಒಟ್ಟಾರೆ ಮಳೆ ಯಾರಿಗೆ ಅನುವು ಮಾಡಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಸಬ್‌ ಏರ್‌ ಸಿಸ್ಟಮ್‌


ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಇದನ್ನೂ ಓದಿ RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಇತ್ತಂಡಗಳ ಒಟ್ಟು ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

Continue Reading

ವೈರಲ್ ನ್ಯೂಸ್

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

Lok Sabha Election 2024: ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

VISTARANEWS.COM


on

Lok Sabha Election 2024
Koo

ಪಟನಾ: ಲೋಕಸಭಾ ಚುನಾವಣೆಯ (Lok Sabha Election 2024) 4 ಹಂತಗಳ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನುಳಿದ 3 ಹಂತಗಳಿಗೆ ಭರದ ಸಿದ್ದತೆ ನಡೆಯುತ್ತಿದೆ. ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ, ಪ್ರಚಾರದ ಭರಾಟೆಯಲ್ಲಿ ನಿರತರಾಗಿದ್ದಾರೆ. ಕೆಲವು ಕ್ಷೇತ್ರಗಳು ಘಟಾನುಘಟಿ ಸ್ಪರ್ಧಿಗಳ ಕಾರಣದಿಂದ ದೇಶದ ಗಮನ ಸೆಳೆದರೆ, ಇನ್ನು ಹಲವೆಡೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿಭಿನ್ನ ಕಸರತ್ತು ನಡೆಸಿ ಸುದ್ದಿಯಾಗುತ್ತಿದ್ದಾರೆ. ಇದೇ ರೀತಿ ಇಲ್ಲಿಯೊಬ್ಬರು ಸ್ಪರ್ಧಿ ತಮ್ಮ ವಿಶಿಷ್ಟ ಪ್ರಚಾರದಿಂದ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಬಿಹಾರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಇಡೀ ದೇಶವೇ ತಮ್ಮ ತಿರುಗಿ ನೋಡುವಂತೆ ಮಾಡಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಈ ರೀತಿ ಗಮನ ಸೆಳೆದವರು. ಗೋಪಾಲ್‌ಗಂಜ್‌ ಶ್ಯಾಮ್‌ಪುರ ನಿವಾಸಿಯಾದ ಅವರು ಚುನಾವಣಾ ಪ್ರಚಾರ ಮಾತ್ರವಲ್ಲ ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸದ್ಯ ಅವರು ನಾಮಪತ್ರ ಸಲ್ಲಿಕೆಗೆ ಕತ್ತೆ ಮೇಲೆ ಮೆರವಣಿಗೆ ಮೂಲಕ ಸಾಗುತ್ತಿರುವ ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸತ್ಯೇಂದ್ರ ಬೈಥಾ ಹೇಳೋದೇನು?

ಹೊಸ ರೀತಿಯ ಪ್ರಚಾರ ಶೈಲಿಯ ಬಗ್ಗೆ ಮಾತನಾಡುವ ಸತ್ಯೇಂದ್ರ ಬೈಥಾ, ʼʼದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಾಗಿದೆ. ಹೀಗಾಗಿ ದುಬಾರಿ ಹಣ ಪಾವತಿಸಿ ನನ್ನಂತಹ ಅದೆಷ್ಟೋ ಜನರಿಗೆ ವಾಹನದಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ. ಹೀಗಾಗಿ ಕತ್ತೆ ಮೇಲೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ನಿರ್ಧರಿಸಿದ್ದೇನೆ ನಾಮಪತ್ರ ಸಲ್ಲಿಕೆಗೂ ನಾನು ಕತ್ತೆ ಮೇಲೆಯೇ ತೆರಳಿದ್ದೆʼʼ ಎಂದು ಅವರು ವಿವರಿಸಿದ್ದಾರೆ. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

ಭರವಸೆ

ಒಂದು ವೇಳೆ ಚುನಾವಣೆಯಲ್ಲಿ ಗೆದ್ದರೆ ಜನರಿಗಾಗಿ ಯಾವೆಲ್ಲ ಕೆಲಸಗಳನ್ನು ಮಾಡ ಬಯಸುತ್ತೀರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ʼʼಜಿಲ್ಲೆಯಲ್ಲಿ ಸಕ್ಕರೆ ಖಾರ್ಖಾನೆ ಮತ್ತು ವಿಶ್ವ ವಿದ್ಯಾನಿಲಯ ತೆರೆಯಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುತ್ತೇನೆ. ಶುಚಿತ್ವಕ್ಕೂ ನಾನು ಒತ್ತು ಕೊಡುತ್ತೇನೆ. ಈ ಹಿಂದೆ ಅನೇಕ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದ ನಂತರ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೆಹಲಿ ಅಥವಾ ಪಾಟನಾದಲ್ಲಿ ವಾಸಿಸುತ್ತಿದ್ದರು. ಆದರೆ ನಾನು ಹಾಗಲ್ಲ. ನಾನು ಸ್ಥಳೀಯ ನಿವಾಸಿಯಾಗಿದ್ದು, ಸಾರ್ವಜನಿಕರಿಗೆ ದಿನದ 24 ಗಂಟೆಯೂ ಲಭ್ಯವಿರಲಿದ್ದೇನೆʼʼ ಎಂದು ಭರವಸೆ ನೀಡಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ಇನ್ನು ಕತ್ತೆ ಸವಾರಿಗೆ ನೆಟ್ಟಿಗರು ವಿದ ವಿಧವಾಗಿ ಪ್ರತಿಕ್ರಿಯಿಸಿದ್ದಾರೆ. ʼʼಇದು ಬಹಳ ಮಜವಾಗಿದೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಪಾಪದ ಪ್ರಾಣಿಗೆ ಈ ರೀತಿಯ ಹಿಂಸೆ ನೀಡುತ್ತಿರುವುದು ಎಷ್ಟು ಸರಿ?ʼʼ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ʼʼಈ ರೀತಿ ಪ್ರಾಣಿ ಬಳಕೆಗೆ ಅನುಮತಿ ಇದೆಯೇ?ʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ಚರ್ಚೆ ಹುಟ್ಟು ಹಾಕಿದ್ದಂತೂ ಸತ್ಯ.

ಗೋಪಾಲ್‌ಗಂಜ್‌ನಲ್ಲಿ ಮೇ 25ರಂದು 6ನೇ ಹಂತದಲ್ಲಿ ಮತದಾನ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಅಲೋಕ್‌ ಕುಮಾರ್‌ ಸುಮನ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟದಿಂದ ಚಂಚಲ್‌ ಕುಮಾರ್‌ ಪಾಸ್ವಾನ್‌ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Continue Reading
Advertisement
Cyber Crime
ಕ್ರೈಂ3 mins ago

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

ಸೈಬರ್‌ ಸೇಫ್ಟಿ cyber safety rules
ಅಂಕಣ15 mins ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ42 mins ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 202445 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ52 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ58 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ1 hour ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ2 hours ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್2 hours ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌