Viral Video : ಮೂರನೇ ಸ್ಥಾನ ಗಳಿಸಿದವಳಿಗೆ ಚಿನ್ನದ ಪದಕ! ಅಂದದ ಮಹಿಮೆಯಿದು ಎನ್ನುತ್ತಿದ್ದಾರೆ ನೆಟ್ಟಿಗರು - Vistara News

ವೈರಲ್ ನ್ಯೂಸ್

Viral Video : ಮೂರನೇ ಸ್ಥಾನ ಗಳಿಸಿದವಳಿಗೆ ಚಿನ್ನದ ಪದಕ! ಅಂದದ ಮಹಿಮೆಯಿದು ಎನ್ನುತ್ತಿದ್ದಾರೆ ನೆಟ್ಟಿಗರು

ಕಂಚಿನ ಪದಕ ಗೆದ್ದ ಕ್ರೀಡಾಪಟುವಿಗೆ ಪ್ರಶಸ್ತಿ ಪ್ರದಾನಕರು ಚಿನ್ನದ ಪದಕ ಹಾಕುವ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರೀಡಾಕೂಟಗಳನ್ನು ನೋಡುವವರಿಗೆ ಅದರಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಪರಿಚಯವಿರುತ್ತದೆ. ಪೋಡಿಯಂ ಮೇಲೆ ಮೂವರು ವಿಜೇತರನ್ನು ನಿಲ್ಲಿಸಿ ಅವರ ಕೊರಳಿಗೆ ಪದಕವನ್ನು ಹಾಕಲಾಗುತ್ತದೆ. ಮೊದಲ ಸ್ಥಾನ ಗೆದ್ದವರಿಗೆ ಚಿನ್ನ, ಎರಡನೇ ಸ್ಥಾನ ಗೆದ್ದವರಿಗೆ ಬೆಳ್ಳಿ ಮತ್ತು ಮೂರನೇ ಸ್ಥಾನ ಗೆದ್ದವರಿಗೆ ಕಂಚಿನ ಪದಕ ಹಾಕಿ ಸನ್ಮಾನಿಸಲಾಗುತ್ತದೆ. ಆದರೆ ಇಲ್ಲಿ ಮಾತ್ರ ಮೂರನೇ ಸ್ಥಾನ ಗೆದ್ದವರಿಗೇ ಚಿನ್ನ (Viral Video) ಪದಕ ನೀಡಲಾಗಿದೆ.

ಹೌದು. ಅದೊಂದು ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿರುತ್ತದೆ. ಆಗ ಪ್ರಶಸ್ತಿ ಪ್ರದಾನ ಮಾಡುವವರು ಬಂದು ಮೂರನೇ ಸ್ಥಾನ ಗೆದ್ದಿರುವ ಕ್ರೀಡಾಪಟುವಿನ ಕೊರಳಿಗೆ ಚಿನ್ನದ ಪದಕವನ್ನು ಹಾಕುತ್ತಾರೆ. ಅದು ಚಿನ್ನದ ಪದಕ ಎಂದು ತಿಳಿಯದ ಕ್ರೀಡಾಪಟು ಪದಕ ಗೆದ್ದ ಸಂತಸವನ್ನು ಸಂಭ್ರಮಿಸುತ್ತಿರುತ್ತಾರೆ. ಅಷ್ಟರಲ್ಲಿ ಆಕೆಯ ಪಕ್ಕ ನಿಂತಿದ್ದ ಇನ್ನಿಬ್ಬರು ಕ್ರೀಡಾಪಟುಗಳು “ಅದು ಕಂಚಿನ ಪದಕವಲ್ಲ, ಚಿನ್ನದ್ದು” ಎಂದು ಆ ಕ್ರೀಡಾಪಟುವಿಗೆ ಮನವರಿಕೆ ಮಾಡುತ್ತಾರೆ.

ಇದನ್ನೂ ಓದಿ: Viral News : ನಿಮ್ಮ ಕಣ್ಣಿಗೊಂದು ಸವಾಲು: ಈ ಚಿತ್ರದಲ್ಲಿ ವಿಶೇಷವಾಗಿರುವ ಕೈ ಗುರುತಿಸಿ
ಆಗ ಆ ಕ್ರೀಡಾಪಟು ತನ್ನ ಕೊರಳಿಗೆ ಹಾಕಲಾಗಿದ್ದ ಪದಕವನ್ನು ತೆಗೆದು ತಾನೇ ಮೊದಲ ಸ್ಥಾನದಲ್ಲಿದ್ದ ಕ್ರೀಡಾಪಟುವಿನ ಕೊರಳಿಗೆ ಹಾಕುತ್ತಾರೆ. ಆಗ ಮೂವರೂ ಸಂಭ್ರಮಿಸಲಾರಂಭಿಸುತ್ತಾರೆ.

ಈ ದೃಶ್ಯವಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ದಿ ಫಿಗೆನ್‌ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಈ ವಿಡಿಯೊ ನೋಡಿರುವ ನೆಟ್ಟಿಗರು ಅದಕ್ಕೆ ತಮ್ಮದೇ ಆದ ವ್ಯಾಖ್ಯಾನಗಳನ್ನು ಬರೆಯಲಾರಂಭಿಸಿದ್ದಾರೆ. “ಮೂರನೇ ಸ್ಥಾನ ಗೆದ್ದ ಕ್ರೀಡಾಪಟು ಇನ್ನಿಬ್ಬರು ಕ್ರೀಡಾಪಟುಗಳಿಗಿಂತ ಅಂದವಾಗಿದ್ದಳು. ಹಾಗಾಗಿ ಆತ ಆಕೆಗೇ ಚಿನ್ನದ ಪದಕ ಹಾಕಿಬಿಟ್ಟಿದ್ದಾನೆ. ಬೇರೆ ಯಾರನ್ನೂ ನೋಡಿಯೇ ಇಲ್ಲ” ಎಂದು ಕೆಲವರು ಹೇಳಲಾರಂಭಿಸಿದ್ದಾರೆ. “ಪದಕ ಪ್ರದಾನಿಸಿದವರು ಮನೆಯಲ್ಲಿ ಹೆಂಡತಿ ಜತೆ ಜಗಳ ಆಡಿಕೊಂಡು ಬಂದಿರಬೇಕು. ಹಾಗಾಗಿ ಅವರಿಗೆ ತಾವೇನು ಮಾಡುತ್ತಿದ್ದೇವೆ ಎಂದೇ ಗೊತ್ತಾಗಿಲ್ಲ” ಎಂದು ಇನ್ನು ಕೆಲವರು ಹೇಳಿದ್ದಾರೆ. “ಆಕೆಯೇ ಅವನ ಫೇವರಿಟ್‌” ಎಂದು ಕೆಲವರು ಚರ್ಚಿಸಲಾರಂಭಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Adhir Ranjan: ಟಿಎಂಸಿ ಬದಲು ಬಿಜೆಪಿಗೆ ಮತ ಹಾಕೋದೇ ಬೆಸ್ಟ್‌ ಎಂದ ಕಾಂಗ್ರೆಸ್‌ ನಾಯಕ!

Adhir Ranjan: ಪಶ್ಚಿಮ ಬಂಗಾಳದಲ್ಲಿ ಜನರು ಟಿಎಂಸಿಗೆ ಮತ ನೀಡುವುದಕ್ಕಿಂತ ಬಿಜೆಪಿಗೆ ಮತ ಹಾಕುವುದೇ ಲೇಸು ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ಇದರ ಮಧ್ಯೆಯೇ ಕಾಂಗ್ರೆಸ್‌ ಸ್ಪಷ್ಟನೆ ನೀಡಿದೆ.

VISTARANEWS.COM


on

Adhir Ranjan
Koo

ಕೋಲ್ಕೊತಾ: ಬೇಸಿಗೆಯ ರಣಬಿಸಿಲಿಗಿಂತ ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ನೂರಾರು ಗಣ್ಯರು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಅಬ್ಬರದ ಪ್ರಚಾರದ ಜತೆಗೆ ಭಾರಿ ಭಾಷಣವನ್ನೂ ಮಾಡುತ್ತಿದ್ದಾರೆ. ಒಂದು ಪಕ್ಷದ ಅಭ್ಯರ್ಥಿಗಳು, ನಾಯಕರು ಪ್ರತಿಸ್ಪರ್ಧಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, “ಟಿಎಂಸಿಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ನೀಡುವುದೇ ವಾಸಿ” ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (Adhir Ranjan) ಅವರು ಹೇಳಿರುವುದು ಅಚ್ಚರಿ ಮೂಡಿಸಿದೆ. ಹಾಗೆಯೇ, ಅವರು ಹೇಳಿದ ವಿಡಿಯೊ (Viral Video) ಭಾರಿ ವೈರಲ್‌ ಆಗಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಆಯೋಜಿಸಿದ್ದ ಚುನಾವಣೆ ರ‍್ಯಾಲಿಯಲ್ಲಿ ಅಧೀರ್‌ ರಂಜನ್‌ ಚೌಧರಿ ಮಾತನಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ 400ಕ್ಕಿಂತ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಪ್ರಧಾನಿಯವರ ಕನಸು ನನಸಾಗುವುದಿಲ್ಲ. ಈಗಾಗಲೇ ಮೋದಿ ಅವರ ಕೈಯಿಂದ 100 ಕ್ಷೇತ್ರಗಳು ಹಾರಿ ಹೋಗಿವೆ. ಕಾಂಗ್ರೆಸ್‌ ಹಾಗೂ ಸಿಪಿಎಂ ಅಭ್ಯರ್ಥಿಗಳ ಗೆಲುವು ಮುಖ್ಯವಾಗಿದೆ. ಹಾಗೊಂದು ವೇಳೆ ನೀವು ಗೆಲ್ಲಿಸುವುದೇ ಆದರೆ, ಟಿಎಂಸಿಗಿಂತ ಬಿಜೆಪಿಗೇ ಮತ ಹಾಕುವುದು ಒಳಿತು” ಎಂದು ಹೇಳಿದ್ದಾರೆ.

ಅಧೀರ್‌ ರಂಜನ್‌ ಚೌಧರಿ ಅವರು ನೀಡಿದ ಹೇಳಿಕೆಯ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಪ್ರತಿಪಕ್ಷಗಳಿಗೆ ಗುರಿಯೂ ಇಲ್ಲ, ಉದ್ದೇಶವೂ ಇಲ್ಲ. ಇನ್ನು, ಇಂಡಿಯಾ ಒಕ್ಕೂಟಕ್ಕೆ ಜನರನ್ನು ಇಬ್ಭಾಗ ಮಾಡುವುದು, ಭ್ರಷ್ಟಾಚಾರ ಎಸಗುವುದು ಹಾಗೂ ಜನರಲ್ಲಿ ಗೊಂದಲ ಮೂಡಿಸುವುದೇ ಕಾಯಕವಾಗಿದೆ. ಇವರ ಮಧ್ಯೆಯೇ, ಬಿಜೆಪಿಗೆ ಮತ ನೀಡಿ ಎಂಬುದಾಗಿ ಕಾಂಗ್ರೆಸ್‌ ನಾಯಕ ತಿಳಿಸಿದ್ದಾರೆ. ಟಿಎಂಸಿಗೆ ಮತ ನೀಡುವ ಬದಲು ಬಿಜೆಪಿಯೇ ಬೆಸ್ಟ್‌ ಎಂಬುದಾಗಿ ಅವರು ಹೇಳಿದ್ದಾರೆ” ಎಂದು ಬಿಜೆಪಿ ನಾಯಕ ಶೆಹಜಾದ್‌ ಜೈ ಹಿಂದ್‌ ಪೋಸ್ಟ್‌ ಮಾಡಿದ್ದಾರೆ.

ಸ್ಪಷ್ಟನೆ ಕೊಟ್ಟ ಕಾಂಗ್ರೆಸ್‌

ಅಧೀರ್‌ ರಂಜನ್‌ ಚೌಧರಿ ನೀಡಿದ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಸ್ಪಷ್ಟನೆ ನೀಡಿದರು. “ಅಧೀರ್‌ ರಂಜನ್‌ ಚೌಧರಿ ಅವರು ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಹಾಗೂ ನಾನು ಆ ವಿಡಿಯೊವನ್ನು ನೋಡಿಲ್ಲ. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ ಸ್ಥಾನಗಳ ಸಂಖ್ಯೆಯು ಈ ಬಾರಿ ಗಣನೀಯವಾಗಿ ಕುಸಿಯುವಂತೆ ಮಾಡುವುದು ಕಾಂಗ್ರೆಸ್‌ನ ಗುರಿಯಾಗಿದೆ” ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಒಕ್ಕೂಟದ ಮೈತ್ರಿಯು ಫಲಿಸಿಲ್ಲ. ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದೆ.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ಕ್ರಿಕೆಟ್

Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

Viral Video: 2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು.

VISTARANEWS.COM


on

Viral Video
Koo

ಲಕ್ನೋ: 2 ತಿಂಗಳ ಹಿಂದೆ ಲಂಡನ್​ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿದ್ದ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami)ತಮ್ಮ ಕಾಲಿನ ಗಾಯದಿಂದ ಚೇತರಿಕೆ(Mohammed Shami injury update) ಕಾಣುತ್ತಿದ್ದಾರೆ. ಅಲ್ಲದೆ ಕ್ರಿಕೆಟ್​ಗೆ ಮರಳುವ ನಿಟ್ಟಿನಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಇದೀಗ ಅವರು ತಮ್ಮ ನಿವಾಸದಲ್ಲೆ ನಿರ್ಮಾಣ ಮಾಡಿರುವ ಕ್ರಿಕೆಟ್​ ಪಿಚ್​ನಲ್ಲಿ ರೋಲರ್ ಓಡಿಸಿದ್ದಾರೆ. ಈ ವಿಡಿಯೊವನ್ನು ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ(Viral Video).

ಲಂಡನ್​ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ವಿಶ್ರಾಂತಿಯಲ್ಲಿದ್ದ ಶಮಿ ಇದೀಗ ಮತ್ತೆ ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ನಿನ್ನೆಯಷ್ಟೇ(ಮಂಗಳವಾರ) ವಾಕಿಂಗ್​ ಸ್ಟಿಕ್​ಗಳೊಂದಿಗೆ ತಮ್ಮ ನಿವಾಸದಲ್ಲಿರುವ ಕಿಕೆಟ್​ ಪಿಚ್​ನಲ್ಲಿ ನಡೆದಾಡಿ ಕೆಲ ಕಾಲ ವ್ಯಾಯಾಮ ಕೂಡ ಮಾಡಿದ್ದರು. ಇದರ ಫೋಟೊ ಕೂಡ ಹಂಚಿಕೊಂಡಿದ್ದರು. ಇದೀಗ ಬುಧವಾರ ಪಿಚ್​ ಸಿದ್ಧತೆಯಲ್ಲಿ ತೊಡಗಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಶಮಿ ಯಾವುದೇ ಕ್ರಿಕೆಟ್​ ಆಡಿಲ್ಲ.

2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ವೈರಲ್ ನ್ಯೂಸ್

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Lottery: ಅಮೆರಿಕದ ಮಹಿಳೆಗೆ ಕರೆ ಮಾಡಿ, ನಿಮಗೆ ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದು ಅಧಿಕಾರಿಗಳನ್ನು ಇನ್ನಷ್ಟು ತಬ್ಬಿಬ್ಬಾಗಿಸಿದೆ.

VISTARANEWS.COM


on

Lottery
Koo

ವಾಷಿಂಗ್ಟನ್:‌ ನಿಮಗೆ 5 ಕೋಟಿ ರೂ. ಲಾಟರಿ (Lottery) ಹೊಡೆದಿದೆ ಎಂದು ಕರೆ ಬರುತ್ತದೆ. ಲಾಟರಿ ಕುರಿತು ಮೆಸೇಜ್‌ ಕೂಡ ಬರುತ್ತದೆ. ನಂಬಿ ಅವರು ಕಳುಹಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದರೆ, ನಿಮ್ಮ ಖಾತೆಯಲ್ಲಿರುವ ಹಣ ಕಟ್‌ ಆಗುವುದು ಗ್ಯಾರಂಟಿ. ಇಂತಹ ಸ್ಕ್ಯಾಮ್‌ಗಳಿಂದಲೇ ಜನ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಅನಾಮಧೇಯ ವ್ಯಕ್ತಿಗಳ ಕರೆಗಳಿಗೆ ಪ್ರತಿಕ್ರಿಯೆ ನೀಡಲ್ಲ. ಹೀಗೆ, ಬರುವ ಕರೆಗಳಲ್ಲ ಸ್ಕ್ಯಾಮ್‌ (Cyber Crime) ಎಂದು ತಿಳಿದುಕೊಂಡ ಅಮೆರಿಕದ (America) ಮಹಿಳೆಯೊಬ್ಬರು 1 ಕೋಟಿ ಲಾಟರಿ ಹೊಡೆದಿದೆ ಎಂಬುದಾಗಿ ಬಂದ ಕರೆಯನ್ನು ನಿರ್ಲಕ್ಷಿಸಿದ್ದಾರೆ. ಆದರೆ, ಅವರಿಗೆ ಒಂದು ಕೋಟಿ ರೂ. ಲಾಟರಿ ಮೊತ್ತವನ್ನು ತಲುಪಿಸಲು ಅಧಿಕಾರಿಗಳು ಹೆಣಗಾಡಿದ್ದಾರೆ.

ಹೌದು, ಗ್ರೇಟರ್‌ ಮ್ಯಾಂಚೆಸ್ಟರ್‌ನ ಹೀಲ್ಡ್‌ ಗ್ರೀನ್‌ನಲ್ಲಿರುವ ಅನೆ (Anne) ಎಂಬುವರು ಲಾಟರಿ ಟಿಕೆಟ್‌ ಖರೀದಿಸಿದ್ದರು. ಬಂದರೆ ಬರಲಿ, ಹೋದರೆ ಹೋಗಲಿ ಎಂಬ ಮನಸ್ಥಿತಿಯಲ್ಲಿ ಅವರು ಟಿಕೆಟ್‌ ಖರೀದಿಸಿದ್ದರು. ಟಿಕೆಟ್‌ ಖರೀದಿಸಿ ತುಂಬ ದಿನ ಆದ ಕಾರಣ ನಿರ್ಲಕ್ಷದಿಂದ ಇದ್ದರು. ಆದರೆ, ಕೆಲ ದಿನಗಳ ಹಿಂದಷ್ಟೇ ಅನೆ ಅವರಿಗೆ ಲಾಟರಿ ಕಂಪನಿಯ ಅಧಿಕಾರಿಗಳು ಅನೆ ಅವರಿಗೆ ಕರೆ ಮಾಡಿದ್ದಾರೆ. ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಇದು ಸ್ಕ್ಯಾಮ್‌ ಎಂದ ಅನೆ, ಕಾಲ್‌ ಕಟ್‌ ಮಾಡಿದ್ದಾರೆ.

ಅನೆಗೆ ದುಡ್ಡು ಸಿಕ್ಕಿದ್ದು ಹೇಗೆ?

ಮಹಿಳೆಯು ಲಾಟರಿ ಹೊಡೆದಿದೆ ಎಂದು ಹೇಳಿದರೂ ನಂಬದ ಕಾರಣ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ. ಈಗ ಏನು ಮಾಡುವುದು ಎಂದು ಅನೆ ಅವರಿಗೆ ಮೇಲ್‌ ಮಾಡಿದ್ದಾರೆ. ಲಾಟರಿ ಕುರಿತು ವಿವರಿಸಿದ್ದಾರೆ. ಆದರೆ, ಅನೆ ಅದೇ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಇ-ಮೇಲ್‌ಅನ್ನು ಅವರು ನಿರ್ಲಕ್ಷಿಸಿ ಸುಮ್ಮನಾಗಿದ್ದಾರೆ. ಇದರಿಂದಲೂ ಅಧಿಕಾರಿಗಳಿಗೆ ಗೊಂದಲ ಉಂಟಾಗಿದೆ. ಈಗ ಲಾಟರಿ ಮೊತ್ತವನ್ನು ಇಟ್ಟುಕೊಳ್ಳುವ ಹಾಗೂ ಇಲ್ಲ, ಕೊಡೋಣವೆಂದರೆ ಮಹಿಳೆಯು ಸಿಗುತ್ತಿಲ್ಲ. ಹಾಗಾಗಿ, ಅಧಿಕಾರಿಗಳಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿತ್ತು.

ಲಾಟರಿ ಕಂಪನಿ ಅಧಿಕಾರಿಗಳು ಅಷ್ಟಕ್ಕೇ ಸುಮ್ಮನಾಗಿಲ್ಲ. ಅನೆ ಅವರ ವಿಳಾಸವನ್ನು ಹುಡುಕಿದ್ದಾರೆ. ಗಲ್ಲಿ ಗಲ್ಲಿ ಸುತ್ತಾಡಿ ಕೊನೆಗೂ ಅನೆ ಅವರನ್ನು ಹುಡುಕಿ, ಅವರಿಗೆ ಒಂದು ಕೋಟಿ ರೂ. ಮೌಲ್ಯದ ಚೆಕ್‌ ನೀಡಿದ್ದಾರೆ. ಇದನ್ನು ಕಂಡ ಅನೆ ಹಾಗೂ ಸುತ್ತಮುತ್ತಲಿನವರಿಗೆ ಆಶ್ಚರ್ಯ ಉಂಟಾಗಿದೆ. “ನನಗೆ ಕರೆ ಮಾಡಿದರು, ಇ-ಮೇಲ್‌ ಮಾಡಿದರು. ಇದೆಲ್ಲ ಸ್ಕ್ಯಾಮ್‌ ಇರಬಹುದು ಎಂದು ಸುಮ್ಮನಾದೆ. ಆದರೆ, ಅಧಿಕಾರಿಗಳು ಮನೆಗೇ ಬಂದು ಚೆಕ್‌ ನೀಡಿದ್ದಾರೆ. ಇದರಲ್ಲಿ ಒಂದಷ್ಟು ಹಣವನ್ನು ದಾನವಾಗಿ ನೀಡುವೆ” ಎಂದು ಅನೆ ತಿಳಿಸಿದ್ದಾರೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಮುದ್ರಾ ಯೋಜನೆಯ ಹೆಸರಲ್ಲಿ ರಾಷ್ಟ್ರವ್ಯಾಪಿ ಸೈಬರ್ ವಂಚನೆ

Continue Reading

ಕರ್ನಾಟಕ

Jain Diksha: ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

Jain Diksha: ಬೆಂಗಳೂರು ಮೂಲದ ಉದ್ಯಮಿಯ ಪತ್ನಿ ಹಾಗೂ 11 ವರ್ಷದ ಮಗ ಜೈನ ಸನ್ಯಾಸ ಸ್ವೀಕರಿಸಿದ್ದಾರೆ. ಸದ್ಯ ಅವರು ಗುಜರಾತ್‌ನ ಸೂರತ್‌ನಲ್ಲಿ ನೆಲೆಸಿದ್ದಾರೆ.

VISTARANEWS.COM


on

Jain Diksha
Koo

ಬೆಂಗಳೂರು: ಈಗಿನ ಕಾಲದಲ್ಲಿ ತಂದೆಯಿಂದ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಬಂದರೆ ಯಾರು ಬೇಡವೆನ್ನುತ್ತಾರೆ ಹೇಳಿ? ಸಾಕಷ್ಟು ಹಣವಿದ್ದರೆ ಯಾವುದೇ ಕೆಲಸ, ಒತ್ತಡವಿಲ್ಲದೆ ಆರಾಮವಾಗಿ ಜೀವನ ಕಳೆಯಬಹುದು ಎಂದುಕೊಳ್ಳುವವರು ಹೆಚ್ಚಾಗಿದ್ದಾರೆ. ಆದರೆ, ಇಲ್ಲೊಂದು ಕುಟುಂಬದ ತಾಯಿ-ಮಗ ಮಾತ್ರ, ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದಿರುವುದು ಕಂಡುಬಂದಿದೆ.

ಹೌದು, ಬೆಂಗಳೂರು ಮೂಲದ ಉದ್ಯಮಿ ಮನೀಶ್‌ ಎಂಬುವವರ ಪತ್ನಿ ಸ್ವೀಟಿ (30) ಹಾಗೂ 11 ವರ್ಷದ ಮಗ ಹೃಧನ್ ಇತ್ತೀಚೆಗೆ ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ತಾಯಿ-ಮಗನ ದೀಕ್ಷಾ ಸಮಾರಂಭವು ಗುಜರಾತ್‌ನ ಸೂರತ್‌ನಲ್ಲಿ ಜನವರಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆದಿದೆ. ಇವರಿಬ್ಬರೂ ಈಗ ಸೂರತ್‌ನಲ್ಲಿ ನೆಲೆಸಿದ್ದಾರೆ.

ಜೈನ ದೀಕ್ಷೆಯ ನಂತರ ತಾಯಿ ಸ್ವೀಟಿಗೆ ಭಾವಶುದ್ಧಿ ರೇಖಾ ಶ್ರೀ ಜಿ ಹಾಗೂ ಮಗ ಹೃದನ್‌ಗೆ ಹಿತಶಯ್ ರತನವಿಜಯ್ ಜಿ. ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ತಾಯಿ-ಮಗ ದೀಕ್ಷೆ ಸ್ವೀಕಾರ ಮಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಸನ್ಯಾಸ ದೀಕ್ಷೆ ಸ್ವೀಕರಿಸುವಾಗ ಮಗನ ತಲೆಯನ್ನು ತಾಯಿ ನೇವರಿಸುತ್ತಾ ಭಾವುಕರಾಗಿದ್ದಾರೆ. ಪರಸ್ಪರ ಹಣೆಗೆ ಕುಂಕುಮ ಇಟ್ಟುಕೊಂಡು, ಅಕ್ಷತೆ ಹಾಕಿಕೊಂಡಿದ್ದು, ನಂತರ ಇಬ್ಬರೂ ಶ್ವೇತ ವಸ್ತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಡಿಯೊದಲ್ಲಿದೆ.

ಕುಟುಂಬದ ಸಂಬಂಧಿ ವಿವೇಕ್‌ ಪ್ರತಿಕ್ರಿಯಿಸಿ, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗಲೇ ಸನ್ಯಾಸಿಯಾಗಲು ಬಯಸಿದ್ದರು. ಅದೇ ಸಮಯದಲ್ಲಿ, ತನ್ನ ಮಗು ಕೂಡ ತನ್ನನ್ನು ಅನುಸರಿಸಿ ಜೈನ ಸನ್ಯಾಸಿಯಾಗಬೇಕೆಂದು ನಿರ್ಧರಿಸಿದ್ದರು. ನಂತರ ಮಗ ಕೂಡ ತಾಯಿ ಹಾದಿಯಲ್ಲೇ ನಡೆಯುವುದಾಗಿ ಹೇಳಿದ್ದ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಸಂಕಲ್ಪ ಕೇಳಿದ ನಂತರ ಅವರ ಪತಿ ಮನೀಶ್ ಕೂಡ ಬೆಂಬಲಿಸಿದರು. ಅವರು ದೀಕ್ಷೆ ಪಡೆದಿರುವುದು ಮನೀಶ್ ಮತ್ತು ಕುಟುಂಬದ ಇತರರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Akshay Kumar: ಜೈನ ಸನ್ಯಾಸಿಯ 180 ದಿನಗಳ ಉಪವಾಸ ಬ್ರೇಕ್‌ ಮಾಡಿದ ಅಕ್ಷಯ್ ಕುಮಾರ್!

ಈ ಹಿಂದೆ, ಗುಜರಾತ್‌ನ ಶ್ರೀಮಂತ ಜೈನ ದಂಪತಿ ಸುಮಾರು 200 ಕೋಟಿ ರೂ. ಆಸ್ತಿ ತ್ಯಜಿಸಿ ಸನ್ಯಾಸ ದೀಕ್ಷೆ ಪಡೆದಿದ್ದರು. ಭಾವೇಶ್ ಭಂಡಾರಿ ಮತ್ತು ಪತ್ನಿ ಫೆಬ್ರವರಿಯಲ್ಲಿ ಸನ್ಯಾಸ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮಗ ಮತ್ತು ಮಗಳಿದ್ದು, ಅವರು ಕೂಡ 2022ರಲ್ಲಿಯೇ ದೀಕ್ಷೆ ತೆಗೆದುಕೊಂಡಿದ್ದರು.

Continue Reading
Advertisement
Love Jihad
ದೇಶ28 mins ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ29 mins ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Ikbal hussain
ಕರ್ನಾಟಕ1 hour ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

T20 Rankings
ಕ್ರೀಡೆ1 hour ago

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

Pakistan Teen
ದೇಶ1 hour ago

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Prajwal Revanna Case
ಕರ್ನಾಟಕ2 hours ago

Prajwal Revanna Case: ವಿಡಿಯೊ ಬಿಟ್ಟ ಕಾರ್ತಿಕ್‌ ಎಲ್ಲಿ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು?: ಎಚ್‌ಡಿಕೆ ಕಿಡಿ

KL Rahul
ಕ್ರಿಕೆಟ್2 hours ago

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

Rahul Gandhi
ದೇಶ2 hours ago

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
ಉತ್ತರ ಕನ್ನಡ3 hours ago

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

MLA G Janardan Reddy latest statement in Gangavathi
ಕರ್ನಾಟಕ3 hours ago

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌