Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು? - Vistara News

ವೈರಲ್ ನ್ಯೂಸ್

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

Viral Video: ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿ ಯುವಕನೊಬ್ಬ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮುನ್ನ ಘಟನೆಯನ್ನು ಚಿತ್ರೀಕರಿಸಿ ಆತ್ಮಹತ್ಯೆಯ ಕಾರಣವನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಗ್ರಾಮದ ಮುಖ್ಯಸ್ಥ ಮತ್ತು ಆತನ ಸಹಚರರ ಕಿರುಕುಳಕ್ಕೆ ಹೇಗೆ ಬಲಿಯಾದೆ ಎನ್ನುವುದನ್ನು ವಿವರಿಸಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

‍ಧರ್ಮಶಾಲಾ: ಬೆಚ್ಚಿ ಬೀಳಿಸುವ ಘಟನೆಯೊಂದರಲ್ಲಿ ಯುವಕನೊಬ್ಬ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮುನ್ನ ಘಟನೆಯನ್ನು ಚಿತ್ರೀಕರಿಸಿ ಆತ್ಮಹತ್ಯೆಯ ಕಾರಣವನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral Video). ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತನನ್ನು 22 ವರ್ಷದ ಸುನಿಲ್ ತಿವಾರಿ ಅಲಿಯಾಸ್ ಛೋಟು ಎಂದು ಗುರುತಿಸಲಾಗಿದೆ.

ಸಾಯುವ ಮೊದಲು ಸುನಿಲ್ ತಿವಾರಿ 1 ನಿಮಿಷ 22 ಸೆಕೆಂಡುಗಳ ವಿಡಿಯೊ ರೆಕಾರ್ಡ್ ಮಾಡಿದ್ದಾನೆ. ಅದರಲ್ಲಿ ಆತ ಗ್ರಾಮದ ಮುಖ್ಯಸ್ಥ ಮತ್ತು ಆತನ ಸಹಚರರ ಕಿರುಕುಳಕ್ಕೆ ಹೇಗೆ ಬಲಿಯಾದೆ ಎನ್ನುವುದನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ನೋಡಿದ ನೆಟ್ಟಿಗರು ಆಘಾತ ವ್ಯಕ್ತಪಡಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಹೊಲದಲ್ಲಿ ಕುಳಿತಿರುವ ಸುನಿಲ್ ತಿವಾರಿಯನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತದೆ. ಬಳಿಕ ಆತ ವಿಷದ ಬಾಟಲಿಯನ್ನು ಕ್ಯಾಮೆರಾದ ಎದುರು ಹಿಡಿಯುತ್ತ, ಅಳುತ್ತ ಮಾತನಾಡುತ್ತಾನೆ. ಗ್ರಾಮದ ಮುಖ್ಯಸ್ಥ ಮತ್ತು ಅವನ ಸಹಚರರು ಹೇಗೆ ಕಿರುಕುಳ ನೀಡಿದರು ಎನ್ನುವುದನ್ನು ವಿವರಿಸುತ್ತಾನೆ. ಜತೆಗೆ ವಿಷದ ಮಾತ್ರೆ ಸೇವಿಸಿರುವುದಾಗಿ ತಿಳಿಸಿದ್ದಾನೆ. ಸಾಯಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದರ ಬಗ್ಗೆ ಗೊತ್ತಿಲ್ಲ ಎಂದೂ ಹೇಳುತ್ತಾನೆ.

“ಗ್ರಾಮದ ಮುಖ್ಯಸ್ಥ ಮತ್ತು ಅವನ ಸಹಚರರು ನನಗೆ ಚಿತ್ರಹಿಂಸೆ ನೀಡಿದ್ದಾರೆ ಮತ್ತು ಅದಕ್ಕಾಗಿಯೇ ಇಂದು ನಾನು ನನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ. ನಾನು ಈ ವಿಷವನ್ನು ಸೇವಿಸಿದ್ದೇನೆ ಮತ್ತು ನಾನು ಎಷ್ಟು ಹೊತ್ತು ಬದುಕುತ್ತೇನೆ ಎಂಬುದು ನನಗೆ ತಿಳಿದಿಲ್ಲ. ನಾನು 5 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇನೆ. ನಾನು ಇಂದು ಹೊರಡುತ್ತಿದ್ದೇನೆ. ನಿಮ್ಮ ಪ್ರಾರ್ಥನೆಯಲ್ಲಿ ನನ್ನನ್ನು ನೆನಪಿಸಿಕೊಳ್ಳಿ. ನಾನು ನಿಮ್ಮನ್ನು ಮತ್ತೆ ಎಂದಿಗೂ ಭೇಟಿಯಾಗುವುದಿಲ್ಲʼʼ ಎಂದು ಸುನಿಲ್‌ ಹೇಳಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.

ವರದಿಗಳ ಪ್ರಕಾರ, ಸುನಿಲ್ ಅವರನ್ನು ಬುಧವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಝಾನ್ಸಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ʼʼಕೆಲವು ವ್ಯಕ್ತಿಗಳೊಂದಿಗಿನ ವಿವಾದದ ನಂತರ ನನ್ನ ಸಹೋದರ ಸುನಿಲ್ ವಿಷ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಆರೋಪಿಸಿ ಸುನಿಲ್ ಸಹೋದರ ಶೀತಲ್ ಬುಧವಾರ ಮಜ್ಗವಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

ಇಬ್ಬರ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುನಿಲ್‌ ತನ್ನ ವಿಡಿಯೊದಲ್ಲಿ ಉಲ್ಲೇಖಿಸಿರುವ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬರೈಲ್ ಗ್ರಾಮದ ಮುಖ್ಯಸ್ಥ ದಿನೇಶ್, ರಾಜ್ ಕುಮಾರ್, ಪ್ರಶಾಂತ್, ಧನ್ನಿ ಮತ್ತು ಆಯುಷ್ ವಿರುದ್ಧ ಐಪಿಸಿ ಸೆಕ್ಷನ್ 30 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 18ರಂದು ಹರಿದ್ವಾರ ಬಾಬಾ ಗ್ರಾಮದ ಹೊರಗೆ ಸುನಿಲ್ ಮತ್ತು ಧನ್ನಿ ನಡುವೆ ವಾಗ್ವಾದ ನಡೆದಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಬಂದಾಗ ಸುನಿಲ್ ತನ್ನ ಸಂಬಂಧಿಕರೊಂದಿಗೆ ಹೊರಟು ಹೋಗಿದ್ದ. ಬಳಿಕ ಎರಡೂ ಕಡೆಯವರಿಗೆ ಠಾಣೆಗೆ ಬರಲು ತಿಳಿಸಲಾಗಿತ್ತು. ಆದರೆ ಹಾಜರಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Urvashi Rautela: ಪಂತ್​ ಜತೆ ಮದುವೆಯಾಗುತ್ತೀರಾ?; ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ ಊರ್ವಶಿ ರೌಟೇಲಾ; ವಿಡಿಯೊ ವೈರಲ್​

Urvashi Rautela: ರಿಷಭ್‌ ಪಂತ್ ನಿಮ್ಮನ್ನು ತುಂಬಾ ಗೌರವಿಸುತ್ತಾರೆ, ತುಂಬಾ ಚೆನ್ನಾಗಿಯೂ ನೋಡಿಕೊಳ್ಳುತ್ತಾರೆ, ನೀವು ಅವರನ್ನು ಮದುವೆಯಾಗಬೇಕು ಅನ್ನೋದು ನಮ್ಮ ಬಯಕೆ, ಇದಕ್ಕೆ ಏನಂತೀರಾ?ʼ ಎಂದು ನೆಟ್ಟಿಗನ ಪ್ರಶ್ನೆಗೆ ಉತ್ತರಿಸಿದ ಊರ್ವಶಿ ನೋ ಕಾಮೆಂಟ್ಸ್‌ ಎಂದು ಹೇಳಿದ್ದಾರೆ.

VISTARANEWS.COM


on

Urvashi Rautela
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್(Rishabh Pant)​ ಜತೆ ಮದುವೆಯ ವಿಚಾರಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ಊರ್ವಶಿ ರೌಟೇಲಾ(Urvashi Rautela) ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.

ರಿಷಭ್​ ಪಂತ್ ಮತ್ತು ಊರ್ವಶಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲ ವರ್ಷಗಳ ಹಿಂದೆ ಬಾರೀ ಸದ್ದು ಮಾಡಿತ್ತು. ಇದೇ ವೇಳೆ ಊರ್ವಶಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಭ್‌ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಈ ಬಗ್ಗೆ ರಿಷಭ್‌ ನಟಿಗೆ ಖಡಕ್ ತಿರುಗೇಟು ನೀಡಿದ್ದರು. ಇದೇ ವಿಚಾರವಾಗಿ ಇವರಿಬ್ಬರ ಮಧ್ಯೆ ಟ್ವೀಟ್​ ವಾರ್​ ಕೂಡ ನಡೆದಿತ್ತು. ಈ ಘಟನೆ ನಡೆದ ಬಳಿಕ ಇವರಿಬ್ಬರು ಬ್ರೇಕಪ್​ ಆಗಿದ್ದಾರೆ ಎನ್ನಲಾಗಿತ್ತು. ಇದೀಗ ಅಭಿಮಾನಿಗಳ ಬಯಕೆಯಂತೆ ಪಂತ್​ ಅವರನ್ನು ವಿವಾಹವಾಗುತ್ತೀರ ಎಂದು ಕೇಳಿದ ಪ್ರಶ್ನೆಗೆ ಊರ್ವಶಿ ಸ್ಪಷ್ಟ ಉತ್ತರ ನೀಡಿದ್ದಾರೆ.

ಇದನ್ನೂ ಓದಿ Urvashi Rautela: ಕ್ರಿಕೆಟಿಗರಾದ ಪಂತ್​,ನಸೀಮ್​ಗೆ ಕೈಕೊಟ್ಟು ಖ್ಯಾತ ಫುಟ್ಬಾಲರ್​ ಜತೆ ಡೇಟಿಂಗ್ ಆರಂಭಿಸಿದ ಊರ್ವಶಿ ರೌಟೇಲಾ​

ಪಾಡ್‌ಕಾಸ್ಟ್‌ವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಭಿಮಾನಿಗಳು ಸೋಶಿಯಲ್‌ ಮೀಡಿಯಾಗಳಲ್ಲಿ ಕೇಳಲಾದ ಪ್ರಶ್ನೆಗಳನ್ನು ಊರ್ವಶಿಗೆ ಸಂದರ್ಶಕ ಕೇಳಿದ್ದಾರೆ. ʻರಿಷಭ್‌ ಪಂತ್ ನಿಮ್ಮನ್ನು ತುಂಬಾ ಗೌರವಿಸುತ್ತಾರೆ, ತುಂಬಾ ಚೆನ್ನಾಗಿಯೂ ನೋಡಿಕೊಳ್ಳುತ್ತಾರೆ, ನೀವು ಅವರನ್ನು ಮದುವೆಯಾಗಬೇಕು ಅನ್ನೋದು ನಮ್ಮ ಬಯಕೆ, ಇದಕ್ಕೆ ಏನಂತೀರಾ?ʼ ಎಂದು ನೆಟ್ಟಿಗನ ಪ್ರಶ್ನೆಯೊಂದನ್ನು ಪ್ರಸ್ತಾಪಿಸಿದರು. ಆದರೆ ಊರ್ವಶಿ ಇದಕ್ಕೆ ನೋ ಕಾಮೆಂಟ್ಸ್‌ ಎಂದು ಮದುವೆ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ. ಪಂತ್​ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದಾಗ ಆರೋಗ್ಯ ಸುಧಾರಿಸಿಕೊಳ್ಳಲಿ ಇದಕ್ಕಾಗಿ ಹ್ಯಾಶ್​ ಟ್ಯಾಗ್​ ಹೆಲ್ತ್​ ಎಂದು ಉತ್ತರಿಸಿದರು.  ಪಂತ್​ ಅವರು ಕಾರು ಅಪಘಾತಗೊಂಡಾದ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಧಿಸುವೆ ಎಂಬ ಪೋಸ್ಟರ್​ ಕೂಡ ಹಾಕಿದ್ದರು. 

ಪಾಕ್​ ಆಟಗಾರ ಬಗ್ಗೆ ಮೆಚ್ಚುಗೆ


ಪಾಕಿಸ್ತಾನ ತಂಡದ ಸ್ಟಾರ್‌ ಯುವ ವೇಗಿ ನಸೀಮ್‌ ಶಾ (Naseem Shah) ಬಗ್ಗೆ ಪ್ರಶ್ನೆ ಕೇಳಿದಾಗ, ಖುಷಿಯಿಂದಲೇ ಉತ್ತರಿಸಿದ ಊರ್ವಶಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ ಬೌಲರ್‌ ಎಂದು ಹೇಳಿದರು. ನಸೀಮ್‌ ಒಳ್ಳೆಯ ಬೌಲರ್‌, ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಲ್ಲಂತೂ ಹೆಚ್ಚು ಜನಪ್ರಿಯರಾಗಿದ್ದಾರೆ ಎಂದು ಹೇಳಿದರು. ಸದ್ಯ ನಟಿ ನೀಡಿರುವ ಪ್ರತಿಕ್ರಿಯೆಗೆ ಸೋಶಿಯಲ್‌ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಳೆದ ವರ್ಷ ನಡೆದಿದ್ದ ಏಷ್ಯಾಕಪ್​(Asia cup 2023) ವೇಳೆ ಊರ್ವಶಿ ರೌಟೇಲಾ ಪಾಕಿಸ್ತಾನ ಆಟಗಾರ ನಸೀಮ್ ಶಾ ಅವರು ಸಹ ಆಟಗಾರರೊಂದಿಗಿರುವ ಫೋಟೊವನ್ನು ತಮ್ಮ ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ್ದರು. ದುಬೈನಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ಹಾಜರಾಗಿದ್ದರು. ಅಲ್ಲದೆ ನಸೀಮ್ ಶಾ ಅವರ ದೊಡ್ಡ ಅಭಿಮಾನಿ ಎಂದು ಪೋಸ್ಟ್​ ಕೂಡ ಹಾಕಿದ್ದರು. ಇದು ಮಾತ್ರವಲ್ಲದೆ ನಸೀಮ್‌ ಶಾ ಅವರ ಹುಟ್ಟುಹಬ್ಬಕ್ಕೂ ಶುಭಾಶಯ ಕೋರಿದ್ದರು. ಶುಭಾಶಯದ ಜತೆಗೆ ಡಿಎಸ್‌ಪಿ ಗೌರವ ಪಡೆದಿದ್ದಕ್ಕೂ ನಸೀಮ್ ಶಾ ಅವರಿಗೆ ಊರ್ವಶಿ ಅಭಿನಂದಿಸಿದ್ದರು. ಇದಕ್ಕೆ ನಸೀಮ್ ಶಾ, ‘ಧನ್ಯವಾದಗಳು’ ಎಂದು ಪ್ರತಿಕ್ರಿಕೆ ನೀಡಿದ್ದರು. ಈ ವೇಳೆ ನೆಟ್ಟಿಗರು ಇವರಿಬ್ಬರ ಮಧ್ಯೆ ಪ್ರೇಮಾಂಕುರ ಆಗಿದೆ ಎಂದಿದ್ದರು. ಇದೀಗ ಮತ್ತೆ  ನಸೀಮ್‌ ಅವರನ್ನು ಹೊಗಳಿದ್ದು ನೋಡಿದರೆ ಇವರಿಬ್ಬರು ಪ್ರೀತಿಯ ಬಲೆಯಲ್ಲಿ ಬಿದ್ದಿರುವುದು ನಿಜ ಎನ್ನುವಂತಿದೆ.

Continue Reading

ಕ್ರೀಡೆ

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

MI vs KKR: ಹಾರ್ದಿಕ್​ ಪಾಂಡ್ಯ ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಟಾಸ್​ ನಾಣ್ಯವನ್ನು ದೂರಕ್ಕೆ ಚಿಮ್ಮಿಸಿದರು. ಇದನ್ನು ಕ್ಯಾಮರದಲ್ಲಿ ತೋರಿಸುವ ಮುನ್ನವೇ ಮ್ಯಾಚ್​ ರೆಫ್ರಿ ಪಂಕಜ್ ಧರ್ಮನಿ ನಾಣ್ಯವನ್ನು ಹೆಕ್ಕಿ ಟಾಸ್​ ಮುಂಬೈ ಗೆದ್ದಿದೆ ಎಂದು ಹೇಳಿದರು. ಇದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

MI vs KKR
Koo

ಮುಂಬಯಿ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ಇಂಡಿಯನ್ಸ್(MI vs KKR)​ ತಂಡ ತವರಿನಲ್ಲಿ ಪಂದ್ಯವನ್ನಾಡುವ ವೇಳೆ ತನಗೆ ಅನುಕೂಲವಾಗುವಂತೆ ಟಾಸ್​ ಫಿಕ್ಸಿಂಗ್ಸ್​ ಮಾಡುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು. ಇದಕ್ಕೆ ಕಾರಣ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ(Hardik Pandya) ಟಾಸ್​ ಕಾಯಿನ್​ ದೂರಕ್ಕೆ ಹಾರಿಸುವ ಮೂಲಕ ಬಳಿಕ ಎದುರಾಳಿ ನಾಯಕ ಇದನ್ನು ನೋಡುವ ಮುನ್ನವೇ ಮ್ಯಾಚ್​ ರೆಫ್ರಿ ಕಾಯಿನ್​ ಹೆಕ್ಕಿ ಮುಂಬೈ ಟಾಸ್​ ಗೆದ್ದಿದೆ ಎಂದು ಹೇಳಿದ್ದರು. ಈ ಘಟನೆ ಬಗ್ಗೆ ಭಾರೀ ಚರ್ಚೆಯಾಗಿತ್ತು ಮತ್ತು ಆರ್​ಸಿಬಿ ನಾಯಕ ಫಾರ್ಫ್ ಡುಪ್ಲೆಸಿಸ್​ ಹೈದರಾಬಾದ್​ ವಿರುದ್ಧದ ಪಂದ್ಯದ ವೇಳೆ ಈ ಪ್ಯಾಟ್​ ಕಮಿನ್ಸ್​ ಜತೆ ಈ ಘಟನೆಯನ್ನು ವಿವರಿಸಿದ್ದರು. ಇದರ ವಿಡಿಯೊ ಕೂಡ ವೈರಲ್(viral video)​ ಆಗಿತ್ತು.

ಮುಂಬೈ ಫ್ರಾಂಚೈಸಿ ವಿರುದ್ಧ ಅನೇಕ ಆರೋಪ ಕೇಳಿ ಬಂದ ಬಳಿಕ ಐಪಿಎಲ್​ ಆಡಳಿತ ಮಂಡಳಿ ಎಲ್ಲ ಪಂದ್ಯಗಳ ಟಾಸ್​ ಕಾಯಿನ್ ಕ್ಯಾಮೆರಾದ ಮೂಲಕ ಝೂಮ್​ ಮಾಡಿ ತೋರಿಸಿದ ಬಳಿಕವೇ ಮ್ಯಾಚ್​ ರೆಫ್ರಿ ನಾಣ್ಯವನ್ನು ಹೆಕ್ಕುತ್ತಿದ್ದರು. ಆದರೆ, ಶುಕ್ರವಾರ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಇದು ಕಂಡು ಬರಲಿಲ್ಲ. ಹೀಗಾಗಿ ಮತ್ತೆ ಮುಂಬೈ ವಿರುದ್ಧ ಟಾಸ್​ ಫಿಕ್ಸಿಂಗ್​ ಆರೋಪ ಕೇಳಿಬಂದಿದೆ.​

​ಹೌದು, ಹಾರ್ದಿಕ್​ ಪಾಂಡ್ಯ ಟಾಸ್​ ನಾಣ್ಯವನ್ನು ದೂರಕ್ಕೆ ಚಿಮ್ಮಿಸಿದರು. ಇದನ್ನು ಕ್ಯಾಮರದಲ್ಲಿ ತೋರಿಸುವ ಮುನ್ನವೇ ಮ್ಯಾಚ್​ ರೆಫ್ರಿ ಪಂಕಜ್ ಧರ್ಮನಿ ನಾಣ್ಯವನ್ನು ಹೆಕ್ಕಿ ಟಾಸ್​ ಮುಂಬೈ ಗೆದ್ದಿದೆ ಎಂದು ಹೇಳಿದರು. ಇದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಮ್ಯಾಚ್ ರೆಫರಿ ಮತ್ತೊಮ್ಮೆ ಮುಂಬೈಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಬಳಿಕ ಅನೇಕ ನೆಟ್ಟಿಗರು ಮುಂಬೈ ತಂಡವನ್ನು ಬ್ಯಾನ್​ ಮಾಡುವಂತೆ ಆಗ್ರಹಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ತಂಡಕ್ಕೆ ಚೇಸಿಂಗ್​ ವೇಳೆ ಎದುರಾದ 5ನೇ ಸೋಲು ಇದಾಗಿದೆ. 6 ಪಂದ್ಯಗಳಲ್ಲಿ ಮುಂಬೈ ಚೇಸಿಂಗ್​ ನಡೆಸಿತ್ತು. ಗೆಲುವು ಸಾಧಿಸಿದ್ದು ಒಂದು ಬಾರಿ ಮಾತ್ರ. ಇದು ಆರ್​ಸಿಬಿ ವಿರುದ್ಧ. ಸದ್ಯ ಮುಂಬೈ ತಂಡದ ಪ್ಲೇ ಆಫ್​ ರೇಸ್​ ಬಹುತೇಕ ಅಂತ್ಯ ಕಂಡಿದೆ. 9ನೇ ಸ್ಥಾನದಲ್ಲಿರುವ ಮುಂಬೈಗೆ ಇನ್ನು ಮೂರು ಪಂದ್ಯ ಬಾಕಿ ಇದೆ. ಈ ಪಂದ್ಯ ಗೆದ್ದರೂ ಕೂಡ 12 ಅಂಕ ಆಗಲಿದೆ. ಪ್ಲೇ ಆಫ್​ಗೆ ಈ ಅಂಕ ಸಾಲದು. ಹೀಗಾಗಿ ತಂಡ ಟೂರ್ನಿಯಿಂದ ಹೊರಬಿದ್ದಿದೆ ಎಂದರೂ ತಪ್ಪಾಗಲಾರದು.

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

Continue Reading

ವೈರಲ್ ನ್ಯೂಸ್

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

Viral Video: ಸೋಶಿಯಲ್‌ ಮೀಡಿಯಾದಲ್ಲಿ ವಡಾ ಪಾವ್‌ ಗರ್ಲ್‌ ಎಂದೇ ಫೇಮಸ್‌ ಆಗಿರುವ ಚಂದ್ರಿಕಾ ದೀಕ್ಷಿತ್‌ ಎಂಬಾಕೆ ಕೆಲವು ತಿಂಗಳಿಂದ ಮಂಗಲ್‌ಪುರಿ ಪ್ರದೇಶದಲ್ಲಿ ವಡಾಪಾವ್‌ ಅಂಗಡಿ ಇಟ್ಟುಕೊಂಡು ಮಾರುತ್ತಿದ್ದಳು. ತಕ್ಕ ಮಟ್ಟಿಗೆ ಫೇಮಸ್‌ ಆಗಿದ್ದ ಆಕೆ ವಡಾಪಾವ್‌ ಅಂಗಡಿ ಬಗ್ಗೆ ಅನೇಕ ಫುಡ್‌ ವ್ಲಾಗರ್‌ಗಳು ರಿವ್ಯೂ ಮಾಡಿ ವಿಡಿಯೋವನ್ನೂ ಮಾಡುತ್ತಿದ್ದರು. ಹೀಗಾಗಿಯೇ ಆಕೆ ಫುಲ್‌ ಫೇಮಸ್‌ ಆಗಿದ್ದಳು. ಆದರೆ ಇಷ್ಟು ದಿನ ತನ್ನ ರುಚಿ ರುಚಿಯ ವಡಾಪಾವ್‌ ಮೂಲಕ ಸುದ್ದಿಯಲ್ಲಿದ್ದ ವಡಾಪಾವ್‌ ಗರ್ಲ್‌ ಇದೀಗ ಕಿರಿಕ್‌ ಮೂಲಕ ಸದ್ದು ಮಾಡಿದ್ದಾಳೆ. ಅಲ್ಲದೇ ತನ್ನ ವರ್ತನೆಯಿಂದ ಸಂಕಷ್ಟವನ್ನೂ ಎದುರಿಸುತ್ತಿದ್ದಾಳೆ.

VISTARANEWS.COM


on

Viral Video
Koo

ನವದೆಹಲಿ: ಕೆಲವರಿಗೆ ಇದ್ದಕ್ಕಿದ್ದಂತೆ ಫೇಮಸ್‌ ಆದೆವು ಅಂದರೆ ಅವರ ಆಟಿಟ್ಯೂಡ್‌ ಬೇರೆಯದ್ದೇ ರೀತಿ ಆಗಿರುತ್ತದೆ. ಜನ ತಮ್ಮನ್ನು ಗುರುತಿಸುತ್ತಾರೆ.. ಸೋಶಿಯಲ್‌ ಮೀಡಿಯಾ(Social Media) ಗಳಲ್ಲಿ‌ ಸ್ವಲ್ಪ ಮಟ್ಟಿಗೆ ತಮ್ಮ ಬಗ್ಗೆ ಚರ್ಚೆ ಆಗ್ತಿದೆ ಅಂದ್ರೆ ಸಾಕು ಎಲ್ಲಿಲ್ಲದ ಅಹಂ ಬಂದು ಬಿಡುತ್ತದೆ. ಅಂತಹದ್ದೇ ಒಂದು ಘಟನೆ(Viral Video) ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾ ಗ್ರಾಂ, ಯೂಟ್ಯೂಬ್‌ನಲ್ಲಿ ಚಿರಪರಿಚಿತಳಾಗಿದ್ದ ವಡಾಪಾವ್‌(Vada pav) ಮಾರಾಟಗಾರ್ತಿಯೊಬ್ಬಳು ಸಾರ್ವಜನಿಕರೊಂದಿಗೆ ಕಿರಿಕ್‌ ಮಾಡಿಕೊಂಡು ಸುದ್ದಿಯಲ್ಲಿದ್ದಾಳೆ.

ಸೋಶಿಯಲ್‌ ಮೀಡಿಯಾದಲ್ಲಿ ವಡಾ ಪಾವ್‌ ಗರ್ಲ್‌ ಎಂದೇ ಫೇಮಸ್‌ ಆಗಿರುವ ಚಂದ್ರಿಕಾ ದೀಕ್ಷಿತ್‌ ಎಂಬಾಕೆ ಕೆಲವು ತಿಂಗಳಿಂದ ಮಂಗಲ್‌ಪುರಿ ಪ್ರದೇಶದಲ್ಲಿ ವಡಾಪಾವ್‌ ಅಂಗಡಿ ಇಟ್ಟುಕೊಂಡು ಮಾರುತ್ತಿದ್ದಳು. ತಕ್ಕ ಮಟ್ಟಿಗೆ ಫೇಮಸ್‌ ಆಗಿದ್ದ ಆಕೆ ವಡಾಪಾವ್‌ ಅಂಗಡಿ ಬಗ್ಗೆ ಅನೇಕ ಫುಡ್‌ ವ್ಲಾಗರ್‌ಗಳು ರಿವ್ಯೂ ಮಾಡಿ ವಿಡಿಯೋವನ್ನೂ ಮಾಡುತ್ತಿದ್ದರು. ಹೀಗಾಗಿಯೇ ಆಕೆ ಫುಲ್‌ ಫೇಮಸ್‌ ಆಗಿದ್ದಳು. ಆಕೆಯ ವಿಡಿಯೋ ನೋಡಿ ಅನೇಕರು ಅಲ್ಲಿ ಬಂದು ವಡಾಪಾವ್‌ ಸವಿದು ಹೋಗುತ್ತಿದ್ದರು. ಆದರೆ ಇಷ್ಟು ದಿನ ತನ್ನ ರುಚಿ ರುಚಿಯ ವಡಾಪಾವ್‌ ಮೂಲಕ ಸುದ್ದಿಯಲ್ಲಿದ್ದ ವಡಾಪಾವ್‌ ಗರ್ಲ್‌ ಇದೀಗ ಕಿರಿಕ್‌ ಮೂಲಕ ಸದ್ದು ಮಾಡಿದ್ದಾಳೆ. ಅಲ್ಲದೇ ತನ್ನ ವರ್ತನೆಯಿಂದ ಸಂಕಷ್ಟವನ್ನೂ ಎದುರಿಸುತ್ತಿದ್ದಾಳೆ.

ಏ.27ರಂದು ಚಂದ್ರಿಕಾ ಮತ್ತು ಸಾರ್ವಜನಿಕ ನಡುವೆ ಭಾರೀ ಜಗಳವಾಗಿತ್ತು. ರಸ್ತೆ ಬದಿಯಲ್ಲಿರುವ ಆಕೆಯ ಅಂಗಡಿಯಿಂದಾಗಿ ಸ್ಥಳೀಯರು ಬಹಳ ಟ್ರಾಫಿಕ್‌ ಜಾಮ್‌ ಸಮಸ್ಯೆ ಅನುಭವಿಸುತ್ತಿದ್ದರು ಇದರಿಂದ ಕೋಪಗೊಂಡ ಸ್ಥಳೀಯರೊಬ್ಬರು ಇದನ್ನು ಪ್ರಶ್ನಿಸಿದಾಗ ಆಕೆ ಅವರೊಂದಿಗೆ ಜಗಳ ಶುರು ಮಾಡಿದ್ದಾಳೆ. ಈ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿತ್ತು. ಆಕೆಯ ವರ್ತನೆಗೆ ಹಲವರಿಂದ ಖಂಡನೆ ವ್ಯಕ್ತವಾಗಿತ್ತು. ಬಳಿ ಸ್ಥಳೀಯರು ಚಂದ್ರಿಕಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

ಪೊಲೀಸರ ಜೊತೆಗೂ ಉದ್ದಟತನ

ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ಚಂದ್ರಿಕಾ ಅವರ ಜೊತೆಗೂ ಉದ್ದಟತನ ಪ್ರದರ್ಶಿಸಿದ್ದಾಳೆ. ಪೊಲೀಸರ ಮಾಹಿತಿ ಪ್ರಕಾರ ಚಂದ್ರಿಕಾ ಈ ಅಂಗಡಿಯನ್ನು ಅನಧಿಕೃತವಾಗಿ ನಡೆಸುತ್ತಿದ್ದಳು. ಯಾವುದೇ ಅನುಮತಿಯನ್ನು ಆಕೆ ಪಡೆದಿಲ್ಲ. ಆನ್‌ಲೈನ್‌ ಗ್ರಾಹಕರು ಈ ಈಕೆಯ ಅಂಗಡಿಯನು ಹುಡುಕಿ ಬಂದು ವಡಾಪಾವ್‌ ಸವಿಯುತ್ತಾರೆ. ಹೀಗಾಗಿ ಸದಾ ಈ ಪ್ರದೇಶದಲ್ಲಿ ಜನ ತುಂಬಿ ತುಳುಕುತ್ತಿರುತ್ತದೆ. ಇದರಿಂದ ಸ್ಥಳೀಯರು ತೀವ್ರ ಟ್ರಾಫಿಕ್‌ ಸಮಸ್ಯೆ ಎದುರಿಸುತ್ತಿದ್ದಾರೆ. ವಿಚಾರಣೆಗೆ ಬಂದ ಪೊಲೀಸರ ಜೊತೆಗೂ ಆಕೆ ಅನುಚಿತವಾಗಿ ವರ್ತಿಸಿದ್ದಾಳೆ. ಕೊನೆಗೆ ಆಕೆಯ ಅಂಗಡಿಯನ್ನು ಜಪ್ತಿ ಮಾಡಿ ಆಕೆಯನನು ವಶಕ್ಕೆ ಪಡೆಯಲಾಗಿದೆ. ಆದರೆ ಆಕೆ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಇನ್ನು ಈ ವಡಾಪಾವ್‌ ಗರ್ಲ್‌ ಸಾಮಾಜಿಕ ಜಾಲತಾಣದಲ್ಲಿ 3 ಮಿಲಿಯನ್‌ಗೂ ಹೆಚ್ಚು ಫಾಲೋವರ್ಸ್‌ ಹೊಂದಿದ್ದಾಳೆ

Continue Reading

ಬೆಂಗಳೂರು

Bribery Case : ಕಾಸಿನ ಜತೆಗೆ ಎಣ್ಣೆ ಕೊಟ್ರಷ್ಟೇ ಫೈಲ್‌ ಮೂಮ್ಮೆಂಟ್‌ ; ಇದು ಕುಡುಕ ಪಂಚಾಯಿತಿ ಪಿಡಿಓ ಲಂಚಾವತಾರ

Bribery Case: ಪಿಡಿಓ ಅಧಿಕಾರಿಯ ಲಂಚಾವತಾರಕ್ಕೆ ಜನರು ಸುಸ್ತಾಗಿದ್ದಾರೆ. ಸರ್ಕಾರಿ ಕೆಲಸ ಆಗಬೇಕೆಂದರೆ ಆ ಸರ್ಕಾರಿ ಅಧಿಕಾರಿಗೆ ಹಣದೊಂದಿಗೆ, ದುಬಾರಿ ಮದ್ಯದ ಬಾಟೆಲ್‌ ಕೊಡಿಸಲೇಬೇಕು.

VISTARANEWS.COM


on

By

Bribery Case in Bengaluru news
Koo

ಬೆಂಗಳೂರು: ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತು ಕೇವಲ ಗೋಡೆಗಳ ಮೇಲಿನ ಬರಹಕ್ಕೆ ಅಷ್ಟೇ ಸೀಮಿತವಾಗಿದೆ. ಕೆಲಸ ಮಾಡುವ ಜಾಗ ದೇವಾಲಯ ಎನ್ನುವ ಕಾಲ ಮಾಯವಾಗಿ ಬಹಳ ದಿನಗಳೇ ಕಳೆದಿವೆ. ಸದ್ಯ ಇಲ್ಲೊಬ್ಬ ಅಧಿಕಾರಿ ದೇವಾಲಯವನ್ನೇ ಅಪವಿತ್ರ (Bribery Case) ಮಾಡಿದ್ದಾನೆ. ಕೆಲಸ ಆಗ್ಬೇಕು ಸರ್ ಎಂದು ಆತನ ಬಳಿ ಹೋದರೆ ಹಣದ ಜತೆಗೆ ಎಣ್ಣೆಗೆ ಡಿಮ್ಯಾಂಡ್ ಮಾಡುತ್ತಾನೆ. ದುಡ್ಡು‌, ಡ್ರಿಂಕ್ಸ್ ಮುಂದಿಟ್ಟರೆ ಸಾಕು ರೂಲ್ಸ್ ಬ್ರೇಕ್ ಮಾಡಿ ನಿಮಗೆ ಬೇಕಾದ ರೆಕಾರ್ಡ್ಸ್ ರೆಡಿಯಾಗುತ್ತಂತೆ.

ಅಂದಹಾಗೇ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪಿಡಿಓ ಲಂಚಾವತಾರದ ಕಥೆ ಇದು. ಕಣ್ಣೂರು ಗ್ರಾಮ ಪಂಚಾಯಿತಿ ಪಿಡಿಓ ಮುನಿಚಿಕ್ಕಯ್ಯ ಎಂಬಾತನ ಲಂಚಾವತಾರಕ್ಕೆ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಲ್ಯಾಂಡ್ ಕನ್ವರ್ಷನ್ ಆಗದಿದ್ದರೂ ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡುತ್ತಾರೆ. ರೆವಿನ್ಯೂ ಸೈಟ್‌ಗಳ ಖಾತೆ ಮಾಡಿಕೊಳ್ಳಲು ಒಂದು ಲಕ್ಷ ರೂ. ಫಿಕ್ಸ್ ಮಾಡಿದ್ದರಂತೆ.

ಅರ್ಜಿದಾರನೊಬ್ಬ ಅಕ್ರಮವಾಗಿ ನಿರ್ಮಾಣವಾಗಿದ್ದ ಲೇಔಟ್‌ನ ಕಾಮಗಾರಿ ತಡೆಯೋದಕ್ಕೆ ಅರ್ಜಿ ನೀಡಿದ್ದರು. ನಿಮ್ಮ ಕೆಲಸ ಮುಗಿತು ಅಂದುಕೊಳ್ಳಿ‌.. ಆದರೆ ನನಗೆ ದುಬಾರಿ ಮದ್ಯದ ಬಾಟೆಲ್‌ ಕೊಡಿ ಎನ್ನುತ್ತಾನಂತೆ. ಈ ರೀತಿ ನೂರಾರು ಖಾತೆಯನ್ನು ಅಕ್ರಮ ಎಸಗಿದ್ದಾರೆ. ಅಕ್ರಮದ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳಿಂದ ಯಾವುದೇ ಕ್ರಮ ಇಲ್ಲ ಅರ್ಜಿದಾರರು ಕಿಡಿಕಾರುತ್ತಿದ್ದಾರೆ.

ಇದನ್ನೂ ಓದಿ:Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

ಕಜಕೀಸ್ತಾನ: ರೆಸ್ಟೋರೆಂಟ್‌ವೊಂದರಲ್ಲಿ ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು, ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ಘಟನೆ ಕಜಕೀಸ್ತಾನ(Kajakistan)ದಲ್ಲಿ ನಡೆದಿದೆ. ಘಟನೆಯ ಶಾಕಿಂಗ್‌ ವಿಡಿಯೋ(Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಬೆಚ್ಚಿಬೀಳುವಂತಿದೆ. ಕಜಕೀಸ್ತಾನದ ಮಾಜಿ ಆರ್ಥಿಕ ಸಚಿವನಾಗಿದ್ದ ಕುವಾಂಡಿಕ್ ಬಿಶಿಂಬಾಯೆವ್ ತನ್ನ 31 ವರ್ಷದ ಸಲ್ತಾನೇಟ್‌ ನ್ಯೂಕೆನೋವಾ ಮೇಲೆ ಈ ಡೆಡ್ಲಿ ಅಟ್ಯಾಕ್‌(Deadly Attack) ಮಾಡಿದ್ದಾನೆ. ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಪತ್ನಿ ಕೂದಲು ಹಿಡಿದು ಎಳೆದು ತಂದ ಬಿಶಿಂಬಾಯೆವ್, ಆಕೆಯ ಮುಖಾಮೂತಿ ನೋಡದೇ ಚಚ್ಚುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾವಾಗಿ ಗಾಯಗೊಂಡಿದ್ದ ಸಲ್ತಾನೇಟ್‌ ನ್ಯೂಕೆನೋವಾ ಎಂಡು ಗಂಟೆಗಳ ಬಳಿಕ ಕೊನೆಯುಸಿರೆಳೆದಿದ್ದಾಳೆ. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ವಿಚಾರಣೆ ವೇಳೆ ಸಿಸಿಟಿವಿ ವಿಡಿಯೋವನ್ನು ಪ್ರದರ್ಶಿಸಲಾಯಿತು. ಹೀಗಾಗಿ ಈ ವಿಚಾರ ಮತ್ತೊಮ್ಮೆ ಸುದ್ದಿಯಾಗಿದೆ. ಇನ್ನು ಈ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಮಧ್ಯ ಏಷ್ಯಾದ ರಾಷ್ಟಗಳ ಹತ್ತು ಸಾವಿರಕ್ಕೂ ಅಧಿಕ ಜನರು ಸಹಿ ಹಾಕಿರುವ ಅರ್ಜಿಯನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

ಬಿಶಿಂಬಾಯೆವ್ (44) ಮಾಜಿ ಪ್ರಧಾನಿ ನರ್ಸುಲ್ತಾನ್ ನಜರ್ಬಯೇವ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ಹಿಸುತ್ತಿದ್ದ. 2018ರಲ್ಲಿ ಲಂಚ ಪ್ರಕರಣದಲ್ಲಿ ಆತ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತನ ಪತ್ನಿ ಸಂಬಂಧಿಕರ ರೆಸ್ಟೋರೆಂಟ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಒಂದು ವಾರದವರೆಗೆ ಬಿಶಿಂಬಾಯೆವ್ ತನಗೇನು ಗೊತ್ತಿಲ್ಲ, ತಾನೊಬ್ಬ ಅಮಾಯಕ ಎಂಬಂತೆ ಪೊಲೀಸರ ಎದುರು ನಟಿಸಿದ್ದ. ಆತನ ವಿರುದ್ಧ ಸಾಕ್ಷ್ಯಾಧಾರ ಸಿಗದಂತೆ ರೆಸ್ಟೋರೆಂಟ್‌ ಮಾಲೀಕ, ಸಿಬ್ಬಂದಿಗಳೂ ಸಹಕರಿಸಿದ್ದರು. ಆದರೆ ಕೋರ್ಟ್‌ನಲ್ಲಿ ತಾನೇ ಆಕೆಯಲ್ಲಿ ಹೊಡೆದು ಸಾಯಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

ವೈದ್ಯರ ಮಾಹಿತಿ ಪ್ರಕಾರ ಸಲ್ತಾನೇಟ್‌ ನ್ಯೂಕೆನೋವಾ ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಆಕೆ ಮೃತಪಟ್ಟಿದ್ದಳು. ಇನ್ನು ಆಕೆಯ ಸಹೋದರ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದು, ತನ್ನ ಸಹೋದರಿ ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾನೆ. ಈಗಾಗಲೇ ಮೃತಳಿಗೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದಾರೆ. ರಷ್ಯಾದಂತೆ ಕಜಕೀಸ್ತಾದಲ್ಲೂ ಪುರುಷ ಪ್ರಧಾನ ಸಂಸ್ಕೃತಿ ಚಾಲ್ತಿಯಲ್ಲಿದ್ದು, ಹೀಗಾಗಿ ಕೌಟುಂಬಿಕ ಕಲಹ, ಲೈಂಗಿಕ ದೌರ್ಜನ್ಯ ಮೊದಲಾದ ಅಪರಾಧಗಳು ಹೆಚ್ಚಾಗಿವೆ.2018ರಲ್ಲಿ ವಿಶ್ವಸಂಸ್ಥೆ ನೀಡಿರುವ ವರದಿ ಪ್ರಕಾರ ಪ್ರತಿ ವರ್ಷ 400 ಕ್ಕೂ ಅಧಿಕ ಮಹಿಳೆಯರು ಕೌಟುಂಬಿಕ ಕಲಹಕ್ಕೆ ಬಲಿಯಾಗುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HD Revanna
ಕರ್ನಾಟಕ2 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ2 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ2 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ2 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ2 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ2 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ2 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ3 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ3 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ3 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ21 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌