Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..! - Vistara News

ವೈರಲ್ ನ್ಯೂಸ್

Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

Viral Video: ಸಾಮಾನ್ಯವಾಗಿ ಗದ್ದೆ, ಹೊಲ ಉಳಮೆ ಮಾಡಲು ಟ್ರ್ಯಾಕ್ಟರ್‌ ಅಥವಾ ಸಾಂಪ್ರದಾಯಿಕ ಪದ್ಧತಿ ಅನುಸರಿಸುವುದಾದರೆ ಎತ್ತುಗಳನ್ನು ಬಳಸುತ್ತೇವೆ. ಆದರೆ ಇಲ್ಲೊಬ್ಬ ಭೂಪ ಗದ್ದೆ ಉಳುಮೆ ಬಳಸಿರೋದು ದುಬಾರಿ ಕಾರು. ಈ ಕಾರಿನ ಬೆಲೆ ಐದಲ್ಲ.. ಹತ್ತಲ್ಲ ಬರೋಬ್ಬರಿ 20 ಲಕ್ಷ ರೂ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ.

VISTARANEWS.COM


on

Viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಈಗಿನ ಕಾಲದಲ್ಲಿ ಜನಪ್ರಿಯತೆ ಪಡೆಯಲು ಅಥವಾ ಪ್ರಚಾರ ಪಡೆಯಲು ಜನ ಏನು ಬೇಕಾದರೂ ಮಾಡಲು ತಯಾರಿರುತ್ತಾರೆ. ಬೇಗ ಫೇಮಸ್‌ ಆಗ್ಬೇಕು ಅನ್ನೋ ಹುಚ್ಚಿಗೆ ಬಿದ್ದು ಎಂಥಾ ರಿಸ್ಕ್‌ ತೆಗೆದುಕೊಳ್ಳೋಕೂ ರೆಡಿ ಆಗಿರುತ್ತಾರೆ. ಇಲ್ಲ, ತಮ್ಮ ಬೆಲೆ ಬಾಳುವ ವಸ್ತುಗಳನ್ನೂ ತಮ್ಮ ಮೋಜಿಗೆ ಪಣಕ್ಕಿಡುತ್ತಾರೆ. ಒಟ್ಟಿನಲ್ಲಿ ಪ್ರಚಾರ ಸಿಕ್ಕರೆ ಸಾಕು ಎಂಬ ಭಾವನೆ ಅವರದ್ದಾಗಿರುತ್ತದೆ. ಇದೀಗ ಅಂತಹದ್ದೇ ಒಂದು ಬಹಳ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ ಗದ್ದೆ, ಹೊಲ ಉಳಮೆ ಮಾಡಲು ಟ್ರ್ಯಾಕ್ಟರ್‌ ಅಥವಾ ಸಾಂಪ್ರದಾಯಿಕ ಪದ್ಧತಿ ಅನುಸರಿಸುವುದಾದರೆ ಎತ್ತುಗಳನ್ನು ಬಳಸುತ್ತೇವೆ. ಆದರೆ ಇಲ್ಲೊಬ್ಬ ಭೂಪ ಗದ್ದೆ ಉಳುಮೆ ಬಳಸಿರೋದು ದುಬಾರಿ ಕಾರು(Car). ಈ ಕಾರಿನ ಬೆಲೆ ಐದಲ್ಲ.. ಹತ್ತಲ್ಲ ಬರೋಬ್ಬರಿ 20 ಲಕ್ಷ ರೂ. ಸಾಮಾಜಿಕ ಜಾಲತಾಣ(Social Media)ದಲ್ಲಿ ವಿಡಿಯೋ(Viral Video)ವೊಂದು ವೈರಲ್‌ ಆಗುತ್ತಿದೆ.

ಸ್ಕೋರ್ಪಿಯೋ N ಎಂಬ 20 ಲಕ್ಷ ರೂ ಬೆಲೆ ಈ ದುಬಾರಿ ಕಾರನ್ನು ರೋಡಿನಲ್ಲಿ ಓಡಿಸುವ ಬದಲು ಇಲ್ಲೊಬ್ಬ ಗದ್ದೆ ಉಳುಮೆಗೆ ಬಳಸಿದ್ದಾನೆ. ಲಕ್ಷಾಂತರ ರೂ ಬೆಲೆ ಈ ಸುಂದರ ಕಾರನ್ನು ಟ್ರ್ಯಾಕ್ಟರ್‌ಗಳಾಗಿ ಪರಿವರ್ತಿಸಿ ಉಳುಮೆ ಮಾಡಿದ್ದಾನೆ. ವ್ಯಕ್ತಿಯೊಬ್ಬ ಐಷಾರಾಮಿ ಕಾರಿನೊಂದಿಗೆ ಕೆಸರು ಗದ್ದೆಯನ್ನು ಉಳುಮೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ವೀಡಿಯೋದಲ್ಲಿ ಕಾರಿನ ಹಿಂಬದಿಯಲ್ಲಿ ಟ್ರ್ಯಾಕ್ಟರ್ ನೇಗಿಲು ಜೋಡಿಸಲಾಗಿದ್ದು, ಕಾರು ಹೊಲವನ್ನು ಉಳುಮೆ ಮಾಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಿಂದ ಹಾಗೆಯೇ ಇಳಿಯುತ್ತಾನೆ. ಕಾರು ತನ್ನಷ್ಟಕ್ಕೆ ಮುಂದಕ್ಕೆ ಚಲಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಚಾಲಕ ಮುಖಕ್ಕೆ ಮಾಸ್ಕ್‌ ಹಾಕಿಕೊಂಡಿರುವುದರಿಂದ ಅವನ ಗುರುತು ಪತ್ತೆ ಆಗಿಲ್ಲ. ಇನ್ನು ಡ್ರೈವರ್‌ ಇಲ್ಲದೆಯೇ ಕಾರು ಚಲಿಸುತ್ತದೆ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ. ಇನ್ನು ಇದು ಬರೀ ರೀಲ್ಸ್‌ಗಾಗಿ ಮಾಡಿರುವಂತೆ ಕಾಣುತ್ತಿದೆ. ಈ ಅಚ್ಚರಿಯ ವಿಡಿಯೋ ನೋಡಿ ಹಲವರು ದಂಗಾಗಿದ್ದಾರೆ. ದುಬಾರಿ ಕಾರನ್ನು ಕೊಂಡುಕೊಳ್ಳುವುದಕ್ಕೇ ಕಷ್ಟ ಪಡುತ್ತಿದ್ದರೆ ಈತ ಈ ರೀತಿಯಾಗಿ ಕಾರನ್ನು ಧೂಳಲ್ಲಿ ಮುಳುಗಿಸಿ ಗದ್ದೆ ಉಳುಮೆ ಮಾಡುತ್ತಿದ್ದಾನೆ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

ಈ ಶಾಕಿಂಗ್‌ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ @TorqueIndia ಐಡಿಯೊಂದಿಗೆ ಹಂಚಿಕೊಳ್ಳಲಾಗಿದೆ. ಕೇವಲ 32 ಸೆಕೆಂಡ್ ಗಳ ಈ ವೀಡಿಯೋವನ್ನು ಇದುವರೆಗೆ 2 ಲಕ್ಷ 83 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದು, ನೂರಾರು ಮಂದಿ ವಿಡಿಯೋವನ್ನು ಲೈಕ್ ಮಾಡಿದ್ದಾರೆ. Instagram ನಲ್ಲಿ ರಾಹುಲ್ ರಾವ್ (@rahul_raosaheb) ಅವರು ಹಂಚಿಕೊಂಡಿರುವ ಈ ವಿಡಿಯೋ ನೋಡಿದ ಜನರು ವಿಭಿನ್ನ ಪ್ರತಿಕ್ರಿಯೆ ನೀಡಿದ್ದು, ಈತ ಅಂಬಾನಿಗಿಂತಲೂ ಶ್ರೀಮಂತ ಎಂದು ರಿಯಾಕ್ಟ್‌ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯೊಬ್ಬಳು ನಿಗೂಢವಾಗಿ ಮೃತಪಟ್ಟಿದ್ದಾಳೆ. ಮೊದಮೊದಲು ಯುಡಿಆರ್‌ ಆಗಿದ್ದ ಪ್ರಕರಣ ಇದೀಗ ಕೊಲೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗಿಳಿದಿದ್ದಾರೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಅದೊಂದು ಕೊಲೆ ಪೊಲೀಸರಿಗೆ ತಲೆನೋವಾಗಿದೆ. 13 ವರ್ಷದ ಬಾಲಕಿಯ ನಿಗೂಢ ಸಾವಿನ ಸುತ್ತ ಅನುಮಾನದ ಹುತ್ತ ಮೂಡಿದೆ. ಗರ್ಗಿ ಮುರುಳೀಧರ್ ಎಂಬಾಕೆ ನಿಗೂಢವಾಗಿ ಮೃತಪಟ್ಟವಳು. ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನ ಕೊಂದಿದ್ಯಾರು? ಎಂಬ ಪ್ರಶ್ನೆ ಕಾಡುತ್ತಿದೆ. ಅಸಹಜ ಸಾವು ಅಂದುಕೊಂಡಿದ್ದ ಪೊಲೀಸರಿಗೆ ಪಿಎಂ ಹಾಗೂ ಎಫ್‌ಎಸ್‌ಎಲ್ ರಿಪೋರ್ಟ್ ಅದೊಂದು ಸುಳಿವು ನೀಡಿತ್ತು. ಎರಡು ತಿಂಗಳ ಹಿಂದೆ ಯುಡಿಆರ್ ಆಗಿದ್ದ ಪ್ರಕರಣ ನಂತರ ಕೊಲೆ ಕೇಸ್ ಆಗಿ ಬದಲಾಗಿದೆ.

ಮುರುಳೀಧರ್ ಹಾಗೂ ಶೃತಿ ದೇಶಪಾಂಡೆ ದಂಪತಿಯ ಒಬ್ಬಳೇ ಮಗಳು ಗರ್ಗಿ ಎಂಬಾಕೆ ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರ ಉಷಾ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದರು. ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಗರ್ಗಿ ಮುರಳೀಧರ್, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಎರಡು ತಿಂಗಳು ಟ್ಯೂಷನ್‌ಗೆ ತೆರಳುತ್ತಿದ್ದಳು. ಕೃಷ್ಣ ಮೂರ್ತಿ ಎಂಬುವವರ ಬಳಿ ಗಣಿತ ಟ್ಯೂಷನ್‌ಗೆ ತೆರಳುತ್ತಿದ್ದಳು. ಕಳೆದ ಮೇ 22ರಂದು ಬೆಳಗ್ಗೆ 8:45 ಗರ್ಗಿ ತನ್ನ ಅಮ್ಮನ ಜತೆ ಅಶೋಕನಗರದಲ್ಲಿರುವ ತಾತನ ಮನೆಗೆ ತೆರಳಿದ್ದಳು. ಸಂಜೆ 5:30 ಕ್ಕೆ ತಾಯಿ ಶೃತಿ ದೇಶಪಾಂಡೆ ಹಾಗೂ ಗರ್ಗಿ ಮುರುಳೀಧರ್ ವಾಪಸ್ ಆಗಿದ್ದಳು.

ಸಂಜೆ 7ಕ್ಕೆ ಶೃತಿ ದೇಶಪಾಂಡೆ, ಮಗಳು ಗರ್ಗಿ ಹಾಗೂ ಶೃತಿ ಸಹೋದರಿ ಚಾಟ್ಸ್ ತಿನ್ನಲು ಹೊರಗೆ ಹೋಗಿದ್ದರು. ವಾಪಸ್ 8 ಗಂಟೆಗೆ ಬಂದವರೇ ಗರ್ಗಿ ರಾತ್ರಿ 10:30ಕ್ಕೆ ಮಲಗಲು ರೂಂಗೆ ತೆರಳಿದ್ದಳು. ಎಂದಿನಂತೆ ಬೆಳಗ್ಗೆ 7 ನೋಡಿದಾಗ ಗರ್ಗಿ ಮಲಗಿದ್ದಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಳು. ಎಷ್ಟೇ ಕೂಗಿ ಎಬ್ಬಿಸಿಲು ಪ್ರಯತ್ನಿಸಿದ್ದರು ಎದ್ದೇಳದೆ ಇದ್ದಾಗ ಪೋಷಕರು ಗಾಬರಿಗೊಂಡಿದ್ದರು. ಕೂಡಲೇ ಅಪಾರ್ಟ್‌ಮೆಂಟ್‌ನಲ್ಲಿದ್ದ ವೈದ್ಯರನ್ನು ಕರೆದು ಪರೀಕ್ಷಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ದಾರಿ ಮಧ್ಯೆ ಮೃತಪಟ್ಟಿದ್ದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.

ಇದನ್ನೂ ಓದಿ: Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

ಘಟನೆ ಸಂಬಂಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿತ್ತು. ಆದರೆ ಮಗಳ ದಿಢೀರ್‌ ಸಾವಿನಿಂದ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಆರೋಗ್ಯವಾಗಿದ್ದ ಮಗಳು ಹೀಗೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮೃತಪಟ್ಟಿರುವುದರಿಂದ ಹಲವು ಅನುಮಾನಗಳು ಮೂಡುತ್ತಿವೆ. ಹೀಗಾಗಿ ತನಿಖೆಯನ್ನು ನಡೆಸುವಂತೆ ದೂರು ನೀಡಿದ್ದರು. ಗರ್ಗಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದಾಗ, ಬಾಲಕಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂದು ವರದಿ ಬಂದಿದೆ.

ಹೀಗಾಗಿ ಯುಡಿಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಕೊಲೆಕೇಸ್‌ ದಾಖಲಿಸಿಕೊಂಡಿದ್ದಾರೆ. ಆದರೆ ಮನೆಯೊಳಗೆ ಮಲಗಿದ್ದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದವರು ಯಾರು ಎಂಬ ಪ್ರಶ್ನೆ ಹಾಗೇ ಉಳಿದಿದೆ. ಜುಲೈ 18 ರಂದು ಯುಎಇಆರ್ ಪ್ರಕರಣ 302 ಅಡಿಯಲ್ಲಿ ಎಫ್ಐಆರ್ ಆಗಿ ದಾಖಲಿಸಿಕೊಂಡಿರುವ ಪೊಲೀಸರು, ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದಾರೆ. ಪಿಎಂ ರಿಪೋರ್ಟ್‌ನಲ್ಲಿ ಬಾಲಕಿ ಕಿವಿಯನ್ನು ಬಲವಾಗಿ ಒತ್ತಿದ್ದಾರೆ. ದಿಂಬು ಅಥವಾ ಬೇರೆ ವಸ್ತುವಿನಿಂದ ಉಸಿರುಗಟ್ಟಿಸಿಕೊಂದಿದ್ದಾರೆಂಬ ಮಾಹಿತಿ ಇದೆ. ಪ್ರಕರಣ ಸೂಕ್ಷ್ಮತೆ ಅರಿತ ಡಿಸಿಪಿ ಪ್ರಕರಣವನ್ನು ಎಸಿಪಿಗೆ ರವಾನೆ ಮಾಡಿದ್ದಾರೆ. ಸದ್ಯ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿರುವ ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾವೇರಿ

Road Accident : ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌! ನಿಯಂತ್ರಣ ತಪ್ಪಿ ಗೂಡ್ಸ್‌ ಲಾರಿ ಪಲ್ಟಿ, ಚಾಲಕನ ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್‌!

VISTARANEWS.COM


on

By

Road Accident
Koo

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ‌ ಗೂಡ್ಸ್ ಲಾರಿ (Road Accident) ಪಲ್ಟಿಯಾಗಿದ್ದು, ಸರ್ವೀಸ್ ರಸ್ತೆಯ ಜಾಲರಿಗೆ ಹಾಕಿದ್ದ ಕಬ್ಬಿಣದ ಪೈಪ್ ನೇರವಾಗಿ ಚಾಲಕನ ಎದೆ ಸಿಳಿದೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹೂಲಿಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಚಾಲಕನ ಎದೆಗೆ ಹೊಕ್ಕಿರುವ ಕಬ್ಬಿಣದ ಪೈಪ್ ಹೊರತೆಗೆಯಲು ಹರಸಾಹಸ ಪಡೆಬೇಕಾಯಿತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೈವೇ ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೂಡಲೇ ಚಾಲಕ ಶಿವಾನಂದ ಬಡಗಿ (27) ಎದೆಗೆ ಹೊಕ್ಕಿದ ಕಬ್ಬಿಣದ ಪೈಪ್‌ ಹೊರತೆಗೆಯಲು ಹರಸಾಹಸ ಪಟ್ಟರು.

ಇತ್ತ ಅತಿಯಾದ ನೋವು, ರಕ್ತ ಸೋರುತ್ತಿದ್ದರೂ ಎದೆಯಲ್ಲಿ ಹೊಕ್ಕಿರುವ ಕಬ್ಬಿಣದ ಪೈಪ್ ಕಂಡು ದಿಕ್ಕು ತೋಚದೆ ಚಾಲಕ ಕುಳಿತಿದ್ದ. ಹುಬ್ಬಳ್ಳಿಯಿಂದ ದಾವಣಗೆರೆ ಕಡೆಗೆ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ. ಕೂಡಲೇ ಕಬ್ಬಿಣದ ಪೈಪ್ ಕಟ್‌ ಮಾಡಿ ಚಾಲಕನನ್ನು ಹೊರತೆಗೆದು ಬಳಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

ಜಾಲಿ ರೈಡ್‌ ಮಾಡಲು ಬಂದವರು ಆಸ್ಪತ್ರೆಪಾಲು

ದೊಡ್ಡಬಳ್ಳಾಪುರ: ಜಾಲಿ ರೈಡ್‌ ಮಾಡಲು ಬಂದವರ ಬೈಕ್‌ ಅಪಘಾತಕ್ಕೀಡಾಗಿದ್ದು ಆಸ್ಪತ್ರೆಪಾಲಾಗಿದ್ದಾರೆ. ಜಾಲಿ ರೈಡ್‌ಗೆ ಬಂದು ಯೂ ಟರ್ನ್‌ಗೆ ನಿಂತಿದ್ದ ಬುಲೆಟ್ ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ‌ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನೂರು ಮೀಟರ್ ದೂರ ಹೋಗಿ ಬಿದ್ದ ಬುಲೆಟ್ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ಬಳಿ ಘಟನೆ ನಡೆದಿದೆ.

Road Accident
Road Accident

ಬುಲೆಟ್ ಬೈಕ್ ಸವಾರ ಹೆದ್ದಾರಿಯಲ್ಲಿ ಯೂ ಟರ್ನ್ ಮಾಡಲು ನಿಂತಿದ್ದ . ಈ ವೇಳೆ ಹಿಂದಿನಿಂದ ವೇಗವಾಗಿ ಜಾಲಿ ರೈಡ್ ಬಂದ ಯುವಕ ಬುಲೆಟ್ ಬೈಕ್‌ಗೆ ಗುದ್ದಿದ್ದಾನೆ. ಅಪಘಾತದ ರಭಸಕ್ಕೆ ಬುಲೆಟ್ ಬೈಕ್ ನಜ್ಜುಗುಜ್ಜಾಗಿದೆ. ಬುಲೆಟ್ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ದೊಡ್ಡಬಳ್ಳಾಪುರ ಸರ್ಕಾರಿ ಆಸ್ವತ್ರೆಗೆ ದಾಖಲು ಮಾಡಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Theft Case : ಮನೆಗೆಲಸದವರ ಮಾತು ಕದ್ದು ಕೇಳಿಸಿಕೊಂಡ; ಕೆ.ಜಿ ಗಟ್ಟಲೆ ಚಿನ್ನ ದೋಚಿದ್ದು, 12 ಗಂಟೆಯಲ್ಲೇ ಸಿಕ್ಕಾಕೊಂಡ!

Theft Case : ಮನೆಗೆಲಸದವರ ಮಾತು ಕದ್ದು ಕೇಳಿಸಿಕೊಂಡ ಚಾಲಾಕಿ ಕಳ್ಳನೊಬ್ಬ ಕೆ.ಜಿ ಗಟ್ಟಲೆ ಚಿನ್ನ ದೋಚಿ, ಕೃತ್ಯದ 12 ಗಂಟೆಯಲ್ಲೇ ಗ್ಯಾಂಗ್‌ ಪೂರ್ತಿ ಸಿಕ್ಕಿಹಾಕಿಕೊಂಡಿದ್ದಾರೆ.

VISTARANEWS.COM


on

By

Thief arrested for stealing gold in Bengaluru
Koo

ಬೆಂಗಳೂರು: ಮನೆಕೆಲಸದವರ ಮಾತನ್ನು ಕದ್ದು (Theft Case) ಕೇಳಿ ಹೀಗೂ ಕಳ್ಳತನದ ಪ್ಲ್ಯಾನ್ ಮಾಡಬಹುದಾ? ಇಂತಹದೊಂದು ಘಟನೆಗೆ ಬೆಂಗಳೂರಿನಲ್ಲಿ ನಡೆದಿದೆ. ಮನೆ ಕೆಲಸದವರ ಮಾತನ್ನು ಕದ್ದು ಕೇಳಿಸಿಕೊಂಡ ಖದೀಮ ಕೆ.ಜಿ ಗಟ್ಟಲೆ ಚಿನ್ನ ದೋಚಿದವನು, ಕೃತ್ಯ ನಡೆದ 12 ಗಂಟೆಯಲ್ಲೇ ಸಿಕ್ಕಿಕೊಂಡಿದ್ದಾನೆ. ಸಿನಿಮಾ ಸ್ಟೈಲ್‌ನಲ್ಲೇ ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧಿಯಾಗಿದ್ದಾನೆ. ಸನ್ಯಾಸಿ ನಂದೀಶ್ ಬಂಧಿತ ಆರೋಪಿ.

ದೇವಸ್ಥಾನಕ್ಕೆ ಹೋಗುವವರ ಮನೆ ಟಾರ್ಗೆಟ್ ಮಾಡುತ್ತಿದ್ದವನು ದೇವಸ್ಥಾನವೊಂದರಲ್ಲೇ ಸಿಕ್ಕಿಬಿದ್ದಿದ್ದಾನೆ. ರಾಯರ ದರ್ಶನಕ್ಕೆ ಹೋದವರ ಮನೆ ಕಳ್ಳತನ ಮಾಡಿ, ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಲು ಹೊರಟಿದ್ದ. ಒಂದೂವರೆ ಕೆ.ಜಿ ಚಿನ್ನ ಕದ್ದಿದ್ದ ಖತರ್ನಾಕ್ ಕಳ್ಳನ ಗ್ಯಾಂಗ್‌ ಅನ್ನು ಸುಬ್ರಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ. ಮನೆಗೆಲಸದವರ ಮಾತನ್ನ ಕದ್ದು ಕೇಳಿಸಿಕೊಂಡವನು ಕಳ್ಳತನಕ್ಕೆ ಇಳಿದಿದ್ದ. ಖತರ್ನಾಕ್ ಪ್ಲ್ಯಾನ್ ಮಾಡಿಯೂ 12 ಗಂಟೆಯೊಳಗೆ ಪೊಲೀಸರ ಅತಿಥಿಯಾಗಿದ್ದಾನೆ. ಸನ್ಯಾಸಿ ನಂದೀಶ್, ನಂದೀಶ್ ಪ್ರತಾಪ್ ಬಂಧಿತ ಆರೋಪಿಗಳು. ಆರೋಪಿ ಹನುಮೇಗೌಡ ಎಂಬಾತ ಎಸ್ಕೇಪ್ ಅಗಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮನೆಯವರು ಮಂತ್ರಾಲಯಕ್ಕೆ ಹೋಗುತ್ತಿದ್ದಾರೆ ಎಂದು ಕೆಲಸದವರು ಮಾತಾಡಿದ್ದರು. ಇದನ್ನ ಪಕ್ಕದಲ್ಲೇ ನಿಂತು ಸನ್ಯಾಸಿ ಮಠ ನಂದೀಶ ಕೇಳಿಕೊಂಡಿದ್ದ. ಈ ವಿಚಾರವನ್ನು ತನ್ನ ಸ್ನೇಹಿತರಿಗೆ ಹೇಳಿ ಕಳ್ಳತನಕ್ಕೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದ. ಮನೆಯವರು ಮಂತ್ರಾಲಯಕ್ಕೆ ಹೊರಡುತ್ತಿದ್ದಂತೆ ಮನೆ ಬಳಿ ಕಾದು ಕುಳಿತಿದ್ದ ಈ ಕಿಡಿಗೇಡಿಗಳು, ಮನೆಯ ಹಿಂಬದಿ ಕಿಟಕಿಯನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಮನೆಗೆ ಎಂಟ್ರಿ ಕೊಟ್ಟಿದ್ದರು.

ಮನೆಯಲ್ಲಿದ್ದ 1ಕೆ.ಜಿ 800 ಗ್ರಾಂ ಚಿನ್ನ ಎಗರಿಸಿ ಕಾಲ್ಕಿತ್ತಿದ್ದರು. ಕದ್ದ ಎಲ್ಲ ಚಿನ್ನವನ್ನು ಕೂಡ ರೂಮಿನಲ್ಲೇ ಸನ್ಯಾಸಿ ಮಠ ನಂದೀಶ ಇಟ್ಟಿದ್ದ . ಇತ್ತ ಮನೆ ಮಾಲೀಕರು ಮಂತ್ರಾಲಯದಿಂದ ವಾಪಸು ಬಂದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಸಿಟಿವಿ ಆಧಾರಿಸಿ ಆರೋಪಿಗಳ ಜಾಡು ಹಿಡಿದಿದ್ದ ಪೊಲೀಸರು, ಧರ್ಮಸ್ಥಳ ದರ್ಶನ ಮುಗಿಸಿ ವಾಪಸ್‌ ಬರುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1ಕೆಜಿ 800 ಗ್ರಾಂ ಚಿನ್ನ ಸೇರಿ 18 ಸಾವಿರ ನಗದು ವಶಕ್ಕೆ ಪಡೆದು, ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

ಜಂಗ್ಲಿ ಗ್ಯಾಂಗ್‌ ಅರೆಸ್ಟ್‌

ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿಕೊಂಡು ಬಂದು ಕ್ಷಣಾರ್ಧದಲ್ಲಿ ಬೀಗ ಹೊಡೆದು ಸಿಕ್ಕ ಸಿಕ್ಕ ವಸ್ತುಗಳನ್ನ ಕದ್ದು ಮನೆಗಳವು ಮಾಡಿಕೊಂಡು ಎಸ್ಕೇಪ್ ಆಗುತ್ತಿದ್ದ ಬೆಂಗಳೂರಿನ ಕುಖ್ಯಾತ ಮನೆಗಳ್ಳ ಜಂಗ್ಲಿ ಆ್ಯಂಡ್ ಗ್ಯಾಂಗ್ ಅರೆಸ್ಟ್ ಆಗಿದೆ. ಬೆಂಗಳೂರಿನ ಆರ್.ಆರ್. ನಗರ ಪೊಲೀಸರು ಜೈದೀಪು ಅಲಿಯಾಸ್ ಜಂಗ್ಲಿ, ಚಂದನ್ @ ಗುಂಡ, ಸತೀಶ್ @ಬುಡ್ಡ, ದೀಪಕ್ @ದೀಪು ಮತ್ತು ಮಿಥುನ್ @ ಮಿಲ್ಕಿ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 10.18 ಲಕ್ಷ ರೂ. ಮೌಲ್ಯದ 103 ಗ್ರಾಂ ಚಿನ್ನ, 2 ಕೆ.ಜಿ.ಗೂ ಅಧಿಕ ಬೆಳ್ಳಿ, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಗಳವು ಮಾಡಲಿಕ್ಕೆಂದೆ ಬೈಕ್ ಕಳ್ಳತನ ಮಾಡುತ್ತಿದ್ದರು. ಕದ್ದ ಬೈಕ್‌ಗಳಲ್ಲಿ ರೌಂಡ್ಸ್ ಹಾಕಿ ಒಂಟಿ ಮನೆಗಳನ್ನು ಗುರುತಿಸಿ ಕೈಚಳಕ ತೋರಿಸುತ್ತಿದ್ದರು. ಅದರಂತೆ ಕಳೆದ ಸೆಪ್ಟೆಂಬರ್ 17ರಂದು ಆರ್.ಆರ್.ನಗರದ ಗಟ್ಟಿಗೇರೆ ನಿವಾಸದಲ್ಲಿ ಚಂದ್ರಶೇಖರ ಎಂಬುವರ ಮನೆಗೆ ಕನ್ನಹಾಕಿದ್ದರು. ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬೆಂಗಳೂರಿನ ಕುಖ್ಯಾತ ಕಳ್ಳ ಎಸ್ಕೇಪ್ ಕಾರ್ತಿಕ್‌ನ ಶಿಷ್ಯನೇ ಈ ಜೈದೀಪು. ಇದೀಗ ಈ ಜಂಗ್ಲಿ ಗ್ಯಾಂಗ್‌ ಅರೆಸ್ಟ್‌ ಆಗಿದೆ.

ಇದನ್ನೂ ಓದಿ: Accident Case : ದಾವಣಗೆರೆಯಲ್ಲಿ ದುರಂತ; ಬಿಸಿ ನೀರು ಹಾಗೂ ಬಿಸಿ ಸಾಂಬಾರ್‌ ಬಿದ್ದು ಪ್ರತ್ಯೇಕ ಕಡೆ ಇಬ್ಬರು ಮಕ್ಕಳು ಸಾವು

ಚಿನ್ನ ಕದ್ದು ಸ್ನೇಹಿತರಿಗೆ ಮಾರಾಟ

ಚಿನ್ನಾಭರಣ ಕದ್ದು ತಮ್ಮ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದ ಕಳ್ಳರ ಬಂಧನವಾಗಿದೆ. ವಿಲ್ಲಾಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖದೀಮರು ಹಿಂದಿನ ಬಾಗಿಲಿನಿಂದ ಎಂಟ್ರಿ ಕೊಟ್ಟು ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ರಾಮ್ ಕುಮಾರ್(23), ಇಸೈರಾಜ್ (27) ಬಂಧಿತ ಆರೋಪಿಗಳು. ಎಲ್ಲಾ ಮನೆಯಲ್ಲಿ ಮಲಗಿರುವ ಸಮಯದಲ್ಲೇ ಖದೀಮರು ಕನ್ನ ಹಾಕುತ್ತಿದ್ದರು. ಬೆಂಗಳೂರಿನ ಬಾಗಲೂರು ವ್ಯಾಪ್ತಿಯ ಕಣ್ಣೂರುಹಳ್ಳಿಯ ವಿಲ್ಲಾದಲ್ಲಿ ಕಳ್ಳರು ಕೈಚಳಕ ತೋರಿದ್ದರು.

ವಿಲ್ಲಾ ಮಾಲೀಕ ರಮೇಶ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದ ಬಾಗಲೂರು ಪೊಲೀಸರು, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಬ್ಬರು ಆರೋಪಿಗಳ 252 ಗ್ರಾಂ ಚಿನ್ನಾಭರಣ ಕದ್ದು ಒಂದು ತಿಂಗಳ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಸಿಸಿಟಿವಿ, ಟವರ್ ಲೊಕೇಶನ್ ಟ್ರ್ಯಾಕ್ ಮಾಡಿ ಬಂಧಿಸಲಾಗಿದೆ. ಬಂಧನದ ಬಳಿಕ ಈ ಹಿಂದೆ ಕಳ್ಳತನ ಮಾಡಿದ್ದ ಮತ್ತೊಂದು ಪ್ರಕರಣವು ಬೆಳಕಿಗೆ ಬಂದಿದೆ. ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಇದೇ ಮಾದರಿಯಲ್ಲಿ ಕಳ್ಳತನ ಮಾಡಿದ್ದರು. ಬಂಧಿತರಿಂದ ಒಟ್ಟು 30 ಲಕ್ಷ ಮೌಲ್ಯದ 437 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಉಂಡ ಮನೆಗೆ ಕನ್ನ ಹಾಕಿದ್ದ ಖದೀಮ ಬಂಧನ

ಬೆಂಗಳೂರಿನಲ್ಲಿ ಉಂಡ ಮನೆಗೆ ಕನ್ನ ಹಾಕಿದ್ದ ಖತರ್ನಾಕ್ ಖದೀಮನ ಬಂಧನವಾಗಿದೆ. ಸಿದ್ದಾಪುರ ಪೊಲೀಸರಿಂದ ಚಿಕ್ಕಬಳ್ಳಾಪುರ ಮೂಲದ ನಾರಾಯಣಸ್ವಾಮಿ (33) ಎಂಬ ಆರೋಪಿ ಬಂಧನವಾಗಿದೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ಯರ್ರಿಸ್ವಾಮಿ ಎಂಬ ಚಾಟೆಡ್ ಅಕೌಂಟ್ ಕಚೇರಿ ಹಣ ಕಳವು ಮಾಡಿದ್ದ. ಯರ್ರಿಸ್ವಾಮಿ ಬಳಿ ಕಾರ್ ಡ್ರೈವರ್ ಕಮ್ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದ. ಅದೇ ಕಚೇರಿಯಲ್ಲಿ ನಾರಾಯಣಸ್ವಾಮಿ ಹೆಂಡತಿ ಸಹ ಕೆಲಸ ಮಾಡುತ್ತಿದ್ದಳು. ಯರ್ರಿಸ್ವಾಮಿ ಹಣ ಇಟ್ಟಿದ್ದ ಬಗ್ಗೆ ತಿಳಿದು ಸುಮಾರು 10.95 ಲಕ್ಷ ಹಣ ಎಗರಿಸಿದ್ದ. ಹಣ ಕದ್ದು ಕಾರ್ ಖರೀದಿ ಮಾಡಿ ಟ್ರಿಪ್ ಹೊಡೆಯುತ್ತಿದ್ದ.

ಕದ್ದ ಹಣದಲ್ಲಿ ವಿವೊ ಮೊಬೈಲ್ , ಚಿನ್ನದ ಸರ ಹಾಗೂ ಬ್ರಾಸ್ಲೆಟ್ , ಫಾಸ್ಟ್ರಾಕ್ ವಾಚ್ ಹಾಗೂ ಕಾರು ಖರೀದಿ ಮಾಡಿದ್ದ. ಕದ್ದ ಹಣದಲ್ಲೇ ಒಳ ಉಡುಪಿನಿಂದ ಹಿಡಿದು ಅಡಿಯಿಂದ ಮುಡಿವರೆಗೂ ಎಲ್ಲವನ್ನೂ ಖರೀದಿ ಮಾಡಿದ್ದ. ಈ ಕುರಿತು ಯರ್ರಿಸ್ವಾಮಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸಿಸಿಟಿವಿ ಪರಿಶೀಲನೆ ವೇಳೆ ನಾರಾಯಣಸ್ವಾಮಿ ಡಸ್ಟ್ ಬಿನ್ ಕವರ್‌ನಲ್ಲಿ ಹಣ ಕದ್ದು ಹೋಗುವುದು ಗೊತ್ತಾಗಿತ್ತು. ಪ್ರಕರಣ ದಾಖಲಿಸಿ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಮ್ ಮಾಲೀಕ ಕೊಟ್ಟ ಮಾಹಿತಿ ಮೇರೆಗೆ ಆರೋಪಿ ಬಂಧನವಾಗಿದೆ. ಬಂಧಿತನಿಂದ ಚೈನ್ , ಬ್ರಾಸ್ಲೆಟ್ , ವಿವೊ ಮೊಬೈಲ್ , ಕಾರು, ಫಾಸ್ಟ್ರಾಕ್ ವಾಚ್ ಹಾಗೂ 3.5 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

ಸಿನಿಮಾ ಸ್ಟೈಲ್‌ನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅಂದರ್

ಗ್ರಾಹಕರ ಆತ್ಮತೃಪ್ತಿಯೇ ಈ ಖತರ್ನಾಕ್ ಕಳ್ಳರು ಟಾರ್ಗೆಟ್ ಮಾಡುತ್ತಿದ್ದರು. ಕಸ್ಟಮರ್‌ಗಳಿಂದ ಆರ್ಡರ್ ಪಡೆದು ನಂತರ ಯಾವ ಬೈಕ್ ಬೇಕೋ ಅದೇ ಬೈಕ್ ಕಳ್ಳತನ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಖತರ್ನಾಕ್ ಬೈಕ್ ಕಳ್ಳ ಶಬಾಜ್ ಖಾನ್ ಹಾಗೂ ಓಂ ಇಬ್ಬರು ಬಂಧಿತ ಆರೋಪಿಗಳು. ಒಮ್ಮೆ ಬೈಕ್ ಕದ್ದು ಆನ್‌ಲೈನ್ ನಲ್ಲಿ ಮಾರಾಟ ಮಾಡಿದ್ದರು. ನಂತರ ಆನ್‌ಲೈನ್‌ನಲ್ಲಿ ಕಸ್ಟಮರ್‌ಗಳು ಒಬ್ಬರ ಮೂಲಕ ಮತ್ತೊಬ್ಬರ ಪರಿಚಯವಾಗಿತ್ತು.

15 ರಿಂದ 20 ಸಾವಿರಕ್ಕೆ ಬೈಕ್ ಮಾರಾಟ ಮಾಡುತ್ತಿದ್ದರು. ಮಾರಾಟದ ವೇಳೆ ಯಾರಿಗಾದರೂ ಕಡಿಮೆ ಬೆಲೆಗೆ ಯಾವ ಬೈಕ್ ಬೇಕಾದರೂ ಕೊಡುತ್ತಿವಿ ಎಂದು ಹೇಳುತ್ತಿದ್ದರು. ಕಸ್ಟಮರ್ ಸಿಕ್ಕಾಗ ನಿಮಗೆ ಯಾವ ಮಾದರಿಯ, ಯಾವ ಮಾಡೆಲ್‌ನ ಯಾವ ಕಂಪನಿಯ ಬೈಕ್ ಬೇಕೆಂದು ಮಾಹಿತಿ ಪಡೆಯುತ್ತಿದ್ದರು. ಬೈಕ್ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಕದ್ದ ಹಣದಿಂದ ವಿಲಾಸಿ ಜೀವನ ನಡೆಸುತ್ತಿದ್ದರು. ಬಂಧಿತರಿಂದ ಒಟ್ಟು 12.5 ಲಕ್ಷ ಮೌಲ್ಯದ 13 ಬೈಕ್ ವಶಕ್ಕೆ ಪಡೆಯಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

Actor Darshan : ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆಯನ್ನು ಜ್ಯೋತಿಷಿ ಡಾ ಲಕ್ಷ್ಮೀಕಾಂತ ಆಚಾರ್ಯ ದೃಢೀಕರಿಸಿದ್ದಾರೆ.

VISTARANEWS.COM


on

By

Actor darshan
Koo

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ (Actor Darshan) ಆಶ್ವೀಜ-ಕಾರ್ತಿಕ ಮಾಸದ ಮಧ್ಯ ಭಾಗದಲ್ಲಿ ಬಿಡುಗಡೆ ಆಗುತ್ತಾರೆ ಎಂದು ಸ್ಫೋಟಕ ಭವಿಷ್ಯವನ್ನು ಜ್ಯೋತಿಷಿ ಡಾ.ಲಕ್ಷ್ಮಿಕಾಂತ ಆಚಾರ್ಯ ನುಡಿದಿದ್ದಾರೆ. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದ್ದು, ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. ತುಮಕೂರು ಸನಿಹದ ಚಿನಗ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮೂಕಾಂಬಿಕಾ ದೇವಿ ಹೂ ಪ್ರಸಾದ ಕೊಡುವ ಮೂಲಕ ದರ್ಶನ್ ಬಿಡುಗಡೆಗೆ ಮುನ್ಸೂಚನೆ ಕೊಟ್ಟಿದ್ದಾಳೆ.

Actor darshan
ದರ್ಶನ್‌ ಕುರಿತು ಜ್ಯೋತಿಷ್ಯ ಹೇಳುವಾಗಲೇ ಬಲಗಡೆಯಿಂದ ಹೂ ಪ್ರಸಾದ ಕೊಟ್ಟ ದೇವಿ

ಮೂಕಾಂಬಿಕಾ ದೇವಿ ಆರಾಧಕರು, ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ಅವರು ಈ ಬಗ್ಗೆ ಮಾತಾನಾಡಿದ್ದಾರೆ. ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆ ದೃಢೀಕರಿಸಿದ್ದಾರೆ. ಕಾರ್ತಿಕ್ ಮಾಸದ ಅಂತ್ಯದೊಳಗೆ ನಟ ದರ್ಶನ್ ಬಿಡುಗಡೆ ಆಗುತ್ತಾರೆ. ದರ್ಶನ್ ಅವರ ಜನ್ಮ ಜಾತಕದ ಪ್ರಕಾರ ಶುಭ ಸಮಯ ಪ್ರಾರಂಭವಾಗಿದೆ. ದೇವಿಯ ಆಶೀರ್ವಾದ ಸಂಪೂರ್ಣ ಇದ್ದು, ಎಲ್ಲವೂ ಶುಭ ಆಗುತ್ತದೆ. ದರ್ಶನ್‌ರ ದಶಾಬುಕ್ತಿಗಳು ಅಂತ್ಯವಾಗಿ, ಶುಭ ದಶಾಬುಕ್ತಿಗಳು ಪ್ರಾರಂಭವಾಗಿವೆ. ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಬೇಡ. ಪೂಜೆ-ಪುನಸ್ಕಾರ ಎಲ್ಲವನ್ನೂ ನಡೆಸಿಕೊಂಡು ಬಂದಿರುವುದರಿಂದ ಆ ದೇವಿಯ ಅನುಗ್ರಹ ಇರುತ್ತದೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ ಎಂದು ಜ್ಯೋತಿಷಿ ಡಾ.ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

Actor darshan
Actor Darshan

ಈ ದೇವಿ ಹೂ ಪ್ರಸಾದ ಕೊಟ್ಟರೆ ಇಲ್ಲಿವರೆಗೂ ಯಾವುದೂ ಕೂಡ ಸುಳ್ಳಾಗಿಲ್ಲ. ಸಾಕಷ್ಟು ರೀತಿಯಲ್ಲಿ ಒಳ್ಳೆಯದಾಗಿದೆ ಎಂದು ಭಕ್ತಾಧಿಗಳು ಹೇಳಿಕೊಂಡು ಬಂದಿದ್ದಾರೆ. ಇದಕ್ಕೆ ಸಾಕಷ್ಟು ಉದಾಹರಣೆ ಕೂಡ ಇದೆ. ನಟ ದರ್ಶನ್‌ಗೆ ಇಷ್ಟು ದಿವಸ ಜನ್ಮ‌ ಜಾತಕದಲ್ಲಿ ಗುರುದಶಾಬುಕ್ತಿ ನಡೆಯುತ್ತಿತ್ತು. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದೆ. ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. 2027ರ ನಂತರ ರಾಜಕೀಯದಲ್ಲಿ ಉನ್ನತ ಸ್ಥಾನ ಪಡೆಯುತ್ತಾರೆ. ಹಾಗಾಗಿ ಇದರಲ್ಲಿ ಯಾವುದೇ ಅನುಮಾನ ಬೇಡ. 2027ರ ನಂತರ ದರ್ಶನ್ ಜೀವನ ಶೈಲಿ ಬದಲಾಗಲಿದೆ. ಈಗ 2024ರ ಅಂತ್ಯದಲ್ಲಿ ಇದ್ದೇವೆ, 2025-2026ರ ನಂತರ 2027ರಿಂದ ಒಳ್ಳೆಯ ಸಮಯ ಪ್ರಾರಂಭವಾಗುತ್ತದೆ. ಒಳ್ಳೆಯ ರೀತಿಯ ಜೀವನ ಕಲ್ಪಿಸಿಕೊಡುತ್ತಾಳೆ. ರಾಜಕೀಯ ಪ್ರವೇಶದ ಯೋಗ ಕೂಡ ದರ್ಶನ್‌ಗೆ ಇದೆ. ದಶಾಬುಕ್ತಿಗಳು ಮನುಷ್ಯನ ಜೀವನ ಶೈಲಿಯನ್ನೇ ಬದಲಾಯಿಸಿ ಬಿಡುತ್ತದೆ.

Actor darshan
Actor Darshan

ಒಳ್ಳೆಯದು ಪ್ರಾರಂಭ ಆಗಬೇಕು ಅಂದಾಗ ಕೆಟ್ಟದು ನಮ್ಮ‌ ಕಣ್ಣಿಗೆ ಯಾವುದು ಕಾಣಿಸಲ್ಲ. ದೇವಿಯು ಆಶೀರ್ವಾದ ಮಾಡಿರುವುದರಿಂದ ಅವರ ಜೀವನ ಸುಗಮವಾಗಿ ನಡೆಯುತ್ತದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಚಂಡಿಕಾ ಯಾಗ ಮಾಡಿಸಿದ್ದರು. ಆದಾದ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ಕ್ಷೇತ್ರಕ್ಕೆ ಸಿರಾದ ದಿವಂಗತ ಸತ್ಯನಾರಾಯಣ್, ವಾಸು, ಬೆಮೆಲ್ ಕಾಂತರಾಜು, ಗೌರಿಶಂಕರ್, ಸುರೇಶ್‌ಗೌಡ ಹಾಗೂ ಪರಮೇಶ್ವರ, ಮುದ್ದಹನುಮೇಗೌಡ ಸಾಕಷ್ಟು ರೀತಿಯ ರಾಜಕೀಯ ವ್ಯಕ್ತಿಗಳು ದೇವಿಯ ಆಶೀರ್ವಾದ ಪಡೆದಿದ್ದಾರೆ. ಎಲ್ಲರಿಗೂ ಒಳ್ಳೆಯದಾಗಿರುವ ನಿದರ್ಶನಗಳಿವೆ ಎಂದು ತುಮಕೂರಿನಲ್ಲಿ ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

Actor Darshan
Actor Darshan

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ8 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು10 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ11 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು13 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ13 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ14 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ2 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌