Viral Video: ಮೂರನೇ ಮಹಾಯುದ್ಧ ನಡೆಯುವುದು ಇದೇ ಕಾರಣಕ್ಕಂತೆ! - Vistara News

ವೈರಲ್ ನ್ಯೂಸ್

Viral Video: ಮೂರನೇ ಮಹಾಯುದ್ಧ ನಡೆಯುವುದು ಇದೇ ಕಾರಣಕ್ಕಂತೆ!

Viral Video: ಮದುವೆ ಮನೆಯಲ್ಲಿ ಬಡಿಸಿದ ಖಾದ್ಯದಲ್ಲಿ ಪನೀರ್‌ ಕಡಿಮೆ ಇದ್ದವು ಎನ್ನುವ ಕಾರಣಕ್ಕೆ ಹೊಡೆದಾಟ ನಡೆದಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

paneer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದಲ್ಲಿ ಮದುವೆ ಋತು ಆರಂಭವಾಗಿದೆ. ಈ ಮದುವೆಗಳ ಪೈಕಿ ಕೆಲವೊಂದು ತನ್ನ ಅದ್ಧೂರಿತನದಿಂದ ಗಮನ ಸೆಳೆದರೆ, ಇನ್ನು ಹಲವು ಸರಳವಾಗಿ ನೆರವೇರುತ್ತವೆ. ಈ ಮಧ್ಯೆ ಮದುವೆ ಮನೆಗಳಲ್ಲಿ ನಡೆಯುವ ಗಲಾಟೆ, ವಾಗ್ವಾದಗಳು ಕೂಡ ನೆಟ್ಟಿಗರ ಗಮನ ಸೆಳೆಯುತ್ತವೆ. ಸಾಮಾನ್ಯವಾಗಿ ಅಡುಗೆಯಲ್ಲಿ ನೆಚ್ಚಿನ ಖಾದ್ಯ ಇಲ್ಲವೆಂದೋ, ಅಡುಗೆ ಪ್ರಮಾಣ ಕಡಿಮೆ ಆಗಿದೆಯೆಂದೋ ಗಲಾಟೆ ನಡೆಯುತ್ತವೆ. ಇಲ್ಲೂ ಆಗಿರುವುದು ಕೂಡ ಅದೇ. ಮದುವೆ ಮನೆಯಲ್ಲಿ ಮಾಡಿದ ಖಾದ್ಯದಲ್ಲಿ ಪನೀರ್‌ ಇಲ್ಲವೆನ್ನುವ ಕಾರಣಕ್ಕೆ ಅತಿಥಿಗಳು ಪರಸ್ಪರ ಹೊಡೆದಾಡಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral Video).

ವಿಡಿಯೊದಲ್ಲಿ ವ್ಯಕ್ತಿಗಳು ಪರಸ್ಪರ ಕುರ್ಚಿ, ಪ್ಲೇಟ್‌ಗಳನ್ನು ಎಸೆಯುವುದು ಕಂಡು ಬರುತ್ತದೆ. ಮದುವೆ ಮನೆ ಎನ್ನುವುದನ್ನು ಮರೆತು ಪರಸ್ಪರ ಜಗಳದಲ್ಲಿ ತೊಡಗಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಮದುವೆ ಸಮಯದಲ್ಲಿ ಬಡಿಸಿದ ‘ಮಾತರ್ ಪನೀರ್’ನಲ್ಲಿ ಪನೀರ್ ತುಂಡುಗಳು ಕಡಿಮೆ ಇವೆ ಎನ್ನುವ ಕಾರಣಕ್ಕೆ ಮದುವೆ ಮನೆ ರಣಾಂಗಣವಾಗಿ ಬದಲಾಗಿದೆ ಎಂದು ಕ್ಯಾಪ್ಶನ್‌ನಲ್ಲಿ ಬರೆಯಲಾಗಿದೆ.

ನೆಟ್ಟಿಗರು ಏನಂದ್ರು?

ವಿಡಿಯೊವನ್ನು ಈಗಾಗಲೇ ಸಾವಿರಾರು ಮಂದಿ ನೋಡಿದ್ದಾರೆ. ಸಹಜವಾಗಿಯೇ ನೆಟ್ಟಿಗರು ತಮಾಷೆಯ ಕಮೆಂಟ್‌ ಮೂಲಕ ಕಾಲೆಳೆದಿದ್ದಾರೆ. “ಮೂರನೇ ಮಹಾಯುದ್ಧವು ಪನೀರ್‌ಗಾಗಿ ನಡೆಯುತ್ತದೆ” ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು, ʼʼಪನೀರ್‌ ಇಲ್ಲದಿದ್ದರೆ ಮದುವೆ ಇಲ್ಲʼʼ ಎಂದು ಅಭಿಪ್ರಾಯಪಟ್ಟಿದ್ದಾರೆ. ʼʼಬಿಹಾರಿಗಳಿಂದ ಇದಕ್ಕಿಂತ ಹೆಚ್ಚಿನದ್ದು ನಿರೀಕ್ಷಿಸಲು ಸಾಧ್ಯವೇ?ʼʼ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ʼʼಉತ್ತಮ ಕಾರಣಕ್ಕೆ ಗಲಾಟೆ ನಡೆದಿದೆʼʼ ಎಂದು ಮಗದೊಬ್ಬರು ವ್ಯಂಗ್ಯವಾಡಿದ್ದಾರೆ. ʼʼಇದು ಉತ್ತರ ಪ್ರದೇಶದಲ್ಲಿ ನಡೆದಿರಬೇಕುʼʼ ಎನ್ನುವ ಊಹೆ ಮತ್ತೊಬ್ಬರದ್ದು. ʼʼಇವರು ವಧು-ವರರನ್ನು ಆಶೀರ್ವದಿಸಲು ಬಂದಿದ್ದಾರೆಯೇ ಅಥವಾ ಖಾದ್ಯ ಸೇವಿಸಲು ಬಂದಿದ್ದಾರೆಯೇ?ʼʼ ಎನ್ನುವ ಗೊಂದಲ ಮತ್ತೆ ಕೆಲವರದ್ದು. ʼʼಇದೇ ಕಾರಣಕ್ಕೆ ನಾನು ಮಾಂಸಹಾರಿಯಾಗಿದ್ದುʼʼ ಎಂದಿದ್ದಾರೆ ನೆಟ್ಟಿಗರೊಬ್ಬರು. ಒಟ್ಟಿನಲ್ಲಿ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದೆ. ಮದುವೆ ಮನೆಯ ಸಂಭ್ರಮವನ್ನು ಹಾಳು ಮಾಡುವ ಇಂತಹ ಪ್ರವೃತ್ತಿಗೆ ಬ್ರೇಕ್‌ ಹಾಕಲೇ ಬೇಕು ಎಂದು ಹಲವರು ಧ್ವನಿ ಎತ್ತಿದ್ದಾರೆ. ಮದುವೆಯಲ್ಲಿ ನಡೆಯುವ ಇಂತಹ ಘಟನೆ ಮನೆಯವರಿಗೆ ಯಾವ ರೀತಿಯ ಘಾಸಿ ಮಾಡುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಹೀಗಾಗಿ ವಿವೇಚನೆಯಿಂದ ವರ್ತಿಸಿ ಎಂದು ಕೆಲವರು ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ: Viral Video: ಒಳಗೆ ಸೇರಿದರೆ ಗುಂಡು, ಬೆಕ್ಕೂ ಆಗುವುದು ಗಂಡು!

ಸಿಹಿತಿಂಡಿಗಳ ಕೊರತೆಯಿಂದ ಕೊಲೆ!

ನವೆಂಬರ್‌ 19ರಂದು ಉತ್ತರ ಪ್ರದೇಶದ ಆಗ್ರಾದ ಮದುವೆ ಮನೆಯೊಂದರಲ್ಲಿ ರಸಗುಲ್ಲಾ ಕಡಿಮೆಯಾಗಿದೆ ಎನ್ನುವ ವಿಚಾರಕ್ಕೆ ನಡೆದ ಗಲಾಟೆಯಿಂದ ಸುಮಾರು 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿತ್ತು. ಬ್ರಿಜ್ಭಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ವ್ಯಕ್ತಿಯೊಬ್ಬರು ರಸಗುಲ್ಲಾ ಕೊರತೆ ಬಗ್ಗೆ ಕಮೆಂಟ್‌ ಮಾಡಿದ್ದರು. ಇದರಿಂದ ಜಗಳ ಆರಂಭವಾಗಿತ್ತು. ಅಲ್ಲದೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಎತ್ಮಾದ್‌ಪುರದಲ್ಲಿ ನಡೆದ ಮದುವೆಯೊಂದರಲ್ಲಿ ಸಿಹಿತಿಂಡಿಗಳ ಕೊರತೆ ಬಗ್ಗೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

ರಸ್ತೆಬದಿಯಲ್ಲಿ ಮೊಸಳೆಯನ್ನು ನೋಡಿದ ಮಕ್ಕಳು ಪೋಷಕರನ್ನು ಕರೆಯುತ್ತಾರೆ. ಅವರು ಮಕ್ಕಳನ್ನು ಅದರ ಮುಂದೆ ನಿಂತು ಫೋಟೋಗೆ ಪೋಸ್ ನೀಡುವಂತೆ ಒತ್ತಾಯಿಸುತ್ತಾರೆ. ಮಕ್ಕಳು ಭಯದಿಂದಲೇ ಮೊಸಳೆಯ ಮುಂದೆ ನಿಂತು ಸಾಕಷ್ಟು ಫೋಟೋಗಳಿಗೆ ಪೋಸ್ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದ್ದು, ಸಾಕಷ್ಟು ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

By

Viral video
Koo

ತಂದೆ ತಾಯಿಗೆ ಮಕ್ಕಳೇ ಜೀವವಾಗಿರುತ್ತಾರೆ. ಎಷ್ಟೋ ಸಂದರ್ಭದಲ್ಲಿ ಅವರಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿರುವ ವಿಡಿಯೋವೊಂದು (Viral Video) ಈಗ ಎಲ್ಲ ಪೋಷಕರಲ್ಲೂ ಆತಂಕ ಉಂಟು ಮಾಡಿದೆ ಮಾತ್ರವಲ್ಲ ಸಾಕಷ್ಟು ಆಕ್ರೋಶವನ್ನೂ ಹುಟ್ಟು ಹಾಕಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ (Instagram) ವೈರಲ್ ಆಗಿರುವ ಈ ವಿಡಿಯೋದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಫೋಟೋಗಾಗಿ ಮೊಸಳೆಯ (photo pose with alligator) ಹತ್ತಿರ ನಿಲ್ಲುವಂತೆ ಪ್ರೋತ್ಸಾಹಿಸುತ್ತಿರುವುದನ್ನು ಕಾಣಬಹುದು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳು ರಸ್ತೆಬದಿಯಲ್ಲಿ ಮೊಸಳೆಯನ್ನು ನೋಡಿ ಪೋಷಕರನ್ನು ಕರೆಯುತ್ತಾರೆ. ಅವರು ಮಕ್ಕಳನ್ನು ಅದರ ಮುಂದೆ ನಿಂತು ಫೋಟೋಗೆ ಪೋಸ್ ನೀಡುವಂತೆ ಒತ್ತಾಯಿಸುತ್ತಾರೆ. ಮಕ್ಕಳು ಭಯದಿಂದಲೇ ಮೊಸಳೆಯ ಮುಂದೆ ನಿಂತು ಸಾಕಷ್ಟು ಫೋಟೋಗಳಿಗೆ ಪೋಸ್ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅಜಾಗರೂಕತೆಯ ಈ ದೃಶ್ಯದಲ್ಲಿ ಮೊಸಳೆ ಬಾಯ್ತೆರೆ ದು ನಿಂತಿತ್ತು. ಕೊಂಚ ಎಚ್ಚರ ತಪ್ಪಿದರೂ ಇದು ಬಹುದೊಡ್ಡ ಅನಾಹುತವನ್ನೇ ಉಂಟು ಮಾಡುತ್ತಿತ್ತು. ಆದರೆ ಈ ವಿಡಿಯೋದಲ್ಲಿ ಯಾರೊಬ್ಬರೂ ಅಪಾಯದ ಬಗ್ಗೆ ಯೋಚಿಸದಿರುವುದು ನೆಟ್ಟಿಗರನ್ನು ಕೆರಳಿಸಿದೆ.

ವಿಡಿಯೋದ ಸ್ಥಳ ಮತ್ತು ದಿನಾಂಕವನ್ನು ಪತ್ತೆ ಮಾಡಲಾಗಲಿಲ್ಲ. ಆದರೂ ಇದು ಸುಮಾರು 8 ತಿಂಗಳ ಹಿಂದಿನದ್ದು ಎಂದು ತಿಳಿದು ಬಂದಿದ್ದು, ಎಜೆ ಎಲ್ಲಿಸ್ ಎಂಬ ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಸುಮಾರು 1.6 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ. ಕಾಮೆಂಟ್ ವಿಭಾಗದಲ್ಲಿ ನೆಟ್ಟಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.


ಒಬ್ಬ ಬಳಕೆದಾರರು , ಪೋಷಕರು ಇದನ್ನು ಹೇಗೆ ಅನುಮತಿಸಬಹುದು? ಎಂದು ಪ್ರಶ್ನಿಸಿದ್ದರೆ ಇನ್ನೊಬ್ಬರು ಖಂಡಿತವಾಗಿ, ಪೋಷಕರು ಮೊಸಳೆಯೊಂದಿಗೆ ಮಕ್ಕಳನ್ನು ಸ್ನೇಹಶೀಲವಾಗಿರಲು ಬಿಡುವುದು ಅದ್ಭುತ ಕ್ರಮವಾಗಿದೆ ಎಂದು ಹೇಳಿದ್ದಾರೆ.

ಇನ್ನೊಬ್ಬರು ಇದು ಹುಚ್ಚುತನ. ಮೊಸಳೆಗಳು ಕೆಲವೇ ಸೆಕೆಂಡುಗಳಲ್ಲಿ ದಾಳಿ ನಡೆಸಿದ್ದನ್ನು ನಾನು ನೋಡಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

ಪೋಷಕರಿಗೆ ಇದು ತಮಾಷೆಯಾದರೆ ಮಕ್ಕಳಿಗೆ ಇದು ಭಯವನ್ನು ಉಂಟು ಮಾಡಿದೆ ಎಂದು ಇನ್ನೊಬ್ಬರು ಕಾಮೆಂಟ್ ವಿಭಾಗದಲ್ಲಿ ಹೇಳಿದ್ದಾರೆ.

ಮತ್ತೊಬ್ಬರು ಜನರಿಗೆ ಇದು ನಿಜವಾಗಿಯೂ ಅರ್ಥವಾಗುವುದಿಲ್ಲ. ಮೊಸಳೆಗಳು ನೀರು, ಭೂಮಿಯಲ್ಲಿ ಎಷ್ಟು ವೇಗವಾಗಿ ಇರುತ್ತದೆ ಎಂದು ಯಾರೂ ಯೋಚಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನೊಬ್ಬ ಬಳಕೆದಾರರು, ಮೊಸಳೆಯದ್ದು ಆಕಳಿಕೆ ಅಲ್ಲ. ಅದು ಅಲ್ಲಿರುವ ಜನರಲ್ಲಿ ಒಬ್ಬರು ತನ್ನ ಬಾಯಿಗೆ ಹೊಂದಿಕೊಳ್ಳುತ್ತಾರೆಯೇ ಎಂದು ಯೋಚಿಸುತ್ತಿದೆ ಎಂದು ತಿಳಿಸಿದ್ದಾರೆ.

Continue Reading

ದೇಶ

Vande Bharat Express: ಮತ್ತೆ ಸುದ್ದಿಯಾದ ವಂದೇ ಭಾರತ್‌ ರೈಲು; ಮಾಂಸಾಹಾರ ಸರ್ವ್‌ ಮಾಡಿದ ಸಿಬ್ಬಂದಿಗೆ ಕಪಾಳಮೋಕ್ಷ

Vande Bharat Express: ಊಟದ ಪ್ಯಾಕೆಟ್‌ನಲ್ಲಿನ ಲೇಬಲ್ ಅನ್ನು ಗಮನಿಸದ ಹಿರಿಯ ವ್ಯಕ್ತಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾರೆ. ತಿಂದ ನಂತರ ಮಾಂಸಾಹಾರವೆಂದು ಗೊತ್ತಾಗಿದ್ದು, ಇದರಿಂದ ಕುಪಿತಗೊಂಡ ಅವರು ಆಹಾರ ವಿತರಿಸಿದ ಸಿಬ್ಬಂದಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

VISTARANEWS.COM


on

Vande Bharat Express
Koo

ನವದೆಹಲಿ: ವಂದೇ ಭಾರತ್‌ ರೈಲು(Vande Bharat Express) ಶುರುವಾದ ನಂತರ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇದೆ. ಕೆಲವೊಮ್ಮೆ ರೈಲಿನ ಮೇಲೆ ಕಲ್ಲೆಸೆತ, ಇನ್ನು ಕೆಲವೊಮ್ಮೆ ರೈಲಿನಲ್ಲಿ ಸಿಗುವ ಕಳಪೆ ಊಟ ಹೀಗೆ ಸದಾ ಯಾವುದಾದರೂ ವಿವಾದಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಹಿರಿಯ ಪ್ರಯಾಣಿಕರೊಬ್ಬರು (Elderly Passenger), ತಾವು ಕೇಳಿದ ಸಸ್ಯಾಹಾರದ (Vegetarian) ಬದಲಿಗೆ ಮಾಂಸಾಹಾರವನ್ನು (Non-Vegetarian Meal) ನೀಡಿದ್ದಾನೆಂದು ಆಹಾರ ವಿತರಕ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆ ವಿವರ:

ಹೌರಾದಿಂದ ರಾಂಚಿಗೆ (Ranchi) ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಜುಲೈ 26 ರಂದು ನಡೆದ ಈ ಘಟನೆಯನ್ನು ಸಹ-ಪ್ರಯಾಣಿಕ ಕುನಾಲ್ ವರ್ಮಾ ಅವರು ವಿಡಿಯೋ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಊಟದ ಪ್ಯಾಕೆಟ್‌ನಲ್ಲಿನ ಲೇಬಲ್ ಅನ್ನು ಗಮನಿಸದ ಹಿರಿಯ ವ್ಯಕ್ತಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾರೆ. ತಿಂದ ನಂತರ ಮಾಂಸಾಹಾರವೆಂದು ಗೊತ್ತಾಗಿದ್ದು, ಇದರಿಂದ ಕುಪಿತಗೊಂಡ ಅವರು ಆಹಾರ ವಿತರಿಸಿದ ಸಿಬ್ಬಂದಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಇದು ಇತರ ಪ್ರಯಾಣಿಕರಿಗೆ ಹಿಡಿಸಲಿಲ್ಲ, ಮಧ್ಯಪ್ರವೇಶಿಸಿದ ಪ್ರಯಾಣಿಕರು ಹಿರಿಯ ಪ್ರಯಾಣಿಕ ಆಹಾರ ವಿತರಕ ಸಿಬ್ಬಂದಿಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಪ್ರಯಾಣಿಕನ ವರ್ತನೆಗೆ ಅಸಮಾಧಾನಗೊಂಡಿರುವ ಸಹ ಪ್ರಯಾಣಿಕರು ಆತನ ವಿರುದ್ಧ ಹರಿಹಾಯ್ದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ನೀವು ಏಕೆ ಅವರಿಗೆ ಹೊಡೆಯತ್ತಿದ್ದೀರಿ? ನಿಮ್ಮ ವಯಸ್ಸನ್ನು ನೋಡಿ. ವಯಸ್ಸಿಗೆ ತಕ್ಕಂತೆ ವರ್ತಿಸಿ ಎಂದು ಹೇಳಿದ್ದಾರೆ ಈ ವೇಳೆ ಆಹಾರ ವಿತರಿಸಿದ ಸಿಬ್ಬಂದಿ ಪದೇ ಪದೇ ಕ್ಷಮೆಯಾಚಿಸುವುದನ್ನು ಕಾಣಬಹುದು. ಇತರ ಪ್ರಯಾಣಿಕರು ಹಿರಿಯ ವ್ಯಕ್ತಿಯನ್ನು ಕ್ಷಮೆಯಾಚಿಸಿ ಎಂದು ಹೇಳುತ್ತಾರೆ.

ಇನ್ನು ಘಟನೆಯ ಬಗ್ಗೆ ಪೂರ್ವ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಾಶ್ ಚರಣ್ ಪ್ರತಿಕ್ರಿಯಿಸಿದ್ದು, ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಅದನ್ನು ಬಗೆಹರಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ವೃದ್ಧನ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Continue Reading

Latest

Viral Video: ಮಲಗಿದ್ದ ಮಹಿಳೆಯ ತಲೆಕೂದಲಿನಲ್ಲಿ ಹರಿದಾಡಿದ ಹಾವು!

Viral Video: ಹಾವೆಂದರೆ ಎಲ್ಲರೂ ಬೆಚ್ಚಿಬೀಳುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆಯ ತಲೆಯಿಂದ ಹಾವು ನಿಧಾನಕ್ಕೆ ತೆವಳುತ್ತ ಹೋಗುತ್ತಿರುವ ವಿಡಿಯೊವೊಂದು ಎಲ್ಲೆಡೆ ವೈರಲ್ ಆಗಿದೆ.ಮಲಗಿದ್ದ ಮಹಿಳೆಯ ಕೂದಲಿನ ಮೂಲಕ ಹಾವು ನಿಧಾನಕ್ಕೆ ತೆವಳಿ, ಆಕೆಯ ಕೂದಲನ್ನು ಸುತ್ತಿ, ಅವಳ ತಲೆಯ ಹಿಂಭಾಗಕ್ಕೆ ಹೋಗಿದೆ. ಮಹಿಳೆಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ತೋರುತ್ತದೆ.. ಇದು ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ: ಹಾವು ಮನೆಯ ಹಿತ್ತಲಿನಲ್ಲಿ, ರಸ್ತೆಯ ಬದಿಯಲ್ಲಿ ಹರಿದಾಡುವುದನ್ನು ನಾವು ನೋಡಿರುತ್ತೇವೆ. ಹಾಗೇ ಕೆಲವೊಮ್ಮೆ ಹಾವು ಮನೆಯೊಳಗೆ ಅಡುಗೆ ಮನೆಯಲ್ಲಿ, ಶೌಚಾಲಯದಲ್ಲಿ ಹರಿದಾಡುತ್ತವೆ. ಅದರಲ್ಲೂ ಮಹಿಳೆಯರು ಹಾವನ್ನು ನೋಡಿದರೆ ಭಯಭೀತರಾಗುತ್ತಾರೆ. ಆದರೆ ಇಲ್ಲೊಂದು ಹಾವು ಮಲಗಿದ್ದ ಮಹಿಳೆಯ ತಲೆಯ ಕೂದಲಿನಲ್ಲಿ ಹರಿದಾಡುತ್ತಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಮಲಗಿದ್ದ ಮಹಿಳೆಯ ಕೂದಲಿನ ಮೂಲಕ ಹಾವು ತೆವಳುತ್ತಿದೆ. ಹಾವು ಆಕೆಯ ಕೂದಲನ್ನು ಸುತ್ತಿ, ಅವಳ ತಲೆಯ ಹಿಂಭಾಗಕ್ಕೆ ಹೋಗಿದೆ. ಮಹಿಳೆಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ತೋರುತ್ತದೆ. @kashikyatra ಎಂಬ ಇನ್ಸ್ಟಾಗ್ರಾಮ್ ಬಳಕೆದಾರರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ಸಖತ್ ವೈರಲ್ ಆಗಿದೆ. ಈ ವೈರಲ್ ವಿಡಿಯೊಗೆ “ಲೇಹ್ ಲಡಾಖ್ ಬೈಕ್ ರೈಡ್ ಟೂರ್ ಪ್ಯಾಕೇಜ್” ಎಂದು ಶೀರ್ಷಿಕೆ ನೀಡಲಾಗಿದೆ.

ಸುಮಾರು 2.1 ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ಬಳಕೆದಾರರು ತನ್ನ ಖಾತೆಯಲ್ಲಿ ಇಂತಹ ಅನೇಕ ಭಯಾನಕ ಹಾವಿನ ವಿಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಇದು ಒಂದು. ಈ ವಿಡಿಯೊ ಅನೇಕರ ಗಮನವನ್ನು ಸೆಳೆದಿದೆ ಮತ್ತು ಹಲವಾರು ನೆಟ್ಟಿಗರು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಈ ವಿಡಿಯೊವನ್ನು 226 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ ಮತ್ತು 128 ಸಾವಿರ ಜನರು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ಗೆ ಸುಮಾರು 2,098 ಜನರು ಕಾಮೆಂಟ್ ಮಾಡಿದ್ದಾರೆ. ಇದನ್ನು ವೀಕ್ಷಿಸಿದವರಲ್ಲಿ ಹೆಚ್ಚಿನವರು ಆಘಾತಕ್ಕೊಳಗಾಗಿದ್ದಾರೆ ಮತ್ತು ಎಮೋಜಿಗಳ ಮೂಲಕ ಅದನ್ನು ವ್ಯಕ್ತಪಡಿಸಿದ್ದಾರೆ.

ಹಾವು ಮಹಿಳೆಯ ಕೂದಲನ್ನು ಸುರಕ್ಷಿತ ಮತ್ತು ಬೆಚ್ಚಗಿನ ಸ್ಥಳವೆಂದು ತಪ್ಪಾಗಿ ಭಾವಿಸಿರಬಹುದು ಎಂದು ಊಹಿಸಲಾಗಿದೆ. ಒಬ್ಬ ಬಳಕೆದಾರರು “ಹರ್ ಹರ್ ಮಹಾದೇವ್” ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು ಹಾವನ್ನು ಬಫ್ ಪಟ್ಟಿಯ ಕೀಲ್ಬ್ಯಾಕ್ ಎಂದು ಗುರುತಿಸಿದ್ದಾರೆ, ಬಿಹಾರದಲ್ಲಿ ಇದೇ ರೀತಿಯ ಹಾವುಗಳೊಂದಿಗೆ ಆಡಿದ ಬಾಲ್ಯದ ನೆನಪುಗಳನ್ನು ನೆನಪಿಸಿಕೊಂಡಿದ್ದಾರೆ. ಈ ರೀತಿಯ ಹಾವು ಹಾನಿಕಾರಕವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

ವೈರಲ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಜನರ ಗಮನವನ್ನು ಸೆಳೆದಿದೆ, ಇದು ವನ್ಯಜೀವಿಗಳು ಮಾನವರೊಂದಿಗೆ ಸಂವಹನ ನಡೆಸುವ ಅನಿರೀಕ್ಷಿತ ವಿಧಾನವಾಗಿದೆ ಎನ್ನಲಾಗಿದೆ. ಒಬ್ಬ ವ್ಯಕ್ತಿಗೆ ತುಂಬಾ ಹತ್ತಿರದಲ್ಲಿ ಹಾವನ್ನು ನೋಡುವುದು ಭಯವನ್ನು ಹುಟ್ಟಿಸಿದರೂ ನಮ್ಮ ಪರಿಸರದೊಂದಿಗೆ ನಾವು ಹಂಚಿಕೊಳ್ಳುವ ಜೀವಿಗಳನ್ನು ಗೌರವಿಸುವ ಮತ್ತು ಅರ್ಥಮಾಡಿಕೊಳ್ಳುವ ಮಹತ್ವವನ್ನು ಇದು ಎತ್ತಿ ತೋರಿಸುತ್ತದೆ.

Continue Reading

Latest

Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

Viral Video: ಹಲ್ಲಿಯೊಂದನ್ನು ಬಂಡೆಯ ಅಂಚಿನ ಮೇಲೆ ಹಾವೊಂದು ಹಿಡಿದು ಅದರ ದೇಹವನ್ನು ಸುತ್ತಿಕೊಂಡಿತ್ತು. ಹಾವಿನ ಬಿಗಿಯಾದ ಹಿಡಿತದಿಂದ ಒದ್ದಾಡುತ್ತಾ ಆ ಹಲ್ಲಿ ತನ್ನ ಜೀವಕ್ಕಾಗಿ ಹೋರಾಡುತ್ತಿತ್ತು. ಆದರೆ ಹಾವಿನ ಬಿಗಿಯಾದ ಹಿಡಿತದೊಂದಿಗೆ ಹೋರಾಡುತ್ತಿರುವ ಹಲ್ಲಿಗೆ ಇನ್ನು ಆಯುಷ್ಯವಿದ್ದಿರಬೇಕು. ಹಾಗಾಗಿ ಈ ಸಮಯದಲ್ಲಿ ಅಲ್ಲಿಗೆ ಬಂದ ಮತ್ತೊಂದು ಹಲ್ಲಿ ಧೈರ್ಯದಿಂದ ತನ್ನ ಸ್ನೇಹಿತನಿಗೆ ಸಹಾಯ ಮಾಡಲು ಮುಂದಾಗುವುದನ್ನು ನೋಡಿದರೆ ಎಂಥವರಿಗೂ ಆಶ್ಚರ್ಯವಾಗುವುದು ಖಂಡಿತ.

VISTARANEWS.COM


on

Viral Video
Koo


ಸಾಮಾನ್ಯವಾಗಿ ಮನುಷ್ಯರಲ್ಲಿ ಸ್ನೇಹಿತನೊಬ್ಬ ಸಂಕಷ್ಟದಲ್ಲಿದ್ದಾಗ ಮತ್ತೊಬ್ಬ ಸ್ನೇಹಿತ ಸಹಾಯಕ್ಕೆ ಬರುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಹಾಗೇ ಪ್ರಾಣಿಗಳು ಸಹ ತಮ್ಮ ಸ್ನೇಹಿತನ ಮೇಲೆ ಆಕ್ರಮಣ ನಡೆದರೆ ಅದನ್ನು ಕಾಪಾಡಲು ಬರುವುದನ್ನು ನಾವು ಹಲವು ಬಾರಿ ನೋಡಿರುತ್ತೇವೆ. ಆದರೆ ಚಿಕ್ಕ ಪುಟ್ಟ ಜೀವಿಗಳು ಕೂಡ ತಮ್ಮ ಸಹಚರರು ಸಂಕಷ್ಟದಲ್ಲಿದ್ದಾಗ ಸಹಾಯಕ್ಕೆ ಬರುವುದನ್ನು ನೋಡಿದಾಗ ಆಶ್ಚರ್ಯವಾಗುವುದು ಖಂಡಿತ. ಇದೀಗ ಹಲ್ಲಿಯೊಂದು ಸಂಕಷ್ಟದಲ್ಲಿರುವ ತನ್ನ ಸ್ನೇಹಿತನ ಸಹಾಯಕ್ಕೆ ಬಂದು ಅದರ ಜೀವ ಉಳಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ. ಇದನ್ನು ಕಂಡು ಅನೇಕರು ಆಶ್ಚರ್ಯಚಕಿತರಾಗಿದ್ದಾರೆ.

ಹಲ್ಲಿಯೊಂದನ್ನು ಬಂಡೆಯ ಅಂಚಿನ ಮೇಲೆ ಹಾವೊಂದು ಹಿಡಿದು ಅದರ ದೇಹವನ್ನು ಸುತ್ತಿಕೊಂಡಿತ್ತು. ಹಾವಿನ ಬಿಗಿಯಾದ ಹಿಡಿತದಿಂದ ಒದ್ದಾಡುತ್ತಾ ಆ ಹಲ್ಲಿ ತನ್ನ ಜೀವಕ್ಕಾಗಿ ಹೋರಾಡುತ್ತಿತ್ತು. ಆದರೆ ಹಾವಿನ ಬಿಗಿಯಾದ ಹಿಡಿತದೊಂದಿಗೆ ಹೋರಾಡುತ್ತಿರುವ ಹಲ್ಲಿಗೆ ಇನ್ನು ಆಯುಷ್ಯವಿದ್ದಿರಬೇಕು. ಹಾಗಾಗಿ ಈ ಸಮಯದಲ್ಲಿ ಅಲ್ಲಿಗೆ ಬಂದ ಮತ್ತೊಂದು ಹಲ್ಲಿ ಧೈರ್ಯದಿಂದ ತನ್ನ ಸ್ನೇಹಿತನಿಗೆ ಸಹಾಯ ಮಾಡಲು ಮುಂದಾಗುವುದನ್ನು ನೋಡಿದರೆ ಎಂತವರಿಗೂ ಆಶ್ಚರ್ಯವಾಗುವುದು ಖಂಡಿತ.

ಹಲ್ಲಿ ಹಾವನ್ನು ಮುಖಾಮುಖಿಯಾಗಿ ಎದುರಿಸಿದೆ. ಹಾವು ಅದಕ್ಕೆ ಕಚ್ಚುತ್ತಿದ್ದರೂ ತನ್ನ ಸುರಕ್ಷತೆಯನ್ನು ಪಣಕ್ಕಿಟ್ಟು, ಸಿಕ್ಕಿಬಿದ್ದ ತನ್ನ ಸಹಚರನನ್ನು ಉಳಿಸಲು ಅದು ಧೈರ್ಯಶಾಲಿಯಾಗಿ ಹೋರಾಡಲು ಪ್ರಾರಂಭಿಸಿದೆ. ಆಗ ಹಾವು ತನ್ನ ಹಿಡಿತ ಕಳೆದುಕೊಂಡು ಕೆಳಗೆ ಬಿದ್ದಿದೆ. ಧೈರ್ಯಶಾಲಿ ಹಲ್ಲಿಯ ಪಟ್ಟುಬಿಡದ ದೃಢನಿಶ್ಚಯವು ಈ ಜಯಕ್ಕೆ ಕಾರಣವಾಗಿದೆ ಮತ್ತು ಇದರಿಂದ ಸ್ನೇಹಿತನ ಜೀವ ಉಳಿದಿದೆ. ಕೊನೆಗೂ ಸ್ನೇಹವು ಶತ್ರುವಿನ ಮೇಲೆ ಜಯ ಸಾಧಿಸಿದೆ.

ಇದನ್ನೂ ಓದಿ: ಕಚೇರಿಯ ಟೇಬಲ್‌ನೊಳಗೆ ಅಡಗಿದ್ದ ಬೃಹತ್‌ ಹಾವನ್ನು ಹಿಡಿದ ಮಹಿಳಾ ಸಿಬ್ಬಂದಿ! ವಿಡಿಯೊ ನೋಡಿ

ಈ ಅದ್ಭುತವಾದ ವಿಡಿಯೊವು ನಿಜವಾದ ಸ್ನೇಹಿತರು ಒಬ್ಬರಿಗೊಬ್ಬರು ಸಹಾಯ ಮಾಡಲು ಯಾವ ಮಟ್ಟಕ್ಕೂ ಬೇಕಾದರೂ ಹೋಗುತ್ತಾರೆ ಎಂಬುದನ್ನು ಸೂಚಿಸುತ್ತದೆ. ಸ್ನೇಹಕ್ಕಾಗಿ ಮನುಷ್ಯರು ಮಾತ್ರವಲ್ಲ ಪ್ರಾಣಿಗಳು ಹಾಗೂ ಇತರ ಜೀವಿಗಳು ಕೂಡ ಹೋರಾಡುತ್ತವೆ ಎಂಬುದನ್ನು ಈ ವಿಡಿಯೊದಲ್ಲಿ ನಾವು ಕಾಣಬಹುದು. ಅಲ್ಲದೇ ಈ ವಿಡಿಯೊದಲ್ಲಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬುದು ಸಹ ಸಾಬೀತಾಗಿದೆ. ಶತ್ರುವಿನ ಜೊತೆ ಜೊತೆಯಾಗಿ ನಿಂತು ಹೋರಾಡಿದರೆ ಅವರ ಮೇಲೆ ಜಯ ಸಾಧಿಸಬಹುದು ಎಂಬುದನ್ನು ಈ ವಿಡಿಯೊ ತಿಳಿಸುತ್ತದೆ.

Continue Reading
Advertisement
Anurag Thakur
ದೇಶ32 mins ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ44 mins ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ1 hour ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್1 hour ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ1 hour ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು2 hours ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER2 hours ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Union Minister Pralhad Joshi reaction about rahul gandhi statement
ದೇಶ2 hours ago

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ11 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌