Viral Video: ಅಬ್ಬಾ...ಈತ ಮನುಷ್ಯನೋ ರಾಕ್ಷಸನೋ..? ಪತ್ನಿಯ ಕಾಲುಗಳನ್ನು ಬೈಕ್‌ಗೆ ಕಟ್ಟಿ ರೋಡಲ್ಲಿ ಎಳೆದಾಡಿದ ಪಾಪಿ ಪತಿ-ವಿಡಿಯೋ ಇದೆ - Vistara News

ವೈರಲ್ ನ್ಯೂಸ್

Viral Video: ಅಬ್ಬಾ…ಈತ ಮನುಷ್ಯನೋ ರಾಕ್ಷಸನೋ..? ಪತ್ನಿಯ ಕಾಲುಗಳನ್ನು ಬೈಕ್‌ಗೆ ಕಟ್ಟಿ ರೋಡಲ್ಲಿ ಎಳೆದಾಡಿದ ಪಾಪಿ ಪತಿ-ವಿಡಿಯೋ ಇದೆ

Viral Video: ದಂಪತಿ ನಹರ್‌ಸಿಂಗ್‌ಪುರದಲ್ಲಿ ಬಂದು ನೆಲೆಸಿದ್ದರು. ನೆರೆಹೊರೆಯವರು ಹೇಳುವ ಪ್ರಕಾರ ಇಬ್ಬರು ಸದಾ ಜಗಳವಾಡುತ್ತಿದ್ದರು. ತಿಂಗಳ ಹಿಂದೆ ಸುಮಿತ್ರಾ ಸಹೋದರಿ ಮನೆಗೆ ಹೋಗುವ ವಿಚಾರಕ್ಕೆ ಇಬ್ಬರು ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಹೀಗಾಗಿ ಸಿಟ್ಟಿನ ಭರದಲ್ಲಿ ಮೇಘಾವಲ್‌ ಸುಮಿತ್ರಾಳ ಕಾಲನ್ನು ಬೈಕಿಗೆ ಕಟ್ಟಿ ಚಲಾಯಿಸಿದ್ದಾನೆ. ಘಟನೆಯಲ್ಲಿ ಸುಮಿತ್ರಾಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಕಟ್ಟಿಕೊಂಡ ಹೆಂಡತಿಯ ಕಾಲುಗಳನ್ನು ಬೈಕ್‌ ಕಟ್ಟಿ ರಸ್ತೆಯಲ್ಲಿ ಪಾಪಿ ಪತಿಯೊಬ್ಬ ಎಳೆದಾಡಿದ ಅಮಾನುಷ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಅಮಾನವೀಯ ಕೃತ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದು, ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ. ಇನ್ನು ನಾಗೌರ್‌ ಜಿಲ್ಲೆಯಲ್ಲಿ ಈ ಹೀನ ಕೃತ್ಯ ಒಂದು ತಿಂಗಳ ಹಿಂದೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಘಟನೆ ವಿವರ:

ಆರು ತಿಂಗಳ ಹಿಂದೆ ಆರೋಪಿ ನಹರ್‌ಸಿಂಗ್‌ಪುರ ನಿವಾಸಿ ಪ್ರೇರಮಂ ಮೇಘಾವಲ್‌ ಮತ್ತು ಸುಮಿತ್ರಾ ವಿವಾಹವಾಗಿದ್ದರು. ಬಿಹಾರ ಮೂಲದ ಸುಮಿತ್ರಾಳನ್ನು ಆಕೆಯ ಪೋಷಕರು ಅಪಾರ ವರದಕ್ಷಿಣೆ ನೀಡಿ ಮೇಘಾವಲ್‌ಗೆ ಮದುವೆ ಮಾಡಿಕೊಟ್ಟಿದ್ದರು. ಬಳಿಕ ದಂಪತಿ ನಹರ್‌ಸಿಂಗ್‌ಪುರದಲ್ಲಿ ಬಂದು ನೆಲೆಸಿದ್ದರು. ನೆರೆಹೊರೆಯವರು ಹೇಳುವ ಪ್ರಕಾರ ಇಬ್ಬರು ಸದಾ ಜಗಳವಾಡುತ್ತಿದ್ದರು. ತಿಂಗಳ ಹಿಂದೆ ಸುಮಿತ್ರಾ ಸಹೋದರಿ ಮನೆಗೆ ಹೋಗುವ ವಿಚಾರಕ್ಕೆ ಇಬ್ಬರು ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಹೀಗಾಗಿ ಸಿಟ್ಟಿನ ಭರದಲ್ಲಿ ಮೇಘಾವಲ್‌ ಸುಮಿತ್ರಾಳ ಕಾಲನ್ನು ಬೈಕಿಗೆ ಕಟ್ಟಿ ಚಲಾಯಿಸಿದ್ದಾನೆ. ಘಟನೆಯಲ್ಲಿ ಸುಮಿತ್ರಾಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದಿದ್ದೇ ರೋಚಕ

ಇನ್ನು ಒಂದು ತಿಂಗಳ ಹಿಂದೆ ನಡೆದಿದ್ದ ಘಟನೆ ವಿಡಿಯೋ ಈಗ ವೈರಲ್‌ ಆಗುತ್ತಿದೆ. ಮೇಘವಾಲ್‌ನ ಸ್ನೇಹಿತನೇ ವಿಡಿಯೋ ಹರಿಬಿಟ್ಟಿದ್ದಾನೆ. ಈ ಘಟನೆ ನಂತರ ಮೇಘವಾಲ್‌ ತನ್ನ ಪತ್ನಿಯನ್ನು ಮನೆಯಿಂದ ಹೊರ ಹಾಕಿದ್ದ. ಆಕೆ ಜೈಸಲ್ಮೇರ್‌ನಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ವಾಸವಾಗಿದ್ದಾಳೆ.ಎರಡು ದಿನಗಳ ಹಿಂದೆ ಆರೋಪಿ ತನ್ನ ಸ್ನೇಹಿತನೊಂದಿಗೆ ಮದ್ಯ ಸೇವಿಸಿದ್ದ. ಇದೇ ವೇಳೆ ಸ್ನೇಹಿತರಿಬ್ಬರ ನಡುವೆ ಜಗಳ ನಡೆದಿದ್ದು, ಈ ಜಗಳದಲ್ಲಿ ಸ್ನೇಹಿತ ಆರೋಪಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ.

ಕೆಲವೇ ಸಮಯದಲ್ಲಿ ಈ ವಿಡಿಯೋ ವೈರಲ್ ಆಗತೊಡಗಿತು. ವೀಡಿಯೋ ನೋಡಿದ ನಾಗೌರ್‌ನ ಪಂಚೌರಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಗುರುತಿಸಿ ಸೋಮವಾರ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತ್ನಿ ಇನ್ನೂ ಯಾವುದೇ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ತಮ್ಮ ಮಟ್ಟದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದರೊಂದಿಗೆ ಆರೋಪಿಯ ಪತ್ನಿ ಮತ್ತು ಆತನ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ: Viral Video: ಪ್ಯಾರಿಸ್‌ ಒಲಿಂಪಿಕ್‌ ಸಮಾರೋಪ ಸಮಾರಂಭದಲ್ಲಿ ನಟನಿಗೆ ಕಿಸ್ಸಿಂಗ್-‌ ವಿಡಿಯೋ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಒಂದು ಹಾವು, ಮೂರು ಮುಂಗುಸಿ; ಏರ್‌ಪೋರ್ಟ್‌ ರನ್‌ವೇಯಲ್ಲೇ ಫೈಟ್‌! ಸೋತಿದ್ಯಾರು? ವಿಡಿಯೊ ನೋಡಿ

Viral Video: ಇತ್ತೀಚೆಗೆ ಪಾಟ್ನಾ ವಿಮಾನ ನಿಲ್ದಾಣದ ರನ್ವೇಯಲ್ಲಿ ಮೂರು ಮುಂಗುಸಿಗಳು ಮತ್ತು ಹಾವಿನ ನಡುವೆ ದೊಡ್ಡ ಕಾಳಗ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೈರಲ್ ವಿಡಿಯೊದಲ್ಲಿ ಮೂರು ಮುಂಗುಸಿಗಳು ರನ್ ವೇ ಪಕ್ಕದಲ್ಲಿ ಹಾವನ ಜೊತೆ ಹೋರಾಡುತ್ತಿದೆ. ಮುಂಗುಸಿಯಿಂದ ತನ್ನನ್ನು ರಕ್ಷಿಸಿಕೊಳ್ಳಲು ಹಾವು ತನ್ನ ಹಲ್ಲುಗಳನ್ನು ಮುಂದಕ್ಕೆ ಚಾಚುತ್ತಿದೆ. ಮುಂಗುಸಿಗಳು ಮತ್ತು ಹಾವು ಜಗಳವಾಡುವ ಈ ಅಪರೂಪದ ದೃಶ್ಯ ಕಂಡು ಸೋಶಿಯಲ್ ಮಿಡಿಯಾದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo


ಪಾಟ್ನಾ : ಹಾವು ಮತ್ತು ಮುಂಗುಸಿ ಆ ಜನ್ಮ ಶತ್ರುಗಳು ಎಂಬುದು ಎಲ್ಲರಿಗೂ ತಿಳಿದಿದೆ. ಹಾವನ್ನು ಎಲ್ಲಿ ನೋಡಿದರೂ ಮುಂಗುಸಿ ಬಿಡದೆ ಬೆನ್ನಟ್ಟಿ ಅದರ ಜೊತೆ ಸೆಣಸಾಡಿ ಅದನ್ನು ಕೊಂದು ಹಾಕಲು ಪ್ರಯತ್ನಿಸುತ್ತದೆ. ಎಷ್ಟೋ ಬಾರಿ ನಮ್ಮ ಮನೆಯ ಸುತ್ತಮುತ್ತಲೂ ಈ ರೀತಿ ಹಾವು ಮುಂಗುಸಿ ಕಾಳಗ ನಡೆದು ಅವುಗಳನ್ನು ಜನರು ಓಡಿಸುವುದನ್ನು ನಾವು ಕಂಡಿರುತ್ತೇವೆ. ಅದೇರೀತಿ ಇತ್ತೀಚೆಗೆ ಪಾಟ್ನಾ ವಿಮಾನ ನಿಲ್ದಾಣದ ರನ್ವೇಯಲ್ಲಿ ಮೂರು ಮುಂಗುಸಿಗಳು ಮತ್ತು ಹಾವಿನ ನಡುವೆ ದೊಡ್ಡ ಕಾಳಗವೇ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಈ ವೈರಲ್ ವಿಡಿಯೊದಲ್ಲಿ ಮೂರು ಮುಂಗುಸಿಗಳು ರನ್‌ವೇ ಪಕ್ಕದಲ್ಲಿ ಹಾವಿನ ಜೊತೆ ಹೋರಾಡುತ್ತಿವೆ. ಮುಂಗುಸಿಯಿಂದ ತನ್ನನ್ನು ರಕ್ಷಿಸಿಕೊಳ್ಳಲು ಹಾವು ತನ್ನ ಹಲ್ಲುಗಳನ್ನು ಮುಂದಕ್ಕೆ ಚಾಚುತ್ತಿದೆ. ನಂತರ, ಇನ್ನೂ ಎರಡು ಮುಂಗುಸಿಗಳು ಸೇರಿಕೊಂಡು ಮೂರು ಕಡೆಯಿಂದ ಹಾವಿನ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತವೆ. ಮುಂಗುಸಿಯ ದಾಳಿಯನ್ನು ತಪ್ಪಿಸಲು ಹಾವು ಹೆಡೆ ಎತ್ತುತ್ತಿದೆ. ಆದರೆ ಮುಂಗುಸಿಗಳು ಹಾವನ್ನು ಮುಗಿಸಲೇ ಬೇಕು ಎಂದು ಪಣತೊಟ್ಟು ಅದರ ಮೇಲೆ ದಾಳಿ ಮುಂದುವರಿಸುತ್ತಿವೆ.

ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಈ ವಿಡಿಯೊವನ್ನು ಸೆರೆಹಿಡಿದಿದ್ದಾರೆ. ಮುಂಗುಸಿ ಮತ್ತು ಹಾವುಗಳು ಜಗಳವಾಡುವ ಈ ಅಪರೂಪದ ಘಟನೆಗಳು ಕಂಡು ಸೋಶಿಯಲ್ ಮಿಡಿಯಾದ ನೆಟ್ಟಿಗರು ಕಾಮೆಂಟ್ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ!

“ಇದು ಪೈಪೋಟಿಯಂತೆ ಕಾಣುತ್ತಿರಬಹುದು ಆದರೆ ಆ ಮುಂಗುಸಿಗಳು ಈ ಹಾವನ್ನು ತಿನ್ನಲು ಬಯಸುತ್ತವೆ” ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. “ಭಾರತ ದೇಶದಲ್ಲಿ ನಮ್ಮ ಮುಂಗುಸಿ ಕೂಡ ಒಲಿಂಪಿಕ್ ಪದಕಗಳನ್ನು ಗೆಲ್ಲಬಲ್ಲದು!” ಎಂದು ವ್ಯಂಕ್ಯವಾಗಿ ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು “ನಾಗಿನ್ 6 ಚಿತ್ರದ ಟೀಸರ್ ಬಂದಿದೆ” ಎಂದು ಹೇಳಿದ್ದಾರೆ. ಇಬ್ಬರ ನಡುವೆ ಸಾಕಷ್ಟು ಪೈಪೋಟಿ ಇದೆ. ಆದರೆ ಇದರಲ್ಲಿ ನೋಡೋಕೆ ಏನಿದೆ? ಕೊನೆಯಲ್ಲಿ ಗೆಲ್ಲುವುದು ಮುಂಗುಸಿ. ಯಾಕೆಂದರೆ ಅದು ಎಂದಿಗೂ ಸೋಲುವುದಿಲ್ಲ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

Continue Reading

ದಕ್ಷಿಣ ಕನ್ನಡ

Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ

Love Failure : ಯುವತಿ ಮಸೇಜ್‌ ಮಾಡಲಿಲ್ಲ ಎಂದು ಸಿಟ್ಟಾದ ಪಾಗಲ್‌ ಪ್ರೇಮಿಯೊಬ್ಬ ಕ್ಲಾಸ್‌ ರೂಮಿಗೆ ತೆರಳಿ ಕತ್ತರಿಯಿಂದ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

VISTARANEWS.COM


on

By

love failure
ಸಾಂದರ್ಭಿಕ ಚಿತ್ರ
Koo

ಮಂಗಳೂರು: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ (Love Failure) ಮರೆಯಾಗುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಬ್ಬ ಯುವಕ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಘಟನೆ ನಡೆದಿದೆ.

ನಿನ್ನೆ ಸೋಮವಾರ ಮುಂಜಾನೆ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದೆ. ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಯುವತಿ ಆಳ್ವಾಸ್‌ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು.

ಈ ಮಂಜುನಾಥ್ ಹಾಗು ಹಲ್ಲೆಗೊಳಗಾದ ಯುವತಿ ಪಿಯುಸಿ ತನಕ ಜತೆಯಲ್ಲೇ ವಿದ್ಯಾಭ್ಯಾಸ ಮಾಡಿದ್ದರು. ಬಳಿಕ ಮಂಜುನಾಥ್‌ ಕಾಲೇಜು ತೊರೆದು ಮನೆಗೆ ತೆರಳಿದ್ದ. ಯುವತಿ ಮೆಸೇಜ್‌ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡ ಮಂಜುನಾಥ್‌ ತುಮಕೂರಿನಿಂದ ಮೂಡಬಿದರೆಗೆ ಬಂದಿದ್ದ.

ಆದರೆ ಯುವತಿ ಮಂಜುನಾಥ್‌ನನ್ನು ಭೇಟಿ ಮಾಡಲು ನಿರಾಕರಿಸಿದ್ದಳು. ಇದರಿಂದ ಮತ್ತಷ್ಟು ಕೆರಳಿದ ಮಂಜುನಾಥ್‌ ಕಾಲೇಜಿಗೆ ನುಗ್ಗಿ ತರಗತಿಯಲ್ಲಿದ್ದ ಯುವತಿಗೆ ಕತ್ತರಿಯಿಂದ ಇರಿದಿದ್ದಾನೆ. ಘಟನೆಯಲ್ಲಿ ಯುವತಿಯ ಮುಖಕ್ಕೆ ಗಾಯವಾಗಿದೆ.

ಕೂಡಲೇ ಇತರೆ ವಿದ್ಯಾರ್ಥಿಗಳು ಮಂಜುನಾಥ್‌ನನ್ನು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ್‌ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ಬಾಗಲಕೋಟೆ: ಮದುವೆಗೆ ಪೋಷಕರು ವಿರೋಧಿಸಿದಕ್ಕೆ ಪ್ರೇಮಿಗಳಿಬ್ಬರು (Love Case) ನೇಣಿಗೆ ಶರಣಾಗಿದ್ದಾರೆ. ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಮೃತ ಪ್ರೇಮಿಗಳು. ಇವರಿಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಇದರಿಂದ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ .ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Viral Video: ಫುಟ್ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ದೈಹಿಕ ಶಿಕ್ಷಕ; ವಿಡಿಯೊ ನೋಡಿ ಜನಾಕ್ರೋಶ

Viral Video: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ದೈಹಿಕ ಶಿಕ್ಷಕರೊಬ್ಬರು ಫುಟ್ಬಾಲ್ ಆಟ ಆಡುವಾಗ ಕಳಪೆ ಪ್ರದರ್ಶನ ನೀಡಿದ್ದಾರೆ ಎಂದು ಅಸಮಾಧಾನಗೊಂಡು ತಮ್ಮ ವಿದ್ಯಾರ್ಥಿಗಳನ್ನು ಥಳಿಸುತ್ತಿರುವ ಆಘಾತಕಾರಿ ದೃಶ್ಯವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೊ ವೈರಲ್ ಆದ ನಂತರ, ಈ ಬಗ್ಗೆ ಸಂಗಗಿರಿ ಜಿಲ್ಲಾ ಶಿಕ್ಷಣ ಅಧಿಕಾರಿ ತನಿಖೆ ನಡೆಸಿದ್ದಾರೆ. ನಂತರ ಡಿಇಒ ತಮ್ಮ ತನಿಖೆಯ ವಿವರಗಳನ್ನು ಇಲಾಖೆ ಮತ್ತು ಜಿಲ್ಲಾಧಿಕಾರಿ ಇಬ್ಬರಿಗೂ ಸಲ್ಲಿಸಿದ್ದಾರೆ. ಆ ಬಳಿಕ ಅಣ್ಣಾಮಲೈ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

VISTARANEWS.COM


on

Viral Video
Koo


ಆಟದಲ್ಲಿ ಸೋಲು ಗೆಲುವುಗಳು ಇದ್ದೇ ಇರುತ್ತವೆ. ಸೋತಾಗ ಅಂಜಬಾರದು, ಗೆದ್ದಾಗ ಹಿಗ್ಗಬಾರದು ಎಂಬ ನೀತಿ ಮಾತಿದೆ. ವಿದ್ಯಾರ್ಥಿಗಳು ಆಟದಲ್ಲಿ ಗೆದ್ದಾಗ ಅವರನ್ನು ಪ್ರಶಂಸಿಸುವ ಶಿಕ್ಷಕರು ಅವರು ಸೋತಾಗ ಅವರಿಗೆ ಧೈರ್ಯ ಹೇಳಬೇಕು. ಅದನ್ನು ಬಿಟ್ಟು ಮಕ್ಕಳಿಗೆ ನೀತಿ ಪಾಠ ಹೇಳಿಕೊಡುವ ಶಿಕ್ಷಕರೇ ಅವರು ಸೋತಾಗ ಅವರನ್ನು ಹೀಯಾಳಿಸಿದರೆ, ಶಿಕ್ಷಿಸಿದರೆ ಅವರು ಶಿಕ್ಷಕರ ಸ್ಥಾನಕ್ಕೆ ಅರ್ಹರಲ್ಲ ಎಂದೇ ಹೇಳಬಹುದು. ಇದೀಗ ಅಂತಹದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಪಿಟಿ ಮಾಸ್ಟರೊಬ್ಬರು ವಿದ್ಯಾರ್ಥಿಗಳು ಫುಟ್ಬಾಲ್ ಆಟ ಆಡುವಾಗ ಕಳಪೆ ಪ್ರದರ್ಶನ ನೀಡಿದ್ದಾರೆ ಎಂದು ಅಸಮಾಧಾನಗೊಂಡು ಅವರನ್ನು ಥಳಿಸುತ್ತಿರುವ ಆಘಾತಕಾರಿ ದೃಶ್ಯವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದು ಸಖತ್ ವೈರಲ್ (Viral Video)ಆಗಿದೆ.

ಸೇಲಂ ಜಿಲ್ಲೆಯ ಮೆಟ್ಟೂರು ಬಳಿಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಈ ಘಟನೆ ನಡೆದಿದೆ. ಎನ್ಎಚ್ಎಸ್ಎಸ್‍ನ ಫುಟ್ಬಾಲ್ ತಂಡವು ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಆದರೆ ನಿರೀಕ್ಷೆಗಳಂತೆ ಅವರು ಗೆಲುವು ಸಾಧಿಸಲಿಲ್ಲ. ಆಗ ಅಣ್ಣಾಮಲೈ ಎಂದು ಗುರುತಿಸಲ್ಪಟ್ಟ ಪಿಟಿ ಮಾಸ್ಟರ್ ವಿದ್ಯಾರ್ಥಿಗಳು ಆಟದಲ್ಲಿ ಸೋತರೆಂದು ಅವರನ್ನು ಕ್ರೂರವಾಗಿ ಥಳಿಸಿದ್ದಾರೆ. ಆಟಗಾರರ ಕೆನ್ನೆಗೆ ಹೊಡೆಯುವುದು, ಒದೆಯುವುದು ಮತ್ತು ಕೂದಲನ್ನು ಎಳೆಯುವುದನ್ನು ಮಾಡಿ ಅಮಾನುಷವಾಗಿ ವರ್ತಿಸಿದ್ದಾರೆ. ಅಣ್ಣಾಮಲೈ ಹುಡುಗರನ್ನು ಹೊಡೆಯುವ ಮೂಲಕ ಅನಾಗರಿಕ ವರ್ತನೆ ತೋರಿದ್ದಾರೆ ಎಂದು ಆಟಗಾರರೊಬ್ಬರ ಪೋಷಕರು ವಿಡಿಯೊ ಸಮೇತ ವರದಿ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ, ಅಣ್ಣಾಮಲೈ ಅವರು ತಂಡದ ಗೋಲ್ ಕೀಪರ್ ಆಗಿರುವ ವಿದ್ಯಾರ್ಥಿಯೊಬ್ಬನಿಗೆ, “ನೀನು ಗಂಡಸಾ ಅಥವಾ ಹೆಂಗಸಾ? ನೀನು ಎದುರಾಳಿಗೆ ಸ್ಕೋರ್ ಗಳಿಸಲು ಹೇಗೆ ಅವಕಾಶ ಕೊಟ್ಟೆ?, ಚೆಂಡು ನಿನ್ನನ್ನು ದಾಟಿ ಮುಂದೆ ಹೋಗಲು ಹೇಗೆ ಬಿಟ್ಟೆ?” ಎಂದು ಥಳಿಸಿದ್ದಾರೆ. ಹಾಗೇ ಮತ್ತೊಬ್ಬ ವಿದ್ಯಾರ್ಥಿಯನ್ನು ಪ್ರಶ್ನಿಸಿದ ಅವರು, “ನಿನಗೆ ಅವರ ಮೇಲೆ ಫ್ರೆಷರ್‌ ಹಾಕಿ ಆಡಲು ಸಾಧ್ಯವಿಲ್ಲವೇ? ಅಲ್ಲಿ ಯಾಕೆ ಕಮ್ಯೂನಿಕೇಷನ್ ಮಾಡಲಿಲ್ಲ?” ಎಂದು ಥಳಿಸಿದ್ದಾರೆ. ದೈಹಿಕ ಶಿಕ್ಷಕರ ಈ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಕಿ, ಸಹಪಾಠಿಗಳ ಕಿರುಕುಳ ತಾಳಲಾರದೆ ನೇಣಿಗೆ ಶರಣಾದ ಬಾಲಕ

ವಿಡಿಯೊ ವೈರಲ್ ಆದ ನಂತರ, ಈ ಬಗ್ಗೆ ಸಂಗಗಿರಿ ಜಿಲ್ಲಾ ಶಿಕ್ಷಣ ಅಧಿಕಾರಿ ತನಿಖೆ ನಡೆಸಿದ್ದಾರೆ. ನಂತರ ಡಿಇಒ ತಮ್ಮ ತನಿಖೆಯ ವಿವರಗಳನ್ನು ಇಲಾಖೆ ಮತ್ತು ಜಿಲ್ಲಾಧಿಕಾರಿ ಇಬ್ಬರಿಗೂ ಸಲ್ಲಿಸಿದ್ದಾರೆ. ಆ ಬಳಿಕ ಅಣ್ಣಾಮಲೈ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

Continue Reading

Latest

Viral Video: ಜನದಟ್ಟಣೆ ಪ್ರದೇಶದಲ್ಲೇ ಕಾರಿನಲ್ಲಿ ಇಬ್ಬರು ಮಹಿಳೆಯರ ಜೊತೆ ಯುವಕನ ಸರಸ! ವಿಡಿಯೊ ಇದೆ

Viral Video: ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ-ಅಯೋಧ್ಯೆ ಎನ್ಎಚ್ 27 ರಲ್ಲಿ ಇನ್ನೋವಾ ಕಾರಿನೊಳಗೆ ಇಬ್ಬರು ಮಹಿಳೆಯರ ಜೊತೆ ಪುರುಷನೊಬ್ಬ ಸರಸಸಲ್ಲಾಪದಲ್ಲಿ ತೊಡಗಿರುವ ಆಘಾತಕಾರಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‌ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

VISTARANEWS.COM


on

Viral Video
Koo


ನವದೆಹಲಿ: ಇತ್ತೀಚೆಗೆ ಕಾರಿನೊಳಗೆ ಹಲವಾರು ಕೃತ್ಯಗಳು ನಡೆಯುತ್ತಿರುವುದು ದಾಖಲಾಗುತ್ತಿರುತ್ತದೆ. ಕಾರಿನೊಳಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಸೆಕ್ಸ್‌ನಲ್ಲಿ ತೊಡಗುವುದು ಹೀಗೆ ಹಲವಾರು ಘಟನೆಗಳು ಕೇಳಿಬಂದಿದೆ. ಇದೀಗ ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ-ಅಯೋಧ್ಯೆ ಎನ್ಎಚ್ 27 ರಲ್ಲಿ ಇನ್ನೋವಾ ಕಾರಿನೊಳಗೆ ಇಬ್ಬರು ಮಹಿಳೆಯರ ಜೊತೆ ಪುರುಷನೊಬ್ಬ ಸರಸಸಲ್ಲಾಪದಲ್ಲಿ ತೊಡಗಿರುವ ಆಘಾತಕಾರಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ನಿಶಾಂತ್ ಶರ್ಮಾ (ಭಾರದ್ವಾಜ್) ಎಂಬ ಬಳಕೆದಾರರು ತಮ್ಮ ಎಕ್ಸ್ ಖಾತೆಯಲ್ಲಿ ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಪೋಸ್ಟ್ ಮಾಡಿದ್ದು, ‘ಅರೆ ಭಾಯ್, ಓಯೋ ಮೇ ಹೆ ಚಲಾ ಜಾತಾ!’ ಎಂಬ ವ್ಯಂಗ್ಯದ ಶೀರ್ಷಿಕೆ ನೀಡಿದ್ದಾರೆ. ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‍ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್‍ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯುಪಿ 33 ಎಎಲ್ 0011 ಲೈಸೆನ್ಸ್ ಬೋರ್ಡ್ ನಂಬರ್ ಅನ್ನು ಹೊಂದಿರುವ ಈ ಕಾರಿನೊಳಗೆ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ವಿಡಿಯೊದಲ್ಲಿ ತೋರಿಸಲಾಗಿದೆ. ಆಘಾತಕಾರಿ ಸಂಗತಿಯೆಂದರೆ, ಇಂತಹ ನಾಚಿಗೇಡಿನ ಕೃತ್ಯ ಕುಟುಂಬಗಳು ಆಗಾಗ್ಗೆ ಭೇಟಿ ನೀಡುವ ಸ್ಥಳದಲ್ಲಿ ಹಾಡಹಗಲೇ ನಡೆದಿವೆ ಎನ್ನಲಾಗಿದೆ.

ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಬಾರಾಬಂಕಿ ಪೊಲೀಸರು ಎನ್ಎಚ್ -27ರ ರೆಸ್ಟೋರೆಂಟ್ ಮುಂದೆ ಈ ಘಟನೆ ನಡೆದಿದೆ ಎಂದು ದೃಢಪಡಿಸಿದ್ದಾರೆ. ಈ ವಾಹನವು ರಾಯ್ಬರೇಲಿ ಜಿಲ್ಲೆಯಲ್ಲಿ ನೋಂದಣಿಯಾಗಿದೆ ಎಂದು ತಿಳಿಸಿದ್ದಾರೆ. ಬಾರಾಬಂಕಿಯ ನಗರ ಮ್ಯಾಜಿಸ್ಟ್ರೇಟ್ ಈ ಕೃತ್ಯದಲ್ಲಿ ಭಾಗಿಯಾಗಿರುವವರ ಉದ್ದೇಶ ಮತ್ತು ಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿಯಲು ತನಿಖೆಯನ್ನು ಪ್ರಾರಂಭಿಸಿದ್ದಾರೆ, ತನಿಖೆಯ ಆಧಾರದ ಮೇಲೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದ್ದು, ಅನೇಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅನೇಕರು ಸಮಾಜದಲ್ಲಿ ಸಭ್ಯತೆಯ ಕೊರತೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. “ಸಭ್ಯತೆ ಇಲ್ಲದ ಜನರು ಜಗತ್ತಿನಲ್ಲಿ ಯಾವ ರೀತಿಯ ಜನರು?” ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬ ಬಳಕೆದಾರರು “ಕಲಿಯುಗ್ ಬಹುತ್ ತೇಜ್ ಆ ಗ್ಯಾ ಹೈ” ಎಂದು ಕಾಮೆಂಟ್ ಮಾಡಿದ್ದಾರೆ.

Continue Reading
Advertisement
Duleep Trophy
ಕ್ರೀಡೆ1 min ago

Duleep Trophy: 14 ವರ್ಷಗಳ ಬಳಿಕ ದುಲೀಪ್‌ ಟ್ರೋಫಿ ಆಡಲಿದ್ದಾರೆ ವಿರಾಟ್​ ಕೊಹ್ಲಿ?

kolkata doctor murder case
ದೇಶ36 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ36 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ45 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು51 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ51 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌