Viral Video: ನೀರಾನೆಗೆ ಹೊಡೆದ ಸೆಕ್ಯುರಿಟಿ ಗಾರ್ಡ್‌; ಮುಂದೇನಾಯ್ತು ನೀವೇ ನೋಡಿ - Vistara News

ವೈರಲ್ ನ್ಯೂಸ್

Viral Video: ನೀರಾನೆಗೆ ಹೊಡೆದ ಸೆಕ್ಯುರಿಟಿ ಗಾರ್ಡ್‌; ಮುಂದೇನಾಯ್ತು ನೀವೇ ನೋಡಿ

Viral Video: ದೆಹಲಿಯ ಮೃಗಾಲಯವೊಂದರಲ್ಲಿ ನೀರಾನೆಯೊಂದು (Hippopotamus) ತನ್ನ ಗೂಡಿನಿಂದ ಮುಖ ಹೊರ ಚಾಚಿ ನಿಂತಾಗ ಕಾವಲುಗಾರ ಅದರ ಮುಖಕ್ಕೆ ಹೊಡೆಯುತ್ತಾನೆ. ಸದ್ಯ ಈ ವಿಡಿಯೊ ವೈರಲ್‌ (Viral Video) ಆಗಿದೆ.

VISTARANEWS.COM


on

viral video 7
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನೀರಾನೆಗಳು (Hippopotamus) ಒಂದರ್ಥದಲ್ಲಿ ಸಾಧು ಪ್ರಾಣಿಗಳು. ಯಾರೂ ಉಪಟಳ ಕೊಡದಿದ್ದರೆ ತಮ್ಮ ಪಾಡಿಗೆ ತಾವಿರುತ್ತವೆ. ಮೃಗಾಲಯದಲ್ಲೂ ಅಷ್ಟೇ. ನೀರಿನಲ್ಲಿ ಬಿದ್ದುಕೊಂಡು, ಹಸಿವಾದಾಗ ಮೇಲೆ ಬಂದು ಆಹಾರ ಸೇವಿಸಿ ತಮ್ಮದೇ ಲೋಕದಲ್ಲಿ ಇರುತ್ತವೆ. ಇದೀಗ ವೈರಲ್‌ ಆದ ವಿಡಿಯೊದಲ್ಲಿ (Viral Video) ಮೃಗಾಲಯದ ತನ್ನ ಗೂಡಿನಿಂದ ತಲೆ ಹೊರ ಚಾಚಿದ ನೀರಾನೆಯನ್ನು ಸೆಕ್ಯುರಿಟಿ ಗಾರ್ಡ್‌ ಹೊಡೆದು ಒಳಗೆ ಕಳುಹಿಸಲು ಪ್ರಯತ್ನಿಸಿದ ಘಟನೆ ಸೆರೆಯಾಗಿದೆ.

ಮಾರ್ಚ್‌ನಲ್ಲಿ ನಡೆದ ನಡೆದ ಘಟನೆ ಇದಾಗಿದ್ದು, ಮತ್ತೆ ಮುನ್ನೆಲೆಗೆ ಬಂದಿದೆ. ಇದು ದೆಹಲಿಯ ಮೃಗಾಲಯವೊಂದರಲ್ಲಿ ನಡೆದ ಘಟನೆ ಎನ್ನಲಾಗಿದೆ. ಹಸಿವಾಗಿದ್ದರಿಂದಲೋ ಏನೋ ನೀರಾನೆಯೊಂದು ತಲೆ ಹೊರಗೆ ಹಾಕಿತ್ತು. ಮೃಗಾಲಯಕ್ಕೆ ಆಗಮಿಸಿದ ಪ್ರವಾಸಿಗರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಕೂಡಲೆ ಓಡಿ ಬಂದ ಸೆಕ್ಯುರಿಟಿ ಗಾರ್ಡ್‌ ಅದನ್ನು ಒಳಗೆ ಕಳುಹಿಸಲು ನೋಡಿದ. ನೀರಾನೆ ಆತನ ಮಾತು ಕೇಳಲಿಲ್ಲ. ಬಾಯಿ ದೊಡ್ಡದಾಗಿ ತೆರೆದು ಅತ್ತ ತೆರಳಲು ನಿರಾಕರಿಸಿತು. ಮತ್ತೆ ಆ ಗಾರ್ಡ್‌ ಅದರ ಮುಖಕ್ಕೆ ಒಂದೆರಡು ಪೆಟ್ಟು ಕೊಟ್ಟ. ಮೆದುವಾಗಿ ಅದರ ಮುಖವನ್ನು ತಳ್ಳಿದ. ಕೊನೆಗೆ ನೀರಾನೆ ತೆಪ್ಪಗೆ ಹೋಗಿ ಮಲಗಿಕೊಂಡಿತು.

ಈ ವಿಡಿಯೊವನ್ನು ಈಗಾಗಲೇ 1 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಹಲವು ಮಂದಿ ಕಮೆಂಟ್‌ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಕೆಲವರು ಸೆಕ್ಯುರಿಟಿ ಗಾರ್ಡ್‌ನ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಪ್ರಾಣಿಗೆ ಈ ರೀತಿ ಹೊಡೆಯುವುದು, ಹಿಂಸೆ ನೀಡುವುದು ತಪ್ಪು ಎಂದು ಹೇಳಿದ್ದಾರೆ.

”ಈ ವಿಡಿಯೊ ನೋಡುವಾಗ ಒಂದು ಕಡೆ ನೋವಾದರೆ ಇನ್ನೊಂದು ಕಡೆ ಭಯಾನಕ ಅನುಭವವಾಯಿತು. ನೀರಾನೆಗಳು ಕೆಲವೊಮ್ಮೆ ನೋವಾದರೆ, ತಮ್ಮನ್ನು ರಕ್ಷಿಸಿಕೊಳ್ಳಲು ಕೆರಳುತ್ತವೆ” ಎಂದು ಒಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬರು, ”ಪಾಪದ ಸೆಕ್ಯುರಿಟಿ ಗಾರ್ಡ್‌ ಯಾವುದೇ ತರಬೇತಿ ಇಲ್ಲದೆ, ಸುರಕ್ಷತೆ ಇಲ್ಲದೆ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ನೀರಾನೆ ಕೆರಳಿದರೆ ಆತನನ್ನು ನಿಮಿಷದ ಮೊದಲೇ ಮುಗಿಸಿ ಬಿಡುವ ಅಪಾಯವಿದೆ” ಎಂದು ಕಳವಳಗೊಂಡಿದ್ದಾರೆ. “ಪ್ರಾಣಿಯನ್ನು ಹೊಡೆಯುವುದು ತಪ್ಪು. ಪ್ರಾಣಿಯನ್ನು ಹೊಡೆಯಬಾರದು. ಪ್ರಾಣಿಗಳನ್ನು ಬಂಧಿಯಾಗಿಡಬಾರದು. ಪ್ರಾಣಿಗಳು ಅಭಯಾರಣ್ಯಗಳಲ್ಲಿ ಇರಬೇಕು, ಮಾನವ ಸಂತೋಷಕ್ಕಾಗಿ ಅಲ್ಲ” ಎಂದು ಮಗದೊಬ್ಬರು ಟ್ವೀಟ್ ಮಾಡಿದ್ದಾರೆ. “ಆ ಸೆಕ್ಯುರಿಟಿ ಧೈರ್ಯಶಾಲಿ! ನೀರಾನೆ ತುಂಬಾ ಮುದ್ದಾಗಿದೆ. ಅದು ತಾನೆಷ್ಟು ಬಲಶಾಲಿ ಎನ್ನುವುದನ್ನು ಮರೆತಂತಿದೆ” ಎಂದು ಮತ್ತೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: Viral Video: ನೆಲವ ಬಿಟ್ಟು ನೀರ ಮೇಲೆ ನಡೆದ ಜೇಡ; ಮೂಗಿನ ಮೇಲೆ ಬೆರಳಿಟ್ಟ ನೆಟ್ಟಿಗರು

ನೀರಾನೆ ಬೃಹತ್‌ ಗಾತ್ರದ ಉಭಯಚರ ಪ್ರಾಣಿ. ಇದು ಆನೆ ಮತ್ತು ಖಡ್ಗಮೃಗದ ನಂತರ ಭೂಮಿ ಮೇಲೆ ಕಂಡು ಬರುವ ಅತಿದೊಡ್ಡ ಸಸ್ತನಿ. ನೀರಾನೆ ಅಗಲವಾದ ಬಾಯಿ, ಬಹುತೇಕ ಕೂದಲಿಲ್ಲದ ದೇಹ, ಕಂಬದಂತಹ ಕಾಲು ಹೊಂದಿದೆ. ಇದು ಗಂಟೆಗೆ 30 ಕಿ.ಮೀ. ಓಡುವ ಸಾಮರ್ಥ್ಯವನ್ನು ಹೊಂದಿದೆ. ನೀರಾನೆಗಳು ನದಿಗಳು, ಸರೋವರಗಳು ಮತ್ತು ಜೌಗು ಪ್ರದೇಶಗಳಲ್ಲಿ ವಾಸಿಸುತ್ತವೆ.

ಇನ್ನಷ್ಟು ವೈರಲ್‌ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

Viral News: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರಿ ಬಿಡಿ ಹಗಲಿನಲ್ಲೇ ಮಹಿಳೆಯರು, ಯುವತಿಯರು, ಮಕ್ಕಳು ಓಡಾಡಲು ಭಯಪಡುವಂತಾಗಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ರಸ್ತೆ ಬದಿಯಲ್ಲಿ ಸ್ಕೂಟಿ‌ ನಿಲ್ಲಿಸಿಕೊಂಡು ನಿಂತಿದ್ದ ಯುವತಿ ಬಳಿಗೆ ಬಂದ ಸ್ಕೂಟರ್‌ನಲ್ಲಿದ್ದ ಇಬ್ಬರು ಯುವಕರು ಹಿಂದಿಯಲ್ಲಿ ನಿಂದಿಸಿದ್ದಾರೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ರಸ್ತೆಯ ಪಕ್ಕ ಸ್ಕೂಟಿ ನಿಲ್ಲಿಸಿ ಯುವತಿ ತಮ್ಮ ಪಾಡಿಗೆ ತಾವು ನಿಂತಿದ್ದರು. ಅಲ್ಲಿಗೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು, ʼʼಕುಡಿದ ನಶೆಯಲ್ಲಿ ರೋಡ್ ಶೋ ಮಾಡುತ್ತೀಯಾ?ʼʼ ಎಂದು ಬೈದಿದ್ದಾರೆ. ಯುವಕರ ಅವಾಚ್ಯ ನಿಂದನೆಯಿಂದ ಒಂದು ಕ್ಷಣ ಗಾಬರಿಗೊಳಗಾದ ಯುವತಿ ಬಳಿಕ ಅವರನ್ನು ದಿಟ್ಟವಾಗಿ ಎದುರಿಸಿದ್ದಾರೆ. ಅವರನ್ನೇ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಪುಂಡರು ಅಶ್ಲೀಲ ಪದಗಳಿಂದ ಯುವತಿಯನ್ನು ಹಿಂದಿಯಲ್ಲಿ ನಿಂದಿಸಿದ್ದಾರೆ. ಹೀಗೆ ಯುವಕರು ಕೆಲಕಾಲ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಸದ್ಯ ಈ ವಿಡಿಯೊ ವೈರಲ್ ಆಗಿದ್ದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಅನುಚಿತವಾಗಿ ವರ್ತಿಸುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ನಡುಬೀದಿಯಲ್ಲಿ ಲೈಂಗಿಕ ಕಿರುಕುಳ

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲೇ ಬಿಹಾರ ಮೂಲದ ದಂಪತಿಗೆ ಲೈಂಗಿಕ ಕಿರುಕುಳದ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ. ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ಒಂದು ವಾರದ ಹಿಂದೆ 10:30ರ ಸುಮಾರಿಗೆ ನಡೆದ ಘಟನೆ ಇದು.

ಜತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ. ಹೀಗಾಗಿ ಸದ್ಯ ಬೆಂಗಳೂರಿಗರು ಒಬ್ಬರೇ ಓಡಾಡಲು ಭಯಪಡುವಂತಾಗಿದೆ.

ಇದನ್ನೂ ಓದಿ: Physical Abuse: ನಡುಬೀದಿಯಲ್ಲಿ ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಬೆದರಿಕೆ

Continue Reading

ವೈರಲ್ ನ್ಯೂಸ್

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Viral News:ಬಾರ್ ಅಂಡ್ ರೆಸ್ಟೊರೆಂಟ್‌ನ ಹೊರಗೆ ಮೂವರು ಯುವತಿಯರು ಪರಸ್ಪರ ಗಲಾಟೆ ಮಾಡುತ್ತಿದ್ದರು. ಇದರಿಂದ ಕಿರಿ ಕಿರಿ ಅನುಭವಿಸಿದ್ದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ್ದರು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಯುವತಿಯರನ್ನು ಸಮಾಧಾನಪಡಿಸಲು ಮುಂದಾಗುತ್ತಾರೆ. ಮತ್ತು ತಕ್ಷಣ ಅಲ್ಲಿಂದ ತೆರಳುವಂತೆ ಸೂಚಿಸುತ್ತಾರೆ. ಆಗ ಕೋಪಗೊಂಡ ಯುವತಿಯರು ಪೊಲೀಸರಿಗೇ ಆವಾಜ್‌ ಹಾಕಿದ್ದಾರೆ. ಸಾಲದೆಂಬುದಕ್ಕೆ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

Viral News
Koo

ಮುಂಬೈ: ಬಾರ್‌ನಲ್ಲಿ ತಡರಾತ್ರಿ ಪಾರ್ಟಿ(Mumbai Bar) ಮುಗಿಸಿ ಮೂವರು ಯುವತಿಯ ಮಾರಾಮಾರಿ ನಡೆದಿದ್ದು, ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ನಶೆಯಲ್ಲಿ ತೂರಾಡುತ್ತಿದ್ದ ಯುವತಿಯರ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್(Viral News) ಆಗಿದೆ. ಪಾರ್ಟಿಯ ಮೂಡಿನಲ್ಲಿದ್ದ ಯುವತಿಯರನ್ನು ಕೊನೆಗೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮುಂಬೈನ ವಿರಾರ್ ಪ್ರದೇಶದ ಗೋಕುಲ್ ಟೌನ್‌ಶಿಪ್‌ನಲ್ಲಿ ಈ ಘಟನೆ ನಡೆದಿದೆ.

ಘಟನೆ ವಿವರ:

ಬಾರ್ ಅಂಡ್ ರೆಸ್ಟೊರೆಂಟ್‌ನ ಹೊರಗೆ ಮೂವರು ಯುವತಿಯರು ಪರಸ್ಪರ ಗಲಾಟೆ ಮಾಡುತ್ತಿದ್ದರು. ಇದರಿಂದ ಕಿರಿ ಕಿರಿ ಅನುಭವಿಸಿದ್ದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ತಕ್ಷಣ ಬರುವಂತೆ ಮನವಿ ಮಾಡಿದ್ದರು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಯುವತಿಯರನ್ನು ಸಮಾಧಾನಪಡಿಸಲು ಮುಂದಾಗುತ್ತಾರೆ. ಮತ್ತು ತಕ್ಷಣ ಅಲ್ಲಿಂದ ತೆರಳುವಂತೆ ಸೂಚಿಸುತ್ತಾರೆ. ಆಗ ಕೋಪಗೊಂಡ ಯುವತಿಯರು ಪೊಲೀಸರಿಗೇ ಆವಾಜ್‌ ಹಾಕಿದ್ದಾರೆ. ಸಾಲದೆಂಬುದಕ್ಕೆ ಪೊಲೀಸ್‌ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಕಿಡಿದ ನಶೆಯಲ್ಲಿ ಪೊಲೀಸರನ್ನು ಅಚಾಚ್ಯ ಶಬ್ಧಗಳಿಂದ ನಿಂದಿಸಿದ ಯುವತಿಯರು, ಮಹಿಳಾ ಪೊಲೀಸ್ ಪೇದೆಯೊಬ್ಬರ ಕೈ ಕಚ್ಚಿದ್ದಲ್ಲದೆ, ಆಕೆಯ ಸಮವಸ್ತ್ರವನ್ನೂ ಹರಿದಿದ್ದಾರೆ. ಮತ್ತೊಬ್ಬ ಕಾನ್ ಸ್ಟೇಬಲ್ ತಲೆಗೆ ಬಕೆಟ್ ನಿಂದ ಹೊಡೆದಿದ್ದಾನೆ. ಅವರ ಕೈಯನ್ನೂ ಕಚ್ಚಿದ್ದಾರೆ. ಪೊಲೀಸರು ಆರೋಪಿಗಳನ್ನು ಕಾವ್ಯ, ಅಶ್ವಿನಿ ಮತ್ತು ಪೂಣಂ ಎಂದು ಗುರುತಿಸಿದ್ದಾರೆ. ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ:Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

ಕೆಲವು ತಿಂಗಳ ಹಿಂದೆ ಕಲಬುರಗಿಯಲ್ಲೂ ಇಂತಹದ್ದೇ ಒಂದಿ ಘಟನೆ ನಡೆದಿತ್ತು. ಪರೀಕ್ಷೆ ವೇಳೆ ಕಾಪಿ ಮಾಡಲು ಅವಕಾಶ ನೀಡಲಿಲ್ಲ ಎಂದು ಇಬ್ಬರು ವ್ಯಕ್ತಿಗಳು ಪೊಲೀಸ್ ಮುಖ್ಯ ಪೇದೆ ಮೇಲೆ ಹಲ್ಲೆ ನಡೆಸಿದ್ದರು. ಲಾಠಿ ಕಸಿದು, ಕಲ್ಲಿನಿಂದ ಹೊಡೆದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿತ್ತು. ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 20ರಂದು ಹಲ್ಲೆ ಮಾಡಿದ ಆರೋಪಿಗಳ ಪೈಕಿ ಒಬ್ಬರ ಸಹೋದರಿಯ ಪರೀಕ್ಷೆ ಬರೆಯುತ್ತಿದ್ದರು. ಈ ವೇಳೆ ಈ ಆಕೆಯ ಅಣ್ಣ ತಾನು ತಂಗಿಗೆ ಸಹಾಯ ಮಾಡಲು ಮುಂದಾಗಿದ್ದ. ಈ ವೇಳೆ ಆತನನ್ನು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ತಡೆದಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಸಹೋದರ ಪೋಲಸ್ ಅಂತಲೂ ನೋಡದೇ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಂಗಿ ಪರವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಯುವಕ ತಕರಾರು ಎತ್ತಿದ್ದ. ಅದಕ್ಕೆ ಒಪ್ಪದೇ ಇದ್ದಾಗ ಆರೋಪಿ ಹಲ್ಲೆ ಮಾಡಿದ್ದಾನೆ.

Continue Reading

ಕ್ರೈಂ

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

Physical Abuse : ಪ್ರಕರಣವೊಂದರ ಆದೇಶ ಪ್ರತಿ ಕೊಡುವುದಾಗಿ ಹೇಳಿ ಕಕ್ಷಿದಾರ ಮಹಿಳೆಯನ್ನು ಲಾಡ್ಜ್‌ಗೆ ಕರೆದ ಪಬ್ಲಿಕ್‌ ಪ್ರಾಸಿಕ್ಯೂಟರ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬೆಂಗಳೂರಿನಲ್ಲಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

VISTARANEWS.COM


on

By

Physical Abuse The public prosecutor called the client woman to the lodge
ಸಿಕ್ಕಿ ಬಿದ್ದಿದ್ದಕ್ಕೆ ಓಡಿ ಹೋಗುತ್ತಿದ್ದ ಪಬ್ಲಿಕ್‌ ಪ್ರಾಸಿಕ್ಯೂಟರ್ ಶ್ರೀರಾಂ
Koo

ಬೆಂಗಳೂರು: ಕಕ್ಷಿದಾರ ಮಹಿಳೆಗೆ ಪ್ರಕರಣವೊಂದರ ಆದೇಶ ಪ್ರತಿ ಕೊಡುವುದಾಗಿ ಹೇಳಿ ಲೈಂಗಿಕ ದೌರ್ಜನ್ಯ (Physical Abuse) ನಡೆಸಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪಬ್ಲಿಕ್ ಪ್ರಾಸಿಕ್ಯೂಟರ್‌ ಶ್ರೀರಾಂ ಬಂಧಿಸಲಾಗಿದೆ.

ಮಹಿಳೆ ನೀಡಿದ್ದ ಹಳೆಯ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. ಹೀಗಾಗಿ ಆ ಮಹಿಳೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ಆದೇಶ ಪ್ರತಿಯನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್ ಬಳಿ ಕೇಳಿದ್ದಳು. ಮೆಜೆಸ್ಟಿಕ್‌ ಬಳಿ ಇರುವ ಹೋಟೆಲ್‌ ಸಮೀಪ ಪ್ರಾಸಿಕ್ಯೂಟರ್ ಶ್ರೀರಾಂ ಆದೇಶ ಪ್ರತಿ ಕೊಡುವುದಾಗಿ ಮಾತನಾಡಿದ್ದಾನೆ. ಇಲ್ಲೇ ಕಾಟನ್‌ಪೇಟೆಯ ಲಾಡ್ಜ್‌ವೊಂದಕ್ಕೆ ಬನ್ನಿ ಕೇಸ್ ಬಗ್ಗೆ ಮಾತಾಡೋಣ ಎಂದಿದ್ದಾನೆ. ಮಹಿಳೆಯನ್ನು ನಾನಾ ರೀತಿಯಲ್ಲಿ ಒತ್ತಾಯ ಮಾಡಿ ಲಾಡ್ಜ್‌ ಹೋಗೊಣಾ ಎಂದಿದ್ದಾನೆ. ಲೈಂಗಿಕವಾಗಿ ಸಹಕರಿಸಲು ಕೋರಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಪಬ್ಲಿಕ್‌ ಪ್ರಾಸಿಕ್ಯೂಟರ್ ವರ್ತನೆಗೆ ಪ್ರತಿರೋಧ ತೋರಿದ ಮಹಿಳೆ, ಆತನಿಗೆ ಗೊತ್ತಿಲ್ಲದಂತೆ ಕೂಡಲೆ ಪತಿಗೆ ಕರೆ ಮಾಡಿ ಅಸಭ್ಯ ವರ್ತನೆ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾಳೆ. ತಕ್ಷಣ ಮಾಹಿತಿ ಪಡೆದು ಬಂದ ಮಹಿಳೆಯ ಪತಿ ಹಾಗೂ ಅವರ ಸ್ನೇಹಿತರು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಲಾಡ್ಜ್‌ಗೆ ಕರೆಯುವುದನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ. ರಸ್ತೆಯಲ್ಲೇ ನಿಂತು ಮಹಿಳೆಯನ್ನು ಲಾಡ್ಜ್‌ಗೆ ಕರೆದಿದ್ದಾನೆ. ಈ ವೇಳೆ ಮಹಿಳೆಯ ಪತಿ ಹಾಗೂ ಸ್ನೇಹಿತರು ಸಹಾಯಕ್ಕೆ ದೌಡಾಯಿಸಿದ್ದಾರೆ. ಯಾವ ಲಾಡ್ಜ್‌ಗೆ ಬರಬೇಕೆಂದು ಪ್ರಶ್ನೆ ಮಾಡಿದಾಗ ಇವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಎಲ್ಲರೂ ಸೇರಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಟನ್ ಪೇಟೆ ಪೊಲೀಸರು ಆರೋಪಿ ಶ್ರೀರಾಂನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿ ಶ್ರೀಂರಾಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Viral Video:ಛೀ.. ಎಂಥಾ ಹೇಯ ಕೃತ್ಯ! ಶಾಲಾ ಬಾಲಕಿ ಮೇಲೆ ಆಟೋ ಚಾಲಕನ ನೀಚ ಕೃತ್ಯ; ಶಾಕಿಂಗ್‌ ವಿಡಿಯೋ ವೈರಲ್‌

Viral Video:10ನೇ ತರಗತಿ ವಿದ್ಯಾರ್ಥಿನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಏಕಾಂತ ಸ್ಥಳದಲ್ಲಿ ಆಟೋ ನಿಲ್ಲಿಸಿ ಹಿಂದೆ ಕುಳಿತಿದ್ದ ಬಾಲಕಿಗೆ ಕಿರುಕುಳ ಕೊಡಲು ಶುರು ಮಾಡುತ್ತಾನೆ. ಬಾಲಕಿಯ ಮೈ ಕೈ ಮುಟ್ಟಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಆಘಾತಕಾರಿ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದು, ಆ ವಿಡಿಯೋ ವೈರಲ್‌ ಆಗಿದೆ.

VISTARANEWS.COM


on

Viral video
Koo

ನಾಗ್ಪುರ:ಕಾಮುಕರ ಅಟ್ಟಹಾಸಕ್ಕೆ ಸಣ್ಣ ಪುಟ್ಟ ಮಕ್ಕಳು ಬಲಿಯಾಗುತ್ತಿರುವ ಘಟನೆ ಆಗಾಗ ನಡೆಯುತ್ತಲೇ ಇರುತ್ತವೆ. ಅಪರಿಚಿತರಿಂದ ಮಕ್ಕಳು ಲೈಂಗಿಕ ಕಿರುಕುಳ(Physical Abuse)ಕ್ಕೆ ಒಳಗಾಗುವುದಕ್ಕಿಂತ ಹೆಚ್ಚಾಗಿ ಪರಿಚಿತರಿಂದಲೇ ದೌರ್ಜನ್ಯಕ್ಕೊಳಗಾಗುತ್ತಿರುವ ಹೇಯ ಘಟನೆ ಬೆಳಕಿಗೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ವರದಿಯಾಗಿದ್ದು, ಅದರ ವಿಡಿಯೋ ವೈರಲ್‌(Viral Video) ಆಗಿದೆ. ಶಾಕಿಂಗ್‌ ವಿಡಿಯೋ ನೋಡಿದರೆ ಮನೆಯಲ್ಲಿ ಪುಟ್ಟ ಮಕ್ಕಳಿರುವವರಂತೂ ಆಘಾತಕ್ಕೊಳಗಾಗುವುದಂತು ಗ್ಯಾರಂಟಿ. ದಿನಾ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕನೇ ಬಾಲಕಿ ಮೇಲೆ ನೀಚ ಕೃತ್ಯ ಎಸಗಿದ್ದಾನೆ.

ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಏಕಾಂತ ಸ್ಥಳದಲ್ಲಿ ಆಟೋ ನಿಲ್ಲಿಸಿ ಹಿಂದೆ ಕುಳಿತಿದ್ದ ಬಾಲಕಿಗೆ ಕಿರುಕುಳ ಕೊಡಲು ಶುರು ಮಾಡುತ್ತಾನೆ. ಬಾಲಕಿಯ ಮೈ ಕೈ ಮುಟ್ಟಿ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಆಘಾತಕಾರಿ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದು, ಆ ವಿಡಿಯೋ ವೈರಲ್‌ ಆಗಿದೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಇದೀಗ ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಆಟೋ ರಿಕ್ಷಾದ ಹೊರಗೆ ನಿಂತಿರುವ ಚಾಲಕ ಮತ್ತು ಅಪ್ರಾಪ್ತ ಬಾಲಕಿ ಕುಳಿತಿದ್ದ ಹಿಂದಿನ ಸೀಟಿನಲ್ಲಿ ನುಸುಳುತ್ತಿರುವ ದೃಶ್ಯವು ಸೆರೆಯಾಗಿದೆ. ಆಟೋ ಚಾಲಕನ ಹೀನಾ ಕೃತ್ಯವನ್ನು ದೂರದಿಂದ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಪೊಲೀಸರು ಚಾಲಕನನ್ನು ಹುಡುಕಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ:PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

ಕೆಲವು ತಿಂಗಳ ಹಿಂದೆ ಮೈಸೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ನಾಲ್ಕನೇ ತರಗತಿ ಓದುತ್ತಿದ್ದ ಬಾಲಕಿಗೆ ನ್ಯಾಯಾಲಯದಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯನ್ನು ಕರೆಸಿಕೊಂಡ ಈ ವೃದ್ಧ ಮರ್ಮಾಂಗವನ್ನು ಹಿಡಿದುಕೊಳ್ಳುವಂತೆ, ಜತೆಗೆ ಬಟ್ಟೆಯನ್ನು ಬಿಚ್ಚುವಂತೆ ಪೀಡಿಸುತ್ತಿದ್ದ ಜಗದೀಶ್‌ ಎಂಬಾತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು.

Continue Reading
Advertisement
Prajwal Revanna Case
ಕರ್ನಾಟಕ1 min ago

Prajwal Revanna Case: ದೇವರಾಜೇಗೌಡ ಹುಚ್ಚುನಾಯಿ, ನಕಲಿ ವಕೀಲ ಎಂದ ಶಿವರಾಮೇಗೌಡ

Hassan Pen Drive Case
ಕರ್ನಾಟಕ7 mins ago

Hassan Pen Drive Case: ಅಶ್ಲೀಲ ವಿಡಿಯೊ ಪ್ರಕರಣ; ಪೆನ್‌ಡ್ರೈವ್ ಲೀಕ್‌ ಮಾಡಿದವರಿಗೂ ಸಂಕಷ್ಟ?

SSLC Student missing In Kopala
ಕೊಪ್ಪಳ27 mins ago

SSLC Student Missing : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

Rahul Gandhi
ದೇಶ34 mins ago

Rahul Gandhi: ನರೇಂದ್ರ ಮೋದಿ ಪ್ರಧಾನಿಯಲ್ಲ, ಮಹಾರಾಜ ಎಂದ ರಾಹುಲ್ ಗಾಂಧಿ

Murder Case in Bengaluru
ಬೆಂಗಳೂರು45 mins ago

Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

Prajwal Revanna Case
ಕರ್ನಾಟಕ60 mins ago

Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

Food Poisoning
ಚಿತ್ರದುರ್ಗ1 hour ago

Food Poisoning: ಮದುವೆ ಮನೆ ಊಟ ತಿಂದವರಿಗೆ ವಾಂತಿ, ಭೇದಿ; ನೂರಾರು ಮಂದಿ ಅಸ್ವಸ್ಥ

Gold Rate Today
ಕರ್ನಾಟಕ1 hour ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Heavy Rain
ಕರ್ನಾಟಕ2 hours ago

Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

Murder case in Bengaluru rural
ಬೆಂಗಳೂರು ಗ್ರಾಮಾಂತರ2 hours ago

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ22 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ24 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌