Viral Video: ಟೆರೇಸ್ಸೇ ಡ್ಯಾನ್ಸ್ ಫ್ಲೋರ್ ಆಯ್ತು, ಯುವತಿ ಸಖತ್ ಸ್ಟೆಪ್ಸ್! ವಿಡಿಯೋ ವೈರಲ್ - Vistara News

ವೈರಲ್ ನ್ಯೂಸ್

Viral Video: ಟೆರೇಸ್ಸೇ ಡ್ಯಾನ್ಸ್ ಫ್ಲೋರ್ ಆಯ್ತು, ಯುವತಿ ಸಖತ್ ಸ್ಟೆಪ್ಸ್! ವಿಡಿಯೋ ವೈರಲ್

ಯುವತಿಯೊಬ್ಬಳು ಛತ್‌ ಪರ್‌ ಆಜ ಗೋರಿಯೇ ಹಾಡಿಗೆ ಮಾಡಿರುವ ನೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ (Viral Video) ಆಗಿದೆ.

VISTARANEWS.COM


on

Suhani Rawat dance
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡ್ಯಾನ್ಸ್ ಇಷ್ಟಪಡದವರಿಲ್ಲ. ಎಲ್ಲರಿಗೂ ಕುಣಿಯುವ ಆಸೆಯಿರುತ್ತದೆಯಾದರೂ ಮುಜುಗರ ಅವರನ್ನು ಹಿಂದೆ ಸರಿಸುತ್ತದೆ ಅಷ್ಟೇ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ಮುಜುಗರವಿಲ್ಲದೆ ಕುಣಿದು ತಮ್ಮ ಪ್ರತಿಭೆಯನ್ನು ಹೊರಹಾಕುತ್ತಿದ್ದಾರೆ. ಅದೇ ರೀತಿ ಯುವತಿಯೊಬ್ಬಳು ನೃತ್ಯದ ಮೂಲಕ ತನ್ನ ಕಲಾ ಪ್ರದರ್ಶನ ತೋರಿಸಿದ್ದು, ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

ಸುಹಾನಿ ರಾವತ್‌ ಹೆಸರಿನ ಯುವತಿ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡಿ ಪೋಸ್ಟ್‌ ಮಾಡಿದ್ದಾಳೆ. ಅದರಲ್ಲಿ ಆಕೆ ಬಾಲಿವುಡ್‌ನ ಛತ್‌ ಪರ್‌ ಆಜಾ ಗೋರಿಯೇ ಹಾಡಿನ ಮ್ಯಾಷಪ್‌ಗೆ ನೃತ್ಯ ಮಾಡಿದ್ದಾಳೆ. ಮನೆಯ ಟೆರೇಸ್‌ ಅನ್ನೇ ತನ್ನ ನೃತ್ಯಕ್ಕೆ ವೇದಿಕೆಯನ್ನಾಗಿ ಮಾಡಿಕೊಂಡು ನೃತ್ಯ ಮಾಡಿದ್ದಾಳೆ.

ಇದನ್ನೂ ಓದಿ: Viral News: ಕೇವಲ ವೇಗನ್:‌ ಕಚೇರಿಯೊಂದರಲ್ಲಿ ಬೇರೆ ಆಹಾರಗಳಿಗೆ ನಿರ್ಬಂಧವೀಗ ಚರ್ಚೆಗೆ ಗ್ರಾಸ
ಕಪ್ಪು ಬಣ್ಣದ ಕುರ್ತಾ ಮತ್ತು ಲೆಗ್ಗಿನ್ಸ್‌ ತೊಟ್ಟು ನೃತ್ಯ ಮಾಡಿರುವ ಸುಹಾನಿಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಡಿಯೊವನ್ನು ಮೇ 13ರಂದು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಅಂದಿನಿಂದ ಇಂದಿನವರೆಗೆ ವಿಡಿಯೊ 70 ಸಾವಿರಕ್ಕೂ ಅಧಿಕ ಮಂದಿಯಿಂದ ವೀಕ್ಷಣೆಗೊಂಡಿದೆ. ನೂರಾರು ಮಂದಿ ಈ ವಿಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ ಕೂಡ.


ಹಲವಾರು ಮಂದಿ ಈ ವಿಡಿಯೊಗೆ ಸಾಕಷ್ಟು ರೀತಿಯ ಕಾಮೆಂಟ್‌ಗಳನ್ನು ಮಾಡಿದ್ದಾರೆ. “ವಾವ್”‌, “ಅದ್ಭುತವಾದ ನೃತ್ಯ”, “ನಿಮ್ಮ ಮುಖದ ಭಾವ ನೋಡುವುದಕ್ಕೆ ಚಂದವಾಗಿದೆ” ಎನ್ನುವಂತಹ ಹಲವಾರು ಮೆಚ್ಚುಗೆಯ ಮಾತುಗಳು ವಿಡಿಯೊಗೆ ಬಂದಿವೆ.

ಇದನ್ನೂ ಓದಿ: Viral Video : ವೇದಿಕೆ ಮೇಲೆ ಧೂಳೆಬ್ಬಿಸಿದ ಭಲೇ ಜೋಡಿ; ಸಕತ್‌ ಆಗಿದೆ ಈ ಸೆನೋರಿಟಾ ಡ್ಯಾನ್ಸ್‌
ಈ ಹಿಂದೆ ಕೂಡ ಇದೇ ರೀತಿಯ ನೃತ್ಯದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು. ವೃದ್ಧ ದಂಪತಿ ಮದುವೆ ಕಾರ್ಯಕ್ರಮದ ವೇದಿಕೆ ಮೇಲೆ ನಿಂತು ಸೆನೋರಿಟಾ ಹಾಡಿಗೆ ಡುಯೆಟ್‌ ಮಾಡುವ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

IPL 2024: ಕಳೆದ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಮಾಲಿಕರಾದ ನೀತಾ ಅಂಬಾನಿ ಕೂಡ ಪಂದ್ಯವನ್ನು ನೋಡುವ ಬದಲು ಸಿಟ್ಟಿನಲ್ಲಿ ಮೊಬೈಲ್​ ನೋಡುತ್ತಿರುವ ದೃಶ್ಯಗಳು ವೈರಲ್​ ಆಗಿತ್ತು. ಪಂದ್ಯದ ಬಳಿಕ ಫ್ರಾಂಚೈಸಿಯ ಅಧಿಕಾರಿಗಳು ರೋಹಿತ್​ ಜತೆ ಚರ್ಚೆ ನಡೆಸುತ್ತಿರುವುದು ಕೂಡ ಕಂಡು ಬಂದಿತ್ತು. ಇದನ್ನೆಲ್ಲ ನೋಡುವಾಗ ಮುಂದಿನ ಪಂದ್ಯದಲ್ಲಿಯೂ ಮುಂಬೈ ಇದೇ ರೀತಿಯ ಕಳಪೆ ಪ್ರದರ್ಶನ ತೋರಿದರೆ ಪಾಂಡ್ಯ ತಲೆ ದಂಡ ಖಚಿತ ಎನ್ನಲಡ್ಡಿಯಿಲ್ಲ.

VISTARANEWS.COM


on

IPL 2024
Koo

ಮುಂಬಯಿ: 5 ಬಾರಿಯ ಐಪಿಎಲ್‌(IPL 2024) ಚಾಂಪಿಯನ್‌ ಮುಂಬೈ ಇಂಡಿಯನ್ಸ್‌(Mumbai Indians) ತಂಡದೊಳಗೆ ಎಲ್ಲವೂ ಸರಿ ಇದ್ದಂತೆ ಕಾಣುತ್ತಿಲ್ಲ. ಹಾರ್ದಿಕ್​ ಪಾಂಡ್ಯ(Hardik Pandya) ನಾಯಕನಾದ ಬಳಿಕ ಈ ತಂಡದಲ್ಲಿ ಸಮಸ್ಯೆಗಳ ಸಾಗರವೇ ತಾಂಡವವಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕೋಚ್​ ಲಸಿತ್​ ಮಾಲಿಂಗ(Lasith Malinga) ಮುನಿಸಿಕೊಂಡಿರುವ ವಿಡಿಯೊವೊಂದು ವೈರಲ್​ ಆಗಿದೆ.

ಹಾರ್ದಿಕ್‌ ಅವರ ನಾಯಕತ್ವದ ಬಗ್ಗೆ ತಂಡದ ಕೋಚ್‌ಗಳಿಗೂ ಮತ್ತು ಆಟಗಾರರಿಗೂ ಅಸಮಾಧಾನವಿದೆ ಎನ್ನಲಾಗಿದೆ. ಪ್ರಮುಖವಾಗಿ ಬೌಲರ್‌ಗಳ ನಿರ್ವಹಣೆಯಲ್ಲಿ ಹಾರ್ದಿಕ್‌ ಪಾಂಡ್ಯ ಪದೇಪದೇ ಎಡವಟ್ಟು ಮಾಡುತ್ತಿರುವುದಕ್ಕೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತವಾಗುತ್ತಿದೆ. ತಂಡದ ಪ್ರಧಾನ ವೇಗಿ ಜಸ್​ಪ್ರೀತ್​ ಬುಮ್ರಾ ಅವರಿಗೆ ಇನಿಂಗ್ಸ್​ನ ಮೊದಲ ಓವರ್​ ನೀಡುವ ಬದಲು 5 ಓವರ್​ ಬಳಿಕ ಬೌಲಿಂಗ್​ ನೀಡುತ್ತಿದ್ದಾರೆ. ಇದೇ ವಿಚಾರದಲ್ಲಿ ಹಾರ್ದಿಕ್‌ರ ಮೇಲೆ ಬೌಲಿಂಗ್‌ ಕೋಚ್‌ ಲಸಿತ್‌ ಮಾಲಿಂಗ ಸಿಟ್ಟು ಮಾಡಿಕೊಂಡು ಎದ್ದು ಹೋಗುವಂತೆ ಕಾಣುವ ವಿಡಿಯೋವೊಂದು ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ. ಅಲ್ಲದೆ ಪಂದ್ಯದ ಮುಕ್ತಾಯದ ವೇಳೆಯೂ ಮಾಲಿಂಗ ಅವರು ಪಾಂಡ್ಯ ಜತೆ ಸರಿಯಾಗಿ ಮಾತನಾಡಲು ಕೂಡ ನಿರಾಕರಿಸಿದ್ದಾರೆ.

ತಂಡದೊಳಗೆ ಎರಡು ಬಣಗಳಾಗಿವೆ ಎಂದು ಕೂಡ ಹೇಳಲಾಗಿದೆ. ರೋಹಿತ್‌ ಶರ್ಮಾ ಬಣದಲ್ಲಿ ಜಸ್‌ಪ್ರೀತ್‌ ಬುಮ್ರಾ, ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ ಸೇರಿ ಇನ್ನೂ ಹಲವರಿದ್ದರೆ, ಹಾರ್ದಿಕ್‌ ಪಾಂಡ್ಯ ಬಣದಲ್ಲಿ ಇಶಾನ್‌ ಕಿಶನ್‌ ಸೇರಿ ಕೆಲವು ಆಟಗಾರರಿದ್ದಾರೆ ಎನ್ನಲಾಗಿದೆ. ಪಾಂಡ್ಯ ಅವರ ಕೆಲ ವರ್ತನೆ ಬಗ್ಗೆ ಸ್ವತಃ ಫ್ರಾಂಚೈಸಿಗೂ ಅಸಮಾಧಾನ ಇದೆ ಎಂದು ವರದಿಯಾಗಿದ್ದು ಮತ್ತೆ ರೋಹಿತ್​ಗೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬಂದಿವೆ.

ಇದನ್ನೂ ಓದಿ IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

ಕಳೆದ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಮಾಲಿಕರಾದ ನೀತಾ ಅಂಬಾನಿ ಕೂಡ ಪಂದ್ಯವನ್ನು ನೋಡುವ ಬದಲು ಸಿಟ್ಟಿನಲ್ಲಿ ಮೊಬೈಲ್​ ನೋಡುತ್ತಿರುವ ದೃಶ್ಯಗಳು ವೈರಲ್​ ಆಗಿತ್ತು. ಪಂದ್ಯದ ಬಳಿಕ ಫ್ರಾಂಚೈಸಿಯ ಅಧಿಕಾರಿಗಳು ರೋಹಿತ್​ ಜತೆ ಚರ್ಚೆ ನಡೆಸುತ್ತಿರುವುದು ಕೂಡ ಕಂಡು ಬಂದಿತ್ತು. ಇದನ್ನೆಲ್ಲ ನೋಡುವಾಗ ಮುಂದಿನ ಪಂದ್ಯದಲ್ಲಿಯೂ ಮುಂಬೈ ಇದೇ ರೀತಿಯ ಕಳಪೆ ಪ್ರದರ್ಶನ ತೋರಿದರೆ ಪಾಂಡ್ಯ ತಲೆ ದಂಡ ಖಚಿತ ಎನ್ನಲಡ್ಡಿಯಿಲ್ಲ. ಮುಂಬೈ ಮುಂದಿನ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ತವರಿನ ವಾಖೆಂಡೆ ಕ್ರಿಕೆಟ್​ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯ ಎಪ್ರಿಲ್​ 1 ರಂದು ನಡೆಯಲಿದೆ.

Continue Reading

ಬೀದರ್‌

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Dead Body Found : ಗ್ರಾಮದಲ್ಲಿರುವ ನೀರಿನ ಟ್ಯಾಂಕರ್‌ನಲ್ಲಿ ವ್ಯಕ್ತಿ ಶವ ಪತ್ತೆಯಾಗಿದ್ದು, ದಿನಗಟ್ಟಲೆ ಅದೇ ನೀರನ್ನು ಕುಡಿದಿದ್ದ ಜನರು (Water Tank) ಬೆಚ್ಚಿಬಿದ್ದಿದ್ದಾರೆ.

VISTARANEWS.COM


on

By

Dead Body Found in water tank
ವಾಟರ್‌ ಟ್ಯಾಂಕರ್‌ನಲ್ಲಿ ಶವ ಪತ್ತೆಯಾಗುತ್ತಿದ್ದಂತೆ ಜಮಾಯಿಸಿದ ಗ್ರಾಮಸ್ಥರು
Koo

ಬೀದರ್ : ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ (Water Tank) ಶವವೊಂದು (Dead Body Found) ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ (Bidar News) ನಡೆದಿದೆ. ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಏನಾದರೂ ಮಿಶ್ರಣ ಎಂದು ಶಂಕಿಸಲಾಗಿತ್ತು. ಮನೆಗೆ ಸರಬರಾಜು ಆಗುತ್ತಿದ್ದ ನೀರಲ್ಲಿ ಕೂದಲು ಬರುತ್ತಿದ್ದವು. ಇತ್ತ ದೂರು ಬಂದ ಕಾರಣಕ್ಕೆ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿಯಿಯಲ್ಲಿ ವ್ಯಕ್ತಿಯೊಬ್ಬಮ ಶವ ಪತ್ತೆಯಾಗಿದೆ.

ನೀರಿನ ಟ್ಯಾಂಕರ್‌ನಲ್ಲಿ ಎಷ್ಟು ದಿವಸದಿಂದ ಶವವಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರು ಹಲವು ದಿನದಿಂದ ಶವ ಬಿದ್ದಿದ್ದ ಟ್ಯಾಂಕಿನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರು ಗಬ್ಬು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿದಾಗ ಶವ ಪತ್ತೆಯಾಗಿದೆ ಎಂದು ಗ್ರಾಮ ಪಂಚಾಯತಿ ಪಿಡಿಓ ಮಾಹಿತಿ ನೀಡಿದ್ದಾರೆ. ಮೊದಮೊದಲು ನೀರಿನೊಟ್ಟಿಗೆ ಕೂದಲು ಬಂದಿದೆ. ಜತೆಗೆ ಕುಡಿಯಲು ಆಗದಷ್ಟು ನೀರು ಗಬ್ಬು ನಾರುತ್ತಿತ್ತು. ಇದೀಗ ಸತ್ಯ ವಿಷಯವನ್ನು ತಿಳಿದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿದೇಶ

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Shani Louk Photo: ಬಹುತೇಕ ಪೂರ್ಣ ಬೆತ್ತಲೆಯಾಗಿರುವ ಇಸ್ರೇಲಿ ಮಹಿಳೆ ಶಾನಿ ಲೌಕ್ ಅವರ ದೇಹವನ್ನು ಜೀಪಿನಲ್ಲಿ ಹಾಕಿ ಮೆರವಣಿಗೆ ಮಾಡುತ್ತಿರುವ ಕರುಳು ಕಿವುಚುವಂಥ ಫೋಟೋವು ಪ್ರಶಸ್ತಿ ಪಡೆದ ಚಿತ್ರಗಳಲ್ಲಿ ಒಂದಾಗಿದೆ.

VISTARANEWS.COM


on

shani louk photo hamas terrorists
Koo

ನ್ಯೂಯಾರ್ಕ್‌: ಹಮಾಸ್‌ ಉಗ್ರರಿಂದ (Hamas Terrorists) ಹತ್ಯೆಗೀಡಾದ ಯಹೂದಿ ಮಹಿಳೆ ಶಾನಿ ಲೌಕ್‌ (Shani Louk) ಬೆತ್ತಲೆ ದೇಹವನ್ನು ಗಾಜಾದ (Gaza strip) ಬೀದಿಗಳಲ್ಲಿ ಹಮಾಸ್ ಭಯೋತ್ಪಾದಕರು ಮೆರವಣಿಗೆ ಮಾಡುತ್ತಿರುವ ಚಿತ್ರಕ್ಕೆ ಫೋಟೋ-ಆಫ್-ದಿ-ಇಯರ್ ಬಹುಮಾನ (Photo Award) ನೀಡಲಾಗಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.

ಬಹುತೇಕ ಪೂರ್ಣ ಬೆತ್ತಲೆಯಾಗಿರುವ ಇಸ್ರೇಲಿ ಮಹಿಳೆ ಶಾನಿ ಲೌಕ್ ಅವರ ದೇಹವನ್ನು ಜೀಪಿನಲ್ಲಿ ಹಾಕಿ ಮೆರವಣಿಗೆ ಮಾಡುತ್ತಿರುವ ಕರುಳು ಕಿವುಚುವಂಥ ಫೋಟೋವು ಪ್ರಶಸ್ತಿ ಪಡೆದ ಚಿತ್ರಗಳಲ್ಲಿ ಒಂದಾಗಿದೆ. ಇದನ್ನು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್‌ಗಾಗಿ ತೆಗೆಯಲಾಗಿತ್ತು. ಯುಎಸ್ ಮೂಲದ ಡೊನಾಲ್ಡ್ ಡಬ್ಲ್ಯೂ. ರೆನಾಲ್ಡ್ಸ್ ಜರ್ನಲಿಸಂ ಇನ್ಸ್ಟಿಟ್ಯೂಟ್ ಈ ಸ್ಪರ್ಧೆಯನ್ನು ನಡೆಸುತ್ತಿದ್ದು, ಪ್ರಶಸ್ತಿಯನ್ನು ನೀಡುತ್ತದೆ.

ʼಪಿಕ್ಚರ್ಸ್ ಆಫ್ ದಿ ಇಯರ್ ಇಂಟರ್ನ್ಯಾಷನಲ್ʼ ಪ್ರಶಸ್ತಿ ವಿಭಾಗದಲ್ಲಿ ಇದು ಮೊದಲ ಸ್ಥಾನವನ್ನು ಪಡೆದಿದೆ. ಆದರೆ ಈ ಪ್ರಶಸ್ತಿ ಘೋಷಣೆಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ಎದುರಾಗಿದೆ. ಜನ ಲೌಕ್ ಅವರ ಫೋಟೋವನ್ನು “ಯಹೂದಿ ಮಹಿಳೆಯ ಬದುಕಿನ ಘನತೆಗೆ ಮಾಡಿದ ಅವಮಾನ” ಎಂದು ದೂಷಿಸಿದ್ದಾರೆ.

ಶಾನಿ ಲೌಕ್‌ 22 ವರ್ಷ ವಯಸ್ಸಿನ ಜರ್ಮನ್-ಇಸ್ರೇಲಿ ಮಹಿಳೆಯಾಗಿದ್ದು, ಹಮಾಸ್‌ ನಡೆಸಿದ ಕಳೆದ ವರ್ಷದ ಅಕ್ಟೋಬರ್ 7ರ ದಾಳಿಯ ಸಂದರ್ಭದಲ್ಲಿ ಉಗ್ರರ ಕೈಗೆ ಸಿಕ್ಕಿಬಿದ್ದಿದ್ದರು. ಅವರನ್ನು ಅಪಹರಿಸಿ ಗಾಜಾ ಪಟ್ಟಿಗೆ ಕರೆದೊಯ್ಯಲಾಗಿತ್ತು. ಪ್ಯಾಲೇಸ್ಟಿನಿಯನ್ ಉಗ್ರರು ಈಕೆಯನ್ನು ಗಾಯಗೊಳಿಸಿ, ತೆರೆದ ಜೀಪಿನಲ್ಲಿ ಬೋರಲು ಮಲಗಿಸಿ ಬೀದಿಯಲ್ಲಿ ಮೆರವಣಿಗೆ ಮಾಡಿದ್ದರು. ಈಕೆಯ ಮೈಯ ಮೇಲಿದ್ದ ಉಡುಪು ಬಹುತೇಕ ಹರಿದು ಆಕೆ ವಿವಸ್ತ್ರಳಾಗಿದ್ದು, ಆಕೆಯ ಮೇಲೆ ಹಮಾಸ್‌ ಉಗ್ರನೊಬ್ಬ ಕುಳಿತಿದ್ದುದು ಕಂಡುಬಂದಿತ್ತು. ಈ ಫೋಟೋಗೆ ಪ್ರಶಸ್ತಿ ದೊರೆತಿದೆ.

“ಈ ಫೋಟೋವನ್ನು ತೆಗೆದ ವ್ಯಕ್ತಿಯು ನಾಗರಿಕರನ್ನು ಹತ್ಯೆ ಮಾಡುವ, ಚಿತ್ರಹಿಂಸೆ ನೀಡುವ ಮತ್ತು ಅತ್ಯಾಚಾರ ಮಾಡುವ ಜಿಹಾದಿ ಗ್ಯಾಂಗ್‌ನ ಭಾಗವಾಗಿದ್ದಾನೆ. ಅವಳನ್ನು ಹೀಗೆ ನೆನಪಿಸಿಕೊಳ್ಳುವುದು ಆಕೆಯ ಮನೆಯವರಿಗೆ ಖಂಡಿತಕ್ಕೂ ಇಷ್ಟವಿಲ್ಲ. ಈ ಪ್ರಶಸ್ತಿಯು ಅವಳ ಘನತೆಗೆ ನಿರಂತರ ಅಪಚಾರ ಎಸಗುತ್ತದೆ” ಎಂದು ಒಬ್ಬರು ಆಕ್ರೋಶಿಸಿದ್ದಾರೆ.

“ಶಾನಿ ಲೌಕ್ ಅವರ ದೇಹವನ್ನು ಭಯೋತ್ಪಾದಕರು ಪರೇಡ್ ಮಾಡುತ್ತಿರುವ ಚಿತ್ರವನ್ನು ತೆಗೆದ ಅಸೋಸಿಯೇಟೆಡ್ ಪ್ರೆಸ್ ಹಮಾಸ್ ಫೋಟೋಗ್ರಾಫರ್ ಪ್ರತಿಷ್ಠಿತ ಛಾಯಾಗ್ರಹಣ ಪ್ರಶಸ್ತಿಯನ್ನು ಗೆದ್ದಿದ್ದಾನೆ. ಈ ಛಾಯಾಗ್ರಾಹಕರು ಹಮಾಸ್ ಭಯೋತ್ಪಾದಕರೊಂದಿಗೆ 10/7ರಂದು ಇಸ್ರೇಲ್‌ಗೆ ಬಂದರು ಮತ್ತು ದಾಳಿಯ ಬಗ್ಗೆ ತಿಳಿದಿದ್ದರು” ಎಂದು ಇನ್ನೊಬ್ಬ ಬಳಕೆದಾರರು ಎಕ್ಸ್‌ನಲ್ಲಿ ಸಿಟ್ಟಿನಿಂದ ಟ್ವೀಟ್‌ ಮಾಡಿದ್ದಾರೆ.

ಈ ಫೋಟೋವನ್ನು ಆಲಿ ಮಹಮದ್‌ ಎಂಬ ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಈತ ಎಪಿ ಸಂಸ್ಥೆಗೆ ಫೋಟೋ ಒದಗಿಸುವ ಏಜೆನ್ಸಿಗಳಲ್ಲಿ ಒಂದರಲ್ಲಿ ಕೆಲಸ ಮಾಡುತ್ತಾನೆ. “ಈ ಫೋಟೋಗ್ರಾಫರ್‌ ಹಮಾಸ್‌ ಉಗ್ರರ ಜೊತೆಗಿದ್ದ” ಎಂದು ಸೋಶಿಯಲ್‌ ಮೀಡಿಯಾದಲ್ಲಿ ಬಹಳ ಮಂದಿ ಆರೋಪಿಸಿದ್ದಾರೆ. ಆದರೆ ಈ ದಾಳಿಯ ಮಾಹಿತಿ ಮೊದಲೇ ಇತ್ತು ಎಂಬುದನ್ನು ಎಪಿ ಸಂಸ್ಥೆ ನಿರಾಕರಿಸಿದೆ.

ಇದನ್ನೂ ಓದಿ: ʼಅವನೇಕೆ ನನ್ನನ್ನು ರೇಪ್‌ ಮಾಡಲಿಲ್ಲ ಎಂದರೆ…ʼ ಹಾರರ್‌ ಸ್ಟೋರಿ ಬಿಚ್ಚಿಟ್ಟ ಹಮಾಸ್‌ ಒತ್ತೆಯಾಳು

Continue Reading

ವೈರಲ್ ನ್ಯೂಸ್

Karimani Malika Ninalla: ʻಕರಿಮಣಿ ಮಾಲೀಕʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದ ವಯೋಲಿನ್‌ ವಾದಕ!

Karimani Malika Ninalla: ʻಕರಿಮಣಿ ಮಾಲೀಕ ನೀನಲ್ಲʼ ರೀಲ್ಸ್‌ಗೆ ಹಲವು ಪ್ರತಿಭೆಗಳು ಲಿಪ್‌ ಸಿಂಕ್‌ ಮಾಡಿವೆ.  ಇದೀಗ ವಯೋಲಿನ್‌ ವಾದಕ ಹೇಗೆ ನುಡಿಸಿದ್ದಾರೆ ಎಂದು ನೀವೇ ನೋಡಿ!

VISTARANEWS.COM


on

Karimani Malika Ninalla play by violinist Aneesh Vidyashankar
Koo

ಬೆಂಗಳೂರು: ʻಬೆಳ್ಳುಳ್ಳಿ ಕಬಾಬ್‌ʼ ಖ್ಯಾತಿಯ ಚಂದ್ರು ಹಾಗೂ ʻರಾವುಲ್ಲʼ ಜತೆಗೂಡಿ ʻಕರಿಮಣಿ ಮಾಲೀಕ ನೀನಲ್ಲʼ ರೀಲ್ಸ್‌ ಶೇರ್‌ ಮಾಡಿದ ಬಳಿಕ ಇನ್ನಷ್ಟು ಪ್ರತಿಭೆಗಳು ಈ ರೀಲ್ಸ್‌ಗೆ ಲಿಪ್‌ ಸಿಂಕ್‌ ಮಾಡಿವೆ.  ಇದುವರೆಗೆ ಈ ರೀಲ್ಸ್‌ಗೆ ಕ್ರೇಜ್‌ ಕಡಿಮೆಯಾಗಿಲ್ಲ. ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ʻಕರಿಮಣಿ ಮಾಲೀಕ ನೀನಲ್ಲʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದರು. ಇದೀಗ ನಡೆದಾಡುವ ವಯೋಲಿನ್‌ ವಾದಕ ಎಂದೇ ಖ್ಯಾತರಾಗಿರುವ ʻಅನೀಶ್‌ ವಿದ್ಯಾಶಂಕರ್‌ʼ (violinist Aneesh Vidyashankar) ಈ ಹಾಡನ್ನು ನುಡಿಸಿದ್ದಾರೆ. ವಿಕ್ಕಿಪೀಡಿಯಾ, ಚಂದ್ರು, ಹಾಗೂ ರಾವುಲ್ಲಾ ಶಾಸ್ತ್ರೀಯ ಸಂಗೀತ ತರಗತಿಗೆ ಹೋದರೆ ಎಷ್ಟು ಸೊಗಸಾಗಿರಬಹುದಲ್ಲವೇ ಎಂದು ವಿಡಿಯೊ ಹಂಚಿಕೊಂಡು ಕ್ಯಾಪ್ಷನ್‌ ಕೊಡಲಾಗಿದೆ.

ಅನೀಶ್‌ ವಿದ್ಯಾಶಂಕರ್‌ ಅವರಿಗೆ 33 ವರ್ಷ ಇರಬಹುದು. ಆದರೆ ಅವರು ಸುಮಾರು 25 ವರ್ಷಗಳಿಂದ ವೃತ್ತಿಪರ ಸಂಗೀತಗಾರರಾಗಿದ್ದಾರೆ. 2,000ಕ್ಕೂ ಹೆಚ್ಚು ಪ್ರದರ್ಶನಗಳಲ್ಲಿ ಅವರು ವಯೋಲಿನ್‌ ನುಡಿಸಿದ್ದಾರೆ. ಇನ್ನು ಅನೀಶ್‌ ವಿದ್ಯಾಶಂಕರ್‌ ಈ ವಿಡಿಯೊ ಪೋಸ್ಟ್‌ ಮಾಡಿದ ಬಳಿಕ ವಿಕ್ಕಿಪೀಡಿಯಾ ಖ್ಯಾತಿಯ ವಿಕಾಸ್‌ ಹಾರ್ಟ್‌ ಇಮೋಜಿ ಕಮೆಂಟ್‌ ಮಾಡಿದ್ದಾರೆ.

ಉಪೇಂದ್ರ ಸಿನಿಮಾದ “ಓ ನಲ್ಲ..” ಹಾಡು ಇಷ್ಟೊಂದು ಟ್ರೆಂಡಿಂಗ್‌ನಲ್ಲಿ ಇರಲು ಕಾರಣ ಕಲ್ಯಾಣ ಕರ್ನಾಟಕ ಭಾಗದ ಕನಕ. ಅವರು ತಮ್ಮ ಇನ್‌ಸ್ಟಾದಲ್ಲಿ ಪ್ರೀತಿಸಿದ ಹುಡುಗಿ ಕೈ ಕೊಟ್ಟು ಹೋದಾಗ ಆಕೆ ಹೇಳಿದ ಮಾತುಗಳು ಎಂದು ಹೇಳಿ ಈ ಹಾಡಿನ ಸಾಲುಗಳನ್ನು ಪೋಸ್ಟ್‌ ಮಾಡಿದ್ದರು. ಇದು ಸಖತ್‌ ವೈರಲ್‌ ಆಗಿತ್ತು. ಅಲ್ಲಿಂದ ಹಲವಾರು ಪ್ರತಿಭೆಗಳು ರೀಲ್ಸ್‌ ಹಂಚಿಕೊಂಡಿದೆ. ಅದರ ಜತೆಗೆ ಇನ್ನು ಹೋಟೆಲ್ ಉದ್ಯಮಿ ಹಾಗೂ ಬಾಣಸಿಗ ಚಂದ್ರು ಮಾಡಿದ ತಮ್ಮ ವಿಡಿಯೋಗಳಲ್ಲಿ “ರಾವುಲ್ಲಾ… ರಾವುಲ್ಲಾ” ಎಂದು ಹೇಳಿರುವುದು ವೈರಲ್ ಆಗಿಬಿಟ್ಟಿದೆ. 1999ರ ಅಕ್ಟೋಬರ್ 22ರಂದು ʻಉಪೇಂದ್ರʼ ಸಿನಿಮಾ ಬಿಡುಗಡೆಯಾಗಿತ್ತು. ಆಗ ಈ ಸಿನಿಮಾ ಸೂಪರ್‌ ಹಿಟ್ ಆಗಿತ್ತು. ಈ ಚಿತ್ರಕ್ಕೆ ನಟಿ ಪ್ರೇಮಾ, ರವೀನಾ ಟಂಡನ್ ಮತ್ತು ದಾಮಿನಿ ಮೂವರು ನಾಯಕಿಯರಾಗಿದ್ದರು. ಈ ಹಾಡು ಮಾತ್ರವಲ್ಲ ಸಿನಿಮಾದ ಇತರೆ ಹಾಡುಗಳು ಕೂಡ ಭಾರೀ ಸದ್ದು ಮಾಡಿದ್ದವು.

ಇದನ್ನೂ ಓದಿ: Karimani Malika Ninalla: ಗೋಕರ್ಣದ ವಿದೇಶಿಯರ ಬಾಯಲ್ಲೂ ʻಕರಿಮಣಿ ಮಾಲಿಕ ರಾವುಲ್ಲಾʼ ಸಾಂಗ್‌!

ಅನೀಶ್‌ ವಿದ್ಯಾಶಂಕರ್‌ ಶೇರ್‌ ಮಾಡಿರುವ ವಿಡಿಯೊ

ಏನಿಲ್ಲ..ಏನಿಲ್ಲ ಪದ ಹುಟ್ಟಿದ್ದು ಹೇಗೆ?

ಆಗ ಉಪೇಂದ್ರ ಹಾಗೂ ಪ್ರೇಮಾ ಮಧ್ಯೆ ಏನೋ ಇದೆ ಎನ್ನುವ ಗಾಸಿಪ್‌ಗಳು ಹುಟ್ಟಿಕೊಂಡಿದ್ದವು. ಹಾಗೇನೂ ಇಲ್ಲ ಎಂದು ಹೇಳಲು ʻಉಪೇಂದ್ರʼ ಸಿನಿಮಾದಲ್ಲಿ ಗುರು ಕಿರಣ್ ಈ ಹಾಡು ಮಾಡಲು ಪ್ಲಾನ್ ಮಾಡಿದ್ದರು. ಏನಿಲ್ಲ ಏನಿಲ್ಲ ಅಂತಲೇ ಶುರು ಮಾಡಿದ್ದರು. ಹಾಗೆ ಏನಿಲ್ಲ ಏನಿಲ್ಲ ನನ್ನ ನಿನ್ನ ನಡುವೆ ಏನಿಲ್ಲ… ಹೀಗೆ ಹಲವು ಪದಗಳು ಸೇರಿ ಒಂದು ಪಲ್ಲವಿಯಾಗಿತ್ತು. ಮುಂದೆ ಉಪ್ಪಿ ಹೆಸರಿನ ಸಿನಿಮಾಕ್ಕೂ ಗುರುಕಿರಣ್ ಸಂಗೀತ ಕೊಟ್ಟಿದ್ದರು.

Continue Reading
Advertisement
Lok Sabha Election 2024
ಕರ್ನಾಟಕ4 mins ago

Lok Sabha Election 2024: ಅನುಮಾನ ಬೇಡ, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತಾರೆ: ಸಾಹಿತಿ ಎಸ್.ಎಲ್. ಭೈರಪ್ಪ

Summer Nail Colours Trend
ಫ್ಯಾಷನ್26 mins ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 202430 mins ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು35 mins ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ46 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ1 hour ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 20241 hour ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು1 hour ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ1 hour ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ1 hour ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌