Viral Video | ಹಿಮದ ಮುಂದೆ ಘೋಡೆ ಪೇ ಸವಾರ್ ಹಾಡಿಗೆ ಡ್ಯಾನ್ಸ್; ವೈರಲ್‌ ಆಯ್ತು ಈ ಜೋಡಿಯ ನೃತ್ಯ - Vistara News

ವೈರಲ್ ನ್ಯೂಸ್

Viral Video | ಹಿಮದ ಮುಂದೆ ಘೋಡೆ ಪೇ ಸವಾರ್ ಹಾಡಿಗೆ ಡ್ಯಾನ್ಸ್; ವೈರಲ್‌ ಆಯ್ತು ಈ ಜೋಡಿಯ ನೃತ್ಯ

“ಘೋಡೆ ಪೆ ಸವಾರ್‌” ಹಾಡು ಇದೀಗ ಸಾಮಾಜಿಕ ಜಾಲತಾಣಗಳ ಟ್ರೆಂಡಿಂಗ್‌ ಪಟ್ಟಿಯಲ್ಲಿದೆ. ಈ ಹಾಡಿಗೆ ಲಡಾಖ್‌ನ ಇಬ್ಬರು ಯುವತಿಯರು ಮಾಡಿರುವ ನೃತ್ಯ ವೈರಲ್‌ (Viral Video) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಸಾಮಾಜಿಕ ಜಾಲತಾಣಗಳಲ್ಲಿ ಹಲವು ಹಾಡುಗಳು ಟ್ರೆಂಡ್‌ ಆಗುತ್ತಿರುತ್ತವೆ. ಅದೇ ರೀತಿ ಇತ್ತೀಚೆಗೆ ಟ್ರೆಂಡ್‌ ಆದ ಗೀತೆಯೆಂದರೆ ಅದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಸಿನಿಮಾ ʼಕಲಾʼದ ಹಾಡು ʼಘೋಡೆ ಪೆ ಸವಾರ್‌ʼ. ಈ ಹಾಡಿಗೆ ಹಲವರು ನೃತ್ಯ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಆದರೆ ಈ ವಿಡಿಯೊ ಎಲ್ಲದಕ್ಕಿಂತಲೂ (Viral Video) ವಿಶೇಷ.

ಇದನ್ನೂ ಓದಿ: Viral news | ದಿನವೂ ಸಮುದ್ರತೀರದಲ್ಲಿ ಸ್ಪೂರ್ತಿದಾಯಕ ವಾಕ್ಯ ಬರೆಯಲು ಕೆಲಸ ಬಿಟ್ಟಳು!

ಪ್ರಸಿದ್ಧ ಪ್ರವಾಸಿ ತಾಣವಾದ ಲಡಾಖ್‌ನ ಪುಂಟ್ಸೊಕ್ ವಾಂಗ್ಮೊ ಮತ್ತು ಪದ್ಮ ಲಾಮೊ ಹೆಸರಿನ ಯುವತಿಯರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಲಡಾಖ್‌ನ ಸಾಂಪ್ರದಾಯಿಕ ಉಡುಗೆ ತೊಟ್ಟ ಜೋಡಿಯು ಹಿಮಾವೃತ ಪರ್ವತದ ಮುಂದಿರುವ ರಸ್ತೆಯ ಮೇಲೆ ನಿಂತು ನೃತ್ಯ ಮಾಡಿದೆ. ಅದನ್ನು ಸುಂದರವಾಗಿ ಚಿತ್ರೀಕರಿಸಿ, ಎಡಿಟಿಂಗ್‌ ಮಾಡಲಾಗಿದೆ. ಈ ವಿಡಿಯೊವನ್ನು ಜಿಗ್ಮತ್‌ ಲಡಕಿ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಭಾನುವಾರ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಾಕಲಾಗಿದ್ದು, ಒಂದೇ ದಿನದಲ್ಲಿ ಸಾವಿರಾರು ಮಂದಿ ವಿಡಿಯೊ ವೀಕ್ಷಿಸಿದ್ದಾರೆ. ಈ ಜೋಡಿಯ ನೃತ್ಯಕ್ಕೆ ಎಲ್ಲರೂ ಸೈ ಎನ್ನಲಾರಂಭಿಸಿದ್ದಾರೆ. ಸಾವಿರಾರು ಮಂದಿ ವಿಡಿಯೊಗೆ ಲೈಕ್‌ ಒತ್ತಿದ್ದು, ಶೇರ್‌ ಮಾಡಿಕೊಳ್ಳಲಾರಂಭಿಸಿದ್ದಾರೆ. “ಈ ಹಾಡಿಗೂ, ಆ ಜಾಗಕ್ಕೂ ಮತ್ತು ಅವರಿಬ್ದರ ಮುಗ್ಧ ನೃತ್ಯಕ್ಕೂ ಎಲ್ಲಿಲ್ಲದ ಜೋಡಿಯಾಗಿದೆ. ನಿಜವಾಗಿಯೂ ಸುಂದರ ಅನುಭವ ತಂದುಕೊಡುತ್ತಿದೆ” ಎಂದು ಹಲವರು ಹೇಳಿದರೆ, “ಈ ವಿಡಿಯೊ ನೋಡಿದ ಮೇಲೆ ಲಡಾಖ್‌ಗೆ ಹೋಗುವ ಆಸೆ ಇನ್ನಷ್ಟು ಹೆಚ್ಚಿದೆ” ಎಂದು ಕೆಲವರು ಕಾಮೆಂಟ್‌ಗಳ ಮೂಲಕ ತಿಳಿಸಲಾರಂಭಿಸಿದ್ದಾರೆ.

ಇದನ್ನೂ ಓದಿ: Viral News | ಬ್ರಿಟಿಷ್ ಕೌನ್ಸಿಲ್ ಜಾಬ್ ಬಿಟ್ಟು ಟೀ ಸ್ಟಾಲ್ ತೆರೆದ ಇಂಗ್ಲಿಷ್ ಎಂಎ ಪದವೀಧರೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

UPSC Result 2024: ಬಹು ನಿರೀಕ್ಷಿತ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಮೊದಲ ಸ್ಥಾನ ಪಡೆದಿದ್ದಾರೆ. ಓ ಮಧ್ಯೆ ತಮ್ಮ 12ನೇ ಪ್ರಯತ್ನದ ಹೊರತಾಗಿಯೂ ಆಯ್ಕೆಯಾಗದ ಕುನಾಲ್ ಆರ್. ವಿರುಲ್ಕರ್ ಎನ್ನುವವರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್‌ ವೈರಲ್‌ ಆಗಿದೆ.

VISTARANEWS.COM


on

UPSC Result 2024
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಆ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಇನ್ನು ಅನಿಮೇಶ್ ಪ್ರಧಾನ್ ಮತ್ತು ಡೊನೂರು ಅನನ್ಯಾ ರೆಡ್ಡಿ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಈ ಮಧ್ಯೆ ಯುಪಿಎಸ್‌ಸಿ ಆಕಾಂಕ್ಷಿ ಕುನಾಲ್ ಆರ್. ವಿರುಲ್ಕರ್ (Kunal R Virulkar) ಎನ್ನುವವರು ತಮ್ಮ 12ನೇ ಪ್ರಯತ್ನದಲ್ಲಿಯೂ ಆಯ್ಕೆಯಾಗದ ವಿಚಾರವನ್ನು ತಿಳಿಸಿದ್ದಾರೆ. ತಮ್ಮ ಹೋರಾಟವನ್ನು ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್‌ ಆಗಿದೆ (Viral News).

“12 ಪ್ರಯತ್ನಗಳು, 7 ಮುಖ್ಯ ಪರೀಕ್ಷೆ, 5 ಸಂದರ್ಶನ. ಆದರೂ ಆಯ್ಕೆಯಾಗಲಿಲ್ಲ” ಎಂದು ಬರೆದುಕೊಂಡಿರುವ ವಿರುಲ್ಕರ್ ದೆಹಲಿಯ ಯುಪಿಎಸ್‌ಸಿ ಪ್ರಧಾನ ಕಚೇರಿಯ ಹೊರಗೆ ನಿಂತುಕೊಂಡಿರುವ ತಮ್ಮ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್‌ ವೈರಲ್‌

ಸದ್ಯ ವಿರುಲ್ಕರ್ ಅವರ ಪೋಸ್ಟ್‌ ಅನ್ನು 5 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ನೂರಾರು ಮಂದಿ ಪ್ರತಿಕ್ರಿಯಿಸಿ ಸಾಂತ್ವನ ಹೇಳಿದ್ದಾರೆ. ಹಲವು ಮಂದಿ ಇತರರ ಉದಾಹರಣೆ ನೀಡಿ ಸಮಾಧಾನ ಪಡಿಸಿದರೆ, ಇನ್ನು ಕೆಲವರು ಸ್ಫೂರ್ತಿದಾಯಕ ಕಥೆ ಹೇಳಿದ್ದಾರೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಕಮೆಂಟ್‌ ಮಾಡಿ, ʼʼನಿಮ್ಮ ಬೆಂಬಲಕ್ಕೆ ನಾವೆಲ್ಲ ಇದ್ದೇವೆ. ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ. ಒಂದಲ್ಲ ಒಂದು ದಿನ ನಿಮ್ಮ ಪ್ರಯತ್ನದಲ್ಲಿ ಜಯ ಗಳಿಸುತ್ತೀರಿʼʼ ಎಂದು ಹೇಳಿದ್ದಾರೆ. “ಚಿಂತಿಸಬೇಡಿ. ಪ್ರಯತ್ನಿಸುತ್ತಲೇ ಇರಿ. ಮುಂದೊಂದು ದಿನ ನೀವು ನಿಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗುತ್ತೀರಿ” ಎಂದು ಮತ್ತೊಬ್ಬರು ಹೇಳಿದ್ದಾರೆ. “ಇದು ನಿಮ್ಮ ಪ್ರಯತ್ನವನ್ನು, ಕಠಿಣ ಪ್ರರಿಶ್ರಮವನ್ನು ಎತ್ತಿ ಹಿಡಿಯುತ್ತದೆ. ನಿಮ್ಮ ವೃತ್ತಿ ಜೀವನಕ್ಕೆ ಶುಭ ಹಾರೈಕೆಗಳು” ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಬಹುತೇಕರು ವಿರುಲ್ಕರ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.

ಏತನ್ಮಧ್ಯೆ ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಅವರನ್ನು ವಿವಿಧ ಕೇಂದ್ರ ಸರ್ಕಾರಿ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಆದಾಗ್ಯೂ, ಶಿಫಾರಸು ಮಾಡಲಾದ 355 ಅಭ್ಯರ್ಥಿಗಳ ಉಮೇದುವಾರಿಕೆ ಹೆಚ್ಚಿನ ಪರಿಶೀಲನೆಗೆ ಬಾಕಿ ಉಳಿದಿದೆ. ಪ್ರತಿಷ್ಠಿತ ಪರೀಕ್ಷೆಯನ್ನು 2023ರ ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 24ರವರೆಗೆ ಎರಡು ಪಾಳಿಗಳಲ್ಲಿ ನಡೆಸಲಾಗಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 23385271/23381125/23098543ಕ್ಕೆ ಕರೆ ಮಾಡಬಹುದು.

ಇದನ್ನೂ ಓದಿ: UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಫಲಿತಾಂಶವನ್ನು ಹೀಗೆ ಪರಿಶೀಲಿಸಿ

  • ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ
  • What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.
  • ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿದೆ. ಅದನ್ನು ಕ್ಲಿಕ್‌ ಮಾಡಿ.
Continue Reading

ಪ್ರಮುಖ ಸುದ್ದಿ

Viral Video: ಮೆರವಣಿಗೆಯಲ್ಲಿ ಸಾಗಿ 200 ಕೋಟಿ ರೂ. ಜನರ ಮೇಲೆ ಸುರಿದ ಜೈನ ದಂಪತಿ; ವಿಡಿಯೊ ವೈರಲ್​

Viral Videoಉದ್ಯಮಿ ಭವೇಶ್ ಅವರ ಮಕ್ಕಳು 2022ರಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದರು. ಈಗ ತಂದೆ ತಾಯಿ ಕೂಡ ತಮ್ಮ ಮಕ್ಕಳ ಹಾದಿಯನ್ನೇ ಹಿಡಿದಿದ್ದಾರೆ.ಭವ ಬಂಧನವ ತೊರೆದು ಮೋಕ್ಷದ ದಾರಿಯತ್ತ ದಂಪತಿಗಳು ಹೆಜ್ಜೆ ಹಾಕುತ್ತಿದ್ದಾರೆ.

VISTARANEWS.COM


on

jain monk
Koo

ಗುಜರಾತ್: ದುಡ್ಡು ಯಾರಿಗೆ ಬೇಡ ಹೇಳಿ….? ದುಡ್ಡು ಇಲ್ಲದಿದ್ದರೆ ಬದುಕು ಕಷ್ಟ ಎಂಬ ಸ್ಥಿತಿ ಇದೆ. ಹೀಗಾಗಿ ದುಡ್ಡಿಗಾಗಿ ಹಗಲು ರಾತ್ರಿ ನಿದ್ದೆ ಬಿಟ್ಟು ದುಡಿಯುವವರನ್ನು ನಾವು ಕಂಡಿರುತ್ತೇವೆ. ಅಂಥವರ ಸಾಲಿನಲ್ಲಿ ನಾವು ಕೂಡ ಇರುತ್ತೇವೆ. ಇಡೀ ಜಗತ್ತಿನಲ್ಲಿ ದುಡ್ಡೇ ಜೀವನ ಎಂದು ಬದುಕುವ ಜನರೇ ತುಂಬಿದ್ದು, ಆಸ್ತಿಗಾಗಿ ಸಂಬಂಧಗಳನ್ನು ಲೆಕ್ಕಿಸದೇ ಜೀವಗಳನ್ನೇ ತೆಗೆಯುವಂತಹ ಕೀಳುಮಟ್ಟಕ್ಕೆ ಇಳಿದಿರುವಂತಹವರನ್ನು ನೋಡಿರುತ್ತೇವೆ. ಅಂಥದ್ದರಲ್ಲಿ ಕಷ್ಟಪಟ್ಟು ಸಂಪಾದಿಸಿದ ಕೋಟಿ ಕೋಟಿ ರೂಪಾಯಿಗಳನ್ನು ಕಳೆದುಕೊಳ್ಳುವುದಕ್ಕೆ ಯಾರೂ ಇಷ್ಟಪಡುವುದಿಲ್ಲ. ಆದರೆ, ಈ ಮನಸ್ಥಿತಿಗೆ ವ್ಯತಿರಿಕ್ತ ಎಂಬಂತೆ ತಮ್ಮಲ್ಲಿದ್ದ 200 ಕೋಟಿ ರೂಪಾಯಿ ಆಸ್ತಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಈ ಜೈನ ದಂಪತಿ ಸುದ್ದಿಯಾಗಿದ್ದಾರೆ. ಅದರಲ್ಲೂ ಅವರು ಸನ್ಯಾಸ ಸ್ವೀಕರಿಸುವ ಮೊದಲು ಮೆರವಣಿಗೆ ಮಾಡಿ ಇದ್ದ ನಗದನ್ನೆಲ್ಲಾ ಜನರ ಮೇಲೆ ಸುರಿದಿದ್ದಾರೆ. ಆ ವಿಡಿಯೊ ವೈರಲ್ ಆಗಿದೆ.

ತಮ್ಮ 200ಕೋಟಿ ಮೌಲ್ಯದ ಆಸ್ತಿಯನ್ನು ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಶ್ರೀಮಂತ ಜೈನ ದಂಪತಿಗಳನ್ನು ನೋಡಿದರೆ ನಿಜಕ್ಕೂ ಆಚ್ಚರಿಯಾಗುತ್ತದೆ. ಭವೇಶ್ ಭಂಡಾರಿ ಅವರು ಕಟ್ಟಡ ನಿರ್ಮಾಣ ಉದ್ಯಮಿಯಾಗಿದ್ದು, ಇವರು ಸಬರ್ಕಾಂತ ಮತ್ತು ಅಹಮದಾಬಾದ್ ಎರಡರಲ್ಲೂ ತಮ್ಮ ಕೆಲಸ ನಿರ್ವಹಿಸುತ್ತಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು 2022ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದಾರೆ.

ಇದೀಗ ಭಂಡಾರಿ ಮತ್ತು ಅವರ ಪತ್ನಿ ತನ್ನ ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಅದಕ್ಕಾಗಿ ದಂಪತಿ ಗುಜರಾತ್ ನ ಸಬರ್ ಕಾಂತ ಜಿಲ್ಲೆಯಲ್ಲಿ ಟ್ರಕ್ ಅನ್ನು ರಥದಂತೆ ಅಲಂಕರಿಸಿ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ವಾಹನದ ಮೇಲೆ ನಿಂತು ಮೆರವಣಿಗೆ ನಡೆಸಿದ್ದಾರೆ. ಕಿರಿದಾದ ರಸ್ತೆಯಲ್ಲಿ ಅವರು ಪ್ರಯಾಣಿಸುವಾಗ ಕುಟುಂಬದವರು ಅವರನ್ನು ಸುತ್ತುವರಿದಿದ್ದಾರೆ. ಭಂಡಾರಿ ಮತ್ತು ಆತನ ಪತ್ನಿ  ನೆರೆದಿದ್ದ ಜನರ ಮೇಲೆ ಬಟ್ಟೆಗಳನ್ನು ಹಾಗೂ ಹಣವನ್ನು ಎಸೆದಿದ್ದಾರೆ. ಹಣವನ್ನು ಪಡೆಯಲು ಜನರು ಮುಗಿಬಿದ್ದಿದ್ದಾರೆ. ಈ ವಿಡಿಯೊ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

ಜೈನ ಧರ್ಮದಲ್ಲಿ ಸನ್ಯಾಸಕ್ಕೆ ಮಹತ್ವವಿದೆ

ಜೈನ ಧರ್ಮದಲ್ಲಿ ಅಹಿಂಸೆ ಮತ್ತು ತ್ಯಾಗಕ್ಕೆ ಗರಿಷ್ಠ ಮೌಲ್ಯವಿದೆ. ಸಂಪಾದಿಸಿದ್ದನ್ನು ದಾನ ಮಾಡುವ ಅಥವಾ ಭೌತಿಕ ಲೋಕ ನಶ್ವರ ಎಂಬಂತೆ ಸನ್ಯಾಸ ಸ್ವೀಕರಿಸುವುದು ಜೈನ ಸಮುದಾಯದಲ್ಲಿ ಸಾಧಾರಣವಾಗಿ ಕಂಡು ಬರುವ ಪ್ರಕ್ರಿಯೆ. ಕೋಟ್ಯಂತರ ರೂಪಾಯಿ ಸಂಪತ್ತನ್ನು ತ್ಯಜಿಸಿ ಸನ್ಯಾಸ ಸ್ವೀಕರಿಸಿದ ಹಲವಾರು ಪ್ರಕರಣಗಳು ಈ ಹಿಂದೆಯೂ ವರದಿಯಾಗಿದೆ. ಶ್ರೀಮಂತ ಉದ್ಯಮಿಯ ಸುಂದರಿ ಪುತ್ರಿ ಸನ್ಯಾಸದ ಕಡೆ ಒಲವು ತೋರಿದ ಸಂಗತಿಗಳನ್ನೂ ನೋಡಿದ್ದೇವೆ. ಹೀಗಾಗಿ ಜೈನ ಧರ್ಮದಲ್ಲಿ ಇದು ಸರ್ವೇಸಾಮಾನ್ಯ ಎಂದು ಅಂದುಕೊಳ್ಳಬಹುದು. ಆದಾಗ್ಯೂ ಕೋಟಿಗಟ್ಟಲೆ ಸಂಪತ್ತನ್ನು ತ್ಯಜಿಸುವರಿಗೆ ದೊಡ್ಡ ಪ್ರಮಾಣದ ಧಾರ್ಮಿಕ ಶ್ರದ್ಧೆ ಇರಬೇಕು ಎಂಬುದರಲ್ಲಿ ಎರಡು ಮಾತಿಲ್ಲ.

Continue Reading

ಕ್ರೀಡೆ

IPL 2024: ಮುಂಬೈ ಪಂದ್ಯದ ಟಾಸ್​ ಕಳ್ಳಾಟ ಬಿಚ್ಚಿಟ್ಟ ಆರ್​ಸಿಬಿ ನಾಯಕ; ವಿಡಿಯೊ ವೈರಲ್​

IPL 2024: ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್(Faf du Plessis) ಸನ್​ರೈಸರ್ಸ್​ ಹೈದರಾಬಾದ್(​Sunrisers Hyderabad) ಪಂದ್ಯದ ವಿರುದ್ಧದ ಟಾಸ್​ ವೇಳೆ​ ಪ್ಯಾಟ್​ ಕಮಿನ್ಸ್(Pat Cummins)​ ಜತೆ ಮುಂಬೈ ಎದುರಿನ ಪಂದ್ಯದ ಟಾಸ್​ ಕಳ್ಳಾಟದ ಘಟನೆಯನ್ನು ತೆರೆದಿಟ್ಟಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಕಳೆದ ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್(IPL 2024)​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು(MI vs RCB) ಹಾಗೂ ಮುಂಬೈ ಇಂಡಿಯನ್ಸ್​(Mumbai Indians) ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಆದರೆ, ಪಂದ್ಯದ ಬಳಿಕ ಮುಂಬೈ ಗೆಲುವಿಗೆ ಕಾರಣ ಟಾಸ್​ ಫಿಕ್ಸಿಂಗ್​ ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಪಟ್ಟ ಕೆಲ ವಿಡಿಯೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೀಗ ಈ ಘಟನೆಯ ನೈಜ ಕಾರಣವನ್ನು ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್(Faf du Plessis) ಸನ್​ರೈಸರ್ಸ್​ ಹೈದರಾಬಾದ್(​Sunrisers Hyderabad) ಪಂದ್ಯದ ವಿರುದ್ಧದ ಟಾಸ್​ ವೇಳೆ​ ಪ್ಯಾಟ್​ ಕಮಿನ್ಸ್(Pat Cummins)​ ಜತೆ ಚರ್ಚಿಸಿದ್ದಾರೆ. ಇದರ ವಿಡಿಯೊ ವೈರಲ್ ಆಗಿದ್ದು, ಮತ್ತೆ ಟಾಸ್​ ಫಿಕ್ಸ್​ ಚರ್ಚೆ ಮುನ್ನಲೆಗೆ ಬಂದಿದೆ.

ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಚಿನ್ನಶ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿತ್ತು. ಉಭಯ ತಂಡದ ನಾಯಕರು ಟಾಸ್​ಗೆ ಆಗಮಿಸಿದ ಈ ವೇಳೆ ಪ್ಯಾಟ್​ ಕಮಿನ್ಸ್ ಅವರು ಡು ಪ್ಲೆಸ್​ ಬಳಿಕ​ ಮುಂಬೈ ವಿರುದ್ಧದ ಟಾಸ್​ ಘಟನೆಯ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಡು ಪ್ಲೆಸಿಸ್​ ಪಾಂಡ್ಯ ಹಿಮ್ಮುಖವಾಗಿ ದೂರಕ್ಕೆ ಟಾಸ್​ ಕಾಯಿನ್​ ಚಿಮ್ಮಿಸಿದರು. ಮ್ಯಾಚ್​ ರೆಫ್ರಿಯಾಗಿದ್ದ ಜಾವಗಲ್​ ಶ್ರೀನಾಥ್(Javagal Srinath)​ ಅವರು ಕಾಯಿನ್​ ತಿರುಗಿಸಿ ಹೆಕ್ಕಿ ಪಾಂಡ್ಯ ಬಳಿ ಏನೋ ಕೇಳಿ ಟಾಸ್​ ಗೆದ್ದಿರುವಂತೆ ಹೇಳಿ ತಕ್ಷಣ ಅಲ್ಲಿಂದ ತೆರಳಿದರು ಎಂದು ಅಂದಿನ ಘಟನೆಯನ್ನು ನಟನೆಯ ಮೂಲಕ ತೋರಿಸಿದರು. ಈ ವಿಡಿಯೊ ವೈರಲ್​ ಆಗಿದ್ದು ನಿಜವಾಗಿಯೂ ಟಾಸ್​ ಫಿಕ್ಸಿಂಗ್​ ನಡೆದಿದೆಯಾ? ಎಂಬ ಚರ್ಚೆ ಮತ್ತೆ ಶುರುವಾಗಿದೆ.

ಚೇಸಿಂಗ್​ಗೆ ಯೋಗ್ಯವಾದ ವಾಂಖೆಡೆ ಸ್ಟೇಡಿಯಂನಲ್ಲಿ ಅಂಪೈರ್​ ಟಾಸ್​ ಕಾಯಿನ್​ ಬದಲಿಸಿ ಮುಂಬೈ ತಂಡಕ್ಕೆ ಸಹಕರಿಸಿದ್ದಾರೆ. ಇಲ್ಲವಾದರೆ ಆರ್​ಸಿಬಿ ಗೆಲ್ಲುತ್ತಿತ್ತು ಎಂದು ಅನೇಕ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಅಂಬಾನಿ ಮತ್ತು ಐಪಿಎಲ್​ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಹೈದರಾಬಾದ್​ ವಿರುದ್ಧ 25 ರನ್​ ಸೋಲು


ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡ ಹೈದರಾಬಾದ್​ ವಿರುದ್ಧ 25 ರನ್​ಗಳ ಸೋಲು ಕಂಡಿತು. ಟಾಸ್​ ಗೆದ್ದ ಆತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಎಸ್​ಆರ್​ಎಚ್​ ತಂಡ ವಿಶ್ವ ದಾಖಲೆಯ 287 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 262 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಪ್ಲೇ ಆಫ್ ಆಸೆ ಇನ್ನೂ ಜೀವಂತ

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

Continue Reading

ಕ್ರೀಡೆ

IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಕಳೆದ ಗುಜರಾತ್(Gujarat Titans)​ ನಡುವಣ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಚಹಲ್​ ಅವರು ಐಪಿಎಲ್​ನಲ್ಲಿ 150 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು. ಇದುವರೆಗೆ 151 ಐಪಿಎಲ್​ ಪಂದ್ಯಗಳನ್ನಾಡಿರುವ ಚಹಲ್​ 198 ವಿಕೆಟ್​ ಕಿತ್ತು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎಂದ ದಾಖಲೆ ಬರೆದಿದ್ದಾರೆ.

VISTARANEWS.COM


on

Koo

ಕೋಲ್ಕತ್ತಾ: ಟೀಮ್​ ಇಂಡಿಯಾದ ಆಟಗಾರ ಯಜುವೇಂದ್ರ ಚಹಲ್(Yuzvendra Chahal)​ ಅವರು ಮೈದಾನದಲ್ಲಿ ಆಗಾಗ ಚೇಷ್ಟೆ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುತ್ತದೆ. ಅಂಪೈರ್​, ಎದುರಾಳಿ ಆಟಗಾರನ್ನು ತಮ್ಮ ಕುಚೇಷ್ಟೆ(yuzvendra chahal funny videos) ಮೂಲಕ ನಗಿಸುತ್ತಿರುತ್ತಾರೆ. ಇದೀಗ(IPL 2024) ವಿಮಾನದಲ್ಲಿ ಪೈಲೆಟ್​ಗಳ ಜತೆ ಮಾಡಿದ ಚೇಷ್ಟೆಯೊಂದರ ವಿಡಿಯೊ ವೈರಲ್(viral video)​ ಆಗಿದೆ.

ಐಪಿಎಲ್​ನಲ್ಲಿ ಇಂದು ರಾಜಸ್ಥಾನ್(Rajasthan Royals) ತಂಡ ಕೆಕೆಆರ್​ ವಿರುದ್ಧ ಆಡಲಿಳಿದೆ. ಈ ಪಂದ್ಯ ಐತಿಹಾಸಿಕ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಈ ಪಂದ್ಯವನ್ನಾಡಲು ಆಟಗಾರರೊಂದಿಗೆ ಕೋಲ್ಕತ್ತಾಕ್ಕೆ ತೆರಳುವ ವೇಳೆ ಚಹಲ್​ ಅವರು ಪೈಲೆಟ್​ಗಳ ಕೊಠಡಿಗೆ ತೆರಳಿ ಅವರಿಗೆ ಚಮಕ್​ ನೀಡಿದ್ದಾರೆ. ಇಂದು ನನ್ನ ಇಬ್ಬರು ಸಹೋದರ ಪೈಲೆಟ್​ಗಳು ವಿಮಾನ ಚಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಪೈಲೆಟ್​ಗಳು ಕೂಡ ಯೋ ಯೋ ಕೈ ಬೆರಳಿನ ಮೂಲಕ ಚಿಯರ್​ ಅಪ್​ ಮಾಡಿದ್ದಾರೆ. ಈ ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್​ ತನ್ನ ಅಧಿಕೃತ ಟ್ವಿಟರ್​ನಲ್ಲಿ ಹಂಚಿಕೊಂಡು ‘ಇದು ನಿಮ್ಮ ಕ್ಯಾಪ್ಟನ್ ಹಾಡುಗಾರಿಕೆ’ ಎಂದು ಬರೆದುಕೊಂಡು ಹಿಂದಿ ಸಿನೆಮಾದ ಹಾಡೊಂದನ್ನು ಹಾಕಿದೆ. ಜತೆಗೆ ಚಹಲ್​ ಅವರ ಮುಖದ ಚಿತ್ರವನ್ನು ಎಡಿಟ್​ ಮಾಡಿ ವಿಮಾನ ಚಲಾಯಿಸಿದಂತೆ ತೋರಿಸಿದೆ. ಈ ವಿಡಿಯೊ ವೈರಲ್​ ಆಗಿದೆ.

ಕಳೆದ ಆವೃತ್ತಿಯಲ್ಲಿ ಜೋ ರೂಟ್​ ಅವರ ಟ್ರಾಲಿ ಬ್ಯಾಗ್​ನಲ್ಲಿ ಕುಳಿತು ಜಾಲಿ ರೈಡ್​ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಕಳೆದ ಗುಜರಾತ್(Gujarat Titans)​ ನಡುವಣ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಚಹಲ್​ ಅವರು ಐಪಿಎಲ್​ನಲ್ಲಿ 150 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು. ಇದುವರೆಗೆ 151 ಐಪಿಎಲ್​ ಪಂದ್ಯಗಳನ್ನಾಡಿರುವ ಚಹಲ್​ 198 ವಿಕೆಟ್​ ಕಿತ್ತು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎಂದ ದಾಖಲೆ ಬರೆದಿದ್ದಾರೆ. ಇನ್ನೆರಡು ವಿಕೆಟ್​ ಕಿತ್ತರೆ 200 ವಿಕೆಟ್​ ಪೂರ್ತಿಗೊಳಿಸಲಿದ್ದಾರೆ. ಇಂದಿನ ಪಂದ್ಯದಲ್ಲಿ ಈ ಮೈಲಿಗಲ್ಲು ನಿರ್ಮಿಸಲು ಅವಕಾಶವಿದೆ.

ಇದನ್ನೂ ಓದಿ IPL 2024: ದಯವಿಟ್ಟು ಆರ್​ಸಿಬಿ ತಂಡವನ್ನು ಮಾರಿಬಿಡಿ; ಅಳಲು ತೋಡಿಕೊಂಡ ಟೆನಿಸ್​ ದಿಗ್ಗಜ

ಪ್ರಸಕ್ತ ಆವೃತ್ತಿಯಲ್ಲಿ ಉತ್ತಮ ಬೌಲಿಂಗ್​ ಪ್ರದರ್ಶನ ತೋರುತ್ತಿರುವ ಚಹಲ್​ಗೆ ಇದೇ ಜೂನ್​ನಲ್ಲಿ ನಡೆಎಯುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಆಡುವ ಅವಕಾಶ ಸಿಗಲಿದೆ ಎಂಬ ಮಾತು ಕೂಡ ಕೇಳಿ ಬಂದಿದೆ. ಚಹಲ್​ ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಐಪಿಎಲ್​ನಲ್ಲಿ 195* ವಿಕೆಟ್​ ಪಡೆದಿದ್ದಾರೆ. ಇದುವರೆಗೂ ಟೆಸ್ಟ್​ ಕ್ರಿಕೆಟ್​ ಆಡಿಲ್ಲ.

ರಾಜಸ್ಥಾನ್​ ರಾಯಲ್ಸ್(RR vs KKR)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಯಾರೇ ಗೆದ್ದರು ಅಗ್ರಸ್ಥಾನ ಪಡೆಯಲಿದ್ದಾರೆ. ಉಭಯ ತಂಡಗಳು ಕೂಡ ಬಲಿಷ್ಠವಾಗಿರುವ ಕಾರಣ ಈ ಪಂದ್ಯವನ್ನು ಹೈವೋಲ್ಟೇಜ್​ ಪಂದ್ಯ ಎಂದು ನಿರೀಕ್ಷೆ ಮಾಡಲಾಗಿದೆ. ರಾಜಸ್ಥಾನ(Rajasthan Royals) ಸದ್ಯ 6 ಪಂದ್ಯಗಳಲ್ಲಿ 5 ಗೆದ್ದಿದ್ದು ಅಗ್ರಸ್ಥಾನದಲ್ಲಿದೆ. ಕೋಲ್ಕತಾ 5ರಲ್ಲಿ 4 ಪಂದ್ಯಗಳಲ್ಲಿ ಜಯಿಸಿ ದ್ವಿತೀಯ ಸ್ಥಾನದಲ್ಲಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ2 mins ago

IPL 2024 : ಬಟ್ಲರ್ ಮುಂದೆ ಮಂಕಾದ ನರೈನ್​; ಕೆಕೆಆರ್ ವಿರುದ್ಧ ಆರ್​​ಆರ್​ಗೆ 2 ವಿಕೆಟ್ ಜಯ

Murder Case
ಕರ್ನಾಟಕ16 mins ago

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

amith shah
ದೇಶ47 mins ago

Amit Shah: ಶೀಘ್ರದಲ್ಲೇ ಭಾರತ ನಕ್ಸಲ್‌ ಮುಕ್ತವಾಗಲಿದೆ; ಅಮಿತ್ ಶಾ

Nitin Gadkari
ದೇಶ54 mins ago

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

UPSC Results 2023
ಕರ್ನಾಟಕ60 mins ago

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

Dalip Singh Majithia
ಪ್ರಮುಖ ಸುದ್ದಿ1 hour ago

Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

Ayodhya Ram Mandir
ದೇಶ1 hour ago

Ayodhya Ram Mandir: ನಾಳೆ ಅಯೋಧ್ಯೆ ಶ್ರೀರಾಮನಿಗೆ ಸೂರ್ಯ ತಿಲಕ; ಮನೆಯಲ್ಲೇ ಕೂತು ಹೀಗೆ ಕಣ್ತುಂಬಿಕೊಳ್ಳಿ

Universal Coaching Centre
ಬೆಂಗಳೂರು2 hours ago

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

Sanju Samson
ಪ್ರಮುಖ ಸುದ್ದಿ3 hours ago

Sanju Samson : ಸಂಜು ಸ್ಯಾಮ್ಸನ್​ಗೆ ರಾಯಲ್ಸ್​ ತಂಡದಲ್ಲಿ ದಶಕದ ಸಾಧನೆ; ಬೆಸ್ಟ್​ ಕ್ಯಾಪ್ಟನ್ ಎಂದ ಅಭಿಮಾನಿಗಳು

UPSC Result 2024
ಶಿಕ್ಷಣ3 hours ago

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ19 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌