Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ - Vistara News

ವೈರಲ್ ನ್ಯೂಸ್

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video: ಗಾಜಿಪುರ ಪೊಲೀಸ್ ಠಾಣೆಯಾ ಎದುರು ಕಲ್ಯಾಣಪುರಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಅಲ್ಲೇ ಒಂದು ಸಣ್ಣ ಶೆಡ್ ಮಾಡಿಕೊಂಡು ಅಲ್ಲಿ ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬಂದಿತ್ತು. ಈ ವಿಡಿಯೋದಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕಿಕೊಂಡಿರುವ ಲಂಚಕೋರ ಮೂವರು ಸಂಚಾರಿ ಪೊಲೀಸರು ಬಂದ ಹಣವನ್ನು ಹಂಚಿಕೊಳ್ಳುತ್ತಿರುವುದು ಬಯಲಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟ್ರಾಫಿಕ್‌ ಪೊಲೀಸ(Traffic Police)ರ ವಿರುದ್ಧ ಲಂಚ(Bribe)ದ ಆರೋಪ ಕೇಳಿ ಬರುವುದು ಸರ್ವೇ ಸಾಮಾನ್ಯ. ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡುವವರಿಂದ ಹಣ ಪೀಕಿಸಿ ತಮ್ಮ ಜೇಬ ತುಂಬಿಸಿಕೊಂಡು ಕೆಲವೊಮ್ಮೆ ಸಿಕ್ಕಿಹಾಕಿಕೊಂಡಿರುವ ಘಟನೆಗಳೂ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ವಾಹನ ತಪಾಸಣೆ ನೆಪದಲ್ಲಿ ವಾಹನ ಸವಾರರಿಂದ ಪಡೆದ ಲಂಚದ ಹಣವನ್ನು ಮೂವರು ಟ್ರಾಫಿಕ್ ಪೊಲೀಸರು ಹಂಚಿಕೊಳ್ಳುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video) ಆಗಿದೆ.

ಗಾಜಿಪುರ ಪೊಲೀಸ್ ಠಾಣೆಯಾ ಎದುರು ಕಲ್ಯಾಣಪುರಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಅಲ್ಲೇ ಒಂದು ಸಣ್ಣ ಶೆಡ್ ಮಾಡಿಕೊಂಡು ಅಲ್ಲಿ ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬಂದಿತ್ತು. ಈ ವಿಡಿಯೋದಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕಿಕೊಂಡಿರುವ ಲಂಚಕೋರ ಮೂವರು ಸಂಚಾರಿ ಪೊಲೀಸರು ಬಂದ ಹಣವನ್ನು ಹಂಚಿಕೊಳ್ಳುತ್ತಿರುವುದು ಬಯಲಾಗಿದೆ. ಅಲ್ಲದೆ ಇದಕ್ಕೆ ಪೂರಕ ಎಂಬಂತೆ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಈ ಮೂವರು ಸಂಚಾರಿ ಪೊಲೀಸರು ಹಣ ಹಂಚಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಮತ್ತೊಂದು ವಿಡಿಯೋದಲ್ಲಿ ವಾಹನ ಚಾಲಕನೊಬ್ಬ ಚೌಕಿಯ ಬಳಿ ಬಂದು ಪೊಲೀಸರ ಜೊತೆ ಮಾತನಾಡುವ ದೃಶ್ಯವಿದೆ. ಕೆಲ ಹೊತ್ತಿನ ಮಾತುಕತೆ ಬಳಿಕ ಟ್ರಾಫಿಕ್ ಪೊಲೀಸ್ ಆತನಿಂದ ಲಂಚವಾಗಿ ಹಣ ಪಡೆದಿದ್ದಾರೆ. ಆದರೆ ನೇರವಾಗಿ ಹಣ ಪಡೆಯದೇ, ಕುಳಿತಿಕೊಂಡ ಬಳಿ ಇಡುವಂತೆ ಸೂಚಿದ್ದಾನೆ. ಲಂಚದ ರೂಪದಲ್ಲಿ ಹಣ ಇಟ್ಟು ವಾಹನ ಚಾಲಕ ತೆರಳಿದ್ದಾನೆ.

ಮೂವರೂ ಸಸ್ಪೆಂಡ್‌

ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ತನಿಖೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿ ಮೂವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದರ ಹಿನ್ನೆಲೆಯಲ್ಲಿ ಅಪರಾಧವೆಸಗಿದ ಮೂವರು ಟ್ರಾಫಿಕ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ

ಇದನ್ನೂ ಓದಿ: Viral News: 5 ಕೆಜಿ ಆಲೂಗಡ್ಡೆ ಲಂಚ ಕೇಳಿ ಅಮಾನತುಗೊಂಡ ಸಬ್‌ ಇನ್ಸ್‌ಪೆಕ್ಟರ್ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಅಬ್ಬಾ.. ಸಾವು ಹೀಗೂ ಬರುತ್ತಾ? ಸ್ನೇಹಿತನೊಂದಿಗೆ ಮಾತಾಡ್ತಾ ನಿಂತಿದ್ದವನ ಮೇಲೆ ದೊಪ್ಪೆಂದು ಬಿದ್ದ ಎಸಿ-ವಿಡಿಯೋ ಇದೆ

Viral Video: ದೆಹಲಿಯ ದೇಶ್ ಬಂಧು ಗುಪ್ತಾ ರಸ್ತೆಯಲ್ಲಿರುವ ಡೋರಿವಾಲಾ ಪ್ರದೇಶದಲ್ಲಿ ನಿನ್ನೆ ಸಂಜೆ 6:40 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಇದೇ ಪ್ರದೇಶದ ಜಿತೇಶ್‌ ಎಂದು ಗುರುತಿಸಲಾಗಿದೆ. ಕಿಟಕಿಗೆ ಅಳವಡಿಸಿದ್ದ ಎಸಿ ಜಿತೇಶ್‌ನ ತಲೆಯ ಮೇಲೆ ಬೀಳುತ್ತದೆ. ಎರಡನೇ ಮಹಡಿಯಿಂದ ಎಸಿ ಬಿದ್ದ ರಭಸಕ್ಕೆ ಜಿತೇಶ್‌ ಗಂಭೀರವಾಗಿ ಗಾಯಗೊಂಡು ತಕ್ಷಣವೇ ಕೊನೆಯುಸಿರೆಳೆಯುತ್ತಾನೆ.

VISTARANEWS.COM


on

Viral Video
Koo

ನವದೆಹಲಿ: ಸಾವು ಎಂಬುದು ಕ್ಷಣ ಕ್ಷಣಕ್ಕೂ ನೆರಳಿನಂತೆ ನಮ್ಮ ಹಿಂದೆಯೇ ಇರುತ್ತದೆ. ಯಾವಾಗ ಯಾವ ರೀತಿಯಲ್ಲಾದರೂ, ಯಾವ ರೂಪದಲ್ಲಾದರೂ ಸಾವು ಬರುತ್ತದೆ ಎಂಬುದಕ್ಕೆ ಈ ದುರ್ಘಟನೆಯೇ ನಿದರ್ಶನ. ಸ್ನೇಹಿತನ ಜೊತೆ ಹರಟೆ ಹೊಡೆಯುತ್ತಾ, ಎಂಜಾಯ್‌ ಮಾಡುತ್ತಾ ನಿಂತಿದ್ದ ಯುವಕನಿಗೆ ಯಮಸ್ವರೂಪಿಯಾಗಿ ಬಂದಿದ್ದು ಬೇರೇ ಏನೂ ಅಲ್ಲ ಮೇಲಿನ ಮಹಡಿಯಲ್ಲಿದ್ದ ಏರ್ ಕಂಡಿಷನರ್(AC). ಕೆಳಗೆ ನಿಂತಿದ್ದ ಯುವಕನ ಮೇಲೆ ಎಸಿ ಬಿದ್ದಿದೆ. ಬಿದ್ದ ರಭಸಕ್ಕೆ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆಯುತ್ತಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದೆ.

ಘಟನೆ ವಿವರ:

ದೆಹಲಿಯ ದೇಶ್ ಬಂಧು ಗುಪ್ತಾ ರಸ್ತೆಯಲ್ಲಿರುವ ಡೋರಿವಾಲಾ ಪ್ರದೇಶದಲ್ಲಿ ನಿನ್ನೆ ಸಂಜೆ 6:40 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಇದೇ ಪ್ರದೇಶದ ಜಿತೇಶ್‌ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ, 18 ವರ್ಷದ ಜಿತೇಶ್ ತನ್ನ ಸ್ಕೂಟರ್‌ನಲ್ಲಿ ಇನ್ನೊಬ್ಬ ಹುಡುಗ ಪ್ರಾಂಶು ಎಂಬಾತನೊಂದಿಗೆ ಹರಟೆ ಹೊಡೆಯುತ್ತಾ ಬೈಕ್‌ ಮೇಲೆ ಕುಳಿತಿರುವುದನ್ನು ಕಾಣಬಹುದು. ಇಬ್ಬರೂ ಪರಸ್ಪರ ಅಪ್ಪಿಕೊಂಡು ಇನ್ನೇನು ಇಬ್ಬರು ಅಲ್ಲಿಂದ ಹೊರಬೇಕಾಗಿತ್ತು. ಆಗ ಕಿಟಕಿಗೆ ಅಳವಡಿಸಿದ್ದ ಎಸಿ ಜಿತೇಶ್‌ನ ತಲೆಯ ಮೇಲೆ ಬೀಳುತ್ತದೆ. ಎರಡನೇ ಮಹಡಿಯಿಂದ ಎಸಿ ಬಿದ್ದ ರಭಸಕ್ಕೆ ಜಿತೇಶ್‌ ಗಂಭೀರವಾಗಿ ಗಾಯಗೊಂಡು ತಕ್ಷಣವೇ ಕೊನೆಯುಸಿರೆಳೆಯುತ್ತಾನೆ. ಇನ್ನು ಘಟನೆಯಲ್ಲಿ ಪ್ರಾಂಶು ಕೂಡ ಗಾಯಗೊಂಡಿದ್ದಾನೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿತೇಶ್ ದೆಹಲಿಯ ಡೋರಿವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದರೆ, ಪ್ರಾಂಶು ಪಟೇಲ್ ನಗರದ ನಿವಾಸಿ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇಂತಹದ್ದೇ ಒಂದು ಘಟನೆ ಥಾಣೆಯಲ್ಲಿ ಕೆಲವು ದಿನಗಳ ಹಿಂದೆ ನಡೆದಿತ್ತು.ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಐದನೇ ಮಹಡಿಯಿಂದ ನಾಯಿಯೊಂದು ಬಿದ್ದಿದ್ದು ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಥಾಣೆ(Thane)ಯಲ್ಲಿ ನಡೆದಿದೆ. ಮುಂಬ್ರಾದಲ್ಲಿ ಜನನಿಬಿಡ ರಸ್ತೆಯಲ್ಲಿ ತನ್ನ ತಾಯಿಯೊಂದಿಗೆ ನಡೆದುಕೊಂಡು ಬರುತ್ತಿದ್ದ ಮೂರು ವರ್ಷ ಬಾಲಕಿ ಮೇಲೆ ನಾಯಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಇನ್ನು ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾ(CCTV Camera)ದಲ್ಲಿ ರೆಕಾರ್ಡ್‌ ಆಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: Viral Video: ಐದನೇ ಮಹಡಿಯಿಂದ ಬಾಲಕಿ ಮೇಲೆ ಬಿದ್ದ ಶ್ವಾನ; ಆಮೇಲೆ ಆಗಿದ್ದೇನು? ವಿಡಿಯೋ ಇದೆ

Continue Reading

ದೇಶ

Viral News: ಒಂಟಿಯಾಗಿದ್ದಾಗ ಮೈ ಮುಟ್ಟೋಕೆ ಬಂದೋನ ಖಾಸಗಿ ಅಂಗಕ್ಕೆ ಸಟ್ಟುಗದಲ್ಲೇ ಚುಚ್ಚಿದ್ಳು!

Viral News: ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ಭಿವಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅನಿಲ್ ಸತ್ಯನಾರಾಯಣ ರಚ್ಚಾ(30) ಎಂಬಾತ 26 ವರ್ಷದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಮಹಿಳೆ ಮತ್ತು ಈತ ಪರಸ್ಪರ ಪರಿಚಿತರೇ. ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ರಚ್ಚ ತನ್ನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ.

VISTARANEWS.COM


on

Viral Video
Koo

ಮುಂಬೈ: ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ತನ್ನ ಅಸಭ್ಯವಾಗಿ ವರ್ತಿಸಿದ ಕಿಡಿಗೇಡಿಗೆ ಮಹಿಳೆಯೊಬ್ಬಳು ತಕ್ಕಪಾಠ ಕಲಿಸಿದ್ದಾಳೆ. ಮಹಾರಾಷ್ಟ್ರ(Maharashtra)ದ ಥಾಣೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಕಬ್ಬಿಣದ ಸಟ್ಟುಗ(spatula)ದಿಂದಲೇ 30 ವರ್ಷದ ವ್ಯಕ್ತಿಯ ಖಾಸಗಿ ಅಂಗಕ್ಕೆ ಚುಚ್ಚಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ(Viral News).

ಏನಿದು ಘಟನೆ?

ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ಭಿವಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅನಿಲ್ ಸತ್ಯನಾರಾಯಣ ರಚ್ಚಾ(30) ಎಂಬಾತ 26 ವರ್ಷದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಮಹಿಳೆ ಮತ್ತು ಈತ ಪರಸ್ಪರ ಪರಿಚಿತರೇ. ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ ರಚ್ಚ ತನ್ನ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಅಲ್ಲದೆ ಆಕೆ ಮೇಲೆ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಮಹಿಳೆ, ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ, ಅಡುಗೆಮನೆಗೆ ಓಡಿ ಸಟ್ಟುಗ(ಸೌಟು) ತೆಗೆದುಕೊಂಡಳು. ಅದರಿಂದಲೇ ಅವಳು ರಚ್ಚಾ ಮೇಲೆ ದಾಳಿ ಮಾಡಿ ಅವನ ಜನನಾಂಗಗಳಿಗೆ ಗಾಯಗೊಳಿಸಿದಳು ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ರಚ್ಚಾನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಆತ ಅಪಾಯದಿಂದ ಪಾರಾಗಿದ್ದಾನೆ. ಇನ್ನು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ರಚ್ಚಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅತಿಕ್ರಮಣಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿ ಇನ್ನೂ ಆಸ್ಪತ್ರೆಯಲ್ಲಿರುವುದರಿಂದ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ತಿಂಗಳು, ಬಿಹಾರದ ಮಹಿಳೆಯೊಬ್ಬಳು ತನ್ನನ್ನು ಮದುವೆಯಾಗಲು ನಿರಾಕರಿಸಿದ ಕಾರಣ ಸರನ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಅಂಗಗಳನ್ನು ಕತ್ತರಿಸಿ ಹಾಕಿದ್ದಳು. ಈ ಸುದ್ದಿ ಭಾರೀ ವೈರಲ್‌ ಆಗಿತ್ತು. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆಕೆಯ ಬಳಿಯಿದ್ದ ರಕ್ತಸಿಕ್ತ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆಯ ನಂತರ, ಆರೋಪಿಯು ತಾನು ಮತ್ತು ಸಂತ್ರಸ್ತೆ ಕಳೆದ ಎರಡು ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಹೇಳಿದ್ದಾನೆ, ಆದರೆ ವ್ಯಕ್ತಿ ಅವಳನ್ನು ಮದುವೆಯಾಗಲು ನಿರಾಕರಿಸಿದನು. ತನ್ನ ಪ್ರಸ್ತಾಪವನ್ನು ನಿರಾಕರಿಸಿದ ನಂತರ ವಾದದ ನಂತರ ಅವಳು ಅವನ ಮೇಲೆ ಹಲ್ಲೆ ನಡೆಸಿದ್ದಾಳೆ. ಮದುವೆಯ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿದ್ದಾನೆ ಎಂದು ಆರೋಪಿಸಿದ್ದಾಳೆ.

ಇದನ್ನೂ ಓದಿ: Viral News: ‘ಅಸ್ವಾಭಾವಿಕ ಲೈಂಗಿಕಕ್ರಿಯೆ’ಗೆ ಒತ್ತಾಯಿಸುತ್ತಿದ್ದ ಗಂಡನ ಶಿಶ್ನವನ್ನೇ ಬಾಯಿಂದ ಕತ್ತರಿಸಿದ ಹೆಂಡತಿ!

Continue Reading

ಕ್ರಿಕೆಟ್

Viral Photo: ಕ್ರಿಕೆಟ್​ ಬಿಟ್ಟು ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಆರಂಭಿಸಿದರೇ ಪೃಥ್ವಿ ಶಾ?

Viral Photo: 2018ರಲ್ಲಿ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಪೃಥ್ವಿ ಶಾ ಅವರು ಆರಂಭಿಕ ದಿನಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಭಾರತದ ಭವಿಷ್ಯದ ಸಚಿನ್​ ತೆಂಡೂಲ್ಕರ್​ ಎಂದು ಹೇಳಲಾಗಿತ್ತು. ಆದರೆ ಆ ಬಳಿಕ ಸತತ ಗಾಯದ ಸಮಸ್ಯೆಗೆ ಸಿಲುಕಿ ತಂಡದಲ್ಲಿ ಸರಿಯಾಗಿ ಅವಕಾಶ ಪಡೆಯಲೇ ಇಲ್ಲ.

VISTARANEWS.COM


on

Viral Photo
Koo

ಲಂಡನ್​: ಟೀಮ್​ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ಪೃಥ್ವಿ ಶಾ(Prithvi Shaw) ಮತ್ತು ಯಜುವೇಂದ್ರ ಚಹಲ್(Yuzvendra Chahal)​ ಲಂಡನ್​ನಲ್ಲಿ ನಡೆಯುತ್ತಿರುವ ಏಕದಿನ ಕಪ್​ ಕ್ರಿಕೆಟ್​ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಬಿಡುವಿನ ವೇಳೆ ಇವರಿಬ್ಬರು ಲಂಡನ್​ ಪ್ರಾವಾಸಿ ತಾಣವೊಂದಕ್ಕೆ ಕಾರ್​ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಪೆಟ್ರೋಲ್​ ಬಂಕ್​ನಲ್ಲಿ ಕಾರಿಗೆ ಪೆಟ್ರೋಲ್​ ಹಾಕುತ್ತಿರುವ ಮತ್ತು ಕಾರಿನಲ್ಲಿ ಹಾಯಾಗಿ ನಿದ್ರಿಸುತ್ತಿರುವ ಚಹಲ್​ ಫೋಟೊವೊಂದು ಇದೀಗ ವೈರಲ್(Viral Photo)​ ಆಗಿದೆ.

ಪೃಥ್ವಿ ಶಾ ಕಾರಿಗೆ ಪೆಟ್ರೋಲ್​ ಹಾಕುತ್ತಿರುವ ಫೋಟೊ ಕಂಡ ಅನೇಕ ನೆಟ್ಟಿಗರು ಕ್ರಿಕೆಟ್​ ಬಿಟ್ಟು ಈ ಕೆಲಸ ಆರಂಭಿಸಿದರೇ? ಎಂದು ಹಾಸ್ಯಾಸ್ಪದವಾಗಿ ಕಮೆಂಟ್​ ಮಾಡುವ ಮೂಲಕ ಕಾಲೆಳೆದಿದ್ದಾರೆ. ಈ ಫೋಟೊವನ್ನು ಚಹಲ್​ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಾಕಿದ್ದಾರೆ. ಅತ್ತ ಪೃಥ್ವಿ ಶಾ ಅವರು ಚಹಲ್​ ನಿದ್ರಿಸುತ್ತಿರುವ ಫೋಟೊವನ್ನು ಹಾಕಿ, ನನ್ನ ಡ್ರೈವಿಂಗ್​ ಮೇಲೆ ಚಹಲ್​ಗೆ ಶೇ.100 ನಂಬಿಕೆ ಇದೆ. ಹೀಗಾಗಿ ಯಾವುದೇ ಚಿಂತೆ ಇಲ್ಲದೆ ನಿದ್ರಿಸುತ್ತಿದ್ದಾನೆ ಎಂದು ಬರೆದುಕೊಂಡಿದ್ದಾರೆ.


ಟೀಮ್‌ ಇಂಡಿಯಾದಿಂದ ದೂರ

2018ರಲ್ಲಿ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಪೃಥ್ವಿ ಶಾ ಅವರು ಆರಂಭಿಕ ದಿನಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಭಾರತದ ಭವಿಷ್ಯದ ಸಚಿನ್​ ತೆಂಡೂಲ್ಕರ್​ ಎಂದು ಹೇಳಲಾಗಿತ್ತು. ಆದರೆ ಆ ಬಳಿಕ ಸತತ ಗಾಯದ ಸಮಸ್ಯೆಗೆ ಸಿಲುಕಿ ತಂಡದಲ್ಲಿ ಸರಿಯಾಗಿ ಅವಕಾಶ ಪಡೆಯಲೇ ಇಲ್ಲ. ಕಳೆದ ಎರಡು ವರ್ಷಗಳಿಂದ ಭಾರತ ತಂಡದಿಂದ ದೂರವುಳಿದಿರುವ ಅವರು 2021ರ ಜುಲೈನಲ್ಲಿ ಶ್ರೀಲಂಕಾ ಪರ ಕೊನೆಯ ಪಂದ್ಯ ಆಡಿದ್ದರು.

ಸಪ್ನಾ ಗಿಲ್​​ಗೆ ಕಿರುಕುಳ ಪ್ರಕರಣದಲ್ಲಿ ನಿರಾಳ

ಇದೇ ವರ್ಷಾರಂಭದಲ್ಲಿ ಮುಂಬಯಿಯ ಉಪನಗರ ಹೋಟೆಲ್​​ನಲ್ಲಿ ಸೆಲ್ಫಿ ಕ್ಲಿಕ್ಕಿಸುವ ವಿಚಾರವಾಗಿ ಸೋಶಿಯಲ್​ ಮೀಡಿಯಾ ಇನ್​ಫ್ಲುಯೆನ್ಸರ್​​ ಸಪ್ನಾ ಗಿಲ್(Sapna Gill) ಮತ್ತು ಅವರ ಸ್ನೇಹಿತರು ಪೃಥ್ವಿ ಶಾ ಕಾರಿನ ಮೇಲೆ ಹಲ್ಲೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಪ್ನಾ ಗಿಲ್ ಅವರ ಬಂಧನವಾಗಿತ್ತು. ಜಾಮೀನು ಪಡೆದ ನಂತರ ಗಿಲ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಶಾ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಪೊಲೀಸರು ಕ್ರಿಕೆಟಿಗನ ವಿರುದ್ಧ ಪ್ರಕರಣ ದಾಖಲಿಸದ ಕಾರಣ ಅವಳು ನಂತರ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ದೂರು ಸುಳ್ಳು ಮತ್ತು ಆಧಾರರಹಿತ ಎಂದು ಮುಂಬಯಿ ಪೊಲೀಸರು (Mumbai Police) ನ್ಯಾಯಾಲಯಕ್ಕೆ ತಿಳಿಸಿದ ಕಾರಣ ಶಾ ನಿರಾಳರಾಗಿದ್ದರು.

ಇದನ್ನೂ ಓದಿ Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

ಸದ್ಯ ಪೃಥ್ವಿ ಶಾ ಒಡಿಐ ಕಪ್​ನಲ್ಲಿ ಎಂಟು ಇನ್ನಿಂಗ್ಸ್​ಗಳಲ್ಲಿ 42.87 ಸರಾಸರಿಯಲ್ಲಿ 343 ರನ್ ಗಳಿಸಿದ್ದಾರೆ. ಚಹಲ್​ ಕೂಡ ತಮ್ಮ ಸ್ಪಿನ್​ ಮೂಡಿಯ ಮೂಲಕ ವಿಕೆಟ್​ ಕೀಳುತ್ತಿದ್ದಾರೆ. ಭಾರತ ತಂಡದ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಕೂಡ ಇದೇ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದಾರೆ. ಈಗಾಗಲೇ ಅವರು ಸತತ 4 ಅರ್ಧಶತಕಗಳನ್ನು ಬಾರಿಸಿ ಅಬ್ಬರಿಸಿದ್ದಾರೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹ್ಯಾಂಪ್‌ಶೈರ್ ವಿರುದ್ಧ 70 ರನ್ ಸಿಡಿಸುವ ಮೂಲಕ ರಹಾನೆ ಲೀಸೆಸ್ಟರ್‌ಶೈರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Continue Reading

ಕ್ರೀಡೆ

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Sanju Samson: ಸಂಜು ಇದುವರೆಗೆ ಭಾರತ ಪರ 16 ಏಕದಿನ ಕ್ರಿಕೆಟ್​ ಪಂದ್ಯಗಳನ್ನಾಡಿ 510 ರನ್​ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕ ಬಾರಿಸಿದ್ದಾರೆ. 30 ಟಿ20 ಪಂದ್ಯ ಆಡಿ 444 ರನ್​ ಗಳಿಸಿದ್ದಾರೆ. 2 ಅರ್ಧಶತಕ ಒಳಗೊಂಡಿದೆ.

VISTARANEWS.COM


on

Sanju Samson
Koo

ತಿರುವನಂತಪುರಂ: ಟೀಮ್​ ಇಂಡಿಯಾದ(Team India) ಕ್ರಿಕೆಟಿಗ, ಕೇರಳ ಮೂಲದ ಸ್ಟಂಪರ್​ ಸಂಜು ಸ್ಯಾಮ್ಸನ್(Sanju Samson)​ ಅವರು ತಮ್ಮ ತವರಿನಲ್ಲಿ ಸ್ಥಳೀಯರೊಂದಿಗೆ ಬಾಸ್ಕೆಟ್​​ ಬಾಲ್​ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಸಂಜು ಟೀಮ್​ ಇಂಡಿಯಾದ ಅಭ್ಯಾಸದ ಜೆರ್ಸಿಯನ್ನು ತೊಟ್ಟು ತನ್ನ ಸ್ನೇಹಿತರೊಂದಿಗೆ ಬಾಸ್ಕೆಟ್​​​ ಬಾಲ್​ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡುತ್ತಿರುವ ದೃಶ್ಯವನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ಪರ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್​ ನಿರೀಕ್ಷಿತ ಪ್ರದರ್ಶನವನ್ನು ತೋರುವಲ್ಲಿ ವಿಫಲರಾಗಿದ್ದರು. ಹೀಗಾಗಿ ಅವರಿಗೆ ಏಕದಿನ ಸರಣಿಯಿಂದ ಕೈಬಿಡಲಾಗಿತ್ತು. ಟಿ20 ವಿಶ್ವಕಪ್​ ತಂಡದ ಸದ್ಯರಾಗಿದ್ದರೂ ಕೂಡ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಸಂಜು ಅವರು ಬಾಸ್ಕೆಟ್​​ ಬಾಲ್ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡಿರುವ ಬಗ್ಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬಡ ಮಕ್ಕಳಿಗೆ ನೆರವು


ವಿಶ್ವದ ಕ್ಯಾಶ್​ ರಿಚ್​ ಲೀಗ್​ಗಳಲ್ಲಿ ಒಂದಾದ ಐಪಿಎಲ್​ನಲ್ಲಿ ರಾಜಸ್ಥಾನ್​ ರಾಯಲ್ಸ್​(rajasthan royals) ಪರ ಆಡುತ್ತಿರುವ ಸಂಜು ಸ್ಯಾಮ್ಸನ್​ ಅವರು ಸದ್ಯ ಗಳಿಸುತ್ತಿರುವ 15 ಕೋಟಿ ವೇತನದಲ್ಲಿ ಯುವ ಮತ್ತು ಪ್ರತಿಭಾವಂತ ಕ್ರಿಕೆಟಿಗರಿಗೆ 2 ಕೋಟಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಈ ಮೂಲಕ ಯುವ ಪ್ರತಿಭೆಗಳನ್ನು ಬೆಳಕಿಗೆ ತರುವಂತ ಕೆಲಸವನ್ನು ಮಾಡುತ್ತಿದ್ದಾರೆ. ಟೀಮ್​ ಇಂಡಿಯಾದಲ್ಲಿ ತಮಗೆ ಸರಿಯಾದ ಅವಕಾಶ ಸಿಗದಿದ್ದರೂ ಯುವ ಆಟಗಾರರು ಬೆಳಕಿಗೆ ಬರುವಲ್ಲಿ ಶ್ರಮಿಸುತ್ತಿರುವ ಅವರ ಗುಣವನ್ನು ನಿಜಕ್ಕೂ ಮೆಚ್ಚಲೇ ಬೇಕು.

ಸಂಜು ಇದುವರೆಗೆ ಭಾರತ ಪರ 16 ಏಕದಿನ ಕ್ರಿಕೆಟ್​ ಪಂದ್ಯಗಳನ್ನಾಡಿ 510 ರನ್​ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕ ಬಾರಿಸಿದ್ದಾರೆ. 30 ಟಿ20 ಪಂದ್ಯ ಆಡಿ 444 ರನ್​ ಗಳಿಸಿದ್ದಾರೆ. 2 ಅರ್ಧಶತಕ ಒಳಗೊಂಡಿದೆ. ಟೆಸ್ಟ್​ ಇದುವರೆಗೂ ಆಡಿಲ್ಲ. ಹೆಚ್ಚಾಗಿ ಐಪಿಎಲ್​ನಲ್ಲಿಯೇ ಆಡಿದ್ದಾರೆ. 167 ಪಂದ್ಯಗಳಿಂದ 3 ಶತಕ, 25 ಅರ್ಧಶತಕ ಒಳಗೊಂಡಂತೆ 4419 ರನ್​ ಬಾರಿಸಿದ್ದಾರೆ.

ಇದನ್ನೂ ಓದಿ MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

ಬೌಲಿಂಗ್​ ನಡೆಸಿದ ಪಂತ್​


ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್(Rishabh Pant)​ ಅವರು ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದಾರೆ. ಪಂತ್​ ಬೌಲಿಂಗ್​ ನಡೆಸುವ ವಿಡಿಯೊ ವೈರಲ್(viral video)​ ಆಗಿದ್ದು, ಇದು ನೂತನ ಕೋಚ್​ ಗೌತಮ್​ ಗಂಭೀರ್(gautam gambhir)​ ಪ್ರಭಾವ ಎಂದು ನಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಪಂತ್ ಪಂದ್ಯದ ಅಂತಿಮ ಓವರ್​ ಬೌಲಿಂಗ್​ ನಡೆಸಿದರು. ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಪಂತ್​ ಸ್ಪಿನ್​ ಬೌಲಿಂಗ್​ ನಡೆಸಿದರು. ಈ ಪಂದ್ಯದಲ್ಲಿ ಪಂತ್​ ತಂಡ 3 ವಿಕೆಟ್​ ಅಂತರದ ಸೋಲು ಕಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಪಂತ್​ ಸಾರಥ್ಯದ ಪುರಾಣಿ ದಿಲ್ಲಿ ಸಿಕ್ಸ್​ ತಂಡ 197 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಸೌತ್​ ಡೆಲ್ಲಿ ತಂಡ 7 ವಿಕೆಟ್​ಗೆ 198 ರನ್​ ಬಾರಿಸಿ ಗೆಲುವು ಸಾಧಿಸಿತು.

Continue Reading
Advertisement
Viral Video
ವೈರಲ್ ನ್ಯೂಸ್2 hours ago

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್3 hours ago

Viral Video: ಅಬ್ಬಾ.. ಸಾವು ಹೀಗೂ ಬರುತ್ತಾ? ಸ್ನೇಹಿತನೊಂದಿಗೆ ಮಾತಾಡ್ತಾ ನಿಂತಿದ್ದವನ ಮೇಲೆ ದೊಪ್ಪೆಂದು ಬಿದ್ದ ಎಸಿ-ವಿಡಿಯೋ ಇದೆ

Rakesh pal
ಪ್ರಮುಖ ಸುದ್ದಿ3 hours ago

Rakesh Pal: ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ವಿಧಿವಶ

Viral Video
ದೇಶ4 hours ago

Viral News: ಒಂಟಿಯಾಗಿದ್ದಾಗ ಮೈ ಮುಟ್ಟೋಕೆ ಬಂದೋನ ಖಾಸಗಿ ಅಂಗಕ್ಕೆ ಸಟ್ಟುಗದಲ್ಲೇ ಚುಚ್ಚಿದ್ಳು!

Health Tips
ಆರೋಗ್ಯ4 hours ago

Health Tips: ಮಾನಸಿಕ ಒತ್ತಡ ನಿವಾರಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸುಲಭೋಪಾಯ!

Madurai Tour
Latest4 hours ago

Madurai Tour: ಮಧುರೈಗೆ ಹೋದಾಗ ನೋಡಲೇಬೇಕಾದ 6 ರಮಣೀಯ ಸ್ಥಳಗಳು

Vastu Tips
ಧಾರ್ಮಿಕ4 hours ago

Vastu Tips: ಮಲಗುವ ದಿಕ್ಕು ಸತಿಪತಿ ನಡುವಿನ ವಿರಸಕ್ಕೆ ಕಾರಣ ಆಗಬಹುದು!

Kundapura Kannada Habba 2024
ಕರ್ನಾಟಕ4 hours ago

Kundapura Kannada Habba 2024: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸದ್ಯದಲ್ಲೇ ಸಮಿತಿ ರಚನೆ: ಜಯಪ್ರಕಾಶ ಹೆಗ್ಡೆ

Physical Abuse
ಕರ್ನಾಟಕ5 hours ago

Physical Abuse: ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

Champai Soren
ದೇಶ5 hours ago

Champai Soren: ನನ್ನ ಎದುರು ಮೂರು ಆಯ್ಕೆಗಳಿವೆ; ಬಿಜೆಪಿ ಸೇರ್ಪಡೆ ಬಗ್ಗೆ ಚಂಪೈ ಸೊರೆನ್‌ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌