Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು! - Vistara News

ವೈರಲ್ ನ್ಯೂಸ್

Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು!

ಹಾರುತ್ತಿರುವ ವಿಮಾನದಲ್ಲಿ ಮಹಿಳೆಯೊಬ್ಬರು ನೃತ್ಯ ಮಾಡುವ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ (Viral Video) ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದ್ದು, ಮಹಿಳೆ ವಿರುದ್ಧ ಕ್ರಮಕ್ಕೆ ಸಾಕಷ್ಟು ಮಂದಿ ಆಗ್ರಹಿಸಿದ್ದಾರೆ. ವಿಮಾನದಲ್ಲಿ ಮತ್ತು ವಿಮಾನ ನಿಲ್ದಾಣಗಳಲ್ಲಿ ನಡೆಯುವ ಇಂಥ ರೀಲ್ಸ್‌ ಹುಚ್ಚಾಟಗಳಿಗೆ ತಡೆ ಹಾಕಬೇಕು ಎಂದು ಜನ ಆಗ್ರಹಿಸುತ್ತಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಾರ್ವಜನಿಕ ಪ್ರದೇಶಗಳಲ್ಲಿ ರೀಲ್ಸ್ (reels) ಮಾಡುವವರ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪವೂ ಕೇಳಿ ಬರುತ್ತಿದೆ. ಆದರೂ ಇದು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇತ್ತೀಚಿಗೆ ವಿಮಾನ ನಿಲ್ದಾಣದಲ್ಲಿ (airport) ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿ ನೆಟ್ಟಿಗರಿಂದ ಆಕ್ರೋಶಕ್ಕೆ ಕೆಲವರು ಗುರಿಯಾಗಿದ್ದರು. ಈಗ ಮಹಿಳೆಯೊಬ್ಬರು ವಿಮಾನದ (Flight) ಒಳಗೆ ರೀಲ್ಸ್ ಮಾಡಿ ಹಂಚಿಕೊಂಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕ ಸಾರಿಗೆ, ಬೀದಿಗಳು, ವಿಮಾನ ನಿಲ್ದಾಣದ ಹೊರಭಾಗ ಮತ್ತು ವಿಮಾನಯಾನದ ವೇಳೆ ನೃತ್ಯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಲೇ ಇದೆ. ಇದೀಗ ಇಂತಹ ಮತ್ತೊಂದು ಘಟನೆ ವರದಿಯಾಗಿದೆ. ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ನೃತ್ಯ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ನೆಟ್ಟಿಗರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಲ್ಮಾ ಶೇಕ್ ಎಂಬ ಮಹಿಳೆ ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಕ್ಲಿಪ್ ನಲ್ಲಿ ಮಹಿಳೆ ಕಪ್ಪು ಬಣ್ಣದ ಸೀರೆಯನ್ನು ಧರಿಸಿದ್ದು, ಇತರ ಪ್ರಯಾಣಿಕರು ತಮ್ಮ ಆಸನಗಳಲ್ಲಿ ಕುಳಿತಿದ್ದಾರೆ. ಫ್ಲೈಟ್ ಅಟೆಂಡೆಂಟ್‌ಗಳು ಓವರ್‌ಹೆಡ್ ಬಿನ್ ಅನ್ನು ಮುಚ್ಚುತ್ತಿದ್ದಂತೆ, ಶೇಕ್ ಎ.ಆರ್. ರೆಹಮಾನ್ ಮತ್ತು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸ್ಟೈಲ್ ಸ್ಟೈಲ್ ಥಾನ್ ಹಾಡಿಗೆ ನೃತ್ಯ ಮಾಡಿದ್ದಾರೆ. ಅವರ ಹಿಂದಿದ್ದ ಇತರ ಪ್ರಯಾಣಿಕರು ಆಕೆಯನ್ನು ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಪೋಸ್ಟ್ ಅನ್ನು ಕೆಲವು ಗಂಟೆಗಳ ಹಿಂದೆಯಷ್ಟೇ ಸಾಮಾಜಿಕ ಮಾಧ್ಯಮವಾದ ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ಅನಂತರ ಇದು ಸಾವಿರಾರು ಲೈಕ್‌ಗಳನ್ನು ಗಳಿಸಿದೆ. ಕೆಲವರು ಹಂಚಿಕೊಂಡಿದ್ದಾರೆ. ಅನೇಕರು ಇದಕ್ಕೆ ಪ್ರತಿಕ್ರಿಯೆಯನ್ನು ಮಾಡಿದ್ದಾರೆ.


ಒಬ್ಬರು, ಇತರರಿಗೆ ಯಾಕೆ ತೊಂದರೆ ಕೊಡುತ್ತೀರಿ ಏನು ಕೇಳಿದ್ದರೆ, ಇನ್ನೊಬ್ಬರು, ಇದು ಯಾವ ರೀತಿಯ ಏರ್‌ಲೈನ್? ಅಂತಹ ಅಸಂಬದ್ಧ ಮತ್ತು ಭಯಭೀತ ವ್ಯಕ್ತಿಯನ್ನು ವಿಮಾನದಲ್ಲಿ ರೀಲ್ ಮಾಡಲು ಅವರು ಹೇಗೆ ಅನುಮತಿಸುತ್ತಿದ್ದಾರೆ? ವಿಮಾನಯಾನ ಸಂಸ್ಥೆಯು ಈ ಮಹಿಳೆಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿದೆ. ಇದರಿಂದ ಇನ್ಯಾರೂ ಮತ್ತೆ ಎಂದಿಗೂ ಹೀಗೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆಗಳು ಮತ್ತೆ ನಡೆಯದಂತೆ ತಡೆಯಲು ಇಂಡಿಗೋ ವಿಮಾನ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಇನ್ನೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

ಮತ್ತೊಬ್ಬರು ಕಾಮೆಂಟ್ ನಲ್ಲಿ ಗಗನಸಖಿ ಆಕೆಗೆ ರೀಲ್‌ಗಳನ್ನು ಮಾಡಲು ಹೇಗೆ ಅವಕಾಶ ನೀಡಿದರು? ವಿಮಾನ ಹಾರಾಟ ಸಂದರ್ಭದಲ್ಲಿ ಗಗನಸಖಿಯೂ ಸಹ ಭಯಭೀತರಾಗುತ್ತಾರೆ ಎಂದು ತಿಳಿಸಿದ್ದಾರೆ. ಈ ರೀತಿಯ ಜನರು ವಿಮಾನಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಬೇಕು ಎಂದು ಇನ್ನೊಬ್ಬರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಬಿಹಾರದ ರಾಜೌಲಿ ಪ್ರದೇಶದಲ್ಲಿ ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ ಆತನು ಆಸ್ಪತ್ರೆಗೆ ಓಡದೆ, ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಇದಾದ ಬಳಿಕವೇ ಆತನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಹಾವು ಹಾಗೂ ವ್ಯಕ್ತಿ ನಡುವಿನ ಕಾಳಗದಲ್ಲಿ ಯಾರು ಗೆದ್ದರು? ಇಲ್ಲಿದೆ ಮಾಹಿತಿ.

VISTARANEWS.COM


on

Snake
Koo

ಪಟನಾ: ಹಾವುಗಳು (Snakes) ಎಂದರೆ ಎಲ್ಲರಿಗೂ ಭಯ ಇದ್ದೇ ಇರುತ್ತದೆ. ಸಣ್ಣ ಹಾವು ಕಚ್ಚಿದರೂ ಗಾಬರಿಯಾಗುತ್ತದೆ. ಕೂಡಲೇ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯುತ್ತೇವೆ. ಹಳ್ಳಿಯಲ್ಲಾದರೆ ಆಯುರ್ವೇದದಿಂದ ಹಾವಿನ ವಿಷಯವನ್ನು ನಿಗ್ರಹಿಸಲಾಗುತ್ತದೆ. ಅಷ್ಟರಮಟ್ಟಿಗೆ, ಹಾವು ಕಚ್ಚಿದರೆ (Snake Bite) ಗಾಬರಿ, ಆತಂಕ, ಭಯ ಆಗುತ್ತದೆ. ಆದರೆ, ಬಿಹಾರದಲ್ಲೊಬ್ಬ (Bihar) ಭೂಪನು, ತನಗೆ ಕಚ್ಚಿದ ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಎಂತಹ ಅದೃಷ್ಟ ನೋಡಿ, ಹಾವು ಕಚ್ಚಿಸಿಕೊಂಡ ವ್ಯಕ್ತಿಯು ಬದುಕುಳಿದರೆ, ಈತನಿಂದ ಕಚ್ಚಿಸಿಕೊಂಡ ಹಾವು ಸತ್ತುಹೋಗಿದೆ.

ಹೌದು, ಬಿಹಾರದ ರಾಜೌಲಿ ಪ್ರದೇಶದಲ್ಲಿ ಇಂತಹದ್ದೊಂದು ವಿಸ್ಮಯಕಾರಿ ಘಟನೆ ನಡೆದಿದೆ. ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಯು ರೈಲ್ವೆ ಲೈನ್‌ನಲ್ಲಿ ಉದ್ಯೋಗ ಮಾಡುತ್ತಿದ್ದಾನೆ. ಈತನ ದಿನದ ಕೆಲಸ ಮುಗಿಸಿ ರೌಜಲಿಯಲ್ಲಿರುವ ಕ್ಯಾಂಪ್‌ನಲ್ಲಿ ಕಳೆದ ಮಂಗಳವಾರ (ಜುಲೈ 2) ಮಲಗಿದ್ದಾನೆ. ಇದೇ ವೇಳೆ ಹಾವೊಂದು ಸಂತೋಷ್‌ ಲೋಹರ್‌ಗೆ ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ, ಆಸ್ಪತ್ರೆಗೆ ಓಡದ ಈತನು ಕಬ್ಬಿಣದ ರಾಡ್‌ನಿಂದ ಹಾವನ್ನು ಹಿಡಿದು, ಅದಕ್ಕೇ ಮೂರು ಬಾರಿ ಕಚ್ಚಿದ್ದಾನೆ. ಈತನು ಕಚ್ಚಿದ ತೀವ್ರತೆಗೆ ಹಾವೇ ಸತ್ತುಹೋಗಿದೆ.

Snake bite

ಸಂತೋಷ್‌ ಲೋಹರ್‌ನನ್ನು ಕೂಡಲೇ ಆತನ ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಈತನು ಬಹುತೇಕ ಗುಣಮುಖನಾಗಿದ್ದಾನೆ. “ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿದ ಕಾರಣ ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶೀಘ್ರದಲ್ಲೇ ಆತನನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗುವುದು” ಎಂದು ಚಿಕಿತ್ಸೆ ನೀಡಿದ ಡಾ.ಸತೀಶ್‌ ಚಂದ್ರ ಅವರು ಮಾಹಿತಿ ನೀಡಿದ್ದಾರೆ. ಈತನ ಸಾಹಸವನ್ನು ಕೇಳಿದ ಸುತ್ತಮುತ್ತಲಿನ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಂತೋಷ್‌ ಲೋಹರ್‌ನು ಹಾವಿಗೆ ವಾಪಸ್‌ ಕಚ್ಚಿದ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈತನ ಸಂದರ್ಶನವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. “ನಮ್ಮ ಊರಿನಲ್ಲಿ ಒಂದು ಮಾತಿದೆ. ನಮಗೇನಾದರೂ ಹಾವು ಕಚ್ಚಿದರೆ, ಅದಕ್ಕೆ ಎರಡು ಬಾರಿ ವಾಪಸ್‌ ಕಚ್ಚಬೇಕು ಎಂಬ ಪದ್ಧತಿ ಇದೆ. ಅದರಂತೆ, ನಾನು ಹಾವಿಗೆ ವಾಪಸ್‌ ಕಚ್ಚಿದೆ. ಇದರಿಂದ ನಾನು ಬದುಕುಳಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಈತನಿಗೆ ಕಚ್ಚಿದ ಹಾವಿನಲ್ಲಿ ವಿಷ ಇರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Continue Reading

ವೈರಲ್ ನ್ಯೂಸ್

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

VISTARANEWS.COM


on

By

Viral Video
Koo

ಆಧಾರ್ ಕಾರ್ಡ್ ನಂತಹ (Aadhar card) ಕೆಲವೊಂದು ದಾಖಲೆಗಳಿಗೆ ಮಕ್ಕಳ (child) ಫೋಟೋ (photo) ಕಡ್ಡಾಯವಾಗಿರುತ್ತದೆ. ಆದರೆ ಪುಟ್ಟ ಮಕ್ಕಳ ಫೋಟೋ ತೆಗೆಸುವ ವೇಳೆಗೆ ತಂದೆ, ತಾಯಿ ಮಾತ್ರವಲ್ಲ ಫೋಟೋಗ್ರಾಫರ್ ಕೂಡ ಸುಸ್ತಾಗಿ ಬಿಡುತ್ತಾರೆ. ಆದರೆ ಇಲ್ಲೊಂದು ಮಗು ಮಾತ್ರ ಫೋಟೋ ಎಂದಾಕ್ಷಣ ತನ್ನ ಮುದ್ದಾದ ಭಂಗಿಯನ್ನು ತೋರಿಸಿ ಎಲ್ಲರ ಮನ ಗೆದ್ದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.
ಅವಳು ಕೆಮರಾದ ಮುಂದೆ ಮುಗುಳ್ನಕ್ಕಿರುವುದು ಮಾತ್ರವಲ್ಲ ತನ್ನ ವಿಭಿನ್ನ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.

ತಾನು ಯಾವುದಕ್ಕಾಗಿ ಫೋಟೋ ತೆಗೆಸಿಕೊಳ್ಳುತ್ತಿದ್ದೇನೆ ಎಂಬ ಅರಿವಿಲ್ಲದ ಈ ಮಗು ಆಧಾರ್ ಕಾರ್ಡ್ ಫೋಟೋಗಾಗಿ ಬಗೆ ಬಗೆಯ ಪೋಸ್ ನೀಡಿದ್ದಾಳೆ. 20ಕ್ಕೂ ಹೆಚ್ಚು ಪೋಸ್ ನೀಡಿರುವ ಆಕೆಯ ಯಾವ ಫೋಟೋವನ್ನು ಕಾರ್ಡ್ ನಲ್ಲಿ ಅಚ್ಚು ಹಾಕುವ ಗೊಂದಲ ಈಗ ಆಧಾರ್ ಕಾರ್ಡ್ ಮಾಡುವ ಸಿಬ್ಬಂದಿಯದ್ದಾಗಿದೆ.


ಗುರುತು ಚೀಟಿಗಳಿಗಾಗಿ ಸಾಮಾನ್ಯವಾಗಿ ವಯಸ್ಕರ ಫೋಟೋ ತೆಗೆಯುವುದು ಸುಲಭ. ಆದರೆ ಮಕ್ಕಳ ಫೋಟೋ ತೆಗೆಯುವುದು ಅಷ್ಟು ಸುಲಭವಲ್ಲ. ಅವುಗಳ ಗಮನ ಎಲ್ಲೋ ಇರುತ್ತದೆ. ಇನ್ನು ಕೆಲವು ಮಕ್ಕಳು ಅಪರಿಚಿತರನ್ನು ನೋಡಿ ಅಳಲು ಪ್ರಾರಂಭಿಸುತ್ತದೆ. ಮತ್ತೆ ಕೆಲವರು ನಿಂತಲ್ಲಿ ನಿಲ್ಲಲ್ಲ. ಅತ್ತಿತ್ತ ಓಡಿ ಹೋಗುವುದು ಮಾಡುತ್ತಾರೆ. ಇದಲ್ಲ ಮುಗಿದು ಒಂದು ಒಳ್ಳೆಯ ಫೋಟೋ ಸಿಕ್ಕರೆ ಮಾತ್ರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಮತ್ತದೇ ಮಕ್ಕಳ ತಕರಾರು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಆದರೆ ಈ ಮಗುವನ್ನು ಪೋಷಕರು ಆಧಾರ್ ಕಾರ್ಡ್ ಸೆಂಟರ್‌ಗೆ ಕರೆದುಕೊಂಡು ಬಂದು ಕುರ್ಚಿಯ ಮೇಲೆ ನಿಲ್ಲಿಸಿ ಕೆಮರಾಗೆ ಪೋಸ್ ನೀಡಲು ಹೇಳಿದ್ದಾರೆ. ಫೋಟೋ ತೆಗೆಯುತ್ತಾರೆ. ಕೆಮರಾ ನೋಡು ಎಂದಿದ್ದಾರೆ. ತಕ್ಷಣ ಮಗು ಒಂದರ ಮೇಲೊಂದರಂತೆ ಪೋಸ್ ನೀಡುತ್ತಾ ಹೋಗಿದ್ದಾಳೆ. ಪುಟಾಣಿ ಮಗುವಿನ ಈ ಪೋಸ್ ಅಲ್ಲಿರುವ ಸಿಬ್ಬಂದಿಗೆ ಮಾತ್ರವಲ್ಲ ಅಲ್ಲಿದ್ದವರೆಲ್ಲರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ.

Continue Reading

ದೇಶ

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Deadly Attack: ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Deadly Attack
Koo

ಚಂಢಿಗಡ: ಪಂಜಾಬ್‌ನ ಶಿವಸೇನೆ ಮುಖಂಡ(Shivsena Leader)ನ ಮೇಲೆ ನಾಲ್ವರು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ(Deadly Attack) ನಡೆಸಿರುವ ಘಟನೆ ಲುಧಿಯಾನದಲ್ಲಿ ನಡೆದಿದೆ. ಶಿವಸೇನೆ ನಾಯಕ ಸಂದೀಪ್‌ ಥಾಪರ್‌ ಅಲಿಯಾಸ್‌ ಗೋರಾ ಮೇಲೆ ಸ್ಕೂಟರ್‌ನಲ್ಲಿ ಬಂದ ನಿಹಾಂಗ್ ಉಡುಪಿನಲ್ಲಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ವೈರಲ್‌(Viral Video) ಆಗಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ನಿಹಾಂಗ್ ಕತ್ತಿಯಿಂದ ದಾಳಿ ಮುಂದುವರಿಸಿದಾಗ ಶಿವಸೇನಾ ಪಂಜಾಬ್ ನಾಯಕ ಬ್ಯಾಲೆನ್ಸ್‌ ಕಳೆದುಕೊಂಡು ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ. ಅಲ್ಲೇ ಇದ್ದ ಪ್ರಯಾಣಿಕರು ಆಘಾತದಿಂದ ನೋಡುತ್ತಿದ್ದಂತೆ ದಾಳಿಕೋರರು ಸ್ಕೂಟರ್​​ನಲ್ಲಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಅನೇಕ ಜನ ಥಾಪರ್‌ ಸಹಾಯಕ್ಕೆ ಬರಲೇ ಇಲ್ಲ. ಟ್ರಸ್ಟ್‌ನ ಸಂಸ್ಥಾಪಕ-ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಥಾಪರ್ ಅವರು ಸಂವೇದನಾ ಟ್ರಸ್ಟ್ ಎಂಬ ಎನ್‌ಜಿಒ ಕಚೇರಿಯಿಂದ ಸಿವಿಲ್ ಆಸ್ಪತ್ರೆ ಬಳಿ ತೆರಳಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಥಾಪರ್‌ನನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಅವರನ್ನು ಸ್ಥಳೀಯ ದಯಾನಂದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು. ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಜಸ್ಕಿರಂಜಿತ್ ಸಿಂಗ್ ತೇಜಾ ತಿಳಿಸಿದ್ದಾರೆ.

ಘಟನೆಯ ನಂತರ, ಶಿವಸೇನಾ ಪಂಜಾಬ್ ನಾಯಕರು ಸಿವಿಲ್ ಆಸ್ಪತ್ರೆಯ ಹೊರಗೆ ಜಮಾಯಿಸಿ ಪಂಜಾಬ್ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ಥಾಪರ್‌ಗೆ ಮೂವರು ಬಂದೂಕುಧಾರಿಗಳ ಭದ್ರತೆ ನೀಡಲಾಗಿತ್ತು. ಪೊಲೀಸರು ಒಂದು ವಾರದ ಹಿಂದೆ ಅವರ ಭದ್ರತೆಯನ್ನು ಹಿಂತೆಗೆದುಕೊಂಡರು. ಇದರ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ. ಥಾಪರ್‌ ಮೇಲಿನ ದಾಳಿಗೆ ಹಿಂದೂ ಸಂಘಟನೆ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಹಿಂದೂ ಮುಖಂಡರಿಗೆ ಸರ್ಕಾರ ಭದ್ರತೆ ನೀಡುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯ ಮೇಲೆ ಇಂತಹ ಕ್ರೂರ ದಾಳಿ ಖಂಡನೀಯ. ಇದು ನಿವಾಸಿಗಳಲ್ಲಿ ಭೀತಿ ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

Latest

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Viral Video: ಬ್ಲೂ ಲೈನ್ ದೆಹಲಿ ಮೆಟ್ರೋದಲ್ಲಿ ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಅವರು ನಟಿಸಿದ ʼRRR’ಚಿತ್ರದ ಜನಪ್ರಿಯ ಹಾಡಾದ “ನಾಚೋ ನಾಚೋ”ಗೆ ಯುವಕನೊಬ್ಬ ಹುಚ್ಚೆದ್ದು ಡ್ಯಾನ್ಸ್‌ ಮಾಡಿದ್ದಾನೆ. ಅವನ ಈ ಡ್ಯಾನ್ಸ್ ಕೆಲವು ಪ್ರಯಾಣಿಕರಿಗೆ ಮನೋರಂಜನೆ ನೀಡಿದರೆ, ಇನ್ನು ಕೆಲವರಿಗೆ ಇದರಿಂದ ಕಿರಿಕಿರಿಯಾಗಿದೆ. ಈ ವಿಡಿಯೊ ಇರುವ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Viral Video
Koo

ನವದೆಹಲಿ: ಕೆಲವರಿಗೆ ಡ್ಯಾನ್ಸ್‌ ಎಂದರೆ ವಿಪರೀತ ಮೋಹವಿರುತ್ತದೆ. ಹಾಡು ಕಿವಿಗೆ ಬಿದ್ದಾಕ್ಷಣ ಕಾಲು ಕೂಡ ನಿಲ್ಲಲ್ಲ. ಈಗಂತೂ ಸಾರ್ವಜನಿಕ ಸ್ಥಳವೆಂದೂ ನೋಡದೇ ಕುಣಿಯುವುದಕ್ಕೆ ಶುರು ಮಾಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ಹಾಡೊಂದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಹುಚ್ಚೆದ್ದು ಕುಣಿದಿದ್ದು, ಅವರ ಡ್ಯಾನ್ಸ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಸಚಿನ್ ಎಂಬ ವ್ಯಕ್ತಿ ಬ್ಲೂ ಲೈನ್ ದೆಹಲಿ ಮೆಟ್ರೋದಲ್ಲಿ ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್‌ ಅವರು ನಟಿಸಿದ ‘ಆರ್‌ಆರ್‌ಆರ್’ ಚಿತ್ರದ ಜನಪ್ರಿಯ ಹಾಡಾದ “ನಾಚೋ ನಾಚೋ” ಗೆ ಉತ್ಸಾಹದಿಂದ ಡ್ಯಾನ್ಸ್ ಮಾಡಿದ್ದಾನೆ.

ಅವನ ಈ ಡ್ಯಾನ್ಸ್ ಕೆಲವು ಪ್ರಯಾಣಿಕರಿಗೆ ಮನೋರಂಜನೆ ನೀಡಿದರೆ ಕೆಲವರಿಗೆ ಇದರಿಂದ ಅಡ್ಡಿಯಾಗಿದೆ ಎನ್ನಲಾಗಿದೆ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ವೈರಲ್ ಆಗಿದೆ. ಈ ವೈರಲ್ ವಿಡಿಯೊದಲ್ಲಿ ಸಚಿನ್ ಮೆಟ್ರೋ ರೈಲಿನಲ್ಲಿ ಮಧ್ಯದಲ್ಲಿ ನಿಂತು ಹಾಡಿಗೆ ಉತ್ಸಾಹದಿಂದ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿರುವುದನ್ನು ಮೊದಲು ಕಾಣಿಸುತ್ತದೆ. ನಂತರ ಇಂದ್ರಪ್ರಸ್ಥ ನಿಲ್ದಾಣದಲ್ಲಿ ಮೆಟ್ರೋ ನಿಂತು ಬಾಗಿಲು ತೆರೆಯುತ್ತಿದ್ದಂತೆ, ಅವನು ಪ್ಲಾಟ್‍ಫಾರ್ಮ್ ನಿಂದ ಹೊರಗೆ ಓಡಿ ಕುಳಿದು ಮತ್ತೆ ಬೋಗಿಗೆ ಪ್ರವೇಶಿಸಿ ಡ್ಯಾನ್ಸ್ ಮಾಡುತ್ತಾನೆ. ನಂತರ ಅವನು ಜಿಗಿದು ತನ್ನ ಡ್ಯಾನ್ಸ್ ಅನ್ನು ಹಂತ ಹಂತವಾಗಿ ಮುಂದುವರಿಸುತ್ತಾನೆ, ಇದು ಅವನ ಸ್ನೇಹಿತರು ಮತ್ತು ಸಹ ಪ್ರಯಾಣಿಕರಿಗೆ ಆಶ್ಚರ್ಯ ಮತ್ತು ಮನರಂಜನೆಯನ್ನು ನೀಡುತ್ತದೆ. ಕೆಲವರು ಈ ಡ್ಯಾನ್ಸ್ ನೋಡಿ ಸುಮ್ಮನಿದ್ದರೆ ಕೆಲವರ ಮುಖದಲ್ಲಿ ನಗು ಮೂಡಿದೆ ಎನ್ನಲಾಗಿದೆ.

ಈ ಪೋಸ್ಟ್ ಕೆಲವು ದಿನಗಳ ಹಿಂದೆ ಹಂಚಿಕೊಳ್ಳಲಾಗಿದ್ದು, ಇದಕ್ಕೆ 13.8 ಮಿಲಿಯನ್ ವೀವ್ಸ್ ಹಾಗೂ ಒಂದು ಮಿಲಿಯನ್ ಲೈಕ್ಸ್ ಬಂದಿದೆ. ಸಚಿನ್ ಡ್ಯಾನ್ಸ್‌ಗೆ ಹಲವು ನೆಟ್ಟಿಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿನ್ ಅವರ ಈ ಕೃತ್ಯಕ್ಕೆ ಜನರು ನಿರಾಶೆಗೊಂಡಿದ್ದಾರೆ.

ಈ ಹಿಂದೆ ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬಳು ಡ್ಯಾನ್ಸ್ ಮಾಡಿದ್ದು, ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಆಗಿದೆ. ವಿಡಿಯೋದಲ್ಲಿ ಆಕೆ ಕಪ್ಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಳು.

ಇದನ್ನೂ ಓದಿ: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

Viral Video

ಅವಳು ವಿಮಾನದ ಮಧ್ಯದಲ್ಲಿ ನಿಂತು ಡ್ಯಾನ್ಸ್‌ ಮಾಡಿದ್ದಳು. ಈಕೆಯ ಡ್ಯಾನ್ಸ್‌ ನೋಡಿ ಇತರ ಪ್ರಯಾಣಿಕರು ಕಿರಿಕಿರಿ ಅನುಭವಿಸಿದ್ದರು.

Continue Reading
Advertisement
UK Elections
ವಿದೇಶ6 mins ago

UK Elections: ಬ್ರಿಟನ್‌ ಸಂಸತ್ತಿಗೆ 28 ಭಾರತೀಯ ಮೂಲದವರು ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Namma Metro
ಬೆಂಗಳೂರು7 mins ago

Namma Metro: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಇಂದಿನಿಂದ ನೇರಳೆ ಮಾರ್ಗದಲ್ಲಿ ರೈಲುಗಳ ಹೆಚ್ಚಳ

Actor Darshan Will Darshan Thoogudeepa Will Get Bail
ಸ್ಯಾಂಡಲ್ ವುಡ್14 mins ago

Actor Darshan:ದರ್ಶನ್‌ ಹೊರಗೆ ಯಾವಾಗ ಬರ್ತಾರೆ? ವಿದ್ಯಾ ಶಂಕರಾನಂದ ಸರಸ್ವತಿ ಭವಿಷ್ಯ ಏನು?

ಕ್ರೀಡೆ30 mins ago

IND vs ZIM: ಇಂದು ಭಾರತ-ಜಿಂಬಾಬ್ವೆ ಮೊದಲ ಟಿ20 ಪಂದ್ಯ; ಎಷ್ಟು ಗಂಟೆಗೆ ಆರಂಭ?

ಧವಳ ಧಾರಿಣಿ ಅಂಕಣ rama and sugreeva
ಅಂಕಣ37 mins ago

ಧವಳ ಧಾರಿಣಿ ಅಂಕಣ: ಕಿಷ್ಕಿಂಡಾ ಕಾಂಡದಲ್ಲಿನ ರಾಜನೀತಿಯ ವಿಲಕ್ಷಣ ಘಟನೆ

NIA Charge sheet
ದೇಶ44 mins ago

NIA Charge sheet: ಉಗ್ರ ಸಂಘಟನೆಗಳಿಗೆ ನೇಮಕಾತಿ; ಕುಖ್ಯಾತ ವಾವೋವಾದಿ ವಿರುದ್ಧ ಚಾರ್ಜ್‌ಶೀಟ್‌

Hathras Stampede
ದೇಶ54 mins ago

Hathras Stampede: ಹತ್ರಾಸ್‌ ಕಾಲ್ತುಳಿತ; ಮುಖ್ಯ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

Saffron For Baby
ಆರೋಗ್ಯ55 mins ago

Saffron For Baby: ಗರ್ಭಿಣಿ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗಾಗುತ್ತದೆಯೇ?

ರಾಜಮಾರ್ಗ ಅಂಕಣ captain pranjal shaurya award
ಅಂಕಣ1 hour ago

ರಾಜಮಾರ್ಗ ಅಂಕಣ: ಕ್ಯಾಪ್ಟನ್ ಪ್ರಾಂಜಲ್ ಪರಾಕ್ರಮಕ್ಕೆ ಒಲಿದ ಶೌರ್ಯ ಚಕ್ರ

road accident bike
ಬೆಂಗಳೂರು1 hour ago

Road Accident: ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋದ ಬೈಕ್‌ ಸವಾರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ15 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ16 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ17 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ19 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ20 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು22 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು22 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌