Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ! - Vistara News

ವೈರಲ್ ನ್ಯೂಸ್

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ (Viral Video) ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು. ಈ ಎರಡು ವಿಡಿಯೊಗಳನ್ನು ನೋಡಿ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರೀಲ್ಸ್ (reels) ಹುಚ್ಚು ನಮ್ಮಿಂದ ಯಾವ ಕೆಲಸವನ್ನು ಬೇಕಾದರೂ ಮಾಡಿಸುತ್ತದೆ ಎನ್ನುವುದಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಉದಾಹರಣೆಗಳು ಲಭ್ಯವಾಗುತ್ತಿದೆ. ಇದೀಗ ಪಶ್ಚಿಮ ಬಂಗಾಳದ (west bengal) ಯುವತಿಯೊಬ್ಬಳು ರೀಲ್ಸ್ ಮಾಡಿ ತಂದೆಯ ಕೈಯಿಂದ ಸರಿಯಾಗಿ ಹೊಡೆತ ತಿಂದಿರುವ ಘಟನೆ ನಡೆದಿದೆ. ಇದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral Video) ಆಗಿದೆ.

ರೀಲ್ಸ್ ಗಾಗಿ ಯುವತಿಯೊಬ್ಬಳು ಸಿಗರೇಟ್ ಸೇದುತ್ತಿರುವ ವಿಡಿಯೋ ಮಾಡಿ ತಂದೆಯಿಂದ ಸರಿಯಾಗಿ ಏಟು ಕೂಡ ತಿಂದಿದ್ದಾಳೆ. ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿ ಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು.

ವೈರಲ್ ಆಗಿರುವ ವಿಡಿಯೋದ ಇನ್ನೊಂದು ಭಾಗದಲ್ಲಿ ಬೀದಿಯಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಅವಳ ತಂದೆ ಹೇಗೆ ಅವಳಿಗೆ ಬೆಲ್ಟ್‌ನಿಂದ ಹೊಡೆಯುತ್ತಿದ್ದಾರೆ ಎಂಬುದನ್ನು ನೋಡಬಹುದು. ಈ ಸಂಪೂರ್ಣ ಘಟನೆಯು ಯುವ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಒಂದು ಎಚ್ಚರಿಕೆಯ ಕಥೆಯಾಗಿದೆ. ರೀಲ್ಸ್ ಗಾಗಿ ನಾವು ಮಾಡುವ ಸ್ಟಂಟ್ ಗಳು ಮನೆಯವರಿಗೆ ಕೆಟ್ಟ ಹೆಸರು ತರಬಹುದು ಅಥವಾ ಅವರಿಗೆ ಮುಜುಗರ ಉಂಟು ಮಾಡಬಹುದು ಎನ್ನುವ ಯೋಚನೆ ನಮ್ಮಲ್ಲಿ ಇರಬೇಕು. ಆನ್ ಲೈನ್ ನಲ್ಲಿ ಜವಾಬ್ದಾರಿಯುತ ನಡವಳಿಕೆಯನ್ನು ತೋರಿಸುವುದು ಕೂಡ ಬಹು ಮುಖ್ಯವಾಗಿದೆ. ಮಕ್ಕಳು ಈ ಬಗ್ಗೆ ಪೋಷಕರೊಂದಿಗೆ ಮುಕ್ತವಾಗಿ ಮಾತನಾಡಬೇಕು ಎನ್ನುವುದನ್ನು ಈ ವಿಡಿಯೋದಲ್ಲಿ ಹೇಳಲಾಗಿದೆ.

ಈ ವಿಡಿಯೋ ಗೆ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ. ಒಬ್ಬರು ನನ್ನ ತಂದೆ ಖಂಡಿತಾ ನನ್ನ ತಲೆ ಬೋಳಿಸುತ್ತಿದ್ದರು ಎಂದು ಹೇಳಿದ್ದರೆ, ಇನ್ನೊಬ್ಬರು ಅವಳ ತಂದೆ ಜೈಲಿಗೆ ಹೋಗುವುದು ಖಚಿತ. ಅವರು ಅದನ್ನು ಚಿತ್ರೀಕರಿಸಬಾರದು ಎಂದು ತಿಳಿಸಿದ್ದಾರೆ.


ಸಾಮಾಜಿಕ ಮಾಧ್ಯಮ ಬಳಕೆದಾರರು ಇತ್ತೀಚಿನ ದಿನಗಳಲ್ಲಿ ತಮ್ಮ ಅನುಯಾಯಿಗಳನ್ನು ಹೆಚ್ಚಿಸಲು, ಹೆಚ್ಚು ಲೈಕ್ ಗಳನ್ನು ಪಡೆಯಲು ಮಾಡುವ ಕೆಲವೊಂದು ರೀಲ್ಸ್ ಗಳು ಅವರನ್ನು ತೊಂದರೆಗೆ ಸಿಲುಕಿಸುತ್ತದೆ. ಹೀಗಾಗಿ ಈ ವೈರಲ್ ವೀಡಿಯೊ ಆನ್‌ಲೈನ್ ಜವಾಬ್ದಾರಿಯ ಪ್ರಾಮುಖ್ಯತೆ ಮತ್ತು ಸಾಮಾಜಿಕ ಮಾಧ್ಯಮದ ಸಂಭಾವ್ಯ ಅಪಾಯಗಳನ್ನು ಎತ್ತಿ ತೋರಿಸುತ್ತದೆ. ಇದರಿಂದ ಪ್ರತಿಯೊಬ್ಬರೂ ಕಲಿಯಬೇಕಾದ ಕೆಲವು ಸಂಗತಿಗಳಿವೆ.

ಇದನ್ನೂ ಓದಿ: Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಆನ್ ಲೈನ್ ನಲ್ಲಿ ಏನಾದರೂ ಪೋಸ್ಟ್ ಮಾಡುವ ಮೊದಲು ಯೋಚಿಸಿ. ಒಮ್ಮೆ ಏನನ್ನಾದರೂ ಆನ್‌ಲೈನ್‌ನಲ್ಲಿ ಹಂಚಿಕೊಂಡರೆ ಬಳಿಕ ಅದನ್ನು ಸಂಪೂರ್ಣವಾಗಿ ಅಳಿಸಲು ಕಷ್ಟವಾಗಬಹುದು ಅಥವಾ ಅಸಾಧ್ಯವಾಗಬಹುದು. ಅನುಯಾಯಿಗಳ ಬಗ್ಗೆ ಗಮನವಿರಲಿ. ನಿಮಗೆ ಹಾಸ್ಯವಾಗಿ ಕಾಣುವ ಕೆಲವು ಸಂಗತಿಗಳು ಕೆಲವರಿಗೆ ಗ್ರಹಿಸಲು ಕಷ್ಟವಾಗಬಹುದು. ಇದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು.

ಅದೇ ರೀತಿ ಮುಕ್ತ ಸಂವಹನವು ಮುಖ್ಯ. ಆನ್‌ಲೈನ್ ಸುರಕ್ಷತೆ ಮತ್ತು ಜವಾಬ್ದಾರಿಯುತ ಸಾಮಾಜಿಕ ಮಾಧ್ಯಮ ಬಳಕೆಯ ಕುರಿತು ಪೋಷಕರು ತಮ್ಮ ಮಕ್ಕಳೊಂದಿಗೆ ಮುಕ್ತ ಸಂಭಾಷಣೆಗಳನ್ನು ನಡೆಸುವುದು ಕೂಡ ಬಹು ಮುಖ್ಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Viral Video: ಸೋಷಿಯಲ್ ಮೀಡಿಯಾದಲ್ಲಿ ಈಗ ರೀಲ್ಸ್‌ಗಳದ್ದೇ ಹಾವಳಿ. ಒಬ್ಬರಿಗಿಂತ ಇನ್ನೊಬ್ಬರು ತಾವು ಮುಂದೆ ಎನ್ನುವ ಹಾಗೇ ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಾರೆ. ಈ ರೀಲ್ಸ್‌ಗಳನ್ನು ನೋಡುವಾಗ ಎದೆ ಝಲ್ ಅನ್ನುತ್ತದೆ.ವ್ಯಕ್ತಿಯೊಬ್ಬರು ಮೆಟ್ಟಿಲುಗಳ ಮೇಲೆ ಬೈಕ್ ಓಡಿಸುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೊ ನೋಡಲು ರೋಮಾಂಚನಕಾರಿಯಾಗಿದ್ದು, ನೋಡುಗರನ್ನು ಬೆರಗುಗೊಳಿಸುವುದಂತು ಸತ್ಯ. ಆದರೆ ಈ ಸ್ಟಂಟ್ ಅಪಾಯಕಾರಿಯಾಗಿದ್ದು, ಒಂದು ವೇಳೆ ಎಡವಿ ಬಿದ್ದರೆ ಸಾವಿಗೆ ಕಾರಣವಾಗಬಹುದು.

VISTARANEWS.COM


on

Viral Video
Koo

ಇತ್ತೀಚಿನ ದಿನಗಳಲ್ಲಿ ಜನರು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು, ಹೆಚ್ಚು ಫಾಲೋವರ್ಸ್ ಅನ್ನು ಪಡೆಯಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತಾರೆ. ಅದಕ್ಕಾಗಿ ಅಪಾಯಕಾರಿ ರೀಲ್ಸ್ ಮಾಡುವುದು, ಸ್ಟಂಟ್ ಮಾಡುವುದು ಮುಂತಾದವುಗಳನ್ನು ಮಾಡುತ್ತಿರುತ್ತಾರೆ. ಈ ಬಗ್ಗೆ ಪೊಲೀಸರು ಎಚ್ಚರಿಕೆ ನೀಡಿದರೂ ಕೂಡ ಜನರು ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುವಂತಹ ಕೆಲಸ ಬಿಟ್ಟಿಲ್ಲ. ಇದೀಗ ವ್ಯಕ್ತಿಯೊಬ್ಬ ಬೈಕ್‌ನಿಂದ ಮೆಟ್ಟಿಲು ಹತ್ತುವ ದುಸ್ಸಾಹಸ ಮಾಡಿದ್ದು, ಈ ವಿಡಿಯೊ ವೈರಲ್ (Viral Video) ಆಗಿದೆ.

ಈ ವಿಡಿಯೊದಲ್ಲಿ ವ್ಯಕ್ತಿಯೊಬ್ಬ ಎತ್ತರವಾಗಿರುವ ಮೆಟ್ಟಿಲುಗಳನ್ನು ತಮ್ಮ ಬೈಕ್ ಮೂಲಕ ಹತ್ತುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊ ನೋಡಲು ರೋಮಾಂಚನಕಾರಿಯಾಗಿದ್ದು, ನೋಡುಗರನ್ನು ಬೆರಗುಗೊಳಿಸುವುದಂತು ಸತ್ಯ. ಆದರೆ ಈ ಸ್ಟಂಟ್ ಅಪಾಯಕಾರಿಯಾಗಿದ್ದು, ಒಂದು ವೇಳೆ ಎಡವಿ ಬಿದ್ದರೆ ಸಾವಿಗೆ ಕಾರಣವಾಗಬಹುದು. ಇದನ್ನು ಸ್ಟಂಟ್ ಮಾಡುವಲ್ಲಿ ಪರಿಣತರು ಮಾತ್ರ ಮಾಡಬಹುದು ಎಂಬುದನ್ನು ವೀಕ್ಷಕರು ತಿಳಿದಿರಬೇಕು.

ಈ ಬೈಕ್ ಸವಾರಿ ವಿಡಿಯೊವನ್ನು ಲೂಯಿಜಿನ್ಹೋ ಫೆರೆರಾ (@luizinhoferreiraa) ಎಂಬುವವರು ತಮ್ಮ ಇನ್ ಸ್ಟಾಗ್ರಾಂ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ಕೆಲವೇ ದಿನಗಳಲ್ಲಿ ವೈರಲ್ ಆಗಿದ್ದು, 2.3 ಕೋಟಿಗೂ ಹೆಚ್ಚು ವೀವ್ಸ್‌ಗಳನ್ನು ಗಳಿಸಿದೆ. ಈ ಪೋಸ್ಟ್ ಅನ್ನು 9.8 ಲಕ್ಷಕ್ಕೂ ಹೆಚ್ಚು ವೀಕ್ಷಕರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ವೀಡಿಯೊಗೆ ಕಾಮೆಂಟ್ ಮಾಡಿದ್ದಾರೆ. ಮೆಟ್ಟಿಲುಗಳ ಮೇಲೆ ವ್ಯಕ್ತಿ ಬಹಳ ಸುಲಭವಾಗಿ ಬೈಕ್ ಸವಾರಿ ಮಾಡುತ್ತಿರುವುದನ್ನು ನೋಡಿದ ನೆಟ್ಟಿಗರು ಆಶ್ಚರ್ಯಚಕಿತರಾದರು. ಯಮಹಾ ಕಂಪನಿಯು ಇದನ್ನು ತಮ್ಮ ಅಧಿಕೃತ ಜಾಹೀರಾತಾಗಿ ಮಾಡಬೇಕು ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಇನ್ನೊಬ್ಬರು ವ್ಯಕ್ತಿಯ ಸ್ಟಂಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಮತ್ತೊಬ್ಬರು ವ್ಯಕ್ತಿಯನ್ನು ಸ್ಟಂಟ್ ಮಾಸ್ಟರ್ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

ಬೈಕ್ ಸಂಬಂಧಿತ ಸ್ಟಂಟ್ ವೀಡಿಯೊಗಳನ್ನು ಪೋಸ್ಟ್ ಮಾಡಲು ಈ ಬಳಕೆದಾರರು ಹೆಚ್ಚು ಪ್ರಸಿದ್ಧರಾಗಿದ್ದಾರೆ. ಹಾಗಾಗಿ ಇವರು ತಮ್ಮ ಇನ್‌ಸ್ಟಾಗ್ರಾಂ ಹ್ಯಾಂಡಲ್ ನಲ್ಲಿ 91 ಸಾವಿರಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಮತ್ತೊಂದು ವೀಡಿಯೊದಲ್ಲಿ, ಅವರು ಬೈಕ್ ಸವಾರಿ ಮೂಲಕ ಮೆಟ್ಟಿಲುಗಳಿಂದ ಕೆಳಗೆ ಇಳಿಯುತ್ತಿರುವುದು ಕಂಡುಬಂದಿದೆ, ಇದು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ.

Continue Reading

ವೈರಲ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಹೊರಟವರಿಗೆ ಕಾದಿತ್ತು ಬಿಗ್‌ ಶಾಕ್‌; 11ಗಂಟೆ ದಟ್ಟ ಕಾಡಿನಲ್ಲೇ ಸಿಲುಕಿದ ವಿದ್ಯಾರ್ಥಿಗಳು

Google Map: ಒಡಿಶಾದ ಧೆಂಕನಲ್‌ ಕಾಡಿನಲ್ಲಿ ಈ ಘಟನೆ ನಡೆದಿದ್ದು, ಕಟ್ಟಕ್‌ ಕಾಲೇಜಿ ವಿದ್ಯಾರ್ಥಿಗಳಾದ ಸುಜಿತ್ಯಾ ಸಾಹು, ಪ್ರಕಾಶ್‌ ಮೊಹಂಟಿ, ಸುಭನ್‌ ಮೊಹಪತ್ರ, ಹಿಮಾಂಶು ದಾಸ್‌ ಮತ್ತು ಆರಕ್ಷಿತಾ ಮೊಹಪತ್ರ ತಮ್ಮ ತಮ್ಮ ಬೈಕಿನಲ್ಲಿ ಸಪ್ತಸಜ್ಯ ದೇವಸ್ಥಾನಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದರು. ಜೂ.30ರಂದು ಬೆಳಗ್ಗೆ 11 ಗಂಟೆಗೆ ದೇಗುಲಕ್ಕೆ ತಲುಪಿದ್ದರು. ಬಳಿಕ ಅಲ್ಲಿಂದ ಎತ್ತರದ ಗುಡ್ಡದಲ್ಲಿರುವ ದೇಗುಲಮತ್ತು ವಿಷ್ಣು ಬಾಬಾ ಮಠಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲಿಂದ ವಾಪಾಸ್‌ ಬರುತ್ತಾ ಗೂಗಲ್‌ ಮ್ಯಾಪ್‌ ಹಾಕಿದ್ದರು. ಅದು ಹೇಳಿದ ದಿಕ್ಕಿಗೆ ಹೋಗುತ್ತಾ ಹೋಗುತ್ತಾ ಐವರು ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದರು.

VISTARANEWS.COM


on

Google Map
Koo

ಭುವನೇಶ್ವರ: ಇತ್ತೀಚೆಗೆ ಗೂಗಲ್‌ ಮ್ಯಾಪ್‌ ದಾರಿ ತೋರಿಸುವುದಕ್ಕಿಂತ ದಾರಿ ತಪ್ಪಿಸುವ ಘಟನೆಗಳೇ ಹೆಚ್ಚಾಗಿ ನಡೆಯುತ್ತಿವೆ. ಕೆಲವು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ ಘಟನೆ ಕೇರಳದಲ್ಲಿ ನಡೆದಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಒಡಿಶಾದಲ್ಲಿ ನಡೆದಿದ್ದು, ಗೂಗಲ್‌ ಮ್ಯಾಪ್‌ ಯುವಕರಿಗೆ ದುಃಸ್ವಪ್ನವಾಗಿ ಕಾಡಿದೆ. ಗೂಗಲ್‌ ಮ್ಯಾಪ್‌ ಸೂಚನೆಯಂತೆ ಹೊರಟ ಐವರು ಸ್ನೇಹಿತರು ದಟ್ಟ ಕಾಡಿನ ನಡುವೆ ಸಿಲುಕಿದ್ದು, ಬರೋಬ್ಬರಿ 11ಗಂಟೆಗಳ ಬಳಿಕ ಪಾರಾಗಿದ್ದಾರೆ.

ಏನಿದು ಘಟನೆ?

ಒಡಿಶಾದ ಧೆಂಕನಲ್‌ ಕಾಡಿನಲ್ಲಿ ಈ ಘಟನೆ ನಡೆದಿದ್ದು, ಕಟ್ಟಕ್‌ ಕಾಲೇಜಿ ವಿದ್ಯಾರ್ಥಿಗಳಾದ ಸುಜಿತ್ಯಾ ಸಾಹು, ಪ್ರಕಾಶ್‌ ಮೊಹಂಟಿ, ಸುಭನ್‌ ಮೊಹಪತ್ರ, ಹಿಮಾಂಶು ದಾಸ್‌ ಮತ್ತು ಆರಕ್ಷಿತಾ ಮೊಹಪತ್ರ ತಮ್ಮ ತಮ್ಮ ಬೈಕಿನಲ್ಲಿ ಸಪ್ತಸಜ್ಯ ದೇವಸ್ಥಾನಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದರು. ಜೂ.30ರಂದು ಬೆಳಗ್ಗೆ 11 ಗಂಟೆಗೆ ದೇಗುಲಕ್ಕೆ ತಲುಪಿದ್ದರು. ಬಳಿಕ ಅಲ್ಲಿಂದ ಎತ್ತರದ ಗುಡ್ಡದಲ್ಲಿರುವ ದೇಗುಲಮತ್ತು ವಿಷ್ಣು ಬಾಬಾ ಮಠಕ್ಕೆ ಭೇಟಿ ಕೊಟ್ಟಿದ್ದರು.

ಅಲ್ಲಿಂದ ವಾಪಾಸ್‌ ಬರುತ್ತಾ ಗೂಗಲ್‌ ಮ್ಯಾಪ್‌ ಹಾಕಿದ್ದರು. ಅದು ಹೇಳಿದ ದಿಕ್ಕಿಗೆ ಹೋಗುತ್ತಾ ಹೋಗುತ್ತಾ ಐವರು ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದರು. ಮಧ್ಯಾಹ್ನ 2ಗಂಟೆ ಹೊತ್ತಿಗೆ ಅವರು ದಟ್ಟ ಕಾಡಿನ ನಡುವೆ ದಾರಿ ಹುಡುಕಲು ಪ್ರಯತ್ನಿಸಿ ವಿಫಲರಾಗುತ್ತಾರೆ. ಹೊಟ್ಟೆಗೆ ಊಟ, ನೀರಿಲ್ಲದೇ ಎಲ್ಲರೂ ಸುಸ್ತಾಗಿರುತ್ತಾರೆ. ಸಾಗುತ್ತಾ ಸಾಗುತ್ತಾ ಅವರು ಸಂಜೆ5:30ರ ಹೊತ್ತಿಗೆ ಭೌಶುನಿ ಕೋಲ ಪ್ರದೇಶಕ್ಕೆ ತಲುಪುತ್ತಾರೆ. ಅಲ್ಲಿ ಜನ ಸಂಪರ್ಕಕ್ಕೆ ಯತ್ನಿಸುತ್ತಾರೆ. ಅವರಲ್ಲಿ ಒಬ್ಬ ಪೊಲೀಸರನ್ನು ಸಂಪರ್ಕಿಸುವಲ್ಲಿ ಯಶಸ್ವಿ ಆಗುತ್ತಾನೆ.

ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ

ಯುವಕರು ಕಾಡಿನಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ಸತತ 11ಗಂಟೆಗಳ ಕಾರ್ಯಾಚರಣೆ ಬಳಿಕ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್‌ ಎಲ್ಲರೂ ಸುರಕ್ಷಿತವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ ಘಟನೆ ಕೇರಳದ (kerala) ಕಾಸರಗೋಡು (kasaragodu) ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ವಾಹನ ಮರಕ್ಕೆ ಸಿಲುಕಿದ್ದರಿಂದ ಯುವಕರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೇರಳದ ಕಾಸರಗೋಡಿನ ಪಲ್ಲಂಚಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಕಾರಿನಲ್ಲಿ ಸಿಲುಕಿದ್ದ ಯುವಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಹೈದರಾಬಾದ್ ಮೂಲದ ಪ್ರವಾಸಿಗರಾದ ಯುವಕರು ಬೆಳ್ಳಂಬೆಳಗ್ಗೆ ಹತ್ತಿರದ ಆಸ್ಪತ್ರೆಗೆ ಹೋಗುತ್ತಿದ್ದರು. ಇದಕ್ಕಾಗಿ ಅವರು ಗೂಗಲ್ ನಕ್ಷೆಯನ್ನು ಬಳಸಿಕೊಂಡು ಮುಂದುವರಿಯುತ್ತಿದ್ದರು. ಎಂದು ಯುವಕರಲ್ಲಿ ಒಬ್ಬರಾದ ಅಬ್ದುಲ್ ರಶೀದ್ ತಿಳಿಸಿದ್ದಾರೆ.

ಗೂಗಲ್ ನಕ್ಷೆ ಕಿರಿದಾದ ರಸ್ತೆಯನ್ನು ತೋರಿಸಿತ್ತು. ಹೀಗಾಗಿ ಕಾರನ್ನು ಮುಂದೆ ಓಡಿಸಿದೆವು. ವಾಹನದ ಹೆಡ್‌ಲೈಟ್ ಅನ್ನು ಬಳಸಿದಾಗ ನಮ್ಮ ಮುಂದೆ ಸ್ವಲ್ಪ ನೀರು ಇದೆ ಎಂದು ಅನಿಸಿತು. ಆದರೆ ಎರಡು ಕಡೆ ನದಿ ಮತ್ತು ಮಧ್ಯದಲ್ಲಿ ಸೇತುವೆ ಇರುವುದು ಗೊತ್ತಾಗಲಿಲ್ಲ. ಸೇತುವೆಗೆ ತಡೆ ಗೋಡೆಯೂ ಇರಲಿಲ್ಲ ಎಂದು ಅವರು ತಿಳಿಸಿದರು.
ಕಾರು ಹಠಾತ್ತನೆ ನೀರಿನ ಪ್ರವಾಹಕ್ಕೆ ಸಿಲುಕಲು ಪ್ರಾರಂಭಿಸಿತು. ಆದರೆ ಅನಂತರ ನದಿಯ ದಡದಲ್ಲಿರುವ ಮರದಲ್ಲಿ ಸಿಲುಕಿಕೊಂಡಿತು. ಅಷ್ಟರಲ್ಲಾಗಲೇ ಕಾರಿನ ಬಾಗಿಲು ತೆರೆದು ವಾಹನದಿಂದ ಹೊರಬಂದು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸಂಪರ್ಕಿಸಿ ಸ್ಥಳವನ್ನು ತಿಳಿಸಿದೆವು. ಅನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಗ್ಗಗಳನ್ನು ಬಳಸಿ ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ ಎಂದು ಅವರು ವಿವರಿಸಿದರು. ನಾವು ನಮ್ಮ ಜೀವ ಉಳಿಸಿಕೊಳ್ಳಬಹುದು ಎಂದು ಕನಸಿನಲ್ಲೂ ಯೋಚಸಲಿಲ್ಲ. ಇದು ಪುನರ್ಜನ್ಮ ಎಂದು ಭಾವಿಸುತ್ತೇವೆ ಎಂದು ರಶೀದ್ ಹೇಳಿದರು.

ಇದು ಮೊದಲಲ್ಲ

ಗೂಗಲ್ ನಕ್ಷೆ ತಪ್ಪು ದಾರಿ ತೋರಿಸಿರುವುದು ಇದು ಮೊದಲಲ್ಲ. ಕಳೆದ ತಿಂಗಳು, ಹೈದರಾಬಾದ್‌ನಿಂದ ಪ್ರವಾಸಿಗರ ಗುಂಪೊಂದು ಕೊಟ್ಟಾಯಂನ ಕುರುಪ್ಪಂಥಾರ ಬಳಿ ಉಕ್ಕಿ ಹರಿಯುತ್ತಿದ್ದ ನದಿಗೆ ವಾಹನವನ್ನು ಓಡಿಸಿತ್ತು. ಸಮೀಪದ ಪೊಲೀಸ್ ಗಸ್ತು ಘಟಕ ಮತ್ತು ಸ್ಥಳೀಯ ನಿವಾಸಿಗಳ ಪ್ರಯತ್ನದಿಂದಾಗಿ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದರೂ ಅವರ ವಾಹನವು ಸಂಪೂರ್ಣವಾಗಿ ಮುಳುಗಿತ್ತು.

ಇದನ್ನೂ ಓದಿ: Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Continue Reading

ಕ್ರೀಡೆ

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

AR Rahman: ಭಾರತೀಯ ಫುಟ್ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ಜೀವನವನ್ನು ಆಧರಿಸಿದ ಅಜಯ್ ದೇವಗನ್ ಅವರ ‘ಮೈದಾನ್’ ಸಿನೆಮಾದ ‘ಟೀಮ್ ಇಂಡಿಯಾ ಹೈ ಹಮ್’ ಎಂಬ ಹಾಡನ್ನು ಹಾಡುವ ಮೂಲಕ ಟಿ20 ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಎಆರ್ ರೆಹಮಾನ್ ಅಭಿನಂಧಿಸಿದ್ದಾರೆ.

VISTARANEWS.COM


on

AR Rahman
Koo

ಮುಂಬಯಿ: ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು. ಈ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎಆರ್ ರೆಹಮಾನ್(AR Rahman) ವಿಶೇಷ ಹಾಡೊಂದರ ಮೂಲಕ ಅಭಿನಂಧಿಸಿದ್ದಾರೆ.

‘ಟೀಮ್ ಇಂಡಿಯಾ ಹೈ ಹಮ್’ ಎಂಬ ಶೀರ್ಷಿಕೆಯ ಹಾಡೊಂದನ್ನು ಹಾಡುವ ಮೂಲಕ ವಿಶ್ವಕಪ್​ ಗೆದ್ದ ತಂಡಕ್ಕೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊ ಸಾಂಗ್​ ಸದ್ಯ ಸಾಮಾಜಿಕ ಕಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಹಾಡಿನ ಲಿಂಕ್​ ಅನ್ನು ಎಆರ್ ರೆಹಮಾನ್ ಅವರು ತಮ್ಮ ಅಧಿಕೃತ ಟ್ವೀಟರ್​ ಎಕ್ಸ್​ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ರೆಹಮಾನ್ ಅವರು ತಮ್ಮ ಮಹಾಕಾವ್ಯವನ್ನು ವಿಶ್ವಕಪ್ ವಿಜಯದ ಸಲುವಾಗಿ ಮೆನ್ ಇನ್ ಬ್ಲೂಗೆ ಅರ್ಪಿಸಿದರು. ವೀಡಿಯೊದಲ್ಲಿ, ಭಾರತೀಯ ಫುಟ್ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ಜೀವನವನ್ನು ಆಧರಿಸಿದ ಅಜಯ್ ದೇವಗನ್ ಅವರ ‘ಮೈದಾನ್’ ಸಿನೆಮಾದ ‘ಟೀಮ್ ಇಂಡಿಯಾ ಹೈ ಹಮ್’ ಹಾಡು ಹಾಡುತ್ತಿರುವುದನ್ನು ಕಾಣಬಹುದು. ಮೂಲ ಹಾಡನ್ನು ಎಆರ್ ರೆಹಮಾನ್ ಮತ್ತು ನಕುಲ್ ಅಭ್ಯಂಕರ್ ಹಾಡಿದ್ದಾರೆ.


ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಇದನ್ನೂ ಓದಿ Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

ಒಂದು ಪಂದ್ಯ – ಹಲವು ಪಾಠ!

ಭಾರತ ಟಿ 20 ವಿಶ್ವಕಪ್ಪನ್ನು ಅರ್ಹವಾಗಿ ಗೆದ್ದು ಬೀಗಿತು, ವಿರಾಟ್ ಕೊಹ್ಲಿ (Virat Kohli) ಮತ್ತು ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಗೆಲುವಿನ ವಿದಾಯ ನೀಡಿತು, ರೋಹಿತ್ ಶರ್ಮಾ ತನ್ನ ಮೊದಲ ಐಸಿಸಿ ಟ್ರೋಫಿ ಲಿಫ್ಟ್ ಮಾಡಿದರು ಅನ್ನುವುದು ಮುಂದಿನ ಇತಿಹಾಸದ ಭಾಗ. ತಾಳ್ಮೆಯಿಂದ ನರಗಳನ್ನು ಬಿಗಿ ಹಿಡಿದು ಆಡಿದರೆ ಯಾವ ಪಂದ್ಯವನ್ನೂ ಗೆಲ್ಲಲು ಸಾಧ್ಯ ಎನ್ನುವುದು ಕ್ರಿಕೆಟ್ ಕಲಿಸಿದ ಜೀವನದ ಪಾಠ. ಕ್ಲಾಸೆನ್ ಮತ್ತು ಕ್ಲಿಂಟನ್ ಡಿಕಾಕ್ ಅವರು ಕ್ರೀಸಿನಲ್ಲಿ ಗಟ್ಟಿ ನಿಂತು ಆಡುತ್ತಿದ್ದಾಗ ದಕ್ಷಿಣ ಆಫ್ರಿಕಾ ಗೆದ್ದೇ ಬಿಟ್ಟಿತು ಎಂದು ಭಾವಿಸಿಕೊಂಡು ಟಿವಿ ಆಫ್ ಮಾಡಿ ಮಲಗಿದವರಿಗೆ ಇದು Life Time Lesson!

ಐಪಿಎಲ್ ಪಂದ್ಯಗಳ ಉದ್ದಕ್ಕೂ ಬಾಸುಂಡೆ ಬರುವ ಹಾಗೆ ಹೊಡೆಸಿಕೊಂಡಿದ್ದ ಭಾರತದ ಬೌಲರಗಳಿಗೆ ಈ ವಿಶ್ವಕಪ್ ಸ್ಟಾರ್ ವ್ಯಾಲ್ಯೂ ಕೊಟ್ಟಿತು ಅನ್ನುವುದು ಭರತವಾಕ್ಯ.

Continue Reading

ಕರ್ನಾಟಕ

Road Rage Case: ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಕಾರು ಮಾಲೀಕನ ಕಾಪಾಡಿದ ಡ್ಯಾಶ್‌ ಕ್ಯಾಮೆರಾ; ವಿಡಿಯೊ ಇದೆ

Road Rage Case: ಬೆಂಗಳೂರಿನ ಹೊರವಲಯದ ವರ್ತೂರು ರಸ್ತೆಯಲ್ಲಿ ಮತ್ತೊಂದು ರೋಡ್‌ ರೇಜ್‌ ಪ್ರಕರಣ ನಡೆದಿದೆ. ಡ್ಯಾಶ್‌ ಕ್ಯಾಮೆರಾ ಇದ್ದಿದ್ದರಿಂದ ಹೇಗೆ ಬಚಾವ್‌ ಆದರು ಎಂನ ಬಗ್ಗೆ ಕಾರಿನ ಮಾಲೀಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Road Rage Case
Koo

ಬೆಂಗಳೂರು: ರಾಜಧಾನಿಯಲ್ಲಿ ರೋಡ್‌ ರೇಜ್‌ ಪ್ರಕರಣಗಳ (Road Rage Case) ಸಂಖ್ಯೆ ಹೆಚ್ಚುತ್ತಿದೆ. ರಸ್ತೆಯಲ್ಲಿ ಜನ ತಮ್ಮ ಪಾಡಿಗೆ ತಾವು ಹೋಗುತ್ತಿದ್ದರೂ ವಾಹನ ಅಡ್ಡಗಟ್ಟಿ ಕಿರಿಕ್‌ ಮಾಡುವ ಕಿಡಿಗೇಡಿಗಳನ್ನು ಕಾಣುತ್ತಿರುತ್ತೇವೆ. ಇದೇ ರೀತಿ ನಗರದಲ್ಲಿ ಒಬ್ಬ ವ್ಯಕ್ತಿಗೆ ಕಹಿ ಅನುಭವ ಆಗಿದ್ದು, ಕಾರಿನಲ್ಲಿ ಡ್ಯಾಶ್‌ ಕ್ಯಾಮೆರಾ ಇದ್ದಿದ್ದರಿಂದ ಆತ ಬಚಾವ್‌ ಆಗಿದ್ದಾನೆ.

ರೋಡ್‌ ರೇಜ್‌ ಪ್ರಕರಣದ ಬಗ್ಗೆ ಪಿಯೂಷ್‌ ಕುಕರ್‌ ಎಂಬ ವ್ಯಕ್ತಿ ಎಕ್ಸ್‌ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಡ್ಯಾಶ್‌ ಕ್ಯಾಮೆರಾದಲ್ಲಿ ರೆಕಾರ್ಡ್‌ ಆದ ವಿಡಿಯೊವನ್ನು ಹಾಕಿದ್ದಾರೆ. ನಗರದ ಹೊರವಲಯದ ವರ್ತೂರು ರಸ್ತೆಯ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ ಬಳಿ ಸೋಮವಾರ ತಡರಾತ್ರಿ (ಜುಲೈ 1) ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಡಾಶ್‌ ಕ್ಯಾಮ್‌ ಅಗತ್ಯವಿಲ್ಲ ಎಂದು ಯಾರಾದರೂ ನಿಮಗೆ ಹೇಳಿದಾಗ, ಈ ವಿಡಿಯೊವನ್ನು ಅವರಿಗೆ ತೋರಿಸಿ. ಬೆಂಗಳೂರು ಹೊರವಲಯದಲ್ಲಿ ರೋಡ್‌ ರೇಜ್‌ ಘಟನೆ ನಡೆದಿದ್ದು, ರಾತ್ರಿ 10.25ರ ಸುಮಾರಿಗೆ ನಗರದ ಹೊರವಲಯದ ವರ್ತೂರು ರಸ್ತೆಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ ಬಳಿ ನನಗೆ ಕಿರುಕುಳ ನೀಡಲಾಗಿದೆ. ಡ್ಯಾಶ್‌ ಕ್ಯಾಮೆರಾ ಇದ್ದ ಹಿನ್ನೆಲೆಯಲ್ಲಿ ತಾನು ಪಾರಾದೆ ಎಂದು ಪಿಯೂಷ್‌ ಕುಕರ್‌ ಹೇಳಿದ್ದಾರೆ.

ಪಿಯೂಷ್‌ ಕಾರಿನಲ್ಲಿ ಹೋಗುತ್ತಿದ್ದಾಗ ಒಬ್ಬ ಸ್ಕೂಟರ್‌ ಚಾಲಕ ದಾರಿ ಬಿಡದೆ ನಡುರಸ್ತೆಯಲ್ಲಿ ಹೋಗುತ್ತಿರುವುದು ವಿಡಿಯೊದಲ್ಲಿ ಕಾಣುತ್ತದೆ. ಅದಾದ ಬಳಿಕ ಬೊಲೆರೋ ವಾಹನ ಚಾಲಕ ಏಕಾಏಕಿ ಬಂದು ಅಡ್ಡಗಟ್ಟುತ್ತಾನೆ. ನಂತರ ಕಾರಿನ ಬಳಿ ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಗಲಭೆಗೆ ನಾನು ಯಾವುದೇ ರೀತಿ ಪ್ರಚೋದನೆ ನೀಡದಿದ್ದರೂ ಆತನೇ ಹಿಂದಿನಿಂದ ಜೋರಾಗಿ ಹಾರ್ನ್‌ ಮಾಡುತ್ತಿದ್ದ. ನಂತರ ಆತ ಕಾರಿನ ಹಿಂಬದಿ ತೆರಳಿ ಡ್ಯಾಶ್‌ ಕ್ಯಾಮೆರಾ ಇರುವುದನ್ನು ಗಮನಿಸಿ ವಾಪಸ್‌ ಬಂದಿದ್ದಾನೆ.

ಬೊಲೆರೋ ವಾಹನ ಚಾಲಕ ಪಿಯೂಷ್‌ ಜತೆ ವಾಗ್ವಾದ ನಡೆಸುತ್ತಿದ್ದಾಗ, ಮತ್ತೊಬ್ಬ ವ್ಯಕ್ತಿ ಸ್ಕೂಟರ್‌ನಲ್ಲಿ ಯೂ ಟರ್ನ್‌ ಮಾಡಿಕೊಂಡು ಕಾರಿನ ಬಳಿ ಬರುತ್ತಾನೆ. ಸ್ಕೂಟರ್‌ ಕಾರಿನ ಹತ್ತಿರಕ್ಕೆ ಬಂದಾಗ ಬೊಲೆರೋ ವಾಹನ ಚಾಲಕ, ಕಾರಿನಲ್ಲಿ ಡ್ಯಾಶ್‌ ಕ್ಯಾಮ್‌ ಇರುವ ಬಗ್ಗೆ ಆತನಿಗೆ ಸಂಜ್ಞೆ ಮಾಡುತ್ತಾನೆ. ಆಗ ಇಬ್ಬರೂ ಅಲ್ಲಿಂದ ನಿರ್ಗಮಿಸುತ್ತಾರೆ. ಇದರಿಂದ ಕಾರಿನಲ್ಲಿ ಡ್ಯಾಶ್‌ ಕ್ಯಾಮೆರಾ ಇದ್ದರೆ ಉಪಯೋಗಕ್ಕೆ ಬರುತ್ತದೆ ಎಂದು ಪಿಯೂಷ್‌ ಸಲಹೆ ನೀಡಿದ್ದಾರೆ.

ಇದನ್ನೂ ಓದಿ | Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

ಇನ್ನು ಬೆಂಗಳೂರಿನಲ್ಲಿ, ವಿಶೇಷವಾಗಿ ಐಟಿ ಕಾರಿಡಾರ್‌ ಭಾಗದಲ್ಲಿ ಇಂತಹ ಘಟನೆಗಳು ಹೆಚ್ಚುತ್ತಿರುವುದರಿಂದ ರೋಡ್‌ ರೇಜ್‌ ಪ್ರಕರಣ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ. ತುರ್ತು ಸಂದರ್ಭಗಳಲ್ಲಿ 112 ಗೆ ಡಯಲ್ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Continue Reading
Advertisement
Akhilesh Yadav
ದೇಶ3 mins ago

Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Viral Video
Latest5 mins ago

Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Bike Accident
ಕರ್ನಾಟಕ7 mins ago

Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ

Heart Attack
ಕ್ರೀಡೆ10 mins ago

Heart Attack: ಬ್ಯಾಡ್ಮಿಂಟನ್​ ಆಡುತ್ತಿದ್ದಾಗಲೇ ಕುಸಿದು ಬಿದ್ದು  ಸಾವನ್ನಪ್ಪಿದ 17 ವರ್ಷದ ಶಟ್ಲರ್‌

Actor Kamal Haasan
Latest11 mins ago

Actor Kamal Haasan: ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಾಗಿ ನಟಿಸದಿರಲು ಇದೇ ಕಾರಣ!

Google Map
ವೈರಲ್ ನ್ಯೂಸ್14 mins ago

Google Map: ಗೂಗಲ್‌ ಮ್ಯಾಪ್‌ ನಂಬಿ ಹೊರಟವರಿಗೆ ಕಾದಿತ್ತು ಬಿಗ್‌ ಶಾಕ್‌; 11ಗಂಟೆ ದಟ್ಟ ಕಾಡಿನಲ್ಲೇ ಸಿಲುಕಿದ ವಿದ್ಯಾರ್ಥಿಗಳು

karnataka cm mallikarjun kharge siddaramiah dk shivakumar
ಪ್ರಮುಖ ಸುದ್ದಿ34 mins ago

Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

Student death
ಚಿತ್ರದುರ್ಗ46 mins ago

Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

MUDA site Cm Siddaramaiah says his wife was given MUDA site during BJP regimescandal
ಕರ್ನಾಟಕ1 hour ago

MUDA site scandal: ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

Highest Collection Movie
ಸಿನಿಮಾ1 hour ago

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ21 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌