Viral post | ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕೆಂದರೆ ಐಐಟಿ, ಐಐಎಂನಲ್ಲಿ ಓದಿರಬೇಕಾ?! - Vistara News

ವೈರಲ್ ನ್ಯೂಸ್

Viral post | ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕೆಂದರೆ ಐಐಟಿ, ಐಐಎಂನಲ್ಲಿ ಓದಿರಬೇಕಾ?!

ಬೆಂಗಳೂರಲ್ಲಿ ಕೆಲಸ ಬೇಕಾದರೂ ಬೇಗ ಸಿಗಬಹುದು ಆದರೆ, ಬಾಡಿಗೆ ಮನೆಯ ಓನರ್‌ ಷರತ್ತುಗಳಿಂದ ಪಾಸ್‌ ಆಗಿ ಮನೆ ಗಿಟ್ಟಿಸಿಕೊಳ್ಳುವುದು ಚಾಲೆಂಜೇ ಸರಿ. ಅಂಥ ಇನ್ನೊಂದು ನಿದರ್ಶನ ಇಲ್ಲಿದೆ.

VISTARANEWS.COM


on

bangalore flats
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಡಿಗೆ ಮನೆ ಹುಡುಕುವುದು ಎಷ್ಟು ಕಷ್ಟ ಎಂಬುದು ಹುಡುಕಿದವರಿಗಷ್ಟೇ ಗೊತ್ತು. ʻಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡುʼ ಎಂಬುದು ಗಾದೆಗೀಗ, ʻಬೆಂಗಳೂರಲ್ಲಿ ಬಾಡಿಗೆ ಮನೆ ಹಿಡಿದು ನೋಡುʼ ಎಂದೂ ಸೇರಿಸಬೇಕಾದ ಕಾಲ ಬಂದಿದೆ. ಯಾಕೆಂದರೆ, ಇಲ್ಲಿ, ನಮಗೆ ಬೇಕಾದಂತೆ, ಒಂದು ಬಾಡಿಗೆ ಮನೆ, ಅಪಾರ್ಟ್‌ಮೆಂಟ್‌ ಸಿಗುವುದು ಅಷ್ಟು ಸುಲಭವಲ್ಲ. ಅದರಲ್ಲೂ ನಾವು ಕೆಲಸ ಮಾಡುವ ಏರಿಯಾದಲ್ಲೇ, ನಮಗೆ ಬೇಕಾದಂತಿರುವ ಮನೆಗಳನ್ನು ಹುಡುಕಿ, ಅವುಗಳಲ್ಲಿ ಕೆಲವನ್ನು ನೋಡಿ, ಆಮೇಲೆ, ಮನೆಯೊಡೆಯರು ಹಾಕುವ ನೂರೆಂಟು ಷರತ್ತುಗಳಿಗೂ ತಲೆಯಲ್ಲಾಡಿಸಿ, ಅವರ ಎಲ್ಲಾ ನಿಯಮಗಳಿಗೂ ಒಕೆ ಅಂದ ಮೇಲೆ, ನಮ್ಮ ಪೂರ್ವಾಪರಗಳನ್ನು ವಿಚಾರಿಸಿ ಒಕೆ ಆದ ಮೇಲೆ ಬಾಡಿಗೆ ಮನೆ ಗಿಟ್ಟಿಸಿಕೊಳ್ಳುವುದು ಎಂದರೆ ಅದೊಂದು ದೊಡ್ಡ ಅಶ್ವಮೇಧ ಯಾಗ ಮಾಡಿದಂತೆ ಎಂಬ ಸತ್ಯ ಎಲ್ಲರಿಗೂ ಗೊತ್ತಿದೆ. ಬೆಂಗಳೂರಲ್ಲಿ ಕೆಲಸ ಬೇಕಾದರೂ ಬೇಗ ಸಿಗಬಹುದು ಆದರೆ, ಬಾಡಿಗೆ ಮನೆಯ ಓನರ್‌ ಷರತ್ತುಗಳಿಂದ ಪಾಸ್‌ ಆಗಿ ಮನೆ ಗಿಟ್ಟಿಸಿಕೊಳ್ಳುವುದು ಚಾಲೆಂಜೇ ಸರಿ ಎಂದು ಸಿಂಗಲ್‌ ಸ್ಟೇಟಸ್ಸಿನಲ್ಲಿರುವವರ ನಡುವೆ ಚಾಲ್ತಿಯಲ್ಲಿರುವ ಮಾತು.

ಇಂಥದ್ದೊಂದು ವಿಚಾರದಲ್ಲಿ, ಹಲವರನ್ನು ಆಶ್ಚರ್ಯಗೊಳಿಸುವ ಇನ್ನೂ ಒಂದು ಷರತ್ತು ಸೇರಿಕೊಂಡಿದೆ. ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ, ಬೆಂಗಳೂರಿನಲ್ಲಿ ಫ್ಲ್ಯಾಟ್‌ ಓನರುಗಳಿಗೆ ಬಾಡಿಗೆದಾರರು ಪ್ರತಿಷ್ಠಿತ ಐಐಟಿ, ಐಐಎಂ, ಐಎಸ್‌ಬಿಗಳಲ್ಲಿ ಪದವೀಧರರನ್ನೂ ಬಯಸುತ್ತಾರೆ ಎಂಬ ಶಾಕಿಂಗ್‌ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಜಾಲತಾಣದಲ್ಲಿ ವ್ಯಾಪಕ ಚರ್ಚೆಗಳೂ ನಡೆಯುತ್ತಿವೆ.

ಪ್ರಿಯಾಂಶ್‌ ಜೈನ್‌ ಎಂಬ ವ್ಯಕ್ತಿಯೊಬ್ಬರು ಜಾಲತಾಣದಲ್ಲಿ, ʻಬೆಂಗಳೂರಿನ ಫ್ಲ್ಯಾಟು ಓನರುಗಳೇ, ಯಾಕೆ ಹೀಗೆ ಮಾಡುತ್ತೀರಿ? ಎಂಬ ಪ್ರಶ್ನೆಯನ್ನು ಹಾಕಿ ಪೋಸ್ಟ್‌ ಮಾಡಿದ್ದಾರೆ. ಆತನಿಗಾದ ಅನುಭವದ ಪ್ರಕಾರ, ಮನೆಯೊಂದರ ಓನರ್‌ ಆತನ ವೃತ್ತಿ ಹಾಗೂ ಶಿಕ್ಷಣ ವಿವರಗಳನ್ನು ತಿಳಿಯಲು ಆತನ ಲಿಂಕ್ಡ್‌ ಇನ್‌ ಪ್ರೊಫೈಲನ್ನು ಕೇಳಿದ್ದು ಅದನ್ನು ನೋಡಿದ ಬಳಿಕ ರಿಜೆಕ್ಟ್‌ ಮಾಡಲಾಗಿದೆ. “ನಾನು, ಸಸ್ಯಾಹಾರಿಯಾಗಿದ್ದು, ಪ್ರಮುಖ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಒಳ್ಳೆಯ ಸಂಬಳ ಪಡೆಯುತ್ತಿದ್ದೇನೆ. ಹೀಗಾಗಿ ನಾನು ಲಿಂಕ್ಡ್‌ ಇನ್‌ ಪ್ರೊಫೈಲನ್ನು ಆವರಿಗೆ ನೀಡಿದ ಬಳಿಕವೂ ರಿಜೆಕ್ಟ್‌ ಆಗಿದ್ದು ಯಾಕೆಂದು ಗೊತ್ತಾಗಲಿಲ್ಲ. ಆದರೆ ಕೊನೆಗೆ ಕಾರಣ ಕೇಳಿದ ಮೇಲೆ ಬ್ರೋಕರ್‌, ಮನೆಯ ಓನರ್‌ ನೀವು ಯಾವ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದೀರಿ ಎಂದು ಕೇಳಿದರು. ನಾನು ವೆಲ್ಲೂರಿನ ವಿಐಟಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಓದಿರುವುದಾಗಿ ಹೇಳಿದ್ದೆ. ಆಗ ಬ್ರೋಕರ್, ʻಕ್ಷಮಿಸಿ, ಇದೇ ಕಾರಣಕ್ಕೆ ಈ ಫ್ಲ್ಯಾಟು ನಿಮಗೆ ಬಾಡಿಗೆಗೆ ಕೊಡಲಾಗುವುದಿಲ್ಲ. ನಿಮ್ಮ ಪ್ರೊಫೈಲ್‌ ಈ ಬಾಡಿಗೆ ಮನೆಗೆ ಫಿಟ್‌ ಆಗುತ್ತಿಲ್ಲʼ ಎಂದರು. ನನಗೆ ಆಶ್ಚರ್ಯವಾಯಿತು. ಯಾಕೆಂದರೆ ಅವರಿಗೆ ಐಐಟಿ, ಐಐಎಂನಲ್ಲಿ ಓದಿದ ಮಂದಿಯೇ ಬಾಡಿಗೆಗೆ ಬೇಕಾಗಿತ್ತಂತೆ!” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ | Love Marriage | ಹಂಪಿಯ ಆಟೋ ಚಾಲಕನ ಒಳ್ಳೆಯತನಕ್ಕೆ ಒಲಿದ ವಿದೇಶಿ ಕನ್ಯೆ: ಇಬ್ಬರೂ ನಡೆದರು ಸಪ್ತಪದಿ

ಇದಕ್ಕೆ ಹಲವಾರು ಮಂದಿ ಕಾಮೆಂಟ್‌ ಮಾಡಿದ್ದು, ಒಬ್ಬರು, ʻಇದರಲ್ಲೇನೂ ಆಶ್ಚರ್ಯವಿಲ್ಲ. ನಾನು ಸದ್ಯಕ್ಕಂತೂ ಓನರ್‌ಗಳ ಇಂಟರ್ವೂಗೆ ತಯಾರಿ ನಡೆಸುತ್ತಿದ್ದೇನೆ. ಹೇಗೆ ತಯಾರಿ ನಡೆಸಬೇಕು, ಕೆಲವು ಟಿಪ್ಸ್‌ ಹೇಳಿʼ ಎಂದು ನಗೆಯಾಡಿದ್ದಾರೆ.

ಇನ್ನೊಬ್ಬರು, ʻನಾನು ಲಿಂಕ್ಡ್‌ ಇನ್‌ ಪ್ರೊಫೈಲ್‌ ಅಪ್‌ಡೇಟ್‌ ಮಾಡಿದ ನಂತರ ಮನೆಯೇ ಸಿಗುತ್ತಿಲ್ಲ. ನಿಮಗೆ ಆದ ಅನುಭವವೇನೂ ವಿಶೇಷವಲ್ಲ ಬಿಡಿʼ ಎಂದು ಹೇಳುವ ಮೂಲಕ, ನಿಮ್ಮ ಅನುಭವವವೇ ನಮ್ಮದೂ ಕೂಡಾʼ ಎಂದು ಹಲವರು ಹೇಳಿದ್ದಾರೆ.

ಇನ್ನೊಬ್ಬರು, ʻಇನ್ನು ಮುಂದೆ ಲ್ಯಾಂಡ್‌ಲಾರ್ಡ್‌ಗಳಿಗಾಗಿಯೇ ಪ್ರತ್ಯೇಕ ಲಿಂಕ್‌ಡ್‌ ಇನ್‌ ಪ್ರೊಫೈಲ್‌ ಕ್ರಿಯೇಟ್‌ ಮಾಡಬೇಕಾದೀತೇನೋʼ ಎಂದಿದ್ದಾರೆ!

ಇದನ್ನೂ ಓದಿ | Viral post | ಬೆಂಗಳೂರಿನ ಈ ಆಟೋನಲ್ಲಿ ಪಯಣಿಸುವ ಮಂದಿಗೆ ತಿನಿಸು, ಫಸ್ಟ್‌ಏಡ್‌ ಸೇವೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Viral Video: ‘ಹಿಟ್​ ದಿ ಟಾರ್ಗೆಟ್’​ ಎಂದು ಬೌಲಿಂಗ್​ ಅಭ್ಯಾಸ ಆರಂಭಿಸಿದ ಮೊಹಮ್ಮದ್ ಶಮಿ

Viral Video: ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು.

VISTARANEWS.COM


on

Viral Video
Koo

ಲಕ್ನೋ: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami) ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ತಮ್ಮ ನಿವಾಸದಲ್ಲೇ ನಿರ್ಮಿಸಲಾಗಿರುವ ಕ್ರಿಕೆಟ್​ ಪಿಚ್​ನಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದು, ಈ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​(Viral Video) ಆಗಿದೆ.

ಫೆಬ್ರವರಿಯಲ್ಲಿ ಶಮಿ ಅವರು ಲಂಡನ್​ನಲ್ಲಿ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಶಮಿ ಯಾವುದೇ ಕ್ರಿಕೆಟ್​ ಸರಣಿ ಆಡಿಲ್ಲ. ಇದೀಗ ಕ್ರಿಕೆಟ್​ಗೆ ಮರಳುವ ನಿಟ್ಟಿನಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಬೌಲಿಂಗ್​ ಅಭ್ಯಾಸ ಆರಂಭಿಸಿರುವ ಶಮಿ ‘ಹಿಟ್​ ದಿ ಟಾರ್ಗೆಟ್​’ ಎಂದು ಬರೆದುಕೊಂಡಿದ್ದಾರೆ. ಶಮಿ ಅವರು ಬೌಲಿಂಗ್​ನಲ್ಲಿ ವಿಕೆಟ್​ ಉರುಳಿಸಿದ್ದು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.

2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.

ಬಾಂಗ್ಲಾ ಸರಣಿಯಲ್ಲಿ ಕಣಕ್ಕೆ?

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ಇದನ್ನು ಓದಿ Anushka Sharma: ಕೊಹ್ಲಿಯಂತೆ ತಾಳ್ಮೆ ಕಳೆದುಕೊಂಡ ಪತ್ನಿ ಅನುಷ್ಕಾ; ವಿಡಿಯೊ ವೈರಲ್​

ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ವಿದೇಶ

ಹಿಂದೂಗಳ ಆಸ್ತಿ ಲೂಟಿ ಮಾಡಿ, ದೇವರ ವಿಗ್ರಹ ಕದ್ದು ಪಾಕಿಸ್ತಾನ ಸ್ಥಾಪನೆ; ಪಾಕ್‌ ಪತ್ರಕರ್ತನ ವಿಡಿಯೊ ವೈರಲ್‌

ಪಾಕಿಸ್ತಾನದ ಸೃಷ್ಟಿಯ ಮೂಲವನ್ನು ಟೀಕಿಸಿರುವ ಪಾಕಿಸ್ತಾನಿ ಪತ್ರಕರ್ತ ಇಮ್ರಾನ್ ಶಫ್ಕತ್ ಅವರ ಇತ್ತೀಚಿನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ (Viral Video) ವ್ಯಾಪಕ ಚರ್ಚೆಯನ್ನು ಹುಟ್ಟು ಹಾಕಿದೆ. ಅವರು ಈ ವಿಡಿಯೋದಲ್ಲಿ ಇಸ್ಲಾಮಿಕ್ ತತ್ತ್ವಗಳ ಮೇಲೆ ಪಾಕಿಸ್ತಾನವನ್ನು ಸ್ಥಾಪಿಸಲಾಗಿದೆ ಎಂಬುದು ಸುಳ್ಳು ಎಂದ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

VISTARANEWS.COM


on

By

Viral Video
Koo

ಪಾಕಿಸ್ತಾನದ (pakistan) ಹುಟ್ಟಿನ ಬಗ್ಗೆ ಅಲ್ಲಿನ ಹಿರಿಯ ಪತ್ರಕರ್ತ (journalist) ಇಮ್ರಾನ್ ಶಫ್ಕತ್ (Imran Shafqat ) ಹೇಳಿರುವ ಮಾತುಗಳು ಈಗ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral Video) ಆಗಿದ್ದು, ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಪಾಕಿಸ್ತಾನ ಫಾರ್ ಇಸ್ಲಾಂ (Pakistan for Islam) ಎಂಬುದನ್ನು ಪ್ರಶ್ನಿಸಿರುವ ಅವರು, 1947ರಲ್ಲಿ ಹಿಂದೂಗಳ ದೇವಾಲಯಗಳನ್ನು ಲೂಟಿ ಮಾಡಿ, ಅವರ ಆಸ್ತಿಗಳನ್ನು ವಶಪಡಿಸಿಕೊಂಡು ಪಾಕಿಸ್ತಾನವನ್ನು ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪಾಕಿಸ್ತಾನಿ ಪತ್ರಕರ್ತ ಇಮ್ರಾನ್ ಶಫ್ಕತ್ ಅವರ ಇತ್ತೀಚಿನ ವಿಡಿಯೋ ಇದಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿವಾದ ಮತ್ತು ಚರ್ಚೆಯನ್ನು ಹುಟ್ಟುಹಾಕಿದೆ. ಅವರು ಪಾಕಿಸ್ತಾನದ ಸೃಷ್ಟಿಯ ಮೂಲವನ್ನು ಟೀಕಿಸಿದ್ದಾರೆ.
ಅವರ ಯೂಟ್ಯೂಬ್ ಚಾನೆಲ್ ‘ಟೆಲ್ಲಿಂಗ್ಸ್ ವಿತ್ ಇಮ್ರಾನ್ ಶಫ್ಕತ್’ನ ವಿಡಿಯೋ ಕ್ಲಿಪ್ ಅನ್ನು ಎಕ್ಸ್ ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ವೈರಲ್ ಕ್ಲಿಪ್‌ನಲ್ಲಿ, ಶಫ್ಕತ್ ಗಮನಾರ್ಹ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನವನ್ನು ಸ್ಥಾಪನೆಯ ಐತಿಹಾಸಿಕ ಆಧಾರವನ್ನು ಪ್ರಶ್ನಿಸಿದ್ದಾರೆ.

ಪಾಕಿಸ್ತಾನದ ಆರಂಭದ ಬಗ್ಗೆ ಶಫ್ಕತ್ ಅನೇಕ ಆಶ್ಚರ್ಯಕರ ಹೇಳಿಕೆಗಳನ್ನು ನೀಡಿದ್ದಾರೆ. ಪಾಕಿಸ್ತಾನವನ್ನು ರಚಿಸಿದ ಮೊದಲ ದಿನ ಅದನ್ನು ಇಸ್ಲಾಂ ಹೆಸರಿನಲ್ಲಿ ಮಾಡಲಾಯಿತು ಎಂಬುದೆಲ್ಲ ಸುಳ್ಳು ಎಂದು ಅವರು ಆರೋಪಿದ್ದಾರೆ. ಪಾಕಿಸ್ತಾನದ ಸ್ಥಾಪಕರು ಸಲ್ಲಿಸಿದ ಆರಂಭಿಕ ದಾಖಲೆಗಳನ್ನು “ದೊಡ್ಡ ಸುಳ್ಳು” ಎಂದಿರುವ ಅವರು, ಕೇವಲ ಇಸ್ಲಾಮಿಕ್ ತತ್ತ್ವಗಳ ಮೇಲೆ ಪಾಕಿಸ್ತಾನವನ್ನು ಸ್ಥಾಪಿಸಲಾಗಿದೆ ಎಂಬ ನಿರೂಪಣೆಯು ತಪ್ಪುದಾರಿಗೆಳೆಯುತ್ತಿದೆ ಎಂದು ಹೇಳಿದ್ದಾರೆ.

ಸುಳ್ಳು ದಾಖಲೆ

ಇಸ್ಲಾಂ ಧರ್ಮದ ಹೆಸರಿನಲ್ಲಿ ಪಾಕಿಸ್ತಾನವನ್ನು ನಿರ್ಮಿಸಲಾಗಿದೆ ಎಂದು ಅವರು ನಮಗೆ ಹೇಳುತ್ತಿದ್ದದ್ದು ಒಂದು ದೊಡ್ಡ ಅಫೀಮ್. ದೇವರಿಗೆ ಗೊತ್ತು ಈ ದೇಶದ ಸೃಷ್ಟಿಕರ್ತರು ಸಲ್ಲಿಸಿದ ಮೊದಲ ದಾಖಲೆ ಒಂದು ದೊಡ್ಡ ಸುಳ್ಳು, ಹಲವಾರು ಸುಳ್ಳು ಹೇಳಿಕೆಗಳಿವೆ ಎಂದು ಅವರು ಹೇಳಿದರು.


ದೇವಸ್ಥಾನ ಲೂಟಿ, ಭೂಮಿ ವಶ

ಇತಿಹಾಸದಿಂದ ನಿರ್ದಿಷ್ಟ ಘಟನೆಗಳನ್ನು ಎತ್ತಿ ತೋರಿಸುತ್ತಾ, ಪಾಕಿಸ್ತಾನದ ರಚನೆಯಾದ ಸ್ವಲ್ಪ ಸಮಯದ ಅನಂತರ ಲಾಹೋರ್‌ನಲ್ಲಿ ಮುಸ್ಲಿಮರು ಬಲವಂತವಾಗಿ ದೇವಸ್ಥಾನವನ್ನು ಪ್ರವೇಶಿಸಿದರು. ವಿಗ್ರಹಗಳನ್ನು ಕದ್ದರು ಮತ್ತು ಹಿಂದೂ ಒಡೆತನದ ಅಂಗಡಿಗಳು ಮತ್ತು ಭೂಮಿಯನ್ನು ವಶಪಡಿಸಿಕೊಂಡರು ಎಂದು ಶಫ್ಕತ್ ಆರೋಪಿಸಿದ್ದಾರೆ.

ದೇವಾಲಯದ ಬೀಗಗಳನ್ನು ಒಡೆದು ವಿಗ್ರಹಗಳನ್ನು ಕದ್ದಿರುವ ಲಾಹೋರ್‌ನ ಮುಸ್ಲಿಮರು ಹಿಂದೂ ಅಂಗಡಿಗಳನ್ನು ಸಹ ವಶಪಡಿಸಿಕೊಂಡರು. ಅದನ್ನು ಮುರಿದು ಅವುಗಳ ಶೆಟರ್‌ಗಳನ್ನು ಎಳೆದಿದ್ದಾರೆ. ಇದು ಪಾಕಿಸ್ತಾನದ ಅಡಿಪಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

ಶಫ್ಕತ್ ಮಾಡಿರುವ ಈ ಟೀಕೆಗಳು ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ. ಒಬ್ಬ ಬಳಕೆದಾರರು, ಸತ್ಯವನ್ನು ಮಾತನಾಡುವ ಧೈರ್ಯ ಮತ್ತು ದೃಢತೆಯನ್ನು ಹೊಂದಿರುವ ನಿಮಗೆ ಹ್ಯಾಟ್ಸ್ ಆಫ್. ಈ ಜಗತ್ತನ್ನು ಉತ್ತಮ ಸ್ಥಳವಾಗಿಸಲು ನಿಮ್ಮಂತಹ ಹೆಚ್ಚು ಜನರು ಇರಬೇಕು ಎಂದು ಹೇಳಿದ್ದಾರೆ.

ಇನ್ನೊಬ್ಬ ಬಳಕೆದಾರ, ಎಚ್ಚರವಾಗಿರಿ. ನಿಮ್ಮನ್ನು ಕೊಲ್ಲಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬರು ಶಫ್ಕತ್ ಅವರ ಸುರಕ್ಷತೆ ಬಗ್ಗೆ ಭಯಪಟ್ಟಿದ್ದಾರೆ. ಇನ್ನೊಬ್ಬರು ಸರಿಯಾಗಿ ಮಾತನಾಡಿದ್ದೀರಿ ಎಂದು ಹೇಳಿದ್ದಾರೆ.

Continue Reading

ವೈರಲ್ ನ್ಯೂಸ್

Giorgia Meloni: ಕೈ ಮುಗಿದು, ನಮಸ್ಕಾರ ಮಾಡಿ ಅತಿಥಿಗಳನ್ನು ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; ವೈರಲ್‌ ವಿಡಿಯೊ ಇಲ್ಲಿದೆ

Giorgia Meloni: ತನ್ನ ವಿಶಿಷ್ಟತೆಯಿಂದಲೇ ಭಾರತೀಯ ಸಂಸ್ಕೃತಿ ವಿದೇಶಿಗರನ್ನೂ ಸೆಳೆಯುತ್ತಿದೆ. ಅದಕ್ಕೆ ಉದಾಹರಣೆ ಎನ್ನುವಂತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾರತೀಯ ಸಂಸ್ಕೃತಿಯ ಪ್ರತೀಕವಾದ ಕೈ ಮುಗಿದು ನಮಸ್ಕಾರ ಮಾಡುವ ಮೂಲಕ ಜಿ7 ಶೃಂಗಸಭೆಗೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದ್ದಾರೆ. ಸದ್ಯ ಅವರು ನಮಸ್ಕಾರ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ಜಿ 7 ಶೃಂಗಸಭೆಯನ್ನು ಆಯೋಜಿಸಲಾಗಿದೆ.

VISTARANEWS.COM


on

Giorgia Meloni
Koo

ರೋಮ್‌: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಭಾರತದೊಂದಿಗೆ ವಿಶೇಷ ನಂಟು ಹೊಂದಿದ್ದಾರೆ. ಈ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವವನ್ನು ಹೊಗಳಿದ್ದರು. ಇದೀಗ ಭಾರತೀಯ ಸಂಸ್ಕೃತಿಯ ಪ್ರತೀಕವಾದ ಕೈ ಮುಗಿದು ನಮಸ್ಕಾರ ಮಾಡುವ ಮೂಲಕ ಜಿ7 ಶೃಂಗಸಭೆ (G7 Summit)ಗೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದ್ದಾರೆ. ಸದ್ಯ ಅವರು ನಮಸ್ಕಾರ ಮಾಡುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು ವೈರಲ್‌ ಆಗಿದೆ (Viral Video).

ಇಟಲಿಯ ಪುಗ್ಲಿಯಾದಲ್ಲಿ 50ನೇ ಆವೃತ್ತಿಯ ಜಿ 7 ಶೃಂಗಸಭೆ ಆರಂಭವಾಗಿದೆ. ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ನಡೆಯಲಿರುವ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ವಿವಿಧ ದೇಶದ ನಾಯಕರು ಇಟಲಿಗೆ ಆಗಮಿಸಿದ್ದು, ಅವರನ್ನು ಆತ್ಮೀಯವಾಗಿ ಸ್ವಾಗತಿಸುವ ವೇಳೆ ಜಾರ್ಜಿಯಾ ಮೆಲೋನಿ ಅವರು ಕೈ ಮುಗಿದು ನಮಸ್ತೆ ಎಂದು ಹೇಳಿದ್ದಾರೆ. ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರನ್ನು ಇಟಲಿಯ ಪ್ರಧಾನಿ ಮೆಲೋನಿ ಕೈ ಮುಗಿದು ಸ್ವಾಗತಿಸುತ್ತಿರುವ ವಿಡಿಯೊ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸಂಸ್ಕೃತಿಗೆ ಜಾಗತಿಕ ಮನ್ನಣೆ ಸಿಗುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ನಮಸ್ತೆ ಇಂಡಿಯಾ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ. ʼʼಮೋದಿ ಅವರೊಂದಿಗಿನ ಗೆಳೆತನದ ಪ್ರಭಾವ ಇದುʼʼ ಎಂದು ಒಬ್ಬರು ಹೇಳಿದ್ದಾರೆ. ʼʼಇದು ಮೋದಿಯ ಮ್ಯಾಜಿಕ್‌ʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ಮೋದಿ ಅವರಿಂದಲೇ ಇದು ಸಾಧ್ಯವಾಗಿದ್ದು ಎಂದು ಇನ್ನೂ ಹಲವರು ಹೇಳಿದ್ದಾರೆ. ʼʼಒಂದು ವೇಳೆ ಆತ್ಮೀಯರು ಸಿಕ್ಕಾಗ ಶೇಕ್‌ ಹ್ಯಾಂಡ್‌ ಮಾಡುತ್ತೇವೆ. ಇಲ್ಲವೆ ಕೈ ಮುಗಿದು ನಮಸ್ತೆ ಎನ್ನುತ್ತೇವೆ. ಆದರೆ ಮೆಲೋನಿ ಎರಡನ್ನೂ ಮಾಡಿದ್ದಾರೆʼʼ ಎಂದು ನೆಟ್ಟಿಗರೊಬ್ಬರು ತಮಾಷೆ ಮಾಡಿದ್ದಾರೆ. ವಿಶೇಷ ಎಂದರೆ ಪ್ರದಾನಿ ಮೋದಿ ಅವರೂ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಈಗಾಗಲೇ ಇಟಲಿ ತಲುಪಿದ್ದಾರೆ.

ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಇಂಗ್ಲೆಂಡ್‌, ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ನಾಯಕರು ಮಾತ್ರವಲ್ಲದೆ ಉಕ್ರೇನ್, ಬ್ರೆಜಿಲ್, ಅರ್ಜೆಂಟೀನಾ, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಅಲ್ಜೀರಿಯಾ, ಟುನೀಶಿಯಾ ಮತ್ತು ಮೌರಿಟಾನಿಯಾದ ಮುಖಂಡರು ಈ ಪ್ರತಿಷ್ಠಿತ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ: Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

ವಿಷಯಗಳು ಯಾವುವು?

ಶೃಂಗಸಭೆಯ ವಿದೇಶದ ಅಧಿವೇಶನದಲ್ಲಿ ಭಾರತವು ಕೃತಕ ಬುದ್ಧಿಮತ್ತೆ, ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ದೇಶಗಳ ಸಹಕಾರದ ಮೇಲೆ ಗಮನ ಹರಿಸಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಜಾಗತಿಕವಾಗಿ ನಿರ್ಣಾಯಕ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಜತೆಗೆ ಶೃಂಗಸಭೆಯಲ್ಲಿ ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಗಾಝಾದಲ್ಲಿನ ಸಂಘರ್ಷದ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

Continue Reading

ವೈರಲ್ ನ್ಯೂಸ್

Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರು ಪರಸ್ಪರ ಕೈ ಕೈ ಮಿಲಾಯಿಸಿ ಮಾರಾಮಾರಿ ನಡೆಸಿದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್‌ ಆಗಿದೆ. ಪ್ರಾದೇಶಿಕ ಸ್ವಾಯತ್ತ ಅಧಿಕಾರಗಳನ್ನು ವಿಸ್ತರಿಸುವ ಉದ್ದೇಶ ಹೊಂದಿರುವ ವಿವಾದಾತ್ಮಕ ಕಾನೂನಿನ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಗದ್ದಲ ಆರಂಭವಾಯಿತು ಎನ್ನಲಾಗಿದೆ.

VISTARANEWS.COM


on

Italian Parliament
Koo

ರೋಮ್‌: ಇಟಲಿಯ ಪುಗ್ಲಿಯಾದಲ್ಲಿ 50ನೇ ಆವೃತ್ತಿಯ ಜಿ 7 ಶೃಂಗಸಭೆ (G7 Summit) ಆರಂಭವಾಗಿದೆ. ಈ ಮಧ್ಯೆ ಇಟಲಿ ಪಾರ್ಲಿಮೆಂಟ್‌ (Italian Parliament)ನಲ್ಲಿ ಸಂಸದರು ಪರಸ್ಪರ ಕೈ ಕೈ ಮಿಲಾಯಿಸಿ ಮಾರಾಮಾರಿ ನಡೆಸಿದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್‌ ಆಗಿದೆ (Viral Video).

ಕಾರಣವೇನು?

ಪ್ರಾದೇಶಿಕ ಸ್ವಾಯತ್ತ ಅಧಿಕಾರದ ವಿಷಯವಾಗಿ ಸಂಸದರು ಹೊಡೆದಾಡಿದ್ದಾರೆ ಎನ್ನಲಾಗಿದೆ. ಪ್ರಾದೇಶಿಕ ಸ್ವಾಯತ್ತ ಅಧಿಕಾರಗಳನ್ನು ವಿಸ್ತರಿಸುವ ಉದ್ದೇಶ ಹೊಂದಿರುವ ವಿವಾದಾತ್ಮಕ ಕಾನೂನಿನ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಗದ್ದಲ ಆರಂಭವಾಯಿತು. ಬಳಿಕ ಪ್ರತಿಪಕ್ಷದ ಸಂಸದರೊಬ್ಬರು ಇಟಲಿಯ ಧ್ವಜವನ್ನು ಹಿಡಿದುಕೊಂಡು ಬಂದಾಗ ಗಲಾಟೆ ತಾರಕಕ್ಕೇರಿತು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ಸಂಸದರು ಪರಸ್ಪರ ಕೈ ಕೈ ಮಿಲಾಯಿಸುವ ಹಂತದವರೆಗೂ ಹೋಯಿತು.

ತಕ್ಷಣ ಸೆಕ್ಯುರಿಟಿ ಗಾರ್ಡ್‌ ಸಿಬ್ಬಂದಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಘರ್ಷಣೆಯಲ್ಲಿ ಗಾಯಗೊಂಡ ಸಂಸದ ಡೊನ್ನೊ ಅವರನ್ನು ಗಾಲಿಕುರ್ಚಿಯಲ್ಲಿ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಸಂಸತ್‌ನಲ್ಲಿ ನಡೆದ ಈ ಗಲಾಟೆ ವ್ಯಾಪಕ ಚರ್ಚೆಯನ್ನು ಹುಟ್ಟು ಹಾಕಿದೆ. ಜತೆಗೆ ಸಂಸದರ ನಡೆಯನ್ನು ಹಲವರು ಟೀಕಿಸಿದ್ದಾರೆ. ಚುನಾಯಿತ ಜನಪ್ರತಿನಿಧಿಗಳು ಪ್ರದರ್ಶಿಸಿದ ನಡವಳಿಕೆಯನ್ನು ಸಾರ್ವಜನಿಕರು ಖಂಡಿಸಿದ್ದಾರೆ. ಸಂಸತ್‌ ಬಾಕ್ಸಿಂಗ್‌ ವೇದಿಯಂತೆ ಭಾಸವಾಯಿತು ಎಂದು ಹಲವರು ವ್ಯಂಗ್ಯವಾಡಿದ್ದಾರೆ. ಜಿ 7 ಶೃಂಗಸಭೆ ಜೂನ್‌ 13ರಂದು ಆರಂಭವಾಗಿದ್ದು ಜೂನ್‌ 11ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಇಟಲಿ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ರೆಸಾರ್ಟ್ ಬೊರ್ಗೊ ಎಗ್ನಾಜಿಯಾದಲ್ಲಿ ಜೂನ್‌ 13ರಿಂದ 15ರವರೆಗೆ ನಡೆಯಲಿರುವ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಇಟಲಿ ತಲುಪಿದ್ದಾರೆ. ಸತತ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಮೋದಿ ಅವರ ಮೊದಲ ಅಂತಾರಾಷ್ಟ್ರೀಯ ಪ್ರವಾಸ ಇದು ಎನ್ನುವುದು ವಿಶೇಷ.

ಶುಕ್ರವಾರ ಇಟಲಿಯ ಅಪುಲಿಯಾ ಪ್ರದೇಶದ ಬೃಂಡಿಸಿ ವಿಮಾನ ನಿಲ್ದಾಣಕ್ಕೆ ತಲುಪಿದ ಮೋದಿ “ವಿಶ್ವ ನಾಯಕರೊಂದಿಗೆ ಉಪಯುಕ್ತ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇನೆ. ಒಟ್ಟಾಗಿ ನಾವು ಜಾಗತಿಕ ಸವಾಲುಗಳನ್ನು ಎದುರಿಸುವ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತರರಾಷ್ಟ್ರೀಯ ಸಹಕಾರವನ್ನು ವೃದ್ಧಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Khalistan Terror: ಇಟಲಿಯಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ವಿರೂಪಗೊಳಿಸಿದ ಖಲಿಸ್ತಾನಿಗಳು

ಶೃಂಗಸಭೆಯ ಸಮಯದಲ್ಲಿ ಮೋದಿ ಅವರಿ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಶೃಂಗಸಭೆಯ ಹೊರತಾಗಿ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ತಿಳಿಸಿದ್ದಾರೆ. ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಇಟಲಿ ಭಾರತಕ್ಕೆ ಆಹ್ವಾನ ನೀಡಿತ್ತು. ಇದು ಜಿ 7 ಶೃಂಗಸಭೆಯಲ್ಲಿ ಮೋದಿ ಅವರ ಸತತ ಐದನೇ ಭಾಗವಹಿಸುವಿಕೆಯಾಗಿದ್ದು, ಅವರು ಇಂದು ಸಂಜೆ ಭಾರತಕ್ಕೆ ಮರಳಲಿದ್ದಾರೆ.

Continue Reading
Advertisement
T20 World Cup 2024
ಕ್ರಿಕೆಟ್58 mins ago

T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Toyota Technical Education Programme started at Bareilly Government Polytechnic by TKM
ದೇಶ1 hour ago

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Truck Driver
ದೇಶ3 hours ago

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

Do not split BBMP says Karave State President TA Narayana Gowda
ಕರ್ನಾಟಕ3 hours ago

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

ಕರ್ನಾಟಕ3 hours ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ4 hours ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sunny Leone
ಸಿನಿಮಾ4 hours ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ4 hours ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ5 hours ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ5 hours ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು8 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು8 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ9 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌